Tag: brick kiln

  • ಹರ್ಯಾಣ | ಇಟ್ಟಿಗೆ ಗೂಡು ಕುಸಿದು 4 ಮಕ್ಕಳ ದುರ್ಮರಣ

    ಹರ್ಯಾಣ | ಇಟ್ಟಿಗೆ ಗೂಡು ಕುಸಿದು 4 ಮಕ್ಕಳ ದುರ್ಮರಣ

    ಚಂಡೀಗಢ: ಹರ್ಯಾಣದ (Haryana) ಹಿಸ್ಸಾರ್‌ನ ಬುಡಾನಾ ಗ್ರಾಮದಲ್ಲಿ ಮಲಗಿದ್ದ ವೇಳೆ ಇಟ್ಟಿಗೆ ಗೂಡು (Brick Kiln) ಕುಸಿದು ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಓರ್ವ ಬಾಲಕಿ ತೀವ್ರವಾಗಿ ಗಾಯಗೊಂಡಿದ್ದಾಳೆ.

    ಮೃತರನ್ನು ನಿಶಾ (3 ತಿಂಗಳು), ಸೂರಜ್ (9), ನಂದಿನಿ (5) ಮತ್ತು ವಿವೇಕ್ (9) ಎಂದು ಗುರುತಿಸಲಾಗಿದೆ. ನಾರ್ನಾಂಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಈ ದುರ್ಘಟನೆ ನಡೆದಿದೆ.

    ಮಕ್ಕಳು ಮತ್ತು ಕೆಲವು ಕಾರ್ಮಿಕರು ಇಟ್ಟಿಗೆ ಭಟ್ಟಿಯ ಗೋಡೆಯ ಬಳಿ ಮಲಗಿದ್ದಾಗ, ಗೋಡೆ ಅವರ ಮೇಲೆ ಕುಸಿದಿದೆ. ಪರಿಣಾಮ ಸೂರಜ್, ನಂದಿನಿ ಮತ್ತು ವಿವೇಕ್ ಸ್ಥಳದಲ್ಲೇ ಮೃತಪಟ್ಟರೆ, ನಿಶಾ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾಳೆ.

    ಗೌರಿ (5) ಎಂಬ ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ. ಆಕೆ ಹಿಸ್ಸಾರ್ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಎಲ್ಲಾ ಐವರು ಮಕ್ಕಳು ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಬಧವ್ ಗ್ರಾಮದವರು. ಉತ್ತರ ಪ್ರದೇಶದ (Uttar Pradesh) ಅನೇಕ ಕೂಲಿ ಕಾರ್ಮಿಕರು ಬುಡಾನಾದ ಇಟ್ಟಿಗೆ ಗೂಡುಗಳಲ್ಲಿ ಕೆಲಸ ಮಾಡುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಘಟನೆಯ ನಂತರ ಎಸ್ಪಿ ಮೀನಾ ಅವರು ಹಿಸ್ಸಾರ್ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಿದ್ದರು. ಬಳಿಕ ಮಾಹಿತಿ ನೀಡಿ, ಸಂತ್ರಸ್ತರ ಕುಟುಂಬಗಳು ಈ ಬಗ್ಗೆ ಯಾವುದೇ ಲಿಖಿತ ದೂರು ನೀಡಿಲ್ಲ. ದೂರು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

  • ಇಟ್ಟಿಗೆ ವ್ಯಾಪಾರಿಗೆ ಸಿಕ್ತು 1.20 ಕೋಟಿ ಬೆಲೆ ಬಾಳುವ ವಜ್ರ

    ಇಟ್ಟಿಗೆ ವ್ಯಾಪಾರಿಗೆ ಸಿಕ್ತು 1.20 ಕೋಟಿ ಬೆಲೆ ಬಾಳುವ ವಜ್ರ

    ಭೋಪಾಲ್: ಕೆಲವೊಮ್ಮೆ ಅದೃಷ್ಟ ಹೇಗೆ ಬದಲಾಗುತ್ತದೆ ಎಂದು ಊಹಿಸಲು ಅಸಾಧ್ಯ. ಇಲ್ಲೊಬ್ಬ ಗಣಿ ಕಾರ್ಮಿಕನಿಗೆ ಅಮೂಲ್ಯವಾದ ವಜ್ರ ಸಿಕ್ಕು ಆತನ ಅದೃಷ್ಟವೇ ಬದಲಾಗಿದೆ. ಸಣ್ಣ ಪ್ರಮಾಣದ ಇಟ್ಟಿಗೆ ವ್ಯವಹಾರ ನಡೆಸುತ್ತಿರುವ ವ್ಯಕ್ತಿಯೊಬ್ಬರು ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ಗಣಿಯೊಂದರಲ್ಲಿ 26.11 ಕ್ಯಾರೆಟ್ ವಜ್ರ ಸಿಕ್ಕಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ವಜ್ರದ ಗಣಿಯಾಗಿರುವ ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ಕಳೆದ ವರ್ಷ 30 ಲಕ್ಷದಿಂದ 35 ಲಕ್ಷ ಮೌಲ್ಯದ ಮೂರು ವಜ್ರಗಳನ್ನು ಹೊರ ತೆಗೆದ ಕಾರ್ಮಿಕರೊಬ್ಬರು ರಾತ್ರೋರಾತ್ರಿ ಕೋಟ್ಯಾಧಿಪತಿಯಾದರು. ಇದೀಗ ಪನ್ನಾದಲ್ಲಿ ಕಿಶೋರ್‌ಗಂಜ್‌ನ ನಿವಾಸಿ ಸುಶೀಲ್ ಶುಕ್ಲಾ  ಅವರಿಗೆ ಕೃಷ್ಣ ಕಲ್ಯಾಣಪುರ ಪ್ರದೇಶದ ಬಳಿ ಇರುವ ಗಣಿಯಲ್ಲಿ ಅಮೂಲ್ಯವಾದ ಕಲ್ಲನ್ನು ಕಂಡುಕೊಂಡಿದ್ದಾರೆ. ಇಲ್ಲಿನ ವಜ್ರದ ಅಧಿಕಾರಿ ರವಿ ಪಟೇಲ್ ಇದರ ಬೆಲೆ 1.20 ಕೋಟಿ ರೂಪಾಯಿ ಎಂದಿದ್ದಾರೆ. ಇದನ್ನೂ ಓದಿ :  ನಟ ಚೇತನ್ ಕಾಣೆಯಾಗಿದ್ದಾರೆ ಎಂದು ಪತ್ನಿ ದೂರು

    BRIBE

    ಸುಶಿಲ್ ಶುಕ್ಲಾ ಕಿಶೋರ್‌ಗಂಜ್‌ನಲ್ಲಿ ಸಣ್ಣ ಇಟ್ಟಿಗೆ ಗೂಡು ವ್ಯಾಪಾರವನ್ನು ನಡೆಸುತ್ತಿದ್ದರು. ಇನ್ನು ಗಣಿ ಕಾರ್ಮಿಕನಾಗಿಯೂ ಕೆಲಸ ಮಾಡುತ್ತಿದ್ದವನಿಗೆ ಅದೃಷ್ಟ ಲಕ್ಷ್ಮಿ ವಜ್ರದ ರೂಪದಲ್ಲಿ ಮನೆ ಬಾಗಿಲಿಗೆ ಹುಡುಕಿಕೊಂಡು ಬಂದಂತಾಗಿದೆ. ಒಂದೆರಡು ದಿನಗಳಲ್ಲಿ ರತ್ನವನ್ನು ಹರಾಜಿಗೆ ಇಡಲಾಗುವುದು ಮತ್ತು ಸರ್ಕಾರದ ತೆರಿಗೆಯನ್ನು ಕಡಿತಗೊಳಿಸಿದ ನಂತರ ಗಣಿಗಾರರಿಗೆ ನೀಡಲಾಗುವುದು ಎಂದಿದ್ದಾರೆ. ಇದನ್ನೂ ಓದಿ : ಸಿಂಪಲ್ಲಾಗೊಂದ್ ಲವ್ ಸ್ಟೋರಿಯಲ್ಲಿ ನಟಿಸಿದ್ದ ಆರ್.ಜೆ ರಚನಾ

    ಶುಕ್ಲಾ ಮಾತನಾಡಿ, ಬಾಡಿಗೆ ಜಮೀನಿನಲ್ಲಿ ಸಣ್ಣ ಪ್ರಮಾಣದ ಇಟ್ಟಿಗೆ ವ್ಯಾಪಾರ ನಡೆಸುತ್ತಿದ್ದೇನೆ. ಕಳೆದ 20 ವರ್ಷಗಳಿಂದ ವಜ್ರದ ಗಣಿಗಾರಿಕೆಯಲ್ಲಿ ತಾನು ಮತ್ತು ತನ್ನ ಕುಟುಂಬವೂ ತೊಡಗಿಸಿಕೊಂಡಿದೆ. ಇಷ್ಟು ದೊಡ್ಡ ರತ್ನವನ್ನು ನಾನು ಹೊರತೆಗೆಯುವುದು ಇದೇ ಮೊದಲು ಎಂದಿದ್ದಾರೆ.