Tag: Canadian

  • ಭಾರತಕ್ಕೆ ವಿಶೇಷ ವಿನಾಯ್ತಿ ಏನಿಲ್ಲ – ಖಲಿಸ್ತಾನಿ ಉಗ್ರ ಹತ್ಯೆ ವಿವಾದದ ಕುರಿತು ಅಮೆರಿಕ ಹೇಳಿಕೆ

    ಭಾರತಕ್ಕೆ ವಿಶೇಷ ವಿನಾಯ್ತಿ ಏನಿಲ್ಲ – ಖಲಿಸ್ತಾನಿ ಉಗ್ರ ಹತ್ಯೆ ವಿವಾದದ ಕುರಿತು ಅಮೆರಿಕ ಹೇಳಿಕೆ

    ವಾಷಿಂಗ್ಟನ್‌: ಕೆನಡಾದಲ್ಲಿ ಖಲಿಸ್ತಾನಿ ಭಯೋತ್ಪಾದಕ (Khalistani Terrorist) ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪದ ನಂತರ ಭಾರತ ಹಾಗೂ ಕೆನಡಾ (India And Canada) ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಯಾಗಿದೆ. ಈ ಬೆನ್ನಲ್ಲೇ ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ (Jake Sullivan) ಕೆನಡಾ ಬೆಂಬಲಿಸಿ ಹೇಳಿಕೆ ನೀಡಿದ್ದಾರೆ.

    ಅಮೆರಿಕದ (USA) ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಈ ಬಗ್ಗೆ ಮಾತನಾಡಿದ್ದು, ಈ ವಿಷಯದ ಬಗ್ಗೆ ಈಗಾಗಲೇ ನಡೆದಿರುವ ಹಾಗೂ ನಡೆಯಲಿರುವ ಖಾಸಗಿ ರಾಜತಾಂತ್ರಿಕ ಮಾತುಕತೆಯ ನಡುವೆ ನಾನು ಮಧ್ಯಪ್ರವೇಶಿಸುವುದಿಲ್ಲ. ಈ ವಿಷಯ ಬಗ್ಗೆ ಭಾರತದ ಉನ್ನಮಟ್ಟದ ಅಧಿಕಾರಿಗಳೊಂದಿಗೆ ಸಂಪರ್ಕದಲಿದ್ದೇವೆ ಮತ್ತು ಇರುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಭಾರತವನ್ನ ಪ್ರಚೋದಿಸುವುದಿಲ್ಲ; ತಣ್ಣಗಾದ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ

    ಇದೇ ವೇಳೆ ಯುಎಸ್‌ ಅಧ್ಯಕ್ಷ ಜೋ ಬೈಡನ್‌ (Joe Beden) ಅವರು ರಾಜತಾಂತ್ರಿಕ ವಿವಾದದ ಕುರಿತು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೊಂದಿಗೆ ಮಾತನಾಡಲು ಉದ್ದೇಶಿಸಿದ್ದಾರೆಯೇ? ಎಂಬ ಪ್ರಶ್ನೆಗೆ ಉತ್ತರಿಸಿ, ಬೈಡನ್‌ ಆಡಳಿವು ಕೆನಡಾದ ಆರೋಪಗಳನ್ನ ಗಂಭೀರವಾಗಿ ತೆಗೆದುಕೊಂಡಿದೆ. ಒಟ್ಟಾವಾದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ ವಿರೋಧಿ ಪ್ರಚಾರಕ್ಕೆ ಖಲಿಸ್ತಾನ್ ಉಗ್ರರ ಜೊತೆ ಕೈ ಜೋಡಿಸಿದ ಪಾಕ್

    ನಾವು ಕೆನಡಾದ ನಮ್ಮ ಸಹವರ್ತಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇವೆ. ಯಾವುದೇ ದೇಶದ ಹೊರತಾಗಿಯೂ ಮೊದಲು ನಮ್ಮ ಮೂಲ ತತ್ವಗಳನ್ನ ರಕ್ಷಿಸುತ್ತೇವೆ. ಕೆನಡಾದಂತಹ ಮಿತ್ರ ರಾಷ್ಟ್ರಗಳು ತಮ್ಮ ಕಾನೂನು ಜಾರಿಗೊಳಿಸಲು ಮತ್ತು ರಾಜತಾಂತ್ರಿಕ ಪ್ರಕ್ರಿಯೆಯನ್ನು ಮುಂದುವರಿಸುವಾಗ ನಾವು ಅವರೊಂದಿಗೆ ನಿಕಟ ಸಂಪರ್ಕದಲ್ಲಿರುತ್ತೇವೆ. ಅಲ್ಲದೇ ಈ ವಿಚಾರದಲ್ಲಿ ಭಾರತಕ್ಕೆ ವಿಶೇಷ ವಿನಾಯ್ತಿ ಏನೂ ಇಲ್ಲ. ಕೆನಡಾ ಆರೋಪದ ಕುರಿತು ತನಿಖೆ ಮುಂದುವರಿಸಲು ಮತ್ತು ಅಪರಾಧಿಗಳನ್ನ ಗಣನೆಗೆ ತೆಗದುಕೊಳ್ಳಲು ಬಯಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೆನಡಾದಲ್ಲಿ ಗ್ಯಾಂಗ್‌ವಾರ್‌ – ಖಲಿಸ್ತಾನಿ ಭಯೋತ್ಪಾದಕ ಹತ್ಯೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯಾವುದೇ ಕಾರಣಕ್ಕೂ ಭಾರತವನ್ನ ಪ್ರಚೋದಿಸುವುದಿಲ್ಲ; ತಣ್ಣಗಾದ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ

    ಯಾವುದೇ ಕಾರಣಕ್ಕೂ ಭಾರತವನ್ನ ಪ್ರಚೋದಿಸುವುದಿಲ್ಲ; ತಣ್ಣಗಾದ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ

    ಒಟ್ಟಾವಾ: ಭಾರತ ಹಾಗೂ ಕೆನಡಾ (India And Canada) ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಭಾರತದ ವಿರುದ್ಧ ಆರೋಪ ಮಾಡಿದ್ದ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ (Justin Trudeau) ಈಗ ಭಾರತದ ಪರ ಮೃದುವಾಗಿ ಮಾತನಾಡಿದ್ದಾರೆ.

    ಮಾಧ್ಯಮವೊಂದಕ್ಕೆ ನೀಡಿದ ಹೇಳಿಕೆಯಲ್ಲಿ ಭಾರತವು ಅಭಿವೃದ್ಧಿ ಪ್ರಧಾನ ದೇಶವಾಗಿದೆ, ನಾವು ಯಾವುದೇ ಕಾರಣಕ್ಕೂ ಭಾರತವನ್ನು ಪ್ರಚೋದಿಸುವ ಪ್ರಯತ್ನ ಮಾಡುವುದಿಲ್ಲ ಎಂದು ಜಸ್ಟಿನ್‌ ಟ್ರುಡೋ ತಿಳಿಸಿದ್ದಾರೆ. ಇದನ್ನೂ ಓದಿ: ಕೆನಡಾದಲ್ಲಿ ಗ್ಯಾಂಗ್‌ವಾರ್‌ – ಖಲಿಸ್ತಾನಿ ಭಯೋತ್ಪಾದಕ ಹತ್ಯೆ

    ಮುಂದುವರಿದು, ಭಾರತ ಅಭಿವೃದ್ಧಿ ಪ್ರಧಾನ ದೇಶ ಎಂಬುದರಲ್ಲಿ ಎರಡು ಮಾತಿಲ್ಲ. ಅಂತಹ ದೇಶದೊಂದಿಗೆ ನಾವು ಜೊತೆಗೂಡಿ ಪ್ರಾದೇಶಿಕ ಹಾಗೂ ಜಾಗತಿಕ ಏಳಿಗೆ ದಿಸೆಯಲ್ಲಿ ಕೆಲಸ ಮಾಡುವ ಅಗತ್ಯವಿದೆ. ಹಾಗಾಗಿ, ನಾವು ಪ್ರಚೋದನೆ ನೀಡುವ ಹಾಗೂ ಯಾವುದೇ ಸಮಸ್ಯೆ ಸೃಷ್ಟಿಸುವ ಪ್ರಯತ್ನ ಮಾಡುವುದಿಲ್ಲ. ಕೆನಡಿಯನ್ನರು (Canadians) ಮತ್ತು ನಮ್ಮ ಮೌಲ್ಯಗಳನ್ನು ರಕ್ಷಿಸುವುದಕ್ಕೆ ನಾವು ಪ್ರಾಮುಖ್ಯತೆ ನೀಡುತ್ತೇವೆ ಎಂದು ಮೃದುವಾಗಿ ಮಾತನಾಡಿದ್ದಾರೆ.

    ಹತ್ಯೆಗೀಡಾದ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ನನ್ನು ಕೆನಡಾದ ನಾಗರಿಕ ಎಂದು ಪರಿಗಣಿಸಿ ಜಸ್ಟಿನ್‌ ಟ್ರುಡೋ ಭಾರತದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಆತನ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಕೆನಡಾ ನಾಗರಿಕರ ಹಕ್ಕುಗಳನ್ನು ಹಾಗೂ ದೇಶದ ಮೌಲ್ಯಗಳನ್ನು ರಕ್ಷಿಸುವುದು ನಮ್ಮ ಕರ್ತವ್ಯ, ಯಾವುದೇ ಕಾರಣಕ್ಕೆ ಭಾರತಕ್ಕೆ ಪ್ರಚೋದನೆ ನೀಡುವುದಿಲ್ಲ ಎಂದು ನಯವಾಗಿ ಹೇಳುತ್ತಲೇ ಈ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಅಜರ್‌ಬೈಜಾನ್, ಅರ್ಮೇನಿಯನ್ ಪ್ರತ್ಯೇಕತಾವಾದಿಗಳ ನಡುವಿನ ಯುದ್ಧ ಅಂತ್ಯ

    ಕೆನಡಾದಲ್ಲಿರುವ ಭಾರತದ ರಾಯಭಾರಿಯನ್ನ ಉಚ್ಚಾಟನೆಗೊಳಿಸಿದ ಬಳಿಕ ಭಾರತವೂ ಹಲವು ಕ್ರಮಗಳ ಮೂಲಕ ತಿರುಗೇಟು ನೀಡಿದೆ. ಭಾರತದಲ್ಲಿರುವ ಕೆನಡಾ ರಾಯಭಾರಿಯನ್ನ ಉಚ್ಚಾಟನೆ ಮಾಡುವ ಜೊತೆಗೆ ಕೆನಡಾ ನಾಗರಿಕರಿಗೆ ವೀಸಾ ನೀಡುವುದನ್ನೂ ಸ್ಥಗಿತಗೊಳಿಸಿದೆ. ಇನ್ನು ಹರ್ದೀಪ್ ಸಿಂಗ್‌ ನಿಜ್ಜರ್‌ ಹತ್ಯೆಯ ವಿಚಾರಕ್ಕೆ ಸಂಬಂಧಿಸಿದಂತೆ ಅಮೆರಿಕ ಮಧ್ಯಪ್ರವೇಶಿಸಿದ್ದು, ತನಿಖೆಗೆ ಭಾರತ ಸಹಕರಿಸಲಿ ಎಂದಿದೆ. ಮತ್ತೊಂದೆಡೆ, ಕೆನಡಾ ಆರೋಪ ಮಾಡುವ ಬದಲು ಸಾಕ್ಷ್ಯ ಒದಗಿಸಲಿ ಎಂದು ಭಾರತ ಪ್ರತ್ಯುತ್ತರ ಕೊಟ್ಟಿದೆ.

    ಇತ್ತೀಚೆಗಷ್ಟೇ ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಖಲಿಸ್ತಾನಿಗಳ ಅಟ್ಟಹಾಸನ್ನೆ ಬ್ರೇಕ್‌ ಹಾಕುವ ಬಗ್ಗೆ ಕೆನಡಾ ಪ್ರಧಾನಿಯವರೊಂದಿಗೆ ನೇರ ಮಾತುಕತೆ ನಡೆದಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟೂಲ್‍ಕಿಟ್ ತನಿಖೆ- ಪ್ರತಿಭಟನೆಗೆ ಕೆನಡಾ ಲಿಂಕ್, ರೈತ ನಾಯಕರ ಮೇಲೆ ಕಣ್ಣು

    ಟೂಲ್‍ಕಿಟ್ ತನಿಖೆ- ಪ್ರತಿಭಟನೆಗೆ ಕೆನಡಾ ಲಿಂಕ್, ರೈತ ನಾಯಕರ ಮೇಲೆ ಕಣ್ಣು

    – ಝೂಮ್ ಸಭೆಯಲ್ಲಿ ಪಾಲ್ಗೊಂಡಿದ್ದವರ ವಿವರ ಕೇಳಿದ ಪೊಲೀಸರು
    – ವಾಟ್ಸಪ್ ಗ್ರೂಪ್‍ಗೆ ಅಂತರಾಷ್ಟ್ರೀಯ ರೈತ ಪ್ರತಿಭಟನೆಯ ಹೆಸರು

    ನವದೆಹಲಿ: ದೆಹಲಿಯ ರೈತರ ದಂಗೆ ಹಾಗೂ ಕೆಂಪು ಕೋಟೆಗೆ ಮುತ್ತಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಬಹಿರಂಗವಾಗಿದ್ದು, ರೈತರ ಪ್ರತಿಭಟನೆಗೆ ಕೆನಡಾ ಪ್ರಜೆಯ ಕುಮ್ಮಕ್ಕು ಇರುವುದು ತನಿಖೆ ವೇಳೆ ಪತ್ತೆಯಾಗಿದೆ.

    ದೆಹಲಿ ಪೊಲೀಸರು ಟೂಲ್‍ಕಿಟ್ ಕುರಿತು ತನಿಖೆಯನ್ನು ಚುರುಕುಗೊಳಿಸಿದ್ದು, ಇದೀಗ ಆಘಾತಕಾರಿ ಮಾಹಿತಿ ಲಭ್ಯವಾಗುತ್ತಿದೆ. ಖಲಿಸ್ಥಾನಿ ಪರ ಸಂಘಟನೆ ಪೊಯೆಟಿಕ್ ಜಸ್ಟಿಸ್ ಫೌಂಡೇಶನ್(ಪಿಜೆಎಫ್) ಸಹ ಸಂಸ್ಥಾಪಕ ಮೋ ಧಲಿವಾಲ್  ಶಂತನು ಮುಲಿಕ್‌ ನನ್ನು ಸಂಪರ್ಕಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಲ್ಲದೆ ದೆಹಲಿ ಹೊರವಲಯದಲ್ಲಿ ರೈತರ ಪ್ರತಿಭಟನೆ ಹಾಗೂ ಆಂದೋಲನ ಪ್ರಾರಂಭವಾಗುತ್ತಿದ್ದಂತೆ ರೈತ ನಾಯಕರನ್ನು ಸಂಪರ್ಕಿಸಬೇಕು ಎಂದು ಕೇಳಿಕೊಂಡಿದ್ದ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮ ವರದಿದೆ ಮಾಡಿದೆ.

     ಮುಂಬೈ ಮೂಲದ ವಕೀಲೆ ಹಾಗೂ ಹೋರಾಟಗಾರ್ತಿ ನಿಕಿತಾ ಜಾಕೋಬ್ ಜೊತೆ ಶಂತನು ನಿರಂತರ ಸಂಪರ್ಕ ಹೊಂದಿದ್ದ. ಟೆಲಿಗ್ರಾಮ್, ಇನ್‍ಸ್ಟಾಗ್ರಾಮ್, ಪ್ರೊಟೋಮೇಲ್ ಬಳಸಿ ಇಬ್ಬರೂ ಮಾತುಕತೆ ನಡೆಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ರೈತರ ಪ್ರತಿಭಟನೆ ಕುರಿತು ಸ್ವೀಡಿಷ್ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‍ಬರ್ಗ್ ಹಂಚಿಕೊಂಡಿರುವ ಟೂಲ್‍ಕಿಟ್‍ಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದು, ಜಾಕೋಬ್ ಸೋಮವಾರ ಬಾಂಬೆ ಹೈ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದಾಳೆ.

    ಮುಂಬೈ ಮೂಲದ ನಿಕಿತಾ ಜಾಕೋಬ್ ಶನಿವಾರ ಬಂಧಿಸಲ್ಪಟ್ಟಿದ್ದ 21 ವರ್ಷದ ಪರಿಸರ ಹೋರಾಟಗಾರ್ತಿ ದಿಶಾ ರವಿ ಹಾಗೂ ಈ ಪ್ರಕರಣದ ಶಂಕಿತ ಶಾಂತನುನನ್ನು ಸಂಪರ್ಕಿಸಿರುವುದು ಇದೇ ವೇಳೆ ಬಹಿರಂಗವಾಗಿದೆ.

    ಮೂಲಗಳ ಪ್ರಕಾರ, ಧಲಿವಾಲ್ ಕೇವಲ ಸಾಮಾಜಿಕ ಜಾಲತಾಣಗಳ ಪ್ರಭಾವಿಗಳನ್ನು ಮಾತ್ರ ಸಂಪರ್ಕಿಸಿಲ್ಲ. ಬದಲಿಗೆ ನವೆಂಬರ್‍ನಲ್ಲಿ ದೆಹಲಿಯ ವಿವಿಧ ಗಡಿಗಳಲ್ಲಿ ನಡೆಯುತ್ತಿದ್ದ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಟ್ವೀಟ್ ಮಾಡುತ್ತಿದ್ದ ಕೆನಡಾದ ಸಂಸದರ ಜೊತೆ ಸಹ ಸಂಪರ್ಕ ಹೊಂದಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

    ಟೂಲ್‍ಕಿಟ್ ದಾಖಲೆ ತಯಾರಿಕೆಯಲ್ಲಿ ಕೆಲ ರೈತ ಮುಖಂಡರ ಪಾತ್ರ ಇರುವ ಬಗ್ಗೆ ಸಹ ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಫೇಕ್ ಐಡಿ ಬಳಸಿ ಗಣರಾಜ್ಯೋತ್ಸ ದಿನದಂದು ಹಿಂಸಾಚಾರ ಬಡೆಸುವ ಬಗ್ಗೆ ಜನವರಿ 11ರಂದು ಜಾಕೋಬ್, ದಿಶಾ ಹಾಗೂ ಶಾಂತನು ಝೂಮ್ ಆ್ಯಪ್ ಮೂಲಕ ಮೀಟಿಂಗ್ ನಡೆಸಿದ್ದರು. ಹೀಗಾಗಿ ಈ ಮೀಟಿಂಗ್‍ನಲ್ಲಿ ಭಾಗವಹಿಸಿದವರ ಯುಆರ್‍ಎಲ್ ಹಾಗೂ ಐಪಿ ಅಡ್ರೆಸ್ ನೀಡುವಂತೆ ದೆಹಲಿ ಪೊಲೀಸರು ಝೂಮ್ ಸಂಸ್ಥೆಗೆ ಪತ್ರ ಬರೆದಿದ್ದಾರೆ.

    ಟೂಲ್‍ಕಿಟ್‍ನ್ನು ಕಳುಹಿಸಲು ಡಿಸೆಂಬರ್‍ನಲ್ಲಿ ದಿಶಾ ರಚಿಸಿದ ವಾಟ್ಸಪ್ ಗ್ರೂಪ್‍ಗೆ ಅಂತರಾಷ್ಟ್ರೀಯ ರೈತರ ಮುಷ್ಕರ ಎಂದು ಹೆಸರಿಡಲಾಗಿತ್ತು. ಈಗ ಡಿಲೀಟ್ ಮಾಡಲಾದ ಈ ಗುಂಪಿನಲ್ಲಿ 10ಕ್ಕೂ ಹೆಚ್ಚು ಸದಸ್ಯರನ್ನು ಸೇರಿಸಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಈ ಗ್ರೂಪ್‍ನ ವಿವರಗಳು ಹಾಗೂ ಸದಸ್ಯರ ಚಾಟ್‍ಗಳನ್ನು ನೀಡುವಂತೆ ಪೊಲೀಸರು ವಾಟ್ಸಪ್‍ಗೆ ಸಹ ಪತ್ರ ಬರೆದಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

  • ಒಂದು ವರ್ಷ ಒಲಿಂಪಿಕ್ಸ್ ಮುಂದೂಡಿಕೆ?

    ಒಂದು ವರ್ಷ ಒಲಿಂಪಿಕ್ಸ್ ಮುಂದೂಡಿಕೆ?

    ಟೋಕಿಯೊ: ಕೊರೊನಾ ವೈರಸ್ ಮರಣ ಮೃದಂಗಕ್ಕೆ ವಿಶ್ವವೇ ತತ್ತರಿಸಿದ್ದು ಅನಿವಾರ್ಯವಾಗಿ ಈ ವರ್ಷ ನಡೆಯಬೇಕಿದ್ದ ಒಲಿಂಪಿಕ್ಸ್ ಕ್ರೀಡಾಕೂಟ ಒಂದು ವರ್ಷ ಮುಂದೂಡಿಕೆಯಾಗುವ ಸಾಧ್ಯತೆಯಿದೆ.

    ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಮತ್ತು ಆತಿಥೇಯ ರಾಷ್ಟ್ರ ಜಪಾನ್ ನಿಗದಿತ ವೇಳಾಪಟ್ಟಿಯಂತೆ ಒಲಿಂಪಿಕ್ಸ್ ನಡೆಸುವುದಾಗಿ ಹೇಳುತ್ತಿದ್ದವು. ಆದರೆ ಈಗ ಒಲಿಂಪಿಕ್ಸ್ ಮುಂದೂಡುವ ನಿಲುವನ್ನು ತೋರಿಸುತ್ತಿವೆ ಎಂದು ವರದಿಯಾಗಿದೆ.

    ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಟೋಕಿಯೊ ಒಲಿಂಪಿಕ್ಸ್‍ಗೆ ಸಂಬಂಧಿಸಿದಂತೆ ಕೆನಡಾ ಮತ್ತು ಆಸ್ಟ್ರೇಲಿಯಾ ಪ್ರಮುಖ ನಿರ್ಧಾರ ಕೈಗೊಂಡಿವೆ. ಟೋಕಿಯೊ ಕ್ರೀಡಾಕೂಟಕ್ಕೆ ತಮ್ಮ ಆಟಗಾರರನ್ನು ಕಳುಹಿಸುವುದಿಲ್ಲ ಎಂದು ಉಭಯ ದೇಶಗಳು ಸ್ಪಷ್ಟನೆ ನೀಡಿವೆ. ಇದನ್ನೂ ಓದಿ: ಕೊರೊನಾ ಭೀತಿ ಇದ್ರೂ ಒಲಿಂಪಿಕ್ ಜ್ಯೋತಿ ನೋಡಲು ಅರ್ಧ ಕಿ.ಮೀ. ಕ್ಯೂ

    ಕೆನಡಾ ಒಲಿಂಪಿಕ್ಸ್ ಸಮಿತಿ (ಸಿಒಸಿ) ಮತ್ತು ಕೆನಡಾ ಪ್ಯಾರಾ ಒಲಿಂಪಿಕ್ಸ್ ಸಮಿತಿ (ಸಿಪಿಸಿ) ಕ್ರೀಡಾಪಟುಗಳ ಆಯೋಗವು ರಾಷ್ಟ್ರೀಯ ಕ್ರೀಡಾ ಒಕ್ಕೂಟ ಮತ್ತು ಕೆನಡಾ ಸರ್ಕಾರದೊಂದಿಗೆ ಚರ್ಚಿಸಿದ್ದು, ತಮ್ಮ ಆಟಗಾರರನ್ನು ಟೋಕಿಯೊಗೆ ಕಳುಹಿಸದಿರಲು ಕಠಿಣ ನಿರ್ಧಾರವನ್ನು ತೆಗೆದುಕೊಂಡಿದೆ. ಜೊತೆಗೆ ಆಟಗಾರರ ಮತ್ತು ವಿಶ್ವ ಸಮುದಾಯದ ಆರೋಗ್ಯಕ್ಕಿಂತ ಬೇರೆ ಯಾವುದೂ ನಮಗೆ ಮುಖ್ಯವಲ್ಲ ಎಂದು ಅಭಿಪ್ರಾಯಪಟ್ಟಿದೆ.  ಇದನ್ನೂ ಓದಿ: ಕೊರೊನಾ ಎಫೆಕ್ಟ್ – ಮನೆಯಲ್ಲೇ ಏಕಾಂಗಿಯಾಗಿ ಬೀಚ್ ವಾಲಿಬಾಲ್ ಆಡಿದ ರಾಸ್: ವಿಡಿಯೋ

    ಒಲಿಂಪಿಕ್ಸ್ ಅನ್ನು ಮುಂದೂಡಲು ಒಂದು ಆಯ್ಕೆ ಇದೆ ಎಂದು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ (ಐಒಸಿ) ಅಧ್ಯಕ್ಷ ಥಾಮಸ್ ಬಾಕ್ ಹೇಳಿದ್ದಾರೆ. ಆದರೆ ರದ್ದು ಮಾಡುವುದು ನಮ್ಮ ಕಾರ್ಯಸೂಚಿಯಲ್ಲಿಲ್ಲ. ‘ನಾವು ಜಗತ್ತಿನಾದ್ಯಂತÀ ಪರಿಸ್ಥಿತಿ ಮತ್ತು ಒಲಿಂಪಿಕ್ಸ್‍ನ ಪ್ರಭಾವದ ಬಗ್ಗೆ ಪಾಲುದಾರರೊಂದಿಗೆ ಚರ್ಚಿಸಿದ್ದೇವೆ. ಮುಂದಿನ 4 ವಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

    ಇದೇ ವಿಚಾರವಾಗಿ ಸೋಮವಾರ ಜಪಾನ್ ಸಂಸತ್ತಿನಲ್ಲಿ ಮಾತನಾಡಿದ ಪ್ರಧಾನಿ ಶಿಂಜೊ ಅಬೆ, ‘ನಾವು ಕ್ರೀಡಾಕೂಟವನ್ನು ಆಯೋಜಿಸಲು ಬದ್ಧರಾಗಿದ್ದೇವೆ. ಆಟಗಾರರ ಸುರಕ್ಷತೆಗೆ ಧಕ್ಕೆಯುಂಟಾಗುವುದಿಲ್ಲ. ಆದರೆ ಒಲಿಂಪಿಕ್ಸ್ ಅನ್ನು ಸುರಕ್ಷಿತವಾಗಿ ನಡೆಸಲು ಸಾಧ್ಯವಿಲ್ಲ ಎಂದು ಭಾವಿಸಿದರೆ, ನಾವು ಮುಂದೂಡುತ್ತೇವೆ ಎಂದು ಹೇಳಿದ್ದರು.

    ಶೇ.70ರಷ್ಟು ಅಮೆರಿಕದ ಆಟಗಾರರು ಒಲಿಂಪಿಕ್ಸ್ ಅನ್ನು ಮುಂದೂಡಲು ಒಲವು ತೋರಿದ್ದಾರೆ. ಇತ್ತ ಕ್ರೀಡಾಕೂಟವು 2020ರ ಜುಲೈ 24ರಿಂದ ಆಗಸ್ಟ್ 9ರವರೆಗೆ ನಡೆದರೆ ಆಟಗಾರರನ್ನು ಕಳುಹಿಸುತ್ತೇವೆ ಎಂದು ಕೆನಡಾ ಮತ್ತು ಆಸ್ಟ್ರೇಲಿಯಾ ಪಟ್ಟು ಹಿಡಿದಿವೆ.