ಕಾರವಾರ: ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋಗಿದ್ದ ಯುವಕನಿಗೆ ಹೋರಿ ತಿವಿದು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ನಡೆದಿದೆ.
ಚಿಗಳ್ಳಿಯ ಪರಮೇಶ್ ಸಿದ್ದಪ್ಪ ಹರಿಜನ್ ಹೋರಿ ತಿವಿತಕ್ಕೆ ಸಾವು ಕಂಡ ಯುವಕ. ಮುಂಡಗೋಡಿನ ಚಿಗಳ್ಳಿಯ ಕಲ್ಮೇಶ್ವರ ಮಠದ ಬಳಿ ಹೋರಿ ಹಬ್ಬ ನೋಡಲು ಹೋಗಿದ್ದ ಯುವಕನಿಗೆ ಹೋರಿಯೊಂದು ಏಕಾಏಕಿ ದಾಳಿ ಮಾಡಿ ಬಲಭಾಗದ ಎದೆಗೆ ತಿವಿದಿತ್ತು.
ತಕ್ಷಣ ಮುಂಡಗೋಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ತೀವ್ರ ರಕ್ತಸ್ರಾವದಿಂದ ಸಾವು ಕಂಡಿದ್ದಾನೆ. ಘಟನೆ ಸಂಬಂಧ ಮುಂಡಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡೆಹ್ರಾಡೋನ್: ಕುಡಕನೊಬ್ಬ ಬೀದಿಯಲ್ಲಿ ಗೂಳಿಯ (Bull) ಮೇಲೆ ಸವಾರಿ ಮಾಡಿದ ಘಟನೆ ಉತ್ತರಾಖಂಡದ (Uttarakhand) ರಿಷಿಕೇಶದ (Rishikesh) ತಪೋವನ ಪ್ರದೇಶದಲ್ಲಿ ನಡೆದಿದೆ.
ಕುಡಿದ ಮತ್ತಿನಲ್ಲಿದ್ದ ಯುವಕ (Drunk Man) ವೈರಲ್ ವೀಡಿಯೋವನ್ನು ಮಾಡಲು ಈ ರೀತಿ ಮಾಡಿದ್ದ. ಯುವಕನು ಗೂಳಿಯ ಮೇಲೆ ಕುಳಿತು ರಸ್ತೆಯಲ್ಲಿ ಸವಾರಿ ಮಾಡುತ್ತಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಉತ್ತರಾಖಂಡದ ಪೊಲೀಸರು ತನಿಖೆ ನಡೆಸಿದ್ದಾರೆ.
05 मई की देर रात्रि तपोवन ऋषिकेश में नशे में युवक के सांड के ऊपर सवार होने संबंधी सोशल मीडिया पर प्रसारित वीडियो का संज्ञान लेते हुए युवक के विरुद्व वैधानिक कार्यवाही करते हुए युवक को चेतावनी दी गयी कि पशुओं के साथ भविष्य में इस प्रकार दुर्व्यवहार न करें। pic.twitter.com/VrSxRdhqJX
— उत्तराखण्ड पुलिस – Uttarakhand Police (@uttarakhandcops) May 8, 2023
ಈ ವೇಳೆ ಯುವಕನನ್ನು ಉತ್ತರಾಖಂಡದ ರಿಷಿಕೇಶದ ತಪೋವನ ಪ್ರದೇಶದ ನಿವಾಸಿ ಎಂದು ಗುರುತಿಸಲಾಗಿದೆ. ಅಷ್ಟೇ ಅಲ್ಲದೇ ಆತನ ವಿರುದ್ಧ ಮಧ್ಯರಾತ್ರಿಯ ಸಮಯದಲ್ಲಿ ಅಶಾಂತಿಯನ್ನು ಸೃಷ್ಟಿಸಿರುವುದು ಹಾಗೂ ಪ್ರಾಣಿಗಳನ್ನು ಅನುಚಿತವಾಗಿ ನಡೆಸಿಕೊಂಡಿರುವ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ. ಘಟನೆಗೆ ಸಂಬಂಧಿಸಿ ಆತನನ್ನು ವಿಚಾರಣೆಗೆ ಒಳಪಡಿಸಿ ಭವಿಷ್ಯದಲ್ಲಿ ಪ್ರಾಣಿಗಳೊಂದಿಗೆ ಇಂತಹ ಸಾಹಸಗಳನ್ನು ಮಾಡದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಕುರಿತು ಉತ್ತರಾಖಂಡ ಪೊಲೀಸರು ಟ್ವೀಟ್ ಮಾಡಿದ್ದಾರೆ. ಟ್ವೀಟ್ನಲ್ಲಿ ಋಷಿಕೇಶದ ತಪೋವನದಲ್ಲಿ ಕುಡುಕನೊಬ್ಬ ಗೂಳಿಯ ಮೇಲೆ ಸವಾರಿ ಮಾಡಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಈ ಹಿನ್ನೆಲೆಯಲ್ಲಿ ವೀಡಿಯೋಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಯುವಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ಭವಿಷ್ಯದಲ್ಲಿ ಈ ರೀತಿ ಪ್ರಾಣಿಗಳೊಂದಿಗೆ ಅನುಚಿತವಾಗಿ ವರ್ತಿಸದಂತೆ ಯುವಕನಿಗೆ ಎಚ್ಚರಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉಗ್ರರ ಜೊತೆ ಸ್ಥಳೀಯರ ಶಾಮೀಲು – ಜಮ್ಮು ಕಾಶ್ಮೀರದಲ್ಲಿ 15 ಕಡೆ ಎನ್ಐಎ ಶೋಧ
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಅನೇಕರು ಈ ವೀಡಿಯೋ ಕುರಿತು ಕಿಡಿಕಾರಿದ್ದಾರೆ. ಅಷ್ಟೇ ಅಲ್ಲದೇ ಈ ರೀತಿ ಮಾಡುವುದು ಸೂಕ್ತವಲ್ಲ ಎಂದು ತಿಳಿಸಿದರೇ, ಇನ್ನೂ ಕೆಲವರು ಈ ವೀಡಿಯೋವನ್ನು ಜೆಲ್ಲಿಕಟ್ಟಿಗೆ ಹೋಲಿಸಿದ್ದಾರೆ. ಇದನ್ನೂ ಓದಿ:ಮತಗಟ್ಟೆ ತರಬೇತಿಯಲ್ಲಿ ಉದ್ಧಟತನ – ಮಹಿಳಾ ಇನ್ಸ್ಪೆಕ್ಟರ್ ಅಮಾನತು
ಬೀದರ್: ಪಬ್ಲಿಕ್ ಟಿವಿ ವರದಿ ಬೆನ್ನಲ್ಲೇ ನರೇಗಾ ಯೋಜನೆಯಡಿ ಕೈಗೊಂಡ ಕಾಮಗಾರಿಯ ಬಿಲ್ ಪಾವತಿಗೆ ಲಂಚಕ್ಕೆ (Bribery) ಬೇಡಿಕೆಯಿಟ್ಟ ತಾಂತ್ರಿಕ ಸಹಾಯಕನನ್ನು (Technical Assistant) ಕೆಲಸದಿಂದ ವಜಾ ಮಾಡಲಾಗಿದೆ.
ಬಸವಕಲ್ಯಾಣ ತಾ.ಪಂ. ತಾಂತ್ರಿಕ ಸಹಾಯಕ ಸೂರ್ಯಕಾಂತ್ ಪಾಟೀಲ್ನನ್ನು ಕೆಲಸದಿಂದ ವಜಾಗೊಳಿಸಿ ಬೀದರ್ (Bidar) ಜಿಲ್ಲಾ ಪಂಚಾಯತ್ ಸಿಇಒ ಶಿಲ್ಪಾ ಎಂ ಆದೇಶ ನೀಡಿದ್ದಾರೆ.
ನರೇಗಾ ಯೋಜನೆಯಡಿ ಕೈಗೊಂಡ ಕಾಮಗಾರಿಯ ಬಿಲ್ ಪಾವತಿಗೆ ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಎತ್ತುಗಳ ಸಮೇತ ತಾ.ಪಂ.ಗೆ ಬಂದು ರೈತರೊಬ್ಬರು ಆರೋಪ ಮಾಡಿದ್ದರು. ಈ ಸುದ್ದಿ ಪಬ್ಲಿಕ್ ಟಿವಿಯಲ್ಲಿ ಬಿತ್ತರವಾಗಿರುವ ಹಿನ್ನೆಲೆ ಅಧಿಕಾರಿಗಳಿಂದ ವರದಿ ಪರಿಶೀಲನೆ ಮಾಡಲಾಗಿತ್ತು. ರೈತನ ಬಿಲ್ ಪಾವತಿ ಮಾಡದೆ ಮೇಲ್ನೋಟಕ್ಕೆ ಕರ್ತವ್ಯ ನಿರ್ಲಕ್ಷ್ಯ ತೊರಿದ್ದು ಕಂಡುಬಂದಿದೆ. ಹೀಗಾಗೀ ತಾಂತ್ರಿಕ ಸಹಾಯಕ ಸೂರ್ಯಕಾಂತ್ ಪಾಟೀಲ್ನನ್ನು ಸೇವೆಯಿಂದ ವಜಾ ಮಾಡಲಾಗದೆ ಎಂದು ಜಿ.ಪಂ. ಸಿಇಒ ಆದೇಶಿಸಿದ್ದಾರೆ. ಇದನ್ನೂ ಓದಿ: ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ – ಜಿಲ್ಲಾ ಪ್ರವಾಸ ಮೊಟಕುಗೊಳಿಸಿ ಸಿಎಂ ಬೆಂಗಳೂರಿಗೆ ವಾಪಸ್
ನರೇಗಾ ಕಾಮಗಾರಿ ಬಿಲ್ ಪಾವತಿ ಮಾಡಲು ರೈತನ ಬಳಿ ಲಂಚ ಕೇಳಿದ್ದ ತಾಲೂಕು ಪಂಚಾಯತ್ ಅಧಿಕಾರಿಗೆ ಲಂಚ ಕೊಡಲು ಹಣವಿಲ್ಲದೆ ತನ್ನ 2 ಎತ್ತುಗಳನ್ನು ನೀಡಲು ರೈತ ಮುಂದಾಗಿದ್ದ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಬಗದುರಿ ಗ್ರಾಮದ ರೈತ ಪ್ರಶಾಂತ್ ಬಿರಾದಾರ ಲಂಚ ರೂಪದಲ್ಲಿ ತನ್ನ 2 ಎತ್ತುಗಳನ್ನು ಕೊಡಲು ತಾ.ಪಂ. ಕಚೇರಿಗೆ ಬಂದಿದ್ದ. ಎತ್ತುಗಳ ಸಮೇತ ಬಂದಿದ್ದ ರೈತನನ್ನು ಕಂಡು ಅಧಿಕಾರಿಗಳು ಶಾಕ್ ಆಗಿದ್ದರು. ಇದನ್ನೂ ಓದಿ: ರಾಜ್ಯ ವಿಧಾನಸಭೆ ಚುನಾವಣೆಗೆ ಇಂದೇ ಮುಹೂರ್ತ ಫಿಕ್ಸ್
ಶಿವಮೊಗ್ಗ: ಸೈಕಲ್ (Bycycle) ಹೊಡೆಯುತ್ತಿದ್ದ ಬಾಲಕನ ಮೇಲೆ ಗೂಳಿ ದಾಳಿ ನಡೆಸಿರುವ ಘಟನೆ ಶಿವಮೊಗ್ಗ (Shivamogga) ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ನಡೆದಿದೆ.
ಸೈಕಲ್ನಲ್ಲಿ ಬರುತ್ತಿದ್ದ ಬಾಲಕ ಸನತ್ (7) ಮೇಲೆ ಏಕಾಏಕಿ ಗೂಳಿ (Bull) ದಾಳಿ ಮಾಡಿದೆ. ಮನೆ ಸಮೀಪದ ಅಂಗಡಿಯಿಂದ ಹಾಲು ತರುವಾಗ ಗೂಳಿ ಏಕಾಏಕಿ ಬಾಲಕನ ಮೇಲೆರಗಿದೆ. ಬಾಲಕನನ್ನ ಕೊಂಬಿನಿಂದ ಎತ್ತಿ ಬಿಸಾಕಿ, ಚೆನ್ನಾಗಿ ತಿವಿದಿದೆ. ಈ ರೋಚಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಮಠಗಳು, ರಾಜಕೀಯ ಪಕ್ಷಗಳು ಭೇದ ಮಾಡೋದನ್ನ ನಿಲ್ಲಿಸಬೇಕು – ಪೇಜಾವರ ಶ್ರೀ
ಹಾವೇರಿ: ರಾಜ್ಯಮಟ್ಟದ ಹೋರಿ ಸ್ಪರ್ಧೆ (Bull Competition) ನಡೆಯುತ್ತಿದ್ದ ವೇಳೆ ಕೊಬ್ಬರಿ ಹೋರಿ (Bull) ತಿವಿದು ಯುವಕನೊಬ್ಬ ಸಾವನ್ನಪ್ಪಿದ್ದು, 10 ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಹಾವೇರಿ (Haveri) ಜಿಲ್ಲೆ ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರು ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು ಮಂಜುನಾಥ್ ಚಳ್ಳಕ್ಕನವರ (27) ಎಂದು ಗುರುತಿಸಲಾಗಿದೆ. ಮಂಜುನಾಥ್ ಸಂಗೂರು ಗ್ರಾಮದ ನಿವಾಸಿಯಾಗಿದ್ದು, ರಾಜ್ಯಮಟ್ಟದ ಹೋರಿ ಹಬ್ಬವನ್ನು ವೀಕ್ಷಿಸಲು ತೆರಳಿದ್ದ. ಹೋರಿ ಹಬ್ಬವನ್ನು ನೋಡುತ್ತಿದ್ದ ವೇಳೆ ಹೋರಿ ತಿವಿದು ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯಲ್ಲಿ 6 ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಪ್ರೇಯಸಿಯ ಶವವನ್ನು ಕಬ್ಬಿನ ಗದ್ದೆಯಲ್ಲಿ ಹೂತಾಕಿದ ಪ್ರಿಯಕರ – 15 ದಿನದ ಬಳಿಕ ಪ್ರಕರಣ ಬೆಳಕಿಗೆ
ಮಂಜುನಾಥ್ನ ಹೊಟ್ಟೆಯ ಎಡಭಾಗಕ್ಕೆ ಹೋರಿ ತಿವಿದಿದ್ದರಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಯುವಕನ ಮೃತ ದೇಹವನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತನ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಕಾಗಿನೆಲೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಕತಾರ್ನಲ್ಲಿ ಫಿಫಾ ವಿಶ್ವಕಪ್ ವರದಿ ಮಾಡುತ್ತಿದ್ದಾಗಲೇ ಮತ್ತೊಬ್ಬ ಪತ್ರಕರ್ತ ಸಾವು
Live Tv
[brid partner=56869869 player=32851 video=960834 autoplay=true]
ಹಾವೇರಿ: ಸಾಮಾನ್ಯವಾಗಿ ಮನುಷ್ಯರ ಪುಣ್ಯತಿಥಿಯನ್ನು ಮಾಡೋದನ್ನು ನಾವು ನೋಡಿದ್ದೇವೆ. ಅದರೆ ಈ ಗ್ರಾಮದಲ್ಲಿ ಹೋರಿಯ (Bull) ಅಭಿಮಾನಿಗಳು ಹಾಗೂ ಗ್ರಾಮಸ್ಥರು ಸೇರಿ ಶರವೇಗದ ಓಟಗಾರ ಚಾಮುಂಡಿ ಎಕ್ಸ್ಪ್ರೆಸ್ ಹೋರಿಯ (Chamundi Express Bull) ಪುಣ್ಯತಿಥಿ ಕಾರ್ಯವನ್ನು ಮಾಡಿದ್ದಾರೆ. ಇಡೀ ಊರ ಜನರು ಹಣ ಹಾಕಿ, ಮನುಷ್ಯರಂತೆಯೇ ಈ ವಿಶೇಷ ಹೋರಿಯ ಪುಣ್ಯತಿಥಿ ಕಾರ್ಯವನ್ನು ಮಾಡಿದ್ದಾರೆ.
ಹಾವೇರಿ (Haveri) ತಾಲೂಕಿನ ಚಿಕ್ಕಲಿಂಗದಹಳ್ಳಿ ಗ್ರಾಮದಲ್ಲಿ ರಾಜ್ಯಮಟ್ಟದ ಹೋರಿ ಹಬ್ಬದಲ್ಲಿ ಸಾಕಷ್ಟು ಹೆಸರು ಮಾಡಿದ ಚಾಮುಂಡಿ ಎಕ್ಸ್ಪ್ರೆಸ್ ಹೋರಿಯ ಪುಣ್ಯತಿಥಿಯನ್ನು ಗ್ರಾಮಸ್ಥರೆಲ್ಲಾ ಸೇರಿ ನೆರವೇರಿಸಿದ್ದಾರೆ. ಸುಮಾರು 15 ವರ್ಷಗಳ ಹಿಂದೆ ಗ್ರಾಮದ ರೈತ ಮೆಹಬೂಬ್ ಸಾಬ್ ದೇವಗಿರಿ ಅವರ ಮನೆಯಲ್ಲಿ ಈ ಹೋರಿ ಜನಿಸಿತ್ತು. ಜಮೀನು ಕೆಲಸದ ಜೊತೆಗೆ ಕೊಬ್ಬರಿ ಹೋರಿ ಸ್ಪರ್ಧೆಯಲ್ಲಿ ಶರವೇಗದಲ್ಲಿ ಓಡುವ ಮೂಲಕ ಚಾಮುಂಡಿ ಎಕ್ಸ್ಪ್ರೆಸ್ ಎಂದು ಹೆಸರು ಮಾಡಿತ್ತು.
ಈ ಹೋರಿಯನ್ನು ಕಳೆದ 3 ವರ್ಷಗಳ ಹಿಂದೆ ಶಿಕಾರಿಪುರಕ್ಕೆ 18 ಲಕ್ಷ ರೂ.ಗೆ ಮಾರಾಟ ಮಾಡಲಾಗಿತ್ತು. ನಂತರ ಶಿಕಾರಿಪುರ ಮಾಲೀಕರು ಸಹ ಮಾಸೂರಿಗೆ ಮತ್ತೆ ಮಾರಾಟ ಮಾಡಿದ್ದರು. ಚಾಮುಂಡಿ ಎಕ್ಸ್ಪ್ರೆಸ್ ಹೆಸರು ಬದಲಿಸಿ ಮೂಕಾಂಬಿಕಾ ಎಕ್ಸ್ಪ್ರೆಸ್ ಎಂದು ನಾಮಕರಣ ಮಾಡಿದ್ದರು. 9 ದಿನಗಳ ಹಿಂದೆ ಚಾಮುಂಡಿ ಎಕ್ಸ್ಪ್ರೆಸ್ ಹೋರಿ ನಿಧನವಾಗಿದ್ದು, ಅಭಿಮಾನಿಗಳು ಕಣ್ಣೀರು ಹಾಕಿದ್ದರು. ಇಂದು ಹೋರಿಯ ಹುಟ್ಟೂರಾದ ಚಿಕ್ಕಲಿಂಗದಹಳ್ಳಿಯ ಅಭಿಮಾನಿಗಳು ಹಾಗೂ ಗ್ರಾಮಸ್ಥರು ಸೇರಿ ಪುಣ್ಯತಿಥಿ ಮಾಡಿದ್ದಾರೆ. ಗ್ರಾಮದ ಪ್ರತಿ ಮನೆಯವರು ಪುಣ್ಯತಿಥಿಯಲ್ಲಿ ಭಾಗವಹಿಸಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ಸಾಮಾನ್ಯವಾಗಿ ಮನುಷ್ಯರು ಮೃತಪಟ್ಟಾಗ ತಿಥಿ ಕಾರ್ಯ ನೆರವೇರಿಸಲಾಗುತ್ತದೆ. ಅದರಂತೆಯೇ ಚಾಮುಂಡಿ ಎಕ್ಸ್ಪ್ರೆಸ್ ಹೋರಿ ಮೃತಪಟ್ಟು 9 ದಿನಗಳಾಗಿದ್ದರಿಂದ ಹೋರಿ ಅಭಿಮಾನಿಗಳು ನೆಚ್ಚಿನ ಹೋರಿಗೆ ತಿಥಿ ಕಾರ್ಯ ನೆರವೇರಿಸಿದ್ದಾರೆ. ಮೃತ ಚಾಮುಂಡಿ ಎಕ್ಸ್ಪ್ರೆಸ್ ಹೋರಿಯ ಭಾವಚಿತ್ರ ಮಾಡಿಸಿ, ಅದರ ಮುಂದೆ ಹಣ್ಣುಗಳು, ಸಿಹಿ ತಿನಿಸುಗಳನ್ನಿಟ್ಟು ಗ್ರಾಮದಲ್ಲಿನ ಸ್ವಾಮಿಯನ್ನು ಕರೆಯಿಸಿ ಅಗಲಿದ ಹೋರಿಯ ತಿಥಿಯ ಪೂಜೆ ನೆರವೇರಿಸಿದ್ದಾರೆ. ಇದನ್ನೂ ಓದಿ: ನಾನೂ ಗೂಂಡಾಗಿರಿ ಮಾಡ್ತಿದ್ದೆ, ಜೀನ್ಸ್ ಪ್ಯಾಂಟ್ ಹಾಕ್ಕೊಂಡ್ರೆ ಹುಡ್ಗೀರೆಲ್ಲಾ ನನ್ನೇ ನೋಡ್ತಿದ್ರು: ಶ್ರೀರಾಮುಲು
ಚಾಮುಂಡಿ ಎಕ್ಸ್ಪ್ರೆಸ್ ಹೋರಿಯು ಬೈಕ್, ಚಿನ್ನ, ಬೆಳ್ಳಿ, ಟ್ರಜೂರಿ ಸೇರಿದಂತೆ ಹಲವು ಬಹುಮಾನ ಗೆದ್ದಿದೆ. ಹಾವೇರಿ, ದಾವಣಗೆರೆ, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಡೆದ ಹೋರಿ ಹಬ್ಬದ ಅಖಾಡದಲ್ಲಿ ಚಾಮುಂಡಿ ಎಕ್ಸ್ಪ್ರೆಸ್ ಹೋರಿ ದೊಡ್ಡ ಹೆಸರು ಮಾಡಿದ್ದರಿಂದ ಅಭಿಮಾನಿಗಳು ಹೋರಿಯ ತಿಥಿ ಕಾರ್ಯದಲ್ಲಿ ಭಾಗವಹಿಸಿ, ಹೋರಿಗೆ ಪೂಜೆ ಸಲ್ಲಿಸಿ, ಊಟ ಸವಿದು ಮನೆಯತ್ತ ಹೆಜ್ಜೆ ಹಾಕಿದ್ದಾರೆ. ಇದನ್ನೂ ಓದಿ: ಹೆಡ್ ಕಾನ್ಸ್ಟೇಬಲ್ ಮನೆಗೆ ಕನ್ನ
Live Tv
[brid partner=56869869 player=32851 video=960834 autoplay=true]
ಗಾಂಧೀನಗರ: ಗುಜರಾತ್ನಲ್ಲಿ ಚುನಾವಣೆಗೂ (Gujarat elections) ಮುನ್ನ ಎಲ್ಲಾ ಪಕ್ಷಗಳು ಭರ್ಜರಿಯಾಗಿ ಪ್ರಚಾರ ಕಾರ್ಯಕ್ರಮ ನಡೆಸುತ್ತಿವೆ. ಈ ನಡುವೆ ಗುಜರಾತ್ ಚುನಾವಣೆಗೆ ಸಂಬಂಧಿಸಿದ ವೀಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಭಾಷಣ ಮಾಡುತ್ತಿದ್ದಾಗ ಗೂಳಿಯೊಂದು (Bull) ಸ್ಥಳಕ್ಕೆ ಪ್ರವೇಶಿಸಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಭಿಕರು ಚೆಲ್ಲಾಪಿಲ್ಲಿಯಾಗಿ ಓಡಿರುವುದು ವೀಡಿಯೋದಲ್ಲಿ ಕಾಣಿಸಿಕೊಂಡಿದೆ.
ಸೋಮವಾರ ಗುಜರಾತ್ನ ಮೆಹ್ಸಾನಾದಲ್ಲಿ ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ಅವರ ಚುನಾವಣಾ ರ್ಯಾಲಿ ನಡೆದಿದೆ. ಈ ವೇಳೆ ಗೂಳಿಯೊಂದು ಸಭೆಯ ಮಧ್ಯದಲ್ಲಿ ಪ್ರವೇಶಿಸಿದೆ. ಆದರೆ ಈ ಘಟನೆಯ ಬಗ್ಗೆ ಅಶೋಕ್ ಗೆಹ್ಲೋಟ್ ಬಿಜೆಪಿಗೆ (BJP) ಹಿಡಿಶಾಪ ಹಾಕಿದ್ದಾರೆ. ಈ ಹಿಂದಿನಿಂದಲೂ ಕಾಂಗ್ರೆಸ್ (Congress) ಸಭೆ ನಡೆಸಿದಾಗಲೆಲ್ಲ ಈ ಬಿಜೆಪಿಗರು ಗೂಳಿ, ಹಸು ಬಿಡುವುದನ್ನು ನಾನು ನೋಡಿದ್ದೇನೆ ಎಂದು ಕಿಡಿಕಾರಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವ ವೀಡಿಯೋದಲ್ಲಿ ಗೂಳಿ ಸಭೆಯನ್ನು ಪ್ರವೇಶಿಸಿದ ಸಂದರ್ಭ ಗೊಂದಲ ಉಂಟಾಗಿದೆ. ಗೂಳಿ ಅತ್ತಿಂದಿತ್ತ ಓಡಾಡಿದ್ದು, ಅದರಿಂದ ತಪ್ಪಿಸಿಕೊಳ್ಳಲು ಜನರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಇಷ್ಟೆಲ್ಲಾ ಗದ್ದಲದ ನಡುವೆ ಅಶೋಕ್ ಗೆಹ್ಲೋಟ್ ವೇದಿಕೆಯಿಂದ ಜನರನ್ನು ಶಾಂತವಾಗಿರುವಂತೆ ಸಲಹೆ ನೀಡುತ್ತಿರುವುದು ಕಂಡುಬಂದಿದೆ. ಇದನ್ನೂ ಓದಿ: ಹೈಕಮಾಂಡ್ ನಾಯಕರ ಭೇಟಿಗೆ ಮುಂದಾದ ಬೊಮ್ಮಾಯಿ – ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ?
Live Tv
[brid partner=56869869 player=32851 video=960834 autoplay=true]
ಶಿವಮೊಗ್ಗ: ದೀಪಾವಳಿ ಹಬ್ಬ (Deepavali Festival) ದ ಬಳಿಕ ಗ್ರಾಮೀಣ ಭಾಗದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಏರ್ಪಡಿಸಲಾಗುತ್ತದೆ. ಸಾವು-ನೋವು ಸಂಭವಿಸುತ್ತಿದ್ರೂ ಆಚರಣೆ ಅಂತ ಜನ ಜೀವಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಮಲೆನಾಡು ಜಿಲ್ಲೆ ಶಿವಮೊಗ್ಗ (Shivamogga) ದಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಒಂದೇ ದಿನ ಮೂವರು ಬಲಿಯಾಗಿದ್ದಾರೆ.
ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಹೋರಿ ತಿವಿತಕ್ಕೆ ಸಾವನ್ನಪ್ಪಿದ್ದಾರೆ. ಶಿಕಾರಿಪುರ ತಾಲೂಕಿನ ಗ್ರಾಮದಲ್ಲಿ ಹೋರಿ ಬೆದರಿಸುವ ವೇಳೆ ಬೆದರಿದ ಎದೆ ಮೇಲೆ ಕಾಲಿಟ್ಟ ಪರಿಣಾಮ ಪ್ರಶಾಂತ್ ಎಂಬಾತ ಸಾವನ್ನಪ್ಪಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಸೊರಬ ತಾಲೂಕಿನ ಜಡೆ ಗ್ರಾಮದಲ್ಲಿ ನಡೆದ ಹೋರಿ ಸ್ಪರ್ಧೆ ಏರ್ಪಡಿಸಲಾಗಿತ್ತು. ಚಗಟೂರು ನಿವಾಸಿ ಆದಿ ಎಂಬಾತ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ. ಆದರೆ ಹೋರಿ ತಿವಿತಕ್ಕೊಳಗಾಗಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ತೂಗು ಸೇತುವೆ ದುರಂತ- ಸಾವಿನ ಸಂಖ್ಯೆ 132ಕ್ಕೆ ಏರಿಕೆ; ಸ್ಥಳಕ್ಕೆ ಮೋದಿ ಭೇಟಿ ನೀಡುವ ಸಾಧ್ಯತೆ
ಇತ್ತ ತರಲಘಟ್ಟ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಣೆಗೆ ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದ ವಸಂತ ಅನ್ನೋರು ಬಂದಿದ್ರು. ಹೋರಿ ಸ್ಫರ್ದೆ ನೋಡುತ್ತಿರುವಾಗಲೇ ಹಾರಿ ಬಂದ ಕುತ್ತಿಗೆಗೆ ತಿವಿದ ಪರಿಣಾಮ ವಸಂತ ಕೊನೆಯುಸಿರೆಳೆದಿದ್ದಾರೆ. ಇನ್ನು ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಇಂತಹ ಆಚರಣೆ ವೇಳೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಅಂದಿದ್ದಾರೆ.
Live Tv
[brid partner=56869869 player=32851 video=960834 autoplay=true]
ಶಿವಮೊಗ್ಗ: ರೈತರ ಹಬ್ಬವಾಗಿರುವ ಜನಪದ ಕ್ರೀಡೆ, ಸಾಂಪ್ರದಾಯಿಕ ಹೋರಿ ಬೆದರಿಸುವ ಹಬ್ಬ ಮಲೆನಾಡಿನಲ್ಲಿ (Malenadu) ಆರಂಭವಾಗಿದೆ. ಹೋರಿ (Bull) ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ಮಾಡಿದ ಅವಂತಾರದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಇದೀಗ ಘಟನೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಹೋರಿ ಬೆದರಿಸುವ ಹಬ್ಬ ಬಹಳ ಮಹತ್ವ ಪಡೆದಿದ್ದು, ಅಖಾಡದಲ್ಲಿ ಹೋರಿಗಳು ಓಡಿ ಹೋಗುತ್ತದೆ. ಇಂತಹ ಸಮಯದಲ್ಲಿ ಹೋರಿಗಳನ್ನು ಹಿಡಿದು ನಿಲ್ಲಿಸುವುದಕ್ಕೆ ಪೈಲ್ವಾನರು (Pailwan) ತಮ್ಮ ಜೀವದ ಹಂಗು ತೊರೆದು ಕಸರತ್ತು ನಡೆಸುತ್ತಾರೆ. ಅಲ್ಲದೇ ಅಖಾಡದಲ್ಲಿ ಹೋರಿ ಓಡುವುದನ್ನು ನೋಡಲು ತಾಲೂಕಿನ ವಿವಿಧ ಗ್ರಾಮಗಳು ಸೇರಿದಂತೆ ನೆರೆಯ ತಾಲೂಕು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಂದ ಸಾವಿರಾರು ಜನ ಸೇರುತ್ತಾರೆ. ಪೈಲ್ವಾನನ ಕೈಗೆ ಸಿಗದೇ ಓಡುವ ಹೋರಿಯ ದೃಶ್ಯ ನೋಡುಗರ ಮೈನವಿರೇಳಿಸುತ್ತದೆ.
ಸದ್ಯ ಮಲೆನಾಡನಲ್ಲಿ ಶುರುವಾಗಿರುವ ಹೋರಿ ಬೆದರಿಸುವ ಹಬ್ಬದ ಸಮಯದಲ್ಲಿ ಇಬ್ಬರು ವ್ಯಕ್ತಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ (Shikaripura) ತಾಲೂಕಿನ ಗಾಮ ಗ್ರಾಮದಲ್ಲಿ ನಡೆದ ಹೋರಿ ಹಬ್ಬದಲ್ಲಿ ಪ್ರಶಾಂತ್ (36) ಮತ್ತು ಸೊರಬ (Soraba) ತಾಲೂಕಿನ ಜಡೆ ಗ್ರಾಮದ ಚಗಟೂರು ನಿವಾಸಿ ಆದಿ (20) ಮೃತ ದುರ್ದೈವಿಗಳಾಗಿದ್ದಾರೆ. ಇದನ್ನೂ ಓದಿ: ದೇಗುಲ ಸ್ಫೋಟಿಸಲು ಬಂದಿದ್ದ ಬಾಂಬರ್ – ಸಾಹಿತ್ಯ ಓದಿಕೊಂಡೇ ISIS ಮೂಲಭೂತವಾದಿಯಾಗಿದ್ದ
ಹೋರಿ ಬೆದರಿಸುವ ಸಂದರ್ಭದಲ್ಲಿ ಬೆದರಿದ ಹೋರಿ ಗೋಡೆ ಕಡೆಗೆ ತಿರುಗಿ ಹಿಂದಕ್ಕೆ ವಾಪಸ್ ನುಗ್ಗಿದೆ. ಈ ವೇಳೆ ಪ್ರಶಾಂತ್ ಮೈಮೇಲೆ ಹಾರಿ, ಎದೆ ಮೇಲೆ ಕಾಲಿಟ್ಟು ಹೋರಿ ಮುಂದಕ್ಕೆ ಹೋಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಪ್ರಶಾಂತ್ರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ರಾತ್ರಿ ಪ್ರಶಾಂತ್ ಮೃತಪಟ್ಟಿದ್ದಾರೆ. ಸೊರಬ ತಾಲೂಕಿನ ಜಡೆ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಆದಿ ಎಂಬ ಯುವಕ ಹೋರಿ ತಿವಿತಕ್ಕೊಳಗಾಗಿ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಸಿಗರೇಟು ಸೇದೋಕೆ ಕಾರು ನಿಲ್ಲಿಸಿದ ಮಾಲೀಕ – 75 ಲಕ್ಷ ಹಣದೊಂದಿಗೆ ಚಾಲಕ ಎಸ್ಕೇಪ್
Live Tv
[brid partner=56869869 player=32851 video=960834 autoplay=true]
ಗಾಂಧೀನಗರ: ರೈಲು ಹಳಿ ಮೇಲೆ ಹಾದು ಹೋಗುವ ವೇಳೆ ಗೂಳಿಗೆ ವಂದೇ ಭಾರತ್ ಎಕ್ಸ್ಪ್ರೆಸ್ (Vande Bharat Express) ರೈಲು ಡಿಕ್ಕಿ ಹೊಡೆದು ಜಖಂಗೊಂಡಿರುವ ಘಟನೆ ಮುಂಬೈ ಸೆಂಟ್ರಲ್ ವಿಭಾಗದ ಅತುಲ್ ಬಳಿ ನಡೆದಿದೆ. ಈ ತಿಂಗಳಲ್ಲಿ ಸಂಭವಿಸಿದ ಮೂರನೇ ಘಟನೆ ಇದಾಗಿದೆ.
ಇಂದು ಬೆಳಗ್ಗೆ 8:17ಕ್ಕೆ ಮುಂಬೈ ಸೆಂಟ್ರಲ್ ವಿಭಾಗದ ಅತುಲ್ ಬಳಿ ವಂದೇ ಭಾರತ್ ರೈಲು ಹಾದುಹೋಗುವ ವೇಳೆ ಜಾನುವಾರುಗಳು ಅಡ್ಡ ಬಂದಿದ್ದು, ಈ ವೇಳೆ ಗೂಳಿಗೆ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ ಎಂದು ಭಾರತೀಯ ರೈಲ್ವೆ ತಿಳಿಸಿದೆ. ರೈಲು ಮುಂಬೈ ಸೆಂಟ್ರಲ್ನಿಂದ ಗಾಂಧಿನಗರಕ್ಕೆ ಪ್ರಯಾಣಿಸುತ್ತಿತ್ತು. ಘಟನೆಯ ನಂತರ ರೈಲನ್ನು ಸುಮಾರು 15 ನಿಮಿಷಗಳ ಕಾಲ ತಡೆಹಿಡಿಯಲಾಯಿತು. ಇದನ್ನೂ ಓದಿ: ವಂದೇ ಭಾರತ್ ಎಕ್ಸ್ಪ್ರೆಸ್ ಜಖಂ – ಎಮ್ಮೆಗಳ ಮಾಲೀಕನ ವಿರುದ್ಧ FIR
ಮುಂಬೈ-ಗಾಂಧಿನಗರ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಗುಜರಾತ್ನ ಅತುಲ್ ನಿಲ್ದಾಣದ ಬಳಿ ಜಾನುವಾರುಗಳಿಗೆ ಡಿಕ್ಕಿ ಹೊಡೆದಿದೆ. ಕಾರ್ಯಾಚರಣೆಗೆ ಯಾವುದೇ ಹಾನಿಯಾಗಿಲ್ಲ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮುಂಬೈ ಸೆಂಟ್ರಲ್-ಗಾಂಧೀನಗರ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಜಾನುವಾರಕ್ಕೆ ಡಿಕ್ಕಿ ಹೊಡೆದ ಪರಿಣಾಮ ರೈಲಿನ ಮುಂಭಾಗ ಹಾನಿಯಾಗಿದೆ.
ಅಕ್ಟೋಬರ್ 6 ರಂದು ಗುಜರಾತ್ನ ವತ್ವಾ ಮತ್ತು ಮಣಿನಗರ ರೈಲು ನಿಲ್ದಾಣಗಳ ನಡುವೆ ಮುಂಬೈನಿಂದ ಗಾಂಧೀನಗರಕ್ಕೆ ತೆರಳುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದು ನಾಲ್ಕು ಎಮ್ಮೆಗಳು ಸಾವನ್ನಪ್ಪಿದ್ದವು. ಹಾನಿಯಾಗಿದ್ದ ರೈಲಿನ ಮುಂಭಾಗವನ್ನು ಬದಲಿಸಲಾಗಿತ್ತು. ಮರುದಿನ ಕೂಡ ಮುಂಬೈಗೆ ತೆರಳುತ್ತಿದ್ದಾಗ ಗುಜರಾತ್ನ ಆನಂದ್ ಬಳಿ ರೈಲು ಹಸುವಿಗೆ ಡಿಕ್ಕಿ ಹೊಡೆದಿತ್ತು.
Live Tv
[brid partner=56869869 player=32851 video=960834 autoplay=true]