Tag: BTM layout

  • ಬೀದಿ ಕಾಮಣ್ಣ ಎಸ್ಕೇಪ್‌ ಆಗಿದ್ದರ ಹಿಂದಿದೆ ಲವ್‌ ಕಹಾನಿ – ಆರೋಪಿಗೆ ಹೋಮ್‌ ಗಾರ್ಡ್ ಪ್ರೇಯಸಿ ಸಾಥ್

    ಬೀದಿ ಕಾಮಣ್ಣ ಎಸ್ಕೇಪ್‌ ಆಗಿದ್ದರ ಹಿಂದಿದೆ ಲವ್‌ ಕಹಾನಿ – ಆರೋಪಿಗೆ ಹೋಮ್‌ ಗಾರ್ಡ್ ಪ್ರೇಯಸಿ ಸಾಥ್

    ಬೆಂಗಳೂರು: ಯುವತಿಯನ್ನ ತಬ್ಬಿಕೊಂಡು ಅಸಭ್ಯ ವರ್ತನೆ ತೋರಿ ಎಸ್ಕೇಪ್‌ ಆಗಿದ್ದ ಆರೋಪಿಯನ್ನು 10 ದಿನಗಳ ನಂತರ ಸುದ್ದಗುಂಟೆಪಾಳ್ಯ ಪೊಲೀಸರು (Suddagunte Palya Police) ಕೇರಳದಲ್ಲಿ ಬಂಧಿಸಿದ್ದಾರೆ. ಆದ್ರೆ ಕೃತ್ಯ ಎಸಗಿದ ಬಳಿಕ ಆರೋಪಿ ಕೇರಳಕ್ಕೆ (Kerala) ಹೋಗೋದಕ್ಕೆ ಆತನ ಪ್ರೇಯಸಿ ಹೋಮ್‌ ಗಾರ್ಡ್‌ ಸಾಥ್‌ ನೀಡಿದ್ದಾಳೆ ಎಂದು ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ.

    ಹೌದು. ಭಾನುವಾರ (ಏ.13) ಕೇರಳದ ಹಳ್ಳಿಯೊಂದರಲ್ಲಿ ಆರೋಪಿ ಸಂತೋಷ್ ಡೇನಿಯಲ್‌ನನ್ನು ಬಂಧಿಸಿದ್ದ ಪೊಲೀಸರು ಬೆಳಗ್ಗೆ ಬೆಂಗಳೂರಿಗೆ ಕರೆತಂದಿದ್ದರು. ಕೋರ್ಟ್‌ಗೆ ಹಾಜರುಪಡಿಸುವುದಕ್ಕೂ ಮುನ್ನ ನಡೆದ ವಿಚಾರಣೆ ವೇಳೆ ಆರೋಪಿ ಕೃತ್ಯ ಎಸಗಿದ್ದು ತಾನೇ ಎಂಬುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ನಡುವೆ ಆರೋಪಿ ಸಂತೋಷ್ ಮೇಲೆ ಜಯನಗರ ಪೊಲೀಸ್ ಠಾಣೆಯಲ್ಲಿ (Jayanagara Police Station) ಈ ಹಿಂದೆ ದಾಖಲಾಗಿದ್ದ ಕಳ್ಳತನ ಕೇಸ್ ಪತ್ತೆ ಮಾಡಿ ಫೋನ್ ನಂಬರ್ ಟ್ರ್ಯಾಕ್ ಮಾಡೋಕೆ ಶುರುಮಾಡಿದ್ದಾರೆ. ದನ್ನೂ ಓದಿ: ಯುವತಿಯನ್ನ ತಬ್ಬಿಕೊಂಡು ಅಸಭ್ಯ ವರ್ತನೆ ಪ್ರಕರಣ – 10 ದಿನಗಳ ಬಳಿಕ ಬೀದಿ ಕಾಮಣ್ಣ ಅರೆಸ್ಟ್‌

    ಕೃತ್ಯ ಎಸಗಿದ ಬಳಿಕ ಆರೋಪಿ ಕೇರಳದಲ್ಲಿರುವ ತನ್ನ ಸ್ನೇಹಿತನ ಮನೆಗೆ ಹೋಗಿದ್ದನಂತೆ. ಬೆಂಗಳೂರಲ್ಲಿ ಡ್ರೈವಿಂಗ್ ಕೆಲಸ (Driving Work) ಮಾಡುತ್ತಿದ್ದಾಗ ಪರಿಚಯವಾಗಿದ್ದ ಸ್ನೇಹಿತ‌‌ ಮನೆಗೆ ಹೋಗಿ ಆಶ್ರಯ ಪಡೆದುಕೊಂಡಿದ್ದನಂತೆ. ಅಲ್ಲದೇ ಆರೋಪಿ ಎಸ್ಕೇಪ್ ಆಗಿದ್ದರ ಹಿಂದೆ ಲವ್ ಸ್ಟೋರಿಯ ಮಾತುಗಳು ಕೇಳಿಬರ್ತಿವೆ. ಪ್ರಕರಣ ದಾಖಲಿಸಿದಾಗಿನಿಂದ ಪೊಲೀಸರ ಹುಡುಕಾಟದ ಇಂಚಿಚೂ ಮಾಹಿತಿಯನ್ನ ಸಂತೋಷ್‌ನ ಹೋಮ್‌ ಗಾರ್ಡ್ ಪ್ರೇಯಸಿ ನೀಡಿದ್ದಾಳೆ. ಟಿವಿ ನೋಡಿಕೊಂಡು ಆರೋಪಿ‌ ತಪ್ಪಿಸಿಕೊಳ್ಳಲು ಹೋಮ್‌ ಗಾರ್ಡ್ ಪ್ರೇಯಸಿ ಸಹಾಯ ಮಾಡಿದ್ದಾಳೆ. ಪೊಲೀಸರು ನಿನ್ನನ್ನ ಹುಡುಕುತ್ತಿದ್ದಾರೆ ಹುಷಾರು ಅಂತ ಅಲರ್ಟ್‌ ಮಾಡಿದ್ದಾಳೆ. 2 ದಿನದ ಬಳಿಕ ಹೊಸ ಸಿಮ್ ಖರೀದಿ ಮಾಡಿ ಪ್ರಿಯಕರ ಸಂತೋಷನಿಗೆ ಪ್ರೇಯಸಿ ನೀಡಿದ್ದಾಳೆ. ಸಂತೋಷ್ ಜೊತೆಯೇ ಬಸ್ ಹಿಡಿದು ಕೇರಳಕ್ಕೆ ಕೂಡ ಹೋಗಿದ್ದಾಳೆ. ಹೊಸ ಸಿಮ್‌ನಲ್ಲಿ ತಾಯಿಗೆ ಕರೆ ಮಾಡಿ ಕೇರಳದಲ್ಲಿರೋದಾಗಿ ಸಂತೋಷ್ ತಿಳಿಸಿದ್ದಾನೆ‌. ದನ್ನೂ ಓದಿ: ಶಿವಮೊಗ್ಗದ ಲಾಡ್ಜ್‌ನಲ್ಲಿ ಹುಬ್ಬಳ್ಳಿ ಮೂಲದ ಉದ್ಯಮಿ ಅನುಮಾನಾಸ್ಪದ ಸಾವು

    ಮಾಹಿತಿ ಆಧರಿಸಿ ಆರೋಪಿ ಮೊಬೈಲ್ ನಂಬರ್ ಟ್ರೇಸ್ ಮಾಡಿ ಲೊಕೆಷನ್‌ ಪಡೆದಿಕೊಂಡ ಪೊಲೀಸರು ಕೇರಳದ ಕೋಝಿಕೋಡ್‌ನ ಲಾಡ್ಜ್‌ನಲ್ಲಿದ್ದಾಗ ಇಬ್ಬರನ್ನೂ ಬಂಧಿಸಿದ್ದಾರೆ. ದನ್ನೂ ಓದಿ:  ಗುಜರಾತ್‌ ಕರಾವಳಿಯಲ್ಲಿ ಭರ್ಜರಿ ಬೇಟೆ – 1,800 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ

  • ಯುವತಿಯನ್ನ ತಬ್ಬಿಕೊಂಡು ಅಸಭ್ಯ ವರ್ತನೆ ಪ್ರಕರಣ – 10 ದಿನಗಳ ಬಳಿಕ ಬೀದಿ ಕಾಮಣ್ಣ ಅರೆಸ್ಟ್‌

    ಯುವತಿಯನ್ನ ತಬ್ಬಿಕೊಂಡು ಅಸಭ್ಯ ವರ್ತನೆ ಪ್ರಕರಣ – 10 ದಿನಗಳ ಬಳಿಕ ಬೀದಿ ಕಾಮಣ್ಣ ಅರೆಸ್ಟ್‌

    – ಮೂರು ರಾಜ್ಯ, 700 ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ

    ಬೆಂಗಳೂರು: ಯುವತಿಯೊಂದಿಗೆ ಅಸಭ್ಯ ವರ್ತನೆ ತೋರಿ ಎಸ್ಕೇಪ್‌ ಆಗಿದ್ದ ಕಾಮುಕ ಆರೋಪಿಯನ್ನು 10 ದಿನಗಳ ನಂತರ ಸುದ್ದಗುಂಟೆಪಾಳ್ಯ ಪೊಲೀಸರು (Suddagunte Palya) ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಬಂಧಿತ ಆರೋಪಿಯನ್ನು ಸಂತೋಷ್ ಡೇನಿಯಲ್ ಎಂದು ಗುರುತಿಸಲಾಗಿದೆ, ಈತ ಬೆಂಗಳೂರಿನ ಶೋರೂಮ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಕಳೆದ ಏಪ್ರಿಲ್‌ 3ರ ಮಧ್ಯರಾತ್ರಿ ಬೆಂಗಳೂರಿನ ಬಿಟಿಎಂ ಲೇಔಟ್‌ನ (BTM Layout) ಓಣಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಹಿಂದಿನಿಂದ ತಬ್ಬಿಕೊಂಡು ಯುವಕ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದ. ಈತನಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು. ಇದನ್ನೂ ಓದಿ: ಮಧ್ಯರಾತ್ರಿ ಎದೆ ಮುಟ್ಟಿ ಯುವಕನ ಅಸಭ್ಯ ವರ್ತನೆ ಕೇಸ್‌ – ಯುವತಿಯನ್ನು ಪತ್ತೆ ಹಚ್ಚೋದೆ ದೊಡ್ಡ ಸವಾಲು

    Man molests woman on isolated Bengaluru street a big challenge to find the young woman

    3 ರಾಜ್ಯ, 700 ಸಿಸಿಟಿವಿ ಪರಿಶೀಲನೆ:
    ಘಟನೆ ಸಂಬಂಧ ಪ್ರಕರಣದ ದಾಖಲಿಸಿಕೊಂಡಿದ್ದ ಪೊಲೀಸರು ಬೀದಿ ಕಾಮಣ್ಣನಿಗಾಗಿ ತೀವ್ರ ಹುಡುಕಾಟ ನಡೆಸಿದ್ದರು. 4 ವಿಶೇಷ ತಂಡಗಳನ್ನು ರಚಿಸಿ ಆರೋಪಿ ಮತ್ತು ಸಂತ್ರಸ್ತ ಯುವತಿಯ ಪತ್ತೆಗೆ ಇಳಿದಿದ್ದರು. ತನಿಖೆ ವೇಳೆ ಸುಮಾರು 700 ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದರು. ಕೊನೆಗೆ ಕೇರಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿ ತಮಿಳುನಾಡಿನ ಹೊಸೂರಿಗೆ ಪರಾರಿಯಾಗಿದ್ದ, ನಂತರ ಸೇಲಂ, ಬಳಿಕ ಕೇರಳದ ಕೋಝಿಕೋಡ್‌ಗೆ ಪರಾರಿಯಾಗಿದ್ದ. ಕೊನೆಗೆ ಕೇರಳದ ಹಳ್ಳಿಯೊಂದರಲ್ಲಿ ಭಾನುವಾರ (ಏ.13) ಸಿಕ್ಕಿಬಿದ್ದಿದ್ದಾನೆ.

    ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಕೋರಮಂಗಲ ನ್ಯಾಯಾಧೀಶರ ನಿವಾಸಕ್ಕೆ ಹಾಜರು ಪಡಿಸಿ ಕಸ್ಟಡಿಗೆ ಪಡೆದುಕೊಳ್ಳಲು ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಕೊಲೆ ಪ್ರಕರಣ – ಮೃತ ಬಾಲಕಿ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 10 ಲಕ್ಷ ಪರಿಹಾರ

    ಏನಿದು ಪ್ರಕರಣ?
    ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಹಿಂಬಾಲಿಸಿ ಬಂದ ಯುವಕನೊಬ್ಬ ಬಲವಂತವಾಗಿ ತಬ್ಬಿಕೊಳ್ಳಲು ಯತ್ನಿಸಿ ಎದೆಯ ಭಾಗವನ್ನು ಮುಟ್ಟಿ ಪರಾರಿಯಾಗಿದ್ದ. ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನ 1ನೇ ಕ್ರಾಸ್‌ನಲ್ಲಿ ಏಪ್ರಿಲ್ 3ರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಈ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಘಟನೆ ಸಂಬಂಧ ಸ್ಥಳೀಯ ನಿವಾಸಿಯೊಬ್ಬರ ದೂರು ಆಧರಿಸಿ, ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಘಟನೆ ಸಂಬಂಧ ಸಂತ್ರಸ್ತ ಯುವತಿಯರು ದೂರು ನೀಡಿಲ್ಲ. ಆದರೆ ಸ್ಥಳೀಯ ನಿವಾಸಿಯೊಬ್ಬರು ಸಿಸಿಟಿವಿ ಕ್ಯಾಮೆರಾ ದೃಶ್ಯದೊಂದಿಗೆ ಠಾಣೆಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಸುಳ್ಳು ಕೇಸ್‌ ಹಾಕಿ ಪತ್ನಿಯಿಂದ ಕಿರುಕುಳ ಆರೋಪ – ರಾಜಭವನದ ಮುಂಭಾಗ ಟೆಕ್ಕಿ ಆತ್ಮಹತ್ಯೆಗೆ ಯತ್ನ

  • ಜೆಡಿಎಸ್‍ನ ಮಾಜಿ ಕಾರ್ಪೋರೇಟರ್ ಅರೆಸ್ಟ್

    ಜೆಡಿಎಸ್‍ನ ಮಾಜಿ ಕಾರ್ಪೋರೇಟರ್ ಅರೆಸ್ಟ್

    ಬೆಂಗಳೂರು: 176ನೇ ವಾರ್ಡ್‍ನ ಜೆಡಿಎಸ್ ಮಾಜಿ ಕಾರ್ಪೋರೇಟರ್ ದೇವದಾಸ್‍ರನ್ನು ಮದನಪಲ್ಲಿ ಪೊಲೀಸರಿಂದ ಬಂಧಿಸಲಾಗಿದೆ.

    ದೇವದಾಸ್ ಅವರು 2015 ರಿಂದ 20 ರವರೆಗೆ 176 ವಾರ್ಡ್‍ನಲ್ಲಿ ಕಾರ್ಪೋರೇಟರ್ ಆಗಿದ್ದರು. ವಂಚನೆ ಪ್ರಕರಣ ಆರೋಪದ ಹಿನ್ನೆಲೆ ಅವರನ್ನು ಇಂದು ಬಂಧಿಸಲಾಗಿದೆ. ಅವರು 1 ಕೋಟಿ ವಂಚಿಸಿದ್ದಾರೆಂದು ಮದಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದನ್ನೂ ಓದಿ: ಬಿಜೆಪಿ ಶಾಸಕನಿಂದ 25 ವರ್ಷದ ಯುವತಿ ಕಿಡ್ನಾಪ್ – ಕೇಸ್ ದಾಖಲು

    ಮದನಪಲ್ಲಿ ಶಾಸಕ ಮಹಮ್ಮದ್ ನವಾಝ್ ಪಾಷಾ ಎಂಬವರಿಗೆ ಬಿಟಿಎಂ ಲೇಔಟ್‍ನಲ್ಲಿ ಜಾಗ ಕೊಡಿಸುವುದಾಗಿ ವಂಚಿಸಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ. ಇದನ್ನೂ ಓದಿ: ಹಿಜಬ್ ಗಲಾಟೆ ಬೆನ್ನಲ್ಲೇ ರಾಜೀನಾಮೆ ನೀಡಿದ ಬೆಂಗಳೂರು ಶಿಕ್ಷಕಿ

    ಎಮ್‍ಎಲ್‍ಎಯು 75 ಲಕ್ಷ ರೂ. ನಗದು ಮತ್ತು 25 ಲಕ್ಷ ರೂ. ಬ್ಯಾಂಕ್ ವಿನಿಮಯ ಮಾಡಿದ್ದು, 2 ವರ್ಷದ ಹಿಂದೆಯೇ ಮದನಪಲ್ಲಿ ಶಾಸಕರಿಗೆ ಹಣ ನೀಡಿದ್ದರು. ಸದ್ಯ ಮಾಜಿ ಪಾಲಿಕೆ ಸದಸ್ಯ ದೇವದಾಸ್ ಬಿಜೆಪಿಯಲ್ಲಿದ್ದಾರೆ.

  • ಮನೆಗೆ ತಡವಾಗಿ ಬಂದ ತಮ್ಮನನ್ನು ಅಣ್ಣ ಪ್ರಶ್ನಿಸಿದ್ದೇ ತಪ್ಪಾಯ್ತು!

    ಮನೆಗೆ ತಡವಾಗಿ ಬಂದ ತಮ್ಮನನ್ನು ಅಣ್ಣ ಪ್ರಶ್ನಿಸಿದ್ದೇ ತಪ್ಪಾಯ್ತು!

    ಬೆಂಗಳೂರು: ಮನೆಗೆ ತಡವಾಗಿ ಬಂದಾಗ ಅಣ್ಣ ಪ್ರಶ್ನಿಸಿದ್ದಕ್ಕೆ ತಮ್ಮ ಶೂಟ್ ಮಾಡಿಕೊಳ್ಳಲು ಮುಂದಾದ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    ಈ ಘಟನೆ ಡಿ.20 ರ ಮುಂಜಾನೆ ನಗರದ ಬಿಟಿಎಂ ಲೇಔಟ್ ಮೊದಲನೇ ಹಂತದಲ್ಲಿ ನಡೆದಿದೆ. ಸ್ನೇಹಿತ ಫೈಜಲ್ ಜೊತೆ ಸಲ್ಮಾನ್ ಮನೆಗೆ ತಡವಾಗಿ ಬಂದಿದ್ದಾನೆ. ಹೀಗೆ ತಡವಾಗಿ ಬಂದಿದ್ದನ್ನು ನೋಡಿ ಅಣ್ಣ ಅಮಿನ್ ದಾದ ಪ್ರಶ್ನೆ ಮಾಡಿದ್ದಾನೆ. ಈ ವೇಳೆ ಇಬ್ಬರ ನಡುವೆ ಗಲಾಟೆಯಾಗಿ ಅಣ್ಣನ ಲೈಸೆನ್ಸ್ ಪಿಸ್ತೂಲ್ ತೆಗೆದುಕೊಂಡು ಶೂಟ್ ಮಾಡಿಕೊಳ್ಳಲು ಮುಂದಾಗಿದ್ದಾನೆ.

    ಅದನ್ನ ಬಿಡಿಸಲು ಹೋದಾಗ ಮೂರು ರೌಂಡ್ಸ್ ಫೈರ್ ಮಾಡಲಾಗಿದೆ. ಘಟನೆಯಲ್ಲಿ ಸಲ್ಮಾನ್ ಸ್ನೇಹಿತ ಫೈಜಲ್ ಕೈಗೆ ಗುಂಡು ತಗುಲಿದೆ. ಕೂಡಲೇ ಫೈಜಲ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

    ಘಟನೆ ಸಂಬಂಧ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಆಗಸದಲ್ಲಿ ಕೌತುಕ – ಸರತಿಸಾಲಿನಲ್ಲಿ ಗೋಚರಿಸಿದ ಅಮೆರಿಕದ 52 ಉಪಗ್ರಹಗಳು

  • ಬೆಂಗ್ಳೂರಿನ ಗರ್ಭಿಣಿಗೆ ಕೊರೊನಾ ಇಲ್ಲ, ಫಲಿತಾಂಶ ನೆಗೆಟಿವ್ – ಎಡವಟ್ ಆಗಿದ್ದು ಎಲ್ಲಿ?

    ಬೆಂಗ್ಳೂರಿನ ಗರ್ಭಿಣಿಗೆ ಕೊರೊನಾ ಇಲ್ಲ, ಫಲಿತಾಂಶ ನೆಗೆಟಿವ್ – ಎಡವಟ್ ಆಗಿದ್ದು ಎಲ್ಲಿ?

    ಬೆಂಗಳೂರು: ಬಿಟಿಎಂ ಲೇಔಟ್ ನ ಕೊರೊನಾ ಪಾಸಿಟಿವ್ ಸೋಂಕಿತೆ ಎಂದು ಬಿಂಬಿಸಲಾಗಿದ್ದ ಗರ್ಭಿಣಿ ಶೀಘ್ರವೇ ಡಿಸ್ಚಾರ್ಜ್ ಆಗಲಿದ್ದಾರೆ.

    ಖಾಸಗಿ ಲ್ಯಾಬ್ ನಲ್ಲಿ ಗರ್ಭಿಣಿಗೆ ಕೊರೊನಾ ಪರೀಕ್ಷೆ ಮಾಡಲಾಗಿತ್ತು. ಅಲ್ಲಿ ಸ್ಯಾಂಪಲ್ ಪರೀಕ್ಷೆಯ ವೇಳೆ ತಪ್ಪಾಗಿದೆ  ಎಂಬ ಮಾಹಿತಿ ಸಿಕ್ಕಿತ್ತು. ಆದಾದ ಬಳಿಕ ಎರಡನೇ ಪರೀಕ್ಷೆಯ ಮಾದರಿಯನ್ನು ಕಾಯದೇ ಏಕಾಏಕಿ ಆಡ್ಮಿಟ್ ಮಾಡಿಕೊಳ್ಳಲಾಗಿತ್ತು. ಈ ಮಧ್ಯೆ ವೈದ್ಯರು ಈ ಮಾಹಿತಿಯನ್ನು ಆರೋಗ್ಯ ಅಧಿಕಾರಿಗಳಿಗೆ ತಿಳಿಸಿದ ಪರಿಣಾಮ ಸರ್ಕಾರ ಅಧಿಕೃತವಾಗಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ನಲ್ಲಿ ಗರ್ಭಿಣಿಗೆ ಸೋಂಕು ತಗಲಿರುವುದನ್ನು ದೃಢಪಡಿಸಿತ್ತು.

    ಇಂದು ಗರ್ಭಿಣಿಯ ಪರೀಕ್ಷಾ ವರದಿ ಬಂದಿದ್ದು ಫಲಿತಾಂಶ ನೆಗೆಟಿವ್ ಬಂದಿದೆ. ನಂತರ ಪಾಸಿಟಿವ್ ಎಂದು ಘೋಷಣೆ ಮಾಡಲು ಯಾವೆಲ್ಲ ಮಾನದಂಡಗಳನ್ನು ಪರಿಗಣಿಸಲಾಗಿದೆ ಎಂದು ಅವಲೋಕನ ಮಾಡಿದಾಗ ಖಾಸಗಿ ಲ್ಯಾಬ್ ಮಾದರಿಯನ್ನು ಪರಿಗಣಿಸಿಯೇ ಅಂತಿಮ ತೀರ್ಮಾನಕ್ಕೆ ಬಂದಿರುವ ವಿಚಾರ ಗೊತ್ತಾಗಿದೆ.

    ಈಗ ಗರ್ಭಿಣಿಯನ್ನು ಡಿಸ್ಚಾರ್ಜ್ ಮಾಡಲು ರೆಡಿ ಮಾಡುತ್ತಿದ್ದೇವೆ. ಆಕೆ ಮುಂದೆ ಖಾಸಗಿ ಆಸ್ಪತ್ರೆಗೆ ಹೋಗಬಹುದು. ಅಲ್ಲೇ ಡೆಲಿವರಿ ಮಾಡಿಸಿಕೊಳ್ಳಬಹುದು ಎಂದು ಆರೋಗ್ಯ ಅಧಿಕಾರಿ ಶ್ರೀನಿವಾಸ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ. ಸೋಂಕು ಇಲ್ಲದ ವ್ಯಕ್ತಿಗೆ ಸೋಂಕು ಇದೆ ಎಂದು ಹೇಳಿದ ಈ ಪ್ರಕರಣದಿಂದ ಆರೋಗ್ಯ ಇಲಾಖೆಗೆ ಹಿನ್ನೆಡೆಯಾಗಿದೆ

    ಬಿಟಿಎಂ ಲೇಔಟ್‍ನ ಗರ್ಭಿಣಿ ಜಯನಗರದ ಪ್ರಸಿದ್ಧ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾಗಿದ್ದರು. ಈ ವೇಳೆ ವೈದ್ಯರು ಮೇ 9ರಂದು ಹೆರಿಗೆ ಆಗಬಹುದು ಎಂದು ತಿಳಿಸಿದ್ದರು. ಗರ್ಭಿಣಿ ತಪಾಸಣೆ ವೇಳೆ ವೈದ್ಯರು ವೈಯಕ್ತಿಕ ಸುರಕ್ಷಿತ ಸಾಧನವನ್ನು ಬಳಸಿದ್ದರು. ಈ ಗರ್ಭಿಣಿಗೆ ವಿದೇಶ ಸಂಪರ್ಕ ಅಥವಾ ಸೋಂಕಿತರ ಜೊತೆಗೆ ಯಾವುದೇ ಸಂರ್ಪಕ ಇರಲಿಲ್ಲ. ಆದರೂ ಕೊರೊನಾ ಬಂದಿದ್ದು ಹೇಗೆ ಎನ್ನುವ ಪ್ರಶ್ನೆ ಎದ್ದಿತ್ತು. ಗರ್ಭಿಣಿ ಜೊತೆ ನೇರ ಸಂಪರ್ಕ ಹೊಂದಿದ್ದ 6 ಮಂದಿ ಮತ್ತು ಪರೋಕ್ಷ ಸಂಪರ್ಕ ಹೊಂದಿದ್ದ 12 ಮಂದಿಯನ್ನು ಈಗಾಗಲೇ ಕ್ವಾರಂಟೈನ್ ಮಾಡಲಾಗಿತ್ತು.

  • ಅನುದಾನ ಹಂಚಿಕೆಯಲ್ಲಿ ತಾರತಮ್ಯ – ಕಾಂಗ್ರೆಸ್‍ನಿಂದ ಪ್ರತಿಭಟನೆ

    ಅನುದಾನ ಹಂಚಿಕೆಯಲ್ಲಿ ತಾರತಮ್ಯ – ಕಾಂಗ್ರೆಸ್‍ನಿಂದ ಪ್ರತಿಭಟನೆ

    ಬೆಂಗಳೂರು: ಬಿಜೆಪಿ ಸರ್ಕಾರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಿದೆ ಎಂದು ಆರೋಪಿಸಿ ಬಿಟಿಎಂ ಲೇಔಟ್ ಹಾಗೂ ಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕರು ಹಾಗೂ ಕಾರ್ಯಕರ್ತರು ನಗರದ ಟೌನ್‍ಹಾಲ್ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದರು.

    ಬಿಟಿಎಮ್ ಲೇಔಟ್ ವಿಧಾನಸಭಾ ಕ್ಷೇತ್ರಕ್ಕೆ ಸಮ್ಮಿಶ್ರ ಸರ್ಕಾರ 387 ಕೋಟಿ ರೂ.ಅನುದಾನ ನೀಡಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ 234 ಕೋಟಿ ರೂ.ಗೆ ಕಡಿತ ಮಾಡಿ ಕೇವಲ 152.84 ಕೋಟಿ ರೂ. ನಿಗದಿಪಡಿಸಿದೆ. ಹಾಗೆ ಜಯನಗರ ಕ್ಷೇತ್ರಕ್ಕೆ 194 ಕೋಟಿ ರೂ. ಅನುದಾನ ಕಡಿತಗೊಳಿಸಿ ಕೇವಲ 122 ಕೋಟಿ ರೂ. ಕೊಡಲಾಗಿದೆ. ಇದನ್ನು ವಿರೋಧಿಸಿ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಶಾಸಕಿ ಸೌಮ್ಯರೆಡ್ಡಿ, ರಾಜ್ಯಸಭಾ ಸದಸ್ಯ ಹರಿಪ್ರಸಾದ್ ನೇತೃತ್ವದಲ್ಲಿ ಬಿಬಿಎಂಪಿ ಸದಸ್ಯರು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.

    ಈ ವೇಳೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ. ಭ್ರಷ್ಟ ಬಿಜೆಪಿಯನ್ನು ಸೋಲಿಸಿ ನಾವು ಅಧಿಕಾರಕ್ಕೆ ಬಂದಿದ್ದೆವು. ಆ ಸಂದರ್ಭದಲ್ಲಿ ನಾವು ಯಾವುದೇ ತಾರತಮ್ಯ, ದ್ವೇಷದ ರಾಜಕಾರಣ ಮಾಡಿಲ್ಲ. ಇಂದು ಬಿಜೆಪಿ ಅನುದಾನದಲ್ಲಿ ತಾರತಮ್ಯ ಮಾಡುತ್ತಿದೆ. ನಮ್ಮ ಬಜೆಟ್ ತಡೆ ಹಿಡಿದು, ಅನುದಾನ ನೀಡಿಲ್ಲ. ಡಿಪಿಆರ್, ವರ್ಕ್ ಆರ್ಡರ್ ಎಲ್ಲಾ ಆಗಿದ್ದರೂ ಕಾಮಗಾರಿಗಳನ್ನು ತಡೆಹಿಡಿದಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿರುವ 5 ಕ್ಷೇತ್ರಗಳಿಗೆ 2700 ಕೋಟಿ ರೂ. ಅನುದಾನ ಕೊಟ್ಟಿದ್ದಾರೆ. ಆದರೆ ನಮ್ಮ ಕ್ಷೇತ್ರಗಳಿಗೆ ಅನ್ಯಾಯ ಮಾಡಿದ್ದು ಸರಿಯೇ ಎಂದು ಮಾಜಿ ಸಚಿವ ಪ್ರಶ್ನಿಸಿದರು.

    ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೀಡಿದ ಅನುದಾನವನ್ನು ಬಿಜೆಪಿ ಸರ್ಕಾರ ಬಂದಮೇಲೆ ಕಡಿತ ಮಾಡಿ, ರಾಜಿನಾಮೆ ನೀಡಿದ ಶಾಸಕರ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡಲಾಗಿದೆ. ಬಿಜೆಪಿ ಶಾಸಕರಿಗೆ ಸಾವಿರ ಕೋಟಿ ರೂ. ಅನುದಾನ ಕೊಡಲಿ ಆದರೆ ನಮ್ಮ ಅನುದಾನ ಕಡಿತ ಮಾಡಿರುವುದು ಸರಿಯಲ್ಲ. ಇದರಿಂದ ಕ್ಷೇತ್ರದ ಎಲ್ಲ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿದೆ ಎಂದರು ಆಕ್ರೋಶ ವ್ಯಕ್ತಪಡಿಸಿದರು.

    ಈಜೀಪುರ ಮೇಲ್ಸೇತುವೆ ಕೆಲಸ ನಿಂತು ಹೋಗಿದೆ. ಬಿಜೆಪಿಗರಲ್ಲಿ ಅಧಿಕಾರದ ಮದ ತುಂಬಿದೆ. ವೈಟ್ ಟಾಪಿಂಗ್ ಬೇಡ, ಹೆಚ್ಚು ವೆಚ್ಚವಾಗುತ್ತದೆ ಕಿತ್ತು ಹಾಕಿ ಎಂದು ನಾವೇ ಹೇಳಿದ್ದೆವು. ಆದರೆ ಉತ್ತಮ ಟಾರ್ ರಸ್ತೆ ನೀಡಲಿ. ಬೆಂಗಳೂರು ಶಾಸಕರೆಲ್ಲ ಸೇರಿ ಮುಖ್ಯಮಂತ್ರಿಗಳ ಮನೆ ಮುಂದೆ ಪ್ರತಿಭಟನೆ ನಡೆಸಲಿದ್ದೇವೆ, ಅಧಿವೇಶನದ ಸಮಯದಲ್ಲಿ ವಿಧಾನಸೌಧದ ಮುಂದೆಯೂ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದರು.

    ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಮಾತನಾಡಿ, ಆಪರೇಷನ್ ಕಮಲ ನಡೆಸಲು ಸಾವಿರಾರು ಕೋಟಿ ರೂ. ಖರ್ಚು ಮಾಡಿದ್ದಾರೆ. ಆದರೆ ಈಗ ನೆರೆ ಪರಿಹಾರ ನೀಡುವುದಕ್ಕೆ ಸರ್ಕಾರದ ಬಳಿ ದುಡ್ಡಿಲ್ಲ ಎನ್ನುತ್ತಿದ್ದಾರೆ. ನಮ್ಮ ಕ್ಷೇತ್ರದ 316 ಕೋಟಿ ರೂ. ಅನುದಾನದಲ್ಲಿ ಕಡಿತ ಮಾಡಿ ಕೇವಲ 122 ಕೋಟಿ ರೂ.ನೀಡಿದ್ದಾರೆ. ಅನುದಾನ ನೀಡುವುದರಲ್ಲಿ ತಾರತಮ್ಯ ಮಾಡಿದ್ದಾರೆ. ಅಲ್ಲದೆ ಸಿಎಂ ನಗರ ಪ್ರದಕ್ಷಿಣೆ ವೇಳೆಯೂ ಸ್ಥಳೀಯ ಕಾಂಗ್ರೆಸ್ ಶಾಸಕರನ್ನು ಕಡೆಗಣಿಸಲಾಗುತ್ತಿದೆ ಎಂದು ದೂರಿದರು.

  • ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್

    ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್

    ಬೆಂಗಳೂರು: ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾ ರೆಡ್ಡಿ ತಾವು ನೀಡಿದ್ದ ರಾಜೀನಾಮೆಯನ್ನು ಹಿಂದಕ್ಕೆ ಪಡೆಯುವುದಾಗಿ ತಿಳಿಸಿದ್ದಾರೆ.

    ನಾನು ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯುತ್ತೇನೆ ಎಂದು ಹೇಳಿರುವ ರೆಡ್ಡಿ ಗುರುವಾರ ಬೆಳಗ್ಗೆ ರಾಜೀನಾಮೆಯನ್ನು ಹಿಂದಕ್ಕೆ ಪಡೆಯುವುದಾಗಿ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ.

    ಹೇಳಿಕೆಯಲ್ಲಿ ಏನಿದೆ?
    ಕಾಂಗ್ರೆಸ್ ಹೈ ಕಮಾಂಡ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಮಾಡುವ ವಿಜ್ಞಾಪನೆಗಳು. ಕರ್ನಾಟಕದಲ್ಲಿ ನಡೆಯುತ್ತಿರುವ ಬಹುತೇಕ ರಾಜಕೀಯ ವಿದ್ಯಮಾನಗಳ ಬಗ್ಗೆ ಕಾಂಗ್ರೆಸ್ ಹೈ ಕಮಾಂಡ್ ಹಾಗೂ ಕಾರ್ಯಕರ್ತರಿಗೆ ಬಹುತೇಕ ಅರಿವಿದೆ. ಕಾಂಗ್ರೆಸ್ ಪಕ್ಷದಲ್ಲಿನ ಕೆಲವು ವಿದ್ಯಾಮಾನಗಳಿಂದ ಬೇಸರವಾಗಿ (ಕಾರಣಗಳನ್ನು ಅನೇಕ ಬಾರಿ ಮಾಧ್ಯಮ ಮುಖಾಂತರ ತಿಳಿಸಿದ್ದೇನೆ) ಜುಲೈ 6 ರಂದು ನಾನು ಆಯ್ಕೆಯಾಗಿರುವ ಬಿಟಿಎಂ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುತ್ತೇನೆ, ನಾನೆಂದು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟವನಲ್ಲ ಸ್ಥಾನಮಾನ ಪಡೆಯಲು ನಾನು ಎಂದೂ ಆಸೆಪಟ್ಟವನಲ್ಲ,

    ಕಳೆದ 45 ವರ್ಷದ ಸುಧೀರ್ಘ ರಾಜಕೀಯ ಜೀವನದಲ್ಲಿ ನಿಷ್ಟಾವಂತ ಕಾಂಗ್ರೆಸ್ ಕಾರ್ಯಕರ್ತನಾಗಿ, 7 ಬಾರಿ ಶಾಸಕನಾಗಿ ಪಕ್ಷದ ಶ್ರೇಯೋಭಿವೃದ್ದಿಗಾಗಿ ಹಾಗೂ ನನ್ನ ಮತಕ್ಷೇತ್ರದ ಅಭಿವೃದ್ಧಿಗಾಗಿ ಮತ್ತು ಸಚಿವನಾಗಿದ್ದಂತಹ ಸಂದರ್ಭದಲ್ಲಿ ರಾಜ್ಯಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸಿದ್ದೇನೆ. ಕಾಂಗ್ರೆಸ್‍ನ ಹಲವಾರು ವಿದ್ಯಾಮಾನಗಳಿಂದ ಶಾಸಕ ಸ್ಥಾನಕ್ಕೆ ಮಾತ್ರ ನನ್ನ ರಾಜೀನಾಮೆ ಹೊರತು ಪಕ್ಷಕ್ಕಲ್ಲ ಎಂದು ಹಿಂದೆಯೂ ಸ್ಪಷ್ಟಪಡಿಸಿದ್ದೇನೆ. ಕಾಂಗ್ರೆಸ್ ನ ಹಿರಿಯನಾಯಕರು ರಾಜೀನಾಮೆ ವಾಪಾಸ್ ಪಡೆದು ಪಕ್ಷದಲ್ಲಿರುವಂತೆ ಕೋರಿರುತ್ತಾರೆ. ರಾಜ್ಯದ ಉದ್ದಗಲಕ್ಕೂ ಕಾಂಗ್ರೆಸ್ ಕಾರ್ಯಕರ್ತರು ರಾಜೀನಾಮೆ ವಾಪಾಸ್ ಪಡೆಯಲು ಮನವಿ ಮಾಡಿಕೊಂಡಿದ್ದಾರೆ. ಈ ಎಲ್ಲ ಬೆಳವಣಿಗೆಗಳಿಂದ ನಾನು ಕಾಂಗ್ರೆಸ್ ಪಕ್ಷದಲ್ಲೇ ಮುಂದುವರೆಯಲು ತೀರ್ಮಾನಿಸಿದ್ದು ನಾನು ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯುತ್ತಿದ್ದೇನೆ.

  • ಕೈ ಹಿರಿಯ ನಾಯಕರ ವಿರುದ್ಧ ರೆಡ್ಡಿ ಬೆಂಬಲಿಗರ ಆಕ್ರೋಶ – ರಹಸ್ಯವಾಗಿ ಬಿಜೆಪಿ ಶಾಸಕರಿಂದ ಭೇಟಿ

    ಕೈ ಹಿರಿಯ ನಾಯಕರ ವಿರುದ್ಧ ರೆಡ್ಡಿ ಬೆಂಬಲಿಗರ ಆಕ್ರೋಶ – ರಹಸ್ಯವಾಗಿ ಬಿಜೆಪಿ ಶಾಸಕರಿಂದ ಭೇಟಿ

    ಬೆಂಗಳೂರು: ಹಿರಿಯ ಮುಖಂಡ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ತಪ್ಪಿದ್ದಕ್ಕೆ ಬೆಂಗಳೂರಿನ ಕಾಂಗ್ರೆಸ್ ನಾಯಕರು ಹಿರಿಯ ಕೈ ಮುಖಂಡರ ವಿರುದ್ಧ ತೀವ್ರ ಆಕ್ರೋಶವನ್ನು ಹೊರ ಹಾಕಿದ್ದಾರೆ.

    ಪಕ್ಷಕ್ಕಾಗಿ ದುಡಿದು ಉತ್ತಮ ಕೆಲಸ ಮಾಡಿದ್ದರೂ ಸಚಿವ ಸ್ಥಾನ ನೀಡದೇ ವಂಚಿಸಿದ್ದಾರೆ. ಹಿರಿತನಕ್ಕೆ ಪಕ್ಷದಲ್ಲಿ ಬೆಲೆ ಇಲ್ಲ. ಹೀಗಾಗಿ ರಾಮಲಿಂಗಾರೆಡ್ಡಿ ಅವರನ್ನು ಬೆಂಬಲಿಸಿ ರಾಜೀನಾಮೆ ನೀಡಲು ಬಿಬಿಎಂಪಿಯ ಕೆಲ ಪಾಲಿಕೆ ಸದಸ್ಯರು ಮುಂದಾಗಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ಸಿಕ್ಕಿದೆ.

    ಜಯನಗರ, ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು, ರೆಡ್ಡಿ ಬೆಂಬಲಿಗರು ಸೇರಿದಂತೆ ಹಲವರು ಮೌರ್ಯ ಹೋಟೆಲ್‍ನಲ್ಲಿ ಸಭೆ ನಡೆಸುತ್ತಿದ್ದಾರೆ. ಈ ಸಭೆಯಲ್ಲಿ ಮಾಜಿ ಮೇಯರ್ ಮಂಜುನಾಥ ರೆಡ್ಡಿ, ಪಾಲಿಕೆ ಸದಸ್ಯರಾದ ರಿಜ್ವಾನ್ ನವಾಬ್, ಚಂದ್ರಪ್ಪ, ಅನ್ಸರ್ ಪಾಷಾ ಸೇರಿದಂತೆ ಹಲವರು ಸಭೆಯಲ್ಲಿ ಭಾಗಿಯಾಗಿದ್ದಾರೆ.

    ಕೈ ನಾಯಕರಿಗೆ ಎಚ್ಚರಿಕೆ:
    ಕೆಲಸ ಮಾಡದ ಸಚಿವರನ್ನು ತೆಗೆದುಹಾಕಿ. ಪಕ್ಷಕ್ಕಾಗಿ ಹಗಲಿರುಳು ದುಡಿದ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೊಡಿ. ಸಚಿವ ಸ್ಥಾನ ಸಿಗದೇ ಇದ್ದರೆ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮಾಜಿ ಮೇಯರ್ ಮಂಜುನಾಥ್ ರೆಡ್ಡಿ ರಾಜ್ಯದ ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

    ರೆಡ್ಡಿಗೆ ಗಾಳ?
    ಭಾನುವಾರ ಬೆಂಗಳೂರಿನಲ್ಲಿ ರಾಮಲಿಂಗಾರೆಡ್ಡಿ ಜತೆ ಬಿಜೆಪಿ ಇಬ್ಬರು ಶಾಸಕರು ಭೋಜನ ಸವಿದಿದ್ದಾರೆ. ಶಾಸಕರಾದ ಸತೀಶ್ ರೆಡ್ಡಿ, ಕೃಷ್ಣಪ್ಪ ಅವರು ರಹಸ್ಯ ಭೇಟಿ ರಾಮಲಿಂಗಾರೆಡ್ಡಿಗೆ ಸಮಾಧಾನ ಹೇಳಿದ್ದಾರೆ. ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯರೆಡ್ಡಿ ಜತೆಯೂ ಶಾಸಕರಿಬ್ಬರು ಮಾತುಕತೆ ನಡೆಸಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಸಿಕ್ಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಡುರಾತ್ರಿವರೆಗೂ ಬೆಂಗ್ಳೂರಲ್ಲಿ ಭಾರಿ ಮಳೆ – ಹೆಚ್‍ಎಸ್‍ಆರ್, ಬಿಟಿಎಂ ಲೇಔಟ್ ಜಲಾವೃತ

    ನಡುರಾತ್ರಿವರೆಗೂ ಬೆಂಗ್ಳೂರಲ್ಲಿ ಭಾರಿ ಮಳೆ – ಹೆಚ್‍ಎಸ್‍ಆರ್, ಬಿಟಿಎಂ ಲೇಔಟ್ ಜಲಾವೃತ

    – ಇನ್ನೂ 5 ದಿನ ಮಳೆಯಾಗೋ ಸಾಧ್ಯತೆ

    ಬೆಂಗಳೂರು: ಗುರುವಾರ ಇಡೀ ದಿನ ಸುರಿದ ಭಾರೀ ಮಳೆಗೆ ಸಿಲಿಕಾನ್ ಸಿಟಿ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ.

    ನಗರದ ಬೊಮ್ಮನಹಳ್ಳಿ, ಬಿಟಿಎಮ್ ಲೇಔಟ್, ಸಂಪಂಗಿರಾಮನಗರದಲ್ಲಿ ಅತೀ ಹೆಚ್ಚು ಪ್ರಮಾಣದಲ್ಲಿ ಮಳೆ ಸುರಿದಿದೆ. ಎಚ್‍ಎಸ್‍ಆರ್ ಬಡಾವಣೆ ರಸ್ತೆಗಳು ಸಂಪೂರ್ಣವಾಗಿ ಮುಳುಗಡೆಯಾಗಿದ್ವು. ಬಡಾವಣೆಯ 5, 6 ಮತ್ತು 7 ನೇ ಹಂತದಲ್ಲಿ ರಸ್ತೆ ಮೇಲೆಲ್ಲಾ ಮಳೆ ನೀರು ನಿಂತು ವಾಹನ ಸವಾರರು ಪರದಾಡಿದ್ರು.

    ಹೀಗಾಗಿ ತಡರಾತ್ರಿ ಎಚ್‍ಎಸ್‍ಆರ್ ಬಡವಾಣೆಗೆ ಎನ್‍ಡಿಎಫ್ ಮತ್ತು ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಬಿಬಿಎಂಪಿ ಅಧಿಕಾರಿಗಳೊಂದಿಗೆ ಮೇಯರ್ ಸಂಪತ್ ರಾಜ್ ಭೇಟಿ ನೀಡಿದ್ರು. ರಸ್ತೆಗಳಲ್ಲಿ ಜಾಲವೃತಗೊಂಡಿದ್ದ ಮಳೆ ನೀರನ್ನು ತೆರವುಗಳಿಸುವಂತೆ ಸೂಚಿಸಿದ್ರು. ರಾತ್ರಿ 1 ಗಂಟೆಯವರೆಗೂ ಎನ್‍ಡಿಎಫ್ ತಂಡದವರು ನೀರು ತೆರವುಗೊಳಿಸಿದ್ರು. ಇನ್ನು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದಕ್ಕೆ ಜನ ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು.

    ಇನ್ನು ಪ್ರತಿ ಬಾರಿ ಮಳೆ ಬಂದಾಗಲೂ ಎಚ್‍ಎಸ್‍ಆರ್ ಬಡವಾಣೆಗಳಲ್ಲಿ ಇದೇ ರೀತಿ ನೀರು ತುಂಬುತ್ತಂತೆ. ಸಾಕಷ್ಟು ಬಾರಿ ಬಿಬಿಎಂಪಿ ಅಧಿಕಾರಿಗಳ ಗಮನಕ್ಕೆ ತಂದಿದ್ರು ಯಾವುದೇ ಪ್ರಯೋಜನವಾಗಿಲ್ಲ. ಇದೀಗ ನೂತನ ಮೇಯರ್ ಇಲ್ಲಿಗೆ ಭೇಟಿ ನೀಡಿ ತರೆವುಗೊಳಿಸುತ್ತಿದ್ದಾರೆ. ಮುಂದೆ ಮತ್ತೆ ಈ ರೀತಿ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿದ್ರೆ ಸಾಕು ಅಂತಾರೆ ಸ್ಥಳೀಯರು.

    ಇನ್ನೂ ಐದು ದಿನ ನಗರದಲ್ಲಿ ಮಳೆ ಆಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ.

     

     

  • ಕಲುಷಿತ ನೀರು ಸೇವಿಸಿ-60ಕ್ಕೂ ಹೆಚ್ಚು ಜನರು ಆಸ್ಪತ್ರೆ ಪಾಲು

    ಕಲುಷಿತ ನೀರು ಸೇವಿಸಿ-60ಕ್ಕೂ ಹೆಚ್ಚು ಜನರು ಆಸ್ಪತ್ರೆ ಪಾಲು

    ಬೆಂಗಳೂರು: ಒಳಚರಂಡಿ ಪೈಪ್‍ಲೈನ್ ಒಡೆದು ಕುಡಿಯುವ ನೀರಿಗೆ ಕಲುಷಿತ ನೀರು ಮಿಶ್ರಣವಾಗಿದ್ದು. ಈ ನೀರನ್ನು ಸೇವಿಸಿರುವ 60ಕ್ಕೂ ಹೆಚ್ಚು ಜನರು ಆನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆ ಸೇರಿರುವ ಘಟನೆ ಬೆಂಗಳೂರಿನ ಬಿಟಿಎಂ ಲೇಔಟ್‍ನ 10 ಕ್ರಾಸ್‍ನಲ್ಲಿ ನಡೆದಿದೆ.

    ಕಳೆದ ಮೂರು ದಿನಗಳಿಂದ ಲೇಔಟ್‍ನ 5ನೇ ಕ್ರಾಸ್‍ನಲ್ಲಿ ಒಳಚರಂಡಿ ಪೈಪ್‍ಲೈನ್ ಒಡೆದು ಹೋಗಿದ್ದು, ಮನೆಗಳಿಗೆ ಬರುವ ಕುಡಿಯುವ ನೀರಿಗೆ ಕಲುಷಿತ ನೀರು ಮಿಶ್ರಣವಾಗಿ ಬರುತ್ತಿದೆ. ಪೈಪ್ ಸರಿಪಡಿಸಲು ಬಿಬಿಎಂಪಿ ಅಧಿಕಾರಿಗಳಿಗೆ ತಿಳಿಸಿದರು ಯಾವುದೇ ಪ್ರಯೋಜನವಿಲ್ಲ ಎಂದು ಸ್ಥಳೀಯರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

    ಕಲುಷಿತ ನೀರನ್ನು ಕುಡಿದ ಜನರು ತೀವ್ರ ಅನಾರೋಗ್ಯಕ್ಕೆ ಒಳಗಾಗುತ್ತಿದ್ದು, ವಾಂತಿ, ಭೇದಿ, ಜ್ವರದಿಂದ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಯಾವುದೇ ಅಧಿಕಾರಿಗಳು ಇದರ ಬಗ್ಗೆ ಗಮನ ನೀಡುತ್ತಿಲ್ಲ. ಇನ್ನೂ ಇದೇ ನೀರನ್ನು ಸ್ನಾನಕ್ಕೆ ಬಳಸಲು ಸಾಧ್ಯವಿಲ್ಲದಷ್ಟು ಕೆಟ್ಟ ವಾಸನೆ ಬರುತ್ತಿದೆ. ಏರಿಯಾದ ಎಲ್ಲಾ ಮಕ್ಕಳ ಆರೋಗ್ಯ ಮೇಲು ಕೆಟ್ಟ ಪರಿಣಾಮ ಬೀರಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

    ಇದು ರಾಜ್ಯದ ಗೃಹ ಸಚಿವರ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಪ್ರದೇಶವಾಗಿದೆ. ಪ್ರಸ್ತುತ ಇದುವರೆಗೂ ಕಲುಷಿತ ನೀರು ಸೇವಿಸಿ 60 ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಿದ್ದರು ಒಮ್ಮೆಯೂ ಬಿಡಬ್ಲ್ಯೂಎಸ್‍ಎಸ್‍ಪಿ ಭೇಟಿ ಕೊಟ್ಟಿಲ್ಲ. ಜಲಮಂಡಳಿಯವರು ಈ ಪೈಪ್ ಲೈನ್ ಸರಿಪಡಿಸುವ ಗೋಜಿಗೆ ಹೋಗಿಲ್ಲ. ಒಟ್ಟಾರೆ ರಾಜ್ಯದ ಗೃಹ ಸಚಿವರ ಕ್ಷೇತ್ರದ ಜನರು ಕಲುಷಿತ ನೀರು ಕುಡಿದು ಅನುಭವಿಸುತ್ತಿರುವ ಕಷ್ಟಗಳಿಗೆ ಅಧಿಕಾರಿಗಳು ಅದಷ್ಟು ಬೇಗ ಪರಿಹಾರ ನೀಡಬೇಕಿದೆ.