Tag: CAA

  • 2024ಕ್ಕೂ ಮುನ್ನ ದಾಖಲೆಗಳಿಲ್ಲದೇ ಪಾಕ್‌, ಅಫ್ಘಾನ್‌, ಬಾಂಗ್ಲಾದಿಂದ ಬಂದ ಅಲ್ಪಸಂಖ್ಯಾತರಿಗೆ ಭಾರತದಲ್ಲಿ ಉಳಿಯಲು ಅವಕಾಶ

    2024ಕ್ಕೂ ಮುನ್ನ ದಾಖಲೆಗಳಿಲ್ಲದೇ ಪಾಕ್‌, ಅಫ್ಘಾನ್‌, ಬಾಂಗ್ಲಾದಿಂದ ಬಂದ ಅಲ್ಪಸಂಖ್ಯಾತರಿಗೆ ಭಾರತದಲ್ಲಿ ಉಳಿಯಲು ಅವಕಾಶ

    – ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳಿಗೆ ಅನುಕೂಲ

    ನವದೆಹಲಿ: ಧಾರ್ಮಿಕ ಕಿರುಕುಳದಿಂದ (Religious Persecution) ತಪ್ಪಿಸಿಕೊಳ್ಳಲು 2024ರ ಡಿಸೆಂಬರ್‌ 31ಕ್ಕೂ ಮುನ್ನ ದಾಖಲೆಗಳಿಲ್ಲದೇ ಪಾಕಿಸ್ತಾನ (Pakistan), ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶಗಳಿಂದ ಬಂದ ಧಾರ್ಮಿಕ ಅಲ್ಪಸಂಖ್ಯಾತರಿಗೆ (ಮುಸ್ಲಿಮೇತರ ಸಮುದಾಯಗಳಿಗೆ) ಭಾರತದಲ್ಲಿ ಉಳಿಯಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಗೃಹಸಚಿವಾಲಯ ತಿಳಿಸಿದೆ.

    ಪಾಸ್‌ಪೋರ್ಟ್‌ (Passport) ಅಥವಾ ಇತರ ಪ್ರಯಾಣ ದಾಖಲೆಗಳಿಲ್ಲದೇ ಬಂದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಕ್ರೈಸ್ತರು ಹಾಗೂ ಪಾರ್ಸಿಗಳಿಗೆ ಭಾರತದಲ್ಲಿ ಉಳಿಯಲು ಅವಕಾಶ ನೀಡುವುದಾಗಿ ಹೇಳಿದೆ. ಜೊತೆಗೆ ದೇಶ ಪ್ರವೇಶಿಸಿದ್ದು ದಾಖಲೆಗಳು ಸಿಂಧುತ್ವದ ಅವಧಿ ಮೀರಿದ್ದರೆ ಅಂತಹವರಿಗೂ ಈ ನಿಯಮ ಅನ್ವಯಿಸಲಿದೆ ಎಂದು ಗೃಹ ಸಚಿವಾಲಯ ಆದೇಶದಲ್ಲಿ ತಿಳಿಸಿದೆ. ಇದನ್ನೂ ಓದಿ: ಅಮೆರಿಕ ಒತ್ತಡದ ನಡುವೆ ಭಾರತಕ್ಕೆ ರಷ್ಯಾ ಗಿಫ್ಟ್‌; ಇನ್ನಷ್ಟು S-400 ವಾಯು ರಕ್ಷಣಾ ವ್ಯವಸ್ಥೆ ಪೂರೈಕೆಗೆ ನಿರ್ಧಾರ

    Narendra Modi Amit Shah 2

    ಕಳೆದ ವರ್ಷ ಮಾರ್ಚ್‌ 11ರಂದು ಜಾರಿಗೆ ಬಂದ ಪೌರತ್ವ ತಿದ್ದುಪಡಿ ಕಾಯ್ದೆ (Citizenship (Amendment) Act) ಪ್ರಕಾರ, 2014 ಡಿಸೆಂಬರ್‌ 31ರ ನಂತರ ಅಥವಾ ಅದಕ್ಕೂ ಮುನ್ನ ಧಾರ್ಮಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಭಾರತಕ್ಕೆ ಬಂದ ಅಲ್ಪಸಂಖ್ಯಾತ ಸದಸ್ಯರಿಗೆ ಭಾರತದ ಪೌರತ್ವ ನೀಡಲಾಗುವುದು. 2025ರ ವಲಸೆ ಮತ್ತು ವಿದೇಶಿಗರ ಕಾಯ್ದೆ ಅಡಿಯಲ್ಲಿ ಈ ಮಹತ್ವದ ಆದೇಶ ಹೊರಡಿಸಲಾಗಿದೆ. ಇದರಿಂದ 2014ರ ನಂತರ ಭಾರತಕ್ಕೆ ವಲಸೆ ಬಂದು ತಮ್ಮ ಬಗ್ಗೆ ಚಿಂತಿತರಾಗಿದ್ದ ಪಾಕಿಸ್ತಾನದ ಹಿಂದೂಗಳಿಗೆ ವಿಶೇಷವಾಗಿ ಹೆಚ್ಚಿನ ಸಂಖ್ಯೆಯ ಜನರಿಗೆ ಅನುಕೂಲ ಆಗಲಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಮುಂದುವರಿದ ಅಮೆರಿಕ ಸುಂಕ ಸಮರ; ತೈಲ ಖರೀದಿಗೆ ಭಾರತಕ್ಕೆ ದೊಡ್ಡ ಡಿಸ್ಕೌಂಟ್‌ ಕೊಟ್ಟ ರಷ್ಯಾ

    CAA protest

    ಸಿಎಎಯಲ್ಲಿ ಏನಿದೆ?
    ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ಥಾನದಲ್ಲಿ ಕಿರುಕುಳಕ್ಕೆ ಒಳಗಾದ ಮುಸ್ಲಿಮೇತರರಿಗೆ ಭಾರತದ ಪೌರತ್ವ (Citizenship) ನೀಡಲಾಗುತ್ತದೆ. 2014ರ ಡಿಸೆಂಬರ್ 31ಕ್ಕೆ ಮೊದಲು ರಕ್ಷಣೆ ಬಯಸಿ ಭಾರತಕ್ಕೆ ಶರಣಾರ್ಥಿಗಳಾಗಿ ಬಂದಿರುವ ಹಿಂದೂಗಳು, ಕ್ರೈಸ್ತರು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳಿಗೆ ಮಾತ್ರ ಸಿಎಎ ಅನ್ವಯ ಪೌರತ್ವ ನೀಡಲಾಗುತ್ತದೆ. ಪೌರತ್ವ ನೋಂದಣಿ ಪ್ರಕ್ರಿಯೆ ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿಯೇ ಮುಗಿಯಲಿದ್ದು, ದೇಶದಲ್ಲಿರುವ ಮುಸ್ಲಿಮರಿಗೆ ಸಿಎಎಯಿಂದ ಯಾವುದೇ ತೊಂದರೆ ಆಗುವುದಿಲ್ಲ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಸ್ಮಾರ್ಟ್ ಇಂಟೆಲಿಜೆಂಟ್ ವಿಲೇಜ್ – ಏನಿದು ಹೊಸ ಯೋಜನೆ?

  • ಪಾಕ್‌, ಬಾಂಗ್ಲಾ, ಅಫ್ಘಾನಿಸ್ತಾನದ 188 ಹಿಂದೂ ನಿರಾಶ್ರಿತರಿಗೆ ಪೌರತ್ವ ಪ್ರಮಾಣಪತ್ರ ನೀಡಿದ ಅಮಿತ್‌ ಶಾ

    ಪಾಕ್‌, ಬಾಂಗ್ಲಾ, ಅಫ್ಘಾನಿಸ್ತಾನದ 188 ಹಿಂದೂ ನಿರಾಶ್ರಿತರಿಗೆ ಪೌರತ್ವ ಪ್ರಮಾಣಪತ್ರ ನೀಡಿದ ಅಮಿತ್‌ ಶಾ

    ನವದೆಹಲಿ: ಹಿಂದಿನ ಸರ್ಕಾರಗಳ ತುಷ್ಟೀಕರಣ ನೀತಿಯಿಂದಾಗಿ ಭಾರತದಲ್ಲಿ ಪೌರತ್ವ ಬಯಸುತ್ತಿರುವ ಹಿಂದೂ, ಬೌದ್ಧ, ಸಿಖ್‌, ಜೈನ ನಿರಾಶ್ರಿತರಿಗೆ ನ್ಯಾಯ ಒದಗಿಸಲಿಲ್ಲ ಎಂದು ಇಂಡಿಯಾ ಒಕ್ಕೂಟದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಕಿಡಿಕಾರಿದ್ದಾರೆ.

    ಅಮಿತ್ ಶಾ ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ 188 ಹಿಂದೂ ನಿರಾಶ್ರಿತರಿಗೆ ಸಿಎಎ (CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳನ್ನು ವಿತರಿಸಿದರು. ಇದನ್ನೂ ಓದಿ: ಮುಸ್ಲಿಮರಿಗೆ ಜಾತ್ಯತೀತ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ: ಮುಸ್ಲಿಂ ಮಂಡಳಿ

    ಸಿಎಎ ಕೇವಲ ಜನರಿಗೆ ಪೌರತ್ವ ನೀಡುವುದಕ್ಕಾಗಿ ಅಲ್ಲ. ಇದು ಲಕ್ಷಾಂತರ ಜನರಿಗೆ ನ್ಯಾಯ ಮತ್ತು ಹಕ್ಕುಗಳನ್ನು ನೀಡುತ್ತದೆ. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳ ತುಷ್ಟೀಕರಣದ ರಾಜಕೀಯದಿಂದಾಗಿ, ದೇಶದಲ್ಲಿ ಆಶ್ರಯ ಪಡೆದ ಜನರಿಗೆ 1947 ರಿಂದ 2014 ರವರೆಗೆ ನ್ಯಾಯ ಸಿಗಲಿಲ್ಲ. ಅವರು ಚಿತ್ರಹಿಂಸೆಗೊಳಗಾದರು. ನೆರೆಯ ದೇಶಗಳಲ್ಲಿ ಅವರು ಹಿಂದೂ, ಬೌದ್ಧ, ಸಿಖ್ ಅಥವಾ ಜೈನರಾಗಿದ್ದರು. ಆದರೆ ಅವರ ದೇಶದಲ್ಲಿಯೂ ಸಹ ಅವರನ್ನು ಹಿಂಸಿಸಲಾಯಿತು. ಇಂಡಿಯಾ ಮೈತ್ರಿಕೂಟದ ತುಷ್ಟೀಕರಣ ರಾಜಕೀಯವು ಅವರಿಗೆ ನ್ಯಾಯವನ್ನು ನೀಡಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

    ವಿಭಜನೆಯಾದಾಗ ಗಲಭೆಗಳು ನಡೆದವು. ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಲ್ಲಿ ವಾಸಿಸುವ ಕೋಟಿಗಟ್ಟಲೆ ಹಿಂದೂಗಳು, ಸಿಖ್ಖರು, ಜೈನರು ಮತ್ತು ಬೌದ್ಧರು ಭಾರವನ್ನು ಹೊರಬೇಕಾಯಿತು. ಈ ದೇಶಗಳ ನಿರಾಶ್ರಿತರಿಗೆ ಭಾರತದಲ್ಲಿ ಪೌರತ್ವ ನೀಡಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿತ್ತು. ಆದರೆ ತನ್ನ ವೋಟ್‌ಬ್ಯಾಂಕ್ ಉದ್ದೇಶದಿಂದ ಪೌರತ್ವ ನೀಡುವ ಕೆಲಸ ಮಾಡಲಿಲ್ಲ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಕೋಲ್ಕತ್ತಾ ವೈದ್ಯೆ ಹತ್ಯಾಚಾರ; ನೈಟ್ ಶಿಫ್ಟ್ ಮಹಿಳೆಯರ ಸುರಕ್ಷತೆಗಾಗಿ ಪಶ್ಚಿಮ ಬಂಗಾಳ ಸರ್ಕಾರದಿಂದ 5 ಕ್ರಮ

    2019 ರಲ್ಲಿ ಕಾನೂನನ್ನು ಅಂಗೀಕರಿಸಲಾಗಿದ್ದರೂ ಪೌರತ್ವ ನೀಡಲು ವಿಳಂಬವಾಗಿದೆ. ಏಕೆಂದರೆ ಅಲ್ಪಸಂಖ್ಯಾತರನ್ನು ದಾರಿ ತಪ್ಪಿಸಲಾಗಿದೆ. ಆದರೆ ಸಿಎಎ ಯಾರಿಂದಲೂ ಪೌರತ್ವವನ್ನು ಕಸಿದುಕೊಳ್ಳುವುದಿಲ್ಲ. ಇಂದು ಕೂಡ ಕೆಲವು ರಾಜ್ಯ ಸರ್ಕಾರಗಳು ಜನರನ್ನು ದಾರಿ ತಪ್ಪಿಸುತ್ತಿವೆ. ನನ್ನ ರಾಜ್ಯದಲ್ಲಿ 128 ಕುಟುಂಬಗಳು ಭಾರತದ ಪ್ರಜೆಗಳಾಗಿ ಮಾರ್ಪಟ್ಟಿವೆ. ಬಾಂಗ್ಲಾದೇಶವನ್ನು ರಚಿಸಿದಾಗ ಅಲ್ಲಿ 27% ಹಿಂದೂಗಳಿದ್ದರು. ಆದರೆ ಇಂದು ಅದು 9% ನಷ್ಟಿದೆ. ಏಕೆಂದರೆ ಅವರು ತಮ್ಮ ಧರ್ಮವನ್ನು ಬದಲಾಯಿಸಲು ಒತ್ತಾಯಿಸಲಾಯಿತು ಎಂದು ತಿಳಿಸಿದ್ದಾರೆ.

  • ಪೌರತ್ವ ತಿದ್ದುಪಡಿ ಕಾಯ್ದೆ | ರಾಜ್ಯದಲ್ಲಿದ್ದ ಐವರು ಬಾಂಗ್ಲಾ ನಿರಾಶ್ರಿತರಿಗೆ ಭಾರತೀಯ ಪೌರತ್ವ

    ಪೌರತ್ವ ತಿದ್ದುಪಡಿ ಕಾಯ್ದೆ | ರಾಜ್ಯದಲ್ಲಿದ್ದ ಐವರು ಬಾಂಗ್ಲಾ ನಿರಾಶ್ರಿತರಿಗೆ ಭಾರತೀಯ ಪೌರತ್ವ

    – 40 ವರ್ಷಗಳ ಹೋರಾಟಕ್ಕೆ ಸಿಕ್ಕ ಫಲ

    ರಾಯಚೂರು: ಪೌರತ್ವ ತಿದ್ದುಪಡಿ ಕಾಯ್ದೆ (CAA) ಅಡಿಯಲ್ಲಿ ರಾಜ್ಯದಲ್ಲಿ ವಾಸಿಸುತ್ತಿರುವ ಐವರು ಬಾಂಗ್ಲಾ ನಿರಾಶ್ರಿತರಿಗೆ ಭಾರತೀಯ ಪೌರತ್ವ (Indian Citizenship) ಸಿಕ್ಕಿದೆ.

    ರಾಯಚೂರು (Raichur) ಜಿಲ್ಲೆ ಸಿಂಧನೂರು ತಾಲೂಕಿನ ಆರ್.ಎಚ್‌ ಕ್ಯಾಂಪ್‌ಗಳಲ್ಲಿ ವಾಸವಿರುವ ಐವರಿಗೆ ಭಾರತೀಯ ಪೌರತ್ವ ಸಿಕ್ಕಿದೆ. ಆರ್.ಎಚ್‌ಕ್ಯಾಂಪ್‌ಗಳಲ್ಲಿರುವ ರಾಮಕೃಷ್ಣನ್‌ ಅಭಿಕರಿ, ಸುಕುಮಾರ ಮೊಂಡಲ್, ಬಿ. ಪ್ರದಾಸ ಗೋಲ್ದರ್, ಜಯಂತ ಮೊಂಡಲ್, ಅದ್ವಿತ ಕೇಂದ್ರ ಗೃಹ ಇಲಾಖೆಯಿಂದ ಪೌರತ್ವ ಪಡೆದ ಬಾಂಗ್ಲಾ ವಲಸಿಗರಾಗಿದ್ದಾರೆ. ಜನಗಣತಿ ಕಾರ್ಯಾಚರಣೆ ಹಾಗೂ ನಾಗರಿಕ ನೋಂದಣಿ ನಿರ್ದೇಶನಾಲಯದಿಂದ ಅಧಿಕೃತವಾಗಿ ಪೌರತ್ವ ಪತ್ರ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ – ಕೇಂದ್ರದಿಂದ ಅಧಿಸೂಚನೆ ಪ್ರಕಟ

    ಬಾಂಗ್ಲಾ ವಲಸಿಗರು ಇಲ್ಲಿ ಆಶ್ರಯ ಪಡೆದಿದ್ದೇಗೆ?
    1971ರ ಬಾಂಗ್ಲಾದೇಶ ವಿಮೋಚನಾ ವೇಳೆ ಬಾಂಗ್ಲಾ ಹಾಗೂ ಬರ್ಮಾ ವಲಸಿಗರಿಗೆ ಭಾರತದಲ್ಲಿ ಆಶ್ರಯ ನೀಡಲಾಗಿತ್ತು. ಈ ವೇಳೆ ಸಿಂಧನೂರು ತಾಲೂಕಿನಲ್ಲಿ ಸುಮಾರು 932 ಕುಟುಂಬಗಳಿಗೆ 5 ಸಾವಿರ ಎಕರೆ ಜಮೀನು ನೀಡಲಾಗಿತ್ತು. 1971ರ ಬಳಿಕ ಬಂದ ಕುಟುಂಬಗಳಿಗೆ ಪೌರತ್ವ ಹಾಗೂ ಯಾವುದೇ ಸೌಲಭ್ಯ ನೀಡಿರಲಿಲ್ಲ. ಪೌರತ್ವಕ್ಕಾಗಿ ನಿರಾಶ್ರಿತರು ಕಳೆದ 40 ವರ್ಷಗಳಿಂದ ಅರ್ಜಿ ಹಾಕುತ್ತಲೇ ಇದ್ದರು. ಅದರಂತೆ ಐವರಿಗೆ ಪೌರತ್ವ ಸಿಕ್ಕಿದೆ. ಪೌರತ್ವ ಕೋರಿ ಒಟ್ಟು 146 ಅರ್ಜಿಗಳು ಸಲ್ಲಿಕೆಯಾಗಿತ್ತು. ಈ ಪೈಕಿ ಆರ್.ಎಚ್ ಕ್ಯಾಂಪ್‌ನಲ್ಲಿ ವಾಸಿಸುತ್ತಿರುವ ಐವರಿಗೆ ಪೌರತ್ವ ದೊರೆತಿದೆ. ಇದನ್ನೂ ಓದಿ: Koppala | ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ನ ಚೈನ್ ಲಿಂಕ್ ಕಟ್ – ಜನರಲ್ಲಿ ಆತಂಕ!

    ಸಿಎಎಯಲ್ಲಿ ಏನಿದೆ?
    ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ಥಾನದಲ್ಲಿ ಕಿರುಕುಳಕ್ಕೆ ಒಳಗಾದ ಮುಸ್ಲಿಮೇತರರಿಗೆ ಭಾರತದ ಪೌರತ್ವ (Citizenship) ನೀಡಲಾಗುತ್ತದೆ. 2014ರ ಡಿಸೆಂಬರ್ 31ಕ್ಕೆ ಮೊದಲು ರಕ್ಷಣೆ ಬಯಸಿ ಭಾರತಕ್ಕೆ ಶರಣಾರ್ಥಿಗಳಾಗಿ ಬಂದಿರುವ ಹಿಂದೂಗಳು, ಕ್ರೈಸ್ತರು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳಿಗೆ ಮಾತ್ರ ಸಿಎಎ ಅನ್ವಯ ಪೌರತ್ವ ನೀಡಲಾಗುತ್ತದೆ. ಪೌರತ್ವ ನೋಂದಣಿ ಪ್ರಕ್ರಿಯೆ ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿಯೇ ಮುಗಿಯಲಿದ್ದು, ದೇಶದಲ್ಲಿರುವ ಮುಸ್ಲಿಮರಿಗೆ ಸಿಎಎಯಿಂದ ಯಾವುದೇ ತೊಂದರೆ ಆಗುವುದಿಲ್ಲ. ಇದನ್ನೂ ಓದಿ: TB ಡ್ಯಾಮ್‌ ಪರಿಶೀಲನೆಗೆ ಬೆಂಗಳೂರು, ಹೈದರಾಬಾದ್‌, ಚೆನ್ನೈನಿಂದ ತಜ್ಞರ ತಂಡ ಆಗಮನ: ತಂಗಡಗಿ 

  • ಮೋದಿ ಗ್ಯಾರಂಟಿಗೆ ತಾಜಾ ಉದಾಹರಣೆ ಸಿಎಎ: ಪ್ರಧಾನಿ

    ಮೋದಿ ಗ್ಯಾರಂಟಿಗೆ ತಾಜಾ ಉದಾಹರಣೆ ಸಿಎಎ: ಪ್ರಧಾನಿ

    ಲಕ್ನೋ: ಮೋದಿ ಗ್ಯಾರಂಟಿಗೆ (Modi Guarantee) ತಾಜಾ ಉದಾಹರಣೆ ಸಿಎಎ. ಸಿಎಎ (CAA) ಅಡಿಯಲ್ಲಿ ಪೌರತ್ವ ಪ್ರಮಾಣ ಪತ್ರ ನೀಡಲು ಆರಂಭಿಸಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.

    ಉತ್ತರ ಪ್ರದೇಶದ (Uttar Pradesh) ಲಾಲ್‌ಗಂಜ್‌ನಲ್ಲಿ (Lalganj) ಮಾತನಾಡಿದ ಅವರು, ವಿದೇಶಗಳಿಂದ ಬಂದಿರುವ ಅಲ್ಪಸಂಖ್ಯಾತರು ನಮ್ಮ ದೇಶದಲ್ಲಿದ್ದಾರೆ. ಧರ್ಮದ ಆಧಾರದ ಮೇಲೆ ದೇಶ ಹಂಚಿಕೆಯಾದಾಗ ಬಲಿಯಾದವರು ಇವರು. ಅವರು ಯಾವಾಗ ಬೇಕಾದರೂ ಬರಬಹುದು ಎಂದು ಗಾಂಧೀಜಿ ಹೇಳಿದ್ದರು. ಆದರೆ ಕಾಂಗ್ರೆಸ್ ಈ ಜನರ ಬಗ್ಗೆ ಗಮನಿಸಿಲ್ಲ. ಇಲ್ಲಿನ ಮತಬ್ಯಾಂಕ್‌ಗಾಗಿ ಗಮನಿಸಿಲ್ಲ. ದಲಿತ, ಓಬಿಸಿ ಸಮುದಾಯದ ಜನರು ಕಷ್ಟದಲ್ಲಿದ್ದರು. ಅವರನ್ನು ಕರೆತರುವ ಕೆಲಸ ನಾವು ಮಾಡಿದ್ದೇವೆ ಎಂದರು. ಇದನ್ನೂ ಓದಿ: ರಾಹುಲ್‌ ಗಾಂಧಿ ಪರ ಡಿಕೆಶಿ ಪ್ರಚಾರ – ಮೋದಿಗೆ ಸಾಲು ಸಾಲು ಪ್ರಶ್ನೆ

    ಹತ್ತು ವರ್ಷಗಳ ಹಿಂದೆ ಜನರು ದೇವರ ಭರವಸೆಯಲ್ಲಿ ಬದುಕುತ್ತಿದ್ದರು. ಕೆಲವು ಕಡೆ ಬಾಂಬ್ ದಾಳಿ, ಕೆಲವು ಕಡೆ ಸ್ಲೀಪರ್ ಸೆಲ್, ಕೆಲವು ಕಡೆ ಕೋಮು ಘರ್ಷಣೆ, ಇನ್ನೂ ಕೆಲವು ಕಡೆ ಭಯೋತ್ಪಾದನೆಯಿಂದ ಸಂಕಷ್ಟ ಪರಿಸ್ಥಿತಿ ಇತ್ತು. ಸಾವಿರಾರು ತಾಯಂದಿರು ತಮ್ಮ ಮಕ್ಕಳನ್ನು ಕಳೆದುಕೊಂಡರು. ಈ ಹಿಂದಿನ ಸರ್ಕಾರಗಳು ಇಂತಹ ಜನರಿಗೆ ಸಹಕಾರ ನೀಡುತ್ತಿದ್ದವು. ಈಗಲೂ ನಿಮ್ಮ ಮೀಸಲಾತಿಯನ್ನು ಕಿತ್ತು ಸಮುದಾಯವೊಂದಕ್ಕೆ ನೀಡಲು ಚಿಂತಿಸಿವೆ. ಬಜೆಟ್ 15% ಅಲ್ಪಸಂಖ್ಯಾತರ ಹೆಸರಿನಲ್ಲಿ ಹೋಗುತ್ತಿದೆ. 70 ವರ್ಷಗಳಿಂದ ಹಿಂದೂ-ಮುಸ್ಲಿಂ ರಾಜಕೀಯ ಮಾಡಿವೆ. ನಾವು ಒಂದಾಗಿ ಹೋಗಬೇಕು. ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಉಚಿತ ಪಡಿತರ ಜನರ ತೆರಿಗೆ ಹಣದಿಂದ ನೀಡಲಾಗುತ್ತಿದೆ, ದಯೆ ರೂಪದಲ್ಲಿ ಬಿಂಬಿಸುವ ಅಗತ್ಯವಿಲ್ಲ: ಮಾಯಾವತಿ ಟೀಕೆ

  • ಸಿಎಎ ಅಡಿಯಲ್ಲಿ 14 ಜನರಿಗೆ ಮೊದಲ ಬಾರಿಗೆ ಪೌರತ್ವ ಪ್ರಮಾಣ ಪತ್ರ ಹಸ್ತಾಂತರ

    ಸಿಎಎ ಅಡಿಯಲ್ಲಿ 14 ಜನರಿಗೆ ಮೊದಲ ಬಾರಿಗೆ ಪೌರತ್ವ ಪ್ರಮಾಣ ಪತ್ರ ಹಸ್ತಾಂತರ

    ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (CAA) ಅಧಿಕೃತವಾಗಿ ಜಾರಿಯಾದ ಬಳಿಕ 14 ಜನರಿಗೆ ಮೊದಲ ಬಾರಿಗೆ ಪೌರತ್ವ ಪ್ರಮಾಣ ಪತ್ರವನ್ನು ಕೇಂದ್ರ ಗೃಹ ಇಲಾಖೆ ನೀಡಿದೆ.

    ಗೃಹ ಇಲಾಖೆಯ ಕಾರ್ಯದರ್ಶಿ ಅಜಯ್ ಭಲ್ಲಾ ಪ್ರಮಾಣ ಪತ್ರ ವಿತರಿಸಿದರು. ಮೊದಲ ಹಂತದಲ್ಲಿ 14 ಮಂದಿ ಒಳಗೊಂಡಂತೆ 300 ಮಂದಿಗೆ ಪೌರತ್ವ ಪ್ರಮಾಣ ಪತ್ರ ನೀಡಲಾಗುತ್ತಿದೆ. ಇದಕ್ಕಾಗಿ ತಯಾರಿಸಿ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿದ್ದ 14 ಜನರ ಅರ್ಜಿಗಳ ಪ್ರಕ್ರಿಯೆಯನ್ನು ಅಜಯ್ ಭಲ್ಲಾ ಪೂರ್ಣಗೊಳಿಸಿದರು. ಇದನ್ನೂ ಓದಿ: ಮೋದಿ ಬೀಳ್ಕೊಡುಗೆಗೆ ದೇಶದ ಜನರು ಸಿದ್ಧವಾಗಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

    2014 ರ ಡಿಸೆಂಬರ್ 31 ಅಥವಾ ಅದಕ್ಕೂ ಮೊದಲು ಭಾರತಕ್ಕೆ ಬಂದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ರಾಷ್ಟ್ರೀಯತೆಯನ್ನು ನೀಡಲು ಡಿಸೆಂಬರ್ 2019 ರಲ್ಲಿ CAA ಅನ್ನು ಜಾರಿಗೊಳಿಸಲಾಗಿದೆ. ಇದರಲ್ಲಿ ಹಿಂದೂಗಳು, ಸಿಖ್‌ಗಳು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದ್ದಾರೆ.

    ಸಂಸತ್‌ನಲ್ಲಿ ಅನುಮೋದನೆ ಪಡೆದ ನಾಲ್ಕು ವರ್ಷದ ಬಳಿಕ ಕಳೆದ ಮಾರ್ಚ್ 11 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಇದನ್ನೂ ಓದಿ: ಪಿಒಕೆ ಭಾರತದ ಭಾಗ, ಮರಳಿ ಪಡೆದೇ ಪಡೆಯುತ್ತೇವೆ – ಬಂಗಾಳದಲ್ಲಿ ಅಮಿತ್ ಶಾ ಗುಡುಗು

  • ರಕ್ತ ಚೆಲ್ಲಲು ಸಿದ್ಧ.. ದೇಶದಲ್ಲಿ ಸಿಎಎ, ಎನ್‌ಆರ್‌ಸಿ, ಯುಸಿಸಿ ಜಾರಿ ಒಪ್ಪಲ್ಲ: ಮಮತಾ ಬ್ಯಾನರ್ಜಿ

    ರಕ್ತ ಚೆಲ್ಲಲು ಸಿದ್ಧ.. ದೇಶದಲ್ಲಿ ಸಿಎಎ, ಎನ್‌ಆರ್‌ಸಿ, ಯುಸಿಸಿ ಜಾರಿ ಒಪ್ಪಲ್ಲ: ಮಮತಾ ಬ್ಯಾನರ್ಜಿ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು, ಪೌರತ್ವ (ತಿದ್ದುಪಡಿ) ಕಾಯ್ದೆ (CAA), ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಮತ್ತು ಏಕರೂಪ ನಾಗರಿಕ ಸಂಹಿತೆ (UCC)ಗೆ ವಿರೋಧವನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಸಮಯದಲ್ಲಿ ಕೆಲವರ ಅಜೆಂಡಾಗಳ ಬಗ್ಗೆ ಜಾಗರೂಕರಾಗಿರಿ ಎಂದು ಮತದಾರರಿಗೆ ಎಚ್ಚರಿಕೆ ನೀಡಿದ್ದಾರೆ.

    ಈದ್ ಪ್ರಾರ್ಥನೆಯಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶಕ್ಕಾಗಿ ರಕ್ತ ಸುರಿಸಲು ನಾವು ಸಿದ್ಧರಿದ್ದೇವೆ. ಆದರೆ ಹಿಂಸೆಯನ್ನು ಸಹಿಸುವುದಿಲ್ಲ. ಏಕರೂಪ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ. ನಾನು ಎಲ್ಲಾ ಧರ್ಮಗಳಲ್ಲಿ ಸಾಮರಸ್ಯವನ್ನು ಬಯಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜೈಲಿನಿಂದಲೇ ಬಿಆರ್‌ಎಸ್‌ ನಾಯಕಿಯನ್ನು ಬಂಧಿಸಿದ ಸಿಬಿಐ

    ನಾವು ಸಿಎಎ, ಎನ್‌ಆರ್‌ಸಿ, ಯುಸಿಸಿಯನ್ನು ಒಪ್ಪಿಕೊಳ್ಳುವುದಿಲ್ಲ. ಚುನಾವಣೆ ಸಮಯದಲ್ಲಿ ಕೆಲವರು ಗಲಭೆ ಸೃಷ್ಟಿಸಲು ಬಯಸುತ್ತಿದ್ದಾರೆ. ಅವರ ಸಂಚಿಗೆ ಒಳಗಾಗಬೇಡಿ. ನಾವು ಒಗ್ಗಟ್ಟಿನಿಂದ ಇದ್ದರೆ, ಯಾರೂ ನಮಗೆ ತೊಂದರೆ ಕೊಡಲು ಸಾಧ್ಯವಿಲ್ಲ ಎಂದು ಮತದಾರರನ್ನು ಎಚ್ಚರಿಸಿದ್ದಾರೆ.

    ಬ್ಯಾನರ್ಜಿ ಅವರು ಈ ಹಿಂದೆ ರಾಜ್ಯದಲ್ಲಿ ಸಿಎಎ ಜಾರಿಗೊಳಿಸುವುದರ ವಿರುದ್ಧ ಪ್ರತಿಜ್ಞೆ ಮಾಡಿದ್ದರು. ಸಿಎಎ ವಿಚಾರವಾಗಿ ತೃಣಮೂಲ ಕಾಂಗ್ರೆಸ್‌ ಸೇರಿದಂತೆ ಅನೇಕ ವಿಪಕ್ಷಗಳು ಜನರಿಗೆ ತಪ್ಪು ಸಂದೇಶ ರವಾನಿಸುತ್ತಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ಪ್ರಧಾನಿಯಾಗಲು ದೀದಿ ಎಲ್ಲಾ ಅರ್ಹತೆ ಹೊಂದಿದ್ದಾರೆ: ಟಿಎಂಸಿ ಸಂಸದ

  • ಒಳನುಸುಳುವಿಕೆ ತಡೆಯಲು ಬಿಜೆಪಿಗೆ ಮತ ನೀಡಿ: ಬಂಗಾಳದಲ್ಲಿ ಅಮಿತ್ ಶಾ ಮನವಿ

    ಒಳನುಸುಳುವಿಕೆ ತಡೆಯಲು ಬಿಜೆಪಿಗೆ ಮತ ನೀಡಿ: ಬಂಗಾಳದಲ್ಲಿ ಅಮಿತ್ ಶಾ ಮನವಿ

    ಕೋಲ್ಕತ್ತಾ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು (CAA) ನಾವು ಜಾರಿ ಮಾಡಿದ್ದೇವೆ. ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ಅಲ್ಪ ಸಂಖ್ಯಾತರ ಪೌರತ್ವ ರದ್ದಾಗಲಿದೆ ಎಂದು ಜನರ ದಾರಿ ತಪ್ಪಿಸುತ್ತಿದ್ದಾರೆ. ಅವರು ಏನೇ ಪ್ರಯತ್ನ ಮಾಡಿದರೂ ಸಿಎಎ ತಡೆಯಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಸವಾಲು ಹಾಕಿದರು.

    ಪಶ್ಚಿಮ ಬಂಗಾಳದ (West Bengal) ಬಲೂರ್‌ಘಾಟ್‌ನಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ನೀವು ಸಿಎಎಗೆ ಅರ್ಜಿ ಸಲ್ಲಿಸಿದರೆ ನಿಮ್ಮ ಪೌರತ್ವವನ್ನು ಕಳೆದುಕೊಳ್ಳುತ್ತೀರಿ ಎಂದು ದಾರಿ ತಪ್ಪಿಸಲಾಗುತ್ತಿದೆ. ನಿರಾಶ್ರಿತರಿಗೆ ಸಿಎಎ ಅಡಿಯಲ್ಲಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ನಾನು ವಿನಂತಿಸುತ್ತೇನೆ. ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ನಾನು ಭರವಸೆ ನೀಡುತ್ತೇನೆ ಎಂದರು. ಇದನ್ನೂ ಓದಿ: ಕೇಜ್ರಿವಾಲ್‌ ಬಂಧನ ಬಳಿಕ ಎಎಪಿಗೆ ಮತ್ತೊಂದು ಶಾಕ್‌ – ಸಚಿವ ರಾಜ್‌ಕುಮಾರ್‌ ಆನಂದ್‌ ರಾಜೀನಾಮೆ

    ಸಶಕ್ತ ಭಾರತ ನಿರ್ಮಿಸಲು ನಾವು ‘ಸಶಕ್ತ ಬಂಗಾಳ’ವನ್ನು ನಿರ್ಮಿಸಬೇಕಾಗಿದೆ. ಆದರೆ ಪಶ್ಚಿಮ ಬಂಗಾಳದಲ್ಲಿ ಒಳನುಸುಳುವಿಕೆಯ ಪ್ರಮಾಣವನ್ನು ನೀವು ನೋಡುತ್ತೀರಿ. ಅಂತಹ ಪರಿಸ್ಥಿತಿಗಳು ಮುಂದುವರಿದರೆ ರಾಜ್ಯ ಪ್ರಗತಿ ಹೊಂದಲು ಸಾಧ್ಯವಿಲ್ಲ ಮತ್ತು ಎಂದಿಗೂ ಸಬಲರಾಗಲು ಸಾಧ್ಯವಿಲ್ಲ. ಈ ಒಳನುಸುಳುವಿಕೆಯನ್ನು ತಡೆಯಲು ಮಮತಾ ಬ್ಯಾನರ್ಜಿ ಎಂದಾದರೂ ಕೆಲಸ ಮಾಡುತ್ತಾರೆ ಎಂದು ನೀವು ಭಾವಿಸುತ್ತೀರಾ? ಇಲ್ಲ ಏಕೆಂದರೆ ಈ ನುಸುಳುಕೋರರು ಅವಳ ನಿಜವಾದ ಮತಬ್ಯಾಂಕ್ ಎಂದು ಆರೋಪಿಸಿದರು. ಇದನ್ನೂ ಓದಿ: ತಣಿಯದ ಸಿಟ್ಟು- ಪತಂಜಲಿ ವಿರುದ್ಧ ಸುಪ್ರೀಂಕೋರ್ಟ್ ಕೆಂಡಾಮಂಡಲ

    ಪ್ರಧಾನಿ ನರೇಂದ್ರ ಮೋದಿ ಮತ್ತು ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರದಿಂದ ಮಾತ್ರ ರಾಜ್ಯದಲ್ಲಿ ನುಸುಳುವಿಕೆಯನ್ನು ತಡೆಯಲು ಸಾಧ್ಯ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು ತರುವುದನ್ನು ಖಚಿತಪಡಿಸಿಕೊಳ್ಳಿ ಮತ್ತು ಸಾಟಿಯಿಲ್ಲದ ಪರಿವರ್ತನೆಯನ್ನು ವೀಕ್ಷಿಸಿ. ನಾವು ಅಸ್ಸಾಂನಲ್ಲಿ ಒಳನುಸುಳುವಿಕೆಯನ್ನು ನಿಲ್ಲಿಸಿದ್ದೇವೆ. ನಮ್ಮನ್ನು 30 ಸೀಟು ದಾಟಿಸಿ. ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿ. ಒಳನುಸುಳುವಿಕೆಯನ್ನು ನಿಲ್ಲಿಸುತ್ತೇವೆ. ಇದು ಮೋದಿಯವರ ಗ್ಯಾರಂಟಿ ಎಂದು ಹೇಳಿದರು. ಇದನ್ನೂ ಓದಿ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಕೇಜ್ರಿವಾಲ್ ಮೇಲ್ಮನವಿ ಸಲ್ಲಿಕೆ
    ಪಶ್ಚಿಮ ಬಂಗಾಳದಲ್ಲಿ ಏಳು ಹಂತಗಳಲ್ಲಿ 42 ಸ್ಥಾನಗಳಿಗೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ 2019ರ ಲೋಕಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ 42 ಸ್ಥಾನಗಳಲ್ಲಿ 22 ಸ್ಥಾನಗಳನ್ನು ಗೆದ್ದುಕೊಂಡಿತು. ಆದರೆ ಭಾರತೀಯ ಜನತಾ ಪಕ್ಷ 18 ಗೆದ್ದಿತ್ತು. ಇತರ ಎರಡು ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿದೆ. ಇದನ್ನೂ ಓದಿ: ಶ್ರೀಗಳ ಬಗ್ಗೆ ಮಾತಾಡೋಕೆ ಡಿಕೆಶಿಗೆ ನೈತಿಕತೆ ಇಲ್ಲ: ಅಶೋಕ್ ವಾಗ್ದಾಳಿ
  • ಪ್ರಣಾಳಿಕೆಯಲ್ಲಿ ಸಿಎಎ ಉಲ್ಲೇಖಿಸಲು ಭಯ – ಕಾಂಗ್ರೆಸ್‌ ವಿರುದ್ಧ ಪಿಣರಾಯಿ ಕಿಡಿ

    ಪ್ರಣಾಳಿಕೆಯಲ್ಲಿ ಸಿಎಎ ಉಲ್ಲೇಖಿಸಲು ಭಯ – ಕಾಂಗ್ರೆಸ್‌ ವಿರುದ್ಧ ಪಿಣರಾಯಿ ಕಿಡಿ

    ತಿರುವನಂತಪುರಂ: ಲೋಕಸಭಾ ಪ್ರಣಾಳಿಕೆಯಲ್ಲಿ (Lok Sabha Election) ಪೌರತ್ವ ತಿದ್ದುಪಡಿ ಕಾಯ್ದೆಯ (CAA) ಬಗ್ಗೆ ಯಾವುದೇ ಉಲ್ಲೇಖ ಮಾಡದ್ದಕ್ಕೆ ಕಾಂಗ್ರೆಸ್‌ (Congress) ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ವಾಗ್ದಾಳಿ ನಡೆಸಿದ್ದಾರೆ.

    ಕೊಲ್ಲಂನಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದರೆ ಜಿಎಸ್‌ಟಿ (GST) ಸೇರಿ, ಸಂವಿಧಾನವನ್ನು ಉಲ್ಲಂಘಿಸಿ ಜಾರಿಗೆ ತರಲಾದ ಹಲವು ಕಾನೂನುಗಳನ್ನು ವಾಪಸ್ ಪಡೆಯುವುದಾಗಿ ಕಾಂಗ್ರೆಸ್‌ ಹೇಳಿದೆ. ಆದರೆ ಸಿಎಎ ಬಗ್ಗೆ ಒಂದು ಶಬ್ದವನ್ನೂ ಉಲ್ಲೇಖಿಸಿಲ್ಲ ಎಂದು ಕಿಡಿಕಾರಿದರು.  ಇದನ್ನೂ ಓದಿ: ಏ.16ಕ್ಕೆ ವಿವಿಪ್ಯಾಟ್ ತಾಳೆಗೆ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ: ಸುಪ್ರೀಂ

    ಉದ್ದೇಶಪೂರ್ವಕವಾಗಿಯೇ ಸಿಎಎಯನ್ನು ಹೊರಗಿಡಲಾಗಿದೆ. ವಿವಾದಾತ್ಮಕ ವಿಷಯಗಳ ಬಗ್ಗೆ ಪ್ರಸ್ತಾಪಿಸಲು ಕಾಂಗ್ರೆಸ್‌ಗೆ ಇರುವ ಭಯವನ್ನು ಇದು ತೋರಿಸುತ್ತದೆ ಎಂದು ದೂರಿದರು.

    ಕಾಂಗ್ರೆಸ್‌ ವಿರುದ್ಧ ವಿಜಯನ್‌ ಕಿಡಿ ಕಾರುತ್ತಿರುವುದು ಇದು ಮೊದಲೆನಲ್ಲ. ರಾಹುಲ್‌ ಗಾಂಧಿ (Rahul Gandhi) ವಯನಾಡ್‌ನಲ್ಲಿ ಸ್ಪರ್ಧಿಸುತ್ತಿರುವುದಕ್ಕೆ ಅವರು ವಿರೋಧ ವ್ಯಕ್ತಪಡಿಸಿದ್ದರು. ಕೇರಳಲ್ಲಿ ಬಿಜೆಪಿ ಖಾತೆ ತೆರೆಯುವುದಿಲ್ಲ ಎನ್ನುವುದು ಎಲ್ಲರಿಗೂ ಗೊತ್ತಿರುವ ಸತ್ಯ ಹೀಗಿರುವಾಗ ಕೇರಳದಲ್ಲಿ ರಾಹುಲ್‌ ಗಾಂಧಿ ಸ್ಪರ್ಧೆ ಮಾಡುವುದು ಎಷ್ಟು ಸರಿ? ಬಿಜೆಪಿ (BJP) ಪ್ರಬಲವಿರುವ ರಾಜ್ಯಗಳಲ್ಲಿ ರಾಹುಲ್‌ ಸ್ಪರ್ಧಿಸಬೇಕು ಎಂದು ಎಂದು ಹೇಳಿದ್ದರು.  ಇದನ್ನೂ ಓದಿ: ಕೇಜ್ರಿವಾಲ್‌ ಇತರರೊಂದಿಗೆ ಸೇರಿ ಪಿತೂರಿ ನಡೆಸಿದ್ದಾರೆ – ಜಾಮೀನು ಅರ್ಜಿ ವಜಾ‌

    INDIA ಒಕ್ಕೂಟದಲ್ಲಿ ಸಿಪಿಎಂ ಪಕ್ಷವೂ ಭಾಗವಾಗಿದೆ. ಆದರೆ ಕೇರಳದಲ್ಲಿ ಕಾಂಗ್ರೆಸ್‌ ವಿರುದ್ಧ ಸಿಪಿಎಂ ಈ ಬಾರಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ.

  • ಸಿಎಎಗೆ ತಡೆ ಇಲ್ಲ: ಅರ್ಜಿಗಳಿಗೆ 3 ವಾರದಲ್ಲಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ಸುಪ್ರೀಂ ಸೂಚನೆ

    ಸಿಎಎಗೆ ತಡೆ ಇಲ್ಲ: ಅರ್ಜಿಗಳಿಗೆ 3 ವಾರದಲ್ಲಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ಸುಪ್ರೀಂ ಸೂಚನೆ

    ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (CAA) ಅನುಷ್ಠಾನಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಅಲ್ಲದೇ, ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ 3 ವಾರಗಳ ಕಾಲಾವಕಾಶ ನೀಡಿದೆ.

    ಸಿಎಎ ಸಂಬಂಧಿಸಿದಂತೆ ಕಳೆದ ವಾರ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕಾಯ್ದೆಯನ್ನು ಪ್ರಶ್ನಿಸಿ ಸುಪ್ರೀಂಗೆ 237 ಅರ್ಜಿಗಳು ಸಲ್ಲಿಕೆಯಾಗಿದ್ದರು. ಮಂಗಳವಾರ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್‌, ಪ್ರತಿಕ್ರಿಯೆ ನೀಡಲು ಏ.8 ರ ವರೆಗೆ ಸರ್ಕಾರಕ್ಕೆ ನ್ಯಾಯಾಲಯ ಗಡುವು ನೀಡಿದೆ. ಇದನ್ನೂ ಓದಿ: JMM ತೊರೆದು ಬಿಜೆಪಿ ಸೇರಿದ ಹೇಮಂತ್ ಸೊರೇನ್‌ ಸೊಸೆ ಸೀತಾ ಸೊರೇನ್‌

    ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠವು, 2024 ರ ಪೌರತ್ವ (ತಿದ್ದುಪಡಿ) ನಿಯಮಗಳಿಗೆ ತಡೆಯಾಜ್ಞೆ ಕೋರಿ ಸಲ್ಲಿಸಿರುವ ಅರ್ಜಿಗಳಿಗೆ ಮೂರು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರಕ್ಕೆ ಸೂಚಿಸಿದೆ.

    ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, 20 ಅರ್ಜಿಗಳಿಗೆ ಉತ್ತರ ಸಲ್ಲಿಸಲು ನಾಲ್ಕು ವಾರಗಳ ಅಗತ್ಯವಿದೆ ಎಂದು ಪೀಠಕ್ಕೆ ತಿಳಿಸಿದರು. ಏಪ್ರಿಲ್ 8ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಇದನ್ನೂ ಓದಿ: ಯೋಗ ಗುರು ಬಾಬಾ ರಾಮ್‌ದೇವ್, ಪತಂಜಲಿ ಮುಖ್ಯಸ್ಥನಿಗೆ ಸುಪ್ರೀಂ ಸಮನ್ಸ್

  • ಯಾರೊಬ್ಬರ ಪೌರತ್ವವನ್ನು ಕಸಿದುಕೊಳ್ಳಲು ಸಿಎಎಯಲ್ಲಿ ಅವಕಾಶವಿಲ್ಲ: ಅಮಿತ್ ಶಾ ಸ್ಪಷ್ಟನೆ

    ಯಾರೊಬ್ಬರ ಪೌರತ್ವವನ್ನು ಕಸಿದುಕೊಳ್ಳಲು ಸಿಎಎಯಲ್ಲಿ ಅವಕಾಶವಿಲ್ಲ: ಅಮಿತ್ ಶಾ ಸ್ಪಷ್ಟನೆ

    – ಸಿಎಎ ಮುಸ್ಲಿಂ ವಿರೋಧಿಯಲ್ಲ, ಯಾವುದೇ ಕಾರಣಕ್ಕೂ ಹಿಂಪಡೆಯಲ್ಲ: ಕೇಂದ್ರ ಸಚಿವ

    ನವದೆಹಲಿ: ದೇಶದಲ್ಲಿ ಅಲ್ಪಸಂಖ್ಯಾತರು ಅಥವಾ ಯಾವುದೇ ವ್ಯಕ್ತಿ ಭಯಪಡುವ ಅಗತ್ಯವಿಲ್ಲ. ಯಾರೊಬ್ಬರ ಪೌರತ್ವವನ್ನು ಕಸಿದುಕೊಳ್ಳಲು ಸಿಎಎಯಲ್ಲಿ ಯಾವುದೇ ಅವಕಾಶವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ಈಗಾಗಲೇ ಅನುಷ್ಠಾನಕ್ಕೆ ಬಂದಿರುವ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ವಾಪಸ್ ಪಡೆಯುವುದಿಲ್ಲ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

    ಖಾಸಗಿ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಭಾರತೀಯ ಪೌರತ್ವವನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಸಾರ್ವಭೌಮ ನಿರ್ಧಾರ. ನಾವು ಅದರಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಸಿಎಎ ಅನುಷ್ಠಾನ ಮಾಡಲು ರಾಜ್ಯಗಳು ನಿರಾಕರಿಸಲು ಸಾಧ್ಯವಿಲ್ಲ. ಪೌರತ್ವ ನೀಡುವ ಅಧಿಕಾರ ಕೇಂದ್ರ ಸರ್ಕಾರ ಮಾತ್ರ ಇದೆ ಎಂದು ಅವರು ಹೇಳಿದರು. ಇದನ್ನೂ ಓದಿ: ರಾಜ್ಯದಲ್ಲಿ ಸಿಎಎ ಜಾರಿ ಆಗುತ್ತಾ? – ಕ್ಯಾಬಿನೆಟ್‌ನಲ್ಲಿ ತೀರ್ಮಾನ ಮಾಡ್ತೀವಿ ಎಂದ ಪರಮೇಶ್ವರ್‌

    ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಹಿಂದೂಗಳು, ಬೌದ್ಧರು, ಜೈನರು, ಸಿಖ್ಖರು, ಕ್ರಿಶ್ಚಿಯನ್ನರು ಮತ್ತು ಪಾರ್ಸಿ ನಿರಾಶ್ರಿತರಿಗೆ ಹಕ್ಕುಗಳು ಮತ್ತು ಪೌರತ್ವವನ್ನು ನೀಡುವುದು ಮಾತ್ರ ಸಿಎಎ ಉದ್ದೇಶ. ಸಿಎಎ ಮೂಲಕ ಬಿಜೆಪಿ ಹೊಸ ವೋಟ್ ಬ್ಯಾಂಕ್ ಸೃಷ್ಟಿಸುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲ. ಅವರು ಹೇಳುವುದನ್ನು ಅವರು ಎಂದಿಗೂ ಮಾಡುವುದಿಲ್ಲ ತಿರುಗೇಟು ನೀಡಿದರು.

    ಮುಂದುವರಿದು ಮಾತನಾಡಿ, ಅವರು 370 ವಿಧಿಯನ್ನು ರದ್ದುಗೊಳಿಸಿದ್ದು ನಮ್ಮ ರಾಜಕೀಯ ಲಾಭಕ್ಕಾಗಿ ಎಂದು ಅವರು ಹೇಳಿದರು. ನಾವು 1950 ರಿಂದ 370 ನೇ ವಿಧಿಯನ್ನು ತೆಗೆದುಹಾಕುತ್ತೇವೆ ಎಂದು ಹೇಳುತ್ತಿದ್ದೇವೆ ಎಂದರು‌. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಸಿಎಎ ಅಧಿಸೂಚನೆ ಬಗ್ಗೆ ಪ್ರತಿಪಕ್ಷಗಳು ಪ್ರಶ್ನೆಗಳ ಪ್ರತಿಕ್ರಿಯಿಸಿದ ಅಮಿತ್ ಶಾ, ಅಸಾದುದ್ದೀನ್ ಓವೈಸಿ, ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್, ಮಮತಾ ಬ್ಯಾನರ್ಜಿ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳು ಸುಳ್ಳಿನ ರಾಜಕೀಯ ಮಾಡುತ್ತಿವೆ ಎಂದು ಟೀಕಿಸಿದರು. ಇದನ್ನೂ ಓದಿ: ವೋಟ್‌ ಬ್ಯಾಂಕ್ ರಾಜಕಾರಣಕ್ಕಾಗಿ ಸಿಎಎ ಜಾರಿ: ಕೇಂದ್ರದ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

    2019 ರಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ CAA ತರುವುದಾಗಿ ಮತ್ತು ನೆರೆ ದೇಶಗಳ ನಿರಾಶ್ರಿತರಿಗೆ ಪೌರತ್ವ ನೀಡುವುದಾಗಿ ಹೇಳಿದೆ. 2019 ರಲ್ಲಿ ಸಂಸತ್ತು ಇದನ್ನು ಅಂಗೀಕರಿಸಿತು. ಆದರೆ ಕೋವಿಡ್‌ನಿಂದಾಗಿ ಅನುಷ್ಠಾನ ವಿಳಂಬವಾಯಿತು. ಪ್ರತಿಪಕ್ಷಗಳು ತುಷ್ಟೀಕರಣದ ರಾಜಕೀಯ ಮಾಡಲು ಬಯಸುತ್ತವೆ. ತಮ್ಮ ಮತ ಬ್ಯಾಂಕ್ ಅನ್ನು ಕ್ರೋಢೀಕರಿಸಲು ಬಯಸುತ್ತವೆ ಎಂದು ಆರೋಪಿಸಿದರು.

    ನಿರಾಶ್ರಿತರಿಗೆ ಪೌರತ್ವ ನೀಡುವುದರಿಂದ ಕಳ್ಳತನ ಮತ್ತು ಅತ್ಯಾಚಾರಗಳು ಹೆಚ್ಚಾಗುತ್ತವೆ ಎಂಬ ಕೇಜ್ರಿವಾಲ್ ಹೇಳಿಕೆಗೆ ತಿರುಗೇಟು ನೀಡಿದ ಅಮಿತ್ ಶಾ, ಅರವಿಂದ್ ಕೇಜ್ರಿವಾಲ್ ಶಾಂತತೆಯನ್ನು ಕಳೆದುಕೊಂಡಿದ್ದಾರೆ. ಬಾಂಗ್ಲಾ ರೋಹಿಂಗ್ಯಾ ನುಸುಳುಕೋರರ ಬಗ್ಗೆ ಏಕೆ ಅವರು ಮಾತನಾಡುವುದಿಲ್ಲ, ವಿರೋಧಿಸುವುದಿಲ್ಲ? ಅವರೂ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು‌. ಇದನ್ನೂ ಓದಿ: ಸಿಎಎ ವಿಷಯದಲ್ಲಿ ನಟ ವಿಜಯ್ ಗೆ ಟಾಂಗ್ ಕೊಟ್ಟ ಕಂಗನಾ

    ಕೇರಳ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳು ತಮ್ಮ ರಾಜ್ಯಗಳಲ್ಲಿ ಸಿಎಎಯನ್ನು ಜಾರಿಗೆ ತರುವುದಿಲ್ಲ ಎಂದು ಹೇಳಿವೆ. ಆದರೆ ನಮ್ಮ ಸಂವಿಧಾನದ 11 ನೇ ವಿಧಿಯು ಸಂಸತ್ತಿಗೆ ಮಾತ್ರ ಪೌರತ್ವದ ನಿಯಮಗಳನ್ನು ಮಾಡುವ ಎಲ್ಲಾ ಅಧಿಕಾರಗಳನ್ನು ನೀಡುತ್ತದೆ. ಇದು ಕೇಂದ್ರದ ವಿಷಯ, ರಾಜ್ಯದ ವಿಷಯವಲ್ಲ. ಚುನಾವಣೆಯ ನಂತರ ಎಲ್ಲರೂ ಸಹಕರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ಅವರು ತುಷ್ಟೀಕರಣ ರಾಜಕಾರಣಕ್ಕಾಗಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.