Tag: business

  • ವೈಯಕ್ತಿಕ ಬಳಕೆಗಾಗಿ ಬಾಡಿಗೆ ನೀಡಿದ್ದರೆ ಜಿಎಸ್‌ಟಿ ಇಲ್ಲ- ಕೇಂದ್ರ

    ವೈಯಕ್ತಿಕ ಬಳಕೆಗಾಗಿ ಬಾಡಿಗೆ ನೀಡಿದ್ದರೆ ಜಿಎಸ್‌ಟಿ ಇಲ್ಲ- ಕೇಂದ್ರ

    ನವದೆಹಲಿ: ವಾಸದ ಮನೆಗಳನ್ನು ಖಾಸಗಿಗಳಿಗೆ ವೈಯಕ್ತಿಕ ಬಳಕೆಗಾಗಿ ಬಾಡಿಗೆಗೆ ನೀಡಿದ್ದರೆ ಅದಕ್ಕೆ ಜಿಎಸ್‌ಟಿ ಅನ್ವಯಸುವುದಿಲ್ಲ. ಬದಲಿಗೆ ವಾಣಿಜ್ಯ ಉದ್ದೇಶಕ್ಕೆ ನೀಡಿದ್ದರೆ ಮಾತ್ರ ಜಿಎಸ್‌ಟಿ ಅನ್ವಯವಾಗುತ್ತದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

    ಇತ್ತೀಚೆಗೆ ಜುಲೈ 18ರಂದು ಜಾರಿಗೆ ಬಂದ ಜಿಎಸ್‌ಟಿ ಹೊಸ ನಿಯಮಗಳ ಅನ್ವಯ ಜಿಎಸ್‌ಟಿ ಅಡಿಯಲ್ಲಿ ನೋಂದಾಯಿಸಲ್ಪಟ್ಟ ಬಾಡಿಗೆದಾರರು ವಸುನೆಯ ಮಾಲಿಕರಿಗೆ ಪಾವತಿಸುವ ಹಣಕ್ಕೆ ಶೇ.18ರಷ್ಟು ಜಿಎಸ್‌ಟಿ ಪಾವತಿಸಬೇಕು ಎಂದು ವರದಿಯಾಗಿತ್ತು. ಇದರಿಂದಾಗಿ ಸಾಕಷ್ಟು ಗೊಂದಲ ಉಂಟಾಗಿತ್ತು. ಈ ಹಿನ್ನೆಲೆಯಯಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ಮನೆ ಬಾಡಿಗೆಗೆ ಜಿಎಸ್‌ಟಿ ಇಲ್ಲ ಎಂದು ಸರ್ಕಾರ ಖಚಿತ ಪಡಿಸಿದೆ. ಇದರಿಂದಾಗಿ ಬಾಡಿಗೆದಾರರು ನಿಟ್ಟುಸಿರು ಬಿಡುವಂತಾಗಿದೆ.

    GST

    ವೈಯಕ್ತಿಕ ಬಳಕೆಗಾಗಿ ಖಾಸಗಿ ವ್ಯಕ್ತಿಗಳಿಗೆ ಮನೆಯನ್ನು ಬಾಡಿಗೆಗೆ ನೀಡಿದ್ದರೆ ಅದಕ್ಕೆ ಜಿಎಸ್‌ಟಿ ದರ ಅನ್ವಯಿಸುವುದಿಲ್ಲ. ಮನೆಯನ್ನು ವಾಣಿಜ್ಯ ಉದ್ದೇಶಕ್ಕಾಗಿ ಯಾವುದಾದರೂ ಸಂಸ್ಥೆಗೆ ಬಾಡಿಗೆಗೆ ನೀಡಿದ್ದರೇ ಮಾತ್ರ ಅದಕ್ಕೆ ಜಿಎಸ್‌ಟಿ ಅನ್ವಯಿಸುತ್ತದೆ ಎಂದು ಮಾಹಿತಿ ನೀಡಿದೆ.

    ಉದ್ದಿಮೆಯ ಮಾಲೀಕ ಅಥವಾ ಪಾಲುದಾದರು ಖಾಸಗಿ ಬಳಕೆಗಾಗಿ ಬಾಡಿಗೆ ಮನೆಯನ್ನು ಪಡೆದಿದ್ದರೆ, ಅದಕ್ಕೂ ಜಿಎಸ್‌ಟಿ ಇಲ್ಲ ಎಂದು ತಿಳಿಸಿದೆ. ಇದರಿಂದಾಗಿ ಜಿಎಸ್‌ಟಿ ನೋಂದಣಿ ಮಾಡಿಕೊಂಡ ಉದ್ಯಮರು ಅಥವಾ ಪಾಲುದಾರರು ಖಾಸಗಿ ಬಳಕೆಗೆ ಮನೆಯನ್ನು ಬಾಡಿಗೆ ಪಡೆದಿದ್ದರೆ, ಅದಕ್ಕೆ ಜಿಎಸ್‌ಟಿ ಪಾವತಿಸಬೇಕು ಎಂದು ಕೆಲ ತೆರಿಗೆ ಸಲಹೆಗಾರರು ನೀಡುತ್ತಿದ್ದ ಸಲಹೆಯಿಂದಾಗಿ ಉದ್ಭವಿಸಿದ ಗೊಂದಲವೂ ಪರಿಹಾರವಾಗಿದೆ. ಇದನ್ನೂ ಓದಿ: ತ್ರಿವರ್ಣ ಧ್ವಜದ ಡಿಪಿ ಹಾಕಿದ ಆರ್‌ಎಸ್‌ಎಸ್‌

    Live Tv
    [brid partner=56869869 player=32851 video=960834 autoplay=true]

  • ಮನೆ ಬಾಡಿಗೆದಾರರಿಗೆ ಶಾಕ್ – ಹೊಸ ನಿಯಮಗಳ ಪ್ರಕಾರ ಶೇ.18 ರಷ್ಟು ತೆರಿಗೆ ಬರೆ

    ಮನೆ ಬಾಡಿಗೆದಾರರಿಗೆ ಶಾಕ್ – ಹೊಸ ನಿಯಮಗಳ ಪ್ರಕಾರ ಶೇ.18 ರಷ್ಟು ತೆರಿಗೆ ಬರೆ

    ನವದೆಹಲಿ: ಇನ್ಮುಂದೆ ಜುಲೈ 18ರಂದು ಜಾರಿಗೆ ಬಂದ ಜಿಎಸ್‌ಟಿ ಹೊಸ ನಿಯಮಗಳ ಅನ್ವಯ ಜಿಎಸ್‌ಟಿ ಅಡಿಯಲ್ಲಿ ನೋಂದಾಯಿಸಲ್ಪಟ್ಟ ಹಿಡುವಳಿದಾರನು ಆಸ್ತಿಯನ್ನು ಬಾಡಿಗೆ ಪಡೆಯಲು ಶೇ.18 ರಷ್ಟು ತೆರಿಗೆ ಪಾವತಿಸಬೇಕು. ನೀವು ಪಾವತಿಸುವ ಬಾಡಿಗೆಗೆ ಶೇ.18 ರಷ್ಟು ಜಿಎಸ್‌ಟಿ ಅನ್ವಯಿಸುತ್ತದೆ ಎಂದು ಹೇಳಲಾಗಿದೆ.

    ಈ ಹಿಂದೆ ಬಾಡಿಗೆ ಅಥವಾ ಲೀಸ್‌ನಲ್ಲಿ (ಭೋಗ್ಯಕ್ಕೆ) ನೀಡಲಾದ ಕಚೇರಿಗಳು ಅಥವಾ ವಾಣಿಜ್ಯ ಆಸ್ತಿಗಳಿಗೆ ಮಾತ್ರ ಜಿಎಸ್‌ಟಿ ವಿಧಿಸಲಾಗಿತ್ತು. ಆದರೆ ಕಾರ್ಪೊರೇಟ್ ಹೌಸ್‌ಗಳು, ವ್ಯಕ್ತಿಗಳಿಂದ ಪಡೆಯುವ ಬಾಡಿಗೆ ಅಥವಾ ಗುತ್ತಿಗೆಯ ಆಸ್ತಿಗಳ ಮೇಲೆ ಯಾವುದೇ ಜಿಎಸ್‌ಟಿ ವಿಧಿಸಲಾಗಿರಲಿಲ್ಲ. ಆದರೆ ಹೊಸ ನೀತಿಯ ಅನ್ವಯ ನೋಂದಾಯಿತ ಹಿಡುವಳಿದಾರನು ರಿವರ್ಸ್ ಚಾರ್ಜ್ ಮಕ್ಯಾನಿಸಂ (ಆರ್‌ಸಿಎಂ) ಅಡಿಯಲ್ಲಿ ತೆರಿಗೆ ಪಾವತಿಸಲು ಹೊಣೆಗಾರನಾಗಿರುತ್ತಾನೆ. ಇದನ್ನೂ ಓದಿ: ವೈಯಕ್ತಿಕ ಬಳಕೆಗಾಗಿ ಬಾಡಿಗೆ ನೀಡಿದ್ದರೆ ಜಿಎಸ್‌ಟಿ ಇಲ್ಲ- ಕೇಂದ್ರ

    ಯಾರಿಗೆ ಅನ್ವಯ?:
    ಹೊಸ ನಿಯಮಗಳ ಅನ್ವಯ ಜಿಎಸ್‌ಟಿ ಅಡಿಯಲ್ಲಿ ಆಸ್ತಿಯನ್ನು ನೋಂದಾಯಿಸಿಕೊಂಡ ಹಾಗೂ ಜಿಎಸ್‌ಟಿ ರಿಟರ್ನ್‌ಗಳನ್ನು ಸಲ್ಲಿಸಲು ಹೊಣೆಯಾಗಿದ್ದಾಗ ಮಾತ್ರ ಅವರಿಗೆ ತೆರಿಗೆ ಪಾವತಿ ಅನ್ವಯಿಸುತ್ತದೆ. ಆದರೆ ಆಸ್ತಿ ಮಾಲೀಕರು ಯಾವುದೇ ಕಾರಣಕ್ಕೂ ಜಿಎಸ್‌ಟಿ ಪಾವತಿಸಲು ಜವಾಬ್ದಾರಿಯಾಗಿರುವುದಿಲ್ಲ ಎಂದು ಹೊಸ ನಿಯಮ ಹೇಳುತ್ತದೆ. ಇದನ್ನೂ ಓದಿ: ಕುಂದಾನಗರಿಯಲ್ಲಿ ಮೂರು ಚಿರತೆ ಪ್ರತ್ಯಕ್ಷ – ಚಿರತೆ ಸೆರೆಗೆ ಅರಣ್ಯ ಸಿಬ್ಬಂದಿ ಹರಸಾಹಸ, ಡ್ರೋನ್ ಕ್ಯಾಮೆರಾ ಬಳಕೆ

    ಅಲ್ಲದೇ ಸಾಮಾನ್ಯ ವೇತನದಾರರು ವಸತಿ, ಮನೆ, ಫ್ಲಾಟ್ ಅನ್ನು ಬಾಡಿಗೆ ಅಥವಾ ಗುತ್ತಿಗೆ ಪಡೆದುಕೊಂಡರೆ ಅವರು ಜಿಎಸ್‌ಟಿ ಪಾವತಿಸಬೇಕಾಗಿಲ್ಲ. ವ್ಯಾಪಾರ ಅಥವಾ ಬ್ಯುಸಿನೆಸ್ ಮಾಡುವವರು ಮಾತ್ರ ನಿಯಮಿತಕ್ಕಿಂತ ಹೆಚ್ಚಿನ ವಹಿವಾಟು ನಿರ್ವಹಿಸುವಾಗ ಕಡ್ಡಾಯವಾಗಿ ತಮ್ಮ ಮಾಲೀಕರಿಗೆ ಜಿಎಸ್‌ಟಿ ಪಾವತಿಸಲೇಬೇಕಾಗುತ್ತದೆ ಎಂದು ಕ್ಲಿಯರ್‌ಟ್ಯಾಕ್ಸ್ನ ಸಂಸ್ಥಾಪಕ ಹಾಗೂ ಸಿಇಒ ಅರ್ಚಿತ್ ಗುಪ್ತಾ ವಿವರಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

    ಜಿಎಸ್‌ಟಿ ಮಂಡಳಿಯು 47ನೇ ಸಭೆಯ ಬಳಿಕ ಈ ಬಗ್ಗೆ ನಿರ್ಧಾರ ತೆಗೆದುಕೊಂಡಿದೆ.

    Live Tv
    [brid partner=56869869 player=32851 video=960834 autoplay=true]

  • ವಿಶ್ವದ 4ನೇ ಶ್ರೀಮಂತ ವ್ಯಕ್ತಿಯಾಗಿ ಹೊರ ಹೊಮ್ಮಿದ ಗೌತಮ್‌ ಅದಾನಿ

    ವಿಶ್ವದ 4ನೇ ಶ್ರೀಮಂತ ವ್ಯಕ್ತಿಯಾಗಿ ಹೊರ ಹೊಮ್ಮಿದ ಗೌತಮ್‌ ಅದಾನಿ

    ನವದೆಹಲಿ: ಅದಾನಿ ಗ್ರೂಪ್ ಮಾಲೀಕ ಗೌತಮ್ ಅದಾನಿ ಭಾರತ ಮತ್ತು ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿ ಉಳಿದಿಲ್ಲ. ಈಗ ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಈಗ ಅದಾನಿ ಆಸ್ತಿಯು ಮೈಕ್ರೋಸಾಫ್ಟ್‌ ಸಂಸ್ಥಾಪಕ ಬಿಲ್ ಗೇಟ್ಸ್‌ಗೆ ಆಸ್ತಿಗೆ ಸಮನಾಗಿದೆ.

    ಬ್ಲೂಮ್‌ಬರ್ಗ್ ಬಿಲಿಯನೇರ್ಸ್(ಶತಕೋಟ್ಯಧಿಪತಿ) ರಿಯಲ್‌ ಟೈಂ ಇಂಡೆಕ್ಸ್ ಪ್ರಕಾರ, ಅದಾನಿ ಮತ್ತು ಬಿಲ್ ಗೇಟ್ಸ್ ಇಬ್ಬರೂ 125 ಬಿಲಿಯನ್ ಡಾಲರ್‌( 9.58 ಲಕ್ಷ ರೂ.)ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಗೌತಮ್ ಅದಾನಿ ವಿಶ್ವದ ಐದನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಈ ಪಟ್ಟಿಯಲ್ಲಿ ಅವರು ಬಿಲ್ ಗೇಟ್ಸ್‌ಗಿಂತ ಸ್ವಲ್ಪ ಹಿಂದೆ ಇದ್ದಾರೆ. ಇದನ್ನೂ ಓದಿ: ಗುಜರಾತ್‌ನಿಂದ ಕರ್ನಾಟಕಕ್ಕೆ 3 ಶತಕೋಟಿ ಡಾಲರ್‌ ಹೂಡಿಕೆಯ ಚಿಪ್‌ ಘಟಕ ಶಿಫ್ಟ್‌?

    ಗೌತಮ್ ಅದಾನಿ ಅವರ ಸಂಪತ್ತು ಕೇವಲ ಒಂದೇ ದಿನದಲ್ಲಿ 6.3 ಬಿಲಿಯನ್ ಡಾಲರ್ ಏರಿಕೆ ಕಂಡಿದೆ. ಅದಾನಿಯವರ ಸಂಪತ್ತು ಈ ಒಂದೇ ವರ್ಷದಲ್ಲಿ 48.3 ಬಿಲಿಯನ್ ಡಾಲರ್‌ ಹೆಚ್ಚಾಗಿದೆ. 2021 ರ ಅಂತ್ಯದ ವೇಳೆಗೆ ಗೌತಮ್ ಅದಾನಿ ಅವರ ಆಸ್ತಿ 76.7 ಬಿಲಿಯನ್ ಡಾಲರ್‌ ಆಗಿತ್ತು. ಅದಾನಿ ಗ್ರೂಪ್ ಆಫ್ ಕಂಪನಿಗಳ ಷೇರು ಬೆಲೆಗಳು ನಿರಂತರವಾಗಿ ಏರುತ್ತಲೇ ಇರುವುದರಿಂದ ಆದಾನಿ ಅವರ ಆಸ್ತಿಯ ಮೌಲ್ಯ ಏರಿಕೆಯಾಗುತ್ತಿವೆ.

    ಬಿಲಿಯನೇರ್‌ಗಳ ಪಟ್ಟಿಯಲ್ಲಿ ಅದಾನಿಗಿಂತ ಮೊದಲಿನ ಸ್ಥಾನದಲ್ಲಿ  ಟೆಸ್ಲಾ ಮುಖ್ಯಸ್ಥ ಎಲೋನ್ ಮಸ್ಕ್(19 ಲಕ್ಷ ಕೋಟಿ ರೂ.), ಅಮೇಜಾನ್‌ ಸಂಸ್ಥಾಪಕ ಜೆಫ್ ಬೆಜೋಸ್(12.5 ಲಕ್ಷ ಕೋಟಿ ರೂ.), ಫ್ರಾನ್ಸಿನ ಉದ್ಯಮಿ ಎಲ್‌ವಿಎಂಎಚ್‌ ಮುಖ್ಯಸ್ಥ ಬರ್ನಾರ್ಡ್ ಅರ್ನಾಲ್ಟ್(10.2 ಲಕ್ಷ ಕೋಟಿ ರೂ.) ಮತ್ತು ಬಿಲ್ ಗೇಟ್ಸ್ ಹೆಸರುಗಳಿವೆ. ಆದರೆ ಅವರೆಲ್ಲರ ಆಸ್ತಿ ನಿರಂತರವಾಗಿ ಕುಸಿಯುತ್ತಿದೆ. ಆದರೆ ಅದಾನಿ ನಿರಂತರವಾಗಿ ಏರಿಕೆ ಕಾಣುತ್ತಿದೆ. ಗೌತಮ್ ಅದಾನಿ ಸಂಪತ್ತು ಈ ವೇಗದಲ್ಲೇ ಸಾಗಿದರೆ ಶೀಘ್ರದಲ್ಲೇ ಅವರು ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿಯಾಗಿ ಹೊರ ಹೊಮ್ಮುವ ಸಾಧ್ಯತೆಯಿದೆ.

  • ಪಶ್ಚಿಮ ಬಂಗಾಳ ಅಂದರೆ ರಕ್ತ: ಮಮತಾ ಬ್ಯಾನರ್ಜಿಗೆ ಸುವೇಂದು ಟಾಂಗ್

    ಪಶ್ಚಿಮ ಬಂಗಾಳ ಅಂದರೆ ರಕ್ತ: ಮಮತಾ ಬ್ಯಾನರ್ಜಿಗೆ ಸುವೇಂದು ಟಾಂಗ್

    ಕೋಲ್ಕತ್ತಾ: ರಾಜ್ಯದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರದ ಘಟನೆಗಳನ್ನು ಉಲ್ಲೇಖಿಸಿ, ಬಿಜೆಪಿ ನಾಯಕ ಸುವೆಂದು ಅಧಿಕಾರಿ ಅವರು ಪಶ್ಚಿಮ ಬಂಗಾಳವನ್ನು ರಕ್ತಕ್ಕೆ ಸಮೀಕರಿಸಿದ್ದಾರೆ.

    ಈ ವರ್ಷದ ವ್ಯಾಪಾರ ಸಭೆಯ ಆರನೇ ಆವೃತ್ತಿಯಲ್ಲಿ ಬಂಗಾಳ ಎಂದರೆ ವ್ಯಾಪಾರ ಎಂದು ಜಗತ್ತಿಗೆ ತೋರಿಸಲು, ಹೆಚ್ಚಿನ ವ್ಯಾಪಾರ ಅವಕಾಶಗಳನ್ನು ಅನ್ವೇಷಿಸಲು, ಪಾಲುದಾರಿಕೆ ಮತ್ತು ಸಹಯೋಗವನ್ನು ರೂಪಿಸುವ ಉದ್ದೇಶವನ್ನು ಹೊಂದಿದೆ ಎಂದು ಬೆಂಗಾಲ್ ಗ್ಲೋಬಲ್ ಬ್ಯುಸಿನೆಸ್ ಶೃಂಗಸಭೆಯು ತನ್ನ ಅಧಿಕೃತ ವೆಬ್‍ಸೈಟ್‍ನಲ್ಲಿ ತಿಳಿಸಿದೆ. ಇದನ್ನೂ ಓದಿ: ಸಂತೋಷ್‌ ಪಾಟೀಲ್‌ ಕೇಸ್‌ಗೆ ಟ್ವಿಸ್ಟ್‌ – 2021ರಲ್ಲಿ ಬೆಳಗಾವಿ ZP ಅಧ್ಯಕ್ಷೆ ಬರೆದ ಪತ್ರ ಔಟ್‌

    ಸದ್ಯ ಈ ವಿಚಾರವಾಗಿ ಮಾತನಾಡಿರುವ ಸುವೇಂದು ಅವರು, ಬಂಗಾಳದಲ್ಲಿ ಕೈಗಾರಿಕೆಗಳನ್ನು ಹೊಂದಲು ಸಾಧ್ಯವಿಲ್ಲ, ಭೂ ನೀತಿ ಕೆಟ್ಟದಾಗಿದೆ. ಇಲ್ಲಿ ಸಿಂಡಿಕೇಟ್ ರಾಜ್ ಇದೆ. ಅದು ಕಲ್ಲಿದ್ದಲು. ಬಂಗಾಳ ವ್ಯಾಪಾರಕ್ಕಾಗಿ ಅಲ್ಲ, ಆದರೆ ರಕ್ತ ಮತ್ತು ಬಿರ್ಭೂಮ್ ಬಾಂಬ್‍ಗಳಿಗಾಗಿದೆ ಎಂದು ಹೇಳುವ ಮೂಲಕ ಮಮತಾ ಬ್ಯಾನರ್ಜಿಗೆ ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

    ಇದೇ ತಿಂಗಳ ಆರಂಭದಲ್ಲಿ ಬಿರ್ಭೂಮ್‍ನ ಸಿಕಂದರ್‍ಪುರ ಗ್ರಾಮದ ಫುಟ್‍ಬಾಲ್ ಮೈದಾನದ ಬಳಿ ಪ್ಲಾಸ್ಟಿಕ್ ಚೀಲದಲ್ಲಿ ಕಚ್ಚಾ ಬಾಂಬ್‍ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು.ಬೊಗ್ಟುಯಿ ಗ್ರಾಮದಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಸುಮಾರು ಎಂಟು ಮಂದಿ ಸುಟ್ಟು ಕರಕಲಾಗಿದ್ದರು. ಈ ಘಟನೆ ಸಂಬಂಧ ಕೇಂದ್ರೀಯ ತನಿಖಾ ದಳವು ತನಿಖೆ ನಡೆಸುತ್ತಿರುವ ಸಮಯದಲ್ಲಿ ಕಚ್ಚಾ ಬಾಂಬ್‍ಗಳನ್ನು ವಶಪಡಿಸಿಕೊಂಡಿದೆ.

  • ಕೊಡಗಿನಲ್ಲೂ ಹೊತ್ತಿದ ಧರ್ಮದ ಕಿಡಿ – ಮುಸ್ಲಿಂ ವ್ಯಾಪಾರಸ್ಥ ಅಂಗಡಿ ಖಾಲಿ ಮಾಡಿಸಿದ ಭಜರಂಗದಳ

    ಕೊಡಗಿನಲ್ಲೂ ಹೊತ್ತಿದ ಧರ್ಮದ ಕಿಡಿ – ಮುಸ್ಲಿಂ ವ್ಯಾಪಾರಸ್ಥ ಅಂಗಡಿ ಖಾಲಿ ಮಾಡಿಸಿದ ಭಜರಂಗದಳ

    ಮಡಿಕೇರಿ: ರಾಜ್ಯದ ವಿವಿಧೆಡೆ ಈಗಾಗಲೇ ಹಿಂದೂ ದೇವಾಲಯದ ಆವರಣದಲ್ಲಿ ಮುಸ್ಲಿಂ ಸಮುದಾಯದ ವ್ಯಾಪಾರಸ್ಥರಿಗೆ ಅವಕಾಶ ನೀಡಬಾರದು ಎಂದು ಹಿಂದೂಪರ ಸಂಘಟನೆ ಹಾಗೂ ಭಜರಂಗದಳದ ಪ್ರಮುಖಕರು ಅಗ್ರಹ ಪಡಿಸುತ್ತಿದ್ದಾರೆ. ಮುಸ್ಲಿಂ ಸಮುದಾಯದವರಿಗೆ ವ್ಯಾಪಾರಕ್ಕೆ ಅವಕಾಶ ಕೋಡಬಾರದು ಎಂದು ಆಕ್ರೋಶ ವ್ಯಕ್ತಪಡಿಸುತ್ತಿರುವ ವೇಳೆಯಲ್ಲಿ ಇದೀಗಾ ಧರ್ಮದ ಕಿಡಿ ಕೊಡಗು ಜಿಲ್ಲೆಗೂ ವಿಸ್ತರಿಸಿದೆ.

    ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆಯ ಮನೆಹಳ್ಳಿ ಮಠದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಸಾವಯವ ಕೃಷಿ ಮತ್ತು ಕುಲಗೋವುಗಳ ಸಮ್ಮೇಳನ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ವಹಿವಾಟು ನಡೆಸುತ್ತಿರುವ ಸಂದರ್ಭದಲ್ಲಿ ಸಮ್ಮೇಳನದಲ್ಲಿ ಇದ್ದ ಭಜರಂಗದಳದ ಯುವಕರು ಮುಸ್ಲಿಂ ಸಮುದಾಯದವರು ವ್ಯಾಪಾರಕ್ಕೆ ಹಾಕಿದ ಅಂಗಡಿ ಖಾಲಿ ಮಾಡಿಸಿದ್ರು. ಇದನ್ನೂ ಓದಿ:  ಮೂವರು ಶಾಸಕರು ಬಿಜೆಪಿಗೆ ಸೇರ್ಪಡೆ – ಸಚಿವ ಮುಖೇಶ್ ನಾಮಫಲಕ ನಾಪತ್ತೆ

    ಸಮ್ಮೇಳನದ ಜಾತ್ರೆಯಲ್ಲಿ ವ್ಯಾಪಾರಕ್ಕೆ ಬಂದಿದ್ದ ಮುಸ್ಮಿಮರು ಟಾಯ್ಸ್, ಕಬ್ಬಿನ ಹಾಲು ಮತ್ತು ತಿಂಡಿ ತಿನಿಸುಗಳ ಅಂಗಡಿ ಹಾಕಿದ್ದ ಮುಸ್ಲಿಂರ ಅಂಗಡಿಗಳನ್ನು ಎತ್ತಂಗಡಿ ಮಾಡಿಸಿದ್ರು. ಅಲ್ಲದೇ ಗೋವುಗಳ ಕಡಿದು ತಿನ್ನುವ ಅವರು ಗೋ ಸಮ್ಮೇಳನಕ್ಕೆ ಯಾಕೆ ಬರಬೇಕು. ಗೋವುಗಳ ಕಡಿದು ತಿನ್ನುವವರಿಗೆ ಇಲ್ಲಿ ವ್ಯಾಪಾರ ಮಾತ್ರ ಬೇಕಾ ಎಂದು ಯುವಕರು ಆಕ್ರೋಶ ವ್ಯಕ್ತಪಡಿಸಿದರು.

    ಇದೇ ಸಂದರ್ಭ ಭಜರಂಗದಳದ ಸೋಮವಾರಪೇಟೆ ತಾಲೂಕು ಸಂಚಾಲಕ ಜೀವನ್ ಮಾತಾನಾಡಿದ್ದು, ಹಿಂದೂಗಳು ಜಾತ್ರೆ ಕಾರ್ಯಕ್ರಮಗಳನ್ನು ನಡೆಸುವ ಸಂದರ್ಭದಲ್ಲಿ ಮುಸ್ಲಿಮರು ಪಾಲ್ಗೊಂಡು ವ್ಯಾಪಾರ ನಡೆಸುತ್ತಿದ್ದಾರೆ. ಇವರು ನಡೆಸುವ ಧಾರ್ಮಿಕ ಸ್ಥಳಗಳಲ್ಲಿ ವ್ಯಾಪಾರ ವಹಿವಾಟು ನಡೆಸಿಕೊಳ್ಳಲಿ. ಆದ್ರೆ ನಮ್ಮ ಕಾರ್ಯಕ್ರಮಗಳಲ್ಲಿ ಅವರು ಬರುವುದು ಬೇಡ. ಇದು ಅವರಿಗೆ ಎಚ್ಚರಿಕೆ ಗಂಟೆ ಎಂದು ತಿಳಿಸಿದರು. ಇದನ್ನೂ ಓದಿ:  ಮಾಜಿ ಸಿಎಂ ಸಿದ್ದರಾಮಯ್ಯ ನಾಡಿನ ಮಠಾಧೀಶರ ಕ್ಷಮೆ ಕೇಳಬೇಕು: ಅಭಿನವ ಮಂಜುನಾಥ ಶ್ರೀ

  • ನಿಯಮವನ್ನು ಅಧಿಕಾರಿಗಳು ಸೇರಿಸಿರಬಹುದು: ಮಾಜಿ ಮುಜರಾಯಿ ಸಚಿವೆ ಸುಮಾ ವಸಂತ್

    ನಿಯಮವನ್ನು ಅಧಿಕಾರಿಗಳು ಸೇರಿಸಿರಬಹುದು: ಮಾಜಿ ಮುಜರಾಯಿ ಸಚಿವೆ ಸುಮಾ ವಸಂತ್

    ಮಡಿಕೇರಿ: ಹಿಂದೂಯೇತರರಿಗೆ ಹಿಂದೂ ದೇವಾಲಯಗಳ ವ್ಯಾಪಾರ ವಹಿವಾಟಿನ ಗುತ್ತಿಗೆ ನೀಡಬಾರದು ಎಂದು ನಿಯಮ ಮಾಡಿರುವುದು ನನಗೆ ಸರಿಯಾಗಿ ಗೊತ್ತಿಲ್ಲ ಎಂದು ಮಾಜಿ ಸಚಿವೆ ಮುಜರಾಯಿ ಖಾತೆಯ ಸಚಿವೆ ಸುಮಾ ವಸಂತ್ ಹೇಳಿದ್ದಾರೆ.

    ಹಿಂದೂ ದೇವಾಲಯಗಳಲ್ಲಿ ಹಿಂದೂಯೇತರ ವರ್ತಕರಿಗೆ ಜಾಗ ನೀಡಬಾರದು ಎಂಬ ಸರ್ಕಾರ ನಿಯಮಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಟಿವಿಗೆ ಅಂದಿನ ಎಸ್.ಎಂ. ಕೃಷ್ಣ ಕ್ಯಾಬಿನೆಟ್‍ನಲ್ಲಿ ಮುಜರಾಯಿ ಖಾತೆ ಸಚಿವೆಯಾಗಿದ್ದ ಸುಮಾವಸಂತ್ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಹಿಜಬ್‍ಗೂ ಪರೀಕ್ಷೆಗೂ ಸಂಬಂಧವಿಲ್ಲ, ತುರ್ತು ವಿಚಾರಣೆ ನಡೆಸಲ್ಲ: ಸುಪ್ರೀಂ

    ಅಂದು 2001 ರಿಂದ 2004ರವರೆಗೆ ಮುಜರಾಯಿ ಇಲಾಖೆಯ ಸಚಿವೆಯಾಗಿ ಕೆಲಸ ಮಾಡಿದೆ. ಆದರೆ ಈ ಕಾಯ್ದೆ ರಚನೆಯಾಗಿರುವ ಬಗ್ಗೆ ನನಗೆ ಸರಿಯಾಗಿ ಗೊತ್ತಿಲ್ಲ. ಇದನ್ನು ಅಧಿಕಾರಿಗಳು ಸೇರಿಸಿರಬಹುದು. ಆದರೆ 2003 ರಲ್ಲಿ ರಾಜ್ಯದಲ್ಲಿ ಏಕರೂಪ ಕಾಯ್ದೆ ತಂದಿದ್ದೆವು. ರಾಜ್ಯ ಪುನರ್ ವಿಂಗಡನೆ ಪೂರ್ವದಲ್ಲಿದ್ದ ನಿಯಮಗಳಿಗೆ ತಿದ್ದುಪಡಿ ತಂದಿದ್ದೆವು. ಅದರಲ್ಲಿ ಹಿಂದೂಯೇತರರಿಗೆ ಅವಕಾಶವಿಲ್ಲ ಎಂಬ ನಿಯಮ ಮಾಡಿದ್ದೆವು. ಇದು ಕೂಡ ಕಾನೂನು ಇಲಾಖೆಯಲ್ಲಿ ಚರ್ಚಿಸಿ ಎರಡು ಸದನದಲ್ಲಿ ಒಪ್ಪಲಾಗಿತ್ತು. ಆದರೆ 2002ರಲ್ಲಿ ಆಗಿರುವ ನಿಯಮ ನನಗೆ ಗೊತ್ತಿಲ್ಲ. ಹಿಂದೂಯೇತರರಿಗೆ ಅಂದರೆ ಜೈನ, ಸಿಖ್, ಬೌದ್ಧ ಧರ್ಮಿಯರಿಗೆ ಅನ್ವಯಿಸುವುದಿಲ್ಲ ಎಂದು ನಿಯಮ ರಚಿಸಲಾಗಿತ್ತು. ಆದರೆ ವ್ಯಾಪಾರ ವಹಿವಾಟಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ತಾಲೂಕು ಆಡಳಿತಗಳು ನಿಯಮ ಮಾಡುತ್ತವೆ. ಹಾಗೆ ಏನಾದರೂ ಮಾಡಿಕೊಂಡಿರಬಹುದು ಎಂದರು.

    ಈ ಹಿಂದಿನಿಂದಲೂ ಹಿಂದೂ ದೇವಾಲಯಗಳಲ್ಲಿ ಮುಸ್ಲಿಂ ಎಲ್ಲರೂ ಸೌಹಾರ್ದತೆಯಿಂದ ವ್ಯಾಪಾರ ವಹಿವಾಟು ಮಾಡುತ್ತಿದ್ದರು. ಅಂದಿನಿಂದ ವ್ಯಾಪಾರ ವಹಿವಾಟಿಗೆ ಯಾವುದೇ ಸಮಸ್ಯೆ ಇರಲಿಲ್ಲ. ಹಿಂದಿನಿಂದಲೂ ಸೌಹಾರ್ದತೆಯಿಂದ ನಡೆಯುತ್ತಿತ್ತು. ಹಾಗೇನಾದರೂ ಸಮಸ್ಯೆಗಳಿದ್ದರೆ ಈಗಲೂ ಅವರದೇ ಸರ್ಕಾರವಿದೆ. ಸಮಸ್ಯೆಯನ್ನು ಸರಿಮಾಡಿ ಶಾಂತಿ ಕಾಪಾಡಬಹುದಿತ್ತು. ಆದರೆ ಈಗ ಚುನಾವಣಾ ಕಾರಣಕ್ಕೆ ಶಾಂತಿ ಕದಡುವ ಕೆಲಸ ಬಿಜೆಪಿ ಹಾಗೂ ಸಂಘ ಪರಿವಾರದವರಿಂದ ಮಾಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

    ನಿಯಮ ಏನಿದೆ?
    ಮುಸ್ಲಿಮರಿಗೆ ಅಂಗಡಿ ಹಾಕಲು ಅವಕಾಶ ನಿರಾಕರಿಸುತ್ತಿರುವ ದೇಗುಲದ ಆಡಳಿತ ಮಂಡಳಿಗಳು, 2002ರಲ್ಲಿ ರೂಪಿಸಲಾದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಯ ನಿಯಮವನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿವೆ. ಧಾರ್ಮಿಕ ದತ್ತಿ ಇಲಾಖೆಯ ನಿಯಮಾವಳಿ ಪುಸ್ತಕದ ಪುಟ ಸಂಖ್ಯೆ 446ರಲ್ಲಿರುವ 12 ನಿಯಮದಲ್ಲಿ, ಸಂಸ್ಥೆಯ ಸಮೀಪದ ಜಮೀನು ಕಟ್ಟಡ ಮತ್ತು ನಿವೇಶನಗಳೂ ಸೇರಿದಂತೆ ಯಾವುದೇ ಸವತ್ತನ್ನು ಹಿಂದೂಗಳಲ್ಲದವರಿಗೆ ಗುತ್ತಿಗೆ ನೀಡತಕ್ಕದಲ್ಲ ಎಂದು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಕರ್ನಾಟಕದ ಗಣಿಗಾರಿಕೆ ಪ್ರಕರಣಗಳ ವಿಚಾರಣೆಗೆ ವಿಶೇಷ ಪೀಠ ರಚನೆ – ಸುಪ್ರೀಂಕೋರ್ಟ್

    ಇದೀಗ ಇದೇ ನಿಯಮವನ್ನು ನಾವು ಜಾರಿ ಮಾಡಿದ್ದೇವೆ ಎಂದು ಹಿಂದೂ ಸಂಘಟನೆಗಳು ಹೇಳುತ್ತಿದೆ. ಹಿಂದೂ ಸಂಘಟನೆಗಳು ಈ ನಿಯಮವನ್ನು ಮುಂದಿಟ್ಟುಕೊಂಡು ದೇವಾಲಯದ ಆಡಳಿತ ಮಂಡಳಿ ಜೊತೆ ಮಾತುಕತೆ ನಡೆಸಿ ಹಿಂದೂಯೇತರ ವ್ಯಕ್ತಿಗಳಿಗೆ ಅನುಮತಿ ನೀಡದಂತೆ ಮನವಿ ಮಾಡುತ್ತಿದೆ. ಈ ನಿಯಮ ಜಾರಿಯಾಗಿದ್ದು 2002ರಲ್ಲಿ. ಈ ವೇಳೆ ರಾಜ್ಯದಲ್ಲಿ ಅಸ್ತಿತ್ವದಲ್ಲಿ ಇದ್ದಿದ್ದು ಎಸ್‍ಎಂ ಕೃಷ್ಣ ನೇತೃತ್ವದ ಕಾಂಗ್ರೆಸ್ ಸರ್ಕಾರ. ಇಂದು ಅದೇ ಕಾಂಗ್ರೆಸ್ಸಿಗರು ಇದು ಸರಿಯಲ್ಲ ಎನ್ನುತ್ತಿದ್ದಾರೆ.

    ಹಿಜಬ್ ವಿವಾದ ಸೃಷ್ಟಿಯಾಗುವರೆಗೂ ಈ ನಿಯಮ ಇದೆ ಎನ್ನುವುದು ಬಹುತೇಕ ಮಂದಿಗೆ ತಿಳಿದಿರಲಿಲ್ಲ. ಅಷ್ಟೇ ಅಲ್ಲದೇ ಕರಾವಳಿ ಭಾಗದಲ್ಲಿ ಹಿಂದೂ ದೇವಾಲಯಗಳಲ್ಲಿ ಇಲ್ಲಿಯವರೆಗೂ ಮುಸ್ಲಿಮ್ ವ್ಯಾಪಾರಿಗಳು ಅಂಗಡಿಗಳನ್ನು ತೆರೆಯುತ್ತಿದ್ದರು. ಆದರೆ ಹಿಜಬ್ ವಿವಾದ, ಕರ್ನಾಟಕ ಬಂದ್ ಬಳಿಕ ಕರಾವಳಿಯ ಹಿಂದೂ-ಮುಸ್ಲಿಂ ಸಾಮರಸ್ಯದಲ್ಲಿ ಮತ್ತಷ್ಟು ಬಿರುಕಾಗಿದೆ.

  • ಪಿತೃಪಕ್ಷ ಹಿನ್ನೆಲೆ ಗಗನಕ್ಕೇರಿದ ಹೂವಿನ ಬೆಲೆ – ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ

    ಪಿತೃಪಕ್ಷ ಹಿನ್ನೆಲೆ ಗಗನಕ್ಕೇರಿದ ಹೂವಿನ ಬೆಲೆ – ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ

    ಬೆಂಗಳೂರು: ಪಿತೃಪಕ್ಷದ ಹಿನ್ನೆಲೆ ನಗರದ ಕೆ.ಆರ್ ಮಾರುಕಟ್ಟೆಯಲ್ಲಿ ಹೂವಿನ ಬೆಲೆ ಗಗನಕ್ಕೇರಿದೆ. ಹೀಗಿದ್ದರೂ ಜನ ಹೂ ಖರೀದಿಗಾಗಿ ಮುಗಿ ಬೀಳುತ್ತಿದ್ದಾರೆ.

    K.R Market

    ಪಿತೃಪಕ್ಷ ಹಬ್ಬದ ಹಿನ್ನಲೆ ನಗರದ ಕೆ.ಆರ್ ಮಾರುಕಟ್ಟೆಯಲ್ಲಿ ಹೂವು, ಹಣ್ಣು ಖರೀದಿಲು ಜನ ಮುಗಿಬೀಳುತ್ತಿದ್ದು, ವೀಕೆಂಡ್‍ನಲ್ಲಿ ವ್ಯಾಪಾರಿಗಳಿಗೆ ಭರ್ಜರಿಯಾಗಿ ವ್ಯಾಪಾರ ನಡೆಯುತ್ತಿದೆ. ಕಳೆದ ಎರಡು – ಮೂರು ದಿನಗಳಿಂದ ಹೂವಿನ ದರದಲ್ಲಿ ಏರಿಕೆಯಾಗಿದ್ದು, ದಸರಾ ಮುಗಿಯುವವರೆಗೂ ಬೆಲೆ ಹೆಚ್ಚಾಗಿಯೇ ಇರುತ್ತದೆ ಎಂದು ವ್ಯಾಪಾರಿಗಳು ಹೇಳುತ್ತಿದ್ದಾರೆ. ಇದನ್ನೂ ಓದಿ: ಬಿಲ್ಡಪ್‍ಗಾಗಿ ಪೊಲೀಸರಿಗೆ ಅವಾಜ್ ಹಾಕಿದ್ದ ಮೆಂಟಲ್ ಮಂಜ ಅರೆಸ್ಟ್

    K.R Market

    ಪಿತೃ ಪಕ್ಷ, ಮಹಾಲಯ ಅಮಾವಾಸ್ಯೆ, ನವರಾತ್ರಿ ಹಾಗೂ ಕಾರ್ತಿಕ ಸೋಮವಾರ ದೀಪಾವಳಿ ಹೀಗೆ ಸಾಲು, ಸಾಲು ಹಬ್ಬಗಳು ಈ ತಿಂಗಳಿನಲ್ಲಿದ್ದು, ಜನರು ಹಬ್ಬದ ಸಂಭ್ರದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಹೂವು, ಹಣ್ಣ ಖರೀದಿಸುತ್ತಾ ಕೊರೊನಾ ನಿಯಮ ಉಲಂಘಿಸುತ್ತಿದ್ದಾರೆ. ಈ ಮಧ್ಯೆ ಮಾರ್ಷಲ್ಸ್‌ಗಳು ಜನರಿಗೆ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಬುದ್ಧಿ ಹೇಳಿ ದಂಡ ವಿಧಿಸುತ್ತಿದ್ದರೆ, ಜನ ಅದಕ್ಕೆ ಕ್ಯಾರೆ ಮಾಡದೇ ಮಾರ್ಷಲ್‍ಗಳ ಜೊತೆಯಲ್ಲಿಯೇ ವಾಗ್ವಾದಕ್ಕಿಳಿದಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ಕೇಸ್- ಪ್ರಯಾಣಿಕರ ಸೋಗಿನಲ್ಲಿ ಟಿಕೆಟ್ ಬುಕ್, ಎನ್‍ಸಿಬಿ ರೋಚಕ ಕಾರ್ಯಾಚರಣೆ

    K.R Market

    ಹೂವಿನ ದರ:
    ಮಲ್ಲಿಗೆ – 600 – 800 ರೂಪಾಯಿ
    ಕನಕಾಂಬರ- 400-600 ರೂಪಾಯಿ
    ಕಾಕಡ ಹೂ- 100-300 ರೂಪಾಯಿ
    ಸುಗಂಧರಾಜ – 40- 80 ರೂಪಾಯಿ
    ಮಲ್ಲಿಗೆ – 400-600 ರೂಪಾಯಿ
    ಸೇವಂತಿಗೆ-30-60 ರೂಪಾಯಿ
    ಗುಲಾಬಿ – 30 – 100 ರೂಪಾಯಿ

  • ರಸ್ತೆಬದಿ ದಹಿ ಕಚೋರಿ ಮಾರುವ 14ರ ಬಾಲಕನ ಭಾವನಾತ್ಮಕ ಕಥೆ

    ರಸ್ತೆಬದಿ ದಹಿ ಕಚೋರಿ ಮಾರುವ 14ರ ಬಾಲಕನ ಭಾವನಾತ್ಮಕ ಕಥೆ

    ಅಹಮದಾಬಾದ್: ಅಹಮದಾಬಾದ್‍ನ ರಸ್ತೆಬದಿಯಲ್ಲಿ ದಹಿ ಕಚೋರಿ ವ್ಯಾಪಾರ ಮಾಡುವ 14 ವರ್ಷದ ಬಾಲಕನ ಭಾವನಾತ್ಮಕ ಕಥೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    boy kachori

    ಈ ವೀಡಿಯೋವನ್ನು ಫುಡ್ ಬ್ಲಾಗರ್ ಡೋಯಶ್ ಪತ್ರಾಬೆ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದು, ವೀಡಿಯೋದಲ್ಲಿ ಬಾಲಕ ಮಣಿನಗರ ರೈಲ್ವೆ ನಿಲ್ದಾಣದ ಎದುರಿಗಿರುವ ಅಂಗಡಿಯೊಂದರಲ್ಲಿ ವ್ಯಾಪಾರ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಇದನ್ನೂ ಓದಿ: USನಿಂದ 157 ಪುರಾತನ ಕಲಾಕೃತಿಗಳನ್ನು ವಾಪಸ್ ಭಾರತಕ್ಕೆ ತಂದ ಪ್ರಧಾನಿ ಮೋದಿ

    boy kachori

    ಬಾಲಕ ತನ್ನ ಕುಟುಂಬಕ್ಕೆ ಸಹಾಯ ಮಾಡಲು ಕಚೋರಿ ವ್ಯಾಪಾರ ಮಾಡುತ್ತಿರುವುದಾಗಿ ತಿಳಿಸಿದ್ದಾನೆ. ಬಾಲಕನ ಸಂಪೂರ್ಣ ಕಥೆ ಕೇಳಿ ಡೊಯಾಶ್ ಭಾವುಕಗೊಂಡು ವೀಡಿಯೋ ಹಂಚಿಕೊಳ್ಳುವುದರ ಜೊತೆಗೆ ಬಾಲಕನಿಗೆ ಸಹಾಯ ಮಾಡುವಂತೆ ಶೀರ್ಷಿಕೆಯಲ್ಲಿ ಬರೆದು ವಿನಂತಿಸಿದ್ದಾರೆ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಲಾರಿ ಪಲ್ಟಿ- ಡ್ರೈವರ್ ಗ್ರೇಟ್ ಎಸ್ಕೇಪ್

    ಅವನಿಗೆ ಸಹಾಯ ಮಾಡಿ. ಬಾಲಕ 14 ವರ್ಷ ವಯಸ್ಸಿನವನಾಗಿದ್ದು, ಗುಜರಾತ್‍ನ ಅಹಮದಾಬಾದ್‍ನ ಮಣಿನಗರ ರೈಲ್ವೆ ನಿಲ್ದಾಣದ ಎದುರು ಕೇವಲ 10ರೂ.ಗೆ ದಹಿ ಕಚೋರಿ ಮಾರುತ್ತಿದ್ದಾನೆ. ಅವನಿಗೆ ಸಹಾಯ ಮಾಡಬೇಕೆಂದು ವೀಡಿಯೋವನ್ನು ಹಂಚಿಕೊಂಡಿದ್ದೇನೆ. ಕೇವಲ 14 ವರ್ಷಕ್ಕೆ ಅವನ ಕುಟುಂಬಕ್ಕೆ ಸಹಾಯ ಮಾಡಲು ಬಾಲಕ ಶ್ರಮಿಸುತ್ತಿದ್ದಾನೆ. ಅವನ ಬಗ್ಗೆ ಹೆಮ್ಮೆಯಾಗುತ್ತಿದೆ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.

    ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಬಾಲಕನ ಬಗ್ಗೆ ಶ್ಲಾಘನೆ ವ್ಯಕ್ತಪಡಿಸುತ್ತಿದ್ದಾರೆ ಮತ್ತು ಆತನಿಗೆ ಧೈರ್ಯ ತುಂಬುತ್ತಿದ್ದಾರೆ. ಜೊತೆಗೆ ವೀಡಿಯೋವನ್ನು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ ಧನ್ನೆಗಾಂವ್ ಜಲಾಶಯದಿಂದ ನೀರು ಬಿಡುಗಡೆ ಮಾಂಜ್ರಾ ನದಿ ದಡದಲ್ಲಿ ಪ್ರವಾಹ ಭೀತಿ

  • ಗಣೇಶ ಮೂರ್ತಿ ತಯಾರಿಕೆಯಿಂದ ಬದುಕು ಕಟ್ಟಿಕೊಂಡಿದ್ದವರು ಬೀದಿ ಪಾಲು

    ಗಣೇಶ ಮೂರ್ತಿ ತಯಾರಿಕೆಯಿಂದ ಬದುಕು ಕಟ್ಟಿಕೊಂಡಿದ್ದವರು ಬೀದಿ ಪಾಲು

    ರಾಯಚೂರು: ಕೊರೊನಾ ಮೂರನೇ ಅಲೆಯ ಆತಂಕ ಹಿನ್ನೆಲೆ ಸರ್ಕಾರ ಸಾಮೂಹಿಕ ಗಣೇಶೋತ್ಸವಕ್ಕೆ ನಿಷೇಧ ಹೇರಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ತಯಾರಿಕೆ , ಮಾರಾಟಕ್ಕಂತೂ ಸಂಪೂರ್ಣ ಬ್ರೇಕ್ ಬಿದ್ದಿದೆ. ಗಣೇಶ ಮೂರ್ತಿಗಳನ್ನು ತಯಾರಿಸಿ, ಮಾರಾಟ ಮಾಡಿ ಜೀವನ ನಡೆಸುತ್ತಿದ್ದ ರಾಯಚೂರಿನ ಕೆಲ ಕುಟುಂಬಗಳು ಈಗ ಅಕ್ಷರಶಃ ಬೀದಿಗೆ ಬಂದಿವೆ.

    ನಗರದ ಲಿಂಗಸುಗೂರು ರಸ್ತೆ ಬಳಿ ಸುಮಾರು ವರ್ಷಗಳಿಂದ ಗಣೇಶ ಮೂರ್ತಿ, ಬೊಂಬೆಗಳನ್ನ ಮಾರಾಟ ಮಾಡಿ ಬದುಕು ಕಟ್ಟಿಕೊಂಡಿರುವ ರಾಜಸ್ಥಾನ ಮೂಲದ ನಾಲ್ಕೈದು ಕುಟುಂಬಗಳು ಈಗ ಒಂದೊತ್ತಿನ ಊಟಕ್ಕೂ ಪರದಾಡುತ್ತಿವೆ. ಜಲಮೂಲಗಳ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತ ಪಿಓಪಿ ಗಣೇಶ ಸಂಪೂರ್ಣ ನಿಷೇಧ ಮಾಡಿದೆ. ಹೀಗಾಗಿ ಮೂರು ವರ್ಷಗಳ ಹಿಂದೆ ಲಕ್ಷಾಂತರ ರೂಪಾಯಿ ಖರ್ಚುಮಾಡಿ ತಯಾರಿಸಿದ ಗಣೇಶ ಮೂರ್ತಿಗಳಿಗೆ ಬಣ್ಣ ಹಚ್ಚಿ ಮಾರಾಟ ಮಾಡಲು ಸಹ ಸಾಧ್ಯವಾಗುತ್ತಿಲ್ಲ. ಅಲ್ಲದೆ ಇನ್ನೊಂದೆಡೆ ಸಾಮೂಹಿಕ ಗಣೇಶೋತ್ಸವಕ್ಕೆ ಬ್ರೇಕ್ ಬಿದ್ದಿರುವುದರಿಂದ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ.

    ಪಿಓಪಿ ಗಣೇಶ ಮೂರ್ತಿ ಮಾರಾಟ ಸಾಧ್ಯವಿಲ್ಲವಾದ್ದರಿಂದ ಜಿಲ್ಲಾಡಳಿತವೇ ಸಹಾಯ ಮಾಡಬೇಕು ಎಂದು ಗಣೇಶ ಮೂರ್ತಿ ತಯಾರಕರು ಅಂಗಲಾಚಿದ್ದಾರೆ. ಲಾಕ್‍ಡೌನ್ ಸಂದರ್ಭದಲ್ಲಿ ಈ ಕುಟುಂಬಗಳು ಪ್ರತಿ ದಿನ ಊಟಕ್ಕೂ ಪರದಾಡಿದ್ದು, ಪಕ್ಕದ ಮನೆಗಳ ಜನರೇ ಇವರಿಗೆ ಅಕ್ಕಿ, ಬೇಳೆ ಸೇರಿದಂತೆ ಆಹಾರ ಪದಾರ್ಥಗಳನ್ನು ನೀಡಿ ಸಹಾಯ ಮಾಡಿದ್ದಾರೆ. ಅತ್ತ ರಾಜಸ್ಥಾನಕ್ಕೆ ಮರಳಲು ಆಗದೇ, ಇಲ್ಲೇ ಇದ್ದು ಬದುಕು ಕಟ್ಟಿಕೊಳ್ಳಲಾಗದೇ ಚಿಕ್ಕ ಮಕ್ಕಳನ್ನ ಕಟ್ಟಿಕೊಂಡು ಪರದಾಡುತ್ತಿದ್ದಾರೆ.

  • ಭಾರತದಿಂದ ಹೊರ ನಡೆಯಲು ಮುಂದಾದ ಸಿಟಿಬ್ಯಾಂಕ್

    ಭಾರತದಿಂದ ಹೊರ ನಡೆಯಲು ಮುಂದಾದ ಸಿಟಿಬ್ಯಾಂಕ್

    ಮುಂಬೈ: ಅಮೆರಿಕದ ಬ್ಯಾಂಕಿಂಗ್ ಕಂಪನಿ `ಸಿಟಿಬ್ಯಾಂಕ್’ ಭಾರತದಲ್ಲಿ ಗ್ರಾಹಕ ಬ್ಯಾಂಕಿಂಗ್ ಸೇವೆಗಳನ್ನು ಸ್ಥಗಿತಗೊಳಿಸುತ್ತಿರುವುದಾಗಿ ಪ್ರಕಟಿಸಿದೆ.

    ದೇಶದಲ್ಲಿ ಸಿಟಿ ಬ್ಯಾಂಕ್ ಒಟ್ಟು 35 ಶಾಖೆಗಳನ್ನು ಹೊಂದಿದ್ದು, ಕ್ರೆಡಿಟ್ ಕಾರ್ಡ್, ಗೃಹ ಸಾಲ, ಸಂಪತ್ತು ನಿರ್ವಹಣೆ ಸೇವೆಗಳನ್ನು ನೀಡುತ್ತಿದೆ. ಅಂದಾಜು ನಾಲ್ಕು ಸಾವಿರ ಸಿಬ್ಬಂದಿ ಸಂಸ್ಥೆಯ ಗ್ರಾಹಕ ಬ್ಯಾಂಕಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ.

    ಒಟ್ಟು 13 ದೇಶಗಳಲ್ಲಿ ಗ್ರಾಹಕ ಬ್ಯಾಂಕಿಂಗ್ ಸೇವೆಗಳನ್ನು ಸ್ಥಗಿತಗೊಳಿಸುತ್ತಿದ್ದೇವೆ. ಈ ದೇಶಗಳಲ್ಲಿ ಇತರರಿಗೆ ಸ್ಪರ್ಧೆ ನೀಡಲು ಅಗತ್ಯವಿರುವಷ್ಟು ಪ್ರಮಾಣದಲ್ಲಿ ದೊಡ್ಡದಾಗಿ ಬೆಳೆದಿಲ್ಲದ ಕಾರಣ ಈ ಸೇವೆಗಳನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ಪ್ರಕಟಿಸುತ್ತಿದ್ದೇವೆ ಎಂದು ಸಿಟಿಬ್ಯಾಂಕ್‍ನ ಜಾಗತಿಕ ವಹಿವಾಟುಗಳ ಸಿಇಒ ಜೇನ್ ಫ್ರೇಸರ್ ಗುರುವಾರ ಹೇಳಿದ್ದಾರೆ.

    ಸಿಟಿ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಶು ಖುಲ್ಲರ್ ಪ್ರತಿಕ್ರಿಯಿಸಿ, ತಕ್ಷಣಕ್ಕೆ ನಮ್ಮ ಚಟುವಟಿಕೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಬ್ಯಾಂಕ್ ತನ್ನ ಸೇವೆಗಳನ್ನು ಸ್ಥಗಿತಗೊಳಿಸಲು ಕಾನೂನು ಜಾರಿ ಸಂಸ್ಥೆಗಳ ಅನುಮೋದನೆ ಅಗತ್ಯವಿದೆ. ಈ ಘೋಷಣೆಯಿಂದ ಉದ್ಯೋಗಿಗಳ ಮೇಲೆ ತಕ್ಷಣಕ್ಕೆ ಯಾವುದೇ ಪರಿಣಾಮ ಉಂಟಾಗುವುದಿಲ್ಲ. ಸದ್ಯಕ್ಕೆ ನಮ್ಮ ಗ್ರಾಹಕರಿಗೆ ಸೇವೆ ಒದಗಿಸುವುದನ್ನು ಮುಂದುವರಿಸುತ್ತೇವೆ ಎಂದಿದ್ದಾರೆ.

    1902ರಲ್ಲಿ ಭಾರತಕ್ಕೆ ಬಂದ ಸಿಟಿಬ್ಯಾಂಕ್ 1985ರಿಂದ ಗ್ರಾಹಕ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುತ್ತಿದೆ. ಮುಂಬೈ, ಪುಣೆ, ಬೆಂಗಳೂರು, ಚೆನ್ನೈ ಮತ್ತು ಗುರುಗ್ರಾಮದಲ್ಲಿ ಇರುವ ತನ್ನ ಕೇಂದ್ರಗಳಿಂದ ಜಾಗತಿಕ ವಾಣಿಜ್ಯ ವಹಿವಾಟುಗಳಿಗೆ ಬೆಂಬಲ ನೀಡುವ ಕೆಲಸವನ್ನು ಮುಂದುವರಿಸಲಿದೆ.

    ಕೃಷಿ, ವಸತಿ, ನವೀಕರಿಸಬಹುದಾದ ಇಂಧನ ಮತ್ತು ಎಂಎಸ್‍ಎಂಇಗಳಿಗೆ (ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ) ಮಾರ್ಚ್ 2020ರ ವೇಳೆಗೆ ಒಟ್ಟು 27,911 ಕೋಟಿ ರೂ. ಸಾಲವನ್ನು ಸಿಟಿಬ್ಯಾಂಕ್ ನೀಡಿದೆ.

    ಎಲ್ಲ ವರ್ಗದ ಜನರಿಗೆ ಸಿಟಿಬ್ಯಾಂಕ್ ಸೇವೆ ನೀಡಿದ್ದರೂ ವಿಶೇಷವಾಗಿ ಜಾಗತಿಕ ಕಂಪನಿಯ ನೌಕರರು ಮತ್ತು ಹೆಚ್ಚು ಸಂಬಳ ಇದ್ದ ನೌಕರರಿಗೆ ವಿಶೇಷ ಸೇವೆಗಳನ್ನು ನೀಡುತ್ತಿತ್ತು.