Tag: bus system

  • ದೀಪಾವಳಿಗಾಗಿ ಊರಿಗೆ ತೆರಳುವ ಮಂದಿಗೆ ಗುಡ್ ನ್ಯೂಸ್

    ದೀಪಾವಳಿಗಾಗಿ ಊರಿಗೆ ತೆರಳುವ ಮಂದಿಗೆ ಗುಡ್ ನ್ಯೂಸ್

    ಬೆಂಗಳೂರು: ನರಕ ಚತುರ್ದಶಿ ಹಾಗೂ ಬಲಿಪಾಡ್ಯಮಿ ಹಬ್ಬದ ಹಿನ್ನೆಲೆಯಲ್ಲಿ ನಗರದಿಂದ ಊರಿಗೆ ತೆರಳುವ ಯೋಜನೆಯಲ್ಲಿದ್ದ ಸಾರ್ವಜನಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‍ಆರ್ ಟಿಸಿ) ನ.2ರಿಂದ 5ರ ವರೆಗೆ ಬೆಂಗಳೂರಿನಿಂದ ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಸ್ಥಳಗಳಿಗೆ 1,500 ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಿದೆ.

    ನಗರದ ಪ್ರಮುಖ ಕೇಂದ್ರವಾದ ಮೆಜೆಸ್ಟಿಕ್, ಸ್ಯಾಟಲೈಟ್, ಶಾಂತಿನಗರ, ಜಯನಗರ ಸೇರಿದಂತೆ ನಗರದ ಪ್ರಮುಖ ಬಸ್ ನಿಲ್ದಾಣಗಳಿಂದ ಸೇವೆ ನೀಡಲಾಗಿದೆ.

    ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮೊದಲಾದ ಸ್ಥಳಗಳಿಗೆ ಹೆಚ್ಚುವರಿ ಬಸ್ ಸೇವೆ ನೀಡಲಾಗಿದೆ.

    ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ಹಾಗೂ ಶಾಂತಿನಗರದ ಕೇಂದ್ರ ಘಟಕ 2 ಮತ್ತು 4ರ ಮುಂಭಾಗದಿಂದ ತಮಿಳುನಾಡು ಮತ್ತು ಆಂಧ್ರಪ್ರದೇಶ, ತೆಲಂಗಾಣ ರಾಜ್ಯದ ವಿವಿಧ ಸ್ಥಳಗಳಿಗೆ ಬಸ್ ಕಾರ್ಯಾಚರಣೆ ಇರಲಿದೆ. ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣ, ಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್ (ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡರಸ್ತೆ, ಬನಶಂಕರಿ, ಜೀವನ್ ಬೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ ಮೊದಲಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಮೊದಲಾದ ಸ್ಥಳಗಳಿಗೆ ಬಸ್ ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್‍ಆರ್ ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

    ಹಬ್ಬದ ಬಳಿಕ ನ.11ರಂದು ರಾಜ್ಯ ಮತ್ತು ಅಂತರ್ ರಾಜ್ಯದ ವಿವಿಧಡೆಯಿಂದ ಬೆಂಗಳೂರಿಗೆ ವಿಶೇಷ ಬಸ್ ಸೌಲಭ್ಯ ಕಲ್ಪಿಸುವುದಾಗಿಯೂ ಇದೇ ವೇಳೆ ಕೆಎಸ್‍ಆರ್ ಟಿಸಿ ವಿವರಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಗ್ರಾಮೀಣ ಭಾಗದ ಜನರಿಗೆ ಕೇಸರಿ ಬಣ್ಣದ ಬಸ್ ಸೇವೆ ಆರಂಭಿಸಿದ ಯೋಗಿ ಸರ್ಕಾರ

    ಗ್ರಾಮೀಣ ಭಾಗದ ಜನರಿಗೆ ಕೇಸರಿ ಬಣ್ಣದ ಬಸ್ ಸೇವೆ ಆರಂಭಿಸಿದ ಯೋಗಿ ಸರ್ಕಾರ

    ಲಕ್ನೋ: ಉತ್ತರ ಪ್ರದೇಶದ ಯೋಗಿ ಸರ್ಕಾರ ಬುಧವಾರ ರಾಜ್ಯ ಗ್ರಾಮೀಣ ಸಾರಿಗೆ ವ್ಯವಸ್ಥೆಗೆ ಹೊಸ ಕೇಸರಿ ಬಣ್ಣದ ಸಾರಿಗೆ ಬಸ್‍ಗಳ ಸೇವೆಯನ್ನು ಆರಂಭಿಸಿದ್ದು, ಸಿಎಂ ಯೋಗಿ ಅದಿತ್ಯನಾಥ್ ಬುಧವಾರ 50 ಬಸ್‍ಗಳಿಗೆ ಚಾಲನೆ ನೀಡಿದರು.

    ಬಸ್ ಸೇವೆಗೆ ಸರ್ಕಾರಿ ಸಾರಿಗೆ ಇಲಾಖೆಯು `ಸಂಕಲ್ಪ್’ ಎಂದು ಹೆಸರಿಟ್ಟಿದ್ದು, ಸುಮಾರು 40 ಸಾವಿರ ಹಳ್ಳಿಗಳಿಗೆ ಮುಂದಿನ ನಾಲ್ಕು ವರ್ಷಗಳಲ್ಲಿ ಸೇವೆಯನ್ನು ನೀಡುವ ಗುರಿಯನ್ನು ಹೊಂದಿದೆ.

    ಪ್ರಸ್ತುತ ಈ ಯೋಜನೆಯು ರಾಜ್ಯದ ವಾರಣಾಸಿ, ಗೋರಖ್‍ಪುರ, ಕಾನ್‍ಪುರ, ಅಲಹಾಬಾದ್, ಬರೇಲಿ ಮತ್ತು ಮೊರಾದಾಬಾದ್ ಜಿಲ್ಲೆಗಳ ಗ್ರಾಮಗಳಿಗೆ ಸೇವೆಯನ್ನು ನೀಡಲಿದೆ. 16 ಸಾವಿರ ಗ್ರಾಮಗಳಿಗೆ ಸಾರಿಗೆ ವ್ಯವಸ್ಥೆ ಒದಗಿಸಲು 1,500 ಬಸ್‍ಗಳು ಸಿದ್ಧವಾಗಿವೆ.

    `ಗೌರವ್ ಪಥ್’ ರಸ್ತೆ ನಿರ್ಮಾಣ ಯೋಜನೆಯನ್ನು ಆರಂಭಿಸುವ ಮೂಲಕ ಯೋಗಿ ಅದಿತ್ಯನಾಥ್ ಸರ್ಕಾರವು ರಾಜ್ಯದ ಕುಗ್ರಾಮಗಳಿಗೂ ಸಾರಿಗೆ ಸಂಪರ್ಕ ವ್ಯವಸ್ಥೆಯನ್ನು ನಿರ್ಮಾಣ ಮಾಡುವ ಮೂಲಕ ಗ್ರಾಮೀಣ ಭಾಗದ ಜನರಿಗೆ ಸೇವೆಯನ್ನು ನೀರುವ ಉದ್ದೇಶವನ್ನು ಹೊಂದಿದೆ. ಹುತಾತ್ಮ ಯೋಧರ ಗ್ರಾಮಗಳಿಗೆ ಗೌರವ್ ಪಥ್/ಸಂಪರ್ಕ ರಸ್ತೆಗಳನ್ನ ನಿರ್ಮಿಸಲು ಬಿಜೆಪಿ ಸರ್ಕಾರ ಯೋಜನೆ ರೂಪಿಸಿದ್ದು, ಈ ಗ್ರಾಮಗಳಿಗೆ ಬಸ್ ವ್ಯವಸ್ಥೆ ಸಂಪರ್ಕ ಕಲ್ಪಿಸಲಿದೆ.

    ಈ ಹಿಂದೆ ಉತ್ತರ ಪ್ರದೇಶದಲ್ಲಿ ಆಡಳಿತ ವಹಿಸಿದ್ದ ಸಮಾಜವಾದಿ ಪಕ್ಷವು ಲೋಹಿಯಾ ಬಸ್ ಸೇವಾ ಯೋಜನೆಯನ್ನು ಜಾರಿಗೆ ತಂದು ಶೇ.25 ರಷ್ಟು ರಿಯಾಯಿತಿ ದರದಲ್ಲಿ ಸೇವೆಯನ್ನು ನೀಡುತ್ತಿದೆ. ಆದರೆ ಸಂಕಲ್ಪ್ ಬಸ್‍ಗಳಲ್ಲಿ ಸಾಮಾನ್ಯ ಟಿಕೆಟ್ ದರವೇ ಇದೆ. ಏಕೆಂದರೆ ಸಂಕಲ್ಪ್ ಯೋಜನೆಗೆ ಧನಸಹಾಯದ ಕೊರತೆ ಇದ್ದು, ಮುಂದಿನ ದಿನಗಳಲ್ಲಿ ಧನಸಹಾಯ ಸಿಕ್ಕರೆ ರಿಯಾಯಿತಿನ್ನು ನೀಡಲಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸುಮಾರು 38,254 ಗ್ರಾಮಗಳನ್ನು ಈ ಯೋಜನೆ ಅಡಿಯಲ್ಲಿ ಗುರುತಿಸಲಾಗಿದೆ ಎಂದು ಉತ್ತರ ಪ್ರದೇಶ ಕಿರಿಯ ಸಾರಿಗೆ ಸಚಿವ ಸ್ವಾತಂತ್ ದೇವ್ ಸಿಂಗ್ ಮಾಹಿತಿ ನೀಡಿದ್ದಾರೆ.

    ಪ್ರಯಾಣಿಕರಿಗೆ ಅನುಕೂಲಕಾರ ಹಾಗೂ ಸುರಕ್ಷಿತ ಸೇವೆ ನೀಡುವುದು ಸರ್ಕಾರದ ಉದ್ದೇಶವಾಗಿದೆ. ಪ್ರಮುಖವಾಗಿ ಜಿಲ್ಲಾ ಕೇಂದ್ರಗಳಿಂದ ಗ್ರಾಮಗಳಿಗೆ ಹೆಚ್ಚು ಪ್ರಯಾಣ ಸೇವೆಯನ್ನು ನೀಡಲಿದ್ದು, ಖಾಸಗಿ ಸೇವಾ ಸಂಸ್ಥೆಗೆ ಮುಂದಿನ ದಿನಗಳಲ್ಲಿ ಬಸ್‍ಗಳ ನಿರ್ವಹಣೆಯನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

    ಸಂಕಲ್ಪ್ ಯೋಜನೆಯಿಂದ ಪ್ರತಿವರ್ಷ 9,563 ಹಳ್ಳಿಗಳಿಗೆ ಸೇವೆಯನ್ನು ವಿಸ್ತರಿಸುವ ಚಿಂತನೆಯನ್ನು ನಡೆಸಿದ್ದು, ನಾಲ್ಕು ವರ್ಷಗಳಲ್ಲಿ ರಾಜ್ಯದ ಎಲ್ಲಾ ಗ್ರಾಮಗಳು ಬಸ್ ವ್ಯವಸ್ಥೆಯನ್ನು ಹೊಂದಿರಲಿವೆ. ಉತ್ತರ ಪ್ರದೇಶ ಸಾರಿಗೆ ಸಂಸ್ಥೆಯು ಇದುವರೆಗೂ ಸುಮಾರು 5 ಸಾವಿರ ಹಳ್ಳಿಗಳಿಗೆ ತನ್ನ ಸೇವೆಯನ್ನು ನೀಡುತ್ತಿದೆ ಎಂದು ಹೇಳಿದ್ದಾರೆ.