Tag: Bridegroom

  • ಮದುವೆಯಾದ ಏಳೇ ದಿನಕ್ಕೆ ಮದುಮಗ ನೇಣಿಗೆ ಶರಣು!

    ಮದುವೆಯಾದ ಏಳೇ ದಿನಕ್ಕೆ ಮದುಮಗ ನೇಣಿಗೆ ಶರಣು!

    ಬೆಳಗಾವಿ: ಮದುವೆಯಾದ ಏಳೇ ದಿನಕ್ಕೆ ಮದುಮಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಖಾನಾಪುರ ತಾಲೂಕಿನ ಲಕ್ಕೇಬೈಲ್ ಗ್ರಾಮದಲ್ಲಿ ನಡೆದಿದೆ. ದೇಮಪ್ಪ ಅರ್ಜುನ್ ಸನದಿ(23) ಮೃತ ಮದುಮಗ.

    ದೇಮಪ್ಪ ಕಳೆದ ವಾರವಷ್ಟೇ ತನ್ನ ಸೋದರತ್ತೆಯ ಮಗಳನ್ನು ಮದುವೆಯಾಗಿದ್ದ. ತನ್ನ ಸಂಬಂಧಿಕರ ಮನೆಗೆ ಹೋಗಿ ರಾತ್ರಿ ಮನೆಗೆ ಮರಳಿದ ಬಳಿಕ ತನ್ನ ಮಲಗುವ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಬೆಂಗ್ಳೂರಲ್ಲೊಂದು ವಿಚಿತ್ರ ಘಟನೆ- ಹೆಣದ ಒಡವೆ ಕಿತ್ತುಕೊಂಡ್ರಾ ಆಸ್ಪತ್ರೆ ಸಿಬ್ಬಂದಿ..?

    MARRIAGE

    ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಖಾನಾಪುರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ಕೌಟುಂಬಿಕ ಕಲಹ ಕಾರಣವೆಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಮೃತ ದೇಮಪ್ಪನ ಪತ್ನಿ ಹಾಗೂ ಆಕೆಯ ಪಾಲಕರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ: ಸಾರಿಗೆ ಬಸ್, ಕಾರ್ ನಡುವೆ ಅಪಘಾತ – ದಂಪತಿ ಸಾವು

    Live Tv

  • ವರ ಅಲ್ಲ, ಇದು ವಧುದಕ್ಷಿಣೆ ಕಿರುಕುಳ- ಪತ್ನಿ ವಿರುದ್ಧವೇ ಟೆಕ್ಕಿ ದೂರು!

    ವರ ಅಲ್ಲ, ಇದು ವಧುದಕ್ಷಿಣೆ ಕಿರುಕುಳ- ಪತ್ನಿ ವಿರುದ್ಧವೇ ಟೆಕ್ಕಿ ದೂರು!

    ಬೆಂಗಳೂರು: ನಗರದಲ್ಲಿ ವಿಚಿತ್ರ ಪ್ರಕರಣವೊಂದು ನಡೆದಿದ್ದು, ಟೆಕ್ಕಿಯೊಬ್ಬ ತನ್ನ ಪತ್ನಿ ವಿರುದ್ಧ ವಧುದಕ್ಷಿಣೆ ಕಿರುಕುಳದ ದೂರು ನೀಡಿದ್ದಾರೆ.

    ಆಂಧ್ರ ಮೂಲದ ಧೀರಾಜ್ ರೆಡ್ಡಿ ಚಿಂತಾಲ ತನ್ನ ಪತ್ನಿ ಜಯಶೃತಿ ವಿರುದ್ಧ ದೂರು ನೀಡಿದ್ದಾರೆ. ವೃತ್ತಿಯಲ್ಲಿ ಇಬ್ಬರು ಸಾಫ್ಟ್ ವೇರ್ ಎಂಜಿನಿಯರ್ ಗಳಾಗಿದ್ದಾರೆ. ಈಗ ಪತ್ನಿ ವಧುದಕ್ಷಿಣೆಗಾಗಿ ಪೀಡಿಸಿದಕ್ಕಾಗಿ ದೂರು ನೀಡಿದ್ದಾರೆ. ಪತ್ನಿ ಜಯಶೃತಿ ಐಷಾರಾಮಿ ಜೀವನ ನಡೆಸಲು ಗಂಡನಿಗೆ ಹಣ ಹಾಗೂ ಆಭರಣಗಳಿಗಾಗಿ ಪೀಡಿಸುತ್ತಿದ್ದರು ಎಂದು ತಿಳಿದುಬಂದಿದೆ.

    2016ರಲ್ಲಿ ಧೀರಾಜ್ ರೆಡ್ಡಿ ಚಿಂತಾಲ ಮತ್ತು ಜಯಶೃತಿ ವಿವಾಹವಾಗಿದ್ದರು. ಕಳೆದ ವರ್ಷ 30 ಲಕ್ಷ ಮೌಲ್ಯದ ಡೈಮಂಡ್ ಡಾಬು ಕೊಡಿಸುವಂತೆ ಪತ್ನಿ ಪೀಡಿಸಿದ್ದಳು. ಒಂದು ವೇಳೆ ಡಾಬು ಕೊಡಿಸದೇ ಇದ್ದರೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಳು. ತನ್ನ ತಂಗಿ ಮದುವೆಗೆ 40 ಲಕ್ಷ ಮೌಲ್ಯದ ಆಭರಣಕ್ಕೆ ಬೇಡಿಕೆ ಇಟ್ಟಿದ್ದಳು. ಪತ್ನಿಯ ವರ್ತನೆ ಬಗ್ಗೆ ಆಕೆಯ ಪೋಷಕರ ಬಳಿ ಪತಿ ಧೀರಾಜ್ ಹೇಳಿಕೊಂಡಿದ್ದರು. ಆಗ ಅವರು ಕೂಡ ಪತ್ನಿ ಹೇಳಿದಂತೆ ಕೇಳಬೇಕೆಂದು ತಾಕೀತು ಹಾಕಿದ್ದರು. ಜೊತೆಗೆ ನಿನ್ನ ಎಲ್ಲ ಆಸ್ತಿಯನ್ನೆಲ್ಲ ಜಯಶೃತಿ ಹೆಸರಿಗೆ ಬರೆದುಕೊಡು ಎಂದು ಬೆದರಿಕೆ ಒಡ್ಡಿದರು. ಅಷ್ಟೇ ಅಲ್ಲದೇ ಕಳೆದ ತಿಂಗಳು 2 ಕೋಟಿ ಹಣ ನೀಡುವಂತೆ ಪ್ರತಿದಿನ ಕಿರುಕುಳ ನೀಡುತ್ತಾರೆ ಎಂದು ಧೀರಾಜ್ ದೂರಿನಲ್ಲಿ ತಿಳಿಸಿದ್ದಾರೆ.

    ಪತ್ನಿ ಕೂಡ ತನ್ನ ಸ್ನೇಹಿತರ ಮೂಲಕ ಪತಿಗೆ ಬೆದರಿಕೆಯೊಡ್ಡಿದ್ದರು ಎಂದು ತಿಳಿದುಬಂದಿದೆ. ಇದರಿಂದ ನೊಂದ ಪತಿ, ಪತ್ನಿ ಜಯಶೃತಿ ಹಾಗೂ ಪೋಷಕರ ವಿರುದ್ಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಧುದಕ್ಷಿಣೆ ಹಾಗೂ ಬೆದರಿಕೆ ಆರೋಪದಡಿ ದೂರು ಸ್ವೀಕರಿಸಿದ ಪೊಲೀಸರು ಸದ್ಯ ಇಬ್ಬರನ್ನು ಕರೆಸಿ ಮಾತುಕತೆ ನಡೆಸಲು ಮುಂದಾಗಿದ್ದಾರೆ.

  • ಮದ್ವೆಯಾಗಿ ಗಂಡನ ಮನೆಗೆ ಹೋಗ್ತಿದ್ದಂತೆ ಬಯಲಾಯ್ತು ವಧುವಿನ ರಹಸ್ಯ!

    ಮದ್ವೆಯಾಗಿ ಗಂಡನ ಮನೆಗೆ ಹೋಗ್ತಿದ್ದಂತೆ ಬಯಲಾಯ್ತು ವಧುವಿನ ರಹಸ್ಯ!

    ಇಂದೋರ್: ಮದುವೆಯಾಗಿ ಗಂಡನ ಮನೆಗೆ ಬರುತ್ತಿದ್ದಂತೆ ವಧು ವಾಂತಿ ಮಾಡಿದ್ದು, ನಂತರ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪತ್ನಿ ಆರು ವಾರದ ಗರ್ಭಿಣಿ ಎನ್ನುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

    ಕೆಂಟ್ ರೋಡ್ ನಿವಾಸಿಯಾದ ಸಿದ್ಧಾರ್ಥ್ (ಹೆಸರು ಬದಲಾಯಿಸಲಾಗಿದೆ) ಮತ್ತು ಜಾರ್ಖಂಡ್‍ನ ರಾಮ್‍ಗಡ್‍ನಲ್ಲಿರುವ ಪೂಜಾ (ಹೆಸರು ಬದಲಾಯಿಸಲಾಗಿದೆ) ಜೊತೆ ಮದುವೆ ನಡೆದಿತ್ತು. ಮದುವೆಯಾಗಿ ಇಂದೋರ್ ನಲ್ಲಿರುವ ತನ್ನ ಗಂಡನ ಮನೆಗೆ ಬರುತ್ತಿದ್ದಂತೆ ವಧು ವಾಂತಿ ಮಾಡಲು ಶುರು ಮಾಡಿದ್ದಾಳೆ.

    ನಂತರ ಸಿದ್ಧಾರ್ಥ್ ವಧು ಪೂಜಾಳನ್ನು ಮಹಿಳಾ ವೈದ್ಯರ ಬಳಿ ಕರೆದುಕೊಂಡು ಹೋಗಿದ್ದಾರೆ. ಆಗ ಪೂಜಾ 6 ವಾರದ ಗರ್ಭಿಣಿ ಎಂಬ ವಿಷಯ ತಿಳಿದು ಬಂದಿದೆ. ನಂತರ ಸಿದ್ಧಾರ್ಥ್ ಈ ವಿಷಯದ ಬಗ್ಗೆ ಪೂಜಾಳ ಹತ್ತಿರ ಕೇಳಿದ್ದಾರೆ. ಆಗ ಪೂಜಾ ಸತ್ಯವನ್ನು ಒಪ್ಪಿಕೊಂಡಿದ್ದಾಳೆ.

    ಮದುವೆಯಾಗುವ ಮುಂಚೆ ನಾನು ನನ್ನ ಸಂಬಂಧಿಕನ ಜೊತೆ ದೈಹಿಕ ಸಂಬಂಧ ಬೆಳೆಸಿಕೊಂಡಿದ್ದೆ. ಹಾಗಾಗಿ ನಾನು ಈಗ ಗರ್ಭಿಣಿ ಆಗಿದ್ದೀನಿ ಎಂದು ಪೂಜಾ ಒಪ್ಪಿಕೊಂಡಿದ್ದಾಳೆ. ಪೂಜಾ ಸತ್ಯವನ್ನು ಒಪ್ಪಿಕೊಂಡ ಬಳಿಕ 100 ರೂ. ಸ್ಯ್ಟಾಂಪ್ ಮೇಲೂ ಬರೆದಿದ್ದಾಳೆ.

    ಮದುವೆಯಾಗಿ ಮೋಸ ಹೋದ ಸಿದ್ಧಾರ್ಥ್ ಕೋರ್ಟ್ ನ ಮೊರೆ ಹೋಗಿದ್ದಾರೆ. ನಂತರ ಕೋರ್ಟ್ ಪೂಜಾಳನ್ನು ಕರೆದು ವಿಚಾರಿಸಿದಾಗ ನಾನು ಈ ಮೊದಲು ನನ್ನ ಸಂಬಂಧಿಕನ ಜೊತೆ ದೈಹಿಕ ಸಂಬಂಧ ಬೆಳೆಸಿಕೊಂಡಿದ್ದೆ ಎಂದು ಪೂಜಾ ಕೋರ್ಟ್‍ನಲ್ಲೂ ಸತ್ಯವನ್ನು ಒಪ್ಪಿಕೊಂಡಿದ್ದಾಳೆ.

    ಒಂದು ಬಾರಿ ವಿಚಾರಣೆ ನಡೆಸಿದ ಬಳಿಕ ಕೋರ್ಟ್ ಮತ್ತೊಂದು ದಿನಾಂಕಕ್ಕೆ ವರ ಹಾಗೂ ವಧುವಿಗೆ ಬರಲು ಹೇಳಿದ್ದರು. ಆದರೆ ವಧು ಕೋರ್ಟ್ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ಕೋರ್ಟ್ ಈ ಮದುವೆಯನ್ನು ಕಾನೂನು ಸಮ್ಮತವಾದ ಮದುವೆ ಅಲ್ಲ ಎಂದು ಆದೇಶ ನೀಡಿದೆ.

  • ಕೊಹ್ಲಿ ಗಡ್ಡ ಬಿಟ್ಟು ಮದುವೆಯಾದಾಗ ನಾನು ಯಾಕೆ ಆಗಬಾರದು- ಮದುವೆ ಮನೆಯಲ್ಲಿ ಹೈಡ್ರಾಮ

    ಕೊಹ್ಲಿ ಗಡ್ಡ ಬಿಟ್ಟು ಮದುವೆಯಾದಾಗ ನಾನು ಯಾಕೆ ಆಗಬಾರದು- ಮದುವೆ ಮನೆಯಲ್ಲಿ ಹೈಡ್ರಾಮ

    ಭೋಪಾಲ್: ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಗಡ್ಡ ಬಿಟ್ಟು ಮದುವೆಯಾದಾಗ ನಾನೇಕೆ ಮದುವೆಯಾಗಬಾರದು ಎಂದು ವರ ಹೇಳಿದ್ದಕ್ಕೆ ಮದುವೆ ಮನೆಯಲ್ಲಿ ಹೈಡ್ರಾಮಾ ನಡೆದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

    ಭೋಪಾಲ್‍ನಿಂದ 270 ಕಿ.ಮೀ ದೂರದಲ್ಲಿರುವ ಖಾಂಡ್ವಾ ಜಿಲ್ಲೆಯ ಅಜಂತಿ ಗ್ರಾಮದಲ್ಲಿ ಸೋಮವಾರ ರಾತ್ರಿ ಈ ವಾದ-ವಿವಾದ ನಡೆದಿದ್ದು, ಮಂಗಳವಾರ ಬೆಳಗಿನ ಜಾವದವರೆಗೂ ನಡೆದಿದೆ.

    ಮಂಗಲ್ ಚೌಹಾಣ್ ತನ್ನ ಮದುವೆಗೆ ಸಿದ್ಧರಾಗಿ ಬಂಧುಗಳ ಜೊತೆ ಮೆರವಣಿಗೆ ಮೂಲಕ ಮದುವೆ ಮಂಟಪಕ್ಕೆ ಬಂದಿದ್ದಾರೆ. ಆಗ ವಧುವಿನ ತಂದೆ ರಾಧೇಶ್ಯಾಮ್ ಜಾಧವ್ ವರ ಹಾಗೂ ಅವರ ಸಂಬಂಧಿಕರನ್ನು ಸ್ವಾಗತಿಸಲೆಂದು ಹೋದಾಗ ಮಂಗಲ್ ಚೌಹಾನ್ ಗಡ್ಡ ಬಿಟ್ಟಿರುವುದನ್ನು ಗಮನಿಸಿದ್ದಾರೆ.

    ಮದುವೆಯ ಮಾತುಕತೆ ವೇಳೆ ನೀನು ಗಡ್ಡ ಬಿಟ್ಟಿರಲಿಲ್ಲ. ಆದರೆ ಈಗ ಗಡ್ಡ ಬಿಟ್ಟಿದ್ದೀಯ. ನೀನು ಶೇವ್ ಮಾಡಿಕೊಂಡು ಬರುವವರೆಗೂ ನನ್ನ ಮಗಳು ರೂಪಾಲಿಯನ್ನು ನಿನಗೆ ಕೊಟ್ಟು ಮದುವೆ ಮಾಡಿಸಿಕೊಡುವುದಿಲ್ಲ ಎಂದು ವಧುವಿನ ತಂದೆ ರಾಧೇಶ್ಯಾಮ್ ಹಠ ಹಿಡಿದಿದ್ದಾರೆ.

    ವಧುವಿನ ತಂದೆಯ ಹಠಕ್ಕೆ ವರ ಮಂಗಲ್, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯೇ ಗಡ್ಡ ಬಿಟ್ಟುಕೊಂಡು ಅನುಷ್ಕಾ ಶರ್ಮಾ ಜೊತೆ ಮದುವೆಯಾದಾಗ ನಾನು ಯಾಕೆ ಗಡ್ಡ ಬಿಟ್ಟುಕೊಂಡು ಮದುವೆಯಾಗಬಾರದು ಎಂದು ಪ್ರಶ್ನಿಸಿ ವರ ತನ್ನ ವಾದವನ್ನು ಮಂಡಿಸಿದ್ದಾನೆ.

    ವಧುವಿನ ತಂದೆ ಹಾಗೂ ವರನ ಮಧ್ಯೆ ಗಡ್ಡದ ವಿಷಯಕ್ಕೆ ರಾತ್ರಿಯಿಡಿ ವಾದ-ವಿವಾದ ನಡೆದರೂ ಅವರ ಸಮಸ್ಯೆ ಬಗೆಹರಿಯಲಿಲ್ಲ. ಆಗ ವರನ ಸಂಬಂಧಿಕರು ನೀವು ಈ ರೀತಿ ವಾದ ಮಾಡಿದರೆ ನಮಗೆ ಈ ಮದುವೆ ಬೇಡ ಎಂದು ಹೇಳಿ ಎಚ್ಚರಿಕೆ ನೀಡಿದ್ದಾರೆ. ಗಲಾಟೆ ಜೋರಾಗುತ್ತಿದ್ದಂತೆ ವಧುವಿನ ಸಂಬಂಧಿಕರೊಬ್ಬರು ಮೊಗತ್ ರೋಡ್ ಪೊಲೀಸ್ ಠಾಣೆಯ ಪೊಲೀಸರಿಗೆ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ.

    ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ, ಗಡ್ಡ ಬಿಡುವುದು ಈಗಿನ ಕಾಲದ ಫ್ಯಾಷನ್ ಎಂದು ರಾಧೇಶ್ಯಾಮ್ ಅವರ ಮನವೊಲಿಸಲು ಪ್ರಯತ್ನಿಸಿದ್ದಾರೆ. ಪೊಲೀಸರು ಹೇಳಿದರೂ ರಾಧೇಶ್ಯಾಮ್ ಮಾತ್ರ ತನ್ನ ಹಠವನ್ನು ಬಿಡಲೇ ಇಲ್ಲ. ಕೊನೆಗೆ ವರ ಮಂಗಲ್ ನನ್ನು ಪೊಲೀಸರು ಮನವೊಲಿಸಿ ಶೇವ್ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಘಟನೆ ಬಗ್ಗೆ ವರ ಅಥವಾ ವಧುವಿನ ಕಡೆಯವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎಂದು ವರದಿಯಾಗಿದೆ.

  • ಮದ್ವೆಯಲ್ಲಿ ವರನಿಗೆ ಟೊಮೆಟೋ, ಮೊಟ್ಟೆ, ಸಗಣಿ ನೀರು, ಹಾಕಿ ಸ್ನಾನ ಮಾಡಿಸಿದ ಸ್ನೇಹಿತರು

    ಮದ್ವೆಯಲ್ಲಿ ವರನಿಗೆ ಟೊಮೆಟೋ, ಮೊಟ್ಟೆ, ಸಗಣಿ ನೀರು, ಹಾಕಿ ಸ್ನಾನ ಮಾಡಿಸಿದ ಸ್ನೇಹಿತರು

    ಮಂಗಳೂರು: ಮದುವೆಯ ದಿನ ಮಧುಮಗನಿಗೆ ಕೀಟಲೆ ಮಾಡೋದು ಮಾಮೂಲಿ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ರಾಯಿ ಎಂಬಲ್ಲಿ ನಡೆದ ಮದುವೆ ಮಾತ್ರ ತುಂಬನೇ ಡಿಫರೆಂಟ್ ಆಗಿತ್ತು. ಇತರ ಸ್ನೇಹಿತರಿಗೆ ಮದುವೆಯ ದಿನ ಕೀಟಲೆ ಕೊಡುತ್ತಿದ್ದ ಆತನಿಗೆ ಆತನ ಸ್ನೇಹಿತರು ಸಖತ್ ಆಗಿಯೇ ಶಾಕ್ ಕೊಟ್ಟಿದ್ದಾರೆ.

    ಹೌದು. ಬಂಟ್ವಾಳದ ರಾಯಿ ನಿವಾಸಿ ಮಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿರುವ ರಾಕೇಶ್‍ಗೆ ಕಳೆದ ಫೆಬ್ರವರಿ 19 ರಂದು ಮೆಹಂದಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮಧುಮಗ ರಾಕೇಶ್ ಶಾಸ್ತ್ರೋಕ್ತವಾಗಿ ಮೆಹೆಂದಿ ಕಾರ್ಯಕ್ರಮಕ್ಕೆ ತಯಾರಾಗುತ್ತಿದ್ದರೆ ಇತ್ತ ರಾಕೇಶ್ ಸ್ನೇಹಿತರು ಮಾತ್ರ ಕುಚೇಷ್ಠೆಗೆ ತಯಾರಾಗಿದ್ದರು.

    ಮಧುಮಗನಿಗೆ ಮನೆಯವರು ಹಾಲು ಸುರಿಯುತ್ತಿದ್ದಂತೆ ಬಂದ ಸ್ನೇಹಿತರು ರಾಕೇಶ್ ಮೇಲೆ ಹಳಸಿದ ಟೊಮೆಟೋ, ಮೊಟ್ಟೆ, ಸಗಣಿ ನೀರು ಸುರಿದಿದ್ದಾರೆ. ಅಷ್ಟೇ ಅಲ್ಲದೇ ಮದುವೆ ದಿನಾನೂ ಮಧುಮಗನನ್ನು ಬಿಡದ ಸ್ನೇಹಿತರು, ವಿವಿಧ ತರಕಾರಿಗಳ ಮಾಲೆಯನ್ನು ಮಾಡಿ ಹೊರೆಕಾಣಿಕೆ ರೂಪದಲ್ಲಿ ಮದುವೆ ಮಂಟಪಕ್ಕೆ ತಂದಿದ್ರು. ಎಲ್ಲಾ ಸ್ನೇಹಿತರು ಒಂದೇ ರೀತಿಯ ಪಂಚೆ ಹಾಗೂ ಅಂಗಿ ಧರಿಸಿದ್ದು, ಎಲ್ಲರ ಗಮನ ಸೆಳೆದಿತ್ತು.

    ಅಲ್ಲದೆ “ರಾಪಾಟದ ರಾಕೇಶ್‍ನ ಮದುವೆ” ಎಂದು ಬ್ಯಾನರ್ ಕೂಡಾ ಊರು ತುಂಬಾ ಹಾಕಿದ್ದಾರೆ. ಅದರಲ್ಲಿ ಮದುವೆಯ ಕುರಿತು ಡಿಫರೆಂಟ್ ಡೈಲಾಗ್‍ಗಳನ್ನು ಹಾಕಿದ್ದು ಊರಿನವರ ಗಮನ ಸೆಳೆದಿತ್ತು. ಬೇರೆ ಸ್ನೇಹಿತರ ಮದುವೆಯಲ್ಲಿ ಮಧುಮಕ್ಕಳಿಗೆ ರೇಗಿಸುತ್ತಿದ್ದ ರಾಕೇಶ್ ಗೆ ಈ ಬಾರಿ ಸ್ನೇಹಿತರೂ ರೇಗಿಸಿ ಸಖತ್ ಮಜಾ ತೆಗೆದುಕೊಂಡರು.

    ಸದ್ಯ ಮಧುಮಗನಿಗೆ ಯುವಕರ ಕೀಟಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಜನ ಸಖತ್ ಎಂಜಾಯ್ ಮಾಡುತ್ತಿದ್ದಾರೆ.

    https://www.youtube.com/watch?v=_zP21lk-DnI

  • ಪ್ರೀತಿಸಿ ಮದ್ವೆಯಾಗಿ ಪತಿ ಮನೆಗೆ ತೆರಳ್ತಿದ್ದಾಗ ಕಾರಿನಿಂದ ಜಿಗಿದು ಪೊಲೀಸ್ ಠಾಣೆಗೆ ಓಡಿದ ವಧು!

    ಪ್ರೀತಿಸಿ ಮದ್ವೆಯಾಗಿ ಪತಿ ಮನೆಗೆ ತೆರಳ್ತಿದ್ದಾಗ ಕಾರಿನಿಂದ ಜಿಗಿದು ಪೊಲೀಸ್ ಠಾಣೆಗೆ ಓಡಿದ ವಧು!

    ಪಾಟ್ನಾ: ಪ್ರೀತಿಸಿದ ಹುಡುಗನ ಜೊತೆ ಮದುವೆಯಾಗಿ ಆತನ ಮನೆಗೆ ಹೋಗುವಾಗ ವಧು ಕಾರಿನಿಂದ ಜಿಗಿದು ವರನ ವಿರುದ್ಧ ಅತ್ಯಾಚಾರದ ದೂರನ್ನು ದಾಖಲಿಸಿದ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.

    ವರದಿಗಳ ಪ್ರಕಾರ ವಧು-ವರ ಇಬ್ಬರೂ ಬಾಲ್ಯ ಸ್ನೇಹಿತರಾಗಿದ್ದು, 2012ರಿಂದ ಲಿವಿಂಗ್ ರಿಲೇಶನ್‍ಶಿಪ್‍ನಲ್ಲಿದ್ದರು. ನಂತರ ಫೆಬ್ರವರಿ 9ರಂದು ಸಂಪ್ರದಾಯದಂತೆ ಮದುವೆಯಾಗಿದ್ದರು. ಮದುವೆ ಆದ ಮಾರನೇ ದಿನ ವಧು ತನ್ನ ಪತಿ ಹಾಗೂ ಕುಟುಂಬದ ವಿರುದ್ಧ ಅತ್ಯಾಚಾರ ಹಾಗೂ ವರದಕ್ಷಿಣೆ ಕೇಸನ್ನು ದಾಖಲಿಸಿದ್ದಾಳೆ.

     ಫೆಬ್ರವರಿ 9ರ ರಾತ್ರಿ ಮದುವೆ ನಡೆದಿದ್ದು, ಮಾರನೇ ದಿನ ಪತಿ, ಪತ್ನಿಯ ತವರು ಮನೆಯಿಂದ ತನ್ನ ಮನೆಗೆ ಕರೆದುಕೊಂಡು ಹೋಗುವ ಸಮಯದಲ್ಲಿ ದಾರಿ ಮಧ್ಯೆದಲ್ಲಿ ವಧು ಕಾರಿನಿಂದ ಜಿಗಿದು ಪೊಲೀಸ್ ಠಾಣೆಗೆ ಹೋಗಿದ್ದಾಳೆ. ಪೊಲೀಸ್ ಠಾಣೆಗೆ ಹೋದ ನಂತರ ತನ್ನ ಪತಿ ವೈಭವ್, ಆತನ ಸಹೋದರ ಸೌರಬ್ ಆನಂದ್, ತಂದೆ ಅಲೋಕ್ ಕುಮಾರ್ ಹಾಗೂ ವರನ ಮಾವ ವಿರುದ್ಧ ದೂರು ನೀಡಿ ಕೇಸ್ ದಾಖಲಿಸಿದ್ದಾಳೆ.

    ಮದುವೆಯಾಗಿ ಗಂಡನ ಮನೆಗೆ ಹೋಗುತ್ತಿರುವಾಗ ಕಾರಿನಲ್ಲಿ ಪತಿ ಹಾಗೂ ನನ್ನ ನಡುವೆ ಜಗಳವಾಗಿತ್ತು. ಆಗ ವೈಭವ್‍ನನ್ನ ಕುತ್ತಿಗೆ ಬಿಗಿದು ಕೊಲ್ಲಲು ಯತ್ನಿಸಿದ್ದನು. ನಾನು ಜಿಗಿದು ಓಡಿ ಹೋಗಲು ಪ್ರಯತ್ನಿಸುವಾಗ ಕಾರು ಚಲಾಯಿಸುತ್ತಿದ್ದ ವೈಭವ್‍ನ ಮಾವ ಲಾಕ್ ಮಾಡಲು ಪ್ರಯತ್ನಿಸಿದ್ದ. ಅಷ್ಟೇ ಅಲ್ಲದೇ ನನ್ನ ಮೈಮೇಲೆ ಇರುವ ಚಿನ್ನಾಭರಣವನ್ನು ದೋಚಲು ಪ್ರಯತ್ನಿಸಿದ್ದರು ಎಂದು ವಧು ಆರೋಪಿಸಿದ್ದಾಳೆ.

    ಮದುವೆಯ ವೇಳೆ ದುಬಾರಿ ಕಾರನ್ನು ವರದಕ್ಷಿಣೆಯಾಗಿ ನೀಡಲು ಹೇಳಿದ್ದರು. ಅಷ್ಟೇ ಅಲ್ಲದೇ ಜಾತಿಯ ಬಗ್ಗೆ ನಿಂದಿಸಿದ್ದರು. 25ಲಕ್ಷ ರೂ. ಗಿಫ್ಟ್ ಆಗಿ ನೀಡಲು ಹೇಳಿದ್ದರು. ಆದರೆ ನಾವು ವರದಕ್ಷಿಣೆ ನೀಡಲು ನಿರಾಕರಿಸಿದ್ವಿ. ಇದರಿಂದ ವರ ಹಸಮಣೆಯಿಂದ ಓಡಿ ಹೋಗಲು ಪ್ರಯತ್ನಿಸುತ್ತಿದ್ದ. ಹಾಗಾಗಿ ಆತನ ವಿರುದ್ಧ ಅತ್ಯಾಚಾರದ ಆರೋಪವನ್ನು ವದು ನೀಡಿದ್ದಾಳೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

    ವರ ಹಾಗೂ ವಧು ಇಬ್ಬರೂ ಒಪ್ಪಿಕೊಂಡು 2012ರಲ್ಲೇ ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಹೀಗಿರುವಾಗ ಸುಳ್ಳು ಅತ್ಯಾಚಾರದ ಕೇಸ್ ದಾಖಲಿಸಿದ್ದಾಳೆ ಎಂದು ವೈಭವ್ ಕುಟುಂಬದವರು ಪೊಲೀಸರಿಗೆ ತಿಳಿಸಿದ್ದಾರೆ. ಇಬ್ಬರೂ ಶಾಲಾ ದಿನಗಳಿಂದ ಸ್ನೇಹಿತರು. ವೈಭವ್ ಮಧ್ಯಮ ವರ್ಗದ ಕುಟುಂಬದವನಾಗಿದ್ದರೆ, ಹುಡುಗಿ ಹೈ ಪ್ರೊಫೈಲ್ ಕುಟುಂಬದವಳು ಎಂದು ವರದಿಯಾಗಿದೆ.

    ವೈಭವ್ ದೆಹಲಿಯ ಏರ್ ಲೈನ್ಸ್ ಕಂಪನಿಯಲ್ಲಿ ಮ್ಯಾನೆಜರ್ ಆಗಿ ಕೆಲಸ ಮಾಡುತ್ತಿದ್ದು, 2012ರಲ್ಲಿ ಇಬ್ಬರೂ ಒಪ್ಪಿಕೊಂಡು ದೇವಸ್ಥಾನದಲ್ಲಿ ಮದುವೆಯಾಗಿದ್ದರು. ನಂತರ ಲಿವಿಂಗ್ ರಿಲೇಶನ್‍ಶಿಪ್‍ನಲ್ಲಿದ್ದರು. ಫೆ. 09 ರಂದು ಇಬ್ಬರ ಕುಟುಂಬದವರ ಒಪ್ಪಿಗೆ ಪಡೆದು ಸಂಪ್ರದಾಯದಂತೆ ಮದುವೆಯಾಗಲು ನಿರ್ಧರಿಸಿದ್ದರು.

  • ಸಂಗೀತ್ ಕಾರ್ಯಕ್ರಮದ ಆಚರಣೆ ವೇಳೆ ಗುಂಡು ತಾಗಿ ವರ ಸಾವು

    ಸಂಗೀತ್ ಕಾರ್ಯಕ್ರಮದ ಆಚರಣೆ ವೇಳೆ ಗುಂಡು ತಾಗಿ ವರ ಸಾವು

    ಚಂಢೀಘಢ: ಮದುವೆ ಮನೆಯಲ್ಲಿ ಸಂಭ್ರಮಾಚರಣೆ ನಡೆಸುವಾಗ ಗಾಳಿಯಲ್ಲಿ ಹಾರಿಸಿದ ಗುಂಡು ಅಚಾನಕ್ ಆಗಿ ಮಧುಮಗನಿಗೆ ತಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ವರ ಸಾವನ್ನಪ್ಪಿದ್ದ ಘಟನೆ ಶನಿವಾರ ಹರಿಯಾಣಾದ ಕೈತಲ್ ನಲ್ಲಿ ನಡೆದಿದೆ.

    ವಿಕ್ರಮ್ ವೋಹರಾ (36) ಸಾವನ್ನಪ್ಪಿದ್ದ ವರ. ವಿಕ್ರಮ್ 12 ವರ್ಷದಿಂದ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದರು. ವಿಕ್ರಮ್ ಸಂಗೀತ್ ಕಾರ್ಯಕ್ರಮದಲ್ಲಿ ತನ್ನ ಸಂಬಂಧಿಕರ ಜೊತೆ ಕುಣಿಯುತ್ತಿದ್ದರು. ಆಗ ಆತನ ಕುಟುಂಬದವರೊಬ್ಬರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆಕಸ್ಮಿಕವಾಗಿ ಗುಂಡು ವರನಿಗೆ ತಾಗಿದೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ವಿಕ್ರಮ್ ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ವಿಕ್ರಮ್ ಸಾವನ್ನಪ್ಪಿದ್ದಾರೆ.

    ವರನ ಸಂಬಂಧಿ ನವತೇಜ್ ಸಿಂಗ್ ಗೆ ಕೂಡ ಗಾಯವಾಗಿದ್ದು ಅವರನ್ನು ಚಂಢೀಘಢ್‍ನ ಪಿಜಿಐಗೆ ರವಾನಿಸಲಾಗಿದೆ.

    ಘಟನೆ ಬಗ್ಗೆ ಮಾತನಾಡಿದ ಕೈತಲ್ ನ ಎಸ್‍ಪಿ ಅಸ್ತಾ ಮೋದಿ, ನಾವು ಈ ಘಟನೆ ಬಗ್ಗೆ ತನಿಖೆ ಶುರು ಮಾಡಿದ್ದೇವೆ ಹಾಗೂ ಗುಂಡು ಹಾರಿಸಿದ್ದು ಯಾರು ಎಂಬುದನ್ನು ಪತ್ತೆ ಹಚ್ಚುತ್ತಿದ್ದೇವೆ. ಕಾರ್ಯಕ್ರಮದ ವಿಡಿಯೋಗಳನ್ನು ಪರಿಶೀಲಿಸಿದ್ದೇವೆ ಎಂದು ತಿಳಿಸಿದ್ದಾರೆ.

    ಐಪಿಸಿ ಸೆಕ್ಷನ್ 304 ಹಾಗೂ ಸೆಕ್ಷನ್ 308 ಅಡಿಯಲ್ಲಿ ಎಫ್‍ಐಆರ್ ದಾಖಲಾಗಿದೆ ಎಂದು ಎಸ್‍ಪಿ ಹೇಳಿದ್ದಾರೆ. ಮರಣೋತ್ತರ ಪರೀಕ್ಷೆ ನಡೆದ ನಂತರ ವರನ ದೇಹವನ್ನು ಕುಟುಂಬದವರಿಗೆ ಒಪ್ಪಿಸಲಾಗಿದೆ

    ಭಾನುವಾರದಂದು ವಿಕ್ರಮ್ ಮದುವೆ ನಡೆಯಬೇಕಿತ್ತು.