Tag: call

  • ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

    ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

    ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb Threat) ಕರೆ (Call) ಮಾಡಿದ್ದು, ಯುವತಿ (Young Woman) ಬೆಳಗಾವಿ (Belagavi) ಮೂಲದವಳು ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ.

    ಬೆಳಗಾವಿಯ ಶಾಹುನಗರ ನಿವಾಸಿ ಶೃತಿ ಶೆಟ್ಟಿ ಬೆಂಗಳೂರಿನ ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದಾಳೆ. ಕರೆ ಮಾಡಿದ್ದ ಶೃತಿ ಬೆಂಗಳೂರಿನಲ್ಲಿ ಈ ಮೊದಲು ಅದೇ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಳು. ಹೆಚ್ಚಿನ ವಿದ್ಯಾಭ್ಯಾಸಕ್ಕೆಂದು ಕೆಲಸ ತೊರೆದು ಶೃತಿ ಬಂದಿದ್ದಳು. ವಿದ್ಯಾಭ್ಯಾಸದ ಬಳಿಕ ಶೃತಿಯನ್ನು ರೀ ಜಾಯಿನ್ ಮಾಡಿಕೊಳ್ಳಲು ಕಂಪನಿ ಹಿಂದೇಟು ಹಾಕಿದೆ. ಇದರಿಂದ ಮಾನಸಿಕವಾಗಿ ಕುಗ್ಗಿ ಬಾಂಬ್ ಬೆದರಿಕೆ ಕರೆ ಮಾಡಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ – ಆರೋಪಿ ಅರೆಸ್ಟ್

    ಸದ್ಯ ಶೃತಿಯನ್ನು ವಶಕ್ಕೆ ಪಡೆಯಲು ಬೆಂಗಳೂರಿನ ಪೊಲೀಸ್ ತಂಡ ಬೆಳಗಾವಿಗೆ ಆಗಮಿಸಿತ್ತು. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಪಿಎಸ್‌ಐ ಮೆಹಬೂಬ್ ಹಾಗೂ ಮಹಿಳಾ ಪೊಲೀಸ್ ಪೇದೆ, ಶೃತಿ ಮನೆಗೆ ಆಗಮಿಸಿದ್ದು, ಇವರಿಗೆ ಬೆಳಗಾವಿ ಎಪಿಎಂಸಿ ಠಾಣೆ ಸಿಪಿಐ, ಪಿಎಸ್‌ಐ ಸೇರಿ ಪೊಲೀಸ್ ಸಿಬ್ಬಂದಿ ಸಾಥ್ ನೀಡಿದ್ದಾರೆ. ಇದನ್ನೂ ಓದಿ: ಪಟಾಕಿ ಕಿಡಿಯಿಂದ ಹೊತ್ತಿ ಉರಿದ ಗುಜರಿ ಅಂಗಡಿ

    ಯುವತಿ ಶೃತಿ ಶೆಟ್ಟಿಯನ್ನು ವಿಚಾರಣೆ ನಡೆಸಿದ ಪರಪ್ಪನ ಅಗ್ರಹಾರ ಪೊಲೀಸರು ಹುಸಿ ಬಾಂಬ್ ಕರೆ ಮಾಡಿರುವ ಕುರಿತು ಪ್ರಾಥಮಿಕ ಮಾಹಿತಿ ಪಡೆದಿದ್ದಾರೆ. ಈ ವೇಳೆ ಎರಡನೇ ಬಾರಿಗೆ ಕಂಪನಿಯಲ್ಲಿ ಕೆಲಸಕ್ಕೆ ಸೇರಿಸಿಕೊಳ್ಳದಿದ್ದಕ್ಕೆ ಕರೆ ಮಾಡಿರುವುದಾಗಿ ಯುವತಿ ಹೇಳಿದ್ದಾಳೆ. ತಾಯಿಯ ಮೊಬೈಲ್‌ನಿಂದ ಇಂದು ಬೆಳಗ್ಗೆ ಕರೆ ಮಾಡಿರುವುದಾಗಿ ಶೃತಿ ಹೇಳಿಕೆ ನೀಡಿದ್ದಾಳೆ. ಬಳಿಕ ಬುಧವಾರ ಪರಪ್ಪನ ಅಗ್ರಹಾರ ಠಾಣೆಗೆ ವಿಚಾರಣೆಗೆ ಆಗಮಿಸುವಂತೆ ಶೃತಿಗೆ ನೋಟಿಸ್ ನೀಡಲಾಗಿದೆ. ಯುವತಿ ಶೃತಿ, ಆಕೆಯ ತಂದೆ-ತಾಯಿಗೆ ಠಾಣೆಗೆ ಬರುವಂತೆ ಪೊಲೀಸರು ನೋಟಿಸ್ ನೀಡಿ ತೆರಳಿದ್ದಾರೆ. ಇದನ್ನೂ ಓದಿ: 1,20,000 ರೂ.ಗೆ ಭಾರತ-ನ್ಯೂಜಿಲೆಂಡ್ ಸೆಮಿಫೈನಲ್ ಟಿಕೆಟ್ ಮಾರಾಟ – ಓರ್ವ ಅರೆಸ್ಟ್

  • ರಿಷಬ್ ಶೆಟ್ಟಿಯನ್ನು ತಮ್ಮ ಮನೆಗೆ ಕರೆಯಿಸಿಕೊಂಡ ಸೂಪರ್ ಸ್ಟಾರ್ ರಜನಿ

    ರಿಷಬ್ ಶೆಟ್ಟಿಯನ್ನು ತಮ್ಮ ಮನೆಗೆ ಕರೆಯಿಸಿಕೊಂಡ ಸೂಪರ್ ಸ್ಟಾರ್ ರಜನಿ

    ಕಾಂತಾರ ಸಿನಿಮಾ ನೋಡಿ ಅಚ್ಚರಿ ಎನ್ನುವಂತೆ ನಿರ್ದೇಶಕ, ನಟ ರಿಷಬ್ ಶೆಟ್ಟಿ (Rishabh Shetty) ಅವರಿಗೆ ಕರೆ ಮಾಡಿದ್ದರು ಸೂಪರ್ ಸ್ಟಾರ್ ರಜನಿಕಾಂತ್ (Rajinikanth). ಅದೊಂದು ಅನಿರೀಕ್ಷಿತ ಕರೆ ಆಗಿದ್ದರಿಂದ ರಿಷಬ್ ಕೂಡ ಅಚ್ಚರಿ ಪಟ್ಟಿದ್ದರು. ಸೂಪರ್ ಸ್ಟಾರ್ ಒಬ್ಬರು ಸಿನಿಮಾ ನೋಡಿ, ಕರೆ ಮಾಡಿದ್ದರಿಂದ ಅವರಿಗೆ ಕೃತಜ್ಞತೆ ಹೇಳುವುದಕ್ಕಾಗಿ ರಿಷಬ್ ರೆಡಿಯಾಗಿದ್ದರು. ಅಷ್ಟರಲ್ಲೇ ಮತ್ತೊಂದು ಸರ್ ಪ್ರೈಸ್ ನೀಡಿದ್ದಾರೆ ರಜನಿ. ಸ್ವತಃ ರಿಷಬ್ ಅವರನ್ನು ತಮ್ಮ ಮನೆಗೆ ಕರೆದು ಸನ್ಮಾನ ಮಾಡಿದ್ದಾರೆ.

    ಕಾಂತಾರ (Kantara) ಮೂಲಕ ನ್ಯಾಷಿನಲ್ ಸ್ಟಾರ್ ಆಗಿರುವ ರಿಷಬ್ ಶೆಟ್ಟಿ, ಕೆಲ ಹೊತ್ತು ರಜನಿಕಾಂತ್ ಅವರ ಜೊತೆ ಮಾತನಾಡಿ ತಮ್ಮ ಕನಸುಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಕೃತಜ್ಞತೆಯನ್ನೂ ಹೇಳಿದ್ದಾರೆ. ಕಾಂತಾರ ಮೇಕಿಂಗ್, ಅದನ್ನು ಹೇಳಿದ ರೀತಿ, ತೋರಿಸಿದ ಕ್ರಮದ ಬಗ್ಗೆ ರಜನಿಕಾಂತ್ ಮೆಚ್ಚುಗೆಯನ್ನು ಈ ಸಂದರ್ಭದಲ್ಲಿ ವ್ಯಕ್ತ ಪಡಿಸಿದ್ದಾರೆ. ರಜನಿ ಮಾತು ಕೇಳಿ ರಿಷಬ್ ಕೂಡ ಖುಷ್ ಆಗಿದ್ದಾರೆ.

    ಈ ಹಿಂದೆ ರಜನಿ ಕರೆ ಮಾಡಿದಾಗ ಥ್ರಿಲ್ ಆಗಿದ್ದ ರಿಷಬ್, ಮಾತಿನ ಮಧ್ಯೆ ರಜನಿ ಸ್ಟೈಲ್ ನಲ್ಲೇ ಸಿಗರೇಟು ತಿರುಗಿಸಿ ಬಾಯಿಗೆ ಹಾಕಿಕೊಂಡ ದೃಶ್ಯವನ್ನು ನೆನಪಿಸಿದ್ದಾರೆ. ಈ ದೃಶ್ಯ ಮಾಡುವಾಗ ನಿಮ್ಮನ್ನೇ ನೆನಪಿಸಿಕೊಂಡು, ನಿಮ್ಮದೇ ಸ್ಟೈಲ್ ನಲ್ಲೇ ಅದನ್ನು ಮಾಡಲು ಪ್ರಯತ್ನಿಸಿದ್ದೇನೆ ಎಂದು ರಿಷಬ್ ಹೇಳಿದ್ದಾರೆ. ಸಿನಿಮಾ, ಮೇಕಿಂಗ್, ಕಥೆ, ನಟನೆ, ಸಂಗೀತ ಸೇರಿದಂತೆ ಹಲವು ವಿಚಾರಗಳನ್ನು ರಜನಿ ಮುಕ್ತವಾಗಿ ರಿಷಬ್ ಜೊತೆ ಮಾತನಾಡಿದ್ದಾರೆ. ಎಲ್ಲಾ ವಿಭಾಗದ ಕೆಲಸವನ್ನೂ ರಜನಿ ಮೆಚ್ಚಿಕೊಂಡಿದ್ದಾರೆ.

    ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ದಿನದಿಂದ ದಿನಕ್ಕೆ ತನ್ನ ಪ್ರಭಾವವನ್ನು ಹೆಚ್ಚಿಸಿಕೊಳ್ಳುತ್ತಲೇ ಇದೆ. ಮೊದಲ ದಿನದಂದು ಈವರೆಗೂ ಹಣ ಗಳಿಕೆಯಲ್ಲಿ ಅದು ಯಾವತ್ತೂ ಹಿಂದೆ ಬಿದ್ದಿಲ್ಲ. 200 ಕೋಟಿಗೂ ಅಧಿಕ ಹಣವನ್ನು ಕಾಂತಾರ ಗಳಿಸಿದೆ ಎಂದು ಅಂದಾಜಿಸಲಾಗಿದೆ. ಈವರೆಗೂ ಕರ್ನಾಟಕವೊಂದರಲ್ಲೇ 100 ಕೋಟಿಗೂ ಅಧಿಕ ಹಣ ತಂದುಕೊಟ್ಟಿರುವ ಕಾಂತಾರ, ತೆಲಂಗಾಣ, ಉತ್ತರ ಭಾರತ, ಕೇರಳ, ವಿದೇಶದಿಂದ ಬಂದ ಒಟ್ಟು ಹಣ 80 ಕೋಟಿಗೂ ಅಧಿಕ ಎಂದು ಅಂದಾಜಿಸಲಾಗಿದೆ.

    ದೇಶಾದ್ಯಂತ ಕಾಂತಾರ ಸಿನಿಮಾ ಗೆಲುವಿನ ಓಟವನ್ನು ಮುಂದುವರೆಸಿದೆ. ದೀಪಾವಳಿ ಹಬ್ಬದ ರಜೆಯ ಕಾರಣದಿಂದಾಗಿ ಬಾಕ್ಸ್ ಆಫೀಸ್ ಭರ್ತಿ ಭರ್ತಿ ಆಗಿದೆ. ಇದೊಂದು ಐತಿಹಾಸಿಕ, ಮಹಾ ಗೆಲುವು ಎಂದು ಬಣ್ಣಿಸಲಾಗುತ್ತಿದೆ. ಈ ಗೆಲುವನ್ನು ರಿಷಬ್ ಶೆಟ್ಟಿ ದೈವಕ್ಕೆ ಅರ್ಪಿಸಿದ್ದಾರೆ. ಈ ಸಿನಿಮಾ ಗೆಲ್ಲಲು ದೈವ ಕಾರಣ, ಜನರಲ್ಲಿ ನಾನು ದೇವರನ್ನು ಕಾಣುತ್ತೇನೆ ಎಂದು ಹೇಳಿದ್ದಾರೆ ರಿಷಬ್.

    Live Tv
    [brid partner=56869869 player=32851 video=960834 autoplay=true]

  • Exclusive -‘ಕಾಂತಾರ’ ನೋಡಿದ ರಜನಿಕಾಂತ್: ಕಾಲ್ ಮಾಡಿ ಸರ್ ಪ್ರೈಸ್ ಕೊಟ್ಟ ತಲೈವ

    Exclusive -‘ಕಾಂತಾರ’ ನೋಡಿದ ರಜನಿಕಾಂತ್: ಕಾಲ್ ಮಾಡಿ ಸರ್ ಪ್ರೈಸ್ ಕೊಟ್ಟ ತಲೈವ

    ಕಾಂತಾರ (Kantara) ಸಿನಿಮಾದ ಗೆಲುವು ರಿಷಬ್ ಶೆಟ್ಟಿ ಅವರಿಗೆ ಅಚ್ಚರಿ ಮೇಲೆ ಅಚ್ಚರಿ ನೀಡುತ್ತಿದೆ. ಭಾರತೀಯ ಸಿನಿಮಾ ರಂಗದ ಅನೇಕ ಕಲಾವಿದರು ಈ ಸಿನಿಮಾ ನೋಡಿ, ಮೆಚ್ಚಿಕೊಂಡಿದ್ದಾರೆ. ಅನೇಕ ತಾರೆಯರು ಸ್ವತಃ ರಿಷಬ್ ಶೆಟ್ಟಿಗೆ ಕರೆ ಮಾಡಿ ಮಾತನಾಡಿದ್ದಾರೆ. ಅಂಥದ್ದೇ ಒಂದು ಸರ್ ಪ್ರೈಸ್ ನೀಡಿದ್ದಾರೆ ಸೂಪರ್ ಸ್ಟಾರ್ ರಜನಿಕಾಂತ್. ಕಾಂತಾರ ಸಿನಿಮಾ ನೋಡಿದ ಮೇಲೆ ರಿಷಬ್ ಜೊತೆ ಮಾತನಾಡಿದ ರಜನಿ, ಸಿನಿಮಾದ ಬಗ್ಗೆ ಹಾಡಿ ಹೊಗಳಿದ್ದಾರೆ.

    ರಜನಿ (Rajinikanth) ಕರೆ ಮಾಡಿದಾಗ ಥ್ರಿಲ್ ಆಗಿದ್ದ ರಿಷಬ್, ಮಾತಿನ ಮಧ್ಯೆ ರಜನಿ ಸ್ಟೈಲ್ ನಲ್ಲೇ ಸಿಗರೇಟು ತಿರುಗಿಸಿ ಬಾಯಿಗೆ ಹಾಕಿಕೊಂಡ ದೃಶ್ಯವನ್ನು ನೆನಪಿಸಿದ್ದಾರೆ. ಈ ದೃಶ್ಯ ಮಾಡುವಾಗ ನಿಮ್ಮನ್ನೇ ನೆನಪಿಸಿಕೊಂಡು, ನಿಮ್ಮದೇ ಸ್ಟೈಲ್ ನಲ್ಲೇ ಅದನ್ನು ಮಾಡಲು ಪ್ರಯತ್ನಿಸಿದ್ದೇನೆ ಎಂದು ರಿಷಬ್ ಹೇಳಿದ್ದಾರೆ. ಸಿನಿಮಾ, ಮೇಕಿಂಗ್, ಕಥೆ, ನಟನೆ, ಸಂಗೀತ ಸೇರಿದಂತೆ ಹಲವು ವಿಚಾರಗಳನ್ನು ರಜನಿ ಮುಕ್ತವಾಗಿ ರಿಷಬ್ ಜೊತೆ ಮಾತನಾಡಿದ್ದಾರೆ. ಎಲ್ಲಾ ವಿಭಾಗದ ಕೆಲಸವನ್ನೂ ರಜನಿ ಮೆಚ್ಚಿಕೊಂಡಿದ್ದಾರೆ. ಇದನ್ನೂ ಓದಿ:ದೇಶ-ವಿದೇಶದಲ್ಲಿ ಮಾರ್ದನಿಸ್ತಿರೋ ಗಗ್ಗರ ಶಬ್ಧ- ಅಮೆರಿಕಾದಲ್ಲಿ ಎಂಟೂವರೆ ಕೋಟಿ ಬಾಚಿದ ಕಾಂತಾರ

    ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ದಿನದಿಂದ ದಿನಕ್ಕೆ ತನ್ನ ಪ್ರಭಾವವನ್ನು ಹೆಚ್ಚಿಸಿಕೊಳ್ಳುತ್ತಲೇ ಇದೆ. ಮೊದಲ ದಿನದಂದು ಈವರೆಗೂ ಹಣ ಗಳಿಕೆಯಲ್ಲಿ ಅದು ಯಾವತ್ತೂ ಹಿಂದೆ ಬಿದ್ದಿಲ್ಲ. ನಿನ್ನೆವರೆಗೂ 180 ಕೋಟಿಗೂ ಅಧಿಕ ಹಣವನ್ನು ಕಾಂತಾರ ಗಳಿಸಿದೆ ಎಂದು ಅಂದಾಜಿಸಲಾಗಿದೆ. ಈ ವಾರದ ಕೊನೆಯಲ್ಲಿ ಸಿನಿಮಾ 200 ಕೋಟಿ ಕ್ಲಬ್ ಸೇರಲಿದೆ ಎನ್ನುತ್ತಾರೆ ಟ್ರೇಡ್ ಅನಾಲಿಸಿಸ್.

    ಈವರೆಗೂ ಕರ್ನಾಟಕವೊಂದರಲ್ಲೇ 100 ಕೋಟಿಗೂ ಅಧಿಕ ಹಣ ತಂದುಕೊಟ್ಟಿರುವ ಕಾಂತಾರ, ತೆಲಂಗಾಣ, ಉತ್ತರ ಭಾರತ, ಕೇರಳ, ವಿದೇಶದಿಂದ ಬಂದ ಒಟ್ಟು ಹಣ 80 ಕೋಟಿಗೂ ಅಧಿಕ ಎಂದು ಅಂದಾಜಿಸಲಾಗಿದೆ. ಈ ವಾರದ ಒಳಗೆ ಸಲೀಸಾಗಿ ಕಾಂತಾರ ಸಿನಿಮಾ 200 ಕೋಟಿ ಕ್ಲಬ್ ಸೇರಲಿದೆ ಎನ್ನುವುದು ಸಿನಿ ಪಂಡಿತರ ಲೆಕ್ಕಾಚಾರ.

    ದೇಶಾದ್ಯಂತ ಕಾಂತಾರ ಸಿನಿಮಾ ಗೆಲುವಿನ ಓಟವನ್ನು ಮುಂದುವರೆಸಿದೆ. ದೀಪಾವಳಿ ಹಬ್ಬದ ರಜೆಯ ಕಾರಣದಿಂದಾಗಿ ಬಾಕ್ಸ್ ಆಫೀಸ್ (Box Office) ಭರ್ತಿ ಆಗುತ್ತಿದೆ. ಇದೊಂದು ಐತಿಹಾಸಿಕ, ಮಹಾ ಗೆಲುವು ಎಂದು ಬಣ್ಣಿಸಲಾಗುತ್ತಿದೆ. ಈ ಗೆಲುವನ್ನು ರಿಷಬ್ ಶೆಟ್ಟಿ ದೈವಕ್ಕೆ ಅರ್ಪಿಸಿದ್ದಾರೆ. ಈ ಸಿನಿಮಾ ಗೆಲ್ಲಲು ದೈವ ಕಾರಣ, ಜನರಲ್ಲಿ ನಾನು ದೇವರನ್ನು ಕಾಣುತ್ತೇನೆ ಎಂದು ಹೇಳಿದ್ದಾರೆ ರಿಷಬ್.

    Live Tv
    [brid partner=56869869 player=32851 video=960834 autoplay=true]

  • ಹಿಂದೂಗಳು ಜಾಸ್ತಿ ಇರುವ ಜಾಗದಲ್ಲಿ ಬಾಂಬ್ ಹಾಕಬೇಕು: ಆಡಿಯೋ ವೈರಲ್

    ಹಿಂದೂಗಳು ಜಾಸ್ತಿ ಇರುವ ಜಾಗದಲ್ಲಿ ಬಾಂಬ್ ಹಾಕಬೇಕು: ಆಡಿಯೋ ವೈರಲ್

    ಮಡಿಕೇರಿ: ಕೊಡಗಿನಲ್ಲಿ (Kodagu) ಹಿಂದಿನಿಂದಲೂ ಒಬ್ಬರಲ್ಲಾ ಒಬ್ಬ ಉಗ್ರರು ಬಂದು ನೆಲೆಕಂಡುಕೊಂಡಿರುವುದು ನಿಮಗೆಲ್ಲರಿಗೂ ಗೊತ್ತೇ ಇದೆ. ಅಬ್ದುಲ್ ಮದನಿ ಕೂಡ ಕೊಡಗಿನ ಹೊಸತೋಟಕ್ಕೆ ಬಂದು ತಂಗಿದ್ದು ಹೊಸ ವಿಚಾರವೇನು ಅಲ್ಲ. ಆದರೆ ಈಗ ಮಡಿಕೇರಿ ನಗರಕ್ಕೆ ಪೆಟ್ರೋಲ್ ಬಾಂಬ್ (Bomb) ಹಾಕಬೇಕು ಎಂದು ಮಾತನಾಡಿರುವ ಆಡಿಯೋ (Audio) ಮಡಿಕೇರಿ (Madikeri) ನಗರದ ಜನತೆಯಲ್ಲಿ ಆತಂಕ ಮೂಡಿಸಿದೆ.

    ದೇಶದಲ್ಲಿ ಅಪಾಯಕಾರಿ ಬೆಳವಣಿಗೆಗಳು, ದೇಶ ವಿದ್ರೋಹಿ ಚಟುವಟಿಕೆಗಳು ನಡೆಯಲು ಸಂಚು ರೂಪಿಸಲಾಗುತ್ತಿದೆ ಎಂದು ಪಿಎಫ್‍ಐ (PFI) ಸಂಘಟನೆಯನ್ನು ಇತ್ತೀಚೆಗಷ್ಟೇ ನಿಷೇಧ ಮಾಡಲಾಗಿದೆ. ಆದರೆ ಕಳೆದ ಆರು ತಿಂಗಳ ಹಿಂದೆ ಅಂದರೆ ಏಪ್ರಿಲ್ 25 ರಂದು ಮಡಿಕೇರಿ ನಗರ ಸಭೆ ಸದಸ್ಯ ಜೆಡಿಎಸ್‍ನ ಮುಸ್ತಫಾ ಎಂಬುವರು ಆತನ ಸ್ನೇಹಿತ ಬೆಟ್ಟಗೇರಿಯ ಅಬ್ದುಲ್ಲಾ ಎಂಬುವರೊಂದಿಗೆ ಮಡಿಕೇರಿ ನಗರಕ್ಕೆ ಬಾಂಬ್ ಹಾಕಬೇಕು. ಹಿಂದೂಗಳು ಜಾಸ್ತಿ ಇರುವ ಜಾಗದಲ್ಲಿ ಬಾಂಬ್ ಹಾಕಬೇಕು. ನಮ್ಮವರು ಒಂದಷ್ಟು ಜನರು ಸತ್ತರೂ ಪರವಾಗಿಲ್ಲ ಎಂದು ಮಾತನಾಡಿರುವ ಆಡಿಯೋ ಲೀಕ್ ಆಗಿದ್ದು, ಜಿಲ್ಲೆಯ ಜನರು ಬೆಚ್ಚಿ ಬೀಳುವಂತೆ ಮಾಡಿದೆ. 50ಕ್ಕೂ ಹೆಚ್ಚು ಪ್ರದೇಶಗಳನ್ನು ಟಾರ್ಗೆಟ್ ಮಾಡಿ ಪೆಟ್ರೋಲ್ ಬಾಂಬ್ ಹಾಕಬೇಕು ಎಂದು ಮಲೆಯಾಳಂ ಭಾಷೆಯಲ್ಲಿ ಮಾತನಾಡಿರುವ ಆಡಿಯೋ ಹರಿದಾಡುತ್ತಿದೆ. ಇದನ್ನೂ ಓದಿ: RSS ಬಗ್ಗೆ ಹೊಟ್ಟೆ ಕಿಚ್ಚಿದ್ದವರಿಗೆ ಮದ್ದಿಲ್ಲ: ಪ್ರಮೋದ್ ಮಧ್ವರಾಜ್

    50 ಜನರ ತಂಡ ಕಟ್ಟಿ ತರಬೇತಿ ಮಾಡಬೇಕು. ಇದಕ್ಕೆ ಎಲ್ಲರೂ 50 ಸಾವಿರ ಒಂದು ಲಕ್ಷ ಹಾಕಬೇಕು. ಅದನ್ನು ಬಳಸಿಕೊಂಡು ಮಡಿಕೇರಿ ನಗರಕ್ಕೆ ಪೆಟ್ರೋಲ್ ಬಾಂಬ್ ಹಾಕಿಬಿಡೋದು. ಆ…. ನನ್ನ ಮಕ್ಕಳಿಗೆ ಬುದ್ದಿ ಕಲಿಸಬೇಕು. ಇಡೀ ಮಡಿಕೇರಿ ಟೌನ್ ಹೊತ್ತಿ ಉರಿಯಬೇಕು. ಮಡಿಕೇರಿ ಮಾತ್ರ ಅಲ್ಲ ಎಲ್ಲಾ ಕಡೆ ಹಾಕಬೇಕು. ಅಲ್ಲ ಅಲ್ಲ.. ಇಡೀ ಮಡಿಕೇರಿ ಹೊತ್ತಿ ಉರಿಯಬೇಕು. ಅವರೂ ಸಾಯಲಿ, ನಾವು ಸಾಯೋಣ. ಒಟ್ನಲ್ಲಿ ಅವರಿಗೆ ಭಯ ಹುಟ್ಟಬೇಕು. 50 ಜಾಗದಲ್ಲಿ ಬಾಂಬ್ ಹಾಕಬೇಕು. ಆಗ ಅವರ ಪಾರ್ಟಿ ಲೈಫ್ ಲಾಂಗ್ ಇರಲ್ಲ. ಬಿಜೆಪಿಯವರು ನಿಲ್ಲೋದಕ್ಕೂ ಹೆದರಬೇಕು. ಈ ಬಾರಿ ರಾಜ್ಯದಲ್ಲಿ ಬಿಜೆಪಿ (BJP) ಸೋಲುತ್ತದೆ. ಆಗ ಇವರಿಗೆ ಗೊತ್ತಾಗುತ್ತದೆ. ಡಿಕೆ ಶಿವಕುಮಾರ್ (D.K Shivakumar)  ಮೈಂಡ್ ಹಿಂದುತ್ವದ್ದು, ಸಿದ್ದರಾಮಯ್ಯ (Siddaramaiah) ಮೈಂಡ್ ಜಾತ್ಯಾತೀತ ಮೈಂಡ್. ಎರಡೂ ಒಂದೇ ಆಗಲು ಸಾಧ್ಯವಿಲ್ಲ ಎಂದು ಪರಸ್ಪರ ಮಾತನಾಡಿರುವ ಆಡಿಯೋ ಫೋನ್‍ನಲ್ಲಿ ರೆಕಾರ್ಡ್ ಆಗಿದೆ. ಇದನ್ನೂ ಓದಿ: ಆನ್‌ಲೈನ್ ಶಿಕ್ಷಣವೇ ವಿದ್ಯಾರ್ಥಿಗಳಿಗೆ ಶಿಕ್ಷೆ – ನ್ಯಾ. ಮಲ್ಲಿಕಾರ್ಜುನ ಗೌಡ

     

    ಮಡಿಕೇರಿ ನಗರದ ನಿವಾಸಿ ಶೇಷಪ್ಪ ರೈ ಎಂಬವರು ಮುಸ್ತಫಾ ಅವರಿಗೆ ಯಾವುದೋ ವ್ಯವಹಾರದ ವಿಷಯ ಮಾತನಾಡುವುದಕ್ಕೆ ಕರೆ ಮಾಡಿದ್ದಾರೆ. ಈ ವೇಳೆ ಮುಸ್ತಫಾ, ಶೇಷಪ್ಪ ರೈ ಅವರ ಫೋನ್ ಕಟ್ ಮಾಡುವ ಬದಲು, ಮಿಸ್ ಆಗಿ ರಿಸೀವ್ ಮಾಡಿ ಫೋನ್ ಅನ್ನು ತನ್ನ ಜೇಬಿನಲ್ಲಿ ಇರಿಸಿಕೊಂಡಿದ್ದಾರೆ. ಬಳಿಕ ಮಡಿಕೇರಿಯಲ್ಲಿ ಪೆಟ್ರೋಲ್ ಬಾಂಬ್ ಹಾಕುವ ವಿಷಯವನ್ನು ತನ್ನ ಸ್ನೇಹಿತ ಅಬ್ದುಲ್ಲಾ ಎಂಬುವವನೊಂದಿಗೆ ನೇರವಾಗಿ ಮಾತನಾಡಿದ್ದಾರೆ. ಈ ಎಲ್ಲಾ ವಿಷಯ ಮುಸ್ತಫಾಗೆ ಕರೆ ಮಾಡಿದ್ದ ಶೇಷಪ್ಪ ರೈ ಅವರ ಫೋನ್‌ನಲ್ಲಿ ಕಾಲ್ ರೆಕಾರ್ಡ್ ಆಗಿದೆ. ಇತ್ತೀಚೆಗೆ ಕಾಲ್ ರೆಕಾರ್ಡ್‍ಗಳನ್ನು ಪರಿಶೀಲನೆ ನಡೆಸುವಾಗ ಇದು ಬೆಳಕಿಗೆ ಬಂದಿದ್ದು ಶೇಷಪ್ಪ ರೈ ಮಡಿಕೇರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಶೇಷಪ್ಪ ರೈ ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಮಡಿಕೇರಿ ನಗರದ ಪೊಲೀಸರು ಮಡಿಕೇರಿ ನಗರಸಭೆ ಸದಸ್ಯ ಮುಸ್ತಫಾ, ಬೆಟ್ಟಗೇರಿ ಅಬ್ದುಲ್ಲಾ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪುಟಿನ್ ಜೊತೆ ಯಾವುದೇ ಮಾತುಕತೆ ನಡೆಸಲ್ಲ – ಮೋದಿಗೆ ಕರೆ ಮಾಡಿದ ಝೆಲೆನ್ಸ್ಕಿ

    ಪುಟಿನ್ ಜೊತೆ ಯಾವುದೇ ಮಾತುಕತೆ ನಡೆಸಲ್ಲ – ಮೋದಿಗೆ ಕರೆ ಮಾಡಿದ ಝೆಲೆನ್ಸ್ಕಿ

    ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಜೊತೆಗೆ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ದೂರವಾಣಿ ಕರೆ ಮಾಡಿ ಹೇಳಿದ್ದಾರೆ.

    ಉಕ್ರೇನ್ (Ukrain) ವಿರುದ್ಧ ರಷ್ಯಾ (Russia) ನಡೆಸುತ್ತಿರುವ ಸಂಘರ್ಷದ ನಡುವೆ ಉಕ್ರೇನಿಯನ್-ಭಾರತೀಯ ಪಾಲುದಾರಿಕೆಯನ್ನು ಬಲಪಡಿಸುವ ಪ್ರಾಮುಖ್ಯತೆ ಬಗ್ಗೆ ವೊಲೊಡಿಮಿರ್ ಝೆಲೆನ್ಸ್ಕಿ(Volodymyr Zelensky) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಂಗಳವಾರ ದೂರವಾಣಿ ಮೂಲಕ ಮಾತನಾಡಿದರು. ಇದನ್ನೂ ಓದಿ: ಅಮೃತ್ ಪೌಲ್ ಹರಕೆಯ ಕುರಿ – PSI ಹಗರಣದ ನಿಜವಾದ ಕಿಂಗ್‍ಪಿನ್ ಮಾಜಿ ಸಿಎಂ ಮಗ: ದಿನೇಶ್ ಗುಂಡೂರಾವ್

    ಈ ವೇಳೆ ಉಕ್ರೇನಿಯನ್ ಪ್ರದೇಶಗಳನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸುವ ಗುರಿಯನ್ನು ಹೊಂದಿದೆ. ಈ ಆಕ್ರಮಣಕಾರರ ಎಲ್ಲಾ ನಿರ್ಧಾರಗಳು ಶೂನ್ಯ ಮತ್ತು ಅನೂರ್ಜಿತವಾಗಿವೆ ಮತ್ತು ವಾಸ್ತವವನ್ನು ಬದಲಾಯಿಸಲಾಗುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಉಕ್ರೇನ್ ರಷ್ಯಾದ ಅಧ್ಯಕ್ಷರೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದರು.

    ನಮ್ಮ ರಾಷ್ಟ್ರವು ಯಾವಾಗಲೂ ಮಾತುಕತೆಯ ಮೂಲಕ ಶಾಂತಿಯುತ ಇತ್ಯರ್ಥಕ್ಕೆ ಬದ್ಧವಾಗಿದೆ. ಆದರೆ ರಷ್ಯಾ ತನ್ನ ಮಾತಿನಂತೆ ನಿಲ್ಲಲಿಲ್ಲ ಮತ್ತು ಉದ್ದೇಶ ಪೂರ್ವಕವಾಗಿ ಈ ಪ್ರಕ್ರಿಯೆಯನ್ನು ದುರ್ಬಲಗೊಳಿಸಿತು. ಜನರಲ್ ಅಸೆಂಬ್ಲಿಯ ಅಧಿವೇಶನದ ವೇಳೆ ನಾನು ಭಾಷಣ ಮಾಡುವಾಗ ಶಾಂತಿಗಾಗಿ ನಮ್ಮ ಸ್ಪಷ್ಟ ಸೂತ್ರವನ್ನು ವಿವರಿಸಿದೆ. ಅದನ್ನು ಸಾಧಿಸಲು ಮತ್ತು ನಮ್ಮ ಪಾಲುದಾರರೊಂದಿಗೆ ಒಟ್ಟಾಗಿ ಕೆಲಸ ಮಾಡಲು ನಾವು ಸಿದ್ಧರಿದ್ದೇವೆ ಎಂದು ಮೋದಿ ಅವರಿಗೆ ತಿಳಿಸಿದರು.

    ರಷ್ಯಾದ ಪರಮಾಣು ಬ್ಲ್ಯಾಕ್‍ಮೇಲ್ ಕೇವಲ ಉಕ್ರೇನ್‍ಗೆ ಮಾತ್ರವಲ್ಲದೆ ಇಡೀ ಜಗತ್ತಿಗೆ ಬೆದರಿಕೆಯಾಗಿದೆ ಎಂದರು. ಜೊತೆಗೆ ಮೋದಿಯವರಿಗೆ ಉಕ್ರೇನ್‍ಗೆ ಭೇಟಿ ನೀಡುವಂತೆ ಆಹ್ವಾನಿಸಿದರು.  ಇದನ್ನೂ ಓದಿ: ಕಳ್ಳರ ಕೃತ್ಯಕ್ಕೆ ಬೇಸತ್ತ ಗ್ರಾಮಸ್ಥರು – ಖದೀಮರನ್ನು ಹುಡುಕಿಕೊಟ್ಟವರಿಗೆ ಬಹುಮಾನ ಜೊತೆಗೆ ಸನ್ಮಾನ

    Live Tv
    [brid partner=56869869 player=32851 video=960834 autoplay=true]

  • ರಾಜ್ಯದಲ್ಲಿ ಅಂಬುಲೆನ್ಸ್ ಸೇವೆ ವ್ಯತ್ಯಯ – ನಿನ್ನೆ ಸಂಜೆಯಿಂದ ಕರೆ ಸ್ವೀಕರಿಸದ 108

    ರಾಜ್ಯದಲ್ಲಿ ಅಂಬುಲೆನ್ಸ್ ಸೇವೆ ವ್ಯತ್ಯಯ – ನಿನ್ನೆ ಸಂಜೆಯಿಂದ ಕರೆ ಸ್ವೀಕರಿಸದ 108

    ಬೆಂಗಳೂರು: ರಾಜ್ಯದಲ್ಲಿ ಹೆಲ್ತ್ ಎಮರ್ಜೆನ್ಸಿ (Health Emergency) ಎದುರಾಗಿದೆಯಾ ಎಂಬ ಅನುಮಾನವೊಂದು ಕಾಡಿದೆ. ಸರ್ಕಾರ (Government) ದ ನಿರ್ಲಕ್ಷ್ಯಕ್ಕೆ ರೋಗಿಗಳು ಕಂಗಾಲಾಗಿದ್ದು, ರಾಜ್ಯದಲ್ಲಿ ಸಾವು-ನೋವಾಗುವ ಸಾಧ್ಯತೆಗಳಿವೆ.

    ಅಪಘಾತ ಪ್ರಕರಣಗಳು, ವಿಷಕುಡಿದ ಪ್ರಕರಣಗಳು, ಹಾವು ಕಚ್ಚಿದ ಪ್ರಕರಗಳು, ಹೆರಿಗೆ ಪ್ರಕರಣಗಳು ಸೇರಿದಂತೆ ಅನೇಕ ತುರ್ತು ಚಿಕಿತ್ಸೆಗೆ ಅಂಬುಲೆನ್ಸ್ ಸೇವೆ ಅಗತ್ಯ. ಈ 108 ಅಂಬುಲೆನ್ಸ್ ಸೇವೆಯನ್ನು ಜಿವಿಕೆ ಸಂಸ್ಥೆ ನಡೆಸುತ್ತಾ ಇದೆ. ರಾಜ್ಯಾದ್ಯಂತ ದಿನಕ್ಕೆ ಸುಮಾರು 8 ಸಾವಿರ ಕರೆಗಳು 108 ಗೆ ಹೋಗುತ್ತವೆ. 8 ಸಾವಿರ ಕರೆಗಳಲ್ಲಿ 2 ಸಾವಿರ ಪ್ರಕರಣಗಳು ಗಂಭೀರ ಆಗಿರುತ್ತವೆ. ಆದರೆ ಈ ಅಂಬುಲೆನ್ಸ್ ಸೇವೆ ಸಿಗದೇ ಇದ್ದರೆ 2 ಸಾವಿರ ಗಂಭೀರ ಪ್ರಕರಣಗಳಲ್ಲಿ ಸಾವು ನೋವಾಗುವ ಸಾಧ್ಯತೆ ಹೆಚ್ಚಿರುತ್ತೆ.

    ನಿನ್ನೆ ಸಂಜೆಯಿಂದ ಅಂಬುಲೆನ್ಸ್ (Ambulance) ಸೇವೆ ಇಲ್ಲದ ಕಾರಣ ಜನರಿಗೆ ತೀರ ಸಮಸ್ಯೆ ಎದುರಾಗಿದೆ. ತಾಂತ್ರಿಕ ಸಮಸ್ಯೆಯಿಂದ 108 ಸೇವೆ ಸಿಗ್ತಿಲ್ಲ ಅಂತಾ ಹೇಳಲಾಗುತ್ತಿದೆ. ತಾಂತ್ರಿಕ ಸಮಸ್ಯೆಯಿಂದ 108ಗೆ ಕರೆ ಹೋಗ್ತಿಲ್ಲ ಮತ್ತು ಕರೆ ಸ್ವೀಕರಿಸ್ತಿಲ್ಲ ಅಂತಾ ಹೇಳಲಾಗುತ್ತಿದೆ.

    ಈ ಸಂಬಂಧ ಜಿವಿಕೆ (GVK) ಟೆಕ್ನಿಕಲ್ ಟೀಂನಿಂದ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿ, 108 ಸೇವೆಯಲ್ಲಿ ತಾಂತ್ರಿಕ ಸಮಸ್ಯೆ ಆಗಿರೋದು ನಿಜ. ಸರ್ವರ್ ಪ್ರಾಬ್ಲಂನಿಂದ ಕರೆ ಸ್ವೀಕರಿಸಲಾಗುತ್ತಿಲ್ಲ ಎಂದು ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: ವಿಪರೀತ ಟ್ರಾಫಿಕ್ ಜಾಮ್ – ಅಂಬುಲೆನ್ಸ್‌ನಲ್ಲೇ ಮಗುವಿಗೆ ಜನ್ಮಕೊಟ್ಟ ಮಹಿಳೆ

    Live Tv
    [brid partner=56869869 player=32851 video=960834 autoplay=true]

  • ಜ್ಞಾನವಾಪಿ ಮಸೀದಿ ಪ್ರಕರಣ- ದೂರುದಾರಳ ಪತಿಗೆ ಪಾಕಿಸ್ತಾನದಿಂದ ಬೆದರಿಕೆ ಕರೆ

    ಜ್ಞಾನವಾಪಿ ಮಸೀದಿ ಪ್ರಕರಣ- ದೂರುದಾರಳ ಪತಿಗೆ ಪಾಕಿಸ್ತಾನದಿಂದ ಬೆದರಿಕೆ ಕರೆ

    ಲಕ್ನೋ: ಜ್ಞಾನವಾಪಿ ಮಸೀದಿ ಹಾಗೂ ಶೃಂಗಾರ ಗೌರಿ ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿರುವ 5 ಮಹಿಳೆಯರಲ್ಲಿ ಒಬ್ಬರ ಪತಿಗೆ ಅರ್ಜಿಯನ್ನು ಹಿಂಪಡೆಯುವಂತೆ ಪಾಕಿಸ್ತಾನದಿಂದ ಬೆದರಿಕೆ ಕರೆಗಳು ಬಂದಿವೆ ಎಂಬ ಆರೋಪ ಕೇಳಿ ಬರುತ್ತಿದೆ.

    ವಿಶ್ವನಾಥ ದೇಗುಲದ ಪಕ್ಕದಲ್ಲಿರುವ ಮಸೀದಿಯ ಹಿಂಭಾಗದಲ್ಲಿರುವ ಶೃಂಗಾರ ಗೌರಿ ದೇವರಿಗೆ ನಿತ್ಯ ಪ್ರಾರ್ಥನೆ ಸಲ್ಲಿಸಲು ಅನುಮತಿ ಕೋರಿ ಐವರು ಮಹಿಳೆಯರು ಸ್ಥಳೀಯ ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಪಾಕಿಸ್ತಾನದ ನಂಬರ್‌ನಿಂದ ಹಲವಾರು ಬಾರಿ ಅರ್ಜಿಯನ್ನು ಹಿಂತೆಗೆದುಕೊಳ್ಳಬೇಕು ಎಂದು ಬೆದರಿಕೆ ಕರೆಗಳು ಬಂದಿವೆ. ಆದರೆ ನಾವು ಯಾವುದೇ ಬೆದರಿಕೆಗೂ ಹೆದರುವುದಿಲ್ಲ ಎಂದು ಸೋಹನ್ ಲಾಲ್ ಆರ್ಯ ತಿಳಿಸಿದ್ದಾರೆ.

    ಸೋಹನ್ ಲಾಲ್ ಆರ್ಯ ಅವರ ಪತ್ನಿ ಲಕ್ಷ್ಮಿ ದೇವಿ ಹಾಗೂ ವಾರಣಾಸಿ ಮೂಲದ ಮೂವರು ಮಹಿಳೆಯರು, ಇನ್ನೊಬ್ಬರು ದೆಹಲಿಯ ಮಹಿಳೆಯೊಬ್ಬರು ಅರ್ಜಿಯನ್ನು ಸಲ್ಲಿಸಿದ್ದರು. ಇದನ್ನೂ ಓದಿ: ರಾಷ್ಟ್ರಧ್ವಜವನ್ನು ಸಿಗರೇಟ್‍ನಿಂದ ಸುಟ್ಟ ವ್ಯಕ್ತಿಯ ಬಂಧನ

    ಘಟನೆಗೆ ಸಂಬಂಧಿಸಿ ಲಕ್ಸಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಹಿನ್ನೆಲೆಯಲ್ಲಿ ಅವರ ಭದ್ರತೆಗಾಗಿ ಇಬ್ಬರು ಪೊಲೀಸರನ್ನು ನಿಯೋಜಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಹಾಯಕ ಪೊಲೀಸ್ ಆಯುಕ್ತ ಅವಧೇಶ್ ಕುಮಾರ್ ಪಾಂಡೆ ತಿಳಿಸಿದ್ದಾರೆ. ಇದನ್ನೂ ಓದಿ: ಕಾಣೆಯಾಗಿ ಮತ್ತೆ ಸಿಕ್ಕಿದ್ದ ಗಿಳಿಯನ್ನು ಗುಜರಾತ್ ಝೂಗೆ ಬಿಟ್ಟ ಮಾಲೀಕರು

    Live Tv
    [brid partner=56869869 player=32851 video=960834 autoplay=true]

  • ಮಮತಾ ಬ್ಯಾನರ್ಜಿಗೆ 3 ಬಾರಿ ಕರೆ ಮಾಡಿದ ಬಂಧಿತ ಸಚಿವ ಪಾರ್ಥ ಚಟರ್ಜಿ

    ಮಮತಾ ಬ್ಯಾನರ್ಜಿಗೆ 3 ಬಾರಿ ಕರೆ ಮಾಡಿದ ಬಂಧಿತ ಸಚಿವ ಪಾರ್ಥ ಚಟರ್ಜಿ

    ನವದೆಹಲಿ: ಪಶ್ಚಿಮ ಬಂಗಾಳದ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಬಂಧನದ ನಂತರ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಮೂರು ಬಾರಿ ಕರೆಗಳನ್ನು ಮಾಡಿದ್ದರು. ಆದರೆ ಮೂರೂ ಬಾರಿಯೂ ಅವರು ಉತ್ತರಿಸಲಿಲ್ಲ ಎಂದು ಅಧಿಕೃತ ದಾಖಲೆ ಬಹಿರಂಗಪಡಿಸಿದೆ.

    ಪಾರ್ಥ ಚಟರ್ಜಿ ಅವರನ್ನು ಮಧ್ಯರಾತ್ರಿ 1:55 ರ ಸುಮಾರಿಗೆ ಬಂಧಿಸಿದ ನಂತರ ಬ್ಯಾನರ್ಜಿ ಅವರಿಗೆ ಮೊದಲ ಕರೆಯನ್ನು 2:33ಕ್ಕೆ ಮಾಡಲಾಯಿತು. ಆದರೆ ಬ್ಯಾನರ್ಜಿ ಅವರು ಕರೆಯನ್ನು ಸ್ವೀಕರಿಸಲಿಲ್ಲ. ಮತ್ತೆ ಚಟರ್ಜಿ ಅವರು ಬೆಳಗ್ಗೆ 3:37 ಮತ್ತು 9:.35ಕ್ಕೆ ಮತ್ತೆ ಕರೆ ಮಾಡಿದ್ದಾರೆ. ಆಗಲೂ ಅವರು ಕರೆಯನ್ನು ಸ್ವೀಕರಿಸಲಿಲ್ಲ ಎಂದು ಮೆಮೊ ದಾಖಲಿಸಿದೆ. ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ: ಸಿಎಂ ಜೊತೆ ಚರ್ಚಿಸುವೆ ಎಂದ ಸುಧಾಕರ್ 

    ಯಾವುದೇ ಆರೋಪಿ ತಮ್ಮ ಬಂಧನದ ಬಗ್ಗೆ ತಿಳಿಸಲು ಸಂಬಂಧಿಕರು ಅಥವಾ ಸ್ನೇಹಿತರಿಗೆ ಕರೆ ಮಾಡಲು ಅವಕಾಶವಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ತೃಣಮೂಲ ಕಾಂಗ್ರೆಸ್ ಪಕ್ಷದ ಫಿರ್ಹಾದ್ ಹಕೀಮ್ ಅವರು ಈ ಕುರಿತು ಮಾತನಾಡಿದ್ದು, ಚಟರ್ಜಿ ಅವರು ಕರೆ ಮಾಡಿಲ್ಲ. ಬಂಧಿತ ಸಚಿವರ ಫೋನ್ ಜಾರಿ ನಿರ್ದೇಶನಾಲಯದಲ್ಲಿ ಇರುವುದರಿಂದ ಅವರು ಮಮತಾ ಬ್ಯಾನರ್ಜಿ ಅವರಿಗೆ ಕರೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಹಿಳಾ ಸಬಲೀಕರಣ ನನ್ನ ಮೊದಲ ಆದ್ಯತೆ – ಅಧಿಕಾರ ಸ್ವೀಕರಿಸಿದ ದ್ರೌಪದಿ ಮುರ್ಮು

    ಬಂಗಾಳದ ಶಿಕ್ಷಣ ಸಚಿವರಾಗಿದ್ದ ಚಟರ್ಜಿ ಅವರನ್ನು ಶನಿವಾರ ಶಾಲಾ ಉದ್ಯೋಗ ಹಗರಣಕ್ಕೆ ಸಂಬಂಧಿಸಿದ ಹಣ-ಲಾಂಡರಿಂಗ್ ಆರೋಪದ ಮೇಲೆ ಬಂಧಿಸಲಾಯಿತು. ಸರ್ಕಾರಿ ಪ್ರಾಯೋಜಿತ ಮತ್ತು ಅನುದಾನಿತ ಶಾಲೆಗಳಲ್ಲಿ ಪಶ್ಚಿಮ ಬಂಗಾಳದ ಪ್ರೌಢ ಶಿಕ್ಷಣ ಮಂಡಳಿಯಿಂದ ಶಾಲಾ ಶಿಕ್ಷಕರು ಮತ್ತು ಬೋಧಕ ಸಿಬ್ಬಂದಿಗಳ ನೇಮಕಾತಿಯಲ್ಲಿ ಚಟರ್ಜಿ ಅವರು ಹಗರಣ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    [brid partner=56869869 player=32851 video=960834 autoplay=true]

  • ತಲೆ ಕೆಡಿಸಿಕೊಳ್ಳಬೇಡಾ, ನಾಳೆ ನಾನು ಜಾಯಿನ್ ಆಗ್ತೀನಿ: ಡಿಕೆಶಿ ಜೊತೆ ಸಿದ್ದು ಫೋನ್ ಟಾಕ್

    ತಲೆ ಕೆಡಿಸಿಕೊಳ್ಳಬೇಡಾ, ನಾಳೆ ನಾನು ಜಾಯಿನ್ ಆಗ್ತೀನಿ: ಡಿಕೆಶಿ ಜೊತೆ ಸಿದ್ದು ಫೋನ್ ಟಾಕ್

    ಬೆಂಗಳೂರು: ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಲು ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೇರಿ ನಿನ್ನೆಯಿಂದ ಪಾದಯಾತ್ರೆಯನ್ನು ಆರಂಭಿಸಿದ್ದರು. ಆದರೆ ಸಿದ್ದರಾಮಯ್ಯರ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದು ಅರ್ಧದಲ್ಲೇ ಪಾದಯಾತ್ರೆಯನ್ನು ನಿಲ್ಲಿಸಿ ಬೆಂಗಳೂರಿಗೆ ಬಂದಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕರೆ ಮಾಡಿ ಪಾದಯಾತ್ರೆ ಹೇಗೆ ನಡೆಯುತ್ತದೆ ಎನ್ನುವುದರ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.

    ಈ ಬಗ್ಗೆ ಮಾತನಾಡಿದ ಡಿಕೆಶಿ ಪಾದಯಾತ್ರೆ ಚೆನ್ನಾಗಿ ನಡೆಯುತ್ತಿದೆ. ನಿನ್ನೆ ದೊಡ್ಡ ಆಲಹಳ್ಳಿಯವರೆಗೆ ಏನು ತೊಂದರೆ ಇಲ್ಲದಂತೆ ಬಂದಿದ್ದೇವೆ. ಇಂದು ಇಲ್ಲಿಂದ ಕನಕಪುರದ ವರೆಗೆ ಹೋಗುತ್ತೇವೆ ಎಂದು ಸಿದ್ದರಾಮಯ್ಯ ಅವರಿಗೆ ಮಾಹಿತಿಯನ್ನು ನೀಡಿ, ಅವರ ಆರೋಗ್ಯವನ್ನು ವಿಚಾರಿಸಿದರು.

    ಅದಕ್ಕೆ ಉತ್ತರ ನೀಡಿದ ಸಿದ್ದರಾಮಯ್ಯ ಈಗ ಸುಧಾರಿಸಿಕೊಂಡಿದ್ದೇನೆ. ಸಂಜೆಯ ಮೇಲೆ ಪಾದಯಾತ್ರೆಗೆ ಬರುತ್ತೇನೆ ಎಂದು ಹೇಳಿದ್ದಕ್ಕೆ ಇಂದು ಬೇಡ ಸರಿಯಾಗಿ ಚಿಕಿತ್ಸೆಯನ್ನು ತೆಗೆದುಕೊಂಡು ವಿಶ್ರಾಂತಿಯನ್ನು ಪಡೆದುಕೊಂಡು ನಾಳೆ ಬನ್ನಿ ಎಂದು ತಿಳಿಸಿದರು. ಇದಕ್ಕೆ ಸಿದ್ದರಾಮಯ್ಯ ಅವರು ಒಪ್ಪಿಗೆ ಸೂಚಿಸಿದರು. ಇದನ್ನೂ ಓದಿ: ಕೋವಿಡ್‌ ಟೆಸ್ಟ್‌ ಮಾಡಿಸಿಕೊಳ್ಳಿ ಎಂದ ಆರೋಗ್ಯ ಅಧಿಕಾರಿ ವಿರುದ್ಧ ಡಿಕೆಶಿ ಗರಂ

    ಈ ವೇಳೆ ಡಿಕೆಶಿ ಸ್ಯಾಬ್ ಟೆಸ್ಟ್ ಬಗ್ಗೆ ಮಾತನಾಡಿ, ನಿನ್ನೆ ಜಿಲ್ಲಾಡಳಿತದವರು ಡಿಎಚ್‌ಓ ಅಧಿಕಾರಿಗಳನ್ನು ಮನೆ ಹತ್ತಿರ ಕಳುಹಿಸಿದ್ದರು. ಸ್ವ್ಯಾಬ್ ಕೇಳಲು ಬಂದಿದ್ದರು. ಅದಕ್ಕೆ ನಾನು ಇಂತದ್ದನ್ನೆಲ್ಲಾ ನಾನು ನೋಡಿದ್ದೇನೆ. ನನ್ನ ಆರೋಗ್ಯ ಚೆನ್ನಾಗಿದೆ. ಸುಮ್ಮನೆ ಹೋಗಿ ಎಂದು ಕಳುಹಿಸಿದ್ದೇನೆ ಎಂದರು. ಅದಕ್ಕೆ ಉತ್ತರಿಸಿದ ಸಿದ್ದರಾಮಯ್ಯ ತಲೆ ಕೆಡಿಸಿಕೊಳ್ಳಬೇಡಾ. ನಿನ್ನ ಪಾಡಿಗೆ ಚೆನ್ನಾಗಿ ಇವತ್ತು ಪಾದಯಾತ್ರೆ ಮಾಡು, ನೀನು ಹೇಳಿದ ಹಾಗೇ ನಾನು ನಾಳೆ ಬಂದು ಜಾಯಿನ್ ಆಗುತ್ತೇನೆ ಎಂದಿದ್ದಾರೆ. ಅದಕ್ಕೆ ಡಿಕೆಶಿ ಓಕೆ ಸರ್ ರೆಸ್ಟ್ ಮಾಡಿ ಎಂದು ಕರೆಯನ್ನು ಕಟ್ ಮಾಡಿದ್ದಾರೆ. ಇದನ್ನೂ ಓದಿ: ನನ್ನನ್ನು ನೋಡಿದ್ರೆ ಕೊರೊನಾ ಇದೆ ಅಂತ ಅನ್ನಿಸುತ್ತಾ?: ಡಿ.ಕೆ. ಶಿವಕುಮಾರ್

  • ಕಿಚ್ಚನಿಂದಾಗಿ ವೈಷ್ಣವಿ ಹೆಸರು ಬದಲಾಯಿಸಲು ಪೋಷಕರು ತೀರ್ಮಾನ

    ಕಿಚ್ಚನಿಂದಾಗಿ ವೈಷ್ಣವಿ ಹೆಸರು ಬದಲಾಯಿಸಲು ಪೋಷಕರು ತೀರ್ಮಾನ

    ವಾರ ಬಿಗ್‍ಬಾಸ್ ಫಿನಾಲೆ ವೀಕ್ ಆಗಿರುವುದರಿಂದ ಮನೆಯ ಸ್ಪರ್ಧಿಗಳಿಗೆ ಬಿಗ್‍ಬಾಸ್ ಸರ್‍ಪ್ರೈಸ್ ಮೇಲೆ ಸರ್‍ಪ್ರೈಸ್‍ಗಳನ್ನು ನೀಡುತ್ತಿದ್ದಾರೆ. ಬಿಗ್‍ಬಾಸ್ ಫಸ್ಟ್ ಇನ್ನಿಂಗ್ಸ್ ಹಾಗೂ ಸೆಕೆಂಡ್ ಇನ್ನಿಂಗ್ಸ್ ಎರಡರಲ್ಲಿಯೂ ಬಹುತೇಕ ಸ್ಪರ್ಧಿಗಳಿಗೆ ಕುಟುಂಬದವರಿಂದ ಕರೆ ಬಂದಿತ್ತು. ಆದ್ರೆ ಇಷ್ಟು ದಿನವಾದರೂ ವೈಷ್ಣವಿ ಗೌಡಗೆ ಮಾತ್ರ ಯಾವುದೇ ಕರೆ ಬಂದಿರಲಿಲ್ಲ. ಸದ್ಯ ಕೊನೆಗೂ ಈಗ ವೈಷ್ಣವಿಗೆ ಮನೆಯವರಿಂದ ಕರೆ ಬಂದಿದೆ.

    ಬಿಗ್‍ಬಾಸ್ 44ನೇ ದಿನ ವೈಷ್ಣವಿ ಗೌಡ ಫ್ಯಾಮಿಲಿ ಫೋಟೋವನ್ನು ದೊಡ್ಮನೆಯ ಟಿವಿ ಸ್ಕ್ರೀನ್ ಮೇಲೆ ಹಾಕಿ ವೈಷ್ಣವಿಗೆ ಬಿಗ್‍ಬಾಸ್ ಸರ್‍ಪ್ರೈಸ್ ನೀಡಿದ್ದಾರೆ. ಇದನ್ನು ನೋಡಿ ವೈಷ್ಣವಿ ಮನೆಯ ಇತರ ಸದಸ್ಯರಿಗೆ ತಮ್ಮ ಫ್ಯಾಮಿಲಿ ಪರಿಚಯ ಮಾಡಿಕೊಡುವ ಮೂಲಕ ಸಂತಸಗೊಂಡಿದ್ದಾರೆ.

    ನಂತರ ವೈಷ್ಣವಿ ತಾಯಿ ಕರೆ ಮಾಡಿ, ಮನೆಯಲ್ಲಿ ಎಲ್ಲರೂ ಚೆನ್ನಾಗಿದ್ದೇವೆ. ನಮ್ಮ ಬಗ್ಗೆ ಯಾವುದೇ ಟೆನ್ಷನ್ ಮಾಡಿಕೊಳ್ಳಬೇಡ. ನಿನ್ನ ಎಲ್ಲಾ ಬಿಗ್‍ಬಾಸ್ ಮನೆಯ ಫ್ರೆಂಡ್ಸ್‍ಗೆ ವಿಶ್ ಮಾಡಿದ್ವಿ ಅಂತ ಹೇಳು, ಮಂಜು ಜೊತೆ ನೀನು ಮಾಡುತ್ತಿದ್ದ ಕಾಮಿಡಿ ಸೂಪರ್ ಆಗಿತ್ತು. ನೀನು ಪ್ರತಿಯೊಂದು ಟಾಸ್ಕ್ ಆಡುತ್ತಿದ್ದ ರೀತಿ ಬಹಳ ಚೆನ್ನಾಗಿತ್ತು. ನಿನ್ನ ಬಗ್ಗೆ ಮನೆಯಲ್ಲಿ ಜಾಸ್ತಿ ಮಾತನಾಡುತ್ತಿರುತ್ತೇವೆ. ನೀನು 9 ತಿಂಗಳಿಗೆ ತುಂಬಾ ಚೆನ್ನಾಗಿ ಮಾತನಾಡಲು ಶುರು ಮಾಡಿದೆ. ನೀನು ದೊಡ್ಡವಳಾದ ನಂತರ ಅಪ್ಪ ಸ್ಮೋಕ್ ಮಾಡುವುದನ್ನು ನಿಲ್ಲಿಸುವುದಕ್ಕೆ ತುಂಬಾ ಟ್ರೈ ಮಾಡಿದ್ದನ್ನು ಈಗಲೂ ಅಪ್ಪ ತುಂಬಾ ನೆನಪಿಸಿಕೊಳ್ಳುತ್ತಾರೆ ಎಂದರು.

    ಮೊದಲ ಮಗುವಿನ ನಂತರ ನಾನು-ಅಪ್ಪ ದೇವರ ಬಳಿ ಹೆಣ್ಣು ಮಗು ಆಗಬೇಕೆಂದು ಬೇಡಿಕೊಂಡಿ. ನಂತರ ನೀನು ಹುಟ್ಟಿದೆ. ನೀನು ಮಗು ಇದ್ದಾಗ ತುಂಬಾ ಕ್ಯೂಟ್ ಆಗಿದ್ದೆ. ಅಪ್ಪ ನಿನಗೆ ರೇಷ್ಮ ಎಂದು ಹೆಸರಿಡಬೇಕೆಂದು ಕೊಂಡಿದ್ದರು. ಆದ್ರೆ ದೇವರ ಹತ್ತಿರ ಬೇಡಿಕೊಂಡಿದ್ದರಿಂದ ವೈಷ್ಣವಿ ಎಂದು ಹೆಸರಿಟ್ವಿ. ತುಂಬಾ ವರ್ಷಗಳ ನಂತರ ಸುದೀಪ್ ಸರ್ ಮುಖಾಂತರ ಈ ಆಸೆ ಈಡೇರಿತು. ಮುಂದೆ ನಿನ್ನ ಹೆಸರನ್ನು ರೇಷ್ಮ ವೈಷ್ಣವಿ ಎಂದು ಇಡುತ್ತೇವೆ. ತುಂಬಾ ಜನ ಬಿಗ್‍ಬಾಸ್ ಮನೆಗೆ ವೈಷ್ಣವಿಯನ್ನು ಕಳುಹಿಸಬೇಡಿ ಎಂದರು. ಆದ್ರೆ ನೀನು ಬಿಗ್‍ಬಾಸ್ ಮನೆಯಲ್ಲಿ ನಡೆದುಕೊಳ್ಳುತ್ತಿರುವ ರೀತಿ ನೋಡಿ, ವೈಷ್ಣವಿಯನ್ನು ಕಳುಹಿಸಿದನ್ನು ನೋಡಿ ತುಂಬಾ ಒಳ್ಳೆಯದಾಯಿತು ಅಂತ ಹೇಳ್ತಿದ್ದಾರೆ. ನಿನಗೆ ಒಳ್ಳೆ ಟೈಂನಲ್ಲಿ ಬಿಗ್‍ಬಾಸ್ ವೇದಿಕೆ ಸಿಕ್ಕಿದೆ. ನೀನು ಈ ವೇದಿಕೆ ಮೂಲಕ ಏನು ಕಲಿಯುತ್ತೀಯಾ ಅದು ನಿನ್ನ ಲೈಫ್‍ನಲ್ಲಿ ತುಂಬಾ ಮುಖ್ಯವಾಗುತ್ತದೆ. ನಿನ್ನ ಬಗ್ಗೆ ಹೇಳಲು ನನಗೆ ತುಂಬಾ ಹೆಮ್ಮೆಯಾಗುತ್ತದೆ. ದೇವರಲ್ಲಿ ನಾನು ಬೇಡಿದಕ್ಕೂ, ನೀನು ನನಗೆ ಒಳ್ಳೆಯ ಹೆಸರು ತಂದು ಕೊಡುತ್ತಿರುವುದಕ್ಕೂ ತುಂಬಾ ಸಂತೋಷವಾಗುತ್ತಿದೆ. ನೀನು ಬಿಗ್‍ಬಾಸ್ ಗೆಲ್ಲಬೇಕೆಂಬುದು ನಿನ್ನ ಫ್ರೆಂಡ್ಸ್, ಫ್ಯಾನ್ಸ್ ಹಾಗೂ ನನ್ನ ಆಸೆ. ನೀನು ಗೆಲ್ಲಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಶುಭಾ ಹಾರೈಸುತ್ತೇನೆ. ಇದನ್ನೂ ಓದಿ: ಸ್ಮೈಲ್, ಸ್ಮೈಲ್- ಬಾಲಿವುಡ್ ಬೆಡಗಿಗೆ ಕಿಚ್ಚನ ವಿಶ್