Tag: Buffer Zone

  • ಕೆರೆಗಳ ಬಫರ್ ಝೋನ್ ಕಡಿಮೆ ಮಾಡೋ ವಿಧೇಯಕ ವಿಧಾನ ಪರಿಷತ್‌ನಲ್ಲಿ ಪಾಸ್

    ಕೆರೆಗಳ ಬಫರ್ ಝೋನ್ ಕಡಿಮೆ ಮಾಡೋ ವಿಧೇಯಕ ವಿಧಾನ ಪರಿಷತ್‌ನಲ್ಲಿ ಪಾಸ್

    ಬೆಂಗಳೂರು: ಕೆರೆಗಳ ವಿಸ್ತೀರ್ಣ ಅನುಗುಣವಾಗಿ ಬಫರ್ ಝೋನ್ (Buffer Zone Of Lakes) ನಿಗದಿಗೊಳಿಸುವ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ಕಾಯ್ದೆಗೆ (Karnataka Lake Conservation and Development Authority Amendment Act) ವಿರೋಧ ಪಕ್ಷದ ಸದಸ್ಯರ ಸಭಾತ್ಯಾಗ ನಡುವೆಯೂ ವಿಧೇಯಕ ವಿಧಾನ ಪರಿಷತ್‌ನಲ್ಲಿ (Legislative Council)  ಪಾಸ್ ಆಗಿದೆ.

    ವಿಧೇಯಕ ಮಂಡಿಸಿ ಮಾತನಾಡಿದ ಸಣ್ಣ ನೀರಾವರಿ ಇಲಾಖೆ ಸಚಿವ ಎನ್‌ಎಸ್ ಬೋಸರಾಜು, ರಾಜ್ಯದ ಕೆರೆಗಳ ಬಫರ್ ಝೋನ್ 30 ಮೀಟರ್ ನಿಗದಿ ಮಾಡಲಾಗಿತ್ತು. ಇದೀಗ ಕೆರೆಗಳ ಅನುಗುಣವಾಗಿ ಬಫರ್ ಜೋನ್ ನಿಗದಿಪಡಿಸಲಾಗುತ್ತಿದೆ. 5 ಗುಂಟೆವರೆಗೆ 0 ಮೀಟರ್, 5 ಗುಂಟೆಯಿಂದ 1 ಎಕರೆಯವರೆಗೆ 3 ಮೀಟರ್, 1-10 ಎಕರೆಯವರೆಗೆ 6 ಮೀಟರ್, 10-25 ಎಕರೆಯವರೆಗೆ 12 ಮೀಟರ್, 25 -100 ಎಕರೆಯವರೆಗೆ 24 ಮೀಟರ್ ಮತ್ತು 100 ಎಕರೆಗಿಂತ ದೊಡ್ಡದಾದ ಕೆರೆಗಳಿಗೆ 30 ಮೀಟರ್ ಬಫರ್ ವಲಯ ನಿಗದಿ ಮಾಡಲಾಗಿದೆ. ಬಫರ್ ಝೋನ್‌ಗಳಲ್ಲಿ ರಸ್ತೆ, ಸೇತುವೆ ಸೇರಿದಂತೆ ಮೂಲಸೌಕರ್ಯ ಅಭಿವೃದ್ದಿಪಡಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು. ಇದನ್ನೂ ಓದಿ: ಅವೈಜ್ಞಾನಿಕ ಗ್ಯಾರಂಟಿಗಳಿಂದ ರಾಜ್ಯದ ಆದಾಯ ಖೋತಾ: ಪ್ರಹ್ಲಾದ್ ಜೋಶಿ ಆರೋಪ

    ಇದಕ್ಕೆ ಬಿಜೆಪಿ ಸದಸ್ಯರು ವಿರೋಧ ಮಾಡಿದರು. ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಇಂದು ವೇಗವಾಗಿ ಬೆಂಗಳೂರು ಬೆಳೆಯುತ್ತಿದೆ. ಜನಸಂಖ್ಯೆ ಅನುಗುಣವಾಗಿ ಮೂಲಸೌಕರ್ಯ ಅಭಿವೃದ್ಧಿಯಾಗುತ್ತಿಲ್ಲ. ಕೆರೆ ಸಂರಕ್ಷಣೆ ಕಾಯ್ದೆಗೆ ತಿದ್ದುಪಡಿಯಿಂದ ಬಫರ್ ವಲಯದ ಗಾತ್ರ ಕಡಿಮೆಯಾಗುವುದರಿಂದ ಕೆರೆಗಳ ನಾಶವಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಮಳೆ ಬಂದರೆ ಮನೆಗಳಿಗೆ ನೀರು ನುಗ್ಗುತ್ತಿದೆ. ಕೆರ ಪ್ರದೇಶ ಅತಿಕ್ರಮಿಸಿದ ಪರಿಣಾಮ ರಸ್ತೆ ಹಾಗೂ ಮನೆಗಳಿಗೆ ನೀರು ನುಗ್ಗುತ್ತಿದೆ. ರಾಜಕಾಲುವೆ ತೆರವು ವಿಚಾರದಲ್ಲಿ ಎಲ್ಲಾ ಸರ್ಕಾರಗಳು ವಿಫಲವಾಗಿವೆ ಎಂಬುದನ್ನ ಒಪ್ಪಿಕೊಳ್ಳಬೇಕಾಗಿದೆ ಎಂದರು. ಇದನ್ನೂ ಓದಿ: ದೇವೇಗೌಡರನ್ನು ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

    ಕೆರೆ ಸುರಕ್ಷತೆ ಸಂಬಂಧಿಸಿದಂತೆ ಕೆ.ಟಿ.ರಾಮಸ್ವಾಮಿ, ಲಕ್ಷ್ಮಣ್ ರಾವ್, ಯಲ್ಲಪ್ಪ, ಹಾಗೂ ಕೋಳಿವಾಡ ಅವರು ನೀಡಿದ ವರದಿಯನ್ನ ಅಧ್ಯಯನ ನಡೆಸಬೇಕಿದೆ. ಹೀಗಾಗಿ ಇದನ್ನ ಜಂಟಿ ಸದನ ಸಮಿತಿಗೆ ನೀಡಬೇಕಿದೆ ಎಂದು ಆಗ್ರಹಿಸಿದರು. ಸಿ.ಟಿ ರವಿ, ರವಿಕುಮಾರ್ ಸೇರಿ ಬಿಜೆಪಿ ಸದಸ್ಯರು ಬಿಲ್ ವಿರೋಧ ಮಾಡಿ ಜಂಟಿ ಸದನ ಸಮಿತಿ ರಚನೆ ಮಾಡುವಂತೆ ಒತ್ತಾಯ ಮಾಡಿದರು. ಇದನ್ನೂ ಓದಿ: ಪೋಕ್ಸೊ ಪ್ರಕರಣದಲ್ಲಿ ಮಹಿಳೆಗೆ 20 ವರ್ಷ ಜೈಲು

    ಬಳಿಕ ಮಾತನಾಡಿದ ಸಚಿವ ಎನ್‌ಎಸ್ ಬೋಸರಾಜು, ಕೆರೆಗಳ ಸಂರಕ್ಷಣೆ ಸರ್ಕಾರದ ಆದ್ಯತೆಯಾಗಿದೆ. ರಾಜ್ಯದಲ್ಲಿ 41,849 ಕೆರೆಗಳಿವೆ. 35,985 ಕೆರೆಗಳ ಸರ್ವೇ ಕಾರ್ಯ ಮುಗಿದಿದ್ದು, 5,687 ಕೆರೆಗಳ ಸರ್ವೇ ಬಾಕಿಯಿದೆ. ಒತ್ತುವರಿಯಾದ 13,644 ಕೆರೆಗಳ ಪೈಕಿ 7,987 ಕೆರೆಗಳಲ್ಲಿ ಒತ್ತುವರಿ ತೆರವುಗೊಳಿಸಲಾಗಿದೆ. 5,687 ಕೆರೆಗಳ ಒತ್ತುವರಿ ತೆರವು ಮಾಡಬೇಕಿದೆ. ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಸಭೆ ನಡೆಸಿ ತೆರವು ಕಾರ್ಯ ಚುರುಕುಗೊಳಿಸಲಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ವಯನಾಡ್ ಲೋಕಸಭಾ ಕ್ಷೇತ್ರದ ಮೆಪ್ಪಾಡಿಗೆ ಕರ್ನಾಟಕ ಸರ್ಕಾರದಿಂದ 10 ಕೋಟಿ ಹಣ

    ಇಂದು ಬೆಂಗಳೂರು ನಗರದಲ್ಲಿರುವ ಕೆರೆಗಳಲ್ಲಿ ಎನ್‌ಜಿಟಿ ಆದೇಶದಂತೆ 30 ಮೀಟರ್ ಬಫರ್ ಜೋನ್ ಇಲ್ಲವಾಗಿದೆ. ಕೆರೆಗಳ ಸಂರಕ್ಷತೆ ಜೊತೆ ಮೂಲಸೌಕರ್ಯ ಅಭಿವೃದ್ಧಿ ಪಡಿಸುವುದು ತಿದ್ದುಪಡಿ ವಿಧೇಯಕದ ಉದ್ದೇಶವಾಗಿದೆ. ಹೀಗಾಗಿ ಮಸೂದೆಯನ್ನ ಅಂಗೀಕರಿಸಬೇಕೆಂದು ಮನವಿ ಮಾಡಿದರು. ತಿದ್ದುಪಡಿ ಕಾಯ್ದೆಗೆ ವಿರೋಧ ಪಕ್ಷದ ಸದಸ್ಯರು ವಿರೋಧಿಸಿ ಸಭಾತ್ಯಾಗ ಮಾಡಿದರು. ಅಂತಿಮವಾಗಿ ವಿಧೇಯಕ ಅಂಗೀಕಾರವಾಯಿತು. ಇದನ್ನೂ ಓದಿ: ಸಿದ್ದರಾಮಯ್ಯ ನಮಗೆ ಸಿಎಂ ಅಲ್ಲ, ನಮಗೆ ಡಿಕೆಶಿಯೇ ಸಿಎಂ: ಅಶೋಕ್‌

  • ಬಫರ್‌ ವಲಯದಲ್ಲಿ ಮನೆ ನಿರ್ಮಿಸಿದವರಿಗೆ ಬಿಬಿಎಂಪಿ ಶಾಕ್‌

    ಬಫರ್‌ ವಲಯದಲ್ಲಿ ಮನೆ ನಿರ್ಮಿಸಿದವರಿಗೆ ಬಿಬಿಎಂಪಿ ಶಾಕ್‌

    ಬೆಂಗಳೂರು: ಬಫರ್ ವಲಯದಲ್ಲಿ (Buffer Zone) ಮನೆಗಳನ್ನು ನಿರ್ಮಾಣ ಮಾಡಿದವರಿಗೆ ಬಿಬಿಎಂಪಿ (BBMP) ಶಾಕ್‌ ನೀಡಲು ಮುಂದಾಗಿದೆ. ಮೊದಲು ವಿದ್ಯುತ್ ಕಡಿತ ಮಾಡಿ ನಂತರ ಬಫರ್ ಝೋನ್‌ನಲ್ಲಿ ನಿರ್ಮಾಣ ಆಗಿರುವ ಕಟ್ಟಡಗಳ ತೆರವಿಗೆ ಪ್ಲ್ಯಾನ್ ಮಾಡಿದ್ದು, ನಿರ್ಮಾಣ ಹಂತದ ಕಟ್ಟಡಗಳನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ಮಾಡುತ್ತಿದೆ.

    ಬೆಂಗಳೂರಿನಲ್ಲಿ ರಾಜ ಕಾಲುವೆ, ಸರ್ಕಾರಿ ಜಾಗ, ಕೆರೆ ಒತ್ತುವರಿ ಮಾಡಿ ಮನೆ ನಿರ್ಮಾಣ ಮಾಡಿದ ಪ್ರಕರಣ ಜಾಸ್ತಿ ಇದೆ. ಇವುಗಳನ್ನೇ ತೆರವು ಮಾಡಿಸಲು ಬಿಬಿಎಂಪಿ ಹೆಣಗಾಡುತ್ತಿದೆ. ಈಗ ಬಫರ್ ಝೋನ್‌ ಗುರಿಯಾಗಿಸಿಕೊಂಡು ಕಾರ್ಯಾಚರಣೆ ಮಾಡಲು ಮುಂದಾಗಿದೆ.  ಇದನ್ನೂ ಓದಿ: ʻದೈಹಿಕ ಸಂಬಂಧʼ ಅಂದ್ರೆ ಲೈಂಗಿಕ ದೌರ್ಜನ್ಯ ಎಂದರ್ಥವಲ್ಲ – ಪೋಕ್ಸೋ ಕೇಸ್‌ ಆರೋಪಿ ಖುಲಾಸೆಗೊಳಿಸಿದ ದೆಹಲಿ ಹೈಕೋರ್ಟ್

    ಬಫರ್ ವಲಯದಲ್ಲಿ, ಚರಂಡಿ, ಕಾಲುವೆ ಮೇಲೆ ಮನೆ ನಿರ್ಮಾಣ ಮಾಡಲಾಗಿದೆ. ಆ ರೀತಿ ಬಫರ್ ಝೋನ್‌ ಮೇಲೆ ಕಟ್ಟಡ ನಿರ್ಮಾಣ ಮಾಡುತ್ತಿರುವ ಕಡೆ ಗುರುತು ಮಾಡಿ ಬೆಸ್ಕಾಂ ಕಡೆಯಿಂದ ನೋಟಿಸ್ ಕೊಡಿಸಲು ಪಾಲಿಕೆ ಚಿಂತನೆ ನಡೆಸಿದೆ. ಬಿಬಿಎಂಪಿ ಮುಖ್ಯ ಆಯುಕ್ತರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನೋಟಿಸ್ ಕೊಡಿಸುವ ತೀರ್ಮಾನಕ್ಕೆ ಬರಲಾಗಿದೆ.

    ಯಲಹಂಕದ ನರಸೀಪುರ ಸೇರಿದಂತೆ ಹಲವು ಕಡೆ ಕೆರೆ ಜಾಗವನ್ನು ಒತ್ತುವರಿ ಮಾಡಿ ಮನೆ ನಿರ್ಮಾಣ ನಿರ್ಮಿಸಲಾಗುತ್ತಿದೆ. ನಿರ್ಮಾಣ ಹಂತದಲ್ಲಿರುವಾಗಲೇ ಬೆಸ್ಕಾಂ ಕಡೆಯಿಂದ ನೋಟಿಸ್ ಕೊಡಿಸಿ, ವಿದ್ಯುತ್ ಸಂಪರ್ಕ ಕಡಿತ ಮಾಡಿ ನಂತರ ಸೂಕ್ತ ಕ್ರಮ ಜರುಗಿಸುವಂತೆ ಮುಖ್ಯ ಆಯುಕ್ತರು ಎಲ್ಲಾ ವಲಯದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಎಲ್ಲಾ ಕಡೆ ಕೂಡ ಬೆಸ್ಕಾಂ ಕಡೆಯಿಂದ ಬಿಬಿಎಂಪಿ ನೋಟಿಸ್ ನೀಡಿ ಕಟ್ಟಡ ತೆರವು ಮಾಡುತ್ತಾ? ಅಥವಾ ಒತ್ತಡಕ್ಕೆ ಮಣಿದು ಸುಮ್ಮನಾಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

     

  • ಭದ್ರಾ ಹುಲಿ ಯೋಜನೆ: ಬಫರ್ ಝೋನ್ ವಿರುದ್ಧ ಸಿಡಿದೆದ್ದ ಅನ್ನದಾತ

    ಭದ್ರಾ ಹುಲಿ ಯೋಜನೆ: ಬಫರ್ ಝೋನ್ ವಿರುದ್ಧ ಸಿಡಿದೆದ್ದ ಅನ್ನದಾತ

    – ಚುನಾವಣೆ ಬಹಿಷ್ಕಾರ ಎಚ್ಚರಿಕೆ, ಎನ್‍ಆರ್ ಪುರ ಬಂದ್ ಯಶಸ್ವಿ

    ಚಿಕ್ಕಮಗಳೂರು: ಭದ್ರಾ ಹುಲಿ ಯೋಜನೆಯ ಬಫರ್ ಝೋನ್ ಹಾಗೂ ಪರಿಸರ ಸೂಕ್ಷ್ಮ ವಲಯದ ವಿರುದ್ಧ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸರ್ವ ಪಕ್ಷ, ವಿವಿಧ ಸಂಘಟನೆಗಳು ಹಾಗೂ ಮಲೆನಾಡು ಹಿತರಕ್ಷಣಾ ಸಮಿತಿ ಕರೆ ನೀಡಿದ್ದ ಎನ್.ಆರ್.ಪುರ ತಾಲೂಕು ಬಂದ್‍ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

    ಬೆಳಗ್ಗೆ 7 ಗಂಟೆಯಿಂದಲೇ ತಾಲೂಕಿನ ಎಲ್ಲಾ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ತಾಲೂಕಿನ ಜನರು ಬಂದ್‍ಗೆ ಬೆಂಬಲ ಸೂಚಿಸಿದ್ದರು. ಸುಮಾರು ಐದು ಸಾವಿರಕ್ಕೂ ಅಧಿಕ ಜನ ಸುರಿಯೋ ಮಳೆಯಲ್ಲೇ ನಗರದ ಸರ್ಕಾರಿ ಬಸ್ ನಿಲ್ದಾಣದಿಂದ ತಾಲೂಕು ಕಚೇರಿವರೆಗೆ ಪಾದಯಾತ್ರೆ ನಡೆಸಿ ಸರ್ಕಾರ ಹಾಗೂ ಅರಣ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು.

    ತಾಲೂಕಿನ ಹತ್ತಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ವ್ಯಾಪ್ತಿಯ 30ಕ್ಕೂ ಅಧಿಕ ಹಳ್ಳಿಗಳು ಸೇರಿದಂತೆ ದೇವಸ್ಥಾನ, ಮಠ, ಚರ್ಚ್, ಮಸೀದಿಗಳ ಜೊತೆ ಸಾವಿರಾರು ಅನ್ನದಾತರ ಬದುಕು ಕೂಡ ಇತಿಹಾಸದ ಪುಟ ಸೇರಲಿವೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು. ಬದುಕಿನ ಉಳಿವಿಗಾಗಿ ಎನ್.ಆರ್ ಪುರ ತಾಲೂಕು ಬಂದ್ ಗೆ ಕೊಟ್ಟಿದ್ದ ಕರೆಗೆ ನಿರೀಕ್ಷೆಗೂ ಮೀರಿ ರೈತರು ಪಾಲ್ಗೊಂಡಿದ್ದು ಬಂದ್ ಯಶಸ್ವಿಯಾಗಿದೆ. ಇದೇ ಮೊದಲ ಬಾರಿಗೆ ಸಾವಿರಾರು ಸಂಖ್ಯೆಯಲ್ಲಿ ಹಳ್ಳಿ-ಹಳ್ಳಿಯಿಂದ ರೈತರು ಬಂದು ಜನವಿರೋಧಿ ನೀತಿ ವಿರುದ್ಧ ಕಿಡಿ ಕಾರಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ನೆರೆದ ರೈತರು, ಭದ್ರಾ ಹುಲಿ ಯೋಜನೆಯ ಬಫರ್ ಝೋನ್ ಹಾಗೂ ಪರಿಸರ ಸೂಕ್ಷ್ಮ ವಲಯ ಯೋಜನೆಯ ವಿರುದ್ಧ ಅಸಮಾಧಾನ ಹೊರಹಾಕಿದರು.

    ಪಕ್ಷಾತೀತವಾಗಿ ನಡೆದ ಈ ಬಂದ್‍ಗೆ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು, ವಿವಿಧ ಸಂಘಟನೆ ಹಾಗೂ ರೈತರು ಭಾಗವಹಿಸಿದ್ದರು. ಮೆರವಣಿಗೆಯ ಬಳಿಕ ತಾಲೂಕು ಕಚೇರಿಯಲ್ಲಿ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಯಾವುದೇ ಕಾರಣಕ್ಕೂ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜನವಿರೋಧಿ ಯೋಜನೆಯನ್ನು ಜಾರಿಗೆ ತಂದು ಜನರ ಬದುಕಿಗೆ ಕಲ್ಲು ಹಾಕೋ ಕೆಲಸ ಮಾಡಬಾರದು. ಒಂದು ವೇಳೆ ಆ ಪ್ರಯತ್ನಕ್ಕೆ ಮುಂದಾದರೆ ತಾಲೂಕಿನ ಜನ ಮುಂದಿನ ಎಲ್ಲಾ ಚುನಾವಣೆಗಳನ್ನ ಬಹಿಷ್ಕರಿಸುವ ಎಚ್ಚರಿಕೆ ನೀಡಿದ್ದಾರೆ. ಸಾವಿರಾರು ಜನರು ಭಾಗಿಯಾಗಿದ್ದ ಪ್ರತಿಭಟನಾ ಸಮಾವೇಶದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಡಿ.ಎನ್.ಜೀವರಾಜ್, ಶಾಸಕ ಟಿ.ಡಿ.ರಾಜೇಗೌಡ ಸೇರಿದಂತೆ ಮೂರು ಪಕ್ಷಗಳ ಮುಖಂಡರು ಭಾಗಿಯಾಗಿದ್ದರು.

  • ಬಫರ್ ಝೋನ್‍ನಲ್ಲಿ ಭರ್ಜರಿಯಾಗಿ ಮಟನ್ ಮಾರಾಟ

    ಬಫರ್ ಝೋನ್‍ನಲ್ಲಿ ಭರ್ಜರಿಯಾಗಿ ಮಟನ್ ಮಾರಾಟ

    ಹಾವೇರಿ: ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚು ವ್ಯಾಪಿಸುತ್ತಿದೆ. ಅದರೆ ಇಷ್ಟೆಲ್ಲ ಭಯ ಇದ್ದರೂ ಬಫರ್ ಝೋನ್‍ನಲ್ಲಿ ಭರ್ಜರಿಯಾಗಿ ಮಟನ್ ಮಾರಾಟ ಮಾಡಲಾಗಿದೆ.

    ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರು ಗ್ರಾಮದ ಬಫರ್ ಝೋನ್‍ನಲ್ಲಿ ಎಗ್ಗಿಲ್ಲದೆ ಮಟನ್ ಮಾರಾಟ ಮಾಡಲಾಗಿದೆ. ಹಾನಗಲ್ ತಾಲೂಕಿನಲ್ಲಿ 30 ಪ್ರಕರಣಗಳು ಪತ್ತೆಯಾಗಿದ್ದು, ಇಷ್ಟಾದರೂ ಜನ ಎಚ್ಚೆತ್ತುಕೊಂಡಿಲ್ಲ. ಮಾತ್ರವಲ್ಲದೆ ಇದೇ ಗ್ರಾಮದ ಕೆಸಳಗಿನ ಓಣಿಯಲ್ಲಿ ಸೋಮವಾರ ರಾತ್ರಿ ಖಾಸಗಿ ಆಸ್ಪತ್ರೆಯ ಸಿಬ್ಬಂದಿಯೊಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಸೋಂಕಿತೆ ವಾಸವಾಗಿದ್ದ ಪ್ರದೇಶವನ್ನು ಈಗಾಗಲೇ ಸೀಲ್‍ಡೌನ್ ಮಾಡಲಾಗಿದ್ದು, ಸುತ್ತಲಿನ 200 ಮೀಟರ್ ಪ್ರದೇಶವನ್ನು ಬಫರ್ ಝೋನ್ ಎಂದು ಜಿಲ್ಲಾಡಳಿತ ಗುರುತಿಸಿದೆ.

    ಜಿಲ್ಲಾಡಳಿತದ ಆದೇಶಕ್ಕೆ ಡೋಂಟ್ ಕೇರ್ ಎಂದು ಭರ್ಜರಿಯಾಗಿ ಮಟನ್ ಮಾರಾಟ ಮಾಡಲಾಗಿದೆ. ಮಟನ್ ಮಾರಾಟ ಬಂದ್ ಮಾಡುವಂತೆ ಸ್ಥಳೀಯರು ಹೇಳಿದ್ದಾರೆ. ಇಷ್ಟಾದರೂ ಕೇಳದ ಅಂಗಡಿ ಮಾಲೀಕ ಸ್ಥಳೀಯರ ಜೊತೆ ಜಟಾಪಟಿ ನಡೆಸಿದ್ದಾನೆ. ಮಟನ್ ಮಾರಾಟ ಬಂದ್ ಮಾಡಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.