Tag: cancer

  • ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಧ್ರುವ ಸರ್ಜಾ ಕೂದಲು ದಾನ

    ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಧ್ರುವ ಸರ್ಜಾ ಕೂದಲು ದಾನ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಕ್ಯಾನ್ಸರ್ ಪೀಡಿತ ಮಕ್ಕಳಿಗೆ ತನ್ನ ಕೂದಲನ್ನು ದಾನ ಮಾಡಿದ್ದಾರೆ.

    ಧ್ರುವ ಅವರು ‘ಪೊಗರು’ ಚಿತ್ರಕ್ಕಾಗಿ ಕಳೆದ 2 ವರ್ಷದಿಂದ ಕೂದಲು ಬಿಟ್ಟಿದ್ದರು. ಇದೀಗ ಅವರ ಕೂದಲು ಹಾಗೂ ಗಡ್ಡಕ್ಕೆ ಕತ್ತರಿ ಬಿದ್ದಿದೆ. ಸಿನಿಮಾ ಕಂಪ್ಲೀಟ್ ಆದ ಹಿನ್ನೆಲೆಯಲ್ಲಿ ಧ್ರುವ ಅವರು ಹೇರ್ ಕಟ್ ಮಾಡಿಸಿದ್ದಾರೆ. ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ಈ ಕೂದಲು ಕೊಡೋದಾಗಿ ಧ್ರುವ ಹೇಳಿದ್ದಾರೆ.

    ಧ್ರುವ ಸರ್ಜಾ ನಟನೆಯ ‘ಪೊಗರು’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ನಂದಕಿಶೋರ್ ನಿರ್ದೇಶನದ ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಈ ಸಿನಿಮಾ ಬಿಡುಗಡೆಯನ್ನು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

    ಈ ಹಿಂದೆ ಚಿತ್ರ ಬಿಡುಗಡೆಯ ಬಗ್ಗೆ ಮಾತನಾಡಿದ್ದ ನಂದಕಿಶೋರ್, ‘ಪೊಗರು’ ಚಿತ್ರವನ್ನು ಡಿಸೆಂಬರ್ 25ರ ಕ್ರಿಸ್‍ಮಸ್ ಹಬ್ಬದಂದು ಅಥವಾ ಜನವರಿ ತಿಂಗಳ ಸಂಕ್ರಾಂತಿ ಹಬ್ಬದಂದು ರಿಲೀಸ್ ಮಾಡುವುದಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ. ಸಿನಿಮಾದಲ್ಲಿ ಧ್ರುವ ಸರ್ಜಾ ಅವರು ಕೂದಲು, ಗಡ್ಡ ಬಿಟ್ಟುಕೊಂಡು ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದರು.

  • ಕ್ಯಾನ್ಸರ್ ರೋಗಿಯ ಕೈ ಹಿಡಿದು ಹಾಡಿದ ನರ್ಸ್- ಮನಕಲಕುವ ವಿಡಿಯೋ ವೈರಲ್

    ಕ್ಯಾನ್ಸರ್ ರೋಗಿಯ ಕೈ ಹಿಡಿದು ಹಾಡಿದ ನರ್ಸ್- ಮನಕಲಕುವ ವಿಡಿಯೋ ವೈರಲ್

    – ಅಳುತ್ತಲೇ ಹಾಡಿ ಸಂತೈಸಿದ ದಾದಿ
    – ನೆಟ್ಟಿಗರ ಕಣ್ಣೀರು ತರಿಸಿತು ವಿಡಿಯೋ

    ನವದೆಹಲಿ: ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಯ ಕೈ ಹಿಡಿದು ನರ್ಸ್ ಒಬ್ಬರು ಹಾಡು ಹಾಡಿದ ಮನಕಲಕುವ ಘಟನೆಯೊಂದು ನಡೆದಿದೆ.

    ನರ್ಸ್ ಹಾಡುತ್ತಿರುವ ವಿಡಿಯೋ ಕಣ್ಣೀರು ತರುಸುವಂತಿದೆ. ಈ ವಿಡಿಯೋವನ್ನು ಸಿಮಾನ್ ಬಿಆರ್‍ಏಪ್‍ಸಿ ಹಾಪ್ಕಿನ್ಸ್ ಎಂಬ ಟ್ವಿಟ್ಟರ್ ಅಕೌಂಟಿನಿಂದ ಬುಧವಾರ ಅಪ್ಲೋಡ್ ಮಾಡಲಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

    ವಿಡಿಯೋದಲ್ಲೇನಿದೆ?:
    ವೃದ್ಧೆಯೊಬ್ಬರು ಆಸ್ಪತ್ರೆ ಬೆಡ್ ನಲ್ಲಿ ಮಲಗಿದ್ದಾರೆ. ಅವರ ಅಪಕ್ಕದಲ್ಲೇ ಒಬ್ಬರು ನರ್ಸ್ ಕುಳಿತಿದ್ದು, ಮತ್ತೊಬ್ಬರು ನಿಂತು ಚಿಕಿತ್ಸೆ ನೀಡುತ್ತಿದ್ದಾರೆ. ಪಕ್ಕದಲ್ಲಿ ಕುಳಿತಿರುವ ನರ್ಸ್ ವೃದ್ಧೆಯ ಕೈ ಹಿಡಿದು ಹಾಡು ಹಾಡಲು ಆರಂಭಿಸಿದ್ದಾರೆ. ನರ್ಸ್ ಕಣ್ಣೀರು ಹಾಕುತ್ತಳೆ ಹಾಡುತ್ತಿರುವಾಗ ವೃದ್ಧೆ ಕೂಡ ಹಾಡಿಗೆ ದನಿಗೂಡಿಸಿದ್ದಾರೆ. ಈ ಮೂಲಕ ಇಬ್ಬರೂ ಹಾಡು ಹಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

    ವಿಡಿಯೋ ಅಪ್ಲೋಡ್ ಮಾಡಿದವರು ಇದಕ್ಕೆ ಕ್ಯಾಪ್ಷನ್ ಕೂಡ ನೀಡಿದ್ದು, ಕ್ಯಾನ್ಸರ್ ನಿಂದ ಬಳಲುತ್ತಿದ್ದ ವೃದ್ಧೆಗೆ ನರ್ಸ್ ಹಾಡು ಹಾಡುತ್ತಿದ್ದಾರೆ. ಇದು ನೀವು ನೋಡಲು ಹೊರಟಿರುವ ಅತ್ಯಂತ ಸುಂದರವಾದ ವಿಚಾರವಾಗಿದೆ. ಈ ಮೂಲಕ ಜಗತ್ತಿನಲ್ಲಿ ಅನೇಕ ಅದ್ಭುತ ಮನಸ್ಸಿನ ಅಥವಾ ವ್ಯಕ್ತಿತ್ವವುಳ್ಳ ಜನರಿದ್ದಾರೆ ಎಂಬುದನ್ನು ನೀವು ನೆನಪಿಟ್ಟುಕೊಳ್ಳಿ ಎಂದು ಬರೆದುಕೊಳ್ಳಲಾಗಿದೆ.

    https://twitter.com/HopkinsBRFC/status/1306292694092787714

    ಸದ್ಯ ವೈರಲ್ ಆಗುತ್ತಿರುವ ಈ ವಿಡಿಯೋ ಇದೂವರೆಗೂ 2 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆಯಾಗಿದೆ. ಅಲ್ಲದೆ ಲೈಕ್ಸ್ ಗಳು ಕೂಡ ಬಂದಿದೆ. ಈ ರೀತಿಯ ವಿಚಾರಗಳು ನಮ್ಮಲ್ಲಿ ಮಾನವೀಯತೆಯ ಭರವಸೆ ಮೂಡಿಸುತ್ತವೆ. ಕೆಲವರು ನಾನು ಯಾವಾಗಲೂ ಗಂಭೀರವಾಗಿ ಕಾಣುತ್ತೇನೆ ಎಂದು ಹೇಳುತ್ತಾರೆ. ಆದರೆ ಇಂತಹ ವಿಚಾರಗಳನ್ನು ನೋಡಿದಾಗ ನನ್ನ ಮನಸ್ಸಿನ ಆಳದಲ್ಲಿ ಏನೋ ಅನಿಸುತ್ತದೆ. ಈ ಜಗತ್ತಿನಲ್ಲಿ ಇನ್ನೂ ಒಳ್ಳೆಯ ಮನಸ್ಸಿನವರಿದ್ದಾರೆ ಎಂದು ಟ್ವಿಟ್ಟರ್ ಬಳಕೆದಾರರೊಬ್ಬರು ಕಾಮೆಂಟ್ ಮಾಡಿದ್ದಾರೆ.

    ಮತ್ತೊಬ್ಬರು ಕಾಮೆಂಟ್ ಮಾಡಿ, ಇದು ತುಂಬಾ ಸುಂದರವಾಗಿದೆ. ದೇವರು ಆ ನರ್ಸ್ ನ್ನು ಆಶೀರ್ವದಿಸುತ್ತಾನೆ. ಆದರೆ ಅವರು ಅದನ್ನು ಹೇಗೆ ಮಾಡುತ್ತಾರೆ ಎಂದು ನನಗೆ ತಿಳಿದಿಲ್ಲ ಎಂದು ಬರೆದುಕೊಂಡಿದ್ದಾರೆ. ಹೀಗೆ ಹಲವಾರು ಕಾಮೆಂಟ್ ಗಳು ಬರುತ್ತಿವೆ.

    https://twitter.com/pa2fl96/status/1306307880522522633

  • ಕ್ಯಾನ್ಸರ್ ಗೆದ್ದ ಬಾಲೆಗೆ ಕೊರೊನಾ ಗೆಲ್ಲಲು ಆಗಲಿಲ್ಲ- ಸೋಂಕಿಗೆ 2 ವರ್ಷದ ಕಂದಮ್ಮ ಸಾವು

    ಕ್ಯಾನ್ಸರ್ ಗೆದ್ದ ಬಾಲೆಗೆ ಕೊರೊನಾ ಗೆಲ್ಲಲು ಆಗಲಿಲ್ಲ- ಸೋಂಕಿಗೆ 2 ವರ್ಷದ ಕಂದಮ್ಮ ಸಾವು

    ಬೆಂಗಳೂರು: ಕ್ಯಾನ್ಸರ್ ಗೆದ್ದ 2 ವರ್ಷದ ಬಾಲಕಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಎರಡು ವರ್ಷದ ಬಾಲಕಿಯ ಸಾವಿನ ಕಥೆ ಎಂತವರ ಕಣ್ಣಲ್ಲಿಯೂ ಕಣ್ಣೀರು ತರಿಸುತ್ತೆ.

    ಮೂಲತಃ ಪಶ್ಚಿಮ ಬಂಗಾಳ ಮೂಲದ ದಂಪತಿಯ ಎರಡು ವರ್ಷದ ಮಗು ಬ್ಲಡ್ ಕ್ಯಾನ್ಸರಿನಿಂದ ಬಳಲುತ್ತಿತ್ತು. 2019 ಡಿಸೆಂಬರ್ ನಲ್ಲಿ ಮಗುವನ್ನು ದಂಪತಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಕ್ಯಾನ್ಸರಿನಿಂದ ಚೇತರಿಕೆ ಕಾಣುತ್ತಿದ್ದಳು. ಇನ್ನೇನು ಬದುಕುವ ಆಸೆ ಚಿಗುರಿಕೊಂಡಾಗಲೇ ಮಗುವಿಗೆ ಕೊರೊನಾ ಹೆಮ್ಮಾರಿ ವಕ್ಕರಿಸಿತ್ತು.

    ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಮಗು ಕಳೆದ ಶನಿವಾರ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಳು. ಪಶ್ಚಿಮ ಬಂಗಾಳ ಮೂಲದ ದಂಪತಿಯಾದ ಕಾರಣದಿಂದ ಅವರಿಗೆ ಬೆಂಗಳೂರಿನಲ್ಲಿ ಮಗುವಿನ ಅಂತ್ಯಸಂಸ್ಕಾರ ನಡೆಸುವ ಬಗ್ಗೆಯೂ ಮಾಹಿತಿ ಇರಲಿಲ್ಲ. ಈ ವೇಳೆ ದಂಪತಿಯ ನೆರವಿಗೆ ಬಂದ ಆಸ್ಪತೆಯ ಸಿಬ್ಬಂದಿ ಸ್ವಯಂ ಸೇವಕರಾದ ಜಮೈದ್ ರೆಹಮಾನ್, ಅಬ್ದುಲ್ ರಜಾಕ್ ತಂಡಕ್ಕೆ ಮಾಹಿತಿ ನೀಡಿದ್ದರು.

    ಕೂಡಲೇ ಮಗುವಿನ ಅಂತ್ಯಸಂಸ್ಕಾರಕ್ಕೆ ನೆರವಾದ ಸ್ವಯಂ ಸೇವಕರು ಆಂಬುಲೆನ್ಸ್ ಮೂಲಕ ಮೃತದೇಹವನ್ನು ಸ್ಮಶಾನಕ್ಕೆ ತಂದಿದ್ದರು. ಮೊದಲ ಬಾರಿಗೆ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದ ಮಗುವಿನ ಅಂತ್ಯಸಂಸ್ಕಾರ ಮಾಡಿದ ಯುವಕರು ಭಾವುಕರಾಗಿದ್ದರು. ಕೊರೊನಾ ಸೋಂಕಿತರ ಮೃತದೇಹವನ್ನು ಸ್ಪರ್ಶಿಸದೆ ಅಂತ್ಯಸಂಸ್ಕಾರ ನಡೆಸುತ್ತಿದ್ದ ಯುವಕರು ಮಗುವನ್ನು ಕೈಯಲ್ಲಿ ಎತ್ತಿಕೊಂಡು ಸಾಗಿದ್ದರು. ಘಟನೆ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ್ದ ಜಮೈದ್ ರೆಹಮಾನ್, ದಯಮಾಡಿ ನಿಮ್ಮ ಮಕ್ಕಳನ್ನು ಕೊರೊನಾದಿಂದ ಕಾಪಾಡಿಕೊಳ್ಳಿ. ಸದಾ ಎಚ್ಚರ ವಹಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದರು.

  • ಕೊರೊನಾ ನಡುವೆ ಸದ್ದಿಲ್ಲದೆ ಹಲವರನ್ನು ಬಲಿ ಪಡೆಯುತ್ತಿದೆ ಕ್ಯಾನ್ಸರ್

    ಕೊರೊನಾ ನಡುವೆ ಸದ್ದಿಲ್ಲದೆ ಹಲವರನ್ನು ಬಲಿ ಪಡೆಯುತ್ತಿದೆ ಕ್ಯಾನ್ಸರ್

    ನವದೆಹಲಿ: ಕಳೆದ ಏಳು ತಿಂಗಳಿಂದ ದೇಶದಲ್ಲಿ ಕೊರೊನಾ ಆರ್ಭಟ ಜೋರಾಗಿದೆ. ಕೊರೊನಾ ಭೀತಿ ನಡುವೆ ಗೊತ್ತೇ ಆಗದಂತೆ ಮತ್ತಷ್ಟು ಭಯಾನಕ ರೋಗಗಳು ಮನುಕುಲವನ್ನು ಬಾಧಿಸಲು ಆರಂಭಿಸಿವೆ. ಇದಕ್ಕ ಸ್ಪಷ್ಟ ಉದಾಹರಣೆ ಕ್ಯಾನ್ಸರ್.

    ಕ್ಯಾನ್ಸರ್ ಸದ್ದಿಲ್ಲದೆ ಹಲವರನ್ನು ಬಲಿ ಪಡೆಯುತ್ತಿದ್ದು, ಈ ಕುರಿತು ಐಸಿಎಂಆರ್ ವರದಿಯನ್ನು ಬಿಡುಗಡೆ ಮಾಡಿದೆ. ಈ ವರದಿ ಭಾರತದ ಯುವಕರು, ಮಹಿಳೆಯರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಕ್ಯಾನ್ಸರ್ ಕೇವಲ ಮಧ್ಯಮ ವಯಸ್ಕರು ಹಾಗೂ ವೃದ್ಧರಲ್ಲಿ ಮಾತ್ರವಲ್ಲ ಯುವಕರಲ್ಲೂ ಹೆಚ್ಚು ಕಾಣಿಸಿಕೊಳ್ಳುತ್ತಿದೆ.

    ವೇಗವಾಗಿ ಹೆಚ್ಚುತ್ತಿವೆ ಕ್ಯಾನ್ಸರ್ ಪ್ರಕರಣಗಳು
    ಭಾರತದಲ್ಲಿ ಕೊರೊನಾ ಮಧ್ಯೆ ಕ್ಯಾನ್ಸರ್ ಕೂಡ ವೇಗವಾಗಿ ಹೆಚ್ಚುತ್ತಿದೆ. ಐಸಿಎಂಆರ್ ಬಿಡುಗಡೆ ಮಾಡಿರುವ ವರದಿ ಇಂತಹದ್ದೊಂದು ಆಘಾತದ ಸುದ್ದಿಯನ್ನು ಹೇಳಿದ್ದು, 2025 ರ ವೇಳೆಗೆ ಭಾರತದಲ್ಲಿ 16 ಲಕ್ಷಕ್ಕೂ ಅಧಿಕ ಮಂದಿ ಕ್ಯಾನ್ಸರ್ ಗೆ ತುತ್ತಾಗಲಿದ್ದಾರೆ ಎಂದು ವರದಿಯಲ್ಲಿ ಬಹಿರಂಗವಾಗಿದೆ.

    ಐಸಿಎಂಆರ್ ನೀಡಿರುವ ವರದಿ ಪ್ರಕಾರ ದೆಹಲಿ, ಮುಂಬೈ, ಬೆಂಗಳೂರು, ಅಹ್ಮದಾಬಾದ್ ಹಾಗೂ ಕೊಲ್ಕತ್ತಾದಂತಹ ದೊಡ್ಡ ನಗರಗಳಲ್ಲಿ ಹೆಚ್ಚು ಜನ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದು, ಇದರಲ್ಲಿ ಯುವಕರು ಮತ್ತು ಮಧ್ಯ ವಯಸ್ಕ ಮಹಿಳೆಯರು ಹೆಚ್ಚು ಎಂದು ವರದಿ ಉಲ್ಲೇಖಿಸಿದೆ.

    ಯಾವ್ಯಾವ ಕ್ಯಾನ್ಸರ್, ಹೇಗೆ ಹರಡುತ್ತಿದೆ?
    ಭಾರತದಲ್ಲಿ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಹೆಚ್ಚು ಕಂಡು ಬರುತ್ತಿದ್ದು, ಪೂರ್ವ ರಾಜ್ಯಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್, ಮೆದುಳು, ತಲೆ ಮತ್ತು ಕುತ್ತಿಗೆ ಬಳಿ ಕಾಣಿಸಿಕೊಳ್ಳುವ ಕ್ಯಾನ್ಸರ್ ಹೆಚ್ಚಿದೆ. ಅತಿಯಾದ ತಂಬಾಕು ಸೇವನೆ ಮತ್ತು ಸೌದೆ ಒಲೆ ಬಳಕೆ ಇದಕ್ಕೆ ಕಾರಣ. ಮಧ್ಯ ಪ್ರದೇಶದ ಯುವಕರಲ್ಲಿ ಬಾಯಿ ಕ್ಯಾನ್ಸರ್ ಹೆಚ್ಚು ಕಾಣಿಸಿಕೊಂಡಿದ್ದು, ಇದಕ್ಕೆ ತಂಬಾಕು, ಪಾನ್ ಮಸಾಲ ಕಾರಣ ಎಂದು ವರದಿ ಹೇಳಿದೆ.

    ಗಂಗಾ ನದಿ ತಟದಲ್ಲಿರುವ ಉತ್ತರ ಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಪಿತ್ತ ಕೋಶದ ಕ್ಯಾನ್ಸರ್ ಹೆಚ್ಚಾಗಿದ್ದು, ಇದರ ಜೊತೆಗೆ ತಲೆ ಮತ್ತು ಕುತ್ತಿಗೆ ಸಂಬಂಧಿಸಿದ ಕ್ಯಾನ್ಸರ್ ಬಂದಿದೆ. ಇದಕ್ಕೆ ಜಲ ಮಾಲಿನ್ಯ, ಪ್ರೊಟಿನ್ ರಹಿತ ಆಹಾರ ಪದ್ಧತಿ, ಶುಚಿತ್ವ ಸಮಸ್ಯೆ ಕಾರಣವಾಗಿದೆ. ಪಶ್ಚಿಮ ಬಂಗಾಳದಲ್ಲಿ ಶ್ವಾಸಕೋಶದ ಕ್ಯಾನ್ಸರ್ ಮೂತ್ರ ಕೋಶದ ಕ್ಯಾನ್ಸರ್ ಹೆಚ್ಚಿದ್ದು, ಗಾಳಿ ಮತ್ತು ಜಲ ಮಾಲಿನ್ಯ ಕಾರಣವಂತೆ.

    ದಕ್ಷಿಣ ಭಾರತದ ರಾಜ್ಯಗಳಲ್ಲಿ ಉದರ ಸಂಬಂಧಿ ಕ್ಯಾನ್ಸರ್ ಪ್ರಮಾಣ ಹೆಚ್ಚಿದ್ದು, ಆಹಾರದಲ್ಲಿ ಮಸಾಲೆ ಪದಾರ್ಥಗಳ ಹೆಚ್ಚು ಸೇವನೆ ಕ್ಯಾನ್ಸರ್‍ಗೆ ಕಾರಣವಾಗಿದೆ. ಪಂಜಾಬ್ ನಲ್ಲಿ ಕಿಡ್ನಿ, ಮೂತ್ರ ಕೋಶ ಮತ್ತು ಸ್ತನ ಕ್ಯಾನ್ಸರ್ ಹೆಚ್ಚಿದೆ. ಗುಜರಾತ್, ರಾಜಸ್ಥಾನದಲ್ಲಿ ಕತ್ತು, ತಲೆ ಕ್ಯಾನ್ಸರ್ ಪ್ರಮಾಣ ಅಧಿಕವಾಗಿದ್ದು ಇದಕ್ಕೆ ವಾತಾವರಣದಲ್ಲಿನ ಮಾಲಿನ್ಯ, ಆಹಾರದಲ್ಲಿ ಕೀಟ ನಾಶಕದ ಪ್ರಮಾಣ ಹೆಚ್ಚಿರುವುದು ಕಾರಣ. ದೆಹಲಿ, ಮುಂಬೈನಲ್ಲಿ ಶ್ವಾಸಕೋಶದ ಕ್ಯಾನ್ಸರ್ ಅಧಿಕವಾಗಿದ್ದು, ಇದಕ್ಕೆ ವಾಯು ಮಾಲಿನ್ಯ ಕಾರಣವಾಗಿದೆ ಎನ್ನಲಾಗಿದೆ.

    ಸುಮಾರು 20-25 ವರ್ಷದ ಯುವಕರಲ್ಲಿ ಕ್ಯಾನ್ಸರ್ ಹೆಚ್ಚಿದ್ದರೆ, ಒಟ್ಟು ಕ್ಯಾನ್ಸರ್ ಪ್ರಕರಣಗಳ ಪೈಕಿ ಪಾನ್ ಮಸಾಲಗೆ ಸಂಬಂಧಿಸಿದ್ದೇ ಶೇ.40ರಷ್ಟಿದೆ. ಸ್ತನ ಕ್ಯಾನ್ಸರ್ 2025 ರ ವೇಳೆಗೆ 4,27,273 ಮಹಿಳೆಯರಲ್ಲಿ ಕಾಣಿಸಿಕೊಳ್ಳಬಹುದಂತೆ ಇದು ಒಟ್ಟು ಕ್ಯಾನ್ಸರ್ ಪ್ರಕರಣಗಳ ಪೈಕಿ ಶೇ.14 ರಷ್ಟಾಗಿದ್ದು, ಉಳಿದ ಶೇ.46ರಷ್ಟು ಕ್ಯಾನ್ಸರ್ ಇತರೆ ಭಾಗಗಳಿಗೆ ಸಂಬಂಧಿಸಿದ್ದು ಎಂದು ವರದಿ ಹೇಳಿದೆ.

    ಕ್ಯಾನ್ಸರ್ ರೋಗಿಗಳ ಪೈಕಿ ಆರಂಭದಲ್ಲಿ ಸೂಕ್ತ ಚಿಕಿತ್ಸೆ ಪಡೆದರೆ ಮಾತ್ರ ಜೀವ ಹಾನಿ ತಪ್ಪಿಸಬಹದಿದ್ದು, ಸ್ವಲ್ಪ ಯಾಮಾರಿದರೂ ರೋಗಿಯ ಸಾವು ಖಚಿತ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಭಾರತದಲ್ಲಿ ಕೊರೊನಾಗಿಂತ ಕ್ಯಾನ್ಸರ್ ಅಪಾಯ ಎಂದು ವೈದ್ಯರು ವರದಿಯಲ್ಲಿ ಉಲ್ಲೇಖಿಸಿದ್ದಾರೆ.

  • ಕೆಜಿಎಫ್ ಅಧೀರನಿಗೆ ಕ್ಯಾನ್ಸರ್- ಶೀಘ್ರ ಚಿಕಿತ್ಸೆಗೆ ಅಮೆರಿಕಕ್ಕೆ ಹಾರಿದ ಸಂಜಯ್ ದತ್

    ಕೆಜಿಎಫ್ ಅಧೀರನಿಗೆ ಕ್ಯಾನ್ಸರ್- ಶೀಘ್ರ ಚಿಕಿತ್ಸೆಗೆ ಅಮೆರಿಕಕ್ಕೆ ಹಾರಿದ ಸಂಜಯ್ ದತ್

    ಮುಂಬೈ: ಎರಡು ದಿನಗಳ ಹಿಂದೆಯಷ್ಟೇ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಇದೀಗ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂಬ ವಿಚಾರವೊಂದು ಬೆಳಕಿಗೆ ಬಂದಿದೆ.

    ಈ ಸಂಬಂಧ ಪತ್ರಕರ್ತ ಕೋಮಲ್ ನಹ್ತಾ ಅವರು ಟ್ವೀಟ್ ಮಾಡಿ, ಸಂಜಯ್ ದತ್ ಅವರು ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಅವರು ಬೇಗ ಹುಷಾರಾಗಲಿ ಎಂದು ಪ್ರಾರ್ಥಿಸಿ ಅಂತ ತಿಳಿಸಿದ್ದಾರೆ.

    ಇತ್ತ ಸಂಜಯ್ ದತ್ ಟ್ವೀಟ್ ಮಾಡಿ, ಸಿನಿಮಾದಿಂದ ಸಣ್ಣ ಬ್ರೇಕ್ ಪಡೆದುಕೊಳ್ಳುವುದಾಗಿ ತಿಳಿಸಿದ್ದರು. ನನಗೆ ಚಿಕಿತ್ಸೆ ಮಾಡಿಸಿಕೊಳ್ಳಬೇಕಿದ್ದು, ಸ್ನೇಹಿತರು ಕುಟುಂಬಸ್ಥರು ನನ್ನ ಜೊತೆಗಿದ್ದಾರೆ. ಹೀಗಾಗಿ ನನ್ನ ಆತ್ಮೀಯರು ಏನೂ ಯೋಚನೆ ಮಾಡಬೇಡಿ. ಅಲ್ಲದೆ ವದಂತಿಗಳನ್ನು ಕೂಡ ನಂಬಬೇಡಿ. ನಿಮ್ಮೆಲ್ಲರ ಹಾರೈಕೆಯಿಂದ ನಾನು ಅತೀ ಶೀಘ್ರವೇ ಹುಷಾರಾಗಿ ನಿಮ್ಮ ಮುಂದೆ ಬರುತ್ತೇನೆ ಎಂದು ಬರೆದುಕೊಂಡಿದ್ದಾರೆ.

    ನಟನ ಆಪ್ತರೊಬ್ಬರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ನಟರಿಗೆ ಕ್ಯಾನ್ಸರ್ ತುಂಬಾನೇ ಜೋರಾಗಿದೆ. ಪತ್ನಿ ಹಾಗೂ ಪುಟ್ಟ ಮಕ್ಕಳು ದುಬೈನಲ್ಲಿದ್ದು, ಮಕ್ಕಳ ಬಗ್ಗೆ ನಟ ಚಿಂತೆಗೀಡಾಗಿದ್ದಾರೆ. ಸದ್ಯ ಸಂಜಯ್ ಅವರಿಗೆ ತಕ್ಷಣವೇ ಚಿಕಿತ್ಸೆಯ ಅಗತ್ಯತೆ ಇದೆ. ಹೀಗಾಗಿ ಅವರು ಅಮೆರಿಕಕ್ಕೆ ತೆರಳುತ್ತಾರೆ ಎಂದು ತಿಳಿಸಿದರು.

    ಆಗಸ್ಟ್ 8ರಂದು ಎದೆನೋವು ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡು ನಟ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಇವರ ಕೊರೊನಾ ಪರೀಕ್ಷೆ ನಡೆಸಿದ್ದು, ವರದಿಯಲ್ಲಿ ನೆಗೆಟಿವ್ ಎಂದು ಬಂದಿತ್ತು. ಕೊರೊನಾ ಅಲ್ಲದ ಕಾರಣ ಅವರಿಗೆ ನಾನ್ ಕೋವಿಡ್ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದ್ದು, ಎರಡು ದಿನಗಳ ಹಿಂದೆಯಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.

    ಪ್ರಸ್ತುತ ಸಂಜಯ್ ದತ್ ಅವರು ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್: ಚಾಪ್ಟರ್ 2 ನಲ್ಲಿ ಅಧೀರನಾಗಿ ಅಭಿನಯಿಸುತ್ತಿದ್ದು, ಇತ್ತೀಚೆಗಷ್ಟೇ ಇದರ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಲಾಗಿತ್ತು.

  • ನಾನು ಎಷ್ಟೇ ಹೋರಾಡಿದರು ನಿನ್ನ ಉಳಿಸಿಕೊಳ್ಳಲು ಆಗ್ಲಿಲ್ಲ, ಮಿಸ್ ಯು ಅಮ್ಮ: ಪ್ರೇಮ್

    ನಾನು ಎಷ್ಟೇ ಹೋರಾಡಿದರು ನಿನ್ನ ಉಳಿಸಿಕೊಳ್ಳಲು ಆಗ್ಲಿಲ್ಲ, ಮಿಸ್ ಯು ಅಮ್ಮ: ಪ್ರೇಮ್

    ಬೆಂಗಳೂರು: ನಾನು ಎಷ್ಟೇ ಹೋರಾಟ ನಡೆಸಿದರು ನಿನ್ನನ್ನು ಉಳಿಸಿಕೊಳ್ಳಲು ಆಗಲಿಲ್ಲ ಎಂದು ನಟ, ನಿರ್ದೇಶಕ ಜೋಗಿ ಪ್ರೇಮ್ ಅಮ್ಮನ ಬಗ್ಗೆ ಭಾವನಾತ್ಮಕ ಸಾಲುಗಳನ್ನು ಬರೆದುಕೊಂಡಿದ್ದಾರೆ.

    ಪ್ರೇಮ್ ಅವರ ತಾಯಿ ಭಾಗ್ಯಮ್ಮ ಕೆಲವು ತಿಂಗಳಿನಿಂದ ಲ್ಯುಕೇಮಿಯಾ ಕ್ಯಾನ್ಸರ್ ನಿಂದ (ರಕ್ತ ಕ್ಯಾನ್ಸರ್) ಬಳಲುತ್ತಿದ್ದರು. ಹೀಗಾಗಿ ಬೆಂಗಳೂರಿನ ಜಯನಗರದ ಶಾಂತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರೇಮ್ ಅವರ ತಾಯಿ ಶುಕ್ರವಾರ ರಾತ್ರಿ ಸುಮಾರು 9 ಗಂಟೆಗೆ ಕೊನೆಯುಸಿರೆಳೆದಿದ್ದರು.

    ಈಗ ಅಮ್ಮನ್ನು ಕಳೆದುಕೊಂಡ ನೋವಿನಲ್ಲಿರುವ ಪ್ರೇಮ್ ಅವರು ತಮ್ಮ ತಾಯಿಯ ಬಗ್ಗೆ ಟ್ವೀಟ್ ಮಾಡಿದ್ದು, ನಾನು ಎಷ್ಟೇ ಹೋರಾಟ ಮಾಡಿದರೂ ಕೊನೆಗೂ ನಿನ್ನನ್ನು ಉಳಿಸಿಕೊಳ್ಳಲು ಆಗಲಿಲ್ಲ. ನಿನ್ನ ಋಣ ತೀರಿಸೋಕೆ ಮತ್ತೆ ನಿನ್ನ ಹೊಟ್ಟೆಯಲಿ ಹುಟ್ಟುವುದಕ್ಕೆ ನನಗೆ ಒಂದು ಅವಕಾಶ ಮಾಡಿಕೊಂಡು, ಯಾವತ್ತು ಕಾಯುತ್ತಿರುತ್ತೇನೆ. ಮಿಸ್ ಯು ಅಮ್ಮ ಎಂದು ಬರೆದುಕೊಂಡು ತಾಯಿ ಭಾಗ್ಯಮ್ಮ ಅವರ ಫೋಟೋವನ್ನು ಟ್ವೀಟ್ ಮಾಡಿದ್ದಾರೆ.

    ಪ್ರೇಮ್ ಅವರು ಮಾತೃ ಹೃದಯಿಯಾಗಿದ್ದು, ಅವರ ತಾಯಿಯನ್ನು ಬಹಳ ಇಷ್ಟಪಡುತ್ತಿದ್ದರು. ಪ್ರೇಮ್ ಅವರು ಯಾವುದೇ ಸಿನಿಮಾ ಮಾಡಿದರು ಅದರಲ್ಲಿ ತಾಯಿಗೆ ಸಂಬಂಧಿಸಿದ ಒಂದು ಹಾಡು ಮತ್ತು ತಾಯಿ ಬಗ್ಗೆ ದೃಶ್ಯಗಳು ಇರುತ್ತಿತ್ತು. ಅವರ ಮೊದಲ ಸಿನಿಮಾ ಎಕ್ಸ್ ಕ್ಯೂಸ್‍ಮಿ ಯಿಂದ ಹಿಡಿದು ಇತ್ತೀಚೆಗೆ ಬಿಡುಗಡೆಯಾಗಿದ್ದ ಅವರು ನಿರ್ದೇಶನ ದಿ ವಿಲನ್ ಸಿನಿಮಾದವರೆಗೂ ಅವರ ಎಲ್ಲ ಸಿನಿಮಾದಲ್ಲಿ ತಾಯಿಯ ಬಗ್ಗೆ ವಿಶೇಷವಾದ ಪ್ರೀತಿಯನ್ನು ವ್ಯಕ್ತಪಡಿಸಿದ್ದರು.

    ಅತ್ತೆ ಭಾಗ್ಯಮ್ಯ ಅವರ ನಿಧನದ ಸುದ್ದಿಯನ್ನು ರಕ್ಷಿತಾ ಪ್ರೇಮ್ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದರು. ಭಾಗ್ಯಮ್ಮ ಅವರಿಗೆ ಪ್ರೇಮ್ ಮತ್ತು ಅರುಣ್ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ. ಭಾಗ್ಯಮ್ಮ ಅವರಿಗೆ ಕೊರೊನಾ ಪರೀಕ್ಷೆ ಮಾಡಿಸಿದ್ದು, ವರದಿ ನೆಗೆಟಿವ್ ಬಂದಿತ್ತು. ಮಂಡ್ಯದ ಬೆಸಗರಹಳ್ಳಿ ಫಾರ್ಮ್ ಹೌಸ್‍ನಲ್ಲಿ ಅಂತ್ಯಕ್ರಿಯೆ ನಡೆಯಿತು.

  • ನಾನು ಮರಣಶಯ್ಯೆಯಲ್ಲಿದ್ದೇನೆ- ಸಾಯುವ 15 ಗಂಟೆಗಳ ಮೊದಲು ತನ್ನ ಸಾವಿನ ಬಗ್ಗೆ ನಟಿ ಪೋಸ್ಟ್

    ನಾನು ಮರಣಶಯ್ಯೆಯಲ್ಲಿದ್ದೇನೆ- ಸಾಯುವ 15 ಗಂಟೆಗಳ ಮೊದಲು ತನ್ನ ಸಾವಿನ ಬಗ್ಗೆ ನಟಿ ಪೋಸ್ಟ್

    – ಮುಂದಿನ ಜನ್ಮದಲ್ಲಿ ಭೇಟಿಯಾಗ್ತೇನೆ

    ಮುಂಬೈ: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಬಾಲಿವುಡ್ ನಟಿ ದಿವ್ಯಾ ಚೌಕ್ಸಿ ಭಾನುವಾರ ನಿಧನರಾಗಿದ್ದಾರೆ.

    ದಿವ್ಯಾ ಕೆಲ ತಿಂಗಳುಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಗೆ ಕ್ಯಾನ್ಸರ್‌ಗೆ ತುಂಬಾ ಚಿಕ್ಕವಯಸ್ಸಿನಲ್ಲಿಯೇ ದಿವ್ಯಾ ಮೃತಪಟ್ಟಿದ್ದಾರೆ. ದಿವ್ಯಾ ಸಾಯುವ 15 ಗಂಟೆಗಳ ಮುನ್ನ ತಮ್ಮದೇ ಸಾವಿನ ಬಗ್ಗೆ ಇನ್‍ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

    “ನಾನು ತಿಳಿಸ ಬಯಸುವುದನ್ನು ಹೇಳಲು ಪದಗಳು ಸಾಕಾಗುವುದಿಲ್ಲ. ಹೆಚ್ಚು ಕಡಿಮೆ ಹಲವು ತಿಂಗಳುಗಳ ನಂತರ ಈ ವಿಚಾರವನ್ನು ನಿಮಗೆ ಹೇಳುತ್ತಿದ್ದೇನೆ. ಈಗ ನಿಮಗೆ ಹೇಳುವ ಸಮಯ ಬಂದಿದೆ. ನಾನು ಮರಣಶಯ್ಯೆಯಲ್ಲಿದ್ದೇನೆ. ನಾನು ಬಲಶಾಲಿ. ಮುಂದಿನ ಜನ್ಮದಲ್ಲಿ ಭೇಟಿಯಾಗುತ್ತೇನೆ. ದುಃಖ, ನೋವುಗಳಿಲ್ಲದ ಮತ್ತೊಂದು ಜೀವನ ನನಗಿರಲಿ. ದಯವಿಟ್ಟು ಯಾರು ಪ್ರಶ್ನಿಸಬೇಡಿ” ಎಂದು ತಮ್ಮ ಸಾವಿನ ಬಗ್ಗೆ ಬರೆದುಕೊಂಡಿದ್ದಾರೆ.

    ದಿವ್ಯಾ 2011 ರಲ್ಲಿ ಮಿಸ್ ಯೂನಿವರ್ಸ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ನಂತರ ಕೆಲ ಸಿನಿಮಾ, ಟಿವಿ ಕಾರ್ಯಕ್ರಮಗಳು ಮತ್ತು ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ನಟಿ ದಿವ್ಯಾ ಗಾಯಕಿಯಾಗಿ ಖ್ಯಾತಿ ಪಡೆದುಕೊಂಡಿದ್ದಾರೆ.

    ದಿವ್ಯಾ ಚೌಕ್ಸಿ ಸಂಬಂಧಿ ಅಮಿಶ್ ವರ್ಮಾ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ದುಃಖದಿಂದ ಹೇಳಿಕೊಂಡಿದ್ದಾರೆ. “ನನ್ನ ಸಂಬಂಧಿ ದಿವ್ಯಾ ಚೌಕ್ಸಿ ಕ್ಯಾನ್ಸರ್‌ನಿಂದ ಬಹಳ ಚಿಕ್ಕ ವಯಸ್ಸಿನಲ್ಲಿಯೇ ನಿಧನರಾಗಿದ್ದಾರೆ. ಈ ಸುದ್ದಿಯನ್ನು ಹಂಚಿಕೊಳ್ಳಲು ನನಗೆ ತುಂಬಾ ಬೇಸರವಾಗಿದೆ. ದಿವ್ಯಾ ಲಂಡನ್‍ನಲ್ಲಿ ಆ್ಯಕ್ಟಿಂಗ್ ಕೋರ್ಸ್ ಮಾಡಿದ್ದರು. ಅಲ್ಲದೇ ಒಂದೆರಡು ಸಿನಿಮಾ, ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ದಿವ್ಯಾ ಗಾಯಕಿಯಾಗಿ ಖ್ಯಾತಿ ಪಡೆದಿದ್ದಾರೆ. ಇಂದು ಅವಳು ನಮ್ಮನ್ನು ಅಗಲಿದ್ದಾರೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ” ಎಂದು ದುಃಖದಿಂದ ಬರೆದುಕೊಂಡಿದ್ದಾರೆ.

  • ಕ್ಯಾನ್ಸ್‌ರ್‌ನಿಂದ ಗುಣವಾದ 4ರ ಬಾಲಕಿಗೆ ತಗುಲಿದ ಕೊರೊನಾ

    ಕ್ಯಾನ್ಸ್‌ರ್‌ನಿಂದ ಗುಣವಾದ 4ರ ಬಾಲಕಿಗೆ ತಗುಲಿದ ಕೊರೊನಾ

    – ಎರಡು ಮಾರಣಾಂತಿಕ ಕಾಯಿಲೆ ಗೆದ್ದು ಬಂದ ಪುಟಾಣಿ

    ದುಬೈ: ದುಬೈನಲ್ಲಿ ನೆಲೆಸಿರುವ ಭಾರತ ಮೂಲದ 4 ವರ್ಷದ ಬಾಲಕಿ ಕ್ಯಾನ್ಸ್‌ರ್‌ನಿಂದ ಬಳಲುತ್ತಿದ್ದಳು. ಇತ್ತ ಕ್ಯಾನ್ಸ್‌ರ್ ಗೆ ಚಿಕಿತ್ಸೆ ಪಡೆದು ಕೆಲ ತಿಂಗಳ ಹಿಂದೆಯಷ್ಟೇ ಗುಣಮುಖಳಾಗಿದ್ದಳು. ಇದೇ ವೇಳೆ ಮಹಾಮಾರಿ ಕೊರೊನಾ ಬಾಲಕಿಗೆ ತಗುಲಿದ್ದು, ಈಗ ಈ ಎರಡೂ ಮಾರಣಾಂತಿಕ ಕಾಯಿಲೆಯನ್ನು ಬಾಲಕಿ ಗೆದ್ದು ವೈದ್ಯರನ್ನೇ ಅಚ್ಚರಿಗೊಳಿಸಿದ್ದಾಳೆ.

    ಯುಎಇನಲ್ಲಿ ಕೊರೊನಾ ವೈರಸ್‍ನಿಂದ ಗುಣಮುಖರಾದ ಕಿರಿಯ ರೋಗಿಗಳಲ್ಲಿ ಈ ಪುಟಾಣಿ ಬಾಲಕಿಯೂ ಒಬ್ಬಳಾಗಿದ್ದಾಳೆ. ಭಾರತ ಮೂಲದ ಶಿವಾನಿ ಕ್ಯಾನ್ಸ್‌ರ್‌ ಹಾಗೂ ಕೊರೊನಾ ಎರಡರಿಂದಲೂ ಗುಣವಾಗಿದ್ದಾಳೆ. ಆರೋಗ್ಯ ಕಾರ್ಯಕರ್ತೆಯಾಗಿ ಶಿವಾನಿ ತಾಯಿ ಸೇವೆ ಸಲ್ಲಿಸುತ್ತಿದ್ದರು. ಅವರು ಏಪ್ರಿಲ್ 1ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆಗ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು.

    ಈ ಬಗ್ಗೆ ತಿಳಿದ ಬಳಿಕ ಶಿವಾನಿ ಹಾಗೂ ಆಕೆಯ ತಂದೆಯನ್ನು ಕೂಡ ಪರೀಕ್ಷೆಗೊಳಪಡಿಸಲಾಯಿತು. ಈ ವೇಳೆ ಯಾವುದೇ ರೋಗ ಲಕ್ಷಣಗಳು ಕಂಡುಬಾರದಿದ್ದರೂ ಬಾಲಕಿಯ ವರದಿ ಮಾತ್ರ ಪಾಸಿಟಿವ್ ಬಂದಿತ್ತು. ಆಸ್ಪತ್ರೆಯಲ್ಲಿ ಶಿವಾನಿ ಹಾಗೂ ಆಕೆಯ ತಾಯಿಗೆ ಒಂದೇ ರೀತಿಯ ಸೌಲಭ್ಯ ನೀಡಲಾಗುತಿತ್ತು. ಆದರೆ ಕೊರೊನಾ ಸೋಂಕಿಗೆ ತುತ್ತಾಗುವ ಮೊದಲು ಶಿವಾನಿಗೆ ಕಿಡ್ನಿ ಕ್ಯಾನ್ಸರ್ ಇತ್ತು. ಆದರೆ ಅದರಿಂದ ಆಕೆ ಚೇತರಿಸಿಕೊಂಡಿದ್ದಳು. ಅಷ್ಟರಲ್ಲಿ ಕೊರೊನಾಗೆ ತುತ್ತಾದ ಕಾರಣಕ್ಕೆ ಶಿವಾನಿ ಮೇಲೆ ಹೆಚ್ಚು ನಿಗಾ ವಹಿಸಲಾಗಿತ್ತು. ಶಿವಾನಿ ಗುಣಮುಖಳಾದ ಬಳಿಕ ಏಪ್ರಿಲ್ 20ರಂದು ಆಕೆಯನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು.

    ಕ್ಯಾನ್ಸ್‌ರ್‌ ಯಿದ್ದ ಹಿನ್ನೆಲೆ ಕಳೆದ ವರ್ಷ ಶಿವಾನಿಗೆ ಕೆಮೊ ಥೆರಪಿ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಹೀಗಾಗಿ ಈಗಲೂ ಆಕೆಯಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇದೆ. ಕೊರೊನಾ ಸೋಂಕಿನಿಂದ ಉಸಿರಾಟದ ತೊಂದರೆಯಿಂದ ಶಿವಾನಿ ಬಳಲುತ್ತಿದ್ದಳು. ಆಕೆ ಮೇಲೆ ಹೆಚ್ಚಿನ ನಿಗಾವಹಿಸಿ ಚಿಕಿತ್ಸೆ ನೀಡಲಾಗಿದೆ ಎಂದು ವೈದ್ಯರು ತಿಳಿಸಿದರು.

    ಶಿವಾನಿಗೆ ಸ್ವಾಬ್ ಪರೀಕ್ಷೆಯಲ್ಲಿ ಸತತ ಎರಡು ಬಾರಿ ನೆಗೆಟಿವ್ ಬಂದ ನಂತರ 20 ದಿನಗಳ ಕಾಲ ಚಿಕಿತ್ಸೆ ನೀಡಿ ಡಿಸ್ಚಾರ್ಜ್ ಮಾಡಲಾಗಿದೆ. ಇದೀಗ 14 ದಿನಗಳ ಕಾಲ ಆಕೆಯನ್ನು ಹೋಮ್ ಕ್ವಾರಂಟೈನಲ್ಲಿ ಇರಿಸುವಂತೆ ಸೂಚಿಸಲಾಗಿದ್ದು, ಆಕೆಯ ತಾಯಿ ಕೂಡ ಕೊರೊನಾದಿಂದ ಚೇತರಿಕೊಳ್ಳುತ್ತಿದ್ದು, ಸದ್ಯದಲ್ಲೇ ಅವರನ್ನೂ ಡಿಸ್ಚಾರ್ಜ್ ಮಾಡಲಾಗುತ್ತೆ ಎನ್ನಲಾಗಿದೆ.

  • ಕ್ಯಾನ್ಸರ್ ವಿರುದ್ಧ ಡಿಂಕೊ ಸಿಂಗ್ ಹೋರಾಟ- ಬಾಕ್ಸರ್ ಬೆಂಬಲಕ್ಕೆ ನಿಂತ ಸ್ಪೈಸ್ ಜೆಟ್

    ಕ್ಯಾನ್ಸರ್ ವಿರುದ್ಧ ಡಿಂಕೊ ಸಿಂಗ್ ಹೋರಾಟ- ಬಾಕ್ಸರ್ ಬೆಂಬಲಕ್ಕೆ ನಿಂತ ಸ್ಪೈಸ್ ಜೆಟ್

    – ಏರ್ ಅಂಬುಲೆನ್ಸ್ ಮೂಲಕ ದೆಹಲಿಗೆ ಶಿಫ್ಟ್‌

    ಇಂಫಾಲ್: ಪಿತ್ತಜನಕಾಂಗದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಭಾರತೀಯ ಬಾಕ್ಸರ್ ಡಿಂಕೊ ಸಿಂಗ್ ಅವರನ್ನು ಸ್ಪೈಸ್‍ ಜೆಟ್ ಏರ್ ಅಂಬುಲೆಂನ್ಸ್ ಮೂಲಕ ದೆಹಲಿಯ ಆಸ್ಪತ್ರೆಗೆ ಶಿಫ್ಟ್ ಮಾಡಲು ಸಿದ್ಧತೆ ನಡೆದಿದೆ.

    ಡಿಂಕೊ ಸಿಂಗ್ ಭಾರತದ ಪರ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಮಣಿಪುರದ ರಾಜಧಾನಿ ಇಂಫಾಲ್‍ನಲ್ಲಿ ವಾಸಿಸುತ್ತಿರುವ 41 ವರ್ಷದ ಡಿಂಕೊ ಅವರಿಗೆ ಲಾಕ್‍ಡೌನ್‍ನಿಂದಾಗಿ ವಿಕಿರಣ ಚಿಕಿತ್ಸೆ ಸಿಗುತ್ತಿಲ್ಲ. ಚಿಕಿತ್ಸೆಗಾಗಿ ಅವರನ್ನು ಸ್ಪೈಸ್ ಜೆಟ್‍ನ ಏರ್ ಅಂಬುಲೆನ್ಸ್ ಮೂಲಕ ಇಂಫಾಲ್‍ನಿಂದ ದೆಹಲಿಗೆ ಕರೆತರಲು ಸಿದ್ಧತೆ ನಡೆದಿದೆ.

    ಬಾಕ್ಸರ್ ಡಿಂಕೊ ಸಿಂಗ್ ಅವರಿಗೆ ಸ್ಪೈಸ್ ಜೆಟ್ ಸಂಸ್ಥೆಯು ಉಚಿತವಾಗಿ ಏರ್ ಅಂಬುಲೆನ್ಸ್ ಸೇವೆ ನೀಡಲು ಮುಂದೆ ಬಂದಿದೆ. ಈ ನಿರ್ಧಾರವನ್ನು ಸ್ಪೈಸ್‍ಜೆಟ್‍ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಜಯ್ ಸಿಂಗ್ ಪ್ರಕಟಿಸಿದ್ದಾರೆ. ಅಜಯ್ ಸಿಂಗ್ ಅವರು ಬಾಕ್ಸಿಂಗ್ ಫೆಡರೇಶನ್ ಆಫ್ ಇಂಡಿಯಾದ (ಬಿಎಫ್‍ಐ) ಅಧ್ಯಕ್ಷರೂ ಆಗಿದ್ದಾರೆ.

    ಹಿರಿಯ ಬಾಕ್ಸರ್ ಗಳಾದ ವಿಜೇಂದರ್ ಸಿಂಗ್ ಮತ್ತು ಭಾರತದ ಮನೋಜ್ ಕುಮಾರ್ ಕೂಡ ಅರ್ಜುನ್ ಮತ್ತು ಪದ್ಮಾ ಪ್ರಶಸ್ತಿ ಪುರಸ್ಕೃತ ಡಿಂಕೊ ಸಿಂಗ್ ಅವರಿಗೆ ಸಹಾಯ ಮಾಡಲು ಹಣವನ್ನು ಸಂಗ್ರಹಿಸುತ್ತಿದ್ದಾರೆ. ”ನಾವು ವಾಟ್ಸಾಪ್ ಗ್ರೂಪ್ ‘ಹಮ್ ಮೇನ್ ಹೈ ದಮ್’ ಮೂಲಕ ಹಣವನ್ನು ಸಂಗ್ರಹಿಸುತ್ತಿದ್ದೇವೆ. ಈಗಾಗಲೇ ಒಂದು ಲಕ್ಷಕ್ಕೂ ಹೆಚ್ಚು ರೂಪಾಯಿ ಸಂಗ್ರಹಿಸಿದ್ದೇವೆ. ಅದು ನೇರವಾಗಿ ಡಿಂಕೊ ಅವರ ಖಾತೆಗೆ ಹೋಗುತ್ತದೆ” ಎಂದು ವಿಜೇಂದರ್ ಹೇಳಿದ್ದಾರೆ.

    ಡಿಂಕೊ ಸಿಂಗ್ ಅವರನ್ನು ಏಪ್ರಿಲ್ 25ರಂದು ದೆಹಲಿಗೆ ಕರೆತರಲಾಗುವುದು. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಅಜಯ್ ಸಿಂಗ್, ”ಲಾಕ್‍ಡೌನ್‍ನಿಂದಾಗಿ ಡಿಂಕೊ ಸಿಂಗ್ ಅವರ ಚಿಕಿತ್ಸೆ ಮಧ್ಯದಲ್ಲಿ ನಿಂತುಹೋಯಿತು. ಇದು ನಿಜವಾಗಿಯೂ ದುರದೃಷ್ಟಕರ. ನಮ್ಮ ದೇಶದ ವೀರನಿಗೆ ಏರ್ ಅಂಬುಲೆನ್ಸ್ ಸೇವೆಯನ್ನು ಒದಗಿಸುವುದು ಮತ್ತು ಅವರನ್ನು ದೆಹಲಿಗೆ ಕರೆತರುವುದು ಸ್ಪೈಸ್‍ಜೆಟ್‍ಗೆ ಒಂದು ಭಾಗ್ಯವಾಗಿದೆ. ಭಾರತೀಯ ಬಾಕ್ಸರ್ ಡಿಂಕೊ ಅನೇಕ ದೊಡ್ಡಮಟ್ಟದ ಪಂದ್ಯಗಳನ್ನು ಗೆದ್ದಿದ್ದಾರೆ. ಈ ಯುದ್ಧದಲ್ಲಿಯೂ ಅವರು ಗೆಲ್ಲಬೇಕು ಎಂಬುದು ನಮ್ಮ ಪ್ರಾರ್ಥನೆ” ಎಂದು ತಿಳಿಸಿದ್ದಾರೆ.

    ಈ ಹಿಂದೆ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಮಣಿಪುರ ಸರ್ಕಾರದೊಂದಿಗೆ ಮಾತನಾಡಿ ಡಿಂಕೊ ಸಿಂಗ್ ಅವರ ಚಿಕಿತ್ಸೆಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಿದ್ದರು. 1998ರಲ್ಲಿ ಬ್ಯಾಂಕಾಕ್‍ನಲ್ಲಿ ನಡೆದ ಏಷ್ಯನ್ ಕ್ರೀಡಾಕೂಟದಲ್ಲಿ ಬಾಂಟಮ್‍ವೈಟ್ ಬಾಕ್ಸರ್ ಡಿಂಕೊ ಸಿಂಗ್ ಚಿನ್ನದ ಪದಕ ಗೆದ್ದರು.

  • ಹಿರಿಯ ಐಪಿಎಸ್ ಅಧಿಕಾರಿ ಚರಣ್ ರೆಡ್ಡಿ ನಿಧನ

    ಹಿರಿಯ ಐಪಿಎಸ್ ಅಧಿಕಾರಿ ಚರಣ್ ರೆಡ್ಡಿ ನಿಧನ

    ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಚರಣ್ ರೆಡ್ಡಿ ನಿಧನರಾಗಿದ್ದಾರೆ.

    ಸಿಐಡಿ ಎಡಿಜಿಪಿ ಆಗಿ ಕೆಲಸ ಮಾಡುತ್ತಿದ್ದ ಚರಣ್ ರೆಡ್ಡಿ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು. ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ವಸಂತನಗರದ ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗಿನ ಜಾವ ಏಳು ಗಂಟೆ ಸುಮಾರಿಗೆ ಕ್ಯಾನ್ಸರ್ ಕಾಯಿಲೆಯಿಂದ ನಿಧನರಾಗಿದ್ದಾರೆ.

    ಆಂಧ್ರದ ಚಿತ್ತೂರು ಮೂಲದ ಚರಣ್ ರೆಡ್ಡಿ 1993ರ ಬ್ಯಾಚ್‍ನ ಐಪಿಎಸ್ ಅಧಿಕಾರಿಯಾಗಿದ್ದರು. ಖಡಕ್ ಅಧಿಕಾರಿಯಾಗಿದ್ದ ಚರಣ್ ರೆಡ್ಡಿ ಬೆಂಗಳೂರಿನಲ್ಲಿ ಕಾವೇರಿ ಗಲಾಟೆ, ಅಕ್ರಮ ಗಣಿಗಾರಿಕೆ ಪ್ರಕರಣ, ಸಿಐಬಿ ಮತ್ತು ಬೆಂಗಳೂರಿನ ಪಶ್ಚಿಮ ವಲಯ ಹೆಚ್ಚುವರಿ ಪೊಲೀಸ್ ಅಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸಿದ್ದರು.

    ಕಳೆದ 13 ವರ್ಷದಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅಧಿಕಾರಿ ಇಂದು ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ. ಇಂದು ಡಾಲರ್ಸ್ ಕಾಲೋನಿಯ ಅವರ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಡಿಜಿ ಐಜಿಪಿ ಪ್ರವೀಣ್ ಸೂದ್ ಸೇರಿದಂತೆ ಬೆಂಗಳೂರಿನ ಎಲ್ಲಾ ಹಿರಿಯ ಅಧಿಕಾರಿಗಳು, ರಾಜಕೀಯ ಮುಖಂಡರು ಅಂತಿಮ ದರ್ಶನ ಪಡೆದುಕೊಂಡರು. ಶನಿವಾರ ಚರಣ್ ರೆಡ್ಡಿ ಹುಟ್ಟೂರಾದ ಆಂಧ್ರದ ಚಿತ್ತೂರಿನಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿವೆ.