Tag: by elction

  • ದರ್ಶನ್ ರೋಡ್ ಶೋನಲ್ಲಿ ನಟಿ ಅಮೂಲ್ಯ ಜಗದೀಶ್ ಭಾಗಿ

    ದರ್ಶನ್ ರೋಡ್ ಶೋನಲ್ಲಿ ನಟಿ ಅಮೂಲ್ಯ ಜಗದೀಶ್ ಭಾಗಿ

    ಬೆಂಗಳೂರು: ಉಪಕದನ ಕಣ ರಂಗೇರುತ್ತಿದ್ದು, ಇಂದು ಆರ್‍ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಖಾಡಕ್ಕಿಳಿದಿದ್ದಾರೆ.

    ರೋಡ್ ಶೋ ಆರಂಭ ಮಾಡಿದಾಗ ಅಭಿಮಾನಿಗಳು ದರ್ಶನ್ ಗೆ ಹೂವಿನ ಸ್ವಾಗತ ಕೋರಿದರು. ಅಲ್ಲದೆ ಬಿಜೆಪಿ ಹಾಗೂ ದರ್ಶನ್ ಪರ ಘೋಷಣೆಗಳನ್ನು ಕೂಗಿದರು. ದರ್ಶನ್ ಹಾಗೂ ಮುನಿರತ್ನಗೆ ರಾಕ್‍ಲೈನ್ ವೆಂಕಟೇಶ್, ತೇಜಸ್ವಿನಿ ಗೌಡ ಸಾಥ್ ನೀಡಿದರು.

    ಇತ್ತ ನಟಿ ಅಮೂಲ್ಯ ಅವರು ತಮ್ಮ ಪತಿ ಜಗದೀಶ್ ಜೊತೆ ರೋಡ್ ಶೋನಲ್ಲಿ ಭಾಗವಹಿಸಿದ್ದಾರೆ. ಅಮೂಲ್ಯ ಮೇಲೂ ಹೋವಿನ ಸುರಿಮಳೆಗೈದು ಅಭಿಮಾನಿಗಳು ಪ್ರಚಾರಕ್ಕೆ ಬರಮಾಡಿಕೊಂಡರು.

    ಯಶವಂತಪುರ ವಾರ್ಡ್ ನ ಪ್ರಮುಖ ಬೀದಿಗಳಲ್ಲಿ ದರ್ಶನ್ ರೋಡ್ ಶೋ ಮಾಡುತ್ತಿದ್ದಾರೆ. ಸಾರಥಿಯ ನೋಡಲು ಜನ ಮನೆ, ಕಟ್ಟಡಗಳ ಮೇಲೆ ನಿಂತಿದ್ದಾರೆ. ಅಲ್ಲದೆ ದರ್ಶನ್ ಗೆ ಜೈಕಾರ, ಹೂ ಎರಚಿ ಅಭಿಮಾನ ಮೆರೆಯುತ್ತಿದ್ದಾರೆ.

    ಪ್ರಚಾರಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ದರ್ಶನ್, ಮುನಿರತ್ನ ಅವರು ಕೊರೊನಾ ಲಾಕ್ ಡೌನ್ ಸಮಯದಲ್ಲಿ ಕ್ಷೇತ್ರದ ಜನತೆಗೆ ದಿನಸಿ ವಿತರಿಸುವ ಮೂಲಕ ಸಾಕಷ್ಟು ಸಹಾಯ ಮಾಡಿದ್ದಾರೆ. ಹೀಗಾಗಿ ಮಾನವೀಯತೆಯ ದೃಷ್ಟಿಯಿಂದ ನಾನು ಅವರ ಪರ ಪ್ರಚಾರಕ್ಕೆ ತೆರಳುತ್ತಿದೇನೆ. ಮುನಿರತ್ನ ಬೆಂಬಲಿಸಲು ಅವರು ಮಾಡಿರುವ ಸಹಾಯವೇ ಸಾಕು. ಅವರು ಕರೆದಲ್ಲಿಗೆ ಹೋಗಿ ಪ್ರಚಾರ ಮಾಡ್ತೀನಿ. ಅವರು ನನ್ನ ಅತ್ಯಂತ ಆಪ್ತರು. ಸಂಕಷ್ಟಕ್ಕೆ ನಿಂತವರ ಪರ ಪ್ರಚಾರಕ್ಕೆ ಹೋಗುತ್ತಿದ್ದೇನೆ ಎಂದರು.

  • ರಂಗೇರಲಿದೆ ಮಿನಿ ಕುರುಕ್ಷೇತ್ರ – ಮುನಿರತ್ನ ಪರ ಧೂಳೆಬ್ಬಿಸ್ತಾರಾ ಸಾರಥಿ?

    ರಂಗೇರಲಿದೆ ಮಿನಿ ಕುರುಕ್ಷೇತ್ರ – ಮುನಿರತ್ನ ಪರ ಧೂಳೆಬ್ಬಿಸ್ತಾರಾ ಸಾರಥಿ?

    ಬೆಂಗಳೂರು: ಆರ್.ಆರ್ ನಗರ ಕ್ಚೇತ್ರದ ಉಪಚುನಾವಣೆ ಪ್ರಚಾರ ಕಣ ಕ್ಲೈಮಾಕ್ಸ್ ಗೆ ಬರ್ತಿದೆ. ಕ್ಲೈಮಾಕ್ಸ್ ನಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ಕಣಕ್ಕೆ ಧುಮುಕಲಿದ್ದಾರೆ. ಈ ಮೂಲಕ ಆರ್ ಆರ್ ನಗರದಲ್ಲಿ ಸಾರಥಿ ಧೂಳೆಬ್ಬಿಸ್ತಾರೆ ಎನ್ನಲಾಗ್ತಿದೆ.

    ಸ್ಯಾಂಡಲ್‍ವುಡ್‍ನ ಚಾಲೆಜಿಂಗ್ ಸ್ಟಾರ್ ದರ್ಶನ್, ಕನ್ನಡದ ಸೂಪರ್ ಸ್ಟಾರ್  ಹಾಗೂ ಅಪಾರ ಅಭಿಮಾನಿಗಳನ್ನು ಹೊಂದಿರೋ ಯಜಮಾನ ಎರಡು ವರ್ಷಗಳ ಹಿಂದೆ ಇದೇ ದಾಸ ಮಂಡ್ಯ ಎಲೆಕ್ಷನ್‍ನಲ್ಲಿ ಮಿಂಚಿದ್ದನ್ನು ಯಾರೂ ಮರೆಯಂಗೇ ಇಲ್ಲ. ತಮ್ಮ ಮದರ್ ಇಂಡಿಯಾ ಸುಮಲತಾ ಅಂಬರೀಶ್ ಪರ ದರ್ಶನ್ ಮಂಡ್ಯದಲ್ಲಿ ಕ್ಯಾಂಪೇನ್ ಮಾಡಿದ್ದರು. ಅಂದಿನ ಮೈತ್ರಿ ಸರ್ಕಾರದ ಘಟಾನುಘಟಿ ನಾಯಕರಿಗೆ ಸಿನಿಮಾ ಸ್ಟೈಲ್‍ನಲ್ಲೇ ಟಾಂಗ್ ಕೊಟ್ಟಿದ್ರು.

    ಅಂದು ಚಂದನವನದ ಯಜಮಾನನಿಗೆ ಜೊತೆಯಾಗಿದ್ದು ರಾಕಿಂಗ್ ಸ್ಟಾರ್ ಯಶ್. ಜೋಡೆತ್ತು ಅಂತಲೇ ಕರೆಸಿಕೊಂಡಿದ್ದ ಜೋಡಿ, ಸಕ್ಕರೆನಾಡಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಮತಬೇಟೆ ನಡೆಸಿದ್ದರು. ದರ್ಶನ್ ಖದರ್‍ಗೆ ಮೆಚ್ಚಿದ ಮಂಡ್ಯದ ಜನ ಸಿನಿಮಾವನ್ನು ಅಂಡ್ರೆಡ್ ಡೇಸ್ ಓಡಿಸಿದಂತೆ ಸುಮಲತಾರಿಗೆ ವೋಟು ಹಾಕಿದ್ದರು. ಸುಮಲತಾರನ್ನು ಎಂಪಿ ಮಾಡೋವರೆಗೂ ದರ್ಶನ್ ವಿರಮಿಸಲೇ ಇಲ್ಲ.

    ಮಿನಿ ಕುರುಕ್ಷೇತ್ರದಲ್ಲಿ ಸುಯೋಧನ:
    ಈಗ ರಾಜ್ಯದಲ್ಲಿ ಬೈ ಎಲೆಕ್ಷನ್ ಬಂದಿದೆ. ಅದ್ರಲ್ಲೂ ದರ್ಶನ್ ಹಾಕಿಕೊಂಡು ಬಹುಕೋಟಿ ಸಿನಿಮಾ ಕುರುಕ್ಷೇತ್ರ ನಿರ್ಮಿಸಿದ್ದ ಮುನಿರತ್ನ ಚುನಾವಣೆಗೆ ನಿಂತಿದ್ದಾರೆ. ದರ್ಶನ್ ಮನೆ ಸಹ ಆರ್.ಆರ್ ನಗರದಲ್ಲೇ ಇದೆ. ಮುನಿರತ್ನ ಕೂಡ ದರ್ಶನ್ ಆಪ್ತರಲ್ಲಿ ಒಬ್ಬರಾಗಿದ್ದು ಚುನಾವಣಾ ಪ್ರಚಾರಕ್ಕೆ ಗಜ ಬರ್ತಾರೆ ಎನ್ನಲಾಗ್ತಿದೆ.

    ಅಂದು ಮಂಡ್ಯದಲ್ಲಿ ಇರುವಂತೆ ಆರ್.ಆರ್ ನಗರ ಕ್ಷೇತ್ರದಲ್ಲೂ ನಿಖಿಲ್ ಕುಮಾರಸ್ವಾಮಿ ಕಾಣಿಸಿಕೊಂಡು ಜೆಡಿಎಸ್ ಅಭ್ಯರ್ಥಿ ಪರ ಒಂದು ಸುತ್ತು ಕ್ಯಾಂಪೇನ್ ಮಾಡಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಜೆಪಿ ಹುರಿಯಾಳು ಮುನಿರತ್ನ ಪರ ಪ್ರಚಾರದ ಅಖಾಡಕ್ಕೆ ಧುಮುಕುತ್ತಾರೆ ಎನ್ನಲಾಗ್ತಿದೆ. ಮಿನಿ ಕುರುಕ್ಷೇತ್ರದ ರಣಕಣದಲ್ಲಿ ಮತ್ತೆ ಸುಯೋಧನ-ಅಭಿಮನ್ಯು ಮುಖಾಮುಖಿ ಆಗ್ತಾರಾ..? ಸಿನಿಮಾದ ಸೀನ್ ರಿಪೀಟ್ ಆಗುತ್ತಾ ಅಂತ ಅಭಿಮಾನಿಗಳು ಕಾಯ್ತಿದ್ದಾರೆ.

    ಆರ್.ಆರ್.ನಗರ ಕುರುಕ್ಷೇತ್ರದಲ್ಲಿ ಈಗಾಗಲೇ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟಿಯರಾದ ಖುಷ್ಬೂ, ತಾರಾ ಕ್ಯಾಂಪೇನ್ ಮಾಡಿದ್ದಾರೆ. ದರ್ಶನ್ ಸಹ ಪ್ರಚಾರಕ್ಕಿಳಿದ್ರೆ ಚುನಾವಣಾ ಕಣ ರಂಗೇರಲಿದೆ.