Tag: cafe coffeeday
-

ಸಿದ್ಧಾರ್ಥ್ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್- ಆತ್ಮಹತ್ಯೆಯಲ್ಲ ಕೊಲೆಯೆಂದು ವ್ಯಾಪಕ ಚರ್ಚೆ
ಮಂಗಳೂರು: ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದ್ದು, ಅವರದ್ದು ಆತ್ಮಹತ್ಯೆ ಅಲ್ಲ ಕೊಲೆಯೆಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ.
ಸಿದ್ಧಾಥ್ ಅವರು ತಮ್ಮ ಕಾರಿನಲ್ಲಿ ಜಪ್ಪಿನಮೊಗರಿನಲ್ಲಿರುವ ನೇತ್ರಾವತಿ ಸೇತುವೆ ಬಳಿ ಬರುತ್ತಿದ್ದಂತೆಯೇ ಹಲವು ಬೆಳವಣಿಗೆಗಳು ನಡೆದಿದೆ. ಈ ಎಲ್ಲಾ ಘಟನೆಗಳು ಅನುಮಾನ ಹುಟ್ಟುವಂತೆ ಮಾಡಿವೆ. ಈ ಅನುಮಾನಗಳು ಇದೀಗ ಸಿದ್ಧಾರ್ಥ್ ಅವರದ್ದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಅನುಮಾನ ಮೂಡುವಂತೆ ಮಾಡಿದೆ.

ಸಿದ್ಧಾರ್ಥ್ ಅವರ ಕಾರು ಸಂಜೆ 5.28ರ ಸುಮಾರಿಗೆ ಬಂಟ್ವಾಳ ಸಮೀಪದ ಬ್ರಹ್ಮರಕೂಟ್ಲುವಿನಲ್ಲಿ ಪಾಸಾಗಿದೆ. ಆ ಬಳಿಕ ನೇತ್ರಾವತಿ ಸೇತುವೆ ಬಳಿ ಬಂದಾಗ ಕಾರನ್ನು ನಿಲ್ಲಿಸುವಂತೆ ಚಾಲಕನಿಗೆ ಸಿದ್ಧಾರ್ಥ್ ಯಾಕೆ ಹೇಳಿದರು. ಅಲ್ಲದೆ ಸೇತುವೆ ಪಕ್ಕ ಕಾರಿನಿಂದ ಇಳಿದ ಸಿದ್ಧಾರ್ಥ್, 7 ಗಂಟೆಗೆ ಬರುತ್ತೇನೆ. ಕೊಟ್ಟಾಯಂ ಏರ್ ಪೋರ್ಟಿಗೆ ಬಿಡಬೇಕು ಎಂದು ಚಾಲಕನಿಗೆ ಹೇಳಿದ್ದರಂತೆ. ಹೀಗಾಗಿ ನೇತ್ರಾವತಿ ಸೇತುವೆಯಿಂದ 1 ಕಿ.ಮೀ ದೂರದಲ್ಲಿರುವ ಜಪ್ಪಿನ ಮೊಗರಿನಲ್ಲಿ ಸಿದ್ಧಾರ್ಥ್ ಯಾಕೆ ಇಳಿದರು, ಒಂದು ವೇಳೆ ಅಲ್ಲಿ ಅವರನ್ನು ಯಾರಾದರೂ ಭೇಟಿಯಾಗಿದ್ದಾರೆಯೇ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಇದನ್ನೂ ಓದಿ:ಕಾಣೆಯಾಗುವ ಕೊನೆ ಕ್ಷಣದ ಮಾಹಿತಿ ಬಿಚ್ಚಿಟ್ಟ ಸಿದ್ಧಾರ್ಥ್ ಡ್ರೈವರ್

ಸಾವಿಗೂ ಮುನ್ನ ಸಿದ್ಧಾರ್ಥ್ ಅವರು ಸಾಲ ಪಡೆದಿದ್ದ ವ್ಯಕ್ತಿಗಳನ್ನ ಭೇಟಿಯಾಗಿದ್ದಾರೆಯೇ, ನೇತ್ರಾವತಿ ಸೇತುವೆ ಬಳಿ ಸಿದ್ಧಾರ್ಥ್ ಜೊತೆ ಕಾರಿನಲ್ಲಿ ರಹಸ್ಯ ಮಾತುಕತೆ ನಡೆದಿತ್ತೇ, ಹಣ ಪಡೆದಿದ್ದ ರಾಜಕಾರಣಿ ಮತ್ತು ಮುಂಬೈ ಫೈನಾನ್ಸ್ ದಲ್ಲಾಳಿಗಳಿಂದ ರಹಸ್ಯ ಭೇಟಿಯಾಗಿದೆಯೇ, ತನ್ನ ಕಾರಿನಿಂದ ಮಂಗಳೂರಿನ ಜಪ್ಪಿನಮೊಗರಿನಲ್ಲಿ ಇಳಿದಿದ್ದ ಸಿದ್ದಾರ್ಥ್ ಯಾರನ್ನಾದರೂ ಭೆಟಿಯಾಗಿದ್ದಾರೆಯೇ ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಸಂಜೆ ಏಳು ಗಂಟೆಗೆ ನೇತ್ರಾವತಿ ಸೇತುವೆ ಪಕ್ಕ ತೆರಳಿದ್ದೆ ಎಂದು ಚಾಲಕ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಚಾಲಕ ಹೇಳಿಕೆಯಿಂದಲೇ ಅನುಮಾನ ಹುಟ್ಟಿಕೊಂಡಿದ್ದು, ಹಾಗಾದರೆ ಸಿದ್ಧಾರ್ಥ್ ಅವರು ಸುದೀರ್ಘ ಒಂದೂವರೆ ಗಂಟೆ ಆಗಂತುಕರ ಜೊತೆ ಮಾತುಕತೆ ನಡೆಸಿದ್ದಾರೆಯೇ ಅನ್ನೋ ಸಂಸಯ ಮೂಡಿದೆ. ಈ ವೇಳೆ, ಸಿದ್ಧಾರ್ಥ್ ತಮ್ಮ ವಿರೋಧಿಗಳ ಕಾರಿನಲ್ಲಿ ತೆರಳಿರುವ ಬಗ್ಗೆ ಶಂಕೆಯೂ ವ್ಯಕ್ತವಾಗುತ್ತಿದೆ. ಒಟ್ಟಿನಲ್ಲಿ ಸಿದ್ಧಾರ್ಥ್ ಅವರನ್ನು ಕೊನೆಯ ಬಾರಿಗೆ ಭೇಟಿಯಾಗಿ ಮಾತುಕತೆ ನಡೆಸಿದವರು ಯಾರು ಎಂಬ ಪ್ರಶ್ನೆ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಕೆಫೆ ಕಾಫಿ ಡೇ ಮಾಲೀಕ, ಎಸ್ಎಂ ಕೃಷ್ಣ ಅಳಿಯ ಸಿದ್ಧಾರ್ಥ್ ನಾಪತ್ತೆಯಾಗಿದ್ದು ಹೇಗೆ?

ಮಂಗಳೂರು ತಲುಪುತ್ತಿದ್ದಂತೆಯೇ ಸಿದ್ಧಾರ್ಥ್ ಅವರು ತಮ್ಮ ಚಾಲಕನಲ್ಲಿ ಉಳ್ಳಾಲದ ಸೈಟ್ ನೋಡಲು ಹೋಗಬೇಕು ಎಂದು ಹೇಳಿದ್ದರು. ಕಾಫಿ ಸಾಮ್ರಾಟ, ಉಳ್ಳಾಲ ಮತ್ತು ನೇತ್ರಾವತಿ ಪಕ್ಕದಲ್ಲಿ ರೆಸಾರ್ಟ್ ನಿರ್ಮಿಸಲು ಮುಂದಾಗಿದ್ದರು. ಎರಡು ವರ್ಷಗಳಿಂದ ರೆಸಾರ್ಟ್ ಕನಸು ಈಡೇರದೇ ಉಳಿದಿತ್ತು ಎನ್ನಲಾಗಿದೆ. ಒಟ್ಟಿನಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಕೈಹಾಕಲು ಮುಂದಾಗಿದ್ದ ವಿ.ಜಿ ಸಿದ್ಧಾರ್ಥ್, ಕೋಸ್ಟಲ್ ಟೂರಿಸಂ ಅವರ ಪಾಲಿಗೆ ಮುಳ್ಳಾಗಿ ಹೋಯಿತೇ ಅನ್ನೋ ವ್ಯಾಪಕ ಚರ್ಚೆಯಾಗುತ್ತಿದೆ.
https://www.youtube.com/watch?v=wZvAI8ub-RY
-

ಎಸ್ಎಂಕೆ ಅಳಿಯ ಸಿದ್ಧಾರ್ಥ್ ಸಾವಿನ ರಹಸ್ಯ ಇಂದು ಬಹಿರಂಗ?
ಬೆಂಗಳೂರು/ಮಂಗಳೂರು: ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ. ಸಿದ್ಧಾರ್ಥ್ ಸಾವಿನ ಕುರಿತು ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ವರದಿ ಇಂದು ಸಲ್ಲಿಕೆಯಾಗುವ ಸಾಧ್ಯತೆಗಳಿವೆ.
ಪೋಸ್ಟ್ ಮಾರ್ಟಂ ವರದಿ ಆಧರಿಸಿ ತನಿಖೆ ಮುಂದುವರಿಸಲಾಗುತ್ತಿದ್ದು, ಸಿದ್ಧಾರ್ಥ್ ಅವರ ಮೃತದೇಹದ ಕತ್ತು, ಮುಖದ ಭಾಗದಲ್ಲಿ ಗಾಯಗಳಾಗಿವೆಯಾ ಇಲ್ಲವೋ, ದೇಹದ ಮೇಲೆ ಯಾವುದೇ ಗಾಯದ ಗುರುತು ಇದೆಯಾ ಇಲ್ವಾ ಹಾಗೂ ಸಿದ್ದಾರ್ಥ್ ಧರಿಸಿದ್ದ ಟೀಶರ್ಟ್ ಏನಾಯ್ತು ಅಲ್ಲದೆ ಸಿದ್ದಾರ್ಥ್ ಸಾವು ಸಹಜವೋ? ಅಸಹಜವೋ? ಎಂಬ ಪ್ರಶ್ನೆಗಳಿಗೆ ಇಂದು ಉತ್ತರ ಸಿಗುವ ನಿರೀಕ್ಷೆಯಿದೆ.

ಸಿದ್ಧಾರ್ಥ್ ತಮ್ಮ ಕಂಪನಿಯ ಆಡಳಿತ ಮಂಡಳಿ ನಿರ್ದೇಶಕರಿಗೆ ಬರೆದಿರುವ ಪತ್ರದ ಖಚಿತತೆಯನ್ನು ದೃಢಪಡಿಸಿಕೊಳ್ಳುವ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ತನಿಖೆಗಾಗಿ ಬೆಂಗಳೂರಿಗೆ ತೆರಳಿರುವ ಒಂದು ತಂಡ, ಈಗಾಗಲೇ ಕೆಫೆ ಕಾಫಿ ಡೇ ಕಚೇರಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ. ಸಂಸ್ಥೆಯ ಕೆಲವು ಅಧಿಕಾರಿಗಳು ವಿದೇಶಕ್ಕೆ ತೆರಳಿದ್ದು, ಅವರ ಹೇಳಿಕೆಗಳನ್ನು ಪಡೆದ ಬಳಿಕವೇ ಪತ್ರದ ಖಚಿತತೆಯ ಕುರಿತು ಸ್ಪಷ್ಟತೆ ಸಿಗುವ ಸಾಧ್ಯತೆಗಳಿವೆ.
ನಗರ ಪೊಲೀಸರು, ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಾಮಾನ್ಯವಾಗಿ ಅಸಹಜ ಸಾವಿನ ಪ್ರಕರಣಗಳನ್ನು ಇನ್ಸ್ ಪೆಕ್ಟರ್ ದರ್ಜೆಯ ಅಧಿಕಾರಿಗಳು ತನಿಖೆ ಮಾಡುತ್ತಿದ್ದು, ಈ ಪ್ರಕರಣದಲ್ಲಿ ಎಸಿಪಿ ದರ್ಜೆಯ ಅಧಿಕಾರಿಗೆ ತನಿಖೆಯ ಹೊಣೆ ವಹಿಸಲಾಗಿದೆ. ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಟಿ. ಕೋದಂಡರಾಮ್ ಅವರಿಗೆ ತನಿಖೆಯ ಜವಾಬ್ದಾರಿ ವಹಿಸಲಾಗಿದ್ದು, ವಿಶೇಷ ತಂಡಗಳು ಅವರಿಗೆ ವರದಿ ಸಲ್ಲಿಸಲಿವೆ.
https://www.youtube.com/watch?v=numNLY1ATRs
-

ಮೊಬೈಲ್ ಸ್ವಿಚ್ಛ್ ಆಫ್ ಮಾಡಿ ನದಿಗೆ ಹಾರಿದ್ದ ಸಿದ್ಧಾರ್ಥ್ – ಪ್ಯಾಂಟ್ ಕಿಸೆಯಲ್ಲಿತ್ತು ಫೋನ್
ಮಂಗಳೂರು: ನೇತ್ರಾವತಿ ನದಿಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆಯಲ್ಲಿ ತನ್ನ ಫೋನಿನಲ್ಲಿ ಮಾತನಾಡಿಕೊಂಡು ಹೋದ ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಮತ್ತೆ ಹಿಂದಿರುಗಿ ಬರಲೇ ಇಲ್ಲ. ಇಂದು ಪತ್ತೆಯಾದ ಅವರ ಮೃತದೇಹದ ಪ್ಯಾಂಟಿನ ಕಿಸೆಯಲ್ಲಿ ಮೊಬೈಲ್ ಸಿಕ್ಕಿದೆ.
ಸೋಮವಾರ ಕಾಣೆಯಾಗಿದ್ದ ಸಿದ್ಧಾರ್ಥ್ ಅವರು ಇಂದು ನೇತ್ರಾವತಿ ನದಿ ಸೇತುವೆಯ ಕೆಲ ದೂರದಲ್ಲಿರುವ ಹೊಯಿಗೆ ಬಜಾರ್ ಎಂಬಲ್ಲಿ ಮೀನುಗಾರರಿಗೆ ಶವವಾಗಿ ದೊರೆತಿದ್ದಾರೆ. ಇವರ ಮೃತದೇಹದ ಪ್ಯಾಂಟ್ ಕಿಸೆಯಲ್ಲಿ ನೋಕಿಯಾ ಕಂಪನಿಗೆ ಸೇರಿದ ಮೊಬೈಲ್ ಸಿಕ್ಕಿದ್ದು, ಆತ್ಮಹತ್ಯೆಗೂ ಮುನ್ನ ಅದೇ ಮೊಬೈಲ್ ನಲ್ಲಿ ಮಾತನಾಡಿದ್ದಾರೆ. ಆಪ್ತರ ಜೊತೆ ಕರೆ ಮಾಡಿದ ಬಳಿಕ ಫೋನ್ ಸ್ವಿಚ್ಛ್ ಆಫ್ ಮಾಡಿ ನದಿಗೆ ಜಿಗಿದಿರಬಹುದು ಎಂದು ಶಂಕಿಸಲಾಗುತ್ತಿದೆ.

ಸದ್ಯ ಮೃತದೇಹದಲ್ಲಿನ ಗಾಯಗಳ ಬಗ್ಗೆ ಪೊಲೀಸರು ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ಆತ್ಮಹತ್ಯೆ ಮಾಡಿ 36 ಗಂಟೆ ಕಳೆದರೂ ಮುಖದಲ್ಲಿ ರಕ್ತ ಸೋರಿಕೆ ಹಿನ್ನೆಲೆಯಲ್ಲಿ ಈ ಬಗ್ಗೆಯೂ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಮಧ್ಯೆ ಸಿದ್ಧಾರ್ಥ್ ಅವರು ಧರಿಸಿದ್ದ ಕಪ್ಪು ಬಣ್ಣದ ಟೀ ಶರ್ಟ್ ಇನ್ನೂ ಪತ್ತೆಯಾಗದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಮೊಬೈಲ್ ಲೊಕೇಷನ್:
ಸಿದ್ಧಾರ್ಥ್ ಅವರು ಸೋಮವಾರ ಸಂಜೆ 6.30ರ ಸುಮಾರಿಂದ ನಾಪತ್ತೆಯಾಗಿದ್ದು, ಮಂಗಳವಾರ ಮುಂಜಾನೆಯಿಂದ ಸಿದ್ದಾರ್ಥ್ ಅವರ ಕಾರು ಚಾಲಕ ಬಸವರಾಜ್ ಅವರನ್ನು ವಿಚಾರಣೆಯನ್ನು ಪೊಲೀಸರು ನಡೆಸಿದ್ದರು. ಇತ್ತ ಸಿದ್ಧಾರ್ಥ್ ಮೊಬೈಲ್ ಲೊಕೇಷನ್ ಪರಿಶೀಲಿಸಿದಾಗ ಸೇತುವೆಯ ಮಧ್ಯಭಾಗದಲ್ಲಿ ಅವರ ಕೊನೆಯ ಮೊಬೈಲ್ ಲೊಕೇಷನ್ ಪತ್ತೆಯಾಗಿರುವುದು ತನಿಖೆ ವೇಳೆ ಬೆಳಕಿಗೆ ಬಂದಿತ್ತು.
ಬೆಳಗ್ಗೆ ತನಿಖೆ ನಡೆಸಲು ಆಗಮಿಸಿದ್ದ ಶ್ವಾನ ದಳದ ನಾಯಿ ಸಹ ಸೇತುವೆ ಮಧ್ಯಭಾಗದವರೆಗೆ ಬಂದಿತ್ತು. ಪೊಲೀಸ್ ವಿಚಾರಣೆ ವೇಳೆ ಡ್ರೈವರ್ ಬಸವರಾಜ್, ಸೋಮವಾರ ಸಂಜೆ ಹೊತ್ತಿನಲ್ಲಿ ಸೇತುವೆಯ ಬಳಿ ಕಾರನ್ನು ನಿಲ್ಲಿಸು ಎಂದು ಸಿದ್ಧಾರ್ಥ್ ಹೇಳಿದ್ದರು. ಕಾರಿನಿಂದ ಇಳಿದು ಸೇತುವೆಯ ಮೇಲೆ ಸಿದ್ದಾರ್ಥ್ ನಡೆದುಕೊಂಡು ಫೋನಿನಲ್ಲಿ ಮಾತನಾಡುತ್ತಾ ಹೋಗುತ್ತಿದ್ದರು. ಕೆಲ ನಿಮಿಷ ಕಳೆದರೂ ಅವರು ಬಾರದೇ ಇದ್ದಾಗ ಕರೆ ಮಾಡಿದ್ದೆ. ಈ ವೇಳೆ ಫೋನ್ ಸ್ವಿಚ್ ಆಫ್ ಆಗಿತ್ತು ಎಂದು ತಿಳಿಸಿದ್ದರು.
-

ಕಾಫಿ ಬ್ರಾಂಡ್ ಅಂಬಾಸಿಡರ್ ಇನ್ನಿಲ್ಲ- ಚೇತನಹಳ್ಳಿಯಲ್ಲಿ ನೀರವ ಮೌನ
– 3 ಜಿಲ್ಲೆಯಲ್ಲಿ ಕಾಫಿ ಕೆಲಸ ರದ್ದು
ಚಿಕ್ಕಮಗಳೂರು: ಕಾಫಿ ಬ್ರಾಂಡ್ ಅಂಬಾಸಿಡರ್, ಕಾಫಿ ಸಾಮ್ರಾಟ ವಿ.ಜಿ ಸಿದ್ಧಾರ್ಥ್ ಅವರ ಮೃತದೇಹ ಮಂಗಳೂರಿನಲ್ಲಿ ಪತ್ತೆಯಾಗಿದ್ದು, ಇದೀಗ ಮೂಡಿಗೆರೆ ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿರುವ ಚೇತನಹಳ್ಳಿ ಎಸ್ಟೇಟ್ ನಲ್ಲಿ ನೀರವ ಮೌನ ಆವರಿಸಿದೆ.
ಸಿದ್ಧಾರ್ಥ್ ಆತ್ಮಹತ್ಯೆಯ ಹಿನ್ನೆಲೆಯಲ್ಲಿ ಚೇತನಹಳ್ಳಿ ಗ್ರಾಮದಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಿ ತಮ್ಮೂರ ಸಿದ್ದಾರ್ಥಣ್ಣರಿಗೆ ಸಂತಾಪ ಸೂಚಿಸಿದ್ದಾರೆ. ಸೋಮವಾರ ಕಾಣೆಯಾಗಿದ್ದ ಸಿದ್ಧಾರ್ಥ್ ಇಂದು ನೇತ್ರಾವತಿ ನದಿ ತಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ಕಾಫಿ ಡೇ ನೌಕರರು ಹಾಗೂ ಸಿದ್ಧಾರ್ಥ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಚೇತನಹಳ್ಳಿಯ ಸಿದ್ದಾರ್ಥ್ ಮನೆಯಲ್ಲಿ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. ಮೊನ್ನೆ ರಾತ್ರಿಯಿಂದ ಸಿದ್ದಾರ್ಥ್ ಸುರಕ್ಷಿತವಾಗಿ ಬರಲಿ ಎಂದು ಕಾಯುತ್ತಿದ್ದರು. ಆದರೆ ಇದೀಗ ಅವರು ಇನ್ನಿಲ್ಲ ಎಂಬ ವಿಚಾರವನ್ನು ಕುಟುಂಬಸ್ಥರಿಗೆ ಹಾಗೂ ನೌಕರರಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ಸಿದ್ದಾರ್ಥ್ ತಾಯಿ ವಸಂತಿ ಹೆಗ್ಡೆ ಅವರು ಚೇತನಹಳ್ಳಿಯ ಮನೆಯಲ್ಲಿದ್ದು, ಮಗನ ಸಾವಿನ ಸುದ್ದಿ ಕೇಳುತ್ತಿದ್ದಂತೆಯೇ ಅವರ ಆಕ್ರಂದನ ಮುಗಿಲು ಮುಟ್ಟಿತ್ತು.

ಇತ್ತ ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮೂರು ಜಿಲ್ಲೆಯ ಕಾಫಿ ಕಾರ್ಮಿಕರಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು, ಹಾಸನ, ಮಡಿಕೇರಿ ಈ ಮೂರು ಜಿಲ್ಲೆಯಲ್ಲೂ ಕಾಫಿ ಕೆಲಸವನ್ನು ಸಂಪೂರ್ಣ ರದ್ದು ಮಾಡಲಾಗಿದೆ. ಎಬಿಸಿ ಕಾಫಿ ಕ್ಯೂರಿಂಗ್ ಹಾಗೂ ಚೇತನಹಳ್ಳಿ ಎಸ್ಟೇಟ್ ಎರಡೂ ಕಡೆ ಸಿದ್ಧಾರ್ಥ್ ಅವರ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.
https://www.youtube.com/watch?v=rlj9LGGpYN4
-

ಸಿದ್ಧಾರ್ಥ್ ಸಾವಿಗೆ ಕಾರಣ ಯಾರು?- ಚರ್ಚೆಗೆ ಕಾಂಗ್ರೆಸ್ ಪಟ್ಟು
ಬೆಂಗಳೂರು: ಕಾಫಿ ಸಾಮ್ರಾಟ ಸಿದ್ಧಾರ್ಥ್ ಸಾವಿಗೆ ಯಾರು ಕಾರಣ ಎಂಬುದಾಗಿ ಚರ್ಚೆಯಾಗಬೇಕು ಎಂದು ಕಾಂಗ್ರೆಸ್ ಪಕ್ಷ ಪಟ್ಟು ಹಿಡಿದೆ.
ಐಟಿ ಅಧಿಕಾರಿಗಳ ಕಿರಿಕುಳದಿಂದ ಸಿದ್ಧಾರ್ಥ್ ಮೃತಪಟ್ಟಿದ್ದಾರೆ. ಈ ಬಗ್ಗೆ ಚರ್ಚೆ ಆಗಲೇಬೇಕು ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದ ಮನೀಷ್ ತಿವಾರಿ ನೋಟಿಸ್ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇತ್ತ ವಿಧಾನಸಭೆಯಲ್ಲಿಯೂ ಕಾಂಗ್ರೆಸ್-ಜೆಡಿಎಸ್ ಪ್ರತಿಭಟನೆಗೆ ನಿರ್ಧಾರ ಮಾಡಿವೆ. ಐಟಿ ಡಿಜಿ ಬಾಲಕೃಷ್ಣ ಅವರ ಕಿರುಕುಳದಿಂದ ಸಿದ್ಧಾರ್ಥ್ ಸಾವಿಗೀಡಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಲಕೃಷ್ಣನ್ ವಿರುದ್ಧ ತನಿಖೆಗೆ ಪಟ್ಟು ಹಿಡಿದು ದೋಸ್ತಿಗಳು ಪ್ರತಿಭಟನೆ ನಡೆಸಲಿದ್ದಾರೆ.

ಸಿದ್ಧಾರ್ಥ್ ನಾಪತ್ತೆ, ಶವ ಪತ್ತೆ:
ವ್ಯವಹಾರ ನಿಮಿತ್ತ ಸಿದ್ಧಾರ್ಥ್ ಅವರು ತಮ್ಮ ಕಾರಿನಲ್ಲಿ ಸೋಮವಾರ ಚಿಕ್ಕಮಗಳೂರಿಗೆ ತೆರಳಿದ್ದರು. ಅಲ್ಲಿಂದ ಮಂಗಳೂರಿಗೆ ಹೋಗಿದ್ದರು. ಕೇರಳಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿಯ ಜಪ್ಪಿನಮೊಗರು ಎಂಬಲ್ಲಿ ನೇತ್ರಾವತಿ ಸೇತುವೆ ಇದ್ದು, ಇಲ್ಲಿಗೆ ತಲುಪುತ್ತಿದ್ದಂತೆ ಕಾರನ್ನು ನಿಲ್ಲಿಸಲು ಚಾಲಕನಿಗೆ ಹೇಳಿದ್ದಾರೆ. ಬಳಿಕ ಕಾರಿನಿಂದ ಇಳಿದು ಅವರು ಫೋನಿನಲ್ಲಿ ಮಾತನಾಡುತ್ತಾ ಹೋಗಿದ್ದಾರೆ. ಆದರೆ ಅರ್ಧ ಗಂಟೆಯಾದರೂ ಸಿದ್ಧಾರ್ಥ್ ಅವರು ವಾಪಸ್ ಬರದೇ ಇದ್ದುದನ್ನು ಕಂಡು ಗಾಬರಿಯಾದ ಚಾಲಕ ಅವರಿಗೆ ಫೋನ್ ಮಾಡಿದ್ದಾನೆ. ಈ ವೇಳೆ ಅವರ ಫೋನ್ ಸ್ವಿಚ್ ಆಫ್ ಆಗಿದ್ದು ಗಮನಕ್ಕೆ ಬಂದಿದೆ.#VGSiddhartha case is very unfortunate.
Result of harassment by IT officials & decline of India’s entrepreneurial position turning virulent by the day, with Tax Terror & collapse of economy
Companies which flourished under UPA have been shut down with many people being jobless pic.twitter.com/rbwUymoM3B
— Karnataka Congress (@INCKarnataka) July 31, 2019
ಕಾರು ಚಾಲಕ ತಕ್ಷಣ ಈ ವಿಚಾರವನ್ನು ಸಿದ್ಧಾರ್ಥ್ ಮನೆಯವರಿಗೆ ತಿಳಿಸಿದ್ದಾರೆ. ಸಿದ್ಧಾರ್ಥ್ ಅವರು ಕಾರಿನಿಂದ ಇಳಿದ ಜಪ್ಪಿನ ಮೊಗರು ಪ್ರದೇಶ ನೇತ್ರಾವತಿ ನದಿ ತಟದಲ್ಲೇ ಇರುವುದು ಕುಟುಂಬಸ್ಥರ ಆತಂಕಕ್ಕೆ ಕಾರಣವಾಗಿತ್ತು. ಕಾರು ಚಾಲಕನಿಂದ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಸಿದ್ಧಾರ್ಥ್ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದರು. ಸೋಮವಾರ ರಾತ್ರಿಯಿಂದ ಮಂಗಳವಾರ ತಡರಾತ್ರಿವರೆಗೂ ಭರದಿಂದ ಕಾರ್ಯಾಚರಣೆ ನಡೆಸಲಾಗಿತ್ತು. ಆ ಬಳಿಕ ನಿನ್ನೆ ರಾತ್ರಿ ಶೋಧ ಕಾರ್ಯವನ್ನು ಸ್ಥಗಿತಗೊಳಿಸಲಾಗಿದ್ದು, ಇಂದು ಮುಂಜಾನೆ 4 ಗಂಟೆ ಸುಮಾರಿಂದ ಮತ್ತೆ ಕಾರ್ಯಾಚರಣೆ ನಡೆಸಲಾಗುತ್ತಿತ್ತು.

ಈ ಮಧ್ಯೆ ಹೊಯಿಗೆ ಬಜಾರ್ ಎಂಬಲ್ಲಿ ಮೀನುಗಾರರು ಮೀನು ಹಿಡಿಯಲೆಂದು ದೋಣಿಯಲ್ಲಿ ಹೋಗುತ್ತಿದ್ದಾಗ ಶವ ತೇಲುತ್ತಿರುವುದು ಕಂಡು ಬಂದಿತ್ತು. ಹೀಗಾಗಿ ಅವರು ಅನುಮಾನದಿಂದ ಶವವನ್ನು ದೋಣಿಯ ಬದಿಯಲ್ಲಿ ಹಿಡಿದುಕೊಂಡು ದಡ ತಲುಪಿಸಿ ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸಿದ್ಧಾರ್ಥ್ ಮೃತದೇಹ ಎಂದು ಪತ್ತೆ ಮಾಡಿದ್ದಾರೆ.
https://www.youtube.com/watch?v=BQmhqZ2hknQ
-

ಚಿಕ್ಕಮಗಳೂರಿನಲ್ಲಿ ಸಿದ್ಧಾರ್ಥ್ ಅಂತ್ಯಕ್ರಿಯೆ
ಮಂಗಳೂರು/ಚಿಕ್ಕಮಗಳೂರು: ವೆನ್ ಲಾಕ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕಾಫಿ ಕಿಂಗ್ ಸಿದ್ದಾರ್ಥ್ ಅವರ ಪಾರ್ಥಿವ ಶರೀರವನ್ನು ಚಿಕ್ಕಮಗಳೂರಿಗೆ ರವಾನೆ ಮಾಡಲಾಗುತ್ತಿದೆ.
11 ಗಂಟೆಗೆ ಸುಮಾರಿಗೆ ಮೃತದೇಹ ಚಿಕ್ಕಮಗಳೂರಿಗೆ ರವಾನೆಯಾಗುತ್ತಿದ್ದು, ಎರಡು ಕಡೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಅಲ್ಲಿ ಕಾಫಿ ಡೇ ಸಿಬ್ಬಂದಿ ದರ್ಶನದ ಬಳಿಕ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ಬೇಲೂರು ಚೇತನಹಳ್ಳಿಯ ಸಿದ್ಧಾರ್ಥ್ ಕಾಫಿ ಎಸ್ಟೇಟ್ ಹಾಗೂ ಎಬಿಸಿ ಕಾಫಿ ಕ್ಯೂರಿಂಗ್ ಆವರಣದಲ್ಲಿಯೂ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ನೌಕರರು ಹಾಗೂ ಕುಟುಂಬಸ್ಥರ ಅಂತಿಮ ದರ್ಶನದ ಬಳಿಕ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರುವ ಸಾಧ್ಯೆತೆಗಳಿವೆ.
ಸೋಮವಾರ ಸಂಜೆಯಿಂದ ಮಂಗಳೂರಿನ ನೇತ್ರಾವತಿ ನದಿ ಸೇತುವೆಯ ಬಳಿಯಿಂದ ಕಾಣೆಯಾಗಿದ್ದ ಸಿದ್ದಾರ್ಥ್ ಅವರಿಗಾಗಿ ಸತತ 36 ಗಂಟೆಗಳ ಕಾಲ ಹುಡುಕಾಟ ನಡೆಸಲಾಗಿತ್ತು. ಆದರೆ ಇದೀಗ ಅವರ ಮೃತದೇಹ ನೇತ್ರಾವತಿಯ ಹಿನ್ನೀರಿನಲ್ಲಿ ಪತ್ತೆಯಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಕಾಫಿ ಡೇ ನೌಕಕರು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
https://www.youtube.com/watch?v=i3MTQLbm1KE
-

ಸಿದ್ಧಾರ್ಥ್ ಮೃತದೇಹ ಪತ್ತೆ ಮಾಡಿದ ಮೀನುಗಾರ ಹೇಳಿದ್ದೇನು?
ಮಂಗಳೂರು: ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದ್ದು, ಸ್ಥಳೀಯ ಮೀನುಗಾರ ರಿತೇಶ್ ಎಂಬವರು ಅನುಮಾನದ ಮೇರೆಗೆ ಡೆಡ್ ಬಾಡಿಯನ್ನು ದಡಕ್ಕೆ ತಂದಿದ್ದಾರೆ.
ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಮೀನು ಹಿಡಿಯುವ ಕಾರ್ಯದಲ್ಲಿದ್ದೆವು. ಹೀಗೆ ಹೋಗುವಾಗ ನದಿ ಮಧ್ಯದಲ್ಲಿ ಮೃತದೇಹ ತೇಲುತ್ತಿರುವುದು ಕಂಡುಬಂತು ಎಂದರು.

ಮೀನು ಹಿಡಿಯಲು ಮೂವರು ದೋಣಿಯಲ್ಲಿ ಹೋಗುತ್ತಿದ್ದೆವು. ಮೃತದೇಹ ತೇಲುತ್ತಿರುವುದನ್ನು ಕಂಡು ಇದು ಸಿದ್ಧಾರ್ಥ್ ಅವರದ್ದೇ ಆಗಿರಬಹುದೆಂದು ಅನುಮಾನದಲ್ಲಿ ದೋಣಿಯ ಬದಿಯಲ್ಲಿ ಶವವನ್ನು ಹಿಡಿದುಕೊಂಡು ದಡಕ್ಕೆ ತಂದಿದ್ದೇವೆ. ಆ ನಂತರ ಪೊಲೀಸರಿಗೆ ತಿಳಿಸಿದ್ದೇವೆ. ತಕ್ಷಣವೇ ರೌಂಡ್ಸ್ ನಲ್ಲಿರುವ ಪೊಲೀಸರಿಬ್ಬರು ಬಂದರು. ಅವರು ತಮ್ಮ ಮೇಲಾಧಿಕಾರಿಗಳಿಗೆ ತಿಳಿಸಿ ನಂತರ ಅವರೆಲ್ಲ ಬಂದಿದ್ದಾರೆ ಎಂದು ರಿತೇಶ್ ತಿಳಿಸಿದ್ದಾರೆ.
ನದಿಗೆ ಹಾರಿದ್ದಾರೆ ಎಂಬ ಸ್ಥಳದಿಂದ ಮೃತದೇಹ ಸಿಕ್ಕಿದ ಜಾಗಕ್ಕೆ ಸುಮಾರು 4-5 ಕಿ.ಮೀ ದೂರವಿದೆ. ಅಲ್ಲಿ ಮೃತದೇಹ ಸಿಕ್ಕಿದೆ. ನಿನ್ನೆ ಮೀನುಗಾರಿಕಾ ಸಂಸ್ಥೆಯಿಂದ ಕರೆ ಬಂದಿತ್ತು. ಸ್ಥಳೀಯರಾಗಿರುವ ನಮಗೆ ಶೋಧ ಕಾರ್ಯ ಮಾಡಬೇಕೆಂಬ ಸೂಚನೆ ನೀಡಲಾಗಿತ್ತು. ಹೀಗಾಗಿ 4 ದೋಣಿಗಳ ಮೂಲಕ ತೆರಳಿ ನಿನ್ನೆ ಹುಡುಕಾಡಿದ್ದೇವೆ ಅಂದರು.

ಅವರು ಹಾರಿದ ಭಾಗದಲ್ಲಿ 20-25 ಅಡಿ ಆಳವಿದ್ದು, ಮೃತದೇಹ ಸಿಕ್ಕಿದ ಭಾಗದಲ್ಲಿ 5-6 ಅಡಿ ಆಳವಿರಬಹುದು. ನೀರಿನೊಳಗೆ ಬಿದ್ದ ದೇಹ 18-24 ಗಂಟೆ ಮೇಲೆ ಬರಲು ಬೇಕಾಗುತ್ತದೆ ಎಂಬುದು ನಮ್ಮ ಅಂದಾಜು. ಇಷ್ಟು ಗಂಟೆಯ ಬಳಿಕ ಮೃತದೇಹ ಊದಿಕೊಳ್ಳುತ್ತದೆ. ಹೀಗಾಗಿ ಅದು ನೀರಿನಿಂದ ಮೇಲೆ ಬರುತ್ತವೆ. ಸಿದ್ದಾರ್ಥ್ ಅವರನ್ನು ಪತ್ತೆ ಹಚ್ಚಿದ್ದಕ್ಕಾಗಿ ಪೊಲೀಸ್ ಇಲಾಖೆ ಹಾಗೂ ಶಾಸಕ ಯು.ಟಿ ಖಾದರ್ ಅವರು ನಮಗೆ ಧನ್ಯವಾದ ತಿಳಿಸಿದ್ದಾರೆ ಎಂದರು.

ಸೋಮವಾರ ತಡರಾತ್ರಿಯಿಂದ ಮಂಗಳವಾರ ತಡಾತ್ರಿವರೆಗೆ ಶೋಧ ಕಾರ್ಯ ನಡೆಸಲಾಗಿದ್ದು, ಆ ಬಳಿಕ ಸ್ಥಗಿತಗೊಳಿಸಲಾಗಿತ್ತು. ಇಂದು ಮುಂಜಾನೆ 4 ಗಂಟೆ ಸುಮಾರಿನಿಂದ ಮತ್ತೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಈ ಮಧ್ಯೆ ಹೊಯಿಗೆ ಬಜಾರ್ ಎಂಬ ಪ್ರದೇಶದ ನದಿಭಾಗದಲ್ಲಿ ಮೃತದೇಹ ಪತ್ತೆಯಾಗಿದೆ. ಒಟ್ಟಿನಲ್ಲಿ 36 ಗಂಟೆಗಳ ನಿರಂತರ ಕಾರ್ಯಾಚರಣೆಯ ಬಳಿಕ ಇದೀಗ ಸಿದ್ಧಾರ್ಥ್ ಪತ್ತೆಯಾಗಿದ್ದಾರೆ. ಮೃತದೇಹವನ್ನು ನಗರದ ವೆನ್ ಲಾಕ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
-

ಸಿದ್ಧಾರ್ಥ್ ಮೃತ ದೇಹ ಪತ್ತೆ
ಮಂಗಳೂರು: ಕೆಫೆ ಕಾಫಿ ಡೇ ಓನರ್ ಸಿದ್ಧಾರ್ಥ್ ಅವರ ಮೃತದೇಹ ಪತ್ತೆಯಾಗಿದೆ.
ಸೋಮವಾರ ತಡರಾತ್ರಿಯಿಂದ ಮಂಗಳವಾರ ತಡರಾತ್ರಿವರೆಗೆ ನೇತ್ರಾವತಿ ನದಿ ತಟದಲ್ಲಿ ಶೋಧ ಕಾರ್ಯ ನಡೆಸಲಾಗಿದ್ದು, ಆ ಬಳಿಕ ಸ್ಥಗಿತಗೊಳಿಸಲಾಗಿತ್ತು. ಇಂದು ಬೆಳಗ್ಗೆ ಮತ್ತೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಈ ಮಧ್ಯೆ ಹೊಯಿಗೆ ಬಜಾರ್ ಎಂಬ ಪ್ರದೇಶದ ನದಿಭಾಗದಲ್ಲಿ ಮೃತದೇಹ ಪತ್ತೆಯಾಗಿದೆ.
ಸ್ಥಳೀಯ ಮೀನುಗಾರರು ಗಮನಿಸಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಒಟ್ಟಿನಲ್ಲಿ 36 ಗಂಟೆಗಳ ನಿರಂತರ ಕಾರ್ಯಾಚರಣೆಯ ಬಳಿಕ ಇದೀಗ ಸಿದ್ಧಾರ್ಥ್ ಪತ್ತೆಯಾಗಿದ್ದಾರೆ.

ಮಂಗಳಾದೇವಿ ದೇವಸ್ಥಾನದ ಹಿಂಭಾಗದಲ್ಲಿ ರಸ್ತೆಯಿದೆ. ಆ ರಸ್ತೆಯಲ್ಲಿ ಹೊಯಿಗೆ ಬಜಾರ್ ಎಂಬ ಪ್ರದೇಶವಿದೆ. ಇಲ್ಲಿ ನದಿ ಒಂದು ಕಡೆಯಿಂದ ಮಂಗಳೂರು ಬಂದರನ್ನು ತಲುಪುತ್ತದೆ. ಇನ್ನೊಂದು ಕಡೆಯಿಂದ ಸಮುದ್ರವನ್ನು ತಲುಪುತ್ತದೆ. ಈ ಪ್ರದೇಶದಲ್ಲಿ ಸಿದ್ಧಾರ್ಥ್ ಮೃತದೇಹ ಸಿಕ್ಕಿದೆ.

