Tag: by election

  • ಉಪಚುನಾವಣೆ ಟಿಕೆಟ್‍ಗೆ ಲಾಬಿ – ಮನೋಹರ್ ತಹಶೀಲ್ದಾರ್ ಭೇಟಿಗೆ ಒಪ್ಪದ ಸಿದ್ದರಾಮಯ್ಯ

    ಉಪಚುನಾವಣೆ ಟಿಕೆಟ್‍ಗೆ ಲಾಬಿ – ಮನೋಹರ್ ತಹಶೀಲ್ದಾರ್ ಭೇಟಿಗೆ ಒಪ್ಪದ ಸಿದ್ದರಾಮಯ್ಯ

    – ಆರ್‍ಎಸ್‍ಎಸ್ ಜೊತೆ ಸಿಎಂ ಬೊಮ್ಮಾಯಿ ಚರ್ಚೆ

    ಬೆಂಗಳೂರು: ಹಾನಗಲ್, ಸಿಂದಗಿ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ ಬೆನ್ನಲ್ಲೇ ಬಿಜೆಪಿ, ಕಾಂಗ್ರೆಸ್‍ನಲ್ಲಿ ಟಿಕೆಟ್ ಲಾಬಿ ಜೋರಾಗಿದೆ. ಕಾಂಗ್ರೆಸ್‍ನಲ್ಲಿ ಟಿಕೆಟ್ ಘೋಷಣೆಗೂ ಮೊದಲೇ ಬಂಡಾಯದ ಕೂಗು ಎದ್ದಿದೆ.

    ಇಂದು ಬೆಳಗ್ಗೆ ತಮ್ಮ ಮನೆಗೆ ಬಂದ ಟಿಕೆಟ್ ಆಕಾಂಕ್ಷಿ, ಮಾಜಿ ಶಾಸಕ ಮನೋಹರ್ ತಹಶೀಲ್ದಾರ್ ರನ್ನು ಸಿದ್ದರಾಮಯ್ಯ ಭೇಟಿ ಮಾಡದೇ ವಾಪಸ್ ಕಳಿಸಿದ್ದಾರೆ. ಇದರಿಂದ ಫುಲ್ ಗರಂ ಆಗಿರುವ ಮನೋಹರ್ ತಹಶೀಲ್ದಾರ್, ನಮ್ಮ ಕ್ಷೇತ್ರದ ಯಾರಿಗೆ ಟಿಕೆಟ್ ಕೊಟ್ರೂ ಓಕೆ.. ಆದರೆ ಹೊರಗಿನ ಶ್ರೀನಿವಾಸ್ ಮಾನೆಗೆ ಟಿಕೆಟ್ ಕೊಟ್ರೆ ಮಾತ್ರ ಸುಮ್ಮನಿರಲ್ಲ. ಯಾಕೆ ನಮ್ಮ ಕ್ಷೇತ್ರದಲ್ಲಿ ನಾವು ಗಂಡಸರಲ್ವಾ ಎಂದು ಪಕ್ಷದ ನಾಯಕರನ್ನು ಪ್ರಶ್ನೆ ಮಾಡಿದ್ದಾರೆ.

    ಈ ಮಧ್ಯೆ ಇಂದು ಕೇಶವಕೃಪಾಗೆ ಭೇಟಿ ನೀಡಿದ್ದ ಸಿಎಂ, ಉಪಚುನಾವಣೆ ಸಂಬಂಧ ಸಂಘಪರಿವಾರದ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ. ಕಳೆದ ರಾತ್ರಿ ಮುಖ್ಯಮಂತ್ರಿಗಳನ್ನು ಸಂಸದ ಶಿವಕುಮಾರ್ ಉದಾಸಿ ಭೇಟಿ ಮಾಡಿ ಚರ್ಚೆ ನಡೆಸಿದ್ರು. ಸಿಂದಗಿ ಟಿಕೆಟ್ ಆಕಾಂಕ್ಷಿ ರಮೇಶ್ ಭೂಸನೂರು, ಮಾಜಿ ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿದ್ದಾರೆ. ಇನ್ನು 2ದಿನದಲ್ಲಿ ಸಂಭಾವ್ಯರ ಪಟ್ಟಿ ಹೈಕಮಾಂಡ್‍ಗೆ ಕಳಿಸಿಕೊಡ್ತೀವಿ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಹೇಳಿದ್ದಾರೆ.

  • ಹಾನಗಲ್ ಉಪಚುನಾವಣೆ- ಟಿಕೆಟ್‍ಗಾಗಿ ಬಿಜೆಪಿ, ಕಾಂಗ್ರೆಸ್ ಆಕಾಂಕ್ಷಿಗಳು ತೆರೆಮರೆಯ ಕಸರತ್ತು

    ಹಾನಗಲ್ ಉಪಚುನಾವಣೆ- ಟಿಕೆಟ್‍ಗಾಗಿ ಬಿಜೆಪಿ, ಕಾಂಗ್ರೆಸ್ ಆಕಾಂಕ್ಷಿಗಳು ತೆರೆಮರೆಯ ಕಸರತ್ತು

    ಹಾವೇರಿ: ಮಾಜಿ ಸಚಿವ ಹಾಗೂ ಶಾಸಕ ಸಿ.ಎಂ.ಉದಾಸಿ ನಿಧನದಿಂದ ತೆರವಾಗಿದ್ದ ಹಾನಗಲ್ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಆಗಿದೆ. ಇದರ ಬೆನ್ನಲ್ಲೇ ಇದೀಗ ಎರಡೂ ರಾಷ್ಟ್ರೀಯ ಪಕ್ಷಗಳ ಟಿಕೆಟ್ ಆಕಾಂಕ್ಷಿಗಳು ತೆರೆಮರೆಯ ಪ್ರಯತ್ನ ನಡೆದಿದ್ದಾರೆ.

    ಬಿಜೆಪಿ ಮತ್ತು ಕಾಂಗ್ರೆಸ್ ನಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದೆ. ಟಿಕೆಟ್‍ಗಾಗಿ ತೆರೆಮರೆಯಲ್ಲೇ ಕಸರತ್ತು ನಡೆಸಿದ್ದಾರೆ. ಕಾಂಗ್ರೆಸ್ ನಲ್ಲಿ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಮಾಜಿ ಸಚಿವ ಮನೋಹರ ತಹಶೀಲ್ದಾರ, ಪ್ರಕಾಶಗೌಡ ಪಾಟೀಲ್, ಸೋಮಶೇಖರ ಕೋತಂಬ್ರಿ, ಬಿ.ಕೆ.ಮೋಹನಕುಮಾರ್ ಸೇರಿದಂತೆ ಹಲವರು ಟಿಕೆಟ್‍ಗಾಗಿ ಕಸರತ್ತು ನಡೆಸಿದ್ದಾರೆ. ಇದನ್ನೂ ಓದಿ: ಅವಧಿಗೂ ಮುನ್ನವೇ ಪೂರ್ಣಗೊಳ್ಳಲಿದೆ ಏಷ್ಯಾದ ಉದ್ದ ಸುರಂಗ ರಸ್ತೆ

    ಬಿಜೆಪಿ ಪಕ್ಷದಲ್ಲಿಯೂ ಸಂಸದ ಶಿವಕುಮಾರ ಉದಾಸಿ ಪತ್ನಿ ರೇವತಿ ಉದಾಸಿ, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಕೃಷ್ಣ ಈಳಿಗೇರ, ಮಾಜಿ ಶಾಸಕ ಶಿವರಾಜ ಸಜ್ಜನ ಸೇರಿದಂತೆ ಹಲವರು ಟಿಕೆಟ್ ಗಾಗಿ ತಮ್ಮ ನಾಯಕರ ಮೂಲಕ ಕಸರತ್ತು ನಡೆಸಿದ್ದಾರೆ. ಈಗಾಗಲೇ ಜೆಡಿಎಸ್ ತಮ್ಮ ಅಭ್ಯರ್ಥಿಯಾಗಿ ನಿಯಾಜ್ ಶೇಖ್ ಹೆಸರು ಘೋಷಣೆ ಮಾಡಿದೆ. ಆದರೆ ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಿಂದ ಯಾರಿಗೆ ಟಿಕೆಟ್ ಸಿಗುತ್ತೆ ಎಂಬುದನ್ನು ಕಾದುನೋಡಬೇಕಾಗಿದೆ.

  • ಕೆಪಿಸಿಸಿ ಕಾರ್ಯಧ್ಯಕ್ಷರ ಮುಂದೆಯೇ ಟಿಕೆಟ್ ಗಾಗಿ ಕೈ, ಕೈ ಮಿಲಾಯಿಸಿದ ಕೈ ಕಾರ್ಯಕರ್ತರು

    ಕೆಪಿಸಿಸಿ ಕಾರ್ಯಧ್ಯಕ್ಷರ ಮುಂದೆಯೇ ಟಿಕೆಟ್ ಗಾಗಿ ಕೈ, ಕೈ ಮಿಲಾಯಿಸಿದ ಕೈ ಕಾರ್ಯಕರ್ತರು

    ಹಾವೇರಿ: ಮಾಜಿ ಸಚಿವ ಹಾಲಿ ಶಾಸಕರಾಗಿದ್ದ ಸಿ.ಎಂ ಉದಾಸಿ ನಿಧನದಿಂದ ತೆರವಾಗಿರುಗಿ ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಸದ್ಯದಲ್ಲಿ ಉಪ ಚುನಾವಣೆ ನಡೆಯಲಿದೆ. ಈ ನಡುವೆ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಫೈಟ್ ತಾರಕ್ಕಕ್ಕೆ ಏರಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷರ ಸಮ್ಮುಖದಲ್ಲಿ ಮನೋಹರ್ ಹಾಗೂ ಶ್ರೀನಿವಾಸ ಮಾನೆ ಬೆಂಬಲಿಗರು ಕೈ, ಕೈ ಮಿಲಾಯಿಸಿದ್ದ ಘಟನೆ ಹಾವೇರಿಯಲ್ಲಿ ನಡೆದಿದೆ.

    ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ನಡೆಯುವ ಪ್ರತಿಭಟನೆಯ ಮುಂದಾಳತ್ವ ವಹಿಸಲು ಆಗಮಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸಮ್ಮುಖದಲ್ಲಿ ಹಾನಗಲ್ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ತಮ್ಮ ನಾಯಕರಿಗೆ ಟಿಕೆಟ್ ನೀಡುವಂತೆ ವರಿಷ್ಠ ಸಲೀಂ ಅಹ್ಮದ್ ಅವರಿಗೆ ಮನವರಿಕೆ ಮಾಡಿಕೊಳ್ಳಲು ಮುಂದಾದ ಸಮಯದಲ್ಲಿ ಆರೋಪ-ಪ್ರತ್ಯಾರೋಪ ತಾರಕಕ್ಕೆ ಏರಿ ಹೊಡೆದಾಟ ಆರಂಭವಾಗಿದೆ.

    ಕಾಂಗ್ರೆಸ್ ಆಂತರಿಕ ಸಭೆಯಲ್ಲಿ ಹಾನಗಲ್ ತಾಲೂಕಿನಲ್ಲಿ ನಡೆಯುವ ಉಪಚುನಾವಣೆಯ ಟಿಕೆಟ್ ವಿಷಯ ಪ್ರಸ್ತಾಪವಾಗುತ್ತಿದ್ದಂತೆ ಉಭಯ ನಾಯಕರಗಳ ಬೆಂಬಲಿಗರು ತಮ್ಮ ತಮ್ಮ ನಾಯಕರ ಬೆಂಬಲಿಸಿ ಮಾತಿನ ಚಕಮಕಿ ನಡೆಯಿತು. ಈ ಸಮಯದಲ್ಲಿ ಮಧ್ಯ ಪ್ರವೇಶ ಮಾಡಿದ ಜಿಲ್ಲಾಮಟ್ಟದ ನಾಯಕರು ಎರಡು ಗುಂಪಿನ ಕಾರ್ಯಕರ್ತರನ್ನು ಹೊರ ಕಳುಹಿಸಿದರು. ಬಳಿಕ ಮಾನೆ ಬೆಂಬಲಿಗರು ಖಾಸಗಿ ಹೋಟೆಲ್ ನಲ್ಲಿ ಉಪಹಾರ ಸೇವಿಸಿ ಸಭೆ ನಡೆಸಿದರು. ಮನೋಹರ ಬೆಂಬಗಲಿಗರು ಪ್ರವಾಸಿ ಮಂದಿರದಲ್ಲಿ ಪ್ರತ್ಯೇಕ ಸಭೆ ನಡೆಸಿದರು. ಇದನ್ನೂ ಓದಿ: ಉಪಚುನಾವಣೆ ಘೋಷಣೆಗೂ ಮುನ್ನವೇ ಕಾಂಗ್ರೆಸ್ ನಲ್ಲಿ ಟಿಕೆಟ್ ಫೈಟ್

    ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ನಾಯಕರು ಸಮ್ಮುಖದಲ್ಲಿ ಉಭಯ ನಾಯಕರ ತಲಾ ಹತ್ತು- ಹತ್ತು ಜನರು ಅಭಿಪ್ರಾಯ ಸಂಗ್ರಹಿಸಿದರು. ಚುನಾವಣೆ ಆಯೋಗ ಇನ್ನೂ ಚುನಾವಣೆ ಘೋಷಣೆ ಮಾಡಿಲ್ಲ. ಅದಾಗಲೇ ಕಾಂಗ್ರೆಸ್ ನಲ್ಲಿ ಟಿಕೆಟ್ ಫೈಟ್ ತಾರಕ್ಕಕ್ಕೆ ಏರಿದೆ.

  • ಉಪಚುನಾವಣೆ ಘೋಷಣೆಗೂ ಮುನ್ನವೇ ಕಾಂಗ್ರೆಸ್ ನಲ್ಲಿ ಟಿಕೆಟ್ ಫೈಟ್

    ಉಪಚುನಾವಣೆ ಘೋಷಣೆಗೂ ಮುನ್ನವೇ ಕಾಂಗ್ರೆಸ್ ನಲ್ಲಿ ಟಿಕೆಟ್ ಫೈಟ್

    ಹಾವೇರಿ: ಬಿಜೆಪಿ ಶಾಸಕ ಸಿ.ಎಂ ಉದಾಸಿ ನಿಧನದಿಂದ ತೆರವಾಗಿರುವ ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಘೋಷಣೆಗೂ ಮುನ್ನವೇ ಕಾಂಗ್ರೆಸ್ ನಲ್ಲಿ ಟಿಕೆಟ್ ಫೈಟ್ ಶುರುವಾಗಿದೆ. ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನೇತೃತ್ವದಲ್ಲಿ ಕೆಲವು ಕಾಂಗ್ರೆಸ್ ಕಾರ್ಯರ್ತರು ಮತ್ತು ಮುಖಂಡರ ನಿನ್ನೆ ಸಭೆ ನಡೆಸಿದ್ದಾರೆ.

    ಹಾನಗಲ್ ತಾಲೂಕಿನವರಿಗೆ ಪಕ್ಷದ ಟಿಕೆಟ್ ನೀಡುವಂತೆ ಸಭೆಯಲ್ಲಿ ಒತ್ತಾಯ ಮಾಡಿದ್ದು, ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆಗೆ ಪಕ್ಷದ ಟಿಕೆಟ್ ನೀಡದಂತೆ ಪರೋಕ್ಷವಾಗಿ ಒತ್ತಾಯ ಕೇಳಿಬಂದಿದೆ. ಹಾನಗಲ್ ತಾಲೂಕಿನ ಯಾರಿಗಾದರೂ ಟಿಕೆಟ್ ನೀಡುವಂತೆ ಗ್ರಾಮ ಮಟ್ಟದಿಂದ ಹೋರಾಟ ಮಾಡಲು ನಿರ್ಧಾರ ಮಾಡಿದ್ದಾರೆ. ತಾಲೂಕಿನವರನ್ನು ಬಿಟ್ಟು ಪಕ್ಷ ಬೇರೆಯವರಿಗೆ ಟಿಕೆಟ್ ನೀಡಿದ್ದೇ ಆದರೆ ಉಗ್ರ ಹೋರಾಟ ಮಾಡುತ್ತೇವೆ. ಈ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿ ಆಗೋ ಪ್ರಶ್ನೆಯೇ ಇಲ್ಲ ಎಂದು ಹೈಕಮಾಂಡ್‍ಗೆ ಮನೋಹರ್ ತಹಶೀಲ್ದಾರ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಹಾವೇರಿ ನಿರ್ದೇಶಕನಿಗೆ ದಾದಾಸಾಹೇಬ್ ಫಾಲ್ಕೆ ಜ್ಯೂರಿ ಪ್ರಶಸ್ತಿ

    ಕಳೆದ ವಿಧಾನಸಭಾ ಚುನಾವಣೆ ವೇಳೆ ಮನೋಹರ್ ತಹಶೀಲ್ದಾರ್ ಅವರಿಗೆ ಟಿಕೆಟ್ ಕೈ ತಪ್ಪಿದ್ದು, ಸೋಲಿನ ನಂತರವೂ ಕ್ಷೇತ್ರದಲ್ಲಿ ಮನೆ ಮಾಡಿಕೊಂಡು ಸಂಘಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ತೊಡಗಿಕೊಂಡಿದ್ದಾರೆ. ಕಾಂಗ್ರೆಸ್ ಟಿಕೆಟ್‍ಗೆ ಮನೋಹರ್ ತಹಶೀಲ್ದಾರ್ ಮತ್ತು ಶ್ರೀನಿವಾಸ ಮಾನೆ ಸೇರಿದಂತೆ ಹಲವು ಮುಖಂಡರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

  • ಹಾನಗಲ್ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ ಜೆಡಿಎಸ್

    ಹಾನಗಲ್ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ ಜೆಡಿಎಸ್

    ಬೆಂಗಳೂರು: ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಿಯಾಜ್ ಶೇಖ್ ಅವರನ್ನು ಜೆಡಿಎಸ್ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ.

    ನಿಯಾಜ್ ಶೇಖ್ ಅವರು ಇಂದು ತಮ್ಮ ಬೆಂಬಲಿಗರೊಂದಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಪಕ್ಷದ ಬಾವುಟ ನೀಡಿ ನಿಯಾಜ್ ಶೇಖ್ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಯ್ಯದ್ ಅಲ್ತಾಫ್ ಉಪಸ್ಥಿತರಿದ್ದರು. ನಿಯಾಜ್ ಶೇಖ್ ಹಾವೇರಿ ಜಿಲ್ಲಾ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

    ಕಳೆದ ವಾರ ಅನಾರೋಗ್ಯದ ಹಿನ್ನೆಲೆಯಲ್ಲಿ ಹಾಲಿ ಹಾನಗಲ್ ವಿಧಾನಸಬಾ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಸಚಿವ ಸಿ.ಎಂ.ಉದಾಸಿ ಅವರು ನಿಧಾನರಾದ ಹಿನ್ನೆಲೆಯಲ್ಲಿ ತೆರವಾಗಿರುವ ಈ ಕ್ಷೇತ್ರಕ್ಕೆ ಉಪಚುನಾವಣೆ ಸದ್ಯದಲ್ಲೇ ನಡೆಯಲಿದ್ದು, ಜೆಡಿಎಸ್‍ನಿಂದ ನಿಯಾಜ್ ಶೇಖ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಿದೆ.

  • ಎಂಇಎಸ್ ಸ್ಪರ್ಧೆಯಿಂದ ಬಿಜೆಪಿ ಅಂತರ ಕುಸಿತ: ಜೋಶಿ

    ಎಂಇಎಸ್ ಸ್ಪರ್ಧೆಯಿಂದ ಬಿಜೆಪಿ ಅಂತರ ಕುಸಿತ: ಜೋಶಿ

    ಹುಬ್ಬಳ್ಳಿ: ಮತದಾನದ ಪ್ರಮಾಣ ಕಡಿಮೆಯಾಗಿದ್ದು ಮತ್ತು ಎಂಇಎಸ್ ಸ್ಪರ್ಧೆಯಿಂದ ಮತಗಳು ವಿಭಜನೆಯಾಗಿದ್ದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಮೇಲೆ ಪರಿಣಾಮ ಬೀರಿವೆ. ಹೀಗಾಗಿ ನಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿನ ಅಂತರ ಕಡಿಮೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

    ಮಂಗಳಾ ಅಂಗಡಿ ಗೆಲುವಿನ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಪರಂಪರಾಗತ ಮರಾಠರ ಮತಗಳನ್ನು ಎಂಇಎಸ್ ವಿಭಜಿಸಿದೆ. ಮುಂದಿನ ದಿನಗಳಲ್ಲಿ ಇದನ್ನು ಸರಿಪಡಿಸುತ್ತೇವೆ. ರೋಚಕ ಹಣಾಹಣಿ ನಡುವೆಯೂ ಬೆಳಗಾವಿಯ ಜನ ನಮ್ಮನ್ನು ಕೈ ಹಿಡಿದಿದ್ದಾರೆ. ಇದು ಕ್ಷೇತ್ರದ ಜನ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಸಾಕ್ಷಿಯಾಗಿದೆ. ನನ್ನ ಅಂದಾಜಿನ ಪ್ರಕಾರ ನಮ್ಮ ಅಭ್ಯರ್ಥಿ 50 ರಿಂದ 60 ಸಾವಿರ ಮತಗಳ ಅಂತರದಿಂದ ಗೆಲ್ಲಬೇಕಿತ್ತು ಎಂದರು.

    ಈಗಿನ ಹಾಗೂ ಮುಂದಿನ ಯಾವ ಉಪ ಚುನಾವಣೆಗಳು ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿಯಲ್ಲ. ಈಗಿನ ಫಲಿತಾಂಶಗಳು ಮುಂದೆ ಯಾವ ಪರಿಣಾಮ ಬೀರುವುದೂ ಇಲ್ಲ. ಈಗಿನ ಫಲಿತಾಂಶದ ಬಗ್ಗೆ ಪಕ್ಷದ ವೇದಿಕೆಯಲ್ಲಿ ವಿಶ್ಲೇಷಣೆ ನಡೆಸುತ್ತೇವೆ ಎಂದು ಹೇಳಿದರು.

    ಬೆಳಗಾವಿ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಏನು ಬೇಕೊ ಅದನ್ನು ಮಂಗಳಾ ಅಂಗಡಿ ಮಾಡುತ್ತಾರೆ. ಕೇಂದ್ರ ಸಚಿವನಾಗಿ ಏನು ನೆರವು ನೀಡಬೇಕು ಅದೆಲ್ಲವನ್ನೂ ನೀಡುವೆ ಎಂದು ಪ್ರತಿಕ್ರಿಯಿಸಿದರು.

    ಬೆಳಗಾವಿ ಉಪಚುನಾವಣೆಯಲ್ಲಿ ಮಂಗಳಾ ಅಂಗಡಿ 3,986 ಮತಗಳ ಅಂತರದಿಂದ ಸತೀಶ್ ಜಾರಕಿಹೊಳಿ ವಿರುದ್ಧ ಗೆದ್ದಿದ್ದಾರೆ. ಮಂಗಳಾ ಅಂಗಡಿಗೆ 4,36,868 ಮತಗಳು ಬಿದ್ದರೆ ಸತೀಶ್ ಜಾರಕಿಹೊಳಿಗೆ 4,32,882 ಮತಗಳು ಬಿದ್ದಿದೆ. ಎಂಇಎಸ್‍ನ ಶುಭಂ ವಿಕ್ರಂ ಅವರಿಗೆ 1,16,923 ಮತಗಳು ಬಿದ್ದಿದೆ. ನೋಟಾ ಪರವಾಗಿ 10,563 ಮತಳು ಚಲಾವಣೆ ಆಗಿದೆ.

  • ಸೋಲಿನಲ್ಲಿ ಗೆಲುವು ಕಂಡಿದ್ದೇವೆ: ಡಿಕೆ ಶಿವಕುಮಾರ್

    ಸೋಲಿನಲ್ಲಿ ಗೆಲುವು ಕಂಡಿದ್ದೇವೆ: ಡಿಕೆ ಶಿವಕುಮಾರ್

    ಬೆಂಗಳೂರು: ಸೋಲಿನಲ್ಲಿ ಗೆಲುವನ್ನು ಕಂಡಿದ್ದೇವೆ ಎಂದು ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‍ರವರು ಹೇಳಿದ್ದಾರೆ.

    ಇಂದು ನಡೆದ ವಿಧಾನಸಭಾ ಮತ್ತು ಲೋಕಸಭಾ ಉಪಚುನಾವಣೆಯ ಫಲಿತಾಂಶ ಕುರಿತಂತೆ ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಇವತ್ತು ಇಡೀ ಭಾರತದಲ್ಲಿ ಒಂದು ದೊಡ್ಡ ಬದಲಾವಣೆ ಅಲೆ ನೋಡುತ್ತಾ ಇದ್ದೀರಿ, ಮತದಾರ ಕೊಟ್ಟ ತೀರ್ಪಿಗೆ ತಲೆಬಾಗಲೇಬೇಕು ಎಂದಿದ್ದಾರೆ.

     

    ಪಶ್ಚಿಮ ಬಂಗಾಳ, ಕೇರಳದಲ್ಲಿ ಕಾಂಗ್ರೆಸ್ ಸೋತಿರಬಹುದು. ಆದರೆ ಜನ ಬಿಜೆಪಿಯ ಬದಲಾವಣೆಯನ್ನು ಬಯಸಿದ್ದಾರೆ. ತಮಿಳುನಾಡು, ಪಶ್ಚಿಮ ಬಂಗಾಳ, ಕರ್ನಾಟಕದಲ್ಲಿ ಬಿಜೆಪಿ ವಿರುದ್ಧವಾಗಿ ಮತ ಚಲಾವಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.

    ಕರ್ನಾಟಕದಲ್ಲಿ ಒಂದು ಸ್ಥಾನ ಗೆದ್ದಿದ್ದೇವೆ ಒಂದು ಸೀಟ್ ಫೈಟು ಕೊಟ್ಟಿದ್ದೇವೆ. ಸೋಲಿನಲ್ಲಿ ಗೆಲವು ಕಂಡಿದ್ದೇವೆ. ಸತೀಶ್ ನಮ್ಮ ಪಕ್ಷಕ್ಕೆ ದೊಡ್ಡ ಶಕ್ತಿ ಕೊಟ್ಟಿದ್ದಾರೆ. ವಿಧಾನ ಸಭಾ ಸದಸ್ಯರಾಗಿದ್ದಾರು, ಅವರು ಟಿಕೆಟ್ ಕೇಳಿರಲಿಲ್ಲಾ. ಪಕ್ಷಕ್ಕಾಗಿ ನೀವು ಅಭ್ಯರ್ಥಿ ಮಾಡಿದ್ವಿ, ವರ್ತಕರಿಗೆ ರೈತರಿಗೆ ಮುಖಂಡರು ಒಂದು ಒಗ್ಗಟ್ಟಿನ ಪ್ರದರ್ಶನ ಮಾಡಿದ್ದಾರೆ. ಎಲ್ಲಾರಿಗೂ ಧನ್ಯವಾದಗಳು ಹಾಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

    ಬಸವ ಕಲ್ಯಾಣದಲ್ಲಿ ಅಂತರ ಹೆಚ್ಚಾಗಿದೆ. ಮಸ್ಕಿಯ ಸ್ವಾಭಿಮಾನದ ಮತದಾರರು ಮತ ಕೊಟ್ಡಿದ್ದಾರೆ. ನನ್ನ ಹತ್ತಾರು ವರ್ಷದ ಅನುಭವದಲ್ಲಿ ಈ ಮೂರು ಚುನಾವಣೆಯಲ್ಲಿ ಒಗ್ಗಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ಬೆಳಗಾವಿ ತೀರ್ಪು ಕಾಂಗ್ರೆಸ್ ಬದಲಾವಣೆ ನಂಬಿಕೆ ಕೊಟ್ಟಿದ್ದಾರೆ. ಯಾರು ಸಂಭ್ರಮಾಚರಣೆ ಮಾಡಬಾರದು ಎಂದು ತಿಳಿಸಿದರು.

    ಎಷ್ಟು ಜೀವ ಉಳಿಸೋದಕ್ಕೆ ಸಾಧ್ಯಾನೋ ಅಷ್ಟು ಕೆಲಸ ಮಾಡಲು ಮನವಿ ಮಾಡಲಾಗುತ್ತಿದೆ. ಬಿಜೆಪಿಯನ್ನು ದೂರ ಮಾಡಬೇಕು. ಬಿಜೆಪಿ ದೇಶಕ್ಕೆ ದೊಡ್ಡ ಅಪಾಯಕಾರಿಯಾಗಿದೆ. ಒಂದು ಎರಡು ರಾಜ್ಯದಲ್ಲಿ ಕಾಂಗ್ರೆಸ್ ಚೇತರಿಕೆ ಕಂಡಿದೆ. ಬಿಜೆಪಿ ಎಂಟು ಭಾಗದ ಚುನಾವಣೆ ವ್ಯವಸ್ಥೆಯನ್ನು ನಾವು ವಿರೋಧ ಮಾಡಿದ್ವಿ. ಕಾಂಗ್ರೆಸ್ ಮೇಲೆ ವಿಶ್ವಾಸ ಹೆಚ್ಚಾಗುತ್ತಿದೆ. ಮಸ್ಕಿಯಲ್ಲಿ ಸ್ವಾಭಿಮಾನಕ್ಕೆ ಮತ ಕೇಳಿದ್ವಿ. ಅಲ್ಲಿ ಜನ ಅದನ್ನು ಗೌವರದಿಂದ ಮತಕೊಟ್ಟಿದ್ದಾರೆ.

  • ಉಪಚುನಾವಣೆ ಫಲಿತಾಂಶದಂದು ಸಂಭ್ರಮಾಚರಣೆಗೆ ಅವಕಾಶವಿಲ್ಲ: ಬೊಮ್ಮಾಯಿ

    ಉಪಚುನಾವಣೆ ಫಲಿತಾಂಶದಂದು ಸಂಭ್ರಮಾಚರಣೆಗೆ ಅವಕಾಶವಿಲ್ಲ: ಬೊಮ್ಮಾಯಿ

    ಉಡುಪಿ: ನಾಳೆ ಉಪಚುನಾವಣೆಗಳ ಫಲಿತಾಂಶ ಪ್ರಕಟವಾಗಲಿದ್ದು, ಯಾವುದೇ ರೀತಿಯ ಸಂಭ್ರಮಾಚರಣೆಗೆ ಅವಕಾಶ ಇಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಉಪಚುನಾವಣೆ ಫಲಿತಾಂಶ ಸಂದರ್ಭ ಕಟ್ಟುನಿಟ್ಟಿನ ನಿಯಮ ಜಾರಿ ಮಾಡುತ್ತೇವೆ. ಯಾವುದೇ ರೀತಿಯ ಸಂಭ್ರಮಾಚರಣೆಗೆ ಅವಕಾಶ ಇಲ್ಲ. ಚುನಾವಣಾ ಆಯೋಗ ಈಗಾಗಲೇ ಸೂಚನೆ ನೀಡಿದೆ. ಯಾವುದೇ ಸಂಭ್ರಮಾಚರಣೆಗೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದರು.

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗವಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಸ್ಥಳೀಯ ವಿಚಾರದಲ್ಲಿ ಚುನಾವಣೆ ನಡೆದಿದೆ. ರಾಜ್ಯ, ದೇಶಮಟ್ಟದ ಚುನಾವಣೆ ನಡೆದಿಲ್ಲ. ಈ ಫಲಿತಾಂಶ ಸರ್ಕಾರದ ಮೇಲಿನ ಜನಾದೇಶ ಅಲ್ಲ ಎಂದು ತಿಳಿಸಿದರು.

  • ಕೊರೊನಾ ಮಧ್ಯೆ 3 ಕ್ಷೇತ್ರಗಳಿಗೆ ಉಪ ಚುನಾವಣೆ- ಕರ್ತವ್ಯಕ್ಕೆ ಬಾರದ 29 ಮಂದಿ ವಿರುದ್ಧ ಎಫ್‍ಐಆರ್

    ಕೊರೊನಾ ಮಧ್ಯೆ 3 ಕ್ಷೇತ್ರಗಳಿಗೆ ಉಪ ಚುನಾವಣೆ- ಕರ್ತವ್ಯಕ್ಕೆ ಬಾರದ 29 ಮಂದಿ ವಿರುದ್ಧ ಎಫ್‍ಐಆರ್

    ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳಾದ ಬೆಳಗಾವಿ, ಮಸ್ಕಿ, ಬಸವಕಲ್ಯಾಣದ ಉಪಚುನಾವಣೆಗೆ ತೆರೆ ಬಿದ್ದಿದೆ.

    ಬೆಳಗಾವಿಯಲ್ಲಿ ಶೇ.60, ಬಸವಕಲ್ಯಾಣ ಶೇ.65 ಹಾಗೂ ಮಸ್ಕಿಯಲ್ಲಿ ಶೇ.71ರಷ್ಟು ಮತದಾನವಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಸೇರಿದಂತೆ ಕುಟುಂಬಸ್ಥರು ಮತ ಚಲಾಯಿಸಿ, ಗೆಲ್ಲುವ ಆತ್ಮವಿಶ್ವಾಸ ವ್ಯಕ್ತಪಡಿಸಿದ್ರು.

    ಗೋಕಾಕ್‍ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮತದಾನ ಮಾಡಿದ್ರು. ಸೋಂಕು ಪೀಡಿತ ಸವದತ್ತಿ ಶಾಸಕ ಆನಂದ್ ಮಾಮನಿ ಪಿಪಿಇ ಕಿಟ್ ಧರಿಸಿ ಓಟ್ ಮಾಡಿದ್ರು. ಆಸ್ಪತ್ರೆಯಲ್ಲಿರೋ ಮಾಜಿ ಸಚಿವ ರಮೇಶ್ ಜಾರಕಿಹೊಳಿ 9 ರಂದೇ ಅಂಚೆ ಮತ ಚಲಾಯಿಸಿದ್ದಾರೆ.

    ರಾಯಚೂರಿನ ಮಸ್ಕಿಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್‍ಗೌಡ ಪಿಪಿಇ ಕಿಟ್ ಧರಿಸಿ ಓಟ್ ಮಾಡಿದ್ರು. ತುರವಿಹಾಳ್ ಗ್ರಾಮದಲ್ಲಿ ಮತಯಂತ್ರದಲ್ಲಿನ ದೋಷದಿಂದ ಅರ್ಧ ಗಂಟೆ ಮತದಾನ ಸ್ಥಗಿತಗೊಳಿಸಲಾಯ್ತು. ನಂತರ ಕಾಂಗ್ರೆಸ್ ಅಭ್ಯರ್ಥಿ ಬಸವನಗೌಡ ತುರವಿಹಾಳ ಮತ ಚಲಾಯಿಸಿದ್ರು.

    ಚುನಾವಣಾ ಕರ್ತವ್ಯಕ್ಕೆ ಗೈರಾದ 29 ಮಂದಿ ಅಧಿಕಾರಿಗಳ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಬೀದರ್‍ನ ಬಸವಕಲ್ಯಾಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಲಾ ಬಿ.ನಾರಾಯಣರಾವ್ ಮತಚಲಾಯಿಸಿ ನೂರಕ್ಕೆ ನೂರು ಗೆಲ್ತೀನಿ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.

    ಇತ್ತ ಎಲೆಕ್ಷನ್ ನಡೆಯುತ್ತಿದ್ದ ಹೊತ್ತಲ್ಲೇ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಅವರನ್ನ ಬಿಜೆಪಿ ಉಚ್ಛಾಟಿಸಿದೆ. ಪಶ್ಚಿಮ ಬಂಗಾಳದಲ್ಲೂ 5ನೇ ಹಂತದಲ್ಲಿ ಶೇ.79ರಷ್ಟು ಮತದಾನವಾಗಿದೆ.

  • ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ್ ಖೂಬಾ ಪಕ್ಷದಿಂದ ಉಚ್ಛಾಟನೆ

    ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ್ ಖೂಬಾ ಪಕ್ಷದಿಂದ ಉಚ್ಛಾಟನೆ

    ಬೆಂಗಳೂರು: ಬಸವಕಲ್ಯಾಣ ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.

    ಪಕ್ಷದಿಂದ ಉಚ್ಛಾಟನೆ ಮಾಡಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಮಲ್ಲಿಕಾರ್ಜುನ್ ಖೂಬಾ ಬಂಡಾಯ ಅಭ್ಯರ್ಥಿಯಾಗಿ ಬಸವಕಲ್ಯಾಣ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಇಂದು ಮತದಾನ ಅರ್ಧ ಮುಗಿದ ನಂತರ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ.

    ಪಕ್ಷದಿಂದ ಖೂಬಾ ಅವರಿಗೆ ಟಿಕೆಟ್ ನೀಡಲು ನಿರಾಕರಿಸಲಾಗಿತ್ತು. ಇವರ ಬದಲಿಗೆ ಶರಣು ಸಲಗರ್ ಅವರಿಗೆ ಬಿಜೆಪಿಯಿಂದ ಟಿಕೆಟ್ ನೀಡಲಾಗಿತ್ತು. ಇದರಿಂದ ಬೇಸರಗೊಂಡಿದ್ದ ಖೂಬಾ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಇಂದು ಉಪಚುನಾವಣೆಯ ಕ್ಷೇತ್ರಗಳಲ್ಲಿ ಮತದಾನ ನಡೆದಿದ್ದು, ಬಸವಕಲ್ಯಾಣದಲ್ಲಿ ಸಹ ಅರ್ಧ ಮತದಾನ ನಡೆದ ಬಳಿಕ ಖೂಬಾ ಅವರನ್ನು ಉಚ್ಛಾಟನೆ ಮಾಡಿ ಆದೇಶಿಸಲಾಗಿದೆ.