Tag: Bulldozer Justice

  • ಪಂಜಾಬ್‌ನ ಆಪ್‌ ಸರ್ಕಾರದಿಂದ ಬುಲ್ಡೋಜರ್ ಅಸ್ತ್ರ – ಡ್ರಗ್ ಮಾಫಿಯಾ ಕಿಂಗ್‌ಗಳ ಮನೆ ನೆಲಸಮ

    ಪಂಜಾಬ್‌ನ ಆಪ್‌ ಸರ್ಕಾರದಿಂದ ಬುಲ್ಡೋಜರ್ ಅಸ್ತ್ರ – ಡ್ರಗ್ ಮಾಫಿಯಾ ಕಿಂಗ್‌ಗಳ ಮನೆ ನೆಲಸಮ

    ಚಂಡೀಗಢ: ಡ್ರಗ್‌ ಮಾಫಿಯಾದಲ್ಲಿ ತೊಡಗಿದ್ದ ಇಬ್ಬರ ಮನೆಗಳ ಮೇಲೆ ಪಂಜಾಬ್‌ನ (Punjab) ಆಪ್‌ ಸರ್ಕಾರ (AAP Government) ಬುಲ್ಡೋಜರ್‌ ಅಸ್ತ್ರ (Bulldozer Justice) ಪ್ರಯೋಗಿಸಿದೆ. ಡ್ರಗ್ ಮಾಫಿಯಾದಲ್ಲಿ ಭಾಗಿಯಾಗಿದ್ದ ಇಬ್ಬರ ಮನೆಗಳನ್ನು ಪಂಜಾಬ್ ಪೊಲೀಸರು ನೆಲಸಮಗೊಳಿಸಿದ್ದಾರೆ.

    ಆರೋಪಿಗಳಾದ ಸೋನು ಮತ್ತು ರಾಹುಲ್ ಹನ್ಸ್‌ಗೆ ಸೇರಿದ್ದ ಅಕ್ರಮವಾಗಿ ನಿರ್ಮಿಸಿದ್ದ ಮನೆಗಳನ್ನು ಕೆಡವಲಾಗಿದೆ. ಇದು ರಾಜ್ಯ ಸರ್ಕಾರದ ಡ್ರಗ್ಸ್ ವಿರುದ್ಧದ ಕ್ರಮದ ಭಾಗವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: Haveri | ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ – ಪ್ರಯಾಣಿಕರು ಪಾರು

    ಆರೋಪಿಗಳು ಮೂರು ವರ್ಷಗಳಿಂದ ಮಾದಕ ವಸ್ತುಗಳ ಕಳ್ಳಸಾಗಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಸೋನು ವಿರುದ್ಧ ಆರು ಎಫ್‌ಐಆರ್‌ಗಳು ದಾಖಲಾಗಿದ್ದವು. ಇನ್ನೂ ರಾಹುಲ್ ಹನ್ಸ್ ಸಹ ಕೃತ್ಯದಲ್ಲಿ ತೊಡಗಿಕೊಂಡಿದ್ದ. ಆತನ ಮನೆ 47 ಲಕ್ಷ ರೂ. ಮೌಲ್ಯದ್ದಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕಳೆದ ವಾರ ಪಂಜಾಬ್ ಪೊಲೀಸರು ನಾಲ್ವರು ಮಾದಕ ವಸ್ತುಗಳ ಕಳ್ಳಸಾಗಣೆದಾರರನ್ನು ಬಂಧಿಸಿದ್ದರು. ಬಂಧಿತರಿಂದ 5 ಕೆ.ಜಿಗೂ ಹೆಚ್ಚು ಹೆರಾಯಿನ್ ವಶಪಡಿಸಿಕೊಂಡಿದ್ದರು. ಆರೋಪಿಗಳನ್ನು ಅಮೃತಸರ ನಿವಾಸಿಗಳಾದ ಗುರ್ಜಂತ್ ಸಿಂಗ್ ಅಲಿಯಾಸ್ ಕಲು ಮತ್ತು ಜಗ್ಜಿತ್ ಸಿಂಗ್, ತರಣ್ ತರಣ್‌ನ ಸಾಹಿಲ್ ಕುಮಾರ್ ಅಲಿಯಾಸ್ ಸಾಹಿಲ್ ಮತ್ತು ಫಿರೋಜ್‌ಪುರದ ರಿಂಕು ಎಂದು ಗುರುತಿಸಲಾಗಿದೆ.

    ಪಂಜಾಬ್‌ ಸರ್ಕಾರ ಮಾದಕ ವಸ್ತುಗಳಿಂದ ಜನರನ್ನು ಮುಕ್ತವಾಗಿಸಲು ಔಷಧ, ಪರೀಕ್ಷಾ ಕಿಟ್‌ಗಳು, ಅಗತ್ಯವಿರುವ ಸಿಬ್ಬಂದಿ ಸೇರಿದಂತೆ ಪುನರ್ವಸತಿ ಮತ್ತು ಮಾದಕ ವಸ್ತುಗಳ ವ್ಯಸನ ಮುಕ್ತಿ ಕೇಂದ್ರಗಳನ್ನು ಸ್ಥಾಪಿಸಿದೆ. ಇವುಗಳ ಸ್ಥಿತಿ ಬಗ್ಗೆ ಖಚಿತಪಡಿಸಿಕೊಳ್ಳಲು ಎಲ್ಲಾ ಜಿಲ್ಲಾಧಿಕಾರಿಗಳಿಗೂ ನಿರ್ದೇಶಿಸಲಾಗಿದೆ. ಇದನ್ನೂ ಓದಿ: ಲಾಡ್ಲೇ ಮಶಾಕ್ ದರ್ಗಾದ ಶಿವಲಿಂಗ ಪೂಜೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ – ಆಂದೋಲಾ ಶ್ರೀಗಿಲ್ಲ ಪೂಜೆ ಭಾಗ್ಯ

  • ದೇಶದಲ್ಲಿ ಅ.1 ರವರೆಗೆ ‘ಬುಲ್ಡೋಜರ್‌ ಕಾರ್ಯಾಚರಣೆ’ಗೆ ಸುಪ್ರೀಂ ತಡೆ

    ದೇಶದಲ್ಲಿ ಅ.1 ರವರೆಗೆ ‘ಬುಲ್ಡೋಜರ್‌ ಕಾರ್ಯಾಚರಣೆ’ಗೆ ಸುಪ್ರೀಂ ತಡೆ

    ನವದೆಹಲಿ: ದೇಶದಲ್ಲಿ ಅಕ್ಟೋಬರ್‌ 1 ರ ವರೆಗೆ ಬುಲ್ಡೋಜರ್‌ ಕಾರ್ಯಾಚರಣೆಗೆ (ಬುಲ್ಡೋಜರ್‌ ನ್ಯಾಯ) ಸುಪ್ರೀಂ ಕೋರ್ಟ್‌ (Supreme Court) ತಡೆ ನೀಡಿದೆ. ಮುಂದಿನ ವಾದಗಳನ್ನು ಆಲಿಸುವ ವರೆಗೆ ದೇಶದ ಯಾವುದೇ ಸ್ಥಳದಲ್ಲಿ ಖಾಸಗಿ ಆಸ್ತಿಯ ವಿರುದ್ಧ ಅನಧಿಕೃತ ಬುಲ್ಡೋಜರ್‌ ಕ್ರಮ ಬೇಡ ಎಂದು ಕೋರ್ಟ್‌ ಸೂಚಿಸಿದೆ.

    ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರಿದ್ದ ಪೀಠ ವಿಚಾರಣೆ ನಡೆಸಿತು. ‘ಬುಲ್ಡೋಜರ್‌ ಕಾರ್ಯಾಚರಣೆ’ಯು (Bulldozer Justice) ಸರಿಯಾದ ಪ್ರಕ್ರಿಯೆಗಳ ನಂತರ ನೆಲಸಮಕ್ಕೆ ಮಂಜೂರು ಮಾಡುವಂತಹ ಕ್ರಮಗಳ ಮೇಲೆ ಪರಿಣಾಮ ಬೀರುತ್ತದೆ. ಮುಂದಿನ ವಿಚಾರಣೆಯ ತನಕ ನಿಮ್ಮ ಕೈಗಳನ್ನು ನಿಯಂತ್ರಿಸಿ. ಇದರಿಂದ ಸ್ವರ್ಗವೇ ಧರೆಗೆ ಬೀಳುವುದಿಲ್ಲ ಎಂದು ನ್ಯಾಯಾಲಯ ಚಾಟಿ ಬೀಸಿದೆ. ಸರ್ಕಾರದ ಪರ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ವಾದಿಸಿದರು. ಇದನ್ನೂ ಓದಿ: ಮಹಿಳಾ ವೈದ್ಯರಿಗೆ ನೈಟ್ ಶಿಫ್ಟ್ ತೆಗೆದು ಅಧಿಸೂಚನೆ – ಮಮತಾ ಸರ್ಕಾರಕ್ಕೆ ಸುಪ್ರೀಂ ಚಾಟಿ

    ಬುಲ್ಡೋಜರ್‌ ಕಾರ್ಯಾಚರಣೆ ಕ್ರಮವನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ. ಈ ಕ್ರಮ ಅದ್ಭುತ ಎಂದು ವೈಭವೀಕರಿಸುವವರ ವಿರುದ್ಧ ಕೋರ್ಟ್‌ ಎಚ್ಚರಿಕೆ ಸಂದೇಶ ರವಾನಿಸಿದೆ. ನ್ಯಾಯಾಲಯದ ಅನುಮತಿ ಇಲ್ಲದೇ ಮುಂದಿನ ದಿನಾಂಕದ ವರೆಗೆ ಯಾವುದೇ ಕಾರ್ಯಾಚರಣೆ ನಡೆಸದಂತೆ ಸೂಚಿಸಿದೆ.

    ಇದೇ ವೇಳೆ, ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿ ಅಥವಾ ಶಿಕ್ಷೆಗೊಳಗಾದ ವ್ಯಕ್ತಿಗಳಿಗೆ ಸೇರಿದ ಮನೆಗಳು ಮತ್ತು ವಾಣಿಜ್ಯ ಆಸ್ತಿಗಳ ಬುಲ್ಡೋಜಿಂಗ್ ವಿರುದ್ಧದ ಅರ್ಜಿಗಳನ್ನು ನ್ಯಾಯಾಲಯ ಆಲಿಸಿತು. ರಸ್ತೆಗಳು, ರೈಲ್ವೆ ಹಳಿಗಳು ಮತ್ತು ಜಲಮೂಲಗಳಂತಹ ಸಾರ್ವಜನಿಕ ಸ್ಥಳಗಳಲ್ಲಿನ ಅತಿಕ್ರಮಣಗಳನ್ನು ತೆರವುಗೊಳಿಸಲು ಈ ಆದೇಶ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಅಪ್ರಾಪ್ತೆಗೆ ಗನ್ ತೋರಿಸಿ 2 ಗಂಟೆಗಳ ಕಾಲ ಅತ್ಯಾಚಾರ – ಪ್ರಕರಣ ಮುಚ್ಚಿ ಹಾಕಲು ಪೋಷಕರಿಗೆ ಹಣದ ಆಮಿಷ