Tag: bus fare

  • KSRTC ಬಸ್ ದರ ಏರಿಕೆ – ಮತ್ತೆ ಸುಳಿವು ನೀಡಿದ ರಾಮಲಿಂಗಾ ರೆಡ್ಡಿ

    KSRTC ಬಸ್ ದರ ಏರಿಕೆ – ಮತ್ತೆ ಸುಳಿವು ನೀಡಿದ ರಾಮಲಿಂಗಾ ರೆಡ್ಡಿ

    ಬೆಂಗಳೂರು: ಕೆಎಸ್‌ಆರ್‌ಟಿಸಿ (KSRTC) ಬಸ್ ದರ ಏರಿಕೆಯಾಗುವುದು (Bus Fare) ಬಹುತೇಕ ಖಚಿತ. ಬಸ್ ದರ ಏರಿಕೆ ಮಾಡುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಸುಳಿವು ನೀಡಿದ್ದಾರೆ.

    ಬಿಜೆಪಿ ಸರ್ಕಾರ ಕಳೆದ 5 ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳನ್ನು 5900 ಕೋಟಿ ರೂ.ನಷ್ಟದಲ್ಲಿಟ್ಟು ಹೋಗಿದ್ದು, ಈಗ ಸಾರಿಗೆ ಸಂಸ್ಥೆಗಳ ಪಾಡೇನು ಎಂಬುದರ ಬಗ್ಗೆ ತಾವು ಉತ್ತರ ನೀಡುವಿರಾ ಎಂದು ಪ್ರತಿಪಕ್ಷ ನಾಯಕ ಅಶೋಕ್‌ (R Ashok) ವಿರುದ್ಧ ಕಿಡಿಕಾರಿದ್ದಾರೆ.

     

     

    ಅಶೋಕ್‌ ಹೇಳಿದ್ದೇನು?
    ಬಸ್ ದರ ಏರಿಕೆಗೆ ಹೊಸ ಆಯೋಗ. ಪಿಕ್ ಪಾಕೆಟ್ ಸರ್ಕಾರದ ಹೊಸ ಪ್ರಯೋಗ. ಅಧಿಕಾರಕ್ಕೆ ಬಂದ ದಿನದಿಂದ ಬೆಲೆ ಏರಿಕೆ, ತೆರಿಗೆ ಹೆಚ್ಚಳ ಅಂತ ಒಂದಲ್ಲ ಒಂದು ರೀತಿ ಜನ ಸಾಮಾನ್ಯರ ಸುಲಿಗೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ (Congress Government) ಈಗ ಬಸ್ ದರ ಏರಿಕೆಗೆ ಪ್ರತ್ಯೇಕ ಆಯೋಗ ರಚಿಸಿ ಪಿಕ್ ಪಾಕೆಟ್ ಗಾಗಿ ಹೊಸ ಪ್ರಯೋಗ ಮಾಡಲು ಹೊರಟಿದೆ.

    ಆಡಳಿತ ಮಾಡುವಲ್ಲಿ ಮೂರು ಕಾಸು ಪ್ರಯೋಜನ ಇಲ್ಲದಿದ್ದರೂ ಜನರಿಗೆ ಮಂಕು ಬೂದು ಎರಚಿ ಹೊಸ ಪ್ರಯೋಗಗಳ ಮೂಲಕ ಜನರನ್ನ ಸುಲಿಗೆ ಮಾಡುವಲ್ಲಿ ಕಾಂಗ್ರೆಸ್ ಪಕ್ಷದವರು ಬಹಳ ನಿಸ್ಸೀಮರು ಎಂದು ಕಿಡಿಕಾರಿದ್ದರು. ಇದನ್ನೂ ಓದಿ: ಸ್ಕೋಡಾ ಎಸ್‌ಯುವಿಗೆ ಸಂಸ್ಕೃತದ ‘ಕೈಲಾಕ್’ ಹೆಸರಿಟ್ಟು ಕಾರು ಗೆದ್ದ ಕಾಸರಗೋಡಿನ ಕುರಾನ್ ಶಿಕ್ಷಕ

    ಜುಲೈ 14 ರಂದು ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ, ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್, ಕಳೆದ ತ್ರೈಮಾಸಿಕದಲ್ಲಿ 295 ಕೋಟಿ ರೂ. ನಷ್ಟವಾಗಿದೆ. ಟಿಕೆಟ್‌ ದರ ಏರಿಸದೇ ಇದ್ದರೆ ಕೆಎಸ್‌ಆರ್‌ಟಿಸಿ ಸಂಸ್ಥೆ ಉಳಿಯುವುದಿಲ್ಲ ಎಂದು ಹೇಳಿದ್ದರು. ಸದ್ಯದಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುವುದು. ಮೊನ್ನೆ ನಿಗಮದ ಮೀಟಿಂಗ್ ಮುಗಿದಿದ್ದು 15-20% ದರ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಸಿಎಂ ಮುಂದೆ ಇಟ್ಟಿದ್ದೇವೆ ಎಂದು ಮಾಹಿತಿ ನೀಡಿದ್ದರು.

    ಪ್ರತಿ ಬಾರಿಯೂ ನಷ್ಟವನ್ನು ಸರಿದೂಗಿಸಿಕೊಡುವಂತೆ ಸರ್ಕಾರವನ್ನು ಕೇಳುವುದು ಸರಿಯಲ್ಲ. ನಷ್ಟವನ್ನು ಸರಿದೂಗಿಸಲು ಹಾಗೂ ಸಂಸ್ಥೆಯನ್ನು ಉಳಿಸಬೇಕಾದರೆ ಟಿಕೆಟ್ ದರ ಹೆಚ್ಚಿಗೆ ಮಾಡಲೇಬೇಕು ಎಂದು ಸಮಜಾಯಿಷಿ ಕೊಟ್ಟಿದ್ದರು.

     

  • ಬಿಎಂಟಿಸಿ ದರ ಇಳಿಕೆ: ಒಬ್ಬರಿಗೆ ಬೆಣ್ಣೆ, ಮತ್ತೊಬ್ಬರಿಗೆ ಸುಣ್ಣ..!

    ಬಿಎಂಟಿಸಿ ದರ ಇಳಿಕೆ: ಒಬ್ಬರಿಗೆ ಬೆಣ್ಣೆ, ಮತ್ತೊಬ್ಬರಿಗೆ ಸುಣ್ಣ..!

    ಬೆಂಗಳೂರು: ಬಿಎಂಟಿಸಿ ಬಸ್ ದರ ಪರಿಷ್ಕರಣೆ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ದರ ಇಳಿಕೆ ಮಾಡಿದ್ದೀವಿ ಅಂತಿರೋ ಬಿಎಂಟಿಸಿ, ದರ ಏರಿಕೆಯನ್ನೂ ಸಹ ಮಾಡಿದೆ.

    ಚಿಲ್ಲರೆ ಸಮಸ್ಯೆಗೆ ಬ್ರೇಕ್ ಹಾಕೋ ನಿಟ್ಟಿನಲ್ಲಿ, ಬಿಎಂಟಿಸಿ ಸಾಮಾನ್ಯ ಬಸ್‍ಗಳಲ್ಲಿ ಎರಡನೇ ಹಂತದ ಪ್ರಯಾಣಿಕರಿಗೆ 12 ರೂಪಾಯಿ ಇದ್ದ ದರವನ್ನು 10 ರೂಪಾಯಿಗೆ ಇಳಿಕೆ ಮಾಡಿದೆ. ಚಿಲ್ಲರೆ ಸಮಸ್ಯೆ ಸರಿದೂಗಿಸೋ ನಿಟ್ಟಿನಲ್ಲಿ ಎರಡು ರೂಪಾಯಿ ಕಡಿಮೆ ಮಾಡಿದ್ರೆ, ಮೂರು ಹಾಗೂ ಆರನೇ ಹಂತದಲ್ಲಿ ಇದೇ ಚಿಲ್ಲರೆ ನೆಪದಲ್ಲಿ ಮೂರು ಹಂತಗಳಲ್ಲಿ 1 ರೂಪಾಯಿ ದರ ಹೆಚ್ಚಿಸಲಾಗಿದೆ.

    ಒಂದಷ್ಟು ಪ್ರಯಾಣಿಕರಿಗೆ ಪರಿಷ್ಕೃತ ದರ ವರವಾದ್ರೆ ಮತ್ತೊಂದಷ್ಟು ಪ್ರಯಾಣಿಕರಿಗೆ ಏರಿಕೆಯ ಬಿಸಿ ತಟ್ಟಿದೆ. ಬಿಎಂಟಿಸಿ ಪರಿಷ್ಕೃತ ದರ ಹೀಗಿದೆ.

    ಬಿಎಂಟಿಸಿ ದರ ಇಳಿಕೆ-ಏರಿಕೆ
    # ಸಾಮಾನ್ಯ ಬಸ್: 12 ರೂ. ಟಿಕೆಟ್ ದರ 10 ರೂಪಾಯಿಗೆ ಇಳಿಕೆ
    # ಸಾಮಾನ್ಯ ಬಸ್: 3,6,9 ಸ್ಟೇಜ್‍ಗಳಲ್ಲಿ ಒಂದು ರೂಪಾಯಿ ಹೆಚ್ಚಳ
    # 3ನೇ ಹಂತ ದರ 14 ರೂ.ನಿಂದ 15 ರೂಪಾಯಿಗೆ ಏರಿಕೆ
    # 6ನೇ ಹಂತ ದರ 19 ರೂ.ನಿಂದ 20 ರೂಪಾಯಿಗೆ ಏರಿಕೆ
    # 9ನೇ ಹಂತ ದರ 21 ರೂ. ನಿಂದ 22 ರೂಪಾಯಿಗೆ ಏರಿಕೆ
    # ಎಲ್ಲ ಹವಾನಿಯಂತ್ರಿತ ಬಸ್: ವೋಲ್ವೋ ಬಸ್‍ಗಳಲ್ಲಿ ಎಲ್ಲಾ ಹಂತದಲ್ಲೂ 5 ರೂಪಾಯಿ ದರ ಇಳಿಕೆ

    ಸಾಮಾನ್ಯ ಬಸ್‍ಗಳಲ್ಲಿ ದರ ಇಳಿಕೆ ಮಾಡಿರೋದಾಗಿ ಹೇಳ್ತಿರೋ ಬಿಎಂಟಿಸಿ ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಂಡು ಕಾಣದ ಹಾಗೆ ದರ ಏರಿಕೆ ಬರೆ ಹಾಕಿದೆ. ಪರಿಷ್ಕೃತ ದರ ಏಪ್ರಿಲ್ 14ರ ಮಧ್ಯರಾತ್ರಿಯಿಂದ ಜಾರಿಗೆ ಬರಲಿದೆ,

    ಇದನ್ನೂ ಓದಿ: ಮೇ 1 ರಿಂದ ಈ 5 ನಗರಗಳಲ್ಲಿ ಪ್ರತಿದಿನ ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆ ಆಗುತ್ತೆ