Tag: canceled

  • ಕನ್ನಡದ ಸರಿಗಮಪ ಗ್ರ್ಯಾಂಡ್ ಫಿನಾಲೆ ರದ್ದು: ಸಚಿವರ ಸಭೆಯಲ್ಲಿ ನಡೆದಿದ್ದೇನು?

    ಕನ್ನಡದ ಸರಿಗಮಪ ಗ್ರ್ಯಾಂಡ್ ಫಿನಾಲೆ ರದ್ದು: ಸಚಿವರ ಸಭೆಯಲ್ಲಿ ನಡೆದಿದ್ದೇನು?

    ನಿನ್ನೆ ಯಾದಗಿರಿಯಲ್ಲಿ (Yadagiri) ನಡೆಯಬೇಕಿದ್ದ ಜೀ ಕನ್ನಡ ವಾಹಿನಿಯ ಸಂಗೀತ ರಿಯಾಲಿಟಿ ಶೋ ‘ಸರಿಗಮಪ’ (Saregamappa) ಕಾರ್ಯಕ್ರಮ ಶುರುವಾಗುವ ಅರ್ಧ ಗಂಟೆ ಮುಂಚೆಯೇ ರದ್ದಾಗಿದೆ. ಸಂಜೆ 6 ಗಂಟೆಗೆ ಫಿನಾಲೆ ಶೋ ನಡೆಯಬೇಕಿತ್ತು. ಅದಕ್ಕೂ ಅರ್ಧಗಂಟೆ ಮುಂಚೆ ವೇದಿಕೆಗೆ ಬಂದ ವಾಹಿನಿಯ ಪ್ರತಿನಿಧಿ, ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮವು ರದ್ದಾದ (Canceled) ಬಗ್ಗೆ ಮಾಹಿತಿ ನೀಡಿದರು. ಸಹಜವಾಗಿಯೇ ಅಭಿಮಾನಿಗಳಿಗೆ ಈ ನಡೆ ನಿರಾಸೆ ಮೂಡಿಸಿತು.

    ಯಾದರಿಗಿ ಜಿಲ್ಲಾ ಮೈದಾನದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ಅಂದಾಜು 35 ಸಾವಿರ ಜನರು ನೆರೆದಿದ್ದರು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, (Dinesh Gundurao) ಕಾರ್ಯಕ್ರಮಕ್ಕೂ ಮುನ್ನ ಜಿಲ್ಲೆಯ ಅಧಿಕಾರಿಗಳ ಜೊತೆ ಕೆಡಿಪಿ ಸಭೆ ಮಾಡುತ್ತಿದ್ದರು. ಅದೇ ವೇಳೆಯಲ್ಲೇ  ಕಾರ್ಯಕ್ರಮ ನಡೆಸದಂತೆ ಗುಪ್ತಚರ ಇಲಾಖೆಯಿಂದ (Intelligence Department) ಮಾಹಿತಿ ಬಂದಿದೆ ಎಂದು ಹೇಳಲಾಗುತ್ತಿದೆ. ಗೃಹ ಸಚಿವರು ಹಾಗೂ ಪೊಲೀಸ್ ಹಿರಿಯ ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿ, ಕಾರ್ಯಕ್ರಮ ರದ್ದು ಮಾಡುವಂತೆ ಸೂಚಿಸಿದ್ದಾರೆ.

    ಬೆಂಗಳೂರಿನಲ್ಲಿ ನಡೆದ ಬಾಂಬ್ ಸ್ಫೋಟದ ತಲೆಬಿಸಿಯಲ್ಲಿರುವ ಪೊಲೀಸ್ ಇಲಾಖೆಯು, ಕಾರ್ಯಕ್ರಮ ನೋಡಲು ಈ ಪ್ರಮಾಣದಲ್ಲಿ ಜನರು ಸೇರಿದ್ದರಿಂದ ಏನಾದರೂ ಸಣ್ಣ ಅವಘಡ ನಡೆದರೂ, ಅನಾಹುತ ತಪ್ಪಿದ್ದಲ್ಲ ಎಂದರಿತು ಕಾರ್ಯಕ್ರಮವನ್ನು ರದ್ದು ಮಾಡುವಂತೆ ಸೂಚಿಸಿದ್ದಾರೆ.

    ಜಿಲ್ಲಾಡಳಿತಕ್ಕೆ ಇಂಥದ್ದೊಂದ ಸಂದೇಶ ಬಂದ ತಕ್ಷಣವೇ ಜೀ ವಾಹಿನಿಯ ಆಯೋಜಕರಿಗೆ ಮಾಹಿತಿ ನೀಡಿ, ಕಾರ್ಯಕ್ರಮವನ್ನು ರದ್ದು ಮಾಡುವಂತೆ ತಿಳಿಸಿದ್ದಾರೆ. ಅನಿವಾರ್ಯವಾಗಿ ಕಾರ್ಯಕ್ರಮ ರದ್ದು ಮಾಡಿದೆ ವಾಹಿನಿ. ಗುಪ್ತಚರ ಮಾಹಿತಿಯನ್ನು ಬಹಿರಂಗ ಪಡಿಸದೇ ತಾಂತ್ರಿಕ ಕಾರಣವನ್ನು ನೀಡಿ, ಮೈದಾನವನ್ನು ಖಾಲಿ ಮಾಡಿಸಲಾಗಿದೆ.

    ಕಾರ್ಯಕ್ರಮ ರದ್ದಾದ ಕುರಿತಂತೆ ನಾನಾ ರೆಕ್ಕೆಪುಕ್ಕಗಳನ್ನೂ ಕಟ್ಟಲಾಗುತ್ತಿದೆ. ರಾಜಕೀಯ ಬಣ್ಣವನ್ನೂ ಬಳೆಯಲಾಗುತ್ತಿದೆ. ರಾಜಕಾರಣಿಗಳ ಸಣ್ಣತನದಿಂದಾಗಿ ಈ ಕಾರ್ಯಕ್ರನ ನಡೆಯಲಿಲ್ಲ ಎಂದು ಚರ್ಚಿಸಲಾಗುತ್ತಿದೆ. ಆದರೆ, ಅದೆಲ್ಲವೂ ಸುಳ್ಳು ಅಂತಿದ್ದಾರೆ ವಾಹಿನಿಯ ಪ್ರತಿನಿಧಿ.

  • ಕನ್ನಡದ ಸರಿಗಮಪ ಗ್ರ್ಯಾಂಡ್ ಫಿನಾಲೆ ದಿಢೀರ್ ರದ್ದು: ಕಾರಣ ಹಲವು

    ಕನ್ನಡದ ಸರಿಗಮಪ ಗ್ರ್ಯಾಂಡ್ ಫಿನಾಲೆ ದಿಢೀರ್ ರದ್ದು: ಕಾರಣ ಹಲವು

    ನ್ನಡದ ಹೆಸರಾಂತ ಜೀ ಕನ್ನಡ ವಾಹಿನಿಯ ಜನಪ್ರಿಯ ಸಂಗೀತ ಶೋ ಸರಿಗಮಪ (Saregamapa)ಗ್ರ್ಯಾಂಡ್ ಫಿನಾಲೆ ತಲುಪಿದೆ. ಈ ಬಾರಿಯ ಫಿನಾಲೆಯಲ್ಲಿ ಯಾದಗಿರಿ (Yadagiri) ಜಿಲ್ಲಾ ಮೈದಾನದಲ್ಲಿ ನಡೆಸಲು ವಾಹಿನಿ ತೀರ್ಮಾನ ತಗೆದುಕೊಂಡಿತ್ತು. ಅಂದುಕೊಂಡಂತೆ ಆಗಿದ್ದರೆ, ನಿನ್ನೆ ರಾತ್ರಿ ಫಿನಾಲೆ ಮುಗಿದು, ವಿಜೇತರ ಕೈಯಲ್ಲಿ ಟ್ರೋಫಿ ಇರಬೇಕಿತ್ತು. ಇನ್ನೇನು ಕಾರ್ಯಕ್ರಮ ಶುರುವಾಗಬೇಕು ಆಗ ವಾಹಿನಿಯ ಪ್ರತಿನಿಧಿ ಕಾರ್ಯಕ್ರಮ ರದ್ದಾಗಿರುವ ಕುರಿತು ಪ್ರಕಟನೆ ನೀಡಿ ಅಭಿಮಾನಿಗಳನ್ನು ನಿರಾಸೆ ಮಾಡಿದ್ದಾರೆ.

    ಅಷ್ಟಕ್ಕೂ ಕಾರ್ಯಕ್ರಮ ದಿಢೀರ್ ಅಂತ ರದ್ದಾಗಲು ತಾಂತ್ರಿಕ ಕಾರಣವನ್ನು ನೀಡಲಾಗುತ್ತಿದೆ. ವಾಹಿನಿಯ ಪ್ರತಿನಿಧಿಯು ವೇದಿಕೆಯ ಮೇಲೆ ತಾಂತ್ರಿಕ ಕಾರಣವನ್ನೇ ನೀಡಿದ್ದಾರೆ. ಆದರೆ, ಕಾರ್ಯಕ್ರಮ ರದ್ಧಾಗಲು ಬೇರೆಯದ್ದೇ ಕಾರಣವನ್ನು ನೀಡಲಾಗುತ್ತಿದೆ. ಕಾರ್ಯಕ್ರಮವನ್ನು ಯಾದಗಿರಿಯಲ್ಲಿ ನೆಡೆಸಲು ಪೊಲೀಸರು ಪರ್ಮಿಷನ್ ಕೊಟ್ಟ ನಂತರವೂ ರದ್ಧಾದ ಕಾರಣದಿಂದಾಗಿ ಸಾಕಷ್ಟು ಅನುಮಾನ ಮೂಡಿದೆ.

    ಈ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವರು ಸೇರಿದಂತೆ ಅನೇಕ ಗಣ್ಯರು ಭಾಗಿ ಆಗಬೇಕಿತ್ತು. ಕಾರ್ಯಕ್ರಮದಲ್ಲಿ ಭಾಗಿ ಆಗುವುದಕ್ಕಾಗಿಯೇ ಸಚಿವ ದಿನೇಶ್ ಗುಂಡೂರಾವ್ ಯಾದಗಿರಿಗೆ ಬಂದಿಳಿದಿದ್ದರು. ವಾಹಿನಿಯ ಮುಖ್ಯಸ್ಥರು, ಸಂಗೀತ ನಿರ್ದೇಶಕ ಹಂಸಲೇಖ ಮತ್ತು ಅರ್ಜುನ್ ಜನ್ಯ ಗಾಯಕರಾದ ವಿಜಯ್ ಪ್ರಕಾಶ್, ನಿರೂಪಕಿ ಅನುಶ್ರೀ, ಶೋ ಸ್ಪರ್ಧಿಗಳು, ಹೆಸರಾಂತ ಗಾಯಕ ಗಾಯಕಿಯರ ತಂಡವೇ ಕಾರ್ಯಕ್ರಮದಲ್ಲಿ ಭಾಗಿ ಆಗಬೇಕಿತ್ತು. ಮೂವತ್ತು ಸಾವಿರಕ್ಕೂ ಹೆಚ್ಚು ಜನರು ಮೈದಾನದಲ್ಲಿ ಸೇರಿದ್ದರು. ಈ ಅಪಾರ ಪ್ರಮಾಣದಲ್ಲಿ ಸೇರಿದ ಜನರೇ ಕಾರ್ಯಕ್ರಮ ರದ್ದಿಗೆ ಕಾರಣರಾದರು ಎನ್ನುವುದು ಇನ್ ಸೈಡ್ ಸ್ಟೋರಿ.

    ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟದಿಂದ ಬೆಚ್ಚಿ ಬಿದ್ದಿರುವ ಪೊಲೀಸ್ ಇಲಾಖೆ, ಆತನ ಹುಡುಕಾಟದಲ್ಲಿ ತಲೆ ಕೆಡಿಸಿಕೊಂಡು ಕೂತಿದೆ. ಶಂಕಿತ ವ್ಯಕ್ತಿಯು ಬಳ್ಳಾರಿಯಿಂದ ಯಾದಗಿರಿಯತ್ತ ಪ್ರಯಾಣ ಬೆಳೆಸಿದ್ದಾರೆ ಎನ್ನುವ ಮಾಹಿತಿ ಕೂಡ ಹರಿದಾಡುತ್ತಿದೆ. ಈ ಕಾರಣದಿಂದಾಗಿ ರಾಜ್ಯ ಗುಪ್ತಚರ ( Intelligence Department)  ಇಲಾಖೆಯು ಕಾರ್ಯಕ್ರಮ ರದ್ದು ಮಾಡುವಂತೆ ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿತ್ತು ಎಂದು ಹೇಳಲಾಗುತ್ತಿದೆ. ಇದೇ ಕಾರಣದಿಂದಾಗಿ ದಿಢೀರ್ ಅಂತ ಕಾರ್ಯಕ್ರಮ ನಿಲ್ಲಿಸಲಾಗಿದೆ ಎನ್ನುವುದು ಪೊಲೀಸ್ ಮೂಲಗಳ ಮಾಹಿತಿ.

  • ವಿಧಾನಸಭೆ ಚುನಾವಣೆ 2023: ಸುದೀಪ್ ರೋಡ್ ಶೋ ಮತ್ತೆ ರದ್ದು

    ವಿಧಾನಸಭೆ ಚುನಾವಣೆ 2023: ಸುದೀಪ್ ರೋಡ್ ಶೋ ಮತ್ತೆ ರದ್ದು

    ಕಿಚ್ಚ ಸುದೀಪ್ (Sudeep) ಇಂದು ಬೆಳಗಾವಿ (Belgaum) ಜಿಲ್ಲೆಯ ಬಿಜೆಪಿ (BJP) ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲು ತೆರಳಿದ್ದಾರೆ. ಇಂದು ಒಟ್ಟು ನಾಲ್ಕು ಕ್ಷೇತ್ರಗಳಲ್ಲಿ ಅವರು ರೋಡ್ ಶೋ (Road Show) ನಡೆಸಬೇಕಿತ್ತು. ಅದರಲ್ಲಿ ಒಂದು ರದ್ದಾಗಿದೆ (Canceled). ಬೆಳಗಾವಿ ಜಿಲ್ಲೆಯ, ಬೆಳಗಾವಿ ಗ್ರಾಮೀಣ ಕ್ಷೇತ್ರ ಪ್ರಚಾರದ ರೋಡ್ ಶೋ ತಾರೀಹಾಳದಲ್ಲಿ ನಡೆಯಬೇಕಿತ್ತು. ಅದು ರದ್ದಾಗಿದೆ.

    ಬೆಳಗ್ಗೆ 11.20ಕ್ಕೆ ಕಿತ್ತೂರು ಕ್ಷೇತ್ರದ ನೇಸರಗಿಯಲ್ಲಿ ಕಿಚ್ಚ ರೋಡ್ ಶೋ ನಡೆಸಿದರು. ಅದು ಮುಗಿಯುತ್ತಿದ್ದಂತೆಯೇ ಅವರು ತಾರೀಹಾಳ ಗ್ರಾಮಕ್ಕೆ ಹೋಗಬೇಕಿತ್ತು. ಆದರೆ, ಯುವಕನೊಬ್ಬನ ಹತ್ಯೆಯಾದ ಕಾರಣದಿಂದಾಗಿ ರೋಡ್ ಶೋ ರದ್ದಾಗಿದೆ. ಕ್ಷುಲ್ಲಕ ಕಾರಣಕ್ಕಾಗಿ ಯುವಕನೊಬ್ಬನ ಮರ್ಡರ್ ಆಗಿರುವ ಕಾರಣದಿಂದಾಗಿ ರದ್ದು ಪಡಿಸಲಾಗಿದೆ. ಇದನ್ನೂ ಓದಿ:ದೇಶವು ಸುರಕ್ಷಿತರ ಕೈಯಲ್ಲಿದೆ, ಭಯಪಡಬೇಕಿಲ್ಲ ಸಲ್ಮಾನ್ ಎಂದ ಕಂಗನಾ

    ಮಧ್ಯಾಹ್ನ 1 ಗಂಟೆಗೆ ತಾರೀಹಾಳದಲ್ಲಿ ರೋಡ್ ಶೋ ನಡೆಯಬೇಕಿತ್ತು. ರದ್ದಾಗಿದ್ದರಿಂದ ಆ ಸಮಯದಲ್ಲಿ ಊಟ ಮುಗಿಸಿಕೊಂಡು ಯಮಕನಮರಡಿ ಕ್ಷೇತ್ರದ ಅಭ್ಯರ್ಥಿಯ ಪರವಾಗಿ ವಂಟಮೂರಿ ಗ್ರಾಮದಲ್ಲಿ ಕಿಚ್ಚ ರೋಡ್ ಶೋ ನಡೆಸಿದ್ದಾರೆ. ಅಲ್ಲಿಂದ ಬೆಳಗಾವಿ ಉತ್ತರ ಮತ್ತು ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಸುದೀಪ್ ರೋಡ್ ಶೋ ಮಾಡಬೇಕಿದೆ.

    ಎರಡು ದಿನಗಳ ಹಿಂದೆಯೂ ಎರಡು ಕ್ಷೇತ್ರಗಳ ಪ್ರಚಾರದಲ್ಲಿ ಸುದೀಪ್ ಭಾಗಿಯಾಗಲು ಆಗಿರಲಿಲ್ಲ. ನವಲಗುಂದ ಮತ್ತು ಗದಗ ಕ್ಷೇತ್ರಗಳಿಗೆ ನಿಗದಿ ಆಗಿದ್ದ ಕಾರ್ಯಕ್ರಮದಲ್ಲಿ ವ್ಯತ್ಯಾಸವುಂಟಾಗಿದ್ದರಿಂದ  ಆ ಎರಡೂ ರೋಡ್ ಶೋಗಳು ಮೊನ್ನೆಯಷ್ಟೇ ರದ್ದಾಗಿದ್ದವು. ಎರಡು ದಿನಗಳ ಕಾಲ ವಿಶ್ರಾಂತಿ ಪಡೆದುಕೊಂಡು ಮತ್ತೆ ಇಂದು ಸುದೀಪ್ ಪ್ರಚಾರಕ್ಕೆ ತೆರಳಿದ್ದರು.

  • ಭಾನುವಾರ ನಿಗದಿಯಾಗಿದ್ದ ಆಲಮಟ್ಟಿ ಜಲಾಶಯದ ಬಾಗಿನ ಕಾರ್ಯಕ್ರಮ ರದ್ದು

    ಭಾನುವಾರ ನಿಗದಿಯಾಗಿದ್ದ ಆಲಮಟ್ಟಿ ಜಲಾಶಯದ ಬಾಗಿನ ಕಾರ್ಯಕ್ರಮ ರದ್ದು

    ಹುಬ್ಬಳ್ಳಿ: ಹವಾಮಾನ ವೈಪರೀತ್ಯದಿಂದಾಗಿ ಇಂದು ನಿಗದಿಯಾಗಿದ್ದ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

    ಕಾರ್ಯಕ್ರಮ ನಿಮಿತ್ತ ಪ್ರವಾಸ ಕೈಗೊಂಡಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಇಂದು ಮಧ್ಯಾಹ್ನ ನಗರದ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಆದರೆ ಬೆಳಗ್ಗಿನಿಂದಲೂ ಸುರಿಯುತ್ತಿರುವ ಮಳೆಯಿಂದಾಗಿ ಹೆಲಿಕಾಪ್ಟರ್ ಪೈಲಟ್ ಹವಾಮಾನ ಸರಿ ಇಲ್ಲದ ಕಾರಣ ಅನುಮತಿಗೆ ನಿರಾಕರಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಡಿಕೆ ಶಿವಕುಮಾರ್, ಸುರಿಯುತ್ತಿರುವ ಮಳೆಯಿಂದಾಗಿ ಪೈಲಟ್ ವಿಜಯಪುರ ಪ್ರಯಾಣಕ್ಕೆ ನಿರಾಕರಿಸಿದ್ದರು. ಹೀಗಾಗಿ ರಸ್ತೆ ಮೂಲಕ ತೆರಳಲು ನಿರ್ಧಾರ ಮಾಡಿದ್ದೇವು, ಆದರೆ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ವಾಹನಗಳ ಮುಖಾಂತರ ತಲುಪಲು ತಡವಾಗುತ್ತದೆ. ಈ ಹಿನ್ನೆಲೆಯಲ್ಲಿ ಬಾಗಿನ ಕಾರ್ಯಕ್ರಮವನ್ನು ರದ್ದುಗೊಳಿಸಿ ಇದೇ ಆಗಸ್ಟ್ 15ರಂದು ಕಾರ್ಯಕ್ರಮವನ್ನು ನಡೆಸುವುದಾಗಿ ಹೇಳಿದ್ದಾರೆ.

    ಸದ್ಯ ಮುಖ್ಯಮಂತ್ರಿ ಕುಮಾರಸ್ವಾಮಿಯವರು ವಿಮಾನ ನಿಲ್ದಾಣದಿಂದ ಬಸವರಾಜ ಹೊರಟ್ಟಿ ಮನೆಗೆ ತೆರಳಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಆಲಮಟ್ಟಿ ಬಾಗಿನ ಅರ್ಪಿಸುವ ಕಾರ್ಯಕ್ರಮವನ್ನು ರದ್ದು ಮಾಡಲಾಗಿದ್ದು, ಒಂದು ವಾರದ ಬಳಿಕ ಕಾರ್ಯಕ್ರಮವನ್ನು ನಡೆಸುವುದಾಗಿ ತಿಳಿಸಿದ್ದಾರೆ.

    ಹವಾಮಾನ ವೈಪರೀತ್ಯದಿಂದ ಏಕಾಏಕಿ ಸಿಎಂ ಕಾರ್ಯಕ್ರಮ ರದ್ದುಗೊಂಡಿದ್ದರಿಂದ, ಆಲಮಟ್ಟಿ ಜಲಾಶಯದಲ್ಲಿ ಮನವಿ ಕೊಡಲು ಬಂದಿದ್ದ ರೈತರು ಅಸಮಾಧಾನ ಹೊರಹಾಕಿ, ಆಕ್ರೋಶ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews