Tag: C.M Basavaraj Bommai

  • ಸಿಎಂ ಸಂಚರಿಸುವ ಕಡೆ ರೋಡ್ ಹಂಪ್ಸ್ ತೆರವು: ಸಾರ್ವಜನಿಕರ ಆಕ್ರೋಶ

    ಸಿಎಂ ಸಂಚರಿಸುವ ಕಡೆ ರೋಡ್ ಹಂಪ್ಸ್ ತೆರವು: ಸಾರ್ವಜನಿಕರ ಆಕ್ರೋಶ

    ಚಿಕ್ಕೋಡಿ(ಬೆಳಗಾವಿ): ಜಿಲ್ಲೆಗೆ ಇಂದು ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆಗೆ ಸಿಎಂ ಅಗಮನ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಅವರಿಗೆ ಹಂಪ್ಸ್ ರಹಿತ ಸಂಚಾರ ಒದಗಿಸುವ ನಿಟ್ಟಿನಲ್ಲಿ ಸಿಎಂ ಸಂಚರಿಸುವ ಮಾರ್ಗದೆಲ್ಲೆಡೆ ರೋಡ್ ಹಂಪ್ಸ್ ತೆರವುಗೊಳಿಸಲಾಗಿದೆ.

    ಸಿಎಂ ಹಾಗೂ ಸಚಿವರು ಬರುತ್ತಾರೆ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ರಸ್ತೆ ಹಂಪ್ಸ್ ತೆರವುಗೊಳಿಸುವ ಕಾರ್ಯವನ್ನು ಮಾಡಿದ್ದಾರೆ. ಸಂಕೇಶ್ವರ, ಹುಕ್ಕೇರಿ, ಬಡಕುಂದ್ರಿ ಮಾರ್ಗದ 50ಕ್ಕೂ ಹೆಚ್ಚು ಕಡೆ ರೋಡ್ ಹಂಪ್ಸ್ ತೆರವುಗೊಳಿಸಲಾಗಿದೆ. ಇದನ್ನೂ ಓದಿ: ಗದ್ದೆಗೆ ಹೋಗೋ ನೆಪದಲ್ಲಿ ಬಾವಿಗೆ ತಳ್ಳಿ ಹೆಂಡ್ತಿ ಕೊಲೆ – ಅಪರಾಧಿಗೆ ಜೀವಾವಧಿ ಶಿಕ್ಷೆ

    ಶಾಲಾ ಕಾಲೇಜುಗಳ ಬಳಿ ಅಳವಡಿಸಿದ್ದ ರೋಡ್ ಹಂಪ್ಸ್‍ಗಳನ್ನು ಸಹ ತೆರವುಗೊಳಿಸಲಾಗಿದೆ. ಸ್ಪೀಡ್ ಬ್ರೇಕರ್ ತೆರವಿನಿಂದ ಅಪಘಾತಗಳು ಸಂಭವಿಸಿದರೇ ಯಾರು ಹೊಣೆ? ಜನಸಾಮಾನ್ಯರಿಗೆ ಒಂದು ನ್ಯಾಯ ಸಿಎಂ ಹಾಗೂ ಸಚಿವರಿಗೆ ಒಂದು ನ್ಯಾಯನಾ ಎಂದು ಲೋಕೋಪಯೋಗಿ ಇಲಾಖೆ ವಿರುದ್ದ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸುಪ್ರೀಂಕೋರ್ಟ್ ಇಮೇಲ್‍ಗಳಲ್ಲಿ ಪ್ರಧಾನಿ ಮೋದಿ ಭಾವಚಿತ್ರ ಬಳಕೆಗೆ ಬ್ರೇಕ್

    ರಾಜ್ಯದ ಮುಖ್ಯಮಂತ್ರಿಗಳು ಬರುತ್ತಾರೆ ಎಂದು ರಸ್ತೆ ರೀಪೇರಿ ಮಾಡುವುದು. ರೋಡ್ ಹಂಪ್ಸ್ ತೆರುವುಗೊಳಿಸುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿದೆ. ಸಾರ್ವಜನಿಕರ ತೆರಿಗೆ ಹಣದಲ್ಲಿ ಜನರಿಗೆ ಸಿಗಬೇಕಾದ ಸೌಲಭ್ಯಗಳು ಸಿಗುತ್ತಿಲ್ಲ. ನಮ್ಮ ಹಣದಲ್ಲಿ ಅಧಿಕಾರಿಗಳು ಹಾಗೂ ಸಚಿವರು ದರ್ಬಾರ್ ನಡೆಸುತ್ತಿದ್ದಾರೆ ಎಂದು ಸ್ಥಳೀಯ ಜನರು ಬೇಸರ ವ್ಯಕ್ತಪಡಿಸಿದ್ದಾರೆ.

  • ಸಂಪುಟ ವಿಸ್ತರಣೆ ವೇಳೆ ಸಿಎಂ ಅವಕಾಶದ ಭರವಸೆ ನೀಡಿದ್ದಾರೆ: ಓಲೇಕಾರ

    ಸಂಪುಟ ವಿಸ್ತರಣೆ ವೇಳೆ ಸಿಎಂ ಅವಕಾಶದ ಭರವಸೆ ನೀಡಿದ್ದಾರೆ: ಓಲೇಕಾರ

    ಹಾವೇರಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮುಂದಿನ ಸಂಪುಟ ವಿಸ್ತರಣೆ ವೇಳೆ ಅವಕಾಶ ಕಲ್ಪಿಸಿಕೊಡುವ ಭರವಸೆ ನೀಡಿದ್ದಾರೆ. ನಾನು ಅದಕ್ಕೆ ಒಪ್ಪಿಕೊಂಡಿದ್ದೇನೆ. ನಮ್ಮ ಸಮುದಾಯಕ್ಕೆ ಅವಕಾಶ ಸಿಕ್ಕಿಲ್ಲ ಎನ್ನುವ ಬೇಸರ ಉಂಟಾಗಿತ್ತು. ಆಗಿರುವ ಅನ್ಯಾಯವನ್ನು ಸರಿಪಡಿಸುವ ಭರವಸೆ ನೀಡಿದ್ದಾರೆ ಎಂದು ಹಾವೇರಿ ಶಾಸಕ ನೆಹರು ಓಲೇಕಾರ ಹೇಳಿದ್ದಾರೆ.

    ಹಾವೇರಿ ನಗರದ ತುಳಸಿ ಐಕಾನ್ ಲೇಔಟ್‍ನಲ್ಲಿರುವ ಶಾಸಕ, ಮನೆಗೆ ಸಚಿವ ಬಿ.ಸಿ.ಪಾಟೀಲ್ ಭೇಟಿ ನೀಡಿ ಮಾತನಾಡಿದರು. ಈ ವೇಳೆ ಸಚಿವ ಸ್ಥಾನ ಸಿಗದ್ದಕ್ಕೆ ಬೊಮ್ಮಾಯಿ ವಿರುದ್ಧ ನೆಹರು ಓಲೇಕಾರ ಅಸಮಾಧಾನ ಹೊರ ಹಾಕಿದ್ದರು.

    ಪಾಟೀಲ್, ಬೊಮ್ಮಾಯಿಯವರ ಜೊತೆ ಮಾತನಾಡಿಸಿದ್ದಾರೆ. ನನಗೆ, ನಮ್ಮ ಸಮುದಾಯಕ್ಕೆ ಅನ್ಯಾಯ ಆಗಿರುವುದನ್ನು ಸಿಎಂ ಕೂಡ ಒಪ್ಪಿಕೊಂಡಿದ್ದಾರೆ. ಜಿಲ್ಲೆಗೆ ಸಿಎಂ ಸ್ಥಾನದ ಅವಕಾಶ ಸಿಕ್ಕಿದೆ. ಸಹಕಾರ ನೀಡುವಂತೆ ಕೇಳಿಕೊಂಡಿದ್ದಾರೆ. ಬೊಮ್ಮಾಯಿ ಅವರಿಗೆ ಸಹಕಾರ ನೀಡುತ್ತೇನೆ. ನಾವೆಲ್ಲರೂ ಕೂಡಿಯೇ ಇದ್ದವರು. ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡುತ್ತೇನೆ. ಸಚಿವ ಸ್ಥಾನ ಸಿಗುವವರೆಗೂ ಕಾಯುತ್ತೇನೆ. ನಾವೆಲ್ಲರೂ ಪಕ್ಷದಲ್ಲಿ ಇದ್ದಂಥವರೇ ಹೀಗಾಗಿ ಕಾಯುತ್ತೇನೆ. ಇದು ಅನಿವಾರ್ಯ ಎಂದು ನೆಹರು ಓಲೇಕಾರ ಹೇಳಿದ್ದಾರೆ. ಇದನ್ನೂ ಓದಿ: ಸಿಎಂ ಸ್ಥಾನ ಬಿಟ್ರೂ ಕೊಟ್ಟ ಮಾತನ್ನು ಬಿಎಸ್‍ವೈ ಉಳಿಸಿಕೊಂಡಿದ್ದಾರೆ: ಗೋಪಾಲಯ್ಯ