Tag: brother -Sister

  • ಅಣ್ಣ-ತಂಗಿ ವರಸೆಯ ಪ್ರೀತಿಗೆ ಪೋಷಕರ ನಿರಾಕರಣೆ; ಪ್ರೇಮಿಗಳಿಬ್ಬರು ನೇಣಿಗೆ ಶರಣು

    ಅಣ್ಣ-ತಂಗಿ ವರಸೆಯ ಪ್ರೀತಿಗೆ ಪೋಷಕರ ನಿರಾಕರಣೆ; ಪ್ರೇಮಿಗಳಿಬ್ಬರು ನೇಣಿಗೆ ಶರಣು

    ಕಲಬುರಗಿ: ಅಣ್ಣ-ತಂಗಿ ವರಸೆಯ ಪ್ರೀತಿಗೆ ಪೋಷಕರು (Parents) ನಿರಾಕರಿಸಿದ ಹಿನ್ನೆಲೆ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಜಿಲ್ಲೆಯ ಯಡ್ರಾಮಿ (Yadrami) ತಾಲೂಕಿನ ಮಾಗಣಗೇರೆ ಗ್ರಾಮದಲ್ಲಿ ನಡೆದಿದೆ.

    ಶಶಿಕಲಾ (20) ಗೊಲ್ಲಾಳಪ್ಪ (24) ನೇಣಿಗೆ ಶರಣಾದ ಪ್ರೇಮಿಗಳು. ಶಶಿಕಲಾ ಮತ್ತು ಗೊಲ್ಲಾಳಪ್ಪ ಇಬ್ಬರು ಕೂಡ ವರಸೆಯಲ್ಲಿ ಅಣ್ಣ ತಂಗಿ ಆಗಿದ್ದರು. ಅದರಿಂದ ಎರಡೂ ಮನೆಯವರು ಅಣ್ಣ-ತಂಗಿ ಪ್ರೀತಿಗೆ ನಿರಾಕರಿಸಿದ್ದಾರೆ. ಇದನ್ನೂ ಓದಿ: ಪೋಸ್ಟ್ ಮೂಲಕ ಡ್ರಗ್ಸ್ ಸರಬರಾಜು – ವ್ಯಕ್ತಿ ಅರೆಸ್ಟ್, 6.50 ಲಕ್ಷ ಮೌಲ್ಯದ ಡ್ರಗ್ಸ್ ವಶ

    ಗೊಲ್ಲಾಳಪ್ಪ ಪ್ರೀತಿಯನ್ನು ನಿರಾಕರಿಸಿ ಶಶಿಕಲಾಗೆ ಬೇರೆ ಮದುವೆ ಮಾಡಲು ಕುಟುಂಬಸ್ಥರು ಮುಂದಾಗಿದ್ದರು. ಅದರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಗ್ರಾಮದ ಯುವಕನ ಜೊತೆ ನಿಶ್ಚಿತಾರ್ಥ ಮಾಡಿಸಿದ್ದರು. ಮುಂದಿನ ತಿಂಗಳು ಮದುವೆ ಕೂಡ ನಿಶ್ಚಯವಾಗಿತ್ತು ಎನ್ನಲಾಗಿದೆ. ಇದನ್ನೂ ಓದಿ: ನಡು ರಸ್ತೆಯಲ್ಲಿ ಕೊಲೆ ಮಾಡಿ ಪೊಲೀಸರಿಗೆ ಶರಣಾದ ಆರೋಪಿ

    ಪ್ರೇಯಸಿಗೆ ಮದುವೆ ನಿಶ್ಚಯ ಆಗಿರುವ ವಿಷಯ ತಿಳಿದ ಗೊಲ್ಲಾಳಪ್ಪ ನಿನ್ನೆ ರಾತ್ರಿ ಶಶಿಕಲಾಳನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಾನೆ. ನಂತರ ಮಾಗಣಪುರ ಗ್ರಾಮದ ದೇವಸ್ಥಾನದಲ್ಲಿ ಜೋಡಿ ಮದುವೆ ಮಾಡಿಕೊಂಡಿದ್ದಾರೆ. ಬಳಿಕ ಅದೇ ಗ್ರಾಮದ ಹೊರವಾಲಯದ ತೋಟದ ಜಮೀನಿನಲ್ಲಿ ಇಬ್ಬರು ನೇಣಿಗೆ ಶರಣಾಗಿದ್ದಾರೆ. ಪ್ರೇಮಿಗಳಿಬ್ಬರು ನೇಣಿಗೆ ಶರಣಾಗುವ ಮುನ್ನ ತಾವು ಮದುವೆ ಮಾಡಿಕೊಂಡಿರುವುದರ ಬಗ್ಗೆ ಸೆಲ್ಫಿ ಫೋಟೋ ತೆಗೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ:  ಪೊಲೀಸ್‌ ಠಾಣೆಯಲ್ಲೇ ಮಹಾರಾಷ್ಟ್ರ ಸಿಎಂ ಪಕ್ಷದ ನಾಯಕನ ಮೇಲೆ ಗುಂಡು ಹಾರಿಸಿದ ಬಿಜೆಪಿ ಶಾಸಕ

    ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಎಲ್‌ಕೆ ಅಡ್ವಾಣಿಗೆ ಭಾರತ ರತ್ನ : ನರೇಂದ್ರ ಮೋದಿ ಘೋಷಣೆ

  • ಅಣ್ಣ, ತಂಗಿಯರ ಬಾಂಧವ್ಯದ ಹಬ್ಬವೇ ರಕ್ಷಾ ಬಂಧನ – ವಿಶೇಷತೆ ಏನು?

    ಅಣ್ಣ, ತಂಗಿಯರ ಬಾಂಧವ್ಯದ ಹಬ್ಬವೇ ರಕ್ಷಾ ಬಂಧನ – ವಿಶೇಷತೆ ಏನು?

    ಶ್ರಾವಣ ಮಾಸ ಬಂತೆಂದರೆ ಸಾಲು ಸಾಲಾಗಿ ಹಬ್ಬಗಳು ಬರುತ್ತವೆ. ಮೊದಲಿಗೆ ವರಮಹಾಲಕ್ಷ್ಮಿ ಹಬ್ಬ ಬರುತ್ತದೆ. ನಂತರ ಬರುವುದೇ ಸಂಬಂಧವನ್ನು ಬೆಸೆಯುವ ಬಾಂಧವ್ಯದ ರಾಖಿ ಹಬ್ಬ. ಸಹೋದರ ಮತ್ತು ಸಹೋದರಿ ನಡುವಿನ ಪ್ರೀತಿ ಹಾಗೂ ನೆನಪುಗಳು ಅಚ್ಚಳಿಯದೆ ಉಳಿಯಲು ಪ್ರತೀ ವರ್ಷ ರಕ್ಷಾ ಬಂಧನವನ್ನು (Raksha Bandhan) ಆಚರಿಸಲಾಗುತ್ತದೆ.

    ಅಣ್ಣ-ತಂಗಿಯ (Brother Sister) ಬಂಧನಕ್ಕೆ ಬೆಲೆ ಕಟ್ಟಲಾಗದು. ಮನೆಯಲ್ಲಿ ಅಣ್ಣ ಅಥವಾ ತಮ್ಮನಿಗೆ ತಂಗಿ ಅಥವಾ ಅಕ್ಕ ಯಾವಾಗಲೂ ಬೆಂಬಲವಾಗಿ ನಿಲ್ಲುವರು. ಸಹೋದರ ಮತ್ತು ಸಹೋದರಿಯ ಸಂಬಂಧದ ಮಹತ್ವವನ್ನು ಸಾರುವಂತಹ ರಕ್ಷಾ ಬಂಧನವು ಪ್ರಮುಖವಾಗಿ ಭಾರತೀಯರು ಹೆಚ್ಚಾಗಿ ಆಚರಿಸುತ್ತಾರೆ. ಅಣ್ಣನ ಕೈಗೆ ತಂಗಿ ರಾಖಿ ಕಟ್ಟುವ ಮೂಲಕ ತಂಗಿ ಅಣ್ಣ ತನಗೆ ದುಷ್ಟಶಕ್ತಿಗಳಿಂದ ಸುರಕ್ಷತೆಯನ್ನು ನೀಡುತ್ತಾನೆ ಎಂಬ ನಂಬಿಕೆ ಇಟ್ಟುಕೊಂಡಿರುತ್ತಾಳೆ.

    ರಕ್ಷಾ ಬಂಧನ ಹಬ್ಬವನ್ನು ರಾಷ್ಟ್ರದೆಲ್ಲೆಡೆಯಲ್ಲಿ ಸಂಭ್ರಮದಿಂದ ಆಚರಿಸುತ್ತಾರೆ. ಇದು ಹಿಂದೂಗಳ ಹಬ್ಬವಾದರೂ ಹೆಚ್ಚಿನ ಧರ್ಮಗಳಲ್ಲಿ ಇದನ್ನು ಆಚರಿಸಲಾಗುತ್ತದೆ. ಈ ದಿನ ಸೋದರಿಯು ತನ್ನ ಸೋದರನ ಕೈಗೆ ರಕ್ಷೆಯ ದಾರವನ್ನು ಕಟ್ಟುತ್ತಾಳೆ. ಅದನ್ನೇ ರಾಖಿ ಎಂದು ಕರೆಯಲಾಗುತ್ತದೆ. ಈ ದಾರವನ್ನು ಕಟ್ಟುವ ವೇಳೆ ತಂಗಿ ತನ್ನ ಅಣ್ಣನಿಗೆ ದೀರ್ಘಾಯುಷ್ಯ, ಆರೋಗ್ಯವು ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಾಳೆ.

    ಇದಕ್ಕೆ ಪ್ರತಿಯಾಗಿ ಸಹೋದರನು ಕೂಡ ತನ್ನ ಸಹೋದರಿಯನ್ನು ಯಾವುದೇ ಕಷ್ಟದ ಪರಿಸ್ಥಿತಿಯಲ್ಲೂ ರಕ್ಷಿಸುವ ಭರವಸೆಯನ್ನು ನೀಡುತ್ತಾನೆ. ಅಷ್ಟೇ ಅಲ್ಲದೇ ತನ್ನ ಪ್ರೀತಿಯ ತಂಗಿಗೆ ಇಷ್ಟವಾಗಿರುವ ಉಡುಗೊರೆ ನೀಡುತ್ತಾನೆ. ರಕ್ಷಾಬಂಧನ ಎಂಬುದರಲ್ಲಿ ಎರಡು ಪದಗಳಿವೆ. ಒಂದು ರಕ್ಷಾ ಮತ್ತು ಬಂಧನ. ರಕ್ಷಾ ಎಂದರೆ ರಕ್ಷಣೆ ಮತ್ತು ಬಂಧನ ಎಂದರೆ ಬಂಧವೆಂದರ್ಥ. ಅಣ್ಣ-ತಂಗಿ ಇಬ್ಬರು ಪರಸ್ಪರ ಹಂಚಿಕೊಳ್ಳುವ ಪ್ರೀತಿ ಯಾವತ್ತೂ ಕೊನೆಗೊಳ್ಳದು.

    ರಾಖಿ ಕಟ್ಟುವುದು: ಮೊದಲಿಗೆ ಸಹೋದರಿ, ಸಹೋದರನ ಹಣೆಗೆ ತಿಲಕವನ್ನು ಇಟ್ಟು, ನೆತ್ತಿಯ ಮೇಲೆ ಅಕ್ಕಿ ಅಥವಾ ಅಕ್ಷತೆಯನ್ನು ಹಾಕಬೇಕು. ಬಳಿಕ ಅಣ್ಣಿನಿಗೆ ಆರತಿ ಬೆಳಗಬೇಕು. ಕೊನೆಯಲ್ಲಿ ಸಹೋದರನಿಗೆ ರಾಖಿಯನ್ನು ಕಟ್ಟಿ ಸಿಹಿಯನ್ನು ತಿನ್ನಿಸಬೇಕು. ತಂಗಿ ರಾಖಿ ಕಟ್ಟಿದ ನಂತರ ಅಣ್ಣ ಪ್ರೀತಿಯ ಸಹೋದರಿಗೆ ಉಡುಗೊರೆ ಕೊಡುತ್ತಾನೆ.

    ರಕ್ಷಾ ಬಂಧನದ ಹಿನ್ನೆಲೆ ಏನು?
    ಪ್ರತಿಯೊಂದು ಹಬ್ಬಕ್ಕೂ ಪುರಾಣದಲ್ಲಿ ತನ್ನದೇ ಆದ ಹಿನ್ನೆಲೆ ಇತಿಹಾಸವನ್ನು ಹೊಂದಿರುತ್ತವೆ. ಅದೇ ರೀತಿ ರಕ್ಷಾ ಬಂಧನಕ್ಕೂ ಕೂಡ ಅನೇಕ ಇತಿಹಾಸಗಳಿವೆ. ಭಗವಾನ್ ಕೃಷ್ಣನು ಶಿಶುಪಾಲನನ್ನು ಕೊಲ್ಲಲು ತನ್ನ ಸುದರ್ಶನ ಚಕ್ರವನ್ನು ಬಳಸುತ್ತಾನೆ. ಈ ವೇಳೆ ಆತನ ಕೈ ಬೆರಳಿಗೆ ಗಾಯವಾಗುತ್ತದೆ. ಎಲ್ಲರೂ ಕೈಬೆರಳಿಗೆ ಕಟ್ಟಲು ಬಟ್ಟೆಯನ್ನು ತರಲು ಹೋಗುತ್ತಾರೆ. ಆದರೆ ದ್ರೌಪದಿ ತನ್ನ ಸೀರೆಯ ಒಂದು ತುಂಡನ್ನು ಕತ್ತರಿಸಿ ರಕ್ತ ಸುರಿಯುತ್ತಿರುವ ಕೃಷ್ಣನ ಕೈಗೆ ಕಟ್ಟುತ್ತಾಳೆ. ಇದಕ್ಕೆ ಪ್ರತಿಫಲವನ್ನು ನೀಡಿದ ಶ್ರೀಕೃಷ್ಣ ಹಸ್ತಿನಾಪುರದ ಅರಮನೆಯಲ್ಲಿ ದುಶ್ಯಾಸನ ದ್ರೌಪದಿಯ ಸೀರೆಯನ್ನು ಎಳೆದಾಗ ಅದು ಎಳೆದಷ್ಟು ಉದ್ದವಾಗುವಂತೆ ಮಾಡಿ ದ್ರೌಪದಿಯ ಮಾನ ಕಾಪಾಡುತ್ತಾನೆ.

    ಪಾರ್ವತಿಯು ಸಹ ವಿಷ್ಣುವಿಗೆ ರಕ್ಷಾ ಬಂಧನವನ್ನು ಕಟ್ಟಿ ಆತನನ್ನು ತನ್ನ ಅಣ್ಣನಾಗಿ ಸ್ವೀಕರಿಸಿದ್ದಳು. ಅದಕ್ಕೆ ಪ್ರತಿಯಾಗಿ ವಿಷ್ಣು ಪಾರ್ವತಿ ದೇವಿಗೆ ಅಪಾಯವೊದಗಿದಾಗ ಆಕೆಯನ್ನು ತಾನು ಕಾಪಾಡುವುದಾಗಿ ಭರವಸೆ ನೀಡುತ್ತಾನೆ.

    ಇನ್ನೊಂದು ಕಥೆಯೆಂದರೆ, ಬಲಿ ಚಕ್ರವರ್ತಿಯು ವಿಷ್ಣು ದೇವರನ್ನು ತನ್ನ ಅರಮನೆಗೆ ಆಹ್ವಾನಿಸುತ್ತಾನೆ. ಬಲಿಯ ಅರಮನೆಯಲ್ಲಿ ಉಳಿಯಲು ವಿಷ್ಣು ದೇವರು ಬಯಸುತ್ತಾರೆ. ಆದರೆ ಲಕ್ಷ್ಮೀ ದೇವಿಗೆ ಇದು ಇಷ್ಟವಾಗುವುದಿಲ್ಲ. ಆಕೆ ವಿಷ್ಣು ದೇವರನ್ನು ಹಿಂಬಾಲಿಸಿಕೊಂಡು ಬಂದು ಬಲಿ ಚಕ್ರವರ್ತಿ ಮುಂದೆ ಬಂದು ನಿಲ್ಲುತ್ತಾಳೆ. ಬಲಿ ಚಕ್ರವರ್ತಿಯ ಭಕ್ತಿಯಿಂದ ಪ್ರಸನ್ನಳಾದ ಲಕ್ಷ್ಮೀ ದೇವಿಯು ಆತನನ್ನು ತನ್ನ ಸಹೋದರನೆಂದು ಸ್ವೀಕರಿಸಿ ರಾಖಿ ಕಟ್ಟುತ್ತಾಳೆ. ತನ್ನ ರಾಜ್ಯದಿಂದ ಏನು ಬೇಕಾದರೂ ಕೇಳಬಹುದೆಂದು ಬಲಿ ಚಕ್ರವರ್ತಿಯು ಲಕ್ಷ್ಮೀ ದೇವಿಗೆ ಹೇಳುತ್ತಾನೆ. ಹೀಗೆ ರಕ್ಷಾ ಬಂಧನಕ್ಕೆ ತನ್ನದೆ ಆದ ಹಿನ್ನೆಲೆಯನ್ನು ಹೊಂದಿದೆ.

    ಮಹತ್ವ:
    ರಕ್ಷಾಬಂಧನವು ಸಹೋದರ ಮತ್ತು ಸಹೋದರಿಯರ ನಡುವಿನ ಅನುಬಂಧವನ್ನು ಹೆಚ್ಚಿಸುತ್ತದೆ. ಈ ಹಬ್ಬದ ಮೂಲಕ ದೂರದಲ್ಲಿರುವ ಕುಟುಂಬ ಸದಸ್ಯರನ್ನು ಹತ್ತಿರಕ್ಕೆ ತರುತ್ತದೆ. ಬಲಗೈಗೆ ಕಟ್ಟಿಕೊಳ್ಳುವ ಈ ಪವಿತ್ರ ದಾರವಾದ ರಾಖಿಯು ಪ್ರತಿಯೊಬ್ಬರಿಗೂ ಪ್ರಪಂಚದ ಐಹಿಕ ಸುಖ ಭೋಗಗಳಿಗೆ ಮರುಳಾಗದಿರುವಂತೆ ನೆನಪಿಸುತ್ತದೆ. ರಾಖಿಯನ್ನು ಕಟ್ಟುವ ಸೋದರಿಯು ತನ್ನ ಸೋದರನಲ್ಲಿ ತನ್ನ ಧಾರ್ಮಿಕ ನಂಬಿಕೆ ಮತ್ತು ಹಂಬಲಗಳನ್ನು ಕಾಣುತ್ತಾಳೆ. ಸದಾ ಆತನ ಶ್ರೇಯಸ್ಸನ್ನು ಕೋರಿ ಕಟ್ಟುವ ಈ ರಾಖಿಯು ಒಂದು ನಿಷ್ಕಲ್ಮಶವಾದ ಪ್ರೀತಿಯ ಸಂಕೇತವಾಗಿದೆ. ಈ ಬಂಧನ ಆಕೆಯ ಭರವಸೆ, ನಂಬಿಕೆ ಹಾಗೂ ಶಕ್ತಿಯನ್ನು ಸೋದರನಿಗೆ ನೆನಪು ಮಾಡಿಕೊಡುತ್ತದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆಲವರಿಗೆ ಅದೃಷ್ಟ ಹಿಡಿದರೆ, ನನಗೆ ದರಿದ್ರ ಹಿಡಿದಿದೆ: ಮಂಜು

    ಕೆಲವರಿಗೆ ಅದೃಷ್ಟ ಹಿಡಿದರೆ, ನನಗೆ ದರಿದ್ರ ಹಿಡಿದಿದೆ: ಮಂಜು

    ಬಿಗ್‍ಬಾಸ್ ಸೆಕೆಂಡ್ ಇನ್ನಿಂಗ್ಸ್ ಆರಂಭದಲ್ಲಿಯೇ ಮಂಜು ಕೈಗೆ ರಾಕಿ ಕಟ್ಟಿ ಅಣ್ಣ-ತಂಗಿಯಾಗಿರುವ ವೈಷ್ಣವಿ ಮಂಜುಗೆ ಸಿಕ್ಕಾಪಟ್ಟೆ ಕೀಟಲೆ ಕೊಡುತ್ತಿದ್ದಾರೆ. ಸದ್ಯ ಮಂಜುಗೆ ಸೊಪ್ಪಿನ ಅಲಂಕಾರ ಮಾಡಿ ವೈಷ್ಣವಿ ದೃಷ್ಟಿ ತೆಗೆದಿದ್ದಾರೆ.

    ಈ ವಾರ ದೊಡ್ಮನೆ ಕಿಚನ್ ಜವಾಬ್ದಾರಿ ಹೊತ್ತುಕೊಂಡಿರುವ ಗಂಡೈಕ್ಳು ಅಡುಗೆ ಮಾಡಲು ಸೊಪ್ಪನ್ನು ಬಿಡುಸುತ್ತಿರುತ್ತಾರೆ. ಈ ವೇಳೆ ಹೊಟ್ಟೆ ಹಸಿವಿನಿಂದಾಗಿ ಸೋಫಾ ಮೇಲೆ ಕುಳಿತಿದ್ದ ವೈಷ್ಣವಿ ಮಂಜುರನ್ನು ಕರೆಯುತ್ತಾರೆ. ಆಗ ಆಗೊಯ್ತು ಇಷ್ಟೇ ಸೊಪ್ಪಿದೆ ಇನ್ನೂ ಕೆಲವು ಹೊತ್ತಿನಲ್ಲಿಯೇ ಉಪ್ಪು-ಖಾರ ಹಾಕಿ ಕೊಡುತ್ತೇನೆ ತಿಂದುಕೊಂಡು ಹೋಗಿ, ಸೊಪ್ಪು ಬಿಡುಸುವುದಕ್ಕೂ ನೆಮ್ಮದಿಯಾಗಿ ಬಿಡುವುದಿಲ್ವಾಲ್ಲ ಎನ್ನುತ್ತಾರೆ.

    ಆಗ ವೈಷ್ಣವಿ ನಿಮ್ಮನ್ನು ನೋಡಬೇಕು ಅನಿಸಿತು. ನೋಡಲು ಬಾರದಾ ಎಂದು ಕೇಳುತ್ತಾ, ಮಂಜಣ್ಣಾ, ಹೇ ಮಂಜಣ್ಣಾ ಎಂದು ಕರೆಯುತ್ತಾರೆ. ಏನಮ್ಮ ಎಂದು ಮಂಜು ಕೇಳಿದಾಗ, ವೈಷ್ಣವಿ ಹೇಗಿದ್ದೀರಾ? ಎಂದಾಗ ಚೆನ್ನಾಗಿದ್ದೀನಿ ಎಂದು ಮಂಜು ಹೇಳುತ್ತಾರೆ. ನಂತರ ನೀವು ಹೇಳುತ್ತಿರುವುದು ಕೇಳಿಸುತ್ತಿಲ್ಲ. ಬರ್ಲಾ ಅಲ್ಲಿ, ಬಂದೇ ಇರಿ ಎಂದು ರೇಗಿಸುತ್ತಾ ಕಿಚನ್ ಬಳಿ ಹೋಗುತ್ತಾರೆ.

    ನೀವು ಹೆಂಗಸರು ಕಿಚನ್ ಬಳಿ ಬರಬೇಡಿ ಎಂದು ಹೇಳಿದ್ನಾಲ್ಲ ಎಂದು ಮಂಜು ಹೇಳಿದಾಗ ವೈಷ್ಣವಿ ನಾನು ಹೆಂಗಸಲ್ಲ, ನಾನು ಮನುಷ್ಯಿ ಎನ್ನುತ್ತಾ, ಅರವಿಂದ್, ರಘು ಹಾಗೂ ಮಂಜು ಬಿಡಿಸಿದ್ದ ಸೊಪ್ಪನ್ನು ಒಂದೊಂದಾಗಿಯೇ ಮಂಜು ಕೂದಲಿಗೆ ಸಿಗಿಸುತ್ತಾರೆ. ಈ ವೇಳೆ ದಿವ್ಯಾ ಉರುಡುಗ ತಲೆಯನ್ನೇ ಸಾಂಬರ್ ಮಾಡಿ ಬಿಡೋಣ ಎಂದು ಕೇಳಿದಾಗ, ವೈಷ್ಣವಿ ತಲೆಯನ್ನೇ ಸ್ಟಾವ್ ಮೇಲೆ ಇಟ್ಟು ಅಡುಗೆ ಮಾಡಿಬಿಡೋಣ ಎಂದು ಇಬ್ಬರು ನಗುತ್ತಾರೆ.

    ಈ ವೇಳೆ ಮಂಜು ಅದೃಷ್ಟ ಹಿಡಿದಿದೆ ಎಂದು ಕೆಲವರು ಹೇಳುತ್ತಾರೆ ಗೊತ್ತಾ? ಹಾಗೆಯೇ ನನಗೆ ದರಿದ್ರ ಹಿಡಿದಿದೆ. ನಾನು ನಿನಗೆ ಏನು ಅನ್ಯಾಯ ಮಾಡಿದ್ದೆ ವೈಷ್ಣವಿ ಎಂದು ಪ್ರಶ್ನಿಸುತ್ತಾರೆ. ಅದಕ್ಕೆ ವೈಷ್ಣವಿ ನನಗೆ ಅಣ್ಣ ಅದ್ರಲ್ಲಾ ಎನ್ನುತ್ತಾ ಸೊಪ್ಪಿನಿಂದ ಮಂಜು ತಲೆಯನ್ನು ಅಲಂಕಾರ ಮಾಡುತ್ತಾರೆ. ಅದನ್ನು ಕಂಡು ಶುಭಾ ಪೂಂಜಾ ಯಾರು ಇಷ್ಟು ಚೆನ್ನಾಗಿ ನಿನಗೆ ಅಲಂಕಾರ ಮಾಡಿರುವುದು ಬಹಳ ಚೆನ್ನಾಗಿ ಕಾಣಿಸುತ್ತಿದ್ದೀಯಾ ಎಂದು ಆಡಿಕೊಳ್ಳುತ್ತಾರೆ.

    ನಂತರ ತಲೆಗಷ್ಟೇ ಅಲ್ಲದೇ ಮಂಜು ಬಾಯಿಗೂ ಸೊಪ್ಪನ್ನು ಸಿಗಿಸಿ ಚೆನ್ನಾಗಿ ಕಾಣಿಸುತ್ತಿದ್ದೀರಾ ಎಂದು ವೈಷ್ಣವಿ ಕಾಮೆಂಟ್ ಮಾಡುತ್ತಾ, ದೃಷ್ಟಿ ತೆಗೆದಿದ್ದಾರೆ.  ಇದನ್ನೂ ಓದಿ:  ನನ್ನ ಫ್ರೆಂಡ್ಸ್, ನನ್ನ ವಸ್ತುಗಳ ವಿಚಾರದಲ್ಲಿ ನಾನು ತುಂಬಾ ಪೊಸೆಸಿವ್: ಅರವಿಂದ್

  • ಅಣ್ಣನನ್ನು ರಕ್ಷಿಸಲು ಹೋಗಿ ಬಾವಿಯಲ್ಲಿ ಮುಳುಗಿದ ತಂಗಿಯ ರಕ್ಷಣೆ

    ಅಣ್ಣನನ್ನು ರಕ್ಷಿಸಲು ಹೋಗಿ ಬಾವಿಯಲ್ಲಿ ಮುಳುಗಿದ ತಂಗಿಯ ರಕ್ಷಣೆ

    ಉಡುಪಿ: ವೃದ್ಧರೊಬ್ಬರು ಬಾವಿಯಲ್ಲಿ ಬಿದ್ದು ಮೃತಪಟ್ಟಿರುವ ಘಟನೆ ಚಿಟ್ಪಾಡಿ ಹನುಮಾನ್ ಗ್ಯಾರೇಜ್ ಬಳಿ ನಡೆದಿದೆ.

    ನಾರಾಯಣ ಶೇರಿಗಾರ್ ರನ್ನು ರಕ್ಷಿಸಲು ಹೋದ ತಂಗಿ ಸುಶೀಲ ಪ್ರಾಣಕ್ಕೆ ಕುತ್ತು ತಂದುಕೊಂಡಿದ್ದರು. ಇವರನ್ನು ಮೈಕಲ್ ಡಿಸೋಜ ಅವರು ರಕ್ಷಿಸಿದ್ದಾರೆ.

    ಸಹೋದರ ನಾರಾಯಣ ಶೇರಿಗಾರ ಮನೆಯಲ್ಲಿ ಇಲ್ಲದ್ದನ್ನು ತಿಳಿದ ಸಹೋದರಿ ಸುಶೀಲ ಹುಡುಕಾಟ ನಡೆಸಿದ್ದಾರೆ. ಆಗ ಸಹೋದರ ಬಾವಿಗೆ ಬಿದ್ದಿರುವುದು ಕಂಡು ಬಂದಿದೆ. ಸಹೋದರನನ್ನು ರಕ್ಷಿಸಲು ಸುಶೀಲ ತಕ್ಷಣ ಬಾವಿಗೆ ಇಳಿದಿದ್ದಾರೆ. ಆದರೆ ಈಜಲು ಬಾರದೆ ಪರದಾಡಿದ್ದಾರೆ. ಆಗ ಸಹಾಯಕ್ಕಾಗಿ ಚೀರಿದ್ದು, ಸ್ಥಳಕ್ಕೆ ಧಾವಿಸಿದ ಮೈಕಲ್ ಡಿಸೋಜ ಅವರು ಬಾವಿಗೆ ಇಳಿದು ಮಹಿಳೆಯನ್ನು ರಕ್ಷಿಸಿದ್ದಾರೆ.

    ಮಹಿಳೆ ಪ್ರಾಣಪಾಯದಿಂದ ಪಾರಾಗಿದ್ದು, ಮೈಕಲ್ ಡಿಸೋಜ ಅವರ ಸಮಯ ಪ್ರಜ್ಞೆಗೆ ಸ್ಥಳೀಯರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಆದರೆ ನಾರಾಯಣ ಶೇರಿಗಾರ ಅವರು ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ನಾರಾಯಣ ಶೇರಿಗಾರ್ ಮೃತದೇಹವನ್ನು ಮೇಲಕ್ಕೆ ಎತ್ತಿದ್ದಾರೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ದಶಕಗಳ ನಂತ್ರ ಸಿನಿಮಾ ರೀತಿಯಲ್ಲಿ ಒಂದಾದ ಹಾಸನದ ಅಣ್ಣ-ತಂಗಿ

    ದಶಕಗಳ ನಂತ್ರ ಸಿನಿಮಾ ರೀತಿಯಲ್ಲಿ ಒಂದಾದ ಹಾಸನದ ಅಣ್ಣ-ತಂಗಿ

    ಹಾಸನ: ಸಿನಿಮಾ ಕಥೆಯನ್ನೇ ನಾಚಿಸುವಂತೆ ಅಣ್ಣ-ತಂಗಿಯರಿಬ್ಬರು ದಶಕಗಳ ನಂತರ ಮತ್ತೆ ಒಂದಾದ ಅಪರೂಪದ ಘಟನೆ ಹಾಸನದಲ್ಲಿ ನಡೆದಿದೆ.

    ಅಣ್ಣ ಮಂಜುನಾಥ್, ತಂಗಿ ಭಾಗ್ಯ. ಬಾಲ್ಯದಲ್ಲೇ ಹೆತ್ತವರನ್ನ ಕಳೆದುಕೊಂಡು, ಸಂಬಂಧಿಕರಿಂದಲೂ ನಿರ್ಲಕ್ಷ್ಯಕ್ಕೆ ಒಳಗಾಗಿ ಬೀದಿ ಪಾಲಾಗಿದ್ದ ಅಣ್ಣ ತಂಗಿ ಇದೀಗ ಮತ್ತೆ ಒಂದಾಗಿದ್ದಾರೆ. ಇವರಿಬ್ಬರು ಒಬ್ಬರೊಬ್ಬರನ್ನ ನೋಡಿ ತುಂಬಾ ವರ್ಷಗಳಾಗಿದ್ದು, ತಮ್ಮನ್ನು ತಾವೂ ನೋಡಿ ನಂಬಲಾಗದ ರೀತಿಯಲ್ಲಿ ಒಂದಾಗಿದ್ದಾರೆ. ಈ ಜನ್ಮದಲ್ಲಿ ಮತ್ತೆ ಒಂದಾಗುತ್ತೀವಿ ಎಂಬ ಪರಿಕಲ್ಪನೆ ಇಲ್ಲದಿದ್ದರೂ ಈ ಸಹೋದರ-ಸಹೋದರಿ ಮತ್ತೆ ಒಂದಾಗಿದ್ದು ನಿಜಕ್ಕೂ ಪಾವಡವೇ ಆಗಿದೆ.

    ನಡೆದಿದ್ದೇನು?
    ಮಂಜುನಾಥ್ ಮತ್ತು ಭಾಗ್ಯ ಚಿಕ್ಕವರಿದ್ದಾಗ ನೋಡಿಕೊಳ್ಳಲು ಕಷ್ಟವಾಗುತ್ತೆ ಎಂದು ಇಬ್ಬರು ಮಕ್ಕಳನ್ನು ಅವರ ಚಿಕ್ಕಮ್ಮ ಹೊಳೆನರಸೀಪುರ ತಾಲೂಕಿನ ಮಳಲಿ ಗ್ರಾಮದ ದೇವಸ್ಥಾನದ ಬಳಿ ಬಿಟ್ಟು ಹೋಗಿದ್ದರು. ಬಳಿಕ ಇಬ್ಬರು ದೇವಸ್ಥಾನದಲ್ಲಿ ಪ್ರಸಾದವನ್ನ ತಿಂದು ಎರಡು ದಿನ ದೂಡಿದ ಇವರಿಗೆ ಮೂರನೇ ದಿನ ಪ್ರಸಾದವೇ ಸಿಗಲಿಲ್ಲ. ಆಗ ಈ ಮಕ್ಕಳ ದಯನೀಯ ಸ್ಥಿತಿಯನ್ನ ನೋಡಿದ ಗ್ರಾಮದ ಶಿಕ್ಷಕ ಗೌಡೇಗೌಡ ಇವರಿಗೆ ಆಶ್ರಯ ನೀಡಿದ್ದರು. ಆಗ ಇಬ್ಬರು ಮಕ್ಕಳು ಇರುವುದನ್ನು ನೋಡಿದ ಗ್ರಾಮದ ಮಹಿಳೆಯೊಬ್ಬರು ತಾನು ಬಾಲಕಿಯೊಬ್ಬಳನ್ನ ಸಾಕುವುದಾಗಿ ಕರೆದುಕೊಂಡು ಹೋಗಿದ್ದಾರೆ.

    ಮಹಿಳೆ ಕರೆದುಕೊಂಡು ಹೋದ ಕೆಲವೇ ದಿನಗಳಲ್ಲಿ ಆ ಬಾಲಕಿಯನ್ನು ಸಕಲೇಶಪುರದ ಕಾಫಿ ತೋಟದ ಮಾಲೀಕನಿಗೆ ಮಾರಾಟ ಮಾಡಿದ್ದಾಳೆ. ಅಷ್ಟೇ ಅಲ್ಲದೇ ಬಾಲಕಿ ಕಾಣೆಯಾಗಿದ್ದಾಳೆ ಎಂದು ನಾಟಕ ಆಡಿದ್ದಳು. ಎಸ್ಟೇಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಚಿಕ್ಕ ಹುಡುಗಿ ಭಾಗ್ಯ ಅಲ್ಲಿ ಕಿರುಕುಳ ಹೆಚ್ಚಾದಾಗ ಇತ್ತೀಚಿಗೆ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಳು. ಕೊನೆಗೆ ಮಕ್ಕಳ ರಕ್ಷಣಾ ಸಮಿತಿಯವರು ಭಾಗ್ಯಳಿಗೆ ಆಶ್ರಯ ನೀಡಿ ವಿಚಾರಿಸಿದಾಗ ತನ್ನ ಬಾಲ್ಯದ ಘಟನೆಯನ್ನ ಎಳೆ ಎಳೆಯಾಗಿ ಹೇಳಿದ್ದಳು.

    ಭಾಗ್ಯ ಹೇಳಿದ ಮಾಹಿತಿ ಆಧರಿಸಿ ಮಕ್ಕಳ ರಕ್ಷಣ ಸಮಿತಿಗೆ ಹುಡುಕಾಟ ಆರಂಭಿಸಿತ್ತು. ಕೊನೆಗೂ ಭಾಗ್ಯಳ ಅಣ್ಣ ಮಂಜುನಾಥನಿಗೆ ಆಶ್ರಯ ನೀಡಿದ ಮನೆ ಸಿಕ್ಕಿದ್ದು, ಅಣ್ಣನ ಬಳಿಗೆ ಭಾಗ್ಯಳನ್ನು ಕರೆದುಕೊಂಡು ಹೋಗಿದ್ದಾರೆ. ಮಂಜುನಾಥನನ್ನ ಮನೆ ಮಗನಿಗಿಂತಲೂ ಒಂದು ಪಟ್ಟು ಹೆಚ್ಚು ಪ್ರೀತಿ ತೋರಿಸಿ ಸಲಹುತ್ತಿದ್ದ ಶಿಕ್ಷಕ ಗೌಡೇಗೌಡರು ಆರು ತಿಂಗಳ ಹಿಂದಷ್ಟೇ ಸಾವನ್ನಪ್ಪಿದ್ದರು. ಅವರ ಮಗ ಪೂರ್ಣಚಂದ್ರ ತೇಜಸ್ವಿ, ಮಂಜುನಾಥನನ್ನ ಹೊಣೆ ಹೊತ್ತು ತಮ್ಮನಿಗಿಂತ ಹೆಚ್ಚಿನ ಪ್ರೀತಿ ತೋರಿಸಿ ಎಸ್‍ಎಸ್‍ಎಲ್‍ಸಿ ವ್ಯಾಸಂಗ ಮಾಡಿಸುತ್ತಿದ್ದಾರೆ.

    ಮಕ್ಕಳ ಕಲ್ಯಾಣ ಸಮಿತಿಯ ಪ್ರಯತ್ನದಿಂದಾಗಿ ಮಂಗಳವಾರ ಅಣ್ಣ ತಂಗಿ ದಶಕದ ನಂತರ ಒಂದಾಗಿ ಖುಷಿಪಟ್ಟಿದ್ದಾರೆ. ತಂಗಿಯನ್ನ ಬಿಟ್ಟು ಇರಲಾರೆ ಅಂತಾ ಅಣ್ಣ ಮಂಜುನಾಥ್ ಹಠ ಹಿಡಿದಿದ್ದಾನೆ. ತಂಗಿಯೂ ಅಣ್ಣನ ಪ್ರೀತಿ ನನಗೆ ಬೇಕು ಎಂದು ಆಸೆ ಪಟ್ಟಿದ್ದಾಳೆ. ಮುಂದೇನು ಅನ್ನೋ ತೀರ್ಮಾನವನ್ನ ಮಕ್ಕಳ ಕಲ್ಯಾಣ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳಾ ಅಭಿವೃದ್ಧಿ ತೆಗೆದುಕೊಳ್ಳಬೇಕಾಗಿದೆ.