Tag: brunda

  • ವಾಸುಕಿ ವೈಭವ್ ಮದುವೆಯಾದ ಹುಡುಗಿಯೂ ನಟಿ

    ವಾಸುಕಿ ವೈಭವ್ ಮದುವೆಯಾದ ಹುಡುಗಿಯೂ ನಟಿ

    ಯುವ ಸಂಗೀತ ನಿರ್ದೇಶಕ ವಾಸುಕಿ ವೈಭವ್ (Vasuki Vaibhav) ಇಂದು ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ವಾಸುಕಿ ಮದುವೆ ಆಗುತ್ತಿರುವ ಬೃಂದಾ (Brunda) ಯಾರು ಎನ್ನುವ ವಿಚಾರವನ್ನು ಈವರೆಗೂ ವಾಸುಕಿ ಯಾರ ಜೊತೆಯೂ ಹಂಚಿಕೊಂಡಿರಲಿಲ್ಲ. ಬೃಂದಾ ಕೂಡ ರಂಗಭೂಮಿ ಕಲಾವಿದರು. ಸಾಕಷ್ಟು ನಾಟಕಗಳಲ್ಲಿ ಅವರು ನಟಿಸಿದ್ದಾರೆ. ಸ್ವತಃ ವಾಸುಕಿ ಜೊತೆಯೇ ರಂಗಭೂಮಿಯಲ್ಲಿ ಕೆಲಸ ಮಾಡಿದ್ದಾರೆ. ಹಲವು ವರ್ಷಗಳಿಂದಲೂ ಈ ಜೋಡಿ ಪ್ರೀತಿಸುತ್ತಿದ್ದ ಎನ್ನುತ್ತವೆ ಮೂಲಗಳು.

    ವಾಸುಕಿ ಅವರ ಮದುವೆ ತೀರಾ ಸರಳವಾಗಿ ಇಂದು ನಡೆದಿದೆ. ನಟ ಸಿಹಿ ಕಹಿ ಸೇರಿದಂತೆ ಹಲವು ಕಲಾವಿದರು, ಎರಡು ಕುಟುಂಬದ ಸದಸ್ಯರು ಮತ್ತು ಆಪ್ತರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಮದುವೆ ತೀರಾ ಖಾಸಗಿ ಆಗಿರಲಿ ಎಂದು ಅವರು ಮಾಧ್ಯಮಗಳಿಗೂ ಮದುವೆ ವಿಚಾರವನ್ನು ತಿಳಿಸಿರಲಿಲ್ಲ.

    ಮದುವೆ ವಿಚಾರವನ್ನು ವಾಸುಕಿ ಗುಟ್ಟಾಗಿದ್ದರು. ಅಚಾನಕ್ಕಾಗಿ ನಟಿ (Actress) ತಾರಾ ಈ ವಿಷಯವನ್ನು ಹೇಳಿಕೊಂಡಿದ್ದರು. ಟಗರು ಪಲ್ಯ ಸಿನಿಮಾದಲ್ಲಿ ವಾಸುಕಿ ಮದುವೆ ಆಗುವ ಗಂಡಿನ ಪಾತ್ರ ಮಾಡಿದ್ದರು. ಈ ಕುರಿತಾಗಿ ಮಾತನಾಡುತ್ತಾ ನಟಿ ತಾರಾ ಅತೀ ಶೀಘ್ರದಲ್ಲೇ ವಾಸುಕಿ ಮದುವೆ  (Marriage) ಆಗುತ್ತಿರುವ ವಿಷಯವನ್ನು ಬಹಿರಂಗ ಪಡಿಸಿದ್ದಾರೆ.

    ಹಲವು ತಿಂಗಳ ಹಿಂದೆಯೇ ವಾಸುಕಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನುವ ವಿಷಯ ಹರಿದಾಡುತ್ತಿತ್ತು. ಬಹುಕಾಲದ ಗೆಳೆತಿಯೊಂದಿಗೆ ಅವರು ಮದುವೆ ಆಗಲಿದ್ದಾರೆ ಎಂದು ಹೇಳಲಾಗಿತ್ತು. ಅದೀಗ ನಿಜವಾದಂತೆ ಕಾಣುತ್ತಿದೆ. ಇಂದು ವಾಸುಕಿ ಸಪ್ತಪದಿ ತುಳಿಯಲಿದ್ದಾರೆ ಎನ್ನುವುದು ತಾಜಾ ಸಮಾಚಾರ.

     

    ಮದುವೆ ಕುರಿತಂತೆ ವಾಸುಕಿ ಒಪ್ಪಿಕೊಂಡಿದ್ದರು. ತಾರಾ ಅವರಿಗೆ ‘ಅಯ್ಯೋ.. ಹೇಳಬೇಡಿ’ ಎಂದು ಕೇಳಿಕೊಂಡಿದ್ದರೂ, ವಿಷಯವಂತೂ ಬಹಿರಂಗವಾಗಿತ್ತು. ಆದರೆ, ಅಧಿಕೃತವಾಗಿ ಈ ವಿಷಯದ ಕುರಿತು ವಾಸುಕಿ ವೈಭವ್ ಅವರೇ ಅಧಿಕೃತವಾಗಿ ಹೇಳಬೇಕಿತ್ತು. ಇಂದು ಅವರು ಮದುವೆ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

  • ಬಹುಕಾಲದ ಗೆಳತಿ ಜೊತೆ ಇಂದು ಗಾಯಕ ವಾಸುಕಿ ವೈಭವ್ ಮದುವೆ

    ಬಹುಕಾಲದ ಗೆಳತಿ ಜೊತೆ ಇಂದು ಗಾಯಕ ವಾಸುಕಿ ವೈಭವ್ ಮದುವೆ

    ನ್ನಡದ ಯುವ ಸಂಗೀತ ನಿರ್ದೇಶಕ, ಗಾಯಕ ವಾಸುಕಿ ವೈಭವ್ (Vasuki Vaibhav) ಇಂದು ವೈವಾಹಿಕ (Marriage) ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳತಿ, ರಂಗಭೂಮಿ ಕಲಾವಿದೆ ಬೃಂದಾ (Brunda) ಜೊತೆ ಇಂದು ಅವರು ಸಪ್ತಪದಿ ತುಳಿದಿದ್ದಾರೆ. ನಟ ಸಿಹಿ ಕಹಿ ಸೇರಿದಂತೆ ಹಲವು ಕಲಾವಿದರು, ಎರಡು ಕುಟುಂಬದ ಸದಸ್ಯರು ಮತ್ತು ಆಪ್ತರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದಾರೆ.

    ಮದುವೆ ವಿಚಾರವನ್ನು ವಾಸುಕಿ ಗುಟ್ಟಾಗಿದ್ದರು. ಅಚಾನಕ್ಕಾಗಿ ನಟಿ ತಾರಾ ಈ ವಿಷಯವನ್ನು ಹೇಳಿಕೊಂಡಿದ್ದರು. ಟಗರು ಪಲ್ಯ ಸಿನಿಮಾದಲ್ಲಿ ವಾಸುಕಿ ಮದುವೆ ಆಗುವ ಗಂಡಿನ ಪಾತ್ರ ಮಾಡಿದ್ದರು. ಈ ಕುರಿತಾಗಿ ಮಾತನಾಡುತ್ತಾ ನಟಿ ತಾರಾ ಅತೀ ಶೀಘ್ರದಲ್ಲೇ ವಾಸುಕಿ ಮದುವೆ  (Marriage) ಆಗುತ್ತಿರುವ ವಿಷಯವನ್ನು ಬಹಿರಂಗ ಪಡಿಸಿದ್ದಾರೆ.

    ಹಲವು ತಿಂಗಳ ಹಿಂದೆಯೇ ವಾಸುಕಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನುವ ವಿಷಯ ಹರಿದಾಡುತ್ತಿತ್ತು. ಬಹುಕಾಲದ ಗೆಳೆತಿಯೊಂದಿಗೆ ಅವರು ಮದುವೆ ಆಗಲಿದ್ದಾರೆ ಎಂದು ಹೇಳಲಾಗಿತ್ತು. ಅದೀಗ ನಿಜವಾದಂತೆ ಕಾಣುತ್ತಿದೆ. ಇಂದು ವಾಸುಕಿ ಸಪ್ತಪದಿ ತುಳಿಯಲಿದ್ದಾರೆ ಎನ್ನುವುದು ತಾಜಾ ಸಮಾಚಾರ.

     

    ಮದುವೆ ಕುರಿತಂತೆ ವಾಸುಕಿ ಒಪ್ಪಿಕೊಂಡಿದ್ದರು. ತಾರಾ ಅವರಿಗೆ ‘ಅಯ್ಯೋ.. ಹೇಳಬೇಡಿ’ ಎಂದು ಕೇಳಿಕೊಂಡಿದ್ದರೂ, ವಿಷಯವಂತೂ ಬಹಿರಂಗವಾಗಿತ್ತು. ಆದರೆ, ಅಧಿಕೃತವಾಗಿ ಈ ವಿಷಯದ ಕುರಿತು ವಾಸುಕಿ ವೈಭವ್ ಅವರೇ ಅಧಿಕೃತವಾಗಿ ಹೇಳಬೇಕಿತ್ತು. ಇಂದು ಅವರು ಮದುವೆ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

  • ಪುಟ್ಟ ಮಗುವಿನ ತಾಯಿ ಅನು ಪ್ರಭಾಕರ್ ಡಾಕ್ಟರ್ ಆಗ್ತಾರಂತೆ!

    ಪುಟ್ಟ ಮಗುವಿನ ತಾಯಿ ಅನು ಪ್ರಭಾಕರ್ ಡಾಕ್ಟರ್ ಆಗ್ತಾರಂತೆ!

    ನಟಿ ಅನುಪ್ರಭಾಕರ್ ಮದುವೆಯಾಗಿ ನಂತರ ಮಗುವೂ ಆಗಿ ಪುಟ್ಟ ಮಗಳ ಲಾಲನೆ ಪಾಲನೆಯಲ್ಲಿ ಕಳೆದು ಹೋಗಿದ್ದಾರೆ. ಈ ಕಾರಣದಿಂದ ವರ್ಷಾಂತರಗಳಿಂದ ಸಿನಿಮಾ ರಂಗದಿಂದ ದೂರವುಳಿದಿದ್ದ ಅವರೀಗ ಮತ್ತೆ ಬಣ್ಣ ಹಚ್ಚಲು ಮುಂದಾಗಿದ್ದಾರೆ. ಈ ಚಿತ್ರದಲ್ಲಿ ಅವರು ಡಾಕ್ಟರ್ ಪಾತ್ರಕ್ಕೆ ಜೀವ ತುಂಬಲಿದ್ದಾರೆ.

    ಅನು ಪ್ರಭಾಕರ್ ವೈದ್ಯೆಯಾಗಿ ನಟಿಸುತ್ತಿರೋದು ನೆನಪಿರಲಿ ಪ್ರೇಂ ನಾಯಕನಾಗಿ ನಟಿಸುತ್ತಿರುವ ಪ್ರೇಮಂ ಪೂಜ್ಯಂ ಚಿತ್ರದಲ್ಲಿ. ಅನು ಮಗುವಿಗೆ ತಾಯಿಯಾದ ನಂತರದಲ್ಲಿ ಒಪ್ಪಿಕೊಂಡಿರೋ ಮೊದಲ ಚಿತ್ರವಿದು. ಈ ಹಿಂದೆ ಅನುಕ್ತ ಚಿತ್ರದಲ್ಲಿಯೂ ಅವರು ಕಾಣಿಸಿಕೊಂಡಿದ್ದರು. ಆದರೆ ಅದು ತಾಯಿಯಾಗೋ ಮೊದಲೇ ಚಿತ್ರೀಕರಣ ನಡೆಸಿಕೊಂಡಿದ್ದ ಚಿತ್ರ. ಆದರೀಗ ಅನು ಪ್ರೇಮಂ ಪೂಜ್ಯಂ ಚಿತ್ರದ ವಿಶಿಷ್ಟವಾದ ಪಾತ್ರದ ಮೂಲಕ ಕಂ ಬ್ಯಾಕ್ ಆಗೋ ತಯಾರಿಯಲ್ಲಿದ್ದಾರೆ.

    ಹಾಗಂತ ಅನು ಪ್ರಭಾಕರ್ ಪ್ರೇಮಂ ಪೂಜ್ಯಂ ಚಿತ್ರದ ತುಂಬಾ ಇರುತ್ತಾರೆ ಅಂದುಕೊಳ್ಳುವಂತಿಲ್ಲ. ಅವರು ಒಪ್ಪಿಕೊಂಡಿರೋದು ಚಿಕ್ಕ ಪಾತ್ರವನ್ನು. ಅದು ಚಿತ್ರದ ಕಡೆಯ ಭಾಗದಲ್ಲಿ ಕೆಲವೇ ಕೆಲ ನಿಮಿಷಗಳ ಕಾಲ ಬಂದು ಹೋಗುತ್ತದೆಯಂತೆ. ಆದರೆ ಆ ಪಾತ್ರ ಇಡೀ ಚಿತ್ರಕ್ಕೆ ಬೇರೆಯದ್ದೇ ತಿರುವು ಕೊಡುತ್ತದೆ. ಈ ಮೂಲಕವೇ ಎಲ್ಲ ಪ್ರೇಕ್ಷಕರ ನೆನಪಿನಲ್ಲುಳಿಯುವಂಥಾ ಈ ಪುಟ್ಟ ಪಾತ್ರವನ್ನು ಅನು ಪ್ರಭಾಕರ್ ಖುಷಿಯಿಂದಲೇ ಒಪ್ಪಿಕೊಂಡಿದ್ದಾರಂತೆ.

    ಇದೀಗ ಪ್ರೇಮಂ ಪೂಜ್ಯಂ ಚಿತ್ರದ ಚಿತ್ರೀಕರಣ ಜೋರಾಗಿಯೇ ನಡೆಯುತ್ತಿದೆ. ಡೆಹ್ರಾಡೂನ್‍ನಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಸಂಪೂರ್ಣ ತಯಾರಿ ಮಾಡಿಕೊಂಡಿದೆ. ನೆನಪಿರಲಿ ಪ್ರೇಮ್ ಅವರ ವೃತ್ತಿ ಬದುಕಿನ ದಿಕ್ಕು ದೆಸೆಗಳನ್ನು ಈ ಚಿತ್ರ ಬದಲಾಯಿಸಲಿದೆ ಎಂಬ ಒಳ್ಳೆ ಮಾತುಗಳೇ ಎಲ್ಲೆಡೆ ಕೇಳಿ ಬರುತ್ತಿವೆ. ಡಾ. ರಾಘವೇಂದ್ರ ನಿರ್ದೇಶನ ಮಾಡುತ್ತಿರುವ ಈ ಚಿತ್ರದಲ್ಲಿ ಐಂದ್ರಿತಾ ರೇ ಮತ್ತು ಬೃಂದಾ ಪ್ರೇಂ ಅವರಿಗೆ ನಾಯಕಿಯರಾಗಿ ನಟಿಸಿದ್ದಾರೆ.

  • ಮಕ್ಕಳ ಶಾಲೆಗಾಗಿ 15 ಕಿ.ಮೀ ಬೆಟ್ಟವನ್ನೇ ಕಡಿದು ರಸ್ತೆ ಮಾಡಿದ ತಂದೆ

    ಮಕ್ಕಳ ಶಾಲೆಗಾಗಿ 15 ಕಿ.ಮೀ ಬೆಟ್ಟವನ್ನೇ ಕಡಿದು ರಸ್ತೆ ಮಾಡಿದ ತಂದೆ

    ಭುವನೇಶ್ವರ್: ಮಕ್ಕಳು ಶಾಲೆಗೆ ಹೋಗಲು ಅನುಕೂಲವಾಗುವಂತೆ ತಂದೆಯೊಬ್ಬರು ಬೆಟ್ಟವನ್ನೇ ಕಡಿದು ಸುಮಾರು 15 ಕಿ.ಮೀ ರಸ್ತೆ ನಿರ್ಮಿಸುತ್ತಿರುವ ಘಟನೆ ಒಡಿಶಾದ ಗುಮ್ಸಾಹಿ ಗ್ರಾಮದಲ್ಲಿ ನಡೆದಿದೆ.

    ಜಲಂಧರ್ ನಾಯಕ್, ತಮ್ಮ ಗ್ರಾಮವಾದ ಗುಮ್ಸಾಹಿಯಿಂದ ಕಂಧಾಮಾಲ್ ಜಿಲ್ಲೆಯ ಫುಲ್ಬಾನಿ ಪಟ್ಟಣದ ಮುಖ್ಯರಸ್ತೆಗೆ ಸಂಪರ್ಕ ಕಲ್ಪಿಸಲು ಎರಡು ವರ್ಷಗಳಿಂದ ಪ್ರತಿದಿನ 8 ಗಂಟೆ ಕೆಲಸ ಮಾಡಿ 15 ಕಿ.ಮೀ ರಸ್ತೆ ನಿರ್ಮಿಸಲು ಒಬ್ಬರೇ ಶ್ರಮಿಸುತ್ತಿದ್ದಾರೆ.

    ಒಡಿಶಾದ ಗುಮ್ಸಾಹಿ ಗ್ರಾಮದಲ್ಲಿ ವಾಸವಾಗಿರುವ ಜಲಂದರ್ ನಾಯಕ್(45) ಅವರ ಊರಲ್ಲಿ ಯಾವುದೇ ಶಾಲೆಗಳಿಲ್ಲ. ಕಂಧಾಮಾಲ್ ಜಿಲ್ಲೆಯ ಫುಲ್ಬಾನಿ ಪಟ್ಟಣದಲ್ಲಿ ಶಾಲೆಯಿದ್ದು, ಅಲ್ಲಿಗೆ ಹೋಗಲು ಸುಮಾರು 15 ಕಿ.ಮೀ. ಗುಡ್ಡಗಾಡು ಪ್ರದೇಶ ದಾಟಿ ಹೋಗಬೇಕು. ಆದರೆ ಅಲ್ಲಿಗೆ ತೆರಳಲು ಸೂಕ್ತ ರಸ್ತೆ ಅಥವಾ ಸಾರಿಗೆ ಸೌಲಭ್ಯಗಳಿಲ್ಲ. ಹೀಗಾಗಿ ತಮ್ಮ ಮಕ್ಕಳು ಶಾಲೆಗೆ ಹೋಗಲು ನೆರವಾಗುವಂತೆ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದಾರೆ.

    ಕಳೆದ ಎರಡು ವರ್ಷಗಳಿಂದ ಸುತ್ತಿಗೆ ಮತ್ತು ಉಳಿ ಹಿಡಿದು ದಿನದ 8 ಗಂಟೆ ದುಡಿದು ಈಗಾಗಲೇ 8 ಕಿ.ಮೀ. ರಸ್ತೆ ನಿರ್ಮಾಣ ಮಾಡಿದ್ದಾರೆ. ಈ ಕಾರ್ಯವನ್ನು ಮೆಚ್ಚಿ ಜಿಲ್ಲಾಡಳಿತ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಎಂಜಿಎನ್‍ಆರ್ ಇಜಿಎಸ್) ಅಡಿಯಲ್ಲಿ ಅವರ ಕೆಲಸಕ್ಕೆ ಸಂಬಳ ಪಾವತಿ ಮಾಡುವುದರ ಜೊತೆಗೆ ಸನ್ಮಾನ ಮಾಡಲು ನಿರ್ಧಾರ ಮಾಡಿದ್ದಾರೆ.

    ಈ ಹಿಂದೆ ಬಿಹಾರದ ದಶರತ್ ಮಂಝಿ ಅವರು ಸುಮಾರು 360 ಅಡಿ ರಸ್ತೆಯನ್ನು ನಿರ್ಮಿಸಲು 22 ವರ್ಷಗಳಷ್ಟು ಕಾಲ ಶ್ರಮಿಸಿ ಸುದ್ದಿಯಾಗಿದ್ದರು. ಈಗ ನಾಯಕ್ ಎರಡು ವರ್ಷಗಳಲ್ಲಿ 8 ಕಿ.ಮೀ. ಉದ್ದದ ರಸ್ತೆ ನಿರ್ಮಿಸಿದ್ದಾರೆ. ಇನ್ನು ಮೂರು ವರ್ಷಗಳಲ್ಲಿ 7 ಕಿ.ಮೀ. ವಿಸ್ತರಿಸಬೇಕೆಂದು ಯೋಜನೆ ಮಾಡಿಕೊಂಡಿದ್ದಾರೆ.

    ನಾಯಕ್ ತಮ್ಮ ಮೂವರು ಮಕ್ಕಳು ಶಾಲೆಗೆ ಹೋಗಲು ಎದುರಿಸುತ್ತಿದ್ದ ಸಮಸ್ಯೆಗಳೇ ಅವರಿಗೆ ಸುತ್ತಿಗೆ ಮತ್ತು ಉಳಿಗೆಯನ್ನು ತೆಗೆದುಕೊಳ್ಳುವಂತೆ ಪ್ರೇರೇಪಿಸಿದೆ. ಆದ್ರೆ ಈವರೆಗೆ ಇವರ ಶ್ರಮವನ್ನ ಯಾರು ಕೂಡ ಗಮನಿಸಿರಲಿಲ್ಲ. ಸ್ಥಳೀಯ ಪತ್ರಿಕೆಯಲ್ಲಿ ಈ ಬಗ್ಗೆ ವರದಿಗಳನ್ನ ಓದಿದ ನಂತರ ಜಿಲ್ಲಾಧಿಕಾರಿ ಬೃಂದಾ, ನಾಯಕ್ ಅವರನ್ನ ಕಚೇರಿಗೆ ಕರೆಸಿ ಹಣಕಾಸಿನ ನೆರವು ನೀಡಲು ಮುಂದಾಗಿದ್ದಾರೆ. ಜೊತೆಗೆ ನಾಯಕ್ ಅವರ ಜೊತೆಗೆ ಕೆಲಸಗಾರರನ್ನ ನಿಯೋಜಿಸಿ ರಸ್ತೆ ಕಾಮಗಾರಿ ಪೂರ್ಣಳಿಸುವಂತೆ ಫುಲ್ಬನಿಯ ಬ್ಲಾಕ್ ಅಭಿವೃದ್ಧಿ ಅಧಿಕಾರಿ(ಬಿಡಿಒ)ಗಳಿಗೆ ಸೂಚನೆ ನೀಡಿದ್ದಾರೆ.

    ನಾಯಕ್ ಮತ್ತು ಅವರ ಕುಟುಂಬ ಮಾತ್ರ ಗುಮ್ಸಾಹಿ ಗ್ರಾಮದ ನಿವಾಸಿಗಳಾಗಿದ್ದು, ಗ್ರಾಮದಲ್ಲಿ ಸರಿಯಾದ ರಸ್ತೆ ಮತ್ತು ಅಗತ್ಯ ಸೌಕರ್ಯಗಳ ಕೊರತೆಯಿಂದಾಗಿ ಇತರರು ಬಹಳ ಹಿಂದೆಯೇ ಗ್ರಾಮವನ್ನು ತೊರೆದ್ದರು. ನಾಯಕ್ ತರಕಾರಿಗಳನ್ನು ಮಾರಾಟ ಮಾಡುವುದರ ಮೂಲಕ ಜೀವನ ನಡೆಸುತ್ತಿದ್ದಾರೆ. ತಮ್ಮ ಪ್ರಯತ್ನಗಳನ್ನು ಗುರುತಿಸಿ ಸಹಾಯ ಮಾಡಿದ್ದಕ್ಕೆ ಜಿಲ್ಲಾಡಳಿತಕ್ಕೆ ಅವರು ಧನ್ಯವಾದ ಸಲ್ಲಿಸಿದ್ದಾರೆ. “ನಮ್ಮ ಹಳ್ಳಿಗೆ ರಸ್ತೆ ನಿರ್ಮಾಣವನ್ನು ಪೂರ್ಣಗೊಳಿಸಲು ಜಿಲ್ಲಾಧಿಕಾರಿ ನನಗೆ ಭರವಸೆ ನೀಡಿದ್ದಾರೆ” ಎಂದು ನಾಯಕ್ ಹೇಳಿದ್ದಾರೆ.

    ನಾಯಕ್ ಅವರ ಪರಿಶ್ರಮ ಮತ್ತು ಕೆಲಸಕ್ಕಾಗಿ ಕಂಧಾಮಾಲ್ ಉತ್ಸವದ ಸಮಯದಲ್ಲಿ ಅವರನ್ನು ಗೌರವಿಸಲು ಯೋಚನೆ ಮಾಡಿದ್ದೇವೆ ಎಂದು ಜಿಲ್ಲಾಧಿಕಾರಿ ಬೃಂದಾ ತಿಳಿಸಿದ್ದಾರೆ.