Tag: bullet train

  • 508 ಕಿ.ಮೀ ಉದ್ದದ ಭಾರತದ ಮೊದಲ ಬುಲೆಟ್ ರೈಲು ಯೋಜನೆ ವಿಶೇಷತೆಗಳೇನು ?

    508 ಕಿ.ಮೀ ಉದ್ದದ ಭಾರತದ ಮೊದಲ ಬುಲೆಟ್ ರೈಲು ಯೋಜನೆ ವಿಶೇಷತೆಗಳೇನು ?

    ಭಾರತ ತಂತ್ರಜ್ಞಾನಗಳು ಬೆಳೆದಂತೆ ಒಂದಿಲ್ಲೊಂದು ರೀತಿಯಲ್ಲಿ ಹೊಸ ಮಹತ್ವದ ಹೆಜ್ಜೆಗಳನ್ನು ಇಡುತ್ತಲೇ ಹೊರಟಿದೆ. ಉಗಿ ಬಂಡೆಗಳ ರೈಲುಗಳನ್ನು ಬಳಸುತ್ತಿದ್ದ ನಾವುಗಳು ಇದೀಗ ಇಂಧನ, ವಿದ್ಯುತ್ ಬಳಸಿ ರೈಲುಗಳಲ್ಲಿ ಸಂಚರಿಸುತ್ತಿದ್ದೇವೆ. ಈಗ ಭಾರತ ಮತ್ತೆ ಮಹತ್ವದ ಹೆಜ್ಜೆ ಹಾಕಲು 508 ಕಿಮೀ ಉದ್ದದ ಹೈ ಸ್ಪೀಡ್ ಬುಲೆಟ್ ರೈಲು ಯೋಜನೆಯನ್ನು ನಿರ್ಮಿಸುತ್ತಿದೆ.

    2017ರ ಸೆಪ್ಟೆಂಬರ್ 14ರಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರು ಭಾರತದ ಅತಿ ಉದ್ದದ ಹೈ ಸ್ಪೀಡ್ ಬುಲೆಟ್ ರೈಲು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಈಗಾಗಲೇ ಇದರ ನಿರ್ಮಾಣ ಆರಂಭವಾಗಿದ್ದು, ಪ್ರಗತಿಯ ಹಂತದಲ್ಲಿದೆ.

    ಮುಂಬೈ ಮತ್ತು ಅಹಮದಾಬಾದ್ ನಡುವೆ ಸಂಚರಿಸುವ ಈ ರೈಲು 508 ಕಿಮೀ ಉದ್ದದ ಯೋಜನೆಯಾಗಿದ್ದು, 300 ಕಿಮೀ ನಷ್ಟು ವಯಾಡಕ್ಟ್ ಮೂಲಕ ಸಂಚರಿಸಲಿದೆ. ಒಟ್ಟು 1.08 ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ ಈ ಬುಲೆಟ್ ರೈಲು ನಿರ್ಮಾಣಗೊಳ್ಳಲಿದೆ. ಈ ಪೈಕಿ ತಲಾ 5000 ಕೋಟಿ ರೂಪಾಯಿಗಳನ್ನು ಗುಜರಾತ್ ಮತ್ತು ಮಹಾರಾಷ್ಟ್ರ ಸರ್ಕಾರಗಳು ಪಾವತಿಸುತ್ತೇವೆ ಹಾಗೂ NHSRCL ಗೆ ಕೇಂದ್ರವು 10,000 ಕೋಟಿ ರೂಪಾಯಿಗಳನ್ನು ಪಾವತಿಸುತ್ತಿದೆ. ಈಗಾಗಲೇ ಈ ಬುಲೆಟ್ ರೈಲಿನ ಪ್ರಮುಖ ಘಟ್ಟವಾದ 300 ಕಿಮೀ ವಯಾಡಕ್ಟ್ ನಿರ್ಮಿಸುವ ಹಂತವನ್ನು ಪೂರ್ಣಗೊಳಿಸಿದೆ.

    ಒಟ್ಟು ರೈಲಿನ ಉದ್ದದ ಪೈಕಿ 300 ಕಿಮೀ ವಯಾಡಕ್ಟ್ ನಲ್ಲಿ ಎಂಟು ನದಿಗಳಿದ್ದು, ಆ ಪೈಕಿ 5 ನದಿಗಳಿಗೆ ಸೇತುವೆಗಳನ್ನು ನಿರ್ಮಿಸಲಾಗಿದೆ. ಇನ್ನುಳಿದಂತೆ 21 ಕಿಮೀ ಭೂಗತ, 7 ಕಿಮೀ ಸಮುದ್ರದ ಆಳ ಮತ್ತು 5 ಕಿ.ಮೀ ಪರ್ವತ ಸುರಂಗಗಳನ್ನ ಒಳಗೊಂಡಿದೆ. ಈ ರೈಲು ಮುಂಬೈನಿಂದ ಅಹಮದಾಬಾದ್ ಗೆ ಸಂಚರಿಸಲು 2.07 ಗಂಟೆಗಳನ್ನು ತೆಗೆದುಕೊಳ್ಳುತ್ತದೆ. 12 ನಿಲ್ದಾಣಗಳ ಮೂಲಕ ಚಲಿಸುವುದರಿಂದ ಒಟ್ಟು 2.58 ಗಂಟೆಗಳನ್ನು ತೆಗೆದುಕೊಳ್ಳುತ್ತದೆ.

    ಬುಲೆಟ್ ರೈಲು ಯೋಜನೆಯ 12 ನಿಲ್ದಾಣಗಳು:
    ಈ ಬುಲೆಟ್ ರೈಲು ಯೋಜನೆ ಒಟ್ಟು 12 ನಿಲ್ದಾಣಗಳನ್ನು ಒಳಗೊಂಡಿದ್ದು, ಗುಜರಾತ್ ನಲ್ಲಿ 9 ಹಾಗೂ ಮಹಾರಾಷ್ಟ್ರದಲ್ಲಿ ಮೂರು ನಿಲ್ದಾಣಗಳನ್ನು ಒಳಗೊಂಡಿದೆ. ಸಬರಮತಿ, ಅಹಮದಾಬಾದ್, ಆನಂದ್, ವಡೋದರ, ಭರೂಚ್, ಸೂರತ್, ಬಿಲಿಮೋರಾ, ವಾಪಿ, ಬೋಯಿಸರ್, ವಿರಾರ್, ಥಾಣೆ ಹಾಗೂ ಮುಂಬೈ.

    ಇನ್ನು ಈ ಬುಲೆಟ್ ರೈಲು ಯೋಜನೆ ಒಂದು ವಿಶೇಷತೆ ಎಂದರೆ ಇದು ಯುರೋಪಿಯನ್ ಸಿಗ್ನಲಿಂಗ್ ತಂತ್ರಜ್ಞಾನವನ್ನು ಆಧರಿಸಿದೆ ಎನ್ನಲಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಜರ್ಮನ್ ಸಂಸ್ಥೆ ಸಿಮೇನ್ಸ್ ಹಾಗೂ ಅಹ್ಮದಾಬಾದ್ ಮೂಲದ ದಿನೇಶ್ ಚಂದ್ ಆರ್ ಅಗರ್ವಾಲ್ ಅವರು ಈ ಕುರಿತು ಮಾತುಕತೆ ನಡೆಸಿರುವುದಾಗಿ ವರದಿಯಾಗಿದೆ.

    ಆರಂಭದಲ್ಲಿ ಇರಲು ಯೋಜನೆ 2026 ಹೊತ್ತಿಗೆ ಪೂರ್ಣಗೊಳ್ಳಲಿದೆ ಎಂದಿದ್ದರು. ಆದರೆ ಸದ್ಯದ ಪ್ರಗತಿಯ ಪ್ರಕಾರ 2028ರಲ್ಲಿ ಬುಲೆಟ್ ರೈಲು ಯೋಜನೆ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ಇದೆ.

  • Gujarat| ನಿರ್ಮಾಣ ಹಂತದಲ್ಲಿದ್ದ ಬುಲೆಟ್ ರೈಲು ಸೇತುವೆ ಕುಸಿತ- ಮೂವರು ಕಾರ್ಮಿಕರು ಸಾವು

    Gujarat| ನಿರ್ಮಾಣ ಹಂತದಲ್ಲಿದ್ದ ಬುಲೆಟ್ ರೈಲು ಸೇತುವೆ ಕುಸಿತ- ಮೂವರು ಕಾರ್ಮಿಕರು ಸಾವು

    ಗಾಂಧಿನಗರ: ಗುಜರಾತ್‌ನ (Gujarat) ಆನಂದ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಕಾರಿಡಾರ್‌ನ ನಿರ್ಮಾಣ ಸ್ಥಳದಲ್ಲಿ ತಾತ್ಕಾಲಿಕ ಸೇತುವೆ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

    ನಿರ್ಮಾಣ ಸ್ಥಳದಲ್ಲಿ ಬುಲೆಟ್ ರೈಲು ಯೋಜನೆಗಾಗಿ ಕೆಲಸ ನಡೆಯುತ್ತಿತ್ತು. ಈ ವೇಳೆ ಸ್ಥಳದಲ್ಲಿದ್ದ ಕಾಂಕ್ರೀಟ್ ಬ್ಲಾಕ್‌ಗಳು ಕುಸಿದು ನಾಲ್ವರು ಕಾರ್ಮಿಕರು ಸಿಲುಕಿದ್ದಾರೆ. ಈ ಪೈಕಿ ಮೂವರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಆನಂದ್ ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಧಾವಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಇದನ್ನೂ ಓದಿ: Hassan| ಶಾಲೆಗೆಂದು ಮೀಸಲಿಟ್ಟಿದ್ದ ಜಾಗ ವಕ್ಫ್ ಹೆಸರಿಗೆ – ಹೆಚ್‌ಕೆ ಸುರೇಶ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಗೆ ಕರೆ

    ನಿರ್ಮಾಣ ಹಂತದಲ್ಲಿರುವ ಬುಲೆಟ್ ರೈಲು (Bullet Train) ಮಾರ್ಗದಲ್ಲಿರುವ ವಸಾದ್ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಜಸಾನಿ ತಿಳಿಸಿದ್ದಾರೆ. ಆರಂಭದಲ್ಲಿ ಪೊಲೀಸರು ನಿರ್ಮಾಣ ಹಂತದಲ್ಲಿರುವ ಸೇತುವೆ ಕುಸಿದಿದೆ ಎಂದು ವರದಿ ಮಾಡಿದ್ದರು. ಆದರೆ, ಅನಂತರ ಬುಲೆಟ್ ರೈಲು ಯೋಜನೆಯ ಮೇಲ್ವಿಚಾರಣೆ ನಡೆಸುತ್ತಿರುವ ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೋರೇಶನ್ ಲಿಮಿಟೆಡ್ (NHSRCL) ವಡೋದರಾದ ಮಾಹಿ ನದಿ ಸಮೀಪ ನಿರ್ಮಿಸಲಾಗಿದ್ದ ತಾತ್ಕಾಲಿಕ ಸ್ಟೀಲ್ ಹಾಗೂ ಕಾಂಕ್ರೀಟ್ ಸೇತುವೆ ಕುಸಿಯಿತು ಎಂದು ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: Raichur | ಎಗ್ಗಿಲ್ಲದೆ ಕಲಬೆರಕೆ ಸೇಂದಿ ಮಾರಾಟ- ಅಧಿಕಾರಿಗಳ ದಾಳಿ ವೇಳೆ 500 ಗ್ರಾಂ ಸಿಎಚ್ ಪೌಡರ್ ಜಪ್ತಿ

    ಘಟನೆಯಲ್ಲಿ ನಾಲ್ವರು ಕಾರ್ಮಿಕರು ಕಾಂಕ್ರೀಟ್ ಬ್ಲಾಕ್ ಅಡಿಯಲ್ಲಿ ಸಿಲುಕಿಕೊಂಡರು. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಸಂದರ್ಭ ಸಾವನ್ನಪ್ಪಿದರು ಎಂದು ಆನಂದ್‌ನ ಅಗ್ನಿಶಾಮಕದ ದಳದ ಅಧಿಕಾರಿ ಧರ್ಮೇಶ್ ಗೋರ್ ತಿಳಿಸಿದ್ದಾರೆ. ಸ್ಥಳೀಯ ಸ್ವಯಂಸೇವಕರ ನೆರವಿನಿಂದ ರಕ್ಷಣಾ ತಂಡ ಕ್ರೇನ್ ಹಾಗೂ ಬುಲ್ಡೋಜರ್‌ಗಳನ್ನು ಬಳಸಿಕೊಂಡು ಅವಶೇಷಗಳನ್ನು ತೆರವುಗೊಳಿಸುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಲಾರಿ, ಕಾರು ನಡುವೆ ಅಪಘಾತ- ದಂಪತಿ ಸ್ಥಳದಲ್ಲೇ ಸಾವು

  • ಗುಜರಾತ್‍ನಲ್ಲಿ 8 ಬುಲೆಟ್ ಟ್ರೈನ್ ನಿಲ್ದಾಣಗಳ ಅಡಿಪಾಯ ಕಾಮಗಾರಿ ಪೂರ್ಣ

    ಗುಜರಾತ್‍ನಲ್ಲಿ 8 ಬುಲೆಟ್ ಟ್ರೈನ್ ನಿಲ್ದಾಣಗಳ ಅಡಿಪಾಯ ಕಾಮಗಾರಿ ಪೂರ್ಣ

    ಗಾಂಧಿನಗರ: ಗುಜರಾತ್‍ನಲ್ಲಿ (Gujarat) ಮುಂಬೈ-ಅಹಮದಾಬಾದ್ ನಡುವಿನ ಬುಲೆಟ್ ಟ್ರೈನ್ (Bullet Train) ಯೋಜನೆಯ 8 ರೈಲು ನಿಲ್ದಾಣಗಳಿಗೆ ಅಡಿಪಾಯದ ಕಾಮಗಾರಿ ಪೂರ್ಣಗೊಂಡಿದೆ. ಇದರಲ್ಲಿ ನರ್ಮದಾ ನದಿಯ ಮೇಲಿನ ಸೇತುವೆಯ ನಿರ್ಮಾಣ ಕೂಡ ಒಳಗೊಂಡಿದೆ ಎಂದು ಯೋಜನೆಯ ನಿರ್ದೇಶಕ ಪ್ರಮೋದ್ ಶರ್ಮಾ ತಿಳಿಸಿದ್ದಾರೆ.

    ಮೇಕ್ ಇನ್ ಇಂಡಿಯಾ ಉಪಕ್ರಮದ ಮೂಲಕ ಕಾಮಗಾರಿಗಳ ಪ್ರಯತ್ನಗಳು ಮುಂದುವರಿಯುತ್ತಿವೆ. ಮಹತ್ವಾಕಾಂಕ್ಷೆಯ ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯನ್ನು ಮೇಲ್ವಿಚಾರಣೆ ಮಾಡುವ ರಾಷ್ಟ್ರೀಯ ಹೈ-ಸ್ಪೀಡ್ ರೈಲ್ ಕಾರ್ಪೋರೇಷನ್‌ ಲಿಮಿಟೆಡ್ (NHSRCL), ಕಾರಿಡಾರ್ ಉದ್ದಕ್ಕೂ ಶಬ್ದ ತಡೆಗಳನ್ನು ಅಳವಡಿಸುವ ಕೆಲಸ ನಡೆಸುತ್ತಿದೆ. ಇದನ್ನೂ ಓದಿ: 2040ಕ್ಕೆ ಮಾನವ ಸಹಿತ ಚಂದ್ರಯಾನ – 2,104 ಕೋಟಿ ಅನುದಾನಕ್ಕೆ ಕೇಂದ್ರ ಅಸ್ತು

    ಶಬ್ದ ತಡೆಗೋಡೆಗಳು 2 ಮೀಟರ್ ಎತ್ತರ ಮತ್ತು 1 ಮೀಟರ್ ಅಗಲದ ಕಾಂಕ್ರೀಟ್ ಪ್ಯಾನಲ್‍ಗಳಾಗಿವೆ. ಈ ಪ್ಯಾನಲ್‍ಗಳು ಪ್ರತಿಯೊಂದೂ 830-840 ಕೆ.ಜಿಯಷ್ಟು ತೂಗುತ್ತದೆ. ಈ ಶಬ್ದ ತಡೆಗೋಡೆಗಳು ರೈಲಿನ ಟ್ರ್ಯಾಕ್ ಮತ್ತು ಚಕ್ರದ ನಡುವಿನ ಘರ್ಷಣೆಯಿಂದ ಉಂಟಾಗುವ ಶಬ್ದಕ್ಕೆ ತಡೆ ಉಂಟುಮಾಡಿ ಚದುರಿಸುತ್ತದೆ ಎಂದು ತಿಳಿಸಿದ್ದಾರೆ.

    ಯೋಜನೆಯಡಿ ಗುಜರಾತ್ ವಿಭಾಗದಲ್ಲಿ 21 ಕಿಮೀ ಸಮುದ್ರದ ಸುರಂಗ ಮತ್ತು 1.4 ಕಿಮೀ ನರ್ಮದಾ ನದಿಯ ಮೇಲೆ ಸೇತುವೆಯ ನಿರ್ಮಾಣದ ಕಾರ್ಯ ಪ್ರಾರಂಭವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೊಲೆ‌ ಆರೋಪಿಯನ್ನು ಕಸಾಪ ತಾಲೂಕು ಅಧ್ಯಕ್ಷನನ್ನಾಗಿ ಮಾಡಲು ಶಾಸಕ ಶಿಫಾರಸು

  • ಮೋದಿ ಕನಸಿನ ಬುಲೆಟ್ ಟ್ರೈನ್ ಯೋಜನೆ ಮುಖ್ಯಸ್ಥ ಸತೀಶ್ ಅಗ್ನಿಹೋತ್ರಿ ವಜಾ

    ಮೋದಿ ಕನಸಿನ ಬುಲೆಟ್ ಟ್ರೈನ್ ಯೋಜನೆ ಮುಖ್ಯಸ್ಥ ಸತೀಶ್ ಅಗ್ನಿಹೋತ್ರಿ ವಜಾ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಕೂಸು ಬುಲೆಟ್ ಟ್ರೈನ್ ಯೋಜನೆಯ ಮುಖ್ಯಸ್ಥರಾಗಿದ್ದ ಸತೀಶ್ ಅಗ್ನಿಹೋತ್ರಿ ಅವರನ್ನು ಕೇಂದ್ರ ಸರ್ಕಾರ ವಜಾಗೊಳಿಸಿದೆ.

    NARENDRA MODI

    ರಾಷ್ಟ್ರೀಯ ಹೈಸ್ಪೀಡ್‌ ರೈಲ್ವೇ ಕಾರ್ಪೋರೇಶನ್‌ ಲಿಮಿಟೆಡ್‌ (NHSRCL) ವ್ಯವಸ್ಥಾಪಕ ನಿರ್ದೇಶಕ ಸತೀಶ್ ಅಗ್ನಿಹೋತ್ರಿ ಮೇಲೆ ಅಧಿಕಾರ ದುರ್ಬಳಕೆ ಮತ್ತು ಯೋಜನೆ ಹಣವನ್ನು ವೈಯಕ್ತಿಕವಾಗಿ ಬಳಕೆ ಮಾಡಿರುವ ಮತ್ತು ಬೇರೆ ಕಂಪನಿಗೆ ಹೂಡಿಕೆ ಮಾಡಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆ ಕೇಂದ್ರ ಸರ್ಕಾರ ಇದೀಗ ವಜಾಗೊಳಿಸಿದೆ. ಇದನ್ನೂ ಓದಿ: ಈದ್‌ನಲ್ಲಿ 1 ದಿನ ಹಸು ತಿನ್ನದಿದ್ರೆ ನೀವು ಸಾಯಲ್ಲ; ಗೋಹತ್ಯೆ ಮಾಡದೇ ಬಕ್ರೀದ್‌ ಆಚರಿಸೋಣ – ಮುಸ್ಲಿಮರಿಗೆ ಅಜ್ಮಲ್‌ ಕರೆ

    ಸತೀಶ್ ಅಗ್ನಿಹೋತ್ರಿ ಬುಲೆಟ್ ಟ್ರೈನ್ ಮುಖ್ಯಸ್ಥ ಹುದ್ದೆಯನ್ನು ರದ್ದುಗೊಳಿಸಲು ಸಕ್ಷಮ ಪ್ರಾಧಿಕಾರವು ಅನುಮೋದನೆ ನೀಡಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆ ಮಾಡಲು ನಿರ್ದೇಶಿಸಲಾಗಿದೆ ಎಂದು NHSRCL ಕಂಪನಿ ಕಾರ್ಯದರ್ಶಿಗೆ ಜುಲೈ 7 ರಂದು ರೈಲ್ವೇ ಮಂಡಳಿ ಬರೆದ ಪತ್ರದಲ್ಲಿ ಸ್ಪಷ್ಟವಾಗಿದೆ. ಪ್ರಸ್ತುತ NHSRCLನಲ್ಲಿ ನಿರ್ದೇಶಕರಾಗಿ ಅಧಿಕಾರದಲ್ಲಿರುವ ರಾಜೇಂದ್ರ ಪ್ರಸಾದ್ ಅವರಿಗೆ ವ್ಯವಸ್ಥಾಪಕ ನಿರ್ದೇಶಕರಾಗಿ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಳ್ಳಲು ನಿರ್ದೇಶಿಸಲಾಗಿದೆ. ಇದನ್ನೂ ಓದಿ: 100ಕ್ಕೂ ಹೆಚ್ಚು ಟ್ವಿಟ್ಟರ್ ಎಚ್‌ಆರ್ ಉದ್ಯೋಗಿಗಳು ವಜಾ

    ಅಗ್ನಿಹೋತ್ರಿ ವಿರುದ್ಧ ಭ್ರಷ್ಟಾಚಾರ ತಡೆ ಕಾಯಿದೆ, 1988ರ ಅಡಿಯಲ್ಲಿ ತನಿಖೆ ನಡೆಸಿ ಆರು ತಿಂಗಳೊಳಗೆ ಅಥವಾ 2022ರ ಡಿಸೆಂಬರ್ 12 ರೊಳಗೆ ತನಿಖಾ ವರದಿಯನ್ನು ಲೋಕಪಾಲ್ ಕಚೇರಿಗೆ ಸಲ್ಲಿಸುವಂತೆ ಲೋಕಪಾಲ್ ನ್ಯಾಯಾಲಯವು ಸಿಬಿಐಗೆ ನಿರ್ದೇಶನ ನೀಡಿದೆ.

    Live Tv
    [brid partner=56869869 player=32851 video=960834 autoplay=true]

  • 140 ಪ್ರಯಾಣಿಕರ ಜೀವ ಉಳಿಸಿ ತಾನೇ ಪ್ರಾಣ ಬಿಟ್ಟ ಹೈಸ್ಪೀಡ್ ಬುಲೆಟ್ ಟ್ರೈನ್ ಚಾಲಕ

    ಬೀಜಿಂಗ್: ಹೈಸ್ಪೀಡ್ ಬುಲೆಟ್ ರೈಲೊಂದು ಹಳಿ ತಪ್ಪಿದ್ದು, ಚಾಲಕ ಮೃತಪಟ್ಟ ಘಟನೆ ಚೀನಾದ ಗ್ಯುಝೌ ಪ್ರಾಂತ್ಯದಲ್ಲಿ ನಡೆದಿದೆ. ಘಟನೆಯಲ್ಲಿ 7 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಬುಲೆಟ್ ರೈಲು ಚೀನಾದ ಸೌತ್ ವೆಸ್ಟರ್ನ್ ಗುಯಾಂಗ್ ಪ್ರಾಂತ್ಯದಿಂದ ದಕ್ಷಿಣ ಪ್ರಾಂತ್ಯದ ಗುವಾಂಗ್‌ಝೌಗೆ ಚಲಿಸುತ್ತಿದ್ದಾಗ ರೊಂಗ್‌ಜಿಯಾಂಗ್ ನಿಲ್ದಾಣದ ಸುರಂಗ ಪ್ರವೇಶದ್ವಾರದಲ್ಲಿ ಹಳಿತಪ್ಪಿದೆ. ರೋಜಿಯಾಂಗ್ ನಿಲ್ದಾಣದಲ್ಲಿ ಮಣ್ಣು ಕುಸಿದಿದ್ದ ಕಾರಣ ರೈಲಿನ 2 ಬೋಗಿಗಳು ಹಳಿತಪ್ಪಿವೆ ಎಂದು ವರದಿಯಾಗಿದೆ. ಇದನ್ನೂ ಓದಿ: ಸೇನೆಯಲ್ಲಿ 4 ವರ್ಷ ಮಾತ್ರ ಸೇವೆ – ಶೀಘ್ರವೇ ಅಗ್ನಿಪಥ್‌ಗೆ ಅನುಮೋದನೆ

    ಘಟನೆ ಬಳಿಕ ಆನ್ ಬೋರ್ಡ್ ಡೇಟಾ ಪರಿಶೀಲಿಸಿದಾಗ, ಬುಲೆಟ್ ರೈಲು ಯುಝೈ ಸುರಂಗ ಪ್ರವೇಶಿಸುವ ಸಂದರ್ಭ ಹಳಿಯಲ್ಲಿ ದೋಷವಿರುವುದನ್ನು ಚಾಲಕ ಕೇವಲ 5 ಸೆಕೆಂಡುಗಳಲ್ಲಿ ಗುರುತಿಸಿ, ತಕ್ಷಣವೇ ಬ್ರೇಕ್ ಹಾಕಿದ್ದಾನೆ. ಆದರೂ ರೈಲು 900 ಮೀಟರ್ ದೂರಕ್ಕೆ ಜಾರಿದೆ. ಇದನ್ನೂ ಓದಿ: 37 ವರ್ಷದ ಹಳೆಯ ಕಾರನ್ನು ರಾಷ್ಟ್ರೀಯ ಆಸ್ತಿಯೆಂದು ಘೋಷಿಸಿದ ರವಿಶಾಸ್ತ್ರಿ

    ಚಾಲಕನ ಸಮಯಪ್ರಜ್ಞೆಯಿಂದ ಸುಮಾರು 140 ಪ್ರಯಾಣಿಕರು ಪಾರಾಗಿದ್ದಾರೆ. ಘಟನೆಯಲ್ಲಿ 7 ಪ್ರಯಾಣಿಕರು ಗಾಯಗೊಂಡಿದ್ದು, ಚಾಲಕ ಮಾತ್ರ ಪ್ರಾಣ ಬಿಟ್ಟಿದ್ದಾನೆ.

  • ವಿಮಾನಗಳ ಟೇಕ್ ಆಫ್ ವೇಗಕ್ಕೆ ಸಮನಾಗಿ 350  ಕಿಮೀ ವೇಗದಲ್ಲಿ ಬುಲೆಟ್ ರೈಲು ಪ್ರಾಯೋಗಿಕ ಪರೀಕ್ಷೆ

    ವಿಮಾನಗಳ ಟೇಕ್ ಆಫ್ ವೇಗಕ್ಕೆ ಸಮನಾಗಿ 350 ಕಿಮೀ ವೇಗದಲ್ಲಿ ಬುಲೆಟ್ ರೈಲು ಪ್ರಾಯೋಗಿಕ ಪರೀಕ್ಷೆ

    ಗಾಂಧಿನಗರ: ಗಂಟೆಗೆ 350 ಕಿಲೋಮೀಟರ್ ವೇಗದಲ್ಲಿ ಬುಲೆಟ್ ರೈಲು ಪ್ರಾಯೋಗಿಕ ಪರೀಕ್ಷೆಗೆ ಸೂರತ್‍ನಲ್ಲಿ ಸಿದ್ಧತೆ ನಡೆಸಲಾಗುತ್ತಿದ್ದು, ಇದು ವಿಮಾನಗಳ ಟೇಕ್ ಆಫ್ ವೇಗಕ್ಕೆ ಸಮನಾಗಿರುತ್ತದೆ ಎಂದು ವರದಿಯಾಗಿದೆ.

    2026ರಲ್ಲಿ ಗುಜರಾತ್‍ನ ಬಿಲಿಮೋರಾ ಮತ್ತು ಸೂರತ್ ನಡುವೆ ಗಂಟೆಗೆ 350 ಕಿಮೀ ವೇಗದಲ್ಲಿ ಬುಲೆಟ್ ರೈಲಿನ ಮೊದಲ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಮೊದಲು ಬಿಲಿಮೋರಾ ಮತ್ತು ಸೂರತ್ ನಡುವೆ ಪ್ರಾಯೋಗಿಕ ಪರೀಕ್ಷೆ ನಂತರ ಇತರ ಭಾಗಗಳಲ್ಲಿ ಪ್ರಾಯೋಗಿಕ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದನ್ನೂ ಓದಿ: 10 ಕೋಟಿ ಭಾರತೀಯ ಬಳಕೆದಾರರಿಗೆ ಯುಪಿಐ ಸೇವೆ ನೀಡಲಿದೆ ವಾಟ್ಸಪ್

    ಇದು ಪ್ರಯಾಣಿಕರಿಗೆ ಗೇಮ್ ಚೇಂಜರ್ ಆಗಿರುತ್ತದೆ ಮತ್ತು ವಿಮಾನ ಪ್ರಯಾಣಕ್ಕೆ ಪೈಪೋಟಿ ನೀಡುವ ಸಾಮರ್ಥ್ಯ ಹೊಂದಿದೆ. ಬುಲೆಟ್ ರೈಲುಗಳು ಕಡಿಮೆ ಚೆಕ್ ಇನ್ ಸಮಯದಲ್ಲಿ ಹೆಚ್ಚು ಸ್ಥಳಗಳ ಸಂಪರ್ಕ ಸಾಧಿಸಲು ಪ್ಲಾನ್ ರೂಪಿಸಲಾಗಿದೆ. ಪ್ರಸ್ತುತ ಗಂಟೆಗೆ 350 ಕಿಮೀ ವೇಗದಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆದರೂ ಈ ವೇಗದಲ್ಲಿ ರೈಲುಗಳು ಸಂಚರಿಸುವುದಿಲ್ಲ. ಕಾರ್ಯಾಚರಣೆಯ ವೇಗ ಗಂಟೆಗೆ 320 ಕಿಮೀ ಆಗಿರುತ್ತದೆ. ಬುಲೆಟ್ ರೈಲು ಸ್ಲ್ಯಾಬ್ ಟ್ರ್ಯಾಕ್ ಸಿಸ್ಟಮ್ ಎಂಬ ವಿಶೇಷ ಟ್ರ್ಯಾಕ್‍ಗಳಲ್ಲಿ ಚಲಿಸುತ್ತವೆ. ಜಪಾನ್ ತಂತ್ರಜ್ಞಾನದ ನೆರವಿನಿಂದ ಇದನ್ನು ರೂಪಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಸಲಿಂಗಿಗಳ ಮದುವೆ ಮಾನ್ಯತೆ ಮನವಿ ತಿರಸ್ಕರಿಸಿದ ಹೈಕೋರ್ಟ್

    ಈಗಾಗಲೇ ಬುಲೆಟ್ ರೈಲು ಹಳಿಗಾಗಿ ಗುಜರಾತ್‍ನಲ್ಲಿ ಸ್ಥಳಗಳನ್ನು ಖರೀದಿಸಿರುವ ನ್ಯಾಷನಲ್ ಹೈಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ (NHSRCL) ತಿಂಗಳಲ್ಲಿ ಬಿಲಿಮೋರಾ ಮತ್ತು ಸೂರತ್ ನಡುವೆ 200 ರಿಂದ 250 ಪಿಲ್ಲರ್‌ಗಳ ರಚನೆಗೆ ಪ್ಲಾನ್ ಹಾಕಿದೆ. ಈಗಾಗಲೇ 237 ಕಿಮೀ ಬುಲೆಟ್ ರೈಲು ಹಳಿ ತಯಾರಾಗಿದ್ದು, ಇನ್ನುಳಿದ 115 ಕಿಮೀ ಕಾಮಗಾರಿ ನಡೆಯುತ್ತಿದೆ. ಬುಲೆಟ್ ರೈಲು ಪ್ರಯಾಣಕ್ಕೆ ಸಿದ್ಧವಾದರೆ 2 ಗಂಟೆ 58 ನಿಮಿಷಗಳ ಅಂತರದಲ್ಲಿ ಅಹಮದಾಬಾದ್‍ನಿಂದ ಮುಂಬೈಗೆ ಸಂಚರಿಸಬಹುದಾಗಿದೆ.

  • ಡೀಸೆಲ್ ಇಂಜಿನ್‍ಗೆ ಬ್ರೇಕ್- 100 ಕೋಟಿ ಉಳಿಸಲಿದೆ ಕೊಂಕಣ ರೈಲ್ವೆ ಇಲಾಖೆ

    – ಕರಾವಳಿ ಭಾಗದ ವಿದ್ಯುದೀಕರಣ ಪೂರ್ಣ

    ಕಾರವಾರ: ಕಳೆದ ಮೂರು ವರ್ಷಗಳಿಂದ 1,100 ಕೋಟಿ ವೆಚ್ಚದಲ್ಲಿ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದ ಕೊಂಕಣ ರೈಲು ಮಾರ್ಗದ ವಿದ್ಯುದೀಕರಣ ಕಾರ್ಯ ಭರದಿಂದ ಸಾಗಿತ್ತು. ಇದೀಗ ರಾಜ್ಯದಲ್ಲಿ ಕಾಮಗಾರಿ ಪೂರ್ಣಗೊಂದ್ದು, ತೋಕೂರಿನಿಂದ ಕಾರವಾರದವರೆಗೆ ಮೊದಲ ಬಾರಿ ನಡೆಸಿದ ವಿದ್ಯುತ್ ಚಾಲಿತ ಲೋಕೊದ (ಎಂಜಿನ್) ಪರೀಕ್ಷಾರ್ಥ ಸಂಚಾರ ಯಶಸ್ವಿಯಾಗಿದೆ.

    ಈ ಹಿಂದೆ ದಕ್ಷಿಣ ಕನ್ನಡದ ತೋಕೂರಿನಿಂದ ಉಡುಪಿ ಜಿಲ್ಲೆಯ ಬಿಜೂರುವರೆಗೆ ಸುಮಾರು 105 ಕಿಲೋಮೀಟರ್ ಮಾರ್ಗದ ವಿದ್ಯುದೀಕರಣ ಕಾಮಗಾರಿ ಈಗಾಗಲೇ ಪೂರ್ಣಗೊಂಡಿತ್ತು. ಇದೀಗ ಉತ್ತರ ಕನ್ನಡದಲ್ಲೂ ವಿದ್ಯುದೀಕರಣ ಸಂಪೂರ್ಣವಾಗಿದ್ದು, ಕೊಂಕಣ ರೈಲ್ವೆಯು ಲೋಕೋದ ಪರೀಕ್ಷಾರ್ಥ ಸಂಚಾರ ಯಶಸ್ವಿಯಾಗಿದೆ.

    ಪರೀಕ್ಷಾರ್ಥ ಸಂಚಾರದಲ್ಲಿ ಗರಿಷ್ಠ 110 ಕಿಲೋಮೀಟರ್ ವೇಗದಲ್ಲೂ ಯಾವುದೇ ತಾಂತ್ರಿಕ ಸಮಸ್ಯೆಯಿಲ್ಲದೇ ಸಂಚರಿಸಿದ್ದು, ಯಾವುದೇ ಲೋಪದೋಷಗಳು ಕಂಡುಬಂದಿರದ ಕಾರಣ ಶೀಘ್ರದಲ್ಲಿ ಮಂಗಳೂರಿನಿಂದ ಕಾರವಾರದ ವರೆಗೆ ವಿದ್ಯುದೀಕರಣಗೊಂಡ ರೈಲುಗಳು ಸಂಚರಿಸುವ ಮೂಲಕ ಡೀಸೆಲ್ ಇಂಜಿನ್‍ಗೆ ಶಾಶ್ವತ ಮುಕ್ತಿ ದೊರೆಯಲಿದೆ. ಮಹಾರಾಷ್ಟ್ರದ ರಾಯಘಡ ಜಿಲ್ಲೆಯ ರೋಹಾದಿಂದ ರತ್ನಗಿರಿವರೆಗಿನ ಮಾರ್ಗದಲ್ಲಿ ಮಾರ್ಚ್ 7ರಂದು ಯಶಸ್ವಿ ಪರೀಕ್ಷಾರ್ಥ ಸಂಚಾರ ಮಾಡಲಾಗಿತ್ತು. ಇತ್ತ ಗೋವಾದ ಮಡಗಾಂವ್‍ನಿಂದ ಮಹಾರಾಷ್ಟ್ರದ ಕರ್ಮಾಲಿವರೆಗಿನ ವಿದ್ಯುದೀಕರಣ ಕಾಮಗಾರಿ ಪೂರ್ಣಗೊಂಡಿದೆ.

    ಇನ್ನು ಕಾರವಾರದಿಂದ ಗೋವಾ ಮಡಗಾಂವ್ ವರೆಗೆ ಜೂನ್ ತಿಂಗಳಲ್ಲಿ ವಿದ್ಯುದೀಕರಣ ಪೂರ್ಣ ಗೊಳ್ಳಲಿದೆ. ಇದರಿಂದ ಅತೀ ಹೆಚ್ಚು ಬಳಕೆಯಾಗುತಿದ್ದ ಡೀಸೆಲ್ ಇಂಧನದ ಖರ್ಚು ಉಳಿಯಲಿದ್ದು, ಇಲಾಖೆಗೆ ವರ್ಷಕ್ಕೆ 100 ಕೋಟಿ ರೂ. ಉಳಿತಾಯವಾಗಲಿದೆ ಎಂದು ಕ್ಷೇತ್ರಿಯ ರೈಲ್ವೆ ಪ್ರಬಂಧಕ ಬಾಳಾಸಾಹೇಬ್ ಬಿ.ನಿಕಮ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

    ಕೊಂಕಣ ರೈಲ್ವೆ ಮಾರ್ಗವು ಒಟ್ಟು 756 ಕಿಲೋಮೀಟರ್ ಉದ್ದವಿದ್ದು, ಮಹಾರಾಷ್ಟ್ರದ ರೋಹಾದಿಂದ ಮಂಗಳೂರು ಸಮೀಪದ ತೋಕೂರಿನವರೆಗೆ ಚಾಚಿಕೊಂಡಿದೆ.

    ಸಬ್ ಸ್ಟೇಷನ್‍ಗಳ ಸ್ಥಾಪನೆ ಪೂರ್ಣ
    ರೈಲ್ವೆ ಮಾರ್ಗಕ್ಕೆ ಬೇಕಾಗುವ ವಿದ್ಯುತ್ ಪೂರೈಕೆಗೆ ಸಬ್ ಸ್ಟೇಷನ್‍ಗಳ ಸ್ಥಾಪನೆ ಪೂರ್ಣಗೊಂಡಿದ್ದು, ಸಣ್ಣಪುಟ್ಟ ಕೆಲಸಗಳಷ್ಟೇ ಬಾಕಿ ಇವೆ. ಕಾರವಾರ, ಮುರಡೇಶ್ವರ, ಸೇನಾಪುರ, ಬಾರ್ಕೂರು, ಮೂಲ್ಕಿಯಲ್ಲಿ ಸಬ್ ಸ್ಟೇಷನ್ ನಿರ್ಮಾಣವಾಗಿವೆ. ಇದೇ ರೀತಿ ಕೊಂಕಣ ರೈಲ್ವೆಯ ಮಾರ್ಗದುದ್ದಕ್ಕೂ ಸ್ಥಾಪನೆ ಮಾಡಲಾಗುತ್ತಿದೆ. ಈ ವರ್ಷ ಡಿಸೆಂಬರ್ ಒಳಗೆ ವಿದ್ಯುತ್ ಚಾಲಿತ ರೈಲುಗಳ ಸಂಚಾರ ಈ ಮಾರ್ಗದಲ್ಲಿ ಆರಂಭವಾಗುವ ನಿರೀಕ್ಷೆಯಿದೆ.

    ಕರಾವಳಿಗರಿಗೆ ಹೆಚ್ಚಿನ ಲಾಭ
    ವಿದ್ಯುದೀಕರಣ ಗೊಂಡ ರೈಲು ಸಂಚರಿಸುವುದರಿಂದ ಇಂಧನ ವೆಚ್ಚ ಅತೀ ಕಡಿಮೆಯಾಗಲಿದೆ. ಇದರಿಂದ ಹೆಚ್ಚು ರೈಲುಗಳನ್ನು ಓಡಿಸಲು ಸಹಾಯವಾಗಲಿದೆ. ಕರ್ನಾಟಕದ ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಭಾಗವು ಉದ್ಯೋಗ, ಶಿಕ್ಷಣ, ವ್ಯಾಪಾರ, ಆರೋಗ್ಯ ಸಂಬಂಧ ಮಹಾರಾಷ್ಟ್ರ ಹಾಗೂ ಗೋವಾ ವನ್ನು ಅವಲಂಭಿಸಿದೆ. ಉದ್ಯೋಗಕ್ಕಾಗಿ ಪ್ರತಿ ದಿನ ಸಾವಿರಾರು ಜನ ಕಾರವಾರದಿಂದ ಗೋವಾಕ್ಕೆ ಸಂಚಾರ ಮಾಡುತ್ತಾರೆ. ಹೀಗಾಗಿ ಹೆಚ್ಚು ಉಪಯೋಗವಾಗಲಿದ್ದು, ಮಾತ್ರವಲ್ಲದೆ ಮಹಾರಾಷ್ಟ್ರದಲ್ಲಿ ಸಂಚರಿಸುವ ಹೈ ಸ್ಪೀಡ್ ರೈಲಿನಂತೆ ಈ ಭಾಗದಲ್ಲೂ ಮುಂದಿನ ದಿನದಲ್ಲಿ ಹೈ ಸ್ಪೀಡ್ ರೈಲು ಸಂಚರಿಸಲು ಸಹಾಯವಾಗಲಿದೆ.

  • ಧೋನಿ ನಾಲ್ಕನೇ ಕ್ರಮಾಂಕದಲ್ಲಿ ಆಡುವಷ್ಟರಲ್ಲಿ ಭಾರತಕ್ಕೆ ಬುಲೆಟ್ ಟ್ರೈನ್ ಬರುತ್ತೆ: ಸೆಹ್ವಾಗ್

    ಧೋನಿ ನಾಲ್ಕನೇ ಕ್ರಮಾಂಕದಲ್ಲಿ ಆಡುವಷ್ಟರಲ್ಲಿ ಭಾರತಕ್ಕೆ ಬುಲೆಟ್ ಟ್ರೈನ್ ಬರುತ್ತೆ: ಸೆಹ್ವಾಗ್

    – ಮುರುಳಿ ವಿಜಯ್ ಟಿ-20 ಆಡುವಂತೆ ಕಾಣುತ್ತಿಲ್ಲ

    ನವದೆಹಲಿ: ಎಂಎಸ್ ಧೋನಿಯವರು ಚೆನ್ನೈ ತಂಡಕ್ಕಾಗಿ ನಾಲ್ಕನೇ ಕ್ರಮಾಂಕದಲ್ಲಿ ಆಡುವಷ್ಟರಲ್ಲಿ ಭಾರತಕ್ಕೆ ಬುಲೆಟ್ ಟ್ರೈನ್ ಬರುತ್ತೆ ಎಂದು ಭಾರತದ ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್ ಅವರ ಹಾಸ್ಯ ಮಾಡಿದ್ದಾರೆ.

    ಐಪಿಎಲ್‍ನಲ್ಲಿ ಮೂರು ಬಾರಿ ಚಾಂಪಿಯನ್ ಆಗಿರುವ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ, ಈ ಬಾರಿಯ ಐಪಿಎಲ್‍ನಲ್ಲಿ ನಿರಾಸೆಯ ಪ್ರದರ್ಶನ ತೋರುತ್ತಿದೆ. ಅನುಭವಿ ಆಟಗಾರ ಗೈರು, ಉತ್ತಮ ಆಟಗಾರ ಗಾಯದ ಸಮಸ್ಯೆಯಿಂದ ಚೆನ್ನೈ ತಂಡ ವೀಕ್ ಆದಂತೆ ಕಾಣುತ್ತಿದೆ. ಈ ನಡುವೆ ಧೋನಿ ಬ್ಯಾಟಿಂಗ್ ಕ್ರಮಾಂಕದ ಬಗ್ಗೆಯೂ ಚರ್ಚೆಯಾಗುತ್ತಿದೆ.

    ಈ ನಡುವೆ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಮಾತನಾಡಿರುವ ಸೆಹ್ವಾಗ್ ಅವರು, ಸಿಎಸ್‍ಕೆ ತಂಡದ ಆರಂಭ ಉತ್ತಮವಾಗಿತ್ತು. ಆದರೆ ಕಳೆದ ಎರಡು ಪಂದ್ಯಗಳಿಂದ ಚೆನ್ನೈ ತಂಡ ಮಂಕಾಗಿದೆ. ಮುರುಳಿ ವಿಜಯ್ ಟಿ-20 ಆಡುವಂತೆ ಕಾಣುತ್ತಿಲ್ಲ. ಶೇನ್ ವಾಟ್ಸನ್ ಹಳೆಯ ಇಂಜಿನ್‍ನಂತೆ. ಅವರಿಗೆ ಸ್ಟಾರ್ಟಿಂಗ್ ಟ್ರಬಲ್ ಇದೆ. ಫಾಪ್ ಡು ಫ್ಲೆಸಿಸ್ ಅವರು ಬಂದು ತಮ್ಮ ತಂಡಕ್ಕೆ ನಾವು ಆಡುತ್ತಿರುವುದು ಟಿ-20, ಟೆಸ್ಟ್ ಅಲ್ಲ ಎಂಬುದನ್ನು ಆರ್ಥ ಮಾಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

    ಇದೇ ವೇಳೆ ಧೋನಿ ಬ್ಯಾಟಿಂಗ್ ಕ್ರಮಾಂಕದ ಕುರಿತು ಮಾತನಾಡಿರುವ ಸೆಹ್ವಾಗ್, ತಂಡ ತೊಂದರೆಯಲ್ಲಿ ಇದ್ದರೂ ಕೂಡ ಎಂಎಸ್ ಧೋನಿಯವರು ಬ್ಯಾಟ್ ಮಾಡಲು ಬರುತ್ತಿಲ್ಲ. ಎಂಎಸ್ ಧೋನಿ ತಂಡಕ್ಕಾಗಿ 4ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಮನಸ್ಸು ಮಾಡುವುದರೊಳಗೆ ಭಾರತಕ್ಕೆ ಬುಲೆಟ್ ಟ್ರೈನ್ ಬರುತ್ತದೆ ಎಂದು ವ್ಯಂಗ್ಯವಾಡಿದ್ದಾರೆ. ಸದ್ಯ ಸೆಹ್ವಾಗ್ ಅವರ ಈ ವಿಡಿಯೋ ವೈರಲ್ ಆಗಿದೆ.

    ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಹೀನಾಯ ಸೋಲನ್ನು ಕಂಡಾಗ ಟ್ವೀಟ್ ಮಾಡಿದ್ದ ಸೆಹ್ವಾಗ್ ಅವರು, ಚೆನ್ನೈ ಬ್ಯಾಟ್ಸ್ ಮನ್ಸ್ ಸರಿಯಾಗಿ ಆಡುತ್ತಿಲ್ಲ. ಮುಂದಿನ ಪಂದ್ಯದಲ್ಲಿ ಬ್ಯಾಟಿಂಗ್ ಹೋಗುವ ಮೊದಲು ಗ್ಲುಕೋಸ್ ತೆಗೆದುಕೊಂಡು ಬರುವಂತೆ ಹೇಳಿದ್ದರು. ಜೊತೆಗೆ ಧೋನಿ ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಬರುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದರು.

    ಚೆನ್ನೈ ತಂಡದ ಕೀ ಪ್ಲೇಯರ್ಸ್ ಟೀಮಿನಲ್ಲಿ ಇಲ್ಲದೇ ಇರುವುದು ಚೆನ್ನೈಗೆ ಮುಳುವಾಗಿ ಕಾಡುತ್ತಿದೆ. ವೈಯಕ್ತಿಕ ಕಾರಣ ಹೇಳಿ ರೈನಾ ಅವರು ಟೂರ್ನಿಯಿಂದ ಹೊರಬಂದಿದ್ದಾರೆ. ಜೊತೆಗೆ ಉತ್ತಮ ಲಯದಲ್ಲಿದ್ದ ಅಂಬಾಟಿ ರಾಯುಡು ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ. ಹೀಗಾಗಿ ತಂಡದಲ್ಲಿ ಬ್ಯಾಟಿಂಗ್ ಲೈನಪ್ ಜೋಡಣೆ ಮಾಡುವುದು ಕಷ್ಟವಾಗುತ್ತಿದೆ ಎಂದು ತಂಡದ ಕೋಚ್ ಸ್ಟೀಫನ್ ಫ್ಲೆಮಿಂಗ್ ಅವರು ಅಭಿಪ್ರಾಯ ಪಟ್ಟಿದ್ದಾರೆ. ಚೆನ್ನೈ ಮುಂದಿನ ಪಂದ್ಯವನ್ನು ಅಕ್ಟೋಬರ್ 2ರಂದು ಆಡಲಿದ್ದು, ಈ ತಂಡದಲ್ಲಿ ಉತ್ತಮ ಆಟದೊಂದಿಗೆ ತಂಡ ಕಮ್‍ಬ್ಯಾಕ್ ಮಾಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದರು.

  • ಅನಂತ್‍ಕುಮಾರ್ ಹೆಗ್ಡೆ ಹೇಳಿಕೆಗೆ ಫಡ್ನವಿಸ್ ಪ್ರತಿಕ್ರಿಯೆ

    ಅನಂತ್‍ಕುಮಾರ್ ಹೆಗ್ಡೆ ಹೇಳಿಕೆಗೆ ಫಡ್ನವಿಸ್ ಪ್ರತಿಕ್ರಿಯೆ

    ಮುಂಬೈ: ಕೇಂದ್ರ ಸರ್ಕಾರದ ಹಣವನ್ನು ವಾಪಸ್ ಕಳುಹಿಸಲು ದೇವೇಂದ್ರ ಫಡ್ನವಿಸ್ ಅವರನ್ನು 80 ಗಂಟೆಗಳ ಕಾಲ ಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು ಎಂಬ ಸಂಸದ ಅನಂತ್‍ಕುಮಾರ್ ಹೆಗ್ಡೆ ಹೇಳಿಕೆಯನ್ನು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತಿರಸ್ಕರಿಸಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 80 ಗಂಟೆಗಳ ಕಾಲ ಮುಖ್ಯಮಂತ್ರಿಯಾಗಿದ್ದಾಗ ನಾನು ಯಾವುದೇ ಹಣಕಾಸು ನಿರ್ಧಾರವನ್ನು ಕೈಗೊಂಡಿಲ್ಲ. ಈ ಕುರಿತು ನಾನು ಗಂಭೀರವಾಗಿ ಹೇಳಲು ಬಯಸುತ್ತೇನೆ ಯಾವುದೇ ಹಣವನ್ನು ಕೇಂದ್ರ ಸರ್ಕಾರಕ್ಕೆ ಮರಳಿ ಕಳುಹಿಸಿಲ್ಲ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಹಣಕಾಸು ವ್ಯವಸ್ಥೆಯನ್ನು ಪರಿಶೀಲಿಸಿದರೆ ಈ ಕುರಿತು ತಿಳಿಯುತ್ತದೆ ಸ್ಪಷ್ಟಪಡಿಸಿದರು.

    ಈ ಎಲ್ಲ ಹೇಳಿಕೆಗಳು ಸುಳ್ಳು, ಬುಲೆಟ್ ರೈಲು ಯೋಜನೆಯಲ್ಲಿ ಸಹ ಕೇಂದ್ರ ಸರ್ಕಾರ ನಿಯೋಜಿಸಿದ ಕಂಪನಿ ಕಾಮಗಾರಿ ನಡೆಸುತ್ತಿದೆ. ರಾಜ್ಯ ಸರ್ಕಾರ ಬುಲೆಟ್ ರೈಲಿಗೆ ಕೇವಲ ಭೂಮಿಯನ್ನು ಮಾತ್ರ ನೀಡುತ್ತಿದೆ. ಇದನ್ನು ಹೊರತು ಪಡಿಸಿದರೆ ಯಾವುದೇ ಹಣಕಾಸು ವ್ಯವಹಾರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ನಡೆದಿಲ್ಲ. ಹೀಗಿರುವಾಗ ಹಣ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಈ ಕುರಿತು ಹೇಳಿಕೆಗಳು ಸುಳ್ಳು ಎಂದು ತಿಳಿಸಿದರು.

    ನಾನು ಯಾವುದೇ ಪ್ರಮುಖ ನಿರ್ಧಾರವನ್ನು ಕೈಗೊಂಡಿಲ್ಲ, ಸರ್ಕಾರದ ವಿತ್ತ ವಿಭಾಗವನ್ನು ಪರಿಶೀಲಿಸಿದರೆ ಸತ್ಯ ತಿಳಿಯುತ್ತದೆ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

    ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚಿಸಿದ್ದು ಡ್ರಾಮಾ, ಕೇಂದ್ರ ಸರ್ಕಾರದ ಹಣವನ್ನು ಸಿಎಂ ಖಾತೆಯಿಂದ ಮರಳಿ ಕೇಂದ್ರಕ್ಕೆ ಕಳುಹಿಸಲು ಫಡ್ನವಿಸ್ 80 ದಿನಗಳ ಕಾಲ ಮುಖ್ಯಮಂತ್ರಿಯಾಗಿದ್ದರು ಎಂದು ಸಂಸದ ಅನಂತ್‍ಕುಮಾರ್ ಹೆಗ್ಡೆ ಮಾತನಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರೊಂದಿಗಿನ ಸಭೆಯಲ್ಲಿ ಹೆಗ್ಡೆ ಮಾತನಾಡಿದ್ದರು.

    ವಿಡಿಯೋದಲ್ಲಿ ಹೇಳಿದ್ದೇನು..?
    ನಿಮಗೆಲ್ಲ ಗೊತ್ತಿದೆ. ಮಹರಾಷ್ಟ್ರದಲ್ಲಿ ಕೇವಲ 80 ತಾಸಿಗೆ ನಮ್ಮವರು ಮುಖ್ಯಮಂತ್ರಿಯಾದರು. ನಂತರ ಫಡ್ನವಿಸ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟರು. ಯಾಕೆ ಈ ನಾಟಕ ಮಾಡಬೇಕಿತ್ತು?. ನಮಗೇನೂ ಗೊತ್ತಿರಲಿಲ್ವ. ಬಹುಮತ ಇಲ್ಲ ಎಂದು ಗೊತ್ತಿದ್ದರೂ ಯಾಕೆ ಸಿಎಂ ಆಗಲು ಹೋದ್ರು? ಇಂದು ಸಾಮಾನ್ಯವಾಗಿ ಎಲ್ಲರನ್ನೂ ಕೇಳಬಹುದಾದ ಪ್ರಶ್ನೆಯಾಗಿದೆ.

    ಸುಮಾರು 40 ಸಾವಿರ ಕೋಟಿ ರೂ.ಗೂ ಹೆಚ್ಚು ಹಣ ಸಿಎಂ ಅವರ ನಿಯಂತ್ರಣದಲ್ಲಿತ್ತು. ಕಾಂಗ್ರೆಸ್ಸಿನವರು, ಎನ್‍ಸಿಪಿ ಮತ್ತು ಶಿವಸೇನೆಯವರು ಬಂದರೆ ಖಂಡಿತವಾಗಿ ಆ 40 ಸಾವಿರ ಕೋಟಿ ರೂ. ಹಣಕ್ಕೂ ತುಳಸಿ ನೀರು ಬಿಡುತ್ತಿದ್ದರು. ಅದು ಅಭಿವೃದ್ಧಿಗೆ ಹೋಗುತ್ತಿರಲಿಲ್ಲ. ಯಾಕಂದರೆ ಅದಷ್ಟೂ ಕೇಂದ್ರ ಸರ್ಕಾರದ್ದಾಗಿತ್ತು.

    ಈ ಎಲ್ಲಾನು ಮುಂಚೆನೇ ಪ್ಲಾನ್ ಮಾಡಿದ್ದರು. ಹೀಗಾಗಿ ಏನಾದ್ರೂ ಆಗಲಿ ಒಂದು ದೊಡ್ಡ ನಾಟಕ ಆದರೂ ಮಾಡಲೇಬೇಕು ಅಂತ ತೀರ್ಮಾನವಾಯಿತು. ಅದಕ್ಕೋಸ್ಕರ ಸ್ವಲ್ಪ ಮಟ್ಟಿಗೆ ಹೊಂದಾಣಿಕೆ ಮಾಡಿಕೊಂಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣವಚನ ಮಾಡಿ 15 ಗಂಟೆಯೊಳಗಡೆ ಅದಷ್ಟೂ ಗಣವನ್ನು ಎಲ್ಲೆಲ್ಲಿ ತಲುಪಿಸಬೇಕಿತ್ತೋ ಅಲ್ಲಲ್ಲಿ ತಪಿಸುವ ಮೂಲಕ ವ್ಯವಸ್ಥಿತವಾಗಿ ಅದನ್ನು ರಕ್ಷಣೆ ಮಾಡುವ ಕೆಲಸವನ್ನು ಫಡ್ನವಿಸ್ ಮಾಡಿದರು.

    ಸಂಪೂರ್ಣವಾಗಿ ಹಣವನ್ನು ಕೇಂದ್ರ ಸರ್ಕಾರಕ್ಕೆ ವಾಪಸ್ ನೀಡಿದರು. ಇಲ್ಲೇ ಇದ್ದರೆ ಮುಂದಿನ ಮುಖ್ಯಮಂತ್ರಿ ಮುಂದೇನು ಮಾಡಬಹುದೆಂದು ನಿಮಗೆ ಗೊತ್ತಿದೆ ಅಲ್ವ ಎಂದು ಕಾರ್ಯಕರ್ತರನ್ನು ಪ್ರಶ್ನಿಸಿದ್ದಾರೆ.

    ಒಟ್ಟಿನಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿಯ ಖಾತೆಯಲ್ಲಿ 40 ಸಾವಿರ ಕೋಟಿ ರೂಪಾಯಿ ಇತ್ತು. ಈ ದುಡ್ಡನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಖಾತೆಗೆ ವರ್ಗಾ ಮಾಡಬೇಕಿತ್ತು. ಅದಕ್ಕಾಗಿ ನಾಟಕ ಮಾಡಿದರು ಎಂದು ಹೇಳಿದ್ದು, ಸದ್ಯ ಸಂಸದರ ಈ ಹೇಳಿಕೆ ರಾಷ್ಟ್ರ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೀಗಾಗಿ ಫಡ್ನವಿಸ್ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.

  • ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬುಲೆಟ್ ರೈಲು ಯೋಜನೆ ರದ್ದು

    ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬುಲೆಟ್ ರೈಲು ಯೋಜನೆ ರದ್ದು

    ಮುಂಬೈ: ಶಿವಸೇನೆ, ಎನ್‍ಸಿಪಿ, ಕಾಂಗ್ರೆಸ್ ನೇತೃತ್ವದ ಸರ್ಕಾರ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದರೆ ಪ್ರಧಾನಿ ನರೇಂದ್ರ ಮೋದಿಯ ಮಹತ್ವಾಕಾಂಕ್ಷೆಯ ಬುಲೆಟ್ ರೈಲು ಯೋಜನೆ ರದ್ದಾಗುವ ಸಾಧ್ಯತೆಯಿದೆ.

    ಈ ಸಂಬಂಧ ಕಾಂಗ್ರೆಸ್ ನಾಯಕರೊಬ್ಬರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಯೋಜನೆಯನ್ನು ರದ್ದುಗೊಳಿಸುವ ತೀರ್ಮಾನವನ್ನು ತಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

    ಬುಲೆಟ್ ರೈಲು ಯೋಜನೆಗೆ ಮಹಾರಾಷ್ಟ್ರ ಸರ್ಕಾರ ಯಾವುದೇ ಹಣ ನೀಡುವುದಿಲ್ಲ. ಯೋಜನೆ ಪೂರ್ಣವಾಗಬೇಕಾದರೆ ಕೇಂದ್ರ ಸರ್ಕಾರವೇ ಎಲ್ಲ ಹಣವನ್ನು ಒದಗಿಸಲಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ – ಇಲ್ಲಿಯವರೆಗೆ ಬುಲೆಟ್ ರೈಲು ಅಪಘಾತವಾಗಿಲ್ಲ ಯಾಕೆ?

    ಎನ್‍ಸಿಪಿ ನಾಯಕರೊಬ್ಬರು ಪ್ರತಿಕ್ರಿಯಿಸಿ, ಸರ್ಕಾರ ರಚನೆ ಸಂಬಂಧ ಮೂರು ಪಕ್ಷದ ನಾಯಕರು ನಡೆಸಿದ ಮೊದಲ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. 1.8 ಲಕ್ಷ ಕೋಟಿ ರೂ. ವೆಚ್ಚದ ಈ ಯೋಜನೆಗೆ ಮಹಾರಾಷ್ಟ್ರ ಸರ್ಕಾರ 5 ಸಾವಿರ ಕೋಟಿ ರೂ. ಹಣವನ್ನು ನೀಡಬೇಕಿತ್ತು. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಯೋಜನೆಗೆ ಮೀಸಲಿಟ್ಟ ಹಣವನ್ನು ಜನರ ಕಲ್ಯಾಣಕ್ಕೆ ಸಂಬಂಧಿಸಿದ ಇತರೇ ಯೋಜನೆಗಳಿಗೆ ಬಳಕೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

    2022ಕ್ಕೆ ಸ್ವತಂತ್ರ ಸಿಕ್ಕಿ 75 ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಆಗಸ್ಟ್ 15 ರಂದು ಯೋಜನೆ ಲೋಕಾರ್ಪಣೆ ಮಾಡಲು ಭಾರತ ಪ್ರಯತ್ನ ನಡೆಸುತ್ತಿದೆ. ಭಾರತ ಪಡೆದುಕೊಳ್ಳುವ ಸಾಲಕ್ಕೆ ಜಪಾನ್ 50 ವರ್ಷಕ್ಕೆ 0.1% ಬಡ್ಡಿ ವಿಧಿಸಿದೆ. ಮೇಕ್ ಇನ್ ಇಂಡಿಯಾ ಆಶಯದ ಸಫಲತೆಗೆ ಈ ಯೋಜನೆ ಬಹಳ ಮುಖ್ಯವಾಗಿದ್ದು ತ್ವರಿತಗತಿಯಲ್ಲಿ ಯೋಜನೆಯನ್ನು ಮುಗಿಸುವುದರಲ್ಲಿ ಕೇಂದ್ರ ಸರ್ಕಾರ ಉತ್ಸುಕವಾಗಿದೆ. ಆದರೆ ರೈತರು ಈ ಯೋಜನೆ ವಿರುದ್ಧ ಕೋರ್ಟ್ ಮೊರೆ ಹೋದ ಹಿನ್ನೆಲೆಯಲ್ಲಿ ಕೆಲ ಸಮಯ ಅಡ್ಡಿಯಾಗಿತ್ತು. ಅಹ್ಮದಾಬಾದ್-ಮುಂಬೈ ನಡುವೆ ಬುಲೆಟ್ ರೈಲು ಒಟ್ಟು 508 ಕಿ.ಮೀ. ಸಂಚರಿಸಲಿದ್ದು, 12 ನಿಲ್ದಾಣಗಳನ್ನು ನಿರ್ಮಿಸಲಾಗುತ್ತದೆ. ಇದನ್ನೂ ಓದಿ – ಡೆಡ್‍ಲೈನ್ ಒಳಗೆ ಬುಲೆಟ್ ರೈಲು ಯೋಜನೆ ಕಂಪ್ಲೀಟ್ ಆಗೋದು ಡೌಟ್!

    ಮುಂಬೈ – ಅಹ್ಮದಾಬಾದ್ ಮಧ್ಯೆ ಗಂಟೆಗೆ 320 ಕಿ.ಮೀ ವೇಗದಲ್ಲಿ ರೈಲು ಸಂಚರಿಸಲಿದೆ. ಜಪಾನ್ ನೀಡುತ್ತಿರುವ 88 ಸಾವಿರ ಕೋಟಿ ರೂ. ಸಾಲವನ್ನು ಮರುಪಾವತಿ ಮಾಡಬೇಕಾದರೆ ಪ್ರತಿ ದಿನ 100 ಟ್ರಿಪ್ ರೈಲು ಸಂಚರಿಸಬೇಕು ಅಥವಾ ದಿನಕ್ಕೆ 88 ಸಾವಿರದಿಂದ 1.18 ಲಕ್ಷ ಪ್ರಯಾಣಿಕರು ಸಂಚರಿಸಬೇಕು ಎಂದು ಈ ಹಿಂದೆ ಈ ಯೋಜನೆ ಬಗ್ಗೆ ಅಧ್ಯಯನ ನಡೆಸಿದ್ದ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ ಅಹಮದಾಬಾದ್ ರೈಲ್ವೇ ಇಲಾಖೆಗೆ ವರದಿ ನೀಡಿತ್ತು. ಅಷ್ಟೇ ಅಲ್ಲದೇ 300 ಕಿ.ಮೀ ಪ್ರಯಾಣಕ್ಕೆ ಒಂದು ಟಿಕೆಟ್‍ಗೆ 1500 ರೂ ದರವನ್ನು ನಿಗದಿ ಮಾಡಬೇಕೆಂಬ ಅಂಶವನ್ನು ವರದಿಯಲ್ಲಿ ತಿಳಿಸಿತ್ತು.