Tag: Buffallo

  • ಮೇವು ತಿನ್ನುವ ವೇಳೆ ಕಚ್ಚಾ ನಾಡಬಾಂಬ್ ಬ್ಲಾಸ್ಟ್ – ಎಮ್ಮೆ ಸಾವು

    ಮೇವು ತಿನ್ನುವ ವೇಳೆ ಕಚ್ಚಾ ನಾಡಬಾಂಬ್ ಬ್ಲಾಸ್ಟ್ – ಎಮ್ಮೆ ಸಾವು

    ಹಾವೇರಿ: ಎಮ್ಮೆ ಮೇವು ತಿನ್ನುವ ವೇಳೆ ಕಚ್ಚಾ ನಾಡಬಾಂಬ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಎಮ್ಮೆ (Buffalo) ಸಾವನ್ನಪ್ಪಿದ ಘಟನೆ ಹಾವೇರಿ (Haveri) ಜಿಲ್ಲೆ ಹಾನಗಲ್ (Hanagal) ತಾಲೂಕಿನ ರಾಮತೀರ್ಥ ಹೊಸಕೊಪ್ಪ ಗ್ರಾಮದ ಬಳಿ ನಡೆದಿದೆ.

    ಗ್ರಾಮದ ರೈತ ಬಾಷಾಸಾಬ್ ಬಂಕಾಪುರ ಎಂಬ ರೈತನಿಗೆ ಸೇರಿದ ಎಮ್ಮೆ ಮೃತಪಟ್ಟಿದೆ. ಕಾಡು ಹಂದಿ ಬೇಟೆಗಾಗಿ ಬೇಟೆಗಾರರು ಇಟ್ಟಿದ್ದ ಕಚ್ಚಾ ನಾಡಬಾಂಬ್ ಸೇವಿಸಿ ಈ ದುರ್ಘಟನೆ ನಡೆದಿದೆ. ಮೀಸಲು ಅರಣ್ಯ ಪ್ರದೇಶದಲ್ಲಿ ದನಗಳು ಮೇಯಿಸಲು ಹೋಗಿದ್ದ ವೇಳೆ ದುರಂತ ಸಂಭವಿಸಿದೆ. ಇದನ್ನೂ ಓದಿ: ಛತ್ತೀಸ್‌ಗಢ| ಇಬ್ಬರು ನಾಗರಿಕರ ಹತ್ಯೆ ಮಾಡಿದ ನಕ್ಸಲರು

    ಕಚ್ಚಾ ನಾಡಬಾಂಬ್ ಇಟ್ಟವರ ಮೇಲೆ ಕ್ರಮ ಕೈಗೊಳ್ಳಲು ಸ್ಥಳೀಯರು ಆಗ್ರಹಿಸಿದ್ದಾರೆ. ಎಮ್ಮೆ ಕಳೆದುಕೊಂಡ ಬಡ ರೈತನಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಲಾಗಿದೆ. ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಉತ್ತರಾಖಂಡದ ಬಳಿಕ ಗುಜರಾತ್‌ನಲ್ಲೂ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಿದ್ಧತೆ

  • ಚಿತ್ರದುರ್ಗ| ಲಾರಿ, 2 ಕಾರುಗಳ ನಡುವೆ ಸರಣಿ ಅಪಘಾತ – 4 ಎಮ್ಮೆಗಳು ಸಾವು

    ಚಿತ್ರದುರ್ಗ| ಲಾರಿ, 2 ಕಾರುಗಳ ನಡುವೆ ಸರಣಿ ಅಪಘಾತ – 4 ಎಮ್ಮೆಗಳು ಸಾವು

    ಚಿತ್ರದುರ್ಗ: ಲಾರಿ (Lorry) ಮತ್ತು ಎರಡು ಕಾರುಗಳ (Car) ನಡುವೆ ಸರಣಿ ಅಪಘಾತವುಂಟಾದ ಪರಿಣಾಮ ಎಮ್ಮೆಗಳಿಗೆ (Buffalo) ಲಾರಿ ಡಿಕ್ಕಿಯಾಗಿ 4 ಎಮ್ಮೆಗಳು ಸಾವನ್ನಪ್ಪಿದ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಚಿಕ್ಕಬೆನ್ನೂರು ಗ್ರಾಮದಲ್ಲಿ ನಡೆದಿದೆ.

    ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತ ಸಂಭವಿಸಿದೆ. ಲಾರಿ ಮತ್ತು ಎರಡು ಕಾರುಗಳ ನಡುವೆ ಸರಣಿ ಅಪಘಾತವುಂಟಾಗಿದೆ. ಅದೃಷ್ಟವಶಾತ್ ವಾಹನ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಸಂಭಲ್‌ ಮಸೀದಿ ಸುತ್ತ ಒತ್ತುವರಿ ತೆರವು ವೇಳೆ ಹಳೇ ಹಿಂದೂ ದೇಗುಲ ಪತ್ತೆ

    ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಸಕ್ಕರೆನಾಡು ಮಂಡ್ಯ ಕೇಸರಿಮಯ – ಹನುಮ ಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ

  • ಕಂಬಳದಲ್ಲಿ ಭಾಗವಹಿಸಲು 100ಕ್ಕೂ ಅಧಿಕ ಜೊತೆ ಕೋಣಗಳು ಬೆಂಗಳೂರಿಗೆ: ಅಶೋಕ್ ರೈ

    ಕಂಬಳದಲ್ಲಿ ಭಾಗವಹಿಸಲು 100ಕ್ಕೂ ಅಧಿಕ ಜೊತೆ ಕೋಣಗಳು ಬೆಂಗಳೂರಿಗೆ: ಅಶೋಕ್ ರೈ

    ಮಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಇದೇ ಮೊತ್ತಮೊದಲ ಬಾರಿಗೆ ಕಂಬಳ (Kambala) ಆಯೋಜನೆಗೊಳ್ಳುತ್ತಿದೆ. ನವೆಂಬರ್ 25 ಮತ್ತು 26ರಂದು ನಡೆಯುವ ಕಂಬಳದಲ್ಲಿ ಭಾಗವಹಿಸಲು ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳದ ಕಾಸರಗೋಡು ಜಿಲ್ಲೆಯ 100ಕ್ಕೂ ಅಧಿಕ ಜೋಡಿ ಕೋಣಗಳು (Buffalo) ಮಂಗಳೂರಿನಿಂದ (Mangaluru) ಮೆರವಣಿಗೆ ಮೂಲಕ ಬೆಂಗಳೂರಿಗೆ ತೆರಳಲಿದೆ ಎಂದು ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ, ಶಾಸಕ ಅಶೋಕ್ ಕುಮಾರ್ ರೈ (Ashok Kumar Rai) ತಿಳಿಸಿದ್ದಾರೆ.

    ಬೆಂಗಳೂರಿನಲ್ಲಿ ನಡೆಯುವ ಕಂಬಳಕ್ಕೆ ಸಂಬಂಧಿಸಿದಂತೆ ಕಂಬಳ ಕೋಣಗಳ ಮಾಲೀಕರ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ನವೆಂಬರ್ 23ರಂದು ಮೆರವಣಿಗೆಯ ಮೂಲಕ ಕೋಣಗಳನ್ನು ಲಾರಿಯಲ್ಲಿ ಬೆಂಗಳೂರಿಗೆ ಕೊಂಡೊಯ್ಯಲಾಗುತ್ತದೆ. ಹಾಸನದಲ್ಲಿ ಎರಡು ಗಂಟೆಗಳ ಕಾಲ ಕೋಣಗಳಿಗೆ ವಿಶ್ರಾಂತಿ ಮತ್ತು ಆಹಾರ ನೀಡಲಾಗುತ್ತದೆ. ಬಳಿಕ ಚನ್ನರಾಯಪಟ್ಟಣ, ತುಮಕೂರಿನಲ್ಲಿ ವಿಶ್ರಾಂತಿ ಪಡೆದು ಬೆಂಗಳೂರಿಗೆ ಹೋಗಲಾಗುವುದು. ಹಾಸನ, ಚನ್ನರಾಯಪಟ್ಟಣ ಮತ್ತು ತುಮಕೂರಿನಲ್ಲಿ ಕರಾವಳಿಯ ಜನರು ಸೇರಿದಂತೆ ಸ್ಥಳೀಯರು ಕೋಣಗಳಿಗೆ ಸ್ವಾಗತಿಸಲಿದ್ದಾರೆ. ಈ ಕೋಣಗಳನ್ನು ಕೊಂಡೊಯ್ಯುವಾಗ ಪಶು ವೈದ್ಯಾಧಿಕಾರಿಗಳು ಮತ್ತು ಪಶು ಅಂಬುಲೆನ್ಸ್‌ಗಳು ಜೊತೆಗಿರಲಿದೆ ಎಂದರು. ಇದನ್ನೂ ಓದಿ: ಲಿಂಗಾಯತರ ವಿರುದ್ಧ ಸಿಎಂ ಪದೇ ಪದೇ ದ್ವೇಷ ಸಾಧಿಸುತ್ತಿದ್ದಾರೆ: ಬಿಜೆಪಿ ಟೀಕೆ

    125 ಜೋಡಿ ಕೋಣಗಳಿಗೆ ಬೆಂಗಳೂರಿನಲ್ಲಿ ಟೆಂಟ್ ಮತ್ತು ನೀರಿನ ವ್ಯವಸ್ಥೆ ಮಾಡಲಾಗಿದೆ. ಕೋಣಗಳ ಮಾಲೀಕರಿಗೆ ಕೊಠಡಿ ವ್ಯವಸ್ಥೆಯನ್ನು ಮಾಡಲಾಗಿದೆ. ಕೋಣಗಳಿಗೆ ನೀರಿನ ವ್ಯತ್ಯಾಸವಾಗಬಾರದೆಂಬ ನೆಲೆಯಲ್ಲಿ ಮಂಗಳೂರಿನಿಂದಲೇ 5 ಟ್ಯಾಂಕರ್ ನೀರನ್ನು ಅಲ್ಲಿಗೆ ಕೊಂಡೊಯ್ಯಲಾಗುತ್ತದೆ. ಕೋಣಗಳಿಗೆ ಬೈಹುಲ್ಲು, ಹುರುಳಿಯನ್ನು ಇಲ್ಲಿಂದಲೇ ಕೊಂಡೊಯ್ದು ಅಲ್ಲಿಯೇ ತಯಾರಿಸಿ ಕೊಡಲಾಗುತ್ತದೆ. ಈ ವರ್ಷ ಆರಂಭಿಸಲಾದ ಕಂಬಳಕ್ಕೆ ಉತ್ತಮ ಸ್ಪಂದನೆ ಸಿಕ್ಕಿದರೆ ಇದನ್ನು ಪ್ರತೀ ವರ್ಷ ಮುಂದುವರಿಸಲಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಮತ್ತೆ ಕಾಂಗ್ರೆಸ್‌ನಲ್ಲಿ ಲಿಂಗಾಯತ ಬಾಂಬ್‌: ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾಗ್ತಾರಾ ಸಿಎಂ?

    ಅರಮನೆ ಮೈದಾನದಲ್ಲಿ ಕಂಬಳ ನಡೆಯಲಿದ್ದು, ಸ್ಯಾಂಡಲ್‌ವುಡ್, ಬಾಲಿವುಡ್ ಸ್ಟಾರ್ ನಟ-ನಟಿಯರು ಕಂಬಳಕ್ಕೆ ಬರುವ ನಿರೀಕ್ಷೆಯಿದೆ. ಈ ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ಸೇರಿದಂತೆ ಎಲ್ಲಾ ಪಕ್ಷಗಳ ಪ್ರಮುಖರು ಭಾಗಿಯಾಗಲಿದ್ದಾರೆ. ಈ ಕಂಬಳದಲ್ಲಿ 7 ರಿಂದ 8 ಲಕ್ಷ ಜನ ಸೇರುವ ನಿರೀಕ್ಷೆಯಿದೆ. 2,000 ಮಂದಿ ವಿಐಪಿಗಳಿಗೆ ಆಸನ ವ್ಯವಸ್ಥೆ ಮಾಡಲಾಗುತ್ತದೆ. 15 ಸಾವಿರ ಮಂದಿಗೆ ಗ್ಯಾಲರಿಯಲ್ಲಿ ವ್ಯವಸ್ಥೆ ಮಾಡಲಾಗುತ್ತದೆ. ಒಂದೆಡೆ ಕಂಬಳ ನಡೆಯುತ್ತಿದ್ದರೆ, ಮತ್ತೊಂದೆಡೆ ಕರಾವಳಿಯ ಸಂಸ್ಕೃತಿಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು, ನೂರಕ್ಕೂ ಅಧಿಕ ಮಳಿಗೆಗಳಲ್ಲಿ ಕರಾವಳಿಯ ಆಹಾರ ಮಳಿಗೆಗಳನ್ನು ಅಳವಡಿಸಲಾಗುತ್ತದೆ ಎಂದರು. ಇದನ್ನೂ ಓದಿ: ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 209ರೂ. ಏರಿಕೆ

    ಕಂಬಳವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯಲು ಬೆಂಗಳೂರು ಕಂಬಳವನ್ನು ಕರಾವಳಿಯಲ್ಲಿ ನಡೆಯುವ ಕಂಬಳದಂತೆ ಆಯೋಜಿಸಲಾಗುತ್ತದೆ. ಕಂಬಳಕ್ಕೆ ಸಂಬಂಧಿಸಿದಂತೆ ನೀತಿ ನಿಯಮಗಳನ್ನು, ಕಾನೂನುಗಳನ್ನು, ಸುಪ್ರೀಂ ಕೋರ್ಟ್ ಆದೇಶಗಳನ್ನು ಪಾಲಿಸಿಕೊಂಡು ವ್ಯವಸ್ಥೆ ಮಾಡಲಾಗುತ್ತಿದೆ. ಸುಮಾರು 5ರಿಂದ 6 ಕೋಟಿ ರೂ. ವೆಚ್ಚದಲ್ಲಿ ಕಂಬಳ ಮಾಡಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಅ.7 ರವರೆಗೆ 2,000 ರೂ. ನೋಟು ಬದಲಿಸಿಕೊಳ್ಳಲು ದಿನ ವಿಸ್ತರಿಸಿದ RBI

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]