Tag: Brandon King

  • ಸೋಲುವುದು ಕೂಡ ಒಳ್ಳೆಯದೇ, ಒಂದು ಸರಣಿ ಮ್ಯಾಟರ್‌ ಅಲ್ವೇ ಅಲ್ಲ – ಪಾಂಡ್ಯ ಸಮರ್ಥನೆ

    ಸೋಲುವುದು ಕೂಡ ಒಳ್ಳೆಯದೇ, ಒಂದು ಸರಣಿ ಮ್ಯಾಟರ್‌ ಅಲ್ವೇ ಅಲ್ಲ – ಪಾಂಡ್ಯ ಸಮರ್ಥನೆ

    ಲಾಡರ್ಹಿಲ್‌: 2016ರಲ್ಲಿ ಕೊನೆಯ ಬಾರಿಗೆ ಟೀಂ ಇಂಡಿಯಾ (Team india) ವಿರುದ್ಧ ಟಿ20 ಸರಣಿ ಗೆದ್ದಿದ್ದ ವೆಸ್ಟ್ ಇಂಡೀಸ್ (West Indies) ಬರೋಬ್ಬರಿ 7 ವರ್ಷಗಳ ಬಳಿಕ ಟಿ20 ಸರಣಿಯಲ್ಲಿ ಭಾರತವನ್ನ ಸೋಲಿಸಿದೆ. ಆದ್ರೆ ನಾಯಕ ಹಾರ್ದಿಕ್‌ ಪಾಂಡ್ಯ (Hardik Pandya) ಈ ಸೋಲನ್ನ ಸಮರ್ಥನೆ ಮಾಡಿಕೊಂಡಿದ್ದು, ಅಭಿಮಾನಿಗಳಿಂದ ಟೀಕೆಗೆ ಗುರಿಯಾಗಿದ್ದಾರೆ.

    ವಿಂಡೀಸ್‌ ವಿರುದ್ಧ ನಡೆದ T20 ಸರಣಿಯ ಅಂತಿಮ ಪಂದ್ಯದಲ್ಲಿ ಸೋತ ಬಳಿಕ ಪೋಸ್ಟ್‌ ಪ್ರೆಸೆಂಟೇಷನ್‌ನಲ್ಲಿ ಮಾತನಾಡಿದ ಪಾಂಡ್ಯ, ಪಂದ್ಯ ಆರಂಭವಾದ 10 ಓವರ್‌ಗಳ ನಂತರ ರನ್‌ ಗಳಿಸುವ ವೇಗ ಕಳೆದುಕೊಂಡಿದ್ದೆವು. ನಾನು ಕ್ರೀಸ್‌ಗೆ ಇಳಿದ ಮೇಲೂ ಪರಿಸ್ಥಿತಿಯ ಲಾಭ ಪಡೆಯಲು ಆಗಲಿಲ್ಲ. ಒಟ್ಟಿನಲ್ಲಿ ಈ ಸಿರೀಸ್‌ನಲ್ಲಿ ನಾವು ಪರಿಸ್ಥಿತಿಯ ಲಾಭ ಪಡೆದುಕೊಳ್ಳುವಲ್ಲಿ ವಿಫಲವಾದೆವು. ಹೆಚ್ಚು ವಿವರಿಸುವ ಅಗತ್ಯವಿಲ್ಲ. ಆದ್ರೆ ಮುಂದೆ ಇನ್ನಷ್ಟು ಉತ್ತಮವಾಗಿ ಆಡಲು ಪ್ರಯತ್ನಿಸುತ್ತೇವೆ. ನಮ್ಮ ಹುಡುಗರು ನಮ್ಮ ಗುಂಪಿನಲ್ಲೇ ಇದ್ದಾರೆ. ನಮಗೆ ಲೆಕ್ಕಾಚಾರ ಮಾಡಲು ಸಾಕಷ್ಟು ಸಮಯವಿದೆ. ಕೆಲವೊಮ್ಮೆ ಸೋಲುವುದು ಕೂಡ ಒಳ್ಳೆಯದೇ ಎಂದು ಸಮರ್ಥಿಸಿಕೊಂಡಿದ್ದಾರೆ.

    ಇನ್ನೂ ಸ್ಲೋ ಟ್ರ್ಯಾಕ್‌ನಲ್ಲಿ ಮೊದಲು ಬ್ಯಾಟಿಂಗ್‌ ಆಯ್ಕೆ ನಿರ್ಧಾರ ಸಮರ್ಥಿಸಿಕೊಂಡ ಪಾಂಡ್ಯ, ಈ ಆಟಗಳು ನಾವು ಕಲಿಯಬೇಕಾದ ಆಟಗಳಾಗಿವೆ. ನಾವು ಒಂದು ಗುಂಪಿನಂತೆ ಪ್ರದರ್ಶನ ನೀಡಿದ್ದೇವೆ. ಯಾವಾಗ ಬೇಕಾದರೂ ಕಠಿಣ ಮಾರ್ಗವನ್ನ ತೆಗೆದುಕೊಳ್ಳುತ್ತೇವೆ. ಒಂದು ಸರಣಿಯ ಸೋಲು ಮ್ಯಾಟರ್‌ ಆಗಲ್ಲ. ಆದ್ರೆ ಮುಂದಿನ ಗುರಿ ಅದರ ಕಡೆಗೆ ಇರಬೇಕಾದ ಬದ್ಧತೆ ಮುಖ್ಯವಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 7 ವರ್ಷಗಳ ಬಳಿಕ ಭಾರತದ ವಿರುದ್ಧ T20 ಸರಣಿ ಜಯ – ಹೊಸ ದಾಖಲೆ ಬರೆದ ವಿಂಡೀಸ್‌

    ಮುಂದಿನ ದಿನಗಳಲ್ಲಿ ವಿಶ್ವಕಪ್‌ (WorldCup 2023) ಟೂರ್ನಿ ಬರುತ್ತಿದೆ. ಆದ್ದರಿಂದ ಸೋಲುವುದು ಒಳ್ಳೆಯದು. ಅದರಿಂದ ನಾವು ಬಹಳಷ್ಟು ಕಲಿಯುತ್ತೇವೆ. ಸೋಲು ಗೆಲುವಿನ ಪ್ರಕ್ರಿಯೆಯ ಒಂದು ಭಾಗವಾಗಿದೆ. ಹಾಗಾಗಿ ನಾನು ಹೆಚ್ಚು ಯೋಚನೆ ಮಾಡುವುದಿಲ್ಲ. ನನ್ನ ಮನಸ್ಸು ಏನು ಹೇಳುತ್ತದೆಯೋ ಅದನ್ನುಅನುಸರಿಸುತ್ತೇನೆ ಎಂದು ಪಾಂಡ್ಯ ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ನಾಟೌಟ್‌ ಅನ್ನು ಔಟ್‌ ಅಂತಾ ಬಿಟ್ಟುಕೊಟ್ರಾ? – DRS ತೆಗೆದುಕೊಳ್ಳದೇ ವಿಂಡೀಸ್‌ ವಿರುದ್ಧ ಮಕ್ಕರ್‌ ಆದ ಗಿಲ್‌

    ಈ ವರ್ಷಾರಂಭದಿಂದ ಪಾಂಡ್ಯ ಟಿ20 ನಾಯಕತ್ವವನ್ನು ಯಶಸ್ವಿಯಾಗಿ ಪೂರೈಸುತ್ತಾ ಬಂದಿದ್ದರು. ವರ್ಷಾರಂಭದಲ್ಲಿ ನಡೆದ ಶ್ರೀಲಂಕಾ ಹಾಗೂ ನ್ಯೂಜಿಲೆಂಡ್‌ ವಿರುದ್ಧ ಟಿ20 ಸರಣಿ ಗೆದ್ದು ಯಶಸ್ವಿ ನಾಯಕ ಎನಿಸಿಕೊಂಡಿದ್ದರು. ಅಲ್ಲದೇ ವಿಂಡೀಸ್‌ ವಿರುದ್ಧ ರೋಹಿತ್‌ ಶರ್ಮಾ (Rohit Sharma) ಹಾಗೂ ಕೊಹ್ಲಿ (Virat Kohli) ಅನುಪಸ್ಥಿತಿಯಲ್ಲಿ ಏಕದಿನ ತಂಡವನ್ನ ಮುನ್ನಡೆಸಿ ಸೈ ಎನಿಸಿಕೊಂಡಿದ್ದರು. ಇದೀಗ ಟಿ20 ಸರಣಿ ಸೋತು ಅಭಿಮಾನಿಗಳಿಂದ ಟೀಕೆಗೆ ಗುರಿಯಾಗಿದ್ದಾರೆ. ಅಲ್ಲದೇ ಸೋಲನ್ನೂ ಸಮರ್ಥಿಸಿಕೊಂಡಿರುವ ಪಾಂಡ್ಯ ಅವರ ನಡೆಯನ್ನ ಅಭಿಮಾನಿಗಳು ಹಿಗ್ಗಾ ಮುಗ್ಗ ಟ್ರೋಲ್‌ ಮಾಡಿದ್ದಾರೆ.

    5 ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಲಷ್ಟೇ ಸಾಧ್ಯವಾಯಿತು. 166 ರನ್‌ಗಳ ಗುರಿ ಪಡೆದ ವಿಂಡೀಸ್ 18 ಓವರ್‌ಗಳಲ್ಲೇ ಕೇವಲ 2 ವಿಕೆಟ್ ನಷ್ಟಕ್ಕೆ 171 ರನ್ ಚಚ್ಚಿ ಜಯ ಸಾಧಿಸಿತು. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯಲ್ಲಿ 3-2 ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಸರಣಿ ಕೈವಶ ಮಾಡಿಕೊಂಡಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಟೌಟ್‌ ಅನ್ನು ಔಟ್‌ ಅಂತಾ ಬಿಟ್ಟುಕೊಟ್ರಾ? – DRS ತೆಗೆದುಕೊಳ್ಳದೇ ವಿಂಡೀಸ್‌ ವಿರುದ್ಧ ಮಕ್ಕರ್‌ ಆದ ಗಿಲ್‌

    ನಾಟೌಟ್‌ ಅನ್ನು ಔಟ್‌ ಅಂತಾ ಬಿಟ್ಟುಕೊಟ್ರಾ? – DRS ತೆಗೆದುಕೊಳ್ಳದೇ ವಿಂಡೀಸ್‌ ವಿರುದ್ಧ ಮಕ್ಕರ್‌ ಆದ ಗಿಲ್‌

    ಲಾಡರ್ಹಿಲ್‌: ವಿಂಡೀಸ್‌ ವಿರುದ್ಧ ನಡೆದ ನಿರ್ಣಾಯಕ ಪಂದ್ಯದಲ್ಲಿ ಶುಭಮನ್‌ ಗಿಲ್‌ (Shubman Gill) ಅವರ ಔಟ್‌ ಈಗ ವಿವಾದಕ್ಕೆ ಕಾರಣವಾಗಿದೆ. 4ನೇ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್‌ ಮಾಡಿದ್ದ ಗಿಲ್‌ ನಿರ್ಣಾಯಕ ಪಂದ್ಯದಲ್ಲಿ ಕೈಕೊಟ್ಟರು ಎಂಬ ಟೀಕೆಗಳ ಮಧ್ಯೆ ಗಿಲ್‌ ಔಟಾದ ಕುರಿತು ಚರ್ಚೆಯೊಂದು ಹುಟ್ಟಿಕೊಂಡಿದೆ.

    ಮೊದಲ ಓವರ್‌ನ 5ನೇ ಎಸೆತದಲ್ಲೇ ಯಶಸ್ವಿ ಜೈಸ್ವಾಲ್‌ ಸುಲಭ ಕ್ಯಾಚ್‌ಗೆ ತುತ್ತಾದರು. ಆ ನಂತರ 2ನೇ ಓವರ್‌ನಲ್ಲಿ ಅಕೇಲ್ ಹೊಸೈನ್ (Akeal Hosein) ಬೌಲಿಂಗ್‌ ಮಾಡಿದ 5ನೇ ಎಸೆತದಲ್ಲಿ ಶುಭಮನ್‌ ಗಿಲ್‌ ಲೆಗ್‌ ಸೈಡ್‌ ಮಿಡ್‌ ಆಫ್‌ಗೆ ಬೌಂಡರಿ ಬಾರಿಸಲು ಪ್ರಯತ್ನಿಸಿದರು. ಆದ್ರೆ ಬಾಲ್‌ ಪ್ಯಾಡ್‌ಗೆ ಬಡಿಯಿತು. ಆನ್‌ಫೀಲ್ಡ್‌ ಅಂಪೈರ್‌ ನೇರವಾಗಿ ಔಟ್‌ ತೀರ್ಪು ನೀಡಿದರು. ಈ ವೇಳೆ ನಾನ್‌ ಸ್ಟ್ರೈಕ್‌ನಲ್ಲಿದ್ದ ಸೂರ್ಯಕುಮಾರ್‌ ಯಾದವ್‌ DRS ತೆಗೆದುಕೊಳ್ಳುವಂತೆ ಹೇಳಿದರೂ ಕೇಳದೇ ಗಿಲ್‌ ನೇರವಾಗಿ ಫೀಲ್ಡ್‌ನಿಂದ ಹೊರನಡೆದರು. ನಂತರ ಡಿಆರ್‌ಎಸ್‌ ರಿವಿವ್ಯೂನಲ್ಲಿ ನೋಡಿದಾಗ ಅದು ನಾಟೌಟ್‌ ಆಗಿತ್ತು. ಗಿಲ್‌ ಗ್ರೌಂಡ್‌ನಿಂದ ಹೊರೆನಡೆದಿದ್ದರಿಂದ ಔಟ್‌ ಎಂದೇ ನಿರ್ಧರಿಸಲಾಯಿತು. ಇದನ್ನೂ ಓದಿ: 7 ವರ್ಷಗಳ ಬಳಿಕ ಭಾರತದ ವಿರುದ್ಧ T20 ಸರಣಿ ಜಯ – ಹೊಸ ದಾಖಲೆ ಬರೆದ ವಿಂಡೀಸ್‌

    ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಆರಂಭದಲ್ಲೇ ಪ್ರಮುಖ ವಿಕೆಟ್‌ ಕಳೆದುಕೊಂಡ ಟೀಂ ಇಂಡಿಯಾ (Team India) ಸಾಧಾರಣ ಮೊತ್ತ ಕಲೆಹಾಕಲು ಹೆಣಗಾಡಿತ್ತು. ಆದ್ರೆ ಕಳಪೆ ಬೌಲಿಂಗ್‌ನಿಂದ ಹೀನಾಯ ಸೋಲು ಅನುಭವಿಸಬೇಕಾಯಿತು. ಗಿಲ್‌ ಡಿಆರ್‌ಎಸ್‌ ತೆಗೆದುಕೊಂಡಿದ್ದರೆ ಟೀಂ ಇಂಡಿಯಾಕ್ಕೆ ಮತ್ತಷ್ಟು ರನ್‌ ಸೇರ್ಪಡೆಯಾಗುತ್ತಿತ್ತು. ಇದರಿಂದ ಸರಣಿಯ ಜಯ ಸಾಧಿಸುವ ಹೆಚ್ಚಿನ ಸಾಧ್ಯತೆಗಳು ಇರುತ್ತಿತ್ತು ಎಂದು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

    ಕಳೆದ ವರ್ಷ ಏಷ್ಯಾಕಪ್‌ (T20 AsiaCup) ಟೂರ್ನಿಯಲ್ಲೂ ಕೆ.ಎಲ್‌ ರಾಹುಲ್‌ (KL Rahul) ಸಹ ನಾಕೌಟ್‌ ಪಂದ್ಯದಲ್ಲಿ ನಾಟೌಟ್‌ ಆಗಿದ್ದರೂ ಡಿಆರ್‌ಎಸ್‌ ತೆಗೆದುಕೊಳ್ಳದೇ ಔಟ್‌ ಅಂತಾ ಬಿಟ್ಟುಕೊಟ್ಟಿದ್ದರು. ಇದನ್ನೂ ಓದಿ: ಸೌದಿ ಕ್ಲಬ್‌ ಸೇರಿದ ಬಳಿಕ ಚೊಚ್ಚಲ ಟ್ರೋಫಿ ಗೆದ್ದ ರೊನಾಲ್ಡೊ – ಅಲ್-ನಾಸ್ರ್‌ಗೆ ಐತಿಹಾಸಿಕ ಜಯ

    5 ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಲಷ್ಟೇ ಸಾಧ್ಯವಾಯಿತು. 166 ರನ್‌ಗಳ ಗುರಿ ಪಡೆದ ವಿಂಡೀಸ್ 18 ಓವರ್‌ಗಳಲ್ಲೇ ಕೇವಲ 2 ವಿಕೆಟ್ ನಷ್ಟಕ್ಕೆ 171 ರನ್ ಚಚ್ಚಿ ಜಯ ಸಾಧಿಸಿತು. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯಲ್ಲಿ 3-2 ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಸರಣಿ ಕೈವಶ ಮಾಡಿಕೊಂಡಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 7 ವರ್ಷಗಳ ಬಳಿಕ ಭಾರತದ ವಿರುದ್ಧ T20 ಸರಣಿ ಜಯ – ಹೊಸ ದಾಖಲೆ ಬರೆದ ವಿಂಡೀಸ್‌

    7 ವರ್ಷಗಳ ಬಳಿಕ ಭಾರತದ ವಿರುದ್ಧ T20 ಸರಣಿ ಜಯ – ಹೊಸ ದಾಖಲೆ ಬರೆದ ವಿಂಡೀಸ್‌

    ಲಾಡರ್ಹಿಲ್‌: 2016ರಲ್ಲಿ ಕೊನೆಯ ಬಾರಿಗೆ ಟೀಂ ಇಂಡಿಯಾ ವಿರುದ್ಧ ಟಿ20 ಸರಣಿ ಗೆದ್ದಿದ್ದ ವೆಸ್ಟ್‌ ಇಂಡೀಸ್‌ (West Indies) ಬರೋಬ್ಬರಿ 7 ವರ್ಷಗಳ ಬಳಿಕ ಟಿ20 ಸರಣಿಯಲ್ಲಿ ಭಾರತವನ್ನ ಸೋಲಿಸಿದೆ. ಈ ಮೂಲಕ 2016ರ ನಂತರ ಮೊದಲ ಬಾರಿಗೆ ವಿಂಡೀಸ್ ಒಂದಕ್ಕಿಂತ ಹೆಚ್ಚು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತವನ್ನು (Team India) ಸೋಲಿಸಿದ ದಾಖಲೆಯನ್ನೂ ಬರೆದಿದೆ.

    ರೋವ್ಮನ್‌ ಪೋವೆಲ್ (Rovman Powell) ನಾಯಕತ್ವದ ವಿಂಡೀಸ್ ತಂಡವು ಟಿ20 ಸರಣಿಯ 5ನೇ ಮತ್ತು ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾವನ್ನ (Team India) 8 ವಿಕೆಟ್‌ಗಳಿಂದ ಏಕಪಕ್ಷೀಯವಾಗಿ ಸೋಲಿಸಿದೆ. ಇದರೊಂದಿಗೆ 5 ಪಂದ್ಯಗಳ ಸರಣಿಯನ್ನ 3-2ರಿಂದ ಗೆದ್ದುಕೊಂಡಿದೆ. ರೊಮಾರಿಯೊ ಶೆಫರ್ಡ್ ಅವರ ಅದ್ಭುತ ಬೌಲಿಂಗ್ ಪ್ರದರ್ಶನ (4 ವಿಕೆಟ್) ಹಾಗೂ ಬ್ರಾಂಡನ್‌ ಕಿಂಗ್‌ (Brandon King) ಮತ್ತು ನಿಕೋಲಸ್‌ ಪೂರನ್‌ (Nicholas Pooran) ಆಕ್ರಮಣಕಾರಿ ಬ್ಯಾಟಿಂಗ್‌ ನೆರವಿನಿಂದ ಸರಣಿ ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇದನ್ನೂ ಓದಿ: ಭಾರತಕ್ಕೆ 9 ವಿಕೆಟ್‌ಗಳ ಯಶಸ್ವಿ ಜಯ ತಂದ ಗಿಲ್‌, ಜೈಸ್ವಾಲ್‌ – ಇಂದು ರೋಚಕ ಹಣಾಹಣಿ

    ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಹಾರ್ದಿಕ್‌ ಪಾಂಡ್ಯ (Hardik Pandya) ಪಡೆ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 165 ರನ್‌ ಗಳಿಸಲಷ್ಟೇ ಸಾಧ್ಯವಾಯಿತು. 166 ರನ್‌ಗಳ ಗುರಿ ಪಡೆದ ವಿಂಡೀಸ್‌ 18 ಓವರ್‌ಗಳಲ್ಲೇ ಕೇವಲ 2 ವಿಕೆಟ್‌ ನಷ್ಟಕ್ಕೆ 171 ರನ್‌ ಚಚ್ಚಿ ಜಯ ಸಾಧಿಸಿತು. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯಲ್ಲಿ 3-2 ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಸರಣಿ ಕೈವಶ ಮಾಡಿಕೊಂಡಿತು. ಇದನ್ನೂ ಓದಿ: ಬಾಬರ್‌ ಮೇಲಿನ ಗೌರವ ಇಂದಿಗೂ ಬದಲಾಗಿಲ್ಲ – ಪಾಕ್‌ ಆಟಗಾರನನ್ನ ಬಾಯ್ತುಂಬ ಹೊಗಳಿದ ಕೊಹ್ಲಿ

    4ನೇ ಪಂದ್ಯದಲ್ಲೇ 165 ರನ್‌ಗಳ ಜೊತೆಯಾಟ ನೀಡುವ ಮೂಲಕ ಅಬ್ಬರಿಸಿದ್ದ ಶುಭಮನ್‌ ಗಿಲ್‌ ಹಾಗೂ ಯಶಸ್ವಿ ಜೈಸ್ವಾಲ್‌ ನಿರ್ಣಾಯಕ ಪಂದ್ಯದಲ್ಲೇ ಕೈಕೊಟ್ಟು ಪೆವಿಲಿಯನ್‌ ಸೇರಿದರು. ಇನ್ನೂ ಸಂಜು ಸಾಮ್ಸನ್‌ ಕೂಡ ಅವಕಾಶ ಬಳಕೆ ಮಾಡಿಕೊಳ್ಳುವಲ್ಲಿ ವಿಫಲರಾದರು. ನಾಯಕ ಹಾರ್ದಿಕ್‌ ಪಾಂಡ್ಯ ಕೂಡ ಕೈಚೆಲ್ಲಿದರು. ಸೂರ್ಯಕುಮಾರ್‌ ಯಾದವ್‌ ಅವರ ಜವಾಬ್ದಾರಿ ಅರ್ಧಶತಕದ ನೆರವಿನಿಂದ 165 ರನ್‌ ಗಳಿಸಿದರೂ ಕಳಪೆ ಬೌಲಿಂಗ್‌ ಪ್ರದರ್ಶನದಿಂದ ವಿಂಡೀಸ್‌ ಆಕ್ರಮಣಕ್ಕೆ ತುತ್ತಾಯಿತು. ಟೀಂ ಇಂಡಿಯಾ ಪರ ಸೂರ್ಯಕುಮಾರ್‌ ಯಾದವ್‌ 61 ರನ್‌ (45 ಎಸೆತ, 3 ಸಿಕ್ಸರ್‌, 4 ಬೌಂಡರಿ), ತಿಲಕ್‌ ವರ್ಮಾ 27 ರನ್‌ ಗಳಿಸಿದರು.

    ವಿಂಡೀಸ್‌ ಪರ ನಿಕೋಲಸ್‌ ಪೂರನ್‌ ಹಾಗೂ ಬ್ರಾಂಡನ್‌ ಕಿಂಗ್ಸ್‌ ಜೊತೆಯಾಟಕ್ಕೆ ಟೀಂ ಇಂಡಿಯಾ ಬೌಲರ್‌ಗಳು ಕಂಗಾಲಾದರು. ಆರಂಭಿಕ ಬ್ರಾಂಡನ್‌ ಕಿಂಗ್ಸ್‌ ಅಜೇಯ 85 ರನ್‌ (55 ಎಸೆತ, 5 ಬೌಂಡರಿ, 6 ಸಿಕ್ಸರ್‌) ಸಿಡಿಸಿದರೆ, ನಿಕೋಲಸ್‌ ಪೂರನ್‌ 35 ಎಸೆತಗಳಲ್ಲಿ 47 ರನ್‌ (4 ಸಿಕ್ಸರ್‌, 1 ಬೌಂಡರಿ) ಚಚ್ಚಿ ಔಟಾದರು. ಕೊನೆಯಲ್ಲಿ ನಾಯಕ ರೋವ್ಮನ್‌ ಪೋವೆಲ್‌ 13 ಎಸೆತಗಳಲ್ಲಿ 22 ರನ್‌ ಗಳಿಸಿ ಜಯದ ದಡ ಸೇರಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]