Tag: buffaloes

  • ಲಿಂಪಿ ವೈರಸ್‌ಗೆ 5 ಸಾವಿರಕ್ಕೂ ಅಧಿಕ ಹಸುಗಳ ಮಾರಣ ಹೋಮ – ಹೆದರಿ ವಲಸೆ ಹಾದಿ ಹಿಡಿದ ಜನ

    ಲಿಂಪಿ ವೈರಸ್‌ಗೆ 5 ಸಾವಿರಕ್ಕೂ ಅಧಿಕ ಹಸುಗಳ ಮಾರಣ ಹೋಮ – ಹೆದರಿ ವಲಸೆ ಹಾದಿ ಹಿಡಿದ ಜನ

    ಜೈಪುರ: ರಾಜಾಸ್ಥಾನದ 16 ಜಿಲ್ಲೆಗಳು ಹಾಗೂ ಗುಜರಾತಿನ 20 ಜಿಲ್ಲೆಗಳಲ್ಲಿ ಹಸುಗಳಲ್ಲಿ ಲಿಂಪಿ ಚಮರೋಗ (LSD) ವೈರಸ್ ಕಾಣಿಸಿಕೊಂಡಿದ್ದು, 5 ಸಾವಿರಕ್ಕೂ ಹೆಚ್ಚು ಹಸುಗಳ ಮಾರಣಹೋಮ ನಡೆದಿದೆ.

    ಲಿಂಪಿ ವೈರಸ್ (ಲಿಂಪಿ ಚರ್ಮರೋಗ) ಹರಡುತ್ತಿರುವ ಹಿನ್ನೆಲೆಯಲ್ಲಿ, ಸತ್ತ ದನಗಳ ಮೃತದೇಹಗಳಿಂದ ವಿಪರೀತ ದುರ್ವಾಸನೆ ಬರುತ್ತಿದೆ. ಇದರಿಂದಾಗಿ ಜನರು ತಮ್ಮ ಮನೆಗಳನ್ನು ತೊರೆದು ಬೇರೆಡೆ ವಾಸಿಸಲು ತೆರಳುತ್ತಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರಧಾನಿ ನಿವಾಸಕ್ಕೆ ಘೆರಾವ್? – ಬೆಲೆ ಏರಿಕೆ ವಿರುದ್ಧ ಹೆಚ್ಚಿದ ಕಿಚ್ಚು

    ರಾಜಾಸ್ಥಾನದ 16 ಜಿಲ್ಲೆಗಲ್ಲಿ ಲಿಂಪಿ ವೈರಸ್ ಕಾಣಿಸಿಕೊಂಡಿದ್ದು ಸುಮಾರು 4,000 ಹಸುಗಳು ಮೃತಪಟ್ಟಿವೆ. ಗುಜರಾತ್ 20 ಜಿಲ್ಲೆಗಳಲ್ಲೂ ಈ ಕಾಯಿಲೆ ಕಾಣಿಸಿಕೊಂಡಿದ್ದು, 1,431 ಹಸುಗಳು ಮೃತಪಟ್ಟಿವೆ. 54,161 ಹಸುಗಳು ವೈರಸ್ ಭೀತಿ ಎದುರಿಸುತ್ತಿವೆ. ಕಾಯಿಲೆ ವಿರುದ್ಧ ಹೋರಾಡಲು ಹಸುಗಳಿಗೆ ಲಸಿಕೆ ನೀಡಲಾಗುತ್ತಿದ್ದು, ಈಗಾಗಲೇ 8 ಲಕ್ಷ ಜಾನುವಾರುಗಳಿಗೆ ಲಸಿಕೆ ನೀಡಲಾಗಿದೆ.

    ಇಲ್ಲಿನ ಜೋಧ್‌ಪುರದ ಸಮೀಪದಲ್ಲಿರುವ ಹಲವು ಹಳ್ಳಿಗಳಲ್ಲಿ ಈಗಾಗಲೇ ನೂರಾರು ಕುಟುಂಬಗಳು ತಮ್ಮ ಮನೆಗಳನ್ನು ತೊರೆದಿದ್ದಾರೆ. ಲಿಂಪಿ ವೈರಸ್ ಹರಡುವಿಕೆಯಿಂದ ಹಲವಾರು ಹಸುಗಳು, ಎತ್ತುಗಳು ಮತ್ತು ಎಮ್ಮೆಗಳೂ ಸಾವನ್ನಪ್ಪಿವೆ, ಅವುಗಳನ್ನು ಹೂಳಲು ಸ್ಥಳಾವಕಾಶದ ಕೊರತೆಯಾಗಿದೆ ಎಂದು ವರದಿಗಳು ಹೇಳುತ್ತಿವೆ.

    ಮಳೆಗಾಲ ಇರುವುದರಿಂದ ಇದು ಕೃಷಿಗೆ ಸೂಕ್ತವಾದ ಸಮಯ. ಆದರೆ ಕೆಲಸ ಮಾಡಲು ಯಾರೂ ಸಿದ್ಧರಿಲ್ಲ. ಹೊರಗಿನಿಂದ ಯುವಕರನ್ನು ಕೆಲಸ ಮಾಡಲು ಕರೆಸಲಾಗುತ್ತಿದೆ. ಆದರೆ ಇಲ್ಲಿನ ಪರಿಸ್ಥಿತಿ ನೋಡುತ್ತಿದ್ದಂತೆ ತಾವೂ ಅನಾರೋಗ್ಯಕ್ಕೆ ತುತ್ತಾಗುತ್ತೇವೆ ಎಂಬ ಆತಂಕದಿಂದ ಕೆಲಸಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಇದನ್ನೂ ಓದಿ: ನಾಲ್ಕೈದು ಉದ್ಯಮಿಗಳಿಗಾಗಿ ರಾಜಕಾರಣಿಗಳಿಬ್ಬರು ಕೆಲಸ ಮಾಡ್ತಿದ್ದಾರೆ: ರಾಹುಲ್ ಗಾಂಧಿ ವಾಗ್ದಾಳಿ

    ಹಸುವಿನ ಹಾಲನ್ನೂ ಕುಡಿಯುತ್ತಿಲ್ಲ: ಹಸುಗಳಲ್ಲಿ ಲಿಂಪಿ ವೈರಸ್ ಕಂಡುಬರುತ್ತಿರುವುದರಿಂದ ಇಲ್ಲಿನ ಜನ ಹಸುವಿನ ಹಾಲು ಕುಡಿಯುವುದನ್ನೇ ಬಿಟ್ಟಿದ್ದಾರೆ. ಇದರಿಂದ ಪ್ಯಾಕೆಟ್ ಹಾಲಿನ ಪೌಡರ್‌ಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಮಕ್ಕಳಿಗೂ ಇದನ್ನೇ ಕುಡಿಸಲಾಗುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    Live Tv
    [brid partner=56869869 player=32851 video=960834 autoplay=true]

  • ರೈಲಿಗೆ 7 ಎಮ್ಮೆಗಳು ಬಲಿ- ಡಿಕ್ಕಿಯ ರಭಸಕ್ಕೆ ತಲೆ, ಕೊಂಬು, ದೇಹ ಛಿದ್ರ ಛಿದ್ರ!

    ರೈಲಿಗೆ 7 ಎಮ್ಮೆಗಳು ಬಲಿ- ಡಿಕ್ಕಿಯ ರಭಸಕ್ಕೆ ತಲೆ, ಕೊಂಬು, ದೇಹ ಛಿದ್ರ ಛಿದ್ರ!

    ಕಾರವಾರ: ಸೇತುವೆ ದಾಟುತಿದ್ದ ಎಮ್ಮೆಗಳ ಗುಂಪಿನ ಮೇಲೆ ರೈಲು ಹರಿದು ಏಳು ಎಮ್ಮೆಗಳು ದಾರುಣ ಸಾವುಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಕಡವಿನಕಟ್ಟಾದಲ್ಲಿ ನಡೆದಿದೆ.

    ಕಡವಿನಕಟ್ಟಾ ಅರಣ್ಯ ಪ್ರದೇಶಕ್ಕೆ ಮೇವು ಮೇಯಲು ಏಳು ಎಮ್ಮೆಗಳು ಹೋಗಿದ್ದವು. ಈ ವೇಳೆ ಅಲ್ಲೇ ಪಕ್ಕದಲ್ಲಿ ರೈಲ್ವೆ ಹಳಿ ದಾಟುವಾಗ ಮಂಗಳೂರು ಕಡೆಯಿಂದ ಗೋವಾ ಕಡೆಗೆ ಸಂಚರಿಸುತ್ತಿದ್ದ ಎಕ್ಸ್ ಪ್ರೆಸ್ ರೈಲೊಂದು ವೇಗವಾಗಿ ಬಂದು ಎಮ್ಮೆಗಳಿಗೆ ಡಿಕ್ಕಿ ಹೊಡೆದಿದೆ.

    ಡಿಕ್ಕಿ ಹೊಡೆದ ಪರಿಣಾಮ ಏಳು ಎಮ್ಮೆಗಳು ಸ್ಥಳದಲ್ಲಿಯೇ ಮೃತಪಟ್ಟಿವೆ. ರೈಲು ಡಿಕ್ಕಿಯ ರಭಸಕ್ಕೆ ಎಮ್ಮೆಗಳ ತಲೆ, ಕೊಂಬು ಸೇರಿದಂತೆ ದೇಹವೂ ಸಂಪೂರ್ಣವಾಗಿ ಛಿದ್ರ-ಛಿದ್ರವಾಗಿ ರೈಲ್ವೆ ಹಳಿಯ ಬಳಿ ಬಿದ್ದಿದೆ.

    ಕಡವಿ ಕಟ್ಟಾ ಗ್ರಾಮದ ಉಮೇಶ್ ಎಂಬವರಿಗೆ ಸೇರಿದ ಎಮ್ಮೆಗಳಾಗಿದ್ದು, ಮೃತ ಎಮ್ಮೆಗಳ ಮೌಲ್ಯ 2 ಲಕ್ಷ ರೂ. ಆಗಿದೆ ಎಂದು ತಿಳಿದು ಬಂದಿದೆ. ಈ ಘಟನೆ ಸಂಬಂಧ ರೈಲ್ವೇ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv