Tag: Brendon McCullum

  • ಟೆಸ್ಟ್‌ ಕ್ರಿಕೆಟ್‌ನಲ್ಲಿ ಬಝ್‌ ಬಾಲ್‌ ತಂತ್ರ

    ಟೆಸ್ಟ್‌ ಕ್ರಿಕೆಟ್‌ನಲ್ಲಿ ಬಝ್‌ ಬಾಲ್‌ ತಂತ್ರ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಿವೀಸ್ ಟೆಸ್ಟ್ ನಾಯಕತ್ವಕ್ಕೆ ಕೇನ್ ವಿಲಿಯಮ್ಸನ್ ಗುಡ್‌ಬೈ

    ಕಿವೀಸ್ ಟೆಸ್ಟ್ ನಾಯಕತ್ವಕ್ಕೆ ಕೇನ್ ವಿಲಿಯಮ್ಸನ್ ಗುಡ್‌ಬೈ

    ವೆಲ್ಲಿಂಗ್ಟನ್: ನ್ಯೂಜಿಲೆಂಡ್ (New Zealand) ತಂಡದ ನಾಯಕ ಕೇನ್ ವಿಲಿಯಮ್ಸನ್ (Kane Williamson) ಟೆಸ್ಟ್ ತಂಡದ ನಾಯಕತ್ವಕ್ಕೆ ಹಠಾತ್ ಗುಡ್‌ಬೈ ಹೇಳಿದ್ದಾರೆ.

    ಇದರಿಂದ ನ್ಯೂಜಿಲೆಂಡ್ (NewZealand) ಟೆಸ್ಟ್ ತಂಡದ (Test Cricket) ನಾಯಕತ್ವಕ್ಕೆ ಹಿರಿಯ ವೇಗಿ ಟಿಮ್ ಸೌಥಿ (Tim Southee) ಅವರನ್ನು ನೇಮಿಸಿದೆ. ಟಾಮ್ ಲ್ಯಾಥಮ್ (Tom Latham) ಅವರನ್ನ ಟೆಸ್ಟ್ ಉಪನಾಯಕನನ್ನಾಗಿ ಮಾಡಿದೆ. ಇದನ್ನೂ ಓದಿ: ತಂದೆಯ ಸಾಧನೆ ಸರಿಗಟ್ಟಿದ ಮಗ – ಮೊದಲ ರಣಜಿ ಪಂದ್ಯದಲ್ಲೇ ಅರ್ಜುನ್‌ ತೆಂಡೂಲ್ಕರ್‌ ಶತಕ

    ಕೇನ್ ವಿಲಿಯಮ್ಸನ್ (Kane Williamson) ಈವರೆಗೆ ಮುನ್ನಡೆಸಿದ ಅಂತಾರಾಷ್ಟ್ರೀಯ 38 ಟೆಸ್ಟ್ ಪಂದ್ಯಗಳ ಪೈಕಿ 22 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. 10ರಲ್ಲಿ ಸೋಲು ಕಂಡಿದೆ. ಇನ್ನುಳಿದ 8 ಪಂದ್ಯಗಳು ಡ್ರಾನಲ್ಲಿ ಅಂತ್ಯವಾಗಿವೆ. 2021ರಲ್ಲಿ ಕೇನ್ ವಿಲಿಯಮ್ಸನ್ ನಾಯಕತ್ವದಲ್ಲಿ ನ್ಯೂಜಿಲೆಂಡ್ ತಂಡ, ಉದ್ಘಾಟನಾ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (Test Worldcup) ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು (Team India) ಮಣಿಸಿ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು. ಶೇ.44 ರಷ್ಟು ಯಶಸ್ವಿಯಾಗಿರುವ ಕೇನ್ ವಿಲಿಯಮ್ಸನ್ ಟೆಸ್ಟ್‌ ಯಶಸ್ವಿನಾಯಕ ಎನ್ನಿಸಿಕೊಂಡಿದ್ದಾರೆ. 216ರಲ್ಲಿ ಬ್ರೆಂಡನ್ ಮೆಕಲಮ್ (Brendon McCullum) ಟೆಸ್ಟ್ ತಂಡದ ನಾಯಕರಾಗಿದ್ದರು. ಇದನ್ನೂ ಓದಿ: ನಾವು ಬಾಬರ್ ಅಜಮ್‍ಗಿಂತ ಹೆಚ್ಚಾಗಿ ನಿಮ್ಮನ್ನು ಪ್ರೀತಿಸುತ್ತೇವೆ – ಪಾಕ್ ಅಭಿಮಾನಿಗಳಿಂದ ಕೊಹ್ಲಿಗೆ ಸಂದೇಶ

    ಈ ಕುರಿತು ಮಾತನಾಡಿರುವ ಕೇನ್, `ಇದು ನನ್ನ ವೃತ್ತಿ ಜೀವನದ ಅತ್ಯಂತ ಮಹತ್ವದ ಹಂತವಾಗಿದೆ. ಇನ್ನುಮುಂದೆ ಮೈದಾನದ ಹೊರಗೂ ನನ್ನ ಕಾರ್ಯಭಾರ ಜವಾಬ್ದಾರಿ ಹೆಚ್ಚಾಗಲಿದೆ. ಹಾಗಾಗಿ ಈ ನಿರ್ಧಾರ ಸೂಕ್ತವೆನ್ನಿಸಿದೆ. ಇನ್ನು ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ಜೊತೆ ಚರ್ಚೆ ನಡೆಸಿದ ಬಳಿಕ, ವೈಟ್ ಬಾಲ್ ತಂಡಗಳ ನಾಯಕತ್ವದಲ್ಲಿ ಮುಂದುವರಿಯುತ್ತೇನೆ ಹಾಗೂ ಮುಂದಿನ ಎರಡು ವಿಶ್ವಕಪ್ ಟೂರ್ನಿಗಳಲ್ಲಿ ತಂಡವನ್ನು ಮುನ್ನಡೆಸುತ್ತೇನೆ’ ಎಂದು ಭಾವುಕರಾಗಿ ಹೇಳಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬೀಳ್ಕೊಡುಗೆ ಸಮಾರಂಭದಲ್ಲಿ ಭಾವುಕರಾದ ಬ್ರೆಂಡನ್ ಮೆಕಲಮ್

    ಬೀಳ್ಕೊಡುಗೆ ಸಮಾರಂಭದಲ್ಲಿ ಭಾವುಕರಾದ ಬ್ರೆಂಡನ್ ಮೆಕಲಮ್

    ಮುಂಬೈ: ಬೀಳ್ಕೊಡುಗೆ ಸಮಾರಂಭದ ಸಂದರ್ಭದಲ್ಲಿ ಕೆಕೆಆರ್ ತಂಡದ ಮುಖ್ಯ ಕೋಚ್ ಬ್ರೆಂಡನ್ ಮೆಕಲಮ್ ತಂಡದ ಆಟಗಾರರು ಮತ್ತು ಸಹಾಯಕ ಸಿಬ್ಬಂದಿಯನ್ನು ಉದ್ದೇಶಿಸಿ ವೀಡಿಯೋವೊಂದರಲ್ಲಿ ಭಾವುಕರಾಗಿ ಮಾತನಾಡಿದ್ದಾರೆ.

    ಕಳೆದ 3 ವರ್ಷಗಳಲ್ಲಿ ಕೆಕೆಆರ್‌ ನಂತಹ ಯಶಸ್ವಿ ಫ್ರಾಂಚೈಸಿಯನ್ನು ಮುನ್ನಡೆಸುವ ಜವಾಬ್ದಾರಿಯನ್ನು ನೀಡಿರುವುದು ನನ್ನ ಅದೃಷ್ಟವಾಗಿದೆ. ಮೊದಲನೆಯದಾಗಿ, ವೆಂಕಟೇಶ್ ನಿಮಗೆ ಧನ್ಯವಾದಗಳು ನಿಮ್ಮಿಂದ ಸಾಕಷ್ಟು ವಿಷಯಗಳನ್ನು ಕಲಿತ್ತಿದ್ದೇನೆ ಎಂದು ಕೆಕೆಆರ್ ತಂಡದ ಸಿಇಓ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಧೋನಿಗೆ ಚೆನ್ನೈ ಪರ ಕೊನೆಯ ಪಂದ್ಯ? – #DefinitelyNot ಟ್ರೆಂಡಿಂಗ್

    ತಂಡದ ಆಟಗಾರರನೆಲ್ಲಾ ನಾನು ಪ್ರೀತಿಸುತ್ತೇನೆ. ನಿಮ್ಮೆಲ್ಲರ ಪ್ರಯತ್ನವನ್ನು ನಾನು ಇಷ್ಟಪಟ್ಟೆ. ನಿಮಗೆ ಸಹಾಯ ಮಾಡಲು ನೀವು ನನ್ನನ್ನು ನಂಬಿದ್ದೀರಿ ಎಂದು ನಾನು ಭಾವಿಸುತ್ತೇನೆ. ಏನೇ ಆಗಲಿ, ನನ್ನ ಮೊಬೈಲ್ ಸಂಖ್ಯೆಯೂ ಇಂತಿದೆ. ಹಾಗಾಗಿ ಯಾವುದೇ ಹಂತದಲ್ಲಿ ನನಗೆ ಕರೆ ಮಾಡಬಹುದು ಎಂದರು. ತಂಡದ ನಾಯಕನಿಗೆ ಆಲ್ ದಿ ವೆರಿ ಬೆಸ್ಟ್ ಹೇಳಿದರು. ಇದನ್ನೂ ಓದಿ: Thailand Open – ನಂ.1 ಆಟಗಾರ್ತಿ ಯಮಗುಚಿಯನ್ನು ಸೋಲಿಸಿ ಸೆಮಿಗೆ ಸಿಂಧು ಎಂಟ್ರಿ

    ಕೆಕೆಆರ್ ಫ್ರಾಂಚೈಸಿಯ ಮುಖ್ಯ ಕೋಚ್ ಆಗಿ 3 ವರ್ಷಗಳ ಅನುಭವವನ್ನು ಹೊಂದಿರುವ ಅವರು, ಜೂನ್‍ನಲ್ಲಿ ಇಂಗ್ಲೆಂಡ್ ಪುರುಷರ ಟೆಸ್ಟ್ ತಂಡದ ಮುಖ್ಯ ತರಬೇತುದಾರರಾಗಿ ಸೇರಲು ಸಿದ್ಧರಾಗಿದ್ದಾರೆ. ಈ ಹಿಂದೆ ಕೆಕೆಆರ್ ತಂಡದ ಪ್ರಮುಖ ಬ್ಯಾಟ್ಸ್‌ಮ್ಯಾನ್ ಆಗಿ ಸ್ಮರಣೀಯ ಆಟವನ್ನು ಆಡಿದ್ದ ಮೆಕಲಮ್, 2019ರಿಂದ ಕೆಕೆಆರ್ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದರು.

    IPL DC VS KKR 5

    ಈಗಾಗಲೇ ಕೆಕೆಆರ್ ತಂಡವು ಐಪಿಎಲ್ 2022ರ ಪ್ಲೇ ಆಫ್ ಹಂತದಿಂದ ಹೊರಬಿದ್ದಿದ್ದು, ತನ್ನ ಚರಣದ ಎಲ್ಲಾ ಪಂದ್ಯಗಳನ್ನು ಆಡಿ 14 ಪಂದ್ಯಗಳಲ್ಲಿ 6 ಜಯ 8 ಸೋಲುಗಳನ್ನು ಅನುಭವಿಸಿ ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ.

  • ಐಪಿಎಲ್ 2022: ಕೆಕೆಆರ್ ನಾಯಕನಾಗಿ ಶ್ರೇಯಸ್ ಅಯ್ಯರ್ ನೇಮಕ

    ಐಪಿಎಲ್ 2022: ಕೆಕೆಆರ್ ನಾಯಕನಾಗಿ ಶ್ರೇಯಸ್ ಅಯ್ಯರ್ ನೇಮಕ

    ಬೆಂಗಳೂರು: ಕೋಲ್ಕತ್ತಾ ನೈಟ್ ರೈಡರ್ಸ್ ಬುಧವಾರ ಫೆಬ್ರವರಿ 16ರಂದು ಇಂಡಿಯನ್ ಪ್ರೀಮಿಯರ್ ಲೀಗ್ 2022ರ ಮುಂಬರುವ ಆವೃತ್ತಿಗೆ ಶ್ರೇಯಸ್ ಅಯ್ಯರ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿದೆ.

    ಐಪಿಎಲ್ ಹರಾಜಿನಲ್ಲಿ ಶ್ರೇಯಸ್ ಅವರನ್ನು ಯಶಸ್ವಿಯಾಗಿ ಬಿಡ್ ಮಾಡಿದ್ದೇವೆ. ಕೆಕೆಆರ್ ತಂಡವನ್ನು ಮುನ್ನಡೆಸುವ ಅವಕಾಶವನ್ನು ಶ್ರೇಯಸ್ ಅವರಿಗೆ ನೀಡಲು ನಾವು ಸಂತೋಷಪಡುತ್ತೇವೆ. ಅವರು ಈಗಾಗಲೇ ಒಬ್ಬ ಒಳ್ಳೆಯ ಗುಣಮಟ್ಟದ ಬ್ಯಾಟ್ಸ್‌ಮನ್ ಆಗಿ ಎಲ್ಲರನ್ನೂ ಮೆಚ್ಚಿಸಿದ್ದಾರೆ. ಅವರು ತಂಡದ ನಾಯಕರಾಗಿ ಮಿಂಚುತ್ತಾರೆ ಅಂತ ನಮಗೆ ವಿಶ್ವಾಸವಿದೆ ಎಂದು ಕೆಕೆಆರ್ ತಂಡದ (ಸಿಇಒ) ಮತ್ತು ಎಂಡಿ ವೆಂಕಿ ಮೈಸೂರು ಅವರು ಟ್ವೀಟ್ ಮಾಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆಸ್ಟ್ರೇಲಿಯಾದ ಮ್ಯಾಕ್ಸ್‌ವೆಲ್ ತಮಿಳುನಾಡಿನ ಅಳಿಯ – ಆಮಂತ್ರಣ ಪತ್ರಿಕೆ ವೈರಲ್

    ಶ್ರೇಯಸ್ ಅಯ್ಯರ್ ಅವರು ಭಾರತದ ಉಜ್ವಲ ಭವಿಷ್ಯದ ನಾಯಕರಲ್ಲಿ ಒಬ್ಬರಾಗಿದ್ದಾರೆ. ಅವರನ್ನು ಕೆಕೆಆರ್ ತಂಡದ ನಾಯಕರನ್ನಾಗಿ ನೋಡಲು ನಾನು ತುಂಬಾ ಉತ್ಸುಕನಾಗಿದ್ದೇನೆ. ನಾನು ಅವರ ಆಟವನ್ನು ಮತ್ತು ಅವರ ನಾಯಕತ್ವ ಕೌಶಲ್ಯಗಳನ್ನು ದೂರದಿಂದಲೇ ಆನಂದಿಸಿದ್ದೇನೆ. ಕೆಕೆಆರ್ ತಂಡದ ಯಶಸ್ಸು ಮತ್ತು ಅವರ ಆಟದ ಶೈಲಿಯನ್ನು ಮುನ್ನಡೆಸಲು ಅವರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ತಂಡದ ಮುಖ್ಯ ಕೋಚ್ ಬ್ರೆಂಡನ್ ಮೆಕಲಮ್ ಅವರು ಟ್ವೀಟ್ ಮಾಡಿ ಶುಭ ಹಾರೈಸಿದ್ದಾರೆ.

    ಕೆಕೆಆರ್‌ನ ನಾಯಕತ್ವವನ್ನು ಸ್ವೀಕರಿಸಿದ ಶ್ರೇಯಸ್ ಅಯ್ಯರ್ ಮಾತನಾಡಿ, ಕೆಕೆಆರ್‌ ನಂತಹ ಪ್ರತಿಷ್ಠಿತ ತಂಡವನ್ನು ಮುನ್ನಡೆಸುವ ಅವಕಾಶವನ್ನು ಪಡೆದಿರುವುದಕ್ಕೆ ನನಗೆ ಅತ್ಯಂತ ಗೌರವವಾಗಿದೆ. ಐಪಿಎಲ್ ಪಂದ್ಯಾವಳಿಯಾಗಿ ವಿವಿಧ ದೇಶಗಳು ಮತ್ತು ಸಂಸ್ಕೃತಿಗಳ ಅತ್ಯುತ್ತಮ ಆಟಗಾರರನ್ನು ಒಟ್ಟಿಗೆ ತರುತ್ತದೆ. ಪ್ರತಿಭಾವಂತ ವ್ಯಕ್ತಿಗಳ ಈ ಶ್ರೇಷ್ಠ ತಂಡವನ್ನು ಮುನ್ನಡೆಸಲು ನಾನು ಎದುರು ನೋಡುತ್ತಿದ್ದೇನೆ ಎಂದರು. ಇದನ್ನೂ ಓದಿ: ಶಕೀಬ್ ಐಪಿಎಲ್‍ನಲ್ಲಿ ಮಾರಾಟವಾಗಲಿಲ್ಲ ಯಾಕೆ – ರಿವಿಲ್ ಮಾಡಿದ ಪತ್ನಿ

    ಈ ತಂಡವನ್ನು ಮುನ್ನಡೆಸಲು ನನಗೆ ಅವಕಾಶ ನೀಡಿದ ಕೆಕೆಆರ್‌ನ ಮಾಲೀಕರು, ನಿರ್ವಹಣೆಗಾರರು ಮತ್ತು ಬೆಂಬಲ ಸಿಬ್ಬಂದಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ತಂಡದ ಗುರಿಗಳನ್ನು ಸಾಧಿಸಲು ನಾವು ಸರಿಯಾದ ಮಾರ್ಗಗಳನ್ನು ಕಂಡುಕೊಳ್ಳುತ್ತೇವೆ ಎಂದು ನನಗೆ ವಿಶ್ವಾಸವಿದೆ.

    ಭಾರತೀಯ ಕ್ರಿಕೆಟ್‍ಗೆ ಬಂದಾಗ ಕೋಲ್ಕತ್ತಾ ಮತ್ತು ಈಡನ್ ಗಾರ್ಡನ್‍ಗಳು ಬಹಳ ಶ್ರೀಮಂತ ಇತಿಹಾಸವನ್ನು ಹೊಂದಿವೆ. ಈ ಶ್ರೀಮಂತ ಇತಿಹಾಸಕ್ಕೆ ಕೊಡುಗೆ ನೀಡಲು ಮತ್ತು ನಮ್ಮ ಅಭಿಮಾನಿಗಳು ನಮ್ಮ ಬಗ್ಗೆ ಹೆಮ್ಮೆಪಡಲು ನಾನು ಎದುರು ನೋಡುತ್ತಿದ್ದೇನೆ. ಕೊರ್ಬೊ ಲೋರ್ಬೊ ಜೀಟ್ಬೊ! ಎಂಬ ತಂಡದ ಘೋಷ ವಾಕ್ಯವನ್ನು ಬರೆದು ಟ್ವೀಟ್ ಮಾಡಿದ್ದಾರೆ.

  • ದೆಹಲಿ ಮಾಲಿನ್ಯದಿಂದ ಡ್ರಗ್ ಟೆಸ್ಟ್ ನಲ್ಲಿ ಪಾಸಿಟಿವ್ – ಬ್ರೆಂಡನ್ ಮೆಕ್ಲಮ್

    ದೆಹಲಿ ಮಾಲಿನ್ಯದಿಂದ ಡ್ರಗ್ ಟೆಸ್ಟ್ ನಲ್ಲಿ ಪಾಸಿಟಿವ್ – ಬ್ರೆಂಡನ್ ಮೆಕ್ಲಮ್

    ನವದೆಹಲಿ: 2016 ರ ಐಪಿಎಲ್ ಟೂರ್ನಿಯ ವೇಳೆ ನಡೆದ ಡ್ರಗ್ ಪರೀಕ್ಷೆಯಲ್ಲಿ ಪಾಸಿಟಿವ್ ಬರಲು ದೆಹಲಿ ಮಾಲಿನ್ಯವೇ ಕಾರಣ ಎಂದು ನ್ಯೂಜಿಲೆಂಡ್ ತಂಡದ ಮಾಜಿ ಆಟಗಾರ ಬ್ರೆಂಡನ್ ಮೆಕ್ಲಮ್ ಆರೋಪಿಸಿದ್ದಾರೆ.

    ಖಾಸಗಿ ಮಾಧ್ಯಮವೊಂದರ ಸಂದರ್ಶನದ ವೇಳೆ ಮೆಕ್ಲಮ್, ಟೂರ್ನಿಯ ವೇಳೆ ತಾನು ಅಸ್ತಮಾ ಹಾಗೂ ಗಂಟಲು ಸಮಸ್ಯೆಯಿಂದ ಬಳಲಿದ್ದೆ. ಆರೋಗ್ಯ ಸಮಸ್ಯೆಯಿಂದ ಚೇತರಿಸಿಕೊಳ್ಳಲು ಔಷಧಿಯ ಪ್ರಮಾಣವನ್ನು ಹೆಚ್ಚಿಸಲಾಯಿತು. ಅದ್ದರಿಂದ ಡೋಪಿಂಗ್ ವರದಿಯಲ್ಲಿ ಪಾಸಿಟಿವ್ ಬಂದಿತ್ತು ಎಂದು ತಿಳಿಸಿದ್ದಾರೆ.  

    ಬಿಸಿಸಿಐ ಈ ವೇಳೆ ತಮ್ಮನ್ನು ಸಂಪರ್ಕಿಸಿ ವಿವರಣೆ ಕೇಳಿದ್ದು, ತಮ್ಮ ಆರೋಗ್ಯದ ಕುರಿತು ವಿವರಣ ಸ್ಪಷ್ಟನೆ ನೀಡಲು ತಾವು ಸ್ವೀಡನ್ ನ ಪರಿಣಿತ ವೈದ್ಯರ ಸಹಾಯ ಪಡೆದು ವರದಿ ನೀಡಿದ್ದಾಗಿ ಹೇಳಿದ್ದಾರೆ.

    ಡ್ರಗ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದ್ದನ್ನು ತಾನು ಫೇಲ್ ಎಂದು ಪರಿಗಣಿಸಲಿಲ್ಲ. ಆದರೆ ಈ ಕುರಿತು ಕೆಲ ಸ್ಪಷ್ಟೀಕರಣ ನೀಡಬೇಕಾಯಿತು. ಈ ಕುರಿತು ಎಲ್ಲಾ ರೀತಿಯ ರೂಮರ್ ಗಳನ್ನು ಸೂಕ್ತ ಸಾಕ್ಷ್ಯ ನೀಡಲಾಗದ ಕಾರಣ ಅಲ್ಲಗೆಳೆಯಲಾಯಿತು. ಇದು ಕೇವಲ ಒಂದು ಪ್ರಕ್ರಿಯೇ ಅಷ್ಟೇ. ಆದರೆ ಬಿಸಿಸಿಐನಂತಹ ಸಂಸ್ಥೆಯೊಂದಿಗೆ ಕಾರ್ಯನಿರ್ವಹಿಸಿದ್ದು ಉತ್ತಮ ಅನುಭವ ಎಂದು ಹೇಳಿದ್ದಾರೆ.

    2016 ರ ಟೂರ್ನಿಯಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ವಿರುದ್ಧ 36 ಬಾಲ್ ಗಳಲ್ಲಿ 60 ರನ್ ಸಿಡಿಸಿದ್ದರು. ಈ ಪಂದ್ಯದಲ್ಲಿ ಗುಜರಾತ್ ಲಯನ್ಸ್ 1 ರನ್ ನಿಂದ ಜಯ ಗಳಿಸಿತ್ತು. ಪಂದ್ಯದ ಬಳಿಕ ಮೆಕ್ಲಮ್ ಅವರಿಗೆ ಡ್ರಗ್ ಪರೀಕ್ಷೆ ನಡೆಸಲಾಗಿತ್ತು. 2016ರ ಟೂರ್ನಿಯಲ್ಲಿ ಗುಜರಾತ್ ಲಯನ್ಸ್ ಪರ ಮೆಕ್ಲಮ್ ಆಡಿದ್ದರು.

  • ಕಣ್ಸನ್ನೆ ಚೆಲುವೆ ಪ್ರಿಯಾ ವಾರಿಯರ್ ಗೆ ಪೈಪೋಟಿ ಕೊಟ್ರ ಮೆಕ್ಕಲಂ!

    ಕಣ್ಸನ್ನೆ ಚೆಲುವೆ ಪ್ರಿಯಾ ವಾರಿಯರ್ ಗೆ ಪೈಪೋಟಿ ಕೊಟ್ರ ಮೆಕ್ಕಲಂ!

    ಬೆಂಗಳೂರು: ಒಂದು ವಿಡಿಯೋ ಸಾಂಗ್ ಮೂಲಕ ಅಪಾರ ಅಭಿಮಾನಿಗಳನ್ನು ಪಡೆದು ಇಂಟರ್ ನೆಟ್ ಸೆನ್ಸೇಷನ್ ಆಗಿದ್ದ ನಟಿ ಪ್ರಿಯಾ ವಾರಿಯರ್ ಗೆ ಪೈಪೋಟಿ ನೀಡುವಂತೆ ಆರ್ ಸಿಬಿ ಆಟಗಾರ ಬ್ರೆಂಡನ್ ಮೆಕ್ಕಲಂ ಹುಬ್ಬೆರಿಸಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಸದ್ಯ ಈ ವಿಡಿಯೋವನ್ನು ಆರ್ ಸಿಬಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಪ್ರಿಯಾ ವಾರಿಯಾರ್ ಗೆ ಪೈಪೋಟಿ ನೀಡಿದ್ದರಾ ಎಂದು ಬರೆದುಕೊಂಡಿದೆ. ಈ ಹಿಂದೆಯೂ ಹಲವು ನಟ ನಟಿಯರು ಪ್ರಿಯಾ ವಾರಿಯರ್ ರೀತಿ ಹುಬ್ಬೆರಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದರು. ಸದ್ಯ ನ್ಯೂಜಿಲೆಂಡ್ ತಂಡದ ಮಾಜಿ ನಾಯಕ ಬ್ರೆಡಮ ಮೆಕಲಮ್ ಸಹ ಈ ಸಾಲಿಗೆ ಸೇರಿದ್ದಾರೆ.

    ಸದ್ಯದ ಟೂರ್ನಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾಗಿರುವ ಮೆಕ್ಕಲಂ 6 ಜನ್ನಿಂಗ್ಸ್ ಗಳಲ್ಲಿ ಕೇವಲ 127 ರನ್ ಮಾತ್ರ ಗಳಿಸಿದ್ದಾರೆ. ಶನಿವಾರ ನಡೆದ ರಾಜಸ್ಥಾನ ವಿರುದ್ಧ ಪಂದ್ಯದಲ್ಲಿ ಸೋಲುವ ಮೂಲಕ ಆರ್ ಸಿಬಿ 2018 ರ ಐಪಿಎಲ್‍ನಿಂದ ಹೊರಬಿದ್ದಿದೆ. ಟೂರ್ನಿಯಲ್ಲಿ 14 ಪಂದ್ಯಗಳನ್ನು ಆಡಿರುವ ಕೊಹ್ಲಿ ನಾಯಕತ್ವದ ಆರ್ ಸಿಬಿ ಕೇವಲ 6 ಪಂದ್ಯಗಳನ್ನು ಮಾತ್ರ ಗೆದ್ದು 12 ಅಂಕಗಳನ್ನು ಮಾತ್ರ ಪಡೆದಿದೆ.

    ಪಂದ್ಯದಲ್ಲಿ ರಾಜಸ್ಥಾನದ ಪರ ಕನ್ನಡಿಗ ಶ್ರೇಯಸ್ ಗೋಪಾಲ್ ಮಿಂಚಿನ ಬೌಲಿಂಗ್ ಪ್ರದರ್ಶನ ನೀಡಿ ಆರ್ ಸಿಬಿ ಸೋಲಿಗೆ ಕಾರಣರಾದರು. ಪಂದ್ಯದಲ್ಲಿ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಪ್ರಮುಖ ಆಟಗಾರರ 4 ವಿಕೆಟ್ ಪಡೆದ ಗೋಪಾಲ್ ಕೇವಲ 16 ರನ್ ಬಿಟ್ಟುಕೊಟ್ಟರು. ಈ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ಈ ಗೆಲುವಿನೊಂದಿಗೆ ರಾಜಸ್ಥಾನ ರಾಯಲ್ಸ್ ತಂಡ ಅಂಕಪಟ್ಟಿಯಲ್ಲಿ 14 ಪಂದ್ಯಗಳಿಂದ 14 ಅಂಕ ಪಡೆದರೂ ಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದಿದೆ. ಇದನ್ನು ಓದಿ: ಪ್ರಿಯಾ ವಾರಿಯರ್ `ಒರು ಅಡರ್ ಲವ್’ ಸಾಂಗ್ ಟೀಸರ್ ವೈರಲ್