Tag: bs yedyurappa

  • ಸರಿಯಾದ ಭಾಷೆ ಬಳಸಲು ಹೇಳಿ, ಇಲ್ಲ ಮತ್ತೊಮ್ಮೆ ಕರ್ನಾಟಕಕ್ಕೆ ಕಾಲಿಟ್ರೆ ನಾವೇ ಪಾಠ ಕಲಿಸ್ತೀವಿ- ಪಾಲೇಕರ್ ವಿರುದ್ಧ ಸಿಡಿದೆದ್ದ ಪ್ರತಾಪ್ ಸಿಂಹ

    ಸರಿಯಾದ ಭಾಷೆ ಬಳಸಲು ಹೇಳಿ, ಇಲ್ಲ ಮತ್ತೊಮ್ಮೆ ಕರ್ನಾಟಕಕ್ಕೆ ಕಾಲಿಟ್ರೆ ನಾವೇ ಪಾಠ ಕಲಿಸ್ತೀವಿ- ಪಾಲೇಕರ್ ವಿರುದ್ಧ ಸಿಡಿದೆದ್ದ ಪ್ರತಾಪ್ ಸಿಂಹ

    ಬೆಂಗಳೂರು: ಗೋವಾ ಜಲಸಂಪನ್ಮೂಲ ಸಚಿವ ವಿನೋದ್ ಪಾಲೇಕರ್ ಕನ್ನಡಿಗರನ್ನು ಹರಾಮಿಗಳು ಎಂದು ಅವಹೇಳನಕಾರಿ ಹೇಳಿಕೆ ಕೊಟ್ಟ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಟ್ವಿಟರ್‍ನಲ್ಲಿ ಗೋವಾ ಸಚಿವರ ವಿರುದ್ದ ಧ್ವನಿ ಎತ್ತಿದ ಸಂಸದ ಪ್ರತಾಪ್ ಸಿಂಹ, ಗೋವಾ ಬಿಜೆಪಿ ಸಚಿವರ ಹೇಳಿಕೆಯನ್ನ ಖಂಡಿಸಿದ್ದಾರೆ. ಮಾನ್ಯ ಮುಖ್ಯಮಂತ್ರಿ ಪರಿಕ್ಕರ್ ಜೀ ಅವರೇ ನಿಮ್ಮ ಸರ್ಕಾರದ ಉದಾರತೆ ಬಗ್ಗೆ ನಮಗೆ ಗೌರವ ಇದೆ. ಕಾಂಗ್ರೆಸ್‍ನ ಕೊಳಕು ರಾಜಕಾರಣದ ಹೊರತಾಗಿ ಕುಡಿಯುವ ನೀರು ಕೊಡುವ ವಿಷಯದ ನಿಮ್ಮ ನಿಲುವಿಗೆ ಗೌರವ ಇದೆ. ಆದ್ರೆ ಪದಗಳು ಉಚಿತವಾಗಿ ಸಿಗುತ್ತವೆ ಅಂತ ಮಾತನಾಡಬಾರದು. ಆ ಪದಗಳನ್ನ ಬಳಸುವಾಗ ಎಚ್ಚರವಿರಬೇಕು. ನಿಮ್ಮ ಸಚಿವ ವಿನೋದ್ ಪಾಲೇಕರ್ ಗೆ ಸರಿಯಾದ ಭಾಷೆ ಬಳಸಲು ಹೇಳಿ. ಇಲ್ಲವಾದರೆ ಅವರು ಇನ್ನೊಮ್ಮೆ ಕರ್ನಾಟಕಕ್ಕೆ ಕಾಲಿಟ್ಟರೆ ನಾವೇ ಪಾಠ ಕಲಿಸಬೇಕಾಗುತ್ತೆ ಅಂತ ಟ್ವಿಟರ್‍ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡರ ವಿರುದ್ಧದ ಹೇಳಿಕೆಗೆ ಗೋವಾ ಬಿಜೆಪಿ ವಿರುದ್ಧವೇ ಧ್ವನಿ ಎತ್ತಿದ ಪ್ರತಾಪ ಸಿಂಹ, ಮನೋಹರ್ ಪರಿಕ್ಕರ್ ಗೆ ಟ್ಯಾಗ್ ಮಾಡಿ ಟ್ವಿಟ್ ಮಾಡಿದ್ದಾರೆ.

    ವಿನೋದ್ ಪಾಲೇಕರ್ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿರೋ ಬಿಎಸ್‍ವೈ, ಪಾಲೇಕರ್ ತಕ್ಷಣ ಕನ್ನಡಿಗರ ಕ್ಷಮೆ ಕೇಳಲು ಆಗ್ರಹಿಸಿದ್ದಾರೆ. ಗೋವಾ, ಕರ್ನಾಟಕ ರಾಜ್ಯಗಳ ಮಧ್ಯೆ ಬಿರುಕು ಮೂಡಿಸುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಅವರು, ಕನ್ನಡಿಗರ ಬಗ್ಗೆ ಮಾತನಾಡಲು ಪಾಲೇಕರ್‍ಗೆ ಅಧಿಕಾರವನ್ನ ಯಾರೂ ಕೊಟ್ಟಿಲ್ಲ ಎಂದು ಹೇಳಿದ್ದಾರೆ.

    ಇಂದು ಬೆಳಗಾವಿಯ ಕಣಕುಂಬಿ ಕಳಸಾ ಯೋಜನಾ ಸ್ಥಳಕ್ಕೆ ಸಚಿವ ಎಂ.ಬಿ ಪಾಟೀಲ್ ಭೇಟಿ ನೀಡಲಿದ್ದಾರೆ. ನಿನ್ನೆ ಗೋವಾ ಜಲಸಂಪನ್ಮೂಲ ಸಚಿವ ವಿನೋದ್ ಪಾಲೇಕರ್ ಕಳಸಾ ಯೋಜನಾ ಸ್ಥಳಕ್ಕೆ ಭೇಟಿ ನೀಡಿ ಕನ್ನಡಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟಿದ್ದರು. ಪಾಲೇಕರ್ ಹೇಳಿಕೆಯನ್ನು ಎಂ.ಬಿ ಪಾಟೀಲ್ ತೀವ್ರವಾಗಿ ಖಂಡಿಸಿದ್ದಾರೆ. ಸಚಿವರು ಕನ್ನಡಿಗರ ಕ್ಷಮೆ ಕೇಳಬೇಕು. ಇಲ್ಲವಾದ್ರೆ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.

    ಅತ್ತ ವಿನೋದ್ ಪಾಲೇಕರ್, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಇಲ್ಲದ ಪತ್ರಕರ್ತನಿಂದ ಸುದ್ದಿ ಪ್ರಕಟವಾಗಿದೆ ಎಂದಿದ್ದಾರೆ. ಮಹದಾಯಿ ವಿಚಾರದಲ್ಲಿ ನಮ್ಮ ನಿರ್ಧಾರ ಅಚಲ ಎಂದು ಸಿಎಂ ಸಿದ್ದರಾಮಯ್ಯ ಹಾಘೂ ಬಿಎಸ್‍ವೈಗೆ ಪಾಲೇಕರ್ ಸ್ಪಷ್ಟನೆ ನೀಡಿದ್ದಾರೆ.

    ಕನ್ನಡಿಗರನ್ನು ಹರಾಮಿಗಳು ಎಂದಿದ್ದಾಯ್ತು ಇದೀಗ ಕನ್ನಡಿಗರ ವಿರುದ್ಧವೇ ದೂರು ನೀಡಲು ಗೋವಾ ಸಜ್ಜಾಗಿದೆ. ಕರ್ನಾಟಕ ಅಕ್ರಮ ಎಸಗುತ್ತಿದೆ ಎಂದು ದೂರಲು ಹಗಲು ರಾತ್ರಿ ಗೋವಾ ಕಷ್ಟಪಟ್ಟಿದ್ದು, ಗೋವಾದ ಮಹದಾಯಿ ತಂಡದಿಂದ ದಾಖಲೆಗಳ ತಯಾರಿ ನಡೆದಿದೆ. ನ್ಯಾಯಾಧೀಕರಣದ ಮುಂದೆ ವಾದ ಮಂಡಿಸಲು ಅಗತ್ಯ ದಾಖಲೆಗಳನ್ನು ಗೋವಾ ರೆಡಿ ಮಾಡಿಕೊಂಡಿದೆ.

  • ಬಿಎಸ್‍ವೈ ಆಗಮನಕ್ಕೆ ಬಿಗಿಪಟ್ಟು – ಚಳಿಯಲ್ಲೂ ಮಹದಾಯಿ ರೈತರ ಹೋರಾಟ

    ಬಿಎಸ್‍ವೈ ಆಗಮನಕ್ಕೆ ಬಿಗಿಪಟ್ಟು – ಚಳಿಯಲ್ಲೂ ಮಹದಾಯಿ ರೈತರ ಹೋರಾಟ

    ಬೆಂಗಳೂರು: ಮಹದಾಯಿ ನದಿ ನೀರು ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ನೂರಾರು ರೈತರು ಮಲ್ಲೇಶ್ವರಂ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ಮುಂದುವರೆಸಿದ್ದಾರೆ.

    ಕೊರೆಯುವ ಚಳಿಯಲ್ಲಿ ರೈತರು ರಾತ್ರಿ ರಸ್ತೆಯಲ್ಲೆ ವಾಸ್ತವ್ಯ ಹೂಡಿದ್ದು, ರಸ್ತೆ ಮತ್ತು ಫುಟ್‍ಪಾತ್ ಮೇಲೆ ಮಲಗಿ ನಿದ್ದೆ ಮಾಡಿದ್ರು. ಯಡಿಯೂರಪ್ಪನವರು ಇಲ್ಲಿಗೆ ಬರಬೇಕು. ನಮ್ಮ ಮನವಿ ಸ್ವೀಕರಿಸಬೇಕು. ಅಲ್ಲಿವರೆಗೆ ಜಪ್ಪಯ್ಯ ಅಂದ್ರೂ ಕದಲಲ್ಲ ಅಂತ ಪಟ್ಟು ಹಿಡಿದಿದ್ದಾರೆ.

    ಪ್ರತಿಭಟನಾನಿರತರಿಗೆ ಸಿಲಿಕಾನ್ ಸಿಟಿ ಜನ ತಿಂಡಿ, ಊಟೋಪಚಾರದ ವ್ಯವಸ್ಥೆ ಮಾಡ್ತಿದ್ದಾರೆ. ಅತ್ತ ಹಾವೇರಿಯ ಪರಿವರ್ತನಾ ರ‍್ಯಾಲಿಯಲ್ಲಿ ಭಾನುವಾರದಂದು ಮಾತನಾಡಿದ್ದ ಯಡಿಯೂರಪ್ಪ, ಹೋರಾಟಗಾರರೇ ಮೊದಲು ಬಿಜೆಪಿ ಕಚೇರಿ ಮುಂದಿನಿಂದ ಎದ್ದೇಳಿ. ನೀವು ಸಿಎಂ ಮನೆ ಮುಂದೆ ಹೋರಾಟ ಮಾಡಿ ಅಂತಾ ತಾಕೀತು ಮಾಡಿದ್ದಾರೆ.

    ಈ ಮಧ್ಯೆ ಮಹದಾಯಿ ನಮ್ಮ ತಾಯಿ. ರಾಜಕೀಯಕ್ಕಾಗಿ ಜನರ ವಿಶ್ವಾಸಕ್ಕೆ ದ್ರೋಹ ಬಗೆಯಲ್ಲ. ಯಾವುದೇ ಕಾರಣಕ್ಕೂ ನೀರು ಹರಿಸೋ ಪ್ರಶ್ನೆಯೇ ಇಲ್ಲ ಅಂತ ಗೋವಾ ಜಲ ಸಂಪನ್ಮೂಲ ಸಚಿವ ವಿನೋದ್ ಪಾಲೇಕರ್ ಮತ್ತೊಂದು ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಾಜ್ಯ ಬಿಜೆಪಿ ನಾಯಕರಿಗೂ ಪರೋಕ್ಷವಾಗಿ ಪಾಲೇಕರ್ ಉತ್ತರ ನೀಡಿದ್ದಾರೆ.

  • ಯಡಿಯೂರಪ್ಪ ರಕ್ತ ಕೊಟ್ರೂ ನಾಳೆ ಬೆಳಗ್ಗೆ ನೀರು ಬರಲ್ಲ- ಎಚ್‍ಡಿಕೆ

    ಯಡಿಯೂರಪ್ಪ ರಕ್ತ ಕೊಟ್ರೂ ನಾಳೆ ಬೆಳಗ್ಗೆ ನೀರು ಬರಲ್ಲ- ಎಚ್‍ಡಿಕೆ

    ಬೆಂಗಳೂರು/ಹಾಸನ: ಯಡಿಯೂರಪ್ಪ ರಕ್ತ ಕೊಟ್ರೂ ನಾಳೆ ಬೆಳಗ್ಗೆ ನೀರು ಬರಲ್ಲ ಅಂತಾ ಮಹದಾಯಿ ವಿಚಾರದಲ್ಲಿ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಮಹದಾಯಿ ನೀರು ಯಡಿಯೂರಪ್ಪ ಮತ್ತು ಪರಿಕ್ಕರ್ ಆಸ್ತಿನಾ? ನಾನು ಸಿದ್ದರಾಮಯ್ಯ ಅವರನ್ನು ನಂಬೋದಿಲ್ಲ ಅಂತ ಪರಿಕ್ಕರ್ ಹೇಳ್ತಾರೆ. ಯಡಿಯೂರಪ್ಪ ಅವರನ್ನು ನಂಬ್ತಾರಂತೆ. ಏನು ಪರಿಕ್ಕರ್ ಮತ್ತು ಅಮಿತ್ ಷಾ ಆಟವಾಡ್ತಾರಾ? ಬಿಜೆಪಿ ನಾಯಕರು ಕರ್ನಾಟಕ ರಾಜ್ಯಕ್ಕೆ ದ್ರೋಹ ಮಾಡ್ತಾ ಇದ್ದಾರೆ. ಬಿಎಸ್‍ವೈ ರಕ್ತ ಕೊಟ್ಟರೂ ನಾಳೆ ಬೆಳಗ್ಗೆ ನೀರು ಬರುವುದಿಲ್ಲ. ನ್ಯಾಯಾಧಿಕರಣದಿಂದಲೇ ಆದೇಶ ಆಗಬೇಕು ಅಂತ ಎಚ್‍ಡಿಕೆ ಹೇಳಿದ್ರು.

    ಮಹದಾಯಿ ನೀರು ಯಡಿಯೂರಪ್ಪ, ಗೋವಾ ಸಿಎಂ ಪರಿಕ್ಕರ್ ಆಸ್ತಿಯಲ್ಲ. ನೀರು ಜನರ ಆಸ್ತಿ. ಎರಡೂ ರಾಜ್ಯಗಳಿಗೆ ಸೇರಿದ ಹಕ್ಕು. ಜನರಿಗೆ ಟೋಪಿ ಹಾಕ್ಬೇಡಿ. ಪರಿಕ್ಕರ್ ಸಿದ್ದರಾಮಯ್ಯ ಮೇಲೆ ನಂಬಿಕೆ ಇಲ್ಲ ಅಂತಾ ಹೇಳ್ತಾರೆ. ಸಿದ್ದರಾಮಯ್ಯ 6 ಕೋಟಿ ಕನ್ನಡಿಗರ ಸಿಎಂ ಅಂತಾ ತಿರುಗೇಟು ನೀಡಿದ್ರು.

    ಕೇಂದ್ರದ ಬಿಜೆಪಿಗರು ಕರ್ನಾಟಕದ ಜನರ ದಾರಿ ತಪ್ಪಿಸಿ, ಮತ ಪಡೆಯಲು ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಜನವರಿ 5 ರಿಂದ ಬೆಳಗಾವಿಯಲ್ಲಿ ಕಾಗವಾಡದಿಂದ ಯಾತ್ರೆ ಶುರು ಮಾಡ್ತೀನಿ. ಬಿಜೆಪಿಯವರ ಕೀಳುಮಟ್ಟದ ರಾಜಕಾರಣವನ್ನು ಜನರ ಮುಂದೆ ಇಡ್ತೀನಿ. ಬಿಜೆಪಿಯವರು 17 ಮಂದಿ ಸಂಸದರು, ಸಚಿವರು ಕೈ ಕಟ್ಟಿಕೊಂಡು ನಿಲ್ತಾರೆ. ಅವರು ಮಾತಾಡಿದ್ದೇ ಇಲ್ಲ ಅಂದ್ರು.

    ಇದೇ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು ಹಾಸನದಲ್ಲಿ ಮಾತನಾಡಿದ್ದು, ಗುಜರಾತ್ ಎಲೆಕ್ಷನ್ ಮುಗಿದ ಬಳಿಕ ಸಮಸ್ಯೆಗೆ ಒಂದು ಪರಿಹಾರ ಕಂಡು ಹಿಡಿಯಲೇ ಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಗೋವಾ, ಮಹಾರಾಷ್ಟ್ರ ಸಿಎಂಗಳ ಸಭೆ ನಡೆಸಿದರು. ಆ ಸಭೆಯಲ್ಲಿ ನಮ್ಮ ರಾಜ್ಯದ ಯಡಿಯೂರಪ್ಪ ಅವರೂ ಭಾಗಿಯಾಗಿದ್ದರು. ಸಭೆಯಲ್ಲಿ ಒಂದು ತೀರ್ಮಾನಕ್ಕೆ ಬರಲೇಬೇಕು ಎಂದು ಸೂಚನೆ ಕೊಟ್ಟರು. ಆದರೆ ದೆಹಲಿಯಿಂದ ಬಂದ ನಂತರ ಸರ್ಕಾರ ಉಳಿಸಿಕೊಳ್ಳಲು ಗೋವಾ ಸಿಎಂ ಏನು ಹೇಳಿಕೆ ನೀಡಿದರು ಎಂಬುದು ನಾಡಿನ ಜನರಿಗೆ ತಿಳಿದಿದೆ. ಕರ್ನಾಟಕಕ್ಕೆ ಎಷ್ಟು ಕುಡಿಯುವ ನೀರು ಕೊಡಬೇಕು ಎಂಬುದು ನ್ಯಾಯಾಧಿಕರಣದ ಮುಂದೆಯೇ ತೀರ್ಮಾನವಾಗಬೇಕು ಎಂದು ಗೋವಾ ಸಿಎಂ ಹೇಳಿದ್ದಾರೆ. ಆದರೆ ನೀರು ಹಂಚಿಕೆ ನಿಗದಿ ಮಾಡಿದ ನಂತರವೂ ಚರ್ಚೆಗೆ ಗ್ರಾಸವಾಗಲಿದೆ. ಹೀಗಾಗಿ ಇದು ಬಗೆಹರಿಯದ ಸಮಸ್ಯೆ ಎಂದರು.

    ಇದೇ ವೇಳೆ ತಮ್ಮ ವಿರುದ್ಧ ಟೀಕೆ ಮಾಡಿರುವ ಬಂಡಾಯ ಶಾಸಕ ಚಲುವರಾಯಸ್ವಾಮಿ ಬಗ್ಗೆ ಮಾತನಾಡಲು ನಿರಾಕರಿಸಿದ ಗೌಡರು, ಅವರ ಹೆಸರು ಎತ್ತಬೇಡಿ ಎಂದು ಖಾರವಾಗಿ ಉತ್ತರಿಸಿದರು. ಜೆಡಿಎಸ್ ಟಿಕೆಟ್ ಹಂಚಿಕೆ ಸಂಬಂಧ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ರಾಜ್ಯದ ಎಲ್ಲಾ ಜಿಲ್ಲೆಗಳ ಆಕಾಂಕ್ಷಿಗಳ ಸಭೆ ನಡೆಸುತ್ತಿದ್ದಾರೆ. ಪ್ರಜ್ವಲ್ ರೇವಣ್ಣ, ಅನಿತಾ ಕುಮಾರಸ್ವಾಮಿ ಸ್ಪರ್ಧೆ ಮಾಡುವ ಬಗ್ಗೆ ಮತ್ತೆ ಮತ್ತೆ ಚರ್ಚೆ ಬೇಡ ಎಂದರು.

    ಚುನಾವಣೆ ಹೊಸ್ತಿಲಲ್ಲೇ ಉತ್ತರ ಕರ್ನಾಟಕದಲ್ಲಿ ಮಹದಾಯಿ ಹೋರಾಟ ತೀವ್ರಗೊಂಡಿದೆ. ಸಂಧಾನ ಹೆಸರಲ್ಲಿ ಬಿಜೆಪಿ ನಾಯಕರು ಉತ್ತರ ಕರ್ನಾಟಕ ಜನರ ಮೂಗಿಗೆ ತುಪ್ಪ ಸುರಿಯುವ ಕೆಲ್ಸ ಮಾಡ್ತಿದ್ದಾರೆ. ಈ ವಿಚಾರದಲ್ಲಿ ಪ್ರಧಾನಿಯವರೇ ಮಧ್ಯಸ್ಥಿಕೆ ವಹಿಸಬೇಕು ಎಂದು ಆಗ್ರಹಿಸಿ ರೈತ ಮತ್ತು ಕನ್ನಡಪರ ಸಂಘಟನೆಗಳು ಇದೇ ತಿಂಗಳ 27ರಂದು ಬಂದ್‍ಗೆ ಕರೆ ನೀಡಿವೆ.

    https://youtu.be/nK8HD8MjR_0

  • ಗುಜರಾತ್ ಫಲಿತಾಂಶದ ಬೆನ್ನಲ್ಲೇ ಬಿಎಸ್‍ವೈಗೆ ಹೈಕಮಾಂಡ್‍ ಬುಲಾವ್

    ಗುಜರಾತ್ ಫಲಿತಾಂಶದ ಬೆನ್ನಲ್ಲೇ ಬಿಎಸ್‍ವೈಗೆ ಹೈಕಮಾಂಡ್‍ ಬುಲಾವ್

    ಬೆಂಗಳೂರು: ಗುಜರಾತ್ ಫಲಿತಾಂಶದ ಬೆನ್ನಲ್ಲೇ ಬಿಎಸ್‍ವೈಗೆ ಹೈಕಮಾಂಡ್‍ನಿಂದ ಬುಲಾವ್ ಬಂದಿದೆ.

    ಈ ಹಿನ್ನೆಲೆಯಲ್ಲಿ ಬುಧವಾರದಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ. ಹೈಕಮಾಂಡ್ ಜೊತೆ ಮಹತ್ವದ ಮಾತುಕತೆ ನಡೆಸಲಿರೋ ಬಿಎಸ್‍ವೈ, ರಾಜ್ಯದ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಮಹತ್ವದ ಚರ್ಚೆ ನಡೆಸೋ ಸಾಧ್ಯತೆಯಿದೆ.

    ಇದರ ಜೊತೆಗೆ ಲಿಂಗಾಯಿತ ಪ್ರತ್ಯೇಕ ಧರ್ಮ ವಿಚಾರ, ಮಹದಾಯಿ ವಿಚಾರಗಳ ಬಗ್ಗೆ ಸ್ಪಷ್ಟ ನಿಲುವು ತೆಗೆದುಕೊಳ್ಳೋ ಸಾಧ್ಯತೆ ಇದೆ ಎಂದು ಹೇಳಲಾಗ್ತಿದೆ. ಬಿಎಸ್‍ವೈ ದೆಹಲಿ ಪ್ರವಾಸ ಹಿನ್ನೆಲೆಯಲ್ಲಿ ನಾಳೆಯ ನವಲಗುಂದ, ನರಗುಂದ, ಗದಗ ಯಾತ್ರೆ ಮುಂದೂಡಿಕೆಯಾಗಿದೆ.

    ಇದನ್ನೂ ಓದಿ: ಗುಜರಾತ್ ಚುನಾವಣೆ ಗೆಲುವಿನ ಬೆನ್ನಲ್ಲೇ ರಾಜ್ಯದಲ್ಲಿ ಬಿಜೆಪಿ ಅಪರೇಷನ್

    ಗುಜರಾತ್ ಫಲಿತಾಂಶದ ಬೆನ್ನಲ್ಲೇ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಸಂಕ್ರಾಂತಿ ವೇಳೆಗೆ ರಾಜ್ಯಕ್ಕೆ ಆಗಮಿಸಲಿರುವ ಅಮಿತ್ ಶಾ, ಬೆಂಗಳೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಸಾದರಹಳ್ಳಿ ಸಮೀಪ ಏರ್ ಪೋರ್ಟ್ ರಸ್ತೆಯಲ್ಲಿರುವ ಬಹು ದೊಡ್ಡ ವಿಲ್ಲಾವೊಂದನ್ನು ಬಾಡಿಗೆಗೆ ಪಡೆದಿದ್ದಾರೆ. ಬಿಜೆಪಿ ಕಚೇರಿ ಹಾಗೂ ವಿಮಾನ ನಿಲ್ದಾಣಕ್ಕೆ ಹತ್ತಿರವಾಗಲೆಂದು ಸಾದರಹಳ್ಳಿಯಲ್ಲಿ ವಿಲ್ಲಾ ಬಾಡಿಗೆಗೆ ಪಡೆದಿದ್ದಾರೆ. ಈ ವಿಲ್ಲಾದಲ್ಲೇ ಎಲೆಕ್ಷನ್ ಕಾರ್ಯತಂತ್ರ ನಡೆಯುತ್ತದೆ. ವಾರ್ ರೂಂ, ಅಮಿತ್ ಶಾ ಅವರ ಸ್ಟ್ರ್ಯಾಟಜಿ ರೂಂ ಕೂಡ ವಿಲ್ಲಾದಲ್ಲೇ ಇದ್ದು, ವಾರ್ ರೂಂನ 10 ತಂಡವೂ ಬೆಂಗಳೂರಿಗೆ ಶಿಫ್ಟ್ ಆಗಲಿದೆ.

    ಅಮಿತ್ ಶಾ ಅವರು ವಾರದಲ್ಲಿ ಎರಡು ಬಾರಿ ಬೆಂಗಳೂರಿಗೆ ಭೇಟಿ ಕೊಡಲಿದ್ದಾರೆ. ಈ ವೇಳೆ ಮಂಗಳೂರು, ಮೈಸೂರು, ಹುಬ್ಬಳಿ, ಬೆಳಗಾವಿಗೂ ಕೂಡ ಅವರು ಹೋಗಲಿದ್ದಾರೆ. ಒಟ್ಟಿನಲ್ಲಿ ಹೊಸ ವರ್ಷದಿಂದ ಕರ್ನಾಟಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಅವರ ಅಸಲಿ ಆಟ ಶುರುವಾಗಲಿದೆ ಎಂದು ಹೇಳಲಾಗ್ತಿದೆ.

    ಇದನ್ನೂ ಓದಿ: ಮತಎಣಿಕೆಗೆ 1 ಗಂಟೆ ಮುನ್ನವೇ ಸಿದ್ದರಾಮಯ್ಯ ಹೇಳಿದ್ರು ಗುಜರಾತ್ ಫಲಿತಾಂಶದ `ಲೆಕ್ಕಾಚಾರ’

  • ಯಾರನ್ನೂ ಭೇಟಿಯಾಗ್ದೆ ಗುಜರಾತ್ ಚುನಾವಣೆ ಫಲಿತಾಂಶದ ಮಾಹಿತಿ ಪಡೆಯುತ್ತಿರೋ ಬಿಎಸ್‍ವೈ

    ಯಾರನ್ನೂ ಭೇಟಿಯಾಗ್ದೆ ಗುಜರಾತ್ ಚುನಾವಣೆ ಫಲಿತಾಂಶದ ಮಾಹಿತಿ ಪಡೆಯುತ್ತಿರೋ ಬಿಎಸ್‍ವೈ

    ಬೆಂಗಳೂರು: ಗುಜರಾತ್ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಫಲಿತಾಂಶದ ಮಾಹಿತಿ ಪಡೆಯುತ್ತಿದ್ದಾರೆ.

    ಚುನಾವಣೆ ಮತ ಎಣಿಕೆಯಲ್ಲಿ ಪಕ್ಷಗಳ ಮುನ್ನಡೆ ಕ್ಷಣ ಕ್ಷಣಕ್ಕೂ ತೀವ್ರ ಕುತೂಹಲ ಮೂಡಿಸುತ್ತಿದ್ದು, ಬಿಎಸ್‍ವೈ ಯಾರನ್ನೂ ಭೇಟಿಯಾಗಿಲ್ಲ. ಭೇಟಿಯಾಗಲು ಬಂದ ಸಾರ್ವಜನಿಕರಿಗೆ ಬಿಎಸ್‍ವೈ ಭೇಟಿಯ ಅವಕಾಶ ಸಿಕ್ಕಿಲ್ಲ.

    ಯಾರನ್ನೂ ಭೇಟಿಯಾಗದೆ ಚುನಾವಣೆ ಫಲಿತಾಂಶದ ಮಾಹಿತಿ ಪಡೆಯುತ್ತಿರುವ ಯಡಿಯೂರಪ್ಪ, ಮಾಧ್ಯಮಗಳಿಂದಲೂ ಅಂತರ ಕಾಯ್ದುಕೊಂಡಿದ್ದಾರೆ.

    ಭಾರೀ ಕುತೂಹಲ ಮೂಡಿಸುತ್ತಿರುವ ಗುಜರಾತ್ ಚುನಾವಣೆಯ ಫಲಿತಾಂಶಗಳು ನಿಮಿಷ ನಿಮಿಷಗಳಲ್ಲಿ ಬದಲಾಗುತ್ತಿದೆ. ಆರಂಭದ ಮತ ಎಣಿಕೆಯ ವೇಳೆ ಬಿಜೆಪಿಯ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದರೆ ನಂತರ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸುತ್ತಿದ್ದಾರೆ. ಇನ್ನು ಕೆಲವೇ ನಿಮಿಷಗಳಲ್ಲಿ ಸ್ಪಷ್ಟ ಫಲಿತಾಂಶ ತಿಳಿದುಬರಲಿದೆ.

     

  • ಇಂದು ಮಲ್ಲೇಶ್ವರಂ ಎಸಿಪಿ ಮುಂದೆ ವಿಚಾರಣೆಗೆ ಹಾಜರಾಗ್ತಾರಾ ಬಿಎಸ್‍ವೈ

    ಇಂದು ಮಲ್ಲೇಶ್ವರಂ ಎಸಿಪಿ ಮುಂದೆ ವಿಚಾರಣೆಗೆ ಹಾಜರಾಗ್ತಾರಾ ಬಿಎಸ್‍ವೈ

    ಬೆಂಗಳೂರು: ಈಶ್ವರಪ್ಪ ಪಿಎ ವಿನಯ್ ಕಿಡ್ನ್ಯಾಪ್ ಯತ್ನ ಪ್ರಕರಣ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಇಂದು ಮಲ್ಲೇಶ್ವರಂ ಎಸಿಪಿ ಮುಂದೆ ವಿಚಾರಣೆಗೆ ಹಾಜರಾಗಬೇಕಿದೆ.

    ಜುಲೈ 15ರಂದು ಸಂತೋಷ್‍ಗಾಗಿ ತಮ್ಮ ಮನೆಯ ಶೋಧ ನಡೆಸಲಾಗಿದೆ. ಆದ್ರೆ ಸಂತೋಷ್ ನಿರಪರಾಧಿ. ಆತನನ್ನ ವಿನಾಕಾರಣ ಸಿಲುಕಿಸುವ ಪ್ರಯತ್ನ ನಡೆದಿದೆ ಎಂದು ನಗರ ಕಮಿಷನರ್‍ಗೆ ಬಿಎಸ್‍ವೈ ಜುಲೈ 17ರಂದು ಪತ್ರ ಬರೆದಿದ್ರು. ಈ ಹಿನ್ನೆಲೆಯಲ್ಲಿ ಬಿಎಸ್‍ವೈಗೆ ಶುಕ್ರವಾರ ನೊಟೀಸ್ ಜಾರಿ ಮಾಡಲಾಗಿತ್ತು.

    ಆದ್ರೆ ಬಿಎಸ್‍ವೈಗೆ ಇವತ್ತು ಉತ್ತರ ಕರ್ನಾಟಕ ಪ್ರವಾಸ ಫಿಕ್ಸ್ ಆಗಿದ್ದು ವಿಚಾರಣೆಗೆ ಹಾಜರಾಗೋದು ಅನುಮಾನ ಎನ್ನಲಾಗ್ತಿದೆ. ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ವಿನಯ್‍ರನ್ನ ಸಹ ವಿಚಾರಣೆಗೆ ಎಸಿಪಿ ಕರೆದಿದ್ದಾರೆ. ಈ ನಡುವೆ ಇದೇ ಪ್ರಕರಣ ಸಂಬಂಧ ಎಫ್‍ಐಆರ್ ರದ್ದತಿ ಕೋರಿ ಸಂತೋಷ್ ಸಲ್ಲಿಸಿದ್ದ ಅರ್ಜಿ ಸಂಬಂಧ ಇಂದೇ ಹೈಕೋರ್ಟ್ ಆದೇಶ ನೀಡುವ ನಿರೀಕ್ಷೆಯಿದೆ.

  • ಬಿಎಸ್‍ವೈಗೆ ಮತ್ತೊಮ್ಮೆ ಬಿಗ್ ಶಾಕ್ ನೀಡಲು ಎಸಿಬಿ ತಯಾರಿ

    ಬಿಎಸ್‍ವೈಗೆ ಮತ್ತೊಮ್ಮೆ ಬಿಗ್ ಶಾಕ್ ನೀಡಲು ಎಸಿಬಿ ತಯಾರಿ

    ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಮತ್ತೊಮ್ಮೆ ಬಿಗ್ ಶಾಕ್ ನೀಡಲು ಎಸಿಬಿ ತಯಾರಿ ನಡೆಸುತ್ತಿದೆ.

    ಶಿವರಾಮ್‍ಕಾರಂತ್ ಬಡವಾಣೆಯ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಲು ಎಸಿಬಿ ನಿರ್ಧರಿಸಿದೆ. ಈ ಬಗ್ಗೆ ಕಾನೂನು ಅಭಿಪ್ರಾಯ ಪಡೆದಿರೋ ಎಸಿಬಿ, ಮುಖ್ಯಮಂತ್ರಿಗಳು ಮತ್ತು ಗೃಹಸಚಿವರ ಬಳಿ ಒಂದು ಸುತ್ತಿನ ಮಾತುಕತೆ ನಡೆಸಿದೆ.

    ಇದೇ ವಾರದಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ. ಹೈಕೋರ್ಟ್ ನೀಡಿರೋ ತಡೆಯಾಜ್ಞೆ ತೆರವುಗೊಳಿಸುವಂತೆ ಮೇಲ್ಮನವಿ ಸಲ್ಲಿಸಲಿದೆ. ಈಗಾಗಲೇ ಒಂದು ಹಂತದಲ್ಲಿ ತನಿಖೆ ಮಾಡಲಾಗಿದೆ. ಈ ಹಂತದಲ್ಲಿ ತಡೆಯಾಜ್ಞೆ ನೀಡಿರೋದು ಸರಿಯಲ್ಲ. ಅಷ್ಟೇ ಅಲ್ಲದೆ ಆರೋಪಿತರು ತುಂಬಾ ಪ್ರಭಾವಿ ವ್ಯಕ್ತಿ. ಸಾಕ್ಷಿಗಳಿಗೆ ಬೆದರಿಕೆ ಹಾಗು ದಾಖಲಾತಿಗಳನ್ನು ನಾಶ ಮಾಡೋ ಸಾಧ್ಯತೆಯಿದೆ. ಹಾಗಾಗಿ ಹೆಚ್ಚಿನ ತನಿಖೆ ಮಾಡೋ ಅಗತ್ಯವಿದೆ. ಕೂಡಲೇ ತಡೆಯಾಜ್ಞೆ ತೆರುವುಗೊಳಿಸಬೇಕು ಅಂತ ಅರ್ಜಿ ಸಲ್ಲಿಸಲಿದೆ.

  • ಬಳ್ಳಾರಿ ಬಿಜೆಪಿಯಲ್ಲಿ ಭಿನ್ನಮತ – ಬಿಎಸ್‍ವೈ, ಈಶ್ವರಪ್ಪ ಬೆಂಬಲಿಗರ ಕಿತ್ತಾಟ

    ಬಳ್ಳಾರಿ ಬಿಜೆಪಿಯಲ್ಲಿ ಭಿನ್ನಮತ – ಬಿಎಸ್‍ವೈ, ಈಶ್ವರಪ್ಪ ಬೆಂಬಲಿಗರ ಕಿತ್ತಾಟ

    ಬಳ್ಳಾರಿ: ಬಿಜೆಪಿಯಲ್ಲಿ ಯಡಿಯೂರಪ್ಪ, ಈಶ್ವರಪ್ಪ ವೈಮನಸ್ಸು ಸದ್ಯಕ್ಕೆ ಶಾಂತವಾಗಿದೆ. ಆದ್ರೆ ಗಣಿನಾಡು ಬಳ್ಳಾರಿಯಲ್ಲಿ ಇವರಿಬ್ಬರ ಬೆಂಬಲಿಗರ ಮಧ್ಯೆಯೇ ಹೋರಾಟ ಶುರುವಾಗಿದೆ.

    ಬಿಎಸ್‍ವೈ ಪರಮಾಪ್ತ ಹಾಗೂ ಶ್ರೀರಾಮುಲು ಬಣದಲ್ಲಿ ಗುರುತಿಸಿಕೊಂಡಿದ್ದ ಹೂವಿನಹಡಗಲಿ ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನದಿಂದ ವಿಜಯಕುಮಾರ್‍ ರನ್ನ ಈಶ್ವರಪ್ಪ ಬಣದ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಕೆಳಗಿಳಿಸಿದ್ದಾರೆ.

    ಇದರಿಂದ ರೊಚ್ಚಿಗೆದ್ದಿರುವ ಬಿಎಸ್‍ವೈ ಮತ್ತು ವಿಜಯಕುಮಾರ್ ಅಭಿಮಾನಿಗಳು ಪಕ್ಷದ ಜಿಲ್ಲಾಧ್ಯಕ್ಷರ ವಿರುದ್ಧವೇ ಪ್ರತಿಭಟನೆ ನಡೆಸಿದ್ದಾರೆ.  ವಿಜಯಕುಮಾರ್‍ರನ್ನ ಮುಂದುವರಿಸದಿದ್ದಲ್ಲಿ ಸಾಮೂಹಿಕ ರಾಜೀನಾಮೆ ನೀಡೋದಾಗಿ ಎಚ್ಚರಿಕೆ ನೀಡಿದ್ದಾರೆ.

  • ಡಿನೋಟಿಫಿಕೇಷನ್ ಕೇಸಲ್ಲಿ ಬಿಎಸ್‍ವೈಗೆ ಮತ್ತೊಂದು ಶಾಕ್

    ಡಿನೋಟಿಫಿಕೇಷನ್ ಕೇಸಲ್ಲಿ ಬಿಎಸ್‍ವೈಗೆ ಮತ್ತೊಂದು ಶಾಕ್

    ಬೆಂಗಳೂರು: ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷಸ ಬಿಎಸ್ ಯಡಿಯೂರಪ್ಪಗೆ ಮತ್ತೊಂದು ಶಾಕ್ ಸಿಕ್ಕಿದೆ.

    ಬಿಎಸ್‍ವೈ ವಿರುದ್ಧದ 15 ಡಿನೋಟಿಫಿಕೇಷನ್ ಪ್ರಕರಣದಲ್ಲಿ ಸಿರಾಜಿನ್ ಬಾಷ ಕಾನೂನು ಹೋರಾಟಕ್ಕೆ ರಾಜ್ಯ ಸರ್ಕಾರ ಕೈ ಜೋಡಿಸಿದೆ. ಬಾಷಾ ಸಲ್ಲಿಸಿದ್ದ ಅರ್ಜಿ ಜೊತೆ ರಾಜ್ಯ ಸರ್ಕಾರ ಕೂಡ ಮೇಲ್ಮನವಿ ಸಲ್ಲಿಸಿದ್ದು, ಎರಡೂ ಅರ್ಜಿಗಳನ್ನ ಸುಪ್ರೀಂಕೋರ್ಟ್ ಒಟ್ಟಾಗಿ ವಿಚಾರಣೆ ನೆಡಸಲಿದೆ.

    ರಾಜ್ಯ ಸರ್ಕಾರದ ಮನವಿ ಮೇಲೆ ಸುಪ್ರೀಂಕೋರ್ಟ್ ವಿಚಾರಣೆಗೆ ಒಪ್ಪಿದೆ. ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದಿಸಲಿದ್ದಾರೆ.

    ಬಿಎಸ್‍ವೈ ವಿರುದ್ಧದ ಹದಿನೈದು ಪ್ರಕರಣಗಳನ್ನು ಹೈಕೋರ್ಟ್ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.

  • 2013ರಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಬೇಕೆಂದಿದ್ದ ಬಿಎಸ್‍ವೈ ಈಗ ಸೈಲೆಂಟ್!

    2013ರಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಬೇಕೆಂದಿದ್ದ ಬಿಎಸ್‍ವೈ ಈಗ ಸೈಲೆಂಟ್!

    ಬೆಂಗಳೂರು: ವೀರಶೈವ-ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಬೇಕೆನ್ನುವ ವಿಚಾರದಲ್ಲಿ ಈಗ ತಟಸ್ಥರಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಈ ಹಿಂದೆ ಪ್ರತ್ಯೇಕ ಧರ್ಮಕ್ಕಾಗಿ ಒತ್ತಾಯಿಸಿದ ಸ್ಫೋಟಕ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ರಾಜ್ಯ ಕಾಂಗ್ರೆಸ್ ಸರ್ಕಾರ ಎಬ್ಬಿಸಿರುವ ‘ಪ್ರತ್ಯೇಕ ಧರ್ಮ’ದ ವಿವಾದ ಸಂಬಂಧ ಈಗ ಬಿಜೆಪಿ ನಾಯಕರು ಮೌನವಾಗಿದ್ದಾರೆ. ಆದರೆ 2013ರಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕೆಜೆಪಿಯಲ್ಲಿದ್ದಾಗ ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದು ಪ್ರತ್ಯೇಕ ಧರ್ಮಕ್ಕೆ ಪ್ರಸ್ತಾವನೆ ಇಟ್ಟಿದ್ದ ಸ್ಫೋಟಕ ಮಾಹಿತಿ ಇದೀಗ ಲಭ್ಯವಾಗಿದೆ.

    ‘ವೀರಶೈವ-ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಬೇಕು’ ಎಂದು ಒತ್ತಾಯಿಸಿ ಅಖಿಲ ಭಾರತ ವೀರಶೈವ ಮಹಾ ಸಭಾ ನಾಲ್ಕು ವರ್ಷಗಳ ಹಿಂದೆ ಸಲ್ಲಿಸಿದ್ದ ಪತ್ರಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಸಚಿವರಾದ ಈಶ್ವರ ಖಂಡ್ರೆ, ಶರಣಪ್ರಕಾಶ ಪಾಟೀಲ, ಎಂ.ಬಿ ಪಾಟೀಲ, ವಿನಯ ಕುಲಕರ್ಣಿ, ಮುಖ್ಯ ಸಚೇತಕ ಅಶೋಕ ಪಟ್ಟಣ, ಸಂಸದ ಪ್ರಭಾಕರ ಕೋರೆ, ಮಾಜಿ ಸಚಿವರಾದ ಉಮೇಶ್ ಕತ್ತಿ, ಬಸವರಾಜ ಬೊಮ್ಮಾಯಿ, ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಲಿಂಗಾಯತ ಮುಖಂಡರು ಸಹಿ ಕೂಡ ಮಾಡಿದ್ದಾರೆ.

    ‘ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆಗಾಗಿ ಅಖಿಲ ಭಾರತ ವೀರಶೈವ ಮಹಾಸಭಾ ಸಲ್ಲಿಸಿದ ಮನವಿಗೆ ನಮ್ಮೆಲ್ಲರ ಒಪ್ಪಿಗೆ ಇದ್ದು, ಆದಷ್ಟು ಬೇಗ ಪ್ರತ್ಯೇಕ ಧರ್ಮ ಘೋಷಣೆ ಮಾಡಬೇಕು’ ಎಂದು ಮನವಿಯಲ್ಲಿ ನಾಯಕರು ತಿಳಿಸಿದ್ದಾರೆ. 2013ರ ಜುಲೈ 7ರಂದು ಕೇಂದ್ರ ಗೃಹ ಸಚಿವರಾಗಿದ್ದ ಸುಶೀಲ್ ಕುಮಾರ್ ಶಿಂಧೆಗೆ ಹಾಗೂ ಅದೇ ವರ್ಷ ಜುಲೈ 25ರಂದು ಅಂದಿನ ಪ್ರಧಾನಿಗೆ ಪ್ರತ್ಯೇಕ ಮನವಿ ಸಲ್ಲಿಸಲಾಗಿದೆ.

    ಪತ್ರದಲ್ಲೇನಿದೆ?:  

    ಅಖಿಲ ಭಾರತ ವೀರಶೈವ ಮಹಾಸಭಾ (ರಿ)

    ಗೆ,
    ಡಾ. ಮನಮೋಹನ್ ಸಿಂಗ್
    ಗೌರವಾನ್ವಿತ ಪ್ರಧಾನ ಮಂತ್ರಿಗಳು
    ಭಾರತ ಸರ್ಕಾರ
    ನವದೆಹಲಿ-110001

    ಮಾನ್ಯರೇ,

                                 ವಿಷಯ: ವೀರಶೈವ ಲಿಂಗಾಯತ ಸ್ವತಂತ್ರ ಧರ್ಮವನ್ನಾಗಿ ಪರಿಗಣಿಸುವಂತೆ, ಹಾಗೂ ಜನಗಣತಿಯಲ್ಲಿ ಪ್ರತ್ಯೇಕ ಕೋಡ್, ಕಾಲಂ ನೀಡುವಂತೆ ಕೋರಿ ಸಲ್ಲಿಸಿದ ಮನವಿ

    ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ, ಕೇರಳ ಗೋವಾ ಸೇರಿದಂತೆ ದೇಶದ ಇತರೆ ಪ್ರದೇಶಗಳ ಜನಪ್ರತಿನಿಧಿಗಳಾದ ನಾವು ದಿನಾಂಕ 25-72013 ರಂದು ಬೆಂಗಳೂರಿನಲ್ಲಿ ಸಭೆ ಸೇರಿ, ಸುಮಾರು 4 ಕೋಟಿ ಜನಸಂಖ್ಯೆ ಹೊಂದಿರುವ ವೀರಶೈವ-ಲಿಂಗಾಯತ ಸಮುದಾಯವನ್ನ ಸ್ವತಂತ್ರ ಧರ್ಮವಾಗಿ ಪರಿಗಣಿಸುವಂತೆ ಮನವಿ ಸಲ್ಲಿಸಲು ತೀರ್ಮಾನಿಸಲಾಯ್ತು.

    ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರು ಕೂಡ ಕೇಂದ್ರ ಗೃಹ ಸಚಿವರಿಗೆ ವೀರಶೈವ-ಲಿಂಗಾಯತ ಸಮುದಾಯವನ್ನ ಸ್ವತಂತ್ರ ಧರ್ಮವಾಗಿ ಪರಿಗಣಿಸುವಂತೆ ಮನವಿ ಪತ್ರವನ್ನ ಸಲ್ಲಿಸಿದ್ದು, ಜನಗಣತಿ ಸಂದರ್ಭದಲ್ಲಿ ಜೈನ, ಬೌದ್ಧ, ಸಿಖ್ ಧರ್ಮಗಳಿಗೆ ಇರುವ ಪ್ರತ್ಯೇಕ ಮಾನ್ಯತೆಯಂತೆ ವೀರಶೈವ ಲಿಂಗಾಯತ ಧರ್ಮಕ್ಕೂ ನೀಡಬೇಕೆಂದು ಕೇಳಿಕೊಂಡಿರುತ್ತಾರೆ.
    ನಾವು ವೀರಶೈವ ಲಿಂಗಾಯತ ಧರ್ಮದ ಅನುಯಾಯಿಗಳಾಗಿದ್ದು, ನಾವೆಲ್ಲರೂ ವೀರೆಶೈವ ಲಿಂಗಾಯತ ಧರ್ಮವನ್ನ ಸ್ವತಂತ್ರ ಧರ್ಮವನ್ನಾಗಿ ಪರಿಗಣಿಸಲು ಅಖಿಲ ಭಾರತ ವೀರಶೈವ ಮಹಾಸಭಾ ಸಲ್ಲಿಸಿರುವ ಮನವಿ ಪತ್ರವನ್ನ ನಾವೆಲ್ಲಾ ಒಗ್ಗಟ್ಟಾಗಿ ಬೆಂಬಲಿಸುತ್ತೇವೆ. ಹಾಗೂ ಗೃಹ ಸಚಿವರಿಗೆ ಸಲ್ಲಿಸಿರುವ ಮನವಿಯನ್ನ ಪರಿಗಣಿಸಲು ಸಲಹೆ ನೀಡಬೇಕು ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇವೆ.

    ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರು, ಬಸವ ಸಮಿತಿ ಅಧ್ಯಕ್ಷರು, ಮಹಾರಾಷ್ಟ್ರ, ಕೇರಳ ರಾಜ್ಯಘಟಕದ ಅಧ್ಯಕ್ಷರು, ಕರ್ನಾಟಕ, ಆಂದ್ರ ಪ್ರದೇಶ, ತಮಿಳುನಾಡು ರಾಜ್ಯದ ಸಚಿವರು, ಶಾಸಕರು, ಪರಿಷತ್ ಸದಸ್ಯರು ನ್ಯಾಯಕ್ಕಾಗಿ ಈ ಮನವಿ ಸಲ್ಲಿಸುತ್ತಿದ್ದು, ಯಾವುದೇ ಕಾರಣಕ್ಕೂ ತಡ ಮಾಡದೇ ನಮ್ಮ ಮನವಿಯನ್ನ ಪುರಸ್ಕರಿಸಬೇಕೆಂದು ಕೇಳಿಕೊಳ್ಳುತ್ತೇವೆ.

    ವೀರಶೈವ ಲಿಂಗಾಯತ ಅನುಯಾಯಿಗಳ ಸಂಖ್ಯೆ ಸಿಖ್, ಜೈನ, ಬೌಧ ಧರ್ಮದ ಅನುಯಾಯಿಗಳಿಂದ ಹೆಚ್ಚಿದ್ದಾರೆ. ಇದೆಲ್ಲವನ್ನ ಪರಿಗಣನೆಗೆ ತೆಗೆದುಕೊಂಡು ನಮ್ಮ ಧರ್ಮಕ್ಕೆ ನ್ಯಾಯ ಒದಗಿಸಿ. ಜನಗಣತಿ ಸಮಯದಲ್ಲಿ ವೀರಶೈವ ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಕಾಲಂ/ಕೋಡ್ ನಂಬರ್ ನೀಡುವುದರ ಮೂಲ ವೀರಶೈವ ಲಿಂಗಾಯತರನ್ನ ಜನಸಂಖ್ಯೆಯನ್ನ ಕ್ರೋಢೀಕರಿಸಿ, ಭಾರತ ಸರ್ಕಾರ ಸ್ವತಂತ್ರ ಧರ್ಮವಾಗಿ ಘೋಷಿಸಿ ಎಂದು ಕೇಳಿಕೊಳ್ಳುತ್ತೇವೆ.

                                                  ವಂದನೆಗಳೊಂದಿಗೆ                                                     ಇಂತಿ ನಿಮ್ಮ ವಿಶ್ವಾಸಿ