Tag: byndoor

  • ಅಮಿತ್‌ ಶಾಗೆ ಹೂ ಗುಚ್ಛ ನೀಡಿ ಸ್ವಾಗತಿಸಿದ್ದ ಗೋವಿಂದ ಬಾಬು

    ಅಮಿತ್‌ ಶಾಗೆ ಹೂ ಗುಚ್ಛ ನೀಡಿ ಸ್ವಾಗತಿಸಿದ್ದ ಗೋವಿಂದ ಬಾಬು

    ಬೆಂಗಳೂರು: ಚೈತ್ರಾ ಕುಂದಾಪುರ (Chaitra Kundapur) ವಂಚನೆ ಪ್ರಕರಣ ಸಂಬಂಧ ದೂರು ನೀಡಿದ್ದ ಉದ್ಯಮಿ ಗೋವಿಂದ ಬಾಬು ಪೂಜಾರಿ (Govind Babu Poojari) ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Election) ಸಮಯದಲ್ಲಿ ಬೈಂದೂರು (Byndoor) ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಮಾಡಿದ್ದರು.

    ಹಲವು ಸಮಾಜ ಮುಖಿ ಕೆಲಸ ಮಾಡಿದ್ದ ಪೂಜಾರಿ ಅವರಿಗೆ ಬಿಜೆಪಿ ನಾಯಕರ (BJP Leaders) ಜೊತೆ ಓಡನಾಟ ಚೆನ್ನಾಗಿತ್ತು. ಸಮಾಜ ಸೇವೆ ಹೆಸರಿನಲ್ಲಿ ಅವರು ಕೋಟ್ಯಂತರ ರೂಪಾಯಿ ಖರ್ಚು ಮಾಡಿದ್ದರು. ಇದನ್ನೂ ಓದಿ: ನನ್ನ ಮುಖ ನೋಡಿ ಯಾರ್ ದುಡ್ಡು ಕೊಡ್ತಾರೆ ಮೇಡಂ: ಚೈತ್ರಾ ಹೇಳಿದ್ದೇನು?

    ಚುನಾವಣಾ ಸಮಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ಉದ್ಯಮಿ ಗೋವಿಂದ ಬಾಬು ಪೂಜಾರಿ ಭೇಟಿ ಮಾಡಿದ್ದರು. ಬಿಜೆಪಿ ನಾಯಕರೇ ಅಮಿತ್ ಶಾಗೆ ಪರಿಚಯ ಮಾಡಿಸಿದ್ದರು. ಈ ವೇಳೆ ಶಾಗೆ ಹೂ ಗುಚ್ಚ ಕೊಟ್ಟು ಶುಭಾಶಯ ಹೇಳಿದ್ದರು.

    ರಾಷ್ಟ್ರೀಯ ನಾಯಕರ ಹತ್ತಿರ ಸುಳಿಯಲು ಭಾರೀ ಪ್ರಭಾವಿಯಾಗಿರಬೇಕು. ಈ ಬಾರಿ ಟಿಕೆಟ್‌ ನಿಮಗೆ ಸಿಗಲಿದೆ ಎಂದು ಬಿಜೆಪಿ ನಾಯಕರೇ ಭರವಸೆ ನೀಡಿದ್ದರು. ಆದರೆ ಬಿಜೆಪಿ ನಾಯಕರಿಗೆ ಟಿಕೆಟ್ ವಿಚಾರದ ಬಗ್ಗೆ ಎಲ್ಲವೂ ಗೊತ್ತಿತ್ತು. ಗೊತ್ತಿದ್ದರೂ ರಾಜ್ಯ ಬಿಜೆಪಿ ನಾಯಕರು ಸುಮ್ಮನಾಗಿದ್ದೆ ಗೋವಿಂದ ಬಾಬು ಪೂಜಾರಿ ದೂರು ನೀಡಲು ಪ್ರಮುಖ ಕಾರಣ ಎನ್ನಲಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉಡುಪಿ ಬೈಂದೂರಿನಲ್ಲಿ ಗೆದ್ದ ಬರಿಗಾಲ ಸಂತ – ಜಿದ್ದಾಜಿದ್ದಿ ಹೇಗಿತ್ತು?

    ಉಡುಪಿ ಬೈಂದೂರಿನಲ್ಲಿ ಗೆದ್ದ ಬರಿಗಾಲ ಸಂತ – ಜಿದ್ದಾಜಿದ್ದಿ ಹೇಗಿತ್ತು?

    ಉಡುಪಿ: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ (Election) ಕಾಂಗ್ರೆಸ್ (Congress) ಕಳೆದ ಮೂರು ದಶಕದಲ್ಲೇ ದಾಖಲೆಯ ಸಾಧನೆ ಮಾಡಿದೆ. ಕಾಂಗ್ರೆಸ್ 136 ಸ್ಥಾನಗಳನ್ನು ಗೆದ್ದಿದ್ದು, 65 ಸೀಟು ಗೆದ್ದ ಬಿಜೆಪಿ (BJP) ಅಧಿಕಾರದಿಂದ ಹೊರಬಿದ್ದಿದೆ. ಜೆಡಿಎಸ್ (JDS) 19 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ರಾಜ್ಯದ ಚಿತ್ರಣ ಅದಲು ಬದಲಾದರೂ ಕೂಡ ಉಡುಪಿಯಲ್ಲಿ (Udupi) ಬಿಜೆಪಿಯ ಹಿಂದಿನ ದಾಖಲೆ ಹಾಗೆಯೇ ಉಳಿದಿದೆ. ಉಡುಪಿಯಲ್ಲಿ ಐದಕ್ಕೆ ಐದು ಕ್ಷೇತ್ರವನ್ನು ಬಿಜೆಪಿ ತನ್ನದಾಗಿಸಿಕೊಂಡಿದೆ.

    ಕಾಂಗ್ರೆಸ್ ಉಡುಪಿಯ ಕೇಸರಿ ಕೋಟೆಗೆ ದಾಳಿ ಮಾಡುವಲ್ಲಿ ವಿಫಲಯತ್ನ ಮಾಡಿದ್ದು, ಬಿಜೆಪಿ ತನ್ನ ಭದ್ರಕೋಟೆಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಜಿಲ್ಲೆಯ 5 ವಿಧಾನಸಭಾ ಕ್ಷೇತ್ರದಲ್ಲಿಯೂ ಬಿಜೆಪಿ ವಿಜಯ ಪತಾಕೆಯನ್ನು ಹಾರಿಸಿದೆ. ಐದರಲ್ಲಿ ನಾಲ್ಕು ಹೊಸ ಮುಖಗಳಿಗೆ ಅವಕಾಶ ನೀಡಿದ್ದ ಬಿಜೆಪಿಯ ಹೊಸ ಪ್ರಯೋಗವು ಉಡುಪಿಯಲ್ಲಿ ಗೆಲುವನ್ನು ಸಾಧಿಸಿದೆ. ಇದನ್ನೂ ಓದಿ: ನನ್ನ ಜೊತೆಗೇ ಇದ್ದು ಬೆನ್ನಿಗೆ ಚೂರಿ ಹಾಕಿದ್ರು: ಪರಾಜಿತ ಬಿಜೆಪಿ ಅಭ್ಯರ್ಥಿ ಈಶ್ವರ್ ಸಿಂಗ್ ಸ್ವ ಪಕ್ಷದ ವಿರುದ್ಧ ಕಿಡಿ

    ಇದು ಕಾರ್ಯಕರ್ತರ ಗೆಲುವು. ಬಿಜೆಪಿ ಪಕ್ಷದ ಗೆಲುವು. ಕೇವಲ ಒಂದು ತಿಂಗಳೊಳಗೆ ಇಡೀ ವಿಧಾನಸಭಾ ಕ್ಷೇತ್ರದ ಮನೆಗಳಿಗೆ ಜನರ ಮನಗಳಿಗೆ ನನ್ನನ್ನು ಮುಟ್ಟಿಸುವಲ್ಲಿ ಯಶಸ್ವಿ ಆಗಿದ್ದಾರೆ. ಶಾಸಕ ಸುಕುಮಾರ ಶೆಟ್ಟಿ ಬಹಿರಂಗ ಪ್ರಚಾರ ನಡೆಸದಿದ್ದರೂ ಅಂತರಂಗದಿಂದ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ಜನರ ಅಶೋತ್ತರಗಳಿಗೆ ಸ್ಪಂದಿಸಿ ಕೆಲಸ ಮಾಡುತ್ತೇನೆ. ಸರ್ಕಾರದ ಕೆಲಸದ ಜೊತೆಗೆ ಸಂಘಟನೆಯ ಕೆಲಸಗಳೂ ಬಹಳ ಮುಖ್ಯವಾಗಿದೆ ಎಂದು ಗುರುರಾಜ ಶೆಟ್ಟಿ ಗಂಟಿಹೊಳೆ (Gururaj Shetty Gantihole) ಹೇಳಿದ್ದಾರೆ. ಇದನ್ನೂ ಓದಿ: ಈ ಬಾರಿ ಸಿಎಂ ಸ್ಥಾನವನ್ನು ಒಕ್ಕಲಿಗರಿಗೆ ನೀಡಬೇಕು: ಉಮಾಪತಿ ಶ್ರೀನಿವಾಸ ಗೌಡ

    ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಪೂಜಾರಿ, ಇದೊಂದು ಅಚ್ಚರಿಯ ಫಲಿತಾಂಶವಾಗಿದ್ದು, ನಾವು ಇದನ್ನು ನಿರೀಕ್ಷೆಯೇ ಮಾಡಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ. 2018ರಲ್ಲಿ ಸೋತ ನಂತರ ಐದು ವರ್ಷ ಕ್ಷೇತ್ರದಲ್ಲೇ ಓಡಾಡಿ ಜನರ ಜೊತೆಗಿದ್ದೆ. ಚುನಾವಣೆಯಲ್ಲಿ ಸೋತು ನನ್ನ ರಾಜಕೀಯ ಜೀವನ ಮುಗಿಸುವ ಬದಲು, ಜನಸೇವೆ ಮಾಡುವ ಅವಕಾಶವನ್ನು ಕೇಳಿದ್ದೆ. ಈ ಫಲಿತಾಂಶದಿಂದ ನನಗೆ ನೋವಾಗಿದೆ. ಬೈಂದೂರು ಜನತೆಯ ಪ್ರೀತಿಗೆ, ಈಗ ನೀಡಿರುವ ಅಭಿಪ್ರಾಯಕ್ಕೆ ನನ್ನ ಎರಡು ಮಾತುಗಳು ಇಲ್ಲ. ನಾನು ಜನರ ಜೊತೆ ಇರುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಸರ್‌.. ಭಯ ಪಡಬೇಡಿ, ನಿಮ್ಮ ಜೊತೆ ನಾವಿದ್ದೇವೆ: ಸೋತು ಮಂಕಾಗಿದ್ದ ಸಿ.ಟಿ.ರವಿ ಸಂತೈಸಿದ ಬಾಲಕ

    ಬೈಂದೂರಿನ ಜಿದ್ದಾಜಿದ್ದಿ ಹೇಗಿತ್ತು? ಯಾರಿಗೆಷ್ಟು ಮತ?
    ಬೈಂದೂರು (Byndoor) ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು 98,628 ಮತಗಳನ್ನು ಪಡೆದು 16,153 ಮತಗಳ ಅಂತರದಿಂದ ಜಯಗಳಿಸಿರುತ್ತಾರೆ. ಕಾಂಗ್ರೆಸ್‌ನ ಗೋಪಾಲ ಪೂಜಾರಿ ಅವರು 82,475 ಮತಗಳನ್ನು ಪಡೆದು ಸೋಲನ್ನು ಅನುಭವಿಸಿದ್ದಾರೆ. ಉಳಿದಂತೆ ಜೆಡಿಎಸ್ ಅಭ್ಯರ್ಥಿ ಮನ್ಸೂರ್ ಇಬ್ರಾಹಿಂ 841 ಮತಗಳನ್ನು ಪಡೆದಿದ್ದರೆ, ಆಮ್ ಆದ್ಮಿ ಪಕ್ಷದ ಸಿ.ಎ ರಮಾನಂದ ಪ್ರಭು 187 ಮತಗಳನ್ನು ಪಡೆದಿದ್ದಾರೆ. ಅಲ್ಲದೇ ಉತ್ತಮ ಪ್ರಜಾಕೀಯ ಪಕ್ಷದ ಪ್ರಸಾದ್.ಎಸ್ 626 ಮತಗಳು, ರಾಷ್ಟ್ರೀಯ ಸಮಾಜದಳ (ಆರ್) ಪಕ್ಷದ ಕೊಲ್ಲೂರು ಮಂಜುನಾಥ ನಾಯಕ್ 171, ಪಕ್ಷೇತರ ಅಭ್ಯರ್ಥಿಗಳಾದ ಜಿ. ಚಂದ್ರಶೇಖರ 613, ಬಿ.ಶ್ಯಾಮ 296 ಹಾಗೂ ಬಿ.ಹೆಚ್ ಸುರೇಶ್ ಪೂಜಾರಿ ಅವರು 638 ಮತಗಳನ್ನು ಪಡೆದಿರುತ್ತಾರೆ. ಇಷ್ಟು ಮಾತ್ರವಲ್ಲದೇ 1,208 ನೋಟಾ ಮತದಾನವಾಗಿರುತ್ತದೆ. ಇದನ್ನೂ ಓದಿ: ಗುರುವನ್ನು ಸೋಲಿಸಿದ ಶಿಷ್ಯ: ಸಿಟಿ ರವಿ ಸೋತಿದ್ದು ಎಲ್ಲಿ?

    ಕಾಂಗ್ರೆಸ್ ಗೆಲ್ಲುತ್ತದೆ ಎಂಬ ನಂಬಿಕೆ ಇದ್ದ ಕ್ಷೇತ್ರದಲ್ಲಿ ಬೈಂದೂರು ಕೂಡ ಒಂದು ಆದರೆ ಬರಿಗಾಲ ಸಂತ 20 ದಿನದಲ್ಲಿ ಮ್ಯಾಜಿಕ್ ಮಾಡಿ ಕ್ಷೇತ್ರದ ಜನರ ಮನ ಗೆದ್ದಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಅತಿ ಹೆಚ್ಚು ಬೇಡಿಕೆಗಳು ಇರುವ ಕ್ಷೇತ್ರವೆಂದರೆ ಅದು ಬೈಂದೂರು. ವಿಪಕ್ಷದಲ್ಲಿ ಕೂತು ಜನಸೇವೆ ಮಾಡುವುದು ಗುರುರಾಜ ಶೆಟ್ಟಿ ಗಂಟಿ ಹೊಳೆ ಅವರ ಮುಂದೆ ಇರುವ ದೊಡ್ಡ ಸವಾಲು. ಇದನ್ನೂ ಓದಿ: ಸಿ.ಟಿ ರವಿ ಸೋಲಿಸಿದ್ದಕ್ಕೆ ಭೋಜೇಗೌಡರಿಗೆ ಹಾಲಿನ ಅಭಿಷೇಕ

  • ಬೈಂದೂರಲ್ಲಿ 550 ಕೋಟಿ ಕುಡಿಯುವ ನೀರಿನ ಯೋಜನೆ- ಬಿ.ವೈ ರಾಘವೇಂದ್ರ, ಸುಕುಮಾರ ಶೆಟ್ಟಿ ನೇತೃತ್ವದಲ್ಲಿ ಸಭೆ

    ಬೈಂದೂರಲ್ಲಿ 550 ಕೋಟಿ ಕುಡಿಯುವ ನೀರಿನ ಯೋಜನೆ- ಬಿ.ವೈ ರಾಘವೇಂದ್ರ, ಸುಕುಮಾರ ಶೆಟ್ಟಿ ನೇತೃತ್ವದಲ್ಲಿ ಸಭೆ

    ಉಡುಪಿ: ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಕುಡಿಯುವ ನೀರಿನ ಯೋಜನೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ ಸಭೆ ಮಂಗಳವಾರ ಹೆಮ್ಮಾಡಿಯಲ್ಲಿ ನಡೆಯಿತು. 550 ಕೋಟಿ ರುಪಾಯಿ ವೆಚ್ಚದಲ್ಲಿ 2 ಕ್ಲಸ್ಟರ್ ಮಾಡಲಾಗಿದ್ದು, ಆರಂಭದಲ್ಲಿ 60 ಸಾವಿರ ಮನೆಗಳಿಗೆ ಕುಡಿಯುವ ನೀರು ತಲುಪಿಸುವ ಯೋಜನೆ ಇದಾಗಿದೆ.

    ಬಹು ನೀರಿನ ಕುಡಿಯುವ ಯೋಜನೆ ಪ್ರಕಾರ ಭವಿಷ್ಯದ ದೃಷ್ಟಿಯಿಂದ 71 ಸಾವಿರ ಮನೆಗಳಿಗೆ ನೀರು ಒದಗಿಸುವ ಯೋಜನೆ ಇದಾಗಿದ್ದು, ಸಂಸದ ಬಿ.ವೈ ರಾಘವೇಂದ್ರ, ಶಾಸಕ ಸುಕುಮಾರ ಶೆಟ್ಟಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಹೆಮ್ಮಾಡಿಯಲ್ಲಿ ನಡೆದ ಸಭೆಯಲ್ಲಿ ಮೊದಲ ಹಂತದ ಚರ್ಚೆ ಅಭಿಪ್ರಾಯ ಸಂಗ್ರಹ ನಡೆಯಿತು.

    ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಬಿ.ವೈ ರಾಘವೇಂದ್ರ, ವರಾಹಿ ಡ್ಯಾಂ ಮತ್ತು ಗುಲ್ವಾಡಿಯಿಂದ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ನೀರು ಪೂರೈಸಲಾಗುವುದು. ವಿಧಾನಸಭಾ ಕ್ಷೇತ್ರದಲ್ಲಿ 220 ಟ್ಯಾಂಕ್ ನಿರ್ಮಾಣವಾಗಲಿದೆ. 2 ವರ್ಷದಲ್ಲಿ ಕೆಲಸ ಪೂರ್ಣ ಮಾಡ್ತೇವೆ ಎಂದರು. ಸಿಎಂ ಯಡಿಯೂರಪ್ಪ ಪ್ರತಿನಿಧಿಸಿದ ಕ್ಷೇತ್ರ ಇದಾಗಿದ್ದು ಆದ್ಯತೆ ಮೇರೆಗೆ ಕೆಲಸ ಮಾಡುತ್ತೇವೆ. ಪ್ರಧಾನಿ ನರೇಂದ್ರ ಮೋದಿಯವರ ಇಚ್ಛೆಯಂತೆ ದೇಶದ ಪ್ರತಿ ಗ್ರಾಮಕ್ಕೂ, ಪ್ರತಿ ಮನೆಗೂ ನೀರು ತಪುಪಿಸುತ್ತೇವೆ ಎಂದರು.

    ಶಾಸಕ ಸುಕುಮಾರ ಶೆಟ್ಟಿ ಮಾತನಾಡಿ, ಜಿಲ್ಲೆಯಲ್ಲಿ ಐದು ನದಿಗಳು ಹರಿದು ಸಮುದ್ರ ಸೇರಿದರೂ ಬೇಸಿಗೆಯಲ್ಲಿ ಟ್ಯಾಂಕರ್ ನೀರು ಕುಡಿಯುವ ಸ್ಥಿತಿ ಇದೆ. ಆದ್ಯತೆ ಮೇರೆಗೆ ಬೈಂದೂರಿಗೆ ಕೇಂದ್ರ ಮತ್ತು ರಾಜ್ಯ ಸರಕಾರ ಯೋಜನೆ ರೂಪಿಸಿ ಹಣ ಬಿಡುಗಡೆ ಮಾಡಿದೆ. ತಾಲೂಕಿನಲ್ಲಿ ಉಪ್ಪು ನೀರಿಗೆ ತಡೆಯೊಡ್ಡುವ ಉದ್ದೇಶದಿಂದ ಅಲ್ಲಲ್ಲಿ 110 ಕೋಟಿ ವೆಚ್ಚದಲ್ಲಿ ವೆಂಟೆಂಡ್ ಡ್ಯಾಂ ನಿರ್ಮಿಸುತ್ತೇವೆ. ಮೀನುಗಾರಿಕಾ ಬಂದರು, ಜಟ್ಟಿ, ರಸ್ತೆಗಳು ಹೀಗೆ ಅಭಿವೃದ್ಧಿ ಸಮಾರೋಪಾದಿಯಲ್ಲಿ ನಡೆಯುತ್ತಿದೆ. ಈಗಾಗಲೇ ಜಿಲ್ಲೆಗೆ 1,350 ಕೋಟಿ ರುಪಾಯಿಯ ವಿವಿಧ ಯೋಜನೆ ತಂದಿದ್ದೇವೆ. ಸಮಗ್ರ ತಾಲೂಕು ಅಭಿವೃದ್ಧಿ ಪಣ ತೊಟ್ಟು ಕೆಲಸ ಮಾಡುತ್ತಿದ್ದೇನೆ ಎಂದರು.

    ಜಿಲ್ಲಾ ಪಂಚಾಯತ್ ಸಿಇಒ ನವೀನ್ ಭಟ್, ಎಸಿ ಕೆ, ರಾಜು, ಬೈಂದೂರು ತಹಶೀಲ್ದಾರ್ ಬಸಪ್ಪ ಪೂಜಾರ್, ದೀಪಕ್ ಕುಮಾರ್ ಶೆಟ್ಟಿ, ಕುಂದಾಪುರ ತಾ.ಪಂ ಇಒ ಕೇಶವ ಶೆಟ್ಟಿಗಾರ್, ಜಿ.ಪಂ, ತಾಲೂಕು ಪಂಚಾಯತ್ ಸದಸ್ಯರು ಮತ್ತಿತರರು ಸಭೆಯಲ್ಲಿ ಪಾಲ್ಗೊಂಡರು.

  • 22 ಆಡು, ಹತ್ತಾರು ಹಸುಗಳನ್ನು ಭಕ್ಷಿಸಿದ್ದ ಕರಿ ಚಿರತೆ ಸೆರೆ

    22 ಆಡು, ಹತ್ತಾರು ಹಸುಗಳನ್ನು ಭಕ್ಷಿಸಿದ್ದ ಕರಿ ಚಿರತೆ ಸೆರೆ

    ಉಡುಪಿ: 22 ಆಡು, ಹತ್ತಾರು ಹಸುಗಳನ್ನು ಭಕ್ಷಿಸಿ, ಜಿಲ್ಲೆಯ ಬೈಂದೂರು ತಾಲೂಕಿನ ಮುದೂರು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಕರಿ ಚಿರತೆಯನ್ನು ಮಂಗಳವಾರ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.

    ಸುಮಾರು ದಿನಗಳಿಂದ ಮುದೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಕರಿ ಚಿರತೆ ಬೀಡು ಬಿಟ್ಟಿತ್ತು. ಇದೇ ಗ್ರಾಮದ ಮರ್ಕಡಿ ಜೋಸ್ ಎಂಬವರು ಸಾಕಿದ್ದ ಸುಮಾರು 22 ಮೇಕೆಗಳನ್ನು ಹಿಡಿದು ತಿಂದಿತ್ತು. ಅಲ್ಲದೇ ಹಸುಗಳನ್ನು ಬೇಟೆಯಾಡಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು.

    ಮರ್ಕಡಿ ಜೋಸ್ ಅವರು ಸಾಕಿದ್ದ ಮೇಕೆಗಳನ್ನು ಕೆಲವು ದಿನಗಳಿಂದ ಒಂದರಂತೆ ಎಳೆದುಕೊಂಡು ಹೋಗುತ್ತಿತ್ತು. ಈ ಕುರಿತು ಮರ್ಕಡಿ ಜೋಸ್ ಅವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಅದರಂತೆಯೇ ಕುಂದಾಪುರ ವಲಯಾರಣ್ಯಾಧಿಕಾರಿ ಶರತ್ ಶೆಟ್ಟಿ ನೇತೃತ್ವದಲ್ಲಿ ಜೋಸ್ ಅವರ ಮನೆಯ ಹತ್ತಿರದ ತೋಟದಲ್ಲಿ ಬೋನು ಇಟ್ಟುದ್ದರು. ಹೀಗಾಗಿ ಮಂಗಳವಾರ ಚಿರತೆ ಬೋನ್‍ಗೆ ಬಿದ್ದಿದೆ.

    ಈ ಭಾಗದ ಜನರು ಹಿಂದೆಂದು ಕರಿ ಚಿರತೆ ನೋಡಿರಲಿಲ್ಲ. ಹೀಗಾಗಿ ಅದನ್ನು ನೋಡಲು ಮುಗಿಬಿದ್ದಿದ್ದರು. ಅರಣ್ಯ ಇಲಾಖೆ ಸಿಬ್ಬಂದಿ, ಮುದೂರು ವನಪಾಲಕರಾದ ಸಂತೋಷ ಹಾಗೂ ಗ್ರಾಮಸ್ಥರು ಚಿರತೆಯನ್ನು ವಾಹನಕ್ಕೆ ಸಾಗಿಸಿದರು. ಸೆರೆ ಸಿಕ್ಕ ಕರಿ ಚಿರತೆಯನ್ನು ಸುರಕ್ಷಿತ ತಾಣಕ್ಕೆ ಕೊಂಡೊಯ್ದು ಬಿಡುವುದಾಗಿ ಕುಂದಾಪುರ ವಲಯಾರಣ್ಯಾಧಿಕಾರಿ ಶರತ್ ಶೆಟ್ಟಿ ಹೇಳಿದರು.

    ಮುದೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಹಾಗೂ ಹುಲಿಗಳ ಕಾಟ ಹೆಚ್ಚಾಗಿದೆ. ಪ್ರತಿ ದಿನ ಒಬ್ಬೊಬ್ಬರ ಮನೆಯಿಂದ ಹಸು ಮೇಕೆ ಕಾಣೆಯಾಗುತ್ತಿವೆ. ಅಲ್ಲದೇ ಗ್ರಾಮಸ್ಥರಲ್ಲಿ ಭಯದ ವಾತಾವರಣ ಉಂಟಾಗಿದ್ದು, ಹಸು ಮೇಕೆಗಳನ್ನು ಸಾಕಿಕೊಂಡು ಹೈನುಗಾರಿಕೆ ಮಾಡುತ್ತಿರುವವರ ಜೀವನ ಕಷ್ಟವಾಗುತ್ತಿದೆ. ಇದಕ್ಕೆ ಅಗತ್ಯ ಕ್ರಮವಹಿಸಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

  • ನಾನು ಕರ್ನಾಟಕಕ್ಕೆ ಬಂದ್ರೆ ನಿಮ್ಗೇನ್ ಕಷ್ಟ- ಬೈಂದೂರಲ್ಲಿ ಸಿಎಂಗೆ ಯೋಗಿ ಆದಿತ್ಯನಾಥ್ ಪ್ರಶ್ನೆ

    ನಾನು ಕರ್ನಾಟಕಕ್ಕೆ ಬಂದ್ರೆ ನಿಮ್ಗೇನ್ ಕಷ್ಟ- ಬೈಂದೂರಲ್ಲಿ ಸಿಎಂಗೆ ಯೋಗಿ ಆದಿತ್ಯನಾಥ್ ಪ್ರಶ್ನೆ

    ಉಡುಪಿ: ನಾನು ಕರ್ನಾಟಕಕ್ಕೆ ಬಂದ್ರೆ ಸಿದ್ದರಾಮಯ್ಯ ಹರಿಹಾಯೋದ್ಯಾಕೆ? ಅವರಿಗೇನು ಕಷ್ಟ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರಶ್ನಿಸಿದ್ದಾರೆ.

    ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಬಿ.ಎಂ ಸುಕುಮಾರ್ ಶೆಟ್ಟಿ ಪರ ಪ್ರಚಾರ ನಡೆಸಲು ಬಂದಿದ್ದ ಸಂದರ್ಭ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ರು.

    ಇಲ್ಲಿನ ರೈತ, ಯುವಕ, ಸಂಕಷ್ಟದಲ್ಲಿದ್ದಾನೆ. ಹಿಂದೂ ಯುವಕರಿಗೆ ರಕ್ಷಣೆಯಿಲ್ಲ ಹೀಗಾಗಿ ನಾನು ಅಲ್ಲಿಂದ ಇಲ್ಲಿಗೆ ಬರಬೇಕಾಗಿದೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ತಿಳಿಸಿ ಇಲ್ಲಿನ ಜನರಿಗೆ ಮನವರಿಕೆ ಮಾಡಲು, ನಾನು ಪದೇ ಪದೇ ಕರ್ನಾಟಕಕ್ಕೆ ಬರುತ್ತೇನೆ ಅಂತ ಯೋಗಿ ಸವಾಲೆಸೆದಿದ್ದಾರೆ.

    ಕರ್ನಾಟಕ ಸರ್ಕಾರ ಮಾಡದೇ ಇರೋದನ್ನು ಉತ್ತರ ಪ್ರದೇಶದಲ್ಲಿ ನಾನು ಸಾಧಿಸಿ ತೋರಿಸಿದ್ದೇನೆ. ಯುಪಿಯಲ್ಲಿ ರೈತರ ಸಾಲ ಮನ್ನಾ ಮಾಡಿದ್ದೇನೆ, 12 ಲಕ್ಷ ಬಡವರಿಗೆ ಉದ್ಯೋಗ ಸೃಷ್ಟಿಸಿದ್ದೇನೆ. ಎಲ್.ಪಿ.ಜಿ ಸಂಪರ್ಕ ನೀಡೋದರಲ್ಲೂ ನಾವು ಕರ್ನಾಟಕಕ್ಕಿಂತ ಮುಂದಿದ್ದೇವೆ. ವಿಕಾಸ ಸಿದ್ದರಾಮಯ್ಯ ಸರ್ಕಾರದ ಅಜೆಂಡಾ ಅಲ್ಲ. ಕರ್ನಾಟಕವನ್ನು ಕಾಂಗ್ರೆಸ್ ಪಕ್ಷದ ಎಟಿಎಂ ಮಾಡೋದೊಂದೇ ಅವರ ಅಜೆಂಡಾ ಎಂದು ವಾಗ್ದಾಳಿ ನಡೆಸಿದರು.

    ಜಿಹಾದಿ ತತ್ವ ಪ್ರೋತ್ಸಾಹಿಸೋದು, ಬಿಜೆಪಿ ಕಾರ್ಯಕರ್ತರ ಕೊಲೆ ಮಾಡೋದು ಸಿದ್ದರಾಮಯ್ಯ ಅಜೆಂಡಾ. ಕರ್ನಾಟಕದಲ್ಲಿ ಹನುಮಜಯಂತಿ, ಶಿವಾಜಿ ಜಯಂತಿಗೆ ಅವಕಾಶ ಇಲ್ಲ. ಟಿಪ್ಪು ಜಯಂತಿ ಆಚರಿಸಲು ಈ ಸರ್ಕಾರಕ್ಕೆ ಇರುವ ಉತ್ಸಾಹ ಬೇರೆ ಯಾವ ವಿಚಾರದಲ್ಲೂ ಇಲ್ಲ ಎಂದರು.

    ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಡಬ್ಬಲ್ ಎಂಜಿನ್ ಓಡಿಸಲು ಅಭಿವೃದ್ಧಿಯ ಗುರಿ ತಲುಪಲು ಬಿಜೆಪಿಯನ್ನು ಬೆಂಬಲಿಸಿ ಎಂದು ಯೋಗಿ ಕರೆ ನೀಡಿದ ಅವರು, ಮೀನುಗಾರರ, ರೈತರ ಹಿತ ಕಾಪಾಡಲು ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ ಎಂದರು.