Tag: cafe coffee day

  • ಸೋಮನಹಳ್ಳಿಯ ಕಾಫಿಡೇ ಬಳಿಯೇ ಎಸ್‌ಎಂ ಕೃಷ್ಣ ಅಂತ್ಯಸಂಸ್ಕಾರ ಯಾಕೆ?

    ಸೋಮನಹಳ್ಳಿಯ ಕಾಫಿಡೇ ಬಳಿಯೇ ಎಸ್‌ಎಂ ಕೃಷ್ಣ ಅಂತ್ಯಸಂಸ್ಕಾರ ಯಾಕೆ?

    ಮಂಡ್ಯ: ಮಂಡ್ಯ (Mandya) ಜಿಲ್ಲೆಯ ಮದ್ದೂರು (Maddur) ತಾಲೂಕಿನ ಸೋಮನಹಳ್ಳಿಯಲ್ಲಿ (Somanahalli) ಇಂದು (ಡಿ.11) ಮಾಜಿ ಸಿಎಂ ಎಸ್‌ಎಂ ಕೃಷ್ಣ (SM Krishna) ಅವರ ಅಂತ್ಯಸಂಸ್ಕಾರ ನಡೆಯಲಿದೆ.

    ಎಸ್‌ಎಂಕೆ ಅವರ ಇಷ್ಟದ ಸ್ಥಳ ಸೋಮನಹಳ್ಳಿ ಹೊರವಲಯದ ಕಾಫಿ ಡೇ (Cafe Coffee Day) ಆವರಣದಲ್ಲಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು ಸಂಜೆ 4 ಗಂಟೆಯ ನಂತರ ಅಂತ್ಯಸಂಸ್ಕಾರ ನಡೆಯಲಿದೆ.ಇದನ್ನೂ ಓದಿ: ಯಾರನ್ನೂ ದ್ವೇಷಿಸಲಿಲ್ಲ – ಎಸ್.ಎಂ ಕೃಷ್ಣ ಅಗಲಿಕೆಯ‌ ಕುರಿತು ನೋವು ಹಂಚಿಕೊಂಡ ನಟಿ ರಮ್ಯಾ

    ಕೆಫೆ ಡೇ ಅವರಣದಲ್ಲಿಯೇ ಅಂತ್ಯಸಂಸ್ಕಾರ ಯಾಕೆ?
    ಎಸ್‌ಎಂ ಕೃಷ್ಣ ಅವರ ಮೂಲ ಮನೆ ಸೋಮನಹಳ್ಳಿ ಒಳಗಡೆ ಇದೆ. ಕೃಷ್ಣ ಅವರು ರಾಜ್ಯ ಸಚಿವರಾಗಿದ್ದ ವೇಳೆ ತಮ್ಮ ಪಿತ್ರಾರ್ಜಿತ ಆಸ್ತಿಯಲ್ಲಿ ಒಂದು ಗೆಸ್ಟ್ ಹೌಸ್ ನಿರ್ಮಿಸಿದ್ದರು.

    ಬೆಂಗಳೂರಿನಲ್ಲಿ (Bengaluru) ನೆಲೆಸಿದ್ದ ಕಾರಣ ಈ ಮನೆಯನ್ನು ಹೆಚ್ಚಾಗಿ ಕೃಷ್ಣ ಬಳಸುತ್ತಿರಲಿಲ್ಲ. ಆದರೆ ಆ ಮನೆಯ ಒಂದು ಕೋಣೆ ಎಸ್‌ಎಂಕೆ ಅವರ ನೆಚ್ಚಿನ ಜಾಗವಾಗಿತ್ತು. ಮಂಡ್ಯ, ಮೈಸೂರಿಗೆ ಭೇಟಿ ಕೊಟ್ಟಾಗ ಇದೇ ಮನೆಗೆ ಬಂದು ಆ ಕೋಣೆಯಲ್ಲಿಯೇ ಉಳಿದುಕೊಳ್ಳುತ್ತಿದ್ದರು.

    ಅದೇ ನೆಚ್ಚಿನ ಮನೆಯನ್ನು ತಮ್ಮ ಅಳಿಯ ಸಿದ್ದಾರ್ಥ ಅವರಿಗೆ ಕಾಫಿ ಡೇಗಾಗಿ ಬಿಟ್ಟುಕೊಟ್ಟಿದ್ದರು. ಕಾಫಿ ಡೇಗೆ ನವೀಕರಣ ಮಾಡಿದ್ದರೂ ಕೃಷ್ಣ ಅವರ ಪ್ರೀತಿಯ ಕೊಠಡಿಯನ್ನು ಅವರಿಗಾಗಿಯೇ ಬಿಡಲಾಗಿತ್ತು. ಮೈಸೂರು, ಮಂಡ್ಯ ಕಡೆಗೆ ಹೋದಾಗ ಕಾಫಿ ಡೇಯಲ್ಲಿರುವ ಆ ಒಂದು ಕೋಣೆಯಲ್ಲಿ ಕಾಲ ಕಳೆದು ಬಳಿಕ ಮನೆಗೆ ತೆರಳುತ್ತಿದ್ದರು. ಇದೀಗ ಅದೇ ಕಾಫಿ ಡೇ ಆವರಣದಲ್ಲಿ ಅಂತಿಮ ದರ್ಶನ ಹಾಗೂ ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3ರ ವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಜಿಲ್ಲಾಡಳಿತ ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ಧತೆ ನಡೆಸಿದೆ.ಇದನ್ನೂ ಓದಿ: ಯುದ್ಧಪೀಡಿತ ಸಿರಿಯಾದಿಂದ 75 ಭಾರತೀಯರು ಸ್ಥಳಾಂತರ

  • ಸಿದ್ಧಾರ್ಥ್ ಆತ್ಮಹತ್ಯೆ ಮಾಡ್ಕೊಂಡಿದ್ದ ನೇತ್ರಾವತಿ ಸೇತುವೆಗೆ ಕೊನೆಗೂ ತಡೆಬೇಲಿ

    ಸಿದ್ಧಾರ್ಥ್ ಆತ್ಮಹತ್ಯೆ ಮಾಡ್ಕೊಂಡಿದ್ದ ನೇತ್ರಾವತಿ ಸೇತುವೆಗೆ ಕೊನೆಗೂ ತಡೆಬೇಲಿ

    – ಕಾಫಿ ಡೇ ಸಂಸ್ಥಾಪಕನ ಬಳಿಕ 14 ಮಂದಿ ಸೂಸೈಡ್
    – 55 ಲಕ್ಷ ರೂ. ವೆಚ್ಚದಲ್ಲಿ ಸೇತುವೆಯುದ್ದಕ್ಕೂ ರಕ್ಷಣಾ ಬೇಲಿ

    ಮಂಗಳೂರು: ಕೆಫೆ ಕಾಫಿ ಡೇ ಸಂಸ್ಥಾಪಕ, ಕೋಟಿ ಒಡೆಯ ವಿ.ಜಿ. ಸಿದ್ಧಾರ್ಥ್ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂದ್ದ ನೇತ್ರಾವತಿ ಸೇತುವೆಗೆ ಕೊನೆಗೂ ತಡೆಬೇಲಿ ಭಾಗ್ಯ ಕರುಣಿಸಲಾಗಿದೆ.

    ಹೌದು. ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಂಡು ಇಂದಿಗೆ ಒಂದು ವರ್ಷವೇ ಕಳೆದು ಹೋಗಿದೆ. ಮಂಗಳೂರಿನ ಜಪ್ಪಿನಮೊಗರು ಬಳಿಯ ನೇತ್ರಾವತಿ ಸೇತುವೆಯಿಂದ ಹಾರಿ ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಸಾವಿನ ದಿನದಿಂದಲೇ ಈ ಸೇತುವೆಗೆ ತಡೆಬೇಲಿ ನಿರ್ಮಿಸಬೇಕೆಂದು ಸಾಕಷ್ಟು ಒತ್ತಾಯ ಕೇಳಿ ಬಂದಿದ್ದು, ರಾಜಕಾರಣಿಗಳು ಕೂಡ ಒಪ್ಪಿಕೊಂಡಿದ್ರು. ಇದನ್ನೂ ಓದಿ: ನೇತ್ರಾವತಿ ನದಿಗೆ ಮತ್ತೊಂದು ಜೀವ ಆಹುತಿ

    ಅಂದಿನಿಂದ ಇಂದಿನವರೆಗೆ ಈ ಸೇತುವೆಯಿಂದ ನದಿಗೆ ಹಾರಿ ಬರೋಬ್ಬರಿ 14 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದು. ಈ ಜಾಗವೊಂದು ಸೂಸೈಡ್ ಪಾಯಿಂಟ್ ಆಗಿತ್ತು. ಇದೀಗ ಸಿದ್ಧಾರ್ಥ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದ ಸೇತುವೆಗೆ ಕೊನೆಗೂ ತಡೆಬೇಲಿ ಭಾಗ್ಯ ಒದಗಿ ಬಂದಿದೆ. ಇದನ್ನೂ ಓದಿ: ಸಿದ್ಧಾರ್ಥ್ ಕಾಣೆಯಾಗಿದ್ದ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ

    ಸೇತುವೆಯುದ್ದಕ್ಕೂ ರಕ್ಷಣಾ ಬೇಲಿ ಅಳವಡಿಸುವ ಕಾರ್ಯ ಆರಂಭಗೊಂಡಿದೆ. ಸಿದ್ದಾರ್ಥ್ ಆತ್ಮಹತ್ಯೆಯ ಬಳಿಕ ಈ ಸೇತುವೆ ಬಳಿ ಬಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗಿತ್ತು. ಹೀಗಾಗಿ ಅನಾಹುತ ತಡೆಗಟ್ಟುವ ನಿಟ್ಟಿನಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ 55 ಲಕ್ಷ ರೂಪಾಯಿ ವೆಚ್ಚದಲ್ಲಿ ಸೇತುವೆಯುದ್ದಕ್ಕೂ ರಕ್ಷಣಾ ಬೇಲಿ ಅಳವಡಿಸುವ ಕಾಮಗಾರಿ ತ್ವರಿತಗತಿಯಲ್ಲಿ ನಡೆಯುತ್ತಿದೆ. ಇದನ್ನೂ ಓದಿ: ಸೇತುವೆಯ 8ನೇ ಕಂಬದಿಂದ ವ್ಯಕ್ತಿ ನೀರಿಗೆ ಹಾರಿದ್ದನ್ನು ಕಣ್ಣಾರೆ ಕಂಡ ಮೀನುಗಾರ

    ಸೇತುವೆ 800 ಮೀ.ಉದ್ದವಿದೆ. ಸೇತುವೆಯ ತಡೆಗೋಡೆಯ ಮೇಲೆ ರಕ್ಷಣಾ ಬೇಲಿಯು 5 ಅಡಿ ಎತ್ತರವಿದ್ದು, ಬೇಲಿಯ ಮೇಲ್ಗಡೆಯೂ ಹತ್ತಲು ಸಾಧ್ಯವಾಗದಂತೆ ಮೇಲ್ಭಾಗಕ್ಕೂ ನಾಲ್ಕು ಸಾಲು ಮುಳ್ಳು ತಂತಿಯನ್ನು ರಸ್ತೆಯ ಭಾಗಕ್ಕೆ ಬಗ್ಗಿಸಿ ಜೋಡಣೆ ಮಾಡಲಾಗುತ್ತಿದೆ.

  • ಕೆಫೆ ಕಾಫಿ ಡೇ ಶೇರು ಖರೀದಿಗೆ ಮುಂದಾದ ಐಟಿಸಿ ಕಂಪನಿ

    ಕೆಫೆ ಕಾಫಿ ಡೇ ಶೇರು ಖರೀದಿಗೆ ಮುಂದಾದ ಐಟಿಸಿ ಕಂಪನಿ

    ನವದೆಹಲಿ: ಸಿಗರೇಟ್ ತಯಾರಿಕಾ ಕ್ಷೇತ್ರದಲ್ಲಿ ತನ್ನದೇ ಆದಂತಃ ಹೆಸರು ಗಳಿಸಿರುವ ದೇಶದ ಅತಿ ದೊಡ್ಡ ಸಿಗರೆಟ್ ತಯಾರಕ ಕಂಪನಿ ಐಟಿಸಿ ಲಿಮಿಟೆಡ್, ಈಗ ಕಾಫಿ ಡೇ ಎಂಟರ್‌ಪ್ರೈಸಸ್ ಲಿಮಿಟೆಡ್‍ನಲ್ಲಿ(ಸಿಡಿಇಎಲ್) ಭಾಗವಾಗಿರುವ ಕೆಫೆ ಕಾಫಿ ಡೇ ಶೇರು ಖರೀದಿಗೆ ಮುಂದಾಗಿದೆ ಎನ್ನಲಾಗಿದೆ.

    ಆದರೆ ಕೆಫೆ ಕಾಫಿ ಡೇ ಐಟಿಸಿಯ ನಿರ್ಧರನ್ನು ನಿರಾಕರಿಸಿದೆ ಎನ್ನಲಾಗುತ್ತಿದೆ. ಐಟಿಸಿ ಕಂಪನಿ ತನ್ನ ಉದ್ಯಮವನ್ನು ಮತ್ತಷ್ಟು ಬೆಳೆಸುವ ಪ್ರಯತ್ನ ಮಾಡುತ್ತಿದ್ದು, ಅದರ ಭಾಗವಾಗಿ ಈಗ ಕಾಫಿ ಡೇಯಲ್ಲಿನ ಶೇರುಗಳನ್ನು ಖರೀದಿಸಲು ಮುಂದಾಗಿದೆ ಎಂಬುದು ಮೂಲಗಳಿಂದ ತಿಳಿದು ಬಂದಿದೆ.

    ಕೆಫೆ ಕಾಫಿ ಡೇ(ಸಿಸಿಡಿ) ಕಾಫಿ ಹೌಸ್‍ನ ಭಾಗವಾಗಿದ್ದು, ಇದನ್ನು ಸಿಡಿಇಎಲ್ ನೋಡಿಕೊಳ್ಳುತ್ತದೆ. ಭಾರತದಲ್ಲಿ ಕಾಫಿ ಡೇ ಸುಮಾರು 1,700 ಮಳಿಗೆಗಳನ್ನು ಹೊಂದಿದೆ. ಆದರೆ ಸಿಸಿಡಿ ಸ್ಥಾಪಕ ಸಿದ್ಧಾರ್ಥ್ ಅವರು ಆತ್ಮಹತ್ಯೆ ಮಾಡಿಕೊಂಡ ನಂತರ ಕಂಪನಿ ಸಂಕಷ್ಟದಲ್ಲಿ ಸಿಲುಕಿದೆ.

    ಸಿದ್ಧಾರ್ಥ್ ಅವರ ಸಾವಿನ ಬಳಿಕ ಕಾಫಿ ಡೇ ಎಂಟರ್‌ಪ್ರೈಸಸ್ ಸಿಸಿಡಿಯ ಶೇರ್ ಅನ್ನು ಮಾರುವ ಮೂಲಕ ಅದರ ಸಾಲವನ್ನು ತೀರಿಸಲು ಯೋಚಿಸುತ್ತಿದೆ. ಜೂನ್ ವರದಿಯ ಪ್ರಕಾರ, ಕೊಕೊ ಕೋಲಾ ಕಂಪನಿಯು ಸಿಡಿಇಎಲ್ ಜೊತೆ ಮಾತನಾಡಿ ಸಿಸಿಡಿಯಲ್ಲಿ ಗಣನೀಯ ಪಾಲನ್ನು ನೀಡುವಂತೆ ಹೇಳಿತ್ತು.

    ಇತ್ತೀಚಿಗಷ್ಟೇ, ಸಿಡಿಇಎಲ್ ಮಂಡಳಿಯು ತನ್ನ ಸಾಲಗಳನ್ನು ತಗ್ಗಿಸಲು ಸಹಾಯ ಮಾಡಲು ಬೆಂಗಳೂರಿನ ಗ್ಲೋಬಲ್ ವಿಲೇಜ್ ಟೆಕ್ ಪಾರ್ಕ್ ಅನ್ನು ಬ್ಲ್ಯಾಕ್ಸ್ಟೋನ್‍ಗೆ ಮಾರಾಟ ಮಾಡಲು ಅನುಮೋದಿಸಿತು. ಈ ಒಪ್ಪಂದದಿಂದ ಸಿಡಿಇಎಲ್ 3,000 ಕೋಟಿ ರೂ.ಗಳನ್ನು ಸಂಗ್ರಹಿಸುವ ನಿರೀಕ್ಷೆಯಿದೆ. ಆದಾಗ್ಯೂ, ಈ ಒಪ್ಪಂದವು ಬ್ಲಾಕ್‍ಸ್ಟೋನ್‍ನ ಸರಿಯಾದ ಪರಿಶ್ರಮ ಮತ್ತು ಇತರ ಅಗತ್ಯ ಅನುಮೋದನೆಗಳಿಗೆ ಒಳಪಟ್ಟಿದೆ.

    ಭಾರತವು ತಂಬಾಕಿನ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಹಾಗೆಯೇ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ನಿಷೇಧಿಸಲಾಗಿದೆ. ಹೀಗಾಗಿ ಈಗ ಐಟಿಸಿ ಕಂಪನಿ ಸಿಗರೇಟ್ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸಿ ತನ್ನ ವ್ಯವಹಾರವನ್ನು ಇತರೆ ಕ್ಷೇತ್ರದಲ್ಲಿ ವಿಸ್ತರಿಸಲು ಮುಂದಾಗಿದೆ ಎನ್ನಲಾಗಿದೆ. ಮೂಲಗಳು ಹೇಳುವಂತೆ, ಸಿಡಿಇಎಲ್ ಶೇರ್ ಖರೀದಿಗೆ ಐಟಿಸಿ ಮುಂದಾಗಿದ್ದು, ಈ ವಿಚಾರದ ಚರ್ಚೆಯು ಸದ್ಯ ಪ್ರಾಥಮಿಕ ಹಂತದಲ್ಲಿದೆ.

    ಈ ವಿಚಾರದ ಬಗ್ಗೆ ಐಟಿಸಿ ಪ್ರತಿಕ್ರಿಯಿಸಿ ಯಾವುದೇ ಮಾತುಕತೆ ನಡೆದಿಲ್ಲ ಎಂದು ತಿಳಿಸಿದೆ.

  • ಟ್ಯಾಕ್ಸ್ ಟೆರರಿಸಂ ದೇಶದ ಸಾಧನೆಯನ್ನು ಕುಗ್ಗಿಸುತ್ತಿದೆ: ಇನ್ಫೋಸಿಸ್ ಮಾಜಿ ನಿರ್ದೇಶಕ

    ಟ್ಯಾಕ್ಸ್ ಟೆರರಿಸಂ ದೇಶದ ಸಾಧನೆಯನ್ನು ಕುಗ್ಗಿಸುತ್ತಿದೆ: ಇನ್ಫೋಸಿಸ್ ಮಾಜಿ ನಿರ್ದೇಶಕ

    ನವದೆಹಲಿ: ಕೆಫೆ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ್ ಅವರ ಸಾವಿನ ಬೆನ್ನಲ್ಲೇ ಉದ್ಯಮಿಗಳು ಟ್ಯಾಕ್ಸ್ ಟೆರರಿಸಂ ಕುರಿತು ತಮ್ಮ ಅಸಮಾಧಾನ ಹೊರ ಹಾಕುತ್ತಿದ್ದಾರೆ.

    ಇದೀಗ ಉದ್ಯಮಿ ಹಾಗೂ ಇನ್ಫೋಸಿಸ್ ಮಾಜಿ ನಿರ್ದೇಶಕ ಮೋಹನ್ ದಾಸ್ ಪೈ ಆಕ್ರೋಶ ವ್ಯಕ್ತಪಡಿಸಿದ್ದು, ಉದ್ಯಮಿಗಳು ಟ್ಯಾಕ್ಸ್ ಟೆರರಿಸಂನಿಂದ ಬೇಸತ್ತು ಹೋಗಿದ್ದಾರೆ ಎಂದು ತಿಳಿಸಿದ್ದಾರೆ.

    ಟ್ಯಾಕ್ಸ್ ಟೆರರಿಸಂ ಉದ್ಯಮಿಗಳನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ ಎಂಬ ಮಾತುಗಳು ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ.ಸಿದ್ಧಾರ್ಥ್ ಅವರ ಸಾವಿನ ನಂತರ ಕೇಳಿ ಬಂದಿತ್ತು. ಇದೀಗ ಮೋಹನ್ ದಾಸ್ ಪೈ ಹಾಗೂ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರು ಸಹ ಈ ಕುರಿತು ಅಸಮಾಧಾನ ಹೊರ ಹಾಕಿದ್ದು, ರಾಷ್ಟ್ರೀಯ ವಾಹಿನಿಯೊಂದಕ್ಕೆ ನೀಡಿದ ಸಂರ್ದಶದಲ್ಲಿ ಈ ಕುರಿತು ಪ್ರತಿಕ್ರಿಯಿಸಿದ್ದಾರೆ.

    ತೆರಿಗೆ ಭಯೋತ್ಪಾದನೆಯು ದೇಶದಲ್ಲಿನ ವ್ಯಾಪಾರದ ಸರಳತೆಗೆ ಅಪಾಯವನ್ನು ತಂದೊಡ್ಡಿದೆ. ಇದನ್ನು ಕೊನೆಗೊಳಿಸಲು ಸರ್ಕಾರ ಭರವಸೆ ನೀಡಿದರೂ ಅನಗತ್ಯ ತೆರಿಗೆ ಕುರಿತು ದೂರುಗಳು ಇನ್ನೂ ವ್ಯಾಪಕವಾಗಿವೆ. ಇದು ದೇಶದ ಸಾಧನೆಯನ್ನು ಕುಗ್ಗಿಸುತ್ತದೆ ಎಂದು ಮೋಹನ್ ದಾಸ್ ಪೈ ಅಭಿಪ್ರಾಯಪಟ್ಟಿದ್ದಾರೆ.

    ಈ ಕುರಿತು ಪೈ ಅವರು ತಮ್ಮ ಜೀವನದಲ್ಲಾದ ಘಟನೆ ಮೂಲಕ ವಿವರಿಸಿದ್ದು, ಕಿರಣ್ ಎಂಬ ಸರ್ಕಾರಿ ಅಧಿಕಾರಿ ಸಂದೇಶ ಕಳುಹಿಸಿದ್ದರು. ಇದಕ್ಕೆ ನಾನು ಉತ್ತರಿಸಿ, ಇದು ಸರಿಯಾದ ಕ್ರಮವಲ್ಲ ಎಂದು ತಿಳಿಸಿದೆ. ಇದು ಅಧಿಕಾರಿಗಳಲ್ಲಿ ಯಾವ ರೀತಿಯ ಸಂಸ್ಕøತಿ ಬೆಳೆದಿದೆ ಎಂಬುದನ್ನು ತೋರಿಸುತ್ತದೆ. ಇದನ್ನು ಯಾರು ಯೋಚಿಸುತ್ತಾರೆ, ಅವರು ಹುಟ್ಟಿರುವುದೇ ನಮ್ಮನ್ನು ಆಳುವುದಕ್ಕಾಗಿ ಎಂಬ ಅಹಂನಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

    ಈ ಘಟನೆ ಕುರಿತು ಅಧಿಕಾರಿ ಮತ್ತೆ ಪ್ರತ್ಯುತ್ತರ ನೀಡಿದ್ದು, ಇನ್ಫೋಸಿಸ್‍ನ ಸಹೋದ್ಯೋಗಿಯನ್ನು ಕರೆದು ನನ್ನನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಬೆದರಿಕೆ ಹಾಕಿದ್ದರು ಎಂದು ಘಟನೆಯನ್ನು ವಿವರಿಸಿದ್ದಾರೆ. ಇಂತಹ ವರ್ತನೆಗಳನ್ನು ಖಂಡಿಸಬೇಕಿದೆ. ಈ ಮೂಲಕ ತೆರಿಗೆ ಭಯೋತ್ಪಾದನೆಯನ್ನು ತೊಲಗಿಸಬೇಕಿದೆ. ಆದರೆ ಸರ್ಕಾರ ಈ ಕುರಿತು ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಈ ಕುರಿತು ಭರವಸೆ ನೀಡಿದ್ದರು. ಅಲ್ಲದೆ, ಇದು 2014ರ ಎನ್‍ಡಿಎ ಪ್ರಣಾಳಿಕೆಯಲ್ಲಿಯೂ ಇದೆ. ಕಳೆದ 5 ವರ್ಷಗಳಿಂದ ಇದು ದ್ವಿಗುಣಗೊಂಡಿದ್ದು, 6 ಲಕ್ಷ ಕೋಟಿ ರೂ. ಸಂಗ್ರಹವಾಗುತ್ತಿದೆ. ಹೀಗಾಗಿ ಟ್ಯಾಕ್ಸ್ ಟೆರರಿಸಂ ಕಡಿಮೆಯಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಕಳೆದ ವರ್ಷದ ಬಜೆಟ್‍ನಲ್ಲಿ ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸದೆ ಹಣಕಾಸು ಸಚಿವರನ್ನು ದೋಷಿಸಿದ್ದರು ಎಂದು ಪೈ ವಿವರಿಸಿದ್ದಾರೆ.

    ಈ ಟ್ಯಾಕ್ಸ್ ಟೆರರಿಸಂ ತೊಲಗಿಸಬೇಕಾದಲ್ಲಿ ಸರ್ಕಾರ ಹಾಗೂ ಕಂಪನಿಗಳ ಸಿಇಓಗಳ ನಡುವೆ ಆಗಾಗ ಸಭೆ ಅಥವಾ ಮಾತುಕತೆ ನಡೆಸಬೇಕು. ಆಗ ಉದ್ಯಮಿಗಳ ಸಮಸ್ಯೆಗಳನ್ನು ತಿಳಿಯಬಹುದು ಎಂದು ಹೇಳಿದ್ದಾರೆ.

    ಕೆಫೆ ಕಾಫಿ ಡೇ ಸಿದ್ಧಾರ್ಥ್ ಅವರು ಸಾವನ್ನಪ್ಪುವುದಕ್ಕೂ ಮುನ್ನ ತಮ್ಮ ಪತ್ರದಲ್ಲಿ ಆದಾಯ ತೆರಿಗೆ ಅಧಿಕಾರಿಗಳ ಕಿರುಕುಳದಿಂದ ಬೇಸತ್ತಿದ್ದೇನೆ ಎಂದು ಉಲ್ಲೇಖಿಸಿದ್ದರು. ನಮ್ಮ ಶೇರನ್ನು ಎರಡು ವಿವಿಧ ಹಂತಗಳಲ್ಲಿ ಸಲ್ಲಿಸಿ, ನಮ್ಮ ಕಾಫಿಯ ದಿನದ ಶೇರುಗಳ ಸ್ಥಾನವನ್ನು ಪಡೆದುಕೊಂಡಿದ್ದೇವೆ. ಪರಿಷ್ಕೃತ ಆದಾಯ ತೆರಿಗೆಯನ್ನೂ ನಮ್ಮಿಂದ ಸಲ್ಲಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದರು. ಆದಾಯ ತೆರಿಗೆ ಇಲಾಖೆಯು ಈ ಆರೋಪಗಳನ್ನು ತಳ್ಳಿ ಹಾಕಿತ್ತು, ಆದಾಯ ತೆರಿಗೆ ಕಾಯ್ದೆಯ ನಿಬಂಧನೆಗಳ ಪ್ರಕಾರ ಇಲಾಖೆ ಕಾರ್ಯನಿರ್ವಹಿಸಿದೆ ಎಂದು ಪ್ರತಿಕ್ರಿಯಿಸಿತ್ತು.

  • ಕಾಫಿ ಕಿಂಗ್ ಸಿದ್ಧಾರ್ಥ್‌ಗೆ ಬೈಕ್ ರ‍್ಯಾಲಿ ಮೂಲಕ ನಮನ

    ಕಾಫಿ ಕಿಂಗ್ ಸಿದ್ಧಾರ್ಥ್‌ಗೆ ಬೈಕ್ ರ‍್ಯಾಲಿ ಮೂಲಕ ನಮನ

    ಬೆಂಗಳೂರು: ಇತ್ತೀಚೆಗೆ ನಿಧನರಾದ ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ.ಸಿದ್ಧಾರ್ಥ್ ಅವರಿಗೆ ಬೈಕ್ ರ‍್ಯಾಲಿ ನಡೆಸುವ ಮೂಲಕ ಯುವಕರು ಗೌರವ ನಮನ ಸಲ್ಲಿಸುತ್ತಿದ್ದಾರೆ.

    ರೈಡರ್ಸ್ ರಿಪಬ್ಲಿಕ್ ಮೋಟರ್ ಸೈಕಲ್ ಕ್ಲಬ್‍ನ 50ಕ್ಕೂ ಹೆಚ್ಚು ಬೈಕ್ ಸವಾರರಿಂದ ಈ ರ‍್ಯಾಲಿ ಹಮ್ಮಿಕೊಂಡಿದ್ದು, ಸುಮಾರು 400 ಕಿ.ಮೀ. ಮೋಟರ್ ಸೈಕಲ್ ರೈಡ್ ನಡೆಸುವ ಮೂಲಕ ಸಿದ್ಧಾರ್ಥ್ ಅವರಿಗೆ ಗೌರವ ನಮನ ಸಲ್ಲಿಸಲಿದ್ದಾರೆ.

    ರಾಜ್ಯದಿಂದ ಆಂಧ್ರ ಪ್ರದೇಶದ ಪೆನುಗೊಂಡವರೆಗೆ ಈ ವಿಶೇಷ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿದ್ದು, ಮೋಟರ್ ಸೈಕಲ್ ರೈಡ್‍ನಲ್ಲಿ ದಾರಿಯುದ್ದಕ್ಕೂ ಕಾಣಸಿಗುವ ಪ್ರಮುಖ ಕೆಫೆ ಕಾಫಿ ಡೇ ಔಟ್‍ಲೆಟ್‍ಗಳಿಗೆ ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿ, ಹೀಗೆ ಪೆನುಗೊಂಡದವರೆಗೆ ತೆರಳಲಿದ್ದಾರೆ.

    ಸೋಮವಾರ ಸಿದ್ಧಾರ್ಥ್ ಕಾಣೆಯಾಗಿರುವ ಕುರಿತು ಸುದ್ದಿ ಬಿತ್ತರವಾಗಿತ್ತು. ಕೆಫೆ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ್ ಅವರು ಕಾಣೆಯಾಗಿ 36 ಗಂಟೆಗಳ ನಂತರ ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪೊಲಿಸರು ತನಿಖೆ ನಡೆಸುತ್ತಿದ್ದಾರೆ.

    1993ರಲ್ಲಿ ಕಾಫಿ ಉದ್ದಿಮೆಗೆ ಕಾಲಿಟ್ಟ ಸಿದ್ದಾರ್ಥ್, ತಮ್ಮ ಜೀವಮಾನದಲ್ಲಿ ಮತ್ತೆಂದು ತಿರುಗಿಯೂ ನೋಡಲಿಲ್ಲ. 24ನೇ ವಯಸ್ಸಿಗೆ ಸ್ಟಾಕ್ ಮಾರ್ಕೆಟ್‍ನಲ್ಲಿ ಷೇರು ಖರೀದಿಸಿದ್ದರು. ಚಿಕ್ಕಮಗಳೂರು-ಹಾಸನ-ಮಡಿಕೇರಿಯಲ್ಲಿ ನಷ್ಟದಲ್ಲಿದ್ದ ಕಾಫಿ ತೋಟಗಳನ್ನು ಖರೀದಿಸಿ, ಹಂತ ಹಂತವಾಗಿ ಬೆಳೆಯುತ್ತಾ 13 ಸಾವಿರಕ್ಕೂ ಅಧಿಕ ಹೆಕ್ಟೇರ್ ಕಾಫಿ ತೋಟದ ಮಾಲೀಕರಾದರು.

    1996ರಲ್ಲಿ ಬೆಂಗಳೂರಿನ ಎಂ.ಜಿ ರಸ್ತೆಯಲ್ಲಿ ಮೊದಲ ಕಾಫಿ ಡೇ ಆರಂಭಿಸಿದ್ದರು. ಒಂದು ನೂರಾಗಿ, ನೂರು ಐನೂರಾಗಿ ವಿಶ್ವಾದ್ಯಂತ 10ಕ್ಕೂ ಹೆಚ್ಚು ದೇಶ ಸೇರಿದಂತೆ 1772 ಕಾಫಿ ಡೇ ಔಟ್‍ಲೇಟ್‍ನ ಒಡೆಯರಾದರು. ವಾರ್ಷಿಕ 28 ಸಾವಿರ ಟನ್ ಕಾಫಿ ರಫ್ತು ಮಾಡುವ ಮೂಲಕ ಜಗತ್ತೇ ಕರ್ನಾಟಕದತ್ತ ತಿರುಗಿ ನೋಡುವಂತೆ ಮಾಡಿದ್ದರು. ಕಾಫಿ ಡೇಗಳಿಗೆ ಬೇಕಾದ ಬೀಜವನ್ನು ಸ್ವಂತ ತೋಟದಿಂದಲೇ ಬೆಳೆಯುತ್ತಿದ್ದರು. ಕಾಫಿಯ ಜೊತೆ 10ಕ್ಕೂ ಹೆಚ್ಚು ವಿವಿಧ ಕಂಪನಿಗಳನ್ನು ಆರಂಭಿಸಿ ಸಾವಿರಾರು ಜನರಿಗೆ ಉದ್ಯೋಗ ನೀಡಿದ್ದರು.

    ಸಿದ್ಧಾರ್ಥ್ ಅವರು ಸಭೆ ಆರಂಭಕ್ಕೂ ಮೊದಲೇ ನಮ್ಮನ್ನು ಉಳಿಸೋದೆ ಹಸಿರು, ಹಸಿರನ್ನು ಬೆಳೆಸಿ ಎಂದು ಸಾರಿ-ಸಾರಿ ಹೇಳುತ್ತಿದ್ದರು. ಕಾರ್ಮಿಕರ ಮಕ್ಕಳ ಮದುವೆ, ಮನೆಗಾಗಿ ಬಂದವರಿಗೆಲ್ಲ ಸಹಾಯ ಮಾಡುತ್ತಿದ್ದ ಇವರನ್ನು ಜನ ಪೂಜ್ಯ ಭಾವನೆಯಿಂದಲೇ ನೋಡುತ್ತಿದ್ದರು. ಇಂತಹ ಗುಣದ ಸಿದ್ಧಾರ್ಥ್ ಅವರಿಗೆ ಇದೀಗ ಬೈಕ್ ರ‍್ಯಾಲಿ ಮೂಲಕ ಯುವಕರು ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ.

  • ಕಾಫಿ ಕರ್ಣ

    ಕಾಫಿ ಕರ್ಣ

    https://www.youtube.com/watch?v=eoB0ZCByQ64

  • ಖಾಸಗಿ ಫೈನಾನ್ಸ್ ಸಂಸ್ಥೆಯ ಒತ್ತಡ ತಾಳಲಾರದೇ ಸಿದ್ಧಾರ್ಥ್ ಆತ್ಮಹತ್ಯೆ?

    ಖಾಸಗಿ ಫೈನಾನ್ಸ್ ಸಂಸ್ಥೆಯ ಒತ್ತಡ ತಾಳಲಾರದೇ ಸಿದ್ಧಾರ್ಥ್ ಆತ್ಮಹತ್ಯೆ?

    ಮುಂಬೈ: ಖಾಸಗಿ ಫೈನಾನ್ಸ್ ಸಂಸ್ಥೆಯ ಒತ್ತಡ ತಾಳಲಾರದೇ ಕೆಫೆ ಕಾಫಿ ಡೇ(ಸಿಸಿಡಿ) ಸಂಸ್ಥಾಪಕ ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಂಡರೇ ಎನ್ನುವ ಪ್ರಶ್ನೆ ಈಗ ಹುಟ್ಟಿಕೊಂಡಿದೆ.

    ಹೌದು, ಸಿದ್ದಾರ್ಥ್ ಅವರು ತಮ್ಮ ವ್ಯವಹಾರವನ್ನು ವಿಸ್ತರಿಸಲು ಹಲವು ಕಡೆ ಸಾಲವನ್ನು ಪಡೆದುಕೊಂಡಿದ್ದರು. ಸದ್ಯ ವೈರಲ್ ಆಗಿರುವ ಸಿದ್ಧಾರ್ಥ್ ಅವರು ಬರೆದಿದ್ದಾರೆ ಎನ್ನಲಾದ ಪತ್ರದಲ್ಲಿ ಖಾಸಗಿ ಸಂಸ್ಥೆಯೊಂದು ಒತ್ತಡ ಹಾಕುತ್ತಿದೆ ಇದರ ಜೊತೆಗೆ ಖಾಸಗಿ ಇಕ್ವಿಟಿ ಪಾಲುದಾರರು ಷೇರುಗಳನ್ನು ವಾಪಸ್ ಪಡೆಯಬೇಕೆಂದು ಒತ್ತಡ ಹಾಕುತ್ತಿದ್ದಾರೆ ಎನ್ನುವ ಅಂಶ ಪ್ರಸ್ತಾಪವಾಗಿತ್ತು.

    ಸಿಸಿಡಿ ಮೂಲಗಳನ್ನು ಆಧಾರಿಸಿ ವರದಿ ಮಾಡಿದ ಡಿಎನ್‍ಎ, ಸಿಸಿಡಿಯಲ್ಲಿ ಹೂಡಿಕೆ ಮಾಡಿದ ಖಾಸಗಿ ಇಕ್ವಿಟಿ ಸಂಸ್ಥೆ ಕೆಕೆಆರ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಶೇ.8 ರಷ್ಟು ಬಡ್ಡಿ ದರದಲ್ಲಿ ಸಾಲ ಪಡೆದಿತ್ತು. ಈ ಕೆಕೆಆರ್ ಸಿದ್ದಾರ್ಥ್ ಅವರ ಬಳಿ ಶೇ.25 ರಷ್ಟು ಬಡ್ಡಿ ಬೇಡಿಕೆಯನ್ನು ಇಟ್ಟಿತ್ತು ಎಂದು ವರದಿ ಮಾಡಿದೆ.

    ಕಾಫಿ ಡೇ ಕಂಪನಿಯಲ್ಲಿ 4 ವಿದೇಶಿ ಕಾರ್ಪೋರೇಟ್ ಸಂಸ್ಥೆಗಳು ಶೇ.22.35 ರಷ್ಟು ಪಾಲನ್ನು ಹೊಂದಿವೆ. ಎನ್‍ಎಲ್‍ಎಸ್ ಮಾರಿಷಸ್ ಶೇ.10.61 ಪಾಲನ್ನು ಹೊಂದಿದ್ದರೆ, ಕೆಕೆಆರ್ ಮಾರಿಷಸ್ ಪ್ರೈವೆಟ್ ಈಕ್ವಿಟಿ ಲಿಮಿಟೆಡ್ ಶೇ.6.07 ರಷ್ಟು (1.28 ಕೋಟಿ ಷೇರು) ಪಾಲನ್ನು ಹೊಂದಿದೆ.

    ವಿದೇಶಿ ಬ್ಯಾಂಕಿಂಗ್‍ಯೇತರ ಹಣಕಾಸು ಸಂಸ್ಥೆಗಳು (ಎನ್‍ಬಿಎಫ್‍ಸಿ) ಕಡಿಮೆ ದರದಲ್ಲಿ ಸಾಲವನ್ನು ಪಡೆದು ಹೆಚ್ಚಿನ ಬಡ್ಡಿಗೆ ಸಾಲವನ್ನು ನೀಡುತ್ತದೆ. ಭಾರತದ ಬ್ಯಾಂಕ್ ಗಳಿಂದ ಶೇ.8-9 ರ ಬಡ್ಡಿ ದರದಲ್ಲಿ ಸಾಲವನ್ನು ಪಡೆದು ಆ ಹಣವನ್ನು ಭಾರತದ ಉದ್ಯಮಿಗಳಿಗೆ ಶೇ.22.25 ಬಡ್ಡಿ ದರದಲ್ಲಿ ಎನ್‍ಬಿಎಫ್‍ಸಿಗಳು ಸಾಲವನ್ನು ನೀಡುತ್ತವೆ. ಸಂಸ್ಥೆ ಲಾಭದಲ್ಲಿದ್ದರೆ ಈ ಬಡ್ಡಿ ದರದಲ್ಲಿ ಹಣವನ್ನು ತೀರಿಸುತ್ತದೆ. ಆದರೆ ನಷ್ಟದಲ್ಲಿದ್ದರೆ ಇಷ್ಟೊಂದು ಮೊತ್ತವನ್ನು ತೀರಿಸುವುದು ಅಸಾಧ್ಯವಾಗುತ್ತದೆ. ಎನ್‍ಬಿಎಫ್‍ಸಿಯ ಈ ಮೊಡಸ್ ಅಪರೆಂಡಿಗೆ ಈಗ ಸಿದ್ದಾರ್ಥ್ ಬಲಿಯಾಗಿರಬಹುದೇ ಎನ್ನುವ ಅನುಮಾನ ಹುಟ್ಟಿದೆ.

    ಹೂಡಿಕೆದಾರರೊಬ್ಬರು ಪ್ರತಿಕ್ರಿಯಿಸಿ, ಸಾಲ ನೀಡಿದ ಖಾಸಗಿ ಇಕ್ವಿಟಿಗಳು ಮಾಲೀಕರಿಂದ ಹೆಚ್ಚಿನ ಲಾಭವವನ್ನು ನಿರೀಕ್ಷಿಸುತ್ತವೆ. ಈ ಕಾರಣಕ್ಕೆ ಉದ್ಯಮಿಗಳ ಮೇಲೆ ಒತ್ತಡವನ್ನು ಹಾಕುತ್ತಲೇ ಇರುತ್ತದೆ. ಸಾಲ ತೀರಿಸಲು ಸಾಧ್ಯವಾಗದೇ ಇದ್ದಾಗ ಅನಿವಾರ್ಯವಾಗಿ ಸಂಸ್ಥೆಯನ್ನು ಮಾರಾಟ ಮಾಡಬೇಕಾಗುತ್ತದೆ. ಒತ್ತಡ ಹಾಕುವ ಮೂಲಕ ವಿದೇಶಿ ಬ್ರ್ಯಾಂಡ್ ಗಳಿಗೆ ಪ್ರತಿ ಸ್ಪರ್ಧಿಯಾಗಿ ಬೆಳೆಯುತ್ತಿರುವ ದೇಶದ ಉದ್ಯಮಗಳನ್ನು ನಿರ್ನಾಮ ಮಾಡುತ್ತವೆ ಎಂದು ಹೇಳಿದ್ದಾರೆ.

    ಭಾರತದ ಬ್ಯಾಂಕ್ ಮತ್ತು ಖಾಸಗಿ ಸಂಸ್ಥೆಗಳಿಂದ ಪಡೆದ ಸಾಲವನ್ನು ತೀರಿಸಲು ಮೈಂಡ್ ಟ್ರೀ ಕಂಪನಿಯಲ್ಲಿದ್ದ ಷೇರನ್ನು ಸಿದ್ದಾರ್ಥ್ ಲಾರ್ಸನ್ ಆಂಡ್ ಟ್ಯಾಬ್ರೋ ಕಂಪನಿಗೆ ಮಾರಾಟ ಮಾಡಿದ್ದರು. ತನ್ನ ಬಳಿಯಿದ್ದ ಒಟ್ಟು ಶೇ.20.32 ಷೇರನ್ನು 3,200 ಕೋಟಿ ರೂ.ಗೆ ಮಾರಾಟ ಮಾಡಿ ಕೆಲ ಸಾಲವನ್ನು ತೀರಿಸಿದ್ದರು.

    ಮತ್ತಷ್ಟು ಸಾಲ ಬಾಕಿ ಇದ್ದ ಹಿನ್ನೆಲೆಯಲ್ಲಿ ಸಿದ್ಧಾರ್ಥ್ ಅವರು ತಮ್ಮ ಕನಸಿನ `ಕೆಫೆ ಕಾಫಿ ಡೇ’ಯನ್ನು ಬಹು ರಾಷ್ಟ್ರೀಯ ಕೋಕಾ ಕೋಲಾ ಕಂಪನಿಗೆ ಮಾರಾಟ ಮಾಡಲು ಮುಂದಾಗಿದ್ದರು. ಈಗಾಗಲೇ ಅಮೆರಿಕದಿಂದ ಕೋಕಾ ಕೋಲಾ ಅಧಿಕಾರಿಗಳು ಸಿದ್ಧಾರ್ಥ ಒಡೆತನದ ಕಂಪನಿಗೆ ಭೇಟಿ ನೀಡಿ ಖರೀದಿ ಸಂಬಂಧ ಮಾತುಕತೆ ನಡೆಸಿದ್ದರು.

    ಅಂದಾಜು 10 ಸಾವಿರ ಕೋಟಿ ರೂ.ಗೆ ತನ್ನ ಕಂಪನಿಯನ್ನು ಮಾರಾಟ ಮಾಡುವ ಸಂಬಂಧ ಮಾತುಕತೆ ನಡೆದಿದ್ದರೂ ಇಲ್ಲಿಯವರೆಗೆ ಯಾವುದೂ ಅಂತಿಮವಾಗಿರಲಿಲ್ಲ. ಕಂಪನಿಯನ್ನು ಮಾರಾಟ ಮಾಡಿದರೂ, ಅದರಲ್ಲಿ ಒಂದಷ್ಟು ಪ್ರಮಾಣದ ಷೇರು ಉಳಿಸಿಕೊಳ್ಳಲು ಸಿದ್ಧಾರ್ಥ್ ಅವರು ಮುಂದಾಗಿದ್ದರು. ಇದು ಕೋಕಾ ಕೋಲಾಗೆ ತೊಡಕಾಗಿತ್ತು ಎಂದು ವರದಿಯಾಗಿತ್ತು.

    ಮೈಂಡ್ ಟ್ರೀ ಷೇರು ಎಷ್ಟಿತ್ತು?
    2011ರಲ್ಲಿ ಒಂದು ಷೇರಿಗೆ 87 ರೂ. ನೀಡಿ ಶೇ.6.95 ಅಥವಾ 28 ಲಕ್ಷ ಮೈಂಡ್ ಟ್ರೀ ಷೇರುಗಳನ್ನು 24.36 ಕೋಟಿ ರೂ. ನೀಡಿ ಸಿದ್ಧಾರ್ಥ್ ಖರೀದಿ ಮಾಡಿದ್ದರು. ಇದಾದ ನಂತರ 2012 ರಲ್ಲಿ ಒಂದು ಷೇರಿಗೆ 122.3 ರೂ. ನೀಡಿ ಶೇ.3.27 ಅಥವಾ 13.47 ಲಕ್ಷ ಷೇರುಗಳನ್ನು 122.33 ಕೋಟಿ ರೂ. ನೀಡಿ ಖರೀದಿಸಿದ್ದರು. 2017 ರಲ್ಲಿ ಶೇ. 0.23 ಅಥವಾ 4.41 ಷೇರುಗಳನ್ನು ಖರೀದಿಸಿದ್ದರು. ಒಂದು ಷೇರನ್ನು 529 ರೂ. ನೀಡಿ ಖರೀದಿಸಿದ್ದ ಪರಿಣಾಮ ಸಿದ್ಧಾರ್ಥ್ ಅವರು ಒಟ್ಟು ಮೈಂಡ್ ಟ್ರೀಯಲ್ಲಿ ಶೇ.19.94 ಪಾಲು ಷೇರನ್ನು ಹೊಂದಿದ್ದರು. ಈ ಮಧ್ಯೆ ಮೈಂಡ್ ಟ್ರೀ ಕಂಪನಿ ಬೋನಸ್ ರೂಪದಲ್ಲಿ ಸಿದ್ಧಾರ್ಥ್ ಅವರಿಗೆ ಷೇರುಗಳನ್ನು ನೀಡಿತ್ತು.

    2018ರಲ್ಲಿ ಸಿದ್ಧಾರ್ಥ್ ಅವರು ಮೈಂಡ್ ಟ್ರೀ ಕಂಪನಿಯಲ್ಲಿ ಒಟ್ಟು ಶೇ.20.41 ರಷ್ಟು ಷೇರುಗಳನ್ನು ಹೊಂದಿದ್ದರು. ಇದರಲ್ಲಿ ಶೇ.3.33 ಅಥವಾ 54.69 ಲಕ್ಷ ಷೇರುಗಳು ನೇರವಾಗಿ ಸಿದ್ಧಾರ್ಥ್ ಅವರ ಹೆಸರಿನಲ್ಲಿದ್ದರೆ ಶೇ.10.63 ಅಥವಾ 1.74 ಷೇರುಗಳು ಕಾಫಿ ಡೇ ಎಂಟರ್ಪ್ರೈಸ್ ಹೆಸರಿನಲ್ಲಿತ್ತು. ಉಳಿದ ಶೇ.6.45 ಷೇರುಗಳು ಅಥವಾ 1.05 ಕೋಟಿ ಷೇರುಗಳು ಕಾಫಿ ಡೇ ಟ್ರೇಡಿಂಗ್ ಲಿಮಿಟೆಡ್ ಕಂಪನಿಯ ಹೆಸರಿನಲ್ಲಿತ್ತು.

    https://www.youtube.com/watch?v=-V5nfhPjxb8

    ಕೆಫೆ ಕಾಫಿ ಡೇ 2018ರ ಹಣಕಾಸು ವರ್ಷದಲ್ಲಿ 1,777 ಕೋಟಿ ರೂ. ಆದಾಯ ಗಳಿಸಿದ್ದರೆ, 2019ರ 1,814 ಕೋಟಿ ರೂ. ಆದಾಯ ಗಳಿಸಿತ್ತು. 2020ರ ಮಾರ್ಚ್ ವೇಳೆಗೆ 2,250 ಕೋಟಿ ರೂ. ಆದಾಯ ಗಳಿಸುವ ಗುರಿಯನ್ನು ಹಾಕಿಕೊಂಡಿತ್ತು.

    ದೇಶದೆಲ್ಲೆಡೆ ಒಟ್ಟು 1,752 ಕೆಫೆಗಳನ್ನು ಹೊಂದಿದ್ದ ಕಂಪನಿ ಒಟ್ಟು 60 ಸಾವಿರಕ್ಕೂ ಅಧಿಕ ಕಾಫಿ ವೆಂಡಿಂಗ್ ಮಷೀನ್‍ಗಳನ್ನು ಹೊಂದಿದೆ. ಭಾರತ ಅಲ್ಲದೆ ವಿಯೆನ್ನಾ, ಝೆಕ್ ರಿಪಬ್ಲಿಕ್, ಮಲೇಷ್ಯಾ, ನೇಪಾಳ ಮತ್ತು ಈಜಿಪ್ಟ್ ನಲ್ಲೂ ಕಂಪನಿ ವ್ಯವಹಾರ ನಡೆಸುತಿತ್ತು.

  • ‘T’ ಯಮ..!

    ‘T’ ಯಮ..!

    https://www.youtube.com/watch?v=ubn6UZ1R4pU

  • ಸಿದ್ಧಾರ್ಥ್ ಸಾವಿನ ಸುತ್ತ ಅನುಮಾನದ ಹುತ್ತ!

    ಸಿದ್ಧಾರ್ಥ್ ಸಾವಿನ ಸುತ್ತ ಅನುಮಾನದ ಹುತ್ತ!

    ಮಂಗಳೂರು: ಉದ್ಯಮಿ ಸಿದ್ಧಾರ್ಥ್ ಅವರ ಸಾವಿನ ಸುತ್ತ ಅನುಮಾನದ ಹುತ್ತ ಎದ್ದಿದೆ. ಕಾಫಿ ಕಿಂಗ್ ಸಿದ್ಧಾರ್ಥ್ ಅವರದ್ದು ಸಹಜ ಸಾವೋ? ಅಸಹಜ ಸಾವೋ ಎನ್ನುವ ಪ್ರಶ್ನೆ ಎದ್ದಿದೆ. ಇಂತಹ ಅನುಮಾನಗಳಿಗೆ ಹಲವು ಬೆಳವಣಿಗೆ ಇಂಬು ಕೊಡುತ್ತಿದೆ.

    ಸಿದ್ಧಾರ್ಥ್ ಅವರು ಧರಿಸಿದ್ದ ಟೀ ಶರ್ಟ್ ಮಾಯವಾಗಿರುವುದು ಮೊದಲ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಶರ್ಟ್ ಆಗಿದ್ದರೆ ನೀರಿನ ಸೆಳೆತಕ್ಕೆ ಕಿತ್ತು ಹೋಗಿರಬಹುದು ಎಂದು ಹೇಳಬಹುದಿತ್ತು. ಆದರೆ ಅವರು ನಾಪತ್ತೆಯಾದ ಕ್ಷಣದಲ್ಲಿ ಧರಿಸಿದ್ದು ಟೀ ಶರ್ಟ್. ಇದು ಸಾಮಾನ್ಯವಾಗಿ ಕಿತ್ತು ಹೋಗುವುದಿಲ್ಲ. ಆದರೆ ಸಿದ್ಧಾರ್ಥ್ ಅವರ ಮೃತದೇಹವನ್ನು ನೀರಿನಿಂದ ಹೊರಗೆ ತಂದಾಗ ಟೀ ಶರ್ಟ್ ಇರಲಿಲ್ಲ.

    ರಕ್ತಸ್ರಾವ: ಸಿದ್ಧಾರ್ಥ್ ಅವರು ನಾಪತ್ತೆಯಾಗಿದ್ದು ಸೋಮವಾರ ಸಂಜೆ 7.30ರ ಆಸುಪಾಸಿನಲ್ಲಿ. ಅವರ ಮೃತದೇಹ ಸಿಕ್ಕಿದ್ದು ಬುಧವಾರ ಬೆಳಗ್ಗೆ 6.30ಕ್ಕೆ. ಅಂದರೆ ಈ ನಡುವಿನ ಅವಧಿ 36 ಗಂಟೆ. ಒಂದು ವೇಳೆ ಸಿದ್ಧಾರ್ಥ್ ಸೋಮವಾರವೇ ನೀರಿಗೆ ಜಿಗಿದಿದ್ದರೆ ಅಥವಾ ಗಾಯಗೊಂಡಿದ್ದರೆ ಇಷ್ಟೊತ್ತಿಗೆ ದೇಹದಲ್ಲಿನ ರಕ್ತವೆಲ್ಲಾ ಸೋರಬೇಕಿತ್ತು. ಆದರೆ ದೇಹವನ್ನು ನೀರಿನಿಂದ ಹೊರ ತೆಗೆದಾಗಲೂ ರಕ್ತಸ್ರಾವ ಆಗುತಿತ್ತು.

    ದೇಹ ಊದಿಕೊಂಡಿಲ್ಲ: ಸಾಮಾನ್ಯವಾಗಿ ಮುಳುಗಿ ಸಾವನ್ನಪ್ಪಿದರೆ ನೀರು ದೇಹ ಸೇರುತ್ತದೆ. ನಂತರ ನಿಧಾನವಾಗಿ ಮೃತದೇಹ ಊದಿಕೊಳ್ಳುತ್ತದೆ. ಆದರೆ ಸಿದ್ಧಾರ್ಥ್ ವಿಚಾರದಲ್ಲಿ ಇದಾಗಿಲ್ಲ. ಮೀನುಗಳು ಸಹ ತಿಂದಿಲ್ಲ. ಇಲ್ಲಿ ಗಮನಿಸಬೇಕಾದ ಅಂಶ ಅಂದರೆ, ಸಿದ್ಧಾರ್ಥ್ ನಾಪತ್ತೆಯಾದ ಸ್ಥಳದಿಂದ ನಾಲ್ಕೂವರೆ ಕಿಲೋಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಈ ಪ್ರದೇಶದಲ್ಲಿ ಯಾರು ಶೋಧ ಕಾರ್ಯವನ್ನು ನಡೆಸಿಯೇ ಇರಲಿಲ್ಲ. ಇನ್ನು ಒಂದು ಕಿಲೋಮೀಟರ್ ದೂರ ಹೋದರೆ ಸಮುದ್ರ ಬೇರೆ ಸಿಗುತ್ತಿತ್ತು. ಸಿದ್ಧಾರ್ಥ್ ಮೃತದೇಹ ಸಮುದ್ರ ಪಾಲಾಗಿದ್ದರೆ, ಸಿಗುವ ಸಾಧ್ಯತೆಗಳು ಕಡಿಮೆ ಇದ್ದವು.

    ಈ ನಡುವೆ ಸಿದ್ಧಾರ್ಥ್ ಸಾವು ಅಹಜವೋ? ಆತ್ಮಹತ್ಯೆಯೋ? ಎಂಬ ಬಗ್ಗೆ ತನಿಖೆ ನಡೆಸಲು ಮಂಗಳೂರು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮಾರ್ಗದರ್ಶನ ನೀಡಿದ್ದಾರೆ. ಬುಧವಾರ ಸಂಜೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

    ಸಿದ್ಧಾರ್ಥ್ ಅವರ ಮೃತದೇಹದ ಮೇಲೆ ಶರ್ಟ್ ಇರಲಿಲ್ಲ. ಪ್ಯಾಂಟ್ ಜೇಬಲ್ಲಿ ನೋಕಿಯಾ ಮೊಬೈಲ್, ಕೈಯಲ್ಲಿ ಉಂಗುರ ಹಾಗೇ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.