Tag: Cameraman

  • ತೆಲುಗು ಧಾರಾವಾಹಿ ಶೂಟಿಂಗ್ ಸೆಟ್‌ನಲ್ಲಿ ಕನ್ನಡದ ನಟ ಚಂದನ್‍ಗೆ ಕಪಾಳ ಮೋಕ್ಷ..!

    ತೆಲುಗು ಧಾರಾವಾಹಿ ಶೂಟಿಂಗ್ ಸೆಟ್‌ನಲ್ಲಿ ಕನ್ನಡದ ನಟ ಚಂದನ್‍ಗೆ ಕಪಾಳ ಮೋಕ್ಷ..!

    ನ್ನಡ ಕಿರುತೆರೆಯ ಸ್ಟಾರ್ ನಟ ಚಂದನ್ ಕುಮಾರ್‌ಗೆ ತೆಲುಗು ತಂತ್ರಜ್ಞರು ಕಪಾಳಮೋಕ್ಷ ಮಾಡಿರುವ ವೀಡಿಯೋ ಸೊಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    ಕನ್ನಡ ಮಾತ್ರವಲ್ಲದೇ ತೆಲುಗು ಧಾರಾವಾಹಿಗಳಲ್ಲಿ ಅಭಿನಯಿಸುವ ಮೂಲಕ ಚಂದನ್ ಕುಮಾರ್ ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ. ಕೆಲವು ದಿನಗಳ ಹಿಂದೆ ಹೈದರಾಬಾದ್‍ನಲ್ಲಿ ಸಾವಿತ್ರಮ್ಮಗಾರು ಅಬ್ಬಾಯಿ ಧಾರಾವಾಹಿಯ ಶೂಟಿಂಗ್ ನಡೆಯುತ್ತಿತ್ತು. ಈ ಧಾರಾವಾಹಿಯಲ್ಲಿ ಮುಖ್ಯಪಾತ್ರದಲ್ಲಿ ಚಂದನ್ ಕುಮಾರ್ ಅಭಿನಯಿಸುತ್ತಿದ್ದಾರೆ. ಈ ಧಾರವಾಹಿ ಶೂಟಿಂಗ್ ಸೆಟ್‍ನಲ್ಲಿ ಅಲ್ಲಿನ ತಂತ್ರಜ್ಞರು ನಟ ಚಂದನ್ ಮೇಲೆ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ವಸತಿ ಶಾಲೆಯಲ್ಲಿ ‘ವಿಕ್ರಾಂತ್ ರೋಣ ‘ ಪೈರಸಿ ಸಿನಿಮಾ ವೀಕ್ಷಣೆ : ಕ್ರಮಕ್ಕೆ ಒತ್ತಾಯ

    ಶೂಟಿಂಗ್ ವೇಳೆ ಕ್ಯಾಮೆರಾಮೆನ್ ಹಾಗೂ ತಂತ್ರಜ್ಞರ ಜೊತೆ ಚಂದನ್ ಕುಮಾರ್ ಕಿರಿಕ್ ಮಾಡಿಕೊಂಡಿದ್ದು, ಕ್ಯಾಮೆರಾ ಅಸಿಸ್ಟೆಂಟ್‍ಗೆ ಮೊದಲು ಚಂದನ್ ಅವರೇ ಹಲ್ಲೆ ಮಾಡಿದ್ದಾರೆ ಎಂಬ ಆರೋಪಿಸಲಾಗಿದ್ದು, ಬಳಿಕ ತೆಲುಗು ತಂತ್ರಜ್ಞರು ಒಟ್ಟಾಗಿ ಚಂದನ್‍ಗೆ ನಿಂದಿಸಿದ್ದಾರೆ. ಸೀರಿಯಲ್ ತಂತ್ರಜ್ಞರ ಜೊತೆ ಮಾತಿಗೆ ಮಾತು ಬೆಳೆದು ಕನ್ನಡ ನಟ ಚಂದನ್‍ಗೆ ಅವರು ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾಗಿದೆ. ಕಳೆದ ಒಂದು ತಿಂಗಳ ಹಿಂದೆ ಹಲ್ಲೆ ನಡೆದಿದ್ದು, ಇದೀಗ ಈ ವೀಡಿಯೋ ವೈರಲ್ ಆಗಿದೆ.

    ಚಂದನ್ ಹಿಂದೆ ಲಕ್ಷ್ಮೀ ಬಾರಮ್ಮ, ‘ರಾಧಾ ಕಲ್ಯಾಣ’, ‘ಸರ್ವ ಮಂಗಳ ಮಾಂಗಲ್ಯೇ’ ಧಾರವಾಹಿಗಳಲ್ಲಿ ನಟಿಸಿದ್ದಾರೆ. ಕ್ರೇಜಿಸ್ಟಾರ್ ರವಿಚಂದ್ರನ್ ಜೊತೆ ಲವ್ ಯು ಅಲಿಯಾ, ಅರ್ಜುನ್ ಸರ್ಜಾ ನಿರ್ದೇಶನದ “ಪ್ರೇಮ ಬರಹ” ಸೇರಿ ಕನ್ನಡದ ಕೆಲವು ಸಿನಿಮಾಗಳಲ್ಲೂ ಚಂದನ್ ಬಣ್ಣಹಚ್ಚಿದ್ದಾರೆ. ಸದ್ಯ ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗುತ್ತಿರುವ’ ಮರಳಿ ಮನಸಾಗಿದೆ, ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಇದನ್ನೂ ಓದಿ: ನಾಡದೇವಿ ಚಾಮುಂಡೇಶ್ವರಿ ಹಬ್ಬಕ್ಕೆ ದಿನಗಣನೆ – ಮೈಸೂರು ದಸರಾಕ್ಕೆ ಬಹಿಷ್ಕಾರ ಹಾಕಿದ ಮಾವುತ ಕಾವಾಡಿಗಳು

    ಬಿಗ್ ಬಾಸ್‍ನಲ್ಲೂ ಕಾಣಿಸಿಕೊಂಡಿದ್ದ ಚಂದು, ನಟಿ ಕವಿತಾ ಗೌಡರನ್ನು ವಿವಾಹವಾಗಿದ್ದಾರೆ. ಚಂದನ್ ಕುಮಾರ್ ಒಡೆತನದಲ್ಲಿ ಬಿರಿಯಾನಿ ಹೋಟೆಲ್ ಕೂಡ ಇದ್ದು, ಇದರ ಜೊತೆಗೆ ಪ್ರೋಟೀನ್ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಚಿತ್ರದುರ್ಗದ ಪಬ್ಲಿಕ್ ಟಿವಿ ಕ್ಯಾಮೆರಾಮನ್ ಕೊರೊನಾಗೆ ಬಲಿ

    ಚಿತ್ರದುರ್ಗದ ಪಬ್ಲಿಕ್ ಟಿವಿ ಕ್ಯಾಮೆರಾಮನ್ ಕೊರೊನಾಗೆ ಬಲಿ

    – ಪಬ್ಲಿಕ್ ಟಿವಿ ಆಡಳಿತ ಮಂಡಳಿಯಿಂದ ಕುಟುಂಬಕ್ಕೆ ಪರಿಹಾರ

    ಚಿತ್ರದುರ್ಗ: ಕೊರೊನಾ ಮಹಾಮಾರಿಗೆ ಪಬ್ಲಿಕ್ ಟಿವಿ ಕ್ಯಾಮೆರಾಮನ್ ಬಸವರಾಜ ಕೋಟಿ(43) ತುತ್ತಾಗಿದ್ದಾರೆ.

    ಕಳೆದ 5 ವರ್ಷಗಳಿಂದ ಚಿತ್ರದುರ್ಗದಲ್ಲಿ ಪಬ್ಲಿಕ್ ಟಿವಿ ಕ್ಯಾಮಾರಾಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ ಕೋಟಿ, ಕೋವಿಡ್ ಎರಡನೇ ಅಲೆಗೆ ಬಲಿಯಾಗಿದ್ದಾರೆ.

    ಕಳೆದ ಹದಿನೈದು ದಿನಗಳಿಂದ ಚಿತ್ರದುರ್ಗ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋಟಿ, ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಮೃತ ಬಸವರಾಜ ಕೋಟಿ ಅವರಿಗೆ ಹತ್ತು ವರ್ಷದ ಓರ್ವ ಪುತ್ರ ಮತ್ತು ಹನ್ನೆರಡು ವರ್ಷದ ಖುಷಿ ಎಂಬ ಇಬ್ಬರು ಪುಟಾಣಿ ಮಕ್ಕಳು, ಪತ್ನಿಯಾದ ಶಾಂತ ಸೇರಿದಂತೆ ಹೆತ್ತವರು ಹಾಗೂ ಅಪಾರ ಬಂಧಗಳನ್ನು ಅಗಲಿದ್ದಾರೆ.

    ಬಸವರಾಜ್ ಅಗಲಿಕೆಗೆ ಪಬ್ಲಿಕ್ ಟಿವಿ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ. ಅಲ್ಲದೆ ಮೃತ ಬಸವರಾಜ್ ಕುಟುಂಬಕ್ಕೆ ಪಬ್ಲಿಕ್ ಟಿವಿ ಆಡಳಿತ ಮಂಡಳಿ 10 ಲಕ್ಷ ರೂ. ಪರಿಹಾರ ಘೋಷಿಸಿದೆ.

  • ಬದುಕಿನ ಶೂಟಿಂಗ್ ಮುಗಿಸಿದ ಕ್ಯಾಮೆರಾಮನ್

    ಬದುಕಿನ ಶೂಟಿಂಗ್ ಮುಗಿಸಿದ ಕ್ಯಾಮೆರಾಮನ್

    – 10 ದಿನಗಳ ಹಿಂದಷ್ಟೇ ಮದ್ವೆಯಾಗಿದ್ರು

    ಚಿತ್ರದುರ್ಗ: ಕಳೆದ ಹತ್ತು ದಿನಗಳ ಹಿಂದೆಯಷ್ಟೇ ವಿವಾಹವಾಗಿದ್ದ ಖಾಸಗಿ ವಾಹಿನಿಯ ಚಿತ್ರದುರ್ಗ ಜಿಲ್ಲೆ ಕ್ಯಾಮೆರಾಮನ್ ವಿನಾಯಕ ತೀವ್ರ ಉಸಿರಾಟದ ತೊಂದರೆಯಿಂದಾಗಿ ಸಾವಿಗೀಡಾಗಿದ್ದಾರೆ.

    ತೀವ್ರ ಉಸಿರಾಟದ ತೊಂದರೆ ಕಾರಣ ರಾತ್ರಿ ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಸಿಟಿ ಸೆಂಟ್ರಲ್ ಹಾಸ್ಪಿಟಲ್ ಗೆ ಕಳುಹಿಸಲಾಗಿತ್ತು. ಆದರೆ ಕ್ರೂರ ವಿಧಿಯು ಕಡೆಗೂ ಬಿಡದೇ ಬೆನ್ನತ್ತೇ ಇಹಲೋಕಕ್ಕೆ ಕರೆದುಕೊಂಡು ಹೋಗಿದೆ. ದಾಂಪತ್ಯ ಜೀವನದ ಕನಸು ಹೊತ್ತು ಬಾಳಸಂಗಾತಿಯಾಗಿ ಕೈಹಿಡಿದಿದ್ದ ಆ ಹೆಣ್ಣು ಮಗುವಿಗೆ ದೇವರೇ ದಿಕ್ಕು ತೋಚದಂತಾಗಿದೆ. ಎಲ್ಲಾ ಪರೀಕ್ಷೆಗಳ ಬಳಿಕ ಕೋವಿಡ್ ದೃಢವಾಗಿದೆ. ಮನೆಯಲ್ಲಿ ವಯಸ್ಸಾದ ತಂದೆ-ತಾಯಿ ಇದ್ದೂ, ಇತ್ತೀಚೆಗೆ ಹೊಸ ಮನೆ ಕಟ್ಟಿ, ಹೊಸ ಬಾಳಿಗೆ ಕಾಲಿಟ್ಟಿದ್ದರು.

    ಚಿತ್ರದುರ್ಗ ತಾಲೂಕಿನ ಅನ್ನೇಹಾಳ್ ಗ್ರಾಮದ ವರಾದ ವಿನಾಯಕ ಚಿತ್ರದುರ್ಗದ ದವಳಗಿರಿ ಬಡಾವಣೆಯಲ್ಲಿ ವಾಸವಾ ಗಿದ್ದರು. ಚಿತ್ರದುರ್ಗ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ರು. ಪ್ರಸ್ತುತ ಖಾಸಗಿ ವಾಹಿನಿಯೊಂದರಲ್ಲಿ ಕ್ಯಾಮೆರಾಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ ಚಿತ್ರದುರ್ಗ ಸಿಟಿ ಕೇಬಲ್, ಕ್ಯಾಮೆರಾ ಮೆನ್ ಆಗಿ ಕಾರ್ಯ ನಿರ್ವಹಿಸಿದ್ದರು. ಅಲ್ಲದೆ ಮದುವೆಯಾಗಿ ಕೇವಲ ಹತ್ತು ದಿನ ಕಳೆದಿದ್ದು, ಮನೆ ಮುಂದೆ ಮದುವೆಗಾಗಿ ಹಾಕಲಾಗಿದ್ದ ಚಪ್ಪರ ಬಿಚ್ಚುವ ಮುನ್ನವೇ ಇಂದು ಬೆಳಗ್ಗಿನ ಜಾವ ವಿನಾಯಕ ಇಹಲೋಕ ತ್ಯಜಿಸಿದ್ದಾರೆ.

  • ಚಿಕಿತ್ಸೆ ಫಲಿಸದೆ ಹಸೆಮಣೆ ಏರುವ ಮುನ್ನವೇ ಖಾಸಗಿ ವಾಹಿನಿಯ ಕ್ಯಾಮೆರಾಮನ್ ಸಾವು

    ಚಿಕಿತ್ಸೆ ಫಲಿಸದೆ ಹಸೆಮಣೆ ಏರುವ ಮುನ್ನವೇ ಖಾಸಗಿ ವಾಹಿನಿಯ ಕ್ಯಾಮೆರಾಮನ್ ಸಾವು

    ಹುಬ್ಬಳ್ಳಿ: ಅಪಘಾತದಲ್ಲಿ ತ್ರೀವವಾಗಿ ಗಾಯಗೊಂಡಿದ್ದ ಖಾಸಗಿ ವಾಹಿನಿ (ಪವರ್ ಟಿವಿ) ಕ್ಯಾಮೆರಾಮನ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

    ಸುನೀಲ್ ಮೃತ ಕ್ಯಾಮೆರಾಮನ್. ಸೆಪ್ಟೆಂಬರ್ 30 ರಂದು ರಾತ್ರಿ ಹುಬ್ಬಳ್ಳಿ ಚಾಟ್ನಿ ಕಾಂಪ್ಲೆಕ್ಸ್ ಬಳಿ ಎರಡು ಬೈಕ್‍ಗಳು ಮುಖಾಮುಖಿ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಹುಬ್ಬಳ್ಳಿಯ ಅಪ್ತಾಬ್ ಎಂಬಾತ ತ್ರೀವಗಾಗಿ ಗಾಯಗೊಂಡಿದ್ದ. ತಕ್ಷಣವೇ ಗಾಯಾಳುವನ್ನ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದನು.

    ಜೊತೆಗೆ ಖಾಸಗಿ ವಾಹಿನಿ ಕ್ಯಾಮೆರಾಮನ್ ಸುನೀಲ್‍ಗೂ ಸಹ ಗಂಭೀರವಾಗಿ ಗಾಯಗಳಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸುನೀಲ್ ತಲೆ ಹಾಗೂ ಮುಖಕ್ಕೆ ಗಂಭೀರ ಗಾಯಗಳಾದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೆ ಕ್ಯಾಮೆರಾಮನ್ ಸುನೀಲ್ ಮೃತಪಟ್ಟಿದ್ದಾರೆ.

    ಸದಾ ಚುರುಕಿನಿಂದಲೇ ಕೆಲಸ ಮಾಡುತ್ತಿದ್ದ ಸುನೀಲ್‍ಗೆ ಡಿಸೆಂಬರ್‌ನಲ್ಲಿ ವಿವಾಹ ಕೂಡ ನಿಗದಿಯಾಗಿತ್ತು. ಆದರೆ ಹಸೆಮಣೆ ಏರುವ ಮುನ್ನವೇ ಕ್ಯಾಮೆರಾಮನ್ ಸಾವನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

    ಕ್ಯಾಮೆರಾಮನ್ ಸಾವಿಗೆ ಧಾರವಾಡ ಜಿಲ್ಲಾ ಪತ್ರಕರ್ತರು ಸಂಘ ಕಂಬನಿ ಮಿಡಿದಿದ್ದು, ಮೃತನ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಈ ಘಟನೆಯ ಕುರಿತು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಒಂದೇ ವಿಡಿಯೋ – 20 ಕ್ಯಾಮೆರಾಮ್ಯಾನ್‍ಗಳಿಗೆ ಕೆಲಸ ಕೊಟ್ಟ ಸೃಜನ್

    ಒಂದೇ ವಿಡಿಯೋ – 20 ಕ್ಯಾಮೆರಾಮ್ಯಾನ್‍ಗಳಿಗೆ ಕೆಲಸ ಕೊಟ್ಟ ಸೃಜನ್

    – ಬನ್ನಿ ಮತ್ತೆ ದುಡಿಯೋಣ ನಮ್ಮ ದೇಶ ಮತ್ತೆ ಕಟ್ಟೋಣ

    ಬೆಂಗಳೂರು: ಲಾಕ್‍ಡೌನ್‍ನಿಂದ ಚಿತ್ರರಂಗದ ಕೆಲಸಗಳು ಸ್ಥಗಿತವಾಗಿವೆ. ಇದರಿಂದ ಕಲಾವಿದರು, ಕ್ಯಾಮೆರಾಮ್ಯಾನ್‍ಗಳು ಸೇರಿದಂತೆ ಅನೇಕರು ಕೆಲಸವಿಲ್ಲದೆ ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಆತ್ಮನಿರ್ಭರ್ ಭಾರತಕ್ಕೆ ಕೈ ಜೋಡಿಸುವ ಮೂಲಕ ಕಲಾವಿದರಿಗೆ ಸಹಾಯ ಮಾಡಿದ್ದಾರೆ.

    ನಟ ಸೃಜನ್ ಲೋಕೇಶ್ ಚಿತ್ರರಂಗದ ಕೆಲಸಗಳು ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಮನೆಯಲ್ಲಿ ಕ್ರಿಯೇಟಿವ್ ವಿಡಿಯೋ ತಯಾರಿಸಿದ್ದಾರೆ. 20 ಕ್ಯಾಮೆರಾಮ್ಯಾನ್‍ಗಳನ್ನು ಬಳಸಿ ಈ ವಿಡಿಯೋ ತಯಾರಿಸಿದ್ದು, ಕ್ಯಾಮೆರಾ ವಿಭಾಗದವರಿಗೆ ಕೆಲಸ ಸೃಷ್ಟಿಸಬೇಕೆಂಬ ಉದ್ದೇಶದಿಂದ ಈ ರೀತಿ ವಿಡಿಯೋವನ್ನು ತಯಾರಿಸಿದ್ದಾರೆ. 20 ಶಾಟ್‍ಗಳ ಮೂಲಕ ಸೃಜನ್ ಮಹತ್ವದ ಸಂದೇಶ ರವಾನಿಸಿದ್ದಾರೆ. ಇದಕ್ಕಾಗಿ ನಟ ಸೃಜನ್ ಲೋಕೇಶ್ ಅವರಿಗೆ ಸಂಭಾವನೆ ಕೂಡ ನೀಡಿದ್ದಾರೆ.

    ಸೃಜನ್ ಲೋಕೇಶ್ ಇನ್‍ಸ್ಟಾಗ್ರಾಮ್, ಫೇಸ್‍ಬುಕ್‍ನಲ್ಲಿ ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ. ಆ ವಿಡಿಯೋಗೆ “ಬನ್ನಿ ಮತ್ತೆ ದುಡಿಯೋಣ ನಮ್ಮ ದೇಶವನ್ನ ಮತ್ತೆ ಕಟ್ಟೋಣ” ಎಂಬ ಶೀರ್ಷಿಕೆ ಕೊಟ್ಟಿದ್ದಾರೆ. ಜೊತೆ #beindianbuyindian ಎಂಬ ಹ್ಯಾಶ್ ಟ್ಯಾಗ್ ಹಾಕಿದ್ದಾರೆ.

    “ಎಲ್ಲರಿಗೂ ನಮಸ್ಕಾರ ಅಂದಿನಿಂದ ಇಂದಿನವರೆಗೆ ಎಂತಹ ಯುದ್ಧನೇ ಆಗಿರಲಿ, ಎಂತಹ ಸಂಕಷ್ಟನೇ ಆಗಿರಲಿ. ಈಗಿನ ಮಹಾಮಾರಿ ಕೊರೊನಾವೇ ಆಗಿರಲಿ ಸಮಸ್ಯೆಗೆ ಹೆದರಿ ಮುಂದಿಟ್ಟಿದ್ದ ಹೆಜ್ಜೆಯನ್ನು ಹಿಂದಿಟ್ಟ ಇತಿಹಾಸ ನಮ್ಮ ಭಾರತದಲ್ಲೇ ಇಲ್ಲ. ಆರೋಗ್ಯವೇ ನಮ್ಮ ಭಾಗ್ಯ, ಇಷ್ಟು ದಿನ ದೇಹದ ಆರೋಗ್ಯಕ್ಕಾಗಿ ಹೋರಾಡುದ್ವಿ, ಇನ್ನೂ ಮುಂದೆ ದೇಶದ ಸಂಪತ್ತಿಗೋಸ್ಕರ ಹೋರಾಡೋಣ. ಹೂ, ಹಣ್ಣು, ತರಕಾರಿನೇ ಆಗಿರಲಿ, ದಿನ ಬಳಸುವ ವಸ್ತುಗಳಾಗಿರಲಿ, ಲೋಕಲ್‍ನಿಂದ ಗ್ಲೋಬಲ್‍ವರೆಗೂ ಬೆಳೆಯೋಣ. ‘beindianbuyindian’ ಆತ್ಮನಿರ್ಭರ್ ಭಾರತಕ್ಕೆ ನಾವೆಲ್ಲಾ ಕೈ ಜೋಡಿಸೋಣ” ಎಂದು ಸಂದೇಶ ಸಾರಿದರು.

    40 ಸೆಕೆಂಡ್‍ವರೆಗೂ ಮಾತನಾಡುವ ವಿಡಿಯೋದಲ್ಲಿ ಸೃಜನ್ ತುಂಬಾ ಶಾಟ್ ತೆಗೆದುಕೊಂಡಿದ್ದಾರೆ. ಅಲ್ಲದೇ ಯಾಕೆ ಇಷ್ಟೊಂದು ಶಾಟ್ ತೆಗೆದುಕೊಂಡೆ ಎಂಬುದನ್ನು ಅವರೇ ತಿಳಿಸಿದ್ದಾರೆ. ಇಷ್ಟು ಮಾತನ್ನು ಒಂದೇ ಶಾಟಿನಲ್ಲಿ ಹೇಳಬಹುದಿತ್ತು. ಆದ್ರೆ ಇಷ್ಟು ಶಾಟ್ ಕಟ್ ಯಾಕೆಂದು ಥಿಂಕ್ ಮಾಡುತ್ತಿದ್ದೀರ. ಈ ಶಾಟ್ ಕಟ್‍ಗಳ ಹಿಂದೆಯೂ ಒಂದು ಕಥೆಯಿದೆ ಎಂದು ತಿಳಿಸಿದರು.

    “ಲಾಕ್‍ಡೌನ್ ಸಂದರ್ಭದಲ್ಲಿ ನಮ್ಮ ಕಲಾವಿದರು, ದಿನಗೂಲಿ ಕಾರ್ಮಿಕರು, ಟೆಕ್ನಿಷಿಯನ್ಸ್ ಸೇರಿದಂತೆ ಅನೇಕರಿಗೆ ತುಂಬಾನೇ ಕಷ್ಟವಾಗಿದೆ. ಇದಕ್ಕೆ ಸ್ಪಂದಿಸಿ ಹಲವಾರು ಜನರು ಸಹಾಯ ಮಾಡಿದ್ದಾರೆ. ಅವರಿಗೆಲ್ಲ ಧನ್ಯವಾದ, ಆದರೆ ನಮ್ಮ ಲೋಕೇಶ್ ಪ್ರೊಡಕ್ಷನ್‍ನಲ್ಲಿ ಕೆಲಸ ಮಾಡುತ್ತಿರುವ ಕ್ಯಾಮೆರಾಮ್ಯಾನ್‍ಗಳು, 10 ವರ್ಷದಿಂದ ನನ್ನ ಜೊತೆ ಕೆಲಸ ಮಾಡುತ್ತಿರುವವರಿಗೆ ಸಹಾಯ ಮಾಡಬೇಕೆಂದುಕೊಂಡೆ.

    ಆದ್ರೆ ಅವರು, ನಮಗೆ ಸಹಾಯ ಮಾಡಬೇಕು ಎನಿಸಿದರೆ ದಯವಿಟ್ಟು ಕೆಲಸ ಕೊಡಿ ಎಂದು ಕೇಳಿಕೊಂಡರು. ಈ ವಿಡಿಯೋದಲ್ಲಿರುವ 20 ಶಾಟ್‍ಗಳನ್ನು ನನ್ನ 20 ಜನ ಕ್ಯಾಮೆರಾಮ್ಯಾನ್‍ಗಳು ಕಂಪೋಸ್ ಮಾಡಿ ಅವರ ಸಂಭಾವನೆಯನ್ನ ಅವರೇ ದುಡಿದಿದ್ದಾರೆ. ಈ ಲಾಕ್‍ಡೌನ್ ಸಮಯದಲ್ಲಿ ನನ್ನ ಕೈಯಲ್ಲಿ ಅವರಿಗೆ ಈ ಕೆಲಸ ಕೊಡಲು ಮಾತ್ರ ಸಾಧ್ಯವಾಯಿತು” ಎಂದು ತಿಳಿಸಿದ್ದಾರೆ. ಜೊತೆಗೆ ಪ್ರತಿಯೊಬ್ಬ ಕ್ಯಾಮೆರಾಮ್ಯಾನ್‍ ಹೆಸರುಗಳನ್ನು ವಿಡಿಯೋ ನಮೂದಿಸಿದ್ದಾರೆ.

    ಈ ಜೀವನ ಭಗವಂತ ಹೇಳಿದ ಆ್ಯಕ್ಷನ್‍ನಿಂದ ಶುರುವಾಗುತ್ತೆ, ಅವನು ಹೇಳಿದ ಕಟ್‍ನಿಂದ ಮುಕ್ತಾಯವಾಗುತ್ತೆ. ಈ ಆ್ಯಕ್ಷನ್-ಕಟ್ ಮಧ್ಯದ ಜೀವನದಲ್ಲಿ ನಾವು ಸಾಧ್ಯವಾದಷ್ಟು ಬೇರೆಯವರಿಗೆ ಸಹಾಯ ಮಾಡೋಣ. ಬನ್ನಿ ಮತ್ತೆ ನಾವೆಲ್ಲರೂ ಸೇರಿ ದುಡಿಯೋಣ, ನಮ್ಮ ದೇಶವನ್ನು ಮತ್ತೆ ಕಟ್ಟೋಣ ಎಂಬ ಸಂದೇಶವನ್ನು ಸಾರಿದ್ದಾರೆ.

    https://www.facebook.com/srujanlokesh/videos/vb.490600890982778/1165816490464005/?type=2&theater

  • ಪಬ್ಲಿಕ್ ಟಿವಿಯ ಸಾಮಾಜಿಕ ಕಳಕಳಿ ವರದಿಗೆ ಪ್ರಶಸ್ತಿ

    ಪಬ್ಲಿಕ್ ಟಿವಿಯ ಸಾಮಾಜಿಕ ಕಳಕಳಿ ವರದಿಗೆ ಪ್ರಶಸ್ತಿ

    ಬೆಂಗಳೂರು: ಪಬ್ಲಿಕ್ ಟಿವಿಯಲ್ಲಿ ಮೈಸೂರು ವಿಭಾಗದಿಂದ ಪ್ರಸಾರವಾದ ಸಾಮಾಜಿಕ ಕಳಕಳಿಯುಳ್ಳ ವರದಿಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಉತ್ತಮ ವರದಿಗಾಗಿ ನೀಡುವ ವಾರ್ಷಿಕ ಪ್ರಶಸ್ತಿ ಲಭ್ಯವಾಗಿದೆ.

    ‘ಮನೆಯವರನ್ನು ಸಾಲದ ಸುಳಿಗೆ ಸಿಲುಕಿಸುವ ಸಾವು’ ಎಂಬ ಶೀರ್ಷಿಕೆ ಅಡಿ ಇದೇ ವರ್ಷದ ಜನವರಿ 7 ರಂದು ಪಬ್ಲಿಕ್ ಟಿವಿಯಲ್ಲಿ ವಿಶೇಷ ವರದಿ ಪ್ರಸಾರವಾಗಿತ್ತು. ಪಬ್ಲಿಕ್ ಟಿವಿ ಮೈಸೂರು ವರದಿಗಾರ ಕೆ.ಪಿ.ನಾಗರಾಜ್ ಮತ್ತು ಕ್ಯಾಮರಾಮೆನ್ ಕಾರ್ತಿಕ್ ಈ ವರದಿ ಮಾಡಿದ್ದರು. ಇದನ್ನೂ ಓದಿ:  ಸತ್ತರೆ ಇಲ್ಲಿ ಸಾಲ ಕಟ್ಟಿಟ್ಟ ಬುತ್ತಿ – ಬಡವರು ಸತ್ತರೂ ಕಷ್ಟ

     

    ಮೈಸೂರು ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಇರುವ ಕ್ರೈಸ್ತ ಸಮುದಾಯದ ಪ್ರಾಟೆಸ್ಟೆಂಟ್ ಗುಂಪಿಗೆ ಸ್ಮಶಾನದ ವ್ಯವಸ್ಥೆ ಇಲ್ಲ. ಈ ಸಮುದಾಯದ ಶವ ಹೂಳಲು ಇದೇ ಧರ್ಮದ ಇನ್ನೊಂದು ಪಂಗಡದ ಸ್ಮಶಾನದಲ್ಲಿ ಅವಕಾಶ ಇಲ್ಲ ಮತ್ತು ಹಿಂದೂ ಧರ್ಮದ ಸ್ಮಶಾನದಲ್ಲೂ ಅವರಿಗೆ ಪ್ರವೇಶವಿಲ್ಲ. ಹೀಗಾಗಿ ಈ ಸಮುದಾಯದ ಜನರು ಶವವನ್ನು ಮೈಸೂರಿನಲ್ಲಿನ ತಮ್ಮ ಸಮುದಾಯದ ಸ್ಮಶಾನದಲ್ಲಿ ಹೂಳಬೇಕಾಗಿದೆ.

    ಮೈಸೂರಿಗೆ ಶವ ಸಾಗಿಸಲು ಹಾಗೂ ಅಂತ್ಯಸಂಸ್ಕಾರಕ್ಕೆ ಸಂಬಂಧಿಕರನ್ನು ಇಲ್ಲಿಗೆ ಕರೆ ತರಲು ವಾಹನಗಳ ವ್ಯವಸ್ಥೆ ಮಾಡಬೇಕಿತ್ತು. ಅಷ್ಟೇ ಅಲ್ಲದೆ ಸ್ಮಶಾನದ ಜಾಗಕ್ಕೂ ಹಣ ಕಟ್ಟಬೇಕು. ಇದಕ್ಕೆಲ್ಲ 50 ರಿಂದ 70 ಸಾವಿರ ರೂ. ವೆಚ್ಚವಾಗುತ್ತದೆ. ಹೇಳಿ ಕೇಳಿ ಕಡು ಬಡತನದಲ್ಲಿರುವ ಈ ಸಮುದಾಯದ ಕುಟುಂಬಗಳು ಹಣಕ್ಕಾಗಿ ಬಡ್ಡಿಗಾಗಿ ಸಾಲ ಪಡೆಯುತ್ತಿದ್ದರು. ಅಲ್ಲಿಗೆ ಈ ಸಾಲದ ಹಣ ತೀರಿಸುವಷ್ಟತ್ತಿಗೆ ಅವರ ಸ್ಥಿತಿ ದೇವರಿಗೆ ಮಾತ್ರ ಪ್ರೀತಿ.

    ಈ ಸಮಸ್ಯೆದ ಬಗ್ಗೆ ಸರ್ಕಾರದ ಗಮನ ಸೆಳೆಯಲು ಪಬ್ಲಿಕ್ ಟಿವಿ ಸಾಮಾಜಿಕ ಕಳಕಳಿಯಿಂದ ಈ ವರದಿ ಪ್ರಸಾರ ಮಾಡಿತ್ತು. ಈ ವರದಿ ಪರಿಣಾಮ ಜಿಲ್ಲಾಡಳಿತ ಈ ಸಮುದಾಯಕ್ಕೆ ಸ್ಮಶಾನದ ಜಾಗ ನೀಡಲು ಜಾಗದ ಸರ್ವೇ ಕಾರ್ಯ ಕೂಡ ನಡೆಸಿದೆ.

    https://www.youtube.com/watch?v=kQGSTCALyto&feature=youtu.be