Tag: Britain

  • ಬ್ರಿಟನ್ ರಾಣಿ ಎಲಿಜಬೆತ್ ನಿಧನ – ನಾಳೆ ಕರ್ನಾಟಕದಲ್ಲೂ ಶೋಕಾಚರಣೆ

    ಬ್ರಿಟನ್ ರಾಣಿ ಎಲಿಜಬೆತ್ ನಿಧನ – ನಾಳೆ ಕರ್ನಾಟಕದಲ್ಲೂ ಶೋಕಾಚರಣೆ

    ಬೆಂಗಳೂರು: ಇಂಗ್ಲೆಂಡಿನ ರಾಣಿ 2ನೇ ಎಲಿಜಬೆತ್ (Elizabeth II) ನಿಧನರಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಸೆಪ್ಟೆಂಬರ್ 11 ರಂದು ಕರ್ನಾಟಕದಲ್ಲೂ ಶೋಕಾಚರಣೆಗೆ ರಾಜ್ಯ ಸರ್ಕಾರ ಆದೇಶಿಸಿದೆ.

    ಸೆ.11 ರಂದು ಶೋಕಾಚರಣೆ ಹಿನ್ನೆಲೆಯಲ್ಲಿ ಯಾವುದೇ ಅಧಿಕೃತ ಮನೋರಂಜನಾ ಕಾರ್ಯಕ್ರಮ ಇರುವುದಿಲ್ಲ. ನಿಯಮಿತವಾಗಿ ಎಲ್ಲಾ ಸರ್ಕಾರಿ ಇಲಾಖೆಯ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದೆ. ಇದನ್ನೂ ಓದಿ: 3ನೇ ಚಾರ್ಲ್ಸ್ ಬ್ರಿಟನ್ ರಾಜನಾಗಿ ಅಧಿಕೃತ ಘೋಷಣೆ

    ಕಳೆದ ವರ್ಷ ಅಕ್ಟೋಬರ್ ತಿಂಗಳಿನಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಿಟನ್ ರಾಣಿ (Britain Queen) ಎಲಿಜಬೆತ್ (96) ಅನಾರೋಗ್ಯದಿಂದ ಸೆ.8ರಂದು ಸ್ಕಾಟ್ಲೆಂಡ್ ಅರಮನೆಯಲ್ಲಿ ನಿಧನರಾದರು. ಇವರು 1923ರಿಂದ ಬ್ರಿಟನ್‌ನ ರಾಣಿಯಾಗಿದ್ದರು.  ಇದನ್ನೂ ಓದಿ: ಲಂಕಾ ಆರ್ಥಿಕ ಬಿಕ್ಕಟ್ಟು – ಶಾಲೆಗಳ ಪಠ್ಯಪುಸ್ತಕ ಮುದ್ರಣಕ್ಕೆ ಭಾರತದಿಂದ ಭಾರೀ ನೆರವು

    ರಾಣಿ 2ನೇ ಎಲಿಜಬೆತ್ ಸುದೀರ್ಘ 70 ವರ್ಷಗಳ ಆಳ್ವಿಕೆಯನ್ನು ಪೂರೈಸಿ ನಿಧನ ಹೊಂದಿದ ಬಳಿಕ ಇದೀಗ ಎಲಿಜಬೆತ್ ಅವರ ಹಿರಿಯ ಪುತ್ರ 3ನೇ ಚಾರ್ಲ್ಸ್ (Charles III) ಅವರನ್ನು ಅಧಿಕೃತವಾಗಿ ಬ್ರಿಟನ್ ರಾಜ ಎಂದು ಘೋಷಿಸಲಾಗಿದೆ. ಇಂದು ಅವರು ಪೀಠ ಅಲಂಕರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 3ನೇ ಚಾರ್ಲ್ಸ್ ಬ್ರಿಟನ್ ರಾಜನಾಗಿ ಅಧಿಕೃತ ಘೋಷಣೆ

    3ನೇ ಚಾರ್ಲ್ಸ್ ಬ್ರಿಟನ್ ರಾಜನಾಗಿ ಅಧಿಕೃತ ಘೋಷಣೆ

    ಲಂಡನ್: ರಾಣಿ 2ನೇ ಎಲಿಜಬೆತ್(Elizabeth II) ಸುದೀರ್ಘ 70 ವರ್ಷಗಳ ಆಳ್ವಿಕೆಯನ್ನು ಪೂರೈಸಿ ಗುರುವಾರ ನಿಧನ ಹೊಂದಿದರು. ಇದೀಗ ಎಲಿಜಬೆತ್ ಅವರ ಹಿರಿಯ ಪುತ್ರ 3ನೇ ಚಾರ್ಲ್ಸ್‌ನನ್ನು(Charles III) ಅಧಿಕೃತವಾಗಿ ಬ್ರಿಟನ್‌(Britain)ನ ರಾಜ ಎಂದು ಶನಿವಾರ ಘೋಷಿಸಲಾಗಿದೆ.

    ಲಂಡನ್‌ನ(London) ಸೇಂಟ್ ಜೇಮ್ಸ್ ಅರಮನೆಯಲ್ಲಿ ಇಂದು ಕಿಂಗ್ ಚಾರ್ಲ್ಸ್ ಅವರನ್ನು ಅಧಿಕೃತವಾಗಿ ಬ್ರಿಟನ್‌ನ ರಾಜ ಎಂದು ಘೋಷಿಸಲಾಗಿದೆ.

    ಶುಕ್ರವಾರ ಹಿರಿಯ ರಾಜನಾಗಿ ಮೊದಲ ಬಾರಿ ಮಾಡಿದ ಭಾಷಣದಲ್ಲಿ, ಕಿಂಗ್ ಚಾರ್ಲ್ಸ್ ರಾಣಿ 2ನೇ ಎಲಿಜಬೆತ್ ಅವರನ್ನು ಪ್ರೀತಿಯಿಂದ ನೆನಪಿಸಿಕೊಂಡರು. ಅವರು ನಿಷ್ಠೆ, ಗೌರವ ಮತ್ತು ಪ್ರೀತಿಯಿಂದ ತಮ್ಮ ಜೀವನಪರ್ಯಂತ ರಾಷ್ಟ್ರದ ಸೇವೆ ಸಲ್ಲಿಸುವುದಾಗಿ ಪ್ರತಿಜ್ಞೆ ಮಾಡಿದರು. ಇದನ್ನೂ ಓದಿ: ಏಕದಿನ ಕ್ರಿಕೆಟ್‌ಗೆ ಆರನ್ ಫಿಂಚ್ ವಿದಾಯ

    ಮುಂದೆ ಏನೆಲ್ಲಾ ಬದಲಾವಣೆ?
    ರಾಣಿ ಎಲಿಜಬೆತ್ ನಿಧನದ ಬಳಿಕ ಇದೀಗ ಚಾಲ್ಸ್ ಅಧಿಕಾರ ಸ್ವೀಕರಿಸಿದ್ದಾರೆ. ಈ ಬದಲಾವಣೆಯೊಂದಿಗೆ ದೇಶಾದ್ಯಂತ ಹಲವು ಬದಲಾವಣೆಯಾಗಲಿದೆ. ಅವುಗಳಲ್ಲಿ ಮುಖ್ಯವಾದವುಗಳು ಇಲ್ಲಿವೆ.
    * ಬ್ರಿಟನ್ ಕರೆನ್ಸಿಯಲ್ಲಿ ಚಾರ್ಲ್ಸ್ ಚಿತ್ರ ಮುದ್ರಿಸಲಾಗುತ್ತದೆ.
    * ರಾಷ್ಟ್ರಗೀತೆಯಲ್ಲಿ `ಗಾಡ್ ಸೇವ್ಸ್ ದಿ ಕ್ವೀನ್’ ಬದಲಿಗೆ `ಗಾಡ್ ಸೇವ್ ಅವರ್ ಪ್ರೀಷಿಯಸ್ ಕಿಂಗ್’ ಎಂದು ಬದಲಾಗಲಿದೆ.
    * ಬ್ರಿಟನ್ ಜೊತೆಗೆ ಆಸ್ಟ್ರೇಲಿಯಾ, ಕೆನಡಾದ ರಾಷ್ಟ್ರಗೀತೆ ಬದಲಾಗುತ್ತದೆ.
    * ಬ್ರಿಟಿಷ್ ಪಾಸ್‌ಪೋರ್ಟ್‌ನಲ್ಲಿ ರಾಣಿ ಸ್ಥಾನದಲ್ಲಿ ರಾಜನ ಚಿತ್ರ ಮುದ್ರಣವಾಗಲಿದೆ. ಇದನ್ನೂ ಓದಿ: ಎಎಪಿ ಅಧಿಕಾರಕ್ಕೇರಿದ ರಾಜ್ಯಗಳಲ್ಲಿ ಗುತ್ತಿಗೆ ನೌಕರರ ಹುದ್ದೆ ಖಾಯಂ: ಕೇಜ್ರಿವಾಲ್

    * ಬ್ರಿಟನ್ ಅಂಚೆ ಚೀಟಿ, ಪೊಲೀಸ್ ಟೋಪಿಯಲ್ಲಿ ರಾಣಿ ಬದಲು ರಾಜನ ಚಿನ್ಹೆ ಇರಲಿದೆ.
    * ಬಂಕಿಂಗ್‌ಹ್ಯಾಮ್ ಅರಮನೆ ಭದ್ರತಾ ಸಿಬ್ಬಂದಿಗೆ ಕ್ವೀನ್ ಗಾರ್ಡ್ಸ್ ಬದಲಾಗಿ ಕಿಂಗ್ ಗಾರ್ಡ್ಸ್ ಹೆಸರಿಸಲಾಗುತ್ತದೆ.
    * ಎಲಿಜಬೆತ್ ಬಳಿಯಿದ್ದ ಕೋಹಿನೂರು ವಜ್ರವಿರುವ ಕಿರೀಟ ಕೆಮಿಲ್ಲಾ ಪಾರ್ಕರ್‌ಗೆ ಹಸ್ತಾಂತರವಾಗಲಿದೆ.
    * ಬ್ರಿಟನ್ ರಾಜರಾದವರಿಗೆ ಪಾಸ್‌ಪೋರ್ಟ್ ಅಗತ್ಯವಿರುವುದಿಲ್ಲ.
    * ಅವರ ಹುಟ್ಟುಹಬ್ಬವನ್ನು 2 ದಿನ ಆಚರಿಸಲಾಗುತ್ತದೆ.
    * ಬ್ರಿಟನ್ ರಾಜ ಮತದಾನದಲ್ಲಿಯೂ ಪಾಲ್ಗೊಳ್ಳಲಾಗುವುದಿಲ್ಲ.

    Live Tv
    [brid partner=56869869 player=32851 video=960834 autoplay=true]

  • ರಾಣಿ 2ನೇ ಎಲಿಜಬೆತ್ ಹಿರಿಯ ಪುತ್ರ 3ನೇ ಚಾರ್ಲ್ಸ್ ಬ್ರಿಟನ್ ರಾಜನಾಗಿ ಆಯ್ಕೆ

    ರಾಣಿ 2ನೇ ಎಲಿಜಬೆತ್ ಹಿರಿಯ ಪುತ್ರ 3ನೇ ಚಾರ್ಲ್ಸ್ ಬ್ರಿಟನ್ ರಾಜನಾಗಿ ಆಯ್ಕೆ

    ಲಂಡನ್: ಬ್ರಿಟನ್(Britain) ದೇಶವನ್ನು ಅತ್ಯಧಿಕ ಕಾಲ ಆಳಿದ ರಾಣಿ 2ನೇ ಎಲಿಜಬೆತ್(Elizabeth II) ಗುರುವಾರ ನಿಧನ ಹೊಂದಿರುವುದಕ್ಕೆ ದೇಶ ವಿದೇಶಗಳಲ್ಲಿ ಸಂತಾಪ ವ್ಯಕ್ತವಾಗುತ್ತಿದೆ. ಇದೀಗ ಎಲಿಜಬೆತ್ ಹಿರಿಯ ಪುತ್ರ ವೇಲ್ಸ್ ಮಾಜಿ ಯುವರಾಜ 3ನೇ ಚಾರ್ಲ್ಸ್(Charles III) ಬ್ರಿಟನ್ ದೇಶಕ್ಕೆ ನೂತನ ರಾಜರಾಗಲಿದ್ದಾರೆ.

    ಬ್ರಿಟನ್‌ನ ರಾಜ ಅಥವಾ ರಾಣಿ ಕಣ್ಮುಚ್ಚಿದ 24 ಗಂಟೆಯಲ್ಲಿ ಉತ್ತರಾಧಿಕಾರಿ ಹೆಸರು ಘೋಷಣೆ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ರಾಜ ಚಾರ್ಲ್ಸ್, ರಾಣಿ ಕೆಮಿಲ್ಲಾ ಪಾರ್ಕರ್ ಇಂದು ಸ್ಕಾಟ್ಲೆಂಡ್‌ನಿಂದ ಲಂಡನ್ ತಲುಪಿದ್ದಾರೆ. ಚಾರ್ಲ್ಸ್ ಅವರು ಶನಿವಾರ ಬ್ರಿಟನ್‌ನ ಹೊಸ ರಾಜನೆಂದು ಅಧಿಕೃತವಾಗಿ ಘೋಷಣೆಯಾಗಲಿದ್ದಾರೆ. ಇದ್ನನೂ ಓದಿ: ಭಾರತಕ್ಕೆ ವಾಪಸ್‌ ಹೋಗಿ; ಭಾರತ-ಅಮೆರಿಕ ಮೂಲದ ಸಂಸದೆಗೆ ನಿಂದನೆ, ಬೆದರಿಕೆ

    ಹೊಸ ರಾಜನ ನೇಮಕಕ್ಕೆ ಬ್ರಿಟನ್‌ನ ಹಿರಿಯ ಮಂತ್ರಿಗಳು, ನ್ಯಾಯಮೂರ್ತಿಗಳು, ಧಾರ್ಮಿಕ ಮುಖಂಡರು ಸಭೆ ಸೇರಿ ಚರ್ಚೆ ನಡೆಸಿದ್ದಾರೆ. ತುರ್ತು ಸಂಸತ್ ಅಧಿವೇಶನ ನಡೆಸಿ, ಹೊಸ ರಾಜನಿಗೆ ವಿಧೇಯತೆ ತೋರಿಸಿದ್ದಾರೆ. ಬಳಿಕ ನೂತನ ರಾಜನ ಹೆಸರನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಅನುವಂಶಿಕ ರಾಜಸತ್ತೆ ಕಾಯ್ದೆಯ ಅನುಸಾರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.

    ಚಾರ್ಲ್ಸ್ ಬ್ರಿಟನ್‌ನ ರಾಜನಾಗುವ ಮೂಲಕ 14 ಕಾಮನ್‌ವೆಲ್ತ್ ದೇಶಗಳ ಮುಖ್ಯಸ್ಥರಾಗಿ ವ್ಯವಹರಿಸಲಿದ್ದಾರೆ. ಹೊಸ ರಾಜನೆಂದು ಅಧಿಕೃತವಾಗಿ ಘೋಷಣೆಗೊಂಡರೂ ಅವರ ಪಟ್ಟಾಭಿಷೇಕಕ್ಕೆ ಇನ್ನೂ ಕೆಲ ತಿಂಗಳು ಹಿಡಿಯಲಿದೆ ಎಂದು ವರದಿಗಳು ತಿಳಿಸಿವೆ. ಇದ್ನನೂ ಓದಿ: ಇದು ಮಾರಾಟ, ಸಹಾಯ ಅಲ್ಲ – ಪಾಕಿಸ್ತಾನದ ವ್ಯವಹಾರದ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ

    Live Tv
    [brid partner=56869869 player=32851 video=960834 autoplay=true]

  • ಬ್ರಿಟನ್ ರಾಣಿ ಎಲಿಜಬೆತ್-2 ಇನ್ನಿಲ್ಲ

    ಬ್ರಿಟನ್ ರಾಣಿ ಎಲಿಜಬೆತ್-2 ಇನ್ನಿಲ್ಲ

    ಲಂಡನ್: ಬ್ರಿಟನ್ (Britain) ರಾಣಿ ಎಲಿಜಬೆತ್-2 (Queen Elizabeth)  ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.

    96 ವರ್ಷದ ರಾಣಿ ಕಳೆದ ವರ್ಷ ಅಕ್ಟೋಬರ್‌ನಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇಂದು ರಾತ್ರಿ ಸ್ಕಾಟ್ಲೆಂಡ್ ಅರಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 1923ರಿಂದ ಬ್ರಿಟನ್‍ನ ರಾಣಿಯಾಗಿದ್ದರು.

    ಮೋದಿ ಉತ್ತಮ ವ್ಯಕ್ತಿ; ಅದ್ಭುತ ಕೆಲಸಗಳನ್ನು ಮಾಡುತ್ತಿದ್ದಾರೆ – ಟ್ರಂಪ್‌ ಬಣ್ಣನೆ

    ವೈದ್ಯರ ಸಲಹೆಯಂತೆ ರಾಣಿ ಎಲಿಜಬೆತ್ ಆರೋಗ್ಯದ ಬಗ್ಗೆ ನಿಗಾ ಇಡಲಾಗಿತ್ತು. ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಅವರನ್ನು ಉಳಿಯಲು ಶಿಫಾರಸು ಮಾಡಲಾಗಿತ್ತು. ಬಾಲ್ಮೋರಲ್ ಕ್ಯಾಸಲ್‍ನಲ್ಲಿ ಉಳಿದಿದ್ದ ರಾಣಿ ಎಲಿಜಬೆತ್‍ರನ್ನು ನೋಡಲು, ಆರೋಗ್ಯ ವಿಚಾರಿಸಲು ಇಂದು ಬೆಳಗ್ಗೆಯಿಂದಲೇ ಸಂಬಂಧಿಕರು ದೌಡಾಯಿಸುತ್ತಿದ್ದರು. ಇದೀಗ ನಿಧನ ಹೊಂದಿದ್ದಾರೆ. ಹಾಗಾಗಿ ಬ್ರಿಟನ್ ಸರ್ಕಾರ ಎಲ್ಲಾ ಸರ್ಕಾರಿ ಕಾರ್ಯಕ್ರಮವನ್ನು ರದ್ದುಗೊಳಿಸಿದೆ. ಭಾರತ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ರಾಣಿ ಎಲಿಜಬೆತ್-2 ಸಾವಿಗೆ ಕಂಬನಿ ಮಿಡಿದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬ್ರಿಟನ್ ರಾಣಿ ಎಲಿಜಬೆತ್ ಆರೋಗ್ಯದಲ್ಲಿ ಏರುಪೇರು

    ಬ್ರಿಟನ್ ರಾಣಿ ಎಲಿಜಬೆತ್ ಆರೋಗ್ಯದಲ್ಲಿ ಏರುಪೇರು

    ಲಂಡನ್: ಬ್ರಿಟನ್ ರಾಣಿ ಎಲಿಜಬೆತ್ (Queen Elizabeth) ಆರೋಗ್ಯದಲ್ಲಿ ಏರುಪೇರಾಗಿದ್ದು, ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ.

    96 ವರ್ಷದ ರಾಣಿ ಕಳೆದ ವರ್ಷ ಅಕ್ಟೋಬರ್‍ನಿಂದ ಆರೋಗ್ಯ (Health) ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಸದ್ಯ ಅವರಿಗೆ ನಡೆಯಲು ಮತ್ತು ನಿಲ್ಲಲು ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವೈದ್ಯರು ಅವರನ್ನು ಆಸ್ಪತ್ರೆಗೆ ದಾಖಲಿಸುವಂತೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಉಮೇಶ್ ಕತ್ತಿ ರಾಜಕೀಯ ಜೀವನ ಪುಸ್ತಕವಾಗಬೇಕು: ಅರುಣ್ ಸಿಂಗ್

    ಸದ್ಯ ರಾಣಿ ಆರೋಗ್ಯ ಸ್ಥಿರವಾಗಿದೆ, ಅವರು ಆರಾಮವಾಗಿದ್ದಾರೆ. ಹೀಗಾಗಿ ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ. ಸ್ಕಾಟ್ಲೆಂಡ್‍ನ ಬಾಲ್ಮೋರಲ್ ಕ್ಯಾಸಲ್‍ನಲ್ಲಿ ಉಳಿದಿದ್ದಾರೆ ಎಂದು ಅರಮನೆಯ ಮೂಲಗಳು ತಿಳಿಸಿದೆ. ಇತ್ತ ರಾಣಿ ಎಲಿಜಬೆತ್ ಆರೋಗ್ಯ ವಿಚಾರಿಸಲು ಸಂಬಂಧಿಕರು ದೌಡಾಯಿಸುತ್ತಿದ್ದಾರೆ.

    ವೈದ್ಯರ ಸಲಹೆಯಂತೆ ರಾಣಿ ಎಲಿಜಬೆತ್ ಆರೋಗ್ಯದ ಬಗ್ಗೆ ನಿಗಾ ಇಡಲಾಗಿದೆ. ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಅವರನ್ನು ಉಳಿಯಲು ಶಿಫಾರಸು ಮಾಡಿದ್ದಾರೆ ಎಂದು ಬಕಿಂಗ್ಹ್ಯಾಮ್ ಅರಮನೆ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಬಿನ್ ಲಾಡೆನ್ ಕುಟುಂಬದಿಂದ ಪ್ರಿನ್ಸ್ ಚಾರ್ಲ್ಸ್ ಚಾರಿಟಿಗೆ ಭಾರೀ ಮೊತ್ತದ ದೇಣಿಗೆ

    ಬಿನ್ ಲಾಡೆನ್ ಕುಟುಂಬದಿಂದ ಪ್ರಿನ್ಸ್ ಚಾರ್ಲ್ಸ್ ಚಾರಿಟಿಗೆ ಭಾರೀ ಮೊತ್ತದ ದೇಣಿಗೆ

    ಲಂಡನ್: ಬ್ರಿಟನ್ ರಾಜಮನೆತನದ ಉತ್ತರಾಧಿಕಾರಿ ಪ್ರಿನ್ಸ್ ಚಾರ್ಲ್ಸ್ ಅವರ ದತ್ತಿ ಟ್ರಸ್ಟ್‌ಗೆ ಇಸ್ಲಾಮಿಕ್ ಉಗ್ರ ಸಂಘಟನೆ ಅಲ್-ಖೈದಾ ಸ್ಥಾಪಕ ಒಸಾಮಾ ಬಿನ್ ಲಾಡೆನ್‌ನ ಕುಟುಂಬ ಭಾರೀ ಮೊತ್ತದ ದೇಣಿಗೆ ನೀಡಿದೆ. ಪ್ರಿನ್ಸ್ ಚಾರ್ಲ್ಸ್‌ನ ಚಾರಿಟೆಬಲ್ ಟ್ರಸ್ಟ್ 1 ಮಿಲಿಯನ್ ಪೌಂಡ್(ಸುಮಾರು 9 ಕೋಟಿ ರೂ.) ದೇಣಿಗೆಯನ್ನು ಪಡೆದಿದೆ ಎಂದು ವರದಿಯಾಗಿದೆ.

    ಬಿನ್ ಲಾಡೆನ್ ಕುಟುಂಬದ ಸದಸ್ಯರು ಯಾವುದೇ ತಪ್ಪು ಮಾಡಿಲ್ಲ ಎಂಬ ಸಲಹೆ ಇಲ್ಲದಿದ್ದರೂ ಇದೀಗ 73 ವರ್ಷಗಳ ಪ್ರಿನ್ಸ್ ಚಾರಿಟಿ ಸಂಸ್ಥೆ ದೇಣಿಗೆಯನ್ನು ಪಡೆದು, ಕ್ರಿಮಿನಲ್ ಅಪರಾಧಗಳ ಆರೋಪದ ಮೇಲೆ ಪರಿಶೀಲನೆಗೆ ಒಳಗಾಗಿದೆ. ಪ್ರಿನ್ಸ್ ಚಾರ್ಲ್ಸ್‌ನ ಸಲಹೆಗಾರರು, ಒಸಾಮಾ ಬಿನ್ ಲಾಡೆನ್‌ಗೆ ಸಂಬಂಧಿಸಿದ ಯಾರಿಂದಲೂ ಹಣ ಪಡೆಯದಂತೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ನರೇಂದ್ರ ಮೋದಿಯಿಂದಾಗಿ ನೀವೆಲ್ಲರೂ ಬದುಕಿದ್ದೀರಿ – ಲಸಿಕೆ ಪಡೆದ ಜನತೆಗೆ ಬಿಹಾರ ಸಚಿವ ಮಾತು

    2013ರಲ್ಲಿ ಚಾರ್ಲ್ಸ್ ಒಸಾಮಾಗೆ ಸಂಬಂಧಿಸಿದವರನ್ನು ಭೇಟಿಯಾಗಿದ್ದಾಗ ಪ್ರಿನ್ಸ್ ಆಫ್ ವ್ಹೇಲ್ಸ್ ಚಾರಿಟೆಬಲ್ ಫಂಡ್(ಪಿಡಬ್ಲ್ಯುಸಿಎಫ್)ಗೆ ಹಣ ಸ್ವೀಕರಿಸಲು ಒಪ್ಪಿಗೆ ಸೂಚಿಸಿದ್ದರು. ಆಗಿನ 5 ಟ್ರಸ್ಟಿಗಳು ದತ್ತಿ ಸ್ವೀಕರಿಸುವುದಕ್ಕೆ ಒಪ್ಪಿಗೆ ನೀಡಿದ್ದರು ಎಂದು ಪಿಡಬ್ಲ್ಯುಸಿಎಫ್ ಅಧ್ಯಕ್ಷರು ತಿಳಿಸಿದ್ದಾರೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ನಿರ್ಬಂಧ ಇನ್ನೆರಡು ದಿನ ವಿಸ್ತರಣೆ

    Live Tv
    [brid partner=56869869 player=32851 video=960834 autoplay=true]

  • ಪಂಜಾಬಿ ಖ್ಯಾತ ಗಾಯಕ ಬಲ್ವಿಂದರ್ ಸಫ್ರಿ ನಿಧನ

    ಪಂಜಾಬಿ ಖ್ಯಾತ ಗಾಯಕ ಬಲ್ವಿಂದರ್ ಸಫ್ರಿ ನಿಧನ

    ಬ್ರಿಟನ್ ಸಂಗೀತ ಕ್ಷೇತ್ರದಲ್ಲಿ ಭಾರೀ ಸಂಚಲನ ಸೃಷ್ಟಿ ಮಾಡಿದ್ದ, ಪಂಜಾಬಿ ಮೂಲದ ಗಾಯಕ ಬಲ್ವಿಂದರ್ ಸಫ್ರಿ ನಿಧನರಾಗಿದ್ದಾರೆ. 63ರ ವಯಸ್ಸಿನ ಸಂಫ್ರಿಯನ್ನು ನಾವು ಕಳೆದುಕೊಂಡಿದ್ದೇವೆ ಎಂದು ಸ್ವತಃ ಕುಟುಂಬದ ಮೂಲಗಳೇ ತಿಳಿಸಿವೆ. ಭಾರತೀಯ ಮೂಲದ ಬ್ರಿಟನ್ ನಲ್ಲಿ ಫೇಮಸ್ ಆಗಿದ್ದ ಸಫ್ರಿ ಅವರು ಬರ್ಮಿಂಗ್ ಹ್ಯಾಮ್ ನಲ್ಲಿ ನೆಲೆಸಿದ್ದರು.

    ಪಂಜಾಬಿನಲ್ಲಿ ಜನಿಸಿದ್ದರೂ, ಬರ್ಮಿಂಗ್ ಹ್ಯಾಮ್ ನಲ್ಲಿ ನೆಲೆ ಕಂಡುಕೊಂಡಿದ್ದ ಬಲ್ವಿಂದರ್ ಸಫ್ರಿ, 1989ರಿಂದ ಯುಕೆ ಭಾಂಗ್ರಾದ ಭಾಗವಾಗಿದ್ದ ಅವರು 1990ರಲ್ಲಿ ಸಫ್ರಿ ಬಾಯ್ಸ್ ಬ್ಯಾಂಡ್ ಕಟ್ಟಿಕೊಂಡು ಸಾಕಷ್ಟು ಕಾರ್ಯಕ್ರಮಗಳನ್ನು ನೀಡಿದ್ದಾರೆ. ಸಫ್ರಿ ಬಾಯ್ಸ್ ಬ್ಯಾಂಡ್ ಅತೀ ದುಬಾರಿ ಬ್ಯಾಂಡ್ ಎಂದೂ ಖ್ಯಾತಿಗಳಿಸಿತ್ತು. ಇದನ್ನೂ ಓದಿ:ಓಟಿಟಿನಲ್ಲಿ ಬರುತ್ತಿದ್ದಾಳೆ ರಕ್ಷಿತ್ ಶೆಟ್ಟಿ ನಟನೆಯ ಕನ್ನಡದ ‘ಚಾರ್ಲಿ

    ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಸಫ್ರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯ ಶಸ್ತ್ರ ಚಿಕಿತ್ಸೆಯ ನಂತರ ಅವರು ಕೋಮಾಗೆ ಹೋಗಿದ್ದರು ಎಂದು ಹೇಳಲಾಗುತ್ತಿದೆ. ಅಲ್ಲದೇ ಬ್ರೈನ್ ಡ್ಯಾಮೇಜ್ ಕೂಡ ಆಗಿತ್ತಂತೆ. ಆನಂತರ ಜುಲೈ 15ರಂದು ಆಸ್ಪತ್ರೆಯಿಂದ ಅವರನ್ನು ಮನೆಗೆ ಕರೆತರಲಾಗಿತ್ತು. ಮನೆಯಲ್ಲೇ ಸಫ್ರಿ ನಿಧನರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    Live Tv
    [brid partner=56869869 player=32851 video=960834 autoplay=true]

  • ನಾನು ಪ್ರಧಾನಿಯಾದರೆ 30 ಚೀನಾ ಸಂಸ್ಥೆ ಮುಚ್ಚುತ್ತೇನೆ: ರಿಷಿ ಸುನಕ್

    ಲಂಡನ್: ಬ್ರಿಟನ್‍ನ ಮುಂದಿನ ಪ್ರಧಾನಿಯಾದರೆ ಚೀನಾದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಇನ್ಫೋಸಿಸ್ ಮುಖ್ಯಸ್ಥ ನಾರಾಯಣ ಮೂರ್ತಿ ಅಳಿಯ ಹಾಗೂ ಬ್ರಿಟನ್ ಪ್ರಧಾನಿ ಅಭ್ಯರ್ಥಿ ರಿಷಿ ಸುನಕ್ ಭರವಸೆ ನೀಡಿದರು.

    ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷವನ್ನು ಮುನ್ನಡೆಸುವ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಅವರ ಪ್ರತಿಸ್ಪರ್ಧಿ ಚೀನಾ, ರಷ್ಯಾ ವಿಚಾರದಲ್ಲಿ ರಿಷಿ ಸುನಕ್ ದುರ್ಬಲಾಗಿದ್ದಾರೆ ಎಂದು ಆರೋಪಿಸಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಏಷ್ಯಾದ ಸೂಪರ್ ಪವರ್ ದೇಶವು ದೇಶೀಯವಾಗಿ ಮತ್ತು ಜಾಗತಿಕ ಭದ್ರತೆಗೆ ನಂಬರ್ ಒನ್ ಬೆದರಿಕೆಯಾಗಿದೆ ಎಂದ ಅವರು, ಬ್ರಿಟನ್‍ನಲ್ಲಿರುವ ಎಲ್ಲಾ 30 ಚೀನಾದ ಸಂಸ್ಥೆಗಳನ್ನು ಮುಚ್ಚುತ್ತೇವೆ. ಇದರಿಂದಾಗಿ ಚೀನಿ ಸಂಸ್ಕೃತಿ ಹಾಗೂ ಭಾಷಾ ಪ್ರಭಾವ ಹರಡುವುದನ್ನು ತಡೆಯುತ್ತೇವೆ ಎಂದರು.

    ಬ್ರಿಟನ್‍ನ ದೇಶೀಯ ಬೇಹುಗಾರಿಕೆ ಸಂಸ್ಥೆಯು ಚೀನೀ ಬೇಹುಗಾರಿಕೆಯನ್ನು ಎದುರಿಸಲು ಸಹಾಯ ಮಾಡುತ್ತದೆ. ಜೊತೆಗೆ ಸೈಬರ್‌ ಸ್ಪೇಸ್‍ನಲ್ಲಿ ಚೀನಾದ ಬೆದರಿಕೆಗಳನ್ನು ನಿಭಾಯಿಸಲು ನ್ಯಾಟೋ ಶೈಲಿಯ ಅಂತಾರಾಷ್ಟ್ರೀಯ ಸಹಕಾರವನ್ನು ನಿರ್ಮಿಸಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು.

    ಚೀನಾವು ನಮ್ಮ ತಂತ್ರಜ್ಞಾನವನ್ನು ಕದಿಯುತ್ತಿದೆ ಹಾಗೂ ನಮ್ಮ ವಿಶ್ವವಿದ್ಯಾನಿಲಯಗಳಿಗೆ ನುಸುಳುತ್ತಿದೆ. ಅಷ್ಟೇ ಅಲ್ಲದೇ ರಷ್ಯಾದ ತೈಲವನ್ನು ಖರೀದಿಸುವ ಮೂಲಕ ವಿದೇಶದಲ್ಲಿ ವ್ಲಾಡಿಮಿರ್ ಪುಟಿನ್ ಅವರಿಗೆ ಆಸರೆ ಆಗಿದ್ದಾರೆ. ಜೊತೆಗೆ ತೈವಾನ್ ಸೇರಿದಂತೆ ನೆರೆಹೊರೆಯವರನ್ನು ಬೆದರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿತ್ತು. ಇದನ್ನೂ ಓದಿ: ಗಾಂಜಾ ಗ್ಯಾಂಗ್ ಹಿಡಿಯಲು ಹೋಗಿ ಭೀಕರ ಅಪಘಾತ: ಸ್ವಗ್ರಾಮಕ್ಕೆ ಆಗಮಿಸಿದ ಪಿಎಸ್‍ಐ ಮೃತದೇಹ

    ಚೀನಾದ ಸರ್ಕಾರಿ ಗ್ಲೋಬಲ್ ಟೈಮ್ಸ್ ಈ ಹಿಂದೆ ಯುಕೆ-ಚೀನಾ ಸಂಬಂಧಗಳನ್ನು ಅಭಿವೃದ್ಧಿಪಡಿಸುವಲ್ಲಿ ಸ್ಪಷ್ಟ ಮತ್ತು ಪ್ರಾಯೋಗಿಕ ದೃಷ್ಟಿಕೋನವನ್ನು ಹೊಂದಿರುವ ಏಕೈಕ ಅಭ್ಯರ್ಥಿ ರಿಷಿಕ್ ಸುನಕ್ ಎಂದು ಹೇಳಿತ್ತು. ಇದನ್ನೂ ಓದಿ:  ಉತ್ತರ ಕನ್ನಡದಲ್ಲಿ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ: ಸಿಎಂ ಜೊತೆ ಚರ್ಚಿಸುವೆ ಎಂದ ಸುಧಾಕರ್

    Live Tv
    [brid partner=56869869 player=32851 video=960834 autoplay=true]

  • ಭಾರಿ ಬಿಸಿಲಿಗೆ ಕರಗಿ ಹೋಯ್ತು ರೈಲ್ವೆ ಸಿಗ್ನಲ್‌!

    ಭಾರಿ ಬಿಸಿಲಿಗೆ ಕರಗಿ ಹೋಯ್ತು ರೈಲ್ವೆ ಸಿಗ್ನಲ್‌!

    ಲಂಡನ್: ಭಾರಿ ಬಿಸಿಲು ಮತ್ತು ಬಿಸಿಗಾಳಿ ಬ್ರಿಟನ್‌ ಜನತೆಯನ್ನು ಕಂಗೆಡಿಸಿದೆ. ತೀವ್ರ ತಾಪಮಾನದಿಂದಾಗಿ ರೈಲ್ವೆಯ ಸಿಗ್ನಲ್‌ ಉಪಕರಣಗಳು ಕರಗಿದ್ದು, ರೈಲು ಸೇವೆಗೆ ದೊಡ್ಡ ಅಡೆತಡೆ ಎದುರಾಯಿತು. ಇದರಿಂದ ಪ್ರಯಾಣಿಕರು ಪರದಾಡಿದರು.

    ತಾಪಮಾನ ಹೆಚ್ಚಳದಿಂದಾಗಿ ಅರಣ್ಯ, ಕಟ್ಟಡಗಳಲ್ಲಿ ಬೆಂಕಿ ಹೊತ್ತಿ ಉರಿಯುತ್ತಿವೆ. ಸಿಗ್ನಲ್‌ ಲೈಟ್‌ಗಳು ಕರಗುತ್ತಿವೆ. ಉಷ್ಣಾಂಶವನ್ನು ತಾಳಲಾರದೇ ಜನ ತೊಂದರೆ ಅನುಭವಿಸುತ್ತಿದ್ದಾರೆ. ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟು – ಒಂದೊತ್ತಿನ ಊಟಕ್ಕಾಗಿ ವೇಶ್ಯಾವಾಟಿಕೆ ಹಾದಿ ಹಿಡಿಯುತ್ತಿರುವ ಲಂಕಾ ಮಹಿಳೆಯರು

    ದಾಖಲೆಯ ತಾಪಮಾನವು ಯಾವ ಹಾನಿಯನ್ನುಂಟು ಮಾಡಿದೆ ಎಂಬುದನ್ನು ತೋರಿಸುವ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿವೆ.

    ನಗರದಲ್ಲಿ ಬಿಸಿಲಿನ ತಾಪಮಾನಕ್ಕೆ ಬೆಂಕಿ ಹೊತ್ತಿ ಉರಿಯುವ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಅಲ್ಲಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರಾಗಿ ರನಿಲ್‌ ವಿಕ್ರಮಸಿಂಘೆ ಆಯ್ಕೆ

    ರೈಲು ಕಾರ್ಯಾಚರಣೆ ನಡೆಸುತ್ತಿರುವ ಅಧಿಕಾರಿಗಳು “ನಿಲ್ದಾಣಕ್ಕೆ ಬರಬೇಡಿ” ಎಂದು ಪ್ರಯಾಣಿಕರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ಅನಗತ್ಯ ಪ್ರಯಾಣ ಮಾಡದಂತೆ ಜನರಿಗೆ ಸೂಚಿಸಲಾಗಿದೆ.

    ಬ್ರಿಟನ್‌ನಲ್ಲಿ ತಾಪಮಾನ ದಿನೇ ದಿನೆ ಹೆಚ್ಚುತ್ತಿದ್ದು, 40ರಿಂದ 41 ಡಿಗ್ರಿ ಸೆಲ್ಸಿಯಸ್‌ ವರೆಗೂ ದಾಖಲಾಗಲಿದೆ ಎಂದು ಬ್ರಿಟನ್‌ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.

    Live Tv
    [brid partner=56869869 player=32851 video=960834 autoplay=true]

  • ಬ್ರಿಟಿಷ್ ಪ್ರಧಾನಿ ಹುದ್ದೆಗೆ ಸುನಾಕ್ ಇನ್ನೂ ಹತ್ತಿರ – 4 ನೇ ಸುತ್ತಿನ ಮತದಾನದಲ್ಲೂ ಜಯ

    ಬ್ರಿಟಿಷ್ ಪ್ರಧಾನಿ ಹುದ್ದೆಗೆ ಸುನಾಕ್ ಇನ್ನೂ ಹತ್ತಿರ – 4 ನೇ ಸುತ್ತಿನ ಮತದಾನದಲ್ಲೂ ಜಯ

    ಲಂಡನ್: ಭಾರತ ಮೂಲದ ಮಾಜಿ ಬ್ರಿಟಿಷ್ ಹಣಕಾಸು ಸಚಿವ ರಿಷಿ ಸುನಾಕ್ 4 ನೇ ಸುತ್ತಿನ ಮತದಾನದಲ್ಲಿ 118 ಮತಗಳನ್ನು ಪಡೆಯುವ ಮೂಲಕ ಬ್ರಿಟಿಷ್ ಪ್ರಧಾನಿ ಹುದ್ದೆಗೆ ಇನ್ನೂ ಹತ್ತಿರವಾಗಿದ್ದಾರೆ. ಕನ್ಸರ್ವೇಟಿವ್ ಪಕ್ಷದ ನಾಯಕನಾಗುವ ಸ್ಪರ್ಧೆಯಲ್ಲೂ ಸುನಾಕ್ ಮುನ್ನಡೆ ಸಾಧಿಸಿದ್ದಾರೆ.

    ಮಂಗಳವಾರ ನಡೆದ ಕನ್ಸರ್ವೇಟಿವ್ ಪಕ್ಷದ 4 ನೇ ಸುತ್ತಿನ ಮತದಾನದಲ್ಲಿ ಸುನಾಕ್ 118 ಮತಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನದಲ್ಲಿ ಉಳಿದುಕೊಂಡಿದ್ದಾರೆ. ಕಳೆದ 3 ನೇ ಸುತ್ತಿನ ಮತದಾನದಲ್ಲಿ ಸುನಾಕ್ 115 ಮತಗಳನ್ನು ಪಡೆದಿದ್ದರು. ಇದೀಗ 118 ಮತಗಳನ್ನು ಪಡೆಯುವ ಮೂಲಕ ತಮ್ಮ ಸ್ಥಾನದ ಭದ್ರತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಇದನ್ನೂ ಓದಿ: ರಾಜ್ಯದ 92 ಮಂದಿ ಸಿವಿಲ್ ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ

    ವ್ಯಾಪಾರದ ಸಚಿವ ಪೆನ್ನಿ ಮೊರ್ಡಾಂಟ 92 ಮತ ಹಾಗೂ ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ 68 ಮತಗಳನ್ನು ಪಡೆಯುವ ಮೂಲಕ 2ನೇ ಸ್ಥಾನದ ಸ್ಪರ್ಧೆಯಲ್ಲಿದ್ದಾರೆ. ಮಾಜಿ ಸಚಿವ ಬಡೆನೊಚ್ 59 ಮತಗಳನ್ನು ಪಡೆಯುವ ಮೂಲಕ ಸ್ಪರ್ಧೆಯಿಂದ ಹೊರಗುಳಿದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಸಾವಿರ ಗಡಿದಾಟಿದ ಕೊರೊನಾ – ಬೆಂಗ್ಳೂರಲ್ಲಿ 1,013 ಕೇಸ್, 1,104 ಮಂದಿ ಡಿಸ್ಚಾರ್ಜ್

    ಬುಧವಾರ 5ನೇ ಸುತ್ತಿನ ಮತದಾನ ನಡೆಯಲಿದ್ದು, ಬ್ರಿಟಿಷ್ ಪ್ರಧಾನಿ ಸ್ಥಾನಕ್ಕೆ ಸ್ಪರ್ಧೆ ನಡೆಸಲಿರುವ ಅಂತಿಮ ಸುತ್ತಿನ ಇಬ್ಬರು ಅಬ್ಯರ್ಥಿಗಳು ಯಾರು ಎಂಬುದು ತಿಳಿದುಬರಲಿದೆ.

    Live Tv
    [brid partner=56869869 player=32851 video=960834 autoplay=true]