Tag: ByElections

  • ಸುಳ್ಳು ಹೇಳುವುದಕ್ಕೆ ನೊಬೆಲ್ ಕೊಡುವುದಾದರೆ ಅದನ್ನು ಮೋದಿಗೆ ಕೊಡಬೇಕು – ಸಿದ್ದರಾಮಯ್ಯ

    ಸುಳ್ಳು ಹೇಳುವುದಕ್ಕೆ ನೊಬೆಲ್ ಕೊಡುವುದಾದರೆ ಅದನ್ನು ಮೋದಿಗೆ ಕೊಡಬೇಕು – ಸಿದ್ದರಾಮಯ್ಯ

    – ಮೋದಿ ಜನರ ಬಳಿ ಬರುವುದಿಲ್ಲ
    – ನಾನು ಜನರ ಬಳಿ ಬಂದಿದ್ದಕ್ಕೆ ಕೊರೊನಾ ಬಂತು

    ಬೆಳಗಾವಿ: ಪ್ರಧಾನಿ ಮೋದಿಯವರು ನೀಡುವ ಭರವಸೆಗಳನ್ನು ನೋಡಿದಾಗ ಇತಿಹಾಸದಲ್ಲಿ ಮೋದಿಯಂತಹ ಪ್ರಧಾನಿ ಎಂದಿಗೂ ಬಂದಿರಲಿಲ್ಲ ಅನ್ನಿಸುತ್ತದೆ. ಆದರೆ ಅವರು ನೀಡಿರುವ ಎಷ್ಟು ಭರವಸೆಗಳನ್ನು ಈವರೆಗೆ ಈಡೇರಿಸಿದ್ದಾರೆ? ಅಚ್ಛೇ ದಿನ್ ಆಯೇಗಾ ಎಂದರು. ಎಲ್ಲಿದೇ ಅಚ್ಛೇದಿನ್? ಸುಳ್ಳು ಹೇಳುವುದಕ್ಕೆ ನೊಬೆಲ್ ಪ್ರಶಸ್ತಿ ಕೊಡುವುದಾದರೆ ಅದನ್ನು ಮೋದಿಯವರಿಗೆ ಕೊಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮೋದಿ ವಿರುದ್ಧ ವ್ಯಂಗ್ಯವಾಡಿದ್ದಾರೆ.

    ಬೆಳಗಾವಿಯ ಸವದತ್ತಿಯಲ್ಲಿ ಲೋಕಸಭಾ ಉಪ ಚುನಾವಣೆಯ ಪ್ರಚಾರದ ವೇಳೆ ಮಾತನಾಡಿದ ಅವರು, 17 ರಂದು ಉಪಚುನಾವಣೆ ಇದೆ. ಈ ಚುನಾವಣೆ ರಾಜ್ಯದ ರಾಜಕೀಯದ ದೃಷ್ಟಿಯಿಂದ ಮಹತ್ವದ ಚುನಾವಣೆ. 3 ವರ್ಷದ ಅವಧಿಗೆ ಪ್ರತಿನಿಧಿ ಕಳುಹಿಸುವ ಇನ್ನೊಂದು ಅವಕಾಶ ಬೆಳಗಾವಿ ಜನತೆಗೆ ದೊರಕಿದೆ. ಯಾರನ್ನು ಕಳುಹಿಸಿದರೆ ರಾಜ್ಯಕ್ಕೆ ಅನುಕೂಲ ಎಂದು ವಿಚಾರ ಮಾಡಿ ಕಳುಹಿಸಬೇಕು ಎಂದು ಮನವಿ ಮಾಡಿದರು.

    ಮೋದಿಯವರು 7 ವರ್ಷಗಳಿಂದ ಪ್ರಧಾನಿಯಾಗಿದ್ದಾರೆ. ಈ ಹಿಂದೆ 15 ಲಕ್ಷ ಕೊಡುತ್ತೇನೆ ಎಂದಿದ್ದರು. 15 ಪೈಸೆನಾದ್ರು ಕೊಟ್ಟಿದ್ದಾರಾ? ಯುವಕರಿಗೆ ಸುಮ್ಮನೆ ಭ್ರಮೆ ಹುಟ್ಟಿಸಿದ್ದಾರೆ. 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದಿದ್ದರು. 7 ವರ್ಷ ಆಯ್ತು 10 ಸಾವಿರ ಉದ್ಯೋಗ ಸಹ ಸೃಷ್ಟಿಯಾಗಿಲ್ಲ. ಉದ್ಯೋಗ ಸೃಷ್ಟಿ ಕುರಿತು ನೀಡಿರುವ ಭರವಸೆ ಬಗ್ಗೆ ಮೋದಿಗೆ ಯುವಕರು ಕೇಳಬೇಕು. ಕಾರ್ಮಿಕರೆಲ್ಲಾ ಬಿದಿ ಪಾಲಾಗಿದ್ದಾರೆ. ಹೇಳೊರಿಲ್ಲ ಕೇಳೋರಿಲ್ಲ. ಮೋದಿ ಅಚ್ಛೇ ದಿನ್ ಆಯೇಗಾ ಎಂದಿದ್ದರು. ಆದರೆ ಪೆಟ್ರೋಲ್, ಡಿಸೆಲ್, ಸಿಲಿಂಡರ್ ಬೆಲೆ ಈಗ ಏರಿಕೆಯಾಗಿವೆ. ರಸಗೊಬ್ಬರ ಬೆಲೆ, ಡಿಎಪಿ ಕ್ವಿಂಟಾಲ್‍ಗೆ 1,400 ರೂ. ಜಾಸ್ತಿಯಾಗಿದೆ. 2,400  ರೂ.ಇದ್ದ ಬೆಲೆ 3800 ರೂ. ಆಗಿದೆ. ರೈತರು ಈ ಬಗ್ಗೆ ಯೋಚನೆ ಮಾಡಬೇಕು ಎಂದರು.

    ಭಾತರದ ಇತಿಹಾಸದಲ್ಲಿ ಇಂತಹ ಸರ್ಕಾರ ಎಂದಿಗೂ ಬಂದಿರಲಿಲ್ಲ. ಕಚ್ಚಾ ತೈಲ ಬೆಲೆ ಕಡಿಮೆ ಇದೆ. ಆದರೆ ಇಲ್ಲಿ ಪೆಟ್ರೋಲ್, ಡಿಸೆಲ್ ಬೆಲೆ ಏರಿಕೆಯಾಗಿದೆ. ಹಿಟ್ಲರ್ ಒಬ್ಬ ಗೊಬೆಲ್ಸ್ ಎಂಬುವವನನ್ನು ಸುಳ್ಳು ಹೇಳಲು ಇಟ್ಟುಕೊಂಡಿದ್ದ. ಅದೇ ರೀತಿ ಮೋದಿ ಸುಳ್ಳು ಹೇಳಿ ಅದನ್ನು ಸತ್ಯ ಎಂದು ಬಿಂಬಿಸಿ ನಂಬಿಸಲು ಹೊರಟಿದ್ದಾರೆ. ಪ್ರಧಾನಿ ವ್ಯಾಕ್ಸಿನ್ ಕೊಡುವ ಬದಲು ಚಪ್ಪಾಳೆ ಹೊಡೆಸಿ, ಜಾಗಟೆ ಬಾರಿಸಿ ಅಂತಾರೆ. ಅವರು ಜನರ ಬಳಿ ಬರುವುದಿಲ್ಲ. ನಾನು ಜನರ ಮಧ್ಯೆ ಇದ್ದಿದ್ದಕ್ಕೆ ನನಗೆ ಕೊರೊನಾ ಬಂತು ಎಂದು ಹೇಳಿದರು.

    ಯಡಿಯೂರಪ್ಪ ಅವರಿಗೆ ಹಿಂಬಾಗಿಲಿನಿಂದ ಬಂದು ರೂಢಿ. 2008ರಲ್ಲೂ, ಈಗಲೂ ಅವರು ಹಿಂಬಾಗಿಲಿನಿಂದಲೇ ಬಂದಿದ್ದು. ಆಗ 110, ಈಗ 104 ಸ್ಥಾನ ಗೆದ್ದಿದ್ದಾರೆ. ಆಪರೇಷನ ಕಮಲ ಹೆಸರು ಬಂದಿದ್ದು ಮಿಸ್ಟರ್ ಯಡಿಯೂರಪ್ಪ ಅವರಿಂದಲೇ. ಯಡಿಯೂರಪ್ಪ ಎರಡು ಬಾರಿ ಆಪರೇಷನ್ ಕಮಲ ಮಾಡಿದರು. 500 ಕೋಟಿ ಖರ್ಚು ಮಾಡಿದರು. ಎಲ್ಲಿಂದ ಬಂತು ಹಣ? ಅವರ ಮನೆಯಿಂದ ಹಣ ಬಂತಾ? ಸಿಎಂ ಚೆಕ್ ಮುಖಾಂತರ ಲಂಚ ತೆಗೆದುಕೊಳ್ಳುತ್ತಾರೆ. ಅವರ ಮಗ ಆರ್‍ಟಿಜಿಎಸ್ ನಿಂದ ಹಣ ತೆಗೆದುಕೊಳ್ಳುತ್ತಾರೆ. ಇದನ್ನು ನಾನು ಅವರ ಮುಖದ ಮೇಲೆಯೇ ಹೇಳಿದ್ದೇನೆ ಎಂದು ವಾಗ್ದಾಳಿ ನಡೆಸಿದರು.

    ನನ್ನ ಅಧಿಕಾರದಲ್ಲಿ ಒಂದು ಚೆಕ್ ಬೌನ್ಸ್ ಆಗಿಲ್ಲ. ಯಡಿಯೂರಪ್ಪ ಬಂದ ಮೇಲೆ ಖಜಾನೆ ಖಾಲಿ. ಖಜಾನೆ ಯಾಕೆ ಖಾಲಿ ಆಯ್ತು ಎಂದು ಕೇಳಿದರೆ ಕೊರೊನಾ ಅಂತಾರೆ. ಇದೇ ಯಡಿಯೂರಪ್ಪ ಅವರ 2018 ರ ಪ್ರಣಾಳಿಕೆ ತೆಗೆದು ನೋಡಿ. ರೈತರ ಸಾಲ ಮನ್ನಾ ಅಂದಿದ್ರು, ಹಿಂದೆ ಆಗಲಿ ಈಗ ಆಗಲಿ ಸಾಲಮನ್ನಾ ಮಾಡಿದ್ದಾರಾ? ಯಡಿಯೂರಪ್ಪ ಇಗಲೂ ರೈತರ ಶಾಲು ಹಾಕ್ತಾರೆ. ಅದಕ್ಕೆ ಬೆಲೆ ಇಲ್ವಾ ? ಮಣ್ಣಿನ ಮಗಾ ಅಂತಾರೆ. ಸಾಲ ಮನ್ನಾ ಮಾಡಿ ಅಂದರೆ ನಮ್ಮ ಬಳಿ ನೋಟ್ ಪ್ರಿಂಟ್ ಮಷಿನ್ ಇಲ್ಲಾ ಅಂತಾರೆ. ಇವರ ಬಳಿ ನೋಟ್ ಎಣಿಸುವ ಮಷಿನ್ ಮಾತ್ರ ಸಿಗುತ್ತದೆ ಎಂದು ಲೇವಡಿ ಮಾಡಿದ್ದಾರೆ.

    ನುಡಿದಂತೆ ನಡೆದ ಸರ್ಕಾರ ನಮ್ಮದು. ಇಂದಿರಾ ಕ್ಯಾಂಟೀನ್ ನಿಲ್ಲಿಸುತ್ತಿದ್ದಾರೆ. ಕೇಳಿದರೆ ದುಡ್ಡಿಲ್ಲ ಅಂತಾರೆ. ಅದಕ್ಕೆ ಕುರ್ಚಿ ಬಿಟ್ಟು ಇಳಿರಿ ಎಂದಿದ್ದೆ. ಇನ್ನೂ ಅಲ್ಲೇ ಫೆವಿಕಾಲ್ ಹಾಕ್ಕೊಂಡು ಕುಳಿತಿದ್ದಾರೆ. ಅಕ್ಕಿ ಫ್ರೀಯಾಗಿ ಕೊಟ್ಟಿದ್ದು ನಮ್ಮಪ್ಪನ ಮನೆಯಿಂದ ಅಲ್ಲ. ನಿಮ್ಮಪ್ಪನ ಮನೆಯಿಂದ ಕೂಡ ಕೊಡಬೇಡಿ. ಜನರ ಹಣ ಅದು. ಕೆರೆಯ ನೀರು ಕೆರೆಗೆ ಚೆಲ್ಲಬೇಕು. ನಾವು ಮತ್ತೇ 23ಕ್ಕೆ ಅಧಿಕಾರಕ್ಕೆ ಬರುತ್ತೇವೆ. ಆಗ 10 ಕೇಜಿ ಅಕ್ಕಿ ಕೊಡುತ್ತೇವೆ ಎಂದಿದ್ದಾರೆ. ಮೋದಿ ಬಳಿ ಹೋಗಲು ರಾಜ್ಯ ಬಿಜೆಪಿ ನಾಯಕರು ಗಢ ಗಢ ನಡುಗುತ್ತಾರೆ. ನಿಮಗೆ ಭಯ ಇದ್ದರೆ ನಮ್ಮನ್ನು ಕರೆಯಿರಿ ನಾವು ಬಂದು ಮಾತನಾಡುತ್ತೇವೆ ಎಂದು ಟೀಕಿಸಿದರು.

  • ಕಾಂಗ್ರೆಸ್ ಸೋಲಿಗೆ ನಾಯಕರೇ ಕಾರಣ – ತಯಾರಾಗುತ್ತಿದೆ ಚಾರ್ಜ್‍ಶೀಟ್

    ಕಾಂಗ್ರೆಸ್ ಸೋಲಿಗೆ ನಾಯಕರೇ ಕಾರಣ – ತಯಾರಾಗುತ್ತಿದೆ ಚಾರ್ಜ್‍ಶೀಟ್

    ಬೆಂಗಳೂರು: ಎರಡು ಉಪಚುನಾವಣೆಯಲ್ಲಿನ ಸೋಲು ಕಾಂಗ್ರೆಸ್‍ನಲ್ಲಿ ಆಂತರಿಕ ಕಲಹ ಭುಗಿಲೇಳುವ ಸಾಧ್ಯತೆ ಕಂಡು ಬರುತ್ತಿದೆ. ಚುನಾವಣಾ ಅಖಾಡದಲ್ಲಿ ಹಿರಿಯರನ್ನು ಕಡೆಗಣಿಸಿ ನಾವೇ ಮೇಲು ಎಂದು ಓಡಾಡಿದವರ ವಿರುದ್ಧ ತಂಡವೊಂದು ಹೈಕಮಾಂಡ್‍ಗೆ ದೂರು ಕೊಡಲು ಚಾರ್ಜ್‍ಶೀಟ್ ಸಿದ್ದಪಡಿಸುತ್ತಿದೆ ಎನ್ನಲಾಗಿದೆ.

    ಕೆಲವರು ಪಕ್ಷದ ಶಿಸ್ತು ಮೀರಿ ಸಿಎಂ ಜಪ ಮಾಡಿದ್ದು, ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರಿತು. ತಮ್ಮ ಬೆಂಬಲಿಗರ ಆಟಾಟೋಪಕ್ಕೆ ಬ್ರೇಕ್ ಹಾಕದೇ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಪರೋಕ್ಷವಾಗಿ ಕುಮ್ಮಕ್ಕು ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಿದ್ದಾರೆ ಎಂದು ತಿಳಿದುಬಂದಿದೆ.

    ಉಪ ಫಲಿತಾಂಶದ ಬಗ್ಗೆ ಹಿರಿಯ ನಾಯಕ ಎಸ್‍ಎಂ ಕೃಷ್ಣ ಮಾತನಾಡಿ, ದೇಶದಲ್ಲಿ ಬದಲಾವಣೆ ಆಗ್ತಿದೆ. ಕಾಂಗ್ರೆಸ್ ಅವನತಿಯತ್ತ ಸಾಗುತ್ತಿದೆ. ಬಿಜೆಪಿ ತನ್ನ ಪ್ರಖರತೆ ಹೆಚ್ಚಿಸಿಕೊಳ್ತಿದೆ. ಮೋದಿ ಒಬ್ಬ ರಾಜ ಋಷಿ ಅಂತಾ ಹೊಗಳಿದ್ದಾರೆ.

    ಉಪಚುನಾವಣೆ ಸೋಲಿನ ಬಳಿಕ ಸಿದ್ದರಾಮಯ್ಯ ವಿಮರ್ಶೆ ಮಾಡಿದ ಬಗ್ಗೆ ನಾನು ಪ್ರತಿಕ್ರಿಯೆ ನೀಡೋದಿಲ್ಲ. ಸೋತ ಮೇಲೆ ನಾನಾ ಆಂಗಲ್ ನಲ್ಲಿ ವಿಮರ್ಶೆ ಮಾಡುತ್ತಾರೆ ಎಂದು ಹೇಳಿದರು.

    ಮಾಜಿ ಸಚಿವ ಸಿಟಿ ರವಿ ಮಾತನಾಡಿ, ಎಲ್ಲಿದೆ ಬಿಜೆಪಿ ಅಲೆ ಎಂದು ಸಿದ್ದರಾಮಯ್ಯ ಕೇಳಿದ್ರು. ಈಗಲೂ ಬಿಜೆಪಿ ಅಲೆ ಇಲ್ಲ ಅಂದ್ರೆ ಸಿದ್ದರಾಮಯ್ಯಗೆ ದೋಷ ಇದೆ ಎಂದರ್ಥ ಎಂದು ಕಾಲೆಳೆದರು. ಡಿಸಿಎಂ ಲಕ್ಷಣ ಸವದಿ ಅವರು ಕಾಂಗ್ರೆಸ್ ಪಕ್ಷ ಎರಡು ಹೋಳಾದ್ರೂ ಅಚ್ಚರಿ ಇಲ್ಲ ಎಂದು ಭವಿಷ್ಯ ನುಡಿದರು.

  • ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ- ಸೂರಜ್ ರೇವಣ್ಣ ಎ1 ಆರೋಪಿಯಾದ್ರೂ ಬಂಧನವಿಲ್ಲ

    ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ- ಸೂರಜ್ ರೇವಣ್ಣ ಎ1 ಆರೋಪಿಯಾದ್ರೂ ಬಂಧನವಿಲ್ಲ

    ಹಾಸನ: ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣ ಅವರ ಪುತ್ರ ಸೂರಜ್ ರೇವಣ್ಣ ಎ1 ಆರೋಪಿಯಾದರು ಬಂಧಿಸಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ಆರೋಪ ಮಾಡಿದ್ದಾರೆ.

    ಮಂಗಳವಾರ ರಾತ್ರಿ ಉಪಚುನಾವಣೆಗೆ ಹಣ ಹಂಚಲು ಬಂದಿದ್ದಾರೆ ಎಂದು ಹಾಸನದ ಚನ್ನರಾಯಪಟ್ಟಣ ತಾ. ಕೆ.ಆರ್ ಪೇಟೆ ಗಡಿಭಾಗದ ನಂಬಿಹಳ್ಳಿ ಗ್ರಾಮದಲ್ಲಿ ಸೂರಜ್ ರೇವಣ್ಣ ಮತ್ತು ಅವರ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದರು.

    ಈ ವಿಚಾರವಾಗಿ ಸೂರಜ್ ರೇವಣ್ಣ ಸೇರಿದಂತೆ ಏಳು ಜನರ ಮೇಲೆ ಬಿಜೆಪಿ ಕಾರ್ಯಕರ್ತರು ಚನ್ನರಾಯಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್‍ಐಆರ್ ದಾಖಲಾಗಿದೆ. ಆದರೆ ದೂರು ನೀಡಿ 24 ಗಂಟೆ ಕಳೆದರೂ ಎ1 ಆರೋಪಿ ಬಂಧನವಾಗಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

    ಈ ಹಲ್ಲೆಗೆ ಸಂಬಂಧಿಸಿದ ವಿಡಿಯೋ ಈಗ ಪಬ್ಲಿಕ್ ಟಿವಿಗೆ ಲಭ್ಯವಾಗಿದ್ದು, ನಾನು ಕಳೆದ 20-30 ವರ್ಷಗಳಿಂದ ಜೆಡಿಎಸ್ ಕಾರ್ಯಕರ್ತನಾಗಿ ದುಡಿದ್ದೇನೆ. ಈಗ ಅವರು ಮಾತು ಕೇಳಲಿಲ್ಲ ಎಂದು ನನ್ನ ಮೇಲೆ ರಕ್ತ ಬರುವಂತೆ ಹಲ್ಲೆ ಮಾಡಿದ್ದಾರೆ. ಇವರು ಜನಪ್ರತಿನಿಧಿಗಳ ಅಥವಾ ರೌಡಿಗಳಾ..?. ನಮ್ಮ ಮೇಲೆ ಹಲ್ಲೆ ಮಾಡಿ ರೌಡಿಸಂ ನಡೆಸುತ್ತಿದ್ದಾರೆ. ಪ್ರಾಣ ತೆಗೆಯುವುದಾದರೆ ಎದುರಿಗೆ ಬಂದು ಪ್ರಾಣ ತೆಗೆಯಬೇಕೆಂದು ಎಂದು ವಿಡಿಯೋದಲ್ಲಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಏನಿದು ಘಟನೆ?
    ಮಂಗಳವಾರ ಬೆಂಗಳೂರಿನ ವಿಜಯನಗರ ಮೂಲದ ರವೀಂದ್ರ ಎಂಬವರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿ ಗ್ರಾಮದ ಸ್ನೇಹಿತನ ಮನೆಗೆ ತನ್ನ ಸಹಪಾಠಿಗಳೊಂದಿಗೆ ಬಂದಿದ್ದರು. ರವೀಂದ್ರ ಬಂದಿರುವ ವಿಚಾರವನ್ನ ಜೆಡಿಎಸ್ ಕಾರ್ಯಕರ್ತರು ಸೂರಜ್ ರೇವಣ್ಣನವರಿಗೆ ದೂರವಾಣಿ ಮುಖಾಂತರ ತಿಳಿಸಿದ್ದು, ರವೀಂದ್ರ ಕೆಆರ್ ಪೇಟೆಯ ಬಿಜೆಪಿ ಅಭ್ಯರ್ಥಿ ನಾರಾಯಣಗೌಡರ ಪರವಾಗಿ ಹಣ ಹಂಚಲು ಬಂದಿದ್ದಾರೆಂಬ ಅನುಮಾನದ ಮೇಲೆ ಜೆಡಿಎಸ್ ಕಾರ್ಯಕರ್ತರು ಬಿಜೆಪಿಯ ಕೆಲವು ಕಾರ್ಯಕರ್ತರಿಗೆ ಮತ್ತು ಹೊರಬಂದಿದ್ದ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿ ಮಾರಣಾಂತಿಕ ಹಲ್ಲೆ ನಡೆಸಿದ್ದರು.

    ಹಲ್ಲೆಗೊಳಗಾದ ಮತ್ತು ಗಂಭೀರವಾಗಿ ಗಾಯಗೊಂಡ ಮಾಜಿ ಬಿಬಿಎಂಪಿ ಕಾರ್ಪೊರೇಟರ್ ಸಹಪಾಠಿಗಳಾದ ಆನಂದ್ ಮತ್ತು ಸಂತೋಷ್ ಅವರನ್ನು ಬೆಂಗಳೂರಿನ ಕೊಲಂಬಿಯಾ ಏಪ್ಯಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಿಕೊಡಲಾಗಿದೆ. ಪರಿಸ್ಥಿತಿ ಉಲ್ಬಣಗೊಂಡ ಹಿನ್ನೆಲೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಿವಾಸ್ ಸೆಪಟ್ ಖುದ್ದು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಸಫಲತೆ ಕಂಡಿದ್ದರೂ, ಕೈಮೀರಿ ಹೋಗಿದ್ದರಿಂದ ಡಿಎಆರ್ ತುಕಡಿಯನ್ನು ನಿಯೋಜಿಸಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳದಲ್ಲಿದ್ದ ಮಾಜಿ ಸಚಿವ ಹೆಚ್ ಡಿ ರೇವಣ್ಣ ಪುತ್ರ ಸೂರಜ್ ರೇವಣ್ಣನೇ ಕಾರಣ ಎಂಬುದು ಬಿಜೆಪಿ ಕಾರ್ಯಕರ್ತರ ಆರೋಪವಾಗಿದೆ. ಪರಿಸ್ಥಿತಿ ನಿಯಂತ್ರಣಗೊಳ್ಳುವ ತನಕ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಕೃತ್ಯದಲ್ಲಿ ಭಾಗಿಯಾಗಿರೋ ಜೆಡಿಎಸ್ ಕಾರ್ಯಕರ್ತರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

  • ಉಪಚುನಾವಣೆ ಗೆಲ್ಲಲು ಸಚಿವರಿಗೆ ಬಿಎಸ್‍ವೈ ಟಫ್ ಟಾಸ್ಕ್

    ಉಪಚುನಾವಣೆ ಗೆಲ್ಲಲು ಸಚಿವರಿಗೆ ಬಿಎಸ್‍ವೈ ಟಫ್ ಟಾಸ್ಕ್

    ಬೆಂಗಳೂರು: ಬಿಜೆಪಿ ಸರ್ಕಾರವನ್ನು ಉಳಿಸಲೇಬೇಕಾದ  ಅನಿವಾರ್ಯತೆಗೆ ಸಿಲುಕಿರುವ ಯಡಿಯೂರಪ್ಪ 12 ದಿನ ನಿಮ್ಮ ಕೆಲಸ ಬರೀ ರಾಜಕಾರಣ ಮಾತ್ರ, ಆಡಳಿತವಲ್ಲ ಎಂದು ಎಲ್ಲ ಮಂತ್ರಿ ಮತ್ತು ಶಾಸಕರಿಗೆ ಟಾಸ್ಕ್ ನೀಡಿದ್ದಾರೆ.

    ನವೆಂಬರ್ 22ರಿಂದ ಡಿಸೆಂಬರ್ 3ರ ತನಕ ಸಚಿವರು ಮತ್ತು ಶಾಸಕರು ನಿಗದಿ ಮಾಡಿದ ಕ್ಷೇತ್ರಗಳಲ್ಲಿ ಇರಬೇಕು. ಆಯಾ ಕ್ಷೇತ್ರಗಳ ಸುತ್ತಮುತ್ತಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಬಿಎಸ್‍ವೈ ಸೂಚಿಸಿದ್ದಾರೆ.

    ಬೂತ್ ಮಟ್ಟದ ಕಾರ್ಯಕರ್ತರ ಜೊತೆ ನಿರಂತರ ಸಂಪರ್ಕದಲ್ಲಿರಬೇಕು. ಉಸ್ತುವಾರಿ ಕ್ಷೇತ್ರಗಳಲ್ಲಿ ಆಯಾ ಸಚಿವರು ಟಾಸ್ಕ್ ಗಳನ್ನು ಹಂಚಿಕೊಳ್ಳಬೇಕು. ಸಾಧ್ಯವಾದಷ್ಟು ಸ್ಥಳೀಯ ಕಾಂಗ್ರೆಸ್-ಜೆಡಿಎಸ್ ಮುಖಂಡರ ಆಪರೇಷನ್ ಮಾಡಿ ಪಕ್ಷದತ್ತ ಸೆಳೆಯುವಂತೆ ಮಾಡಿ. ವಿವಾದಾತ್ಮಕ ಹೇಳಿಕೆಗಳು, ವ್ಯಕ್ತಿಗತ ಟಾರ್ಗೆಟ್ ಮಾಡುವುದಕ್ಕೆ ಕಡಿವಾಣ ಹಾಕಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿಗೆ ಬಂಡಾಯದ ಬಿಸಿ

    ಎದುರಾಳಿ ಅಭ್ಯರ್ಥಿಗಳ ತಂತ್ರಗಾರಿಕೆ ಮತ್ತು ಬಲಾಬಲ ಆಧರಿಸಿ ವರದಿ ನೀಡಬೇಕು. ಅಸಮಾಧಾನ, ಬಂಡಾಯ ಶಮನಗಳಿಗೆ ಸಾಧ್ಯವಾದಷ್ಟು ಪ್ರಯತ್ನಿಸಿ ಸುಧಾರಣೆ ಮಾಡಿಕೊಳ್ಳಬೇಕು. ಅವಶ್ಯಕತೆ ಇರುವ ವಿವಿಧ ಸಂಪನ್ಮೂಲಗಳ ಅವಶ್ಯಕತೆ ಬಗ್ಗೆ ಮಾಹಿತಿಯನ್ನು ನೀಡಬೇಕು.

    ಯಾವ ಕ್ಷೇತ್ರಕ್ಕೆ ಯಾರು ಉಸ್ತುವಾರಿಗಳು?
    1. ಅಥಣಿ – ಸಚಿವ ಕೆ.ಎಸ್. ಈಶ್ವರಪ್ಪ, ಡಿಸಿಎಂ ಲಕ್ಷ್ಮಣ ಸವದಿ, ಸಂಸದ ಅಣ್ಣಾ ಸಾಹೇಬ್ ಜೊಲ್ಲೆ
    2. ಕಾಗವಾಡ – ಸಚಿವ ಸಿ.ಸಿ.ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ್ ಕವಟಗಿಮಟ, ಶಾಸಕರಾದ ಪಿ. ರಾಜೀವ್, ಅರವಿಂದ ಬೆಲ್ಲದ್
    3. ಗೋಕಾಕ್ – ಕೇಂದ್ರ ಸಚಿವ ಸುರೇಶ್ ಅಂಗಡಿ, ಸಚಿವೆ ಶಶಿಕಲಾ ಜೊಲ್ಲೆ, ಶಾಸಕರಾದ ಅಭಯ ಪಾಟೀಲ್, ಎ.ಎಸ್.ಪಾಟೀಲ್ ನಡಹಳ್ಳಿ
    4. ಯಲ್ಲಾಪುರ – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಸಂಸದ ಅನಂತಕುಮಾರ್ ಹೆಗಡೆ, ಶಾಸಕರಾದ ಸುನೀಲ್ ಕುಮಾರ್, ಹರೀಶ್ ಪೂಂಜಾ

    5. ಹಿರೇಕೆರೂರು – ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮಾಜಿ ಶಾಸಕ ಯು.ಬಿ. ಬಣಕಾರ್
    6. ರಾಣೆಬೆನ್ನೂರು – ಸಚಿವ ಜಗದೀಶ್ ಶೆಟ್ಟರ್, ಸಚಿವ ಪ್ರಭು ಚೌಹಾಣ್, ಸಂಸದ ಜಿ.ಎಂ. ಸಿದ್ದೇಶ್ವರ, ಶಿವಮೊಗ್ಗ ಬಿಜೆಪಿ ಮುಖಂಡ ಗಿರೀಶ್ ಪಟೇಲ್
    7. ವಿಜಯನಗರ – ಡಿಸಿಎಂ ಗೋವಿಂದ ಕಾರಣಜೋಳ, ಎಂಎಲ್‍ಸಿ ರವಿಕುಮಾರ್, ಸಂಸದ ಸಂಗಣ್ಣ ಕರಡಿ, ಬಿಜೆಪಿ ಪರಾಜಿತ ಅಭ್ಯರ್ಥಿ ಗವಿಯಪ್ಪ
    8. ಚಿಕ್ಕಬಳ್ಳಾಪುರ – ಸಚಿವ ಸಿ.ಟಿ.ರವಿ, ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಸಂಸದ ಪಿ.ಸಿ. ಮೋಹನ್, ಸಂಸದ ಬಿ.ಎನ್.ಬಚ್ಚೇಗೌಡ, ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಮಂಜುನಾಥ್

    9. ಕೆ.ಆರ್.ಪುರಂ – ಸಚಿವ ಆರ್.ಅಶೋಕ್, ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ, ಶಾಸಕ ಸತೀಶ್ ರೆಡ್ಡಿ
    10. ಯಶವಂತಪುರ – ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಎಂ.ಕೃಷ್ಣಪ್ಪ, ಮಾಜಿ ಎಂಎಲ್‍ಸಿಗಳಾದ ಅಶ್ವಥ್ ನಾರಾಯಣ, ಜಗ್ಗೇಶ್
    11. ಮಹಾಲಕ್ಷ್ಮಿಲೇಔಟ್ – ಸಚಿವ ವಿ. ಸೋಮಣ್ಣ, ಸಚಿವ ಸುರೇಶ್ ಕುಮಾರ್, ಬಿಜೆಪಿ ರಾಜ್ಯ ಖಜಾಂಚಿ ಸುಬ್ಬನರಸಿಂಹ

    12. ಶಿವಾಜಿನಗರ – ಬೆಂಗಳೂರು ಮಹಾನಗರ ಅಧ್ಯಕ್ಷ ಪಿ.ಎನ್. ಸದಾಶಿವ, ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಎಸ್. ಮುನಿರಾಜು, ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ಶಾಸಕ ಎಸ್. ರಘು
    13. ಹೊಸಕೋಟೆ – ಡಿಸಿಎಂ ಡಾ.ಅಶ್ವಥ್ ನಾರಾಯಣ, ಸಿಎಂ ರಾಜಕೀಯ ಕಾರ್ಯದರ್ಶಿ ಎಸ್. ಅರ್. ವಿಶ್ವನಾಥ್, ಎಂಎಲ್ಸಿ ವೈ.ಎ. ನಾರಾಯಣಸ್ವಾಮಿ
    14. ಕೆ.ಆರ್. ಪೇಟೆ – ಸಚಿವ ಜೆ.ಸಿ. ಮಾಧುಸ್ವಾಮಿ, ಯುವ ಮೋರ್ಛಾ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ, ಶಾಸಕ ಪ್ರೀತಂಗೌಡ
    15. ಹುಣಸೂರು – ಸಚಿವ ಶ್ರೀರಾಮುಲು, ಮಾಜಿ ಸಚಿವ ವಿಜಯ್ ಶಂಕರ್, ಸಂಸದ ಪ್ರತಾಪ್ ಸಿಂಹ, ಶಾಸಕ ಅಪ್ಪಚ್ಚು ರಂಜನ್