Tag: camera

  • ಪ್ರೀ ವೆಡ್ಡಿಂಗ್ ಶೂಟ್‌ಗೆ ತೆರಳಿದ್ದವರ ಕಾರಿನ ಗಾಜು ಒಡೆದು 4 ಲಕ್ಷದ ಕ್ಯಾಮೆರಾ, ಲೆನ್ಸ್ ದೋಚಿದ ಕಳ್ಳರು

    ಪ್ರೀ ವೆಡ್ಡಿಂಗ್ ಶೂಟ್‌ಗೆ ತೆರಳಿದ್ದವರ ಕಾರಿನ ಗಾಜು ಒಡೆದು 4 ಲಕ್ಷದ ಕ್ಯಾಮೆರಾ, ಲೆನ್ಸ್ ದೋಚಿದ ಕಳ್ಳರು

    ಬಳ್ಳಾರಿ: ಪ್ರೀ ವೆಡ್ಡಿಂಗ್(Pre-Wedding) ಫೋಟೋಶೂಟ್ ಮಾಡಲು ಹೋಗಿದ್ದಾಗ ಕಾರಿನ ಗಾಜು ಒಡೆದು 4 ಲಕ್ಷ ರೂ. ಮೌಲ್ಯದ ಕ್ಯಾಮೆರಾ(Camera) ಹಾಗೂ ಲೆನ್ಸ್(Lense) ಕಳ್ಳತನ ಮಾಡಿರುವ ಘಟನೆ ವಿಜಯನಗರ(Vijayanagara) ಜಿಲ್ಲೆಯ ಹೊಸಪೇಟೆಯ ತುಂಗಭದ್ರಾ ಜಲಾಶಯದ ಹಿನ್ನೀರಿನ ಗುಂಡಾ ಫಾರೆಸ್ಟ್ ಬಳಿ ನಡೆದಿದೆ.

    ರಾಯಚೂರಿನ ಮಾನ್ವಿ ಮೂಲದ ಫೋಟೋಗ್ರಾಫರ್ ಹುಮಾಯುನ್ ಅವರಿಗೆ ಸೇರಿದ್ದ ಕಾರಿನಲ್ಲಿ ಕಳ್ಳತನವಾಗಿದೆ. ಕಾರಿನಲ್ಲಿ ಕ್ಯಾಮೆರಾ ಹಾಗೂ ಲೆನ್ಸ್ ಇಟ್ಟಿದ್ದ ಹುಮಾಯುನ್ ಬ್ಯಾಕ್ ವಾಟರ್ ಫೋಟೋಶೂಟ್‌ಗೆ ತೆರಳಿದ್ದರು. ಇದನ್ನೂ ಓದಿ: ದಿಢೀರ್‌ ರಬಕವಿ-ಬನಹಟ್ಟಿಯಲ್ಲಿ ಜಿಲ್ಲಾ ಪಂಚಾಯತ್‌ ಕಾಮಗಾರಿ ವೀಕ್ಷಿಸಿದ ಸಿಇಒ ಶಶಿಧರ ಕುರೇರ

    ಕಳ್ಳರು ಕಾರಿನ ಸುತ್ತಲೂ ಯಾರೂ ಇಲ್ಲದ್ದನ್ನ ಗಮನಿಸಿ ಗಾಜು ಒಡೆದು ಕೆನಾನ್ ಖ೫ ಕ್ಯಾಮೆರಾ ಹಾಗೂ 4 ಲಕ್ಷ ರೂ. ಲೆನ್ಸ್ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ : ಕೆಎನ್ ರಾಜಣ್ಣ ಬಾಯಿ ಚಪಲಕ್ಕೆ ಮಾತನಾಡಬಾರದು: ಹೆಚ್.ಸಿ ಬಾಲಕೃಷ್ಣ

  • ಪ್ರೀ ವೆಡ್ಡಿಂಗ್‌ಗೆ ಫೋಟೋಗ್ರಾಫರ್ ಕರೆಸಿ 8 ಲಕ್ಷ ಮೌಲ್ಯದ ಕ್ಯಾಮೆರಾ ಕದ್ದ ಅಸಾಮಿ

    ಪ್ರೀ ವೆಡ್ಡಿಂಗ್‌ಗೆ ಫೋಟೋಗ್ರಾಫರ್ ಕರೆಸಿ 8 ಲಕ್ಷ ಮೌಲ್ಯದ ಕ್ಯಾಮೆರಾ ಕದ್ದ ಅಸಾಮಿ

    ಮೈಸೂರು: ಪ್ರೀ ವೆಡ್ಡಿಂಗ್ ಶೂಟ್‌ಗೆ (Pre Wedding Shoot)ಕರೆಸಿದ ವ್ಯಕ್ತಿ 8 ಲಕ್ಷ ರೂ. ಮೌಲ್ಯದ ಕ್ಯಾಮೆರಾ ಕದ್ದು ಪರಾರಿಯಾದ ಘಟನೆ ಮೈಸೂರಿನ ದೇವರಾಜ ಪೊಲೀಸ್ ಠಾಣೆ (Devaraja Police Station) ವ್ಯಾಪ್ತಿಯಲ್ಲಿ ನಡೆದಿದೆ.

    ನಿಮ್ಮ ಇನ್‌ಸ್ಟಾಗ್ರಾಮ್‌ ಫ್ರೋಪೈಲ್ ನೋಡಿದ್ದೇನೆ ಮೈಸೂರಿನಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಮಾಡಬೇಕು ಎಂದು ಗಣೇಶ್ ಎಂಬ ವ್ಯಕ್ತಿ ಮೈಸೂರಿನ ಸಾಲಿಗ್ರಾಮದ ಭಾರ್ಗವ್ ಎನ್ನುವ ಫೋಟೋ ಗ್ರಾಫರ್‌ಗೆ ಕರೆ ಮಾಡಿದ್ದಾನೆ. ಬಳಿಕ 75,000 ರೂ.ಗೆ ಫೋಟೋ ಶೂಟ್ ಅಗ್ರಿಮೆಂಟ್ ಮಾಡಿಕೊಂಡು ಇದಕ್ಕೆ 2,000 ಹಣವನ್ನು ಆನ್‌ಲೈನ್‌ನಲ್ಲಿ ಗಣೇಶ್ ವರ್ಗಾವಣೆ ಸಹ ಮಾಡಿದ್ದಾನೆ. ದನ್ನೂ ಓದಿ: ಕ್ರಿಸ್‌ಮಸ್‌ ಸಂಭ್ರಮ – ನೀವೂ ವಿಶ್‌ ಮಾಡ್ಬೇಕಾ? ವಾಟ್ಸಪ್‌ ಸ್ಟೇಟಸ್‌ಗೆ ಇಲ್ಲಿದೆ ಸಿಂಪಲ್‌ ಟಿಪ್ಸ್‌

    ಮೈಸೂರಿಗೆ ಫೋಟೋಗ್ರಾಫರ್ ಭಾರ್ಗವ್‌ನನ್ನ ಕರೆಸಿದ ಗಣೇಶ್‌ ತಾನೇ ಬುಕ್ ಮಾಡಿದ ಲಾಡ್ಜ್‌ನಲ್ಲಿ ಉಳಿಯುವಂತೆ ಹೇಳಿದ್ದಾನೆ. ಬಳಿಕ ನಮ್ಮ ಕಡೆಯವರು ದೇವರಾಜ ಮಾರುಕಟ್ಟೆ ಬಳಿ ಇದ್ದಾರೆ, ಅವರ ಜೊತೆ ಊಟ ಮಾಡಿಕೊಂಡು ಬನ್ನಿ. ಫೋಟೋ ಶೂಟ್‌ಗೆ ಅವರಿಗೆ ಲೊಕೇಷನ್ ತೋರಿಸಿ ಎಂದು ಭಾರ್ಗವ್ ನನ್ನು ಹೊರಗಡೆ ಕಳುಹಿಸಿದ ಗಣೇಶ್‌ನಂತರ ಕೆಲಹೊತ್ತಿನ ನಂತರ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ಆಗ ಭಾರ್ಗವ್ ರೂಂ ನಲ್ಲಿ ಬಂದು ನೋಡಿದಾಗ ತನ್ನ ಕ್ಯಾಮೆರಾ ಅಲ್ಲಿ ಇರಲಿಲ್ಲ. ಸದ್ಯ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದನ್ನೂ ಓದಿ: ʻಸಾಂತಾಕ್ಲಾಸ್‌ʼನಲ್ಲಿ ವರ್ಷಪೂರ್ತಿ ಕ್ರಿಸ್‌ಮಸ್‌ ಸಂಭ್ರಮ – ವಿಲೇಜ್‌ ಇರೋದಾದ್ರೂ ಎಲ್ಲಿ?

  • ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ – ಕಾಲು ಅಲುಗಾಡಿಸುತ್ತಿರುವ ದೃಶ್ಯ ಸೆರೆ

    ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ – ಕಾಲು ಅಲುಗಾಡಿಸುತ್ತಿರುವ ದೃಶ್ಯ ಸೆರೆ

    ವಿಜಯಪುರ: ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ತೋಟದಲ್ಲಿ ಕೊಳವೆ ಬಾವಿಗೆ (Borewell) ಬಿದ್ದ 2 ವರ್ಷದ ಸಾತ್ವಿಕ್‌ ರಕ್ಷಣೆಗಾಗಿ ಅಹೋರಾತ್ರಿಯಿಂದಲೇ ಕಾರ್ಯಾಚರಣೆ ನಡೆಯುತ್ತಿದ್ದು, ಕ್ಯಾಮೆರಾದಲ್ಲಿ ಕಾಲು ಅಲುಗಾಡಿಸುತ್ತಿರುವ ದೃಶ್ಯ ಸೆರೆಯಾಗಿದೆ.

    400 ಅಡಿ ಆಳದ ಕೊಳವೆ ಬಾವಿ ಇದಾಗಿದ್ದು ಕಳೆದ 13 ಗಂಟೆಯಿಂದ ಮಗುವಿನ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಬೆಳಗಾವಿ, ಕಲಬುರಗಿಯಿಂದ ಎಸ್‌ಡಿಆರ್‌ಎಫ್‌ (NDRF), ಹೈದರಾಬಾದ್‌ನಿಂದ ಎನ್‌ಡಿಆರ್‌ಎಫ್‌ (NDRF) ತಂಡ ರಾತ್ರಿಯೇ ಸ್ಥಳಕ್ಕೆ ಬಂದಿದೆ. ಸ್ಥಳೀಯ ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ಜೊತೆಗೂಡಿದ್ದು ರಕ್ಷಣಾ ಕಾರ್ಯಾಚರಣೆ ವೇಗವಾಗಿ ನಡೆಸುತ್ತಿದೆ.

     

    20 ಅಡಿ ಆಳದಲ್ಲಿ ಬಾಲಕ ಸಿಲುಕಿದ್ದು ಕೊಳವೆಬಾವಿ ಪಕ್ಕದಲ್ಲಿ ಸಮಾನಾಂತರವಾಗಿ 2 ಜೆಸಿಬಿ ಬಳಸಿ ಗುಂಡಿಯನ್ನು ತೋಡಿ ಮಣ್ಣನ್ನು ಹೊರತೆಗೆದು ಮಗುವಿರುವ ಸ್ಥಳದ ಬಳಿಗೆ ರಕ್ಷಣಾ ತಂಡ ಸಮೀಪಿಸುತ್ತಿದೆ. ಇನ್ನೊಂದು ಅಡಿ ಕೊರೆದರೆ ಮಗುವಿನ ಬಳಿಗೆ ರಕ್ಷಣಾ ತಂಡ ತಲುಪಲಿದೆ. ಕೊಳವೆ ಬಾವಿಗೆ ಕ್ಯಾಮೆರಾ ಇಳಿಬಿಟ್ಟು ಬಾಲಕನ ಚಲನವಲನ ಗಮನಿಸಲಾಗುತ್ತಿದೆ.  ಜಿಲ್ಲಾಡಳಿತ ಪೈಪ್‌ ಮೂಲಕ ಆಕ್ಸಿಜನ್‌ ಕಳುಹಿಸಿದ್ದು, ಕ್ಯಾಮೆರಾದಲ್ಲಿ ಕಾಲು ಅಲುಗಾಡಿಸುತ್ತಿರುವ ದೃಶ್ಯ ಸೆರೆಯಾಗಿದ್ದರಿಂದ ಬಿರುಸಿನಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇದನ್ನೂ ಓದಿ: ಬಂದ ದಾರಿಗಿಲ್ಲ ಸುಂಕ – ಅಮಿತ್‌ ಶಾರನ್ನು ಭೇಟಿಯಾಗದೇ ಬರಿಗೈಯಲ್ಲಿ ಈಶ್ವರಪ್ಪ ವಾಪಸ್‌

    ಕಾರ್ಯಾಚರಣೆಗೆ ಬಂಡೆ ಕಲ್ಲುಗಳು ಅಡ್ಡಿಯಾಗುತ್ತಿದ್ದು, ಜಿಲ್ಲಾಧಿಕಾರಿ ಟಿ.ಭೂಬಾಲನ್, ಎಸ್ ಪಿ ಋಷಿಕೇಶ ಸೋನಾವಣೆ, ಉಪ ವಿಭಾಗಾಧಿಕಾರಿ ಅಬೀದ್ ಗದ್ಯಾಳ ಅವರು ಸ್ಥಳದಲ್ಲೇ ಬೀಡು ಬಿಟ್ಟು ಕಾರ್ಯಾಚರಣೆ ಗಮನಿಸುತ್ತಿದ್ದಾರೆ.

    ಸತೀಶ್-ಪೂಜಾ ದಂಪತಿಗೆ ನಾಲ್ಕು ಎಕರೆ ಜಮೀನಿದ್ದು, ನಿಂಬೆ ಮತ್ತು ಕಬ್ಬಿಗೆ ನೀರಿನ ಕೊರತೆ ಎದುರಾಗಿದ್ದ ಹಿನ್ನೆಲೆಯಲ್ಲಿ ಮೊನ್ನೆಯಷ್ಟೇ ಕೊಳವೆ ಬಾವಿ ಕೊರೆಸಿದ್ದರು. ನೀರು ಸಿಕ್ಕಿದ ಹಿನ್ನೆಲೆಯಲ್ಲಿ ಅದನ್ನು ಹಾಗೆಯೇ ಬಿಟ್ಟಿದ್ದರು.

     

  • ಬೆಳಗಾವಿಯಲ್ಲಿ ಪತ್ತೆಯಾಗಿದ್ದು ಚಿರತೆಯಲ್ಲ, ಅದು ಕಿರುಬ ಬೆಕ್ಕು!

    ಬೆಳಗಾವಿಯಲ್ಲಿ ಪತ್ತೆಯಾಗಿದ್ದು ಚಿರತೆಯಲ್ಲ, ಅದು ಕಿರುಬ ಬೆಕ್ಕು!

    ಬೆಳಗಾವಿ: ಮೂಡಲಗಿ ತಾಲೂಕಿನ ಖಾನಟ್ಟಿ-ಶಿವಾಪುರ ಗ್ರಾಮದಲ್ಲಿ ಚಿರತೆ (Leopard) ಓಡಾಡಿಲ್ಲ. ಅಲ್ಲಿ ಓಡಾಡಿದ್ದು ಕಿರುಬ ಬೆಕ್ಕು (Hyenas) ಎನ್ನುವುದು ಕ್ಯಾಮೆರಾದಿಂದ ದೃಢಪಟ್ಟಿದೆ.

    ಎರಡು ದಿನಗಳ ಹಿಂದೆ ಕಬ್ಬಿನ ಗದ್ದೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ ಎಂಬ ವಿಡಿಯೋ ವೈರಲ್‌ ಆಗಿತ್ತು. ಚಿರತೆ ಬಂದಿದೆ ಎಂಬ ಸುದ್ದಿ ಪ್ರಕಟವಾದ ಬೆನ್ನಲ್ಲೇ ಮೂಡಲಗಿ ಅರಣ್ಯ ಇಲಾಖೆ (Forest Deapartment) ಅಧಿಕಾರಿಗಳು ಮೂರು ಟ್ರ್ಯಾಪ್ ಕ್ಯಾಮೆರಾ ಅಳವಡಿಕೆ ಮಾಡಿದ್ದರು. ಇದನ್ನೂ ಓದಿ: ಕಾರವಾರ ನೌಕಾನೆಲೆಯಲ್ಲಿ ಬೋಟ್ ಇಂಜಿನ್‍ಗೆ ಬೆಂಕಿ – ತಪ್ಪಿದ ಅನಾಹುತ

    ಈ ಕ್ಯಾಮೆರಾದಲ್ಲಿ ಚಿರತೆ ಬದಲು ಕಿರುಬ ಬೆಕ್ಕು ಸೆರೆಯಾಗಿದೆ. ಚಿರತೆಯಲ್ಲ ಅದು ಕಿರುಬ ಬೆಕ್ಕು ಎಂದು ತಿಳಿದು ಬಂದಿದ್ದರಿಂದ ಜನ ಈಗ ನಿಟ್ಟುಸಿರು ಬಿಟ್ಟಿದ್ದಾರೆ.

    ಚಿರತೆ ಇದೆ ಎಂಬುದನ್ನು ತಿಳಿದು ಖಾನಟ್ಟಿ-ಶಿವಾಪುರ ಸೇರಿದಂತೆ ಸುತ್ತಲಿನ ಗ್ರಾಮಸ್ಥರು ತೀವ್ರ ಆತಂಕಗೊಂಡಿದ್ದರು. ಮುನ್ನೆಚ್ಚರಿಕಾ ಕ್ರಮವಾಗಿ ಖಾನಟ್ಟಿ-ಶಿವಾಪುರ ಭಾಗದಲ್ಲಿ ನಾಲ್ವರು ಅರಣ್ಯ ಇಲಾಖೆ ಸಿಬ್ಬಂದಿಯನ್ನು ಸಹ ನಿಯೋಜನೆ ಮಾಡಲಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿದ್ಯಾರ್ಥಿನಿಯರ ಬೆಡ್‌ರೂಮ್‌, ಬಾತ್‌ರೂಮ್‌ನಲ್ಲಿ ಸ್ಪೈಕ್ಯಾಮೆರಾ ಇಟ್ಟು ವೀಡಿಯೋ ಮಾಡ್ತಿದ್ದ ಕಾಮುಕ ಅರೆಸ್ಟ್‌

    ವಿದ್ಯಾರ್ಥಿನಿಯರ ಬೆಡ್‌ರೂಮ್‌, ಬಾತ್‌ರೂಮ್‌ನಲ್ಲಿ ಸ್ಪೈಕ್ಯಾಮೆರಾ ಇಟ್ಟು ವೀಡಿಯೋ ಮಾಡ್ತಿದ್ದ ಕಾಮುಕ ಅರೆಸ್ಟ್‌

    ಜೈಪುರ: ಇತ್ತೀಚಿನ ದಿನಗಳಲ್ಲಿ ಉದ್ಯೋಗಕ್ಕಾಗಿ ವಲಹೆ ಹೋಗುವುದು ಸಹಜ. ಹಾಗಾಗಿ ವಲಸಿಗರು ಬಾಡಿಗೆ ಮನೆ ಪಡೆಯುವ ಮುನ್ನ ಎಚ್ಚರ ವಹಿಸಬೇಕಿದೆ. ವಸತಿ ಸೌಲಭ್ಯಕ್ಕಿಂಲೂ ಹೆಚ್ಚಾಗಿ ನಾವು ಯಾರದ್ದೊ ಕ್ಯಾಮೆರಾ (Camera) ಕಣ್ಣಿಗೆ ಸಿಗದೇ ಸುರಕ್ಷಿತವಾಗಿದ್ದೇವಾ ಎಂಬುದನ್ನ ಗಮನದಲ್ಲಿಟ್ಟುಕೊಳ್ಳಬೇಕಿದೆ.

    ಏಕೆಂದರೆ ರಾಜಸ್ಥಾನದ (Rajasthan) ಉದಯಪುರದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಈ ನಗರದಲ್ಲಿ ಯುವತಿಯರು ವಾಸವಿದ್ದ ಬಾಡಿಗೆ ಫ್ಲ್ಯಾಟ್‌ನಲ್ಲಿ (Rent Flat) ಸ್ಪೈ ಕ್ಯಾಮೆರಾಗಳು ಪತ್ತೆಯಾಗಿವೆ. ಈ ಕ್ಯಾಮೆರಾಗಳನ್ನು ಸ್ನಾನಗೃಹ, ಮಲಗುವ ಕೋಣೆಗಳು ಮತ್ತು ಇತರ ಸ್ಥಳಗಳಲ್ಲಿ ಅಳವಡಿಸಲಾಗಿತ್ತು ಎಂಬುದು ತಿಳಿದುಬಂದಿದೆ. ಗ್ರಾಹಕರಿಗೆ ಮನೆಗಳನ್ನ ಬಾಡಿಗೆ ನೀಡುವ ಮುನ್ನ ಮಾಲೀಕರೇ ಅಳವಡಿಸಿದ್ದರು ಎಂಬುದು ಗಮನಾರ್ಹ. ಇದನ್ನೂ ಓದಿ: ಸುತ್ತಿಟ್ಟ ಉಡುಪಿ ಸೀರೆಯ ಸೆರಗಿನೊಳಗಿಂದ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ ನಟಿ ತಾರಾ

    ಹೌದು.. ರಾಜಸ್ಥಾನದ ಉದಯಪುರದ ಪ್ರತಾಪನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಕೇಸ್‌ ದಾಖಲಾಗಿದೆ. ಉದಯಪುರ ವಿಭಾಗದ ಅತಿದೊಡ್ಡ ಮೋಹನ್‌ಲಾಲ್ ಸುಖದಿಯಾ ವಿಶ್ವವಿದ್ಯಾಲಯವು ಈ ಪೊಲೀಸ್ ಠಾಣೆ ವೃತ್ತದಲ್ಲಿದೆ ಎಂಬುದು ಸಹ ಗಮನಿಸಬೇಕಾದ ಅಂಶ. ಬೋಹ್ರಾ ಗಣೇಶ್ ಪ್ರದೇಶವು ಈ ವಿಶ್ವವಿದ್ಯಾಲಯದ ಸಮೀಪದಲ್ಲಿದೆ. ಈ ಪ್ರದೇಶದಲ್ಲಿ ನೂರಾರು ಯುವಕ-ಯುವತಿಯರು ಬಾಡಿಗೆಗೆ ಕೊಠಡಿ ಅಥವಾ ಫ್ಲ್ಯಾಟ್‌ಗಳನ್ನು ತೆಗೆದುಕೊಂಡು ವಾಸಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆ ಈ ಪ್ರಕರಣ ಸಂಬಂಧ ರಾಜ್‌ಸಮಂದ್‌ನ ನಾಥದ್ವಾರ ನಿವಾಸಿ ರಾಜೇಂದ್ರ ಸೋನಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಹನುಮ ಭಕ್ತ ಬಜರಂಗದಳದವರು ಸಿಡಿದು ನಿಂತ್ರೆ ಬೇರು ಸಮೇತ ಕಿತ್ತೋಗ್ತೀರಿ: ಬೊಮ್ಮಾಯಿ

    ಸ್ಪೈ ಕ್ಯಾಮೆರಾಗಳು ಪತ್ತೆಯಾಗಿದ್ದು ಹೇಗೆ?
    ಈ ಘಟನೆ ಸಂಬಂಧ ಬೋಹ್ರಾ ಗಣೇಶ್‌ ಜೀ ಮಂದಿರ ರಸ್ತೆಯಲ್ಲಿರುವ ಪಾರ್ಥ್ ಕಾಂಪ್ಲೆಕ್ಸ್‌ನಲ್ಲಿರುವ ಫ್ಲ್ಯಾಟ್‌ ಸಂಖ್ಯೆ 401 ಅನ್ನು ರಾಜೇಂದ್ರ ಅಲಿಯಾಸ್ ರಾಜ್ ಸೋನಿ ಅವರಿಂದ ಬಾಡಿಗೆಗೆ ಪಡೆದಿದ್ದೇವೆ ವಿದ್ಯಾರ್ಥಿನಿಯರು ಪೊಲೀಸರಿಗೆ ದೂರು ನೀಡಿದ್ದರು. ಕೆಲ ದಿನಗಳ ಹಿಂದೆ ಆಕೆ ಮನೆಗೆ ಹೋಗಿದ್ದ ವೇಳೆ ಫ್ಲ್ಯಾಟ್‌ ಮಾಲೀಕರು ರಿಪೇರಿ ನೆಪದಲ್ಲಿ ಫ್ಲಾಟ್ ತೆರೆದಿದ್ದರು. ಫ್ಲಾಟ್‌ನ ಕೀ ಕೂಡ ಅವರ ಬಳಿ ಇತ್ತು. ಆ ವೇಳೆ ಫ್ಲ್ಯಾಟ್‌ನಲ್ಲಿ ಯುವತಿಯರು ಇಲ್ಲದ ಲಾಭ ಪಡೆದು ಬಾತ್ ರೂಂ, ಬೆಡ್ ರೂಂನಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಸ್ಪೈ ಕ್ಯಾಮೆರಾಗಳನ್ನು (ಚಿಕ್ಕ ಗಾತ್ರದ ಕ್ಯಾಮೆರಾ) ಅಳವಡಿಸಿದ್ದರು. ಇನ್ನು, ಪ್ಲ್ಯಾಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದ್ದು, ರಿಪೇರಿ ಮಾಡುವಾಗ, ಸ್ಪೈ ಕ್ಯಾಮೆರಾಗಳನ್ನು ಅಳವಡಿಸಲಾಗಿರುವ ಬಗ್ಗೆ ವಿದ್ಯಾರ್ಥಿನಿಯರ ಅರಿವಿಗೆ ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

    ಈ ಸಂಬಂಧ ಕೇಸ್‌ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದರು. ಬಳಿಕ ವಿಚಾರಣೆ ನಡೆಸಿದಾಗ ಆರೋಪಿಯೇ ಕಂಪ್ಯೂಟರ್ ಮತ್ತು ಸಿಸಿಟಿವಿ ಕ್ಯಾಮೆರಾ ವ್ಯವಹಾರ ನಡೆಸುತ್ತಿದ್ದದ್ದು ಕಂಡುಬಂದಿದೆ. ಬಳಿಕ ತಾನೇ ಸ್ಪೈ ಕ್ಯಾಮೆರಾಗಳನ್ನ ಬಾತ್‌ ರೂಮ್‌, ಬೆಡ್‌ ರೂಮ್‌ ನಲ್ಲಿ ಅಳವಡಿಸಿ, ವಿದ್ಯಾರ್ಥಿನಿಯರ ಅಶ್ಲೀಲ ದೃಶ್ಯಗಳನ್ನ ನೋಡುತ್ತಿದ್ದ ಎಂಬುದನ್ನು ಒಪ್ಪಿಕೊಂಡಿದ್ದಾನೆ. ಸದ್ಯ ಆರೋಪಿಯ ಮೊಬೈಲ್‌ ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

  • ಎಕ್ಸ್‌ಪ್ರೆಸ್‌ ವೇಯಲ್ಲಿ ಅಪಘಾತ ನಿಯಂತ್ರಣಕ್ಕೆ ಹೈಟೆಕ್ ಟಚ್: ಸ್ಪೀಡ್ ಲಿಮಿಟ್ ಮೀರಿದ್ರೆ ಮನೆಗೆ ಬರುತ್ತೆ ನೋಟಿಸ್

    ಎಕ್ಸ್‌ಪ್ರೆಸ್‌ ವೇಯಲ್ಲಿ ಅಪಘಾತ ನಿಯಂತ್ರಣಕ್ಕೆ ಹೈಟೆಕ್ ಟಚ್: ಸ್ಪೀಡ್ ಲಿಮಿಟ್ ಮೀರಿದ್ರೆ ಮನೆಗೆ ಬರುತ್ತೆ ನೋಟಿಸ್

    ಬೆಂಗಳೂರು: ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ ವೇಯಲ್ಲಿ (Bengaluru Mysuru Expressway) ಅಪಘಾತ ನಿಯಂತ್ರಣಕ್ಕೆ ಹೆದ್ದಾರಿ ಪ್ರಾಧಿಕಾರ ಹೈಟೆಕ್‌ ಟಚ್‌ ನೀಡಿದ್ದು, ಹೈವೇ ಸ್ಪೀಡ್ ಲಿಮಿಟ್‌ ಅನ್ನು ಮೀರಿದರೇ, ಗಾಡಿ ಫೋಟೋ ಸಮೇತ ಮನೆಗೆ ನೋಟಿಸ್ ಬರುವುದರ ಜೊತೆಗೆ ಕೇಸ್ ಕೂಡ ದಾಖಲು ಮಾಡುವ ವ್ಯವಸ್ಥೆ ಮಾಡಿದೆ.

    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೆಂಗಳೂರು – ಮೈಸೂರು ನಡುವೆ ನೂತನವಾಗಿ ಉದ್ಘಾಟನೆಯಾಗಿರುವ ಎಕ್ಸ್‌ಪ್ರೆಸ್‌ ವೇಯಲ್ಲಿನ ಅಪಘಾತ ಪ್ರಕರಣ ತಗ್ಗಿಸಲು ಮುಂದಾಗಿದೆ. ಹೆದ್ದಾರಿಯಲ್ಲಿ ಹೈಟೆಕ್ ಕ್ಯಾಮೆರಾಗಳ (Camera) ಅಳವಡಿಕೆ ಮಾಡುವುದರ ಮೂಲಕ ಸವಾರರ ಸ್ಪೀಡ್ ಮೇಲೆ ಕಣ್ಣಿಡಲು ಮುಂದಾಗಿದೆ. ಹೆದ್ದಾರಿಯಲ್ಲಿ ಸಂಚಾರಕ್ಕೆ ಅನುವು ಸಿಕ್ಕ ಬಳಿಕ ಮಾರ್ಗದಲ್ಲಿ ಬರೊಬ್ಬರಿ 335ಕ್ಕೂ ಹೆಚ್ಚು ಅಪಘಾತ ಪ್ರಕರಣಗಳು ಸಂಭವಿಸಿವೆ. ಸುಮಾರು 85ಕ್ಕೂ ಹೆಚ್ಚು ಸವಾರರು ಪ್ರಾಣ ಬಿಟ್ಟಿದ್ದಾರೆ.

    ರಸ್ತೆ ಕ್ಲಿಯರ್ ಇದೆ ಎಂಬ ಕಾರಣಕ್ಕೆ ಅತಿ ವೇಗದ ಚಾಲನೆಯಿಂದಲೇ ಅಪಘಾತ (Accident) ಪ್ರಕರಣ ಹೆಚ್ಚಾದದ್ದನ್ನು ಅರಿತ ಹೈವೇ ಪ್ರಾಧಿಕಾರ, ಸದ್ಯ ಸ್ಪೀಡ್ ಲಿಮಿಟ್ ಕಂಟ್ರೋಲ್ ಮಾಡುವ ನಿಟ್ಟಿನಲ್ಲಿ ತಂತ್ರಜ್ಞಾನದ ಮೊರೆ ಹೋಗಿದೆ. ಸಂಪೂರ್ಣ ಮಾರ್ಗದಲ್ಲಿ ಪ್ರತಿ 800 ಮೀ.ಗೊಂದು ಹೈಟೆಕ್‌ ಟೆಕ್ನಾಲಜಿಯ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆಗೆ ಮುಂದಾಗಿದೆ. ಈ ಕ್ಯಾಮೆರಾಗೆ ಆರ್ಟಿಫಿಷಿಯಲ್ ಪ್ರೋಗ್ರಾಮಿಂಗ್ ಅಳವಡಿಕೆ ಮಾಡಲಾಗಿದ್ದು, ವಾಹನ ಸವಾರರು ಹೈವೇಯ ಸ್ಪೀಡ್ ಲಿಮಿಟ್‌ ಅನ್ನು ಮೀರಿದರೆ, ಅವರ ಮನೆಗೆ ಅತಿವೇಗದ ಚಾಲನೆ ಅಡಿ ಪ್ರಕರಣ ದಾಖಲಾಗಿ ನೋಟಿಸ್ ಕೈ ಸೇರಲಿದೆ. ಇದನ್ನೂ ಓದಿ: ಅನುಕಂಪದ ಅಲೆಯ ಅಬ್ಬರ – ಟಿಕೆಟ್ ರೇಸ್‌ನಿಂದ ಹಿಂದೆ ಸರಿದ ಹೆಚ್.ಸಿ.ಮಹದೇವಪ್ಪ

    ಈ ಕ್ಯಾಮೆರಾ ಕೇವಲ ಸ್ಪೀಡ್ ಕಂಟ್ರೋಲ್‌ಗೆ ಸಹಕಾರಿ ಅಷ್ಟೇ ಅಲ್ಲದೆ, ಇತ್ತೀಚೆಗೆ ಹೈವೇಯಲ್ಲಿ ಹೆಚ್ಚಾಗಿರುವ ಕಳ್ಳತನ ಪ್ರಕರಣಗಳನ್ನು ಕೂಡ ತಡೆಯಲು ಸಹಕಾರಿಯಾಗಲಿವೆ. ಅಲ್ಲದೆ ಮಾರ್ಗ ಮಧ್ಯ ಯಾವುದಾದರೂ ಅಪಘಾತ ಸಂಭವಿಸಿದರೇ ಹತ್ತಿರದಲ್ಲಿರುವ ಅಂಬುಲೆನ್ಸ್ ಸರ್ವೀಸ್, ಹೆದ್ದಾರಿ ಪೊಲೀಸರು, ಹೆದ್ದಾರಿ ಅಧಿಕಾರಿಗಳಿಗೂ ಮಾಹಿತಿ ರವಾನಿಸುವ ಟೆಕ್ನಾಲಜಿ ಹೊಂದಿರಲಿದೆ. ಸದ್ಯ ಈ ಎಲ್ಲ ಟೆಕ್ನಾಲಜಿ ಅಳವಡಿಕೆಗೆ ಡಿಪಿಆರ್ ಸಲ್ಲಿಕೆಯಾಗಿದ್ದು, ಮುಂದಿನ 6, 7ತಿಂಗಳಲ್ಲಿ ಸಂಪೂರ್ಣ ಅಳವಡಿಕೆ ಮಾಡುವ ಸಾಧ್ಯತೆ ಇದೆ. ಇದನ್ನೂ ಓದಿ: ಅನ್ಯಕೋಮಿನವರ ವ್ಯಾಪಾರಕ್ಕೆ ನಿರ್ಬಂಧ ಹೇರಿ – ಈಗ ಕಿಗ್ಗಾದಲ್ಲೂ ಧರ್ಮ ದಂಗಲ್

  • ಪಾರಿವಾಳದ ಕಾಲಿನಲ್ಲಿ ಕ್ಯಾಮೆರಾ – ಬೇಹುಗಾರಿಕೆ ಶಂಕೆ

    ಪಾರಿವಾಳದ ಕಾಲಿನಲ್ಲಿ ಕ್ಯಾಮೆರಾ – ಬೇಹುಗಾರಿಕೆ ಶಂಕೆ

    ಭುವನೇಶ್ವರ್: ಒಡಿಶಾದ (Odisha) ಜಗತ್‍ಸಿಂಗ್‍ಪುರ ಜಿಲ್ಲೆಯ ಪರದೀಪ್ ಕರಾವಳಿಯಲ್ಲಿ ಮೈಕ್ರೋ ಕ್ಯಾಮೆರಾ ಅವಳವಡಿಸಿದ್ದ ಪಾರಿವಾಳವನ್ನು (Pigeon) ಸೆರೆ ಹಿಡಿದಿದ್ದು, ಬೇಹುಗಾರಿಕೆಗೆ (Spy) ಬಳಸಿರುವುದಾಗಿ ಎಂದು ಪೊಲೀಸರು ಶಂಕಿಸಿದ್ದಾರೆ.

    ಒಡಿಶಾದ ಜಗತ್‍ಸಿಂಗ್‍ಪುರ ಜಿಲ್ಲೆಯ ಪರದೀಪ್ ಕರಾವಳಿಯಲ್ಲಿ ಮೀನುಗಾರರು ಕೆಲವು ದಿನಗಳ ಹಿಂದೆ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದರು. ಈ ವೇಳೆ ಆ ಮೀನುಗಾರರ ದೋಣಿಯ ಮೇಲೆ ಒಂದು ಪಾರಿವಾಳ ಕುಳಿತಿರುವುದನ್ನು ಮೀನುಗಾರರು ಗಮನಿಸಿದ್ದಾರೆ. ಅಷ್ಟೇ ಅಲ್ಲದೇ ಆ ಪಾರಿವಾಳದ ಕಾಲಿಗೆ ಮೈಕ್ರೊ ಕ್ಯಾಮೆರಾವನ್ನು (Camera) ಬಳಸಿರುವುದನ್ನು ಗಮನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣ ಎಚ್ಚೆತ್ತುಕೊಂಡ ಮೀನುಗಾರರು ತಮ್ಮ ಟ್ರಾಲರ್‌ನಲ್ಲಿ ಪಾರಿವಾಳವನ್ನು ಸೆರೆ ಹಿಡಿದರು. ನಂತರ ಅದನ್ನು ಮೆರೈನ್ ಪೊಲೀಸರಿಗೆ ಒಪ್ಪಿಸಿದರು.

    ಇದಾದ ಬಳಿಕ ತಕ್ಷಣ ಎಚ್ಚೆತ್ತುಕೊಂಡ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಈ ಬಗ್ಗೆ ಜಗತ್‍ಸಿಂಗ್‍ಪುರ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಪಿಆರ್ ಮಾತನಾಡಿ, ಪಶುವೈದ್ಯರು ಪಾರಿವಾಳವನ್ನು ಪರೀಕ್ಷಿಸುತ್ತಿದ್ದಾರೆ. ಅದರ ಕಾಲುಗಳಿಗೆ ಜೋಡಿಸಲಾದ ಸಾಧನಗಳನ್ನು ಪರೀಕ್ಷಿಸಲು ರಾಜ್ಯ ವಿಧಿವಿಜ್ಞಾನ ಪ್ರಯೋಗಾಯಲಯದ ಸಹಾಯವನ್ನು ಪಡೆಯುತ್ತೇವೆ ಎಂದು ತಿಳಿಸಿದರು.

    ಪಾರಿವಾಳದ ರೆಕ್ಕೆಗೆಳ ಮೇಲೆ ಏನೋ ಬರೆಯಲಾಗಿದ್ದು, ಬೇರೆ ಭಾಷೆಯಲ್ಲಿದೆ. ಈ ಹಿನ್ನೆಲೆಯಲ್ಲಿ ಏನು ಬರೆಯಲಾಗಿದೆ ಎಂಬುದನ್ನು ಪತ್ತೆ ಹಚ್ಚಲು ತಜ್ಞರ ಸಹಾಯವನ್ನು ಪಡೆಯಲಾಗುವುದು ಎಂದು ಎಸ್ಪಿ ತಿಳಿಸಿದರು. ಇದನ್ನೂ ಓದಿ: ಪೋಷಕರೇ ಎಚ್ಚರ- ಮಕ್ಕಳಲ್ಲಿ ಹೆಚ್ಚಾಗ್ತಿದೆ ಆಡಿನೋ ವೈರಸ್..!

    ಈ ಪಾರಿವಾಳವನ್ನು ಹಿಡಿದ ಮೀನುಗಾರ ಸಾರಥಿ ಎಂಬಾತ ಮಾತನಾಡಿ, ಪಾರಿವಾಳ ದೋಣಿಯ ಮೇಲೆ ಕುಳಿತಿರುವುದನ್ನು ನೋಡಿದೆ. ಈ ವೇಳೆ ಆ ಪಾರಿವಾಳದ ಕಾಲುಗಳಿಗೆ ಕೆಲವು ಸಾಧನಗಳನ್ನು ಕಟ್ಟಿರುವುದನ್ನು ಗಮನಿಸಿದೆ. ಅಷ್ಟೇ ಅಲ್ಲದೇ ಅದರ ರೆಕ್ಕೆ ಮೇಲೆ ಏನೋ ಬರೆಯಲಾಗಿತ್ತು. ಆದರೆ ಅದು ಓಡಿಶಾ ಅಲ್ಲದ್ದರಿಂದ ಅರ್ಥವಾಗಿರಲಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಮಾರ್ಚ್ 11ಕ್ಕೆ ಇಡಿ ಮುಂದೆ ಹಾಜರಾಗಲಿದ್ದಾರೆ KCR ಪುತ್ರಿ ಕವಿತಾ

  • ರಾಪರ್ ಆಗಲು ಕದ್ದ- ತನಿಖೆ ವೇಳೆ ರಾಪ್ ಸಾಂಗ್ ಹಾಡಿದ!

    ರಾಪರ್ ಆಗಲು ಕದ್ದ- ತನಿಖೆ ವೇಳೆ ರಾಪ್ ಸಾಂಗ್ ಹಾಡಿದ!

    ಡೆಹ್ರಾಡೂನ್: ಪೊಲೀಸರು ತನಿಖೆ ನಡೆಸುವಾಗ ಕಳ್ಳನೊಬ್ಬ ತನ್ನ ತಪ್ಪನ್ನು ರಾಪ್ ಸಾಂಗ್ ಮೂಲಕ ವಿಶಿಷ್ಟ ರೀತಿಯಲ್ಲಿ ಒಪ್ಪಿಕೊಂಡಿರುವ ಘಟನೆ ಉತ್ತರಾಖಂಡದಲ್ಲಿ (Uttarakhand) ನಡೆದಿದೆ.

    ಚಮೋಲಿಯ (Chamoli) ಅಂಗಡಿಯೊಂದರಲ್ಲಿ ಮೊಬೈಲ್ (mobile) ಹಾಗೂ ಕ್ಯಾಮೆರಾ (Camera) ಕಳವು ಮಾಡಿದ ಆರೋಪದ ಮೇರೆಗೆ ಸುಮಿತ್ ಖತ್ರಿ (19) ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ತನಿಖೆ ನಡೆಸುವ ವೇಳೆ ಈ ಪ್ರಸಂಗ ನಡೆದಿದೆ. ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಧರ್ಮೇಂದ್ರ, ಅಮಿತಾಭ್, ಅಂಬಾನಿ ಮನೆಯಲ್ಲಿ ಬಾಂಬ್: ಪೊಲೀಸರಿಂದ ಶೋಧ

    KILLING CRIME

    ರಾಪರ್ ಆಗುವ ಆಸೆಯಿಂದ ಹಣವಿಲ್ಲದೆ ಖತ್ರಿ ಕಳ್ಳತನವೆಸಗಿದ್ದಾನೆ. ತನಿಖೆ ಸಂದರ್ಭದಲ್ಲಿ ತನ್ನ ತಪ್ಪಿಗೆ ಮರುಕಪಟ್ಟಿದ್ದಾನೆ.

    ಫೆ. 19 ರಂದು ಮಂದಿರ ಮಾರ್ಗದ (Mandir Marg) ಸಂಜಯ್ ಸಿಂಗ್ ಎಂಬವರಿಗೆ ಸೇರಿದ್ದ ಅಂಗಡಿಯ ಬೀಗ ಒಡೆದು 3.5 ಲಕ್ಷ ರೂ ಮೌಲ್ಯದ ಐದು ಮೊಬೈಲ್‍ಗಳನ್ನು ಹಾಗೂ ಒಂದು ಕ್ಯಾಮೆರಾವನ್ನು ಕಳ್ಳತನ ಮಾಡಲಾಗಿತ್ತು. ಈ ಕುರಿತು ಅಂಗಡಿಯ ಮಾಲೀಕ ಗೋಪೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ. ಆರೋಪಿಯಂದ ಕದ್ದ ವಸ್ತುಗಳನ್ನು ವಶಪಡಿಸಿಕೊಂಡು ಸಂಜಯ್ ಸಿಂಗ್‍ಗೆ ಮರಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಅನುಷ್ಕಾಳೇ ನನ್ನ ಸ್ಫೂರ್ತಿ ಎಂದು ಪತ್ನಿಯನ್ನು ಹಾಡಿ ಹೊಗಳಿದ ವಿರಾಟ್ ಕೊಹ್ಲಿ

  • ದೇವಸ್ಥಾನದ ಆವರಣದ ಒಳಗಡೆ ಮೊಬೈಲ್‌, ಕ್ಯಾಮೆರಾಕ್ಕೆ ನಿರ್ಬಂಧ ವಿಧಿಸಿ: ತಮಿಳುನಾಡು ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

    ದೇವಸ್ಥಾನದ ಆವರಣದ ಒಳಗಡೆ ಮೊಬೈಲ್‌, ಕ್ಯಾಮೆರಾಕ್ಕೆ ನಿರ್ಬಂಧ ವಿಧಿಸಿ: ತಮಿಳುನಾಡು ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

    ಚೆನ್ನೈ: ಶುದ್ಧತೆ ಮತ್ತು ಪಾವಿತ್ರ್ಯತೆ ಕಾಪಾಡಲು ರಾಜ್ಯದ ಎಲ್ಲ ದೇವಸ್ಥಾನದ(Temple) ಆವರಣದ ಒಳಗಡೆ ಮೊಬೈಲ್‌ ಫೋನ್‌(Mobile Phone) ಮತ್ತು ಕ್ಯಾಮೆರಾವನ್ನು(Camera) ನಿಷೇಧಿಸುವಂತೆ ಮದ್ರಾಸ್‌ ಹೈಕೋರ್ಟ್‌(Madras High Court) ತಮಿಳುನಾಡು ಸರ್ಕಾರಕ್ಕೆ(Tamilnadu Government) ನಿರ್ದೇಶನ ನೀಡಿದೆ.

    ಮಧುರೈ ಪೀಠದ ನ್ಯಾಯಮೂರ್ತಿಗಳಾದ ಆರ್ ಮಹದೇವನ್ ಮತ್ತು ಜೆ ಸತ್ಯನಾರಾಯಣ ಅವರಿದ್ದ ದ್ವಿಸದಸ್ಯ ಪೀಠವು ಭಕ್ತರು ಮತ್ತು ದೇವಾಲಯಗಳಿಗೆ ಭೇಟಿ ನೀಡುವವರು ಯೋಗ್ಯವಾದ ವಸ್ತ್ರ ಸಂಹಿತೆಯನ್ನು ಪಾಲಿಸುವಂತೆ ಸೂಚಿಸಿ ಎಂದು ರಾಜ್ಯಕ್ಕೆ ನಿರ್ದೇಶನ ನೀಡಿದೆ.

    ತೂತುಕುಡಿ ಜಿಲ್ಲೆಯ ಪುರಾತನ ಅರುಲ್ಮಿಗು ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕರೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ವಿಚಾರಣೆ ವೇಳೆ ಕೋರ್ಟ್‌ ಈ ಆದೇಶ ಪ್ರಕಟಿಸಿದೆ. ಇದನ್ನೂ ಓದಿ: HDK ಪ್ರಧಾನಿಯಾದ್ರೆ ಜೆಡಿಎಸ್‍ನಲ್ಲಿ ದಲಿತ, ಮುಸ್ಲಿಂ CM: ಸಿಎಂ ಇಬ್ರಾಹಿಂ

    ದೇವಾಲಯಗಳ ಒಳಗೆ ಇರುವ ಮೊಬೈಲ್ ಫೋನ್‌ಗಳು ಮತ್ತು ಕ್ಯಾಮೆರಾಗಳು ಭಕ್ತರ ಗಮನವನ್ನು ಬೇರೆಡೆಗೆ ತಿರುಗಿಸುತ್ತವೆ. ಆದ್ದರಿಂದ ದೇವಾಲಯದ ಆವರಣದಲ್ಲಿ ಅವುಗಳ ಬಳಕೆಯನ್ನು ದೇವಾಲಯದ ಅಧಿಕಾರಿಗಳು ನಿಯಂತ್ರಿಸಬೇಕು ಎಂದು ಪೀಠ ಹೇಳಿದೆ.

    ಸಂವಿಧಾನದ 25 ನೇ ವಿಧಿಯ ಅಡಿಯಲ್ಲಿ ಎಲ್ಲಾ ವ್ಯಕ್ತಿಗಳು ಮುಕ್ತವಾಗಿ ಧರ್ಮವನ್ನು ಪ್ರತಿಪಾದಿಸಲು, ಆಚರಿಸಲು ಮತ್ತು ಪ್ರಚಾರ ಮಾಡಲು ಅರ್ಹರಾಗಿದ್ದಾರೆ ಎಂಬುದಕ್ಕೆ ಯಾವುದೇ ಆಕ್ಷೇಪವಿಲ್ಲ. ಆದರೆ ದೇವಾಲಯದ ಆವರಣದೊಳಗೆ ಕಾರ್ಯನಿರ್ವಹಿಸಲು ಮತ್ತು ಆಚರಣೆಗೆ ಅಂತಹ ಸ್ವಾತಂತ್ರ್ಯವು ನಿಯಮಗಳಿಗೆ ಒಳಪಟ್ಟಿರುತ್ತದೆ. ದೇವಸ್ಥಾನದಲ್ಲಿ ನಡೆಯುವ ಪೂಜಾ ವಿಧಿವಿಧಾನಗಳ ನಿಯಮಾವಳಿಗಳನ್ನು ಸೂಚಿಸಿ  ಅಧಿಕಾರಿಗಳು ದೇವಾಲಯದ ಪಾವಿತ್ರ್ಯತೆ ಕಾಪಾಡುವಂತೆ ನೋಡಿಕೊಳ್ಳಬೇಕು ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

    court order law

    ದೇವಸ್ಥಾನಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ಆದ್ದರಿಂದ ದೇವಾಲಯದ ಅಧಿಕಾರಿಗಳು ಸಾಕಷ್ಟು ಸುರಕ್ಷತಾ ವ್ಯವಸ್ಥೆಗಳನ್ನು ಮಾಡಬೇಕಾಗುತ್ತದೆ. ಹೆಚ್ಚಿನ ಭಕ್ತರು ದೇವಾಲಯದ ಆವರಣದ ಒಳಗಿನಿಂದ ಚಿತ್ರಗಳನ್ನು ತೆಗೆಯುತ್ತಾರೆ ಮತ್ತು ವೀಡಿಯೊಗಳನ್ನು ಮಾಡುತ್ತಾರೆ. ದೇವಾಲಯದಲ್ಲಿ ಇರಿಸಲಾಗಿರುವ ವಿಗ್ರಹಗಳು ಮತ್ತು ಇತರ ಬೆಲೆಬಾಳುವ ವಸ್ತುಗಳ ಫೋಟೋಗಳನ್ನು ತೆಗೆಯುತ್ತಾರೆ. ಭದ್ರತಾ ದೃಷ್ಟಿಯಿಂದ ಇವುಗಳಿಗೆ ನಿರ್ಬಂಧ ಹೇರಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.

    ಮಧುರೈನ ಪ್ರಸಿದ್ಧ ಮೀನಾಕ್ಷಿ ದೇವಸ್ಥಾನ ಸೇರಿದಂತೆ ರಾಜ್ಯದ ಇತರ ಹಲವಾರು ದೇವಾಲಯಗಳ ಒಳಗಡೆ ಭಕ್ತರು ತಮ್ಮ ಫೋನ್ ಅಥವಾ ಕ್ಯಾಮೆರಾಗಳನ್ನು ದೇವಾಲಯದ ಆವರಣದೊಳಗೆ ಕೊಂಡೊಯ್ಯಲು ಅನುಮತಿ ನೀಡುವುದಿಲ್ಲ ಎಂಬ ವಿಚಾರವನ್ನು ಅರ್ಜಿದಾರರು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

    ಮೀನಾಕ್ಷಿ ದೇವಸ್ಥಾನದಲ್ಲಿ ಭಕ್ತರು ದೇವಸ್ಥಾನಕ್ಕೆ ಪ್ರವೇಶಿಸುವ ಮೊದಲು ತಮ್ಮ ಫೋನ್‌ಗಳನ್ನು ಲಾಕರ್‌ನಲ್ಲಿ ಇಡಬೇಕಾಗುತ್ತದೆ. ಭಕ್ತರು ಹೊರಗೆ ಬಂದ ನಂತರ ಫೋನ್‌ಗಳನ್ನು ಹಿಂಪಡೆಯಲು ಅವಕಾಶ ನೀಡಲಾಗುತ್ತದೆ ಎಂದು ಅರ್ಜಿದಾರರು ತಿಳಿಸಿದ್ದರು.

    ತೂತುಕುಡಿಯ ದೇವಸ್ಥಾನದ ಒಳಗೆ ಫೋನ್ ಮತ್ತು ಕ್ಯಾಮೆರಾಗಳನ್ನು ಬಳಸುವುದನ್ನು ನಿಷೇಧಿಸುವ ಅಧಿಸೂಚನೆಯನ್ನು ಈಗಾಗಲೇ ಹೊರಡಿಸಲಾಗಿದೆ. ಭಕ್ತರು ಮತ್ತು ದೇವಾಲಯಕ್ಕೆ ಭೇಟಿ ನೀಡುವವರು ಸಭ್ಯ ಡ್ರೆಸ್ ಕೋಡ್ ಅನುಸರಿಸಬೇಕು ಎಂದು ಸೂಚಿಸಲಾಗಿದೆ ಎಂಬುದನ್ನು ತೂತುಕುಡಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಕೋರ್ಟ್‌ ಗಮನಕ್ಕೆ ತಂದಿದ್ದರು.

    Live Tv
    [brid partner=56869869 player=32851 video=960834 autoplay=true]

  • ರಾಷ್ಟ್ರೀಯ ಭದ್ರತಾ ಸಮೂಹಕ್ಕೆ `ಡ್ರೋನ್ ಸಮೂಹ’ ಸೇರ್ಪಡೆ – ಏನಿದರ ವಿಶೇಷತೆ?

    ರಾಷ್ಟ್ರೀಯ ಭದ್ರತಾ ಸಮೂಹಕ್ಕೆ `ಡ್ರೋನ್ ಸಮೂಹ’ ಸೇರ್ಪಡೆ – ಏನಿದರ ವಿಶೇಷತೆ?

    ನವದೆಹಲಿ: ಕೃತಕ ಬುದ್ಧಿಮತ್ತೆ (AI) ತಂತ್ರಾಂಶವೂ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿದ `ಡ್ರೋನ್‌ಗಳ ಸಮೂಹ’ ವನ್ನು ಸಶಸ್ತ್ರ ಪಡೆಗಳಿಗೆ ಸೇರಿಸಲಾಗುತ್ತಿದೆ.

    ನಿರ್ದಿಷ್ಟ ಗುರಿಯನ್ನು ನಿಖರವಾಗಿ ಗುರುತಿಸಿ, ಧ್ವಂಸ ಮಾಡಲು ಈ ಡ್ರೋನ್‌ಗಳಲ್ಲಿನ ಕೃತಕ ಬುದ್ಧಿಮತ್ತೆ ತಂತ್ರಾಂಶ ನೆರವಾಗಲಿದೆ ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ: ನಿಶ್ಚಿತಾರ್ಥ ವರನಿಗೆ ಯುವತಿಯ ಅಶ್ಲೀಲ ಫೋಟೋ ಕಳುಹಿಸಿದ ನೆರೆಮನೆಯವ – ವಧು ಆತ್ಮಹತ್ಯೆ

    ಹೆಸರೇ ಹೇಳುವಂತೆ `ಡ್ರೋನ್‌ಗಳ ಸಮೂಹ’ವು ನಿರ್ದಿಷ್ಟ ಸಂಖ್ಯೆಯ ಡ್ರೋನ್‌ಗಳನ್ನು ಒಳಗೊಂಡಿರುತ್ತದೆ. ಈ `ಡ್ರೋನ್ ಸಮೂಹ’ವನ್ನು ಒಂದೇ ಕೇಂದ್ರದಿಂದ ನಿಯಂತ್ರಿಸಲಾಗುತ್ತದೆ. ಯಾವುದೇ ಕಾರ್ಯಾಚರಣೆ ಕೈಗೊಂಡ ಸಂದರ್ಭದಲ್ಲಿ ವಿವಿಧ ಕಾರಣಗಳಿಂದಾಗಿ ಕೆಲವು ಡ್ರೋನ್‌ಗಳು ಕಾರ್ಯ ನಿಲ್ಲಿಸಿದರೂ, `ಸಮೂಹ’ವು ತನ್ನ ಕಾರ್ಯವನ್ನು ಪೂರ್ಣಗೊಳಿಸಿ ಹಿಂದಿರುಗುತ್ತದೆ’ ಎಂದು ಸೇನೆಯ ಸಾರ್ವಜನಿಕ ಮಾಹಿತಿ ವಿಭಾಗದ ಹೆಚ್ಚುವರಿ ಮಹಾನಿರ್ದೇಶನಾಲಯ ಇಂದು ಟ್ವೀಟ್ ಮಾಡಿದೆ.

    Live Tv
    [brid partner=56869869 player=32851 video=960834 autoplay=true]