Tag: cage

  • ವ್ಯಕ್ತಿ ಕಾಲಿಡಿದು ಒಳಗೆ ಎಳೆದುಕೊಳ್ಳಲು ಯತ್ನಿಸಿದ ಗೊರಿಲ್ಲಾ – ಬೋನ್‌ದಲ್ಲಿದ್ರೂ ಫುಲ್ ಸ್ಟ್ರಾಂಗ್

    ವ್ಯಕ್ತಿ ಕಾಲಿಡಿದು ಒಳಗೆ ಎಳೆದುಕೊಳ್ಳಲು ಯತ್ನಿಸಿದ ಗೊರಿಲ್ಲಾ – ಬೋನ್‌ದಲ್ಲಿದ್ರೂ ಫುಲ್ ಸ್ಟ್ರಾಂಗ್

    ಜಕಾರ್ತ: ಪ್ರಾಣಿಗಳ ಜೊತೆ ತಮಾಷೆ ಮಾಡಲು ಹೋಗಿ ಜನರು ಸಂಕಷ್ಟಕ್ಕೆ ಸಿಕ್ಕಿಕೊಳ್ಳುವುದು ಹೊಸದೇನು ಅಲ್ಲ. ಹಿಂದೆ ಝೂನಲ್ಲಿದ್ದ ಸಿಂಹವನ್ನು ರೇಗಿಸಲು ಹೋಗಿ ಒಬ್ಬ ತನ್ನ ಕೈ ಬೆರಳನ್ನೇ ಕಳೆದುಕೊಂಡಿದ್ದ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ, ಗೊರಿಲ್ಲಾವನ್ನು ರೇಗಿಸಿದ್ದಾನೆ. ಕೋಪಗೊಂಡ ಗೊರಿಲ್ಲಾ ಆತನ ಮೇಲೆ ದಾಳಿ ಮಾಡಲು ಯತ್ನಿಸಿದ ಆಘಾತಕಾರಿ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    ಈ ಘಟನೆ ಇಂಡೋನೇಷ್ಯಾದ ಕಸಾಂಗ್ ಕುಲಿಮ್ ಮೃಗಾಲಯದಲ್ಲಿ ನಡೆದಿದೆ. ಟ್ವಿಟ್ಟರ್ ಬಳಕೆದಾರರು ಈ ವೀಡಿಯೋ ಶೇರ್ ಮಾಡಿಕೊಂಡಿದ್ದಾರೆ. ಇಂಡೋನೇಷ್ಯಾದ ಕಸಾಂಗ್ ಕುಲಿಮ್ ಮೃಗಾಲಯದಲ್ಲಿ ಟೀನಾ ಎಂಬ ಗೊರಿಲ್ಲಾ ಬೋನ್‌ನಲ್ಲಿ ಇರುತ್ತೆ. ಹಸನ್ ಅರಿಫಿನ್ ಎಂದು ಗುರುತಿಸಲಾದ ವ್ಯಕ್ತಿ ಬೋನ್‌ ಬಳಿಗೆ ಬಂದು ಗೊರಿಲ್ಲಾವನ್ನು ರೇಗಿಸುತ್ತಾನೆ. ಪರಿಣಾಮ ಅವನ ಮೇಲೆ ದಾಳಿ ಮಾಡಲು ಗೊರಿಲ್ಲಾ ಯತ್ನಿಸಿರುವುದು ವೀಡಿಯೋದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಕೋವಿಡ್ ಸೊಂಕು ಏರಿಕೆ: ರಾಜ್ಯದಲ್ಲಿ 376, ಬೆಂಗಳೂರಿನಲ್ಲಿ 358 ಕೇಸ್ ದಾಖಲು

    ವೀಡಿಯೋದಲ್ಲಿ ಏನಿದೆ?
    ಹಸನ್ ಪಂಜರದ ಬಳಿಗೆ ಬಂದಿದ್ದು, ಗೊರಿಲ್ಲಾವನ್ನು ರೇಗಿಸಿದ್ದಾನೆ. ಸಿಟ್ಟಿಗೆದ್ದ ಗೊರಿಲ್ಲಾ, ಹಸನ್ ಬಟ್ಟೆಯನ್ನು ಬಲವಾಗಿ ಎಳೆಯಲು ಪ್ರಾರಂಭಿಸುತ್ತೆ. ಅವನು ಎಷ್ಟೇ ಕಷ್ಟಪಟ್ಟರು ಗೊರಿಲ್ಲಾ ಕೈಯಿಂದ ಬಟ್ಟೆಯನ್ನು ಬಿಡಿಸಿಕೊಳ್ಳಲು ಆಗಿಲ್ಲ. ಈ ವೇಳೆ ಹಸನ್ ಸ್ನೇಹಿತ ಸಹ ಬಂದಿದ್ದು, ಅವನ ಕೈಯಿಂದಲೂ ಬಿಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಉದ್ರೇಕಗೊಂಡ ಗೊರಿಲ್ಲಾ ತನ್ನ ಎಲ್ಲ ಶಕ್ತಿಯಿಂದ ಹಸನ್ ಕಾಲನ್ನು ಹಿಡಿದು ತನ್ನ ಕಡೆಗೆ ಎಳೆಯಲು ಪ್ರಯತ್ನಿಸುತ್ತಿರುವುದನ್ನು ನೋಡಬಹುದು.

    ಹಸನ್‍ಗೆ ಸಹಾಯ ಮಾಡಲು ಅವನ ಸ್ನೇಹಿತ ಗೊರಿಲ್ಲಾಗೆ ಒದೆಯಲು ಪ್ರಯತ್ನಿಸಿದ್ರೂ ಯಾವುದೇ ಪ್ರಯೋಜನವಾಗಿಲ್ಲ. ನಂತರ ಅವರಿಗೆ ಸಹಾಯ ಮಾಡುವುದಕ್ಕೆ ಬೇರೆಯವರನ್ನು ಕರೆಯುತ್ತಾನೆ. ಇದನ್ನೂ ಓದಿ: ಬೀದಿ ನಾಯಿಯನ್ನ ದೊಣ್ಣೆಯಿಂದ ಹೊಡೆದು ಎರಡನೇ ಪ್ಲೋರ್‌ನಿಂದ ಬಿಸಾಕಿದ ಪಾಪಿ – ಪ್ರಕರಣ ದಾಖಲು 

    ಮೃಗಾಲಯದ ಅಧಿಕಾರಿಗಳು ಇನ್‍ಸ್ಟಾಗ್ರಾಮ್‍ನಲ್ಲಿ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಝೂಕೀಪರ್ ಒಬ್ಬರು ಗೊರಿಲ್ಲಾ ಆವರಣದ ಮುಂದೆ ಅಳವಡಿಸಲಾಗಿರುವ ಎಚ್ಚರಿಕೆ ಫಲಕವನ್ನು ತೋರಿಸುತ್ತಿರುವುದು ಕಂಡುಬಂದಿದೆ.

  • ಗಿಳಿಯನ್ನು ಬಿಟ್ಟಿದ್ದಕ್ಕೆ 8 ವರ್ಷದ ಬಾಲಕಿಯನ್ನು ಹೊಡೆದು ಕೊಂದ ಮಾಲೀಕರು

    ಗಿಳಿಯನ್ನು ಬಿಟ್ಟಿದ್ದಕ್ಕೆ 8 ವರ್ಷದ ಬಾಲಕಿಯನ್ನು ಹೊಡೆದು ಕೊಂದ ಮಾಲೀಕರು

    ಇಸ್ಲಾಮಾಬಾದ್: ಮನೆ ಕೆಲಸಕ್ಕೆ ಇದ್ದ ಎಂಟು ವರ್ಷದ ಬಾಲಕಿ ಪಂಜರದಲ್ಲಿ ಇದ್ದ ಗಿಳಿಯನ್ನು ಬಿಟ್ಟಿದ್ದಕ್ಕೆ ಮನೆ ಮಾಲೀಕರು ಆಕೆಯನ್ನು ಹೊಡೆದು ಕೊಂದಿರುವ ಘಟನೆ ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ನಡೆದಿದೆ.

    ಮೃತ ಬಾಲಕಿಯನ್ನು ಜೊಹ್ರಾ ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ ಜೊಹ್ರಾ ಹಕ್ಕಿಗಳಿಗೆ ಆಹಾರ ಹಾಕಲು ಪಂಜರದ ಬಾಗಿಲನ್ನು ತೆರೆದಿದ್ದಾಳೆ. ಈ ವೇಳೆ ಒಂದು ಗಿಳಿ ಮರಿ ತಪ್ಪಿಸಿಕೊಂಡು ಹಾರಿ ಹೋಗಿದೆ. ಇದರಿಂದ ಕೋಪಗೊಂಡ ಮನೆಯ ಮಾಲೀಕರು ಆಕೆಯನ್ನು ಹೊಡೆದು ಸಾಯಿಸಿದ್ದಾರೆ.

    ಜೊಹ್ರಾ ಕೆಲಸ ಮಾಡುತ್ತಿದ್ದ ಮನೆಯವರು ಪ್ರಾಣಿ ಪಕ್ಷಿಗಳನ್ನು ಸಾಕಿ ಅವುಗಳನ್ನು ಮಾರುವ ವ್ಯಾಪಾರ ಮಾಡುತ್ತಿದ್ದರು. ಜೊತೆಗೆ ತಮ್ಮ ಮನೆಯಲ್ಲಿ ಇರುವ ಪುಟ್ಟಮಕ್ಕಳನ್ನು ನೋಡಿಕೊಳ್ಳಲು ಜೊಹ್ರಾಳನ್ನು ಮನೆ ಕೆಲಸಕ್ಕೆ ಇಟ್ಟಿಕೊಂಡಿದ್ದರು. ಈ ವೇಳೆ ಜೊಹ್ರಾ ಗಿಳಿ ಹಾರಿಹೋಗಲು ಬಿಟ್ಟಿದ್ದಾಳೆ ಎಂದು ಮಾಲೀಕರು ಮನಬಂದಂತೆ ಥಳಿಸಿದ್ದಾರೆ. ಪ್ರಜ್ಞಾಹೀನಾಳದ ಅವಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ಸೋಮವಾರ ಸಾವನ್ನಪ್ಪಿದ್ದಾಳೆ.

    ಈ ವಿಚಾರದ ಬಗ್ಗೆ ಮಾಹಿತಿ ನೀಡಿರುವ ರಾವಲ್ಪಿಂಡಿ ಪೊಲೀಸ್ ಅಧೀಕ್ಷಕ ಜಿಯಾ ಉದ್ದೀನ್, ಪ್ರಾಥಮಿಕ ತನಿಖೆಯ ಪ್ರಕಾರ ಆಸ್ಪತ್ರೆಗೆ ಬಾಲಕಿಯನ್ನು ಕರೆದುಕೊಂಡು ಬಂದಾಗ ಆಕೆ ಬದುಕಿದ್ದಳು. ಆದರೆ ಆಕೆಯ ಮುಖ, ಕೈ-ಕಾಲು, ಪಕ್ಕೆಲುಬು ಮತ್ತು ಕಾಲಿನ ಕೆಳಭಾಗದಲ್ಲಿ ಗಂಭೀರ ಗಾಯಗಳಾಗಿದ್ದವು. ಜೊತೆಗೆ ಬಾಲಕಿಯ ತೊಡೆಯ ಭಾಗದಲ್ಲಿ ಗಾಯವಾಗಿದ್ದ ಕಾರಣ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರಬವುದು ಎಂದು ಶಂಕಿಸಲಾಗಿದೆ ಎಂದು ಹೇಳಿದ್ದಾರೆ.

    ಜೊಹ್ರಾಳನ್ನು ಚಿಕ್ಕಮಕ್ಕಳನ್ನು ನೋಡಿಕೊಳ್ಳುವ ಮನೆಯ ಕೆಲಸಕ್ಕೆ ಇಟ್ಟಿಕೊಳ್ಳಲಾಗಿತ್ತು. ಈ ಕೆಲಸಕ್ಕೆ ಹಣದ ರೂಪದಲ್ಲಿ ಅವಳ ಓದಿಗೆ ಸಹಾಯ ಮಾಡುವುದಾಗಿ ಮಾಲೀಕರು ಹೇಳಿದ್ದರು. ಆದರೆ ಗಿಳಿಗಾಗಿ ಆಕೆಯಯನ್ನು ಕ್ರೂರವಾಗಿ ಕೊಂದಿದ್ದಾರೆ. ಈ ವಿಚಾರವಾಗಿ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಜೊತೆಗೆ ತನಿಖೆ ಮುಂದುವರೆದಿದೆ ಎಂದು ಜಿಯಾ ಉದ್ದೀನ್ ಮಾಹಿತಿ ನೀಡಿದ್ದಾರೆ.

  • ಕುಂದಾಪುರಕ್ಕೆ ಆತಂಕ ಹುಟ್ಟಿಸಿದ್ದ ಗಂಡು ಚಿರತೆ ಸೆರೆ

    ಕುಂದಾಪುರಕ್ಕೆ ಆತಂಕ ಹುಟ್ಟಿಸಿದ್ದ ಗಂಡು ಚಿರತೆ ಸೆರೆ

    ಉಡುಪಿ: ಜಿಲ್ಲೆಯ ಕುಂದಾಪುರ ಜನರಲ್ಲಿ ಭಯ ಮೂಡಿಸಿದ್ದ ಚಿರತೆಯೊಂದು ಬೋನಿಗೆ ಬಿದ್ದಿದೆ. ಕುಂದಾಪುರ ತಾಲೂಕಿನ ತೆಕ್ಕಟ್ಟೆ ಗ್ರಾಮದ ಸಮೀಪದ ಮಾಲಾಡಿ ಹಿರಿಯ ಪ್ರಾಥಮಿಕ ಶಾಲೆ ಬಳಿ ಚಿರತೆ ಸೆರೆ ಸಿಕ್ಕಿದೆ.

    ಶಾಲೆಯ ಪಕ್ಕದ ಅಕೇಶಿಯ ಮತ್ತು ಮಾವಿನ ಮರದ ತೋಪಿನಲ್ಲಿ ಚಿರತೆ ಆಗಾಗ ಕಾಣಿಸಿಕೊಂಡು ಜನರಲ್ಲಿ ಆತಂಕ ಸೃಷ್ಟಿಸಿತ್ತು. ಚಿರತೆ ನೋಡಿ ಸ್ಥಳೀಯರು ಭಯಭೀತರಾಗಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಗ್ರಾಮಸ್ಥರ ಮನವಿ ಮೇರೆಗೆ ತಿಂಗಳ ಹಿಂದೆ ಅರಣ್ಯ ಇಲಾಖೆ ಬೋನು ಇರಿಸಿತ್ತು. ಇಂದು ಚಿರತೆ ಬೋನಿಗೆ ಬಿದ್ದಿದ್ದು ಸುಮಾರು 10 ವರ್ಷ ಪ್ರಾಯದ ಗಂಡು ಚಿರತೆಯೆಂದು ಸೆರೆಸಿಕ್ಕಿದೆ.

    ಅರಣ್ಯಾಧಿಕಾರಿಗಳು ಸ್ಥಳಕ್ಕಾಗಮಿಸುವ ಮುನ್ನ ಜನ ಮುಗಿಬಿದ್ದು ಚಿರತೆ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಇಲಾಖೆ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಚಿರತೆಯನ್ನು ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದ ಕಾಡಿಗೆ ಬಿಟ್ಟಿದ್ದಾರೆ. ಕಳೆದ ವರ್ಷ ಇದೇ ಪ್ರದೇಶದಲ್ಲಿ ಚಿರತೆ ಬೋನಿಗೆ ಬಿದ್ದಿತ್ತು. ಇದುವರೆಗೆ ಇದೆ ಪ್ರದೇಶದ ಸುತ್ತಮುತ್ತ ಒಟ್ಟು ಐದು ಚಿರತೆಗಳನ್ನು ಸೆರೆ ಹಿಡಿಯಲಾಗಿದೆ. ಸೆರೆ ಹಿಡಿದ ಚಿರತೆಯನ್ನು ಅರಣ್ಯ ಇಲಾಖೆ ಕಾಡಿಗೆ ಬಿಡುತ್ತದೆ, ಅದೇ ಚಿರತೆ ವಾಪಸ್ ಬರುತ್ತಿದ್ಯಾ ಎನ್ನುವ ಸಂಶಯ ಹಲವು ವರ್ಷದಿಂದ ಜನರನ್ನು ಕಾಡುತ್ತಿದೆ.

  • ಲವ್ ಬರ್ಡ್ಸ್ ಪಂಜರದಲ್ಲಿ ನಾಗರಹಾವು

    ಲವ್ ಬರ್ಡ್ಸ್ ಪಂಜರದಲ್ಲಿ ನಾಗರಹಾವು

    ಮೈಸೂರು: ಲವ್ ಬರ್ಡ್ಸ್ ಪಂಜರದೊಳಕ್ಕೆ ನಾಗರಹಾವು ನುಗ್ಗಿ ಎರಡು ಪಕ್ಷಿಗಳನ್ನು ತಿಂದ ಘಟನೆ ಮೈಸೂರು ಹೊರವಲಯದ ರೂಪನಗರದಲ್ಲಿ ನಡೆದಿದೆ.

    ಜಯಪ್ರಕಾಶ್ ಮನೆಯಲ್ಲಿ ಪಂಜರದೊಳಗಿದ್ದ ಎರಡು ಲವ್ ಬರ್ಡ್ಸ್ ಗಳನ್ನು ತಿಂದು ತೇಗಿದ ನಾಗರಹಾವು ಉಳಿದ ಲವ್ ಪಕ್ಷಿಗಳನ್ನು ತಿನ್ನಲು ಪಂಜರದೊಳಗೆ ಅಡಗಿ ಕುಳಿತಿತ್ತು. ಈ ವೇಳೆ ಪಕ್ಷಿಗಳು ಭಯದಿಂದ ಪಂಜರದೊಳಗೆ ಚೀರಾಡಿಕೊಂಡು ಹಾರಾಡುತ್ತಿದ್ದವು.

    ಪಕ್ಷಿಗಳ ಅತಿಯಾದ ಚೀರಾಟ ಕೇಳಿ ಮನೆ ಮಂದಿ ಓಡಿ ಬಂದಿದ್ದಾರೆ. ಆಗ ಪಂಜರದಲ್ಲಿದ್ದ ನಾಗರಹಾವು ಕಂಡು ತಬ್ಬಿಬ್ಬಾಗಿದ್ದಾರೆ. ಕೂಡಲೇ ಮನೆಯವರು ಉರಗ ತಜ್ಞ ಸ್ನೇಕ್ ಶಾಮ್‍ಗೆ ಫೋನ್ ಮಾಡಿ ಮಾಹಿತಿ ತಿಳಿಸಿದ್ದಾರೆ.

    ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಸ್ನೇಕ್ ಶ್ಯಾಂ ಪಂಜರದೊಳಗಿದ್ದ ನಾಗರಹಾವನ್ನು ಹಿಡಿದು ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಆದರೆ ಪಂಜರದೊಳಗೆ ಸೇರಿಕೊಂಡು ಎರಡು ಲವ್ ಬರ್ಡ್ಸ್ ತಿಂದು ಹಾಕಿರುವುದರಿಂದ ಮನೆಯವರು ಬೇಸರ ವ್ಯಕ್ತಪಡಿಸಿದ್ದಾರೆ.

  • ಚಿರತೆ ಸೆರೆಯಿಂದ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

    ಚಿರತೆ ಸೆರೆಯಿಂದ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

    ಹಾಸನ: ಹಲವು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯೊಂದು ಸೋಮವಾರ ರಾತ್ರಿ ಬೋನಿಗೆ ಬಿದ್ದಿದೆ. ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಹೋಬಳಿ ಬನವಾಸೆ ಗ್ರಾಮದ ಸುತ್ತಮುತ್ತ ಕಾಣಿಸಿಕೊಂಡಿದ್ದ ಚಿರತೆ ಭಯ ಹುಟ್ಟಿಸಿತ್ತು.

    ಬಸವಾಸೆ ಗ್ರಾಮದಲ್ಲಿ ಹಲವು ದಿನಗಳಿಂದ ಚಿರತೆಯೊಂದರ ಹಾವಳಿ ಹೆಚ್ಚಾಗಿತ್ತು. ಇದರಿಂದ ಗ್ರಾಮಸ್ಥರು ಆತಂಕಗೊಂಡಿದ್ದರು. ಚಿರತೆ ಗ್ರಾಮಕ್ಕೆ ನುಗ್ಗಿ ಗ್ರಾಮಸ್ಥರು ಸಾಕಿದ್ದ ಕರು, ಕುರಿಮರಿಗಳನ್ನು ತಿಂದು ಪರಾರಿಯಾಗುತ್ತಿತ್ತು. ಆದರಿಂದ ಈ ಭಾಗದ ಜನರು ಚಿರತೆ ಯಾವಾಗ ಬಂದು ಇನ್ನೇನು ಮಾಡುತ್ತೋ ಅಂತ ಭಯದಿಂದ ಜೀವನ ಮಾಡುತ್ತಿದ್ದರು. ಚಿರತೆ ಕಾಟಕ್ಕೆ ಜನರು ಮನೆಗಳಿಂದ ಹೊರಬರಲು ಹೆದರುತ್ತಿದ್ದರು.

    ಚಿರತೆನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದರು. ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆಗೆ ಬೋನನ್ನು ಇಟ್ಟಿದ್ದರು. ಆಹಾರ ಅರಸಿ ರಾತ್ರಿ ಮತ್ತೆ ಗ್ರಾಮಕ್ಕೆ ಬಂದ ಚಿರತೆ ಬೋನಿಗೆ ಬಿದ್ದಿದೆ. ಇದನ್ನು ಕಂಡು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೊನೆಗೂ ಬೋನಿಗೆ ಬಿದ್ದ ಎರಡನೇ ನರಭಕ್ಷಕ ಚಿರತೆ

    ಕೊನೆಗೂ ಬೋನಿಗೆ ಬಿದ್ದ ಎರಡನೇ ನರಭಕ್ಷಕ ಚಿರತೆ

    ಬಳ್ಳಾರಿ: ಜಿಲ್ಲೆಯ ಕಂಪ್ಲಿ ತಾಲೂಕಿನ ಸೋಮಲಾಪುರ ಗ್ರಾಮಸ್ಥರ ನಿದ್ದೆಗೆಡೆಸಿದ್ದ ಎರಡನೇ ನರಭಕ್ಷಕ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ.

    ಕಳೆದ ಎರಡು ವಾರದಿಂದ ಸುತ್ತಮುತ್ತಲಿನ ಗ್ರಾಮದಿಂದ ಎರಡು ಮಕ್ಕಳನ್ನು ಚಿರತೆಗಳು ಹೊತ್ತೊಯ್ದಿದ್ದವು. ಈ ಚಿರತೆಗಳ ಕಾಟ ಅರಣ್ಯ ಇಲಾಖೆಗೆ ದೊಡ್ಡ ತಲೆನೋವಾಗಿತ್ತು. ಹೀಗಾಗಿ ಕಳೆದ ಎರಡು ವಾರದಿಂದ ಚಿರತೆ ಹಿಡಿಯಲು ಕೂಂಬಿಂಗ್ ಕಾರ್ಯಾಚರಣೆ ಮಾಡಿದ್ದರೂ ಪ್ರಯೋಜನವಾಗಿರಲಿಲ್ಲ.

    ಹೀಗಾಗಿ ಸೋಮಲಾಪುರ ಗುಡ್ಡದ ಬಳಿ ನಾಯಿ ಹಾಕಿ 11 ಬೋನುಗಳನ್ನು ಅರಣ್ಯ ಇಲಾಖೆ ಅಳವಡಿಸಿತ್ತು. ಈ ಹಿಂದೆ ಒಂದು ಚಿರತೆ ಸೆರೆಸಿಕ್ಕಿತ್ತು. ಅಲ್ಲದೇ ಇಂದು ಮುಂಜಾನೆ ಆಹಾರ ಅರಸಿ ಬಂದ ಮತ್ತೊಂದು ಚಿರತೆಯೂ ಬೋನಿಗೆ ಬಿದ್ದಿದೆ.

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಚಿರತೆ ಸ್ಥಳಾಂತರ ಕಾರ್ಯ ಕೈಗೊಂಡಿದ್ದಾರೆ. ಬೋನಿನಲ್ಲಿ ಬಿದ್ದ ಚಿರತೆ ನೋಡಲು ಸೋಮಲಾಪುರ ಸುತ್ತಮುತ್ತಲಿನ ಗ್ರಾಮದ ಜನರು ತಂಡೋಪ ತಂಡವಾಗಿ ಗ್ರಾಮದತ್ತ ಆಗಮಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೋನಿಗೆ ಬಿತ್ತು ಗ್ರಾಮಸ್ಥರ ನಿದ್ದೆ ಗೆಡಿಸಿದ್ದ ಚಿರತೆ

    ಬೋನಿಗೆ ಬಿತ್ತು ಗ್ರಾಮಸ್ಥರ ನಿದ್ದೆ ಗೆಡಿಸಿದ್ದ ಚಿರತೆ

    ದಾವಣಗೆರೆ: ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಮತ್ತೂರು ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ.

    ಕಳೆದ ಕೆಲವು ದಿನಗಳಿಂದ ಮತ್ತೂರು ಗ್ರಾಮದಲ್ಲಿ ಚಿರತೆಯೊಂದು ಪದೇ ಪದೇ ಪ್ರತ್ಯಕ್ಷವಾಗಿ ಗ್ರಾಮಸ್ಥರ ನಿದ್ದೆಗಡೆಸಿತ್ತು. ಇದರಿಂದ ಭಯಭೀತಿಗೊಂಡಿದ್ದ ಜನ ಅರಣ್ಯ ಇಲಾಖೆ ಬಳಿ ಚಿರತೆ ಹಿಡಿಯುವಂತೆ ಮನವಿ ಮಾಡಿಕೊಂಡಿದ್ದರು.

    ಗ್ರಾಮಸ್ಥರ ದೂರು ಹಿನ್ನಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಇಟ್ಟಗಿ ಹನುಮಂತಪ್ಪ ಎಂಬವರ ಕಬ್ಬಿನ ಗದ್ದೆಯಲ್ಲಿ ಅರಣ್ಯ ಇಲಾಖೆ ಬೋನನ್ನು ಇಟ್ಟಿತ್ತು. ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಇಂದು ಬೋನಿಗೆ ಬಿದ್ದಿದೆ. ಚಿರತೆ ಬೋನಿಗೆ ಬಿದ್ದಿದ್ದರಿಂದ ಆತಂಕದಲ್ಲಿದ್ದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಚಿರತೆಯನ್ನು ತೆಗೆದುಕೊಂಡು ಹೋಗಿದ್ದಾರೆ. 10 ದಿನಗಳ ಹಿಂದೆ ಇದೇ ಪ್ರದೇಶದಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿತ್ತು. ಈಗ ಮತ್ತೊಂದು ಚಿರತೆಯೂ ಬೋನಿಗೆ ಬಿದ್ದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕುಡಿದ ಮತ್ತಿನಲ್ಲಿ ಚಿರತೆ ಬೋನಿನಲ್ಲಿ ಸೆರೆಯಾದ!

    ಕುಡಿದ ಮತ್ತಿನಲ್ಲಿ ಚಿರತೆ ಬೋನಿನಲ್ಲಿ ಸೆರೆಯಾದ!

    ಗಾಂಧಿನಗರ: ಗುಜರಾತಿನ ಗಿರ್ ಅರಣ್ಯದಲ್ಲಿ ಚಿರತೆಯನ್ನು ಹಿಡಿಯಲು ಇಟ್ಟಿದ್ದ ಬೋನಿಗೆ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಒಳಗೆ ಸೆರೆಯಾಗಿರುವ ಫೋಟೋ ಈಗ ಸಾಮಾಜಿಕ ಜಾತಾಣದಲ್ಲಿ ವೈರಲ್ ಆಗಿದೆ.

    ಗಿರ್ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಬೋನಿನೊಳಗೆ ಸೆರೆಯಾಗಿ ಕೆಲವು ಗಂಟೆಗಳು ಕಳೆದರೂ ಆ ವ್ಯಕ್ತಿಗೆ ಸಹಾಯ ಮಾಡಲು ಯಾರೊಬ್ಬರು ಮುಂದಾಗಲಿಲ್ಲ.

    ವ್ಯಕ್ತಿಯು ನನ್ನನ್ನು ಹೊರಗೆ ಬಿಡಿ, ಹಸಿವಾಗುತ್ತಿದೆ, ಕುಡಿಯಲು ನೀರು ಕೊಡಿ ಎಂದು ಬೇಡಿಕೊಂಡರೂ ಸ್ಥಳಿಯರು ಮೊಬೈಲ್ ನಲ್ಲಿ ದೃಶ್ಯವನ್ನು ಸೆರೆ ಹಿಡಿಯುತ್ತಿದ್ದರು ಎಂದು ವರದಿಯಾಗಿದೆ.

    ಸ್ವಯಂಚಾಲಿತ ತಂತ್ರಜ್ಞಾನವನ್ನು ಹೊಂದಿರುವ ಈ ಬೋನ್ ಒಳಗಡೆ ಯಾರೆ ಪ್ರವೇಶಿಸಿದರೂ ತಕ್ಷಣ ಲಾಕ್ ಆಗುತ್ತದೆ. ಬಳಿಕ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.  ಅಧಿಕಾರಿಗಳು ಸ್ಥಳಕ್ಕೆ  ಬಂದು  ಬೋನಿನ ಲಾಕ್ ತೆಗೆದಿದ್ದು, ಬಳಿಕ ವೈಕ್ತಿ  ಹೊರಗೆ  ಬಂದಿದ್ದಾನೆ.

  • ಝೂನಲ್ಲಿ ಬೇಲಿ ಹಾರಿ ಸಿಂಹಗಳಿದ್ದ ಸ್ಥಳಕ್ಕೆ ಜಿಗಿದ ವ್ಯಕ್ತಿ! – ವಿಡಿಯೋ ನೋಡಿ

    ಝೂನಲ್ಲಿ ಬೇಲಿ ಹಾರಿ ಸಿಂಹಗಳಿದ್ದ ಸ್ಥಳಕ್ಕೆ ಜಿಗಿದ ವ್ಯಕ್ತಿ! – ವಿಡಿಯೋ ನೋಡಿ

    ತಿರುವನಂತಪುರಂ: ವ್ಯಕ್ತಿಯೊಬ್ಬ ಮೃಗಾಲಯದಲ್ಲಿ ಬೇಲಿ ಹಾರಿ ಸಿಂಹಗಳಿದ್ದ ಸ್ಥಳಕ್ಕೆ ಹೋಗಿದ್ದು, ಅಲ್ಲಿಂದ ಅವುಗಳ ಬೋನಿನೆಡೆಗೆ ಹೋಗಲು ಯತ್ನಿಸಿದ ಘಟನೆ ಬುಧವಾರದಂದು ತಿರುವನಂತಪುರಂನಲ್ಲಿ ನಡೆದಿದೆ.

    ಮೃಗಾಲಯದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಹೋಗಿ ಆ ವ್ಯಕ್ತಿಯನ್ನ ಅಲ್ಲಿಂದ ಎಳೆದುಕೊಂಡು ಬಂದಿದ್ದಾರೆ. ಮೃಗಾಲಯಕ್ಕೆ ಭೇಟಿ ನೀಡಿದ ಪ್ರವಾಸಿಗರು ಈ ದೃಶ್ಯವನ್ನ ಮೊಬೈಲ್‍ನಲ್ಲಿ ಸೆರೆಹಿಡಿದಿದ್ದು, ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ.

    ಇಲ್ಲಿನ ಪಲಕ್ಕಾಡ್ ನಿವಾಸಿಯಾದ ಮುರುಗನ್ ಅಂಬೆಗಾಲಿಟ್ಟುಕೊಂಡು ಸಿಂಹಗಳಿದ್ದ ಸ್ಥಳವನ್ನ ಪ್ರವೇಶಿಸಿದ್ದಾನೆ. ಬಳಿಕ ಅವುಗಳ ಬೋನಿನ ಕಡೆ ಹೋಗುವ ಸಂದರ್ಭದಲ್ಲಿ ಪ್ರವಾಸಿಗರು ಗಮನಿಸಿದ್ದು, ಕ್ಷಣಕಾಲ ದಂಗಾಗಿ ತಮ್ಮಲ್ಲೇ ಮಾತಾಡಿಕೊಂಡಿದ್ದಾರೆ.

    ಕೂಡಲೇ ಮೃಗಾಲಯದ ಸಿಬ್ಬಂದಿ ಅಲ್ಲಿಗೆ ಬಂದು ಮುರುಗನ್‍ನನ್ನು ಎಳೆದುಕೊಂಡು ಬಂದಿದ್ದಾರೆ. ಈ ಸಂದರ್ಭದಲ್ಲಿ ಸಿಂಹಗಳು ಹೊರಗಿದ್ದವಾ ಅಥವಾ ಬೋನಿನಲ್ಲಿ ಇರಿಸಲಾಗಿತ್ತಾ ಎಂಬುದು ವಿಡಿಯೋದಿಂದ ಗೊತ್ತಾಗಿಲ್ಲ.

    ವರದಿಗಳ ಪ್ರಕಾರ ಮುರುಗನ್ ಕಾಣೆಯಾಗಿದ್ದ ಬಗ್ಗೆ ಆತನ ಕುಟುಂಬಸ್ಥರು ಸ್ಥಳೀಯ ದಿನಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದರು.

    2014ರಲ್ಲಿ ದೆಹಲಿಯ ಮೃಗಾಲಯದಲ್ಲಿ ಮಕ್ಸೂದ್ ಎಂಬ ವ್ಯಕ್ತಿ ಬಿಳಿ ಹುಲಿಗಳಿದ್ದ ಸ್ಥಳಕ್ಕೆ ಹತ್ತಿ ಹೋಗಿ ಹುಲಿ ದಾಳಿಗೆ ಸಿಲುಕಿ ಸಾವನ್ನಪ್ಪಿದ್ದ.

  • ವೀಡಿಯೋ: ಸಿಂಹದ ಮೇಲೆ ಕುಳಿತು ವರನ ಮೆರವಣಿಗೆ!

    ವೀಡಿಯೋ: ಸಿಂಹದ ಮೇಲೆ ಕುಳಿತು ವರನ ಮೆರವಣಿಗೆ!

    ಇಸ್ಲಾಮಾಬಾದ್: ಕುದುರೆ ಮೇಲೆ, ಬೈಕ್‍ನಲ್ಲಿ, ದುಬಾರಿ ಕಾರಿನಲ್ಲಿ ಅಥವಾ ಪಲ್ಲಕ್ಕಿಯಲ್ಲಿ ಕುಳಿತು ವಧು/ವರ ಮದುವೆ ಮಂಟಪಕ್ಕೆ ಬರೋದನ್ನ ನೋಡಿದ್ದೀವಿ. ಆದ್ರೆ ಪಾಕಿಸ್ತಾನದಲ್ಲಿ ಕೋಟ್ಯಾಧಿಪತಿ ವ್ಯಕ್ತಿಯೊಬ್ಬರ ಮಗ ಸಿಂಹದ ಮೇಲೆ ಕುಳಿತು ಮೆರವಣಿಗೆ ಮೂಲಕ ಮದುವೆ ಮಂಟಪಕ್ಕೆ ಬಂದಿದ್ದಾರೆ.

    ಏನು ಸಿಂಹನಾ ಅಂತ ಅಚ್ಚರಿ ಪಡಬೇಡಿ. ವರ ಕುಳಿತಿದ್ದು ಸಿಂಹ ಇದ್ದ ಬೋನಿನ ಮೇಲಷ್ಟೆ. ಚಿನ್ನಾಭರಣಗಳನ್ನ ಮೈಮೇಲೆ ಧರಿಸಿ ವರ ಸಿಂಹವಿದ್ದ ಬೋನಿನ ಮೇಲೆ ಕುಳಿತು, ಸ್ನೇಹಿತರು ಹಾಗೂ ಸಂಬಂಧಿಕರು ಕುಣಿಯುತ್ತಾ, ನೋಟುಗಳ ಸುರಿಮಳೆಗೈಯ್ಯುತ್ತಾ ಅದ್ಧೂರಿ ಮೆರವಣಿಗೆ ಮೂಲಕ ಮಂಟಪ ತಲುಪಿದ್ದಾರೆ. ಈ ಮದುವೆಯ ಬಗ್ಗೆ ಪಾಕಿಸ್ತಾನದ ಮಾಧ್ಯಮಗಳಲ್ಲೂ ವರದಿಯಾಗಿದೆ.

    ವರ ತಾನು ಸಿಂಹದ ಮೇಲೆ ಕುಳಿತು ಮದುವೆ ಮಂಟಪಕ್ಕೆ ಬರಬೇಕು ಅಂತ ಆಸೆ ಪಟ್ಟಿದ್ದರಂತೆ. ಮಗನ ಆಸೆ ಈಡೇರಿಸಬೇಕು ಎಂದು ವರನ ತಂದೆ ಅಂದುಕೊಂಡಿದ್ದರು. ಆದ್ರೆ ಸಿಂಹದ ಮೇಲೆ ಕುಳಿತು ಬರುವುದು ಸಾಧ್ಯವಿಲ್ಲದ ಮಾತು ಎಂದು ಅರಿತು ಬೋನಿನೊಳಗೆ ಹಾಕಲಾದ ಸಿಂಹವನ್ನ ತರಿಸಿದ್ದಾರೆ. ನಂತರ ಬೋನಿನ ಮೇಲೆ ಚೇರ್ ಹಾಕಿಸಿ ವರನನ್ನು ಅದರ ಮೇಲೆ ಕುಳ್ಳಿರಿಸಿ ಮೆರವಣಿಗೆ ಮಾಡಿದ್ದಾರೆ. ಮದುವೆಗೆ 15 ಸಾವಿರಕ್ಕೂ ಹೆಚ್ಚು ಅತಿಥಿಗಳನ್ನ ಆಹ್ವಾನಿಸಲಾಗಿತ್ತು ಎಂದು ವರದಿಯಾಗಿದೆ.