Tag: Budget 2018

  • ಬಜೆಟ್ ನಲ್ಲಿ ಜಲಸಂಪನ್ಮೂಲ ಇಲಾಖೆಗೆ 15,998 ಕೋಟಿ ರೂ. – ಹೊಸ ಯೋಜನೆಗಳೇನು?

    ಬಜೆಟ್ ನಲ್ಲಿ ಜಲಸಂಪನ್ಮೂಲ ಇಲಾಖೆಗೆ 15,998 ಕೋಟಿ ರೂ. – ಹೊಸ ಯೋಜನೆಗಳೇನು?

    ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಜಲಸಂಪನ್ಮೂಲಕ್ಕೆ ಸಂಬಂಧಿಸಿದಂತೆ ಹಲವು ಹೊಸ ಯೋಜನೆಗಳ ಬಗ್ಗೆ ಘೋಷಿಸಿದ್ದಾರೆ. 2018-19ನೇ ಸಾಲಿನಲ್ಲಿ ಜಲಸಂಪನ್ಮೂಲ ಇಲಾಖೆಗೆ ಒಟ್ಟಾರೆಯಾಗಿ 15,998 ಕೋಟಿ ರೂ. ಒದಗಿಸಲಾಗಿದೆ.

    2018-19ನೇ ಸಾಲಿನ ಹೊಸ ಯೋಜನೆಗಳು
    ಬೂದಿಹಾಳ-ಪೀರಾಪುರ ಏತ ನೀರಾವರಿ ಯೋಜನೆ ವಿಸ್ತರಣೆಯಡಿ ಯಾದಗಿರಿ ಜಿಲ್ಲೆಯ ಶಹಾಪುರ ಮತ್ತು ಸುರಪುರ ತಾಲೂಕುಗಳಡಿ ಹೆಚ್ಚುವರಿ ಅಚ್ಚುಕಟ್ಟು ಕ್ಷೇತ್ರಕ್ಕೆ ನೀರಾವರಿ ಸೌಲಭ್ಯ.
    ನಂದವಾಡಗಿ ಏತ ನೀರಾವರಿ ಯೋಜನೆ ವಿಸ್ತರಣೆಯಡಿ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನಡಿ ಹೆಚ್ಚುವರಿ ಅಚ್ಚುಕಟ್ಟು ಕ್ಷೇತ್ರಕ್ಕೆ
    ನೀರಾವರಿ ಸೌಲಭ್ಯ.
    ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ 46 ಕೆರೆಗಳಿಗೆ 540 ಕೋಟಿ ರೂ.ಗಳ ವೆಚ್ಚದಲ್ಲಿ ಘಟಪ್ರಭಾ ನದಿಯಿಂದ ನೀರು ಹರಿಸುವ
    ಸಾಲಾಪುರ ಏತ ನೀರಾವರಿ ಯೋಜನೆ.

    * ಬಾಗಲಕೋಟೆ ಜಿಲ್ಲೆಯ ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನು 140 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು.
    * ಬೆಳಗಾವಿ ಜಿಲ್ಲೆಯ ಸತ್ತಿಗೇರಿ ಏತ ನೀರಾವರಿ ಯೋಜನೆಯನ್ನು 210 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು.
    * ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ, ಕೊಟ್ಟಲಗಿ, ಐಗಳಿ, ಕಕಮರಿ, ಹಾಲಳ್ಳಿ, ಅಡಹಳ್ಳಿ, ಅಡಾಳಟ್ಟಿ, ಕೋಕಟನೂರ, ಕನ್ನಾಳ, ಪಡತರವಾಡಿ, ಅರಟಾಳ ಗ್ರಾಮಗಳ 17 ಕೆರೆಗಳನ್ನು 137 ಕೋಟಿ ರೂ.ಗಳ ವೆಚ್ಚದಲ್ಲಿ ಝಂಜರವಾಡ ಗ್ರಾಮದ ಹತ್ತಿರದ ಕೃಷ್ಣಾ ನದಿಯಿಂದ ನೀರನ್ನು ಎತ್ತಿ ತುಂಬಿಸುವ ಯೋಜನೆ.
    * ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಂಟೂರು ಕೆರೆಯನ್ನು 50 ಕೋಟಿ ರೂ. ವೆಚ್ಚದಲ್ಲಿ ತುಂಬಿಸುವ ಯೋಜನೆ.
    * ಗೋಕಾಕ ತಾಲೂಕಿನ ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆ.

    * ಕುಡಿಯುವ ನೀರು ಪೂರೈಕೆಗಾಗಿ ಹಾಗೂ ಮಾರ್ಕಂಡೇಯ ಕಾಲುವೆಯಡಿ ಬಿಟ್ಟು ಹೋದ ಅಚ್ಚುಕಟ್ಟಿನ ನೀರಾವರಿಗಾಗಿ 250 ಕೋಟಿ ರೂ.ಗಳನ್ನು ಒದಗಿಸಲಾಗುವುದು.
    * ಅರಕಲಗೂಡು ತಾಲೂಕು ಕೊಣನೂರು ಗ್ರಾಮದ ಕೆರೆಯಿಂದ ಕೊಣನೂರು ಸುತ್ತಮುತ್ತಲಿನ 40 ಕೆರೆಗಳಿಗೆ ನೀರು ತುಂಬಿಸುವ ಏತ
    ನೀರಾವರಿ ಯೋಜನೆಯನ್ನು 30 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು.
    * ಹಾಸನ ನಗರಕ್ಕೆ ಹೊಂದಿಕೊಂಡಿರುವ ಚೆನ್ನಪಟ್ಟಣ ಕೆರೆ, ಸತ್ಯಮಂಗಲ ಕೆರೆ, ಹುನಸಿನಕೆರೆ ಕೆರೆಗಳ ಪುನಶ್ಚೇತನ ಹಾಗೂ ಹಂದಿನಕೆರೆಯಿಂದ ಸತ್ಯಮಂಗಲ ಕೆರೆಗೆ ನೀರು ತುಂಬಿಸುವ ಯೋಜನೆಗಳನ್ನು 20 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು.
    * ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-2ರ ನಾರಾಯಣಪುರ ಬಲದಂಡೆ ಕಾಲುವೆ ಕಿ.ಮೀ. 0.00 ನಿಂದ 95.00ರವರೆಗಿನ ಕಾಲುವೆ ಆಧುನೀಕರಣ ಯೋಜನೆಯನ್ನು 750 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುವುದು.
    * ತುಂಗಭದ್ರಾ ಜಲಾಶಯದ ಸಂಗ್ರಹಣಾ ಸಾಮಥ್ರ್ಯದ ಕೊರತೆಯನ್ನು ನೀಗಿಸುವ ಪರ್ಯಾಯ ಮಾರ್ಗೋಪಾಯವಾಗಿ ಪ್ರವಾಹ ಹರಿವು ನಾಲೆ ಮೂಲಕ ನವಿಲೆ ಹತ್ತಿರ ಸಮತೋಲನ ಜಲಾಶಯ ನಿರ್ಮಾಣ ಯೋಜನೆಯ ಕಾರ್ಯಸಾಧ್ಯತೆ ಅಧ್ಯಯನವನ್ನು ಹಾಗೂ ವಿಸ್ತೃತ ಯೋಜನಾ ವರದಿಯನ್ನು ಸಿದ್ಧಪಡಿಸಲಾಗುವುದು.

    * ಜಗಳೂರು ತಾಲೂಕಿನ 46 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಯೋಜನೆಯನ್ನು 250 ಕೋಟಿ ರೂ.ಗಳ ವೆಚ್ಚದಲ್ಲಿ
    ಕೈಗೊಳ್ಳಲಾಗುವುದು.
    * ಚಿತ್ರದುರ್ಗ ತಾಲೂಕಿನ ಭರಮಸಾಗರ ಹೋಬಳಿಯ 33 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಯೋಜನೆಯನ್ನು 250
    ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುವುದು.
    * ದಾವಣಗೆರೆ ತಾಲೂಕಿನ ಬೇತೂರು, ಮಾಗನಳ್ಳಿ, ರಾಂಪುರ, ಮೇಗಲಗೇರಿ ಮತ್ತು ಖಡಜ್ಜಿ ಗ್ರಾಮಗಳ ಕೆರೆಗಳನ್ನು ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಯೋಜನೆಯನ್ನು 135 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುವುದು.
    * ಜಮಖಂಡಿ ತಾಲೂಕಿನ ಗಲಗಲಿ-ಮರೆಗುದ್ದಿ ಏತ ನೀರಾವರಿ ಯೋಜನೆಯನ್ನು 100 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುವುದು.

  • ನಿಮಗಿದು ತಿಳಿದಿರಲಿ: ಈ ಬಾರಿ ಬಜೆಟ್‍ನ 9 ಪ್ರಮುಖ ಘೋಷಣೆಗಳು ಹೀಗಿವೆ

    ನಿಮಗಿದು ತಿಳಿದಿರಲಿ: ಈ ಬಾರಿ ಬಜೆಟ್‍ನ 9 ಪ್ರಮುಖ ಘೋಷಣೆಗಳು ಹೀಗಿವೆ

    ಬೆಂಗಳೂರು: ಎನ್‍ಡಿಎ ಸರ್ಕಾರ ಪೂರ್ಣ ಪ್ರಮಾಣದ ಕೊನೆಯ ಬಜೆಟ್‍ನ್ನು ಹಣಕಾಸು ಸಚಿವರಾದ ಅರುಣ್ ಜೇಟ್ಲಿ ಮಂಡನೆ ಮಾಡಿದ್ದಾರೆ. ಈ ಬಾರಿ ಬಜೆಟ್‍ನಲ್ಲಿ ಕೃಷಿ, ಕಾರ್ಮಿಕ ಮತ್ತು ಬಡವರ ಪರವಾಗಿ ಎಂದು ಆಡಳಿತ ಸರ್ಕಾರ ಹೇಳಿಕೊಂಡಿದೆ. ಅರುಣ್ ಜೇಟ್ಲಿ ಬಜೆಟ್‍ನಲ್ಲಿ ಹಲವು ಯೋಜನೆ ಮತ್ತು ಮುಂದಿನ ಹಣಕಾಸು ವರ್ಷದ ಗುರಿಗಳನ್ನು ತಿಳಿಸಿದ್ದಾರೆ. 2018ರ ಬಜೆಟ್‍ನ ಪ್ರಮುಖ 09 ಘೋಷಣೆಗಳು ಹೀಗಿವೆ.

    01. ಕಡಿಮೆಯಾಗಿಲ್ಲ ತೆರಿಗೆ: ಈ ಬಾರಿ ತೆರಿಗೆ ಪಾವತಿದಾರರಿಗೆ ಸಿಹಿ ಸುದ್ದಿ ಸಿಕ್ಕಿಲ್ಲ. ತೆರಿಗೆಗಳಲ್ಲಿ ಯಾವುದೇ ಇಳಿಕೆಯಾಗದೇ ಹೆಚ್ಚಾಗಿದೆ. ಉದ್ಯೋಗಿಗಳಿಗೆ 40 ಸಾವಿರದವರೆಗೂ ತೆರಿಗೆ ವಿನಾಯ್ತಿ ಸಿಕ್ಕಿದೆ. 40 ಸಾವಿರ ರೂ. ನಂತರದಲ್ಲಿ ಪಡೆಯುವ ಸಂಬಳ ತೆರಿಗೆಗೆ ಒಳಪಡುತ್ತದೆ. ಟ್ಯಾಕ್ಸ್ ಬೆಲ್ ಇನ್‍ಕಮ್ ಮೇಲೆ 01 ಪ್ರತಿಶತ ಹೆಚ್ಚಿಸಲಾಗಿದೆ. ವೈಯಕ್ತಿಕ ತೆರಿಗೆಯ ಮೇಲೆ ಟ್ಯಾಕ್ಸ್ ಪ್ರಮಾಣ ಹೆಚ್ಚಳವಾಗಿದ್ದರಿಂದ ಶೇರು ಮಾರುಕಟ್ಟೆಯಲ್ಲಿ ವ್ಯವಹರಿಸುವರು ಹೆಚ್ಚಿನ ತೆರಿಗೆ ಪಾವತಿಸ ಬೇಕಾಗುತ್ತದೆ.

    02. ತುಟ್ಟಿಯಾಯ್ತು ಮೊಬೈಲ್: ಮೊಬೈಲ್ ಫೋನ್, ಟಿವಿ ಬೆಲೆಯಲ್ಲಿ ಹೆಚ್ಚಳವಾಗಿದೆ. ಟಿವಿ ಮತ್ತು ಮೊಬೈಲ್ ಫೋನ್‍ಗಳ ಮೇಲಿನ ಅಬಕಾರಿ ಸುಂಕವನ್ನು ಶೇ.15 ರಿಂದ ಶೇ.20ಕ್ಕೆ ಹೆಚ್ಚಳ ಮಾಡಲಾಗಿದೆ. ತಜ್ಞರ ಪ್ರಕಾರ ಐಫೋನ್ ದರದ ಮೇಲೆ 2ರಿಂದ 3 ಸಾವಿರ ರೂ. ಹೆಚ್ಚಾಗಲಿದೆ. ಉದಾಹರಣೆಗೆ ಐಫೋನ್ ಎಕ್ಸ್ ಮಾಡಲ್‍ನ ಫೋನ್ ಈಗ 89 ಸಾವಿರ ರೂ. ಇದ್ದು, ಕಂಪೆನಿ ತೆರಿಗೆ ಏರಿಕೆಯನ್ನು ಗ್ರಾಹಕರ ಮೇಲೆ ವರ್ಗಾಯಿಸಿದ್ರೆ ಫೋನ್ ಬೆಲೆ 92 ಸಾವಿರ ರೂ. ಗೆ ಏರಿಕೆಯಾಗುವ ಸಾಧ್ಯತೆಯಿದೆ.

    03. ಕಾರ್ಪೋರೇಟರ್ ತೆರಿಗೆ ಕಡಿತ: ದೀರ್ಘಾವಧಿ ಬಂಡವಾಳ ಹೂಡಿಕೆ ಮೇಲಿನ ತೆರಿಗೆ 10% ಏರಿಕೆ ಕಂಡಿದೆ. 250 ಕೋಟಿಗೂ ಅಧಿಕ ವ್ಯವಹಾರ ನಡೆಸುವ ಕಂಪೆನಿಗಳಿಗೆ ಶೇ.25 ತೆರಿಗೆ ಕಡಿತ.

    04. ಅಧಿಕ ಹೂಡಿಕೆಯ ಗುರಿ: ಮುಂದಿನ ಹಣಕಾಸಿನ ವರ್ಷದಲ್ಲಿ ಸುಮಾರು 80 ಸಾವಿರ ಕೋಟಿ ಬಂಡವಾಳವನ್ನು ಮಾರುಕಟ್ಟೆಯಲ್ಲಿ ವಿನಿಯೋಗಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ.

    05. ಸಂಬಳದಲ್ಲಿ ಏರಿಕೆ: ರಾಷ್ಟ್ರಪತಿಗಳ ವೇತನವನ್ನು ಪ್ರತಿ ತಿಂಗಳಿಗೆ 5 ಲಕ್ಷ ರೂಪಾಯಿ, ಉಪರಾಷ್ಟ್ರಪತಿಗಳ ವೇತನವನ್ನು 4.5 ಲಕ್ಷ ರೂಪಾಯಿ ಮತ್ತು ರಾಜ್ಯಪಾಲರುಗಳ ವೇತನವನ್ನು 3.5 ಲಕ್ಷ ರೂಪಾಯಿಗಳಿಗೆ ಏರಿಕೆ ಮಾಡಲಾಗಿದೆ. ಈವರೆಗೆ ರಾಷ್ಟ್ರಪತಿ ತಿಂಗಳಿಗೆ 1.5 ಲಕ್ಷ ರೂ. ವೇತನ ಪಡೆಯುತ್ತಿದ್ದರು. ಈಗ 1.5 ಲಕ್ಷ ರೂ. ಯಿಂದ 5 ಲಕ್ಷ ರೂ. ಗೆ ಹೆಚ್ಚಿಸಲಾಗಿದೆ. ಅದೇ ರೀತಿ ಉಪರಾಷ್ಟ್ರ ಪತಿಯ ವೇತನವನ್ನು ತಿಂಗಳಿಗೆ 1.10 ಲಕ್ಷ ರೂ. ನಿಂದ 4.5 ಲಕ್ಷ ರೂ. ಗೆ ಏರಿಸಲಾಗಿದೆ.

    06.  ಉಜ್ವಲ: ಕೇಂದ್ರ ಸರ್ಕಾರದ ಮಹತ್ವಾಂಕ್ಷೆಯ ಯೋಜನೆ ಉಜ್ವಲ ಕಳೆದ ಬಾರಿ ಜಾರಿಯಾಗಿತ್ತು. ಉಜ್ವಲ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಉಚಿತ ಗ್ಯಾಸ್ ವಿತರಣೆ ಮಾಡಲಾಗುತ್ತಿತ್ತು. ಉಜ್ವಲ ಯೋಜನೆ ಅಡಿಯಲ್ಲಿ 8 ಕೋಟಿ ಮಹಿಳೆಯರಿಗೆ ಉಚಿತ ಗ್ಯಾಸ್ ಕನೆಕ್ಷನ್ ನೀಡುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ.

    07. ಇಫಿಎಫ್: ಮಹಿಳಾ ಉದ್ಯೋಗಿಗಳ ಸಂಬಳದಲ್ಲಿ ಕಡಿತಗೊಳ್ಳುತ್ತಿದ್ದ ಇಪಿಎಫ್ ಪ್ರಮಾಣವನ್ನು 9% ನಿಂದ 8%ಕ್ಕೆ ಇಳಿಸಲಾಗಿದೆ. ಇಪಿಎಫ್ ಕಡಿತದ ಪ್ರಮಾಣ ಕಡಿಮೆ ಆಗುವುದರಿಂದ ಮಹಿಳೆ ಉದ್ಯೋಗಿಗಳ ಕೈಗೆ ಹೆಚ್ಚು ನಗದು ಬರಲಿದೆ. ಹೊಸ ಉದ್ಯೋಗಸ್ಥರಿಗೆ ಸಂಬಳದಲ್ಲಿ ಕಡಿತಗೊಳ್ಳುವ ಇಪಿಎಫ್ ಪ್ರಮಾಣವನ್ನು 12%ಕ್ಕೆ ಹೆಚ್ಚಿಸಲಾಗಿದೆ.

    08. ರೈಲ್ವೆ: ರೈಲ್ವೆ ಸಾರಿಗೆಯನ್ನು ಮೀಟರ್ ಗೇಜ್‍ನ್ನು ಬ್ರಾಡ್ ಗೇಜ್ ಗೆ ಬದಲಾಯಿಸುವ ಗುರಿಯನ್ನು ಹೊಂದಿದೆ. 25 ಸಾವಿರ ರೈಲ್ವೇ ನಿಲ್ದಾಣಗಳಲ್ಲಿ ಎಕ್ಸಲೇಟರ್ ಅಳವಡಿಕೆ, 600 ರೈಲ್ವೇ ನಿಲ್ದಾಣಗಳ ಆಧುನೀಕರಣ, 90ಕಿಮೀ ವೇಗದಲ್ಲಿ ಚಲಿಸುವ ರೈಲು ಮಾರ್ಗದಲ್ಲಿ ಡಬಲ್ ಲೈನ್ ನಿರ್ಮಾಣ ಮಾಡಲಾಗುವುದು. ಮುಂಬೈನ ಲೋಕಲ್ ರೈಲುಗಳ ಸಂಖ್ಯೆಯಲ್ಲಿ ಏರಿಕೆ. ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ 17 ಸಾವಿರ ಕೋಟಿ ರೂ. ನೀಡಲಾಗುತ್ತಿದೆ

    09. ಗ್ರಾಮ ಪಂಚಾಯ್ತಿ: ದೇಶದ 1 ಲಕ್ಷ ಗ್ರಾಮ ಪಂಚಾಯ್ತಿಗಳಿಗೆ ಇಂಟರ್ ನೆಟ್ ಸಂಪರ್ಕ. ಎಲ್ಲ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾದಲ್ಲಿ ಇ-ಪೇಮೆಂಟ್ ಅಳವಡಿಕೆ. ದೇಶದ ಗಡಿ ಪ್ರದೇಶಗಳಲ್ಲಿ ರಸ್ತೆಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು.

  • 2022 ವರ್ಷಕ್ಕೆ ಲಾಭ ಪಡೆಯುವ ಕೊಡುಗೆಗಳು ಬಜೆಟ್ ನಲ್ಲಿದೆ: ಮಲ್ಲಿಕಾರ್ಜುನ ಖರ್ಗೆ

    2022 ವರ್ಷಕ್ಕೆ ಲಾಭ ಪಡೆಯುವ ಕೊಡುಗೆಗಳು ಬಜೆಟ್ ನಲ್ಲಿದೆ: ಮಲ್ಲಿಕಾರ್ಜುನ ಖರ್ಗೆ

    ಬೆಂಗಳೂರು: ಚುನಾವಣಾ ದೃಷ್ಟಿಯಿಂದ ಮಂಡಿಸಿರುವ ಬಜೆಟ್‍ನಲ್ಲಿ 2019 ವರ್ಷಕ್ಕೆ ವಿಶೇಷವಾದ ಕೊಡುಗೆಗಳೇನೂ ಇಲ್ಲ. 2022 ವರ್ಷಕ್ಕೆ ಲಾಭ ಪಡೆಯುವ ಕೊಡುಗೆಗಳು ಇದೆ ಅಂತ ಲೋಕಸಭೆ ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

    2018ರ ಕೇಂದ್ರ ಬಜೆಟ್ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ಹೊರತು ಪಡಿಸಿ ಇದು ವರ್ಷದ ಬಜೆಟ್ ಅಲ್ಲ. ನಾಲ್ಕು ವರ್ಷದಿಂದ ಹೇಳಿದ ಕೆಲಸ ಮಾಡಿಲ್ಲ. ಒಂದು ವರ್ಷದಲ್ಲಿ ಏನು ಮಾಡಲು ಸಾಧ್ಯ ಅಂತ ಪ್ರಶ್ನಿಸಿದ್ರು. ಇದನ್ನೂ ಓದಿ: ಬೆಂಗ್ಳೂರು ಕನಸು-ನನಸು: ಸಬ್ ಅರ್ಬನ್ ರೈಲು ಹಳಿ ನಿರ್ಮಾಣಕ್ಕೆ ಸೈ ಎಂದ ಕೇಂದ್ರ

    ಕೊನೆ ಬಜೆಟ್ ನಲ್ಲಿ ಸಾಕಷ್ಟು ಭರವಸೆಗಳನ್ನು ನೀಡಿದ್ದು, ಆದ್ರೆ ಭರವಸೆಗಳು ಸರಿಯಾಗಿಲ್ಲ. ರೈತರ ಆದಾಯ ದ್ವಿಗುಣ ಮಾಡುವ ಭರವಸೆ ಸುಳ್ಳಾಗಿದೆ. ಪ್ರಾಥಮಿಕ ಶಿಕ್ಷಣಕ್ಕೆ ಸರಿಯಾದ ಅನುದಾನ ನೀಡಿಲ್ಲ. ಕೇವಲ ಉನ್ನತ ಶಿಕ್ಷಣಕ್ಕಾಗಿ ಹಣ ಮೀಸಲಿದೆ. ಈ ಲಾಭ ಕೇವಲ ಉನ್ನತ ವರ್ಗದ ಮಕ್ಕಳಿಗೆ ಸಿಗಲಿದೆ. ಉತ್ತಮ ಪ್ರಾಥಮಿಕ ಶಿಕ್ಷಣ ಬಡ ಜನರಿಗೆ ಸಿಗಬೇಕಿತ್ತು ಅಂದ್ರು. ಇದನ್ನೂ ಓದಿ:  ಕೇಂದ್ರ ಬಜೆಟ್: ಯಾವುದು ಇಳಿಕೆ? ಯಾವುದು ಏರಿಕೆ? ಇಲ್ಲಿದೆ ಪೂರ್ಣ ಮಾಹಿತಿ!

    ಕಾರ್ಪೋ ರೇಟ್ ಪರ ಇಲ್ಲ ಎನ್ನುವ ಕೇಂದ್ರ ಸರ್ಕಾರ ಕಾರ್ಪೋ ರೇಟ್ ತೆರಿಗೆ ಕಡಿತ ಉದ್ಯಮಿಗಳಿಗೆ ಲಾಭ ಮಾಡುತ್ತಿದೆ. ಕೋಟಿ ಉದ್ಯೋಗ ನೀಡುವ ಭರವಸೆ ಹುಸಿಯಾಗಿದೆ. ಸರ್ಕಾರ ತನ್ನ ಟಾರ್ಗೆಟ್ ರೀಚ್ ಆಗಿಲ್ಲ. ಆರೋಗ್ಯ ವಿಮೆ ಬಗ್ಗೆ ಸಂಪೂರ್ಣ ಚಿತ್ರಣ ನೀಡಿಲ್ಲ. ರೈಲ್ವೆ ಬಜೆಟ್ ಕೇಳುವವರೇ ಇಲ್ಲದಂತಾಗಿದೆ ಅಂತ ಹೇಳಿದ್ರು. ಇದನ್ನೂ ಓದಿ: ಮೋದಿ ಉದ್ಯೋಗ ಸೃಷ್ಟಿ ನೀತಿಯನ್ನು ಟೀಕಿಸಿದವರಿಗೆ ಬಜೆಟ್‍ನಲ್ಲಿ ಜೇಟ್ಲಿ ಉತ್ತರಿಸಿದ್ದು ಹೀಗೆ

    ಯಾದಗಿರಿ ರೈಲ್ವೆ ಪ್ಯಾಕ್ಟರಿ ಅಭಿವೃದ್ಧಿ ಹಣ ನೀಡಿಲ್ಲ. ಸಾಮಾನ್ಯ ಬಜೆಟ್ ಜೊತೆಗೆ ರೈಲ್ವೆ ಬಜೆಟ್ ಸೇರಿಸಿ ಸಾಮಾನ್ಯ ಜನರಿಗೆ ಅನ್ಯಾಯ ಮಾಡಿದೆ ಅಂತ ಅವರು ತಿಳಿಸಿದ್ರು. ಇದನ್ನೂ ಓದಿ:  ಕೇಂದ್ರ ಬಜೆಟ್: ಗ್ರಾಮೀಣ ಪ್ರದೇಶಕ್ಕೆ ಸಿಕ್ಕಿದ್ದು ಏನು?

  • ಮೋದಿ ಉದ್ಯೋಗ ಸೃಷ್ಟಿ ನೀತಿಯನ್ನು ಟೀಕಿಸಿದವರಿಗೆ ಬಜೆಟ್‍ನಲ್ಲಿ ಜೇಟ್ಲಿ ಉತ್ತರಿಸಿದ್ದು ಹೀಗೆ

    ಮೋದಿ ಉದ್ಯೋಗ ಸೃಷ್ಟಿ ನೀತಿಯನ್ನು ಟೀಕಿಸಿದವರಿಗೆ ಬಜೆಟ್‍ನಲ್ಲಿ ಜೇಟ್ಲಿ ಉತ್ತರಿಸಿದ್ದು ಹೀಗೆ

    ನವದೆಹಲಿ: ಈ ಹಣಕಾಸು ವರ್ಷದಲ್ಲಿ 70 ಲಕ್ಷ ಹೊಸ ಉದ್ಯೋಗ ಸೃಷ್ಟಿಸಲಾಗುವುದು ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

    ಉದ್ಯಮಶೀಲರಿಗೆ ಹಣಕಾಸು ನೆರವು ನೀಡಲು ಆರಂಭಿಸಿರುವ ಮುದ್ರಾ ಯೋಜನೆಗೆ 3 ಲಕ್ಷ ಕೋಟಿ ರೂ. ಮತ್ತು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮ(ಎಂಎಸ್‍ಎಂಇ) ಗಳಿಗೆ ಪ್ರೋತ್ಸಾಹ ನೀಡಲು 3794 ಕೋಟಿ ರೂಗಳ ಅನುದಾನ ಬಜೆಟ್ ನಲ್ಲಿ ಸಿಕ್ಕಿದೆ.

    ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಉದ್ಯೋಗ ಸೃಷ್ಟಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡುತ್ತಾ, ಪಕೋಡಾ ಮಾಡಿ ಮಾರುವುದು ಕೂಡ ಒಂದು ಉದ್ಯೋಗವೇ ಎಂದು ಹೇಳಿದ್ದರು.

    ಪ್ರಧಾನಿಯವರ ಈ ಹೇಳಿಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಬೆಂಗಳೂರಿನ ಎಂಎಸ್‍ಸಿ, ಎಂಎ ಹಾಗೂ ಎಂಜಿನೀಯರಿಂಗ್ ವಿದ್ಯಾರ್ಥಿಗಳು ನಗರದ ಬಿಜೆಪಿ ಕಚೇರಿಯೆದುರು ಪಕೋಡ ಮಾಡಿ ಅದನ್ನು 10 ರೂ.ಗೆ ಮಾರುವುದರ ಮೂಲಕ ಪ್ರತಿಭಟನೆ ನಡೆಸಿದ್ದರು.

    ಉದ್ಯೋಗ ಕೊಡುತ್ತೇವೆ ಎಂದಿದ್ದ ಪ್ರಧಾನಿ ಮೋದಿ ಪಕೋಡ ಮಾರುವಂತೆ ಹೇಳಿದ್ದರು. ಆದರೆ ಪಕೋಡಾ ಮಾರುವ ಉದ್ಯೋಗ ಸೃಷ್ಟಿ ಮಾಡಿದ್ದು ನರೇಂದ್ರ ಮೋದಿಯಲ್ಲ, ಉದ್ಯೋಗ ಸೃಷ್ಟಿಸಿ ಎಂದರೆ ಪಕೋಡಾ ಮಾರಾಟದ ಉದಾಹರಣೆ ನೀಡಿದ್ದರು.

    ಆ ಬಳಿಕ ಆಮ್ ಆದ್ಮಿ ಪಾರ್ಟಿ ವತಿಯಿಂದಲೂ ಕೆಲಸ ಸಿಕ್ಕಿಲ್ವಾ..? ಬಜ್ಜಿ ವಡಾ ಪಕೋಡಾ ಮಾರು 200 ರೂ. ಸಂಪಾದಿಸು, ಅದೇ ನಿನ್ನ ಉದ್ಯೋಗ ಅಂತ ಬೋರ್ಡ್ ಹಾಕೋ ಮೂಲಕ ಮೋದಿ ಹೇಳಿಕೆ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಇದನ್ನು ಓದಿ: ಮೋದಿ ವಿರುದ್ಧ ಉದ್ಯೋಗ ಸೃಷ್ಟಿಗಾಗಿ Msc, MA, ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ `ಪಕೋಡ’ ಪ್ರತಿಭಟನೆ

    https://www.youtube.com/watch?v=LqnbGiE0F3Q

  • ಕೇಂದ್ರ ಬಜೆಟ್‍ನಲ್ಲಿ ಸಿದ್ದರಾಮಯ್ಯ ತಂತ್ರಕ್ಕೆ ಮೋದಿ ರಣತಂತ್ರ

    ಕೇಂದ್ರ ಬಜೆಟ್‍ನಲ್ಲಿ ಸಿದ್ದರಾಮಯ್ಯ ತಂತ್ರಕ್ಕೆ ಮೋದಿ ರಣತಂತ್ರ

    ಬೆಂಗಳೂರು: ಇಂದು ಕೇಂದ್ರ ಬಜೆಟ್ ಮಂಡನೆ ಆಗಲಿದ್ದು, ಚುನಾವಣೆ ಹೊಸ್ತಿನಲ್ಲಿರುವ ಕರ್ನಾಟಕಕ್ಕೆ ಭರಪೂರ ಯೋಜನೆಗಳು ಜಾರಿ ಆಗಲಿವೆ ಎಂಬ ನಿರೀಕ್ಷೆಗಳು ಜನ ಸಾಮಾನ್ಯರಲ್ಲಿ ಹುಟ್ಟಿಕೊಂಡಿದೆ. ಹಾಗಾದ್ರೆ ಪ್ರಧಾನಿ ಮೋದಿ ತಮ್ಮ ವಿಶೇಷ ಬಜೆಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ಚುನಾವಣಾ ರಣತಂತ್ರ ಹೂಡ್ತಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

    ಫೆಬ್ರವರಿ 4 ರಂದು ಬೆಂಗಳೂರಲ್ಲಿ ನಡೆಯುವ `ಪರಿವರ್ತನಾ ಯಾತ್ರೆ’ಯ ಸಮಾರೋಪದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ಸಮಾರೋಪದ ಕಾರ್ಯಕ್ರಮದಲ್ಲಿಯೇ ರಾಜ್ಯಕ್ಕೆ ಬಂಪರ್ ಕೊಡುಗೆಗಳನ್ನು ನೀಡುತ್ತಾರೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನಲ್ಲಿ ಟ್ರಾಫಿಕ್ ಕಿರಿಕಿರಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಗಾಗಿ ಬೆಂಗಳೂರು ಜನರಿಗೆ ಫೆಬ್ರವರಿ 04 ರಂದು ನಡೆಯುವ ಬೃಹತ್ ಸಮಾವೇಶದಲ್ಲಿ ಸಬರ್ಬನ್ ರೈಲು ಘೋಷಣೆ ಮಾಡ್ತಾರೆ ಅಂತಾ ಹೇಳಲಾಗುತ್ತಿದೆ.

    ಬೆಂಗಳೂರು ರೈಲ್ವೆ ನಿಲ್ದಾಣಗಳು ಅಂತರಾಷ್ಟ್ರೀಯ ಮಟ್ಟಕ್ಕೆ ಏರಬಹುದು. ರಾಜ್ಯ ಸರ್ಕಾರದ ಸಹಾಯ ಪಡೆಯದೇ 150 ಕಿಲೋಮೀಟರ್ ವ್ಯಾಪ್ತಿಯ ಸಬರ್ಬನ್ ರೈಲು ನಿರ್ಮಾಣ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ಮಧ್ಯ ಪ್ರದೇಶ ಹಾಗೂ ಕರ್ನಾಟಕ ಸದ್ಯ ಚುನಾವಣಾ ಹೊಸ್ತಿಲಿನಲ್ಲಿರುವ ರಾಜ್ಯಗಳಾಗಿದ್ದು, ಎರಡು ರಾಜ್ಯಗಳಿಗೆ ಮೋದಿ ಚುನಾವಣಾ ಗಿಫ್ಟ್ ನೀಡುವ ಸಾಧ್ಯತೆ ಇದೆ. ಅದರಲ್ಲೂ ದಕ್ಷಿಣ ಭಾರತದಲ್ಲಿ ಅಧಿಕಾರದ ಚುಕ್ಕಾಣಿ ಪ್ಲಾನ್ ಮಾಡ್ತಿರುವ ಮೋದಿ ಕರ್ನಾಟಕಕ್ಕೆ ವಿಶೇಷ ಆಫರ್ ನೀಡಬಹುದು.

    ಕರ್ನಾಟಕಕ್ಕೆ ಏನು ಸಿಗಬಹುದು?:
    * ರಾಜಧಾನಿ ಬೆಂಗಳೂರಿಗರ ಬಹು ವರ್ಷದ ಬೇಡಿಕೆಯಾದ 150 ಕಿ.ಮೀ.ಬೆಂಗಳೂರು ಸಬರ್ಬನ್ ರೈಲು ಸೇವೆಯನ್ನು ಬಜೆಟ್‍ನಲ್ಲಿ ಘೋಷಿಸುವ ಸಾಧ್ಯತೆ.
    * ಬೆಂಗಳೂರು-ಹುಬ್ಬಳ್ಳಿ-ಮುಂಬೈ ಸೂಪರ್‍ಫಾಸ್ಟ್.
    * ಹುಬ್ಬಳ್ಳಿ-ಬೆಳಗಾವಿ ರಾತ್ರಿ ರೈಲ್ವೆ ಸೇವೆ.
    * ಹಂಪಿ ಎಕ್ಸ್ ಪ್ರೆಸ್ ರೈಲ್ವೆಗೆ ಪ್ರಯಾಣಿಕರ ಒತ್ತಡ ಹೆಚ್ಚಳ ಹಿನ್ನೆಲೆ ಹೊಸಪೇಟೆ-ಬೆಂಗಳೂರು ನಡುವೆ ಮತ್ತೂಂದು ರೈಲು ಆರಂಭಿಸುವ ಸಾಧ್ಯತೆಯಿದೆ.
    * ಸೆಂಟ್ರಲ್ ರೈಲ್ವೆ ವಲಯದಲ್ಲಿರುವ ಕಲಬುರಗಿ ಪ್ರತ್ಯೇಕ ವಲಯ ಮಾಡುವ ಬೇಡಿಕೆ, ಮಂಗಳೂರನ್ನು ನೈಋತ್ಯ ವಲಯಕ್ಕೆ ಸೇರಿಸುವ ಬೇಡಿಕೆ ಬಗ್ಗೆ ಇಲಾಖೆ ಮಟ್ಟದಲ್ಲಿ ಚರ್ಚೆ ನಡೆದು ಬಜೆಟ್‍ನಲ್ಲಿ ಸೇರಿಸಬಹುದಾದ ವಿಚಾರಗಳ ಪ್ರಸ್ತಾವನೆ ಸಿದ್ಧಗೊಂಡಿದೆ.
    * ರಾಜ್ಯ ಸರ್ಕಾರ ಸಹಕಾರದೊಂದಿಗೆ ಖಾಸಗಿ-ಸಾರ್ವಜನಿಕ-ಸಹಭಾಗಿತ್ವದಡಿ ಬಾಣಸವಾಡಿ, ಯಲಹಂಕ, ಯಶವಂತಪುರ, ಕೆಂಗೇರಿ, ಕಾಕ್ಸ್‍ಟೌನ್, ಮಲ್ಲೇಶ್ವರ, ರಾಮನಗರ, ವೈಟ್‍ಫೀಲ್ಡ್, ದೊಡ್ಡಬಳ್ಳಾಪುರ, ನೆಲಮಂಗಲ ಮಾರ್ಗದಲ್ಲಿ ಸಬರ್ಬನ್ ರೈಲು ಸೇವೆಗೆ ನಕ್ಷೆ.
    * ಯಶವಂತಪುರ- ಹೊಸೂರು ದ್ವಿಪಥ (ಡಬಲಿಂಗ್) ಹಾಗೂ ವಿದ್ಯುದ್ದೀಕರಣ.

    ಇನ್ನೇನು ಕೆಲವೇ ಗಂಟೆಗಳಲ್ಲಿ ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಕರ್ನಾಟಕಕ್ಕೆ ಯಾವ ಯೋಜನೆಗೆಳು ಲಭ್ಯವಾಗಲಿದೆ ಎಂಬುದು ತಿಳಿಯಲಿದೆ.

  • ಮೋದಿ ಸರ್ಕಾರದ ಬಜೆಟ್‍ನಲ್ಲಿ ಸಿಗಲಿದೆಯಾ ಬಂಪರ್ ಆಫರ್?

    ಮೋದಿ ಸರ್ಕಾರದ ಬಜೆಟ್‍ನಲ್ಲಿ ಸಿಗಲಿದೆಯಾ ಬಂಪರ್ ಆಫರ್?

    ಬೆಂಗಳೂರು: ಕೇಂದ್ರ ಬಜೆಟ್ ಮಂಡನೆಯಾಗಲು ಕ್ಷಣಗಣನೆ ಆರಂಭವಾಗಿದೆ. ಪ್ರಧಾನಿ ಮೋದಿ ಸರ್ಕಾರದ ಕಡೆಯ ಪೂರ್ಣ ಬಜೆಟ್ ಮೇಲೆ ಜನ ಸಾಮಾನ್ಯರ ನಿರೀಕ್ಷೆಗಳು ಹೆಚ್ಚಾಗಿವೆ. ಕಳೆದ ಮೂರು ಬಜೆಟ್ ಗಿಂತಲೂ ಈ ಬಜೆಟ್ ಪ್ರಾಮುಖ್ಯತೆ ಪಡೆದುಕೊಳ್ಳಲಿದ್ದು ಕಾಮನ್ ಮ್ಯಾನ್ ಗೆ ಹಾಗು ಚುನಾವಣಾ ಹೊಸ್ತಿರಲಿಲ್ಲಿರುವ ಕರ್ನಾಟಕ್ಕೆ ಏನು ಸಿಗಬಹುದು ಇಲ್ಲಿದೆ ಮಾಹಿತಿ.

    ಬಜೆಟ್‍ನಲ್ಲಿ ಸಿಗಲಿದಿಯಾ ಬಂಪರ್ ಆಫರ್…?
    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಪೂರ್ಣಾವಧಿಯ ನಾಲ್ಕನೇ ಬಜೆಟ್ ಇದು ಮುಂದಿನ ವರ್ಷ ಚುನಾವಣೆ ಹಿನ್ನೆಲೆ ಅದು ಕೇವಲ ಚುನಾವಣಾ ಬಜೆಟ್ ಆಗಲಿದೆ. ಹೀಗಾಗಿ ಈ ವರ್ಷದ ಬಜೆಟ್ ಮೇಲೆ ನಿರೀಕ್ಷೆಗಳ ಮಹಾಪೂರವೇ ವ್ಯಕ್ತವಾಗುತ್ತಿದೆ. ಪ್ರತಿಯೊಂದರಲ್ಲೂ ಹೊಸತನವನ್ನು ನಿರೀಕ್ಷೆ ಮಾಡುವ ಪ್ರಧಾನಿ ನರೇಂದ್ರ ಮೋದಿ ಈ ಭಾರಿ ಹಲವು ವಿಶೇಷತೆಗಳು ಬಜೆಟ್‍ನಲ್ಲಿವೆ ಎಂದು ಹೇಳಲಾಗಿದೆ. ಸ್ವತಃ ಅವರೇ ಹೇಳಿದಂತೆ ಗ್ರಾಮೀಣ ಭಾರತದ ಕೃಷಿಕರು, ಕಾರ್ಮಿಕ ವಲಯದ ಬಲವರ್ಧನೆ ಗೆ ಹೆಚ್ಚು ಗಮನಹರಿಸಲಾಗುವುದು. ಕಾಮನ್ ಮ್ಯಾನ್ ನಿರೀಕ್ಷೆ ಗಳನ್ನು ಪೂರ್ಣ ಮಾಡುವ ನಿಟ್ಟಿನಲ್ಲಿ ಆದಾಯ ತೆರಿಗೆ ನಿಯಮ ಸಡಿಲಿಕೆ ಹಾಗು ಆದಾಯ ತೆರಿಗೆ ಮಿತಿ ಹೆಚ್ಚಳ ಸಾಧ್ಯತೆ ಇದ್ದು ಉದ್ಯೋಗ ಸೃಷ್ಟಿಯಾಗುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಗಳನ್ನು ಕೇಂದ್ರ ಸರ್ಕಾರ ಇಡಲಿದೆ ಎಂದು ಭಾವಿಸಲಾಗಿದೆ. ಇದನ್ನೂ ಓದಿ: ಹಣಕಾಸು ಸಚಿವರು ಬಜೆಟ್‍ಗೂ ಮುನ್ನ ಈ ಸೂಟ್‍ಕೇಸ್ ತರೋದು ಯಾಕೆ?

    ಬಜೆಟ್ ನಲ್ಲಿ ಇರಬಹುದಾದ ಪ್ರಮುಖ ಅಂಶಗಳೇನು?
    * ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಗೆ ಹೆಚ್ಚಿನ ಅನುದಾನ.
    * ರೈತರ ಸಾಲ ಅಥಾವ ಬಡ್ಡಿ ಮನ್ನಾ ಬದಲಿಗೆ ಸಬ್ಸಡಿ ದರದಲ್ಲಿ ಪೂರಕ ವಸ್ತುಗಳ ಪೂರೈಕೆ ಹಾಗೂ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಒದಗಿಸುವ ಸಾಧ್ಯತೆ.
    * ಸರ್ಕಾರ ನರೇಗಾದಂತ ಯೋಜನೆಗಳ ಮೂಲಕ ಗ್ರಾಮೀಣಾ ಭಾಗದ ನೌಕರರ ಕೂಲಿ ಹೆಚ್ಚಳಕ್ಕೆ ಪ್ರಯತ್ನಿಸಬಹುದು.
    * ಜಿಎಸ್‍ಟಿ ವ್ಯಾಪ್ತಿಯಿಂದ ಮತ್ತಷ್ಟು ವಸ್ತುಗಳನ್ನು ಕೈ ಬಿಡುವ ಸಾಧ್ಯತೆ.
    * ಉದ್ಯೋಗ ಸೃಷ್ಟಿ ವಿಫಲದಂತ ಆರೋಪ ಎದುರಿಸುತ್ತಿರುವ ಸರ್ಕಾರ ಐಟಿ ಕಾನೂನುಗಳುಗೆ ಬದಲಾವಣೆ ತಂದು ಉದ್ಯೋಗ ಸೃಷ್ಟಿಗೆ ಪೂರಕ ವಾತಾವರಣ ಕಲ್ಪಿಸಬಹುದು.
    * ಆದಾಯ ತೆರಿಗೆ ವಿಚಾರದಲ್ಲಿ ಭಾರಿ ನಿರೀಕ್ಷೆಗಳಿದ್ದು 2.5 ಲಕ್ಷದ ಮಿತಿಯಿಂದ ಮೂರು ಲಕ್ಷಕ್ಕೆ ಹೆಚ್ಚಳ ಮಾಡಬಹುದು ಮತ್ತು ಆದಾಯ ತೆರಿಗೆ ಸಲ್ಲಿಕೆ ನಿಯಮಗಳನ್ನು ಕೊಂಚ ಸಡಿಸುವ ಸಾಧ್ಯತೆ
    * ದೇಶದ ಪ್ರತಿ ವ್ಯಕ್ತಿಗೂ ಐದು ಲಕ್ಷದ ವರೆಗಿನ ಏಕ ರೂಪದ ವಿಮೆ ಭಾಗ್ಯ ಕಲ್ಪಿಸಬಹುದು.
    * ರೈಲ್ವೆ ವ್ಯವಸ್ಥೆ ಯಲ್ಲಿ ಹೊಸ ಯೋಜನೆ ಗಳನ್ನು ಘೋಷಿಸದೇ ಘೋಷಿತ ಯೋಜನೆಗಳಿಗೆ ಹಣ ಒದಗಿಸುವುದು ನಿಲ್ದಾಣಗಳನ್ನು ಉನ್ನತ ದರ್ಜೆಗೆ ಏರಿಸುವುದು.
    * ಮೂಲಭೂತ ಸೌಕರ್ಯ ಹಾಗೂ ವಿದೇಶಿ ಬಂಡವಾಳ ಹೂಡಿಕೆ ಪ್ರೋತ್ಸಾಹ ನೀಡುವುದು.
    * 30% ನಷ್ಟಿರುವ ಕಾರ್ಪೋರೇಟ್ ತೆರಿಗೆಯನ್ನು 25% ಇಳಿಕೆ ಮಾಡಬಹುದು.
    * ನೋಟ್ ಬ್ಯಾನ್ ಹಿನ್ನೆಲೆ ಹಣ ಬ್ಯಾಂಕುಗಳಲ್ಲಿ ಕೇಂದ್ರಕೃತವಾದ ಹಿನ್ನೆಲೆ? ಉಳಿತಾಯ ಹಾಗೂ ಠೇವಣಿಗಳ ಮೇಲೆ ಬಡ್ಡಿ ದರ ಇಳಿಕೆ ಮಾಡಿ ದೀರ್ಘಾವಧಿಯ ಸಾಲಗಳಿಗೆ ಒತ್ತು ನೀಡಬಹುದು.

    ಕಳೆದ ಬಾರಿ ಬಜೆಟ್‍ನಲ್ಲಿ ರಾಜ್ಯದ ರೈಲ್ವೆ ಯೋಜನೆಗಳಿಗೆ 800 ಕೋಟಿ ರೂ.ಗಳಷ್ಟು ಅನುದಾನ ಒದಗಿಸಿ, ವಿವಿಧ ಕಾಮಗಾರಿಗಳಿಗೆ ಬೇರೆ ಬೇರೆ ಮೂಲಗಳಿಂದ ಅನುದಾನ ಲಭ್ಯವಾಗುವಂತೆ ಮಾಡಲಾಗಿತ್ತು. ಈ ಬಾರಿಯ ಬಜೆಟ್‍ನಲ್ಲಿ ಅನುದಾನ ಡಬಲ್ ಆಗುವ ನಿರೀಕ್ಷೆಯಲ್ಲಿದ್ದೇವೆ. ರೈಲ್ವೆ ಯೋಜನೆಗಳಿಗೆ ಜಮೀನು, ಹಣದ ಸಹಭಾಗಿತ್ವ ನೀಡುತ್ತಿರುವ ಮೊದಲ ರಾಜ್ಯ ಕರ್ನಾಟಕ. ಹೀಗಾಗಿ, ಕೇಂದ್ರ ನಮ್ಮ ಬಗ್ಗೆ ವಿಶೇಷ ಮುತುವರ್ಜಿ ತೋರಬಹುದು ಅಂತಾ ನಿರೀಕ್ಷೆ ಮಾಡಲಾಗಿದೆ. ಒಟ್ನಲ್ಲಿ ಈ ಎಲ್ಲ ನಿರೀಕ್ಷೆಗಳ ಕುತೂಹಲಕ್ಕೆ ಇನ್ನು ಕೆಲವೇ ಗಂಟೆಗಳಲ್ಲಿ ಉತ್ತರ ಸಿಗಲಿದೆ.