Tag: cab

  • ಕ್ಯಾಬ್ ಬುಕ್ ಮಾಡಿದ್ದ ಯುವತಿಗೆ ಲೈಂಗಿಕ ಕಿರುಕುಳ – ಕಮ್ಮನಹಳ್ಳಿಯಲ್ಲಿ ಕಾಮುಕರ ಅಟ್ಟಹಾಸ!

    ಕ್ಯಾಬ್ ಬುಕ್ ಮಾಡಿದ್ದ ಯುವತಿಗೆ ಲೈಂಗಿಕ ಕಿರುಕುಳ – ಕಮ್ಮನಹಳ್ಳಿಯಲ್ಲಿ ಕಾಮುಕರ ಅಟ್ಟಹಾಸ!

    ಬೆಂಗಳೂರು: ಕ್ಯಾಬ್ ಬುಕ್ ಮಾಡಿದ್ದ ಯುವತಿಯ ಮೇಲೆ ಇಬ್ಬರು ಕಾಮುಕರು ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ (Bengaluru) ಕಮ್ಮನಹಳ್ಳಿಯಲ್ಲಿ (Kammanahalli)) ನಡೆದಿದೆ.

    ಜ.27ರಂದು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಯುವತಿಯೊಬ್ಬಳು ಕಮ್ಮನಹಳ್ಳಿಯಿಂದ ವೈಟ್‌ಫೀಲ್ಡ್‌ಗೆ ಉಬರ್ ಕ್ಯಾಬ್ ಬುಕ್ ಮಾಡಿದ್ದಳು. ಕ್ಯಾಬ್ ಬರುತ್ತಿದ್ದಂತೆ ಯುವತಿ ಕಾರಿನೊಳಗೆ ಕುಳಿತುಕೊಂಡಿದ್ದಾಳೆ. ಇದೇ ವೇಳೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬಂದು ಕಾರಿನೊಳಗೆ ಕೂತಿದ್ದಾರೆ.ಇದನ್ನೂ ಓದಿ: ವಿಮಾನ – ಹೆಲಿಕಾಪ್ಟರ್ ದುರಂತ; ಎಲ್ಲಾ 64 ಮಂದಿ ದುರ್ಮರಣ, 28 ಮೃತದೇಹ ಪತ್ತೆ

    ಆಗ ಭಯಗೊಂಡ ಯುವತಿ ಕಾರಿನಿಂದ ಇಳಿದು ಓಡಿದ್ದಾಳೆ. ಆಕೆಯ ಬೆನ್ನಟ್ಟಿ ಹೋದ ಕಾಮುಕರು ಕುತ್ತಿಗೆ ಹಿಡಿದು ನೆಲಕ್ಕೆ ಬೀಳಿಸಿದ್ದಾರೆ. ಮತ್ತೊಬ್ಬ ಬಟ್ಟೆ ಬಿಚ್ಚಲು ಯತ್ನಿಸಿ, ಯುವತಿಯ ಎದೆಭಾಗ ಮುಟ್ಟಿ ಕಿರುಕುಳ ನೀಡಿದ್ದಾನೆ. ಯುವತಿ ಜೋರಾಗಿ ಕಿರುಚಿಕೊಳ್ಳುತ್ತಿದಂತೆ ಅಕ್ಕಪಕ್ಕದಲ್ಲಿದ್ದ ಜನರು ಬಂದಿದ್ದಾರೆ. ಬರುವಷ್ಟರಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ಪರಾರಿಯಾಗಿದ್ದಾರೆ.

    ಘಟನೆ ಬಗ್ಗೆ ಬಣಸವಾಡಿ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದು, ಇಬ್ಬರು ಯುವಕರ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾಮುಕರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.ಇದನ್ನೂ ಓದಿ: Mahakumbh 2025 | ಕಾಲ್ತುಳಿತಕ್ಕೆ ಬಲಿಯಾದವರ ಮೃತದೇಹ ಬೆಳಗಾವಿಗೆ – ಕುಟುಂಬಸ್ಥರಲ್ಲಿ ಆಕ್ರಂದನ

  • ಬೆಂಗ್ಳೂರು ವಿಮಾನ ನಿಲ್ದಾಣದಲ್ಲಿ ಕ್ಯಾಬ್, ಟ್ಯಾಕ್ಸಿಗಳಿಗೆ ಪ್ರವೇಶ ದರ ನಿಗದಿ

    ಬೆಂಗ್ಳೂರು ವಿಮಾನ ನಿಲ್ದಾಣದಲ್ಲಿ ಕ್ಯಾಬ್, ಟ್ಯಾಕ್ಸಿಗಳಿಗೆ ಪ್ರವೇಶ ದರ ನಿಗದಿ

    – ಭಾರೀ ವಿರೋಧ ವ್ಯಕ್ತವಾಗ್ತಿದ್ದಂತೆ ತಾತ್ಕಾಲಿಕ ಬ್ರೇಕ್

    ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport, Bengaluru) ಕ್ಯಾಬ್ ಮತ್ತು ಟ್ಯಾಕ್ಸಿಗಳಿಗೆ ಪ್ರವೇಶ ದರ ನಿಗದಿ ಮಾಡಿದೆ. ಏರ್‌ಪೋರ್ಟ್ ಆಡಳಿತ ಮಂಡಳಿಯ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ ಚಾಲಕರು ಪ್ರತಿಭಟನೆ ನಡೆಸಿದ್ದಾರೆ.

    ಹೌದು. ಪ್ರಯಾಣಿಕರನ್ನ ಪಿಕಪ್ ಮಾಡಲು ಪ್ರವೇಶ ದರ 07 ನಿಮಿಷಕ್ಕೆ 150 ರೂ. ಪಾವತಿಸಬೇಕು. ಇನ್ನು 07 ನಿಮಿಷಕ್ಕಿಂತ ಹೆಚ್ಚು ಕಾಲ ನಿಂತರೆ 300 ರೂ. ಪಾವತಿ ಮಾಡಬೇಕು. ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿ ಕಳೆದ ಭಾನುವಾರ ಈ ಹೊಸ ನಿಯಮವನ್ನ ಜಾರಿ ಮಾಡಿತ್ತು. ಇದನ್ನೂ ಓದಿ: ಜಾಮೀನು ಸಿಕ್ಕರೂ ರೇವಣ್ಣಗೆ ತಪ್ಪಿಲ್ಲ ಸಂಕಷ್ಟ- ಹೈಕೋರ್ಟ್ ಮೆಟ್ಟಿಲೇರಿದ ಎಸ್‍ಐಟಿ

    ಆಡಳಿತ ಮಂಡಳಿಯ ದರ ನಿಗದಿ ಕ್ರಮಕ್ಕೆ ಯಲ್ಲೋ ಹಾಗೂ ವೈಟ್ ಬೋರ್ಡ್ ಚಾಲಕರು ಕಂಗಾಲಾಗಿದ್ದರು. ಅಲ್ಲದೇ ದರ ನಿಗದಿ ವಿರೋಧಿಸಿ ಕ್ಯಾಬ್ ಮತ್ತು ಟ್ಯಾಕ್ಸಿ ಚಾಲಕರು ಸೋಮವಾರ ಪ್ರತಿಭಟನೆ ಮಾಡುವ ಮೂಲಕ ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಟ್ತಾಕ್ಸಿ ಮತ್ತು ಕ್ಯಾಬ್ ಚಾಲಕರು (Taxi anf Cab Drivers) ನಿನ್ನೆ ಪ್ರತಿಭಟನೆ ಮಾಡಿದ್ದ ಪರಿಣಾಮ ದರ ನಿಗದಿ ಸಂಗ್ರಹಣೆಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕಲಾಗಿದೆ.

    ಇತ್ತ ಸದ್ಯಕ್ಕೆ ಬ್ರೇಕ್ ಹಾಕಿರುವ ಆಡಳಿತ ಮಂಡಳಿಯವರು ಮತ್ತೆ ಶುರು ಮಾಡುತ್ತಾರೆ ಎಂದು ಏರ್‌ಪೋರ್ಟ್ ಟ್ಯಾಕ್ಸಿ ಚಾಲಕರು ಇಂದು ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರನ್ನ ಭೇಟಿ ಮಾಡಲು ಮುಂದಾಗಿದ್ದಾರೆ.

  • ಹೊರ ರಾಜ್ಯದ ನೋಂದಣಿ ಕ್ಯಾಬ್‌ಗಳಿಗಿಲ್ಲ ದೆಹಲಿ ಪ್ರವೇಶ

    ಹೊರ ರಾಜ್ಯದ ನೋಂದಣಿ ಕ್ಯಾಬ್‌ಗಳಿಗಿಲ್ಲ ದೆಹಲಿ ಪ್ರವೇಶ

    ನವದೆಹಲಿ: ಇತರ ರಾಜ್ಯಗಳಲ್ಲಿ ನೋಂದಾಯಿಸಲಾದ (Registration) ಅಪ್ಲಿಕೇಶನ್ ಆಧಾರಿತ ಕ್ಯಾಬ್‌ಗಳ (Cab) ಪ್ರವೇಶವನ್ನು ನಿಷೇಧಿಸುವುದಾಗಿ ಬುಧವಾರ ದೆಹಲಿ ಸರ್ಕಾರ ಘೋಷಿಸಿದೆ. ದೆಹಲಿ ಸಾರಿಗೆ ಇಲಾಖೆಯಿಂದ ನಿಷೇಧವು ಯಾವಾಗ ಪ್ರಾರಂಭವಾಗುತ್ತದೆ ಎಂಬುದರ ಕುರಿತು ಪ್ರತ್ಯೇಕ ಆದೇಶವನ್ನು ಹೊರಡಿಸಲಾಗುತ್ತದೆ ಎಂದು ಹೇಳಿದೆ.

    ಮಾಲಿನ್ಯಕ್ಕೆ (Pollution) ಸಂಬಂಧಿಸಿದಂತೆ ಸುಪ್ರೀಂಕೋರ್ಟ್ (Supreme Court) ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಬಳಿಕ ಈ ಆದೇಶ ಹೊರಡಿಸಿದೆ. ದೆಹಲಿ ಸರ್ಕಾರದ ಆದೇಶದ ಪ್ರಕಾರ, ದೆಹಲಿಯ ನೋಂದಣಿ ಸಂಖ್ಯೆಯನ್ನು ಹೊಂದಿರುವ ಕ್ಯಾಬ್‌ಗಳನ್ನು ಮಾತ್ರ ನಗರದೊಳಗೆ ಓಡಿಸಲು ಅನುಮತಿಸಲಾಗುವುದು. ಇದನ್ನೂ ಓದಿ: ಮಹಿಳೆಯರ ಕುರಿತು ವಿವಾದಿತ ಹೇಳಿಕೆ – ಕ್ಷಮೆ ಕೇಳಿದ ನಿತೀಶ್ ಕುಮಾರ್

    ಕಳೆದ ಐದು ದಿನಗಳ ಬಳಿಕ ವಾಯು ಮಾಲಿನ್ಯವು ತೀವ್ರ ಕಳಪೆಯಿಂದ ಕಳಪೆ ಗುಣಮಟ್ಟಕ್ಕೆ ಮರಳಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಅಂಕಿಅಂಶಗಳ ಪ್ರಕಾರ, ನಗರದ ಒಟ್ಟಾರೆ ವಾಯು ಗುಣಮಟ್ಟ ಸೂಚ್ಯಂಕವು (IQA) ಬೆಳಗ್ಗೆ 7 ಗಂಟೆಗೆ 421ಕ್ಕೆ ದಾಖಲಾಗಿದೆ. ಇದನ್ನೂ ಓದಿ: ಕೆಲಸವಿಲ್ಲದ ನಿರುದ್ಯೋಗಿ ನಾಯಕರಿಂದ ಚಪಲಕ್ಕೆ ಆಪರೇಷನ್ ಕಮಲದ ಪ್ರಯತ್ನ: ಡಿಕೆಶಿ ವಾಗ್ದಾಳಿ

    ಅಪಾಯಕಾರಿ ಗಾಳಿಯ ಗುಣಮಟ್ಟದ ದೃಷ್ಟಿಯಿಂದ ಜಿಆರ್‌ಎಪಿ ಹಂತದ ಐವಿ ಅಡಿಯಲ್ಲಿ ನಿರ್ಬಂಧಗಳನ್ನು ಹೊಂದಿದ್ದರೂ ಮಾಲಿನ್ಯಕಾರಕ ವಾಹನಗಳು ಮುಕ್ತವಾಗಿ ನಗರವನ್ನು ಪ್ರವೇಶಿಸುತ್ತಿವೆ ಮತ್ತು ಗಡಿಗಳಲ್ಲಿ ಸರಿಯಾದ ತಪಾಸಣೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಇದನ್ನೂ ಓದಿ: ಬೆಂಗಳೂರು ಕುಡಿಯುವ ನೀರಿಗೆ ಕಾವೇರಿಯಿಂದ 24 ಟಿಎಂಸಿ ಬಳಕೆ: ಡಿಕೆಶಿ

    ದೆಹಲಿಯಲ್ಲಿನ ಮಾಲಿನ್ಯ ಪರಿಸ್ಥಿತಿಯನ್ನು ಸುಪ್ರೀಂ ಕೋರ್ಟ್ ಬಹಳ ನಿಕಟವಾಗಿ ಗಮನಿಸುತ್ತಿದೆ. ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ (ಡಿಪಿಸಿಸಿ) ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಪರಿಸರ ಮತ್ತು ಸಾರಿಗೆ ಆಯುಕ್ತರಿಗೆ ನಿರ್ದೇಶನಗಳನ್ನು ನೀಡಿದೆ. ಇದನ್ನೂ ಓದಿ: ಅಮಿತ್‌ ಶಾ ರಥಕ್ಕೆ ಕರೆಂಟ್‌ ಶಾಕ್‌ – ಅಪಾಯದಿಂದ ಪಾರು

  • ICC WorldCup 2023: ಈಡನ್‌ ಗಾರ್ಡನ್ಸ್‌ನ ಲೀಗ್‌, ಸೆಮಿಫೈನಲ್‌ ಪಂದ್ಯಗಳಿಗೆ ಟಿಕೆಟ್‌‌ ದರ ನಿಗದಿ

    ICC WorldCup 2023: ಈಡನ್‌ ಗಾರ್ಡನ್ಸ್‌ನ ಲೀಗ್‌, ಸೆಮಿಫೈನಲ್‌ ಪಂದ್ಯಗಳಿಗೆ ಟಿಕೆಟ್‌‌ ದರ ನಿಗದಿ

    ಕೋಲ್ಕತ್ತಾ: 2023ರ ಏಕದಿನ ವಿಶ್ವಕಪ್‌ (ICC World Cup 2023) ಟೂರ್ನಿಗೆ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಕೋಲ್ಕತಾದ ಐತಿಹಾಸಿಕ ಈಡನ್ ಗಾರ್ಡನ್ಸ್ (Eden Gardens) ಕ್ರೀಡಾಂಗಣದಲ್ಲಿ ನಡೆಯುವ ಲೀಗ್‌ ಹಾಗೂ ಸೆಮಿಫೈನಲ್‌ ಪಂದ್ಯಗಳಿಗೆ ಟಿಕೆಟ್‌ ದರವನ್ನು ಬಹಿರಂಗಪಡಿಸಲಾಗಿದೆ.

    ಕೋಲ್ಕತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಕ್ರೀಡಾಂಗಣವು 1 ಸೆಮಿಫೈನಲ್‌ ಸೇರಿದಂತೆ 5 ಪಂದ್ಯಗಳಿಗೆ ಆತಿಥ್ಯ ವಹಿಸಲಿದ್ದು, ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್​ (CAB) ಮುಖ್ಯಸ್ಥ ಸ್ನೇಹಶಿಶ್ ಗಂಗೂಲಿ (Snehashis Ganguly) ವಿಶ್ವಕಪ್ ಪಂದ್ಯಗಳ ಟಿಕೆಟ್​ಗಳ ಬೆಲೆಯನ್ನ ಘೋಷಿಸಿದ್ದಾರೆ. ಸ್ಟೇಡಿಯಂನಲ್ಲಿ ನಿಗದಿಯಾಗಿರುವ ಎಲ್ಲ ಪಂದ್ಯಗಳಿಗೆ 650 ರೂ.ಗಳಿಂದ 3,000 ರೂ.ಗಳವರೆಗೆ ಬೆಲೆಗಳು ಇರಲಿವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಈ ಐತಿಹಾಸಿಕ ಮೈದಾನವು ನೆದರ್ಲ್ಯಾಂಡ್ಸ್ ವಿರುದ್ಧ ಬಾಂಗ್ಲಾದೇಶ, ಪಾಕಿಸ್ತಾನ ವಿರುದ್ಧ ಬಾಂಗ್ಲಾದೇಶ, ಭಾರತ-ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ವಿರುದ್ಧ ಪಾಕಿಸ್ತಾನ ಮತ್ತು 2ನೇ ಸೆಮಿಫೈನಲ್ ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ. ಇದನ್ನೂ ಓದಿ: ನಾಕೌಟ್ ಪಂದ್ಯಗಳಲ್ಲೇ ಟೀಂ ಇಂಡಿಯಾ ಕೈ ಕೊಡ್ತಿರೋದೇಕೆ – ಕಾರಣ ತಿಳಿಸಿದ ದಾದಾ

    ಯಾವ ಪಂದ್ಯಕ್ಕೆ ಎಷ್ಟು ಶುಲ್ಕ?
    ಮೊದಲ ಪಂದ್ಯಕ್ಕೆ (ನೆದರ್ಲ್ಯಾಂಡ್ಸ್ ವಿರುದ್ಧ ಬಾಂಗ್ಲಾದೇಶ) 650 ರೂ., 4ನೇ ಪಂದ್ಯಕ್ಕೆ (ಇಂಗ್ಲೆಂಡ್ ವಿರುದ್ಧ ಪಾಕಿಸ್ತಾನ) ಮತ್ತು 2ನೇ ಪಂದ್ಯಕ್ಕೆ (ಪಾಕಿಸ್ತಾನ ವಿರುದ್ಧ ಬಾಂಗ್ಲಾದೇಶ) 800 ರೂ.ಗಳಿಂದ ಪ್ರಾರಂಭವಾಗಿ 2,200 ರೂ.ಗಳವರೆಗೆ ಟಿಕೆಟ್ ದರ ನಿಗದಿಮಾಡಲಾಗಿದೆ. ಮತ್ತೊಂದೆಡೆ, ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2ನೇ ಸೆಮಿಫೈನಲ್ ಪಂದ್ಯದ ಟಿಕೆಟ್ ದರ 900-3,000 ರೂ.ವರೆಗೆ ಇರಲಿದೆ.

    ಅಕ್ಟೋಬರ್ 28 ರಂದು ಶ್ರೀಲಂಕಾ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಆರಂಭಿಕ ಪಂದ್ಯಕ್ಕೆ ಮೇಲಿನ ಹಂತದ ಸೀಟುಗಳಿಗೆ ಕನಿಷ್ಠ ಟಿಕೆಟ್ ದರ 650 ರೂ. ಡಿ ಮತ್ತು ಹೆಚ್ ಬ್ಲಾಕ್ ಟಿಕೆಟ್‌ಗಳ ಬೆಲೆ 1,000 ರೂ ಆಗಿದ್ದರೆ, ಬಿ, ಸಿ, ಕೆ ಮತ್ತು ಎಲ್ ಬ್ಲಾಕ್ ಟಿಕೆಟ್‌ಗಳ ಬೆಲೆ 1500 ರೂ. ನಿಗದಿಯಾಗಿದೆ. ಇಂಗ್ಲೆಂಡ್ ಮತ್ತು ಪಾಕಿಸ್ತಾನ, ಹಾಗೆಯೇ ಬಾಂಗ್ಲಾದೇಶ ಮತ್ತು ಪಾಕಿಸ್ತಾನ ನಡುವಿನ ಪಂದ್ಯಗಳ ಟಿಕೆಟ್ ದರವು ಮೇಲಿನ ಹಂತಗಳಿಗೆ 800 ರೂ. ಡಿ ಮತ್ತು ಎಚ್ ಬ್ಲಾಕ್ ಟಿಕೆಟ್‌ಗಳು ರೂ 1200, ಸಿ ಮತ್ತು ಕೆ ಬ್ಲಾಕ್ ಟಿಕೆಟ್‌ಗಳು ರೂ 2,000 ಮತ್ತು ಬಿ ಮತ್ತು ಎಲ್ ಬ್ಲಾಕ್ ಟಿಕೆಟ್‌ಗಳು ಗರಿಷ್ಠ ರೂ 2,200ಗೆ ಲಭ್ಯವಿರುತ್ತವೆ.

    2011ರಲ್ಲಿ ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್ ಸಮಯದಲ್ಲಿ, ಕೋಲ್ಕತಾದಲ್ಲಿ ಅಪೂರ್ಣ ನಿರ್ಮಾಣ ಕಾಮಗಾರಿಗಳಿಂದಾಗಿ ಭಾರತ ಮತ್ತು ಇಂಗ್ಲೆಂಡ್ ತಂಡಳ ಮುಖಾಮುಖಿ ಪಂದ್ಯಕ್ಕೆ ಆತಿಥ್ಯ ವಹಿಸಲು ವಿಫಲಗೊಂಡಿತ್ತು. ಇದನ್ನೂ ಓದಿ: ನಾಕೌಟ್ ಪಂದ್ಯಗಳಲ್ಲೇ ಟೀಂ ಇಂಡಿಯಾ ಕೈ ಕೊಡ್ತಿರೋದೇಕೆ – ಕಾರಣ ತಿಳಿಸಿದ ದಾದಾ

    ಇಂಡೋ-ಪಾಕ್ ಕದನ ಕೂಡ ನಡೆಯಬಹುದು:
    ಈಡನ್‌ ಗಾರ್ಡನ್ಸ್‌ನ 5 ಪಂದ್ಯಗಳಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಸೆಮಿಫೈನಲ್ ಪಂದ್ಯವೂ ಸೇರಬಹುದು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತ ತನ್ನ ಸೆಮಿಫೈನಲ್ ಪಂದ್ಯವನ್ನು ಆಡಲಿದೆ. ಒಂದು ವೇಳೆ ಸೆಮಿಫೈನಲ್ ಪಂದ್ಯ ಪಾಕಿಸ್ತಾನದ ವಿರುದ್ಧ ನಡೆದರೆ ನವೆಂಬರ್ 16ರಂದು ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಈ ಪಂದ್ಯ ನಿಗದಿಯಾಗಬಹುದು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕ್ಯಾಬ್‌ ಬುಕ್‌ ಮಾಡಿದ್ರು; ಪಿಕಪ್‌ ಮಾಡಲು ಬಂದ ಚಾಲಕನನ್ನೇ ಎಳೆದು ಹಾಕಿ ಕ್ಯಾಬ್‌ ಕದ್ದೊಯ್ದರು!

    ಕ್ಯಾಬ್‌ ಬುಕ್‌ ಮಾಡಿದ್ರು; ಪಿಕಪ್‌ ಮಾಡಲು ಬಂದ ಚಾಲಕನನ್ನೇ ಎಳೆದು ಹಾಕಿ ಕ್ಯಾಬ್‌ ಕದ್ದೊಯ್ದರು!

    ಉತ್ತರ ಪ್ರದೇಶ: ಅಗ್ರಿಗೇಟರ್ ಆ್ಯಪ್ ಮೂಲಕ ಕ್ಯಾಬ್ (Cab) ಬುಕ್ ಮಾಡಿದ್ದ ನಾಲ್ವರು, ತಮ್ಮನ್ನು ಕರೆದೊಯ್ಯಲು ಬಂದ ಟ್ಯಾಕ್ಸಿ ಚಾಲಕನನ್ನೇ ಎಳೆದು ಹಾಕಿ ವಾಹನ ಕದ್ದು ಎಸ್ಕೇಪ್‌ ಆಗಿರುವ ಘಟನೆ , ಗುರುಗ್ರಾಮ್‌ನಲ್ಲಿ (Gurugram) ನಡೆದಿದೆ.

    ಕ್ಯಾಬ್ ಚಾಲಕ ಹರೀಶ್ ಕುಮಾರ್ ರಾತ್ರಿ 11 ಗಂಟೆ ಸುಮಾರಿಗೆ ಕ್ಯಾಬ್ ಅಗ್ರಿಗೇಟರ್ ಆ್ಯಪ್‌ನಲ್ಲಿ ಬುಕಿಂಗ್ ಸ್ವೀಕರಿಸಿ ಪಿಕಪ್ ಪಾಯಿಂಟ್ ತಲುಪಿದ್ದರು. ಬುಕ್‌ ಮಾಡಿದ್ದ ನಾಲ್ವರು ಕ್ಯಾಬ್‌ಗಾಗಿ ಕಾದಿದ್ದರು. ಕ್ಯಾಬ್‌ ಹತ್ತಿರ ಬಂದು ಚಾಲಕ ಬುಕಿಂಗ್‌ ಖಚಿತಪಡಿಸಿಕೊಳ್ಳಲು ಮುಂದಾಗಿದ್ದ. ಈ ವೇಳೆ ಚಾಲಕನನ್ನು ಎಳೆದು ಹಾಕಿ ನಾಲ್ವರು ಕಿಡಿಗೇಡಿಗಳು ಕ್ಯಾಬ್‌ ಕದ್ದೊಯ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 12 ಸಾವಿರ ಕೋಟಿ ಮೌಲ್ಯದ 2.5 ಟನ್ ಡ್ರಗ್ಸ್ ಜಪ್ತಿ – ಪಾಕ್ ಆರೋಪಿಯ ಬಂಧನ

    ಚಾಲಕನ ಮೊಬೈಲ್ ಫೋನ್ ಕೂಡ ಕ್ಯಾಬ್ ಒಳಗೆ ಇತ್ತು. ಘಟನೆಗೆ ಸಂಬಂಧಿಸಿದಂತೆ ಸೆಕ್ಟರ್ 10 ಎ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಗುರುಗ್ರಾಮ್‌ನಲ್ಲಿ ವಾಹನ ಕಳ್ಳತನ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿವೆ. ಪ್ರತಿದಿನ ಸುಮಾರು 9 ವಾಹನ ಕಳ್ಳತನ ಪ್ರಕರಣ ವರದಿಯಾಗುತ್ತಿವೆ. 2022 ರಲ್ಲಿ ಅಕ್ಟೋಬರ್ ವರೆಗೆ 2,893 ವಾಹನಗಳು ಕಳ್ಳತನವಾಗಿವೆ. 2021 ರಲ್ಲಿ 3,014 ವಾಹನಗಳನ್ನು ಕಳವು ಮಾಡಲಾಗಿದೆ. ಇದನ್ನೂ ಓದಿ: CBI ನಿರ್ದೇಶಕರ ಆಯ್ಕೆ ಪಟ್ಟಿಯಲ್ಲಿ ಕರ್ನಾಟಕದ ಡಿಜಿಪಿ ಪ್ರವೀಣ್‌ ಸೂದ್‌ ಹೆಸರು

  • ಕಿರುಕುಳ ವಿರೋಧಿಸಿದ್ದಕ್ಕೆ ತಾಯಿ ಮಗುವನ್ನು ಹೊರದೂಡಿದ ಕ್ಯಾಬ್ ಚಾಲಕ- ಮಗು ಸಾವು

    ಕಿರುಕುಳ ವಿರೋಧಿಸಿದ್ದಕ್ಕೆ ತಾಯಿ ಮಗುವನ್ನು ಹೊರದೂಡಿದ ಕ್ಯಾಬ್ ಚಾಲಕ- ಮಗು ಸಾವು

    ಮುಂಬೈ: ತಾಯಿ (Mother) -ಮಗುವನ್ನು (Baby) ಕ್ಯಾಬ್‍ನಿಂದ (Cab) ತಳ್ಳಿದ ಹಿನ್ನೆಲೆಯಲ್ಲಿ ಮಗು ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ (Maharashtra) ಪಾಲ್ಘರ್ ಜಿಲ್ಲೆಯ ಮುಂಬೈ – ಹೆದ್ದಾರಿಯಲ್ಲಿ ನಡೆದಿದೆ.

    ಮಹಿಳೆ ಮತ್ತು ಅವಳ ಮಗಳು ಪೆಲ್ಹಾರ್‌ನಿಂದ ವಾಡಾ ತಹಸಿಲ್‍ನ ಪೊಶೆರೆಗೆ ಕ್ಯಾಬ್‍ನಲ್ಲಿ ಹಿಂತಿರುಗುತ್ತಿದ್ದರು. ಕ್ಯಾಬ್‍ನಲ್ಲಿ ಮಹಿಳೆಯು, ಇತರ ಕೆಲವು ಪ್ರಯಾಣಿಕರೊಂದಿಗೆ ಎಂಬುದನ್ನು ಆಯ್ಕೆ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ತಾಯಿ ಮತ್ತು 2 ವರ್ಷದ ಮಗು ಕ್ಯಾಬ್‍ನಲ್ಲಿ ಚಲಿಸುತ್ತಿದ್ದಾಗ, ಸಹ ಪ್ರಯಾಣಿಕ ಹಾಗೂ ಚಾಲಕ ಮಹಿಳೆಗೆ ಕಿರುಕುಳ ನೀಡಿದ್ದಾರೆ.

    CRIME COURT

    ಆದರೆ ಮಹಿಳೆಯೂ ಇದನ್ನು ವಿರೋಧಿಸಿದ್ದಾಳೆ. ಈ ವೇಳೆ ಸಹಪ್ರಯಾಣಿಕ ಮಹಿಳೆಯನ್ನು ಮತ್ತು ಆಕೆಯ ಮಗುವನ್ನು ಕಾರ್‍ನಿಂದ ಹೊರಗೆ ದೂಡಿದ್ದಾನೆ. ಇದರ ಪರಿಣಾಮವಾಗಿ ಮಹಿಳೆ ಹಾಗೂ ಮಗು ಚಲಿಸುತ್ತಿದ್ದ ಕ್ಯಾಬ್‍ನಿಂದ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಕೆಯನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಹೆಣ್ಣು ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಇದನ್ನೂ ಓದಿ: ನೀರು ತುಂಬಿದ್ದ ಬಕೆಟ್‌ಗೆ ಬಿದ್ದು 10 ತಿಂಗಳ ಕಂದಮ್ಮ ಸಾವು

    ಘಟನೆಗೆ ಸಂಬಂಧಿಸಿದಂತೆ ಮಾಂಡವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಹುಡುಕುತ್ತಿದ್ದಾರೆ. ಇದನ್ನೂ ಓದಿ: ಹಿಂದೂ ಕಾರ್ಯಕರ್ತನಿಗೆ ಬೆದರಿಕೆ ಆರೋಪ – ಸರ್ಕಲ್‌ ಇನ್‌ಸ್ಪೆಕ್ಟರ್‌ ಸೇರಿ 7 ಮಂದಿ ವಿರುದ್ಧ FIR

    Live Tv
    [brid partner=56869869 player=32851 video=960834 autoplay=true]

  • ಒಟಿಪಿ ವಿಚಾರಕ್ಕೆ ಗ್ರಾಹಕನನ್ನೇ ಕೊಂದ ಒಲಾ ಕ್ಯಾಬ್ ಡ್ರೈವರ್

    ಒಟಿಪಿ ವಿಚಾರಕ್ಕೆ ಗ್ರಾಹಕನನ್ನೇ ಕೊಂದ ಒಲಾ ಕ್ಯಾಬ್ ಡ್ರೈವರ್

    ಚೆನ್ನೈ: ಒಟಿಪಿ ಕೊಡುವಾಗ ತಡ ಮಾಡಿದ ವಿಚಾರಕ್ಕೆ ಓಲಾ ಕ್ಯಾಬ್ ಡ್ರೈವರ್ ಪ್ರಯಾಣಿಕನನ್ನು ಹೊಡೆದು ಕೊಂದಿರುವ ಘಟನೆ ಚೆನ್ನೈನ ಹಳೆ ಮಹಾಬಳಿಪುರಂ ರಸ್ತೆಯಲ್ಲಿ ನಡೆದಿದೆ. ಗುಡುವಂಚೇರಿಯ ಉಮೇಂದರ್ ಕೊಲೆಯಾದ ವ್ಯಕ್ತಿ.

    ಕೊಯಮತ್ತೂರಿನಲ್ಲಿ ಸಾಫ್ಟ್‌ವೇರ್ ಡೆವಲಪರ್ ಆಗಿ ಕೆಲಸ ಮಾಡಿಕೊಂಡಿದ್ದ ಉಮೇಂದರ್ ತನ್ನ ಪತ್ನಿ, ಇಬ್ಬರು ಮಕ್ಕಳು, ನಾದಿನಿ ಹಾಗೂ ಅವರ ಇಬ್ಬರು ಮಕ್ಕಳೊಂದಿಗೆ ನವಲೂರಿನ ಮಾಲ್‌ಗೆ ತೆರಳಿದ್ದರು. ಚಲನಚಿತ್ರ ವೀಕ್ಷಣೆ ಬಳಿಕ ಮನೆಗೆ ವಾಪಸ್ ಆಗಲು ಉಮೇಂದರ್ ಪತ್ನಿ ಓಲಾ ಕ್ಯಾಬ್ ಬುಕ್ ಮಾಡಿದ್ದರು.

     

    crime

    ಕ್ಯಾಬ್ ಅವರಿದ್ದ ಸ್ಥಳಕ್ಕೆ ಬರುತ್ತಿದ್ದಂತೆ ಎಲ್ಲರೂ ಕ್ಯಾಬ್ ಹತ್ತಿ ಕುಳಿತಿದ್ದಾರೆ. ಇದರಿಂದ ಕೋಪಗೊಂಡ ಕ್ಯಾಬ್ ಡ್ರೈವರ್ ರವಿ, ಒಟಿಪಿ ದೃಢಪಡಿಸಿದ ಬಳಿಕವೇ ಕಾರಿನೊಳಗೆ ಕುಳಿತುಕೊಳ್ಳುವಂತೆ ಆವಾಜ್ ಹಾಕಿದ್ದ. ಇದನ್ನೂ ಓದಿ: ಊಟದ ಬಿಲ್ ಕೇಳಿದ್ದಕ್ಕೆ ಬಾಟಲ್‍ನಿಂದ ತಲೆಗೆ ಹೊಡೆದ್ರು – ಅಧಿಕಾರದ ಮದದಿಂದ ಡಾಬಾ ಧ್ವಂಸ

    ಇದರಿಂದ ಸಿಟ್ಟಾದ ಉಮೇಂದರ್, ಕ್ಯಾಬ್‌ನಿಂದ ಕೆಳಗಿಳಿದು ಬಾಗಿಲನ್ನು ಬಲವಾಗಿ ಮುಚ್ಚಿದ್ದಾರೆ. ಬಳಿಕ ಇನ್ನೊಂದು ಕ್ಯಾಬ್ ಬುಕ್ ಮಾಡಲು ಹೊರಟಿದ್ದು, ಚಾಲಕ ಹಾಗೂ ಉಮೇಂದರ್ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ರವಿ ಉಮೆಂದರ್ ಮೇಲೆ ಹಲವು ಬಾರಿ ಹಲ್ಲೆ ನಡೆಸಿದ್ದು, ಇದರಿಂದ ಉಮೇಂದರ್ ಮೂರ್ಛೆತಪ್ಪಿದ್ದರು. ಬಳಿಕ ಉಮೇಂದರ್‌ನನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ.

    ಇತ್ತ ಕ್ಯಾಬ್ ಡ್ರೈವರ್ ರವಿ ಪರಾರಿಯಾಗಲು ಯತ್ನಿಸಿದ್ದ. ಆದರೆ ಹಲ್ಲೆ ನಡೆಸಿದ ಸಮಯ ನೆರೆದಿದ್ದವರ ಕೈಗೆ ಆತ ಸಿಕ್ಕಿ ಬಿದ್ದಿದ್ದಾನೆ. ಘಟನೆ ಬಗ್ಗೆ ಕೆಲಂಬಾಕ್ಕಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಆರೋಪದಡಿ ರವಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಮಲಗಿದ್ದ ಪತಿಯನ್ನು ಬರ್ಬರವಾಗಿ ಕೊಲೆ ಮಾಡಿ ಕತ್ತಿ ಹಿಡಿದು ಕುಳಿತ ಪತ್ನಿ

    Live Tv
    [brid partner=56869869 player=32851 video=960834 autoplay=true]

  • ಆಟೋ, ಕ್ಯಾಬ್ ಚಾಲಕರಿಗೆ 5 ಸಾವಿರ ರೂಪಾಯಿ ನೆರವು – ಕೇಜ್ರಿವಾಲ್ ಘೋಷಣೆ

    ಆಟೋ, ಕ್ಯಾಬ್ ಚಾಲಕರಿಗೆ 5 ಸಾವಿರ ರೂಪಾಯಿ ನೆರವು – ಕೇಜ್ರಿವಾಲ್ ಘೋಷಣೆ

    ನವದೆಹಲಿ: ಲಾಕ್‍ಡೌನ್ ಹಿನ್ನೆಲೆ ಸಂಕಷ್ಟದಲ್ಲಿರುವ ಆಟೋ, ರಿಕ್ಷಾ, ಇ ರಿಕ್ಷಾ, ಕ್ಯಾಬ್ ಚಾಲಕರ ನೆರವಿಗೆ ನಿಂತಿರುವ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ.

    ರಿಕ್ಷಾ, ಆಟೋ, ಇ ರಿಕ್ಷಾ ಚಾಲಕರು, ಕ್ಯಾಬ್ ಚಾಲಕರಿಗೆ 5,000 ರೂಪಾಯಿಗಳ ನೆರವು ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಅವರು ಘೋಷಣೆ ಮಾಡಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಲಾಕ್‍ಡೌನ್ ಹಿನ್ನೆಲೆ ಆಟೋ ರಿಕ್ಷಾ ಚಾಲಕರಿಗೆ ಸಂಕಷ್ಟ ಎದುರಾಗಿದ್ದು, ಇವರ ನೆರವಿಗೆ ಸರ್ಕಾರ ನಿಲ್ಲಲಿದೆ ಎಂದರು.

    ಪ್ರತಿ ಚಾಲಕನಿಗೆ 5,000 ನೀಡಲು ಸರ್ಕಾರ ನಿರ್ಧರಿಸಿದ್ದು, ಮುಂದಿನ 7ರಿಂದ 10 ದಿನಗಳಲ್ಲಿ ಚಾಲಕರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಎಂದು ಕೇಜ್ರಿವಾಲ್ ಹೇಳಿದರು. ಚಾಲಕರ ಬ್ಯಾಂಕ್ ಖಾತೆಗಳ ಮಾಹಿತಿ ಸರ್ಕಾರದ ಬಳಿ ಇಲ್ಲ. ಹೀಗಾಗಿ ಚಾಲಕರ ಮಾಹಿತಿ ಪಡೆದು ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು. ಪ್ರತಿ ನಿತ್ಯ 6 ಲಕ್ಷಕ್ಕೂ ಅಧಿಕ ಜನರಿಗೆ ಊಟ ಮತ್ತು ರಾತ್ರಿ ಭೋಜನ ನೀಡಲಾಗುತ್ತಿದೆ ಎಲ್ಲ ರೀತಿಯ ನೆರವು ನೀಡಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.

    ದೆಹಲಿಯಲ್ಲಿ ಈವರೆಗೂ 209 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಪೈಕಿ 108 ಮಂದಿ ನಿಜಾಮುದ್ದೀನ್ ಮರ್ಕಜ್‍ನಿಂದ ಬಂದವರಾಗಿದ್ದಾರೆ. ನಿಜಾಮುದ್ದೀನ್ ಮರ್ಕಜ್‍ನಲ್ಲಿದ್ದ 2,346 ಮಂದಿ ಪೈಕಿ 1,810 ಮಂದಿಯನ್ನು ಕ್ವಾರಂಟೈನ್‍ನಲ್ಲಿ ಇಡಲಾಗಿದ್ದು, 536 ಮಂದಿಯನ್ನು ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಈವರೆಗೆ 4 ಮಂದಿ ಸಾವನ್ನಪ್ಪಿದ್ದು, ಅದರಲ್ಲಿ ಇಬ್ಬರು ಮರ್ಕಜ್‍ನೊಂದಿಗೆ ಸಂಪರ್ಕ ಇದ್ದವರು ಎಂದು ಕೇಜ್ರಿವಾಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

  • ಪಾರ್ಟಿ ಮುಗಿಸಿ ಮನೆಗೆ ಹೋಗ್ತಿದ್ದ ಸಿಎ ವಿದ್ಯಾರ್ಥಿನಿಗೆ ಬಲವಂತವಾಗಿ ಮುತ್ತಿಟ್ಟ

    ಪಾರ್ಟಿ ಮುಗಿಸಿ ಮನೆಗೆ ಹೋಗ್ತಿದ್ದ ಸಿಎ ವಿದ್ಯಾರ್ಥಿನಿಗೆ ಬಲವಂತವಾಗಿ ಮುತ್ತಿಟ್ಟ

    ಮುಂಬೈ: ಪಾರ್ಟಿ ಮುಗಿಸಿ ಕ್ಯಾಬ್‍ನಲ್ಲಿ ಮನೆಗೆ ಹೋಗುತ್ತಿದ್ದ ವೇಳೆ ಸಿಎ (ಚಾರ್ಟರ್ಡ್ ಅಕೌಂಟೆಂಟ್) ವಿದ್ಯಾರ್ಥಿನಿಗೆ ಬಲವಂತವಾಗಿ ಮುತ್ತು ಕೊಟ್ಟ ಯುವಕನನ್ನು ಮಹಾರಾಷ್ಟ್ರದ ಮುಂಬೈ ಪೊಲೀಸರು ಬಂಧಿಸಿದ್ದಾರೆ.

    ಈ ಘಟನೆ ನವೆಂಬರ್ 9ರಂದು ನಡೆದಿದ್ದು, ಪೊಲೀಸರು ಆರೋಪಿಗಳನ್ನು ಶನಿವಾರ ಮುಂಬೈನ ಲೋಖಂಡ್ವಾಲಾದಲ್ಲಿ ಬಂಧಿಸಿದ್ದಾರೆ. ಪಾರ್ಟಿ ಮುಗಿಸಿ ಕ್ಯಾಬ್‍ನಲ್ಲಿ ಮನೆಗೆ ಹೋಗುವ ವೇಳೆ ಯುವಕ ಬಲವಂತವಾಗಿ ಮುತ್ತು ನೀಡಿದ್ದಾನೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ವರದಿಗಳ ಪ್ರಕಾರ, ಆರೋಪಿ ಅಂಧೇರಿಯ ವೀರಾ ದೇಸಾಯಿ ರೋಡಿನಲ್ಲಿರುವ ಬಾರಿನಲ್ಲಿ ನಡೆದ ಪಾರ್ಟಿಯಲ್ಲಿ ವಿದ್ಯಾರ್ಥಿನಿಯನ್ನು ಭೇಟಿ ಮಾಡಿದ್ದನು. ವಿದ್ಯಾರ್ಥಿನಿ ತನ್ನ ಸ್ನೇಹಿತರ ಜೊತೆಯಲ್ಲಿ ಆ ಪಾರ್ಟಿಗೆ ಆಗಮಿಸಿದ್ದಳು.

    ಮಧ್ಯರಾತ್ರಿ ಸುಮಾರು 1.30ಗೆ ಪಾರ್ಟಿ ಮುಗಿದಿದ್ದು, ವಿದ್ಯಾರ್ಥಿನಿ ತನ್ನ ಸ್ನೇಹಿತರ ಜೊತೆಗೆ ಮನೆಗೆ ಹೋಗಲು ನಿರ್ಧರಿಸಿದ್ದಳು. ಈ ವೇಳೆ ಆಕೆಯ ಮೊಬೈಲ್ ಕೆಲಸ ಮಾಡದ ಕಾರಣ ಆರೋಪಿಯ ಮೊಬೈಲಿನಲ್ಲಿಯೇ ಕ್ಯಾಬ್ ಬುಕ್ ಮಾಡಿದ್ದರು. ಆರೋಪಿ ಯುವತಿಯರಿಗೆ ತಮ್ಮ ಮನೆವರೆಗೂ ಬಿಡುವುದಾಗಿ ಹೇಳಿ ಕಾರಿನ ಮುಂಭಾಗದಲ್ಲಿರುವ ಸೀಟಿನಲ್ಲಿ ಕುಳಿತಿದ್ದನು. ಆದರೆ ವಿದ್ಯಾರ್ಥಿನಿ ತನ್ನ ಜೊತೆ ಬರದಂತೆ ಆರೋಪಿಗೆ ಹೇಳುತ್ತಾಳೆ. ಆದರೆ ಆರೋಪಿ ಆಕೆಯ ಮಾತನ್ನು ನಿರ್ಲಕ್ಷ್ಯಿಸಿದ್ದನು.

    ವಿದ್ಯಾರ್ಥಿನಿಯ ಸ್ನೇಹಿತೆ ನಿದ್ದೆಗೆ ಜಾರಿದ್ದನ್ನು ನೋಡಿದ ಆರೋಪಿ ಹಿಂಬದಿ ಸೀಟಿನಲ್ಲಿ ಬಂದು ಕೂರುತ್ತಾನೆ. ಈ ವೇಳೆ ವಿದ್ಯಾರ್ಥಿನಿಗೆ ಬಲವಂತವಾಗಿ ಮುತ್ತು ಕೊಟ್ಟಿದ್ದಾನೆ. ಆರೋಪಿಯ ವರ್ತನೆಯಿಂದ ಭಯಗೊಂಡ ವಿದ್ಯಾರ್ಥಿನಿ ಕ್ಯಾಬ್ ನಿಲ್ಲಿಸಲು ಹೇಳಿ ಅಲ್ಲಿಂದ ಆಟೋದಲ್ಲಿ ತನ್ನ ಮನೆಗೆ ತಲುಪಿದ್ದಾಳೆ. ಈ ಘಟನೆಯಿಂದ ವಿದ್ಯಾರ್ಥಿನಿ ಗಾಬರಿಗೊಂಡಿದ್ದು, ಆ ಆಘಾತದಿಂದ ಆಕೆಗೆ ಹೊರಬರಲು ಆಗಲಿಲ್ಲ. ಬಳಿಕ ನ. 23ರಂದು ಅಂಬೋಲಿ ಪೊಲೀಸ್ ಠಾಣೆಗೆ ಹೋಗಿ ಆರೋಪಿ ವಿರುದ್ಧ ದೂರು ದಾಖಲಿಸಿದ್ದಳು.

    ಪೊಲೀಸರು ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 354(ಲೈಂಗಿಕ ಕಿರುಕುಳ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸಿದ್ದಾರೆ.

  • ಪಿಂಕ್ ಬಾಲ್ ಟೆಸ್ಟ್: 4, 5ನೇ ದಿನದ ಟಿಕೆಟ್ ಹಣ ವಾಪಸ್ ನೀಡಲು ಮುಂದಾದ ಸಿಎಬಿ

    ಪಿಂಕ್ ಬಾಲ್ ಟೆಸ್ಟ್: 4, 5ನೇ ದಿನದ ಟಿಕೆಟ್ ಹಣ ವಾಪಸ್ ನೀಡಲು ಮುಂದಾದ ಸಿಎಬಿ

    ಕೋಲ್ಕತಾ: ಮೂರೇ ದಿನದೊಳಗೆ ಭಾರತದ ಮೊದಲ ಪಿಂಕ್ ಬಾಲ್ ಟೆಸ್ಟ್ ಮುಗಿದ ನಂತರ ಉಳಿದ 4 ಮತ್ತು 5 ದಿನದ ಅಭಿಮಾನಿಗಳು ಖರೀದಿಸಿದ ಟಿಕೆಟ್ ಹಣವನ್ನು ಹಿಂದಿರುಗಿಸಲು ಕ್ರಿಕೆಟ್ ಅಸೋಸಿಯೇಷನ್ ಆಫ್ ಬಂಗಾಳ (ಸಿಎಬಿ) ನಿರ್ಧರಿಸಿದೆ.

    ಭಾನುವಾರ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಮೊದಲ ಐತಿಹಾಸಿಕ ಹಗಲು-ರಾತ್ರಿ ಟೆಸ್ಟ್ ಪಂದ್ಯವನ್ನು ಭಾರತ ಗೆದ್ದು ಇತಿಹಾಸ ನಿರ್ಮಿಸಿದೆ. ಭಾರತದ ಮೊದಲ ಪಿಂಕ್ ಬಾಲ್ ಟೆಸ್ಟ್ ಪಂದ್ಯವನ್ನು ಒಂದು ಇನ್ನಿಂಗ್ಸ್ ಮತ್ತು 46 ರನ್ ಗಳಿಂದ ಗೆಲ್ಲುವ ಮೂಲಕ ಬಾಂಗ್ಲಾದೇಶದ ವಿರುದ್ಧದ 2 ಪಂದ್ಯಗಳ ಸರಣಿಯನ್ನು ಭಾರತ ಕ್ಲೀನ್‍ಸ್ವೀಪ್ ಮಾಡಿಕೊಂಡಿದೆ.

    ಭಾರತದ ಬೌಲರ್ ಗಳ ಮಾರಕ ದಾಳಿ ಮತ್ತು ನಾಯಕ ವಿರಾಟ್ ಕೊಹ್ಲಿ ಅವರ ಅಬ್ಬರದ ಶತಕಕ್ಕೆ ಹೆದರಿದ ಬಾಂಗ್ಲಾ ತನ್ನ ಮೊದಲ ಪಿಂಕ್ ಬಾಲ್ ಪಂದ್ಯದಲ್ಲಿ ಕೇವಲ ಮೂರೇ ದಿನಕ್ಕೆ ಭಾರತಕ್ಕೆ ಶರಣಾಗಿತು. ಇದರಿಂದ ಭಾರತದ ಮೊದಲ ಪಿಂಕ್ ಬಾಲ್ ಪಂದ್ಯವನ್ನು ನೋಡಲು ಐದು ದಿನಗಳವರೆಗೂ ಟಿಕೆಟ್ ಖರೀದಿಸಿದ್ದ ಅಭಿಮಾನಿಗಳು ನಿರಾಶೆಯಾದಂತೆ ಆಗಿತ್ತು. ಆದರೆ ಈ ಉಳಿದ ಎರಡು ದಿನಗಳ ಟಿಕೆಟ್ ಹಣವನ್ನು ಸಿಎಬಿ ವಾಪಸ್ ಮಾಡುತ್ತೇವೆ ಎಂದು ಹೇಳಿದೆ.

    ಮಳೆಯಿಂದ ಪಂದ್ಯ ರದ್ದಾದರೆ. ಬೇರೆ ಯಾವುದೋ ಕಾರಣಕ್ಕೆ ಪಂದ್ಯವನ್ನು ಆಡಿಸದೆ ಇದ್ದಾಗ ಮಾತ್ರ ವಿಶ್ವಾದಾದ್ಯಂತ ಅಭಿಮಾನಿಗಳು ಖರೀದಿಸಿದ್ದ ಟಿಕೆಟ್ ಹಣವನ್ನು ವಾಪಸ್ ನೀಡುವ ಅಭ್ಯಾಸವಿದೆ. ಆದರೆ ಇದೇ ಮೊದಲ ಬಾರಿಗೆ ಟೆಸ್ಟ್ ಪಂದ್ಯವು ಎರಡು ದಿನ ಬೇಗ ಮುಗಿದಿದೆ ಎಂದು ಕ್ರಿಕೆಟ್ ಅಸೋಸಿಯೇಷನ್ ಆಫ್ ಬಂಗಾಳ ಅಭಿಮಾನಿಗಳು ಖರೀದಿಸಿದ್ದ 4 ಮತ್ತು 5 ನೇ ದಿನದ ಟಿಕೆಟ್ ಹಣವನ್ನು ವಾಪಸ್ ನೀಡುತ್ತೇವೆ ಎಂದು ಹೇಳಿರುವುದು ವಿಶೇಷ.

    ಈ ವಿಚಾರದ ಬಗ್ಗೆ ಮಾಹಿತಿ ನೀಡಿರುವ ಸಿಎಬಿಯ ಅಡಳಿತ ಮಂಡಳಿ, ಈಗಾಗಲೇ ನಾಲ್ಕು ಮತ್ತು ಐದನೇ ದಿನದ ಟಿಕೆಟ್ ಹಣವನ್ನು ಮರುಪಾವತಿ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಎರಡು ದಿನದ ಟಿಕೆಟ್ ಅನ್ನು ಆನಲೈನ್ ಮೂಲಕ ಬುಕ್ ಮಾಡಿದವರಿಗೆ ನಾವು ಸಂದೇಶ ಕಳುಹಿಸುತ್ತೇವೆ ಎಂದು ಹೇಳಿದೆ. ಇದರ ಜೊತೆ ಐತಿಹಾಸಿಕ ಪಂದ್ಯದಲ್ಲಿ ಭಾಗವಹಿಸಿದ ಕ್ರೀಡಾಭಿಮಾನಿಗಳನ್ನು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಶ್ಲಾಘಿಸಿದ್ದಾರೆ.

    ವಿಶೇಷವೆಂದರೆ, ಇದು ಭಾರತದಲ್ಲಿ ಆಡಿದ ಅತ್ಯಂತ ಚಿಕ್ಕದಾದ ಟೆಸ್ಟ್ (ಎಸೆದ ಚೆಂಡುಗಳ ಸಂಖ್ಯೆಗೆ ಅನುಗುಣವಾಗಿ). ಯಾಕೆಂದರೆ ಈ ಪಂದ್ಯ ಕೇವಲ 968 ಎಸೆತಗಳಲ್ಲಿ ಪೂರ್ಣಗೊಂಡಿದೆ. ಇದನ್ನು ಬಿಟ್ಟರೆ ಅಫ್ಘಾನಿಸ್ತಾನದ ಚೊಚ್ಚಲ ಟೆಸ್ಟ್ ಅನ್ನು ಭಾರತ 2018 ರಲ್ಲಿ 1028 ಎಸೆತಗಳಲ್ಲಿ ಪೂರ್ಣಗೊಳಿಸಿತ್ತು. ಭಾರತದ ಬಾಂಗ್ಲಾ ವಿರುದ್ಧದ ಪಂದ್ಯಲ್ಲಿ ಒಟ್ಟು 161.2 ಓವರ್ ಆಟವಾಡಿದರೆ. ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ 171.2 ಓವರ್ ಆಟವಾಡಿತ್ತು.