Tag: buy

  • ದುಬಾರಿ ಬೆಲೆಗೆ ತಮ್ಮ ಫ್ಲ್ಯಾಟ್ ಮಾರಿದ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್

    ದುಬಾರಿ ಬೆಲೆಗೆ ತಮ್ಮ ಫ್ಲ್ಯಾಟ್ ಮಾರಿದ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್

    ಬಾಲಿವುಡ್ ಖ್ಯಾತ ನಟಿ ದಿ.ಶ್ರೀದೇವಿ ಪುತ್ರಿ ದುಬಾರಿ ಬೆಲೆಯ ಫ್ಲ್ಯಾಟ್ ಮಾರಿದ್ದಾರೆ. ಅದು ಬರೋಬ್ಬರಿ 44 ಕೋಟಿ ರೂಪಾಯಿಗೆ ಎನ್ನುವುದು ಅಚ್ಚರಿಯ ಸಂಗತಿ. ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ 2020ರಲ್ಲಿ ಮುಂಬೈನ ಜುಹೂನಲ್ಲಿ ಒಟ್ಟು ಮೂರು ಫ್ಲ್ಯಾಟ್ ಖರೀದಿಸಿದ್ದರಂತೆ. ಆಗ ಇವುಗಳ ಒಟ್ಟು ಬೆಲೆ 39 ಕೋಟಿ ಆಗಿತ್ತಂತೆ. ಇದೀಗ 5 ಕೋಟಿ ರೂಪಾಯಿ ಲಾಭ ಇಟ್ಟುಕೊಂಡು ಮೂರು ಫ್ಲ್ಯಾಟ್ ಗಳನ್ನು ಅವರು ಮಾರಿದ್ದಾರಂತೆ.

    ಜಾಹ್ನವಿ ಕಪೂರ್ ಕೂಡ ಹಲವಾರು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಒಂದೊಳ್ಳೆ ಸಂಭಾವನೆಯನ್ನೂ ಪಡೆಯುತ್ತಿದ್ದಾರಂತೆ. ಅಲ್ಲದೇ, ಅಪ್ಪ ಕೂಡ ಸಾಕಷ್ಟು ಶ್ರೀಮಂತ. ಹಾಗಾಗಿ ತಾವು ದುಡಿದ ಹಣದ ಜೊತೆಗೆ ತಂದೆಯೊಂದಿಗೂ ಒಂದಷ್ಟು ಹಣ ತಗೆದುಕೊಂಡಿದ್ದರಂತೆ. ಎಲ್ಲವನ್ನೂ ಒಟ್ಟಾಗಿಸಿ ಜುಹೂನಲ್ಲಿ ಇರುವ ಪ್ರತಿಷ್ಠಿತ ಅಪಾರ್ಟ್ಮೆಂಟ್ ನಲ್ಲಿ 14, 15 ಮತ್ತು 16ನೇ ಮಹಡಿಯಲ್ಲಿ ಮೂರು ಫ್ಲ್ಯಾಟ್ ಗಳನ್ನು ಅವರು ಖರೀದಿಸಿದ್ದರಂತೆ. ಇದನ್ನೂ ಓದಿ:ಕಿಚ್ಚ ಸುದೀಪ್- ರಕ್ಷಿತ್ ಶೆಟ್ಟಿ ನಡುವೆ ಏನಿದು ಕೋಲ್ಡ್ ವಾರ್!

    ಇದೀಗ ಜಾನ್ವಿ ಕಪೂರ್ ಫ್ಲ್ಯಾಟ್ ಅನ್ನು ಬಾಲಿವುಡ್ ನಟ ರಾಜ್ ಕುಮಾರ್ ರಾವ್ ಖರೀದಿಸಿದ್ದು, ಜುಲೈ 21ರಂದು ಮೂರು ಫ್ಲ್ಯಾಟ್ ಗಳನ್ನು ತಮ್ಮ ಹೆಸರಿಗೆ ರಿಜಿಸ್ಟ್ರೇಷನ್ ಮಾಡಿಸಿಕೊಂಡಿದ್ದಾರಂತೆ ನಟ. ಬರೋಬ್ಬರಿ 2.19 ಕೋಟಿ ರೂಪಾಯಿ ಅನ್ನು ಅವರು ಸ್ಟಾಂಪ್ ಡ್ಯೂಟಿ ಪಾವತಿಸಿದ್ದಾರಂತೆ. ಜೂಹೂನಲ್ಲಿ ಮನೆ ಹೊಂದಬೇಕು ಎನ್ನುವುದು ರಾಜ್ ಕುಮಾರ್ ರಾವ್ ಅವರ ಕನಸಾಗಿತ್ತಂತೆ. ಅದನ್ನು ಈಗ ನೆರವೇರಿಸಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮೂರು ದಿನಗಳ ಲಾಕ್‍ಡೌನ್ ಸಡಿಲಿಕೆ- ದ.ಕ.ದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನ

    ಮೂರು ದಿನಗಳ ಲಾಕ್‍ಡೌನ್ ಸಡಿಲಿಕೆ- ದ.ಕ.ದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನ

    ಮಂಗಳೂರು: ದಕ್ಷಿಣ ಕನ್ನಡದಲ್ಲಿ 7 ಕೊರೊನಾ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಮೂರು ದಿನಗಳ ಸಂಪೂರ್ಣ ಲಾಕ್‍ಡೌನ್ ಮಾಡಲಾಗಿತ್ತು. ಇಂದು ತರಕಾರಿ, ಹಾಲು ಸೇರಿದಂತೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ಕಲ್ಪಿಸಿದ್ದು, ಜನ ಕೊಳ್ಳಲು ಮುಗಿಬಿದ್ದಿದ್ದಾರೆ. ಖುರ್ಚಿ ಹಾಕಿಕೊಂಡು ಕ್ಯೂ ನಿಂತು ವಸ್ತುಗಳನ್ನು ಖರೀದಿಸುತ್ತಿದ್ದಾರೆ.

    ಇಂದು ಅಗತ್ಯವಸ್ತು ಖರೀದಿಗೆ ಅವಕಾಶ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ಭಾರೀ ಸಂಖ್ಯೆಯಲ್ಲಿ ಜನ ಮನೆಯಿಂದ ಹೊರಬಂದಿದ್ದು, ದಿನಸಿ, ತರಕಾರಿ ಅಂಗಡಿಗಳ ಮುಂದೆ ಭಾರೀ ಕ್ಯೂ ಉಂಟಾಗಿದೆ. ಕುರ್ಚಿ ಹಾಕಿಕೊಂಡು ಸರತಿಯಲ್ಲಿ ಕುಳಿತು ಖರೀದಿ ಮಾಡುತ್ತಿದ್ದಾರೆ. ಇದರಿಂದಾಗಿ ಭಾರೀ ಸಂಖ್ಯೆಯ ವಾಹನಗಳು ರಸ್ತೆಗಿಳಿದಿದ್ದು, ಸಂಚಾರ ದಟ್ಟಣೆ ಉಂಟಾಗಿದೆ. ಮಂಗಳೂರಿನ ಕದ್ರಿ ಬಳಿಯಿರುವ ಮಲ್ಲಿಕಟ್ಟೆ ಮಾರುಕಟ್ಟೆಯಲ್ಲಿ ಭಾರೀ ಕ್ಯೂ ಉಂಟಾಗಿದೆ. ದಿನಸಿ, ತರಕಾರಿ, ಹಾಲು, ಪೇಪರ್ ಖರೀದಿಗೆ ಜನ ಸಾಲುಗಟ್ಟಿ ನಿಂತಿದ್ದಾರೆ.

    ಮಾಂಸ ಖರೀದಿಗೂ ಸಹ ಜನ ಮುಗಿಬಿದ್ದಿದ್ದು, ಸರತಿಯಲ್ಲಿ ನಿಂತು ಖರೀದಿಸುತ್ತಿದ್ದಾರೆ. ಚಿಕನ್, ಮಟನ್ ಖರೀದಿಗೆ ಮುಗಿಬಿದ್ದಿದ್ದಾರೆ. ಕಳೆದ ಮೂರು ದಿನಗಳಿಂದ ಮಾಂಸ ಸಿಗದ್ದಕ್ಕೆ ಭಾರೀ ಡಿಮ್ಯಾಂಡ್ ಉಂಟಾಗಿದ್ದು, ಮಲ್ಲಿಕಟ್ಟೆ ಮಾರುಕಟ್ಟೆಯಲ್ಲಿ ಮಾಂಸ ಮಾರಾಟ ಜೋರಾಗಿ ನಡೆದಿದೆ. ಮೀನುಗಾರಿಕೆ ಬಂದ್ ಆಗಿರುವುದರಿಂದ ಮೀನುಗಳು ಸಿಗುತ್ತಿಲ್ಲ. ಹೀಗಾಗಿ ಜನತೆ ಚಿಕನ್, ಮಟನ್ ಮೊರೆ ಹೋಗಿದ್ದಾರೆ. ಇದರಿಂದಾಗಿ ಬೇಡಿಕೆ ಹೆಚ್ಚಾಗಿದೆ.

  • ದುಬಾರಿ ಬೆಲೆಯ ಡ್ರೀಮ್ ಬೈಕ್ ಖರೀದಿಸಿದ ಕ್ರೇಜಿಸ್ಟಾರ್ ಪುತ್ರ

    ದುಬಾರಿ ಬೆಲೆಯ ಡ್ರೀಮ್ ಬೈಕ್ ಖರೀದಿಸಿದ ಕ್ರೇಜಿಸ್ಟಾರ್ ಪುತ್ರ

    ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಇತ್ತೀಚೆಗಷ್ಟೆ ಮಗಳ ಮದುವೆಯನ್ನು ಅದ್ಧೂರಿಯಾಗಿ ಮಾಡಿದ್ದು, ಮನೆಗೆ ಹೊಸ ಅತಿಥಿಯಾಗಿ ಅಳಿಯನನ್ನು ಆಗಮಿಸಿಕೊಂಡಿದ್ದಾರೆ. ಇದೀಗ ರವಿಚಂದ್ರನ್ ಮನೆಗೆ ಮತ್ತೊಬ್ಬ ಅತಿಥಿಯನ್ನು ಬರ ಮಾಡಿಕೊಂಡಿದ್ದಾರೆ.

    ರವಿಚಂದ್ರನ್ ಅವರ ಮಗ ಮನೋರಂಜನ್ ಅವರು ತಾವು ಕನಸು ಕಂಡಿದ್ದ ದುಬಾರಿ ಡುಕಾಟಿ 969 ಬೈಕನ್ನು ಮಂಗಳವಾರ ಖರೀದಿಸಿದ್ದಾರೆ. ಬೈಕ್ ಖರೀಸಿದ ಸಂತಸವನ್ನು ಮನೋರಂಜನ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಜೊತೆ ತಮ್ಮ ಬೈಕ್ ವಿಡಿಯೋವೊಂದನ್ನು ಅಪ್ಲೋಡ್ ಮಾಡಿದ್ದಾರೆ.

    “ನಾನು ಶಾಲಾ ದಿನಗಳಿಂದ ಒಂದು ಸೂಪರ್ ಬೈಕ್ ಅಥವಾ ಬಿಗ್ ಬೈಕನ್ನು ರೈಡ್ ಮಾಡಬೇಕು ಮತ್ತು ಖರೀದಿಸಬೇಕೆಂಬ ಆಸೆಯಾಗಿತ್ತು. ಆದರೆ ಆಗಿನ ಕಾಲದಲ್ಲಿ ಅದನ್ನು ಕಾಣುವುದೇ ಅಪರೂಪವಾಗಿತ್ತು. ಇದೀಗ ನಮ್ಮ ಕುಟುಂಬಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಅದುವೇ ನನ್ನ ಕನಸಿನ ಬೈಕ್ ಡುಕಾಟಿ 969 ಪನಿಗಾಲೆ ಕಾರ್ಸ್ ” ಎಂದು ಮನೋರಂಜನ್ ಬರೆದುಕೊಂಡಿದ್ದಾರೆ.

    ಬೈಕ್ ವಿಶೇಷ:
    ಡುಕಾಟಿ 969 ಎರಡು ಮಾದರಿಯಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿದೆ. ಬೆಂಗಳೂರಿನ ಶೋರೋಂನಲ್ಲಿ ಪನಿಗಾಲೆ ಕಾರ್ಸ್ ಬೈಕಿಗೆ 15.30 ಲಕ್ಷ ರೂ. ದರ ಇದ್ದರೆ, ಪನಿಗಾಲೆ ಸ್ಟ್ಯಾಂಡರ್ಡ್ ಬೈಕಿಗೆ 14.21 ಲಕ್ಷ ರೂ. ದರವಿದೆ. 955 ಸಿಸಿ ಇರುವ ಬೈಕ್ ಡ್ಯುಯಲ್ ಚಾನೆಲ್ ಎಬಿಎಸ್ ಹೊಂದಿದ್ದು, ಪ್ರತಿ ಲೀಟರ್ ಪೆಟ್ರೋಲಿಗೆ 14 ಕಿಮೀ ಮೈಲೇಜ್ ನೀಡುತ್ತದೆ. ಆರ್‌ಟಿಒ, ವಿಮೆ ಎಲ್ಲ ಸೇರಿದಾಗ ಒಟ್ಟು ಪನಿಗಾಲೆ ಕಾರ್ಸ್ ಆನ್ ರೋಡ್ ದರ 18.44 ಲಕ್ಷ ರೂ. ಆಗುತ್ತದೆ ಎಂದು ಆಟೊಮೊಬೈಲ್ ಸೈಟ್‍ಗಳು ಮಾಹಿತಿ ನೀಡಿವೆ.

    ಸದ್ಯಕ್ಕೆ ಮನೋರಂಜನ್ ‘ಪ್ರಾರಂಭ’ ಹಾಗೂ ‘ಚಿಲ್ಲಂ’ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ.

    https://www.facebook.com/TheManoranjanRavichandran/videos/2539439772951491/

  • ಸಿದ್ದರಾಮಯ್ಯಗೆ ಕಾರ್ ಗಿಫ್ಟ್ ಕೊಟ್ಟ ‘ಶಿಷ್ಯ’ ಭೈರತಿ ಸುರೇಶ್ – ಸಿದ್ದು ಉತ್ತರಾಧಿಕಾರಿ ಆಗ್ತಾರಾ?

    ಸಿದ್ದರಾಮಯ್ಯಗೆ ಕಾರ್ ಗಿಫ್ಟ್ ಕೊಟ್ಟ ‘ಶಿಷ್ಯ’ ಭೈರತಿ ಸುರೇಶ್ – ಸಿದ್ದು ಉತ್ತರಾಧಿಕಾರಿ ಆಗ್ತಾರಾ?

    ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಕೆಜೆ ಜಾರ್ಜ್ ಅವರಿಂದ ಭರ್ಜರಿ ಗಿಫ್ಟ್ ಲಭಿಸಿತ್ತು. ಆದಾದ ಬಳಿಕ ಸದ್ಯ ಸಿದ್ದರಾಮಯ್ಯ ಅವರ ರಾಜಕೀಯ ಶಿಷ್ಯರೆಂದೇ ಗುರುತಿಸಿಕೊಂಡಿರುವ ಹೆಬ್ಬಾಳ ಶಾಸಕ ಭೈರತಿ ಸುರೇಶ್ ಅವರು ಕೋಟಿ ರೂ. ಮೌಲ್ಯದ ಕಾರು ಉಡುಗೊರೆಯಾಗಿ ನೀಡಿದ್ದಾರೆ.

    ರಾಜಕೀಯದಲ್ಲಿ ತಮ್ಮ ಮಗನನ್ನು ಬೆಳೆಸುವ ಬದಲು ತಮ್ಮ ಶಿಷ್ಯಂದಿರಗೆ ಉತ್ತಮ ರಾಜಕೀಯ ಜೀವನ ರೂಪಿಸಲು ಸಿದ್ದರಾಮಯ್ಯ ಮುಂದಾಗಿದ್ದರು ಎಂಬ ಸುದ್ದಿ ಈ ಹಿಂದೆಯೇ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ಅವರ ಶಿಷ್ಯರ ಪಟ್ಟಿಯಲ್ಲಿ ಗುರುತಿಸಿಕೊಂಡಿರುವ ಭೈರತಿ ಸುರೇಶ್ ಅವರು ಹೊಸ ಕಾರು ನೀಡಿದ್ದಾರೆ.

    ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಭೈರತಿ ಸುರೇಶ್ ಅವರು ವಿಧಾನ ಪರಿಷತ್ ಅಭ್ಯರ್ಥಿಯಾಗಿ ಸ್ವತಂತ್ರ್ಯವಾಗಿ ಸ್ಪಧಿಸಿದ್ರು. ಬಳಿಕ ಹೆಬ್ಬಾಳ ಕ್ಷೇತ್ರದಲ್ಲಿ ಗೆದ್ದು ಶಾಸಕ ಸ್ಥಾನ ಪಡೆದಿದ್ದರು. ಇದನ್ನೂ ಓದಿ: ಮಾಜಿ ಸಿಎಂ ಮನೆಗೆ ಬಂತು ಕೋಟಿ ಮೌಲ್ಯದ ಬೆಂಜ್ ಕಾರ್! –  ವಿಶೇಷತೆ ಏನು?

    ಮಾಜಿ ಸಿಎಂ ಸಿದ್ದರಾಮಯ್ಯ ನಂತರ ಕಾಂಗ್ರೆಸ್ ನಲ್ಲಿ ಅವರ ಉತ್ತರಾಧಿಕಾರಿ ಯಾರು ಎನ್ನುವ ಪ್ರಶ್ನೆಗೆ ಸಿದ್ದರಾಮಯ್ಯ ಅವರು ಈ ಹಿಂದೆಯೇ ಸಂದೇಶ ನೀಡಿದ್ದರು. ಸಾಮಾನ್ಯವಾಗಿ ತಂದೆ ಸಕ್ರಿಯ ರಾಜಕಾರಣದಲ್ಲಿದ್ದರೆ ಅವರ ಮಗ ಉತ್ತರಾಧಿಕಾರಿ ಎನ್ನುವ ಮಾತು ಪ್ರಚಲಿತದಲ್ಲಿದೆ. ಆದರೆ ಸಿಎಂ ತಮ್ಮ ಮಗನ ಬಗ್ಗೆ ಹೆಚ್ಚು ಒಲವು ತೋರಿಸದೇ ತಮ್ಮದೇ ಸಮುದಾಯ ಶಾಸಕರದ ಭೈರತಿ ಸುರೇಶ್ ಅವರನ್ನು ಸದ್ದಿಲ್ಲದೇ ಪ್ರಚಾರಕ್ಕೆ ತರಲು ಮುಂದಾಗಿದ್ದರು. ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಿದ್ದರಾಮಯ್ಯ ತಮ್ಮ ಮಗನಿಗೆ ಮಂತ್ರಿಗಿರಿ ಕೊಡಿಸುವಂತೆ ಒತ್ತಡ ಹೇರದೆ ಭೈರತಿ ಸುರೇಶ್ ಅವರ ಪರವಾಗಿ ಸಿದ್ದರಾಮಯ್ಯ ಹೆಚ್ಚಿನ ಒಲವು ತೋರಿದ್ದರು.

    ಪಕ್ಷದ ಕಷ್ಟಕಾಲದಲ್ಲಿ ಸಹಾಯಕ್ಕೆ ಬಂದ ಭೈರತಿ ಸುರೇಶ್ ರನ್ನು ಸಚಿವರನ್ನಾಗಿ ಮಾಡಲು ಸಿದ್ದರಾಮಯ್ಯ ಆಸಕ್ತಿ ಹೊಂದಿದ್ದರು. ಆದ್ದರಿಂದ ಅವರನ್ನೇ ಸಿದ್ದರಾಮಯ್ಯ ನಂತರದ ಉತ್ತರಾಧಿಕಾರಿ ಎಂದು ಹೇಳಲಾಗುತ್ತಿದೆ. ಇದು ಕಾಂಗ್ರೆಸ್ ಪಕ್ಷದಲ್ಲಿ ಇನ್ನುಳಿದ ಕುರುಬ ಸಮುದಾಯದ ನಾಯಕ ಅಸಮಾಧಾನಕ್ಕೂ ಕಾರಣವಾಗಿತ್ತು. ಪ್ರಮುಖವಾಗಿ ಹೆಚ್.ಎಂ.ರೇವಣ್ಣ, ಶಾಸಕರಾದ ಶಿವಳ್ಳಿ, ಎಂ.ಟಿ.ಬಿ.ನಾಗರಾಜ್ ಪಕ್ಷದಲ್ಲಿ ತಮ್ಮ ಅಸ್ತಿತ್ವದ ಬಗ್ಗೆ ಭಯ ಪಡುವಂತಾಗಿತ್ತು. ಈ ಕಾರಣಕ್ಕೆ ಸಿದ್ದರಾಮಯ್ಯನವರೇ ನಮ್ಮ ಪಾಲಿಗೆ ವಿಲನ್ ಆಗಿದ್ದು, ಮಂತ್ರಿ ಸ್ಥಾನಕ್ಕೆ ಸಿಎಂ ತಮ್ಮ ಪರವಾಗಿ ಮಾತನಾಡುತ್ತಿಲ್ಲ ಎಂದು ಕುರುಬ ಸಮಾಜದ ಶಾಸಕರು ತಮ್ಮ ಆಪ್ತರ ಜೊತೆ ಮಾತನಾಡಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭಿಸಿತ್ತು. ಇದನ್ನೂ ಓದಿ: ಸಿದ್ದರಾಮಯ್ಯಗೆ ಮತ್ತೆ ಸುತ್ತಿಕೊಂಡ `ವಾಚ್’ ಕಂಟಕ!

    ಯಾಕೆ ನೀವು ಭೈರತಿ ಬಗ್ಗೆ ಹೆಚ್ಚಿನ ಒಲವು ತೋರಿಸುತ್ತಿದ್ದೀರಿ ಎಂದು ಸಿದ್ದರಾಮಯ್ಯನವರನ್ನು ಕೇಳಿದ್ದಕ್ಕೆ ತಮ್ಮ ಆಪ್ತರ ಬಳಿ, ಭೈರತಿ ಸುರೇಶ್ ತಮ್ಮ ಸಾಮಥ್ರ್ಯದಿಂದಲೇ ಪರಿಷತ್ ಸದಸ್ಯರಾಗಿದ್ದಾರೆ. ಹೆಬ್ಬಾಳ ಉಪ ಚುನಾವಣೆಯಲ್ಲಿ ಟಿಕೆಟ್ ತಪ್ಪಿದರೂ ನಿಷ್ಟೆಯಿಂದಲೇ ಪಕ್ಷಕ್ಕಾಗಿ ದುಡಿದಿದ್ದಾರೆ. ಯಾವುದೇ ಅಪಸ್ವರ ಎತ್ತದೇ ಶಿಸ್ತಿನಿಂದ ಪಕ್ಷ ಕಟ್ಟಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಸಂಕಷ್ಟಕ್ಕೆ ಸಿಕ್ಕಾಗ ಅವರಿಗೆ ಎಲ್ಲಾ ರೀತಿಯ ನೆರವು ನೀಡಿದ್ದಾರೆ. ಸಮುದಾಯದ ಉಳಿದ ಶಾಸಕರುಗಳು ಅವರವರ ಗೆಲುವಿಗಷ್ಟೆ ಸೀಮಿತರಾದರು. ಕಷ್ಟದಲ್ಲಿದ್ದಾಗ ಯಾರೂ ನೆರವಿಗೂ ಬರಲಿಲ್ಲ ಎಂದು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ ಎನ್ನುವ ವಿಚಾರ ತಿಳಿದುಬಂದಿತ್ತು.

    ಇದೇ ಕಾರಣಕ್ಕೆ ಭೈರತಿ ಸುರೇಶ್ ಗೆ ಮಂತ್ರಿ ಸ್ಥಾನ ನೀಡಬೇಕು ಅಂತಾ ಸ್ವತಃ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ ಕೂಡಾ ಮಾಡಿದ್ದರು ಎನ್ನಲಾಗಿತ್ತು. ತಮ್ಮ ಪುತ್ರನಿಗಿಂತ ಹೆಚ್ಚು ಪ್ರೀತಿ ತೋರಿಸಿ ಭವಿಷ್ಯದ ಸಮುದಾಯದ ನಾಯಕನನ್ನಾಗಿಸುವ ಯತ್ನದಲ್ಲಿದ್ದಾರೆ ಎನ್ನುವ ಮಾತುಗಳು ಸಿದ್ದರಾಮಯ್ಯ ಆಪ್ತ ವಲಯದಲ್ಲೇ ಈಗ ಕೇಳಿ ಬಂದಿತ್ತು. ಸದ್ಯ ಬೈರತಿ ಸುರೇಶ್ ಅವರು ತಮ್ಮ ರಾಜಕೀಯ ಬೆಳವಣಿಗೆಗೆ ಕಾರಣರಾದ ಸಿದ್ದರಾಮಯ್ಯ ಅವರಿಗೆ ದುಬಾರಿ ಬೆಲೆಯ ಕಾರು ಗಿಫ್ಟ್ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಾಜಿ ಸಿಎಂ ಮನೆಗೆ ಬಂತು ಕೋಟಿ ಮೌಲ್ಯದ ಬೆಂಜ್ ಕಾರ್!

    ಮಾಜಿ ಸಿಎಂ ಮನೆಗೆ ಬಂತು ಕೋಟಿ ಮೌಲ್ಯದ ಬೆಂಜ್ ಕಾರ್!

    ಬೆಂಗಳೂರು: ದೋಸ್ತಿ ಸರ್ಕಾರ ಸಂಕಷ್ಟದಲ್ಲಿರುವಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದುಬಾರಿ ಬೆಂಜ್ ಕಾರನ್ನು ಖರೀದಿಸಿದ್ದಾರೆ.

    ಸಿದ್ದರಾಮಯ್ಯ ಅವರು ಬರೋಬ್ಬರಿ 1.5 ಕೋಟಿ ಮೌಲ್ಯದ ಬೆಂಜ್ ಜಿಎಲ್ 350 ಕಾರನ್ನು ಖರೀದಿಸಿದ್ದಾರೆ. ಈ ಕಾರು ಶುಕ್ರವಾರವೇ ಅವರ ಮನೆಗೆ ಬಂದಿದ್ದು, ಈ ಕಾರನ್ನು ಸಿದ್ದರಾಮಯ್ಯ ಅವರೇ ತೆಗೆದುಕೊಂಡಿದ್ದಾರಾ ಅಥವಾ ಬೇರೆಯವರು ಗಿಫ್ಟ್ ಕೊಟ್ಟಿದ್ದಾರ ಎಂಬುದು ತಿಳಿದು ಬಂದಿಲ್ಲ. ಆದರೆ ಈ ಐಷಾರಾಮಿ ಕಾರನ್ನು ಸಿದ್ದರಾಮಯ್ಯ ಅವರು ಓಡಾಡಲು ಖರೀದಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯಗೆ ಮತ್ತೆ ಸುತ್ತಿಕೊಂಡ `ವಾಚ್’ ಕಂಟಕ!

    ಕಾರಿನ ವಿಶೇಷತೆ ಏನು?
    ಈ ಕಾರ್ ಐಷಾರಾಮಿಯಾಗಿದ್ದು, ವಿಮಾನದಲ್ಲಿ ಪ್ರಯಾಣ ಮಾಡುವಂತೆ ಹಾಯಾಗಿ ಕುಳಿತು ಸಂಚರಿಸಬಹುದು. ರಾತ್ರಿ ವೇಳೆ ಹೆಡ್‍ಲೈಟ್ ಆನ್ ಮಾಡಬೇಕಾಗಿಲ್ಲ. ಕತ್ತಲಾದ ತಕ್ಷಣವೇ ಸೆನ್ಸರ್ ತಂತ್ರಜ್ಞಾನದಿಂದಾಗಿ ಆಟೋಮ್ಯಾಟಿಕ್ ಆಗಿ ಹೆಡ್‍ಲೈಟ್ ಆನ್ ಆಗುತ್ತದೆ.

    ವಾಚ್, ಕನ್ನಡಕ ವಿವಾದ:
    ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಕುಮಾರಸ್ವಾಮಿ ಅವರು, ನಿಮ್ಮ ಸಿಎಂ ಸಮಾಜವಾದಿಯಲ್ಲ ಅವರು ಮಜಾವಾದಿ. ದುಬಾರಿ ಬೆಲೆಯ ವಾಚು, ಗ್ಲಾಸ್ ಗಳನ್ನು ಧರಿಸುತ್ತಾರೆ. 70 ಲಕ್ಷ ರೂ. ಮೌಲ್ಯದ ವಾಚ್, 10 ಲಕ್ಷ ರೂ. ಮೌಲ್ಯದ ಗ್ಲಾಸ್ ಧರಿಸುತ್ತಾರೆ ಎಂದು ಆರೋಪಿಸಿದ್ದರು. ವಾಚ್ ಪ್ರಕರಣ ರಾಜಕೀಯ ವಲಯದಲ್ಲಿ ತೀವ್ರ ವಿವಾದಕ್ಕೆ ಒಳಗಾಗುತ್ತಿದ್ದಂತೆ ಸಿದ್ದರಾಮಯ್ಯ ವಾಚ್ ಅನ್ನು ಸರ್ಕಾರದ ವಶಕ್ಕೆ ನೀಡುವ ಮೂಲಕ ಎಲ್ಲಾ ಗೊಂದಲಗಳಿಗೆ ಅಂತ್ಯ ಹಾಡಿದ್ದರು. ವಿವಾದ ಅಂತ್ಯವಾಗಿದ್ದರೂ ಈ ವಾಚ್ ಪ್ರಕರಣ ಸಿದ್ದರಾಮಯ್ಯ ಅವರ ಇಮೇಜ್‍ಗೆ ಸ್ವಲ್ಪ ಹೊಡೆತ ನೀಡಿತ್ತು. ವಿಧಾನಸಭಾ ಚುನಾವಣೆಯಲ್ಲಿ ಎಚ್‍ಡಿಕೆ, ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರು ಈ ವಿಚಾರವನ್ನು ಪ್ರಸ್ತಾಪ ಮಾಡುತ್ತಲೇ ಟೀಕೆ ಮಾಡುತ್ತಿದ್ದರು.

    ಜಾರ್ಜ್ ಕಾರಲ್ಲಿ ಸಂಚಾರ:
    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿಯುತ್ತಿದ್ದಂತೆ ಇನ್ನೋವಾ ಕಾರಿನಲ್ಲಿ ಓಡಾಟ ಮಾಡುತ್ತಿದ್ದರು. ಇವರ ಸ್ಥಿತಿಯನ್ನು ನೋಡಿ ಕುಚುಕು ಗೆಳೆಯ ಮಾಜಿ ಬೆಂಗಳೂರು ನಗರಾಭಿವೃದ್ಧಿ ಸಚಿವ, ಹಾಲಿ ಐಟಿ ಬಿಟಿ ಸಚಿವ ಕೆಜೆ ಜಾರ್ಜ್ ದುಬಾರಿ ಲ್ಯಾಂಡ್ ಕ್ರೂಸರ್ ಪ್ರಾಡೋ ಕಾರನ್ನು ಗಿಫ್ಟ್ ನೀಡಿದ್ದರು. ಲ್ಯಾಂಡ್ ಕ್ರೂಸರ್ ಪ್ರಾಡೋ ಕಾರಿಗೆ ಒಂದು ಕೋಟಿ ರೂ. ಬೆಲೆಯಿದೆ. ಕಾರು ಅಲ್ಲದೇ ಒಂದು ವರ್ಷಕ್ಕೆ ಸಾಕಾಗುವಷ್ಟು ಡೀಸೆಲ್ ಕೂಪನ್ ಕೂಡ ಜಾರ್ಜ್ ನೀಡಿದ್ದಾರೆ.

    ಸಿದ್ದರಾಮಯ್ಯನವರನ್ನು ಮನೆಗೆ ಕರೆದು ಉಪಚಾರ ಮಾಡಿದ ಜಾರ್ಜ್, ಇನ್ನು ಮುಂದೆ ನೀವು ಈ ಇನ್ನೋವಾ ಕಾರಲ್ಲಿ ಓಡಾಡಬೇಡಿ. ನಿಮಗಾಗಿ ಒಂದು ಹೊಸ ಕಾರು ಖರೀದಿಸಿದ್ದೇನೆ. ಇದನ್ನು ತೆಗೆದುಕೊಳ್ಳಿ. ಈ ಹೊಸ ಕಾರಲ್ಲಿ ನೀವು ಓಡಾಡಿ ಎಂದು ಹೇಳಿ ಪ್ರಾಡೋ ಕಾರಿನ ಕೀ ಕೊಟ್ಟಿದ್ದರು. ಈ ವೇಳೆ ಸಿದ್ದರಾಮಯ್ಯ ಒಲ್ಲದ ಮನಸ್ಸಿನಿಂದಲೇ ಕೋಟಿ ರೂ. ಮೌಲ್ಯದ ಹೊಸ ಕಾರನ್ನು ಪಡೆದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಮೆರಿಕ ಜೊತೆ 13,500 ಕೋಟಿ ರೂ. ಮೊತ್ತದ ಹೆಲಿಕಾಪ್ಟರ್ ಖರೀದಿಗೆ ಮುಂದಾದ ಭಾರತ

    ಅಮೆರಿಕ ಜೊತೆ 13,500 ಕೋಟಿ ರೂ. ಮೊತ್ತದ ಹೆಲಿಕಾಪ್ಟರ್ ಖರೀದಿಗೆ ಮುಂದಾದ ಭಾರತ

    ನವದೆಹಲಿ: ಸೇನಾ ಬಲವನ್ನು ಹೆಚ್ಚಿಸಿಕೊಳ್ಳಲು ಹಾಗೂ ಆಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಲು ಮುಂದಾಗುತ್ತಿರುವ ಕೇಂದ್ರ ಸರ್ಕಾರ ಅಮೆರಿಕ ಜೊತೆ 13,500 ಕೋಟಿ ರೂಪಾಯಿ ಮೌಲ್ಯದ ರಕ್ಷಣಾ ಹಾಗೂ ಶಸ್ತ್ರಸಜ್ಜಿತ ಹೆಲಿಕಾಪ್ಟರ್ ಖರೀದಿಗೆ ಒಪ್ಪಂದ ನಡೆಸಲು ಮುಂದಾಗಿದೆ.

    ದೇಶದ ನೌಕಾಪಡೆಯ ಬಲವನ್ನು ಹೆಚ್ಚಿಸಿಕೊಳ್ಳಲು ಎನ್‍ಡಿಎ ಸರ್ಕಾರ 13,500 ಕೋಟಿ ರೂಪಾಯಿ ವೆಚ್ಚದ 24 ಎಂಎಚ್-60 ರೋಮಿಯೋ ಹೆಲಿಕಾಪ್ಟರ್ ಗಳನ್ನು ಪೂರೈಸುವಂತೆ ಅಮೆರಿಕಕ್ಕೆ ಪತ್ರ ಬರೆದಿದೆ. ಅಲ್ಲದೇ ಈ ಹೆಲಿಕಾಪ್ಟರ್ ಗಳನ್ನು 2020-2024 ರೊಳಗಾಗಿ ಪೂರೈಸುವಂತೆ ಪತ್ರದಲ್ಲಿ ಉಲ್ಲೇಖಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ಅಮೆರಿಕದ ‘ಸಿಕೋಸ್ಕಿ ಲಾಕ್‍ಹೀಡ್ ಮಾರ್ಟಿನ್’ ನಿರ್ಮಾಣದ ಬಹು ಉಪಯೋಗಿ ‘ಎಂಎಚ್-60 ರೋಮಿಯೋ’ ಹೆಲಿಕಾಪ್ಟರ್, ಟಾರ್ಪೆಡೋ ಮತ್ತು ಕ್ಷಿಪಣಿ ವ್ಯವಸ್ಥೆಯನ್ನು ಹೊಂದಿದೆ. ಅಲ್ಲದೇ ಸಬ್‍ಮರಿನ್ ಮೇಲಿನ ದಾಳಿಗಳನ್ನು ಸಮರ್ಥವಾಗಿ ನಿಭಾಯಿಸುವ ಸಾಮರ್ಥ್ಯ ಹೊಂದಿರುವ ಕಾರಣ ಭಾರತ ಖರೀದಿಸಲು ಉತ್ಸಾಹ ತೋರಿಸಿದೆ.

    ಎಂಎಚ್-60 ರೋಮಿಯೋ ಹೆಲಿಕಾಪ್ಟರ್ ಖರೀದಿ ಏಕೆ?
    ಚೀನಾದ ಸಬ್‍ಮರಿನ್‍ಗಳು ನಿರಂತರವಾಗಿ ಭಾರತದ ಮೇಲೆ ಕಣ್ಣಿಟ್ಟಿದ್ದು ದೇಶದ ಸಮುದ್ರಗಡಿಯನ್ನು ದಾಟಲು ಯತ್ನ ನಡೆಸುತ್ತಿವೆ. ಹೀಗಾಗಿ ಚೀನಾದ ಕಳ್ಳಾಟಕ್ಕೆ ಮಿತಿ ಹಾಕಲು ಹಾಗೂ ದೇಶದ ಸಮುದ್ರಗಡಿಯನ್ನು ರಕ್ಷಣೆ ಮಾಡಲು ಈ ಹೆಲಿಕಾಪ್ಟರ್ ಗಳು ಬಹುಮುಖ್ಯ ಪಾತ್ರ ವಹಿಸುತ್ತವೆ. ಅಲ್ಲದೇ ಎಂಎಚ್-60 ಹೆಲಿಕಾಪ್ಟರ್ ಗಳು ಸಾಗರದಾಳದಲ್ಲಿರುವ ಸಬ್‍ಮರಿನ್‍ಗಳನ್ನು ಪತ್ತೆಹಚ್ಚುವ ತಂತ್ರಜ್ಞಾನವನ್ನು ಸಹ ಹೊಂದಿವೆ.

    ನೌಕಾಪಡೆಯ ಬಲವರ್ಧನೆಗೆ ಎಂಎಚ್-60 ಹೆಲಿಕಾಪ್ಟರ್ ಗಳು ಅತ್ಯವಶ್ಯಕವಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಅಮೆರಿಕದೊಂದಿಗೆ ಈ ಒಪ್ಪಂದವನ್ನು ಶೀಘ್ರವೇ ಅಂತಿಮಗೊಳಿಸಲಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಏನಿದು ಎಸ್-400 ಟ್ರಯಂಫ್? ಹೇಗೆ ಕೆಲಸ ಮಾಡುತ್ತೆ? ಅಮೆರಿಕ, ಚೀನಾ, ಪಾಕಿಸ್ತಾನಕ್ಕೆ ಆತಂಕ ಯಾಕೆ?

    ಇತ್ತೀಚೆಗಷ್ಟೇ ರಷ್ಯಾ ಜೊತೆ ಎಸ್-400 ಟ್ರಯಂಫ್ ಕ್ಷಿಪಣಿ ಖರೀದಿಯಿಂದಾಗಿ, ಅಮೆರಿಕ ಭಾರತದೊಂದಿಗೆ ಮುನಿಸಿಕೊಂಡಿತ್ತು. ಈ ಮುನಿಸನ್ನು ಶಮನಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಅಮೆರಿಕ ಅಧ್ಯಕ್ಷ ಟ್ರಂಪ್ ಸರ್ಕಾರದ ಜೊತೆ ಎಂಎಚ್-60 ಹೆಲಿಕಾಪ್ಟರ್ ಖರೀದಿಯ ಮೂಲಕ ಮತ್ತೊಂದು ರಕ್ಷಣಾ ಒಪ್ಪಂದಕ್ಕೆ ಮುಂದಾಗಿದೆ ಎನ್ನುವ ಮಾಹಿತಿ ಲಭಿಸಿದೆ.

    ಭಾರತಕ್ಕೆ ನಿರ್ಬಂಧ ಇಲ್ಲ:
    2015ರಲ್ಲಿ ಇರಾನ್ ಮೇಲಿನ ನಿರ್ಬಂಧಗಳನ್ನು ತೆರವುಗೊಳಿಸಿದ್ದ ಅಮೆರಿಕ, ಈಗ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ ಎಂದು ಆರೋಪಿಸಿ ಈ ವರ್ಷದ ಆರಂಭದಲ್ಲಿ ಮತ್ತೆ ನಿರ್ಬಂಧ ವಿಧಿಸಿತ್ತು. ನವೆಂಬರ್ 4ರಿಂದ ಪೂರ್ಣ ಪ್ರಮಾಣದಲ್ಲಿ ನಿರ್ಬಂಧ ಜಾರಿಯಾಗಿದೆ. ಇರಾನ್‍ನಿಂದ ತೈಲ ಆಮದನ್ನು ಅಮೆರಿಕ ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ. ಅಲ್ಲದೇ ತನ್ನ ಮಿತ್ರ ರಾಷ್ಟ್ರಗಳು ಸಹ ಇರಾನ್ ನೊಂದಿಗೆ ಖರೀದಿಯನ್ನು ಸ್ಥಗಿತಗೊಳಿಸಲಿವೆ ಎನ್ನುವ ನಿರೀಕ್ಷೆಹೊಂದಿದ್ದೇವೆ. ಇರಾನ್ ಜೊತೆ ಯಾವುದೇ ರೀತಿಯ ವ್ಯವಹಾರವನ್ನು ಮುಂದುವರಿಸುವ ಯಾವುದೇ ದೇಶದೊಂದಿಗೆ ಅಮೆರಿಕಾದ ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಸ್ಥೆಯೊಳಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗುತ್ತದೆ ಎಂದು ಹೇಳಿತ್ತು.

    ಅಮೆರಿಕ ನಿರ್ಬಂಧ ಹೇರಿದರೂ ಭಾರತ ಸೇರಿದಂತೆ ಒಟ್ಟು 8 ರಾಷ್ಟ್ರಗಳು ಇರಾನ್ ನಿಂದ ತೈಲ ಆಮದು ಮಾಡಿಕೊಳ್ಳಲು ಅಮೆರಿಕ ಒಪ್ಪಿಗೆ ನೀಡಿತ್ತು. ನಿರ್ಬಂಧದ ನಂತರವೂ ಇರಾನ್ ನಿಂದ ತೈಲ ಆಮದು ಮಾಡಿಕೊಳ್ಳಲು ಅವಕಾಶ ನೀಡಬೇಕು ಎಂದು ಭಾರತ ಮನವಿ ಮಾಡಿಕೊಂಡಿತ್ತು. ಈ ಮನವಿಯನ್ನು ಅಮೆರಿಕ ಪುರಸ್ಕರಿಸಿತ್ತು. ಒಂದು ವೇಳೆ ನಿರ್ಬಂಧ ವಿಧಿಸಿದರೆ ಭಾರತ ಬಹುಕೋಟಿ ರೂ. ರಕ್ಷಣಾ ಖರೀದಿಯಿಂದ ಹಿಂದೆ ಸರಿಯುವ ಸಾಧ್ಯತೆಯಿದೆ ಎಂದು ವಿಶ್ಲೇಷಣೆ ಕೇಳಿ ಬಂದಿತ್ತು.

    ಏನಿದು ಕಾಟ್ಸಾ?
    ರಕ್ಷಣಾ ಹಾಗೂ ಆರ್ಥಿಕ ಒಪ್ಪಂದಗಳನ್ನು ಭದ್ರಪಡಿಸಲು ಅಮೆರಿಕ ಕಾಟ್ಸಾ(ಕೌಂಟರಿಂಗ್ ಅಮೆರಿಕಾಸ್ ಅಡ್ವರ್ಸರೀಸ್ ಥ್ರೂ ಸ್ಯಾಂಕ್ಷನ್ಸ್ ಆಕ್ಟ್) ಕಾಯ್ದೆಯನ್ನು ತಂದಿದೆ. ವಿಶ್ವದ ದೊಡ್ಡಣ್ಣನಾಗಿರುವ ಅಮೆರಿಕ ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಜೊತೆ ಉತ್ತಮ ಬಾಂಧವ್ಯಕ್ಕಾಗಿ ದ್ವಿಪಕ್ಷೀಯ ಮಾತುಕತೆ ನಡೆಸುತ್ತದೆ. ದ್ವಿಪಕ್ಷೀಯ ಸಂಬಂಧ ಹೊಂದಿರುವ ದೇಶಗಳು ಅಮೆರಿಕ ನಿರ್ಬಂಧ ಹೇರಿದ ದೇಶಗಳೊಂದಿಗೆ ರಕ್ಷಣಾ ವ್ಯವಹಾರ ನಡೆಸಿದರೆ ಆ ದೇಶಗಳ ಮೇಲೆ ನಿರ್ಬಂಧ ಹೇರುವ ಅಧಿಕಾರ ಈ ಕಾಯ್ದೆಯಲ್ಲಿದೆ.

    https://www.youtube.com/watch?v=vgSCtOFIjWk

    https://www.youtube.com/watch?v=N6qmLtuOW5Q

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • Exclusive: ಸಾರಿಗೆ ಇಲಾಖೆಯ ಎಲೆಕ್ಟ್ರಿಕ್ ಬಸ್ ಖರೀದಿಗೆ ಬಿಗ್ ಫೈಟ್

    Exclusive: ಸಾರಿಗೆ ಇಲಾಖೆಯ ಎಲೆಕ್ಟ್ರಿಕ್ ಬಸ್ ಖರೀದಿಗೆ ಬಿಗ್ ಫೈಟ್

    ಬೆಂಗಳೂರು: ಕರ್ನಾಟಕ ಸಾರಿಗೆ ಸಂಸ್ಥೆಗೆ ಖರೀದಿ ಮಾಡಲು ಇಚ್ಛಿಸಿರುವ ಎಲೆಕ್ಟ್ರಿಟ್ ಬಸ್ ಸಂಸ್ಥೆಗೆ ಹೆಚ್ಚಿನ ನಷ್ಟ ಉಂಟಾಗುತ್ತದೆ ಎಂಬ ವರದಿಯ ಬಳಿಕವೂ ಸಾರಿಗೆ ಸಚಿವ ಡಿಸಿ ತಮ್ಮಣ್ಣ ಅವರು ಬಸ್ಸುಗಳ ಖರೀದಿಗೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರಿಗೆ ಸಚಿವರು ಹಾಗೂ ಎಂಡಿ ನಡುವೆ ಬಿಗ್ ಫೈಟ್‍ಗೆ ಕಾರಣವಾಗಿದೆ.

    ಸಾರಿಗೆ ಇಲಾಖೆ ಎಂಡಿ ಪೊನ್ನುರಾಜ್ ಎಲೆಕ್ಟ್ರಿಕ್ ಬಸ್ ಖರೀದಿ ಮಾಡುವುದರಿಂದ ಸಂಸ್ಥೆಗೆ ಉಂಟಾಗಬಹುದಾದ ನಷ್ಟದ ಕುರಿತು ಸಂಪೂರ್ಣ ವರದಿ ನೀಡಿದ್ದಾರೆ. ಇದರ ನಡುವೆಯೂ ಸದ್ಯ ಸಚಿವರು ಒಟ್ಟು 80 ಎಲೆಕ್ಟ್ರಿಕ್ ಬಸ್ ಖರೀದಿಗೆ ಮುಂದಾಗಿದ್ದಾರೆ. ಸಿಎಂ ಕುಮಾರಸ್ವಾಮಿ ಸಂಪುಟ ಸಚಿವರ ಈ ನಡೆ ಹಲವು ಅನುಮಾನಕ್ಕೆ ಕಾರಣವಾಗಿದ್ದು, ಬಸ್ ಖರೀದಿ ಹಿಂದೆ ಸಚಿವರ ಸ್ವ-ಹಿತಾಸಕ್ತಿ ಇದೆಯಾ ಎಂಬ ಅನುಮಾನಕ್ಕೆ ಕಾರಣವಾಗಿದೆ. ಸರ್ಕಾರ ಸದ್ಯ 126 ಕೋಟಿ ರೂ. ವೆಚ್ಚದಲ್ಲಿ 80 ಬಸ್‍ಗಳನ್ನ ಖರೀದಿಸಲು ಮುಂದಾಗಿದೆ ಎನ್ನಲಾಗಿದ್ದು, ಇದರಲ್ಲಿ 60 ಎಸಿ ಎಲೆಕ್ಟ್ರಿಕ್ ಬಸ್ ಹಾಗೂ ಉಳಿದಂತೆ 20 ನಾನ್ ಎಸಿ ಎಲೆಕ್ಟ್ರಿಕ್ ಬಸ್ ಖರೀದಿ ಸಿದ್ಧತೆ ನಡೆದಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ.

    ಸಾರಿಗೆ ಇಲಾಖೆ ನೇರ ಬಸ್ ಖರೀದಿ ಮಾಡುವುರಿಂದ ಸಂಸ್ಥೆಗೆ ಉಂಟಾಗಬಹುದಾದ ನಷ್ಟ ಕಾರಣಗಳನ್ನು ಎಂಡಿ ಪೊನ್ನುರಾಜ್ ಅವರು ವರದಿ ನೀಡಿದ್ದಾರೆ. ಸಾರಿಗೆ ಸಂಸ್ಥೆಗೆ ಎಲೆಕ್ಟ್ರಿಕ್ ಬಸ್ ಖರೀದಿ ಮಾಡುವುದಕ್ಕಿಂತ ಅವುಗಳನ್ನು ಲೀಸ್‍ಗೆ ಪಡೆದು ಮೊದಲು ಪ್ರಯೋಗ ನಡೆಸಲು ಎಂಡಿ ಸಲಹೆ ನೀಡಿದ್ದಾರೆ. ಕೇಂದ್ರ ಸರ್ಕಾರದ ಫೇಮ್ ಇಂಡಿಯಾ ಸ್ಕೀಮ್ ಅಡಿ ಮೆ|| ಗೋಲ್ಡ್ ಸ್ಟೋನ್ ಇನ್‍ಫ್ರಾಟೆಂಕ್ ಕಂಪೆನಿಯಿಂದ ಬಸ್ ಖರೀದಿಗೆ ಪ್ರಯತ್ನ ಮಾಡಲಾಗುತ್ತಿದೆ ಎನ್ನಲಾಗಿದೆ.

    ಎಲೆಕ್ಟ್ರಿಕ್ ಬಸ್ ಯಾಕೆ ಬೇಡ?
    ಒಂದು ಎಲೆಕ್ಟ್ರಿಕ್ ಬಸ್‍ನ ಒಟ್ಟಾರೆ ವೆಚ್ಚದ ಶೇ. 60 ರಷ್ಟು ಮೌಲ್ಯ ಬ್ಯಾಟರಿ ಒಂದೇ ಹೊಂದಿರುತ್ತದೆ. ಈ ಬಸ್ಸುಗಳಲ್ಲಿ ಆಳವಡಿಸಿರುವ ಬ್ಯಾಟರಿಗಳನ್ನು ಐದು ವರ್ಷಕ್ಕೆ ಒಮ್ಮೆ ಬದಲಾವಣೆ ಮಾಡಬೇಕು. ಇದರಿಂದ ಬಸ್ಸುಗಳ ನಿರ್ವಹಣೆ ಅಧಿಕ ಆಗಲಿದೆ. ಅಲ್ಲದೇ ಒಂದೊಮ್ಮೆ ಎಲೆಕ್ಟ್ರಿಕ್ ಬಸ್‍ನ ಬ್ಯಾಟರಿ ಹಾಳಾದರೆ ಇಡೀ ಬಸ್ ಹಾಳಾಗುತ್ತದೆ. ಇದರಿಂದ ಒಂದು ಬಸ್ ಮೇಲೆ ಹೂಡಿಕೆ ಮಾಡಿರುವ ಮೊತ್ತ ಸಂಪೂರ್ಣ ನಷ್ಟವಾಗಲಿದೆ. ಬಸ್ಸಿನಲ್ಲಿ ಬಳಸುವ ಬ್ಯಾಟರಿಯನ್ನು ಲೀಥಿಯಂ ಎಂಬ ಮೆಟಲ್ ನಿಂದ ತಯಾರು ಮಾಡುತ್ತಾರೆ. ಈ ಲೀಥಿಯಂ ನಿಕ್ಷೇಪ ಭಾರತದಲ್ಲಿ ಕಡಿಮೆ ಇರುವುದರಿಂದ ಅದರ ಬೆಲೆಯೂ ಅಧಿಕವಾಗಿದೆ. ಆದರೆ ಚೀನಾದಲ್ಲಿ ಈ ಎಲೆಕ್ಟ್ರಿಕ್ ಬಸ್ ಸೇವೆ ಯಶಸ್ವಿಯಾಗಿದ್ದು, ಆದರೆ ಅಲ್ಲಿ ಲೀಥಿಯಂ ನಿಕ್ಷೇಪ ಹೆಚ್ಚಾಗಿರುವುದರಿಂದ ಅವರಿಗೆ ಅನುಕೂಲ ಆಗಿದೆ ಎಂಬ ಅಂಶ ಮುಂದಿಟ್ಟಿದ್ದಾರೆ.

    ಕಳೆದ ಕೆಲ ದಿನಗಳ ಹಿಂದೆಯಷ್ಟೇ ಡೀಸೆಲ್ ಬೆಲೆ ಹೆಚ್ಚಾಗಿದೆ ಎಂಬ ಅಂಶದ ಮೇಲೆ ಟಿಕೆಟ್ ದರ ಹೆಚ್ಚಳ ಮಾಡಲು ಸಾರಿಗೆ ಇಲಾಖೆ ಮುಂದಾಗಿತ್ತು. ಸದ್ಯ ಸುಮಾರು 126 ಕೋಟಿ ರೂಪಾಯಿ ಖರ್ಚು ಮಾಡಿ ಎಲೆಕ್ಟ್ರಿಕ್ ಬಸ್ ಖರೀದಿ ಮಾಡಲಿ ಚಿಂತನೆ ನಡೆಸಿದೆ. ಆದರೆ ಈ ಹಿಂದೆ ಸಾರಿಗೆ ಸಚಿವರಾಗಿದ್ದ ರಾಮಲಿಂಗಾ ರೆಡ್ಡಿ ಅವರು ಎಲೆಕ್ಟ್ರಿಕ್ ಬಸ್ ಖರೀದಿ ಮಾಡಲು ನಿರಾಕರಿಸಿದ್ದರು. ಅಲ್ಲದೇ ಬಸ್ಸುಗಳ ನಿರ್ವಹಣೆ ಅಧಿಕ ವೆಚ್ಚವಾಗುತ್ತದೆ ಎಂಬ ಕಾರಣ ಮುಂದಿಟ್ಟಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=amPQtHkZIq0

  • 9 ವರ್ಷದ ಬಳಿಕ 8.46 ಟನ್ ಚಿನ್ನ ಖರೀದಿಸಿದ ಆರ್‌ಬಿಐ

    9 ವರ್ಷದ ಬಳಿಕ 8.46 ಟನ್ ಚಿನ್ನ ಖರೀದಿಸಿದ ಆರ್‌ಬಿಐ

    ಮುಂಬೈ: ದೇಶದ ಆರ್ಥಿಕತೆಯನ್ನು ಮತ್ತಷ್ಟು ಸದೃಢಗೊಳಿಸುವ ಉದ್ದೇಶದಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) 9 ವರ್ಷಗಳ ಬಳಿಕ ಸುಮಾರು 8.46 ಮೆಟ್ರಿಕ್ ಟನ್ ಚಿನ್ನ ಖರೀದಿಸಿದೆ.

    ಜೂನ್ 30ಕ್ಕೆ ಅಂತಿಮವಾದ 2017-18 ಆರ್ಥಿಕ ವರ್ಷದ ವರದಿಯಲ್ಲಿ ನೀಡಿರುವ ಮಾಹಿತಿಯಂತೆ ಸದ್ಯ ಖರೀದಿಸುವ ಚಿನ್ನದೊಂದಿಗೆ ಆರ್‌ಬಿಐ ಬಳಿ ಇರುವ ಚಿನ್ನದ ಪ್ರಮಾಣ 566.23 ಮೆಟ್ರಿಕ್ ಟನ್‍ಗೆ ಏರಿಕೆಯಾಗಿದೆ.

    2009 ನವೆಂಬರ್ ನಲ್ಲಿ 200 ಮೆಟ್ರಿಕ್ ಟನ್ ಚಿನ್ನವನ್ನು ಅಂತರಾಷ್ಟ್ರಿಯ ಹಣಕಾಸು ನಿಧಿ (ಐಎಂಎಫ್)ನಿಂದ ಖರೀದಿ ಮಾಡಲಾಗಿತ್ತು. ಬಳಿಕ ಕಳೆದ 9 ವರ್ಷಗಳಿಂದ ಯಾವುದೇ ಖರೀದಿ ನಡೆದಿರಲಿಲ್ಲ. ಸದ್ಯ ಆರ್‌ಬಿಐ ಚಿನ್ನ ಖರೀದಿ ಮಾಡುವ ಮೂಲಕ ದೇಶದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ ಎಂದು ಸಾಬೀತು ಪಡಿಸಿದೆ.

    ಉಳಿದಂತೆ ಭಾರತದ ಆರ್‌ಬಿಐ ಬಳಿ ಇರುವ ಚಿನ್ನ ಸಂಗ್ರಹದಲ್ಲಿ 292.30 ಟನ್ ಚಿನ್ನವನ್ನು ಮುದ್ರಿಸಿರುವ ನೋಟುಗಳಿಗಾಗಿ ಮೀಸಲಿಡಲಾಗಿದೆ. 273.3 ಟನ್ ಚಿನ್ನ ಬ್ಯಾಂಕಿಂಗ್ ವಿಭಾಗಕ್ಕೆ ಎಂದು ವಿಂಗಡಿಸಲಾಗಿದೆ.

    ಯಾವ ದೇಶದಲ್ಲಿ ಎಷ್ಟು ಚಿನ್ನವಿದೆ?
    ಹಲವು ರಾಷ್ಟ್ರಗಳು ತಮ್ಮ ದೇಶದ ಆರ್ಥಿಕ ಪರಿಸ್ಥಿತಿಯನ್ನು ಸದೃಢಗೊಳಸಿಲು ಹಾಗೂ ತುರ್ತು ಆರ್ಥಿಕ ಸಂದರ್ಭಗಳನ್ನು ಎದುರಿಸಲು ಚಿನ್ನ ಸಂಗ್ರಹಣೆ ಮಾಡುತ್ತದೆ. ಇನ್ನು ಸಂಗ್ರಹಣ ಪ್ರಮಾಣದಂತೆ ಹೇಳುವುದಾದರೆ ವಿಶ್ವದಲ್ಲಿ ಭಾರತ 10ನೇ ಅತಿದೊಡ್ಡ ದೇಶವಾಗಿದೆ. ಅತಿ ಹೆಚ್ಚು ಚಿನ್ನ ಸಂಗ್ರಹಿಸಿದ ರಾಷ್ಟಗಳ ಪಟ್ಟಿಯಲ್ಲಿ ಅಮೆರಿಕ (8,133 ಟನ್), ಜರ್ಮನಿ (3,371), ಇಟಲಿ (2,451), ಫ್ರಾನ್ಸ್ (2,436), ರಷ್ಯಾ (1,909), ಚೀನಾ (1,842), ಸ್ವಿಜರ್ಲೆಂಡ್ (1,040), ಜಪಾನ್ (7,650), ಭಾರತ (566) ಟನ್ ಚಿನ್ನ ಸಂಗ್ರಹಿಸಿದೆ.

    ಚಿನ್ನದ ಖರೀದಿಯ ಉದ್ದೇಶವೇನು?
    ಬಹುತೇಕ ರಾಷ್ಟ್ರಗಳು ತಮ್ಮ ವಿದೇಶಿ ವಿನಿಮಯ ಸಂಗ್ರಹವನ್ನು ನಿಯಮಿತವಾಗಿ ಕಾಯ್ದುಕೊಳ್ಳುತ್ತಿರುತ್ತದೆ. ಚಿನ್ನ, ಹಣ ಅಥವಾ ಹೂಡಿಕೆ ರೂಪದಲ್ಲಿ ವಿದೇಶಿ ವಿನಿಮಯ ಸಂಗ್ರಹ ಮಾಡಲಾಗುತ್ತದೆ. ರೂಪಾಯಿ ಮೌಲ್ಯ ಕುಸಿತವಾದಾಗ ಅಥವಾ ಆರ್ಥಿಕ ಸಂಕಷ್ಟ ಬಂದಾಗ ಚಿನ್ನವನ್ನು ಒತ್ತೆಯಿಟ್ಟು ಹಣವನ್ನು ತರಲಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv