Tag: BSF Army

  • ಯೋಧನಿಗೆ ಟೋಲ್ ಪ್ಲಾಜಾ ಸಿಬ್ಬಂದಿಯಿಂದ ಥಳಿತ ಕೇಸ್ – 20 ಲಕ್ಷ ದಂಡ ವಿಧಿಸಿದ NHAI

    ಯೋಧನಿಗೆ ಟೋಲ್ ಪ್ಲಾಜಾ ಸಿಬ್ಬಂದಿಯಿಂದ ಥಳಿತ ಕೇಸ್ – 20 ಲಕ್ಷ ದಂಡ ವಿಧಿಸಿದ NHAI

    ಲಕ್ನೋ: ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನನ್ನ ಟೋಲ್ ಪ್ಲಾಜಾ ಸಿಬ್ಬಂದಿ ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿದ್ದ ಘಟನೆಗೆ ಸಂಬಂಧಿಸಿದಂತೆ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿ (NHAI) ಮೀರತ್‌ನ ಟೋಲ್ ಸಂಸ್ಥೆಗೆ 20 ಲಕ್ಷ ರೂ. ದಂಡ ವಿಧಿಸಿದೆ.

    ಉತ್ತರ ಪ್ರದೇಶದ ಮೀರತ್‌ನಲ್ಲಿ ಯೋಧ ಕಪಿಲ್ ಕವಾಡ್ ಎನ್ನುವವರ ಮೇಲೆ ಟೋಲ್ ಸಿಬ್ಬಂದಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಈ ಅಮಾನವೀಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಈಗಾಗಲೇ ಆರು ಜನರನ್ನು ಬಂಧಿಸಿದ್ದಾರೆ.ಇದನ್ನೂ ಓದಿ: ಅತ್ಯಾಚಾರ ಆರೋಪ ಕೇಸ್ – ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನಿಗೆ ಮಧ್ಯಂತರ ಜಾಮೀನು ಮಂಜೂರು

    ಏನಿದು ಘಟನೆ?
    ಭಾರತೀಯ ಸೇನೆಯ ರಜಪೂತ ರೆಜಿಮೆಂಟ್‌ನಲ್ಲಿದ್ದ ಕಪಿಲ್ ಕವಾಡ್, ರಜೆಯ ನಿಮಿತ್ತ ಮನೆಗೆ ತೆರಳಿದ್ದರು. ಶ್ರೀನಗರದಲ್ಲಿರುವ ತಮ್ಮ ಕರ್ತವ್ಯದ ಸ್ಥಳಕ್ಕೆ ಮರಳಲು ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಟೋಲ್ ಬೂತ್‌ನಲ್ಲಿ ಸಿಲುಕಿಕೊಂಡಿದ್ದಾರೆ. ತನ್ನ ವಿಮಾನಕ್ಕೆ ತಡವಾಗುತ್ತಿದೆ ಎಂಬ ಆತಂಕದಿಂದ ಕಪಿಲ್ ಕಾರಿನಿಂದ ಇಳಿದು ಟೋಲ್ ಬೂತ್ ಸಿಬ್ಬಂದಿಯೊಂದಿಗೆ ಮಾತನಾಡಲು ಪ್ರಾರಂಭಿಸಿದಾಗ ವಾಗ್ವಾದ ಉಂಟಾಗಿದೆ.

    ಟೋಲ್ ಪ್ಲಾಜಾದ ಐವರು ಸಿಬ್ಬಂದಿ ಕಪಿಲ್ ಮತ್ತು ಅವರ ಸೋದರ ಸಂಬಂಧಿಯನ್ನ ಥಳಿಸಿದ್ದಾರೆ. ಕಪಿಲ್‌ಗೆ ದೊಣ್ಣೆಯಿಂದ ಹೊಡೆಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಕೆಲವು ದಾಳಿಕೋರರು ಕಪಿಲ್ ಅವರನ್ನು ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿದ್ದಾರೆ. ವಿಡಿಯೋ ವೈರಲ್ ಆಗ್ತಿದ್ದಂತೆ ಕೇಸ್ ದಾಖಲಿಸಿಕೊಂಡ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.ಇದನ್ನೂ ಓದಿ:  ಭಾರೀ ಮಳೆಗೆ ವಿದ್ಯುತ್ ಸಮಸ್ಯೆ – ಮಾರ್ಗ ಮಧ್ಯದಲ್ಲೇ ನಿಂತ ಮೋನೋ ರೈಲು

  • ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಗೆಲುವು – ಪಾಕ್ ಬಂಧಿಸಿದ್ದ ಬಿಎಸ್‌ಎಫ್ ಯೋಧ ತಾಯ್ನಾಡಿಗೆ ವಾಪಸ್

    ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಗೆಲುವು – ಪಾಕ್ ಬಂಧಿಸಿದ್ದ ಬಿಎಸ್‌ಎಫ್ ಯೋಧ ತಾಯ್ನಾಡಿಗೆ ವಾಪಸ್

    – 20 ದಿನಗಳ ಬಳಿಕ ಯೋಧನನ್ನು ಭಾರತಕ್ಕೆ ಹಸ್ತಾಂತರಿಸಿದ ಪಾಕ್
    – ಆಕಸ್ಮಿಕವಾಗಿ ಗಡಿ ದಾಟಿದ್ದ ಸೈನಿಕನನ್ನು ಬಂಧಿಸಿದ್ದ ಪಾಕಿಸ್ತಾನ

    ಚಂಡೀಗಢ: ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆ ಸಕ್ಸಸ್ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಗೆಲುವು ಸಿಕ್ಕಿದೆ. ಪಾಕಿಸ್ತಾನ (Pakistan) ಬಂಧಿಸಿದ್ದ ಬಿಎಸ್‌ಎಫ್ ಯೋಧ (BSF Army) ಭಾರತಕ್ಕೆ ವಾಪಸ್ ಆಗಿದ್ದಾರೆ.

    ಆಕಸ್ಮಿಕವಾಗಿ ಫಿರೋಜ್‌ಪುರ ವಲಯದಲ್ಲಿ ಗಡಿ ದಾಟಿದ್ದ ಬಿಎಸ್‌ಎಫ್ ಯೋಧನನ್ನು ಬಂಧಿಸಿದ್ದ ಪಾಕ್ ರೇಂಜರ್‌ಗಳು 20 ದಿನಗಳ ಬಳಿಕ ಇಂದು ಅಟ್ಟಾರಿ ಗಡಿ ಮೂಲಕ ಬಿಡುಗಡೆಗೊಳಿಸಿದೆ.ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್ ಗವಾಯಿ ಪ್ರಮಾಣವಚನ ಸ್ವೀಕಾರ

    ಬಿಎಸ್‌ಎಫ್ ಮಾಹಿತಿ ಪ್ರಕಾರ, ಇಂದು ಬೆಳಗ್ಗೆ 10:30ರ ಸುಮಾರಿಗೆ ಅಟ್ಟಾರಿ – ವಾಘಾ ಗಡಿಯಲ್ಲಿ ಬಿಎಸ್‌ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಬಿಡುಗಡೆಗೊಳಿಸಿದೆ.

    ಬಿಎಸ್‌ಎಫ್ ತನ್ನ ಸೈನಿಕರಿಗೆ ಗಡಿಯಲ್ಲಿ ಗಸ್ತು ತಿರುಗುವಾಗ ಜಾಗರೂಕರಾಗಿರಲು ಕಟ್ಟುನಿಟ್ಟಿನ ಸಲಹೆಯನ್ನು ನೀಡುತ್ತದೆ. ಏ.23ರಂದು ಪಂಜಾಬ್‌ನ ಫಿರೋಜ್‌ಪುರ ಬಳಿ ಕರ್ತವ್ಯದಲ್ಲಿದ್ದ 182ನೇ ಬೆಟಾಲಿಯನ್ ಕಾನ್‌ಸ್ಟೇಬಲ್ ಪೂರ್ಣಮ್ ಕುಮಾರ್ ಶಾ ಅವರು ವಿಶ್ರಾಂತಿ ಪಡೆಯಲು ಮರದ ಕೆಳಗೆ ಕುಳಿತುಕೊಳ್ಳಲು ಹೊರಟಾಗ ಆಕ್ಮಸಿಕವಾಗಿ ಗಡಿದಾಟಿದ್ದರು. ಈ ವೇಳೆ ಅವರನ್ನು ಪಾಕಿಸ್ತಾನ ರೇಂಜರ್‌ಗಳು ಬಂಧಿಸಿದ್ದರು.

    ಅದಾದ ಬಳಿಕ ಬಿಎಸ್‌ಎಫ್ ಯೋಧನ ಬಿಡುಗಡೆಗಾಗಿ ಪಾಕ್ ರೇಂಜರ್‌ಗಳೊಂದಿಗೆ ನಿರಂತರ ಸಭೆ ನಡೆಸಲಾಗಿತ್ತು. ಮಾತುಕತೆಯ ಹೊರತಾಗಿಯೂ ರೇಂಜರ್‌ನನ್ನ ಭಾರತಕ್ಕೆ ಹಸ್ತಾಂತರಿಸಲು ನಿರಾಕರಿಸಿದ್ದರು.ಇದನ್ನೂ ಓದಿ: ನಮಗೆ ಯಾರಾದ್ರು ತೊಂದರೆ ಕೊಟ್ಟರೆ, ಸುಮ್ಮನೆ ಬಿಡಲ್ಲ: ಪಾಕ್‌ ವಿರುದ್ಧ ಗುಡುಗಿದ ಯೋಗಿ ಆದಿತ್ಯನಾಥ್‌