Tag: BSF soldier

  • ರಜೆಯಲ್ಲಿದ್ದ ಯೋಧ ಮರಳಿ ಗಡಿಯತ್ತ – ಬೀಳ್ಕೊಟ್ಟ ಗುಬ್ಬಿ ನಾಗರಿಕರು

    ರಜೆಯಲ್ಲಿದ್ದ ಯೋಧ ಮರಳಿ ಗಡಿಯತ್ತ – ಬೀಳ್ಕೊಟ್ಟ ಗುಬ್ಬಿ ನಾಗರಿಕರು

    ತುಮಕೂರು: ವರ್ಷಕೊಮ್ಮೆ ರಜೆ ಪಡೆದು ತಮ್ಮ ಮಕ್ಕಳ ಶಾಲಾ ದಾಖಲಾತಿಗೆ ಬಂದಿದ್ದ ಬಿಎಸ್‌ಫ್ ಯೋಧ ವೇಣುಗೋಪಾಲ್(Venugopal) ಕರ್ತವ್ಯ ಕರೆಗೆ ರಜೆ ಮೊಟಕುಗೊಳಿಸಿ ದೇಶ ಸೇವೆಗೆ ಗಡಿಯತ್ತ ಮರಳಿದ್ದಾರೆ.

    ವೇಣುಗೋಪಾಲ್ ಅವರು ಗುಬ್ಬಿ(Gubbi) ಪಟ್ಟಣದ 19ನೇ ವಾರ್ಡ್ ನಿವಾಸಿಗಳಾಗಿದ್ದಾರೆ. ಸೇನೆಗೆ ಮರಳುತ್ತಿರುವ ಯೋಧ ವೇಣುಗೋಪಾಲ್ ಅವರಿಗೆ ಗುಬ್ಬಿ ನಾಗರಿಕರು ಆತ್ಮೀಯ ಬೀಳ್ಕೊಡುಗೆ ನೀಡಿ, ಯುದ್ಧ ಗೆದ್ದು ಬನ್ನಿ ಎಂದು ಹಾರೈಸಿದರು. ಇದನ್ನೂ ಓದಿ:ಮೇ 17 ರಿಂದ ಮತ್ತೆ ಐಪಿಎಲ್‌ ಆರಂಭ

    ವೇಣುಗೋಪಾಲ್ ಅವರು ಕರ್ತವ್ಯಕ್ಕೆ ಮರಳುತ್ತಿರುವ ವಿಷಯ ತಿಳಿದ ತಕ್ಷಣ ಅವರ ಮನೆಗೆ ಗುಬ್ಬಿ ನಾಗರಿಕರ ತಂಡವೊಂದು ಧಾವಿಸಿದ ಸನ್ಮಾನ ಮಾಡಿದರು. ಶತ್ರು ಪಾಕಿಸ್ತಾನದ(Pakistan) ವಿರುದ್ಧ ಸೆಣಸಾಡಿ, ವೀರ ಗೆಲುವು ಸಾಧಿಸಿ ಕ್ಷೇಮವಾಗಿ ಮರಳಿ ಬರುವಂತೆ ಶುಭ ಕೋರಿದರು. ಇದನ್ನೂ ಓದಿ: ಎರಡೂ ಕಡೆಯಿಂದ ಒಂದೇ ಒಂದು ಗುಂಡು ಹೊಡೆಯಬಾರದು: DGMO ಸಭೆಯಲ್ಲಿ ಏನಾಯ್ತು?

  • ಲಾರಿ, ಬೈಕ್, ಅಂಬುಲೆನ್ಸ್ ನಡುವೆ ಸರಣಿ ಅಪಘಾತ – ಬಿಎಸ್‌ಎಫ್ ಯೋಧ ಸ್ಥಳದಲ್ಲೇ ಸಾವು

    ಲಾರಿ, ಬೈಕ್, ಅಂಬುಲೆನ್ಸ್ ನಡುವೆ ಸರಣಿ ಅಪಘಾತ – ಬಿಎಸ್‌ಎಫ್ ಯೋಧ ಸ್ಥಳದಲ್ಲೇ ಸಾವು

    – ಅಂಬುಲೆನ್ಸ್ ಚಾಲಕ ಗಂಭೀರ

    ವಿಜಯಪುರ: ಲಾರಿ, ಬೈಕ್ ಹಾಗೂ ಅಂಬುಲೆನ್ಸ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿದ್ದ ಬಿಎಸ್‌ಎಫ್ ಯೋಧ (BSF soldier) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ (Vijayapura) ಜಿಲ್ಲೆಯ ನಿಡಗುಂದಿ (Nidagundi) ಪಟ್ಟಣದ ಎನ್‌ಎಚ್ 50ರಲ್ಲಿ ನಡೆದಿದೆ.

    ಮುದ್ದೇಬಿಹಾಳ ತಾಲೂಕಿನ ಕಾಳಗಿ ಗ್ರಾಮದ ಮೌನೇಶ ರಾಠೋಡ್(35) ಮೃತ ಯೋಧ. ಲಾರಿ ಬೈಕ್‌ಗೆ ಡಿಕ್ಕಿಯಾದ ಬಳಿಕ ಬೈಕ್ ಸಮೇತ ಎಳೆದುಕೊಂಡು ಎದುರಿಗೆ ಬರುತ್ತಿದ್ದ ಅಂಬುಲೆನ್ಸ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಅಂಬುಲೆನ್ಸ್ ಚಾಲಕ ಕೇರಳ ಮೂಲದ ರಿತೇಶ್ ಎಂಬಾತನ ಸ್ಥಿತಿ ಚಿಂತಾಜನಕವಾಗಿದೆ. ಇದನ್ನೂ ಓದಿ: 26 ರಫೇಲ್ ಯುದ್ಧ ವಿಮಾನ ಖರೀದಿ – ಭಾರತ ಫ್ರಾನ್ಸ್ ಮಧ್ಯೆ 63,000 ಕೋಟಿ ಡೀಲ್‌ಗೆ ಅನುಮೋದನೆ

    ಕ್ರೇನ್ ಮೂಲಕ ಲಾರಿ ಹಾಗೂ ಅಂಬುಲೆನ್ಸ್ ಅನ್ನು ಬೇರ್ಪಡಿಸಿ ಚಾಲಕ ರಿತೇಶ್‌ನನ್ನ ಪೊಲೀಸರು ಹೊರ ತೆಗೆದಿದ್ದಾರೆ. ಗಾಯಾಳು ರಿತೇಶ್‌ನನ್ನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: 3.5 ಕೆಜಿ ಚಿನ್ನಾಭರಣ ದರೋಡೆ ಕೇಸ್ – ಐವರು ಅರೆಸ್ಟ್, ಓರ್ವ ಆರೋಪಿ ನೇಣಿಗೆ ಶರಣು

    ಅಪಘಾತದ ಕಾರಣ ಎನ್‌ಎಚ್ 50ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅಪಘಾತಕ್ಕೀಡಾದ ಲಾರಿ, ಅಂಬುಲೆನ್ಸ್ ಹಾಗೂ ಬೈಕ್ ತೆರವು ಮಾಡಿ ಪೊಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಅಂಬುಲೆನ್ಸ್‌ನಲ್ಲಿದ್ದ ಸಹಾಯಕನಿಗೆ ಹಾಗೂ ಲಾರಿ ಚಾಲಕ, ಕ್ಲೀನರ್‌ಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಇದನ್ನೂ ಓದಿ: ಏಪ್ರಿಲ್ 10ರಂದು ತೆರೆಗಾಣಲು ಸಜ್ಜಾದ ‘ವಿದ್ಯಾಪತಿ’!

    ಘಟನಾ ಸ್ಥಳಕ್ಕೆ ನಿಡಗುಂದಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಪಶ್ಚಿಮ ಬಂಗಾಳದಲ್ಲಿ ಬಾಗಲಕೋಟೆ ಮೂಲದ ಯೋಧ ಹುತಾತ್ಮ

    ಪಶ್ಚಿಮ ಬಂಗಾಳದಲ್ಲಿ ಬಾಗಲಕೋಟೆ ಮೂಲದ ಯೋಧ ಹುತಾತ್ಮ

    ಬಾಗಲಕೋಟೆ: ಪಶ್ಚಿಮ ಬಂಗಾಳದಲ್ಲಿ (West Bengal) ಬಾಗಲಕೋಟೆ (Bagalkot) ಮೂಲದ ಬಿಎಸ್‍ಎಫ್ ಯೋಧರೊಬ್ಬರು (BSF Soldier) ಹುತಾತ್ಮರಾಗಿದ್ದಾರೆ. ಗುಂಡು ತಗುಲಿ ಅವರು ಹುತಾತ್ಮರಾಗಿರುವ ಶಂಕೆ ವ್ಯಕ್ತವಾಗಿದೆ.

    ಹುತಾತ್ಮ ಯೋಧನನ್ನು ಗುಳೇದಗುಡ್ಡದ ತಾಲ್ಲೂಕಿನ ಕಟಗೇರಿ ಉಮೇಶ್ ದಬಗಲ್ (33) ಎಂದು ಗುರುತಿಸಲಾಗಿದೆ. ಅವರು 13 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಪ್ರಸ್ತುತ ಅವರು ಬಿಎಸ್‍ಎಫ್ 05 ಬಟಾಲಿಯನ್‍ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಬುಧವಾರ ಬೆಳಿಗ್ಗೆ ಅವರು ಸಾವನ್ನಪ್ಪಿದ್ದಾರೆ ಎಂದು ಸೇನೆಯ ಮೂಲಗಳು ತಿಳಿಸಿವೆ.

    ಶುಕ್ರವಾರ ಅವರ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ತಲುಪಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ಅನಾರೋಗ್ಯದಿಂದ ಕರ್ತವ್ಯನಿರತ ಬಿಎಸ್ಎಫ್ ಯೋಧ ನಿಧನ

    ಅನಾರೋಗ್ಯದಿಂದ ಕರ್ತವ್ಯನಿರತ ಬಿಎಸ್ಎಫ್ ಯೋಧ ನಿಧನ

    ಚಿಕ್ಕೋಡಿ: ಬೆಳಗಾವಿ (Belagavi) ಜಿಲ್ಲೆಯವರಾದ ಬಿಎಸ್‌ಎಫ್‌ ಯೋಧ (BSF Soldier) ಸದ್ದಾಂ ಜಮಾದಾರ್‌ (33) ಅವರು ಅನಾರೋಗ್ಯದ ಕಾರಣದಿಂದಾಗಿ ಕರ್ತವ್ಯದಲ್ಲಿ ಇದ್ದಾಗಲೇ ಗುಜರಾತ್‌ನ (Gujarat) ಬುಜ್‌ನಲ್ಲಿ ನಿಧನರಾಗಿದ್ದಾರೆ.

    ಸದ್ದಾಂ ಅವರು ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಬಿರೇಶ್ವರ ನಗರದವರು. ಇತ್ತೀಚಿಗೆ ರಜೆ ಪಡೆದು ಊರಿಗೆ ಬಂದು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದರು. ಮಂಗಳವಾರ ಯೋಧನ ಪಾರ್ಥಿವ ಶರೀರ ಸಂಕೇಶ್ವರ ಪಟ್ಟಣಕ್ಕೆ ಆಗಮಿಸಲಿದೆ. ಇದನ್ನೂ ಓದಿ: ಮಹಾರಾಷ್ಟ್ರ ಮಾಜಿ ಸಚಿವ ದೇಶ್‌ಮುಖ್‌ ಜಾಮೀನು ನೀಡಿ ಕೆಲ ಹೊತ್ತಲ್ಲೇ ತಡೆ ಹಿಡಿದ ಬಾಂಬೆ ಕೋರ್ಟ್‌

    ಸದ್ದಾಂ ಜಮಾದಾರ್‌ ಅವರಿಗೆ ಇತ್ತೀಚೆಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಆದರೆ ಅಕಾಲಿಕವಾಗಿ ನಿಧನ ಹೊಂದಿದ್ದು, ಅತೀವ ದುಃಖ ಉಂಟಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಅಣ್ಣತಂಮ್ಮದಿರನ್ನು ಅಗಲಿದ್ದಾರೆ.

    ನಾಳೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಮಗನ ಅಕಾಲಿಕ ನಿಧನದಿಂದ ಸದ್ದಾಂ ಜಮಾದಾರ್‌ ಅವರ ಕುಟುಂಬದಲ್ಲಿ ಶೋಕ ಮುಡುಗಟ್ಟಿದೆ. ಇದನ್ನೂ ಓದಿ: ನಿಮ್ಮ ಸಾಧನೆ ಎಲ್ಲರಿಗೂ ಗೊತ್ತು – ರೊನಾಲ್ಡೊಗೆ ಭಾವನಾತ್ಮಕ ಸಂದೇಶ ರವಾನಿಸಿದ ಕೊಹ್ಲಿ

    Live Tv
    [brid partner=56869869 player=32851 video=960834 autoplay=true]

  • ಬಾಂಗ್ಲಾ ಗಡಿಯಲ್ಲಿ ಧಾರವಾಡದ BSF ಯೋಧ ಹೃದಯಾಘಾತದಿಂದ ಸಾವು

    ಬಾಂಗ್ಲಾ ಗಡಿಯಲ್ಲಿ ಧಾರವಾಡದ BSF ಯೋಧ ಹೃದಯಾಘಾತದಿಂದ ಸಾವು

    ಹುಬ್ಬಳ್ಳಿ: ಬಾಂಗ್ಲಾ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಬಿಎಸ್‍ಎಫ್ ಯೋಧ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

    ತಾಲೂಕಿನ ರೊಟ್ಟಿಗವಾಡ ಗ್ರಾಮದ ಸೈನಿಕ ಗಂಗಾಧರಯ್ಯ ಹಿರೇಮಠ (49) ಹೃದಯಾಘಾತದಿಂದ ಸಾವನ್ನಪ್ಪಿರುವ ಯೋಧ. ಗಂಗಾಧರಯ್ಯನವರು ಬಿಎಸ್‍ಎಫ್ ಬೆಟಾಲಿಯನ್ 138ರಲ್ಲಿ ಕಳೆದ 28 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಸದ್ಯ ವೆಸ್ಟ್ ಬೆಂಗಾಲದ ಕುಚ್ ಬಿಹಾರ್ ಕರ್ತವ್ಯ ನಿರ್ವಹಿಸುತ್ತಿದ್ದರು. ಶನಿವಾರ ಸಂಜೆ ಕರ್ತವ್ಯದಲ್ಲಿದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಬೆಲೆ ಏರಿಕೆ – ಗೋಧಿ ಹಿಟ್ಟು, ಮೈದಾ, ರವೆ ರಫ್ತು ನಿಷೇಧ

    ಇಂದು ರಾತ್ರಿ ಸ್ವಗ್ರಾಮ ರೊಟ್ಟಿಗವಾಡಕ್ಕೆ ಯೋಧನ ಪಾರ್ಥಿವ ಶರೀರ ಆಗಮಿಸುವ ಸಾಧ್ಯತೆಯಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ ನಡೆಸಲು ತಾಲೂಕು ಆಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದನ್ನೂ ಓದಿ: ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಪಕ್ಷ ಇನ್ನಷ್ಟು ಬಲಗೊಳ್ಳಲಿದೆ: ಸಿಎಂ

    Live Tv
    [brid partner=56869869 player=32851 video=960834 autoplay=true]

  • ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ BSF ಯೋಧನ ಅಂತ್ಯಕ್ರಿಯೆ

    ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ BSF ಯೋಧನ ಅಂತ್ಯಕ್ರಿಯೆ

    ನೆಲಮಂಗಲ: ಭಾರತ ಮಾತೆಯ ಹೆಮ್ಮೆಯ ಪುತ್ರ ಬಿಎಸ್‍ಎಫ್ ಪಿಎಸ್‍ಐ ತೀವ್ರ ಹೃದಯಾಘಾತದಿಂದ ವೀರ ಮರಣವನ್ನ ಹೊಂದಿದ್ದಾರೆ.

    ಶ್ರೀನಿವಾಸಮೂರ್ತಿ (55) ಕೆಲಸದ ಸಮಯದಲ್ಲಿ ಎರಡು ದಿನದ ಹಿಂದೆ ತೀವ್ರ ಹೃದಯಾಘಾತದಿಂದ ವೀರ ಮರಣವನ್ನಪ್ಪಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಗೋಪಾಲಪುರದ ನಿವಾಸಿಯಾಗಿರುವ ಇವರು ಪಶ್ಚಿಮ ಬಂಗಾಳದಲ್ಲಿ ಗಡಿಭಾಗದ ಭದ್ರತೆಯ ಪಿಎಸ್‍ಐ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ.

    ಮೃತರ ಪಾರ್ಥೀವ ಶರೀರ ನಿನ್ನೆ ರಾತ್ರಿ ಸ್ವ-ಗ್ರಾಮ ಗೋಪಾಲಪುರಕ್ಕೆ ಆಗಮಿಸಿದ್ದು, ಕುಟುಂಬಸ್ಥರು ಹಾಗೂ ಗ್ರಾಮದ ಜನರಿಗಾಗಿ ಕೆಲಕಾಲ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ನಂತರ ಅವರ ಜಮೀನಿನಲ್ಲಿ ಸೇನಾಪಡೆಯ ವತಿಯಿಂದ ಸಕಲ ಸರ್ಕಾರಿ ಗೌರವಗಳೊಂದಿಗೆ ರಾಷ್ಟ್ರ ಧ್ವಜವನ್ನ ಇಡಲಾಯಿತು. ಬಳಿಕ ಕುಟುಂಬಸ್ಥರಿಗೆ ಧ್ವಜವನ್ನು ಹಸ್ತಾಂತರಿಸಿ ಗೌರವದೊಂದಿಗೆ ವೀರ ಸೇನಾನಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಇದನ್ನೂ ಓದಿ: ಚಿಟ್ ಫಂಡ್ ಹೆಸರಿನಲ್ಲಿ 6 ಕೋಟಿಗೂ ಹೆಚ್ಚು ಹಣ ದೋಖಾ – ಆರೋಪಿ ಅರೆಸ್ಟ್

    ಈ ವೇಳೆ ಕುಟುಂಬಸ್ಥರು, ಸೇನಾ ಅಧಿಕಾರಿಗಳು ಹಾಗೂ ಮಾದನಾಯಕನಹಳ್ಳಿ ಪೊಲೀಸರು ಉಪಸ್ಥಿತರಿದ್ದರು.

  • ಬೀದರ್‌ನ ಯೋಧ ಪಂಜಾಬ್ ಗಡಿಯಲ್ಲಿ ಆತ್ಮಹತ್ಯೆ

    ಬೀದರ್‌ನ ಯೋಧ ಪಂಜಾಬ್ ಗಡಿಯಲ್ಲಿ ಆತ್ಮಹತ್ಯೆ

    ಬೀದರ್: ಪಂಜಾಬ್ ಗಡಿಯಲ್ಲಿ ಬೀದರ್‌ನ ಬಿಎಸ್‍ಎಫ್ ಯೋಧ ಸಾವು ಪ್ರಕರಣ ತಿರುವು ಪಡೆದುಕೊಂಡಿದ್ದು, ಪಂಜಾಬ್ ಗಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಸದ್ಯ ಲಭ್ಯವಾಗಿವೆ.

    ಪಂಜಾಬ್ ನ ಇಂಡೋ-ಪಾಕ್ ಗಡಿಯಲ್ಲಿ ಬೀದರ್ ನ ಬಿಎಸ್‍ಎಫ್ ಯೋಧ ಬಸವರಾಜ್ ಗಣಪತಿ 66ರ ಬೆಟಾಲಿಯನ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಯೋಧನ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಯೋಧನ ಆತ್ಮಹತ್ಯೆ ಬಗ್ಗೆ 66ರ ಬಟಾಲಿಯನ್ ಬಿಎಸ್‍ಎಫ್ ಕಮಾಂಡರ್ ಸುರೇಂದ್ರ ಕುಮಾರ್ ರಿಂದ ಬೀದರ್ ಪೊಲೀಸರಿಗೆ ಮಾಹಿತಿ ರವಾನೆಯಾಗಿದೆ.

    ನಾಳೆ ಔರಾದ್ ತಾಲೂಕಿನ ಆಲೂರು ಕೆ ಸ್ವಗ್ರಾಮಕ್ಕೆ ಬಿಎಸ್‍ಎಫ್ ಯೋಧ ಬಸವರಾಜ್ ಗಣಪತಿ ಪಾರ್ಥಿವ ಶರೀರ ಬರಲಿದ್ದು, ಸ್ವ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿಸಲಾಗಿದೆ.

  • ಗೋಕಳ್ಳರ ಬಾಂಬ್ ದಾಳಿಗೆ ಕೈ ಕಳೆದುಕೊಂಡ ಯೋಧ

    ಗೋಕಳ್ಳರ ಬಾಂಬ್ ದಾಳಿಗೆ ಕೈ ಕಳೆದುಕೊಂಡ ಯೋಧ

    ಕೊಲ್ಕತ್ತಾ: ಬಾಂಗ್ಲಾ ಮೂಲದ ಗೋವು ಕಳ್ಳರ ಗುಂಪೊಂದು ನಡೆಸಿದ ಬಾಂಬ್ ದಾಳಿಗೆ ಬಿಎಸ್‍ಎಫ್ ಯೋಧರೊಬ್ಬರು ತಮ್ಮ ಕೈ ಕಳೆದುಕೊಂಡ ಘಟನೆ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ನಡೆದಿದೆ.

    ಉತ್ತರ 24 ಪರಗಣ ಜಿಲ್ಲೆಯಲ್ಲಿ ಅಂಗ್ರೇಲ್ ಗಡಿಯ ಭಾಗದಲ್ಲಿ ಈ ಘಟನೆ ನಡೆದಿದೆ. ಗುರುವಾರ ನಸುಕಿನ ಜಾವ 3.30ರ ಹೊತ್ತಿಗೆ ಅಂಗ್ರೇಲ್ ಗಡಿಯ ಪೋಸ್ಟ್ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿಎಸ್‍ಎಫ್ ಪೇದೆ ಅನಿಸುರ್ ರೆಹಮಾನ್ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ.

    ಗಡಿಯಿಂದ ಕೇವಲ 200 ಮೀ. ದೂರದಲ್ಲಿ ಗೋವು ಕಳ್ಳರು ಅಕ್ರಮವಾಗಿ ನುಸುಳುತ್ತಿರುವುದನ್ನ ಯೋಧ ಗಮನಿಸಿದ್ದಾರೆ. ಆಗ ತಕ್ಷಣ ಸ್ಥಳಕ್ಕೆ ಬಂದು ನೋಡಿದಾಗ 25ಕ್ಕೂ ಹೆಚ್ಚು ಬಾಂಗ್ಲಾದೇಶಿ ಗೋಕಳ್ಳರು ಗಡಿಯೊಳಗೆ ನುಗ್ಗಿ ಗೋವುಗಳನ್ನು ಎಳೆದುಕೊಂದು ಹೋಗುತ್ತಿದ್ದುದನ್ನು ನೋಡಿದ್ದಾರೆ. ಅವರೊಂದಿಗೆ ಸ್ಥಳೀಯರು ಗೋವು ಕಳ್ಳರಿಗೆ ಸಾಥ್ ನೀಡುತ್ತಿರುವುದು ಬೆಳಕಿಗೆ ಬಂದಿದೆ. ಈ ವೇಳೆ ಅವರನ್ನು ತಡೆಯಲು ಹೋದ ಯೋಧರ ಮೇಲೆ ಹಲ್ಲೆ ನಡೆಸಿ, ಬಾಂಬ್ ದಾಳಿ ಮಾಡಿದ್ದಾರೆ.

    ಯೋಧ ರೆಹಮಾನ್ ಅವರನ್ನು ಕಂಡ ಕೂಡಲೇ ಅವರನ್ನು ಸುತ್ತುವರಿದ ಗೋವುಕಳ್ಳರು ಹಾಗೂ ಸ್ಥಳೀಯರು ಮೊದಲು ಅವರನ್ನು ಮನಬಂದಂತೆ ಥಳಿಸಿದ್ದಾರೆ. ನಂತರ ಎರಡು ಕಚ್ಚಾ ಬಾಂಬ್‍ಗಳನ್ನು ಎಸೆದು ಎಸ್ಕೇಪ್ ಆಗಿದ್ದಾರೆ. ಇದೇ ವೇಳೆ ಆತ್ಮರಕ್ಷಣೆಗಾಗಿ ಯೋಧ ಕೂಡ ಗುಂಡಿನ ಪ್ರತಿದಾಳಿ ನಡೆಸಿದ್ದಾರೆ.

    ಬಾಂಬ್ ದಾಳಿಯಿಂದ ರೆಹಮಾನ್ ಅವರ ಶ್ವಾಸಕೋಶ ಹಾಗೂ ಹೊಟ್ಟೆಯ ಭಾಗಕ್ಕೆ ತೀವ್ರವಾಗಿ ಪೆಟ್ಟು ಬಿದ್ದಿದ್ದು, ಬಲಗೈ ಸಂಪೂರ್ಣ ತುಂಡಾಗಿದೆ. ಅಲ್ಲದೆ ಯೋಧರ ಪ್ರತಿದಾಳಿಗೆ ಕೆಲ ಗೋವು ಕಳ್ಳರು ಕೂಡ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಗಾಯಗೊಂಡಿರುವ ರೆಹಮಾನ್ ಅವರು ಬನ್‍ಗಾಂವ್‍ನಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಈ ದಾಳಿ ನಡೆದ ವೇಳೆ ಇತರೆ ಯೋಧರು ಸ್ಥಳಕ್ಕೆ ಬರುವಷ್ಟರಲ್ಲಿ ಗೋವು ಕಳ್ಳಲು ಪರಾರಿಯಾಗಿದ್ದರು. ಆ ಸಮಯದಲ್ಲಿ ಕತ್ತಲಿದ್ದ ಕಾರಣಕ್ಕೆ ಅವರನ್ನು ನಾವು ಹಿಡಿಯಲು ಸಾಧ್ಯವಾಗಿಲ್ಲ ಎಂದು ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಬುಧವಾರದಂದು ಮುರ್ಶಿದಾಬಾದ್ ಜಿಲ್ಲೆಯ ಬಾಂಗ್ಲಾ ಗಡಿಯಲ್ಲಿ 200 ಬಾಂಗ್ಲಾ ಮೂಲದ ಗೋವು ಕಳ್ಳರ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ವೇಳೆ ಅವರ ಮೇಲೆ ಬಿಎಸ್‍ಎಫ್ ಪಡೆ ದಾಳಿ ನಡೆಸಿತ್ತು. ಆಗ ಅವರ ಬಳಿ ಇದ್ದ 107 ಎಮ್ಮೆಗಳನ್ನು ವಶಕ್ಕೆ ಪಡೆದಿತ್ತು.

  • ಮೊಣಕಾಲುದ್ದ ನೀರಿನ ಮಧ್ಯೆಯೂ ರೈಫಲ್ ಹಿಡಿದು ನಿಂತ ಬಿಎಸ್‍ಎಫ್ ಯೋಧನ ಫೋಟೋ ವೈರಲ್

    ಮೊಣಕಾಲುದ್ದ ನೀರಿನ ಮಧ್ಯೆಯೂ ರೈಫಲ್ ಹಿಡಿದು ನಿಂತ ಬಿಎಸ್‍ಎಫ್ ಯೋಧನ ಫೋಟೋ ವೈರಲ್

     

    ನವದೆಹಲಿ: ಗಡಿಯಲ್ಲಿ ಸೈನಿಕರು ಚಳಿ, ಮಳೆ, ಗಾಳಿಯನ್ನು ಲೆಕ್ಕಿಸದೆ ದೇಶ ಕಾಯುತ್ತಾರೆ ಅನ್ನೋದು ಉತ್ಪ್ರೇಕ್ಷೆಯ ಮಾತಲ್ಲ. ಇದಕ್ಕೆ ಉದಾಹರಣೆ ಎಂಬಂತೆ ಭದ್ರತಾ ಪಡೆಯ ಯೋಧರೊಬ್ಬರು ಮೊಣಕಾಲುದ್ದ ನೀರು ನಿಂತಿದ್ದರೂ ಅದರ ಮಧ್ಯೆಯೇ ರೈಫಲ್ ಹಿಡಿದು ಕಾರ್ಯ ನಿರ್ವಹಿಸುತ್ತಿರೋ ಫೋಟೋವೊಂದು ಈಗ ವೈರಲ್ ಆಗಿದೆ.

    ಮೇಜರ್ ಸುರೇಂದರ್ ಪೂನಿಯಾ ಟ್ವಿಟ್ಟರ್‍ನಲ್ಲಿ ಈ ಫೋಟೋವನ್ನು ಹಂಚಿಕೊಂಡಿದ್ದು, ಏನೇ ಆಗಲಿ…ಎಲ್ಲಾದ್ರೂ ಆಗಲಿ…ನಿನ್ನೆ, ಇಂದು, ನಾಳೆ ಮತ್ತು ಯಾವಾಗ್ಲೂ…ನೀವು ನನ್ನನ್ನು ಇಲ್ಲಿ ನೋಡ್ತೀರ- ಭಾರತೀಯ ಯೋಧ. ಜೈ ಹಿಂದ್ ಎಂದು ಟ್ವೀಟ್ ಮಾಡಿದ್ದಾರೆ. ಇದಕ್ಕೆ ಈಗಾಗಲೇ 15 ಸಾವಿರಕ್ಕೂ ಹೆಚ್ಚು ಟ್ವಿಟ್ಟರ್ ಬಳಕೆದಾರರು ಲೈಕ್ ಮಾಡಿದ್ದು, 5 ಸಾವಿರಕ್ಕೂ ಹೆಚ್ಚು ಬಾರಿ ರೀಟ್ವೀಟ್ ಆಗಿದೆ.

    ಸೈನಿಕರ ಕರ್ತವ್ಯನಿಷ್ಠೆಯನ್ನು ಸಾರುವ ಅನೇಕ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುತ್ತವೆ.

    https://twitter.com/MajorPoonia/status/882446277341888512