Tag: canada

  • ಕೆನಡಾದಲ್ಲಿ ಉದ್ಯಮಿ ಹತ್ಯೆ, ಗಾಯಕನ ಮನೆಗೆ ಬೆಂಕಿಯಿಟ್ಟ ಬಿಷ್ಣೋಯ್‌ ಗ್ಯಾಂಗ್‌

    ಕೆನಡಾದಲ್ಲಿ ಉದ್ಯಮಿ ಹತ್ಯೆ, ಗಾಯಕನ ಮನೆಗೆ ಬೆಂಕಿಯಿಟ್ಟ ಬಿಷ್ಣೋಯ್‌ ಗ್ಯಾಂಗ್‌

    ಒಟ್ಟಾವಾ: ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೆನಡಾದಲ್ಲಿ ದಾಳಿ ನಡೆಸಿದೆ. ಭಾರತೀಯ ಮೂಲದ ಅಬಾಟ್ಸ್‌ಫೋರ್ಡ್ ಕೈಗಾರಿಕೋದ್ಯಮಿಯೊಬ್ಬರ ಹತ್ಯೆ ಮತ್ತು ಪಂಜಾಬಿ ಗಾಯಕನ ಮನೆಯ ಮೇಲೆ ಗುಂಡು ಹಾರಿಸಿದ ಹೊಣೆಯನ್ನು ಈ ಗ್ಯಾಂಗ್ ಹೊತ್ತುಕೊಂಡಿದೆ.

    ರಾಜಸ್ಥಾನದ ಪೊಲೀಸರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸಕ್ರಿಯ ಸದಸ್ಯ ಜಗದೀಪ್ ಸಿಂಗ್ ಅಲಿಯಾಸ್ ಜಗ್ಗಾನನ್ನು ಅಮೆರಿಕದಲ್ಲಿ ಬಂಧಿಸಿದ್ದರು. ಅದರ ಬೆನ್ನಲ್ಲೇ ಈ ಎರಡು ದಾಳಿಗಳು ನಡೆದಿವೆ. ಬಿಷ್ಣೋಯ್ ಗ್ಯಾಂಗ್ ಸದಸ್ಯ ಗೋಲ್ಡಿ ಧಿಲ್ಲೋನ್, ಭಾರತೀಯ ಮೂಲದ ಕೈಗಾರಿಕೋದ್ಯಮಿ ದರ್ಶನ್ ಸಿಂಗ್ ಸಹಸಿ ಅವರ ಹತ್ಯೆಯ ಹಿಂದೆ ಈ ಗುಂಪಿನ ಕೈವಾಡವಿದೆ ಎಂದು ಹೇಳಿದ್ದಾರೆ.

    68 ವರ್ಷದ ದರ್ಶನ್‌ ಸಿಂಗ್ ದೊಡ್ಡ ಮಾದಕವಸ್ತು ವ್ಯವಹಾರದಲ್ಲಿ ಭಾಗಿಯಾಗಿದ್ದರು. ಈ ಗ್ಯಾಂಗ್ ಅವರಿಂದ ಹಣಕ್ಕೆ ಬೇಡಿಕೆ ಇಟ್ಟಿತ್ತು. ಹಣ ಸಿಗದ ಕಾರಣ, ಗ್ಯಾಂಗ್ ಆತನನ್ನು ಹತ್ಯೆ ಮಾಡಿದೆ ಎನ್ನಲಾಗಿದೆ.

    ಸೋಮವಾರ ಬೆಳಗ್ಗೆ ಬ್ರಿಟಿಷ್ ಕೊಲಂಬಿಯಾದ ಅಬಾಟ್ಸ್‌ಫೋರ್ಡ್‌ನಲ್ಲಿರುವ ಅವರ ಮನೆಯ ಹೊರಗೆ ಉದ್ಯಮಿಯನ್ನು ಗುಂಡಿಕ್ಕಿ ಕೊಲ್ಲಲಾಯಿತು. ಸಿಂಗ್‌ ಹೊರಗೆ ಬರುವುದನ್ನೇ ಕಾದು ನಂತರ ಹತ್ಯೆ ಮಾಡಲಾಗಿದೆ.

    ಪೊಲೀಸರು ಸ್ಥಳಕ್ಕೆ ಬಂದಾಗ ಉದ್ಯಮಿ ಗಂಭೀರ ಸ್ಥಿತಿಯಲ್ಲಿದ್ದರು. ದರ್ಶನ್‌ ಸಿಂಗ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

  • ʻಒಂದ್‌ ಸಲ ಕಮಿಟ್‌ ಆದ್ರೆ ತನ್ನ ಮಾತ್‌ ತಾನೇ ಕೇಳಲ್ಲʼ – ಜಾಹೀರಾತಿನಿಂದ ಸಿಟ್ಟಿಗೆದ್ದ ಟ್ರಂಪ್‌, ಕೆನಡಾ ಮೇಲೆ ಹೆಚ್ಚುವರಿ 10% ಸುಂಕ

    ʻಒಂದ್‌ ಸಲ ಕಮಿಟ್‌ ಆದ್ರೆ ತನ್ನ ಮಾತ್‌ ತಾನೇ ಕೇಳಲ್ಲʼ – ಜಾಹೀರಾತಿನಿಂದ ಸಿಟ್ಟಿಗೆದ್ದ ಟ್ರಂಪ್‌, ಕೆನಡಾ ಮೇಲೆ ಹೆಚ್ಚುವರಿ 10% ಸುಂಕ

    ವಾಷಿಂಗ್ಟನ್‌/ಒಟ್ಟಾವ: ಕೆನಾಡದ ಆಮದುಗಳ ಮೇಲೆ 10% ಹೆಚ್ಚುವರಿ ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಘೋಷಣೆ ಮಾಡಿದ್ದಾರೆ.

    MLB ವಿಶ್ವ ಸರಣಿಯ ಮೊದಲ ಪಂದ್ಯದಲ್ಲಿ ಒಂಟಾರಿಯೋ (Ontario) ಸರ್ಕಾರ 75 ದಶಲಕ್ಷ ಡಾಲರ್‌ (USD)‌ ವ್ಯಯಿಸಿ ಟಿವಿ ಜಾಹೀರಾತು ಪ್ರಕಟಿಸಿತ್ತು. ಟ್ರಂಪ್‌ ಅವರು ಒಮ್ಮೆ ದೃಢನಿಶ್ಚಯ ಮಾಡಿದ್ರೆ ಅದನ್ನು ಮಾಡೇ ಮಾಡುತ್ತಾರೆ, ತನ್ನ ಮಾತನ್ನ ತಾನೇ ಕೇಳಲ್ಲ ಅಂತ ಜಾಹೀರಾತು ಪ್ರಸಾರ ಮಾಡಿತ್ತು. ಇದರಿಂದ ಸಿಟ್ಟಿಗೆದ್ದ ಟ್ರಂಪ್‌ ಕೆನಡಾ ಮೇಲೆ ಹೆಚ್ಚುವರಿ ಸುಂಕ ವಿಧಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ.

    ಕೆನಾಡದ ಮೇಲಿನ ಒಟ್ಟು ಸುಂಕ 45% ಗೆ ಏರಿಕೆಯಾಗಿದೆ. ಕೆನಡಾ (Canada) ಮೇಲಿನ ಸುಂಕ ಏರಿಕೆಯು ವ್ಯಾಪಾರ ಉದ್ವಿಗ್ನತೆಗೆ ಕಾರಣವಾಗಲಿದೆ. ಏಕೆಂದರೆ ಕೆನಡಾ ಅಮೆರಿಕದ ಎರಡನೇ ಅತಿದೊಡ್ಡ ವ್ಯಾಪಾರ ಪಾಲುದಾರನಾಗಿದೆ.

    ಕೆನಡಾ ಸರ್ಕಾರ ನೀಡಿದ ಜಾಹೀರಾತಿನಲ್ಲಿ ಮಾಜಿ ಅಧ್ಯಕ್ಷ ಮತ್ತು ರಿಪಬ್ಲಿಕನ್ ಐಕಾನ್ ರೊನಾಲ್ಡ್ ರೇಗನ್ ಅವರ ವೀಡಿಯೊ ಕ್ಲಿಪ್ ಇತ್ತು. ಅದರಲ್ಲಿ ಸುಂಕದ ಕ್ರಮವು ವ್ಯಾಪಾರ ಯುದ್ಧ ಮತ್ತು ಆರ್ಥಿಕ ಬಿಕ್ಕಟ್ಟುಗಳಿಗೆ ಕಾರಣವಾಗುತ್ತವೆ ಎಂದು ಹೇಳಿದ್ದರು. ಈ ಜಾಹೀರಾತನ್ನು ಟ್ರಂಪ್‌ ಟೀಕಿಸಿದ್ದರು. ಇದು ಸುಳ್ಳು ಮತ್ತು ದಾರಿತಪ್ಪಿಸುವ ಜಾಹೀರಾತು ಎಂದು ಅಸಮಾಧಾನ ಹೊರಹಾಕಿದ್ದರು. ಈ ಬೆನ್ನಲ್ಲೇ ಸುಂಕ ಹೆಚ್ಚಿಸುವ ಕ್ರಮ ಕೈಗೊಂಡಿದ್ದಾರೆ ಈ ಕುರಿತು ತಮ್ಮ ಸೋಷಿಯಲ್‌ ಮೀಡಿಯಾ ವೇದಿಕೆ ಟ್ರುತ್‌ ಔಟ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

    ಇನ್ನೂ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಶುಕ್ರವಾರ ಅಮೆರಿಕದೊಂದಿಗೆ ವ್ಯಾಪಾರ ಮಾತುಕತೆಗಳನ್ನು ಪುನರಾರಂಭಿಸಲು ಸಿದ್ಧ ಎಂದು ಹೇಳಿದ್ದರು. ಆದ್ರೆ ಶ್ವೇತಭವನ, ಯುಎಸ್ ವಾಣಿಜ್ಯ ಇಲಾಖೆ ಅಥವಾ ಕಾರ್ನಿ ಕಚೇರಿಯಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.

    ಕೆನಡಾಕ್ಕೆ ಸುಂಕದ ಬರೆ
    ಕೆನಡಾ ಸರಕುಗಳ ಮೇಲೆ ಅಮೆರಿಕ ಕಳೆದ ಮಾರ್ಚ್‌ನಲ್ಲಿ 25% ಇದ್ದ ಸುಂಕದ ಪ್ರಮಾಣವನ್ನ 30%ಗೆ ಏರಿಕೆ ಮಾಡಿತ್ತು. ಇದೀಗ 10% ಹೆಚ್ಚಿಗೆ ಮಾಡಿದ್ದು, 45%ಗೆ ತಲುಪಿದೆ.

  • ಕೆನಡಾದಲ್ಲಿ ನಟ ಕಪಿಲ್ ಶರ್ಮಾ ಕೆಫೆ ಮೇಲೆ 3ನೇ ಬಾರಿ ಗುಂಡಿನ ದಾಳಿ

    ಕೆನಡಾದಲ್ಲಿ ನಟ ಕಪಿಲ್ ಶರ್ಮಾ ಕೆಫೆ ಮೇಲೆ 3ನೇ ಬಾರಿ ಗುಂಡಿನ ದಾಳಿ

    ಒಟ್ಟಾವಾ: ಕೆನಡಾದಲ್ಲಿರುವ (Canada) ನಟ ಕಪಿಲ್ ಶರ್ಮಾ (Kapil Sharma) ಕೆಫೆ ಮೇಲೆ ಮೂರನೇ ಬಾರಿ ಗುಂಡಿನ ದಾಳಿ ನಡೆದಿದೆ.

    ಗುರುವಾರ (ಅ.16) ಕೆನಡಾದ ಸರ್ರೆಯಲ್ಲಿರುವ ಕೆಫೆ ಮೇಲೆ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ.ಇದನ್ನೂ ಓದಿ:ಬೆಂಗಳೂರಲ್ಲಿ ಬೀದಿ ನಾಯಿ ಮೇಲೆ ಗ್ಯಾಂಗ್‌ ರೇಪ್‌; ನಶೆಯಲ್ಲಿದ್ದ ಕಾಮುಕರಿಂದ ಪೈಶಾಚಿಕ ಕೃತ್ಯ

    ಸಾಮಾಜಿಕ ಜಾಲತಾಣದಲ್ಲಿ ಗುಂಡಿನ ದಾಳಿಯ ವಿಡಿಯೋ ವೈರಲ್ ಆಗಿದ್ದು, ವ್ಯಕ್ತಿಯೋರ್ವ ಕಾರಿನ ಕಿಟಕಿಯಿಂದ ಕೈ ಹೊರಗೆ ಹಾಕಿ ಹ್ಯಾಂಡ್‌ಗನ್‌ನಿಂದ ಗುಂಡು ಹಾರಿಸಿರುವುದು ಕಂಡುಬಂದಿದೆ. ಹಾರಿಸಿದ ಗುಂಡುಗಳು ಕೆಫೆಯ ಕಿಟಿಕಿ ಹಾಗೂ ಗೋಡೆಗೆ ತಾಗಿದೆ. ಗುಂಡಿನ ದಾಳಿ ನಡೆದ ಸಮಯದಲ್ಲಿ ಕೆಫೆಯೊಳಗೆ ಸಿಬ್ಬಂದಿಯಿದ್ದರು ಎಂದು ತಿಳಿದುಬಂದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

    ಸದ್ಯ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನ (Lawrence Bishnoi Gang) ಸಹಚರರಾದ ಕುಲ್ವೀರ್ ಸಿಧು ಮತ್ತು ಗೋಲ್ಡಿ ಧಿಲ್ಲೋನ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡು ದಾಳಿಯ ಹೊಣೆ ಹೊತ್ತಿದ್ದಾರೆ.

    ನಮಗೆ ಸಾರ್ವಜನಿಕರ ವಿರುದ್ಧ ಯಾವುದೇ ದ್ವೇಷವಿಲ್ಲ. ಆದರೆ ನಮಗೆ ಮೋಸ ಮಾಡುವವರಿಗೆ ನಾವು ಎಚ್ಚರಿಕೆ ನೀಡುತ್ತೇವೆ. ಗುಂಡು ಎಲ್ಲಿಂದಾದರೂ ಬರಬಹುದು ನಮ್ಮ ಧರ್ಮದ ವಿರುದ್ಧ ಮಾತನಾಡುವ ಬಾಲಿವುಡ್ ವ್ಯಕ್ತಿಗಳು ಕೂಡ ಸಿದ್ಧರಾಗಿರಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

    ಇದಕ್ಕೂ ಮುನ್ನ ಎರಡು ಬಾರೀ ಕಪಿಲ್ ಶರ್ಮಾ ಕೆಫೆ ಮೇಲೆ ಗುಂಡಿನ ದಾಳಿ ನಡೆದಿತ್ತು. ಜು.9ರಂದು ಮೊದಲ ಬಾರೀ ಗುಂಡಿನ ದಾಳಿ ನಡೆದಾಗ ಜರ್ಮನಿ ಮೂಲದ ಬಿಕೆಐ ಉಗ್ರಗಾಮಿ ಹರ್ಜಿತ್ ಸಿಂಗ್ ಹಾಗೂ ಆ.7ಎಂದು ಎರಡನೇ ಬಾರೀ ನಡೆದಾಗ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನ ಹೊಣೆ ಹೊತ್ತುಕೊಂಡಿತ್ತು.ಇದನ್ನೂ ಓದಿ: ವೈದ್ಯೆ ಕೃತಿಕಾ ಹತ್ಯೆ ಕೇಸ್ – 11 ತಿಂಗಳಿಂದ ಪತ್ನಿ ಹತ್ಯೆಗೆ ಸ್ಕೆಚ್ ಹಾಕಿದ್ದ ಕಿಲ್ಲರ್ ಪತಿ

  • ಕೆನಡಾದ ಮೂರು ಕಡೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‍ನಿಂದ ಗುಂಡಿನ ದಾಳಿ – ವೀಡಿಯೋ ವೈರಲ್

    ಕೆನಡಾದ ಮೂರು ಕಡೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‍ನಿಂದ ಗುಂಡಿನ ದಾಳಿ – ವೀಡಿಯೋ ವೈರಲ್

    ಒಟ್ಟಾವಾ: ಕೆನಡಾದಲ್ಲಿ (Canada) ಮೂರು ಕಡೆ ನಡೆದ ಗುಂಡಿನ ದಾಳಿಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ (Lawrence Bishnoi) ಗ್ಯಾಂಗ್‍ ಹೊತ್ತುಕೊಂಡಿದೆ. ದಾಳಿಯ ವೀಡಿಯೋ ವೈರಲ್ ಆಗಿದೆ. ಇನ್ನೂ ದಾಳಿಗೆ ಕಾರಣ ಏನು ಎಂಬುದರ ಬಗ್ಗೆ ಗ್ಯಾಂಗ್‌ನ ಸದಸ್ಯ ಫತೇ ಪೋರ್ಚುಗಲ್‌ (Fateh Portugal) ವೀಡಿಯೋವೊಂದನ್ನು ಹರಿ ಬಿಟ್ಟಿದ್ದಾನೆ.

    ವೈರಲ್‌ ಆಗಿರುವ ವೀಡಿಯೋದಲ್ಲಿ ಶೂಟರ್‌ಗಳು ಸುಧಾರಿತ ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ಗುಂಡು ಹಾರಿಸುತ್ತಿರುವುದು ಸೆರೆಯಾಗಿದೆ. ಇನ್ನೂ ದಾಳಿಗೆ ಕಾರಣವನ್ನು ಫತೇ ಪೋರ್ಚುಗಲ್‌ ವಿವರಿಸಿದ್ದು, ನವಿ ಟೆಶಿ ಎಂಬ ವ್ಯಕ್ತಿ ಲಾರೆನ್ಸ್ ಬಿಷ್ಣೋಯ್ ಹೆಸರು ಬಳಸಿಕೊಂಡು ಜನರಿಂದ ಹಣ ವಸೂಲಿ ಮಾಡಿದ್ದೇ ದಾಳಿಗೆ ಕಾರಣ ಎಂದು ಹೇಳಿದ್ದಾನೆ. ಇದನ್ನೂ ಓದಿ: ಬಿಷ್ಣೋಯ್ ಹೆಸರಲ್ಲಿ ಬೆದರಿಕೆ ಹಾಕಿ ಒಂದು ಕೋಟಿಗೆ ಡಿಮ್ಯಾಂಡ್ – ತಿಹಾರ್‌ ಜೈಲಲ್ಲಿ ಫ್ರೆಂಡ್ಸ್‌ ಆಗಿದ್ದ ಗ್ಯಾಂಗ್‌ ಅಂದರ್‌!

    ನವಿ ಟೆಶಿ ಎಂಬಾತ ಗಾಯಕರಿಂದ 50 ಲಕ್ಷ ರೂ. ಸುಲಿಗೆ ಮಾಡಿದ್ದಾನೆ. ಇದೇ ಕಾರಣಕ್ಕೆ ನಾವು ಆತನ ಬೆನ್ನುಬಿದ್ದಿದ್ದೇವೆ. ನಮಗೆ ಕಷ್ಟಪಟ್ಟು ದುಡಿಯುವ ಜನರೊಂದಿಗೆ ದ್ವೇಷವಿಲ್ಲ. ಪ್ರಾಮಾಣಿಕ ಕೆಲಸದ ಮೂಲಕ ಜೀವನ ಸಾಗಿಸುವವರು ಮತ್ತು ನಮ್ಮ ಯುವಕರನ್ನು ಗೌರವಿಸುವವರೊಂದಿಗೆ ನಮಗೆ ಯಾವುದೇ ತಕರಾರಿಲ್ಲ.

    ನಮ್ಮ ವಿರುದ್ಧ ಯಾರಾದರೂ ಸುಳ್ಳು ಸುದ್ದಿಗಳನ್ನು ಹರಡಿದರೆ ಅವರ ಜೀವ ಅಥವಾ ವ್ಯವಹಾರಗಳಿಗೆ ಉಂಟಾಗುವ ಹಾನಿಯ ಜವಾಬ್ದಾರಿ ಅವರದ್ದೇ ಆಗಿರುತ್ತದೆ. ನಮ್ಮ ನೀತಿ ತಪ್ಪಾಗಿ ಕಾಣಿಸಬಹುದು, ನಮ್ಮ ಉದ್ದೇಶ ತಪ್ಪಲ್ಲ ಎಂದು ಫತೇ ಪೋರ್ಚುಗಲ್‌ ವೀಡಿಯೋದಲ್ಲಿ ಹೇಳಿಕೊಂಡಿದ್ದಾನೆ.

    ಇತ್ತೀಚೆಗೆ ಕೆನಡಾ ಸರ್ಕಾರ ಬಿಷ್ಣೋಯ್ ಗ್ಯಾಂಗ್‌ನ್ನು ಭಯೋತ್ಪಾದಕ ಸಂಘಟನೆ ಪಟ್ಟಿಗೆ ಸೇರಿಸಿತ್ತು. ಇದನ್ನೂ ಓದಿ: ಭದ್ರತೆಗೆ ಹೊಸ ಬುಲೆಟ್‌ ಪ್ರೂಫ್‌ ಕಾರು ಖರೀದಿಸಿದ ಸಲ್ಮಾನ್ ಖಾನ್

  • ಅಮೆರಿಕ ವಿರೋಧದ ನಡ್ವೆ ಪ್ಯಾಲೆಸ್ಟೀನ್‌ಗೆ ದೇಶದ ಮಾನ್ಯತೆ ನೀಡಲು ಬ್ರಿಟನ್ ಸಿದ್ಧತೆ

    ಅಮೆರಿಕ ವಿರೋಧದ ನಡ್ವೆ ಪ್ಯಾಲೆಸ್ಟೀನ್‌ಗೆ ದೇಶದ ಮಾನ್ಯತೆ ನೀಡಲು ಬ್ರಿಟನ್ ಸಿದ್ಧತೆ

    ಲಂಡನ್: ಅಮೆರಿಕದ (USA) ತೀವ್ರ ವಿರೋಧದ ನಡುವೆಯೂ ಬ್ರಿಟನ್ ಸರ್ಕಾರವು ಪ್ಯಾಲೆಸ್ಟೀನ್‌ಗೆ (Palestine) ದೇಶದ ಮಾನ್ಯತೆ ನೀಡಲು ಮುಂದಾಗಿದೆ.

    ಗಾಜಾದಲ್ಲಿ ನಡೆಸುತ್ತಿರುವ ಯುದ್ಧ ಸಂಬಂಧ ಬ್ರಿಟನ್ ಸರ್ಕಾರ ಇಸ್ರೇಲ್‌ಗೆ (Israel) ಕೆಲ ನಿಬಂಧನೆ ವಿಧಿಸಿತ್ತು. ಆದ್ರೆ ಇಸ್ರೇಲ್‌ ನಿಬಂಧನೆ ಪಾಲಿಸದ ಹಿನ್ನೆಲೆ ಬ್ರಿಟನ್‌ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಗಾಜಾ ಮೇಲೆ ಇಸ್ರೇಲ್‌ ದಾಳಿ – ಒಂದೇ ದಿನ 91 ಮಂದಿ ಸಾವು

    ಸೋಮವಾರದಿಂದ (ಸೆ.22) ವಿಶ್ವಸಂಸ್ಥೆಯ (United Nations) 80ನೇ ಸಾಮಾನ್ಯ ಸಭೆ ಆರಂಭವಾಗಲಿದೆ. ಗಾಜಾದಲ್ಲಿ ನಡೆಯುತ್ತಿರುವ ಯುದ್ಧ, ಪ್ಯಾಲೆಸ್ಟೀನ್‌ಗೆ ದೇಶದ ಮಾನ್ಯತೆ ನೀಡುವ ಕುರಿತು ಸಭೆಯಲ್ಲಿ ಪ್ರಮುಖವಾಗಿ ಚರ್ಚೆ ನಡೆಯಲಿದೆ. ಅದಕ್ಕೂ ಮುನ್ನ ಬ್ರಿಟನ್, ಫ್ರಾನ್ಸ್, ಕೆನಡಾ, ಆಸ್ಟ್ರೇಲಿಯಾ, ಪೋರ್ಚುಗಲ್ ಸೇರಿದಂತೆ ಸುಮಾರು 140 ದೇಶಗಳು ಪ್ಯಾಲೆಸ್ಟೀನ್ ಅನ್ನು ಪ್ರತ್ಯೇಕ ದೇಶವನ್ನಾಗಿ ಪರಿಗಣಿಸಲು ಮುಂದಾಗಿವೆ. ಇದನ್ನೂ ಓದಿ: H1B ವೀಸಾಕ್ಕೆ ಮೊದಲು ಎಷ್ಟು ಶುಲ್ಕ ಇತ್ತು? ಟ್ರಂಪ್‌ ನಿರ್ಧಾರ ಭಾರತಕ್ಕೆ ಲಾಭವೋ? ನಷ್ಟವೋ?

    ಇದೊಂದು ಸಾಂಕೇತಿಕ ನಡೆಯಾಗಲಿದೆಯಾದರೂ ಯುದ್ಧ ನಿಲ್ಲಿಸಲು ಇಸ್ರೇಲ್ ಮೇಲೆ ಈ ನಿರ್ಧಾರವು ರಾಜತಾಂತ್ರಿಕ ಒತ್ತಡವನ್ನು ಮತ್ತಷ್ಟು ಹೆಚ್ಚಿಸಬಹುದು. ಇದರಿಂದ ಗಾಜಾದಲ್ಲಿ ಶಾಂತಿ ನೆಲಸಬಹುದು ಎಂದು ಬ್ರಿಟನ್ ಆಶಿಸಿದೆ. ಫ್ರಾನ್ಸ್ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ನಿರ್ಧಾರವನ್ನು ಇಸ್ರೇಲ್‌ನಲ್ಲಿರುವ ಶಾಂತಿಪರ ಹೋರಾಟಗಾರರು ಸ್ವಾಗತಿಸಿದ್ದಾರೆ. ಇದನ್ನೂ ಓದಿ: H-1B ವೀಸಾ ಶುಲ್ಕ ಹೊಸ ಅರ್ಜಿದಾರರಿಗೆ ಮಾತ್ರ- ಒಂದು ಬಾರಿ ಪಾವತಿಸಬೇಕು: ಅಮೆರಿಕ ಸರ್ಕಾರ

    ಈ ಬೆಳವಣಿಗೆ ನಡುವೆಯೇ ಗಾಜಾ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಒಂದೇ ದಿನ 91 ಸಾವು ಸಾವನ್ನಪ್ಪಿದ್ದಾರೆ. ಇದರಿಂದ ಟೆಲ್ ಅವೀವ್‌ನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಗಾಜಾದ ಅತಿದೊಡ್ಡ ನಗರ ಕೇಂದ್ರವನ್ನು ವಶಪಡಿಸಿಕೊಳ್ಳಲು ವಾಯು ಮತ್ತು ಭೂಸೇನಾ ಕಾರ್ಯಾಚರಣೆ ತೀವ್ರಗೊಳಿಸಲಾಗಿತ್ತು. ಇಸ್ರೇಲಿ ಪಡೆಗಳು ಒಂದೇ ದಿನದಲ್ಲಿ ಗಾಜಾದಲ್ಲಿ 91 ಪ್ಯಾಲೆಸ್ಟೀನಿಯನ್ನರನ್ನು ಹತ್ಯೆ ಮಾಡಿವೆ. ಪ್ರಮುಖ ವೈದ್ಯರ ಕುಟುಂಬ ಸದಸ್ಯರು ಮತ್ತು ಉತ್ತರ ಗಾಜಾ ನಗರದ ಹಲವಾರು ಜನರು ಮೃತಪಟ್ಟಿದ್ದಾರೆ ಎಂದು ಅಲ್ ಜಜೀರಾ ವರದಿ ಮಾಡಿದೆ.

  • ರೋಗಿ ಜೊತೆ ಸೆಕ್ಸ್ – ಕೆನಡಾದಲ್ಲಿ ಭಾರತ ಮೂಲದ ವೈದ್ಯೆಯ ಮೆಡಿಕಲ್ ಲೈಸೆನ್ಸ್ ಅಮಾನತು

    ರೋಗಿ ಜೊತೆ ಸೆಕ್ಸ್ – ಕೆನಡಾದಲ್ಲಿ ಭಾರತ ಮೂಲದ ವೈದ್ಯೆಯ ಮೆಡಿಕಲ್ ಲೈಸೆನ್ಸ್ ಅಮಾನತು

    ಒಟ್ಟೋವಾ: ಕೆನಡಾದಲ್ಲಿ (Canada) ರೋಗಿ ಜೊತೆ ಸೆಕ್ಸ್‌ ಮಾಡಿದ ಆರೋಪದಲ್ಲಿ ಭಾರತೀಯ ಮೂಲದ ವೈದ್ಯೆಯ ಮೆಡಿಕಲ್‌ ಲೈಸೆನ್ಸ್‌ ಅಮಾನತುಗೊಳಿಸಲಾಗಿದೆ.

    ವೈದ್ಯೆ ಸುಮನ್ ಖುಲ್ಬೆ, ಪುರುಷ ರೋಗಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿದ್ದಾರೆ. ಅಲ್ಲದೇ, ಇನ್ನಿಬ್ಬರೊಂದಿಗೆ ವೃತ್ತಿಪರವಲ್ಲದ ರೀತಿ ವರ್ತಿಸಿದ್ದಾರೆ. ಹೀಗಾಗಿ, ವೈದ್ಯೆ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಇದನ್ನೂ ಓದಿ: ನೇಪಾಳ ದಂಗೆ | Gen-Z ನಲ್ಲಿ ಬಿರುಕು – ಮಧ್ಯಂತರ ಪ್ರಧಾನಿ ಹುದ್ದೆಗೆ ಸುಶೀಲಾ ಕರ್ಕಿ Vs ಕುಲ್ಮನ್ ನಡ್ವೆ ಫೈಟ್‌

    ವೈದ್ಯೆಯ ನಡವಳಿಕೆಯನ್ನು ತನಿಖಾ ಸಮಿತಿ ಪರಿಶೀಲಿಸಿದೆ. ಖುಲ್ಬೆ ತನ್ನ ರೋಗಿಗಳನ್ನು ರೋಗಿಗಳಂತೆ ಕಾಣಲಿಲ್ಲ. ತನ್ನ ಸ್ನೇಹಿತರು, ಪಾರ್ಟ್ನರ್‌ ರೀತಿ ನಡೆಸಿಕೊಂಡಿದ್ದಾರೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.

    ಒಂಟಾರಿಯೊದ ವೈದ್ಯರು ಮತ್ತು ಶಸ್ತ್ರಚಿಕಿತ್ಸಕರ ಕಾಲೇಜು, ವೈದ್ಯರು ಮತ್ತು ರೋಗಿಯ ನಡುವಿನ ಲೈಂಗಿಕ ಸಂಪರ್ಕವನ್ನು ಅಪರಾಧ ಎಂದೇ ಪರಿಗಣಿಸುತ್ತದೆ. ತಪ್ಪಿತಸ್ಥರ ಮೇಲೆ ಯಾವುದೇ ಸಹಿಷ್ಣುತೆ ಇರುವುದಿಲ್ಲ. ಇದನ್ನೂ ಓದಿ: ʻತುಂಬಾ ಅಪಾಯಕಾರಿʼ ದೂರವಿರಿ – ರಷ್ಯಾ ಸೇನೆ ಸೇರುತ್ತಿರುವ ಭಾರತೀಯರಿಗೆ MEA ವಾರ್ನಿಂಗ್‌

  • ಸಲ್ಮಾನ್ ಖಾನ್‌ನ್ನು ಆಹ್ವಾನಿಸಿದ್ದಕ್ಕೆ ಕಪಿಲ್ ಶರ್ಮಾ ಕೆಫೆ ಮೇಲೆ ಶೂಟೌಟ್ – ಬಿಷ್ಣೋಯ್ ಗ್ಯಾಂಗ್‌ನದ್ದೇ ಎನ್ನಲಾದ ಆಡಿಯೋ ವೈರಲ್

    ಸಲ್ಮಾನ್ ಖಾನ್‌ನ್ನು ಆಹ್ವಾನಿಸಿದ್ದಕ್ಕೆ ಕಪಿಲ್ ಶರ್ಮಾ ಕೆಫೆ ಮೇಲೆ ಶೂಟೌಟ್ – ಬಿಷ್ಣೋಯ್ ಗ್ಯಾಂಗ್‌ನದ್ದೇ ಎನ್ನಲಾದ ಆಡಿಯೋ ವೈರಲ್

    ಒಟ್ಟಾವಾ: ಹಾಸ್ಯ ನಟ ಕಪಿಲ್ ಶರ್ಮಾ (Kapil Sharma) ಅವರ ಕೆನಡಾದ (Canada) ಕೆಫೆ ಮೇಲೆ ಗುಂಡಿನ ದಾಳಿ ನಡೆದ ಬೆನ್ನಲ್ಲೇ ಆಡಿಯೋವೊಂದು ವೈರಲ್ ಆಗಿದೆ. ಬಿಷ್ಣೋಯ್ ಗ್ಯಾಂಗ್‌ನ (Bishnoi Gang) ಹ್ಯಾರಿ ಬಾಕ್ಸರ್ ಎಂಬಾತನ ಆಡಿಯೋ ಇದಾಗಿದ್ದು, ನಟ ಸಲ್ಮಾನ್ ಖಾನ್‌ನ್ನು (Salman Khan) ಕೆಫೆ ಉದ್ಘಾಟನೆಗೆ ಆಹ್ವಾನಿಸಿದಕ್ಕಾಗಿ ಶೂಟೌಟ್ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

    ವೈರಲ್ ಆದ ಆಡಿಯೋದಲ್ಲಿ, ಕಪಿಲ್ ಶರ್ಮಾ ತಮ್ಮ ಕೆಫೆ ಉದ್ಘಾಟನೆಗೆ ಸಲ್ಮಾನ್ ಖಾನ್ ಅವರನ್ನು ಆಹ್ವಾನಿಸಿದ್ದಕ್ಕಾಗಿ ಗುಂಡಿನ ದಾಳಿ ನಡೆಸಲಾಗಿದೆ. ಅದಲ್ಲದೇ ಸಲ್ಮಾನ್ ಖಾನ್ ಜೊತೆಗೆ ಕೆಲಸ ಮಾಡುವ ಯಾವುದೇ ನಿರ್ದೇಶಕ, ನಿರ್ಮಾಪಕ ಅಥವಾ ಕಲಾವಿದರ ಎದೆಗೆ ಗುಂಡು ಹಾರಿಸುತ್ತೇವೆ. ನಾವು ಯಾರನ್ನೂ ಬಿಡುವುದಿಲ್ಲ. ಸಲ್ಮಾನ್ ಖಾನ್ ಜೊತೆ ಇರುವವರನ್ನು ಕೊಲ್ಲಲು ನಾವು ಯಾವ ಹಂತಕ್ಕೆ ಬೇಕಾದರೂ ಹೋಗುತ್ತೇವೆ. ನೆನಪಿರಲಿ, ನಿಮ್ಮ ಸಾವಿಗೆ ನೀವೇ ಕಾರಣರಾಗುತ್ತೀರಿ ಎಂದು ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ:ಚುನಾವಣಾ ಆಯೋಗ ಬಿಜೆಪಿಯ ಬ್ರ್ಯಾಂಚ್‌ ಆಫೀಸ್‌: ಸಿದ್ದರಾಮಯ್ಯ

    ಆ.7ರಂದು ಬೆಳಗಿನ ಜಾವ 4:30ರ ಸುಮಾರಿಗೆ ಅಪರಿಚಿತ ವ್ಯಕ್ತಿಗಳು ಬಂದು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ 9 ರಿಂದ 10 ಗುಂಡುಗಳು ಕೆಫೆಯ ಗೋಡೆಗೆ ಹಾಗೂ ಕಿಟಿಕಿಗಳಿಗೆ ತಾಗಿವೆ. ಗುಂಡಿನ ಸದ್ದು ಕೇಳಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ ಕಪಿಲ್ ಶರ್ಮಾ ಕೆಫೆಯ ನಡೆದ ಎರಡನೇ ದಾಳಿ ಇದಾಗಿದೆ. ಸದ್ಯ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ಗೋಲ್ಡಿ ಧಿಲ್ಲೋನ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಗುಂಡಿನ ದಾಳಿಯ ಹೊಣೆ ಹೊತ್ತುಕೊಂಡಿದ್ದಾನೆ.

    ಜೂ.21ರಂದು ನೆಟ್‌ಫ್ಲಿಕ್ಸ್‌ನಲ್ಲಿ  ಪ್ರದರ್ಶನಗೊಂಡಿದ್ದ `ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ನ ಸೀಸನ್-3ರ ಮೊದಲ ಎಪಿಸೋಡ್‌ನಲ್ಲಿ ಸಲ್ಮಾನ್ ಕಾಣಿಸಿಕೊಂಡಿದ್ದರು. ಕೆಫೆ ಉದ್ಘಾಟನೆಗಾಗಿ ಸಲ್ಮಾನ್ ಖಾನ್ ಅವರನ್ನು ಕಪಿಲ್ ಆಹ್ವಾನಿಸಿದ್ದರು. ಇದರ ಬೆನ್ನಲ್ಲೇ ಜು.10ರಂದು ಕೆಫೆ ಮೇಲೆ ಗುಂಡಿನ ದಾಳಿ ನಡೆದಿತ್ತು. ಆ ಸಮಯದಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ಜೀತ್ ಸಿಂಗ್ ಲಡ್ಡಿ ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದ.ಇದನ್ನೂ ಓದಿ: ಒಂದು ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ 9 ಕೋಟಿ ಹಣ ಕಳೆದುಕೊಂಡ 80ರ ವೃದ್ಧ

  • ಕೆನಡಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ಗುಂಡೇಟಿಗೆ ಬಲಿ – ವ್ಯಕ್ತಿ ಬಂಧನ

    ಕೆನಡಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ಗುಂಡೇಟಿಗೆ ಬಲಿ – ವ್ಯಕ್ತಿ ಬಂಧನ

    ಒಟ್ಟಾವಾ: ಕೆನಡಾದಲ್ಲಿ 21 ವರ್ಷದ ಭಾರತೀಯ ಮೂಲದ ವಿದ್ಯಾರ್ಥಿನಿ ಗುಂಡೇಟಿನಿಂದ ಸಾವನ್ನಪ್ಪಿದ ಪ್ರಕರಣದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

    ಭಾರತೀಯ ವಿದ್ಯಾರ್ಥಿನಿ ಹರ್ಸಿಮ್ರತ್ ರಾಂಧವಾ ಗುಂಡೇಟಿನಿಂದ ಸಾವನ್ನಪ್ಪಿದ್ದರು. ಪ್ರಕರಣದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಪ್ರಥಮ ದರ್ಜೆ ಕೊಲೆ ಆರೋಪ ಹೊರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಒಂಟಾರಿಯೊದ ನಯಾಗರಾ ಜಲಪಾತದಲ್ಲಿ ಜೆರ್ಡೈನ್ ಫೋಸ್ಟರ್ (32) ಎಂಬಾತನನ್ನು ಬಂಧಿಸಿದ ಹ್ಯಾಮಿಲ್ಟನ್ ಪೊಲೀಸರು, ಆತನ ಮೇಲೆ ಮೂರು ಕೊಲೆ ಯತ್ನದ ಆರೋಪ ಹೊರಿಸಿದ್ದಾರೆ ಎಂದು ಆಕ್ಟಿಂಗ್ ಡೆಟೆಕ್ಟಿವ್-ಸಾರ್ಜೆಂಟ್ ಡ್ಯಾರಿಲ್ ರೀಡ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

    ಮೊಹಾಕ್ ಕಾಲೇಜಿನಲ್ಲಿ ಫಿಸಿಯೋಥೆರಪಿ ಕೋರ್ಸ್‌ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ರಾಂಧವಾ, ಏಪ್ರಿಲ್ 17 ರಂದು ಅಪ್ಪರ್ ಜೇಮ್ಸ್ ಸ್ಟ್ರೀಟ್ ಮತ್ತು ಸೌತ್ ಬೆಂಡ್ ರಸ್ತೆಯ ಡಿವೈಡರ್‌ನಲ್ಲಿ ಬಸ್ ನಿಲ್ದಾಣದ ಬಳಿ ನಿಂತಿದ್ದಳು. ಈ ವೇಳೆ, ಗುಂಡೇಟಿನಿಂದ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಳು.

    ನಾಲ್ಕು ಕಾರುಗಳಲ್ಲಿದ್ದ ಏಳು ಮಂದಿ ಪರಸ್ಪರ ಜಗಳಕ್ಕಿಳಿದಿದ್ದರು. ಈ ವೇಳೆ ಪರಸ್ಪರರ ನಡುವೆ ಗುಂಡಿನ ದಾಳಿ ನಡೆಯಿತು. ಆಗ ತಪ್ಪಿ ಬಂದ ಗುಂಡೊಂದು ವಿದ್ಯಾರ್ಥಿನಿಗೆ ತಗುಲಿತ್ತು. ತನಿಖೆ ಮುಂದುವರೆದಿದ್ದು, ಈ ಸಾವಿಗೆ ಕಾರಣರಾದ ಎಲ್ಲಾ ಆರೋಪಿಗಳನ್ನೂ ಗುರುತಿಸಲಾಗಿದೆ.

  • ಕೆನಡಾ ಮೇಲೆ 35% ಸುಂಕ ವಿಧಿಸಿದ ಟ್ರಂಪ್ – ಪ್ರತೀಕಾರಕ್ಕೆ ಮುಂದ್ರಾದ್ರೆ ಇನ್ನಷ್ಟು ಸುಂಕ ವಿಧಿಸುವುದಾಗಿ ವಾರ್ನಿಂಗ್‌

    ಕೆನಡಾ ಮೇಲೆ 35% ಸುಂಕ ವಿಧಿಸಿದ ಟ್ರಂಪ್ – ಪ್ರತೀಕಾರಕ್ಕೆ ಮುಂದ್ರಾದ್ರೆ ಇನ್ನಷ್ಟು ಸುಂಕ ವಿಧಿಸುವುದಾಗಿ ವಾರ್ನಿಂಗ್‌

    ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸುಂಕ ಸಮರ (Tariffs War) ಮತ್ತೆ ಮುಂದುವರಿದಿದೆ. ಮುಂದಿನ ತಿಂಗಳು ಕೆನಡಾದಿಂದ (Canada) ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ 35% ರಷ್ಟು ಸುಂಕ ವಿಧಿಸುವುದಾಗಿ ಟ್ರಂಪ್ (Donald trump) ಘೋಷಣೆ ಮಾಡಿದ್ದಾರೆ. ಅಲ್ಲದೇ ಇತರ ಹೆಚ್ಚಿನ ವ್ಯಾಪಾರ ಪಾಲುದಾರರ ಮೇಲೆ 15 ರಿಂದ 20% ಸಂಪೂರ್ಣ ಸುಂಕ ವಿಧಿಸಲು ಯೋಜಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

    ಈ ಕುರಿತ ಪತ್ರವನ್ನು ಟ್ರಂಪ್‌ ತಮ್ಮ ಸೋಷಿಯಲ್‌ ಮೀಡಿಯಾ ವೇದಿಕೆಯಲ್ಲಿ ಟ್ರೂತ್ ಸೋಶಿಯಲ್‌ನಲ್ಲಿ ಹಂಚಿಕೊಂಡಿದ್ದಾರೆ. ಬಿಡುಗಡೆ ಮಾಡಿದ ಪತ್ರದಲ್ಲಿ, ಟ್ರಂಪ್ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ (Mark Carney) ಅವರಿಗೆ ಹೊಸ ದರ ಆಗಸ್ಟ್ 1 ರಿಂದ ಜಾರಿಗೆ ಬರಲಿದೆ. ಹೊಸ ಸುಂಕವು (Tariff) ಅಮೆರಿಕಕ್ಕೆ ಪ್ರವೇಶಿಸುವ ಕೆನಡಾದ ಉತ್ಪನ್ನಗಳಿಗೆ ಅನ್ವಯಿಸುತ್ತದೆ ಎಂದು ತಿಳಿಸಿದ್ದಾರೆ. ಮುಂದುವರಿದು.. ಉಳಿದ ವ್ಯಾಪಾರ ಪಾಲುದಾರರ ಮೇಲೆ ಶೇ.15 ಅಥವಾ ಶೇ.20 ರಷ್ಟು ಸುಂಕ ವಿಧಿಸಲು ಯೋಜಿಸುತ್ತಿರುವುದಾಗಿ ಹೇಳಿದ್ದಾರೆ.

    ಸುಂಕ ಏರಿಕೆಗೆ ಕಾರಣವನ್ನೂ ಟ್ರಂಪ್‌ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಕೆನಡಾ ಪ್ರಮುಖ ವಿಷಯಗಳಲ್ಲಿ ಸಹಕರಿಸಲು ವಿಫಲವಾಗಿದೆ. ಈ ಕಾರಣದಿಂದಾಗಿ ಸುಂಕ ವಿಧಿಸಲಾಗುತ್ತಿದೆ. ಒಂದು ವೇಳೆ ಕೆನಡಾ ಪ್ರತೀಕಾರ ತೀರಿಸಿಕೊಳ್ಳಲು ಮುಂದಾದ್ರೆ ದುಪ್ಪಟ್ಟು ಸುಂಕ ವಿಧಿಸಿಸುವುದಾಗಿಯೂ ಬೆದರಿಕೆ ಹಾಕಿದ್ದಾರೆ.

    ಇಲ್ಲಿಯವರೆಗೆ, ಟ್ರಂಪ್ 22 ದೇಶಗಳಿಗೆ ಹೊಸ ಸುಂಕ ವಿಧಿಸುವ ಪತ್ರಗಳನ್ನು ಬಿಡುಗಡೆ ಮಾಡಿದ್ದಾರೆ. ಜಪಾನ್, ಸೌತ್ ಕೊರಿಯಾ, ಮಯನ್ಮಾರ್, ಲಾವೋಸ್, ಥಾಯ್ಲೆಂಡ್, ಸೌತ್ ಆಫ್ರಿಕಾ, ಬಾಂಗ್ಲಾದೇಶ, ಕಜಕಸ್ತಾನ್, ಇಂಡೋನೇಷ್ಯಾ, ಟುನಿಶಿಯಾ, ಮಲೇಷ್ಯಾ, ಸರ್ಬಿಯಾ, ಕಾಂಬೋಡಿಯಾ, ಬೋಸ್ನಿಯಾ ಹರ್ಜೆಗೊವಿನಾ ದೇಶಗಳಿಗೆ ಅಮೆರಿಕ ಹೊಸ ಆಮದು ಸುಂಕಗಳನ್ನು ಪ್ರಕಟಿಸಿದೆ. ಆಗಸ್ಟ್ 1ರಿಂದ ಇದು ಅಧಿಕೃತವಾಗಿ ಜಾರಿಗೆ ಬರಲಿದೆ. ಅಲ್ಲದೇ ಇದು ಷೇರು ಮಾರುಕಟ್ಟೆಯ ಮೇಲೂ ಪರಿಣಾಮ ಬೀರಿದೆ.

    (more…)

  • ಕಪಿಲ್‌ ಶರ್ಮಾ ಕೆಫೆ ಮೇಲೆ ಖಲಿಸ್ತಾನಿ ಭಯೋತ್ಪಾದಕರಿಂದ ಗುಂಡಿನ ದಾಳಿ

    ಕಪಿಲ್‌ ಶರ್ಮಾ ಕೆಫೆ ಮೇಲೆ ಖಲಿಸ್ತಾನಿ ಭಯೋತ್ಪಾದಕರಿಂದ ಗುಂಡಿನ ದಾಳಿ

    ಒಟ್ಟಾವಾ: ಕೆನಡಾದಲ್ಲಿ (Canada) ಹಾಸ್ಯನಟ ಕಪಿಲ್ ಶರ್ಮಾ (Kapil Sharma) ಅವರ ಕೆಫೆ ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ಅದರ ಮೇಲೆ ಖಲಿಸ್ತಾನ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ.

    ಖಲಿಸ್ತಾನಿ ಭಯೋತ್ಪಾದಕ (Khalistani Terrorists) ಹರ್ಜೀತ್ ಸಿಂಗ್ ಲಡ್ಡಿ ಗುಂಡಿನ ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದು, ಇದರಲ್ಲಿ ಯಾರಿಗೂ ಗಾಯಗಳಾಗಿಲ್ಲ. ಕೆಫೆ ಮೇಲೆ ಕನಿಷ್ಠ ಒಂಬತ್ತು ಗುಂಡುಗಳನ್ನು ಹಾರಿಸಲಾಗಿದೆ. ಇದನ್ನೂ ಓದಿ: ರಾಜಾಸಾಬ್ ವರ್ಸಸ್ ಧುರಂಧರ್ ಬಾಕ್ಸಾಫೀಸ್ ಕ್ಲ್ಯಾಶ್: ಸಂಜುಬಾಬ ಸ್ಫೋಟಕ ಹೇಳಿಕೆ

    ಕ್ಯಾಪ್ಸ್ ಕೆಫೆ ಎಂದು ಕರೆಯಲ್ಪಡುವ ಈ ಕೆಫೆ, ರೆಸ್ಟೋರೆಂಟ್ ಉದ್ಯಮದಲ್ಲಿ ಶರ್ಮಾ ಅವರ ಮೊದಲ ಪ್ರಯತ್ನವಾಗಿದೆ. ಅವರ ಪತ್ನಿ ಗಿನ್ನಿ ಚತ್ರತ್ ಕೂಡ ಈ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ. ಕೆನಡಾದ ಬ್ರಿಟಿಷ್ ಕೊಲಂಬಿಯಾದ ಸರ್ರೆಯಲ್ಲಿರುವ ಈ ಕೆಫೆಯನ್ನು ಕೆಲವು ದಿನಗಳ ಹಿಂದಷ್ಟೇ ಉದ್ಘಾಟಿಸಲಾಗಿತ್ತು.

    ಕಾರಿನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಕೆಫೆಯ ಕಿಟಕಿಯ ಮೇಲೆ ಕನಿಷ್ಠ ಒಂಬತ್ತು ಗುಂಡುಗಳನ್ನು ಹಾರಿಸುತ್ತಿರುವ ವೀಡಿಯೋ ವೈರಲ್‌ ಆಗಿದೆ. ಲಡ್ಡಿ ಭಯೋತ್ಪಾದನಾ ವಿರೋಧಿ ಸಂಸ್ಥೆ NIA ಯ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದಾನೆ. ಬಬ್ಬರ್ ಖಾಲ್ಸಾ ಇಂಟರ್‌ನ್ಯಾಷನಲ್‌ನೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಸ್ಯನಟನ ಹೇಳಿಕೆಯಿಂದ ಮನನೊಂದಿದ್ದರಿಂದ ಅವನು ಗುಂಡಿನ ದಾಳಿಗೆ ಆದೇಶಿಸಿದ್ದಾನೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ರೀಲ್ಸ್ ಚಟ – ಟೆನ್ನಿಸ್ ಆಟಗಾರ್ತಿ ಮಗಳನ್ನು ಗುಂಡಿಕ್ಕಿ ಕೊಂದ ತಂದೆ

    ಗುಂಡಿನ ದಾಳಿಯ ನಂತರ ಪೊಲೀಸರು ಮತ್ತು ವಿಧಿವಿಜ್ಞಾನ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ತನಿಖೆ ನಡೆಯುತ್ತಿದೆ. ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ನಾಯಕ ವಿಕಾಸ್ ಪ್ರಭಾಕರ್ ಅಲಿಯಾಸ್ ವಿಕಾಸ್ ಬಗ್ಗಾ ಹತ್ಯೆಗೆ ಸಂಬಂಧಿಸಿದಂತೆ ಹರ್ಜೀತ್ ಸಿಂಗ್ ಲಡ್ಡಿ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಬೇಕಾಗಿದ್ದಾರೆ. ವಿಹೆಚ್‌ಪಿ ನಾಯಕನನ್ನು 2024 ರ ಏಪ್ರಿಲ್‌ನಲ್ಲಿ ಪಂಜಾಬ್‌ನ ರೂಪನಗರ ಜಿಲ್ಲೆಯ ಅವರ ಅಂಗಡಿಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.