Tag: C. C. Patil

  • ಎಸ್‌ಸಿ, ಎಸ್‌ಟಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗೆ ದುರ್ಬಳಕೆ: ಸಿ.ಸಿ.ಪಾಟೀಲ್

    ಎಸ್‌ಸಿ, ಎಸ್‌ಟಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗೆ ದುರ್ಬಳಕೆ: ಸಿ.ಸಿ.ಪಾಟೀಲ್

    – ದಲಿತರ ಅನುದಾನದ ಮೇಲೆ ಸರ್ಕಾರದ ಕಣ್ಣು

    ಗದಗ: ಅಹಿಂದ ನಾಯಕ ಎಂದು ಹೇಳುವ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಹಿಂದುಳಿದ ವರ್ಗ, ಎಸ್‌ಸಿ, ಎಸ್‌ಟಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವ ಹಾಗೂ ನರಗುಂದ (Naragunda) ಬಿಜೆಪಿ ಶಾಸಕ ಸಿ.ಸಿ ಪಾಟೀಲ (C C Patil) ಆರೋಪಿಸಿದರು.

    ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿ ಆಗಿದೆ. ಪ್ರಾರಂಭಿಕ 6 ಪಂಚ ವಾರ್ಷಿಕ ಯೋಜನೆಗಳಲ್ಲಿ ಎಸ್ಸಿಪಿ, ಟಿಎಸ್ಪಿ ಯೋಜನೆ ತರಲಿಲ್ಲ. ಕೆ.ಆರ್ ನಾರಾಯಣನ್ ಯೋಜನಾ ಆಯೋಗದ ಉಪಾಧ್ಯಕ್ಷರಾಗಿದ್ದ ವೇಳೆ 7ನೇ ಪಂಚ ವಾರ್ಷಿಕ ಯೋಜನೆಯಲ್ಲಿ ಜಾರಿಗೆ ಬಂದಿದೆ ಎಂಬುದು ಕಾಂಗ್ರೆಸ್‌ನವರಿಗೆ ಗೊತ್ತಿರಲಿ ಎಂದರು. ಇದನ್ನೂ ಓದಿ: ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿರೋದು ರಾಜಕೀಯ ದ್ವೇಷ: ನಿಖಿಲ್ ಕುಮಾರಸ್ವಾಮಿ

    2023-24ರಲ್ಲಿ ಎಸ್ಸಿಪಿ, ಟಿಎಸ್ಪಿನಿಂದ ವಾಪಸ್ ತೆಗೆದುಕೊಂಡಿದ್ದು ಒಟ್ಟು 11,144 ಕೋಟಿ ರೂ. ಹಣ. 2024-25ರಲ್ಲಿ 14,488 ಕೋಟಿ ರೂ. ಹಣ ವಾಪಾಸ್ ತೆಗೆದುಕೊಂಡಿದ್ದಾರೆ. ಇಲ್ಲಿಯವರೆಗೆ ಸುಮಾರು 25,000 ಕೋಟಿ ರೂ. ಗ್ಯಾರಂಟಿ ಯೋಜನೆಗೆ ಬಳಸಿಕೊಂಡಿದ್ದಾರೆ. ಮೂಖಪ್ರೇಕ್ಷಕರಾಗಿರುವ ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ಎಸ್.ಸಿ ಮಹದೇವಪ್ಪ, ಮುನಿಯಪ್ಪ, ಪರಮೇಶ್ವರ್ ಅವರು ಪ್ರಶ್ನಿಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾರತದ ಅತಿದೊಡ್ಡ ಗ್ರೀನ್‌ಫೀಲ್ಡ್ ‘ದೇಶೀಯ ಕಾರ್ಗೋ ಟರ್ಮಿನಲ್’ ಪ್ರಾರಂಭ

    ಇದೆಲ್ಲಾ ಇವರು ದಲಿತರ ಮೇಲೆ ತೋರಿಸುತ್ತಿರುವ ಪ್ರೀತಿ. ಮುಂಬರುವ ಬಜೆಟ್‌ನಲ್ಲಿ ಎಸ್‌ಸಿ, ಎಸ್‌ಟಿ ವರ್ಗಕ್ಕೆ ಮೀಸಲಿಟ್ಟ 15,000 ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ತೆಗೆದುಕೊಳ್ಳುವ ಸಿದ್ಧತೆ ನಡೆಸಿದ್ದಾರೆ. ಇದನ್ನು ಕೈಬಿಡದಿದ್ದರೆ ವಿಧಾನಸಭೆ ಹಾಗೂ ವಿಧಾನಪರಿಷತ್‌ನಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಮುಂದಿನ ಕುಂಭಮೇಳ ಎಲ್ಲಿ ನಡೆಯುತ್ತೆ? – ಈಗಲೇ ತಯಾರಿ ಆರಂಭಿಸಿದ ಸರ್ಕಾರ

    ಪರಿಷತ್ ಸದಸ್ಯ ಎಸ್.ವಿ ಸಂಕನೂರ ಮಾತನಾಡಿ, ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ಕಾನೂನು ಬಾಹಿರ ವರ್ಗಾವಣೆ ಮಾಡುತ್ತಿದೆ. ಕಾನೂನು ಉಲ್ಲಂಘಿಸಿದವರ ಮೇಲೆ ಕ್ರಮ ಏಕೆ ಕೈಗೊಳ್ಳುತ್ತಿಲ್ಲ. ರಾಜಕಾರಣಿ, ಹಿರಿಯ ಅಧಿಕಾರಿಗಳೇ ಈ ಅಕ್ರಮ ಎಸಗಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದೆಂತೆ ಆಗಿದೆ. ಈಗ ಯಾರ ಮೇಲೆ ಕ್ರಮ ಕೈಗೊಳ್ಳಲಬೇಕು ಎಂದು ಸರ್ಕಾರವನ್ನು ಪ್ರಶ್ನಿಸಿದರು.

    ಎಸ್‌ಸಿ, ಎಸ್‌ಟಿ ಸಮುದಾಯದ ಮೇಲೆ ಕಾಳಜಿ ಇದ್ದರೆ ಬಜೆಟ್‌ನಲ್ಲಿ ಮೀಸಲಿಟ್ಟ ಅನುದಾನವನ್ನು ಸಂಪೂರ್ಣ ಬಿಡುಗಡೆ ಮಾಡಬೇಕಿತ್ತು. ಆರ್ಥಿಕ ವರ್ಷ ಕಳೆದರೂ ಇನ್ನೂ ಪೂರ್ಣ ಅನುದಾನ ಬಿಡುಗಡೆ ಮಾಡಿಲ್ಲ. ನಿಯಮ ಉಲ್ಲಂಘಿಸಿ ಹಣ ವರ್ಗಾವಣೆ ಮಾಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಖಜಾನೆ ಖಾಲಿ ಆಗಿದೆ. ಹೀಗಾಗಿ ಕಾಂಗ್ರೆಸ್ ಸರ್ಕಾರ ಅನ್ಯ ಮಾರ್ಗ ಹಿಡಿದಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಅಮೆರಿಕದಲ್ಲಿ ಭೀಕರ ಅಪಘಾತಕ್ಕೆ ಕೋಮಾ ಸ್ಥಿತಿಯಲ್ಲಿ ಭಾರತೀಯ ವಿದ್ಯಾರ್ಥಿನಿ

    ಎಸ್‌ಸಿ ಘಟಕದ ಅಧ್ಯಕ್ಷ ಮಂಜುನಾಥ ಹುಡಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರುಡಗಿ, ಮಂಜುನಾಥ ಮುಳಗುಂದ, ಲಿಂಗರಾಜ ಪಾಟೀಲ, ಫಕ್ಕಿರೇಶ ರಟ್ಟಿಹಳ್ಳಿ, ರಾಮಣ್ಣ ಚವಾಣ್, ಸುರೇಶ್ ಛಲವಾದಿ, ಮಲ್ಲಪ್ಪ ಮಾದರ್, ಈಶ್ವರಪ್ಪ ರಂಗಪ್ಪನವರು, ಯಲ್ಲಪ್ಪ ಶಿರಿ ಸೇರಿ ಹಲವರು ಉಪಸ್ಥಿತರಿದ್ದರು.

  • ಕಾಂಗ್ರೆಸ್ ಸರ್ಕಾರದ ಹಗರಣಗಳ ಬಗ್ಗೆ ಸಿನಿಮಾ ಮಾಡಿದ್ರೆ ಬಾಕ್ಸ್ಆಫೀಸ್ ಹಿಟ್ ಆಗುತ್ತೆ: ಸಿ.ಸಿ ಪಾಟೀಲ್

    ಕಾಂಗ್ರೆಸ್ ಸರ್ಕಾರದ ಹಗರಣಗಳ ಬಗ್ಗೆ ಸಿನಿಮಾ ಮಾಡಿದ್ರೆ ಬಾಕ್ಸ್ಆಫೀಸ್ ಹಿಟ್ ಆಗುತ್ತೆ: ಸಿ.ಸಿ ಪಾಟೀಲ್

    ಗದಗ: ಕಾಂಗ್ರೆಸ್ (Congress) ಸರ್ಕಾರದ ಹಗರಣಗಳ ಬಗ್ಗೆ ಸಿನೆಮಾ ಮಾಡಿದ್ರೆ ಬಾಕ್ಸ್ಆಫೀಸ್ ಹಿಟ್ ಆಗುತ್ತದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ (BJP) ನರಗುಂದ ಶಾಸಕ ಸಿ.ಸಿ ಪಾಟೀಲ್ (C C Patil) ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

    ನಗರದ ಕಚೇರಿಯಲ್ಲಿ ಮಾತನಾಡಿದ ಅವರು, ಹಗರಣಗಳ ಸುಳಿಯಲ್ಲಿ ಸರ್ಕಾರ ಸಿಲುಕಿದೆ. ತನ್ನ ಹಗರಣಗಳು ಬೆಳಕಿಗೆ ಬರಬಾರದೆಂದು ಒಂದಲ್ಲ ಒಂದು ಕಥೆ ಬಿಡುತ್ತಿದೆ. ಮೊದಲು ಹುಲಿ ಉಗುರಿನದು ಬಿಟ್ಟರು. ವಾಲ್ಮೀಕಿ ಹಗರಣ ಬಂದಾಗ ದರ್ಶನ್ ವಿಚಾರ ಬಂತು. ಈಗ ಮುಡಾ ಹಗರಣ ಬಂದಾಗ ವಕ್ಫ್ ಬೋರ್ಡ್ ಬಂದಿದೆ. ಹಗರಣಗಳನ್ನ ಮುಚ್ಚಿಹಾಕಲು ಒಂದಿಲ್ಲೊಂದು ದಂತಕಥೆಗಳನ್ನು ತೇಲಿಬಿಡುತ್ತಾರೆ. ಆಡಳಿತದ ವೈಫಲ್ಯತೆ ಕಡೆಗೆ ರಾಜ್ಯದ ಜನರ ಗಮನ ಹೋಗದ ಹಾಗೆ ನೋಡುತ್ತಿದ್ದಾರೆ. ಸಿಎಂ ಅವರು ಗಾಳಿ ಸುದ್ದಿ ಬಿಡುವುದರಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಸಿದ್ದಗಂಗಾ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ಹೆಚ್‍ಡಿಕೆ

    ನಿಮ್ಮ ಆಡಳಿತ ನಿಮಗೆ ತೃಪ್ತಿ ತರುತ್ತಿದೆಯಾ ಎಂದು ಆತ್ಮಸಾಕ್ಷಿಯಾಗಿ ಸಿಎಂ ಹೇಳಿ. 2 ವರ್ಷದಲ್ಲಿ ರಾಜ್ಯ ಏನು ಅಭಿವೃದ್ಧಿ ಆಗಿದೆ. ಗ್ಯಾರಂಟಿ ಕೊಟ್ಟಿದ್ದೇನೆ ಅಂತೀರಾ ಅದಕ್ಕೆ ವಿರೋಧ ಇಲ್ಲ. ಅಭಿವೃದ್ಧಿ ಏನು ಮಾಡಿದ್ದೀರಿ? ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಕರೆದು ಶಾಸಕರ ಅಭಿಪ್ರಾಯ ಕೇಳಿ. ಆಗ ನಿಮ್ಮ ನೈಜ ಬಣ್ಣ ಗೊತ್ತಾಗುತ್ತೆ. ಸಿಎಂ ಡಿಸಿಎಂಗೆ ಹೇಳೋಕೆ ಇಚ್ಚೆ ಪಡುತ್ತೇನೆ. ಕನ್ನಡ ರಾಜ್ಯೋತ್ಸವದ ಬಗ್ಗೆ ಕೇವಲ ಡಿಸಿಎಂ ಜಾಹೀರಾತು ಬರುತ್ತದೆ. ಸಿಎಂದು ಹೆಚ್ಚು ಜಾಹಿರಾತು ಇಲ್ಲವೇ ಇಲ್ಲ. ಏನು ವಿಚಿತ್ರ ಸರ್ಕಾರ. ನಾನು 4ನೇ ಬಾರಿ ಶಾಸಕ, ನಾನಂತೂ ಇಂತಹ ಸರ್ಕಾರ ನೋಡಿದ್ದೇ ಇಲ್ಲ ಎಂದರು. ಇದನ್ನೂ ಓದಿ: ಬಿಜಿಎಸ್ ಆಸ್ಪತ್ರೆ ತಲುಪಿದ ದರ್ಶನ್‌ – ಸರ್ಜರಿ ಕೊನೇ ಆಯ್ಕೆಯಾಗಿ ಪರಿಗಣಿಸುವಂತೆ ಕುಟುಂಬಸ್ಥರ ಮನವಿ

    ಇನ್ನು ವಕ್ಫ್ ಆಸ್ತಿ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಮಾತನಾಡಿ, ಪಂಚಮಸಾಲಿ ಕೂಡಲಸಂಗಮ ಪೀಠ, ಹರಿಹರ ಪಂಚಮಸಾಲಿ ಪೀಠ ವಕ್ಫ್ ಬೋರ್ಡ್ ಅನ್ನುತ್ತಾರೋ ಏನೋ. ವಕ್ಫ್ ಬೋರ್ಡ್ ವಿಚಾರಕ್ಕೆ ಕಾಂಗ್ರೆಸ್‌ಗೆ ಮತ ಹಾಕಿದ ಹಿಂದೂಗಳು ವಿಚಾರ ಮಾಡಬೇಕು. ಇಂದು ಯಾರದೋ ಹೊಲಕ್ಕೆ ಬಂದಿದೆ, ನಾಳೆ ನನ್ನ ಮನೆಗೆ ಬರಲ್ಲ ಅನ್ನುವ ಗ್ಯಾರಂಟಿ ಏನು? ನಮ್ಮ ಮಠಕ್ಕೆ ಬರಲ್ಲ ಅನ್ನೋ ಗ್ಯಾರಂಟಿ ಏನಿದೆ? ಕೂಡಲಸಂಗಮ ಪಂಚಮಸಾಲಿ ಪೀಠಾನೂ ವಕ್ಫ್ ಬೋರ್ಡ್ ಅಂತಾರೋ ಏನೋ? ಕಾಂಗ್ರೆಸ್ ತುಷ್ಟೀಕರಣ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಸಾವಿರಾರು ಎಕರೆ ಜಮೀನು ಹಿಂದಿನ ದಿನ ರೈತರ ಹೆಸರಲ್ಲಿತ್ತು. ಮರುದಿನ ವಕ್ಫ್ ಬೋರ್ಡ್ ಹೆಸರಿನಲ್ಲಿ ಪಹಣಿ ಆಗಿದೆ. ಸಚಿವ ಜಮೀರ್ ಅಹ್ಮದ್ ವಿಜಯಪುರಕ್ಕೆ ಭೇಟಿ ಕೊಟ್ಟು ಬಂದ 24 ಗಂಟೆಯೊಳಗೆ ಸಾವಿರಾರು ಎಕರೆ ಜಮೀನನ್ನು ವಕ್ಫ್ ಬೋರ್ಡ್‌ಗೆ ವರ್ಗಾವಣೆ ಮಾಡಿದರು. ಇದಕ್ಕೆಲ್ಲಾ ಕಾರಣರಾದ ಅಲ್ಲಿನ ಜಿಲ್ಲಾಧಿಕಾರಿ ಬೂಬಾಲನ್ ಮೇಲೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ರಾಜ್ಯ ಸರ್ಕಾರದ ತೊಳಲಾಟವನ್ನು ಬಹಿರಂಗವಾಗಿ ಹೇಳಿದ ಡಿಕೆಶಿಗೆ ಅಭಿನಂದನೆ: ವಿ.ಸೋಮಣ್ಣ ವ್ಯಂಗ್ಯ

    ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ಹಿನ್ನೆಲೆ ಪುನಃ ರೈತರ ಖಾತೆಗೆ ವರ್ಗಾವಣೆ ಮಾಡಿದ್ದಾರೆ. ಈ ರಾಜ್ಯದಲ್ಲಿ ಏನು ನಡೆಯುತ್ತಿದೆ. ಹಲವಾರು ಮಂತ್ರಿಗಳು ಬಿಜೆಪಿಯವರ ಹುನ್ನಾರ ಅನ್ನುತ್ತಾರೆ. ಬಿಜೆಪಿಯವರು ಪಹಣಿ ತಿದ್ದಿಸಿದ್ರಾ? ಡಿಸಿ ಬಿಜೆಪಿಯವರ ಮಾತು ಕೇಳುತ್ತಾನಾ? ಕಾಂಗ್ರೆಸ್‌ನವರ ಮಾತು ಕೇಳುತ್ತಾನಾ?ಜಿಲ್ಲಾಧಿಕಾರಿಗೆ ತನ್ನ ಕರ್ತವ್ಯದ ಅರಿವಿರಬೇಕಿತ್ತು. ಸರ್ಕಾರ ಹೇಳಿದ್ದನ್ನು ಕೇಳಲು ಜಿಲ್ಲಾಧಿಕಾರಿ ಇರಲ್ಲ, ಅವರು ಐಎಎಸ್ ಕೇಡರ್ ಅಧಿಕಾರಿ. ಈ ದೇಶದ ಕಾನೂನಿನಲ್ಲಿ ಕೆಲಸ ಮಾಡಬೇಕಾಗುತ್ತದೆ. ಆ ಜಿಲ್ಲಾಧಿಕಾರಿ ಮೇಲೂ ಕ್ರಮ ಆಗಬೇಕೆಂದು ಹೇಳಿದರು. ಇದನ್ನೂ ಓದಿ: ಬೆನ್ನುನೋವಿನ ಚಿಕಿತ್ಸೆಗಾಗಿ ಬಿಜಿಎಸ್ ಆಸ್ಪತ್ರೆಯತ್ತ ದರ್ಶನ್ – ಆಸ್ಪತ್ರೆ ಸುತ್ತಲೂ ಬಿಗಿ ಭದ್ರತೆ

    ವಕ್ಫ್ ಬೋರ್ಡ್ (Waqf Board) ಆಸ್ತಿ ಸಲುವಾಗಿ ಬಸವಣ್ಣನ ಕಾಲದ ಸಿಂಧಗಿಯ ವಿರಕ್ತಮಠ, ಬೀರಲಿಂಗೇಶ್ವರ ಮಠ ಅದೂ ವಕ್ಫ್ ಎಂದು ಮಾಡಿದ್ದಾರೆ. ಬೀರಲಿಂಗೇಶ್ವರ ಮಠ ವಕ್ಫ್ ಎಂದು ಗೊತ್ತಾದ ಮೇಲೆ ಮುಖ್ಯಮಂತ್ರಿ ಕಣ್ಣು ತೆರೆದರು ಅನಿಸುತ್ತದೆ. ಇದೊಂದು ತುಘಲಕ್ ಸರ್ಕಾರ ಅಂದ್ರೆ ತಪ್ಪಲ್ಲ. ಮತಗಳಿಕೆಗಾಗಿ ಯೋಜನೆ ಕೊಡಲಿ, ಮಾಡಲಿ. ಆದರೆ ಒಂದು ಸಮಾಜ, ವರ್ಗವನ್ನ ತುಳಿದು ಇನ್ನೊಂದು ಸಮಾಜವನ್ನು ಓಲೈಕೆ ಮಾಡೋದು ಎಷ್ಟು ಸಮಂಜಸ? ಸಿಎಂ ಆಗೋವಾಗ ಈ ನಾಡಿನ ಕಾನೂನಿಗನುಗುಣವಾಗಿ ಕೆಲಸ ಮಾಡುತ್ತೇನೆ ಎಂದು ಪ್ರಮಾಣ ವಚನ ತೆಗೆದುಕೊಳ್ಳುತ್ತೀರಿ. ಇದೇನಾ ನಿಮ್ಮ ಕಾನೂನು? ಇಂತಹ ಬೇಜವಾಬ್ದಾರಿ ಆಡಳಿತ ಕರ್ನಾಟಕದ ಜನತೆ ನೋಡಲಿಲ್ಲ. ಗೊಂದಲದಲ್ಲಿ ಇರೋದಕ್ಕಿಂತ ವಿಧಾನಸಭೆ ವಿಸರ್ಜನೆ ಮಾಡಿ ಚುನಾವಣೆಗೆ ಹೋಗೋದು ಸೂಕ್ತ. ಮರು ಜನಾದೇಶ ಪಡೆಯೋದು ಸೂಕ್ತ ಎಂದು ಹರಿಹಾಯ್ದರು.  ಇದನ್ನೂ ಓದಿ: ಮಹಿಳೆಯನ್ನ ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟು ಹಾಕಿದ ದುಷ್ಕರ್ಮಿಗಳು

  • ಭಾಗ್ಯಗಳನ್ನು ಕೊಟ್ಟು ರಾಜ್ಯವನ್ನ ದುಸ್ಥಿತಿಗೆ ತಂದರು: ಕಾಂಗ್ರೆಸ್ ವಿರುದ್ಧ ಸಿ.ಸಿ.ಪಾಟೀಲ ಕಿಡಿ

    ಭಾಗ್ಯಗಳನ್ನು ಕೊಟ್ಟು ರಾಜ್ಯವನ್ನ ದುಸ್ಥಿತಿಗೆ ತಂದರು: ಕಾಂಗ್ರೆಸ್ ವಿರುದ್ಧ ಸಿ.ಸಿ.ಪಾಟೀಲ ಕಿಡಿ

    ಗದಗ: ಭಾಗ್ಯಗಳನ್ನು ಕೊಟ್ಟು ರಾಜ್ಯವನ್ನು ದುಸ್ಥಿತಿಗೆ ತಂದರು ಎಂದು ಕಾಂಗ್ರೆಸ್ (Congress) ವಿರುದ್ಧ ಮಾಜಿ ಸಚಿವ ಹಾಗೂ ಶಾಸಕ ಸಿ.ಸಿ.ಪಾಟೀಲ (C.C.Patil) ಗುಡುಗಿದ್ದಾರೆ.

    ಗದಗದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ಮಿದುಳು ರೈಲ್ವೆ ಹಳಿ ಇದ್ದಂತೆ. ರೈಲು ಹಳಿ ಪ್ಯಾರಲಲ್‌ನಂತೆ ಕಾಂಗ್ರೆಸ್ ಎಐಸಿಸಿ ವರಿಷ್ಠರು ರೈಲು ಹಳಿ ಇದ್ದಂತೆ. ರಾಷ್ಟ್ರವ್ಯಾಪಿ ನಿಲ್ಲಿಸುತ್ತಿರುವುದು ಕೇವಲ 230 ಸ್ಥಾನಕ್ಕೆ. ಅಧಿಕಾರಕ್ಕೆ ಬರಲು 272 ಸ್ಥಾನ ಬೇಕು. ಯಾವ ಪುರುಷಾರ್ಥ, ಯಾವ ಲಾಜಿಕ್ ಮೇಲೆ ಗ್ಯಾರಂಟಿ ಕೊಡ್ತಿದ್ದಾರೆ? ಅಕಸ್ಮಾತ್ ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದ್ರೆ ಸೂರ್ಯ ಪಶ್ಚಿಮಕ್ಕೆ ಹುಟ್ಟಿದಂತೆ. ಅವರ ಮಿತ್ರ ಪಕ್ಷವೇ ಇವರನ್ನು ಪರಿಗಣಿಸಿಲ್ಲ. ಪೊಳ್ಳು ಬರವಸೆಯನ್ನು ಯಾರೂ ನಂಬುವುದಿಲ್ಲ. ಭಾಗ್ಯಗಳನ್ನು ಕೊಟ್ಟು ಕರ್ನಾಟಕವನ್ನು ದುಸ್ಥಿತಿಗೆ ತಂದಿದ್ದಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಅಲ್ಲ – ಐಟಿ ಕಂಪನಿ ಸ್ಫೋಟಿಸಲು ತಯಾರಿ ನಡೆಸಿದ್ದ ಉಗ್ರರು!

    ದೇಶಕ್ಕೂ ದುಸ್ಥಿತಿ ತರುವಂತಹ ಹೇಳಿಕೆ ಕೊಡಬಾರದು. ಚುನಾವಣೆಯಲ್ಲಿ ಗೆದ್ದರೆ ಮಾತು ಉಳಿಸಿಕೊಳ್ಳಬೇಕು. ಇವರು ಅಧಿಕಾರಕ್ಕೆ ಬರುವುದಿಲ್ಲ, ಬೇಕಾದ್ದು ಮಾತನಾಡ್ತಾರೆ. ಕಾಂಗ್ರೆಸ್‌ನವರು ವಿಚಿತ್ರ ಸನ್ನಿವೇಶದಲ್ಲಿ ಹೊರಟಿದ್ದಾರೆ. ಲೋಕಸಭಾ ಚುನಾವಣೆ ನಂತರ ಕಾಂಗ್ರೆಸ್ ವಿಸರ್ಜನೆ ಆಗುತ್ತೆ ಎಂದು ಬಿಜೆಪಿ ಶಾಸಕ ಭವಿಷ್ಯ ನುಡಿದಿದ್ದಾರೆ.

    ಕಾಂಗ್ರೆಸ್ ನಾರಿ ನ್ಯಾಯ ಗ್ಯಾರಂಟಿ ವಿರುದ್ಧ ಕಿಡಿಕಾರಿದ ಶಾಸಕ, ಬಿಜೆಪಿನಲ್ಲೂ ಮಹಿಳೆಯರಿಗಾಗಿ ಸಾಕಷ್ಟು ಯೋಜನೆಗಳಿವೆ. ಸುಕನ್ಯಾ ಸಮೃದ್ಧಿ, ಬೇಟಿ ಬಜಾವೋ, ಬೇಟಿಪಡಾವೋ ಇದೆ. 2028 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುತ್ತಿದ್ದೇವೆ. ಇದು ನಾರಿ ನ್ಯಾಯ ಅಲ್ವಾ? ಇದು ನಾರಿ ಅನ್ಯಾಯ ನಾ? ಸಿಎಂ ಹಾಗೂ ಡಿಸಿಎಂ ಎಷ್ಟು ಕ್ಷೇತ್ರದಲ್ಲಿ ಓಡಾಡಿದ್ದಾರೆ? ಒಬ್ಬರು ಮೈಸೂರು ಹಿಡಿದುಕೊಂಡು ಕೂತಿದ್ದಾರೆ. ಇನ್ನೊಬ್ಬರು ಬೆಂಗಳೂರು ಗ್ರಾಮಾಂತರ ಹಿಡಿದುಕೊಂಡು ಕೂತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನವರದ್ದು ಗೂಂಡಾ ಸಂಸ್ಕೃತಿ, ನಮ್ಮ ಕಾರ್ಯಕರ್ತರ ವಾಹನ ತಡೆದಿದ್ದಾರೆ: ಜೋಶಿ ಕಿಡಿ

    ಒಂದು ಕಾಲದಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್‌ನವರು ಎಷ್ಟು ಜನರಿದ್ದರು. ಒನ್ ಥರ್ಡ್ ಬಹುಮತ ಇತ್ತು. ಈಗ ವಿರೋಧ ಪಕ್ಷದ ನಾಯಕನಾಗಲು ಅರ್ಹತೆ ಇಲ್ಲದ ಸ್ಥಾನಕ್ಕೆ ಬಂದಿದ್ದಾರೆ. ಭಾಗ್ಯಗಳಿಂದ ಜನ ಮೋಸ ಹೋಗಿದ್ದರಿಂದ ಹಾಗೂ ಬಿಜೆಪಿಯಲ್ಲಿ ಆಗಿದ್ದ ಅಡೆತಡೆಗಳಿಂದ ಅಧಿಕಾರಕ್ಕೆ ಬಂದಿದ್ದಾರೆ. ಈಗಲೇ ಚುನಾವಣೆ ಆದರೆ ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬರುತ್ತೆ. ತಾಕತ್ತು ಇದ್ರೆ ಲೋಕಸಭಾ ಚುನಾವಣೆ ಮುಗಿದ ನಂತರ ವಿಧಾನಸಭೆ ವಿಸರ್ಜನೆ ಮಾಡಿ ಚುನಾವಣೆ ಮಾಡಲಿ. ನಾವು ತಯಾರು ಇದ್ದೇವೆ ಎಂದು ಸವಾಲು ಹಾಕಿದ್ದಾರೆ.

  • ರಸ್ತೆಬದಿ ಕಟ್ಟಡ ಅಂಕುಶಕ್ಕೆ ನಿಯಮ: ಸಚಿವ ಸಿ.ಸಿ.ಪಾಟೀಲ್

    ರಸ್ತೆಬದಿ ಕಟ್ಟಡ ಅಂಕುಶಕ್ಕೆ ನಿಯಮ: ಸಚಿವ ಸಿ.ಸಿ.ಪಾಟೀಲ್

    ಬೆಂಗಳೂರು: ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯರಸ್ತೆಗಳ ಅಕ್ಕಪಕ್ಕ ಅನಧಿಕೃತ ಕಟ್ಟಡಗಳನ್ನು ನಿರ್ಮಿಸದಂತೆ ತಡೆಗಟ್ಟಲು ಲೋಕೋಪಯೋಗಿ ಇಲಾಖೆಯಿಂದ ಸ್ಪಷ್ಟ ನಿಯಮ ಜಾರಿಗೆ ತರಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್‌ ತಿಳಿಸಿದ್ದಾರೆ.

    ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಹೆದ್ದಾರಿಗಳ ಅಕ್ಕಪಕ್ಕ ಕಟ್ಟಡ ನಿರ್ಮಾಣದಲ್ಲಿ ಕನಿಷ್ಠ ಎಷ್ಟು ಪ್ರಮಾಣದ ಅಂತರ ಕಾಯ್ದುಕೊಳ್ಳಬೇಕೆಂಬ ನಿಯಮ ಅಳವಡಿಸಲಾಗಿದೆ ಎಂಬ ವಿವರಗಳನ್ನು ನೀಡಿದ್ದಾರೆ. ಈ ನಿಬಂಧನೆಗಳನ್ನು ಪಾಲಿಸುವುದರಿಂದ ರಸ್ತೆಗಳಲ್ಲಿ ಅತಿಕ್ರಮಣ ತಡೆಯಲು ಸಹಾಯಕವಾಗಿ, ವಾಹನ ಸಂಚಾರ ಸುಗಮವಾಗುತ್ತದೆ. ಅಲ್ಲದೇ ಅಪಘಾತಗಳ ಪ್ರಮಾಣವನ್ನು ಕಡಿಮೆಗೊಳಿಸಲು ಸಾಧ್ಯವಾಗಲಿದೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಬೆಳ್ಳಿತೆರೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬಯೋಪಿಕ್

    ಈ ನಿಯಮದನ್ವಯ ರಾಜ್ಯ ಹೆದ್ದಾರಿಗಳ ಮಧ್ಯಭಾಗದಿಂದ 40 ಮೀಟರ್ ಅಂತರದವರೆಗೆ ಯಾವುದೇ ಕಟ್ಟಡ ಅಥವಾ ಅಂಗಡಿಗಳನ್ನು ನಿರ್ಮಿಸುವಂತಿಲ್ಲ. ಜಿಲ್ಲಾ ಮುಖ್ಯರಸ್ತೆಗಳ ಮಧ್ಯಭಾಗದಿಂದ 25 ಮೀಟರ್ ಅಂತರದವರೆಗೆ ಯಾವುದೇ ಕಟ್ಟಡ ನಿರ್ಮಿಸುವುದಕ್ಕೆ ಅವಕಾಶವಿಲ್ಲ. ಅಲ್ಲದೇ ಸಿಟಿ ಕಾರ್ಪೊರೇಷನ್, ಸಿಟಿ ಮುನ್ಸಿಪಲ್ ಕೌನ್ಸಿಲ್, ಟೌನ್ ಮುನ್ಸಿಪಲ್ ಕೌನ್ಸಿಲ್, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಪರಿಮಿತಿಗಳಲ್ಲಿ ಈ ಅಂತರವನ್ನು ರಾಜ್ಯ ಹೆದ್ದಾರಿಯ ದಾಖಲಿತ ರಸ್ತೆ ಭೂಗಡಿಯ ಅಂಚಿನಿಂದ ಕನಿಷ್ಠ 6 ಮೀಟರ್ ಅನ್ನು ಕಾಯ್ದುಕೊಳ್ಳಬೇಕು. ಸಿಟಿ ಕಾರ್ಪೊರೇಷನ್ ಪರಿಮಿತಿಯಿಂದ 15 ಕಿ.ಮೀ. ದೂರದವರೆಗೆ 12 ಮೀಟರ್ ಅಂತರ ಪಾಲಿಸುವುದು ಕಡ್ಡಾಯವಾಗಿದೆ ಎಂದು ಹೇಳಿದ್ದಾರೆ.

    ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರುಗಳನ್ನು ಹೆದ್ದಾರಿ ಪ್ರಾಧಿಕಾರ ಎಂದು ಘೋಷಿಸಲಾಗಿದ್ದು, ರಸ್ತೆಯಿಂದ ಕಟ್ಟಡಗಳ ಅಂತರ ನಿಗದಿಪಡಿಸುವುದು. ರಸ್ತೆ ಗಡಿಯನ್ನು ನಿಗದಿಪಡಿಸುವುದು ಅವರ ಜವಾಬ್ದಾರಿಯಾಗಿರುತ್ತದೆ ಎಂದು ಸಿ.ಸಿ.ಪಾಟೀಲ್‌ ಅವರು ವಿವರಿಸಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿಗೆ ವಿಭೂತಿ ಹಚ್ಚಿ ಮುರುಘಾಶ್ರೀಗಳಿಂದ ಲಿಂಗಧಾರಣೆ

    Live Tv
    [brid partner=56869869 player=32851 video=960834 autoplay=true]

  • ಚಡ್ಡಿನಾದ್ರೂ ಸುಡ್ಲಿ, ಬೇಕಿದ್ರೆ ಪಂಚೆನಾದ್ರೂ ಸುಟ್ಟುಕೊಳ್ಳಲಿ ನಾವೇನು ಮಾಡೋದು: ಸಿ.ಸಿ ಪಾಟೀಲ್

    ಚಡ್ಡಿನಾದ್ರೂ ಸುಡ್ಲಿ, ಬೇಕಿದ್ರೆ ಪಂಚೆನಾದ್ರೂ ಸುಟ್ಟುಕೊಳ್ಳಲಿ ನಾವೇನು ಮಾಡೋದು: ಸಿ.ಸಿ ಪಾಟೀಲ್

    ಗದಗ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ತಿಕ್ಕಾಟದಿಂದ ಸಿದ್ದರಾಮಯ್ಯ ತಲೆ ಖಾಲಿ ಆಗಿದ್ದು, ಅವರ ತಲೆ ದೆವ್ವಗಳ ಮನೆ ಆಗಿದೆ ಅಂತ ಲೋಕೋಪಯೋಗಿ ಇಲಾಖೆ ಸಚಿವ ಸಿಸಿ ಪಾಟೀಲ್ ವ್ಯಂಗ್ಯವಾಡಿದರು.

    Siddaramaiah

    ನಗರದ ಶ್ರೀನಿವಾಸ ಕಲ್ಯಾಣ ಕೇಂದ್ರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಸಿದ್ದರಾಮಯ್ಯನವರು ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಆರ್‍ಎಸ್‍ಎಸ್‍ನವರು ಕಾಂಗ್ರೆಸ್‍ನವರಿಗೆ ಏನು ಮಾಡಿದ್ದಾರೆ? ಆರ್‍ಎಸ್‍ಎಸ್‍ಗೆ ಬೈದರೆ 2023ಕ್ಕೆ ಅಧಿಕಾರ ಬರಬಹುದು ಎಂದು ತಿಳಿದುಕೊಂಡಿದ್ದಾರೆ. ಇದನ್ನೂ ಓದಿ: ಹೈದರಾಬಾದ್ ಗ್ಯಾಂಗ್ ರೇಪ್ ತನಿಖೆ CBIಗೆ ವಹಿಸುವಂತೆ ಬಿಜೆಪಿ ಒತ್ತಾಯ

    ಆರ್‍ಎಸ್‍ಎಸ್‍ಗೆ ಬೈದರೆ ಅವರ ಪರ ಇರುವ ನಾಲ್ಕೈದು ಹಿಂದೂ ವೋಟು ಸಹ ಬಿಜೆಪಿಗೆ ಬರುತ್ತವೆ. ಹಾಗಂತ ಅವರದ್ದೇ ಪಕ್ಷದವರು ಹೇಳುತ್ತಿದ್ದಾರೆ ನಾವಲ್ಲ. ಸಿದ್ದರಾಮಯ್ಯ ಟಾರ್ಗೆಟ್ ಡಿಕೆಶಿ, ಡಿಕೆಶಿ ಟಾರ್ಗೆಟ್ ಸಿದ್ದರಾಮಯ್ಯ ಅಂತ ಸುರ್ಜೆವಾಲರೇ ಹೇಳಿದ್ದಾರೆ. ಒಣ ತಿಕ್ಕಾಟ ಬಿಡಿ ಅಂತ ಹೇಳಿದ್ದು ನಾವಲ್ಲ, ಸುರ್ಜೆವಾಲರು. ಕಾಂಗ್ರೆಸ್ ಒಡೆದ ಮನೆ ಆಗಿದೆ ಅದನ್ನು ಮುಚ್ಚಿಕೊಳ್ಳಲಿ ಎಂದರು. ಇದನ್ನೂ ಓದಿ: ಶ್ರೀರಂಗಪಟ್ಟಣ ಮಸೀದಿ ವಿವಾದ – ಹಿಂದೂ, ಮುಸ್ಲಿಮರ ವಾದ ಏನು? 

    ಚಡ್ಡಿ ಸುಡುವ ವಿಚಾರವಾಗಿ ಮಾತನಾಡಿ, ಎಷ್ಟು ಚಡ್ಡಿ ಸುಡುತ್ತಾರೋ ಅಷ್ಟು ಹೊಸ ಚಡ್ಡಿ ಸೃಷ್ಟಿ ಆಗುತ್ತವೆ. ರಾಮಾಯಣ, ಮಹಾಭಾರತದಲ್ಲಿ ಹನಿ ರಕ್ತ ಬಿದ್ದರೆ ಅದ್ಯಾರೋ ಹುಟ್ಟುತ್ತಿದ್ದರು. ಹಾಗೆಯೇ ನಮ್ಮಲ್ಲಿ ಒಂದು ಚಡ್ಡಿ ಸುಟ್ಟರೆ ಹತ್ತಾರು ಚಡ್ಡಿಗಳು ಹುಟ್ಟಿಕೊಳ್ಳುತ್ತವೆ. ಚಡ್ಡಿನಾದರೂ ಸುಡಲಿ, ಬೇಕಾದರೆ ಕಳೆದು ಅವರ ಪಂಚೆನಾದರೂ ಸುಟ್ಟುಕೊಳ್ಳಲಿ ನಾವೇನು ಮಾಡೋದು ಎಂದರು.

    ಸಿಎಂ ಇಬ್ರಾಹಿಂ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಇಬ್ರಾಹಿಂ ಅವರು ಮಾಸ್ಟರ್ ಹಿರಣ್ಣಯ್ಯ ನಾಟಕ ಇದ್ದಂತೆ. ಒಂದು ದಿನ ಹೇಳಿದ ಡೈಲಾಗ್ ಮಾರನೆಯ ದಿನ ಹೇಳುತ್ತಿರಲಿಲ್ಲ. ಹಾಗೇ ಕಾಂಗ್ರೆಸ್ ಇದ್ದಾಗೊಂದು ಮಾತು, ಬಿಜೆಪಿ, ಜೆಡಿಎಸ್‍ನಲ್ಲಿ ಇದ್ದಾಗ ಒಂದೊಂದು ತರಹದ ಮಾತುಗಳನ್ನು ಆಡುತ್ತಾರೆ ಎಂದರು.

  • ನೈಸ್ ಯೋಜನೆಗೆ ನೀಡಿದ್ದ 543 ಎಕರೆ ಭೂಮಿ ವಾಪಸ್ – ಆರ್.ಅಶೋಕ್

    ನೈಸ್ ಯೋಜನೆಗೆ ನೀಡಿದ್ದ 543 ಎಕರೆ ಭೂಮಿ ವಾಪಸ್ – ಆರ್.ಅಶೋಕ್

    ಬೆಂಗಳೂರು: ನೈಸ್ ಯೋಜನೆಗೆ ನೀಡಲಾಗಿರುವ 543 ಎಕರೆ ಹೆಚ್ಚುವರಿ ಭೂಮಿಯನ್ನು ಹಿಂಪಡೆಯುವ ಬಗ್ಗೆ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು.

    ಸಭೆಯಲ್ಲಿ ಮಾತನಾಡಿದ ಸಚಿವ ಆರ್.ಅಶೋಕ್, ನೈಸ್ ರಸ್ತೆ ದೊಡ್ಡ ಸಮಸ್ಯೆಯಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರದಲ್ಲಿ ನೈಸ್ ರಸ್ತೆಗೆ ಬೇಕಾದ ಎಲ್ಲ ಮಂಜೂರಾತಿ ಮಾಡಲಾಗಿತ್ತು. ಅದು ಅವರ ಪಾಪದ ಕೂಸು. ಈಗ ಅದರಿಂದ ಯಾವುದೇ ಉಪಯೋಗ ಆಗ್ತಿಲ್ಲ. ಬೆಂಗಳೂರು ಜನತೆಗೆ ದೊಡ್ಡ ಹೊರೆಯಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಸ್ಪೇನ್‍ನಲ್ಲಿ ನಡೆಯುವ ಅಂತಾರಾಷ್ಟ್ರೀಯ ಕೃಷಿ ವಸ್ತುಪ್ರದರ್ಶನ ಮೇಳಕ್ಕೆ ಎಸ್.ಟಿ.ಸೋಮಶೇಖರ್ ಪ್ರವಾಸ

    NICE Road

    ಬೆಂಗಳೂರಿನಲ್ಲಿ ಕಾಂಕ್ರಿಟ್ ರಸ್ತೆ ಆಗಬೇಕಿತ್ತು. ಈವರೆಗೂ ಮಾಡಿಲ್ಲ. ಕ್ರಾಸ್ ರೋಡ್ ಪಾಸ್ ಆಗುವ ಬ್ರಿಡ್ಜ್ ಮಾಡುವುದರಲ್ಲೂ ನಿಯಮ ಉಲ್ಲಂಘನೆ ಆಗಿದೆ. ಹಾಗಾಗಿ, ನೈಸ್‌ಗೆ ಈ ಹಿಂದೆ ನಿಗದಿ ಮಾಡಿದ್ದ ಹೆಚ್ಚುವರಿ ಭೂಮಿಯನ್ನು ಹಿಂಪಡೆಯಲು ಕ್ರಮ ಕೈಗೊಳ್ಳಲು ಚರ್ಚೆಯಾಗಿದೆ. ಅಕ್ಟೋಬರ್, ನವೆಂಬರ್ ತಿಂಗಳಲ್ಲಿ ಪ್ರಕ್ರಿಯೆ ಮುಗಿಸಲು ಸಂಪುಟ ಉಪಸಮಿತಿ ತೀರ್ಮಾನ ಮಾಡಿದೆ ಎಂದು ಅಶೋಕ್ ಸ್ಪಷ್ಟಪಡಿಸಿದರು. ಇದನ್ನೂ ಓದಿ: ಜಗತ್ತನ್ನು ನೋಡಲು ಅವಕಾಶ ಕಲ್ಪಿಸುವ ಶ್ರೇಷ್ಠ ಕಾರ್ಯವೇ ನೇತ್ರದಾನ: ಬಿ.ಸಿ.ನಾಗೇಶ್

    NICE Road 1

    ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಮಾತನಾಡಿ, ನೈಸ್‌ಗೆ 543 ಎಕರೆ ಹೆಚ್ಚುವರಿ ಭೂಮಿ ಕೊಡಲಾಗಿದೆ. ಅದನ್ನು ಹಿಂಪಡೆಯುವ ಬಗ್ಗೆ ಮಾಹಿತಿ ಬಹಿರಂಗಪಡಿಸಲಾಗುವುದಿಲ್ಲ. 15 ದಿನಗಳಲ್ಲಿ ಇನ್ನೊಂದು ವರದಿ ನೀಡುವಂತೆ ಸಂಬಂಧಪಟ್ಟವರಿಗೆ ಸೂಚಿಸಿದ್ದೇವೆ. ಆ ವರದಿ ಬಂದ ಬಳಿಕ ಇನ್ನೊಂದು ಸಭೆಯಲ್ಲಿ ನೈಸ್‌ಗೆ ಸಂಬಂಧಪಟ್ಟಂತೆ ಕೆಲ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ತನಿಖೆಗೆ ಸಹಕರಿಸದ ಪ್ರಿಯಾಂಕ್‌ ಖರ್ಗೆಯಿಂದ ಪಲಾಯನವಾದ: ಅರಗ ಜ್ಞಾನೇಂದ್ರ ಕಿಡಿ

    ಸಭೆಯಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಆರ್.ಅಶೋಕ್, ಎಸ್.ಟಿ.ಸೋಮಶೇಖರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಉಪಸ್ಥಿತರಿದ್ದರು.

  • ಗದಗದಲ್ಲಿ ಬಿಜೆಪಿಗೆ ನವಚೈತನ್ಯ ನೀಡಿದ ಜಯ: ಸಚಿವ ಸಿ. ಸಿ.ಪಾಟೀಲ್

    ಗದಗದಲ್ಲಿ ಬಿಜೆಪಿಗೆ ನವಚೈತನ್ಯ ನೀಡಿದ ಜಯ: ಸಚಿವ ಸಿ. ಸಿ.ಪಾಟೀಲ್

    ಗದಗ: ದಶಕದ ಬಳಿಕ ಗದಗ-ಬೆಟಗೇರಿ ನಗರಸಭೆಯಲ್ಲಿ ಬಿಜೆಪಿಯ ಜಯಭೇರಿಗೆ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್‌ ಹರ್ಷ ವ್ಯಕ್ತಪಡಿಸಿದ್ದಾರೆ. ಜಯಭೇರಿ ಬಾರಿಸಿ ಬಹುಮತದಿಂದ ಅಧಿಕಾರಕ್ಕೆ ಏರುತ್ತಿರುವುದು ಸಂತೋಷದ ಸಂಗತಿಯಾಗಿದೆ. ಪಕ್ಷದ ಎಲ್ಲಾ ವಿಜಯಿ ಅಭ್ಯರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಹೇಳಿದರು.

    ಸಿ.ಸಿ.ಪಾಟೀಲ್‌ ಹೇಳಿದ್ದೇನು..?:‌ ದಶಕದ ಬಳಿಕ ಗದಗ-ಬೆಟಗೇರಿ ನಗರಸಭೆಯಲ್ಲಿ ಬಿಜೆಪಿಯು ಜಯಭೇರಿ ಬಾರಿಸಿ ಬಹುಮತದಿಂದ ಅಧಿಕಾರಕ್ಕೆ ಏರುತ್ತಿರುವುದು ಸಂತೋಷದ ಸಂಗತಿಯಾಗಿದೆ. ಈ ಬಗ್ಗೆ ನಮ್ಮ ಪಕ್ಷದ ಎಲ್ಲಾ ವಿಜಯಿ ಅಭ್ಯರ್ಥಿಗಳಿಗೆ ನನ್ನ ಹಾರ್ದಿಕ ಅಭಿನಂದನೆಗಳು. ಇದನ್ನೂ ಓದಿ: ನಾಳೆ ಬಂದ್ ಇಲ್ಲ – ವ್ಯಾಪಾರ, ವ್ಯವಹಾರ ನಡೆಸಬಹುದು: ಬೊಮ್ಮಾಯಿ

    ಒಗ್ಗಟ್ಟಿನಲ್ಲಿ ಬಲವಿದೆ ಎಂಬುದಕ್ಕೆ ಗದಗ-ಬೆಟಗೇರಿ ಚುನಾವಣಾ ಫಲಿತಾಂಶವೇ ಸಾಕ್ಷಿಯಾಗಿದೆ. ಈ ಅಭೂತಪೂರ್ವ ವಿಜಯಕ್ಕೆ ಕಾರಣೀಕರ್ತರಾದ ಮತದಾರ ಪ್ರಭುಗಳಿಗೆ, ಬಿಜೆಪಿಯ ಗದಗ್ ಜಿಲ್ಲೆಯ ಶಾಸಕರಿಗೆ, ವಿಧಾನಪರಿಷತ್ ಸದಸ್ಯರಿಗೆ, ಸಂಸದರಿಗೆ, ಪಕ್ಷದ ಅಧ್ಯಕ್ಷರು ಮತ್ತು ಎಲ್ಲಾ ಪದಾಧಿಕಾರಿಗಳಿಗೆ, ಹಿತೈಷಿಗಳಿಗೆ, ಪಕ್ಷದ ಸರ್ವ ನಾಯಕರಿಗೆ ನನ್ನ ಹೃದಯಪೂರ್ವಕ ವಂದನೆಗಳು. ಇದನ್ನೂ ಓದಿ: ನಾಳೆಯ ಕರ್ನಾಟಕ ಬಂದ್ ವಾಪಸ್

    ಈ ಜಯವು ನಮ್ಮ ಜಿಲ್ಲೆಯಲ್ಲಿ ಬಿಜೆಪಿಗೆ ಮತ್ತಷ್ಟು ಹೊಸ ಚೈತನ್ಯ ಮೂಡಿಸಲಿದೆ ಮತ್ತು ಬಿಜೆಪಿಯು ತಳಮಟ್ಟದಿಂದ ಕೇಂದ್ರದವರೆಗೆ ಎಷ್ಟೊಂದು ಸುಭದ್ರವಾಗಿದೆ ಎಂಬುದಕ್ಕೆ ಇದು ನಿದರ್ಶನವಾಗಿದೆ. ನಮ್ಮ ನೂತನ ಜನಪ್ರತಿನಿಧಿಗಳು ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಿ, ಜನಪರವಾಗಿ ಸ್ಪಂದಿಸುತ್ತಾ ಬಿಜೆಪಿಯ ವರ್ಚಸ್ಸನ್ನು ಎತ್ತಿಹಿಡಿಯುತ್ತಾರೆ ಎಂಬ ವಿಶ್ವಾಸ ನನಗಿದೆ. ಈ ನಿಟ್ಟಿನಲ್ಲಿ ಅವರು ಸಂಪೂರ್ಣವಾಗಿ ಯಶಸ್ವಿಯಾಗಲಿ ಎಂದು ನಾನು ಮತ್ತೊಮ್ಮೆ ಹಾರೈಸುತ್ತೇನೆ ಎಂದು ಅವರು ಹೇಳಿದ್ದಾರೆ.

  • ಜನರ ಆರೋಗ್ಯದ ಹಿತದೃಷ್ಟಿಯಿಂದ ನೈಟ್ ಕರ್ಫ್ಯೂ ಜಾರಿ ಅವಶ್ಯಕ: ಸಚಿವ ಸಿ.ಸಿ.ಪಾಟೀಲ್

    ಜನರ ಆರೋಗ್ಯದ ಹಿತದೃಷ್ಟಿಯಿಂದ ನೈಟ್ ಕರ್ಫ್ಯೂ ಜಾರಿ ಅವಶ್ಯಕ: ಸಚಿವ ಸಿ.ಸಿ.ಪಾಟೀಲ್

    ಗದಗ: ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ತಜ್ಞರ ಸಮಿತಿಯ ವರದಿ ಆಧರಿಸಿ ಸಿಎಂ ಬಸವರಾಜ ಬೊಮ್ಮಾಯಿ ಅವರು 10 ದಿನಗಳ ಕಾಲ ನೈಟ್‌ ಕರ್ಫ್ಯೂ ವಿಧಿಸಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.

    night curfew

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಾರ್ ಆ್ಯಂಡ್ ರೆಸ್ಟೋರೆಂಟ್, ಪಬ್, ಕ್ಲಬ್, ಹೋಟೆಲ್‌ಗಳಲ್ಲಿ ಜನಜಂಗುಳಿ ಇರುವ ಸಾರ್ವಜನಿಕ ಸ್ಥಳಗಳಲ್ಲಿ ಶೇ.50 ರಷ್ಟು ಜನರಿಗೆ ಮಾತ್ರ ಸ್ಥಳವಕಾಶ ನೀಡಿ ಆದೇಶಿಸಿದ್ದಾರೆ. ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ಈ ನಿರ್ಧಾರ ತೆಗದುಕೊಂಡಿದೆ ಎಂದು ತಿಳಿಸಿದರು. ಇದನ್ನೂ ಓದಿ: ಡಿ.28 ರಿಂದ ರಾಜ್ಯದಲ್ಲಿ 10 ದಿನ ನೈಟ್ ಕರ್ಫ್ಯೂ ಜಾರಿ – ನ್ಯೂ ಇಯರ್ ಪಾರ್ಟಿಗಳಿಗೆ ಬ್ರೇಕ್

    ಕೋವಿಡ್ 1 ಮತ್ತು 2ನೇ ಅಲೆಯಲ್ಲಿ ಸ್ನೇಹಿತರು, ಹಿತೈಷಿಗಳು ಮತ್ತು ಕುಟುಂಬಕ್ಕೆ ಆಧಾರಸ್ತಂಭವಾಗಿದ್ದವರನ್ನು ಕಳೆದುಕೊಂಡ ದುಃಖದ ಪರಿಸ್ಥಿತಿಯನ್ನು ಕಣ್ಣಾರೆ‌ ಕಂಡಿದ್ದೇವೆ. ಈ ಬಾರಿ ಅಂತಹ ಪರಿಸ್ಥಿತಿ ಮರುಕಳಿಸಬಾರದು. ಹೀಗಾಗಿ ಮುಖ್ಯಮಂತ್ರಿಗಳು ಜಾರಿ ಮಾಡಿರುವ ಆದೇಶವನ್ನು ನಾವೆಲ್ಲರೂ ತಪ್ಪದೇ ಪಾಲಿಸೋಣ. ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸೋಣ. ಜನಜೀವನಕ್ಕೆ ಹಾನಿಯಾಗದಂತೆ 3ನೇ ಅಲೆ ನಿಯಂತ್ರಿಸುವಲ್ಲಿ ಯಶಸ್ವಿಯಾಗೋಣ. ಸಾರ್ವಜನಿಕರು ಸರ್ಕಾರದ ಆದೇಶ ಪಾಲಿಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ನಾಡಿನ ಮುಖ್ಯಮಂತ್ರಿ ಆಗಲಿ: ಹಂಸಲೇಖ

  • ಸಚಿವರಿಂದ ಗುತ್ತಿಗೆದಾರರ ಸಂಘವನ್ನು ಒಡೆಯಲು ಪ್ರಯತ್ನ: ಕೆಂಪಣ್ಣ ಕಿಡಿ

    ಸಚಿವರಿಂದ ಗುತ್ತಿಗೆದಾರರ ಸಂಘವನ್ನು ಒಡೆಯಲು ಪ್ರಯತ್ನ: ಕೆಂಪಣ್ಣ ಕಿಡಿ

    ಧಾರವಾಡ: ಸಚಿವ ಸಿ.ಸಿ. ಪಾಟೀಲ್ ಗುತ್ತಿಗೆದಾರರ ಸಂಘವನ್ನು ಒಡೆಯಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಕಿಡಿಕಾರಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾರೋ ನಮ್ಮ ಸಂಘಟನೆ ಬಿಟ್ಟು ಹೋಗಿ ತಮ್ಮ ಸ್ವಂತಕ್ಕೊಸ್ಕರ ಸಂಘಟನೆ ಮಾಡಿದ್ದಾರೆ. ಅಂಥವರನ್ನು ಕರೆದು ಸಿ.ಸಿ. ಪಾಟೀಲ್ ಮಾತನಾಡಿದ್ದಾರೆ. ಸಚಿವರಿದ್ದವರು ಇಷ್ಟು ಕೆಳಗೆ ಇಳಿಯಬಾರದು. ಅವರು ಒಳ್ಳೆಯ ಮಂತ್ರಿ, ನಾವು ಕೂಡಾ ಅವರನ್ನು ಭೇಟಿ ಮಾಡಿದ್ದು, ಚೆನ್ನಾಗಿ ಮಾತನಾಡಿದ್ದಾರೆ. ಆದರೆ ಕೆಲ ಸುಳ್ಳು ಸಹ ಹೇಳಿದ್ದಾರೆ. ನಾವು ಸಂಘದಲ್ಲಿ ಇದ್ದು ಪತ್ರ ಬರೆಯುತ್ತೆವೆ. ಆದರೆ ಸಚಿವರು ಈ ರೀತಿ ನಮ್ಮನ್ನು ಪ್ರತ್ಯೇಕ ಮಾಡಬೇಡಿ ಎಂದು ಸಿಡಿದರು. ಇದನ್ನೂ ಓದಿ: ಸುವರ್ಣಸೌಧಕ್ಕೆ ಮಾಧ್ಯಮಗಳ ನಿರ್ಬಂಧ ಸಂವಿಧಾನದ ಒಂದು ಕಾಲು ಮುರಿಯುವ ಪ್ರಯತ್ನದಂತೆ: ಎಚ್‍ಡಿಕೆ

    ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ನಾವು ಯಾವ ಪಕ್ಷಕ್ಕೆ ಸೇರಿಲ್ಲ. ನಮ್ಮದು ಒಂದೇ ಕುಟುಂಬ. ಆದರೆ ನಮ್ಮ ಸಂಘಟನೆ ಒಡೆಯಲು ಸಚಿವ ಸಿ ಸಿ ಪಾಟೀಲ್ ಪ್ರಯತ್ನ ಮಾಡುತಿದ್ದಾರೆ. ಅವರು ಉತ್ತರ ಕರ್ನಾಟಕ ಅಸೋಸಿಯೇಷನ್ ಕರೆದು ಮಾತಾಡಿದ್ದು ನಾಚಿಕೆಗೇಡಿತನ. ಒಬ್ಬ ಸಚಿವ ಆದವರು ಸಂಘಟನೆ ಒಡೆಯುವ ಕೆಲಸ ಮಾಡಬಾರದು. ನಾವು ಅಖಂಡ ಕರ್ನಾಟಕಕ್ಕೆ ಸೇರಿದವರು, ಇದನ್ನು ಯಾಕೆ ಹಾಳು ಮಾಡುತ್ತಿರಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ವಿಧಾನಸಭೆ ಕಲಾಪ – ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸಲು ‘ಕೈ’ ಪ್ಲಾನ್

    ತಮಿಳುನಾಡು, ಕೇರಳ ಹಾಗೂ ಗುಜರಾತ್‍ನಲ್ಲಿ ಪ್ಯಾಕೇಜ್ ಸಿಸ್ಟಂ ಇಲ್ಲ. ಆದರೆ ನಮ್ಮ ಸರ್ಕಾರದಲ್ಲಿ ಮಾತ್ರ ಇದೆ. ಬೊಮ್ಮಾಯಿ ಸಿಎಂ ಆದ ತಕ್ಷಣವೇ ಪತ್ರ ಬರೆದಿದ್ದೇವೆ. ಆದರೆ ಭೇಟಿಗೆ ಅವಕಾಶ ನೀಡಿಲ್ಲ ಎಂದು ಕಿಡಿಕಾರಿದರು.

    40% ಕಮಿಷನ್ ಸರ್ಕಾರ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, 2019ರವರೆಗೆ ಶೇ.19ರಷ್ಟು ಕಮಿಷನ್ ಇತ್ತು. ಇತ್ತೀಚೆಗೆ ಅದು ಶೇ.40% ಕಮಿಷನ್ ಗೆ ಏರಿಕೆಯಾಗಿದೆ. ಆಗಿನ ಸಿಎಂ, ಬಿಎಸ್‍ವೈಗೆ ಮನವಿ ಮಾಡಿದ್ದಕ್ಕೆ ಪ್ರತಿಕ್ರಿಯೆ ಬರಲಿಲ್ಲ. ಪ್ರಧಾನಿಗೆ ಕೂಡ ಪತ್ರ ಬರೆದಿದ್ದೇವು. ಆದರೆ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ. ರಾಜ್ಯಪಾಲರಿಗೂ ಸಹ ಬರೆದಿದ್ದೇವೆ. ಪ್ರಧಾನಿ ಹಿಂದಿನ ಸರ್ಕಾರಕ್ಕೆ 10 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಹೇಳುತ್ತಿದ್ದರು. ನಾವು ಈ ಸರ್ಕಾರ 40% ಕಮಿಷನ್ ಎಂದು ಹೇಳುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಬಿಜೆಪಿಯವರು ನಮ್ಮ ಬಳಿ ಇದಕ್ಕೆ ದಾಖಲೆಗಳಿವೆ. ನಾವು ಧ್ವನಿ ಎತ್ತದ ಬಳಿಕ ತನಿಖೆ ಎಂದರು. ಆದರೆ 50 ಕೋಟಿ ರೂ. ಮೇಲಿನ ಟೆಂಡರ್ ಮಾತ್ರ ತನಿಖೆ ನಡೆಸಿದ್ದಾರೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ತನಿಖೆ ಮಾಡುತ್ತಿದ್ದಾರೆ. ಅವರು ನಮಗೆ ಯಾವ ರೀತಿ ನ್ಯಾಯ ಕೊಡುತ್ತಾರೆ? ಅವರು ಒಳ್ಳೆ ಅಧಿಕಾರಿ. ಆದರೆ ಅವರ ಪ್ರತಿನಿಧಿಸುವ ಇಲಾಖೆಯ ಸಹ ಸರ್ಕಾರದ ಒಂದು ಭಾಗವಾಗಿದ್ದು, ನಾವು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆಗೆ ಆಗ್ರಹಿಸುತ್ತೇವೆ ಎಂದರು.

  • ಫ್ಲೈಓವರ್‌ಗೆ ಸಾವರ್ಕರ್ ಹೆಸರಿಡದೇ ರಾಹುಲ್, ಸೋನಿಯಾ ಗಾಂಧಿ ಹೆಸರಿಡಬೇಕಾ?- ಸಿಸಿ ಪಾಟೀಲ್

    ಫ್ಲೈಓವರ್‌ಗೆ ಸಾವರ್ಕರ್ ಹೆಸರಿಡದೇ ರಾಹುಲ್, ಸೋನಿಯಾ ಗಾಂಧಿ ಹೆಸರಿಡಬೇಕಾ?- ಸಿಸಿ ಪಾಟೀಲ್

    ಗದಗ: ಬೆಂಗಳೂರಿನ ಯಲಹಂಕ ಫ್ಲೈಓವರ್‌ಗೆ ವೀರ ಸಾವರ್ಕರ್ ಅವರ ಹೆಸರಿಡಲು ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದಕ್ಕೆ ಸಚಿವ ಸಿ.ಸಿ.ಪಾಟೀಲ್ ಸಿಡಿಮಿಡಿಗೊಂಡಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಸಚಿವರು, ಫ್ಲೈಓವರಿಗೆ ವೀರ ಸಾವರ್ಕರ್ ಹೆಸರಿಡದೇ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ನಾಯಕಿ ಸೋನಿಯಾ ಗಾಂಧಿ ಹೆಸರಿಡಬೇಕಾ? ಸಾವರ್ಕರ್ ತ್ಯಾಗ ಬಲಿದಾನ, ಕಾಲಾಪಾನಿ ಶಿಕ್ಷೆ, ಸೆಲ್ಯುಲಾರ್ ಜೈಲುವಾಸದ ಬಗ್ಗೆ ಕಾಂಗ್ರೆಸ್‍ನವರು ಮೊದಲು ತಿಳಿಯಲಿ. ಸಾವರ್ಕರ್ ಅವರ ಬಗ್ಗೆ ಮಾತಾಡುವಂತ ಯೋಗ್ಯತೆ ಯಾವೋಬ್ಬ ಕಾಂಗ್ರೆಸ್ಸಿಗರಿಗೂ ಇಲ್ಲಾ ಎಂದು ವಾಗ್ದಾಳಿ ನಡೆಸಿದರು.

    ಕಾಂಗ್ರೆಸ್ಸಿಗರಿಗೆ ತ್ಯಾಗ ಬಲಿದಾನ ಮಾಡಿದ ಸುಭಾಷ್ ಚಂದ್ರಬೋಸ್, ವೀರ ಸಾವರ್ಕರ್, ಸರ್ದಾರ್ ವಲ್ಲಭಬಾಯಿ ಪಟೇಲ್, ಲೋಕಮಾನ್ಯ ತಿಲಕ್ ಅವರು ಗೊತ್ತಿಲ್ಲಾ. ವೀರ ಸಾವರ್ಕರ್ ಬಿಜೆಪಿಯವರಾ? ಅವಾಗ ಬಿಜೆಪಿ ಇತ್ತಾ ಅಂತ ಪ್ರಶ್ನಿಸಿದರು.

    ರಾಜೀವ್ ಗಾಂಧಿ ಮೆಡಿಕಲ್ ಕಾಲೇಜ್, ರಾಜೀವ್ ಗಾಂಧಿ ರೋಡ್, ಇಂದಿರಾ ಗಾಂಧಿ ರೋಡ್, ಆಯೋಜನೆ ಈ ಯೋಜನೆ ಅಂತೆಲ್ಲಾ ಇದೆ. ಎಲ್ಲಾದರೂ ನರೇಂದ್ರ ಮೋದಿ ರೋಡ್, ಬಿ.ಎಸ್.ಯಡಿಯೂರಪ್ಪ ರೋಡ್ ಅಂತ ಇದೆಯಾ? ದೇಶವನ್ನು ಇವರೇ ಕಟ್ಟಿ ಬೆಳೆಸಿ ಉತ್ತುಂಗಕ್ಕೆ ತಂದ್ರಾ? ಕಾಂಗ್ರೆಸ್ಸಿಗರು ಹೇಳೋದು ಆಚಾರ ತಿನ್ನೋದು ಬದನೆಕಾಯಿ ಎಂದು ಗುಡುಗಿದರು.

    ಬಿಜೆಪಿ ಪಕ್ಷದಲ್ಲಿ ಎದ್ದಿರುವ ಬಂಡಾಯದ ವಿಚಾರವಾಗಿ ಮಾತನಾಡಿದ ಸಚಿವರು, ಸಿಎಂ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಅಬಾಧಿತ, ಸುಭದ್ರವಿದೆ. ಹಲವಾರು ಹಿರಿಯ ಶಾಸಕರು ನಮ್ಮಲ್ಲಿ ಭಿನ್ನಮತ ಇಲ್ಲಾ ಎಂದು ಸ್ಪಷ್ಟಪಡಿಸಿದ್ದಾರೆ. ಕೇಂದ್ರದ ನಾಯಕರು ಸಹ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ ಎಂದು ಹೊಗಳಿದ್ದಾರೆ. ನಮ್ಮ ಬಗ್ಗೆ ಯಾರು ಏನೂ ಚಿಂತೆ ಮಾಡುವ ಅಗತ್ಯವಿಲ್ಲ, ಸರ್ಕಾರ ಸುಭದ್ರವಾಗಿರುತ್ತದೆ. ಮುಂದಿನ ಅವಧಿಗೆ ಪಕ್ಷವನ್ನು ಬಿಎಸ್‍ವೈ ಮತ್ತೆ ಅಧಿಕಾರಕ್ಕೆ ತರುತ್ತಾರೆ ಎಂದು ಹೇಳಿದರು.

    ಕಪ್ಪತ್ತಗುಡ್ಡದಲ್ಲಿ ಸರ್ಕಾರ ಮೈನಿಂಗ್ ನಡೆಸುವ ಹುನ್ನಾರ ನಡೆಸುತ್ತಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರ ಆರೋಪಕ್ಕೆ ಸಿ.ಸಿ.ಪಾಟೀಲ್ ತಿರುಗೇಟು ನೀಡಿದರು. ಕಪ್ಪತ್ತಗುಡ್ಡ ರಕ್ಷಣೆ ಸರ್ಕಾರದ ಹೊಣೆ. ನಾನು ಮೂಲತಃ ಬೆಳಗಾವಿ ಜಿಲ್ಲೆಯವನು. ಬೆಳಗಾವಿ ಜಿಲ್ಲಾ ಪಂಚಾಯತ್ ಸದಸ್ಯನಾಗಿ, ಶಿಕ್ಷಣ ಸ್ಥಾಯಿಸಮಿತಿ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಸತೀಶ್ ಜಾರಕಿಹೊಳಿ ಆಧಾರ ರಹಿತ ಆರೋಪ ಮಾಡಿದರೆ ಅವರ ಮೇಲೆ ಬ್ಲಾಕ್ ಆಂಡ್ ವೈಟ್ ಅಲಿಗೇಷನ್ ಸಾಕಷ್ಟಿವೆ. ಸಮಯ ಸಂದರ್ಭ ಬಂದಾಗ ಮುಂದಿನ ದಿನಗಳಲ್ಲಿ ಎಲ್ಲಾ ಪುಟಗಳನ್ನ ತೆರೆದಿಡುತ್ತೇನೆ ಎಂದು ಟಾಂಗ್ ಕೊಟ್ಟರು.

    ಮುಂಬೈ-ಗದಗ ಎಕ್ಸ್‍ಪ್ರೆಸ್ ರೈಲು ಬರಲಿದೆ. ರಾಜ್ಯದ ಜನ ಮುಂಬೈ ನಗರದಲ್ಲಿ ಸಂಕಷ್ಟದಲ್ಲಿ ಸಿಲುಕಿದ್ದು ಮುಂಬೈ ಕನ್ನಡಿಗರನ್ನ ಅನಿವಾರ್ಯವಾಗಿ ಕರೆಸಿಕೊಳ್ಳಬೇಕಿದೆ. ಎಷ್ಟು ಜನ ಮುಂಬೈನಿಂದ ಬರುತ್ತಾರೆ ಎಂಬ ಸ್ಪಷ್ಟ ಮಾಹಿತಿ ಇನ್ನೂ ಬಂದಿಲ್ಲ. ಮಂಗಳವಾರ ಬೆಳಗ್ಗೆ 11 ಗಂಟೆ ನಂತರ ಗದಗ ನಿಲ್ದಾಣಕ್ಕೆ ಮುಂಬೈ ರೈಲು ಬರಲಿದೆ. ಗದಗ ರೈಲ್ವೆ ನಿಲ್ದಾಣದಲ್ಲಿ ಆರೋಗ್ಯ ತಪಾಸಣೆ ಮಾಡಿ ನಂತರ 7 ದಿನ ಸರ್ಕಾರದ ನಿಯಮಗಳ ಪ್ರಕಾರ ಕ್ವಾರಂಟೈನ್ ಮಾಡಲಾಗುತ್ತದೆ ಎಂದರು.

    ಮುಂಬೈನಿಂದ ಗದಗ ಜಿಲ್ಲೆಗೆ ನಿರೀಕ್ಷೆ ಮೀರಿ ಜನ ಬಂದರೂ ಕ್ವಾರಂಟೈನ್ ಮಾಡುತ್ತೇವೆ. ಪ್ರಯಾಣಿಕರಿಗೆ ಯಾವುದೇ ಅನಾನುಕೂಲ ಆಗದಂತೆ ಜಿಲ್ಲಾಡಳಿತ ನೋಡಿಕೊಳ್ಳುತ್ತದೆ. ಜಿಲ್ಲಾ ಕೇಂದ್ರದಲ್ಲಿ ಕ್ವಾರಂಟೈನ್ ಸಾಲದಿದ್ದರೆ, ಕೊರತೆ ಕಂಡುಬಂದರೆ ಮುಂದೆ ತಾಲೂಕ ಕೇಂದ್ರಗಳಿಗೂ ಕಳಿಸುತ್ತೆವೆ ಎಂದು ತಿಳಿಸಿದರು.