Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k

Join our Whatsapp group by clicking the below link
https://chat.whatsapp.com/E6YVEDajTzH06LOh77r25k

ಬೆಳಗಾವಿ: ರಾಮದುರ್ಗದ ವಿಠ್ಠಲಪೇಟೆಯ ಸರ್ಕಾರಿ ಶಾಲಾ ಮಕ್ಕಳಿಗೆ ಪಬ್ಲಿಕ್ ಟಿವಿ ವತಿಯಿಂದ ಶಾಲಾ ಬ್ಯಾಗ್ ಜೊತೆಯಲ್ಲಿ ಅವಶ್ಯಕ ವಸ್ತುಗಳನ್ನು ವಿತರಿಸಲಾಗಿದೆ.
ಜಿಲ್ಲೆಯ ರಾಮದುರ್ಗ ತಾಲೂಕು ಮಲಪ್ರಭಾ ನದಿಯ ಪ್ರವಾಹಕ್ಕೆ ಸಿಲುಕಿ ಜಲಸಮಾಧಿಯಾಗಿತ್ತು. ಈ ಬಗ್ಗೆ ಪಬ್ಲಿಕ್ ಟಿವಿ ಪ್ರವಾಹ ಬಂದ ಬಳಿಕದ ಜನರ ಜೀವನದ ಬಗ್ಗೆ ಬುಲೆಟ್ ರಿಪೋರ್ಟರ್ ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಮಾಡಿತ್ತು.

ಪ್ರವಾಹಕ್ಕೆ ಸಿಲುಕಿದ್ದ ರಾಮದುರ್ಗದ ವಿಠ್ಠಲಪೇಟೆಯ ಸರ್ಕಾರಿ ಶಾಲಾ ಮಕ್ಕಳ ದಯನೀಯ ಸ್ಥಿತಿಯ ಬಗ್ಗೆ ಬೆಳಕು ಚೆಲ್ಲಲಾಗಿತ್ತು. ಅದರಲ್ಲಿ ಸ್ವಾತಿ ಎಂಬ ಬಾಲೆ ತನ್ನ ಸ್ಥಿತಿ ಹೇಳಿಕೊಂಡು ಕಣ್ಣೀರಿಟ್ಟಿದ್ದಳು. ಆ ಬಾಲೆಯ ಮೊಗದಲ್ಲಿ ಇಂದು ನಗುವಿದೆ.
ಕಾರಣ ಪಬ್ಲಿಕ್ ಟಿವಿ ವತಿಯಿಂದ ಮಕ್ಕಳಿಗೆ ಶಾಲಾ ಬ್ಯಾಗ್ ಜೊತೆಯಲ್ಲಿ ಅವಶ್ಯಕ ವಸ್ತುಗಳನ್ನು ವಿತರಿಸಲಾಗಿದೆ. ಈ ಮೂಲಕ ಅಂದು ಅತ್ತಿದ್ದ ಪುಟಾಣಿ ಹುಡುಗಿ ಇಂದು ಧನ್ಯತಾ ಭಾವದಿಂದ ನಗುತ್ತಿದ್ದಾಳೆ.

ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಉಂಟಾಗಿದ್ದ ಭೀಕರ ಪ್ರವಾಹದಿಂದ ತತ್ತರಿಸಿದ ಜನರಿಗಾಗಿ ಶಾಲಾ ವಿದ್ಯಾರ್ಥಿಗಳು ಕಣ್ಣೀರು ಹಾಕಿ ಚಂದಾ ಸಂಗ್ರಹ ಮಾಡಿದ್ದಾರೆ.
ಪಬ್ಲಿಕ್ ಟಿವಿಯ ‘ಬುಲೆಟ್ ರಿಪೋರ್ಟರ್’ನಲ್ಲಿ ರಾಮದುರ್ಗದ ಪ್ರವಾಹ ಪೀಡಿತ ಪ್ರದೇಶದ ಕುರಿತು ಪ್ರಸಾರವಾಗಿತ್ತು, ಅದರಲ್ಲಿ ರಾಮದುರ್ಗ ಶಾಲೆಯ ಮಕ್ಕಳಿಗೆ ಸಹಾಯ ಮಾಡುವಂತೆ ಅಲ್ಲಿನ ಮುಖ್ಯೋಪಾಧ್ಯಾಯರು ಮನವಿ ಮಾಡಿಕೊಂಡಿದ್ದರು. ಈ ಮನವಿಗೆ ಬನಶಂಕರಿಯಲ್ಲಿರುವ ಸೆಂಟ್ ಪೀಟರ್ಸ್ ಶಾಲೆಯ ಮಕ್ಕಳ ಮನ ಮಿಡಿದಿದ್ದು, ಪ್ರವಾಹ ಪೀಡಿತರಿಗಾಗಿ ಚಂದಾ ಸಂಗ್ರಹ ಮಾಡಿದ್ದಾರೆ.

ಪ್ರವಾಹದಿಂದ ಹಾನಿಯಾಗಿರುವ ದೃಶ್ಯಗಳನ್ನು ಮಾಧ್ಯಮದಲ್ಲಿ ನೋಡಿ ಸೆಂಟ್ ಪೀಟರ್ಸ್ ಶಾಲೆಯ ವಿದ್ಯಾರ್ಥಿಗಳು ಬೇಸರಗೊಂಡು ತಮ್ಮ ಮುಖ್ಯೋಪಾಧ್ಯಾಯರ ಬಳಿ ಹೋಗಿ, ಪ್ರವಾಹ ಪೀಡಿತರಿಗೆ ಸಹಾಯ ಮಾಡಲು ಬಯಸುತ್ತೇವೆ ಎಂದು ಕಣ್ಣೀರು ಹಾಕಿದ್ದಾರೆ. ಅಲ್ಲದೆ ಅವರಿಗಾಗಿ ಹಣ ಸಂಗ್ರಹಿಸಿ ನೀಡುತ್ತೇವೆ ಎಂದು ಹೇಳಿದ್ದಾರೆ. ಸಂತ್ರಸ್ತರಿಗೆ ಸಹಾಯ ಮಾಡಲು ಬಯಸಿದ ಮಕ್ಕಳ ನಿರ್ಧಾರಕ್ಕೆ ಶಾಲೆಯ ಮುಖ್ಯೋಪಾಧ್ಯಾಯರು ಅನುಮತಿ ನೀಡುವ ಮೂಲಕ ಮಕ್ಕಳ ಸಹಾಯ ಕಾರ್ಯಕ್ಕೆ ಕೈಜೊಡಿಸಿದ್ದಾರೆ.
ಈವರೆಗೆ ವಿದ್ಯಾರ್ಥಿಗಳೆಲ್ಲಾ ಸೇರಿ ಸುಮಾರು 25 ಸಾವಿರ ರೂಪಾಯಿ ಹಣ ಸಂಗ್ರಹ ಮಾಡಿದ್ದಾರೆ. ಈ ಹಣವನ್ನು ಪ್ರವಾಹ ಪೀಡಿತ ಜನರಿಗೆ ನೀಡಲು ಮಕ್ಕಳು ನಿರ್ಧರಿಸಿದ್ದಾರೆ.