Tag: C.Puttarangashetti

  • ಉಪ ಚುನಾವಣೆ ಪ್ರಚಾರಕ್ಕೆ ತೆರಳಿದ್ದ ಪುಟ್ಟರಂಗಶೆಟ್ಟಿ, ರಾಜು ಗೌಡಗೆ ಕೊರೊನಾ

    ಉಪ ಚುನಾವಣೆ ಪ್ರಚಾರಕ್ಕೆ ತೆರಳಿದ್ದ ಪುಟ್ಟರಂಗಶೆಟ್ಟಿ, ರಾಜು ಗೌಡಗೆ ಕೊರೊನಾ

    ಚಾಮರಾಜನಗರ/ಯಾದಗಿರಿ: ಉಪ ಚುನಾವಣೆ ಪ್ರಚಾರಕ್ಕೆ ತೆರಳಿದ್ದ ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಮತ್ತು ಶಾಸಕ ರಾಜುಗೌಡ ಅವರಿಗೆ ಇಂದು ಕೊರೊನಾ ದೃಢವಾಗಿದೆ.

    ಕಳೆದ ಒಂದು ವಾರದಿಂದ ಬೆಳಗಾವಿ, ಮಸ್ಕಿ ಹಾಗೂ ಬಸವಕಲ್ಯಾಣದ ಉಪ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡು ಎರಡು ದಿನಗಳ ಹಿಂದೆಯಷ್ಟೇ ಸ್ವಕ್ಷೇತ್ರಕ್ಕೆ ಹಿಂತಿರುಗಿದ್ದರು. ನೆಗಡಿ ಹಾಗೂ ಮೈ-ಕೈ ನೋವಿನ ಗುಣಲಕ್ಷಣ ಕಾಣಿಸಿಕೊಂಡ ಹಿನ್ನೆಲೆ ಇಂದು ಪರೀಕ್ಷೆ ಮಾಡಿಸಿಕೊಂಡ ವೇಳೆ ಕೋವಿಡ್ ದೃಢಪಟ್ಟಿದೆ. ಶಾಸಕರ ಚಾಲಕ ಹಾಗೂ ಗನ್ ಮ್ಯಾನ್ ಅವರನ್ನು ಪರೀಕ್ಷೆಗೆ ಒಳಪಡಿಸಿದ್ದು, ವರದಿ ಬರಬೇಕಿದೆ.


    ಸುರಪುರ ಬಿಜೆಪಿ ಶಾಸಕ ರಾಜುಗೌಡ ಸಹ ಕಳೆದ ಹಲವು ದಿನಗಳಿಂದ ಮಸ್ಕಿಯ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು. ಇಂದು ಸೋಂಕು ತಗುಲಿದ್ದು ಖಚಿತವಾಗಿದೆ. ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕಳೆದ ಕೆಲ ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದವರು ಕೊರೊನಾ ಚಿಕಿತ್ಸೆಗೆ ಒಳಗಾಗುವಂತೆ ಮನವಿ ಮಾಡಿಕೊಂಡಿದ್ದಾರೆ.

    ಎರಡು ದಿನಗಳ ಹಿಂದೆ ಮಸ್ಕಿ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರಿಗೂ ಸೋಂಕು ತಗುಲಿದ್ದು, ಮನೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ. ಮಂಗಳವಾರ ಪ್ರತಾಪ್ ಗೌಡ ಪಾಟೀಲ್ ಪರವಾಗಿ ಕಣ್ಣೇ ಅದಿರಿಂದಿ ಖ್ಯಾತಿಯ ಗಾಯಕಿ ಮಂಗ್ಲಿ ಪ್ರಚಾರ ನಡೆಸಿದ್ದರು.

    ಕೊರೊನಾ ಸೊಂಕು ಒಂದೆಡೆ ಹೆಚ್ಚಾಗುತ್ತಿದೆ. ರಾಜಕೀಯ ಅನೇಕ ನಾಯಕರುಗಳಿಗೆ ಸೋಂಕು ಕಾಣಿಸಿಕೊಳ್ಳುತ್ತಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಹಾಗೂ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರಿಗೆ ಕೊರೊನಾ ಪಾಸಿಟಿವ್ ಇಂದು ಕಾಣಿಸಿಕೊಂಡಿದೆ. ಸಂಪರ್ಕದಲ್ಲಿ ಇರುವವರಿಗೆ ಕೊರೊನಾ ಪರೀಕ್ಷೆ ಮಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ.

  • ಗ್ರಾಮೀಣ ಪ್ರದೇಶದ ರಸ್ತೆ ದೇಶದ ಅಭಿವೃದ್ಧಿಗೆ ಸೂಚಿಸುತ್ತದೆ: ಶಾಸಕ ಸಿ.ಪುಟ್ಟರಂಗಶೆಟ್ಟಿ

    ಗ್ರಾಮೀಣ ಪ್ರದೇಶದ ರಸ್ತೆ ದೇಶದ ಅಭಿವೃದ್ಧಿಗೆ ಸೂಚಿಸುತ್ತದೆ: ಶಾಸಕ ಸಿ.ಪುಟ್ಟರಂಗಶೆಟ್ಟಿ

    ಚಾಮರಾಜನಗರ: ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳು ಅಭಿವೃದ್ಧಿ ದೇಶದ ಪ್ರಗತಿಯನ್ನು ಸೂಚಿಸುತ್ತಿವೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ವ್ಯಾಖ್ಯಾನಿಸಿದರು.

    ಚಾಮರಾಜನಗರ ತಾಲೂಕಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಎಸ್.ಇ.ಪಿ. ಹಾಗೂ ಟಿ.ಎಸ್.ಪಿ, ಯೋಜನೆಡಿಯಲ್ಲಿ, ಕಾವೇರಿ ನೀರಾವರಿ ನಿಗಮದಿಂದ ಮಲ್ಲಯ್ಯನಪುರ ಗ್ರಾಮದ ಪರಿಶಿಷ್ಟ ಜಾತಿ ಬಡಾವಣೆಯ ಬೀದಿಗೆ ಅಂದಾಜು ಮೊತ್ತ 7 ಲಕ್ಷ ರೂ., ಬಸವಾಪುರ ಗ್ರಾಮದ ಪರಿಶಿಷ್ಟ ಪಂಗಡದ ನಾಯಕರ ಬಡಾವಣೆಯ ಬೀದಿಗೆ 10 ಲಕ್ಷ ರೂ., ಹೊಂಗಲವಾಡಿ ಗ್ರಾಮದ ಪರಿಶಿಷ್ಟ ಜಾತಿ ಕಾಲನಿಗೆ 10 ಲಕ್ಷ ರೂ., ಸಿದ್ದಯ್ಯನಪುರ ಗ್ರಾಮದ ಪರಿಶಿಷ್ಟ ಬಡಾವಣೆಯ ಬೀದಿಗೆ 20 ಲಕ್ಷ ರೂ.ಗಳಲ್ಲಿ ಸಿ.ಸಿ.ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು.

    ಭೂಮಿ ಪೂಜೆ ನಂತರ ಮಾತನಾಡಿದ ಅವರು, ತಮ್ಮ ಕ್ಷೇತ್ರ ವ್ಯಾಪ್ತಿಯ ಪ್ರತಿ ಗ್ರಾಮಗಳಿಗೆ ಅಗತ್ಯವಾಗಿ ಬೇಕಾದ ರಸ್ತೆ, ಚರಂಡಿ, ಸಮುದಾಯ ಭವನ, ಕುಡಿಯುವ ನೀರು ಸೇರಿದಂತೆ ಇತರೆ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಲಾಗುತ್ತಿದೆ. ಇಂದು ಪರಿಶಿಷ್ಟ ಜಾತಿ ಬಡಾವಣೆ ಹಾಗೂ ಪರಿಶಿಷ್ಟ ಪಂಗಡದ ಬಡಾವಣೆಗೆಯ ಸಿ.ಸಿ.ರಸ್ತೆ ಮತ್ತು ಚರಂಡಿ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ ಎಂದರು. ಈ ವೇಳೆ ಕಾಮಗಾರಿ ನಿರ್ವಹಿಸುತ್ತಿರುವ ಇಂಜಿನಿಯರ್ ಗುತ್ತಿಗೆದಾರರು ಗುಣಮಟ್ಟದಿಂದ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.