Tag: CAA protest

  • ಟೆರರಿಸ್ಟ್ ದೇಶಕ್ಕೆ ಜೈಕಾರ ಹಾಕೋ ಅಮೂಲ್ಯಗೆ ವೇದಿಕೆ ಕೊಡಬೇಡಿ- ರಾ.ಚಿಂತನ್ ಗರಂ

    ಟೆರರಿಸ್ಟ್ ದೇಶಕ್ಕೆ ಜೈಕಾರ ಹಾಕೋ ಅಮೂಲ್ಯಗೆ ವೇದಿಕೆ ಕೊಡಬೇಡಿ- ರಾ.ಚಿಂತನ್ ಗರಂ

    ಉಡುಪಿ: ಹಿಂದೂಸ್ಥಾನ್ ಜಿಂದಾಬಾದ್ ಘೋಷಣೆ ಕೂಗುವ ಮೂಲಕ ದೇಶದ್ರೋಹಿ ಅಮೂಲ್ಯ ಲಿಯೋನಾಗೆ ಪತ್ರಕರ್ತ ರಾ. ಚಿಂತನ್ ಟಾಂಗ್ ಕೊಟ್ಟಿದ್ದಾರೆ. ಉಡುಪಿಯ ಕಾಪುವಿನಲ್ಲಿ ಪೌರತ್ವ ಕಾಯ್ದೆ ವಿರುದ್ಧ ಬೆಳಪು ಮಲ್ಲಾರ್ ಮುಸ್ಲಿಂ ಒಕ್ಕೂಟ ಆಯೋಜಿಸಿದ್ದ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

    ವಿವೇಕ ಇಲ್ಲದವರಿಗೆ ಯಾವುದೇ ಕಾರಣಕ್ಕೂ ವೇದಿಕೆಯನ್ನು ಕೊಡಬಾರದು. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಟೆರರಿಸ್ಟ್ ರಾಷ್ಟ್ರದ ಘೋಷಣೆ ಮೊಳಗುತ್ತದೆ. ಅಮೂಲ್ಯ ಲಿಯೋನ ಬಂದಿದ್ದರೆ ನಾನು ಬರುತ್ತಿರಲಿಲ್ಲ. ಅಮೂಲ್ಯ ಉದ್ದೇಶ ಏನೇ ಇರಲಿ. ನಾಲಿಗೆಗೆ ಹಿಡಿತ ಇರಬೇಕು. ವಿರೋಧಿ ದೇಶದ ಪರ ಜೈಕಾರ ಕೂಗುವವರಿಗೆ ವೇದಿಕೆ ಕೊಡಬಾರದು. ಫ್ರೀಡಂ ಪಾರ್ಕ್ ಹೇಳಿಕೆ ಎಲ್ಲರೂ ಖಂಡಿಸಲೇಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಪಾಕ್ ಪರ ಘೋಷಣೆ ಪ್ರಕರಣ- ಪೊಲೀಸರ ಪ್ರಶ್ನೆಗೆ ಕಾರ್ಪೊರೇಟರ್ ಸುಸ್ತೋ ಸುಸ್ತು

    ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಮಾತನಾಡಿದರೆ, ಕವನ ಹೇಳಿದ್ರೆ ಕೇಸ್ ಬೀಳುತ್ತದೆ. ಪ್ರಧಾನಿ ಮೋದಿ ಅವತಾರ ಪುರುಷ – ಮೋದಿ ಬಂದ್ಮೇಲೆ ಎಲ್ಲರೂ ಒಗ್ಗಟ್ಟಾಗಿದ್ದಾರೆ. ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಲ್ಲಿಸ್ತೇನೆ ಎಂದು ವ್ಯಂಗ್ಯವಾಡಿದರು. ದೇಶ ಇಬ್ಬಾಗ ಮಾಡಿ ಹಿಂದೂ ರಾಷ್ಟ್ರ ಮಾಡುವ ಹುನ್ನಾರ ನಡೆಯುತ್ತಿದೆ. ಪೌರತ್ವ ಕಾಯ್ದೆ ಎಲ್ಲಾ ಧರ್ಮ, ಜಾತಿ ಜನರಿಗೆ ಬಿಸಿ ತುಪ್ಪ ಆಗಲಿದೆ ಎಂದರು. ಇದನ್ನೂ ಓದಿ: ಅಮೂಲ್ಯಳನ್ನು ಕಾರ್ಯಕ್ರಮದಿಂದ ಕೈಬಿಟ್ಟ ಆಯೋಜಕರು- ವಿಮಾನ ಟಿಕೆಟ್ ರದ್ದು

    ಮಾಧ್ಯಮದವರು ಪೂರ್ವಾಗ್ರಹ ಪೀಡಿತರಾಗಬಾರದು. ಸಂಸದೆ ಸಾಧ್ವಿ ಪ್ರಜ್ಞಾಸಿಂಗ್ ಬಗ್ಗೆ ಒಂದು ವಾರ ಸುದ್ದಿ ಮಾಡಿ. ಜೈ ಗೋಡ್ಸೆ ಅಂದ ಸಾಧ್ವಿ ಬಗ್ಗೆ ಮಾಧ್ಯಮ ಪ್ರೋತ್ಸಾಹ ಕೊಟ್ಟದ್ಯಾಕೆ ಎಂದು ಪ್ರಶ್ನಿಸಿದರು. ಭಾರತಕ್ಕೆ ಟ್ರಂಪ್ ಭೇಟಿ ಹಿನ್ನೆಲೆಯಲ್ಲಿ ಗುಜರಾತಲ್ಲಿ 100 ಕೋಟಿಯ ಗೋಡೆಯನ್ನು ಸ್ಲಂಗೆ ಅಡ್ಡಲಾಗಿ ಕಟ್ಟಲಾಗುತ್ತಿದೆ. ಗೋಡೆ ಕಟ್ಟುವ ಬದಲು ಬಡವರಿಗೆ ಮನೆ ಕಟ್ಟಿಕೊಡಿ. ಧರ್ಮದ ನಡುವೆ ವ್ಯಾಪಾರ ಯುದ್ಧ ಬೇಡ. ಹಿಂದೂ ಮುಸಲ್ಮಾನರು ಅಣ್ಣತಮ್ಮಂದಿರಂತೆ ಬದುಕಬೇಕು. ಪೌರತ್ವ ದಾಖಲೆ ಕೇಳಲು ಬಂದವರಿಗೆ ರಾಷ್ಟ್ರಧ್ವಜ ತೋರಿಸಿ ಎಂದು ಪ್ರತಿಭಟನಾ ಸಭೆಯಲ್ಲಿ ಸಲಹೆ ನೀಡಿದರು.

  • ಪಾಕ್ ಪರ ಘೋಷಣೆ ಪ್ರಕರಣ- ಪೊಲೀಸರ ಪ್ರಶ್ನೆಗೆ ಕಾರ್ಪೊರೇಟರ್ ಸುಸ್ತೋ ಸುಸ್ತು

    ಪಾಕ್ ಪರ ಘೋಷಣೆ ಪ್ರಕರಣ- ಪೊಲೀಸರ ಪ್ರಶ್ನೆಗೆ ಕಾರ್ಪೊರೇಟರ್ ಸುಸ್ತೋ ಸುಸ್ತು

    ಬೆಂಗಳೂರು: ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಪಾಕ್ ಪ್ರೇಮಿ ಅಮೂಲ್ಯ ಲಿಯೋನ ಪರಪ್ಪನ ಅಗ್ರಹಾರ ಸೇರಿದ್ದಾಳೆ. ಈ ಪ್ರಕರಣದ ಸಂಬಂಧ ವಿಚಾರಣೆಗೆ ಹಾಜರಾಗಿದ್ದ ಪ್ರತಿಭಟನೆ ಆಯೋಜಕ, ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾ ಅವರಿಗೆ ಪೊಲೀಸರು ನೀರಿಳಿಸಿದ್ದಾರೆ.

    ಪ್ರಕರಣದ ಸಂಬಂಧ ತನಿಖೆ ಆರಂಭಿಸಿರುವ ಉಪ್ಪಾರಪೇಟೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾ ಅವರಿಗೆ ನೋಟಿಸ್ ಜಾರಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಠಾಣೆಗೆ ಹಾಜರಾದ ಇಮ್ರಾನ್ ಪಾಷಾ ಅವರಿಗೆ ಐದು ಜನ ಪೊಲೀಸ್ ಅಧಿಕಾರಿಗಳು ರೌಂಡ್ ಟೇಬಲ್ ಮಾದರಿಯಲ್ಲಿ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದರು ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ. ಇದನ್ನೂ ಓದಿ: ಅಮೂಲ್ಯಳನ್ನು ಕಾರ್ಯಕ್ರಮದಿಂದ ಕೈಬಿಟ್ಟ ಆಯೋಜಕರು- ವಿಮಾನ ಟಿಕೆಟ್ ರದ್ದು

    ವಿಚಾರಣೆ ವೇಳೆ ಇಮ್ರಾನ್ ಪಾಷ, ಕಾರ್ಯ ಕ್ರಮ ಆಯೋಜನೆ ಮಾಡಿದ್ದು ನಾನೇ. ಆದರೆ ಅದಕ್ಕೆ ಅಮೂಲ್ಯಳಿಗೆ ಆಹ್ವಾನ ಕೊಟ್ಟವರು ಯಾರು? ಅವಳಿಗೆ ವಿಐಪಿ ಪಾಸ್ ಕೊಟ್ಟವರು ಯಾರು? ಬ್ಯಾಡ್ಜ್  ಕೊಟ್ಟವರು ಯಾರು? ಅವಳನ್ನು ವೇದಿಕೆ ಮೇಲೆ ಬಿಟ್ಟವರು ಯಾರು ಎನ್ನುವುದು ಪ್ರಶ್ನೆಗಳಿಗೆ ಪಾಷಾ ಅವರು ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ. ಇದನ್ನೂ ಓದಿ: ಅಮೂಲ್ಯ ಜೊತೆ ವೇದಿಕೆಯಲ್ಲಿದ್ದ ಎಲ್ಲರ ಮೇಲೆ ದೇಶದ್ರೋಹ ಕೇಸ್ ಹಾಕಿ: ಅನಂತ್ ಕುಮಾರ್ ಹೆಗ್ಡೆ

    ಇದೇ ವಿಚಾರಕ್ಕೆ ಪೊಲೀಸರು ಬೇರೆ ಬೇರೆ ಆಯಾಮದಲ್ಲಿ ಇಮ್ರಾನ್ ಪಾಷಾ ಅವರಿಗೆ ಪ್ರಶ್ನೆ ಮಾಡಿದ್ದಾರೆ. ಪ್ರಶ್ನೆಗಳಿಂದ ಕಕ್ಕಾಬಿಕ್ಕಿಯಾದ ಇಮ್ರಾನ್ ಪಾಷಾ ನಂಗೇನು ಗೊತ್ತಿಲ್ಲ. ದಯವಿಟ್ಟು ನನ್ನ ಬಿಟ್ಟುಬಿಡಿ ಸರ್ ಅಂತ ಮನವಿ ಮಾಡಿಕೊಂಡಿದ್ದಾರೆ ಎಂದು ಮೂಲಗಳಿಂದ ಹೇಳಿಬಂದಿದೆ. ಅಷ್ಟೇ ಅಲ್ಲದೆ ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನೂ ಹತ್ತು ಜನರಿಗೆ ನೋಟಿಸ್ ನೀಡುವ ಸಾಧ್ಯತೆ ಇದ್ದು, ಇಮ್ರಾನ್ ಪಾಷಾ ಅವರನ್ನು ಪೊಲೀಸರು ಶನಿವಾರ ಸತತ ಆರು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ.

  • ಅಮೂಲ್ಯಳನ್ನು ಕಾರ್ಯಕ್ರಮದಿಂದ ಕೈಬಿಟ್ಟ ಆಯೋಜಕರು- ವಿಮಾನ ಟಿಕೆಟ್ ರದ್ದು

    ಅಮೂಲ್ಯಳನ್ನು ಕಾರ್ಯಕ್ರಮದಿಂದ ಕೈಬಿಟ್ಟ ಆಯೋಜಕರು- ವಿಮಾನ ಟಿಕೆಟ್ ರದ್ದು

    ಮಂಗಳೂರು: ನಗರದಲ್ಲಿ ಸಿಎಎ ಹಾಗೂ ಎನ್‌ಆರ್‌ಸಿ ವಿರೋಧಿಸಿ ಫೆಬ್ರವರಿ 25ರಂದು ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಪ್ರಮುಖ ಭಾಷಣಕಾರಳಾಗಿ ಭಾಗವಹಿಸಬೇಕಿದ್ದ ಅಮೂಲ್ಯ ಲಿಯೋನ ಹೆಸರನ್ನು ಕೈಬಿಡಲಾಗಿದೆ. ಅಮೂಲ್ಯಳಿಗೆ ಕಾಯ್ದಿರಿಸಿದ್ದ ವಿಮಾನ ಟಿಕೆಟ್ ಕೂಡ ರದ್ದು ಪಡಿಸಲಾಗಿದೆ ಎಂದು ಪ್ರತಿಭಟನೆಯ ಉಸ್ತುವಾರಿ ವಹಿಸಿಕೊಂಡ ಮಾಜಿ ಮೇಯರ್ ಅಶ್ರಫ್ ಅವರು ತಿಳಿಸಿದ್ದಾರೆ.

    ಮುಸ್ಲಿಂ ಐಕ್ಯತಾ ವೇದಿಕೆಯ ನೇತೃತ್ವದಲ್ಲಿ ಮಂಗಳೂರಿನ ಕುದ್ರೋಳಿ ಟಿಪ್ಪು ಸುಲ್ತಾನ್ ಗಾರ್ಡನ್‍ನಲ್ಲಿ ಈ ಪ್ರತಿಭಟನೆ ನಡೆಯಲಿದೆ. ಪ್ರತಿಭಟನಾ ಸಭೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಪರಪ್ಪನ ಅಗ್ರಹಾರ ಸೇರಿದ ಅಮೂಲ್ಯ ಪ್ರಮುಖ ಭಾಷಣ ಮಾಡಬೇಕಿತ್ತು. ಅದಕ್ಕಾಗಿ ಆಕೆಗೆ ಬೆಂಗಳೂರಿನಿಂದ ಮಂಗಳೂರಿಗೆ ಬರಲು ವಿಮಾನದ ಟಿಕೆಟ್ ಕೂಡ ಬುಕ್ ಮಾಡಿದ್ದೆವು ಎಂದು ಅಶ್ರಫ್ ಹೇಳಿದರು.

    ಅಮೂಲ್ಯ ಬೆಂಗಳೂರಿನಲ್ಲಿ ನಡೆದ ಸಿಎಎ ವಿರೋಧಿ ಸಮಾವೇಶದಲ್ಲಿ ಪಾಕ್ ಪರ ಘೋಷಣೆ ಕೂಗಿ ದೇಶ ದ್ರೋಹ ಎಸಗಿದ್ದಾಳೆ. ಈ ಹಿನ್ನೆಲೆಯಲ್ಲಿ ಅಮೂಲ್ಯ ಹೆಸರು ನಮೂದಿಸಿದ ಮುದ್ರಿಸಿದ್ದ ಪ್ರತಿಭಟನೆಯ ಆಮಂತ್ರಣ ಪತ್ರಿಕೆಯನ್ನು ಹಂಚದೆ, ಆಕೆಯ ಹೆಸರು ಇಲ್ಲದ ಹೊಸ ಆಮಂತ್ರಣ ಪತ್ರಿಕೆ ಮುದ್ರಿಸಲಾಗಿದೆ. ಜೊತೆಗೆ ವಿಮಾನ ಟಿಕೆಟ್ ಕೂಡ ರದ್ದು ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

  • ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿ ಅಮೂಲ್ಯ ಲಿಯೋನಾ ಯಾರು?

    ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿ ಅಮೂಲ್ಯ ಲಿಯೋನಾ ಯಾರು?

    ಬೆಂಗಳೂರು: ಫ್ರೀಡಂ ಪಾರ್ಕಿನಲ್ಲಿ ನಡೆದ ಸಿಎಎ, ಎನ್‌ಆರ್‌ಸಿ ವಿರೋಧಿಸಿ ಸಂಸದ ಅಸಾದುದ್ದಿನ್ ಓವೈಸಿ ಭಾಗಿಯಾಗಿದ್ದ ಸಮಾವೇಶದಲ್ಲಿ ಅಮೂಲ್ಯ ಲಿಯೋನಾ ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ಕೆಂಗಣ್ಣಿಗೆ ಗುರಿಯಾಗಿದ್ದಾಳೆ.

    ಅಮೂಲ್ಯ ಮೂಲತಃ ಚಿಕ್ಕಮಗಳೂರಿನ ಕೊಪ್ಪದ ಹುಡುಗಿ. ಆಕೆಗೆ ಇನ್ನೂ 20 ವಯಸ್ಸು. ಆದರೆ ಎಡಪಂಥೀಯ ಚಿಂತಕಿ ಅಂತ ಕರೆಸಿಕೊಂಡ ಅಮೂಲ್ಯ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತಾ ಶಾ ವಿರುದ್ಧ ಮಾತನಾಡುವುದನ್ನೇ ಕಾಯಕ ಮಾಡಿಕೊಂಡಿದ್ದಾಳೆ. ಸಿಎಎ ವಿರೋಧಿ ಹೋರಾಟದಲ್ಲಿ ಗುರುತಿಸಿಕೊಂಡು ಹೋದಲ್ಲಿ ಬಂದಲ್ಲಿ ಮೈಕ್ ತಾನೇ ಕೇಳಿ ಪಡೆದುಕೊಂಡು ಮಾತನಾಡುತ್ತಿದ್ದಳು. ಅದರಂತೆ ಫ್ರೀಡಂ ಪಾರ್ಕ್ ನಲ್ಲಿ ಇಂದು ನಡೆದ ಸಿಎಎ ವಿರೋಧಿ ಹೋರಾಟದಲ್ಲಿ ಅಮೂಲ್ಯ ಇದ್ದಕ್ಕಿದ್ದಂತೆ ಕಾಣಿಸಿಕೊಂಡು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಿದ್ದಾಳೆ. ಇದನ್ನೂ ಓದಿ: ಬೆಂಗ್ಳೂರಿನ ಓವೈಸಿ ಕಾರ್ಯಕ್ರಮದ ವೇದಿಕೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದ ಯುವತಿ

    ಗೌರಿ ಲಂಕೇಶ್ ಹತ್ಯೆಯಾದಗಲೂ ಹೋರಾಟ ನಡೆಸುತ್ತಿದ್ದ ಅಮೂಲ್ಯ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡುತ್ತಿದ್ದಳು. ಇದರಿಂದ ಕೆಲಕಾಲ ಆಕೆಯ ಖಾತೆ ಕೂಡ ಬ್ಲಾಕ್ ಮಾಡಲಾಗಿತ್ತು. ಧರ್ಮ ಧರ್ಮದ ಮಧ್ಯೆ ಕಿಚ್ಚು ಹಚ್ಚುವುದು ಈಕೆಯ ಕೆಟ್ಟ ಚಾಳಿ. ತಾನು ಬೇಗ ಪ್ರಚಾರಕ್ಕೆ ಬರಬೇಕು ಎನ್ನುವ ಹಪಾಹಪಿ ಇತ್ತು. ಹೀಗಾಗಿ ಇಂತಹ ದೇಶದ್ರೋಹಿ ಹೇಳಿಕೆ ನೀಡುತ್ತಿದ್ದಾಳೆ ಎಂಬ ಆರೋಪ ಸಾರ್ವಜನಿಕರಿಂದ ಬಂದಿದೆ.

    ಮತಾಂತರ:
    ಬೆಂಗಳೂರಿನ ಎನ್‍ಎಂಕೆಆರ್‍ವಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿರುವ ಅಮೂಲ್ಯ ಈಗ ರೆಕಾರ್ಡಿಂಗ್ ಕಂಪನಿಯೊಂದರಲ್ಲಿ ಭಾಷಾಂತರದ ಕೆಲಸ ಮಾಡುತ್ತಿದ್ದಾಳೆ. ದೇಶದ್ರೋಹಿ ಅಮೂಲ್ಯ ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದಾಳೆ. ತಾನು ಮೂಲತಃ ಗೌಡ ಸರಸ್ವತ ಬ್ರಾಹ್ಮಣ (ಜಿಎಸ್‍ಬಿ) ಧರ್ಮಕ್ಕೆ ಸೇರಿದವಳು. ಆದರೆ ತನ್ನ ಕುಟುಂಬಸ್ಥರು ಹಿಂದೂ ಸಂಪ್ರದಾಯದ ಸಹವಾಸದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾದರು ಅಂತ ಅಮೂಲ್ಯ ಹೇಳಿಕೊಂಡಿದ್ದಳು.

    ಅಮೂಲ್ಯ ಅದೆಂಥ ಕಿಲಾಡಿ ಅಂದ್ರೆ ಸುದ್ದಿಯಲ್ಲಿ ಬರಬೇಕು ಎನ್ನುವ ಹಪಾಹಪಿಯುಳ್ಳವಳು. 2020ರ ಫೆಬ್ರವರಿ 16ರಂದೇ ಆಕೆ ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನ ಜಿಂದಾಬಾದ್ ಅಂತ ಬರೆದುಕೊಂಡಿದ್ದಳು. ಇದರಿಂದ ಹಿಗ್ಗಾಮುಗ್ಗಾ ತಪರಾಕಿ ಹಾಕಿಕೊಂಡಿದ್ದಳು.

    ವಿವಾದತ್ಮಕ ಭಾಷಣದಿಂದ ಫೇಮಸ್ ಆಗಿದ್ದ ಅಮೂಲ್ಯ ಘಟಾನುಘಟಿ ನಾಯಕರ ಜೊತೆ ವೇದಿಕೆ ಹಂಚಿಕೊಂಡಿದ್ದಳು. ಅಷ್ಟೇ ಅಲ್ಲದೆ ಉಡುಪಿ, ಮಂಗಳೂರು, ಬೆಂಗಳೂರು ಸೇರಿದಂತೆ ಅನೇಕ ಕಡೆ ಬಾಡಿಗೆ ಭಾಷಣಗಾರ್ತಿಯಾಗಿ ತೆರಳುತ್ತಿದ್ದಳು.

  • ಸಿಎಎ ವಿರೋಧಿಸಿ ಪ್ರತಿಭಟಿಸುವ ಮಾಹಿತಿ: ಮಂಗ್ಳೂರಿನಲ್ಲಿ ಭಾರೀ ಬಂದೋಬಸ್ತ್

    ಸಿಎಎ ವಿರೋಧಿಸಿ ಪ್ರತಿಭಟಿಸುವ ಮಾಹಿತಿ: ಮಂಗ್ಳೂರಿನಲ್ಲಿ ಭಾರೀ ಬಂದೋಬಸ್ತ್

    ಮಂಗಳೂರು: ಪೌರತ್ವ ತಿದ್ದುಪಡೆ ಕಾಯ್ದೆ ವಿರೋಧಿಸಿ ಮುಸ್ಲಿಂ ಸಂಘಟನೆಗಳು ಅನುಮತಿಯಿಲ್ಲದೆ ಇಂದು ಪ್ರತಿಭಟನೆ ನಡೆಸುವ ಮುನ್ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಪೊಲೀಸರು ಭಾರೀ ಬಂದೋಬಸ್ತ್ ನಡೆಸಿದ್ದರು.

    ನಗರದ ನೆಹರೂ ಮೈದಾನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಡೆಸಲಾಗಿತ್ತು. ನಾಲ್ಕು ರ‍್ಯಾಪಿಡ್ ಆ್ಯಕ್ಷನ್ ಪೋರ್ಸ್(ಆರ್‌ಎಎಫ್) ಸೇರಿ 800ಕ್ಕೂ ಅಧಿಕ ಕೆ.ಎಸ್.ಆರ್.ಪಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಆಯುಕ್ತರ ಕಚೇರಿ ಮತ್ತು ಜಿಲ್ಲಾಧಿಕಾರಿ ಕಚೇರಿಗೆ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ನಗರದ ಆಯಕಟ್ಟಿನ ಜಾಗದಲ್ಲಿ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.

    ಮುಸ್ಲಿಂ ಸಂಘಟನೆಗಳ ಕಾರ್ಯಕರ್ತರು ಡಿಸೆಂಬರ್ 19ರಂದು 144 ಸೆಕ್ಷನ್ ಹೊರತಾಗಿಯೂ ಪ್ರತಿಭಟನೆ ನಡೆಸಿದ್ದು ಹಿಂಸಾಚಾರಕ್ಕೆ ಕಾರಣವಾಗಿತ್ತು. ಇದೀಗ ಸಿಎಎ ವಿರೋಧಿಸಿ ಮತ್ತೆ ಪ್ರತಿಭಟನೆಗೆ ಇಂದು ಸಿದ್ಧತೆ ನಡೆಸಲಾಗಿತ್ತು. ಆದರೆ ಪೊಲೀಸ್ ಆಯುಕ್ತರು ತುರ್ತು ಸಂದರ್ಭದಲ್ಲಿ ಸಾರ್ವಜನಿಕ ಸೇವೆಗಳಿಗೆ ಸೇರಿದಂತೆ ಸಾರ್ವಜನಿಕರಿಗೆ ತೊಂದರೆಯಾಗುತ್ತೆ ಎಂದು ಮೂರು ಕಾರಣಗಳನ್ನು ನೀಡಿ ಅನುಮತಿ ನಿರಾಕರಿಸಿದ್ದರು. ಇದು ಮುಸ್ಲಿಂ ಸಂಘಟನೆಗಳ ಸಿಟ್ಟಿಗೆ ಕಾರಣವಾಗಿತ್ತು. ಹೀಗಾಗಿ ಪೊಲೀಸರು ಫುಲ್ ಎಲರ್ಟ್ ಆಗಿದ್ದರು.

    ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಮರ್ ಕುಮಾರ್ ಪಾಂಡೆ ಮಂಗಳೂರಿಗೆ ಆಗಮಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಸೇರಿದಂತೆ ಅಧಿಕಾರಿಗಳ ಜೊತೆ ಸಭೆಯನ್ನು ನಡೆಸಿದ್ದರು. ಬಳಿಕ ಮಾತನಾಡಿ ಡಾ.ಪಿ.ಎಸ್.ಹರ್ಷ ಅವರು, ಮಂಗಳೂರು ಸಂಪೂರ್ಣ ಶಾಂತಿಯುತ ಆಗಿದೆ. ಕೆಲವು ಸಂಘಟನೆಗಳು ಪ್ರತಿಭಟನೆಗೆ ಅನುಮತಿ ಕೇಳಿದ್ದವು. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಅನುಮತಿ ಕೊಟ್ಟಿಲ್ಲ. ಈಗಾಗಲೇ ಮಂಗಳೂರು ನಗರ ಹೊರತುಪಡಿಸಿ ಉಳಿದೆಡೆ ಪ್ರತಿಭಟನೆಗೆ ಅವಕಾಶ ನೀಡಲಾಗಿದೆ. ಇದೇ 12ರಂದು ಸಿಎಎ ಪರ ಸಮಾವೇಶವನ್ನು ನಡೆಸುವುದಾಗಿ ಬಿಜೆಪಿ ಹೇಳಿತ್ತು. ಸದ್ಯ ಆ ಸಮಾವೇಶವನ್ನು ಸಂಘಟಕರು ಮುಂದೂಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

  • ಸಿಎಎ ವಿರೋಧಿ ಹೋರಾಟಗಾರರ ವಿರುದ್ಧ ವಿವಾದಾತ್ಮಕ ಹೇಳಿಕೆ- ಸೋಮಶೇಖರ್ ರೆಡ್ಡಿ ವಿರುದ್ಧ ದೂರು

    ಸಿಎಎ ವಿರೋಧಿ ಹೋರಾಟಗಾರರ ವಿರುದ್ಧ ವಿವಾದಾತ್ಮಕ ಹೇಳಿಕೆ- ಸೋಮಶೇಖರ್ ರೆಡ್ಡಿ ವಿರುದ್ಧ ದೂರು

    ರಾಯಚೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುವವರ ಕುರಿತು ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ನೀಡಿದ್ದ ವಿವಾದಾತ್ಮಕ ಹೇಳಿಕೆ ವಿರುದ್ಧ ರಾಯಚೂರಿನಲ್ಲಿ ದೂರು ನೀಡಲಾಗಿದೆ.

    ಸಂವಿಧಾನಿಕ ಹಕ್ಕು ನಾಗರೀಕ ಸಮಿತಿಯ ಮಾನಸಯ್ಯ ಎಂಬವರು ಸದರ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸಿಎಎ ವಿರೋಧಿ ಹೋರಾಟಗಾರರು ಸೋಮಶೇಖರ್ ರೆಡ್ಡಿ ಹೇಳಿಕೆ ಖಂಡಿಸಿ ಪೊಲೀಸ್ ಠಾಣೆ ಮಟ್ಟಿಲು ಹತ್ತಿದ್ದಾರೆ. ಸಿಎಎ ಪರ ಮೆರವಣಿಗೆಯಲ್ಲಿ ಸೋಮಶೇಖರ್ ರೆಡ್ಡಿ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದರು. ಸಂಸದ ತೇಜಸ್ವಿ ಸೂರ್ಯ ಹೇಳಿಕೆ ಸಮರ್ಥಿಸಿಕೊಂಡು ಸಿಎಎ ವಿರೋಧಿಸುವವರ ವಿರುದ್ದ ಕಿಡಿಕಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದರು.

    ದೂರಿನಲ್ಲೇನಿದೆ?
    ನೀವು ಇರೋದು 17%. ಹಾಗಾಗಿ ನಾವು ಹೇಳಿದಂತೆ ಕೇಳಿಕೊಂಡಿರಿ. ಇಲ್ಲದಿದ್ದರೆ ನಿಮ್ಮನ್ನು ಉಳಿಸಲ್ಲ. ಮಚ್ಚು ಖಡ್ಗ ಹಿಡಿದು ರಣರಂಗ ಮಾಡ್ತೀವಿ. ನಮ್ಮ ಪದ್ಧತಿ ಪ್ರಕಾರ ಇರಬೇಕು. ಹೆಚ್ಚಿಗೆ ನಕರಾ ಮಾಡಿದರೆ ನಿಮ್ಮ ದೇಶಕ್ಕೆ ಕಳುಹಿಸಿಕೊಡಬೇಕಾಗುತ್ತದೆ. ಒಬ್ಬೊಬ್ಬ ಹಿಂದೂ ಒಬ್ಬೊಬ್ಬ ಶಿವಾಜಿ ತರಹ ಆಗಿ ಮಚ್ಚು ಹಿಡಿದುಕೊಂಡರೆ ರಣರಂಗ ಸೃಷ್ಟಿಯಾಗುತ್ತೆ. ಬಳ್ಳಾರಿ ದುರ್ಗಮ್ಮ ದರ್ಶನ ಮಾಡಿಕೊಂಡು ಖಡ್ಗ ಹಿಡಿದುಕೊಂಡರೆ ರಣರಂಗ ಸೃಷ್ಟಿಯಾಗುತ್ತದೆ ಎಂದು ಅಲ್ಲಿ ಸೇರಿದ್ದ ಸಾವಿರಾರು ಜನರನ್ನು ಭಾಷಣದ ಮೂಲಕ ಪ್ರಚೋದಿಸಿದ್ದಾರೆ. ಈ ಮೂಲಕ ಸಮಾಜದಲ್ಲಿ ಭಯೋತ್ಪಾದನೆ ಹರಡುವ ಸಂಘಟಿತ ಸಶಸ್ತ್ರ ದಾಳಿಗೆ ಸೋಮಶೇಕರರೆಡ್ಡಿ ಕರೆ ನೀಡಿದ್ದಾರೆ. ಅವರ ಮೇಲೆ ಕಾನೂನು ರೀತ್ಯ ಕ್ರಮ ಕೈಗೊಂಡು, ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು ಅಂತ ದೂರಿನಲ್ಲಿ ಮನವಿ ಮಾಡಲಾಗಿದೆ.

    ರಾಯಚೂರಿನ ಸದರಬಜಾರ್ ಠಾಣೆ ಪೊಲೀಸರು ದೂರನ್ನ ಸ್ವೀಕರಿಸಿದ್ದು, ಇನ್ನೂ ಎಫ್ ಐ ಆರ್ ದಾಖಲಾಗಿಲ್ಲ.

  • ಸಾಲು ಸಾಲು ಪ್ರತಿಭಟನೆ, ಬಂದೋಬಸ್ತಿಗೆ ಬೆಂಗ್ಳೂರು ಪೊಲೀಸರು ಹೈರಾಣ

    ಸಾಲು ಸಾಲು ಪ್ರತಿಭಟನೆ, ಬಂದೋಬಸ್ತಿಗೆ ಬೆಂಗ್ಳೂರು ಪೊಲೀಸರು ಹೈರಾಣ

    ಬೆಂಗಳೂರು: ನಗರದಲ್ಲಿ ನಡೆಯುತ್ತಿರುವ ನಿರಂತರ ಪ್ರತಿಭಟನೆಗಳು ಹಾಗೂ ಬಂದೋಬಸ್ತ್ ಒತ್ತಡದಿಂದಾಗಿ ಬೆಂಗಳೂರು ಪೊಲೀಸರು ಹೈರಾಣಾಗಿದ್ದಾರೆ. ಕಳೆದ ಐದು ದಿನದಿಂದ ಹಗಲಿರುಳು ಕೆಲಸ ಮಾಡಿ ರೋಸಿ ಹೋಗಿದ್ದಾರೆ.

    ಡಿ.30 ರಿಂದ ಇಲ್ಲಿಯ ತನಕ ನಿರಂತರವಾಗಿ ಕೆಲಸ ಮಾಡುತ್ತಿರುವ ಪೊಲೀಸರು ದೈಹಿಕವಾಗಿ, ಮಾನಸಿಕವಾಗಿ ಹಿಂಸೆಗೆ ಒಳಗಾಗಿದ್ದಾರೆ. ಡಿಸೆಂಬರ್ 30 ಮತ್ತು 31 ರಂದು ವರ್ಷದ ಅಂತಿಮ ದಿನದ ಸಂಭ್ರಮಕ್ಕೆ ನಗರದಾದ್ಯಂತ ಬಿಗಿ ಬಂದೋಬಸ್ತ್ ನೀಡುವ ಕಾರ್ಯದಲ್ಲಿ ತೊಡಗಿದ್ದರು. ಜನವರಿ 1 ರಿಂದ 3ರವರೆಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬೆಂಗಳೂರು ಭೇಟಿ ಇರುವುದರಿಂದ ಸೂಕ್ತ ಬಂದೋಬಸ್ತ್ ನೀಡುತ್ತಿದ್ದಾರೆ.

    ಇಂದಿನಿಂದ ನಗರದಲ್ಲಿ ಮತ್ತೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಪ್ರಾರಂಭವಾಗಿದೆ. ನಿನ್ನೆ ಸಂಜೆಯೇ ಫ್ರೀಡಂಪಾರ್ಕ್ ಗೆ ವಿವಿಧ ಜಿಲ್ಲೆಗಳಿಂದ ಆಶಾ ಕಾರ್ಯಕರ್ತರು ಆಗಮಿಸಿದ್ದು, ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ನಗರದಲ್ಲಿ ಸಿಎಎ ವಿರೋಧಿ ಪ್ರತಿಭಟನೆಯೂ ನಡೆಯುತ್ತಿರುವುದರಿಂದ ಬೆಂಗಳೂರಿನ ಪೊಲೀಸರು ಹೈರಾಣಗೊಂಡಿದ್ದಾರೆ.

  • ಸಿಎಎ ವಿರೋಧಿಸಿ ಮಂಗ್ಳೂರಿನಲ್ಲಿ ಜ.4ರಂದು ನಿಗದಿಯಾಗಿದ್ದ ಪ್ರತಿಭಟನೆ ರದ್ದು

    ಸಿಎಎ ವಿರೋಧಿಸಿ ಮಂಗ್ಳೂರಿನಲ್ಲಿ ಜ.4ರಂದು ನಿಗದಿಯಾಗಿದ್ದ ಪ್ರತಿಭಟನೆ ರದ್ದು

    – ಮುಸ್ಲಿಂ ಸೆಂಟ್ರಲ್ ಕಮಿಟಿ ನಿರ್ಧಾರ

    ಮಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ಜನವರಿ 4ರಂದು ನಿಗದಿಯಾಗಿದ್ದ ಪ್ರತಿಭಟನೆಯನ್ನು ಮುಸ್ಲಿಂ ಸೆಂಟ್ರಲ್ ಕಮಿಟಿ ರದ್ದುಗೊಳಿಸಿ ನಿರ್ಧಾರ ಪ್ರಕಟಿಸಿದೆ.

    ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಕಳೆದ ಡಿಸೆಂಬರ್ 19ರಂದು ನಡೆದಿದ್ದ ಪ್ರತಿಭಟನೆ ಹಿಂಸಾಚಾರ ರೂಪ ಪಡೆದು ಬಳಿಕ ಗೋಲಿಬಾರ್ ನಡೆದು ಇಬ್ಬರು ಸಾವನ್ನಪ್ಪಿದ್ದರು. ಈ ಘಟನೆಯ ಬಳಿಕ ಪೌರತ್ವ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟಿಸಲು ಮುಸ್ಲಿಂ ಸೆಂಟ್ರಲ್ ಕಮಿಟಿ ನೇತೃತ್ವದಲ್ಲಿ ಪ್ರತಿಭಟನಾ ಸಭೆ ಆಯೋಜನೆಗೊಂಡಿದ್ದರೂ, ಸೆಕ್ಷನ್ ಇರುವ ಹಿನ್ನಲೆಯಲ್ಲಿ ಸಾಧ್ಯವಾಗಿಲ್ಲ. ಹೀಗಾಗಿ ಜನವರಿ 4ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ಸುಮಾರು ಒಂದು ಲಕ್ಷ ಜನರನ್ನು ಸೇರಿಸಿ ಬೃಹತ್ ಪ್ರತಿಭಟನಾ ಸಭೆ ನಡೆಸಲು ಪೊಲೀಸರಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿ ಅನುಮತಿ ಕೇಳಿತ್ತು.

    ಭದ್ರತೆಯ ದೃಷ್ಟಿಯಿಂದ ನೆಹರೂ ಮೈದಾನದಲ್ಲಿ ಪ್ರತಿಭಟನೆ ನಡೆಸಲು ಪೊಲೀಸ್ ಕಮೀಷನರ್ ಅನುಮತಿ ನಿರಾಕರಿಸಿದ್ದು, ನಗರದಿಂದ ಹೊರಗೆ ಎಲ್ಲಿ ಬೇಕಿದರೂ ಅನುಮತಿ ನೀಡುವುದಾಗಿ ಹೇಳಿದ್ದರು. ಆದರೆ ಮುಸ್ಲಿಂ ಸೆಂಟ್ರಲ್ ಕಮಿಟಿ ಪ್ರತಿಭಟನೆ ನಡೆಸುವುದಾದರೆ ನಗರದ ನೆಹರೂ ಮೈದಾನದಲ್ಲೇ. ಹೀಗಾಗಿ ಅನುಮತಿ ನೀಡಬೇಕೆಂದು ಪಟ್ಟು ಹಿಡಿದಿರುವುದರಿಂದ ಮಂಗಳೂರು ಪೊಲೀಸ್ ಆಯುಕ್ತ ಡಾ.ಪಿ.ಎಸ್ ಹರ್ಷ ಸದ್ಯದ ಮಟ್ಟಿಗೆ ನೆಹರೂ ಮೈದಾನದಲ್ಲಿ ಪ್ರತಿಭಟಿಸಲು ಅನುಮತಿ ನೀಡುವುದಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ 28 ಮುಸ್ಲಿಂ ಸಂಘಟನೆಗಳನ್ನು ಹೊಂದಿರುವ ದಕ್ಷಿಣ ಕನ್ನಡ- ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿ ಪತ್ರಿಕಾಗೋಷ್ಠಿ ನಡೆಸಿ ಪೊಲೀಸ್ ಅನುಮತಿ ನೀಡದ ಹಿನ್ನೆಲೆಯಲ್ಲಿ ಜನವರಿ 4ರಂದು ನಡೆಯಬೇಕಿದ್ದ ಬೃಹತ್ ಪ್ರತಿಭಟನಾ ಸಭೆಯನ್ನು ರದ್ದುಗೊಳಿಸಿದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಕೆ.ಎಸ್.ಮಹಮ್ಮದ್ ಮಸೂದ್ ಅವರು, ಮುಂದಿನ ದಿನದಲ್ಲಿ ಮತ್ತೆ ಅನುಮತಿ ಪಡೆದು ನೆಹರೂ ಮೈದಾನದಲ್ಲೇ ಬೃಹತ್ ಪ್ರತಿಭಟನೆ ನಡೆಸುತ್ತೇವೆ. ನಮ್ಮ ಸಂವಿಧಾನಾತ್ಮಕ ಹಕ್ಕಿನಂತೆ ನಮಗೆ ಬೇಕಾದ ಸ್ಥಳದಲ್ಲೇ ಪ್ರತಿಭಟನೆ ಮಾಡುತ್ತೇವೆ ಪೊಲೀಸರು ಯಾವಾಗ ಅನುಮತಿ ನೀಡುತ್ತಾರೋ ಅಂದೇ ಬೃಹತ್ ಪ್ರತಿಭಟನೆಯನ್ನು ಎಲ್ಲಾ ಮುಸ್ಲಿಂ ಸಂಘಟನೆಗಳು ಸೇರಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

    ಮಂಗಳೂರಿನಲ್ಲಿ ನಡೆದ ಹಿಂಸಾಚಾರ, ಗೋಲಿಬಾರ್ ಇದೇ ನೆಹರೂ ಮೈದಾನದ ಪಕ್ಕದಲ್ಲೇ ನಡೆದಿರುವುದು ಹಾಗೂ ಪೊಲೀಸ್ ಆಯುಕ್ತರ ಹಾಗೂ ಜಿಲ್ಲಾಧಿಕಾರಿ ಕಚೇರಿ ನೆಹರೂ ಮೈದಾನದ ಮುಂಭಾಗದಲ್ಲೇ ಇರುವುದರಿಂದ ಪೊಲೀಸರು ಭದ್ರತಾ ದೃಷ್ಟಿಯಿಂದ ಜನವರಿ 4ರ ಪ್ರತಿಭಟನೆಗೆ ನೆಹರೂ ಮೈದಾನದಲ್ಲಿ ಅನುಮತಿ ನೀಡಿಲ್ಲ.

  • ಪಿಎಫ್‍ಐ ಸಂಘಟನೆ ನಿಷೇಧಿಸುವಂತೆ ಗೃಹ ಸಚಿವಾಲಯಕ್ಕೆ ಪೊಲೀಸರಿಂದ ಪತ್ರ

    ಪಿಎಫ್‍ಐ ಸಂಘಟನೆ ನಿಷೇಧಿಸುವಂತೆ ಗೃಹ ಸಚಿವಾಲಯಕ್ಕೆ ಪೊಲೀಸರಿಂದ ಪತ್ರ

    – ಹಿಂಸಾಚಾರದಲ್ಲಿ ಪ್ರಮುಖ ಪಾತ್ರದ ಆರೋಪ
    – ಸಾಮಾಜಿಕ ಜಾಲತಾಣಗಳಿಂದ ಪ್ರಚೋದನೆ

    ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‍ಐ) ಸಂಘಟನೆಯನ್ನು ನಿಷೇಧಿಸುವಂತೆ ಉತ್ತರ ಪ್ರದೇಶ ಪೊಲೀಸ್ ಇಲಾಖೆ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದೆ.

    ಉತ್ತರ ಪ್ರದೇಶದಲ್ಲಿ ನಡೆದ ಭಾರೀ ಹಿಂಸಾಚಾದಲ್ಲಿ ಸಂಘಟನೆ ಪ್ರಮುಖ ಪಾತ್ರ ವಹಿಸಿದೆ ಎಂದು ಪೊಲೀಸರು ಆರೋಪಿಸಿದ್ದು, ಇದಕ್ಕೆ ಸೂಕ್ತ ದಾಖಲೆಗಳನ್ನು ಸಹ ಕೇಂದ್ರ ಗೃಹ ಸಚಿವಾಲಯಕ್ಕೆ ಸಲ್ಲಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಪಿಎಫ್‍ಐ ಸಂಘಟನೆಯ ಕಾರ್ಯಕರ್ತರು ಹಿಂಸಾಚಾರ ನಡೆಸಿದ್ದಾರೆ. ಈ ಮೂಲಕ ಯುಪಿಯ ಹಿಂಸಾಚಾರದಲ್ಲಿ ಪ್ರಮುಖ ಪಾತ್ರವಹಿಸಿದ್ದು, ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿಗೆ ಕಾರಣರಾಗಿದ್ದಾರೆ ಎಂದು ಗೃಹ ಸಚಿವಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಅಲ್ಲದೆ ಯುಪಿ ರಾಜಧಾನಿ ಲಕ್ನೋದಲ್ಲಿ ನಡೆದ ಹಿಂಸಾಚಾರದ ಮಾಸ್ಟರ್ ಮೈಂಡ್ ಪಿಎಫ್‍ಐ ಸಂಘಟನೆಯಾಗಿದೆ. ಸಿಎಎ ಕುರಿತು ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರನ್ನು ಹಿಂಸಾಚಾರಕ್ಕೆ ಪ್ರಚೋದಿಸಿದೆ. ಈ ಕುರಿತು ಪಿಎಫ್‍ಐ ಮುಖ್ಯಸ್ಥ ಹಾಗೂ ಖಜಾಂಚಿ ಹಿಂಸಾಚಾರದಲ್ಲಿ ತಮ್ಮ ಪಾತ್ರವಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪಿಎಫ್‍ಐ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ್ದಾರೆ. ಅಲ್ಲದೆ ಸಿಕ್ಕ ಸಿಕ್ಕ ಕಡೆ ಬೆಂಕಿ ಹಚ್ಚುವಂತೆ ಭಾಗವಹಿಸಿದ್ದ ಪ್ರತಿಭಟನಾಕಾರರಿಗೆ ಪ್ರಚೋದನೆ ನೀಡಿರುವುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ. ಹೀಗಾಗಿ ಯುಪಿ ಪೊಲೀಸರು ಸಿಎಎ ಪ್ರತಿಭಟನೆ ವೇಳೆ ಹಿಂಸಾಚಾರದಲ್ಲಿ ತೊಡಗಿದ ವಾಸಿಮ್, ನದೀಮ್ ಹಾಗೂ ಅಶ್ಫಾಕ್ ಮೂವರು ಪಿಎಫ್‍ಐ ಸದಸ್ಯರನ್ನು ಬಂಧಿಸಿದ್ದಾರೆ. ವಾಸಿಮ್ ಯುಪಿ ಪಿಎಫ್‍ಐ ಮುಖ್ಯಸ್ಥನಾಗಿದ್ದು, ಅಶ್ಫಾಕ್ ಖಜಾಂಚಿಯಾಗಿದ್ದಾನೆ. ನದೀಮ್ ಸಂಘಟನೆಯ ಕಾರ್ಯಕರ್ತನಾಗಿದ್ದಾನೆ.

    ತನಿಖೆ ವೇಳೆ ಪೊಲೀಸರು ಈ ಮೂವರಿಂದ ಸಿಎಎ ಪ್ರತಿಭಟನೆಗೆ ಸಂಬಂಧಿಸಿದ ಭಿತ್ತಿ ಪತ್ರಗಳು, ಬಾವುಟಗಳು, ಬರವಣಿಗೆ, ಪೋಸ್ಟರ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ನದೀಮ್ ಹಾಗೂ ಅಶ್ಫಾಕ್ ಅವರು ಈ ಕುರಿತು ತಪ್ಪೊಪ್ಪಿಕೊಂಡಿದ್ದು, ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಸಿಎಎ ವಿರುದ್ಧದ ಪ್ರತಿಭಟನೆಯ ಸಂದೇಶ ಕಳುಹಿಸುತ್ತಿದ್ದೆವು. ವಾಟ್ಸಪ್, ಟೆಲಿಗ್ರಾಂ ಬಳಸಿ ವಿಡಿಯೋ ಹಾಗೂ ಬರವಣಿಗೆ ಮೂಲಕ ಮಾಹಿತಿ ಹಂಚುತ್ತಿದ್ದೆವು ಎಂದು ತಿಳಿಸಿದ್ದಾರೆ.

    ಯುಪಿಯ ಶಾಮ್ಲಿಯಲ್ಲಿ ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ತೊಡಗಿದ್ದ 14 ಪಿಎಫ್‍ಐ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಮೀರತ್‍ನಲ್ಲಿ ಸಹ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಸಿಎಎ ವಿರುದ್ಧ ನಡೆದ ಪ್ರತಿಭಟನೆ ವೇಳೆ ಒಟ್ಟು 20 ಜನ ಸಾವನ್ನಪ್ಪಿದ್ದು, ಇದರಲ್ಲಿ ಬಹುತೇಕರು ಉತ್ತರ ಪ್ರದೇಶದವರಾಗಿದ್ದಾರೆ. ಉತ್ತರ ಪ್ರದೇಶದ ಡಿಜಿಪಿ ಒ.ಪಿ.ಸಿಂಗ್ ಅವರು ಈ ಕುರಿತು ಮಂಗಳವಾರ ಪ್ರತಿಕ್ರಿಯಿಸಿ, ಪಿಎಫ್‍ಐ ಸಂಘಟನೆಯನ್ನು ನಿಷೇಧಿಸುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದೇವೆ ಎಂದು ಖಚಿತಪಡಿಸಿದ್ದಾರೆ.

    ಈ ಮಧ್ಯೆ ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಅವರು ಪ್ರತಿಕ್ರಿಯಿಸಿ, ಪೊಲೀಸರು ಪಿಎಫ್‍ಐ ಬ್ಯಾನ್ ಮಾಡುವ ಕುರಿತು ದಾಖಲೆಗಳನ್ನು ಸಲ್ಲಿಸಿದ್ದು, ಅವುಗಳನ್ನು ಆಧರಿಸಿ ಕೇಂದ್ರ ಗೃಹ ಸಚಿವಾಲಯ ನಿರ್ಧಾರ ಕೈಗೊಳ್ಳಲಿದೆ. ಹಿಂಸಾಚಾರದಲ್ಲಿ ಪಿಎಫ್‍ಐ ಪಾತ್ರವಿರುವುದು ಕಂಡು ಬಂದಿದೆ. ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಗೃಹ ಸಚಿವಾಲಯ ನಿರ್ಧಾರ ಕೈಗೊಳ್ಳಲಿದೆ. ಸಂಘಟನೆ ಕುರಿತು ಹಲವು ಆರೋಪಗಳಿದ್ದು, ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾದೊಂದಿಗೆ ಸಂಪರ್ಕ ಹೊಂದಿತ್ತು ಎಂಬ ಆರೋಪ ಸಹ ಇದೆ ಎಂದು ತಿಳಿಸಿದ್ದಾರೆ.

  • ಬಡವ ಪಂಚರ್ ಹಾಕ್ತಾನೆ, ಕಸ ಗುಡಿಸ್ತಾನೆ – ಸೂರ್ಯ ವಿರುದ್ಧ ಡಿಕೆಶಿ ಕಿಡಿ

    ಬಡವ ಪಂಚರ್ ಹಾಕ್ತಾನೆ, ಕಸ ಗುಡಿಸ್ತಾನೆ – ಸೂರ್ಯ ವಿರುದ್ಧ ಡಿಕೆಶಿ ಕಿಡಿ

    – ಬಿಜೆಪಿಯಿಂದ ಬಡವರು, ದಲಿತರಿಗೆ ಅವಮಾನ

    ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಭಾನುವಾರ ನಗರ ಟೌನ್‍ಹಾಲ್ ಎದುರು ಸಿಎಎ ಪರ ಮಾತನಾಡಿದ್ದಕ್ಕೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ತೇಜಸ್ವಿ ಸೂರ್ಯಗೆ ದಲಿತರು, ಬಡವರ ಬಗ್ಗೆ ಕಾಳಜಿ ಇಲ್ಲ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಕೆಂಡಾಮಂಡಲರಾಗಿದ್ದಾರೆ.

    ತೇಜಸ್ವಿ ಸೂರ್ಯ ಅವರ ಹೇಳಿಕೆ ವಿರುದ್ಧ ಕಿಡಿಕಾರಿರುವ ಡಿಕೆ ಶಿವಕುಮಾರ್ ಅವರು, ಬಡವ ಪಂಚರ್ ಹಾಕುತ್ತಿದ್ದಾನೆ, ಕಸ ಗುಡಿಸುತ್ತಿದ್ದಾನೆ, ಕ್ಲೀನಿಂಗ್ ಮಾಡುತ್ತಿದ್ದಾನೆ. ಆದರೆ ಕಳ್ಳತನ ಮಾಡಿಲ್ಲ, ದೇಶದ್ರೋಹ ಮಾಡಿಲ್ಲ. ನೀವು ಅವರಿಗೆ ವಿದ್ಯಾಭ್ಯಾಸ ಕೊಡಿ, ಕೆಲಸ ಕೊಡಿ. ಯಾವುದೇ ಕಾರಣಕ್ಕೂ ಸ್ವಾಭಿಮಾನವನ್ನು ಕೆಣಕಲು ಹೋಗಬೇಡಿ ಎಂದು ಎಚ್ಚರಿಕೆ ನೀಡಿದರು.

    ಭಾಷಣ ಮಾಡುವವರು ಬಂದು ಕಸ ಕೂಡಿಸುವುದಿಲ್ಲ. ಪಂಚರ್ ಹಾಕುವವ ಇದ್ದರೇನೆ ಜನ ಸಾಮಾನ್ಯರು ಕೆಲಸ ಮಾಡಲು ಸಾಧ್ಯ. ಕಸ ಗೂಡಿಸುವವ, ಪಂಚರ್ ಹಾಕುವವ ನಿರುದ್ಯೋಗಿಯಾಗದೆ ಕೆಲಸ ಮಾಡುತ್ತಿದ್ದಾರೆ. ಮಾನವೀಯ ಕೆಲಸ ಮಾಡುವವರು ಇಲ್ಲದಿದ್ದರೆ ಜನರು ಬದುಕಲು ಸಾಧ್ಯವಿಲ್ಲ. ನೀವೂ ಅವರಿಗೆ ಶಿಕ್ಷಣ ನೀಡಲಿಲ್ಲ, ಸರಿಯಾದ ಉದ್ಯೋಗ ನೀಡಿಲ್ಲ ಎಂದು ತೇಜಸ್ವಿ ಸೂರ್ಯ ಅವರ ಹೆಸರನ್ನು ಪ್ರಸ್ತಾಪ ಮಾಡದೆ ಕಿಡಿಕಾರಿದರು.

    ಟೌನ್‍ಹಾಲ್ ಎದುರು ನಡೆದ ಸಿಎಎ ಪರ ಪ್ರತಿಭಟನೆಯಲ್ಲಿ ಮಾತನಾಡಿದ್ದ ಸಂಸದ ತೇಜಸ್ವಿ ಸೂರ್ಯ, ಇಲ್ಲಿ ಸೇರಿರುವವರೆಲ್ಲರೂ ಈ ಕಾನೂನು ಏನು..? ಈ ಕಾನೂನಿಂದ ದೇಶಕ್ಕೆ ಏನು ಸಹಾಯ ಆಗುತ್ತೆ? ಈ ಕಾನೂನು ಜಾರಿಯಾಗುವುದರಿಂದ ದೇಶದ ಒಳಿತು ಹೇಗೆ ಆಗುತ್ತೆ? ಅಂತ ತಿಳಿದುಕೊಂಡಿರುವ ವಿದ್ಯಾಂತರಾಗಿದ್ದಾರೆ.

    ಪ್ರತಿಭಟನೆ ನಡೆಸುತ್ತಿರುವ ಪ್ರತಿಯೊಬ್ಬರು ಬೆಂಗಳೂರಿನ ಐಟಿ ಸೆಕ್ಟರ್ ನಲ್ಲಿ, ಬಿಟಿ ಸೆಕ್ಟರ್ ನಲ್ಲಿ ಕೆಲಸ ಮಾಡುತ್ತಿರುವಂತಹ, ದೇಶದ ಆರ್ಥಿಕತೆಗೆ ಕೊಡುಗೆ ನೀಡುವಂತಹ, ವಕೀಲರು ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿರುವವರು, ಸಾಮಾನ್ಯ ಕೆಲಸ ಮಾಡುತ್ತಿರುವ ಆಟೋ ಚಾಲಕರು ಎಲ್ಲರೂ ಸೇರಿದ್ದಾರೆ. ಎದೆ ಸೀಳಿದ್ರೆ ಎರಡು ಅಕ್ಷರ ಇರಲ್ಲ, ಬರೀ ಪಂಕಚ್ಚರ್ ಅಂಗಡಿ ಹಾಕಿಕೊಂಡಿವವರು ಇಲ್ಲಿ ಸೇರಿಲ್ಲ ಎಂದು ವ್ಯಂಗ್ಯವಾಡಿದ್ದರು.