Tag: brothers

  • ಪ್ರವಾಹದಲ್ಲಿ ಕೊಚ್ಚಿ ಹೋದ ಸಹೋದರರಿಗಾಗಿ ಶೋಧ ಕಾರ್ಯಾಚರಣೆ ಆರಂಭ

    ಪ್ರವಾಹದಲ್ಲಿ ಕೊಚ್ಚಿ ಹೋದ ಸಹೋದರರಿಗಾಗಿ ಶೋಧ ಕಾರ್ಯಾಚರಣೆ ಆರಂಭ

    ಗದಗ: ಮಳೆಯಿಂದ ಮತ್ತೆ ಬೆಣ್ಣೆಹಳ್ಳ ಪ್ರವಾಹಕ್ಕೆ ಇಬ್ಬರು ಸಹೋದರರು ನೀರಲ್ಲಿ ಕೊಚ್ಚಿ ಹೋಗಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಮಾಳವಾಡ ಬಳಿ ನಡೆದಿದೆ.

    ಶನಿವಾರ ಸಂಜೆ ಬೆಣ್ಣೆಹಳ್ಳ ದಾಟುವಾಗ ಹದ್ಲಿ ಗ್ರಾಮದ ನಾಲ್ಕು ಜನ ಯುವಕರು ನೀರು ಪಾಲಾಗಿದ್ದರು. ಅದರಲ್ಲಿ ಇಬ್ಬರ ರಕ್ಷಣೆ ಇನ್ನಿಬ್ಬರು ನಾಪತ್ತೆಯಾಗಿದ್ದಾರೆ. ನರಗುಂದ ತಾಲೂಕಿನ ಹದ್ಲಿಗ್ರಾಮದ ಈರಪ್ಪ ಹಾಗೂ ಅಮೃತ್ ಇಬ್ಬರು ಈಜಿ ದಡ ಸೇರಿದ್ದಾರೆ. ಆದರೆ 30 ವರ್ಷದ ಕಳಸಪ್ಪ, ಹಾಗೂ 15 ವರ್ಷದ ಬಾಲಕ ಈರಣ್ಣ ನೀರು ಪಾಲಾಗಿದ್ದಾರೆ.

    ಅಮಾವಾಸ್ಯೆಗೆ ದೇವರ ಪೂಜೆಗೆ ನದಿ ನೀರು ತರಲು ಹೋದ ವೇಳೆ ಈ ದುರ್ಘಟನೆ ನಡೆದಿದೆ. ಸದ್ಯ ನೀರು ಪಾಲಾದ ಯುವಕರಿಗೆ ರೋಣ ತಾಲೂಕಿನ ಮೆಣಸಗಿ ಬಳಿಯ ಬೆಣ್ಣೆಹಳ್ಳದಲ್ಲಿ ಎನ್‍ಡಿಆರ್‍ಎಫ್ (ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ ), ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳಿಯರು ಶೋಧ ಕಾರ್ಯಾಚರಣೆಗೆ ಮುಂದಾಗಿದ್ದಾರೆ.

    ಸದ್ಯ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಗದಗ ಜಿಲ್ಲೆ ರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಎಚ್ಚರಿಕೆ ಕೊಟ್ರೂ ಅಕ್ಕನೊಂದಿಗೆ ಅಕ್ರಮ ಸಂಬಂಧ ಬಿಡದ ವ್ಯಕ್ತಿಯನ್ನ ಕೊಲೆಗೈದ ಸಹೋದರರು

    ಎಚ್ಚರಿಕೆ ಕೊಟ್ರೂ ಅಕ್ಕನೊಂದಿಗೆ ಅಕ್ರಮ ಸಂಬಂಧ ಬಿಡದ ವ್ಯಕ್ತಿಯನ್ನ ಕೊಲೆಗೈದ ಸಹೋದರರು

    – ಕೃತ್ಯಕ್ಕೆ ಸಹಾಯ ನೀಡಿದ್ದ ಸ್ನೇಹಿತ ಸೇರಿ ನಾಲ್ವರು ಅರೆಸ್ಟ್

    ದಾವಣಗೆರೆ: ನಮ್ಮ ಅಕ್ಕನೊಂದಿಗೆ ಅಕ್ರಮ ಸಂಬಂಧ ಬಿಟ್ಟುಬಿಡು ಎಂದು ಎಚ್ಚರಿಕೆ ಕೊಟ್ಟರೂ ಕ್ಯಾರೇ ಎನ್ನದ ವ್ಯಕ್ತಿಯನ್ನ ಮಹಿಳೆಯ ಸಹೋದರರು ಬರ್ಬರವಾಗಿ ಕೊಲೆಗೈದ ಘಟನೆ ಹರಿಹರದಲ್ಲಿ ನಡೆದಿದೆ.

    ದಾವಣಗೆರೆಯ ದೊಡ್ಡಬಾತಿ ಗ್ರಾಮದ ನಿವಾಸಿ ಹರೀಶ್ (29) ಕೊಲೆಯಾದ ವ್ಯಕ್ತಿ. ನಾಗರಾಜ, ಮಾರುತಿ, ರಾಘವೇಂದ್ರ ಹಾಗೂ ರಮೇಶ ಕೊಲೆಗೈದ ಆರೋಪಿಗಳು. ಹರಿಹರದ ಹೊರ ವಲಯದಲ್ಲಿ ಸೋಮವಾರ ರಾತ್ರಿ ಘಟನೆ ನಡೆದಿದ್ದು, 24 ಗಂಟೆಗಳ ಬಳಿಕ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಹರಿಹರ ಹೊರ ವಲಯದ ಡಾಬಾದಲ್ಲಿ ಹರೀಶ್ ಅಡುಗೆ ಭಟ್ಟನಾಗಿದ್ದ. ಡಾಬಾ ಸಮೀಪದ ಪ್ರದೇಶದಿಂದ ಮಹಿಳೆಯೊಬ್ಬಳು ಕೂಡ ಅಲ್ಲಿಯೇ ಕೆಲಸ ಮಾಡುತ್ತಿದ್ದಳು. ಮಹಿಳೆಯ ಪತಿ ತೀರಿಕೊಂಡಿದ್ದ ಬಗ್ಗೆ ತಿಳಿದುಕೊಂಡಿದ್ದ ಹರೀಶ್ ಆಕೆಯ ಜೊತೆಗೆ ಸಲುಗೆಯಿಂದ ಇದ್ದ. ಈ ವಿಚಾರ ಮಹಿಳೆಯ ಸಹೋದರರಾದ ನಾಗರಾಜ, ಮಾರುತಿ ಹಾಗೂ ರಾಘವೇಂದ್ರ ಗೊತ್ತಾಗಿತ್ತು. ಹೀಗಾಗಿ ಹರೀಶ್‍ಗೆ ಮೂರು ಬಾರಿ ಎಚ್ಚರಿಕೆ ಕೊಟ್ಟಿದ್ದರು.

    ನಮ್ಮ ಅಕ್ಕನ ಜೊತೆಗೆ ಮತ್ತೆ ಕಾಣಿಸಿಕೊಂಡರೆ ಸುಮ್ಮನೆ ಬಿಡುವುದಿಲ್ಲ ಎಂದು ಇತ್ತೀಚೆಗಷ್ಟೇ ಆರೋಪಿಗಳು ವಾರ್ನಿಂಗ್ ಕೂಡ ನೀಡಿದ್ದರು. ಆದರೆ ಇದಕ್ಕೆ ಕ್ಯಾರೇ ಎನ್ನದ ಹರೀಶ್, ಸೋಮವಾರ ರಾತ್ರಿ ಡಾಬಾ ಸಮೀಪದ ನಿರ್ಜನ ಪ್ರದೇಶದಲ್ಲಿ ಮಹಿಳೆಯ ಜೊತೆಗೆ ಕುಳಿತಿದ್ದ. ಇದನ್ನು ನೋಡಿದ ಸ್ಥಳೀಯರೊಬ್ಬರು ಮಹಿಳೆಯ ಸಹೋದರರಿಗೆ ತಿಳಿಸಿದ್ದಾರೆ. ಇದರಿಂದ ಕೋಪಗೊಂಡ ನಾಗರಾಜ ಸಹೋದರರು ಸ್ನೇಹಿತ ರಮೇಶ್ ಜೊತೆಗೆ ಸೇರಿ ಡಾಬಾಗೆ ಹೋಗಿ ಹಮೇಶ್‍ನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಹರೀಶ್‍ನನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕೊಲೆಗೈದಿದ್ದಾರೆ.

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಹರಿಹರ ನಗರ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದರು. ಡಾಬಾ ಮಾಲೀಕರು ಹಾಗೂ ಸಿಬ್ಬಂದಿಯನ್ನು ವಿಚಾರಣೆ ಒಳಪಡಿಸಿದಾಗ ಹರೀಶ್ ಅಕ್ರಮ ಸಂಬಂಧ ಹೊಂದಿದ್ದ ಮಾಹಿತಿ ಲಭ್ಯವಾಗಿತ್ತು. ಈ ಮೂಲಕ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. 24 ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸಿದ ಹರಿಹರ ನಗರ ಠಾಣೆ ಪೊಲೀಸರ ಕಾರ್ಯಕ್ಕೆ ಎಸ್‍ಪಿ ಅಭಿನಂದನೆ ಸಲ್ಲಿಸಿದ್ದಾರೆ.

  • ಆಸ್ತಿ ವಿಚಾರಕ್ಕೆ ತಾಲೂಕು ಕಚೇರಿಯಲ್ಲೇ ಬಡಿದಾಡಿಕೊಂಡ ಅಣ್ಣ, ತಮ್ಮ

    ಆಸ್ತಿ ವಿಚಾರಕ್ಕೆ ತಾಲೂಕು ಕಚೇರಿಯಲ್ಲೇ ಬಡಿದಾಡಿಕೊಂಡ ಅಣ್ಣ, ತಮ್ಮ

    ಕೋಲಾರ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ದಾಯಾದಿಗಳಿಬ್ಬರು ಕೋಲಾರ ತಾಲೂಕು ಕಚೇರಿ ಬಳಿ ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ.

    ಆಸ್ತಿಯನ್ನು ಲಪಟಾಯಿಸಿದ ತಮ್ಮನನ್ನ ಅಣ್ಣ ಕೇಳಿದ ಹಿನ್ನೆಲೆಯಲ್ಲಿ ತಮ್ಮ ಮನಬಂದಂತೆ ಅಣ್ಣನನ್ನ ಥಳಿಸಿದ್ದಾನೆ. ಇದರಿಂದ ಅಣ್ಣನಿಗೆ ಮುಖದಲ್ಲಿ ಸಣ್ಣ ಪುಟ್ಟ ಗಾಯಗಳಾಗಿ ಬಾಯಲ್ಲಿ ರಕ್ತ ಸುರಿದಿದೆ. ಈಗ ಗಾಯಾಳು ಅಣ್ಣ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

    ಇಬ್ಬರು ದಾಯಾದಿಗಳು ಕೋಲಾರ ತಾಲೂಕಿನ ಅರಳಕುಂಟೆ ಗ್ರಾಮದವರಾಗಿದ್ದು, ತಮ್ಮ ತಿಮ್ಮರಾಯ ಪಿತ್ರಾರ್ಜಿತ ಆಸ್ತಿಯನ್ನು ತಂಗಿ ಶಶಿಕಲಾಗೆ ಮೋಸ ಮಾಡಿ ಲಪಾಟಯಿಸಿದ್ದಾನೆ ಎಂಬುದು ರಾಮಕೃಷ್ಣ ಆರೋಪ. ಇಂದು ಕೋಲಾರ ತಾಲೂಕು ಕಚೇರಿ ಬಳಿ ಎದುರು ಬದರಾಗಿರುವ ಅಣ್ಣ ತಮ್ಮಂದಿರು ಜಮೀನು ವಿವಾದದ ಹಿನ್ನೆಲೆಯಲ್ಲಿ ಇಟ್ಟಿಗೆ ಕಲ್ಲುಗಳಲ್ಲಿ ಹೊಡೆದಾಡಿಕೊಂಡಿದ್ದಾರೆ.

    ಈ ವೇಳೆ ಅಣ್ಣನ ರಾಮಕೃಷ್ಣನನ್ನು ಹೊಡೆದ ತಿಮ್ಮರಾಯ ಕ್ಯಾಮೆರಾ ಕಾಣಿಸುತ್ತಿದ್ದಂತೆ ಸ್ಥಳದಿಂದ ಕಾಲ್ಕಿತ್ತರೆ ಅಣ್ಣ ಮಾತ್ರ ಅಂಗಿ ಹರಿದುಕೊಂಡು ಮನಸೋ ಇಚ್ಛೆ ಅವಾಚ್ಯ ಶಬ್ದಗಳಿಂದ ಬೈದು ರಂಪಾಟ ಮಾಡಿದ್ದಾನೆ.

  • ಅಣ್ಣನ ಒಂದೇ ಹೊಡೆತಕ್ಕೆ ಪ್ರಾಣಬಿಟ್ಟ ತಮ್ಮ- ಸಹೋದರರ ಜಗಳ ಸಾವಿನಲ್ಲಿ ಅಂತ್ಯ

    ಅಣ್ಣನ ಒಂದೇ ಹೊಡೆತಕ್ಕೆ ಪ್ರಾಣಬಿಟ್ಟ ತಮ್ಮ- ಸಹೋದರರ ಜಗಳ ಸಾವಿನಲ್ಲಿ ಅಂತ್ಯ

    ಧಾರವಾಡ: ಸಹೋದರರ ಜಗಳವು ಸಾವಿನಲ್ಲಿ ಅಂತ್ಯಕಂಡ ಘಟನೆ ಜಿಲ್ಲೆಯ ಹಾರೋಬೆಳವಡಿ ಗ್ರಾಮದಲ್ಲಿ ನಡೆದಿದೆ.

    ಹಾರೋಬೆಳವಡಿ ಗ್ರಾಮದ ಆತ್ಮಾನಂದ ಕಂಬಳಿ (24) ಮೃತ ದುರ್ದೈವಿ. ಶಿವಾನಂದ ಕಂಬಳಿ ಕೊಲೆ ಮಾಡಿದ ಅಣ್ಣ. ಭಾನುವಾರ ತಡರಾತ್ರಿ ಘಟನೆ ನಡೆದಿದ್ದು, ಆರೋಪಿ ಶಿವಾನಂದನನ್ನು ಪೊಲೀಸರು ಬಂಧಿಸಿದ್ದಾರೆ.

    ಮದ್ಯ ವ್ಯಸನಿಯಾಗಿದ್ದ ಆತ್ಮಾನಂದ ಭಾನುವಾರ ರಾತ್ರಿಯೂ ಮದ್ಯ ಸೇವಿಸಿ ಮನೆಗೆ ಬಂದಿದ್ದ. ಈ ವೇಳೆ ಪತ್ನಿಯ ಜೊತೆಗೆ ಜಗಳ ಆರಂಭಿಸಿದ್ದ. ಗಲಾಟೆಯನ್ನು ಕೇಳಿ ಮಧ್ಯ ಪ್ರವೇಶಿಸಿದ ಅಣ್ಣ ಶಿವಾನಂದ, ನಿತ್ಯವೂ ಕುಡಿದು ಮನೆಗೆ ಬಂದರೆ ಹೇಗೆ? ಸಂಸಾರ ನಡೆಸುವುದು ಕಷ್ಟವಾಗುತ್ತದೆ ಎಂದು ಆತ್ಮಾನಂದಗೆ ಬುದ್ಧಿ ಹೇಳಿದ್ದಾನೆ. ಆದರೆ ಮಾತಿಗೆ ಮಾತು ಬೆಳೆದು ಬಳಿಕ ಸುಮ್ಮನಾಗಿದ್ದರು.

    ಆತ್ಮಾನಂದ ತಡರಾತ್ರಿ ಮತ್ತೆ ಜಗಳ ಆರಂಭಿಸಿದ್ದಾನೆ. ಇದರಿಂದ ಕೋಪಗೊಂಡ ಶಿವಾನಂದ ಕೋಲಿನಿಂದ ತಮ್ಮನ ತಲೆಗೆ ಹೊಡೆದಿದ್ದಾನೆ. ಪರಿಣಾಮ ಬಲವಾದ ಹೊಡೆತದಿಂದಾಗಿ ಆತ್ಮಾನಂದನ ತೆಲೆಯಿಂದ ರಕ್ತ ಸುರಿಯಲು ಆರಂಭಿಸಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ತಕ್ಷಣವೇ ಕುಟುಂಬಸ್ಥರು ಹಾಗೂ ಸ್ಥಳೀಯರು ಧಾರವಾಡದ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಆತ್ಮಾನಂದನನ್ನು ಪರೀಕ್ಷಿಸಿದ ವೈದ್ಯರು ಆತ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ.

    ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಶಿವಾನಂದನನ್ನು ಪೊಲೀಸರು ಬಂಧಿಸಿ ವಿಚಾರಣೆ ಆರಂಭಿಸಿದ್ದಾರೆ.

  • 8ರ ಬಾಲಕಿ ಮೇಲೆ 6ನೇ ತರಗತಿ ವಿದ್ಯಾರ್ಥಿ ಸೇರಿ ಮೂವರಿಂದ ಗ್ಯಾಂಗ್ ರೇಪ್

    8ರ ಬಾಲಕಿ ಮೇಲೆ 6ನೇ ತರಗತಿ ವಿದ್ಯಾರ್ಥಿ ಸೇರಿ ಮೂವರಿಂದ ಗ್ಯಾಂಗ್ ರೇಪ್

    ಲಕ್ನೋ: 8 ವರ್ಷದ ಬಾಲಕಿ ಮೇಲೆ 6ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಹಾಗೂ ಆತನ ಇಬ್ಬರು ಸಹೋದರರು ಸೇರಿ ಅತ್ಯಾಚಾರ ಮಾಡಿರುವ ಅಮಾನುಷ ಘಟನೆ ಬೆಳಕಿಗೆ ಬಂದಿದೆ.

    ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳು ಉತ್ತರ ಪ್ರದೇಶದಲ್ಲಿ ದಿನೇ ದಿನೇ ಹೆಚ್ಚುತ್ತಲೇ ಇದೆ. ಬಾಗ್ಪಾಟ್ ಪ್ರದೇಶದ ರಾಮಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ 6ನೇ ತರಗತಿ ವಿದ್ಯಾರ್ಥಿ ಹಾಗೂ ಆತನ ಸಹೋದರರು ಸೇರಿ, 3ನೇ ತರಗತಿ ಬಾಲಕಿ ಮೇಲೆ ಶಾಲೆಯ ಶೌಚಾಲಯದಲ್ಲೇ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

    ಈ ಸಂಬಂಧ ಬಾಲಕಿಯ ತಂದೆ ಆರೋಪಿಗಳ ವಿರುದ್ಧ ದೂರು ನೀಡಲು ಸ್ಥಳೀಯ ಪೊಲೀಸ್ ಠಾಣೆಗೆ ಹೋಗಿದ್ದರು. ಆದರೆ ಅಲ್ಲಿ ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಿಸಲು ಪೊಲೀಸರು 15 ದಿನಗಳ ಕಾಲ ನಿರಾಕರಿಸಿದ್ದರು. ಹಾಗೆಯೇ ಸ್ಟೇಷನ್ ಹೌಸ್ ಅಧಿಕಾರಿಯನ್ನು ಕೂಡ ಈ ಪ್ರಕರಣವನ್ನು ಕೈಬಿಡುವಂತೆ ಬಾಲಕಿಯ ತಂದೆಗೆ ಒತ್ತಾಯಿಸಿದ್ದರು ಎನ್ನಲಾಗಿದೆ.

    ಸೋಮವಾರದಂದು ಬಾಲಕಿ ಆರೋಗ್ಯದಲ್ಲಿ ಏರುಪೇರಾದಾಗ ಈ ಘಟನೆ ಬೆಳಕಿಗೆ ಬಂದಿದೆ. ವಿಷಯ ತಿಳಿದ ಜಿಲ್ಲಾ ಪೊಲೀಸ್ ಮುಖ್ಯಸ್ಥರು ಬೇಜವಾಬ್ಧಾರಿ ಮೆರೆದ ಸ್ಟೇಷನ್ ಹೌಸ್ ಅಧಿಕಾರಿಯನ್ನು ಕರ್ತವ್ಯದಿಂದ ವಜಾಗೊಳಿಸಿದ್ದಾರೆ. ಸದ್ಯ ಸಂತ್ರಸ್ತ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

    ಈ ಬಗ್ಗೆ ಬಾಗ್ಪತ್ ಎಸ್‍ಪಿ ಪ್ರತಾಪ್ ಗೋಪೇಂದ್ರ ಯಾದವ್ ಮಾತನಾಡಿ, ಘಟನೆ 6ನೇ ತರಗತಿಯ ಓದುತ್ತಿರುವ ವಿದ್ಯಾರ್ಥಿಯ ಅಣ್ಣ ಈ ಕೃತ್ಯವೆಸೆಗಿದ್ದಾನೆ ಎನ್ನಲಾಗಿದೆ. ಆದರೆ ಬಾಲಕಿಯ ತಂದೆ ವಿದ್ಯಾರ್ಥಿ ಜೊತೆಗೆ ಅವನ ಇನ್ನಿಬ್ಬರು ಸಹೋದರರ ಹೆಸರನ್ನೂ ಕೂಡ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಬಗ್ಗೆ ತನಿಖೆ ನಂತರವೇ ನಿಜಾಂಶ ತಿಳಿಯಲಿದೆ ಎಂದು ಹೇಳಿದರು.

    ಸದ್ಯ ಈ ಸಂಬಂಧ ಮೂವರು ಆರೋಪಿಗಳ ವಿರುದ್ಧವೂ ಐಪಿಸಿ ಸೆಕ್ಷನ್ 376ರ(ಅತ್ಯಾಚಾರ) ಅಡಿಯಲ್ಲಿ ಹಾಗೂ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ ಮಂಗಳವಾರದಂದು ಬಾಲಕಿಯನ್ನು ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಲಾಗಿದ್ದು, ವರದಿಗಾಗಿ ಕಾಯುತ್ತಿದ್ದೇವೆ. ಒಮ್ಮೆ ಬಾಲಕಿ ಚೇತರಿಸಿಕೊಂಡ ಬಳಿಕ ಆಕೆಯ ಹೇಳಿಕೆ ಪಡೆದು, ಮುಂದಿನ ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಎಸ್‍ಪಿ ತಿಳಿಸಿದರು.

  • ಕಿಡ್ನಾಪ್ ಮಾಡಿ ಯೋಧನ ಹತ್ಯೆ – ಸೇಡು ತೀರಿಸಿಕೊಳ್ಳಲು ಸೇನೆ ಸೇರಿದ ಕಾಶ್ಮೀರಿ ಸಹೋದರರು

    ಕಿಡ್ನಾಪ್ ಮಾಡಿ ಯೋಧನ ಹತ್ಯೆ – ಸೇಡು ತೀರಿಸಿಕೊಳ್ಳಲು ಸೇನೆ ಸೇರಿದ ಕಾಶ್ಮೀರಿ ಸಹೋದರರು

    ಶ್ರೀನಗರ: ಕಳೆದ ವರ್ಷ ಈದ್‍ಗೆ ಎಂದು ಮನೆಗೆ ಬರುತ್ತಿದ್ದ ಯೋಧನನ್ನು ಉಗ್ರರು ಕಿಡ್ನಾಪ್ ಮಾಡಿ ಹತ್ಯೆ ಮಾಡಿದ್ದರು. ಈಗ ಯೋಧನ ಹತ್ಯೆಯ ಸೇಡು ತೀರಿಸಿಕೊಳ್ಳಲು ಅವರ ಇಬ್ಬರು ತಮ್ಮಂದಿರು ಸೇನೆಗೆ ಸೇರಿದ್ದಾರೆ.

    ಕಳೆದ ವರ್ಷ ಜೂನ್ 14 ರಂದು ಈದ್ ಹಬ್ಬ ಆಚರಿಸಲು ಯೋಧ ಔರಂಗಜೇಬ್ ಅವರು ಮನೆಗೆ ತೆರಳುತ್ತಿದ್ದರು. ಈ ವೇಳೆ ಜಮ್ಮು -ಕಾಶ್ಮೀರದ ಉಗ್ರರು ಪ್ಲ್ಯಾನ್ ಮಾಡಿ ಯೋಧ ಔರಂಗಜೇಬ್ ಅವರನ್ನು ಕಿಡ್ನಾಪ್ ಮಾಡಿ ಹತ್ಯೆ ಮಾಡಿದ್ದರು. ಹುತಾತ್ಮ ಯೋಧ ಔರಂಗಜೇಬ್ ಹತ್ಯೆಯ ಸೇಡು ತೀರಿಸಿಕೊಳ್ಳಲು ಈಗ ಅವರ ಇಬ್ಬರು ಸಹೋದರರಾದ ಮೊಹಮ್ಮದ್ ತಾರೀಕ್ ಹಾಗೂ ಮೊಹಮ್ಮದ್ ಶಬ್ಬೀರ್ ಸೇನೆಗೆ ಸೇರಿದ್ದಾರೆ.

    ನಾವು ದೇಶಪ್ರೇಮಕ್ಕಾಗಿ ಹಾಗೂ ನಮ್ಮ ಸಹೋದರನ ಹತ್ಯೆಯ ಸೇಡು ತೀರಿಸಿಕೊಳ್ಳಲು ಸೇನೆಗೆ ಸೇರಿದ್ದೇವೆ. ದಕ್ಷಿಣ ಕಾಶ್ಮೀರದಲ್ಲಿ ಹಿಜ್‍ಬುಲ್ ಉಗ್ರರು ನನ್ನ ಸಹೋದರನನ್ನು ಹತ್ಯೆ ಮಾಡಿದ್ದರು ಎಂದು ಮೊಹಮ್ಮದ್ ಶಬ್ಬೀರ್ ಹೇಳಿದ್ದಾರೆ. ಇದನ್ನೂ ಓದಿ: ಮೇಜರ್ ಆದಿತ್ಯ ಕುಮಾರ್, ರೈಫಲ್‍ಮ್ಯಾನ್ ಔರಂಗಜೇಬ್‍ಗೆ ಶೌರ್ಯ ಚಕ್ರ ಪುರಸ್ಕಾರ

    ವರದಿಗಳ ಪ್ರಕಾರ ಔರಂಗಜೇಬ್ ಅವರ ಸಹೋದರ ಮೊಹಮ್ಮದ್ ತಾರೀಕ್ ಅವರು ಪಂಜಾಬ್ ರೆಜಿಮೆಂಟ್‍ನಲ್ಲಿ ತರಬೇತಿ ಪಡೆಯಲಿದ್ದಾರೆ. ಈ ವೇಳೆ ಅವರು ಮಾತನಾಡಿ, ನಾವು ಪ್ರತಿಯೊಂದು ಲಿಖಿತ, ವೈದ್ಯಕೀಯ, ದೈಹಿಕ ಪರೀಕ್ಷೆಯಲ್ಲಿ ಪಾಸ್ ಆಗಿದ್ದೇವೆ. ಕಳೆದ ವರ್ಷ ಜೂನ್ 14ರಂದು ಉಗ್ರರು ನನ್ನ ಅಣ್ಣನನ್ನು ಹತ್ಯೆ ಮಾಡಿದ ನಂತರ ನಾವು ಸೇನೆ ಸೇರಲು ನಿರ್ಧರಿಸಿದ್ದೇವು ಎಂದು ತಿಳಿಸಿದ್ದಾರೆ.

    ತಾರೀಕ್ ಹಾಗೂ ಶಬ್ಬೀರ್ ಅವರು ಮೇ ತಿಂಗಳಿನಲ್ಲಿ ಪೂಂಚ್‍ನ ಸುರಂಕೋಟೆಯಲ್ಲಿ ನಡೆದ ಸೇನಾ ನೇಮಕಾತಿ ಅಭಿಯಾನದಲ್ಲಿ ಆಯ್ಕೆ ಆಗಿದ್ದರು. ತಾರೀಕ್ ಹಾಗೂ ಶಬ್ಬೀರ್ ಅವರ ತಂದೆ ಮೊಹಮ್ಮದ್ ಹನೀಫ್ ಸೇನೆಯಲ್ಲಿ ಕಾರ್ಯ ನಿರ್ವಹಿಸಿದ್ದರು. ಇದೇ ವರ್ಷ ಅಂದರೆ ಫೆಬ್ರವರಿ 3ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜಮ್ಮು ರ‍್ಯಾಲಿಯಲ್ಲಿ ಹನೀಫ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದರು.

    ನನ್ನ ಇಬ್ಬರು ಮಕ್ಕಳಾದ ತಾರೀಕ್ ಹಾಗೂ ಶಬ್ಬೀರ್ ತಮ್ಮ ಸಹೋದರ ಔರಂಗಜೇಬ್ ಸಾಹಸದಿಂದ ಪ್ರೇರಣೆಗೊಂಡಿದ್ದಾರೆ. ಉಗ್ರರು ನನ್ನ ಮಗನಿಗೆ ಮೋಸ ಮಾಡಿ ಹತ್ಯೆ ಮಾಡಿದ್ದಾರೆ. ನನ್ನ ಮಗ ಉಗ್ರರ ಜೊತೆ ಸೆಣಸಾಡಿ ಹುತ್ಮಾತನಾಗಿದ್ದರೆ, ನನಗೆ ಬೇಸರವಾಗುತ್ತಿರಲಿಲ್ಲ. ಆದರೆ ಅವರು ಮೋಸದಿಂದ ನನ್ನ ಮಗನ ಹತ್ಯೆ ಮಾಡಿದ್ದಾರೆ. ನನ್ನ ಇಬ್ಬರು ಮಕ್ಕಳು ಸೇನೆಗೆ ಸೇರಿರುವುದರಿಂದ ನನಗೆ ಹೆಮ್ಮೆ ಇದೆ. ನನ್ನ ಎದೆಯ ಮೇಲಿನ ಗಾಯ ಹಾಗೆಯೇ ಇದೆ. ನನ್ನ ಮಗನನ್ನು ಹತ್ಯೆ ಮಾಡಿದ ಉಗ್ರರ ಜೊತೆ ನಾನೇ ಹೋರಾಡಬೇಕು ಎಂದು ಒಮ್ಮೊಮ್ಮೆ ಅನಿಸುತ್ತದೆ. ಆದರೆ ಈಗ ನನ್ನ ಇಬ್ಬರು ಪುತ್ರರು ಈ ಉಗ್ರರನ್ನು ಮಟ್ಟಹಾಕುತ್ತಾರೆ ಎಂಬ ವಿಶ್ವಾಸವಿದೆ ಎಂದು ಹನೀಫ್ ಹೇಳಿದ್ದಾರೆ.

    ಸೋಮವಾರ ರಜೌರಿಯಲ್ಲಿ ಭಾರತೀಯ ಸೇನೆ 100 ಹೊಸ ಯೋಧರನ್ನು ನೇಮಕಾತಿ ಮಾಡಿಕೊಂಡಿದೆ. ಇದರಲ್ಲಿ ತಾರೀಕ್ ಹಾಗೂ ಶಬ್ಬೀರ್ ಅವರು ಸೇರಿದ್ದಾರೆ. ತಾರೀಕ್ ಹಾಗೂ ಶಬ್ಬೀರ್ ಗೆ 16 ವರ್ಷದ ತಮ್ಮನಿದ್ದು ಆತ ಕೂಡ ಸೇನೆ ಸೇರಿ ದೇಶದ ಸೇವೆ ಮಾಡುತ್ತೇನೆ ಎಂದು ಹೇಳಿದ್ದಾನೆ.

     

  • ಆಸ್ತಿಗಾಗಿ ಮಲಗಿದ್ದ ಅಣ್ಣನನ್ನೇ ಕೊಡಲಿಯಿಂದ ಕಡಿದು ಕೊಂದ ತಮ್ಮ

    ಆಸ್ತಿಗಾಗಿ ಮಲಗಿದ್ದ ಅಣ್ಣನನ್ನೇ ಕೊಡಲಿಯಿಂದ ಕಡಿದು ಕೊಂದ ತಮ್ಮ

    ಬಳ್ಳಾರಿ: ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಎರಡೆತ್ತಿನಹಳ್ಳಿ ಗ್ರಾಮದಲ್ಲಿ ಆಸ್ತಿಗಾಗಿ ತಮ್ಮನೋರ್ವ ಅಣ್ಣನನ್ನೇ ಕೊಡಲಿಯಿಂದ ಕಡಿದು ಕೊಲೆ ಮಾಡಿದ್ದಾನೆ.

    33 ವರ್ಷದ ಹಾಲೇಶ್ ತಾಳೇದಹಳ್ಳಿ ಕೊಲೆಯಾದ ಅಣ್ಣ. 31 ವರ್ಷದ ಹೊನ್ನಪ್ಪ ತಾಳೇದಹಳ್ಳಿ ಅಣ್ಣನನ್ನು ಕೊಲೆಗೈದ ಆರೋಪಿ. ಆಸ್ತಿ ವಿಚಾರದಲ್ಲಿ ಸೋದರರಿಬ್ಬರ ನಡುವೆ ಕಲಹವಿತ್ತು. ಶುಕ್ರವಾರ ರಾತ್ರಿ ಸಹ ಆಸ್ತಿಯ ವಿಚಾರವಾಗಿ ಹಾಲೇಶ್ ಮತ್ತು ಹೊನ್ನಪ್ಪನ ನಡುವೆ ಗಲಾಟೆ ನಡೆದಿದೆ. ರಾತ್ರಿ ಸುಮಾರು 2 ಗಂಟೆಗೆ ಮಲಗಿದ್ದ ಹಾಲೇಶ್ ನನ್ನು ಕೊಡಲಿಯಿಂದ ಕಡಿದು ಬರ್ಬರವಾಗಿ ಕೊಲೆಗೈದು ಹೊನ್ನಪ್ಪ ಪರಾರಿಯಾಗಿದ್ದಾನೆ.

    ಘಟನಾ ಸ್ಥಳಕ್ಕೆ ಹರಪನಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೊಲೆಗೆ ಸಂಬಂಧ ಕುಟುಂಬಸ್ಥರು ಮತ್ತು ಗ್ರಾಮಸ್ಥರಿಂದ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದು, ಆರೋಪಿ ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಈ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮಾಜಿ ಸಿಎಂ ಸಂಬಂಧಿಕರು, ಕೆಲಸ ಕೊಡಿಸುತ್ತೇವೆ ಎಂದು 60 ಲಕ್ಷ ದೋಚಿದ ಸಹೋದರರು

    ಮಾಜಿ ಸಿಎಂ ಸಂಬಂಧಿಕರು, ಕೆಲಸ ಕೊಡಿಸುತ್ತೇವೆ ಎಂದು 60 ಲಕ್ಷ ದೋಚಿದ ಸಹೋದರರು

    ದಾವಣಗೆರೆ: ಮಾಜಿ ಸಿಎಂ ಸಿದ್ದರಾಮಯ್ಯ ನಮ್ಮ ಸಂಬಂಧಿಕರು, ನಾವು ನಿಮಗೆ ಸರ್ಕಾರಿ ಕೆಲಸ ಕೊಡಿಸುತ್ತೇವೆ ಎಂದು ಮೂವರು ಸಹೋದರರು 10 ಯುವಕರನ್ನು ನಂಬಿಸಿ ಅವರಿಂದ 60 ಲಕ್ಷ ರೂಗಳನ್ನು ಪಡೆದುಕೊಂಡು ಪಂಗನಾಮ ಹಾಕಿದ ಘಟನೆ ದಾವಣೆಗೆರೆಯಲ್ಲಿ ನಡೆದಿದೆ.

    ಈ ಮೂವರು ಸಹೋದರರನ್ನು ಮೈಸೂರು ಜಿಲ್ಲೆ, ಟಿ.ನರಸೀಪುರ ತಾಲೂಕಿನ ಬೆನಕನಹಳ್ಳಿ ಗ್ರಾಮಸ್ಥರಾದ, ಬಿ.ಎಂ.ಮಹೇಶ್, ಬಿ.ಎಂ.ವಿಜಯಕುಮಾರ್ ಮತ್ತು ಬಿ.ಎಂ ನಟರಾಜ್ ಎಂದು ಗುರುತಿಸಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ನಮ್ಮ ಸಂಬಂಧಿಕರು ಎಂದು ಹೇಳಿಕೊಂಡು ಓಡಾಡುತ್ತಿದ್ದರು ಎಂದು ಹೇಳಲಾಗಿದೆ.

    ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಸೆಂಟ್ರಲ್ ಸ್ಕಿಲ್ ಬೋರ್ಡ್ ಬೆಂಗಳೂರಿನಲ್ಲಿ 229 ಖಾಲಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಅದನ್ನೇ ಬಂಡವಾಳ ಮಾಡಿಕೊಂಡ ಈ ಮೂವರು ಸಹೋದರರು ದಾವಣಗೆರೆ ಜಿಲ್ಲೆ, ಹೊನ್ನಾಳಿ ತಾಲೂಕಿನ ಕೆ.ವೈ.ಮಾರುತಿ, ಕುಮಾರ್, ನವೀನ್, ಗದ್ದಿಗೇಶ್, ದ್ಯಾಮಪ್ಪ, ಪ್ರವೀಣ್, ಜಿ.ಎಸ್.ಪ್ರವೀಣ್, ಮಂಜು ಗೋಣಿಗೆರೆ, ಶಿವಕುಮಾರ್, ಸಂದೀಪ್ ಕುಮಾರ್ ಎಂಬ 10 ಯುವಕರಿಗೆ ಸರ್ಕಾರಿ ನೌಕರಿ ಆಸೆ ತೋರಿಸಿ ಹಣ ಪಡೆದಿದ್ದಾರೆ.

    ನಾವು ಕುರುಬ ಸಮುದಾಯದವರೇ, ಸಿದ್ದರಾಮಯ್ಯ ನಮ್ಮ ಸಂಬಂಧಿ. ಅವರ ಪುತ್ರ ರಾಕೇಶ್ ಸಿದ್ದರಾಮಯ್ಯನೇ ಎಲ್ಲ ಕೆಲಸವನ್ನು ಮಾಡಿಕೊಡುವುದು, ಅವರ ಮುಖಾಂತರ ಕೆಲಸ ಮಾಡಿಸಿಕೊಡುತ್ತೀವಿ ಎಂದು ನಂಬಿಸಿ ಸುಮಾರು 60 ಲಕ್ಷಕ್ಕೂ ಅಧಿಕ ಹಣ ಪಡೆದಿದ್ದಾರೆ. ಹಣ ನೀಡಿದವರೆಲ್ಲರೂ ಪರಿಶಿಷ್ಠ ಜಾತಿಗೆ ಸೇರಿದವರಾಗಿದ್ದು, ಮೀಸಲಾತಿ ಅಡಿ ಕೆಲಸ ಕೊಡಿಸುತ್ತೇವೆ ಎಂದು ಹಣ ಪಡೆದಿದ್ದಾರೆ. ಆದರೆ ಇದುವರೆಗೂ ಸರ್ಕಾರಿ ಉದ್ಯೋಗವೂ ಇಲ್ಲ. ಕೊಟ್ಟ ಹಣ ವಾಪಸ್ ಕೂಡ ಇಲ್ಲ ಎಂದು ಯುವಕರ ಪಾಲಕರು ಕಣ್ಣೀರು ಹಾಕುತ್ತಿದ್ದಾರೆ.

    ಮಕ್ಕಳಿಗೆ ಸರ್ಕಾರಿ ಉದ್ಯೋಗ ಸಿಗುತ್ತದೆ ಎಂದು ಇರೋಬರೋ ಜಮೀನು, ಬಂಗಾರ ಮಾರಾಟ ಮಾಡಿ, ಅವರಿವರ ಬಳಿ ಸಾಲ ಪಡೆದು ಮಹೇಶ್ ಮತ್ತು ಸಹೋದರರಿಗೆ ಹಣ ನೀಡಿದ್ದಾರೆ. ಈ ಹಣ ಕೇಳೋದಕ್ಕೆ ಎಂದು ಬೆನಕನಹಳ್ಳಿಗೆ ಹೋದರೆ ಸಹೋದರರು ಊರಿನವರನ್ನು ಸೇರಿಸಿಕೊಂಡು ದೌರ್ಜನ್ಯ ಮಾಡುತ್ತಿದ್ದಾರಂತೆ. ನಮ್ಮ ಮಕ್ಕಳಿಗೆ ಕೆಲಸ ಸಿಗಲಿ ಎಂದು ಹಣ ಕೊಟ್ಟಿದ್ದು ನಮ್ಮ ತಪ್ಪು ಈಗ ತಪ್ಪಿನ ಅರಿವಾಗಿದೆ. ನಮ್ಮಂತೆ ಬೇರೆ ಪಾಲಕರು ತಪ್ಪು ಮಾಡಿ ಸಂಕಷ್ಟಕ್ಕೆ ಸಿಲುಕಿಕೊಳ್ಳೋದು ಬೇಡ. ಈ ಮೂವರನ್ನು ಬಂಧಿಸಿ ನೊಂದವರಿಗೆ ನ್ಯಾಯ ಕೊಡಿಸಬೇಕು ಎಂದು ಪಾಲಕರು ಆಗ್ರಹಿಸಿದ್ದಾರೆ.

    ಈ ಸಂಬಂಧ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

  • ಐಎಂಎನಿಂದ ತರಬೇತಿ ಪಡೆದು ಸೇನೆಗೆ ಸೇರಿ ಇತಿಹಾಸ ಸೃಷ್ಟಿಸಿದ ಅವಳಿ ಸಹೋದರರು

    ಐಎಂಎನಿಂದ ತರಬೇತಿ ಪಡೆದು ಸೇನೆಗೆ ಸೇರಿ ಇತಿಹಾಸ ಸೃಷ್ಟಿಸಿದ ಅವಳಿ ಸಹೋದರರು

    ಚಂಡೀಗಢ: ಇಬ್ಬರು ಅವಳಿ ಸಹೋದರರು ಉತ್ತಾರಖಂಡದ ಡೆಹ್ರಾಡೂನ್‍ನಲ್ಲಿರುವ ಭಾರತೀಯ ಮಿಲಿಟರಿ ಅಕಾಡೆಮಿ(ಐಎಂಎ)ಯಿಂದ ತರಬೇತಿ ಪಡೆದು ಒಂದೇ ಬಾರಿಗೆ ಸೇನೆಗೆ ಸೇರ್ಪಡೆಯಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

    ಅವಳಿ ಸಹೋದರರಾದ ಅಭಿನವ್ ಮತ್ತು ಪರಿಣವ್ ಇಬ್ಬರು ಕೇವಲ ಎರಡು ನಿಮಿಷಗಳ ಅಂತರದಲ್ಲಿ ಹುಟ್ಟಿದ್ದಾರೆ. ಇವರಿಬ್ಬರೂ ಜಲಂಧರ್ ಮತ್ತು ಲುಧಿಯಾನಾದಲ್ಲಿ ಎಂಜಿನಿಯರಿಂಗ್ ಪದವಿ ಓದಿದ ಬಳಿಕ ಭಾರತೀಯ ಸೇನೆ ಸೇರುವ ಕನಸನ್ನು ಕಂಡಿದ್ದಾರೆ.

    ಕನಸು ನನಸು ಮಾಡುವ ನಿಟ್ಟಿನಲ್ಲಿ ಐಎಂಎ ಆಯ್ಕೆಯಾಗಿ ಶನಿವಾರ ಪದವಿ ಪಡೆದು ಸೇನೆಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಇಬ್ಬರನ್ನು ಭಾರತೀಯ ಸೇನೆಯ ಬೇರೆ ಬೇರೆ ಘಟಕಗಳಿಗೆ ನಿಯೋಜನೆ ಮಾಡಲಾಗಿದೆ.

    ಈ ಬಗ್ಗೆ ಐಎಂಎ, “ಮಿಲಿಟರಿ ಅಕಾಡೆಮಿ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಭಿನವ್ ಮತ್ತು ಪರಿಣವ್ ಇಬ್ಬರೂ ಸಹೋದರರು ಐಎಂಎ ಡೆಹ್ರಾಡೂನ್‍ನಲ್ಲಿ ಪದವಿಯನ್ನು ಪಡೆದಿದ್ದಾರೆ. ಆದರೆ ಇಬ್ಬರನ್ನು ಬೇರೆ ಬೇರೆ ಘಟಕಗಳಿಗೆ ನಿಯೋಜನೆ ಮಾಡಲಾಗಿದೆ” ಎಂದು ಟ್ವೀಟ್ ಮಾಡಿ ತಿಳಿಸಿದೆ.

    ಅನೇಕ ಬಾರಿ ಡ್ರಿಲ್ ಶಿಕ್ಷಕರು ಪರಿಣವ್ ಬದಲು ನನ್ನನ್ನು ಕರೆಯುತ್ತಿದ್ದರು. ನನ್ನ ಬದಲು ಅವನ ಹೆಸರು ಕರೆಯುತ್ತಿದ್ದರು. ಎಷ್ಟೋ ಬಾರಿ ಸೇನೆಯ ಬೋಧಕರು ಕೂಡ ಗೊಂದಲಕ್ಕೆ ಒಳಗಾಗಿದ್ದರು ಎಂದು ಅಭಿನವ್ ತರಬೇತಿ ವೇಳೆ ನಡೆದ ಘಟನೆಯ ಬಗ್ಗೆ ತಿಳಿಸಿದ್ದಾರೆ. ಮತ್ತೊಂದೆಡೆ, ಕೆಲವೊಮ್ಮೆ ನನ್ನ ಊಟದ ಮೆಸ್‍ನಲ್ಲಿ ತುಂಬಾ ಸಿಬ್ಬಂದಿ ಇದ್ದರೆ, ನಾನು ನನ್ನ ಸಹೋದರನ ಮೆಸ್‍ಗೆ ಹೋಗುತ್ತಿದ್ದೆ. ಆಗ ಯಾರು ನನ್ನ ಗುರುತನ್ನು ಪತ್ತೆ ಮಾಡುತ್ತಿರಲಿಲ್ಲ ಎಂದು ಹಾಸ್ಯಮಯ ಸನ್ನಿವೇಶಗಳನ್ನು ಪರಿಣವ್ ಹಂಚಿಕೊಂಡಿದ್ದಾರೆ.

    ಇಬ್ಬರು ಸಹೋದರರು ಒಟ್ಟಿಗೆ ಅಧ್ಯಯನ ಮಾಡುತ್ತಿದ್ದರು. ಒಬ್ಬ 100 ಅಂಕಗಳನ್ನು ಗಳಿಸಿದರೆ, ಮತ್ತೊಬ್ಬ ಅಷ್ಟೇ ಅಂಕಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದರು ಕೊನೆಗೆ 99 ಅಂಕ ಪಡೆಯುತ್ತಿದ್ದನು. ಇಬ್ಬರು ಸೇನೆಗೆ ಸೇರುತ್ತಿರುವುದು ಸಂತಸದ ವಿಚಾರವಾಗಿದೆ ಎಂದು ತಂದೆ ಅಶೋಕ್ ತಿಳಿಸಿದರು.


    ಮಿಲಿಟರಿ ಆಕಾಡೆಮಿಯಲ್ಲಿ ನಡೆದ ನಿರ್ಗಮನ ಪಥ ಸಂಚಲನದಲ್ಲಿ ಭಾಗವಹಿಸಿ ಇಬ್ಬರು ಎಲ್ಲರ ಗಮನ ಸೆಳೆದಿದ್ದರು. ಅವಳಿ ಮಕ್ಕಳ ಸಾಧನೆಯಿಂದ ಪೋಷಕರು ಖುಷಿ ವ್ಯಕ್ತಪಡಿಸಿದ್ದಾರೆ.

  • ಸೋದರ ವಾತ್ಸಲ್ಯ: 50 ವರ್ಷಗಳಿಂದ ಒಂದೇ ತಟ್ಟೆಯಲ್ಲಿ ಊಟ ಮಾಡ್ತೀರೋ ಅಣ್ಣ-ತಮ್ಮ

    ಸೋದರ ವಾತ್ಸಲ್ಯ: 50 ವರ್ಷಗಳಿಂದ ಒಂದೇ ತಟ್ಟೆಯಲ್ಲಿ ಊಟ ಮಾಡ್ತೀರೋ ಅಣ್ಣ-ತಮ್ಮ

    ಮುಂಬೈ: ಸೋದರರಿಬ್ಬರು ಕಳೆದ 50 ವರ್ಷಗಳಿಂದ ಒಂದೇ ತಟ್ಟೆಯಲ್ಲಿ ಜೊತೆಯಾಗಿ ಊಟ ಮಾಡಿಕೊಂಡು ಬರುತ್ತಿದ್ದಾರೆ. ಮೊದಲಿಗೆ ಐದು ಜನ ಸೋದರರು ಜೊತೆಯಾಗಿಯೇ ಊಟ ಮಾಡುತ್ತಿದ್ದರು. ಐವರಲ್ಲಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಪ್ರತಿನಿತ್ಯ ಜೊತೆಯಾಗಿ ಊಟ ಮಾಡುತ್ತಿದ್ದಾರೆ.

    ಮುಂಬೈ ನಗರದ ವ್ಯಾಪಾಗಳಾದ ಪ್ರಕಾಶ್ ಚಂದ್ (70) ಮತ್ತು ಪುಷ್ಪರಾಜ್ ಚಂದ್ (66) ಜೊತೆಯಾಗಿ ಊಟ ಮಾಡಿಕೊಂಡು ಬರುವ ಪದ್ಧತಿಯನ್ನು ಇಂದಿಗೂ ಜೀವಂತವಾಗಿರಿಸುವ ಮೂಲಕ ಸೋದರ ವಾತ್ಸಲ್ಯಕ್ಕೆ ತಾಜಾ ಉದಾಹರಣೆಯಾಗಿದ್ದಾರೆ.

    ಮೂಲತಃ ರಾಜಸ್ಥಾನದ ಬಿಸಲಾಪುರದ ನಿವಾಸಿಯಾದ ರಾಮ್‍ಲಾಲ್ ಜೈನ್ 1962ರಲ್ಲಿ ವ್ಯಾಪಾರ ನಿಮಿತ್ತ ಮುಂಬೈ ನಗರಕ್ಕೆ ಆಗಮಿಸಿದ್ದರು. ಸಣ್ಣ-ಪುಟ್ಟ ಕೆಲಸದ ಜೊತೆಗೆ ತಮ್ಮದೇ ಸ್ವಂತ ಟ್ರಾನ್ಸ್ ಪೋರ್ಟ್ ಸಂಸ್ಥೆ ಆರಂಭಿಸಿದ್ದರು. ವ್ಯವಹಾರದಲ್ಲಿ ಬೆಳವಣಿಗೆ ಆಗುತ್ತಿದ್ದಂತೆ ಸೋದರರಿಬ್ಬರನ್ನು ಮುಂಬೈಗೆ ಕರೆಸಿಕೊಳ್ಳುತ್ತಾರೆ. ಹಾಗೆ ರಾಮ್‍ಲಾಲ್ ತಮ್ಮ ಕೊನೆಯ ಸೋದರರನ್ನು ಕರೆಸಿಕೊಳ್ಳುತ್ತಾರೆ. ಹೀಗೆ ಸೋದರರ ನಡುವಿನ ಬಾಂಧವ್ಯ ಮತ್ತಷ್ಟು ಗಟ್ಟಿಯಾಗುತ್ತದೆ. ಅಂದಿನಿಂದ ಐವರು ಸದಸ್ಯರು ಪ್ರತಿನಿತ್ಯ ಜೊತೆಯಾಗಿ ಒಂದೇ ತಟ್ಟೆಯಲ್ಲಿ ಊಟ ಮಾಡೋದನ್ನು ರೂಡಿಸಿಕೊಳ್ಳುತ್ತಾರೆ. ಮೂವರು ಸೋದರರು ಸಾವನ್ನಪ್ಪಿದ ಬಳಿಕವೂ ಪ್ರಕಾಶ್ ಮತ್ತು ಪುಷ್ಪರಾಜ್ ಊಟದ ಪದ್ಧತಿಯನ್ನು ಮುಂದುವರಿಸಿಕೊಂಡು ಬಂದಿದ್ದಾರೆ.

    ಮಧ್ಯಾಹ್ನದ ಊಟವನ್ನು ಪ್ರಕಾಶ್ ಚಂದ್ ಮನೆಯಲ್ಲಿ, ರಾತ್ರಿ ನನ್ನ ನಿವಾಸದಲ್ಲಿ ನಾವು ಊಟ ಮಾಡುತ್ತೇವೆ. ಕೆಲಸದ ನಿಮಿತ್ತ ಇಬ್ಬರಲ್ಲಿ ಒಬ್ಬರು ಬರೋದು ತಡವಾದ್ರೆ ಒಬ್ಬರಿಗೊಬ್ಬರು ಕಾದು ಕೊನೆಗೆ ಜೊತೆಯಾಗಿಯೇ ಆಹಾರ ಸೇವಿಸುತ್ತೇವೆ ಎಂದು ಪುಷ್ಪರಾಜ್ ಹೇಳುತ್ತಾರೆ.

    ಪುಷ್ಪರಾಜ್ ಕಳೆದ 9 ವರ್ಷಗಳಿಂದ ವಾರದಲ್ಲಿ ಕೆಲವು ದಿನ ಉಪವಾಸ ಕೈಗೊಳ್ಳುತ್ತಾರೆ. ಉಪವಾಸದ ಮರುದಿನ ಸೋದರ ಬರೋವರೆಗೂ ಊಟ ಮಾಡಲ್ಲ ಎಂದು ಪುಷ್ಪರಾಜ್ ಪತ್ನಿ ಪವನಬೆನ್ ತಿಳಿಸುತ್ತಾರೆ.