Tag: bund

  • ಬೆಂಗಳೂರಿನ ಮತ್ತೊಂದು ಪ್ರತಿಷ್ಠಿತ ಥಿಯೇಟರ್ ಬಂದ್

    ಬೆಂಗಳೂರಿನ ಮತ್ತೊಂದು ಪ್ರತಿಷ್ಠಿತ ಥಿಯೇಟರ್ ಬಂದ್

    ಬೆಂಗಳೂರಿನ (Bangalore) ಒಂದೊಂದೇ ಚಿತ್ರಮಂದಿರಗಳ ಬಾಗಿಲು ಹಾಕುತ್ತಿವೆ. ಒಟಿಟಿ, ಕಡಿಮೆ ಸಂಖ್ಯೆಯಲ್ಲಿ ಸಿನಿಮಾ ನಿರ್ಮಾಣ ಸೇರಿದಂತೆ ಹಲವಾರು ಕಾರಣಗಳಿಂದಾಗಿ ಕೆಂಪೇಗೌಡ ರಸ್ತೆ ಅನೇಕ ಚಿತ್ರಮಂದಿಗಳು (Theatre) ಬಂದ್ ಆಗಿವೆ. ಆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ ಗಳು ತಲೆಯೆತ್ತಿವೆ. ಈಗ ಕಾವೇರಿ (Cauvery) ಚಿತ್ರಮಂದಿರದ ಸರದಿ.

    ಬೆಂಗಳೂರಿನ ಅತ್ಯಂತ ಪ್ರತಿಷ್ಠಿತ ಬಡಾವಣೆಯಲ್ಲಿ ಒಂದಾಗಿರುವ ಸ್ಯಾಂಕಿ ರಸ್ತೆಯ, ಪ್ಯಾಲೇಸ್ ಗುಟ್ಟಳ್ಳಿಯಲ್ಲಿರುವ ಕಾವೇರಿ ಚಿತ್ರಮಂದಿರ ತನ್ನ ಶಾಶ್ವತ ಪ್ರದರ್ಶನವನ್ನು ನಿಲ್ಲಿಸಲಿಲ್ಲ. ಕಳೆದ ಜನವರಿ 11ಕ್ಕೆ ಕಾವೇರಿಗೆ ಭರ್ತಿ 50 ವರ್ಷ ತುಂಬಿತ್ತು. ಗೋಲ್ಡನ್ ಜ್ಯುಬಿಲಿ ಆಚರಣೆಯನ್ನೂ ಮಾಡಲಾಗಿತ್ತು.

    ನಾನಾ ಕಾರಣಗಳಿಂದಾಗಿ ಕಾವೇರಿ ಥಿಯೇಟರ್ ಇತಿಹಾಸದ ಪುಟದಲ್ಲಿ ದಾಖಲಾಗಿತ್ತು. ಮೆಜೆಸ್ಟಿಕ್ ಏರಿಯಾದಲ್ಲಿದ್ದ ಕಪಾಲಿ ಚಿತ್ರಮಂದಿರ ಹೊರತು ಪಡಿಸಿದರೆ, ಅತೀ ಹೆಚ್ಚು ಹಾಸನಗಳುಳ್ಳ ಚಿತ್ರಮಂದಿರ ಇದಾಗಿತ್ತು. 1300ರಷ್ಟು ಸೀಟುಗಳು ಈ ಚಿತ್ರಮಂದಿರದಲ್ಲಿದ್ದವು. ಜೊತೆಗೆ ಸಾಕಷ್ಟು ಚಿತ್ರಗಳು ಇಲ್ಲಿ ಶತದಿನ ಪ್ರದರ್ಶನ ಕೂಡ ಕಂಡಿವೆ.

    ಕಾವೇರಿ ಸಿನಿಮಾ ರಂಗಕ್ಕೆ ಪದಾರ್ಪಣೆ ಮಾಡಿದ್ದು 1974 ಜನವರಿ 11ರಂದು. ಮೊದಲ ಚಿತ್ರ ಪ್ರದರ್ಶನವಾಗಿದ್ದ ಡಾ.ರಾಜ್ ಕುಮಾರ್ ಅಭಿನಯದ ಬಂಗಾರದ ಪಂಜರ. ಕಮಲ್ ಹಾಸನ್ ನಟನೆಯ ಶಂಕರಾಭರಣಂ ಸಿನಿಮಾ ದಾಖಲೆ ರೀತಿಯಲ್ಲಿ ಪ್ರದರ್ಶನವಾಗಿತ್ತು. ಕನ್ನಡ, ತಮಿಳು, ಹಿಂದೆ, ಮಲಯಾಳಂ ಜೊತೆಗೆ ಹಾಲಿವುಡ್ ನ ಅನೇಕ ಚಿತ್ರಗಳು ಇಲ್ಲಿ ಪ್ರದರ್ಶನಗೊಂಡಿವೆ.

    ಜನರು ಥಿಯೇಟರ್ ಬರುತ್ತಿಲ್ಲ. ಇಂತಹ ದೊಡ್ಡ ಕಟ್ಟಡವನ್ನು ನಿಭಾಯಿಸೋದು ಕಷ್ಟ. ಹಾಗಾಗಿ ಥಿಯೇಟರ್ ಬಂದು ಮಾಡಿ ವಾಣಿಜ್ಯ ಸಂಕೀರ್ಣವನ್ನು ನಿರ್ಮಿಸಲು ಚಿತ್ರಮಂದಿರದ ಮಾಲೀಕರು ನಿರ್ಧಾರ ಮಾಡಿದ್ದಾರೆ ಎನ್ನುವ ಮಾಹಿತಿ ಇದೆ.

  • ಬೆಂಗಳೂರಿನಲ್ಲಿ ನಾಳೆ ಚಿತ್ರೋದ್ಯಮ ಬಂದ್: ಥಿಯೇಟರ್ ತೆರೆಯೋದಿಲ್ಲ

    ಬೆಂಗಳೂರಿನಲ್ಲಿ ನಾಳೆ ಚಿತ್ರೋದ್ಯಮ ಬಂದ್: ಥಿಯೇಟರ್ ತೆರೆಯೋದಿಲ್ಲ

    ಕಾವೇರಿ ನದಿ ನೀರು ವಿಚಾರವಾಗಿ ಹೋರಾಟ ಮಾಡುತ್ತಿರುವ ರೈತರ ಪರ ನಿಲ್ಲಲು ಕರ್ನಾಟಕ ಚಲನಚಿತ್ರ ವಾಣಿಜ್ಯ (Film Chamber) ಮಂಡಳಿ ನಿರ್ಧರಿಸಿದೆ. ನಾಳೆ ನಡೆಯುತ್ತಿರುವ ಬೆಂಗಳೂರು (Bangalore) ಬಂದ್ ಗೆ ಬೆಂಬಲವನ್ನೂ ನೀಡಿರುವ ವಾಣಿಜ್ಯ ಮಂಡಳಿಯು ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೂ ಚಿತ್ರಮಂದಿರಗಳು ತೆರೆಯುವುದಿಲ್ಲ. ಬೆಂಗಳೂರಿನಲ್ಲಿ ಯಾವುದೇ ಸಿನಿಮಾ ಚಿತ್ರೀಕರಣ ಕೂಡ ಇರುವುದಿಲ್ಲ ಎಂದಿದ್ದಾರೆ ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಮ್. ಸುರೇಶ್.

    ಕಾವೇರಿ ವಿಚಾರ  (Cauvery Protest) ಗಂಭೀರವಾದ ವಿಚಾರ. ಇದಕ್ಕಾಗಿ ನಮ್ಮ ಸಂಪೂರ್ಣ ಬೆಂಬಲ ಇರುತ್ತೆ. ಚಿತ್ರರಂಗದ ಎಲ್ಲಾ ಅಂಗ ಸಂಸ್ಥೆಗಳ ಜೊತೆ ಚರ್ಚೆ ಮಾಡಬೇಕು. ಕಲಾವಿದರನ್ನು ಭೇಟಿ ಮಾಡಬೇಕು. ಸಮಯದ ಅಭಾವ ತುಂಬಾ ಇದೆ. ಹೀಗಾಗಿ ರೂಪುರೇಷೆಯನ್ನು ಸಾಯಂಕಾಲ ತಿಳಿಸುತ್ತೇವೆ. ರೈತರ ಸಮಸ್ಯೆ ಇದು. ನೀರಿನ ಸಮಸ್ಯೆಗೆ ಸ್ಪಂದಿಸೋದು ನಮ್ಮ ಕರ್ತವ್ಯ. ಸರ್ಕಾರಕ್ಕೆ ಮನದಟ್ಟು ಆಗಬೇಕಂದ್ರೆ ಸಮಯಾವಕಾಶ ಬೇಕು ಎಂದಿದ್ದಾರೆ.

    ನಾಳೆಯ ಬೆಂಗಳೂರು ಬಂದ್ ಗೆ ಬೆಂಬಲವನ್ನೂ ಸೂಚಿಸಿರುವ ವಾಣಿಜ್ಯ ಮಂಡಳಿ, ಬೆಂಗಳೂರು ಸಿಟಿಯಲ್ಲಿ ಶೂಟಿಂಗ್ ನಡೆಯುವುದಿಲ್ಲ. ಬೆಂಗಳೂರು ಬಿಟ್ಟು ಹೊರಗೆ ಶೂಟಿಂಗ್ ಮಾಡ್ತಿರೋರಿಗೆ ತೊಂದರೆ ಇಲ್ಲ. ನಡ ಬೆಳಗ್ಗೆ 6 ಗಂಟೆಯಿಂದ ಸಂಜೆ 6ರ ವರೆಗು ಚಿತ್ರಮಂದಿರಗಳನ್ನ ಬಂದ್ ಮಾಡ್ತೀವಿ ಎಂದಿದ್ದಾರೆ ಅಧ್ಯಕ್ಷರು.

    ರಾಜ್ಯದಲ್ಲಿ ವರುಣ ಕೃಪೆಯಿಲ್ಲದೆ ಕಾವೇರಿ ನೀರಿನ ಪ್ರಮಾಣ ಇಳಿಕೆಯಾಗಿದೆ ಈ ನಡುವೆ ತಮಿಳುನಾಡಿಗೆ ನೀರನ್ನು ಹರಿಯಲು ಬಿಟ್ಟಿದ್ದು ರಾಜ್ಯದ ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ವಿವಿಧ ರೈತ ಹಾಗೂ ಸಂಘಟನೆಗಳು ಹೋರಾಟ ನಡೆಸುತಿದ್ದು, ಕಾವೇರಿ ಹೋರಾಟಕ್ಕೆ ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಹಿರಿಯ ನಟಿ ಎಂ.ಲೀಲಾವತಿ ಇಳಿದಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ಮನೆಯಲ್ಲಿ ಮಾತನಾಡಿದ ಅವರು, ಕಾವೇರಿ ನಮ್ಮದು ಎಂದು ರೈತರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ‘ನಾನು ಸಹ ಕಾವೇರಿ ಹೋರಾಟಕ್ಕೆ ಹೊರಡುವೆ ನಮ್ಮ ಜಲ, ನಮ್ಮ ನೆಲ, ನಮ್ಮ ನುಡಿ, ಎಲ್ಲಾ ಕನ್ನಡಕೊಸ್ಕರ. ಕಾವೇರಿ ನೀರಿಗಾಗಿ ನಾನು ಹೋರಾಟಕ್ಕೆ ಬರುವೆ’ ಎಂದಿದ್ದಾರೆ. ನೆಲಮಂಗಲದ ಮನೆಯಿಂದ ಮಂಡ್ಯ ಪ್ರತಿಭಟನೆ ಸ್ಥಳಕ್ಕೆ ಮಗ ವಿನೋದ್ ರಾಜ್ ಜೊತೆಗೆ ಹೊರಟಿದ್ದಾರೆ.

     

    ಕಾವೇರಿ ಹೋರಾಟ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ. ಚಿತ್ರರಂಗದ ನಟ-ನಟಿಯರು ಕಾವೇರಿ ಹೋರಾಟಕ್ಕೆ ಸಾಥ್ ನೀಡುತ್ತಿಲ್ಲ ಎನ್ನುವ ಕೂಗು ಎದ್ದಿದೆ. ಈ ಬೆನ್ನಲ್ಲೇ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಕಾವೇರಿ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಮಾತನಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಾರ್ಮಾಡಿ ರಸ್ತೆ ದುರಸ್ತಿಗೆ ಆಗ್ರಹಿಸಿ ಕೊಟ್ಟಿಗೆಹಾರ ಬಂದ್

    ಚಾರ್ಮಾಡಿ ರಸ್ತೆ ದುರಸ್ತಿಗೆ ಆಗ್ರಹಿಸಿ ಕೊಟ್ಟಿಗೆಹಾರ ಬಂದ್

    ಚಿಕ್ಕಮಗಳೂರು: ಜಿಲ್ಲೆಯ ಕೊಟ್ಟಿಗೆಹಾರ ಮೂಲಕ ದಕ್ಷಿಣ ಕನ್ನಡಕ್ಕೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ರಸ್ತೆಯನ್ನು ದುರಸ್ತಿಗೊಳಿಸುವಂತೆ ಆಗ್ರಹಿಸಿ ಕೊಟ್ಟಿಗೆಹಾರ ಬಂದ್ ಮಾಡಲಾಗಿದೆ.

    ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ವರ್ತಕರ ಸಂಘ ಹಾಗೂ ಗೆಳೆಯರ ಬಳಗ ಕೊಟ್ಟಿಗೆಹಾರ ಬಂದ್ ಮಾಡಿ ಚಾರ್ಮಾಡಿ ಘಾಟಿಯಲ್ಲಿ ಪಾದಯಾತ್ರೆ ನಡೆಸಿ ಚಾರ್ಮಾಡಿ ಉಳಿವಿಗೆ ಆಗ್ರಹಿಸಿದ್ದಾರೆ. ಮಲೆನಾಡಿನ ಜನ ಆರ್ಥಿಕ, ಶೈಕ್ಷಣಿಕ ಹಾಗೂ ಆರೋಗ್ಯಕ್ಕಾಗಿ ಚಾರ್ಮಾಡಿ ಘಾಟಿಯನ್ನೆ ಆಶ್ರಯಿಸಿಕೊಂಡಿದ್ದಾರೆ. ಆದರೆ ಪ್ರತಿ ವರ್ಷದ ಮಳೆಯಿಂದ ಚಾರ್ಮಾಡಿ ಘಾಟ್ ತನ್ನ ಸಾಮಥ್ರ್ಯವನ್ನು ಕಳೆದುಕೊಳ್ಳುತ್ತಿದೆ. ಇದಕ್ಕೆ ಮೂಲ ಕಾರಣ ಸರ್ಕಾರ ಚಾರ್ಮಾಡಿ ಘಾಟಿಯನ್ನು ಸಮರ್ಪಕ ರೀತಿಯಲ್ಲಿ ದುರಸ್ತಿ ಮಾಡದಿರುವುದು ಎಂದು ಪ್ರತಿಭಟನಾಕಾರರು ಅಸಮಾಧಾನ ಹೊರಹಾಕಿದ್ದಾರೆ.

    ಪ್ರತಿ ಮಳೆಗಾಲದಲ್ಲೂ ಈ ಮಾರ್ಗ ಬಂದ್ ಮಾಡುತ್ತಾರೆ. ಇದರಿಂದ ಹಲವರಿಗೆ ನಾನಾ ರೀತಿಯ ತೊಂದರೆಯಾಗಲಿದೆ. ಸರ್ಕಾರ ಚಾರ್ಮಾಡಿಗೆ ಪರ್ಯಾಯ ರಸ್ತೆಯಾಗಿ ಶಿಶಿಲ-ಬೈರಾಪುರ ರಸ್ತೆ ನಿರ್ಮಾಣಕ್ಕೆ ಮುಂದಾಗಿತ್ತು. ಆದರೆ ನ್ಯಾಯಾಲಯ ಈ ರಸ್ತೆ ಕಾಮಾಗಾರಿಗೆ ತಡೆಯೊಡ್ಡಿರುವುದರಿಂದ ಕೂಡಲೇ ಚಾರ್ಮಾಡಿ ರಸ್ತೆಯನ್ನು ದುರಸ್ತಿಗೊಳಿಸಿ, ಉಳಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಮಾರ್ಗ ರಾಷ್ಟ್ರೀಯ ಹೆದ್ದಾರಿಯಾಗಿದ್ದು, ವಿಲ್ಲುಪುರಂಗೆ ಸಂಪರ್ಕ ಕಲ್ಪಿಸುವ ಮಾರ್ಗವಾಗಿದೆ. ಪ್ರತಿನಿತ್ಯ ಸಾವಿರಾರು ವಾಹನಗಳು ಓಡಾಡುತ್ತವೆ. ಈ ಮಾರ್ಗ ನೂರಾರು ರೀತಿಯಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗಿದೆ. ಕೂಡಲೇ ಈ ಮಾರ್ಗವನ್ನು ಅಭಿವೃದ್ಧಿಪಡಿಸಿ, ಉಳಿಸಬೇಕೆಂದು ಆಗ್ರಹಿಸಿದ್ದಾರೆ.

  • ಜು.27ರಿಂದ ರಾಜ್ಯಾದ್ಯಂತ ಎಪಿಎಂಸಿ ಬಂದ್‍ಗೆ ನಿರ್ಧಾರ: ಶಂಕರಣ್ಣ ಮುನವಳ್ಳಿ

    ಜು.27ರಿಂದ ರಾಜ್ಯಾದ್ಯಂತ ಎಪಿಎಂಸಿ ಬಂದ್‍ಗೆ ನಿರ್ಧಾರ: ಶಂಕರಣ್ಣ ಮುನವಳ್ಳಿ

    ಹುಬ್ಬಳ್ಳಿ: ಕೇಂದ್ರ ಸರ್ಕಾರ ಜಾರಿ ಮಾಡಿರುವ ಒಂದು ದೇಶ ಒಂದು ದರವನ್ನು ರಾಜ್ಯ ಸರ್ಕಾರ ಜಾರಿ ಮಾಡಬೇಕು. ಅಲ್ಲದೆ ಎಪಿಎಂಸಿ ಸೆಸ್ ಗೊಂದಲವನ್ನು ರಾಜ್ಯ ಸರ್ಕಾರ ನಿವಾರಣೆ ಮಾಡಬೇಕೆಂದು ಒತ್ತಾಯಿಸಿ ಜು.27ರಿಂದ ರಾಜ್ಯಾದ್ಯಂತ ಅನಿರ್ಧಿಷ್ಟ ಅವಧಿಯವರೆಗೆ 162 ಎಪಿಎಂಸಿ ಬಂದ್ ಮಾಡಲಾಗುತ್ತದೆ ಎಂದು ಚೆಂಬರ್ ಆಫ್ ಕಾಮರ್ಸ್ ಮುಖ್ಯಸ್ಥ ಶಂಕರಣ್ಣ ಮುನವಳ್ಳಿ ಎಚ್ಚರಿಸಿದ್ದಾರೆ.

    ನಗರದಲ್ಲಿ ಇಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಪದಾಧಿಕಾರಿಗಳ ಹಾಗೂ ವರ್ತಕರ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿರುವ ಒಂದು ದೇಶ ಒಂದು ದರ ನಿರ್ದೇಶನವನ್ನು ಜಾರಿಗೊಳಿಸಿದರೆ ಯಾವುದೇ ಗೊಂದಲ ಸೃಷ್ಟಿಯಾಗುವುದಿಲ್ಲ. ಅಲ್ಲದೆ ಎಪಿಎಂಸಿಯಲ್ಲಿ ಸಂಗ್ರಹಿಸುತ್ತಿರುವ ಶೇ.1ರಷ್ಟು ಸೆಸ್ ಸಂಗ್ರಹ ಕೈ ಬಿಡಬೇಕು. ಇದಕ್ಕೆ ರಾಜ್ಯದ ವಿವಿಧ ಮೂಲೆಗಳಿಂದ ಬಂದಿರುವ ಎಪಿಎಂಸಿ ವರ್ತಕರು ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಬಂದ್ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

    ಈಗಾಗಲೇ ಗದಗ, ಹಾವೇರಿ, ರಾಣೇಬೆನ್ನೂರ, ವಿಜಯಪುರ ಸೇರಿದಂತೆ ರಾಜ್ಯದ ಎಲ್ಲ ಎಪಿಎಂಸಿ ವರ್ತಕರ ನೇತೃತ್ವದಲ್ಲಿ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗಿದೆ. ರೈತರು ಹತ್ತಿ, ಶೇಂಗಾ ಹಾಗೂ ಒಣ ಪದಾರ್ಥ ಉತ್ಪನ್ನಗಳನ್ನು ಎಪಿಎಂಸಿಗೆ ತೆಗೆದುಕೊಂಡು ಬರಬಾರದು ಎಂದು ಮನವಿ ಮಾಡಿದರು.

  • ಸತತ ಮೂರು ದಿನ ರಾಷ್ಟ್ರಾದ್ಯಂತ ಬ್ಯಾಂಕ್ ಬಂದ್

    ಸತತ ಮೂರು ದಿನ ರಾಷ್ಟ್ರಾದ್ಯಂತ ಬ್ಯಾಂಕ್ ಬಂದ್

    ಬೆಂಗಳೂರು: ಜನವರಿ 31 ಹಾಗೂ ಫೆಬ್ರವರಿ 1 ರಾಷ್ಟ್ರಾದ್ಯಂತ ಬ್ಯಾಂಕ್‍ಗಳ ಮುಷ್ಕರ ಇರಲಿದೆ. ಫೆ.2 ಭಾನುವಾರ ಆದ್ದರಿಂದ ಒಟ್ಟು ಮೂರು ದಿನ ಸತತವಾಗಿ ಬ್ಯಾಂಕ್ ಬಂದ್ ಆಗಲಿದೆ. ಒಟ್ಟು ಮೂರು ದಿನ ಬ್ಯಾಂಕ್ ಬಂದ್ ಇರುವುದರಿಂದ ಸಾರ್ವಜನಿಕರಿಗೆ ಬ್ಯಾಂಕಿಂಗ್ ವಿಚಾರದಲ್ಲಿ ವ್ಯತ್ಯಯ ಆಗಲಿದೆ.

    ಸರ್ಕಾರ ಮತ್ತು ಬ್ಯಾಂಕ್‍ಗಳ ನಡುವೆ ವೇತನ ಒಪ್ಪಂದ ಮತ್ತು ವಿವಿಧ ಬೇಡಿಕೆಗಳಿಗೆ ಸಂಬಂಧಪಟ್ಟಂತೆ ಸತತ ಎರಡು ವರ್ಷಗಳಿಂದ ಮಾತುಕತೆ, ಚರ್ಚೆಗಳು ನಡೆಯುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ವೇತನ ಹೆಚ್ಚಳ ಮಾತುಕತೆ ವಿಫಲವಾಗಿರೋ ಕಾರಣ ಬ್ಯಾಂಕ್ ನೌಕರರು ಬಂದ್ ನಡೆಸುತ್ತಿದ್ದಾರೆ. ಆದ್ದರಿಂದ ಬ್ಯಾಂಕ್ ನೌಕರರು ಈಗ ಬ್ಯಾಂಕ್ ಬಂದ್ ಮಾಡಲು ಮುಂದಾಗಿದ್ದಾರೆ. 12.30% ವೇತನ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಆದರೆ ಬ್ಯಾಂಕ್ ನೌಕರರು 2017ರಲ್ಲಿ 15% ಇತ್ತು. ಈಗ ಅದಕ್ಕೂ ಕಡಿಮೆ ಅಂದರೆ ಸಾಧ್ಯವಿಲ್ಲ ಎಂದು ಪಟ್ಟು ಹಿಡಿದ ಕಾರಣ ಸತತ ಎರಡು ವರ್ಷಗಳ ಚರ್ಚೆಯಾಗುತ್ತಿತ್ತು.

    2017ಕ್ಕೆ ಹಳೆ ವೇತನ ಒಪ್ಪಂದ ಮುಗಿದಿದೆ. ನಂತರ ಸತತ ಎರಡು ವರ್ಷಗಳಿಂದ ವೇತನ ಒಪ್ಪಂದದ ಮಾತುಕತೆ ಫಲ ಕೊಡದ ಹಿನ್ನೆಲೆ ಬಂದ್‍ಗೆ ಯುನೈಟೆಡ್ ಫಾರಂ ಆಫ್ ಬ್ಯಾಂಕ್ ಯೂನಿಯನ್ಸ್ ನೇತೃತ್ವದಲ್ಲಿ ಕರೆ ನೀಡಲಾಗಿದೆ. ಜನವರಿ 31 ಹಾಗೂ ಫೆಬ್ರವರಿ 1 ಒಟ್ಟು ಎರಡು ದಿನ ಬಂದ್ ಮಾಡಿ. ನಂತರ ಮಾರ್ಚ್ 11, 12, 13 ಒಟ್ಟು ಮೂರು ದಿನ ಬಂದ್ ಮಾಡುವ ತೀರ್ಮಾನಕ್ಕೆ ಬರಲಾಗಿದೆ. ಈ ಎರಡೂ ಬಂದ್ ನಂತರವೂ ಸರ್ಕಾರ ವೇತನ ಒಪ್ಪಂದ ಸರಿ ಮಾಡದೇ ಇದ್ದರೆ ಏಪ್ರಿಲ್ 1 ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ.

  • ತೀವ್ರ ಸ್ವರೂಪ ಪಡೆದ ಜಮಖಂಡಿ ಜಿಲ್ಲಾ ಬೇಡಿಕೆ – ಇಂದು ಬಂದ್

    ತೀವ್ರ ಸ್ವರೂಪ ಪಡೆದ ಜಮಖಂಡಿ ಜಿಲ್ಲಾ ಬೇಡಿಕೆ – ಇಂದು ಬಂದ್

    ಬಾಗಲಕೋಟೆ: ಜಮಖಂಡಿ ಹೊಸ ಜಿಲ್ಲೆ ಮಾಡಬೇಕು ಎಂಬ ಹೋರಾಟ ತೀವ್ರ ಸ್ವರೂಪ ಪಡೆದಿದ್ದು, ಇಂದು ಜಮಖಂಡಿ ನಗರ ಬಂದ್‍ಗೆ ಕರೆ ನೀಡಲಾಗಿದೆ.

    ಜಮಖಂಡಿ ಜಿಲ್ಲಾ ಸಂಕಲ್ಪ ಹೋರಾಟ ಸಮಿತಿಯಿಂದ ಬಂದ್ ಗೆ ಕರೆ ನೀಡಿದ್ದು, ಅಂಗಡಿಮುಂಗಟ್ಟು ವ್ಯಾಪಾರ ವಹಿವಾಟು ಬಂದ್ ಆಗಲಿದೆ. ಇದರ ಜೊತೆಗೆ ಬಸ್ ಸಂಚಾರ ಸೇರಿದಂತೆ ಎಲ್ಲ ಸಾರಿಗೆ ವ್ಯವಸ್ಥೆ ಇಂದು ಬಂದ್ ಆಗಲಿದೆ.

    ಈ ಬಂದ್‍ನಲ್ಲಿ ಶಾಲಾ ಕಾಲೇಜು, ಸರ್ಕಾರಿ ಕಚೇರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಈ ಬಂದ್‍ನಲ್ಲಿ ಪಕ್ಷಾತೀತವಾಗಿ ಎಲ್ಲ ರಾಜಕೀಯ ಮುಖಂಡರು ಭಾಗಿಯಾಗಲಿದ್ದು, ಜಮಖಂಡಿ ಕಾಂಗ್ರೆಸ್ ಶಾಸಕ ಆನಂದ ನ್ಯಾಮಗೌಡ ಮತ್ತು ತೇರದಾಳ ಬಿಜೆಪಿ ಶಾಸಕ ಸಿದ್ದು ಸವದಿ ಭಾಗಿಯಾಗಲಿದ್ದಾರೆ.

    ಇಂದು ನಗರದಲ್ಲಿ ಬೃಹತ್ ಪ್ರತಿಭಟನೆ ರ‍್ಯಾಲಿ ನಡೆಯಲಿದ್ದು, ಹೋರಾಟದ ನೇತೃತ್ವವನ್ನು ಜಮಖಂಡಿ ಓಲೆ ಮಠದ ಚನ್ನಬಸವ ಸ್ವಾಮೀಜಿ ವಹಿಸಿದ್ದಾರೆ. ಪ್ರತಿಭಟನೆಯಲ್ಲಿ ಜಿಲ್ಲಾ ಸಂಕಲ್ಪ ಹೋರಾಟ ಸಮಿತಿ ಸದಸ್ಯರು, ಜಮಖಂಡಿ ಭಾಗದ 25ಕ್ಕೂ ಹೆಚ್ಚು ಮಠಾಧೀಶರು ಮತ್ತು ಸಾರ್ವಜನಿಕರು ಭಾಗಿಯಾಗಲಿದ್ದಾರೆ. ಬೆಳಗ್ಗೆ 10 ಗಂಟೆಗೆ ನಗರದಲ್ಲಿ ಪ್ರತಿಭಟನಾ ರ್ಯಾಲಿ ಶುರುವಾಗಲಿದ್ದು, ಹನುಮಾನ ಚೌಕದಿಂದ ದೇಸಾಯಿ ವೃತ್ತದವರೆಗೆ ಪ್ರತಿಭಟನಾ ರ‍್ಯಾಲಿ ಸಾಗಲಿದೆ.

    ಈಗಾಗಲೇ ಹೊಸ ಜಿಲ್ಲೆ ಹೋರಾಟಕ್ಕೆ ಶಾಸಕರಾದ ಆನಂದ ನ್ಯಾಮಗೌಡ ಮತ್ತು ಸಿದ್ದು ಸವದಿ ಬೆಂಬಲಿಸೋದಾಗಿ ಹೇಳಿದ್ದು, ನಾಳೆ ಜಿಲ್ಲೆಗೆ ಸಿಎಂ ಯಡಿಯೂರಪ್ಪ ಭೇಟಿ ನೀಡಲಿದ್ದಾರೆ. ಈ ಭೇಟಿ ವೇಳೆ ಹೋರಾಟಗಾರರು ಸಿಎಂಗೆ ಹೊಸ ಜಿಲ್ಲೆ ಮಾಡಬೇಕು ಎಂದು ಮನವಿ ಸಲ್ಲಿಸಲಿದ್ದಾರೆ.

  • ಇಂದು ಅಥಣಿ ಬಂದ್‍ಗೆ ಕರೆ- ನಸುಕಿನ ಜಾವದಿಂದ್ಲೇ ಬಸ್ ಸಂಚಾರ ಸ್ಥಗಿತ!

    ಇಂದು ಅಥಣಿ ಬಂದ್‍ಗೆ ಕರೆ- ನಸುಕಿನ ಜಾವದಿಂದ್ಲೇ ಬಸ್ ಸಂಚಾರ ಸ್ಥಗಿತ!

    – ಪ್ರಯಾಣಿಕರ ಪರದಾಟ

    ಬೆಳಗಾವಿ: ಬರಿದಾಗಿರುವ ಕೃಷ್ಣಾ ನದಿಗೆ ನೀರು ಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಹೀಗಾಗಿ ನದಿಗೆ ನೀರು ಹರಿಸುವಂತೆ ಆಗ್ರಹಿಸಿ ಇಂದು ಅಥಣಿ ಪಟ್ಟಣ ಬಂದ್‍ಗೆ ಕರೆ ನೀಡಲಾಗಿದೆ.

    10ಕ್ಕೂ ಹೆಚ್ಚು ಸಂಘಟನೆಗಳಿಂದ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣ ಬಂದ್ ಕರೆ ನೀಡಲಾಗಿದೆ. ರೈತ ಪರ ಸಂಘಟನೆಗಳ ಜೊತೆಗೆ ಕನ್ನಡಪರ ಹಾಗೂ ದಲಿತ ಸಂಘಟನೆಗಳು ಕೂಡ ಈ ಬಂದ್‍ಗೆ ಬೆಂಬಲ ನೀಡುತ್ತಿವೆ. ನೀರಿಲ್ಲದೆ ಬರಿದಾಗಿರುವ ಕೃಷ್ಣಾ ನದಿಗೆ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ನೀರು ಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಸರ್ಕಾರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಬಂದ್ ಮಾಡಲಾಗುತ್ತಿದೆ ಎಂದು ಸಂಘಟನೆಗಳು ತಿಳಿಸಿವೆ.

    ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಕೃಷ್ಣಾ ನದಿಗೆ 4 ಟಿಎಂಸಿ ನೀರು ಬಿಡಿಸುವಂತೆ ಬಂದ್ ಮೂಲಕ 10ಕ್ಕೂ ಹೆಚ್ಚು ಸಂಘಟನೆಗಳು ಆಗ್ರಹಿಸಿದೆ. ಕೃಷ್ಣೆಗೆ ನೀರು ಹರಿಸುವಂತೆ ಚಿಕ್ಕೋಡಿ ತಾಲೂಕಿನಲ್ಲೂ ಇಂದು ವಿವಿಧೆಡೆ ವಿವಿಧ ಸಂಘಟನೆಗಳು ರಸ್ತೆ ತಡೆದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಅಲ್ಲದೆ ಬಂದ್ ಹಿನ್ನೆಲೆ ನಸುಕಿನ ಜಾವದಿಂದಲೇ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.

  • ಉತ್ತರ ಕರ್ನಾಟಕ ಬಂದ್: ಹುಬ್ಬಳ್ಳಿ, ಧಾರವಾಡದಲ್ಲಿ ಪ್ರತಿಭಟನೆ – ರಸ್ತೆಗಿಳಿಯದ ಬಸ್‍ಗಳು, ಜನರ ಪರದಾಟ

    ಉತ್ತರ ಕರ್ನಾಟಕ ಬಂದ್: ಹುಬ್ಬಳ್ಳಿ, ಧಾರವಾಡದಲ್ಲಿ ಪ್ರತಿಭಟನೆ – ರಸ್ತೆಗಿಳಿಯದ ಬಸ್‍ಗಳು, ಜನರ ಪರದಾಟ

    ಧಾರವಾಡ: ಮಹದಾಯಿ, ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಮಲಪ್ರಭಾ, ಮಹದಾಯಿ, ಕಳಸಾ-ಬಂಡೂರಿ ರೈತ ಹೋರಾಟ ಸಮಿತಿ ಸೇರಿದಂತೆ ನೂರಕ್ಕೂ ಹೆಚ್ಚು ವಿವಿಧ ಕನ್ನಡಪರ, ರೈತ ಸಂಘಟನೆಗಳು ಕೇಂದ್ರ, ರಾಜ್ಯ ಸರ್ಕಾರಗಳ ನಡೆ ಖಂಡಿಸಿ ಬಂದ್ ಆರಂಭಿಸಿವೆ.

    ಧಾರವಾಡ ನಗರದ ಜುಬ್ಲಿ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಕನ್ನಡ ಪರ ಹಾಗೂ ರೈತ ಹೋರಾಟಗಾರರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ನರಗುಂದದಲ್ಲಿ ಆಕ್ರೋಶ ಭುಗಿಲೆದಿದ್ದು, ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕುತ್ತಿದ್ದಾರೆ. ಪ್ರತಿಭಟನಾಕಾರರು ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೆ ವಾಹನಗಳನ್ನು ತಡೆದು ಹಿಂದಕ್ಕೆ ಕಳಿಸುತ್ತಿದ್ದಾರೆ.

    ಗದಗ ಜಿಲ್ಲೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಗದಗ ಹಾಗೂ ಗಜೇಂದ್ರಗಢ ನಗರದಲ್ಲೂ ಪ್ರತಿಭಟನೆ ನಡೆಸುತ್ತಿದ್ದಾರೆ. ನಸುಕಿನಲ್ಲೇ ಕನ್ನಡಪರ ಸಂಘಟನೆಗಳು ಬೀದಿಗಿಳಿದಿದ್ದಾರೆ. ಗಜೇಂದ್ರಗಢ ಪಟ್ಟಣ ಸಂಪೂರ್ಣ ಸ್ತಬ್ಧವಾಗಿದ್ದು, ಪಟ್ಟಣದ ಕಾಲಕಾಲೇಶ್ವರ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿ, ರಸ್ತೆ ತಡೆಯುತ್ತಿದ್ದಾರೆ. ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ವಿಜಯಪುರದಿಂದ ಹುಬ್ಬಳ್ಳಿಗೆ ಹೊರಟಿದ್ದ ಪೆಟ್ರೋಲ್ ಟ್ಯಾಂಕರ್ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ.

    ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಆರಂಭವಾಗಿದ್ದು, ರೈತ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳು ಹೋರಾಟ ನಡೆಸುತ್ತಿವೆ. ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹುಬ್ಬಳ್ಳಿಯ ರೈಲು ನಿಲ್ದಾಣದ ಮುಂದೆ ಕನ್ನಡಪರ ಸಂಘನೆಗಳು ಹೋರಾಟ ನಡೆಸುತ್ತಿವೆ.

    ಬಂದ್ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಕಾವು ಪಡೆದುಕೊಳ್ಳುತ್ತಿದೆ. ರೈಲ್ವೆ ನಿಲ್ದಾಣದೆದುರು ಸಂಗ್ರಾಮ ಸೇನೆಯಿಂದ ಪ್ರತಿಭಟನೆ ನಡೆಯುತ್ತಿದ್ದು, ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಹೋರಾಟಗಾರರನ್ನ ಪೊಲೀಸರು ತಡೆದಿದ್ದಾರೆ.

    ಹುಬ್ಬಳ್ಳಿ- ವಿಜಯಪುರ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ನಗರವನ್ನು ಸಂಪರ್ಕಿಸುವ ಹೆದ್ದಾರಿಗಳನ್ನು ತಡೆಯಲು ಹೋರಾಟಗಾರರು ತೀರ್ಮಾನಿಸಿದ್ದಾರೆ. ಕೇಂದ್ರ ಸರ್ಕಾರದ ಅಧೀನದಲ್ಲಿರುವ ರೈಲ್ವೆ ನಿಲ್ದಾಣ, ಅಂಚೆ ಕಚೇರಿ, ಬಿಎಸ್‍ಎನ್‍ಎಲ್ ಕಚೇರಿಗಳಿಗೂ ಮುತ್ತಿಗೆ ಹಾಕುವುದಾಗಿ ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ.

    ಹುಬ್ಬಳ್ಳಿ-ಧಾರವಾಡ, ಗದಗ, ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಯ ಹಲವೆಡೆ ಬಂದ್ ಗೆ ಕರೆ ನೀಡಿರುವುದರಿಂದ ಅರ್ಧ ಕರ್ನಾಟಕದ ಜನಜೀವನ ಸ್ಥಗಿತಗೊಳ್ಳಲಿದೆ. ಎಲ್ಲಾ ಅಂಗಡಿ ಮುಂಗಟ್ಟು, ಹೋಟೆಲ್, ವಾಣಿಜ್ಯ ವಹಿವಾಟು ಸ್ಥಗಿತಗೊಳ್ಳಲಿದೆ. ಆಟೋ ಸಂಚಾರ, ಟ್ಯಾಕ್ಸಿ ಸಂಚಾರವೂ ಸ್ತಬ್ಧಗೊಳ್ಳಲಿದೆ. ಬಂದ್‍ ಗೆ ಚಿತ್ರೋದ್ಯಮವೂ ಬೆಂಬಲ ನೀಡಿದೆ.

    ಕಳೆದ ಬಾರಿ ಗಲಾಟೆ ಹೆಚ್ಚಾಗಿದ್ದ ನವಲಗುಂದ ತಾಲೂಕಿನ ಯಮನೂರು, ಅಳಗವಾಡಿ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾತ್ರಿಯಿಂದಲೇ ಬಂದೋಬಸ್ತ್ ಹೆಚ್ಚಿಸಲಾಗಿದೆ. ಜಿಲ್ಲೆಯ ಬಂದೋಬಸ್ತ್ ಗಾಗಿ ಎರಡು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.

    ಇದನ್ನೂ ಓದಿ: ಮಹದಾಯಿಗಾಗಿ ಉತ್ತರ ಕರ್ನಾಟಕ ಬಂದ್: ಎಲ್ಲಿ ಬಂದ್? ಏನ್ ಇರುತ್ತೆ? ಏನ್ ಇರಲ್ಲ?

  • ಕಾರವಾರ ಆಯ್ತು, ಈಗ ಶಿವಮೊಗ್ಗ ಸರದಿ- ಶಿರಸಿ ಬಳಿಕ ಪಕ್ಕದ ಸಾಗರ ಬಂದ್‍ ಗೆ ಕರೆ

    ಕಾರವಾರ ಆಯ್ತು, ಈಗ ಶಿವಮೊಗ್ಗ ಸರದಿ- ಶಿರಸಿ ಬಳಿಕ ಪಕ್ಕದ ಸಾಗರ ಬಂದ್‍ ಗೆ ಕರೆ

    ಶಿವಮೊಗ್ಗ: ಕಳೆದ ಮೂರ್ನಾಲ್ಕು ದಿನಗಳಿಂದ ಹೊತ್ತಿ ಉರಿದಿದ್ದ ಉತ್ತರ ಕನ್ನಡ ಇನ್ನೂ ಬೂದಿ ಮುಚ್ಚಿ ಕೆಂಡದಂತಿದೆ.

    ಸಿದ್ಧಾಪುರ, ಮುರುಡೇಶ್ವರದಲ್ಲಿ ಬಂದ್ ನ ವದಂತಿ ಹಬ್ಬಿತ್ತು. ಸಾಮಾಜಿಕ ಜಾಲತಾಣಗಳಲ್ಲೂ ಬಂದ್ ಕುರಿತಂತೆ ಸುಳ್ಳು ಸಂದೇಶಗಳು ಹರಿದಾಡುತ್ತಿದ್ದವು. ಆದರೆ ಯಾವುದೇ ಪಕ್ಷ ಅಧಿಕೃತವಾಗಿ ಬಂದ್ ಗೆ ಕರೆ ಕೊಟ್ಟಿರಲಿಲ್ಲ. ಮುಂಜಾಗ್ರತಾ ಕ್ರಮವಾಗಿ 3 ದಿನಗಳ ಕಾಲ ಸಭೆ, ಸಮಾರಂಭ, ಪ್ರತಿಭಟನೆಗಳಿಗೆ ನಿಷೇಧ ಹೇರಲಾಗಿದ್ದು, ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.

    ಕುಮಟಾ ಮತ್ತು ಶಿರಸಿ ಸಹಜ ಸ್ಥಿತಿಗೆ ಮರಳುತ್ತಿದ್ದರೆ, ಮೇಸ್ತಾ ಸಾವು ಖಂಡಿಸಿ ಇವತ್ತು ಶಿವಮೊಗ್ಗ ಬಂದ್ ಗೆ ಸಂಘ ಪರಿವಾರ ಕರೆ ನೀಡಿದೆ. 144 ಸೆಕ್ಷನ್ ಜಾರಿ ಮಾಡಿ ಹೋರಾಟ ಕೈ ಬಿಡುವಂತೆ ಎಸಿ ಹಾಗೂ ಎಎಸ್ಪಿ ನೇತೃತ್ವದಲ್ಲಿ ಸಭೆಯನ್ನು ನಡೆಸಲಾಗಿತ್ತು.

    ಆದರೆ ಏನೇ ಆದರೂ ಪ್ರತಿಭಟನೆ ನಿಶ್ಚಿತ ಎಂದು ಸಂಘ ಪರಿವಾರದ ನಾಯಕರು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಸಂಘ ಪರಿವಾರ ಇವತ್ತು ಗಣಪತಿ ದೇವಾಲಯದಿಂದ ಎಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ.

  • ಸಹಜ ಸ್ಥಿತಿಯತ್ತ ಶಿರಸಿ-ಎಲ್ಲಿ ಏನಾಗುತ್ತೋ ಅನ್ನೋ ಭಯದಲ್ಲಿ ಪೊಲೀಸರು

    ಸಹಜ ಸ್ಥಿತಿಯತ್ತ ಶಿರಸಿ-ಎಲ್ಲಿ ಏನಾಗುತ್ತೋ ಅನ್ನೋ ಭಯದಲ್ಲಿ ಪೊಲೀಸರು

    -ಮುರುಡೇಶ್ವರ, ಯಲ್ಲಾಪುರದಲ್ಲಿ ಬಂದ್ ವದಂತಿ!

    ಕಾರವಾರ: ಬಂದ್ ಬಂದ್ ಬಂದ್. ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಕಳೆದ ಐದು ದಿನಗಳಿಂದ ನಡೀತಿರೋ ಬಂದ್ ಗಳಿಂದ ಪೊಲೀಸರು ಹೈರಾಣಾಗಿ ಹೋಗಿದ್ದಾರೆ. ಇಂದು ಎಲ್ಲಿ ಗಲಾಟೆ ನಡೆಯುತ್ತೋ, ಎಲ್ಲಿ ಬಂದ್ ಆಗುತ್ತೋ ಅನ್ನೋ ಆತಂಕದಲ್ಲೇ ಪೊಲೀಸರು ಕಾಲ ಕಳೆಯುವಂತಾಗಿದೆ.

    ಅಲ್ಲದೆ ಈ ಮಧ್ಯೆ ಇಂದು ಮುರುಡೇಶ್ವರ ಮತ್ತು ಯಲ್ಲಾಪುರದಲ್ಲಿ ಬಂದ್ ಆಚರಿಸಲಾಗುತ್ತೆ ಅನ್ನೋ ವದಂತಿಗಳು ಹಬ್ಬಿವೆ. ಡಿಸೆಂಬರ್ 6ರಂದು ಸಿಎಂ ಸಿದ್ದರಾಮಯ್ಯ ವಿವಿಧ ಕಾಮಗಾರಿಗಳ ಉದ್ಘಾಟನೆಗಾಗಿ ಎರಡು ದಿನ ಉತ್ತರ ಕನ್ನಡ ಜಿಲ್ಲೆಯಲ್ಲಿದ್ದರು. ಈ ವೇಳೆ ಚಂದಾವರದಲ್ಲಿ ಧ್ವಜದ ವಿಚಾರವಾಗಿ ಎರಡು ಕೋಮಿನವರ ನಡುವೆ ಗಲಾಟೆ ನಡೆದು ಅದು ಕೋಮುಗಲಭೆ ಬಣ್ಣ ಪಡಿತು.

    ಅಂದು ಕಾಣೆಯಾಗಿದ್ದ ಹಿಂದೂ ಯುವಕ ಪರೇಶ್ ಮೇಸ್ತ ಮೃತದೇಹ ಡಿಸೆಂಬರ್ 8ರಂದು ಕೆರೆಯಲ್ಲಿ ಪತ್ತೆಯಾಯ್ತು. ಇದಾದ ಬಳಿಕ ಉತ್ತರಕನ್ನಡ ಜಿಲ್ಲೆ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ಯುವಕನನ್ನು ಅನ್ಯಧರ್ಮೀಯರೇ ಕೊಲೆ ಮಾಡಿದ್ದಾರೆಂದು ಹಿಂದೂಪರ ಸಂಘಟನೆಗಳು ಆರೋಪಿಸಿವೆ. ಹೀಗಾಗಿ ಹೊನ್ನಾವರ, ಕುಮಟಾದಲ್ಲಿ ನಡೆದಿದ್ದ ಬಂದ್‍ಗಳು ಹಿಂಸಾತ್ಮಕ ರೂಪ ಪಡೆದುಕೊಂಡಿತ್ತು.

    ಅಷ್ಟೇ ಅಲ್ಲದೆ ಮಂಗಳವಾರ ಶಿರಸಿಯಲ್ಲಿ ನಡೆದ ಪ್ರತಿಭಟನೆಯಲ್ಲಿ 50 ಲಕ್ಷಕ್ಕೂ ಹೆಚ್ಚು ಮೌಲ್ಯದ ಆಸ್ತಿಪಾಸ್ತಿ ಹಾಳಾಗಿದ್ದು, ಪೊಲೀಸರು ಸೇರಿದಂತೆ 13 ಮಂದಿಗೆ ಗಾಯಗಳಾಗಿತ್ತು. ಇನ್ನು ಮಂಗಳವಾರ ನಿಷೇಧಾಜ್ಞೆ ಉಲ್ಲಂಘಿಸಿ ಯಾತ್ರೆ ಹೊರಟಿದ್ದ ಶಿರಸಿ ಶಾಸಕ ಕಾಗೇರಿ ಸೇರಿದಂತೆ 70 ಮಂದಿ ಹಿಂದೂ ನಾಯಕರನ್ನು ಬಂಧಿಸಲಾಯ್ತು.

    ಗಲಭೆ ನಿಯಂತ್ರಣಕ್ಕಾಗಿ ಜಿಲ್ಲಾಧಿಕಾರಿ ಎಸ್‍ಎಸ್ ನಕುಲ್ ನೇತೃತ್ವದಲ್ಲಿ ಸಭೆ ನಡಿದಿದ್ದು, 11 ತಾಲೂಕಿನಲ್ಲಿಯೂ ಶಾಂತಿ ಸಭೆ ನಡೆಸುವಂತೆ ಎಸಿ ಹಾಗೂ ತಹಶೀಲ್ದಾರ್ ಗೆ ಮನವಿ ಮಾಡಿದ್ದಾರೆ. ಇನ್ನು ಈ ಬಗ್ಗೆ ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಸಿಎಂ, ಇದೆಲ್ಲಾ ಸಂಘ ಪರಿವಾರಗಳ ಕಿತಾಪತಿ ಎಂದಿದ್ದಾರೆ.

    https://www.youtube.com/watch?v=dZ2QYyQX7lQ

    https://www.youtube.com/watch?v=6gDTIt2kztg

    https://www.youtube.com/watch?v=mLbtbTysyQg

    https://www.youtube.com/watch?v=wMhoBywNC5w

    https://www.youtube.com/watch?v=YWp8oHGTKro

    https://www.youtube.com/watch?v=l2bS6mJ_ysM

    https://www.youtube.com/watch?v=9GHFyRsVyyQ

    https://www.youtube.com/watch?v=N94xeWb2ryM

    https://www.youtube.com/watch?v=d2u3htXp_s4