Tag: canada

  • ಒಂದು ಗಂಟೆಯ ಹಗ್‌ಗೆ 7 ಸಾವಿರ ಸಂಭಾವನೆ ಪಡೀತಾನೆ ಈ ವ್ಯಕ್ತಿ!

    ಒಂದು ಗಂಟೆಯ ಹಗ್‌ಗೆ 7 ಸಾವಿರ ಸಂಭಾವನೆ ಪಡೀತಾನೆ ಈ ವ್ಯಕ್ತಿ!

    ಒಟ್ಟಾವಾ: ತಾಂತ್ರಿಕ ಯುಗದಲ್ಲಿ ಪ್ರತಿಯೊಬ್ಬರು ಉದ್ಯೋಗದ ಹಿಂದೆ ಬಿದ್ದಿದ್ದಾರೆ. ದುಡಿಯುವ ಹುಚ್ಚು ಹೆಚ್ಚಾಗಿ, ತಮ್ಮ-ತಮ್ಮ ಉದ್ಯೋಗಗಳಲ್ಲಿ ಮುನ್ನಡೆ ಸಾಧಿಸಬೇಕೆಂಬ ಛಲದಿಂದ ಹುಚ್ಚು ಕುದುರೆಗಳಂತೆ ಓಡುತ್ತಿದ್ದಾರೆ. ಇದರಿಂದ ಪ್ರೀತಿ, ಮಮತೆ, ವಾತ್ಸಲ್ಯಗಳಿಂದ ದೂರವಾಗುತ್ತಿದ್ದಾರೆ. ಪ್ರೀತಿ-ಪಾತ್ರರಿಂದ ಅಕ್ಕರೆಯ ಅಪ್ಪುಗೆ ಬೇಕೆನಿಸಿದರೂ ಹಣಕೊಟ್ಟು ಪಡೆಯಬೇಕಿದೆ.

    ಆದರೆ ಕೆನಡಾದ ವ್ಯಕ್ತಿಯೊಬ್ಬ ಪ್ರೀತಿ, ಕಾಳಜಿ, ಸದ್ಭಾವದೊಂದಿಗೆ ಅಪ್ಪುಗೆಯನ್ನು ನೀಡುವುದು, ಲೈಂಗಿಕತೆಯನ್ನು ಬಯಸುವ ಮನಸ್ಸುಗಳಿಗೆ ಸಂವಹನದ ಮೂಲಕವೇ ಸಾಂತ್ವನ ನೀಡುವ ಕೆಲಸ ಮಾಡುತ್ತಿದ್ದಾನೆ. ಅವಶ್ಯಕತೆಯಿದ್ದವರಿಗೆ ತನ್ನ ಅಪ್ಪುಗೆ ಸ್ಪರ್ಶದಿಂದ ಪ್ರೀತಿ, ವಾತ್ಸಲ್ಯ ಹಾಗೂ ಕಾಳಜಿಯ ನೀಡುತ್ತಿದ್ದಾನೆ. ಇದನ್ನೂ ಓದಿ: ಬಿಸಾಡಿದ ಮಚ್ಚು ತೋರಿಸುತ್ತೇನೆಂದು ಪೊಲೀಸರ ಮೇಲೆಯೇ ಹಲ್ಲೆ – ಆರೋಪಿಗೆ ಗುಂಡೇಟು

    ಈ ಅಪ್ಪುಗೆಯೂ ಸುಮ್ಮನೆ ಸಿಗುವುದಿಲ್ಲ. ಈತ ಒಂದು ಗಂಟೆ ವಾತ್ಸಲ್ಯದ ಅಪ್ಪುಗೆ ನೀಡಿದರೆ 75 ಡಾಲರ್ (7 ಸಾವಿರ) ಸಂಭಾವನೆ ಪಡೆಯುತ್ತಾನೆ. ಇದನ್ನು `ಕಡ್ಲ್ ಅಥವಾ ಹಗ್ ಥೆರಪಿ’ ಎಂದೂ ಕರೆಯುತ್ತಾರೆ. ಕೆನಡಾದ ಮಾಂಟ್ರಿಯಲ್‌ನಿಂದ ಬಂದು UKನ ಬ್ರಿಸ್ಟಲ್‌ನಲ್ಲಿ ನೆಲೆಸಿರುವ ಟ್ರೆಷರ್ ಎಂಬಾತನೇ ಈ ವೃತ್ತಿ ಮಾಡಿಕೊಂಡಿದ್ದು, ಇದು ಜನರು ಸುರಕ್ಷಿತ ಹಾಗೂ ಶಾಂತವಾಗಿರಿಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾನೆ.

    ಈ ಕುರಿತು ಮಾತನಾಡಿರುವ ಟ್ರೆಷರ್, ಈ ಥೆರಪಿ ಏನು ಹೇಳುತ್ತದೆ ಎಂದು ಅರ್ಥ ಮಾಡಿಕೊಳ್ಳುವುದಿಲ್ಲ. ಕೆಲವರು ಇದನ್ನು ಲೈಂಗಿಕ ಎಂದು ತಪ್ಪಾಗಿ ಅರ್ಥೈಸಿಕೊಳ್ಳುತ್ತಾರೆ. ಆದರೆ ನಾನು ಮಾನವ ಸಂಪರ್ಕ ನಿರ್ಮಿಸುವ ಉತ್ಸಾಹದಿಂದ ಪ್ರಾರಂಭಿಸಿದ್ದೇನೆ. ಅನೇಕರು ಹೆಣಗಾಡುವ ಈ ಕೆಲಸವನ್ನು ನಾನು ಮಾಡುತ್ತಿದ್ದೇನೆ ಅಷ್ಟೇ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾಳೆ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಹುಟ್ಟುಹಬ್ಬ : ವಿವಿಧ ಕಾರ್ಯಕ್ರಮಗಳ ಆಯೋಜನೆ

    ಅಪ್ಪುಗೆ ಕೇವಲ ಮುದ್ದಾಡುವಿಕೆಯಲ್ಲ, ಅದಕ್ಕಿಂತಲೂ ಹೆಚ್ಚಿನದ್ದು. ಮೊದಲು ಇದನ್ನು ಸ್ವಲ್ಪ ವಿಚಿತ್ರವಾಗಿ ಕಾಣುತ್ತಾರೆ. 10 ವರ್ಷಗಳ ಹಿಂದೆ ಮಾನವ ಸಂಪರ್ಕದ ವಿಜ್ಞಾನ ನೋಡಲು ಪ್ರಾರಂಭಿಸಿತು. ನಂತರ 2022ರ ಮೇ ತಿಂಗಳಿನಿಂದ ಅದನ್ನು ವ್ಯವಹಾರವಾಗಿ ಪರಿವರ್ತಿಸಲಾಯಿತು ಎಂದಿದ್ದಾರೆ.

    ಏನಿದು ಥೆರಪಿ?
    ಇದು ಯಾವಾಗಲೂ ಲೈಂಗಿಕವಲ್ಲದ ಥೆರಪಿ. ಆ ವ್ಯಕ್ತಿಗೆ ಏನು ಬೇಕೋ ಅದನ್ನು ಆಧರಿಸಿರುತ್ತದೆ. ನಾವು ಭೇಟಿಯಾಗುತ್ತೇವೆ ಒಂದೇ ಮನಸ್ಥಿತಿಯಲ್ಲಿರಲು ಬಯಸುತ್ತೇವೆ. ಅದಕ್ಕಾಗಿ ಮುಂಚಿತವಾಗಿಯೇ ನೀಡಿರುವ ಸೂಚನೆಗಳನ್ನು ಪರಿಶೀಲಿಸಿಕೊಳ್ಳುತ್ತೇವೆ. ನಂತರ ಅವರ ಸಮಯ, ಸನ್ನಿವೇಶ ಎಲ್ಲವನ್ನು ಆಧರಿಸಿ ಅವರು ಏನನ್ನು ಬಯಸುತ್ತಿದ್ದಾರೆ ಎನ್ನುವ ಆಧಾರದ ಮೇಲೆ ಥೆರಪಿ ನೀಡುತ್ತೇವೆ. ಇದು ಪೂರ್ವಗ್ರಹಗಳಿಂದ ಕೂಡಿದ ಮನಸ್ಸುಗಳಿಗೆ ಸಾಂತ್ವನವನ್ನೂ ನೀಡುತ್ತದೆ. ಒಂದು ವೇಳೆ ಅವರು ಲೈಂಗಿಕತೆಯ ಪ್ರಾರಂಭ ಅನುಭವಿಸುತ್ತಿದ್ದರೆ ನಾವು ಅದರ ಬಗ್ಗೆ ಸಂವಹನ ನಡೆಸಿ, ಲೈಂಗಿಕವಲ್ಲದ ಅನ್ಯೋನ್ಯತೆಯ ಬಗ್ಗೆ ತಿಳಿಸುತ್ತೇವೆ.

    ಇದು ಸಂವಹನ ಮತ್ತು ನಂಬಿಕೆಯನ್ನು ಬೆಳೆಸುತ್ತದೆ. ನಾನು ಯಾರಿಗಾದರೂ ಅಪ್ಪುಗೆಯನ್ನು ನೀಡುವಾಗ, ನಾನು ಆ ಸ್ಪರ್ಶದ ಮೂಲಕ ಕಾಳಜಿ, ವಾತ್ಸಲ್ಯ ಮತ್ತು ಸದ್ಭಾವನೆ ನೀಡುತ್ತೇನೆ. ಅದು ಅವರ ಬಗ್ಗೆ ಕಾಳಜಿ ವಹಿಸುವ ಮನೋಭಾವವನ್ನು ಸೃಷ್ಟಿಸುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಕೆನಡಾ ಸಂಸದ ಚಂದ್ರ ಆರ್ಯ ಹುಟ್ಟೂರು ತುಮಕೂರಿಗೆ ಭೇಟಿ

    ಕೆನಡಾ ಸಂಸದ ಚಂದ್ರ ಆರ್ಯ ಹುಟ್ಟೂರು ತುಮಕೂರಿಗೆ ಭೇಟಿ

    ತುಮಕೂರು: ಕೆನಡಾ ಸಂಸದ ಚಂದ್ರ ಆರ್ಯ ಅವರು ತಮ್ಮ ಹುಟ್ಟೂರು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಗ್ರಾಮಕ್ಕೆ ಭೇಟಿ ನೀಡಿದರು.

    ಈ ವೇಳೆ ಮಾತನಾಡಿದ ಅವರು, ಗಜ್ಜಿಗರಹಳ್ಳಿ ನಮ್ಮ ತಾತ ಅವರ ಊರಾಗಿದೆ. ಇಲ್ಲಿಗೆ ಬರುವುದು ಎಂದರೆ ನಮಗೆ ತುಂಬಾ ಸಂತೋಷ. ಕಳೆದ ನಾಲ್ಕೈದು ವರ್ಷದಲ್ಲಿ ಹಲವು ಬಾರಿ ಇಲ್ಲಿಗೆ ಬಂದಿದ್ದೇನೆ. ಈ ಗ್ರಾಮದಲ್ಲಿ ರಸ್ತೆ ಆಗಬೇಕು. ಮೊದಲು ದೇವಸ್ಥಾನ ಇರಲಿಲ್ಲ. ಈಗ ಗ್ರಾಮದವರೇ ಕಟ್ಟಿಸಿದ್ದಾರೆ ಎಂದರು.

    ನಂತರ ಗಜ್ಜಿಗರಹಳ್ಳಿ ಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಚಂದ್ರ ಆರ್ಯ ಅವರು, ಕೆಲಕಾಲ ಗ್ರಾಮದ ಹಳೆ ಸ್ನೇಹಿತರೊಂದಿಗೆ ಕೂತು ಚರ್ಚೆ ನಡೆಸಿದರು. ಪತ್ನಿಯೊಂದಿಗೆ ಭೇಟಿ ಕೊಟ್ಟ ಚಂದ್ರ ಆರ್ಯ ಅವರನ್ನು ಗ್ರಾಮಸ್ಥರು ಹಾರ, ಪೇಟ ಹಾಕಿ ಸನ್ಮಾನಿಸಿದರು. ಇದನ್ನೂ ಓದಿ: ಎಐಡಿಎಂಕೆ ಕಾರ್ಯಕರ್ತರ ನಡುವೆ ಮಾರಾಮಾರಿ- ಕಚೇರಿಯ ಬಾಗಿಲು ಒಡೆದ ಬೆಂಬಲಿಗರು

    ಇತ್ತೀಚೆಗೆ ಕೆನಡಾ ಸಂಸತ್ತಿನಲ್ಲಿ ಮಾತೃಭಾಷೆ ಕನ್ನಡವನ್ನು ಮಾತನಾಡುವ ಮೂಲಕ ಚಂದ್ರ ಆರ್ಯ ಅವರು ತಮಗೆ ಕನ್ನಡದ ಮೇಲೆ ಇರುವ ಪ್ರೀತಿ, ಗೌರವ, ಅಭಿಮಾನವನ್ನು ವ್ಯಕ್ತಪಡಿಸಿದ್ದರು. ಈ ಮೂಲಕ ಕನ್ನಡ ಕಂಪನ್ನು ಕೆನಡಾ ಸಂಸತ್ತಿವರಿಗೂ ಪಸರಿಸಿದ್ದರು. ಇದನ್ನೂ ಓದಿ: ಗೋವಾದಲ್ಲೂ ಆಪರೇಷನ್‍ಗೆ ಮುಂದಾಗಿದ್ಯಾ ಬಿಜೆಪಿ..? – ಕಾಂಗ್ರೆಸ್ ಶಾಸಕರಿಗೆ 40 ಕೋಟಿ ಆಫರ್

    Live Tv
    [brid partner=56869869 player=32851 video=960834 autoplay=true]

  • ಕಾಳಿ ಕೈಯಲ್ಲಿ ಸಿಗರೇಟು ವಿವಾದ – ಹಿಂದೂಗಳ ಕ್ಷಮೆ ಕೋರಿದ ಟೊರೆಂಟೊ ಮ್ಯೂಸಿಯಂ

    ಕಾಳಿ ಕೈಯಲ್ಲಿ ಸಿಗರೇಟು ವಿವಾದ – ಹಿಂದೂಗಳ ಕ್ಷಮೆ ಕೋರಿದ ಟೊರೆಂಟೊ ಮ್ಯೂಸಿಯಂ

    ಒಟ್ಟೋವಾ: ಕಾಳಿ ಪೋಸ್ಟರ್ ಕುರಿತು ವಿವಾದ ಸೃಷ್ಟಿಸಿದ್ದ ಟೊರಂಟೋದ ಆಗಾಖಾನ್ ಮ್ಯೂಸಿಯಂ ಹಿಂದೂ ಸಮುದಾಯದ ಕ್ಷಮೆ ಕೇಳಿದೆ.

    ಭಾರತೀಯ ರಾಯಭಾರಿ ಕಚೇರಿ ಪತ್ರಕ್ಕೆ ಸ್ಪಂದಿಸಿದ ಆಗಾಖಾನ್ ಮ್ಯೂಸಿಯಂ, ಹಿಂದೂ ಧರ್ಮ ಮತ್ತು ಇತರೆ ಸಮುದಾಯಗಳ ನಂಬಿಕೆಗೆ ಧಕ್ಕೆ ತಂದಿದ್ದಕ್ಕೆ ತೀವ್ರ ವಿಷಾದವಿದೆ. ಈ ಬಗ್ಗೆ ಕ್ಷಮೆ ಕೋರುತ್ತೇವೆ ಎಂದು ಟ್ವೀಟ್ ಮೂಲಕ ಪ್ರಕಟಿಸಿದೆ. ಇದನ್ನೂ ಓದಿ: ಕೆನಡಾದಲ್ಲಿ ಹಿಂದೂ ಧರ್ಮದ ವಿರುದ್ಧ ಅಪಪ್ರಚಾರ: ಕನ್ನಡಿಗ ಸಂಸದ ಬೇಸರ

    ಕೆನಡಾದ ಕನ್ನಡಿಗ ಸಂಸದ ಚಂದ್ರ ಆರ್ಯ ತೀವ್ರ ಬೇಸರ ವ್ಯಕ್ತಪಡಿಸಿದ್ದರು. ಕಾಳಿದೇವಿ ಸಾಕ್ಷ್ಯಾಚಿತ್ರ ವಿವಾದಕ್ಕೆ ಸಂಬಂಧಿಸಿದಂತೆ, ಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ಅವರ ಕಾಳಿ ಕುರಿತಾದ ಸಾಕ್ಷ್ಯಾಚಿತ್ರ ಪೋಸ್ಟರ್ ನೋಡಿ ಬೇಸರವಾಗಿದೆ. ಕೆಲ ವರ್ಷಗಳಿಂದ ಕೆನಡಾದಲ್ಲೂ ಸಾಂಪ್ರದಾಯಿಕ ಹಿಂದೂ ವಿರೋಧಿ ಮತ್ತು ಭಾರತ-ವಿರೋಧಿ ಗುಂಪುಗಳು ಸೇರಿಕೊಂಡು ಮಾಧ್ಯಮಗಳಲ್ಲಿ `ಹಿಂದೂಫೋಬಿಕ್’ (ಹಿಂದೂ ಧರ್ಮದ ಬಗ್ಗೆ ಭಯ ಹುಟ್ಟಿಸುವುದು) ಲೇಖನಗಳನ್ನು ಪ್ರಕಟಿಸುತ್ತಿವೆ. ಹಿಂದೂ ಧರ್ಮದ ಮೇಲೆ ನಿರಂತರ ದಾಳಿ ನಡೆಯುತ್ತಿದೆ ಎಂದು ಕಿಡಿಕಾರಿದ್ದರು. ಇದಕ್ಕೆ ಶೀಘ್ರವೇ ಪ್ರತಿಕ್ರಿಯಿಸಿರುವ ಆಗಾಖಾನ್ ಮ್ಯೂಸಿಯಂ ಕ್ಷಮೆ ಕೇಳಿದ್ದು, ಇದನ್ನು ಸ್ವಾಗತಿಸಿದ್ದಾರೆ. ಇದನ್ನೂ ಓದಿ: ಕಾಳಿಗೆ ಅವಮಾನ – ಸಾಕ್ಷ್ಯಚಿತ್ರ ಪ್ರದರ್ಶನ ಮಾಡದಂತೆ ಸೂಚನೆ

    https://twitter.com/AryaCanada/status/1544413469059186688?ref_src=twsrc%5Etfw%7Ctwcamp%5Etweetembed%7Ctwterm%5E1544413469059186688%7Ctwgr%5E%7Ctwcon%5Es1_&ref_url=https%3A%2F%2Fpublictv.in%2Fpainful-to-see-kaali-poster-by-filmmaker-leena-manimekalai-says-chandra-arya%2F

    ಮಹುವಾ ವಿರುದ್ಧ FIR: ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಮಧ್ಯಪ್ರದೇಶದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ ಮಹುವಾ ಮೊಯಿತ್ರಾ ಅವರು, ನನಗೆ ಕಾಳಿ ಮಾತೆಯು ಮಾಂಸ ತಿನ್ನುವ, ಮದ್ಯ ಸ್ವೀಕರಿಸುವ ದೇವತೆಯಾಗಿದ್ದಾಳೆ. ನಿಮ್ಮ ದೇವತೆ ಬಗ್ಗೆ ಊಹಿಸಿಕೊಳ್ಳುವ ಸ್ವಾತಂತ್ರ‍್ಯ ನಿಮಗಿದೆ ಎಂದು ಹೇಳಿದ್ದರು. ಈ ಹೇಳಿಕೆ ವಿವಾದವಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು. ಇದೀಗ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಕೆನಡಾದಲ್ಲಿ ಹಿಂದೂ ಧರ್ಮದ ವಿರುದ್ಧ ಅಪಪ್ರಚಾರ: ಕನ್ನಡಿಗ ಸಂಸದ ಬೇಸರ

    ಕೆನಡಾದಲ್ಲಿ ಹಿಂದೂ ಧರ್ಮದ ವಿರುದ್ಧ ಅಪಪ್ರಚಾರ: ಕನ್ನಡಿಗ ಸಂಸದ ಬೇಸರ

    ಒಟ್ಟೋವಾ: ಕೆನಡಾದಲ್ಲಿ ಹಿಂದೂ ಧರ್ಮದ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಕೆನಡಾದ ಕನ್ನಡಿಗ ಸಂಸದ ಚಂದ್ರ ಆರ್ಯ ಬೇಸರ ವ್ಯಕ್ತಪಡಿಸಿದ್ದಾರೆ.

    ಕಾಳಿದೇವಿ ಸಾಕ್ಷ್ಯಚಿತ್ರ ವಿವಾದಕ್ಕೆ ಸಂಬಂಧಿಸಿದಂತೆ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿರುವ ಅವರು, ಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ಅವರ ಕಾಳಿ ಕುರಿತಾದ ಸಾಕ್ಷ್ಯಚಿತ್ರ ಪೋಸ್ಟರ್ ನೋಡಿ ಬೇಸರವಾಗಿದೆ. ಕೆಲ ವರ್ಷಗಳಿಂದ ಕೆನಡಾದಲ್ಲೂ ಸಾಂಪ್ರದಾಯಿಕ ಹಿಂದೂ ವಿರೋಧಿ ಮತ್ತು ಭಾರತ-ವಿರೋಧಿ ಗುಂಪುಗಳು ಸೇರಿಕೊಂಡು ಮಾಧ್ಯಮಗಳಲ್ಲಿ ʻಹಿಂದೂಫೋಬಿಕ್ʼ (ಹಿಂದೂ ಧರ್ಮದ ಬಗ್ಗೆ ಭಯ ಹುಟ್ಟಿಸುವುದು) ಲೇಖನಗಳನ್ನು ಪ್ರಕಟಿಸುತ್ತಿವೆ. ಹಿಂದೂ ಧರ್ಮದ ಮೇಲೆ ನಿರಂತರ ದಾಳಿ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಳಿಗೆ ಅವಮಾನ – ಸಾಕ್ಷ್ಯಚಿತ್ರ ಪ್ರದರ್ಶನ ಮಾಡದಂತೆ ಸೂಚನೆ

    https://twitter.com/AryaCanada/status/1544413469059186688

    ʻಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡುವ ಯಾವುದೇ ಉದ್ದೇಶವಿಲ್ಲ. ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ವಿಷಾದ ವ್ಯಕ್ತಪಡಿಸುತ್ತೇವೆʼ ಎಂದು ಅಗಾಖಾನ್‌ ಮ್ಯೂಸಿಯಂ ಕ್ಷಮೆಯಾಚಿಸಿರುವುದನ್ನು ಸ್ವಾಗತಿಸುತ್ತೇನೆಂದು ಚಂದ್ರ ಆರ್ಯ ತಿಳಿಸಿದ್ದಾರೆ.

    ಲೀನಾ ಅವರು ಕಾಳಿ ಕುರಿತಾಗಿ ಸಾಕ್ಷ್ಯ ಚಿತ್ರ ಮಾಡಿದ್ದು, ಕಾಳಿಯ ಒಂದು ಕೈಲಿ ಸಿಗರೇಟು ಮತ್ತೊಂದು ಕೈಲಿ ಎಲ್ಜಿಬಿಟಿಕ್ಯೂ ಧ್ವಜವನ್ನು ನೀಡಲಾಗಿದೆ. ಈ ಪೋಸ್ಟರ್ ಅನ್ನು ಶೇರ್ ಮಾಡಿರುವ ಲೀನಾ, ಈ ಸಾಕ್ಷ್ಯ ಚಿತ್ರವು ಕೆನಡಾ ಫಿಲ್ಮ್ ಫೇಸ್ಟಿವಲ್‍ನಲ್ಲಿ ಬಿಡುಗಡೆ ಆಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಆ ಬಳಿಕ ಈ ಪೋಸ್ಟರ್ ಕುರಿತಾಗಿ ಆಕ್ರೋಶ ಕೇಳಿ ಬರುತ್ತಿದೆ. ಇದನ್ನೂ ಓದಿ: ಜೀಸಸ್‌ ಸುಪ್ರೀಂ ಎಂದಿದ್ದ ವ್ಯಕ್ತಿಗೆ ಪಾಕ್‌ನಲ್ಲಿ ಗಲ್ಲು ಶಿಕ್ಷೆ

    Live Tv
    [brid partner=56869869 player=32851 video=960834 autoplay=true]

  • ಕೆನಡಾ ವಧುವಿನ ಕೈ ಹಿಡಿದ ವಿಜಯಪುರ ವರ – ಅದ್ದೂರಿ ಮದುವೆಗೆ ಸಾಕ್ಷಿಯಾದ ಜನತೆ

    ಕೆನಡಾ ವಧುವಿನ ಕೈ ಹಿಡಿದ ವಿಜಯಪುರ ವರ – ಅದ್ದೂರಿ ಮದುವೆಗೆ ಸಾಕ್ಷಿಯಾದ ಜನತೆ

    ವಿಜಯಪುರ: ವಿಜಯಪುರದಲ್ಲಿ ಅಪರೂಪದ ಮದುವೆ ನಡೆದಿದೆ. ವಿಜಯಪುರುದ ಯುವಕ, ಕೆನಡಾ ಯುವತಿಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಇದೀಗ ಈ ಮುದ್ದಾದ ಜೋಡಿಯ ಮದುವೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

     

    ಹೌದು ಉತ್ತರ ಅಮೇರಿಕಾದ ಕೆನಡಾ ದೇಶದ ಸಾರಾ, ವಿಜಯಪುರ ನಿವಾಸಿ ರವಿಕುಮಾರ್ ಚಿಮ್ಮಲಗಿ ಕೈ ಹಿಡಿದಿದ್ದಾರೆ. ನಗರದ ಟೌನ್ ಪ್ಯಾಲೇಸ್ ಹಾಲ್‍ನಲ್ಲಿ ಈ ಅದ್ದೂರಿ ವಿವಾಹ ಜರುಗಿದೆ. ಹಲವಾರು ವರ್ಷಗಳಿಂದ ಕೆನಡಾದ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ರವಿಕುಮಾರ್ ಅದೇ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸಾರಾ ಪರಸ್ಪರ ಪ್ರೀತಿಸುತ್ತಿದ್ದರು.

     

    ನಂತರ ಇವರಿಬ್ಬರ ಪ್ರೀತಿಗೆ ಎರಡು ಕುಟುಂಬಗಳು ಪರಸ್ಪರ ಒಪ್ಪಿಗೆ ಸೂಚಿಸಿದ್ದಾರೆ. ಇದೀಗ ವಿಜಯಪುರದ ವಿಶ್ವನಾಥ್ ಚಿಮ್ಮಲಗಿ, ಶೋಭಾ ದಂಪತಿ ಪುತ್ರ ರವಿಕುಮಾರ್ ಅವರು ಕೆನಡಾದ ರೋಜ್‍ಮೇರಿ ಪ್ಲಾಟ್, ಹ್ಯಾರಿ ಫೋಲಾರ್ಡ್ ದಂಪತಿ ಪುತ್ರಿ ಸಾರಾ ಅವರನ್ನು ಗುರು-ಹಿರಿಯರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ. ಇದನ್ನೂ ಓದಿ: ಚಿಕಾಗೋ ಪರೇಡ್‌ ವೇಳೆ ಶೂಟೌಟ್‌, ದಿಕ್ಕಾಪಾಲಾಗಿ ಓಡಿದ ಜನ – 6 ಬಲಿ, 24 ಮಂದಿಗೆ ಗಾಯ

    ವಿಶೇಷ ಅಂದರೆ ಹಿಂದೂ ಸಂಪ್ರದಾಯದಂತೆ ಮದುವೆ ಮಾಡಲಾಗಿದೆ. ಹಿಂದೂ ಸಂಪ್ರದಾಯಕ್ಕೆ ಸಾರಾ ಕೂಡ ಮನಸ್ಸೋತ್ತಿದ್ದು, ಮದುವೆ ದಿನ ಸೀರೆಯುಟ್ಟು ಭಾರತೀಯ ನಾರಿಯರಂತೆ ಕಂಗಳೊಸಿದ್ದಾರೆ. ಈ ಅದ್ದೂರಿ ವಿವಾಹಕ್ಕೆ ಸಂಬಂಧಿಕರು, ಸ್ನೇಹಿತರು ಬಂದು ಹರಿಸಿ ಆಶೀರ್ವಾದಿಸಿದರೆ, ಮತ್ತೆ ಕೆಲವರು ಅಪರೂಪದ ಈ ಜೋಡಿ ಜೊತೆ ಸೆಲ್ಫಿ ಪಡೆದು ಸಂತಸ ಪಟ್ಟಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ – ನೀರಲ್ಲಿ ಕೊಚ್ಚಿ ಹೋದ 1ನೇ ತರಗತಿ ಬಾಲಕಿ

    Live Tv
    [brid partner=56869869 player=32851 video=960834 autoplay=true]

  • ಕಾಳಿಗೆ ಅವಮಾನ – ಸಾಕ್ಷ್ಯಚಿತ್ರ ಪ್ರದರ್ಶನ ಮಾಡದಂತೆ ಸೂಚನೆ

    ಕಾಳಿಗೆ ಅವಮಾನ – ಸಾಕ್ಷ್ಯಚಿತ್ರ ಪ್ರದರ್ಶನ ಮಾಡದಂತೆ ಸೂಚನೆ

    ಒಟ್ಟಾವಾ: ಭಾರತೀಯ ಸಿನಿಮಾ ರಂಗದ ಖ್ಯಾತ ನಿರ್ಮಾಪಕಿ ಲೀನಾ ಮಣಿಮೇಕಲೈ ಅವರು ಕಾಳಿ ಕುರಿತಾಗಿ ಸಾಕ್ಷ್ಯಚಿತ್ರದ ಪೋಸ್ಟರ್ ಒಂದನ್ನು ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದು, ಆ ಪೋಸ್ಟರ್ ಭಾರೀ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಸಾಕ್ಷ್ಯಚಿತ್ರ ಬಿಡುಗಡೆ ಮಾಡದಂತೆ ಕೆನಡಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

    ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಪೋಸ್ಟರ್ ಮೂಲಕ ಧಕ್ಕೆ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ನಂತರ ಈ ಬಗ್ಗೆ ಕೆನಡದಲ್ಲಿರುವ ಹಿಂದೂಗಳು ಭಾರತೀಯ ರಾಯಭಾರ ಕಚೇರಿ ಮಧ್ಯಪ್ರವೇಶಿಸಬೇಕು. ಸಾಕ್ಷ್ಯಚಿತ್ರ ಬಿಡುಗಡೆ ಮಾಡಲು ಅವಕಾಶ ನೀಡಬಾರದೆಂದು ದನಿ ಎತ್ತಿದ್ದರು. ಇದನ್ನೂ ಓದಿ: ಕಾಳಿ ಕೈಲಿ ಸಿಗರೇಟು, ಮತ್ತೊಂದು ಕೈಯಲ್ಲಿ ಎಲ್ಜಿಬಿಟಿಕ್ಯೂ ಧ್ವಜ : ಭುಗಿಲೆದ್ದ ಆಕ್ರೋಶ

    ಈ ಬಗ್ಗೆ ಪತ್ರದ ಮೂಲಕ ಸ್ಪಷ್ಟಪಡಿಸಿರುವ ಕೆನಡಾದಲ್ಲಿರುವ ಭಾರತೀಯ ರಾಯಭಾರ ಕಚೇರಿ, ಕಾಳಿ ಚಿತ್ರದಲ್ಲಿ ಹಿಂದೂಗಳ ದೇವತೆಗೆ ಅವಮಾನ ಮಾಡಲಾಗಿದೆ ಎಂದು ಇಲ್ಲಿರುವ ಹಿಂದೂ ಸಮುದಾಯದವರಿಂದ ದೂರು ಬಂದಿದೆ. ಹಾಗಾಗಿ ಸಾಕ್ಷ್ಯಚಿತ್ರ ಬಿಡುಗಡೆ ಮಾಡದಿರಲು ಕಾರ್ಯಕ್ರಮದ ಸಂಯೋಜಕರಿಗೆ ರಾಯಭಾರ ಕಚೇರಿ ಸೂಚಿಸಿದೆ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಕಾಳಿ ಕೈಲಿ ಸಿಗರೇಟು ವಿವಾದ : ಲೀನಾ ಮೇಲೆ ಹಲವು ದೂರು ದಾಖಲು

    ಲೀನಾ ಅವರು ಕಾಳಿ ಕುರಿತಾಗಿ ಸಾಕ್ಷ್ಯ ಚಿತ್ರ ಮಾಡಿದ್ದು, ಕಾಳಿಯ ಒಂದು ಕೈಲಿ ಸಿಗರೇಟು ಮತ್ತೊಂದು ಕೈಲಿ ಎಲ್ಜಿಬಿಟಿಕ್ಯೂ ಧ್ವಜವನ್ನು ನೀಡಲಾಗಿದೆ. ಈ ಪೋಸ್ಟರ್ ಅನ್ನು ಶೇರ್ ಮಾಡಿರುವ ಲೀನಾ, ಈ ಸಾಕ್ಷ್ಯ ಚಿತ್ರವು ಕೆನಡಾ ಫಿಲ್ಮ್ ಫೇಸ್ಟಿವಲ್‍ನಲ್ಲಿ ಬಿಡುಗಡೆ ಆಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಆ ಬಳಿಕ ಈ ಪೋಸ್ಟರ್ ಕುರಿತಾಗಿ ಆಕ್ರೋಶ ಕೇಳಿ ಬರುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • 2026ರ ಫಿಫಾ ವಿಶ್ವಕಪ್‌ಗೆ ಮೂರು ರಾಷ್ಟ್ರಗಳ ಆತಿಥ್ಯ – 32 ರಾಷ್ಟ್ರಗಳ 48 ತಂಡಗಳು ಭಾಗಿ

    2026ರ ಫಿಫಾ ವಿಶ್ವಕಪ್‌ಗೆ ಮೂರು ರಾಷ್ಟ್ರಗಳ ಆತಿಥ್ಯ – 32 ರಾಷ್ಟ್ರಗಳ 48 ತಂಡಗಳು ಭಾಗಿ

    ವಾಷಿಂಗ್ಟನ್: 2026ರ ಫಿಫಾ ವಿಶ್ವಕಪ್ ಫುಟ್ಬಾಲ್ ಟೂರ್ನಿ ಇದೇ ಮೊದಲ ಬಾರಿಗೆ ಮೂರು ರಾಷ್ಟ್ರಗಳ ಆತಿಥ್ಯದಲ್ಲಿ ನಡೆಯಲಿದೆ. ಈಗಾಗಲೇ ಫಿಫಾ ಅಧ್ಯಕ್ಷ ಗಿಲಾನಿ ಇನ್ ಫ್ಯಾಂಟಿನೊ 2026ರ ವಿಶ್ವಕಪ್ ಟೂರ್ನಿಗೆ ಸಿದ್ಧತೆಗಳನ್ನು ಆರಂಭಿಸುವಂತೆ ಅಮೆರಿಕ, ಕೆನಡಾ ಮತ್ತು ಮೆಕ್ಸಿಕೊಗೆ ಸೂಚಿಸಿದ್ದಾರೆ.

    ಮೂರು ರಾಷ್ಟ್ರಗಳ ಆತಿಥ್ಯದಲ್ಲಿ ನಡೆಯುವುದರಿಂದ ಈ ಬಾರಿ ವಿಶ್ವಕಪ್ ಟೂರ್ನಿಯ ತಂಡಗಳ ಸಂಖ್ಯೆಯನ್ನೂ ಹೆಚ್ಚಿಸಲಾಗಿದೆ. ಈ ಬಾರಿ 32 ರಾಷ್ಟ್ರಗಳಿಂದ 48 ತಂಡಗಳು ಪಾಲ್ಗೊಳ್ಳಲಿದ್ದು, 1994ರ ಫೈನಲಿಸ್ಟ್ ಉತ್ತರ ಅಮೆರಿಕ ತಂಡ ಇದೇ ಮೊದಲ ಬಾರಿ ವಿಶ್ವಕಪ್ ಅಖಾಡಕ್ಕೆ ಇಳಿಯಲಿದೆ. ಇದನ್ನೂ ಓದಿ: ಏಕದಿನ ಕ್ರಿಕೆಟ್‍ನಲ್ಲಿ ದಾಖಲೆಯ 498 ರನ್ ಸಿಡಿಸಿದ ಇಂಗ್ಲೆಂಡ್ – ಮೈದಾನದೆಲ್ಲೆಡೆ ಸಿಕ್ಸರ್, ಬೌಂಡರಿಗಳ ಅಬ್ಬರ

    ಅಮೆರಿಕದ 11, ಮೆಕ್ಸಿಕೊದ 3, ಕೆನಡಾದ 2 ಮೈದಾನಗಳಲ್ಲಿ ವಿಶ್ವಕಪ್ ಪಂದ್ಯಗಳು ನಡೆಯಲಿವೆ. ಒಟ್ಟಾರೆ 80 ಪಂದ್ಯಗಳ ಪೈಕಿ 60 ಪಂದ್ಯಗಳು ಅಮೆರಿಕದಲ್ಲಿ, ಮೆಕ್ಸಿಕೊ ಹಾಗೂ ಕೆನಡಾದಲ್ಲಿ ತಲಾ 10 ಪಂದ್ಯಗಳು ನಡೆಯಲಿದ್ದು, ಇದರಲ್ಲಿ ಫೈನಲ್, ಸೆಮಿಫೈನಲ್ ಮತ್ತು ಕ್ವಾರ್ಟರ್ ಫೈನಲ್ ಪಂದ್ಯಗಳೂ ಸೇರಿವೆ.

    Live Tv

  • ಕೆನಡಾ ಸಂಸತ್ತಿನಲ್ಲಿ ಕನ್ನಡದ ಕಂಪು ಬೀರಿದ ಚಂದ್ರ ಆರ್ಯ ಮನೆಯಲ್ಲಿ ಸಂತಸ

    ಕೆನಡಾ ಸಂಸತ್ತಿನಲ್ಲಿ ಕನ್ನಡದ ಕಂಪು ಬೀರಿದ ಚಂದ್ರ ಆರ್ಯ ಮನೆಯಲ್ಲಿ ಸಂತಸ

    ಬೆಂಗಳೂರು: ನಮ್ಮ ನಾಡಿನಲ್ಲಿ ಹುಟ್ಟಿ ಬೆಳೆದು ದೂರದ ಕೆನಡಾದಲ್ಲಿ ಮೂರನೇ ಬಾರಿಗೆ ಸಂಸದರಾಗಿರುವ ಚಂದ್ರ ಆರ್ಯ ಅವರು, ಇಂದು ಮಾತೃಭಾಷೆ ಕನ್ನಡದಲ್ಲಿ ಕೆನಡಾ ಸಂಸತ್ತಿನಲ್ಲಿ ಮಾತನಾಡಿದ್ದಾರೆ. ಈ ಮೂಲಕ ಇಡೀ ಕನ್ನಡಿಗರಲ್ಲಿ ಹೆಮ್ಮೆಯ ಪುತ್ರ ಚಂದ್ರ ಆರ್ಯ ಕುಟುಂಬಸ್ಥರಲ್ಲಿ ಸಂತಸ ಮನೆ ಮಾಡಿದೆ.

    ತುಮಕೂರು ಜಿಲ್ಲೆಯ ಶಿರಾ ಮೂಲದವರಾಗಿದ್ದು, ಪ್ರಸ್ತುತ ಬೆಂಗಳೂರು ಹೊರವಲಯ ಟಿ.ದಾಸರಹಳ್ಳಿಯ ಆತ್ಮೀಯ ಗೆಳೆಯರ ಬಳಗದ ಬಡಾವಣೆಯಲ್ಲಿ ಚಂದ್ರ ಆರ್ಯ ಅವರ ತಂದೆ ಹಾಗೂ ಅಕ್ಕ ವಾಸವಾಗಿದ್ದಾರೆ. ಈ ಹಿನ್ನೆಲೆ ತಂದೆ ಗೋವಿಂದಯ್ಯ ಹಾಗೂ ಅಕ್ಕ ಲೀಲಾ ʼಪಬ್ಲಿಕ್ ಟಿವಿʼ ಜೊತೆಗೆ ಮಾತನಾಡಿ ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪೊಲೀಸರ ಮುಂದೆ ಶರಣಾಗಲು ಹೆಚ್ಚಿನ ಸಮಯ ಕೇಳಿದ ಸಿಧು 

    ಮಧ್ಯಮ ವರ್ಗದಲ್ಲಿ ಹುಟ್ಟಿ ತುಮಕೂರು ಜಿಲ್ಲೆಯ ಶಿರಾ ಮೂಲದ ಚಂದ್ರ ಆರ್ಯ ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲಿ ಭಾಷಣ ಮಾಡಿದ್ದಾರೆ. ಇವರು ಸುಮಾರು 1 ನಿಮಿಷಗಳ ಕಾಲ ಕನ್ನಡದ ಕುರಿತು ಭಾಷಣ ಮಾಡಿದ್ದು, ಸಿಕ್ಕಾಪಟ್ಟೆ ವೈರಲ್ ಆಗಿದೆ. ಚಂದ್ರ ಆರ್ಯ ಬಿ.ಇ ಮತ್ತು ಎಂ.ಬಿ.ಎ ಪದವೀಧರರಾಗಿದ್ದಾರೆ. ಪ್ರಸ್ತುತ ಕೆನಡಾದ ನೇಪಿಯನ್ ಕ್ಷೇತ್ರದಿಂದ ಲಿಬರ್ಟಿ ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿರುವ ಚಂದ್ರ ಆರ್ಯ, 2018ರಲ್ಲಿ ಕೆನಡಾ ಸಂಸತ್ತಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಿ ಎಲ್ಲರ ಮೆಚ್ಚುಗೆ ಪಾತ್ರರಾಗಿದ್ದರು.

    ಚಂದ್ರ ಆರ್ಯ ಅವರು 2003ರಲ್ಲಿ ಕೆನಡಾದ ಖಾಸಗಿ ಕಂಪನಿಯಲ್ಲಿ ಹಣಕಾಸು ಅಧಿಕಾರಿಯಾಗಿ ಕೆಲಸ ಮಾಡಿದ್ದಾರೆ. ಬಳಿಕ ರಾಜಕೀಯಕ್ಕೆ ಧುಮುಕಿದ ಚಂದ್ರ ಆರ್ಯ ಅವರು ಮೂರನೇ ಬಾರಿಯು ಬಹುಮತದಿಂದ ಗೆದ್ದು ಆಯ್ಕೆಯಾಗಿದ್ದಾರೆ. ಈ ವೇಳೆ ತಂದೆ ಹಾಗೂ ಅಕ್ಕ ಚಂದ್ರ ಆರ್ಯ ಸಾಧನೆ ಹಾಗೂ ಕನ್ನಡ ಭಾಷೆಯ ಪ್ರೇಮವನ್ನು ಹಾಡಿ ಹೊಗಳಿ ಸಂತೋಷ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಾವನ ಮೇಲೆ ಸೇಡು ತೀರಿಸಿಕೊಳ್ಳಲು ಹುಸಿ ಬಾಂಬ್ ಕರೆ ಮಾಡಿದ ಭೂಪ 

    ಇಂದು ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲಿ ಭಾಷಣ ಮಾಡಿ, ಕನ್ನಡಿಗನಾಗಿ ನನಗೆ ಹೆಮ್ಮೆ ಇದೆ ಎಂದು ಹೇಳಿದರು. ಕುವೆಂಪು ಅವರ ‘ಎಲ್ಲಾದರೂ ಇರು ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು’ ಎಂಬ ಪದ್ಯವನ್ನು ಓದುವ ಮೂಲಕ ಎಲ್ಲರ ಗಮನವನ್ನು ಸೆಳೆದಿದ್ದಾರೆ.

  • ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲೇ ಮಾತನಾಡಿದ ಕನ್ನಡಿಗ ಸಂಸದ ಚಂದ್ರ ಆರ್ಯ

    ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲೇ ಮಾತನಾಡಿದ ಕನ್ನಡಿಗ ಸಂಸದ ಚಂದ್ರ ಆರ್ಯ

    ಒಟ್ಟಾವಾ: ಭಾರತೀಯರು ಅದರಲ್ಲೂ ಕನ್ನಡಿಗರೊಬ್ಬರು ದೂರದ ಕೆನಡಾ ಸಂಸದರಾಗಿ ಆಯ್ಕೆಯಾಗಿರೋದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ಅಂತಹದ್ರಲ್ಲಿ ಅದೇ ಕೆನಡಾ ದೇಶದ ಸಂಸತ್ತಿನಲ್ಲಿ ನಮ್ಮ ಮಾತೃಭಾಷೆ ಕನ್ನಡ ಭಾಷೆಯಲ್ಲೇ ಮಾತನಾಡುವ ಮೂಲಕ ಚಂದ್ರ ಆರ್ಯ ಅವರು ಕನ್ನಡ ನಾಡು, ಕನ್ನಡ ಭಾಷೆ, ಕನ್ನಡಿಗರ ಮೇಲಿನ ತಮ್ಮ ಪ್ರೀತಿ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ.

    KANNADA FLAG

    ಚಂದ್ರ ಆರ್ಯ ಅವರು ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಗ್ರಾಮದವರು. ಇವರು ಕೆನಡಾ ದೇಶದ ಸಂಸದರಾಗಿ ಆಯ್ಕೆಯಾಗಿ ಅತ್ಯುತ್ತಮ ಕೆಲಸ ನಿವರ್ಹಿಸುತ್ತಿದ್ದಾರೆ. ಚಂದ್ರ,ಆರ್ಯ ಅವರು ಕೆನಡಾದಲ್ಲಿ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಕೆನಡಾ ದೇಶದ ಸಂಸತ್ತಿನಲ್ಲಿ ಮಾತನಾಡುವಾಗ ತಮ್ಮ ಮಾತೃಭಾಷೆ ಕನ್ನಡದಲ್ಲೇ ಮಾತನಾಡುವ ಮೂಲಕ ಚಂದ್ರ ಆರ್ಯ ಅವರು ಎಲ್ಲರ ಗಮನ ಸೆಳೆದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮಳೆಯಿಂದ ಸಂಭವಿಸಿದ ಅವಾಂತರಗಳೇನು?

    https://twitter.com/AryaCanada/status/1527360696958459905?t=4Lm0HftrpsjWuj3H9_hjHg&s=08

    ಈ ಬಗ್ಗೆ ಸ್ವತಃ ಚಂದ್ರ ಆರ್ಯ ಅವರು ಟ್ವೀಟ್ ಮಾಡಿದ್ದು, ನಾನು ಕೆನಡಾ ಸಂಸತ್ತಿನಲ್ಲಿ ನನ್ನ ಮಾತೃಭಾಷೆಯಲ್ಲಿ ಮಾತನಾಡಿದ್ದೇನೆ. ಪುರಾತನ ಇತಿಹಾಸವುಳ್ಳ ಸುಂದರವಾದ ನಮ್ಮ ಕನ್ನಡ ಭಾಷೆಯನ್ನ, 5 ಕೋಟಿ ಜನ ಮಾತನಾಡುತ್ತಾರೆ. ಪ್ರಪಂಚದಲ್ಲಿ ಇದೇ ಮೊದಲ ಬಾರಿಗೆ ವಿದೇಶದ ಸಂಸತ್ತಿನಲ್ಲಿ ಕನ್ನಡ ಭಾಷೆಯ ಮೂಲಕ ಮಾತನಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ.

    ಕೆನಡಾ ಸಂಸತ್ತಿನಲ್ಲಿ ಮಾತನಾಡಿರುವ ಚಂದ್ರ ಆರ್ಯ ಅವರು, ಮಾನ್ಯ ಸಭಾಪತಿ ಕೆನಡಾ ದೇಶದ ಸಂಸತ್ತಿನಲ್ಲಿ ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದು ನನಗೆ ಸಂತೋಷ ತಂದಿದೆ. ಭಾರತ ದೇಶದ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ದ್ವಾರಳು ಗ್ರಾಮದ ವ್ಯಕ್ತಿಯೊರ್ವ ಕೆನಡಾದಲ್ಲಿ ಸಂಸದನಾಗಿ ಅಯ್ಕೆಯಾಗಿ ಕನ್ನಡದಲ್ಲಿ ಮಾತನಾಡುವುದು 5 ಕೋಟಿ ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ. ಇದನ್ನೂ ಓದಿ:  ಮುಂದುವರಿದ ಮಳೆ ಅಬ್ಬರ: ಉಡುಪಿ, ಶಿವಮೊಗ್ಗ, ದಾವಣಗೆರೆ, ಹಾವೇರಿಯಲ್ಲಿ ಶಾಲೆಗಳಿಗೆ ರಜೆ

    ಕೆನಡಾ ದೇಶದ ಕನ್ನಡಿಗರು 2018ರಲ್ಲಿ ಕೆನಡಾ ಸಂಸತ್ತಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು. ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ ಹಾಗೂ ನಟ ಸಾರ್ವಭೌಮ ಡಾ.ರಾಜ್‍ಕುಮಾರ್ ಹಾಡಿರುವ ‘ಎಲ್ಲಾದಾರೂ ಇರು ಎಂತಾದರೂ ಇರು. .ಎಂದೆಂದಿಗೂ ನೀ ಕನ್ನಡವಾಗಿರು’ ಎಂದು ಹೇಳಿ ತಮ್ಮ ಮಾತು ಮುಗಿಸಿದ್ದಾರೆ. ಚಂದ್ರ ಆರ್ಯ ಅವರ ಭಾಷಾ ಪ್ರೇಮ ಕಂಡು ಎಲ್ಲರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಉಕ್ರೇನಿಯನ್ನರು ಕೆನಡಾದಲ್ಲಿ 3 ವರ್ಷ ಉಳಿಯಬಹುದು

    ಉಕ್ರೇನಿಯನ್ನರು ಕೆನಡಾದಲ್ಲಿ 3 ವರ್ಷ ಉಳಿಯಬಹುದು

    ಒಟ್ಟಾವಾ: ರಷ್ಯಾ ಮತ್ತು ಉಕ್ರೇನ್ ನಡುವೆ ಭಾರೀ ಯುದ್ಧ ನಡೆಯುತ್ತಿದ್ದು, ಅಲ್ಲಿನ ಜನರು ಪ್ರಾಣ ಉಳಿಸಿಕೊಳ್ಳಲು ದೇಶವನ್ನು ಬಿಟ್ಟು ಹೋಗುತ್ತಿದ್ದಾರೆ. ಈ ಹಿನ್ನೆಲೆ ಉಕ್ರೇನ್ ನಿಂದ ಪಲಾಯನ ಮಾಡುವವರು ಕೆನಡಾದಲ್ಲಿ ಉಳಿದುಕೊಳ್ಳಬಹುದು ಎಂದು ಕೆನಡಾ ರಾಜಧಾನಿ ಒಟ್ಟಾವಾ ಗುರುವಾರ ತಿಳಿಸಿದೆ.

    ರಷ್ಯಾದ ಆಕ್ರಮಣಕಾರಿ ದಾಳಿಯಿಂದ ಪಲಾಯನ ಮಾಡುವ ಉಕ್ರೇನಿಯನ್ನರಿಗೆ ಮೂರು ವರ್ಷಗಳವರೆಗೆ ತಾತ್ಕಾಲಿಕ ಕೆನಡಾದ ನಿವಾಸ ಪರವಾನಗಿಯನ್ನು ನೀಡುವ ಹೊಸ ವಲಸೆ ಕಾರ್ಯಕ್ರಮವನ್ನು ಸ್ಥಾಪಿಸುವುದಾಗಿ ಒಟ್ಟಾವಾ ಘೋಷಿಸಿತು. ಇದರ ಜೊತೆಗೆ ಉಕ್ರೇನಿಯನ್ನರು ತಮ್ಮ ಕೆಲಸ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದಂತೆ ಅರ್ಜಿಯನ್ನು ಸಲ್ಲಿಸಬಹುದು ಎಂದು ಈ ವೇಳೆ ತಿಳಿಸಿದೆ. ಇದನ್ನೂ ಓದಿ: ಯುದ್ಧ ನಿಲ್ಲಿಸುವಂತೆ ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಾಲಯ ಆದೇಶ – ಬ್ರೆಡ್ ಪಡೆಯಲು ಸಾಲುಗಟ್ಟಿದ್ದವರ ಮೇಲೆ ರಷ್ಯಾ ದಾಳಿ

    ಹೆಚ್ಚು ಉಕ್ರೇನಿಯನ್ ವಲಸೆಗಾರರನ್ನು ಕೆನಡಾ ಹೊಂದಿದೆ. ಅದರಲ್ಲಿಯೂ ವಿಶೇಷವಾಗಿ ಕೆನಡಾದ ಮಧ್ಯ ಮತ್ತು ಪಶ್ಚಿಮ ಭಾಗಗಳಲ್ಲಿ ಉಕ್ರೇನ್ ಪ್ರಜೆಗಳು ಉಳಿದುಕೊಂಡಿದ್ದಾರೆ. ಈ ಹಿನ್ನೆಲೆ ಕೆನಡಾ ಸರ್ಕಾರ ಉಕ್ರೇನಿಯನ್ನರು ಮೂರು ವರ್ಷಗಳವರೆಗೆ ತಾತ್ಕಾಲಿಕ ನಿವಾಸಿಗಳಾಗಿ ಕೆನಡಾದಲ್ಲಿ ಉಳಿಯಬಹುದು ಎಂದು ಹೇಳಿಕೆಯಲ್ಲಿ ತಿಳಿಸಿದೆ.

    ಅರ್ಜಿದಾರರು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು ಮತ್ತು ತಮ್ಮ ಬಯೋಮೆಟ್ರಿಕ್ ಡೇಟಾವನ್ನು ಫಿಂಗರ್‌ಪ್ರಿಂಟ್‌ಗಳು ಮತ್ತು ಫೋಟೋ ರೂಪದಲ್ಲಿ ಒದಗಿಸಬೇಕಾಗುತ್ತದೆ. ಉಕ್ರೇನಿಯನ್ ನಿರಾಶ್ರಿತರು ಏಕಕಾಲದಲ್ಲಿ ಕೆಲಸ ಮತ್ತು ಅಧ್ಯಯನ ಪರವಾನಗಿಗಾಗಿ ಅರ್ಜಿ ಸಲ್ಲಿಸಬಹುದು ಎಂದು ಘೋಷಣೆಯಲ್ಲಿ ವಿವರಿಸಲಾಗಿದೆ.

    ಕೆನಡಾದ ಈಗಾಗಲೇ ನೆಲೆಸಿರುವ ಉಕ್ರೇನಿಯನ್ನರು ಮತ್ತು ಅವರ ಕುಟುಂಬಗಳು ಈ ಹೊಸ ಕ್ರಮಗಳಿಂದ ಪ್ರಯೋಜನ ಪಡೆಯುತ್ತವೆ ಎಂದು ಹೇಳಿದೆ. ಇದನ್ನೂ ಓದಿ: ಪುಟಿನ್‍ನನ್ನು ‘ಯುದ್ಧಾಪರಾಧಿ’ ಎಂದ ಬೈಡನ್

    ಗುರುವಾರ ಬಿಡುಗಡೆಯಾದ ವಿಶ್ವಸಂಸ್ಥೆಯ ಎಣಿಕೆಯ ಪ್ರಕಾರ, ಫೆಬ್ರವರಿ 24 ರಂದು ರಷ್ಯಾ, ಉಕ್ರೇನ್ ಮೇಲೆ ನಡೆಸುತ್ತಿರುವ ಮಾರಣಾಂತಿಕ ಆಕ್ರಮಣದಿಂದ ಇಲ್ಲಿವರೆಗೂ ಮೂರು ದಶಲಕ್ಷಕ್ಕೂ ಹೆಚ್ಚು ಜನರು ಉಕ್ರೇನ್‍ನಿಂದ ಪಲಾಯನ ಮಾಡಿದ್ದಾರೆ. ಅವರಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಪೋಲೆಂಡ್‍ನಲ್ಲಿ ಆಶ್ರಯ ಪಡೆದಿದ್ದಾರೆ ಎಂದು ತಿಳಿಸಿದೆ.