– ಗ್ಯಾರಂಟಿ ಸರ್ಕಾರದಿಂದ ಜನಕ್ಕೆ ಶಾಕ್; ಯಾವ್ಯಾವ ಬಸ್ ಟಿಕೆಟ್ ದರ ಎಷ್ಟಿದೆ?
ಬೆಂಗಳೂರು: ಗ್ಯಾರಂಟಿ ಸರ್ಕಾರ ರಾಜ್ಯದ ಜನರಿಗೆ ಮತ್ತೆ ದರ ಏರಿಕೆ ಬರೆ ಎಳೆದಿದೆ. ದಸರಾ ಪ್ರಯುಕ್ತ ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಏರಿಕೆ ಮಾಡಿದೆ. ಬರೋಬ್ಬರಿ 20 ರೂ. ಏರಿಕೆ ಮಾಡಿದ್ದು ಪ್ರಯಾಣಿಕರು ಆಕ್ರೋಶ ಹೊರ ಹಾಕಿದ್ದಾರೆ.
ದಸರಾ ಹಬ್ಬದ ಪ್ರಯುಕ್ತ ಟಿಕೆಟ್ ದರ ಇಳಿಕೆ ಮಾಡಿ ದಸರಾ ವೀಕ್ಷಣೆಗೆ ಅವಕಾಶ ಮಾಡಿಕೊಡಬೇಕಾಗಿತ್ತು ಸರ್ಕಾರ. ಆದರೆ ಸಾರಿಗೆ ಇಲಾಖೆ ಮೈಸೂರು ಮಾರ್ಗದ ಕೆಎಸ್ ಆರ್ಟಿಸಿ ಬಸ್ ದರವನ್ನ ಏರಿಕೆ ಮಾಡಿದೆ. ಎಲ್ಲಾ ಕೆಎಸ್ ಆರ್ಟಿಸಿ ಬಸ್ ದರ ಬರೋಬ್ಬರಿ ೨೦ ರೂಪಾಯಿ ಏರಿಕೆ ಮಾಡಿದೆ. ಪ್ರಯಾಣಿಕರು ಟಿಕೆಟ್ ದರ ಏರಿಕೆ ಮಾಡಿರೋದಕ್ಕೆ ಆಕ್ರೋಶ ಹೊರ ಹಾಕ್ತಾ ಇದ್ದಾರೆ.
ಇನ್ನೂ ಕೆಎಸ್ಆರ್ಟಿಸಿ ವೇಗದೂತ, ತಡೆರಹಿತ, ರಾಜಹಂಸ, ಐರಾವತ ಸೇರಿದಂತೆ ಎಲ್ಲಾ ಬಸ್ಗಳ ದರ ಏರಿಕೆ ಆಗಿದೆ. ದಸರಾ ಮುಗಿಯುವವರೆಗೂ ದರ ಏರಿಕೆ ಇರಲಿದೆ.
ಯಾವ್ಯಾವ ಬಸ್ ಟಿಕೆಟ್ ದರ ಎಷ್ಟಿದೆ?
ಕರ್ನಾಟಕ ಸಾರಿಗೆ ವೇಗದೂತ – 170 ರೂ. ನಿಂದ 190 ರೂ.ಗೆ
ತಡೆ ರಹಿತ ಸಾರಿಗೆ – 210 ರಿಂದ 240 ರೂ.
ರಾಜಾಹಂಸ – 270 ರಿಂದ 290 ರೂ.
ಐರಾವತ – 430 ರಿಂದ 450 ರೂ.
ಐರಾವತ ಕ್ಲಬ್ ಕ್ಲಾಸ್ – 440 ರಿಂದ 460 ರೂ.
ದಸರಾ ಪ್ರಯುಕ್ತ ಟಿಕೆಟ್ ದರ ಇಳಿಕೆ ಮಾಡಿ ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಡಬೇಕು. ಆದ್ರೆ ಟಿಕೆಟ್ ದರ ಏರಿಕೆ ಮಾಡಿ ಪ್ರಯಾಣಿಕರಿಗೆ ಶಾಕ್ ನೀಡಿರೋದು ಸರಿಯಲ್ಲ.
ರಾಮನಗರ: ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಹಿನ್ನೆಲೆ ದರ ಹೆಚ್ಚಳ ಖಂಡಿಸಿ ರಾಮನಗರದಲ್ಲಿ (Ramanagara) ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಪ್ರತಿಭಟನೆ ನಡೆಸಿದ್ದಾರೆ.
ರಾಮನಗರ ಕೆಎಸ್ಆರ್ಟಿಸಿ (KSRTC) ಬಸ್ ನಿಲ್ದಾಣದಲ್ಲಿ ಬಸ್ ಏರಿ ಕುಳಿತು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪುರಷರಿಗೂ ಬಸ್ ಪ್ರಯಾಣ ಉಚಿತ ಮಾಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸ್ವಾಮಿ ಅವಧೇಶಾನಂದ ಗಿರಿ, ಸದ್ಗುರು ಭೇಟಿಯಾದ ಅಮಿತ್ ಶಾ
ಸರ್ಕಾರ ರಾಜ್ಯ ಜನರ ಬಳಿ ಹಗಲು ದರೋಡೆ ಮಾಡುತ್ತಿದೆ. ಪುರುಷರ ಬಳಿ ದುಪ್ಪಟ್ಟು ಹಣ ವಸೂಲಿ ಮಾಡಿ ಮಹಿಳೆಯರಿಗೆ ಉಚಿತ ಕೊಡುತ್ತಿದೆ. ಪುರುಷರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡಿರುವುದು ಸರಿಯಲ್ಲ. ಕೂಡಲೇ ಸರ್ಕಾರ ದರ ಏರಿಕೆಯನ್ನು ಕೈಬಿಡಬೇಕು. ಇಲ್ಲ ಪುರುಷರಿಗೂ ಉಚಿತ ಬಸ್ ಪಯಣ ಎಂದು ಬಜೆಟ್ನಲ್ಲಿ ಘೋಷಣೆ ಮಾಡುವಂತೆ ವಾಟಾಳ್ ನಾಗರಾಜ್ ಒತ್ತಾಯ ಮಾಡಿದರು. ಅಲ್ಲದೇ ಟಿಕೆಟ್ ಖರೀದಿಸದೇ ಬಸ್ನಲ್ಲಿ ಪ್ರಯಾಣ ಮಾಡಿ ಸರ್ಕಾರದ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಓಯೋ ಹೊಸ ನಿಯಮ – ಇನ್ಮುಂದೆ ಅವಿವಾಹಿತ ಜೋಡಿಗೆ ಹೋಟೆಲ್ ರೂಮ್ ಇಲ್ಲ!
ಬೆಂಗಳೂರು: ನಾಲ್ಕು ನಿಗಮಗಳ ಪ್ರಯಾಣ ದರ ಏರಿಕೆ (Bus Ticket Price Hike) ಖಂಡಿಸಿ, ಬೆಂಗಳೂರಿನ (Bengaluru) ಮೆಜೆಸ್ಟಿಕ್ (Mejestic) ಬಸ್ ನಿಲ್ದಾಣದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ (R Ashok) ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಬಡವರಿಗೆ ಬಿಜೆಪಿ ಫ್ರೀ ಕೊಟ್ಟಿರಲಿಲ್ಲ. ಕಾಂಗ್ರೆಸ್ ಫ್ರೀ ಕೊಟ್ಟು ದರ ಏರಿಕೆ ಮಾಡಿದೆ. ಹಾಲಿನಲ್ಲಿ ಕಲ್ಲು ಹಾಕಿದ ದುರುಳರು ಇವರು. ಮದ್ಯದ ದರವೂ ಏರಿಕೆ ಮಾಡಿದ್ದೀರಿ. ವಿದ್ಯುತ್, ನೋಂದಣಿ ದರವೂ ಏರಿಕೆ ಮಾಡಿದ್ದೀರಿ. ಈ ಸರ್ಕಾರ ಎಲ್ಲದಕ್ಕೂ ಟ್ಯಾಕ್ಸ್ ಹಾಕಿದೆ. ಬಸ್ ದರ ಏರಿಕೆ ಮೂಲಕ ಬಡ ಜನರಿಗೆ ಸಿಎಂ ಒಳ್ಳೆದು ಮಾಡಿದ್ದಾರೆ. ನಾವು ಪ್ರಯಾಣಿಕರಿಗೆ ಗುಲಾಬಿ ಕೊಡುತ್ತೇವೆ. ನಮ್ಮನ್ನು ಕ್ಷಮಿಸಿ ಬಿಡಿ ಎಂದು ಗುಲಾಬಿ ಕೊಡುತ್ತೇವೆ. ಕಂದಾಯ, ಮನೆ ಬಾಡಿಗೆ ಎಲ್ಲವೂ ದರ ಏರಿಕೆಯಾಗಿದೆ. ನಾನು ಸಾರಿಗೆ ಸಚಿವ ಇದ್ದಾಗ 1 ಸಾವಿರ ಕೋಟಿ ಲಾಭ ಇತ್ತು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರೆಸ್ಟೋರೆಂಟ್ ಮಾಲೀಕನ ಪುತ್ರ, ಸಿಬ್ಬಂದಿಯಿಂದ ಹಲ್ಲೆ – ನ್ಯೂ ಇಯರ್ಗೆ ಗೋವಾಗೆ ತೆರಳಿದ್ದ ಆಂಧ್ರದ ಯುವಕ ಸಾವು
ಇನ್ನು ಇದೇ ವೇಳೆ ಪ್ರಯಾಣಿಕರಿಗೆ ಹೂ ಕೊಡಲು ಹೋದಾಗ ಅಶೋಕ್ ಅವರನ್ನು ಪೊಲೀಸರು ತಡೆದಿದ್ದಾರೆ. ಈ ಸಂದರ್ಭ ಅಶೋಕ್ ಹಾಗೂ ಪೊಲೀಸರ ನಡುವೆ ಕೆಲಕಾಲ ವಾಗ್ವಾದ ನಡೆಯಿತು. ಪೊಲೀಸ್ ದೌರ್ಜನ್ಯ ಬೇಡ. ರೈಟಿಂಗ್ನಲ್ಲಿ ಪ್ರತಿಭಟನೆ ಮಾಡಬಾರದು ಎಂದು ಕೊಡಿ. ಸರ್ಕಾರ ಇದೇ ಇರೋದಿಲ್ಲ. ನಾಟಕ ಆಡುತ್ತಿದ್ದೀರಾ ನೀವು ಎಂದು ಪೊಲೀಸರಿಗೆ ಎಚ್ಚರಿಕೆ ನೀಡಿದರು. ಈ ವೇಳೆ ಅಶೋಕ್ ಜೊತೆ ಬಿಜೆಪಿ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು. ಇದನ್ನೂ ಓದಿ: ಕಾಂಗ್ರೆಸ್ನ ಪಾಪದ ಕೊಡ ತುಂಬಿದೆ, ದೇವರೇ ಶಿಕ್ಷೆ ಕೊಡ್ತಾನೆ: ಕುಮಾರಸ್ವಾಮಿ
ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಇದೆಯಾ? ಒಂದು ಕೈಯಲ್ಲಿ ಕೊಟ್ಟು, ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳೋ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ.
ಬಸ್ ಟಿಕೆಟ್ ದರ (Bus Ticket Price Hike) ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಬೆಲೆ ಏರಿಕೆ ಅಚ್ಚರಿ ತರೋ ವಿಷಯ ಅಲ್ಲ. ರಾಜ್ಯದ ಜನರು ಟಿಕೆಟ್ ಬೆಲೆ ಏರಿಕೆಯನ್ನು 2-3 ದಿನಗಳಲ್ಲಿ ಮರೆತು ಹೋಗುತ್ತಾರೆ. ಎರಡು ದಿನ ಆಕ್ರೋಶ ವ್ಯಕ್ತಪಡಿಸುತ್ತಾರೆ ಅಷ್ಟೇ. ಮೂರನೇ ದಿನ ಜನರೇ ಅಡ್ಜೆಸ್ಟ್ ಆಗುತ್ತಾರೆ. ಇದೇ ಸರ್ಕಾರ ಡೀಸೆಲ್, ಪೆಟ್ರೋಲ್ ಮೇಲೆ ಸೆಸ್ ಹಾಕಿದ್ದರೂ ಪ್ರತಿಭಟನೆ ಮಾಡಿದ್ರಾ? ಅದಕ್ಕೆ ಅಡ್ಜೆಸ್ಟ್ ಆದರು. ಸ್ಟಾಂಪ್ ಡ್ಯೂಟಿ ಜಾಸ್ತಿ ಮಾಡಿದರು. ಗೈಡ್ಲೈನ್ಸ್ ವ್ಯಾಲ್ಯೂ, ಮದ್ಯದ ದರ ಏರಿಕೆ ಮಾಡಿದರು. ಈಗ ನೀರಿನ ದರವೂ ಏರಿಕೆ ಆಗುತ್ತಂತೆ. ನೀರಿನ ದರವೂ ಏರಿಕೆ ಆಗುತ್ತೆ. ಹಾಲಿನ ದರ ಏನಾಗಬಹುದು ಎಂದು ಈ ಸರ್ಕಾರ ಹೇಳುತ್ತಿದೆ. ಹೊಸ ವರ್ಷದಲ್ಲಿ ನಾಡಿನ ಜನ ಬೆಲೆ ಏರಿಕೆಗೆ ತಯಾರಾಗಿ ಎಂದು ಈ ಸರ್ಕಾರ (Congress) ಸಂದೇಶ ಕೊಡುತ್ತಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಡಿಕೆಶಿಗೂ ಶಾಕ್, ಪವರ್ ಶೇರ್ ಕುತೂಹಲಿಗಳಿಗೂ ಶಾಕ್ – ಸಿಎಂ ಡಿನ್ನರ್ ಸಭೆ ಇನ್ಸೈಡ್ ಸ್ಟೋರಿ
ಸದ್ಯಕ್ಕೆ ನಾನು ಯಾವುದಕ್ಕೂ ಟೀಕೆ ಮಾಡಲ್ಲ. ಟೀಕೆ ಮಾಡಿ ಏನು ಮಾಡೋದು. ಕೇಳೋಕೆ ಯಾರಿದ್ದಾರೆ ಇಲ್ಲಿ? ರಾಜ್ಯದಲ್ಲಿ ಸರ್ಕಾರ ಇಲ್ಲ. ಸ್ವೇಚ್ಚಾಚ್ಚಾರವಾಗಿ ಸರ್ಕಾರ ನಡೆಸುತ್ತಿದ್ದಾರೆ. ಇವರಿಗೆ ಹೇಳೋರು ಕೇಳೋರು ಯಾರೂ ಇಲ್ಲ. ಜನರ ಕಷ್ಟ, ಸುಖ ಯಾರು ಕೇಳುತ್ತಾರೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ
ಅನಿವಾರ್ಯ ಇದ್ದಾಗ ಬೆಲೆ ಏರಿಕೆ ಮಾಡೋದು ಬೇರೆ. ಹಿಂದಿನ ಸರ್ಕಾರಗಳಲ್ಲಿ ಅನಿವಾರ್ಯ ಇದ್ದಾಗ ಬೆಲೆ ಏರಿಕೆ, ಕಡಿಮೆ ಮಾಡೋದು ಸಾಮಾನ್ಯ. ಆದರೆ ಇವರ ಬೆಲೆ ಏರಿಕೆ ಇವರೇ ಮೈ ಮೇಲೆ ಎಳೆದುಕೊಂಡಿರೋದು. ಕೆಇಬಿ ಮುಂದೆ ಏನು ಆಗುತ್ತದೋ ನೋಡೋಣ. ಪವರ್ ಸೆಕ್ಟರ್ ಏನಾಗುತ್ತೋ ನೋಡೋಣ. ಯುವನಿಧಿ ಅಂತ ಮಾಡಿದ್ರು. ಎಷ್ಟು ಜನರಿಗೆ ಮಹಾ ದುಡ್ಡು ಕೊಡುತ್ತಿದ್ದಾರೆ ಇವರು. ಸ್ವೇಚ್ಚಾಚ್ಚಾರವಾಗಿ ಜಾಹಿರಾತುಗಳಿಗೆ ಹಣ ಖರ್ಚು ಮಾಡುತ್ತಿದ್ದಾರೆ. ಸಾರ್ವಜನಿಕರ ತೆರಿಗೆ ಹಣ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಜನರು ಇದರ ಬಗ್ಗೆ ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಕಳ್ಳತನ ಮಾಡಿ ಹಣ ಕೊಡೋಕೆ ಆಗುತ್ತಾ, ಗ್ಯಾರಂಟಿಯಿಂದಾಗಿ ದರ ಹೆಚ್ಚಳ ಆರೋಪ ಸುಳ್ಳು – ಬೋಸರಾಜು
ಈ ಸರ್ಕಾರ ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿದೆ. ಈ ಸರ್ಕಾರ ಬಂದ ದಿನದಿಂದ ಇದೇ ನಡೆಯುತ್ತಿರುವುದು. ಬಹಳ ವಿಷಯ ಮಾತನಾಡೋದು ಇದೆ. ಒಂದು ವಾರ 10 ದಿನ ಕಳೆಯಲಿ ಮಾತನಾಡುತ್ತೇನೆ. ಸಂಕ್ರಾಂತಿ ಆಗಲಿ, ನಾನು ಎಲ್ಲಾ ವಿಷಯ, ರಾಜ್ಯದಲ್ಲಿ ನಡೆಯುತ್ತಿರೋ ಆಡಳಿತ, ಕಾನೂನು ವ್ಯವಸ್ಥೆ ಏನಾಗಿದೆ ಎಲ್ಲವೂ ಮಾತನಾಡುತ್ತೇನೆ ಎಂದರು. ಇದನ್ನೂ ಓದಿ: ಮತ್ತೆ ಕೈಕೊಟ್ಟ ಟಾಪ್ ಬ್ಯಾಟರ್ಸ್ – ಮೊದಲ ದಿನವೇ ಭಾರತ 185ಕ್ಕೆ ಆಲೌಟ್; ಆಸೀಸ್ 9ಕ್ಕೆ 1 ವಿಕೆಟ್
ಬೆಂಗಳೂರು: ಹೊಸ ವರ್ಷದ ಸಂಭ್ರಮದಲ್ಲಿರುವ ಜನತೆಗೆ ಸಾರಿಗೆ ಇಲಾಖೆ ಶಾಕ್ ನೀಡುವ ಸೂಚನೆ ಸಿಕ್ಕಿದೆ. ಹೊಸ ವರ್ಷದ ಆರಂಭದ ತಿಂಗಳಲ್ಲೇ ಬಸ್ ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆ ಇದೆ.
ಪೆಟ್ರೋಲ್-ಡೀಸೆಲ್ ದರ ಹಾಗೂ ಬಿಡಿ ಭಾಗಗಳ ದರ ಏರಿಕೆಯಾಗಿದೆ. ಅದರೆ, ಕಳೆದ ನಾಲ್ಕೈದು ವರ್ಷದಿಂದ ಟಿಕೆಟ್ ದರ ಏರಿಕೆ ಮಾಡಿಲ್ಲ. ಇಂಧನ ದರ ನಾಲ್ಕೈದು ವರ್ಷದಲ್ಲಿ ಏರಿಕೆಯಾಗುತ್ತಲೇ ಬಂದಿದೆ. ಅದಕ್ಕೆ ಅನುಗುಣವಾಗಿ ಟಿಕೆಟ್ ದರ ಏರಿಕೆಗೆ ನಾಲ್ಕೂ ನಿಗಮಗಳು ಮನವಿ ಮಾಡಿದ್ದವು.
ಈ ಹಿಂದೆ 25% ಟಿಕೆಟ್ ದರ ಏರಿಕೆಗೆ ನಿಗಮಗಳು ಮನವಿ ಮಾಡಿದ್ದವು. 25 % ಅಲ್ಲದಿದ್ದರೂ, ಅದರ ಅರ್ಧದಷ್ಟು ಏರಿಕೆಯಾಗುವ ಸಾಧ್ಯತೆ ಇದೆ.
ಸಂಕ್ರಾಂತಿ ನಂತರ ಟಿಕೆಟ್ ದರದ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸಿಎಂ ಜೊತೆ ಸಾರಿಗೆ ನೌಕರರ ಸಂಘಟನೆಗಳ ಸಭೆಯಲ್ಲಿ ಪ್ರಸ್ತಾಪವಾಗಬಹುದು ಎನ್ನಲಾಗಿದೆ.
ಬೆಂಗಳೂರು: ಸದ್ಯ ಪೆಟ್ರೋಲ್, ಡೀಸೆಲ್ ತೈಲ ಬೆಲೆ ಏರಿಕೆಯಿಂದ ಚೇತರಿಸಿಕೊಳ್ಳುತ್ತಿರುವ ಕರುನಾಡಿನ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ಬಸ್ ಪ್ರಯಾಣ ದರ ಹೆಚ್ಚಿಸಲು ಕೆಎಸ್ಆರ್ಟಿಸಿ (KSRTC) ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಬಸ್ ಪ್ರಯಾಣ ದರ 15% ರಿಂದ 20% ವರೆಗೆ ಹೆಚ್ಚಿಸಲು ಜುಲೈ 14ರಂದೇ ರಾಜ್ಯ ಸರ್ಕಾರಕ್ಕೆ (Karnataka Govt) ಪ್ರಸ್ತಾವನೆ ಸಲ್ಲಿಸಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಅವರಿಂದು ಪ್ರತಿಕ್ರಿಯಿಸಿದ್ದು, ಪ್ರಸ್ತಾವನೆ ಬಂದಿದೆ. ನಾನಿನ್ನೂ ಅದನ್ನ ನೋಡಿಲ್ಲ, ದರ ಏರಿಕೆ ಮಾಡುವ ಬಗ್ಗೆ ಸಧ್ಯಕ್ಕೆ ಯಾವುದೇ ನಿರ್ಧಾರವೂ ಇಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Paris Olympics 2024: ಚಿನ್ನಕ್ಕೆ ಗುರಿಯಿಟ್ಟ ಶೂಟರ್ – ಚೀನಾಗೆ ಮೊದಲ ಚಿನ್ನದ ಪದಕ
ನಿರ್ಮಲಾ ಸೀತಾರಾಮನ್ಗೆ ಕೃತಜ್ಞತೆ ಇಲ್ಲ:
ಇದಕ್ಕೂ ಮುನ್ನ ಪ್ರತಿಭಟನೆಯಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ, ಬಿಜೆಪಿ ಪಕ್ಷದಿಂದ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ಕೇಂದ್ರದಲ್ಲಿ ಅಧಿಕಾರ ಹಿಡಿದ ದಿನದಿಂದ ಬಿಜೆಪಿ (BJP) ಅನ್ಯಾಯ ಆಗುತ್ತಿದೆ. ರಾಜ್ಯಕ್ಕೆ ಕಾಯಂ ಆಗಿ ಚೊಂಬು ಸಿಗುತ್ತಿದೆ. ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ಆಯ್ಕೆ ಆಗಿದ್ದರೂ ಕೃತಜ್ಞತೆ ಇಲ್ಲ. ನರೇಂದ್ರ ಮೋದಿ ಏನ್ ಮಾಡಿಲ್ಲ ಅಂದರೂ 19 ಜನರನ್ನು ಜನ ಸಂಸದರನ್ನ ಆಯ್ಕೆ ಮಾಡಿ ಕಳಿಸಿದ್ದಾರೆ ಇದು ದುರದೃಷ್ಟಕರ ಎಂದು ವಿಷಾದಿಸಿದ್ದಾರೆ. ಇದನ್ನೂ ಓದಿ: ಒಂದೂವರೆ ವರ್ಷದಲ್ಲಿ ಮನೆ ಮುರುಕರು ಯಾರು ಅಂತ ಜನರಿಗೆ ಗೊತ್ತಾಗಿದೆ: ಬೊಮ್ಮಾಯಿ ಕಿಡಿ
ಬಿಜೆಪಿ ದೇಶದ ಆಸ್ತಿಯನ್ನೇ ಮಾರುತ್ತಿದೆ:
10 ವರ್ಷಗಳ ಹಿಂದೆ ಮೋದಿ ಏನು ಹೇಳಿರೋ ಈಗ ಅದೆಲ್ಲವನ್ನೂ ಮರೆತ್ತಿದ್ದಾರೆ. ಗಾಳಿ, ಬೆಳಕು ಬಿಟ್ಟು ಎಲ್ಲದಕ್ಕೂ ಜಿಎಸ್ಟಿ (GST) ಹಾಕಿದ್ದಾರೆ. ದೇಶದ ಸಂಪತ್ತನ್ನ ಲೂಟಿ ಮಾಡೋಕೆ ಬಿಟ್ಟಿದ್ದಾರೆ. ಅಂಬಾನಿ ಮೂಲಕ ಲೂಟಿ ಮಾಡೋಕೆ ಬಿಟ್ಟಿದ್ದಾರೆ. ದೇಶದ ಆಸ್ತಿಯನ್ನು ಬಿಜೆಪಿ ಮಾರುತ್ತಿದೆ. ಅನೇಕ ರಾಜ್ಯಗಳಿಗೆ ಬಜೆಟ್ ನಲ್ಲಿ ಹಣ ಕೊಟ್ಟಿಲ್ಲ. ಬಿಹಾರ ಆಂಧ್ರಪ್ರದೇಶಕ್ಕೆ ಹೆಚ್ಚಿನ ಹಣ ನೀಡಿದ್ದಾರೆ. ಕೇಂದ್ರ ಸರ್ಕಾರ ಜಾಸ್ತಿ ದಿನ ಉಳಿಯಲ್ಲ. ಬಿಜೆಪಿ ಸರ್ಕಾರ ಇರುವರಿಗೆ ರಾಜ್ಯಕ್ಕೆ ಮಾರಕ ಎಂದು ಎಚ್ಚರಿಸಿದ್ದಾರೆ.
140 ಲಕ್ಷ ಕೋಟಿಗೂ ಹೆಚ್ಚು ಸಾಲವನ್ನ ಮೋದಿ ಮಾಡಿದ್ದಾರೆ. ಬಿಜೆಪಿ ಇರುವರಿಗೆ ನಮಗೆ ಭವಿಷ್ಯ ಇಲ್ಲ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗ್ತಿದೆ. ರಾಜ್ಯದ ಜನತೆ ಬಗ್ಗೆ ಬಿಜೆಪಿಗೆ ಕೃತಜ್ಞತೆ ಇಲ್ಲ. ಲೋಕಸಭಾ ಚುನಾವಣೆಯಲ್ಲಿ (Lok Sabha Elections) 19 ಸೀಟ್ ನೀಡಿದ್ರೂ ರಾಜ್ಯದ ಜನತೆ ಬಗ್ಗೆ ಕೃತಜ್ಞತೆ ಇಲ್ಲ. ಈ ಬಗ್ಗೆ ರಾಜ್ಯದ ಸಂಸದರಿಗೆ ಮಾತನಾಡುವ ಶಕ್ತಿಯೂ ಇಲ್ಲ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಅತಿಹೆಚ್ಚು ಸ್ಟಾರ್ಟಪ್ಗಳು ನೋಂದಣಿಯಾಗಿರುವ ಎರಡನೇ ರಾಜ್ಯ ಕರ್ನಾಟಕ