Tag: BSF soldiers

  • ಬೆಂಗಳೂರಿನ BSF ಯೋಧರಿಂದ ಸ್ವಚ್ಛತಾ ಅಭಿಯಾನ

    ಬೆಂಗಳೂರಿನ BSF ಯೋಧರಿಂದ ಸ್ವಚ್ಛತಾ ಅಭಿಯಾನ

    ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜಯಂತಿ (ಅ.2) ಹಿನ್ನೆಲೆಯಲ್ಲಿ ‘1ನೇ ತಾರೀಖು, ಒಂದು ಗಂಟೆ’ ಘೋಷವಾಕ್ಯದೊಂದಿಗೆ ‘ಸ್ವಚ್ಛತಾ ಹೀ ಸೇವಾ’ (Swachhata Hi Seva) ಸ್ವಚ್ಛತಾ ಅಭಿಯಾನವನ್ನು ಬೆಂಗಳೂರಿನ ಭಾರತೀಯ ಗಡಿ ಭದ್ರತಾ ಪಡೆಯ ಯೋಧರು (BSF Soldiers) ಹಮ್ಮಿಕೊಂಡಿದ್ದರು.

    ಯಲಹಂಕದ ಸೆಡ್ಕೋ, BSF ಟೆಕ್ನಿಕಲ್ ಟ್ರೈನಿಂಗ್ ಸೆಂಟರ್‌ನ ಆವರಣದಲ್ಲಿ ಆಯೋಜನೆ ಮಾಡಿದ್ದ ಅಭಿಯಾನದಲ್ಲಿ, 500ಕ್ಕೂ ಹೆಚ್ಚು ಬಿಎಸ್‌ಎಫ್‌ ಯೋಧರು ಹಾಗೂ ತರಬೇತಿದಾರರು, ಬಾರ್ಡರ್ ವುಮೆನ್ಸ್ wives ಅಸೋಸಿಯೇಷನ್ ಸದಸ್ಯರು ಭಾಗಿಯಾಗಿದ್ದರು. ಟ್ರೈನಿಂಗ್ ಸೆಂಟರ್‌ನ ಆವರಣದ ಮೂಲೆ ಮೂಲೆಯನ್ನ ಸ್ವಚ್ಛಗೊಳಿಸಿದರು. ಇದನ್ನೂ ಓದಿ: ಗಾಂಧಿ ಜಯಂತಿ ವಿಶೇಷ – ಸ್ವಚ್ಛಾಂಜಲಿ ಅರ್ಪಿಸಿದ ಮೋದಿ

    BSF ಟ್ರೈನಿಂಗ್ ಸೆಂಟರ್‌ನಲ್ಲಿ ಇನ್ಫರ್ಮಿನೇಷನ್ ಟೆಕ್ನಾಲಜಿ, ಸೈಬರ್ ಸೆಕ್ಯೂರಿಟಿ, ವೆಬ್ ಡಾಟಾ ಆ್ಯಂಡ್ ಕ್ಲೌಡ್ ಕಂಪ್ಯೂಟಿಂಗ್ ಬಗ್ಗೆ ತರಬೇತಿ ನೀಡಲಾಗುತ್ತದೆ. ಈ ಎಲ್ಲಾ ತರಬೇತಿದಾರರು ಕೂಡ ಅಭಿಯಾನದಲ್ಲಿ ಭಾಗಿಯಾಗಿದ್ದರು. ಈ ವೇಳೆ ಯಲಹಂಕದ ಸೆಡ್ಕೋ, BSF ಟೆಕ್ನಿಕಲ್ ಟ್ರೈನಿಂಗ್ ಸೆಂಟರ್‌ನ ಐಜಿ ಇಪೆನ್ ಪಿವಿ ಭಾಗವಹಿಸಿದ್ದರು.

    ಇತ್ತೀಚಿನ `ಮನ್ ಕಿ ಬಾತ್’ನಲ್ಲಿ ಮೋದಿಯವರು (Narendra Modi) ಅ.1 ರಂದು ಸ್ವಚ್ಛತೆಗಾಗಿ ಒಂದು ಗಂಟೆ ಶ್ರಮದಾನ ಎಂಬ ಘೋಷಣೆಯೊಂದಿಗೆ ಕಾರ್ಯಪ್ರವೃತ್ತರಾಗುವಂತೆ ಕರೆಕೊಟ್ಟಿದ್ದರು. ಅದರಂತೆ ಸ್ವತಃ ಮೋದಿ ಅವರೇ ಭಾನುವಾರ ಕಸ ಗುಡಿಸಿ ಸ್ವಚ್ಛತಾ ಅಭಿಯಾನಕ್ಕೆ (Swachhata Abhiyan) ಚಾಲನೆ ನೀಡಿದ್ದರು. ಇದನ್ನೂ ಓದಿ: ಮೋದಿಯೊಂದಿಗೆ ಸ್ವಚ್ಛಾಂಜಲಿಯಲ್ಲಿ ಭಾಗಿಯಾಗಿದ್ದ ಅಂಕಿತ್ ಬೈಯನ್‍ಪುರಿಯಾ ಯಾರು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಟ್ಟಾರಿ- ವಾಘಾ ಗಡಿಯಲ್ಲಿ ಯೋಧರಿಗೆ ರಾಕಿ ಕಟ್ಟಿ ಸಂಭ್ರಮಿಸಿದ ಮಹಿಳೆಯರು

    ಅಟ್ಟಾರಿ- ವಾಘಾ ಗಡಿಯಲ್ಲಿ ಯೋಧರಿಗೆ ರಾಕಿ ಕಟ್ಟಿ ಸಂಭ್ರಮಿಸಿದ ಮಹಿಳೆಯರು

    ಚಂಡೀಗಢ: ಈ ಬಾರಿ ಸ್ವಾತಂತ್ರ್ಯ ದಿನ ಹಾಗೂ ರಕ್ಷಾಬಂಧನ ಹಬ್ಬ ಒಟ್ಟಿಗೆ ಬಂದಿದೆ. ಹೀಗಾಗಿ ಅಟ್ಟಾರಿ- ವಾಘಾ ಗಡಿ ಪ್ರದೇಶದಲ್ಲಿ ಇಂದು ಬಿಎಸ್‍ಎಫ್ ಯೋಧರಿಗೆ ಮಹಿಳೆಯರು ರಾಕಿ ಕಟ್ಟುವ ಮೂಲಕ ರಕ್ಷಾ ಬಂಧನ್ ಹಬ್ಬವನ್ನು ಖುಷಿಯಿಂದ ಆಚರಿಸಿದ್ದಾರೆ.

    ಇಂದು ದೇಶದಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹಾಗೆಯೇ ಇಂದು ರಕ್ಷಾಬಂಧನ ಹಬ್ಬ ಕೂಡ ಬಂದಿರುವುದು ವಿಶೇಷವಾಗಿದೆ. ಹೀಗಾಗಿ ದೇಶದ ವಿವಿಧ ಕಡೆಗಳಿಂದ ವಾಘಾ ಗಡಿಗೆ ಆಗಮಿಸಿದ್ದ ಮಹಿಳೆಯರು ಭದ್ರತಾ ಪಡೆ ಸಿಬ್ಬಂದಿಗೆ ರಾಕಿ ಕಟ್ಟುವ ಮೂಲಕ ರಕ್ಷಾ ಬಂಧನ ಹಬ್ಬದ ಶುಭಾಶಯ ಕೋರಿದರು.

    ಈ ವೇಳೆ ಪುಣೆಯಿಂದ ಬಂದಿದ್ದ ಮಹಿಳೆಯೊಬ್ಬರು ಮಾತನಾಡಿ, ಗಡಿ ಭಾಗದಲ್ಲಿ ರಕ್ಷಾ ಬಂಧನ ಆಚರಿಸುತ್ತಿರುವುದಕ್ಕೆ ತುಂಬಾ ಖುಷಿಯಾಗುತ್ತಿದೆ. ದೇಶಕ್ಕಾಗಿ ಹಗಲಿರುಳು ಶ್ರಮಪಟ್ಟು ಸೇವೆ ಸಲ್ಲಿಸುವ ಯೋಧರಿಗೆ ಧನ್ಯವಾದ ಎಂದು ಸಂತೋಷ ಹಂಚಿಕೊಂಡರು.

    ಅಷ್ಟೇ ಅಲ್ಲದೆ ಮಹಿಳೆಯರಿಂದ ರಾಕಿ ಕಟ್ಟಿಸಿಕೊಂಡ ಯೋಧರು ಕೂಡ ಪ್ರೀತಿಯಿಂದ ಸಿಹಿ ನೀಡಿ ಮಹಿಳೆಯರಿಗೆ ಶುಭಕೋರಿ ಸಂತಸಪಟ್ಟರು.

  • ನಮ್ಮನ್ನು ನಂಬಿ ದೇಶ ಭಯವಿಲ್ಲದೆ ಮಲಗುತ್ತೆ, ತಾಪಮಾನಕ್ಕೆಲ್ಲ ನಾವು ಹೆದರಲ್ಲ: ಬಿಎಸ್‍ಎಫ್ ಯೋಧ

    ನಮ್ಮನ್ನು ನಂಬಿ ದೇಶ ಭಯವಿಲ್ಲದೆ ಮಲಗುತ್ತೆ, ತಾಪಮಾನಕ್ಕೆಲ್ಲ ನಾವು ಹೆದರಲ್ಲ: ಬಿಎಸ್‍ಎಫ್ ಯೋಧ

    ನವದೆಹಲಿ: ಗಡಿಯಲ್ಲಿ ನಾವಿದ್ದೇವೆ ಎಂದು ಜನ ಆರಾಮಾಗಿ ನೆಮ್ಮದಿಯಿಂದ ನಿದ್ರೆ ಮಾಡುತ್ತಾರೆ. ದೇಶದ ಕಾಯುವ ಯೋಧರು ತಾಪಮಾನಕ್ಕೆ ಹೆದರಲ್ಲ ಎಂಬ ಭಾರತೀಯ ಸೈನಿಕರೊಬ್ಬರ ಹೇಳಿಕೆಗೆ ಇಡೀ ದೇಶವೇ ಸಲಾಂ ಎನ್ನುತ್ತಿದೆ.

    ಬೇಸಿಗೆ ಧಗೆಗೆ ಉತ್ತರ ಭಾರತ ತತ್ತರಿಸಿ ಹೋಗಿದ್ದು, ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲೂ ಕೂಡ ಬಿಸಿಲ ಝಳ ಹೆಚ್ಚಿದೆ. ಹೀಗಾಗಿ ಅಲ್ಲಿನ ಜನರಿಗೆ ಮಾತ್ರವಲ್ಲದೇ ಅಲ್ಲಿ ಗಡಿ ಕಾಯುವ ಸೈನಿಕರೂ ಕೂಡ ಬಿಸಿಲಿನ ಧಗೆಗೆ ಹೈರಾಣಾಗಿದ್ದಾರೆ. ಆದರೂ ಪಟ್ಟು ಬಿಡದೆ ದೇಶಕ್ಕಾಗಿ ವೀರಯೋಧರು ಗಡಿ ಕಾಯುತ್ತಿದ್ದು, ಬಿಸಿಲಿನಲ್ಲಿ ಕೆಲಸ ಮಾಡುವುದು ಕಷ್ಟವಾಗಲ್ಲವಾ? ಎಂದು ಕೇಳಿದರೆ, ನಾವು ಯೋಧರು ದೇಶವನ್ನು ಕಾಯುವವರು. ನಾವು ಈ ತಾಪಮಾನಕ್ಕೆಲ್ಲಾ ಹೆದರಲ್ಲ ಎಂದು ಹೇಳಿ ಎಲ್ಲರ ಮನ ಗೆದ್ದಿದ್ದಾರೆ.

    ನಾವು ಗಡಿಯಲ್ಲಿ ಕಾಯುತ್ತಿದ್ದೇವೆ ಎಂಬ ನಂಬಿಕೆಯಿಂದ ದೇಶದ ಪ್ರಜೆಗಳು ನೆಮ್ಮದಿಯಿಂದ ನಿದ್ರೆ ಮಾಡುತ್ತಿದ್ದಾರೆ. ಆದ್ದರಿಂದ ತಾಪಮಾನ ಹೇಗೆ ಇರಲಿ ನಾವು ಅದನ್ನು ಎದುರಿಸುತ್ತೇವೆ. ಸದಾ ಎಚ್ಚರಿಕೆಯಿಂದ ಕೆಲಸ ಮಾಡುತ್ತೇವೆ ಎಂದು ಸುದ್ದಿಸಂಸ್ಥೆಯೊಂದಕ್ಕೆ ಸೈನಿಕರೊಬ್ಬರು ನೀಡಿರುವ ಹೇಳಿಕೆಗೆ ಎಲ್ಲರು ಸೆಲ್ಯೂಟ್ ಹೊಡೆಯುತ್ತಿದ್ದಾರೆ.

    ರಾಜಸ್ಥಾನ ಹಾಗೂ ಗುಜರಾತ್‍ನಲ್ಲಿ ಬಿಸಿಲಿನ ಬೇಗೆಗೆ ಜನರು ತತ್ತರಿಸಿ ಹೋಗಿದ್ದಾರೆ. ಈ ರಣ ಬಿಸಿಲಿನಲ್ಲೂ ನಮ್ಮ ಭಾರತೀಯ ಯೋಧರು ಮಾತ್ರ ತಾಪಮಾನಕ್ಕೆ ಹೆದರದೆ, ಬಿಸಿಲನ್ನು ಎದುರಿಸಿಕೊಂಡು ತಮ್ಮ ಕರ್ತವ್ಯ ಮಾಡುತ್ತಿದ್ದಾರೆ. ಸದ್ಯ ರಾಜಸ್ಥಾನದಲ್ಲಿ 46 ಡಿಗ್ರಿ ಸೆಲ್ಸಿಯಸ್‍ಗಿಂತ ಹೆಚ್ಚು ತಾಪಮಾನ ದಾಖಲಾಗಿದೆ. ಅದರಲ್ಲೂ ಇಲ್ಲಿನ ಚುರು ಪ್ರದೇಶದಲ್ಲಿ ಕೆಲವು ದಿನಗಳಿಂದ 50 ಡಿಗ್ರಿ ಸೆಲ್ಸಿಯಸ್ ತಾಪಮಾನವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.