Tag: c

  • Nagamangala Violence | ಹಿಂದೂಗಳ ಮೇಲೆ ಹಾಕಿರೋ ಕೇಸ್ ವಾಪಸ್ ಪಡೆಯದೇ ಹೋದ್ರೆ ಹಳ್ಳಿ ಹಳ್ಳಿಗಳಲ್ಲಿ ಪ್ರತಿಭಟನೆ- ತೇಜಸ್ವಿಸೂರ್ಯ

    Nagamangala Violence | ಹಿಂದೂಗಳ ಮೇಲೆ ಹಾಕಿರೋ ಕೇಸ್ ವಾಪಸ್ ಪಡೆಯದೇ ಹೋದ್ರೆ ಹಳ್ಳಿ ಹಳ್ಳಿಗಳಲ್ಲಿ ಪ್ರತಿಭಟನೆ- ತೇಜಸ್ವಿಸೂರ್ಯ

    ಬೆಂಗಳೂರು : ನಾಗಮಂಗಲ ಗಲಭೆ ಕೇಸ್‌ನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ದಾಖಲಾಗಿರೋ ಕೇಸ್ ಸರ್ಕಾರ ಕೈ ಬಿಡಬೇಕು. ಇಲ್ಲದೆ ಹೋದರೆ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹಳ್ಳಿ ಹಳ್ಳಿಗಳಲ್ಲಿ ಬಿಜೆಪಿ ಯುವ ಮೋರ್ಚಾ ಹೋರಾಟ ಮಾಡುತ್ತದೆ ಎಂದು ಸಂಸದ, ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿಸೂರ್ಯ (Tejasvi Surya) ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

    ಬಿಜೆಪಿ (BJP) ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಗಮಂಗಲದಲ್ಲಿ ನಿನ್ನೆ ಕೋಮುಗಲಭೆ ನಡೆದಿದೆ. ಕಾಂಗ್ರೆಸ್ (Congress) ಸರ್ಕಾರ ಬಂದಾಗ ರಾಜ್ಯದಲ್ಲಿ ಟಿಪ್ಪು, ಔರಂಗಜೇಬನ ಸಂತತಿ ಹುಟ್ಟುತ್ತೆ. ಎಲ್ಲಿಲ್ಲದವರು ಹೊರಗೆ ಬರ್ತಾರೆ. ನಿನ್ನೆ ಗೃಹ ಸಚಿವರು ಇದೊಂದು ಸಣ್ಣ ಘಟನೆ ಎಂದು ಹೇಳಿದ್ದಾರೆ. ಪರಮೇಶ್ವರ್ ಅವರಿಗೆ ಕೇಳುತ್ತೇನೆ ನಿಮ್ಮ ಮನೆ ರಸ್ತೆಯಲ್ಲಿ ಯಾರಾದರು ಗಣೇಶ ಕೂರಿಸಿ ಅಲ್ಲಿ ಕಲ್ಲು ಹೊಡೆದರೆ, ಬೆಂಕಿ ಹಚ್ಚಿದರೆ, ನಿಮ್ಮ ಮನೆಗೆ ಕಲ್ಲು ತೂರಾಟ ಮಾಡಿದರೆ. ಅದನ್ನ ಸಣ್ಣ ಘಟನೆ ಅಂತೀರಾ ಎಂದು ಪ್ರಶ್ನಿಸಿದರು. ನಿಮ್ಮ ಮನೆಗೆ ಬೆಂಕಿ ಬೀಳೋವರೆಗೂ ಘಟನೆ ಬಗ್ಗೆ ಗೊತ್ತಾಗಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಿಬಿಐ ಪಂಜರದ ಗಿಳಿಯಾಗಬಾರದು, ಜಾಮೀನು ಸಿಕ್ಕರೂ ಸಿಎಂ ಕಚೇರಿ ಪ್ರವೇಶಿಸುವಂತಿಲ್ಲ: ಸುಪ್ರೀಂ ಹೇಳಿದ್ದೇನು?

    ಸಂಪೂರ್ಣ ಘಟನೆಯಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಕೇಸ್ ಹಾಕಿದ್ದಾರೆ. ಕರ್ನಾಟಕದಲ್ಲಿ ಸಂವಿಧಾನದ ಪ್ರಕಾರ ಕಾನೂನು ನಡೆಯುತ್ತಿದೆಯಾ? ಅಥವಾ ಷರಿಯಾ ಪ್ರಕಾರ ಕಾನೂನು ನಡೆಯುತ್ತಿಯಾ? ಗಣೇಶ ಕೂರಿಸೋಕು ಕರ್ನಾಟಕದಲ್ಲಿ ಸಾಧ್ಯವಿಲ್ಲವಾ? ಎಂದು ಸರ್ಕಾರದ ವಿರುದ್ಧ ಪ್ರಶ್ನೆ ಎತ್ತಿದ್ದಾರೆ.

    ಒಂದು ಸಮುದಾಯದ ಪರ ತುಷ್ಟೀಕರಣ ನೀತಿ ಮಾಡಿ ಗಣೇಶ ಕೂರಿಸಿದರೆ ನೀವು ಬೆಂಕಿ ಹಾಕಿಸಿ, ಕಲ್ಲು ಹೊಡೆಸುತ್ತಿದ್ದೀರಾ. ಇದು ಓಲೈಕೆ ರಾಜಕಾರಣ ಅಲ್ಲವಾ ಅಂತ ಪ್ರಶ್ನೆ ಮಾಡಿದರು. ಮೊನ್ನೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನ ಎಸ್‌ಡಿಪಿಐ ಅವರು ವಿರೋಧ ಮಾಡಿದ್ರು ಅಂತ ಉಡುಪಿಯಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ರದ್ದು ಮಾಡಿದೆ ಈ ಸರ್ಕಾರ.ಈ ಸರ್ಕಾರ ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳಿಗೆ ಶರಣಾಗಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: MUDA Scam |ಸಿಎಂ ಪತ್ನಿ ಕೇಳಿದ್ದು 13 ಸೈಟ್ – ಪ್ರಾಧಿಕಾರ ಕೊಟ್ಟಿದ್ದು 14 ಸೈಟ್!

    ರಾಜ್ಯದ ಜನತೆ ಧೈರ್ಯವಾಗಿ ಗಣೇಶ ಹಬ್ಬ ಹಿಂದೂ ಹಬ್ಬ ಮಾಡಿ. ಬಿಜೆಪಿ ನಿಮ್ಮ ಜೊತೆ ಇರುತ್ತದೆ ಎಂದು ಕರೆ ನೀಡಿದರು. ಪರಮೇಶ್ವರ್ (G Parameshwar) ಮತ್ತು ಸಿಎಂಗೆ ಮನವಿ ಮಾಡುತ್ತೇನೆ. ನಿನ್ನೆ ನಾಗಮಂಗಲದಲ್ಲಿ ಯಾರು ಟೆರೆರಿಸ್ಟ್ಗಳು ಬೆಂಕಿ ಹಾಕಿದ್ರೋ ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಹಿಂದೂ ಯುವಕರ ಮೇಲೆ ಹಾಕಿರೋ ಕೇಸ್ ವಾಪಸ್ ಪಡೆಯಬೇಕು. ಪಿಎಫ್‌ಐ ಕೈ ಬಿಡಬೇಕು. ಇದೇ ರೀತಿ ಅಮಾಯಕರ ಮೇಲೆ ಕ್ರಮಕ್ಕೆ ಮುಂದಾದ್ರೆ ನಾವು ಹಳ್ಳಿ ಹಳ್ಳಿಯಲ್ಲಿ ಹೋರಾಟ ಮಾಡುತ್ತೇವೆ. ಕೂಡಲೇ ಹಿಂದೂಗಳ ಮೇಲೆ ಹಾಕಿರೋ ಕೇಸ್ ವಾಪಸ್ ಪಡೆಯುವಂತೆ ಸರ್ಕಾರವನ್ನು ಆಗ್ರಹಿಸಿದರು. ಇದನ್ನೂ ಓದಿ: ಜಾಮೀನು ಅರ್ಜಿಯನ್ನು ಹಿಂದಕ್ಕೆ ಪಡೆದ ಪವಿತ್ರಾ ಗೌಡ

  • ಅಪ್ಪ ಮಗಳ ಚಿತ್ರಕ್ಕೆ ಧ್ರುವ ಸರ್ಜಾ ಸಾಥ್

    ಅಪ್ಪ ಮಗಳ ಚಿತ್ರಕ್ಕೆ ಧ್ರುವ ಸರ್ಜಾ ಸಾಥ್

    ‘ಸಿ’ ಅಂದ್ರೆ ಇಲ್ನೋಡಿ ಅಂತಲ್ಲ, ಹಾಗಂತ ಸಮುದ್ರದ ಬಗ್ಗೆ ಹೇಳ್ತಾ ಇದೀವಿ ಅಂತನೂ ಅಂದ್ಕೊಬೇಡಿ… ‘ಸಿ’ ಸ್ಯಾಂಡಲ್ ವುಡ್ ನಲ್ಲಿ ರಿಲೀಸ್ ಗೆ ಸಿದ್ಧವಾಗಿರುವ ಹೊಸ ಸಿನಿಮಾ. ಈಗಾಲೇ ಚಂದನ ವನದಲ್ಲಿ ಶ್.. ಸೈ.. ಎ.. ಓಂ… ಹೀಗೆ ಒಂದೇ ಅಕ್ಷರದ ಹೆಸರಿನ ಮೂವಿಗಳನ್ನು ನೋಡಿದ್ದೀರಾ, ಇದೀಗ ಅದೇ ಸಾಲಿಗೆ ‘ಸಿ’ ಎನ್ನುವ ಮತ್ತೊಂದು ಸಿನಿಮಾ ಕೂಡ ಸೇರಿಕೊಳ್ಳುತ್ತಿರುವುದು ವಿಶೇಷ.

    ಕಿರಣ್ ಸುಬ್ರಮಣಿ (Kiran Subramani) ಚೊಚ್ಚಲ ನಿರ್ದೇಶನದ ‘ಸಿ’ ಸಿನಿಮಾ  ಶೂಟಿಂಗ್ ಮುಗಿಸಿ ಪ್ರಮೋಷನ್ ನಲ್ಲಿ ಬಿಜಿಯಾಗಿದೆ. ಎಲೆಕ್ಷನ್ ಬಿಸಿ ಕಮ್ಮಿಯಾಗುತ್ತಿದ್ದಂತೆ ಥಿಯೇಟರ್ ಗೆ ಲಗ್ಗೆ ಇಡಲು ಸಜ್ಜಾಗಿರುವ ‘ಸಿ’ ಸಿನಿಮಾ ಇದೀಗ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ‘ಸಿ’ ಸಿನಿಮಾದ ಅಪ್ಪ ಮಗಳ ಬಾಂಧವ್ಯದ ಹಾಡು ಈಗ ಗಾನ ಪ್ರಿಯರ ಗಮನ ಸೆಳೆಯುತ್ತಿದೆ. ಕಿರಣ್ ಸುಬ್ರಮಣಿ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಮಿಂಚಿದ್ದಾರೆ. ಅಪ್ಪ ಮಗಳ ಬಾಂಧವ್ಯದ ಹಾಡಿನಲ್ಲಿ ಕಿರಣ್ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡರೆ ಮಗಳಾಗಿಮಿಂಚಿದ್ದಾಳೆ.

    ಈ ಸುಂದರ ಹಾಡನ್ನು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ರಿಲೀಸ್ ಮಾಡಿರುವುದು ವಿಶೇಷ. ಮುದ್ದು ಮಗಳ ಜೊತೆ ಸಂಭ್ರಮಿಸುತ್ತಿರುವ ಧ್ರುವ ಸಿ ಸಿನಿಮಾದ ಸುಂದರ ಹಾಡನ್ನು ರಿಲೀಸ್ ಮಾಡಿ ಸಿನಿಮಾ ತಂಡಕ್ಕೆ ಶುಭ ಹಾರೈಸಿದ್ದಾರೆ. ಅಂದಹಾಗೆ ‘ಕಂದಾ…ಕಂದಾ..’ ಎನ್ನುವ ಸಾಲಿನಿಂದ ಪ್ರಾರಂಭವಾಗುವ ಈ ಹಾಡನ್ನು ಹೃದಯ ಶಿವ ಬರೆದಿದ್ದು, ಗಾಯಕ ವಾಸುಕಿ ವೈಭವ್  ಹಾಡಿದ್ದಾರೆ.

    ನಿರ್ದೇಶಕ, ನಾಯಕ ಕಿರಣ್ ಅವರಿಗೆ ಇದು ಮೊದಲ ಸಿನಿಮಾ. ಹಾಗಂತ ಸಿನಿಮಾರಂಗ ಏನು ಹೊಸದೇನಲ್ಲ. ಈಗಾಗಲೇ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿ ಅನುಭವ ಹೊಂದಿದ್ದಾರೆ. ಇದೀಗ ಸಿ ಸಿನಿಮಾ ಮೂಲಕ ಮೊದಲ ಬಾರಿಗೆ ಸ್ವಾತಂತ್ರ ನಿರ್ದೇಶಕರಾಗಿ ಹೊರಹೊಮ್ಮುತ್ತಿದ್ದಾರೆ. ಈ ಸಿನಿಮಾ ತಂದೆ- ಮಗಳ ಬಾಂಧವ್ಯದ ಜೊತೆಗೆ ಮೆಡಿಕಲ್ ಮಾಫಿಯಾದ ಬಗ್ಗೆ ಇದೆ. ಎಜಿಎಸ್ ಪ್ರೊಡಕ್ಷನ್ ನಡಿ ನಿರ್ದೇಶಕ, ನಾಯಕ ಕಿರಣ್ ಅವರ ತಂದೆ ಸುಬ್ರಮಣಿ ಅವರು ನಿರ್ಮಾಣ ಮಾಡಿದ್ದಾರೆ.

  • ತಂದೆಯ ಕೊಲೆಯಾಗಿದೆ ಎಂದಿದ್ದಕ್ಕೆ ಮಾಜಿ ಸಚಿವ ಸಿ. ಗುರುನಾಥ್ ಮಗನ ಮೇಲೆ ಸಂಬಂಧಿಕರಿಂದ ಮಾರಣಾಂತಿಕ ಹಲ್ಲೆ

    ತಂದೆಯ ಕೊಲೆಯಾಗಿದೆ ಎಂದಿದ್ದಕ್ಕೆ ಮಾಜಿ ಸಚಿವ ಸಿ. ಗುರುನಾಥ್ ಮಗನ ಮೇಲೆ ಸಂಬಂಧಿಕರಿಂದ ಮಾರಣಾಂತಿಕ ಹಲ್ಲೆ

    ಕಲಬುರಗಿ: ಮಾಜಿ ಸಚಿವ ದಿವಂಗತ ಸಿ. ಗುರುನಾಥ್ ಅವರ ಮಗನ ಮೇಲೆ ಸಂಬಂಧಿಕರಿಂದ ಮಾರಣಾಂತಿಕ ಹಲ್ಲೆ ನಡೆದಿದೆ.

    ಕಲಬುರಗಿ ಜಿಲ್ಲೆ ಶಹಬಾದ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಸಂಬಂಧಿಕರಾದ ಸತೀಶ್, ಅವಿನಾಶ್ ಸೇರಿದಂತೆ ಏಳೆಂಟು ಜನರಿಂದ ಸಿ ರಘುನಾಥ್ ಮೇಲೆ ದಾಳಿ ನಡೆದಿದ್ದು, ಕಬ್ಬಿಣದ ರಾಡ್‍ನಿಂದ ಮನಬಂದಂತೆ ಹಲ್ಲೆ ಮಾಡಿದ್ದಾರೆ.

    ರಘುನಾಥ್ ತನ್ನ ಫೇಸ್‍ಬುಕ್ ವಾಲ್‍ನಲ್ಲಿ ನನ್ನ ತಂದೆಯ ಆತ್ಮಹತ್ಯೆಯಲ್ಲ, ಕೊಲೆಯಾಗಿದೆ ಅಂತಾ ಪೋಸ್ಟ್ ಹಾಕಿದ್ದರು. ಇದನ್ನ ನೋಡಿ ಸಂಬಂಧಿಕರು ಕೆರಳಿದ್ದರು. ಪೋಸ್ಟ್ ಡಿಲೀಟ್ ಮಾಡು ಅಂತಾ ಎಚ್ಚರಿಕೆ ನೀಡಿದ್ದರು. ಆದರೆ ಎಚ್ಚರಿಕೆಗೆ ಕೇರ್ ಮಾಡದ ಹಿನ್ನಲೆಯಲ್ಲಿ ಹಲ್ಲೆ ನಡೆದಿದೆ ಎಂದು ರಘುನಾಥ್ ಆರೋಪಿಸಿದ್ದಾರೆ.

    ನನಗೆ ರಾಜಕೀಯವಾಗಿ ಮುಗಿಸಲು ಸತೀಶ್ ಹಾಗೂ ಅವಿನಾಶ್ ಪ್ಲ್ಯಾನ್ ಮಾಡಿದ್ದಾರೆಂದು ಆರೋಪ ಮಾಡಿರೋ ರಘುನಾಥ್, ಗಾಯದೊಂದಿಗೆ ಪೊಲೀಸರಿಗೆ ದೂರು ನೀಡಲು ಹೋಗಿದ್ದರು. ಪೊಲೀಸರ ಒತ್ತಾಯದ ಮೇರೆಗೆ ರಘುನಾಥ್ ಫೇಸ್‍ಬುಕ್ ಪೋಸ್ಟ್ ಡಿಲೀಟ್ ಮಾಡಿದ್ದಾರೆ.

    ಶಹಾಬಾದ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.