Tag: by election

  • ಹೋಗ್ಬಿಡ್ತೀನಿ, ಹೋಗ್ಬಿಡ್ತೀನಿ ಅಂತ ಸಿಎಂ ಕುರ್ಚಿಲೀ ಕುತ್ಕೋಂಡು, ಈವಾಗ್ಲೂ ಹೋಗ್ಬಿಡ್ತೀನಿ ಅಂತಾ ಕಣ್ಣೀರು ಹಾಕ್ತಿದ್ದಾರೆ: ತಾರಾ

    ಹೋಗ್ಬಿಡ್ತೀನಿ, ಹೋಗ್ಬಿಡ್ತೀನಿ ಅಂತ ಸಿಎಂ ಕುರ್ಚಿಲೀ ಕುತ್ಕೋಂಡು, ಈವಾಗ್ಲೂ ಹೋಗ್ಬಿಡ್ತೀನಿ ಅಂತಾ ಕಣ್ಣೀರು ಹಾಕ್ತಿದ್ದಾರೆ: ತಾರಾ

    ಶಿವಮೊಗ್ಗ: ಮುಖ್ಯಮಂತ್ರಿ ಕುಮಾರಸ್ವಾಮಿ ವಿಧಾನಸಭಾ ಚುನಾವಣೆಗೂ ಮುನ್ನಾ ನಾನು ಹೋಗಿಬಿಡುತ್ತೀನಿ ಮತ ಹಾಕಿ ಅಂದು, ಇವಾಗ ಸಿಎಂ ಆದ ಮೇಲೆಯೂ ಸಹ ನಾನು ಹೋಗಿಬಿಡುತ್ತೀನಿ ಅಂತಾ ಕಣ್ಣೀರು ಹಾಕುತ್ತಿದ್ದಾರೆ ಎಂದು ನಟಿ ಹಾಗೂ ಬಿಜೆಪಿ ನಾಯಕಿ ತಾರಾ ವ್ಯಂಗ್ಯವಾಡಿದ್ದಾರೆ.

    ಬಿಜೆಪಿ ಅಭ್ಯರ್ಥಿ ಪರ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿಯವರು ವಿಧಾನಸಭಾ ಚುನಾವಣೆಯಲ್ಲಿ ನಾನು ಬದುಕಲ್ಲ, ಯಾವಾಗ ಸಾಯುತ್ತೀನಿ ಗೊತ್ತಿಲ್ಲ, ಮತ ಹಾಕಿ ಅಂತಾ ಕೇಳುತ್ತಿದ್ದರು. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡ ನಂತರವೂ ನಾನು ಯಾವಾಗ ಹೋಗುತ್ತೀನೋ ಗೊತ್ತಿಲ್ಲ ಅಂತಾ ಕಣ್ಣೀರು ಹಾಕುತ್ತಿದ್ದಾರೆ. ಅವರು ಹೋಗುವುದಾದರೆ ಮೊದಲು ಸಿಎಂ ಕುರ್ಚಿ ಬಿಟ್ಟು ಹೋಗಲಿ ಎಂದು ಹೇಳಿದರು.

    ಫಲಿತಾಂಶದ ನಂತರ ಬ್ರದರ್, ಅಣ್ಣಾ ಅಂತಾ ಕಾಂಗ್ರೆಸ್ ಜೊತೆ ಹೋಗಿ ಮೈತ್ರಿ ಮಾಡಿಕೊಂಡ ರೀತಿ ನಾವು ಮಾಡಲ್ಲ. ರಾಜ್ಯದ ಜನತೆ 104 ಸ್ಥಾನಗಳನ್ನು ನೀಡುವ ಮೂಲಕ ಬಿಜೆಪಿಗೆ ಬಹುಮತ ನೀಡಿದ್ದರು. ಆದರೆ 37 ಸ್ಥಾನಗಳಿಸಿ ಥರ್ಡ್ ಕ್ಲಾಸ್ ತೆಗೆದುಕೊಂಡು ನೀವು ಸರ್ಕಾರ ರಚಿಸಿದ್ದೀರಿ. ಮುಖ್ಯಮಂತ್ರಿಯಾಗಿ 24 ಗಂಟೆಯೊಳಗೆ ಸಾಲಮನ್ನಾ ಮಾಡುತ್ತೇನೆ ಅಂತಾ ಹೇಳಿ, ಇಲ್ಲಿಯವರೆಗೂ ಸಾಲಮನ್ನಾ ಮಾಡುತ್ತಲೇ ಇದ್ದಾರೆ. ಯಾರಿಗಾದರೂ ನಿಮ್ಮ ಸಾಲಮನ್ನಾ ಆಗಿದೆ ಅಂತಾ ಇದ್ದರೇ ಬನ್ನಿ, ಇದೇ ವೇದಿಕೆಯಲ್ಲಿ ನಿಮಗೆ ಸನ್ಮಾನ ಮಾಡುತ್ತೇನೆ ಎಂದು ವ್ಯಂಗ್ಯವಾಡಿದರು.

    ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಯಲ್ಲಿದ್ದ ಭಾಗ್ಯಲಕ್ಷ್ಮೀ ಬಾಂಡ್ ಯೋಜನೆ, ಮಕ್ಕಳ ಬೈಸಿಕಲ್ ವಿತರಣೆ, ವಿಧವಾ ವೇತನ ಸೇರಿದಂತೆ ಹಲವಾರು ಯೋಜನೆಗೆ ಕಳೆದ ಬಾರಿಯ ಸಿದ್ದರಾಮಯ್ಯ ಸರ್ಕಾರ ಎಳ್ಳು-ನೀರು ಬಿಟ್ಟಿದ್ದಾರೆ. ಇದನ್ನು ಇವರು ಸಹ ಮುಂದುವರಿಸಿಕೊಂಡು ಬಂದಿದ್ದಾರೆ. ಇವರ ರೀತಿ ಜಾತಿಯ ಆಧಾರದಲ್ಲಿ ಮತ ಕೇಳುವ ಕೀಳು ಪದ್ಧತಿ ನಮಗಿಲ್ಲ. ಶಿವಮೊಗ್ಗದ ಜನತೆ ಅಭಿವೃದ್ಧಿಯನ್ನು ನೋಡಿ ವೋಟ್ ನೀಡುತ್ತಾರೆಯೇ ಹೊರತು, ಜಾತಿ ನೋಡಿ ಮತ ನೀಡುವುದಿಲ್ಲವೆಂದು ಹೇಳಿದರು.

    ಈ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಘಣ್ಣನವರು ಭಾರೀ ಅಂತರದಿಂದ ಗೆಲ್ಲುತ್ತಾರೆ. ಅಲ್ಲದೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರು ಮತ್ತೊಮ್ಮೆ ಭಾರತದ ಪ್ರಧಾನಿಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ಎಚ್‍ಡಿಡಿ ಬಹಿರಂಗ ಸಭೆಗೆ ಕಾರ್ಯಕರ್ತರ ಬರ- ಹಣ ಹಂಚಿಕೆಯ ದೃಶ್ಯ ಸೆರೆ

    ಎಚ್‍ಡಿಡಿ ಬಹಿರಂಗ ಸಭೆಗೆ ಕಾರ್ಯಕರ್ತರ ಬರ- ಹಣ ಹಂಚಿಕೆಯ ದೃಶ್ಯ ಸೆರೆ

    ರಾಮನಗರ: ಮಾಜಿ ಪ್ರಧಾನಿ ದೇವೇಗೌಡರ ಬಹಿರಂಗ ಸಭೆಗೆ ಕಾರ್ಯಕರ್ತರ ಬರವೇ ಎನ್ನುವ ಪ್ರಶ್ನೆ ಇಂದು ರಾಮನಗರದ ಬಹಿರಂಗ ಸಮಾವೇಶದ ವೇಳೆ ಮೂಡಿತ್ತು.

    ಏಕೆಂದರೆ ಇಂದು ರಾಮನಗರ ಕ್ಷೇತ್ರದಲ್ಲಿ ದೇವೇಗೌಡರ ಪ್ರಚಾರ ಸಭೆಗೆ ಕಾರ್ಯಕರ್ತರನ್ನ ಕರೆತರಲು ಜೆಡಿಎಸ್, ಕಾಂಗ್ರೆಸ್ ಪಕ್ಷದ ಮುಖಂಡರು ಹಣ ಹಂಚಿಕೆ ಮಾಡಿದ್ದಾರೆ.

    ಕ್ಷೇತ್ರದ ಕೊಳ್ಳಿಗಾನಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಬಹಿರಂಗ ಪ್ರಚಾರ ಸಭೆಯನ್ನು ಇಂದು ಆಯೋಜಿಸಲಾಗಿತ್ತು. ಸಭೆಗೆ ಮಾಜಿ ಪ್ರಧಾನಿ ದೇವೇಗೌಡ ಅವರು ಆಗಮಿಸಿ ಕಾರ್ಯರ್ತರನ್ನು ಉದ್ದೇಶಿಸಿ ಮಾತನಾಡಿ ಪಕ್ಷದ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಪರ ಪ್ರಚಾರ ನಡೆಸಿದ್ದರು.

    ಈ ಬಹಿರಂಗ ಸಭೆಗೆ ಜನರನ್ನು ಕರೆತರಲು ಸ್ಥಳೀಯ ಮೈತ್ರಿಗೆ ಮಾಡಿಕೊಂಡಿರುವ ಜೆಡಿಎಸ್, ಕಾಂಗ್ರೆಸ್ ಮುಖಂಡರು ಸಭೆಗೆ ಬರುವ ಪ್ರತಿಯೊಬ್ಬರಿಗೂ ತಲಾ 150 ರೂ. ಹಂಚಿಕೆ ಮಾಡಿದ್ದಾರೆ. ಪಕ್ಷದ ಶಾಲು ಹಾಕಿಕೊಂಡಿದ್ದ ಮುಖಂಡರು ಜನರಿಗೆ ಹಣ ಹಂಚಿಕೆ ಮಾಡುತ್ತಿದ್ದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಪ್ರಚಾರದ ವೇಳೆ ಹಾರೋಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಎಚ್‍ಡಿಡಿ, ಬಿಜೆಪಿ ಆಡಳಿತದ ಬಗ್ಗೆ ನಾನು ಮಾತಾಡಿದ್ದೇನೆ. ಮೋದಿ, ಯಡಿಯೂರಪ್ಪ ಸೇರಿದಂತೆ ಯಾರ ಬಗ್ಗೆಯೂ ವೈಯಕ್ತಿಕ ವಿಚಾರ ಮಾತಾಡಲ್ಲ. ನನಗೆ 50 ವರ್ಷಗಳ ರಾಜಕೀಯ ಅನುಭವ ಇದ್ದು, ಯಾವ ರೀತಿ ಮಾತಾಡಬೇಕು ಎಂಬ ಅರಿವು ನನಗಿದೆ. ಬೇರೆಯವರು ಮಾತನಾಡಿದ್ದ ಬಗ್ಗೆಯೂ ನಾನು ಪ್ರತಿಕ್ರಿಯಿಸಲ್ಲ. ಬೇರೆಯವರ ಲೆವಲ್ ಗೆ ಇಳಿಸುವಂತೆ ನನ್ನನ್ನು ಮಾತನಾಡಿಸ ಬೇಡಿ. ದೇಶದ ಪ್ರಧಾನಿಯಾಗಿದ್ದವನು ನಾನು, ಆ ಘನತೆ ಉಳಿಸಬೇಕು ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಜನಾರ್ದನ ರೆಡ್ಡಿ ಹೇಳಿಕೆಗೆ ಖಂಡನೆ – ಕ್ಷಮೆ ಕೇಳುವಂತೆ ಬಿಎಸ್‍ವೈ ಆಗ್ರಹ

    ಜನಾರ್ದನ ರೆಡ್ಡಿ ಹೇಳಿಕೆಗೆ ಖಂಡನೆ – ಕ್ಷಮೆ ಕೇಳುವಂತೆ ಬಿಎಸ್‍ವೈ ಆಗ್ರಹ

    ಶಿವಮೊಗ್ಗ: ಸಿದ್ದರಾಮಯ್ಯ ಅವರ ಮಗನ ಸಾವಿನ ಬಗ್ಗೆ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ನೀಡಿರುವ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಆ ಹೇಳಿಕೆಯನ್ನು ನಾನು ಖಂಡಿಸುತ್ತೇನೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಎಸ್‍ವೈ, ಸಿದ್ದರಾಮಯ್ಯ ಮಗನ ಸಾವಿನ ಬಗ್ಗೆ ಜನಾರ್ದನ ರೆಡ್ಡಿ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಅವರು ಈ ಬಗ್ಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸುವುದಾಗಿ ತಿಳಿಸಿದರು.

    ಸಿದ್ದರಾಮಯ್ಯ ಈಗ ಸಂಯಮ ಕಳೆದುಕೊಂಡು ಮಾತನಾಡುತ್ತಿದ್ದಾರೆ. ಶ್ರೀರಾಮುಲು ಅವರಿಗೆ 371ಜೆ ಗೊತ್ತಿಲ್ಲ, ಅವರಿಗೆ ಕೇವಲ 420 ಮಾತ್ರ ಗೊತ್ತಿದೆ ಎಂದು ಹೇಳಿರುವುದು ಸರಿಯಲ್ಲ. ಶಿವಮೊಗ್ಗದಲ್ಲಿ ನಡೆದ ಜೆಡಿಎಸ್ ಹಾಗೂ ಕಾಂಗ್ರೆಸ್ ಸಭೆಯಲ್ಲಿ ಪ್ರಧಾನಿಯ ಬಗ್ಗೆ ಹಗುರವಾಗಿ ಮಾತನಾಡಿರುವುದು ಸರಿಯಲ್ಲ. ಯಾವುದೇ ಸಭೆ ನಡೆಸಿದರೂ ಅಲ್ಲಿ ಯಡಿಯೂರಪ್ಪ ಅವರನ್ನು ಟೀಕೆ ಮಾಡುವುದೇ ಜೆಡಿಎಸ್ ಹಾಗೂ ಕಾಂಗ್ರೆಸ್ ಕೆಲಸವಾಗಿದೆ ಎಂದು ದೂರಿದರು.

    ಉಪ ಚುನಾವಣೆ ಇಡೀ ದೇಶದ ಗಮನ ಸೆಳೆದಿದೆ. ಪ್ರಧಾನಿ ಮೋದಿ ಅವರ ಅಭಿವೃದ್ಧಿ ಕಾರ್ಯಗಳು ಹಾಗೂ ರಾಜ್ಯದ ಮೈತ್ರಿ ಸರ್ಕಾರದ ವೈಫಲ್ಯ ಕುರಿತು ಈ ಚುನಾವಣೆಯಲ್ಲಿ ಚರ್ಚೆಯ ವಿಷಯವಾಗಿದೆ. ರಾಜ್ಯದಲ್ಲಿ 100 ತಾಲೂಕುಗಳಲ್ಲಿ ಭೀಕರ ಬರವಿದ್ದರೂ ನಾಲ್ಕು ತಿಂಗಳಿಂದ ಸಿಎಂ ಕುಮಾರಸ್ವಾಮಿ ಸಾಲಮನ್ನಾ ಸಾಲಮನ್ನಾ ಎಂದು ಜಪಮಾಡುತ್ತಿದ್ದಾರೆ. ರಾಜ್ಯದ ಆರ್ಥಿಕ ಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಿ ಎಂದರೆ ಹಗುರವಾಗಿ ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.

    ಈ ಬಾರಿಯ ಉಪಚುನಾವಣೆಯಲ್ಲಿ ಶಿವಮೊಗ್ಗ, ಬಳ್ಳಾರಿ, ಜಮಖಂಡಿ ಚುನಾವಣೆಯಲ್ಲಿ ಗೆಲ್ಲುತ್ತೇವೆ. ಮಂಡ್ಯ, ರಾಮನಗರ ಗೆದ್ದರೂ ಅಚ್ಚರಿ ಇಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಸಮಾವೇಶ ಮಾಡಿದಾಗ ಅಭಿವೃದ್ಧಿ ಬಗ್ಗೆ ಮಾತನಾಡುವುದಿಲ್ಲ. ಅಲ್ಲದೇ ಹೈದರಾಬಾದ್ ಕರ್ನಾಟಕ ಭಾಗಕ್ಕೆ ಅನ್ಯಾಯ ಮಾಡಿದ್ದು ಇದೇ ಕಾಂಗ್ರೆಸ್, ಜೆಡಿಎಸ್. ಸಿಎಂ ಕುಮಾರಸ್ವಾಮಿ ಅವರು ಉತ್ತರ ಕರ್ನಾಟಕದವರು ನನಗೆ ಮತ ಹಾಕಿದ್ದೀರಾ ಎಂದು ಪ್ರಶ್ನಿಸಿ ಅಪಮಾನ ಆಗುವಂತೆ ಮಾಡಿದ್ದರು. ಜೆಡಿಎಸ್ ನವರು ಬಿಜೆಪಿಯ ದಕ್ಷಿಣದ ಬಾಗಿಲು ಮುಚ್ಚುತ್ತೇವೆ ಎನ್ನುತ್ತಾರೆ. ನಿಮ್ಮ ಜೊತೆ ಎಷ್ಟು ಜನ ಸಂಸದರಿದ್ದಾರೆ ಎಂಬುದನ್ನು ಮೊದಲು ಹೇಳಿ ಎಂದು ದೇವೇಗೌಡರಿಗೆ ಸವಾಲು ಎಸೆದರು.

    ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಂದಲೇ ಬಿಜೆಪಿ ಬಾಗಿಲು ಮುಚ್ಚಲು ಆಗಿಲ್ಲ. ಇನ್ನು ಇವರು ಯಾರು? ಮೈತ್ರಿ ಕೂಟಕ್ಕೆ ಸೋಲಿನ ಭಯ ಆರಂಭವಾಗಿದೆ. ನ.6ರ ಫಲಿತಾಂಶದ ಬಳಿಕ ಕಾಂಗ್ರೆಸ್, ಜೆಡಿಎಸ್ ಛಿದ್ರ ಛಿದ್ರವಾಗುತ್ತವೆ. ಸಮ್ಮಿಶ್ರ ಸರ್ಕಾರದ ತುಘಲಕ್ ದರ್ಬಾರ್ ಅಂತ್ಯವಾಗಲಿದೆ. ಈ ಹಿಂದೆ ಲಾಲ್ ಕೃಷ್ಣ ಅಡ್ವಾಣಿ ಅವರು ನನಗೆ ಜೆಡಿಎಸ್ ಮೈತ್ರಿ ಬೇಡ ಎಂದು ಹೇಳಿದ್ದರು. ಸಮ್ಮಿಶ್ರ ಸರ್ಕಾರ ರಚಿಸಿದರೆ ನೀವು ಮೊದಲು ಅಧಿಕಾರ ನಡೆಸಿ ಎಂದು ಹೇಳಿದ್ದರು. ಅಂದು ನಾನು ಅವರೊಂದಿಗೆ ಹೋಗಿದ್ದರೆ ಇಂದು ಬಿಜೆಪಿ ಇರುತ್ತಿರಲಿಲ್ಲ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಚುನಾವಣೆಗೂ ಮುನ್ನ ಸಾಯುತ್ತೇನೆ ಅಂದ್ರೆ ಓಕೆ, ಆದ್ರೆ ಈಗಲೂ ಏಕೆ: ಆರ್. ಅಶೋಕ್ ವ್ಯಂಗ್ಯ

    ಚುನಾವಣೆಗೂ ಮುನ್ನ ಸಾಯುತ್ತೇನೆ ಅಂದ್ರೆ ಓಕೆ, ಆದ್ರೆ ಈಗಲೂ ಏಕೆ: ಆರ್. ಅಶೋಕ್ ವ್ಯಂಗ್ಯ

    ಮಂಡ್ಯ: ಸಿಎಂ ಕುಮಾರಸ್ವಾಮಿ ಅವರು ವಿಧಾನಸಭಾ ಚುನಾವಣೆಗೂ ಮುನ್ನ ನಾನು ಸಾಯುತ್ತೇನೆ ಎಂದು ಹೇಳಿ ಮತ ಪಡೆದರು. ಮಂಡ್ಯದಲ್ಲಿ 7 ಸ್ಥಾನಗಳು ಜೆಡಿಎಸ್ ಗೆದ್ದಿದೆ, ಆದ್ರೆ ಈಗ ಮತ್ತೆ ಸಾಯುತ್ತೇನೆ ಎಂದು ಹೇಳುತ್ತಿದ್ದಾರೆ. ಈಗ ಯಾರು ನಂಬುತ್ತಾರೆ ಎಂದು ಮಾಜಿ ಡಿಸಿಎಂ ಆರ್ ಅಶೋಕ್ ವ್ಯಂಗ್ಯವಾಡಿದ್ದಾರೆ.

    ಉಪಚುನಾವಣೆಯ ಹಿನ್ನೆಲೆಯಲ್ಲಿ ಮಂಡ್ಯದ ಪಾಂಡವಪುರದ ಕ್ಯಾತನಹಳ್ಳಿಯಲ್ಲಿ ಪಕ್ಷದ ಅಭ್ಯರ್ಥಿ ಡಾಕ್ಟರ್ ಸಿದ್ದರಾಮಯ್ಯ ಪರ ಪ್ರಚಾರ ನಡೆಸಿದ ಅಶೋಕ್ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡ್ಯದಲ್ಲಿ ಚುನಾವಣಾ ಪ್ರಚಾರ ಮಾಡುವಾಗ ತಮ್ಮ ಆರೋಗ್ಯದ ಸಮಸ್ಯೆ ಹೇಳಿಕೊಂಡು ಸಾವಿನ ಬಗ್ಗೆ ಮಾತನಾಡಿದರು. ಚುನಾವಣೆಗೂ ಮುನ್ನವೂ ಕೂಡ ಬಂದು ನಾನು ಸತ್ತು ಹೋಗುತ್ತೇನೆ ಎಂದು ಹೇಳಿ ಮತ ಪಡೆದರು. ಆದರೆ ಗೆದ್ದು ಸಿಎಂ ಕುರ್ಚಿ ಪಡೆದ ಬಳಿಕವೂ ನಾನು ಇಸ್ರೇಲ್ ನಲ್ಲೇ ಸಾಯಬೇಕಿತ್ತು. ನಿಮ್ಮಗಾಗಿ ಬದುಕಿದ್ದೇನೆ ಎಂದು ಹೇಳುತ್ತಾರೆ. ಆದರೆ 7 ಸ್ಥಾನಗಳು ಗೆದ್ದ ಮಂಡ್ಯಕ್ಕೆ ಸಿಎಂ ಆಗಿ ಈಗ ಎಚ್‍ಡಿಕೆ ಏನು ಮಾಡಿದ್ದಾರೆ ಎಂದು ಹೇಳಿ ಪ್ರಶ್ನೆ ಮಾಡಿದರು.

    ಇದೇ ವೇಳೆ ಕೊಟ್ಟ ಕುದುರೆ ಏರಲಾಗದವನು ವೀರನೂ ಅಲ್ಲ, ಧೀರನೂ ಅಲ್ಲ ಎಂದು ಗಾದೆ ಹೇಳಿ ವ್ಯಂಗ್ಯವಾಡಿದ ಅಶೋಕ್, ಕುಮಾರಸ್ವಾಮಿ ಅವರು ಅಧಿಕಾರ ವಹಿಸಿಕೊಂಡ ಬಳಿಕ ಮಂಡ್ಯದಲ್ಲಿ 25 ರೈತರು ಸತ್ತಿದ್ದಾರೆ. ನೀವು ಅಧಿಕಾರಕ್ಕೆ ಬಂದ ನಂತರ ಮಂಡ್ಯಕ್ಕೆ ನಿಮ್ಮ ಕೊಡುಗೆ ಏನು ಕೊಟ್ಟಿದ್ದೀರಿ ತಿಳಿಸಿ. ಚುನಾವಣೆಯಲ್ಲಿ ಗೆಲುವು ಕೊಟ್ಟು, ಸಿಎಂ ಕುರ್ಚಿ ಕೊಟ್ಟು, ಹಣ, ಕಾರು, ಬಂಗಲೆ ಎಲ್ಲಾ ಕೊಟ್ಟ ಮೇಲೂ ಸಾಯುತ್ತೇನೆ ಅಂದರೆ ಯಾರು ನಂಬುತ್ತಾರೆ ಹೇಳಿ ಪ್ರಶ್ನೆ ಮಾಡಿದರು.

    ಚುನಾವಣೆ ಬಳಿಕ ಮಂಡ್ಯಗೆ ಬಂದು ರೈತರಿಗೆ ನಾಟಿ ಮಾಡುವುದನ್ನು ಹೇಳಿ ಕೊಟ್ಟರು. ಒಂದೊಮ್ಮೆ ರೈತರ ಕಷ್ಟ ತಿಳಿಯಬೇಕಾದರೆ 1 ಎಕರೆ ಭೂಮಿ ಪಡೆದು ನಾಟಿ ಮಾಡಿದರೆ ಕಷ್ಟ ತಿಳಿಯುತ್ತದೆ ಎಂದರು. ಇದೇ ವೇಳೆ ದಿ. ಪುಟ್ಟಣಯ್ಯ ಅವರನ್ನು ನೆನೆದ ಆರ್ ಅಶೋಕ್ ಅವರು, ವಿಧಾನಸಭೆಯಲ್ಲಿ ನಾವು ಮಾತನಾಡುತ್ತೇವೆ, ಆದರೆ ಪುಟ್ಟಣಯ್ಯ ಅವರು ಮಾತನಾಡುವ ದಾಟಿ, ಜನರ ಬಗ್ಗೆ ಅವರಿಗಿರುವ ಕಾಳಜಿ ಎಲ್ಲರಿಗೂ ಸ್ಫೂರ್ತಿಯಾಗಿತ್ತು. ಅವರ ಭಾಷಣದ ಶೈಲಿಯೇ ಆಗಿರುತ್ತದೆ ಎಂದು ಮೆಚ್ಚುಗೆ ವ್ಯಕ್ತಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹನಿಮೂನ್‍ನಲ್ಲಿ ಇರಬೇಕಾದ ಸಮ್ಮಿಶ್ರ ಸರ್ಕಾರ ಡಿವೋರ್ಸ್ ಹಂತಕ್ಕೆ ತಲುಪಿದೆ: ಕಾಗೇರಿ

    ಹನಿಮೂನ್‍ನಲ್ಲಿ ಇರಬೇಕಾದ ಸಮ್ಮಿಶ್ರ ಸರ್ಕಾರ ಡಿವೋರ್ಸ್ ಹಂತಕ್ಕೆ ತಲುಪಿದೆ: ಕಾಗೇರಿ

    ಬಳ್ಳಾರಿ: ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಹನಿಮೂನ್ ಪಿರಿಯಡ್‍ನಲ್ಲಿರುವ ಬದಲು, ಡಿವೋರ್ಸ್ ಹಂತಕ್ಕೆ ತಲುಪಿದೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ವ್ಯಂಗ್ಯವಾಡಿದ್ದಾರೆ.

    ಲೋಕಸಭಾ ಉಪ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಪರ ನಗರದಲ್ಲಿ ಮತಯಾಚನೆ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಕ್ಕೆ ಹಣ ಬಿಡುಗಡೆ ಮಾಡುತ್ತಿಲ್ಲ. ಕೇವಲ ವರ್ಗಾವಣೆಯ ದಂಧೆಯಲ್ಲಿ ತೊಡಗಿದೆ. ಸರ್ಕಾರದ ನಾಯಕರಲ್ಲೇ ಕಿತ್ತಾಟ ಏರ್ಪಟ್ಟಿದ್ದು, ಸಮ್ಮಿಶ್ರ ಸರ್ಕಾರ ಹನಿಮೂನ್ ಪಿರಿಯಡ್ ನಲ್ಲಿರುವ ಬದಲು, ಡಿವೋರ್ಸ್ ಹಂತಕ್ಕೆ ತಲುಪಿದೆ. ಈ ಚುನಾವಣೆಯಲ್ಲಿ ಸರ್ಕಾರದ ವಿರುದ್ಧದ ಜನಾಭಿಪ್ರಾಯ ಬಿಜೆಪಿಗೆ ಮತವಾಗಿ ಪರಿವರ್ತನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಲೋಕಸಭಾ ಮತ್ತು ವಿಧಾನಸಭೆಯ ಉಪಚುನಾವಣೆಯಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ. ಅಲ್ಲದೇ ನಿರೀಕ್ಷೆಗೂ ಮೀರಿ ಭಾರೀ ಬಹುಮತದಿಂದ ಬಿಜೆಪಿ ಗೆಲ್ಲುವ ವಾತಾವರಣವೂ ಕಾಣುತ್ತಿದೆ. ನಮ್ಮ ಸಂಘಟನೆಯ ಶಕ್ತಿ ಬಹಳ ಚೆನ್ನಾಗಿದೆ. ಪ್ರಧಾನಿ ನರೇಂದ್ರ ಮೋದಿಯಿಂದ ನಮಗೆ ನಮ್ಮ ಬಗ್ಗೆ ವಿಶ್ವಾಸ ಮೂಡುವ ಆಡಳಿತ ಸಿಕ್ಕಿದೆ. ಅಲ್ಲದೇ ಬೇರೆ ಬೇರೆ ಜವಾಬ್ದಾರಿ ಇದ್ದ ಕಾರಣ, ರಾಜ್ಯ ಉಸ್ತುವಾರಿ ಮುರುಳೀಧರ ರಾವ್ ಪ್ರಚಾರಕ್ಕೆ ಬರಲು ಆಗಿಲ್ಲ. ಬಿಜೆಪಿ ಪ್ರಚಾರ ನಿರ್ವಹಣೆಗೆ ನಾವು ಸಮರ್ಥರಿದ್ದೇವೆ ಎಂದು ಹೇಳಿದರು.

    ಇದೇ ವೇಳೆ ಸಿದ್ದರಾಮಯ್ಯ ವಿರುದ್ಧ ಗಾಲಿ ಜನಾರ್ದನ ರೆಡ್ಡಿ ಹೇಳಿಕೆ ಪ್ರತಿಕ್ರಿಯಿಸಿ, ಇದು ನಿರೀಕ್ಷಿತ ಘಟನೆ ಎಂದು ನನಗೆ ಅನಿಸುತ್ತಿಲ್ಲ. ಆದರೂ ಸಹ ಈ ರೀತಿಯ ಘಟನೆಗಳು ಆಗಬಾರದು, ರೆಡ್ಡಿಯವರ ಹೇಳಿಕೆ ಬಗ್ಗೆ ಪಕ್ಷದ ನಾಯಕರು ಚರ್ಚಿಸಿ ಸೂಕ್ತ ನಿರ್ಣಯವನ್ನು ತೆಗೆದುಕೊಂಡು ತೀರ್ಮಾನ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಉಪಚುನಾವಣೆಯ 5 ಕ್ಷೇತ್ರಗಳಲ್ಲಿ ನ.3ರಂದು ಸರ್ಕಾರಿ ರಜೆ

    ಉಪಚುನಾವಣೆಯ 5 ಕ್ಷೇತ್ರಗಳಲ್ಲಿ ನ.3ರಂದು ಸರ್ಕಾರಿ ರಜೆ

    ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ 5 ಕ್ಷೇತ್ರಗಳ ಉಪಚುನಾವಣೆಯ ಮತದಾನದ ದಿನವಾದ ನವೆಂಬರ್ 3ರಂದು ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.

    ಮಂಡ್ಯ, ಬಳ್ಳಾರಿ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರ ಮತ್ತು ಜಮಖಂಡಿ, ರಾಮನಗರ ವಿಧಾನಸಭಾ ಮತಕ್ಷೇತ್ರಗಳಲ್ಲಿ ಇದೇ ಶನಿವಾರ ಮತದಾನ ನಡೆಯಲಿದೆ. ಹೀಗಾಗಿ ಈ ಐದೂ ಕ್ಷೇತ್ರಗಳ ವ್ಯಾಪ್ತಿಯ ಶಾಲಾ-ಕಾಲೇಜು, ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ಹಾಗೂ ಸರ್ಕಾರಿ ನೌಕರರಿಗೆ ರಜೆ ನೀಡಲಾಗಿದೆ.

    ಉಪಚುನಾವಣಾ ಕ್ಷೇತ್ರಗಳ ವ್ಯಾಪ್ತಿಯ ಹೊರಗೆ ಕೆಲಸ ನಿರ್ವಹಿಸಿಕೊಂಡು, ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳ ಅರ್ಹ ಮತದಾರರಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿ ನೌಕರರಿಗೂ ರಜೆ ನೀಡಲಾಗಿದೆ. ಆದರೆ ತುರ್ತು ಸೇವೆಗಳ ಮೇಲೆ ಕಾರ್ಯನಿರ್ವಹಿಸುವ ಸರ್ಕಾರಿ ನೌಕರರಿಗೆ ಈ ರಜೆ ಅನ್ವಯವಾಗುವುದಿಲ್ಲ ಎಂದು ಕರ್ನಾಟಕ ಸರ್ಕಾರದ ಸಚಿವಾಲಯ ತಿಳಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಮನಗರದಲ್ಲಿ ಮುಸ್ಲಿಮರಿಂದ ಅನಿತಾ ಕುಮಾರಸ್ವಾಮಿಗೆ ಫುಲ್ ಕ್ಲಾಸ್ – ವಿಡಿಯೋ ನೋಡಿ

    ರಾಮನಗರದಲ್ಲಿ ಮುಸ್ಲಿಮರಿಂದ ಅನಿತಾ ಕುಮಾರಸ್ವಾಮಿಗೆ ಫುಲ್ ಕ್ಲಾಸ್ – ವಿಡಿಯೋ ನೋಡಿ

    ರಾಮನಗರ: ರಾಮನಗರ ಟೌನ್ ನಲ್ಲಿ ಪ್ರಚಾರದ ಸಮಯದಲ್ಲಿ ಮೈತ್ರಿ ಸರ್ಕಾರದ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರನ್ನು ಮುಸ್ಲಿಂ ಮತದಾರರು ತರಾಟೆಗೆ ತೆಗೆದುಕೊಂಡಿದ್ದಾರೆ.

    ರಾಮನಗರದ ಗೀತಾಮಂದಿರ ಬಡಾವಣೆಯ ದರ್ಗಾ ಬಳಿ ಈ ಘಟನೆ ನಡೆದಿದೆ. ಪ್ರಚಾರದ ವೇಳೆ ಮುಸ್ಲಿಮರು ಮೂಲಭೂತ ಸೌಕರ್ಯ, ರಸ್ತೆ ಮತ್ತು ಚರಂಡಿ ಅವ್ಯವಸ್ಥೆಯಿಂದ ಆಕ್ರೋಶಗೊಂಡು ಅನಿತಾ ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿ ಕಿಡಿಕಾರಿದ್ದಾರೆ.

    ನಮಗೆ ನೀರು, ರಸ್ತೆ ಸೇರಿದಂತೆ ಮೂಲಭೂತ ಸೌಲಭ್ಯಗಳೇ ಇಲ್ಲದಂತಾಗಿದೆ. ಆದರೆ ನೀವು ಚುನಾವಣೆ ಬಂದಾಗ ಬರುತ್ತೀರಿ ಆಮೇಲೆ ಈ ಕಡೆ ಮುಖ ಕೂಡಾ ಹಾಕಲ್ಲ. ನಮ್ಮ ಪ್ರದೇಶಕ್ಕೆ ಸಮಸ್ಯೆ ನೋಡಲು ಬನ್ನಿ. ಮೊದಲು ನಮ್ಮ ಸಮಸ್ಯೆಯನ್ನು ನೀವು ಬಗೆಹರಿಸಿ. ಆಮೇಲೆ ನೀವು ವೋಟ್ ಕೇಳಿ ಎಂದು ಸಾರ್ವಜನಿಕರು ಗರಂ ಆಗಿಯೇ ಪ್ರಶ್ನೆ ಮಾಡಿದ್ದಾರೆ.

    ಸಾರ್ವಜನಿಕರ ಮಾತಿನಿಂದ ಅನಿತಾ ಕುಮಾರಸ್ವಾಮಿ ಅವರು ಇರಿಸು ಮುರಿಸಿಗೆ ಒಳಗಾಗಿ ಕೆಲಹೊತ್ತು ಏನೂ ಮಾತನಾಡದೇ ನಿಂತಿದ್ದರು. ಕಡೆಗೆ ಸ್ಥಳೀಯ ನಗರಸಭೆ ಸದಸ್ಯರಿಂದ ಸಮಾಧಾನ ಮಾಡುವ ಯತ್ನ ಮಾಡಿಸಿದ ಬಳಿಕ ಹಾಗೆ ಅನಿತಾ ಕುಮಾರಸ್ವಾಮಿ ಮುಂದೆ ಸಾಗಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಉಗ್ರಪ್ಪ ಗೆಲ್ಲುವುದು ಅಷ್ಟೇ ಖಚಿತ: ಸಿದ್ದರಾಮಯ್ಯ

    ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಉಗ್ರಪ್ಪ ಗೆಲ್ಲುವುದು ಅಷ್ಟೇ ಖಚಿತ: ಸಿದ್ದರಾಮಯ್ಯ

    ಬಳ್ಳಾರಿ: ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ, ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಗೆಲ್ಲುವುದು ಅಷ್ಟೇ ಖಚಿತ ಎಂದು ಮಾಜಿ ಸಿಎಂ, ಕಾಂಗ್ರೆಸ್ ಹಾಗೂ ಜೆಡಿಎಸ್ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

    ಹಗರಿಬೊಮ್ಮನಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಎಸ್ ಉಗ್ರಪ್ಪ ಪರ ಪ್ರಚಾರ ಮಾಡಿ, ಬೃಹತ್ ಬಹಿರಂಗ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದ 5 ಕ್ಷೇತ್ರಗಳಲ್ಲೂ ನಾನು ಪ್ರಚಾರ ಮಾಡಿದ್ದೇನೆ. ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪರ ಅಲೆ ಜೋರಾಗಿದೆ. ಬಿಜೆಪಿ ವಿರುದ್ಧದ ಅಲೆಯೂ ಸೃಷ್ಟಿಯಾಗಿದೆ. ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ, ಬಳ್ಳಾರಿಯಲ್ಲಿ ಉಗ್ರಪ್ಪ ಗೆಲ್ಲವುದು ಅಷ್ಟೇ ಸತ್ಯ ಎಂದು ಭವಿಷ್ಯ ನುಡಿದರು.

     

    ಪ್ರಧಾನಿ ನರೇಂದ್ರ ಮೋದಿಯವರ ಆಡಳಿದಿಂದಾಗಿ ರಾಜ್ಯದ ಜನ ಭ್ರಮನಿರಸನಗೊಂಡಿದ್ದಾರೆ. ಪ್ರಧಾನಿ ಮೋದಿ ಸುಳ್ಳಿನ ಸರದಾರ, ವಚನ ಭ್ರಷ್ಟರಾಗಿದ್ದಾರೆ. ದೇಶದ ಎಲ್ಲಾ ಪ್ರಧಾನಿಗಳ ಪೈಕಿ ನರೇಂದ್ರ ಮೋದಿ ಅತಿದೊಡ್ಡ ಸುಳ್ಳುಗಾರ. ಮೋದಿ ಪ್ರಧಾನಿಯಾದ ನಂತರ ದೇಶದಲ್ಲಿ ಅಚ್ಛೇ ದಿನ್ ಬರಲೇ ಇಲ್ಲ. ದಿನಬಳಕೆಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಪೆಟ್ರೋಲ್-ಡೀಸೆಲ್ ದರಗಳು ಸಹ ಹೆಚ್ಚಾಗಿವೆ ಎಂದು ಕಿಡಿಕಾರಿದರು.

    ಮೋದಿಯವರು ನಾನು ಚೌಕಿದಾರ ಎಂದು ಹೇಳುತ್ತಾರೆ. ಆದರೆ ಅವರು ಚೌಕಿದಾರರಲ್ಲ ಅವರು ಚೋರರಾಗಿದ್ದಾರೆ. ರಫೇಲ್ ಡೀಲ್ ನಲ್ಲಿ 40 ಸಾವಿರ ಕೋಟಿ ರೂಪಾಯಿಯನ್ನು ಲೂಟಿ ಮಾಡಿದ್ದಾರೆ. 2014ರಲ್ಲಿ ವಿದೇಶದಲ್ಲಿರುವ ಕಪ್ಪುಹಣವನ್ನು ತಂದು, ಪ್ರತಿಯೊಬ್ಬ ಭಾರತೀಯರ ಖಾತೆಗೆ 15 ಲಕ್ಷ ರೂ. ಹಾಕುತ್ತೀವಿ ಎಂದು ಹೇಳಿದ್ದರು. ಆದರೆ ಇಂದಿಗೆ ನಾಲ್ಕೂವರೆ ವರ್ಷವಾದರೂ, ಯಾವೊಬ್ಬ ಭಾರತೀಯರ ಖಾತೆಯಲ್ಲಿ 15 ರೂಪಾಯಿ ಸಹ ಬಿದ್ದಿಲ್ಲ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಕಾಂಗ್ರೆಸ್ಸಿಗೆ ಮತ ನೀಡಿ ಎಂದು ಮನವಿ ಮಾಡಿಕೊಂಡರು.

    ನಾಲ್ಕು ವರ್ಷ ಸಂಸದರಾಗಿದ್ದ ವೇಳೆ ಶ್ರೀರಾಮುಲು ಬಳ್ಳಾರಿಗಾಗಿ ಏನು ಮಾಡಿದ್ದಾರೆ? ಲೋಕಸಭೆಯಲ್ಲಿ ಅವರು ಏನು ಮಾತನಾಡಿದರು. ಇನ್ನೂ ಶಾಂತ ಸಂಸದೆಯಾಗಿದ್ದಾಗ ಏನು ಮಾಡಿದ್ರು ಎಂದು ಪ್ರಶ್ನಿಸಿದರು. ಯಡಿಯೂರಪ್ಪನವರು ಹಸಿರು ಶಾಲು ಹಾಕಿಕೊಂಡು, ರೈತರ ಸಾಲಮನ್ನಾ ಮಾಡಲಿಲ್ಲ ಎಂದು ಬಿಎಸ್‍ವೈ ವಿರುದ್ಧವೂ ವಾಗ್ದಾಳಿ ನಡೆಸಿದರು.

    ಸಮಾವೇಶದಲ್ಲಿ ಉಗ್ರಪ್ಪ ಪರ ಪ್ರಚಾರ ನಡೆಸಲು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಸಚಿವ ಶಿವಶಂಕರ್ ರೆಡ್ಡಿ, ಮಾಜಿ ಸಚಿವ ಸತೀಶ್ ಜಾರಕಿಹೊಳಿ, ಶಾಸಕ ಭೀಮಾನಾಯ್ಕ್ ಹಾಗೂ ಎಚ್. ಆಂಜನೇಯ ಆಗಮಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಉಗ್ರಪ್ಪನಿಗೆ ಬಟನ್ ಒತ್ತಿದ್ರೆ ಟೊಂಯ್ ಅಂತಾ ಸೌಂಡ್ ಬರ್ಬೇಕು, ಅಲ್ಲಿ ಮೋದಿ ಸೊಂಯ್ ಅನ್ನಬೇಕು- ಬಿಜೆಪಿ ವಿರುದ್ಧ ಇಬ್ರಾಹಿಂ ವ್ಯಂಗ್ಯ

    ಉಗ್ರಪ್ಪನಿಗೆ ಬಟನ್ ಒತ್ತಿದ್ರೆ ಟೊಂಯ್ ಅಂತಾ ಸೌಂಡ್ ಬರ್ಬೇಕು, ಅಲ್ಲಿ ಮೋದಿ ಸೊಂಯ್ ಅನ್ನಬೇಕು- ಬಿಜೆಪಿ ವಿರುದ್ಧ ಇಬ್ರಾಹಿಂ ವ್ಯಂಗ್ಯ

    ಬಳ್ಳಾರಿ: ಮೊಳಕಾಲ್ಮೂರು ಶಾಸಕ ಶ್ರೀರಾಮುಲುಗೆ ಮೋದಿ ಬಿಟ್ಟರೆ ಬೇರೆ ಯಾರು ಗೊತ್ತಿಲ್ಲ. ಮೋದಿ ಜಪ ಬಿಟ್ರೆ ಅವರಿಗೆ ಬೇರೇನೂ ಗೊತ್ತಿಲ್ಲ. ಶ್ರೀರಾಮುಲು ಅವರು 10 ಜನ ಸಂಸದರು ಹೆಸರು ಹೇಳಲಿ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಚಾಲೆಂಜ್ ಹಾಕಿದ್ದಾರೆ.

    ಉಪಚುನಾವಣೆಯ ನಿಮಿತ್ತ ಬಳ್ಳಾರಿಗೆ ಆಗಮಿಸಿ ಕುರುಗೋಡ್ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪನಿಗೆ ಬಟನ್ ಒತ್ತಿದ್ರೆ ಟೊಂಯ್ ಅಂತಾ ಸೌಂಡ್ ಬರಬೇಕು. ಆಗ ಅಲ್ಲಿ ಮೋದಿ ಸೊಂಯ್ ಅನ್ನಬೇಕು ಎಂದು ವ್ಯಂಗ್ಯವಾಡಿದ್ದಾರೆ.

    ಬಳ್ಳಾರಿಯಲ್ಲಿ ಸುಗುಲಮ್ಮ ದೇವಸ್ಥಾನ ಹೊಡೆದಾಗ ಸಿದ್ದರಾಮಯ್ಯ ಅವರನ್ನ ಆ ದೇವಿ ಕರೆದಿದ್ದಳು ಅಂತ ತೆಲುಗಿನಲ್ಲಿ ಹೇಳುವ ಮೂಲಕ ಸಿ.ಎಂ ಇಬ್ರಾಹಿಂ ಅವರು ರೆಡ್ಡಿಗಳ ವಿರುದ್ಧ ವ್ಯಂಗ್ಯವಾಡಿದ್ರು. ಇದೇ ವೇಳೆ ಕಾಯಿಪಲ್ಯ ಮಾರುವ ತರಕಾರಿಯರು ಕಾರ್ಡ್ ಎಲ್ಲಿ ಇಡ್ಬೇಕು. ಲಕ್ಷ್ಮೀ ಪೂಜೆಯಲ್ಲಿ ವ್ಯಾಪಾರಸ್ಥರಿಗೆ ದುಡ್ಡು ಇಲ್ಲ. ಕಾರ್ಡ್ ಇಟ್ಟು ಪೂಜೆ ಮಾಡ್ತಿದ್ದಾರೆ ಅಂತ ಕ್ಯಾಶ್ ಲೆಸ್ ಮಾಡಿದ ಬಿಜೆಪಿಯವರ ವಿರುದ್ಧವೂ ವ್ಯಂಗ್ಯವಾಡಿದ್ರು.

    ಇದೇ ವೇಳೆ ಸಿದ್ದರಾಮಯ್ಯ ಅವರೂ ಕೂಡ ಸಭೆಯಲ್ಲಿ ಭಾಗವಹಿಸಿದ್ದು, ಅವರಿಗೆ ಅಭಿಮಾನಿಗಳು ಹೆಗಲ ಮೇಲೆ ಕಂಬಳಿ ಹಾಕಿ ಕೈಗೆ ಕುರಿಮರಿ ಕೊಡುಗೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ಆ ಕುರಿಮರಿ ಕೈಯಲ್ಲಿ ಇಡ್ಕೊಂಡು ಪೋಸ್ ಕೊಟ್ಟರು.

    ಬಿಎಸ್‍ವೈ ವಿರುದ್ಧ ಡಿಕೆಶಿ ಕಿಡಿ:
    ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೈಕಲ್ ಕೊಟ್ಟಿದ್ದು ಬಿಟ್ರೆ ಏನ್ ಅಭಿವೃದ್ಧಿ ಮಾಡಿದ್ದಾರೆ. ಬಡವರ ಪರ ಸರ್ಕಾರ ಅಂದ್ರೆ ಅದು ಕಾಂಗ್ರೆಸ್ ಸರ್ಕಾರವಾಗಿದೆ. ಬಿಜೆಪಿಯವರು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿ ಬಡವರ ಪಾಲಿಗೆ ಸಂಕಷ್ಟ ತಂದಿದ್ದಾರೆ. ಇದು ಡಿಕೆಶಿ-ರಾಮುಲು ಎಲೆಕ್ಷನ್ ಅಲ್ಲ. ಜೆ. ಶಾಂತಾ ಉಗ್ರಪ್ಪ ನಡುವಿನ ಚುನಾವಣೆಯಾಗಿದೆ. ಬಿಎಸ್‍ಸಸಆರ್ ಪಾರ್ಟಿ ಮಾಡಿದ್ದ ಶ್ರೀರಾಮುಲು ಅವರು ಅದರಲ್ಲಿ ಸೋತು ಸುಣ್ಣವಾದ ಮೇಲೆ ಮತ್ತೆ ಬಿಜೆಪಿಗೆ ಬಂದಿದ್ದಾರೆ. ಆಯ್ತು ಜನರು ನಿಮ್ಮನ್ನು ಕೈ ಬಿಟ್ಟಿದ್ದಾರೆ ಒಂದು ಸಲ ಅವಕಾಶ ಕೊಡ್ತಾರೆ ಅದನ್ನು ಶ್ರೀರಾಮುಲು ಕಳೆದುಕೊಂಡಿದ್ದಾರೆ. ನಾವು ನೀತಿ ರಾಜಕಾರಣ ಮಾಡುತ್ತೇವೆ. ನಿಮ್ಮಂತ ಹೊಲಸು ರಾಜಕಾರಣ ಮಾಡೋಲ್ಲ ಅಂತ ವಾಗ್ದಾಳಿ ನಡೆಸಿದ್ರು.

    ನೂರಾರು ಜನ ಶಾಸಕರನ್ನ ತಯಾರು ಮಾಡಬಹುದು. ಆದರೆ ಒಬ್ಬ ಉಗ್ರಪ್ಪನನ್ನು ತಯಾರು ಮಾಡಲು ಆಗಲ್ಲ. ಈ ಚುನಾವಣೆಯಲ್ಲಿ ನೀವು ಉಗ್ರಪ್ಪನನ್ನು ಗೆಲ್ಲಿಸ್ತಿರಿ ಎಂಬ ನಂಬಿಕೆ ನಮಗೆ ಇದೆ ಅಂತ ಹೇಳಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವ್ಯಾಪಾರಿ ಮಹಿಳೆಯಿಂದ ನಟಿ ಪೂಜಾ ಗಾಂಧಿಗೆ ತರಾಟೆ

    ವ್ಯಾಪಾರಿ ಮಹಿಳೆಯಿಂದ ನಟಿ ಪೂಜಾ ಗಾಂಧಿಗೆ ತರಾಟೆ

    ಶಿವಮೊಗ್ಗ: ಕರ್ನಾಟಕ ಲೋಕಸಭಾ ಉಪಚುನಾವಣೆಯ ಪ್ರಚಾರ ಭರದಿಂದ ಸಾಗುತ್ತಿದ್ದು, ಜಿಲ್ಲೆಯಲ್ಲಿ ನಟಿ ಪೂಜಾಗಾಂಧಿ ಅವರು ಜೆಡಿಎಸ್ ಪರ ಪ್ರಚಾರ ಮಾಡುತ್ತಿದ್ದಾರೆ. ಪೂಜಾಗಾಂಧಿ ಚುನಾವಣಾ ಪ್ರಚಾರದ ವೇಳೆ ಪೇಚಿಗೆ ಸಿಲುಕಿದ್ದಾರೆ.

    ಪೂಜಾಗಾಂಧಿ ಎಸ್.ಎನ್. ಮಾರ್ಕೆಟ್ ನಲ್ಲಿ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಪರ ಮತ ಯಾಚನೆ ಮಾಡಲು ಬಂದಿದ್ದರು. ಈ ವೇಳೆ ಸಿಲಿಂಡರ್ ರೇಟ್ ಹೆಚ್ಚಾಗಿದೆ, ಡೀಸೆಲ್, ಪೆಟ್ರೋಲ್ ರೇಟು ಹೆಚ್ಚಾಗಿದೆ. ಗಾಂಧಿ ಬಜಾರ್ ನಲ್ಲಿ ವ್ಯಾಪಾರ ಮಾಡಲು ಅವಕಾಶ ಕೊಡುತ್ತಿಲ್ಲ. ಈಗ ವೋಟ್ ಕೇಳುವುದಕ್ಕೆ ಬಂದಿದ್ದೀರಿ ಎಂದು ವ್ಯಾಪಾರಿ ಮಹಿಳೆ ನಟಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ನನ್ನೊಬ್ಬಳಿಗೆ ಇಷ್ಟು ಕಷ್ಟವಾಗಿದೆ. ಬೇರೆಯವರಿಗೆ ನನಗಿಂತಲೂ ಹೆಚ್ಚು ಕಷ್ಟ ಆಗುತ್ತಿದೆ. ವ್ಯಾಪಾರ ಮಾಡಬೇಕು, ಮಕ್ಕಳನ್ನು ಸ್ಕೂಲಿಗೆ ಕಳಿಸಬೇಕು. ಇದರ ಜೊತೆಗೆ ಎಲ್ಲಾ ರೇಟು ಹೀಗೆ ಹೆಚ್ಚಾದರೆ ನಾವು ಬದುಕೋದು ಹೇಗೆ ಎಂದು ಮಹಿಳೆ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಈ ಸಂದರ್ಭದಲ್ಲಿ ಮಹಿಳೆಗೆ ಸಮಾಧಾನ ಮಾಡುವಲ್ಲಿ ಪೂಜಾಗಾಂಧಿ ಸೋತಿದ್ದು, ಬಳಿಕ ಸ್ಥಳಿಯ ಮುಖಂಡರು ವ್ಯಾಪಾರಿ ಮಹಿಳೆಗೆ ಸಮಾಧಾನ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv